ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜ಼ಲ್

ಗಜ಼ಲ್ ಅಮರೇಶ ಎಂಕೆ ಎನ್ನೆದೆಯ ಮರುಭೂಮಿಯಲ್ಲಿ ನಿನ್ನೊಲವಿನ ಓಯಾಸಿಸ್ ಕೇಳುತ್ತಿದ್ದೆನೀ ಮರೆತಿದ್ದರೆ ಮರಳಾಗಿ ಬಿಸಿಲಿಗೆ ಸವೆದು ಹುಡಿಯಾಗಿ ಹೋಗುತ್ತಿದ್ದೆ ಎನ್ನ ಬದುಕಿನಲ್ಲಿ ಎತ್ತರದ ಸ್ಥಾನ ಖಾಲಿ ಇಲ್ಲ ನೀನು ಆವರಿಸಿರುವಾಗನಡೆದ ಹೆಜ್ಜೆ ಗುರುತನು ಅಳಿಸಿ ಹೋಗಿದ್ದರೆ ನೆನಪಾಗಿ ಉಳಿಯುತ್ತಿದ್ದೆ ಬಣ್ಣ ಬಣ್ಣದ ಚಿಟ್ಟೆಯ ಚಿಕ್ಕ ಚಿಕ್ಕ ರೆಕ್ಕೆ ಬಡಿತ ಹೃದಯದ ಬಡಿತವಾಗಿದೆಸಹಿಸದೆ ಕಪ್ಪು ಚುಕ್ಕಿ ಜೀವನದಲ್ಲಿ ಜಾಗ ಕೇಳಿದ್ದರೆ ಕುರೂಪಿ ಆಗುತ್ತಿದ್ದೆ ಆ ಮುಗುಳುನಗುವು ಅಳಿಯದೆ ಉಳಿದುಬಿಟ್ಟಿದೆ ಕಣ್ಣರೆಪ್ಪೆಯ ಒಳಗೆಕನಸಾಗಿ ಕ್ಷಣಮಾತ್ರದಲ್ಲಿ ಕಾಣೆಯಾಗಿದ್ದರೆ ಅಪಜಯ ಹೊಂದುತ್ತಿದ್ದೆ ‘ಅಮರ’ಪ್ರೇಮಕ್ಕೆ ನಿನ್ನೆಸರನ್ನೇ ಮರುನಾಮಕರಣ ಮಾಡಬೇಕೆನಿಸಿದೆನಡೆವ ದಾರಿಗೆ ದೀಪವಾಗದಿದ್ದರೆ ಕತ್ತಲೆಯಲ್ಲಿ ಗುರಿ ಸೇರದೆ ಕೊರಗುತ್ತಿದ್ದೆ ****************************************

ಗಜ಼ಲ್ Read Post »

ನಿಮ್ಮೊಂದಿಗೆ

ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು ಕೇಳಬಾರದೆ? ಹರಿವ ನದಿಯೊಡನೆ ಸೇರಿದ ಹನಿ ಮುತ್ತುಅಲೆ ಅಲೆಯಾಗಿ…ಹರಿವ ಮುಸ್ಸಂಜೆಗೆಮೆರುಗು ನೀಡಿ ಜಾರುವ ರಂಗಿಗೆಒಮ್ಮೆ ನಿಂತು ಪಿಸುಮಾತ ಆಲಿಸಬಾರದೇ? ಮೌನ ಮಥಿಸಿ ಪಕ್ವವಾಗಿದೆ ಈಗಮತ್ತೆಲ್ಲವೂ ಮುಚ್ಚಿಕೊಂಡಿದೆಶಿಶಿರದ ಇರುಳಿನಲಿ…ತಣ್ಣನೆ ಬಿಚ್ಚಿದೆ ಮನ ಮಾತ್ರಮುಂಜಾವು ಎಂದಿಗಿಂತಲೂ ಆರ್ದೃಬೆಚ್ಚಗೆ ಸಿಹಿಯ ಸವಿ ದೂರದಲ್ಲೇ ನಿಂತುಕಡಲ ತೆರೆಗಳ ಸೆಳೆವಾಗಹೊಳೆವ ಮುಖದಲ್ಲಿ ಅರಳುವಕನಸುಗಳು ನನಗಷ್ಟೇ ಸೀಮಿತವೀಗಬಿಗುಮಾನವೆನಗೆ ಇದಕ್ಕೆಲ್ಲ ಉತ್ತರವಹುಡುಕಲಾಗದು ನನಗೆಹುದುಗಿರುವ ಮಾತುಗಳುಸುಲಭದಲಿ ಅರ್ಥಕ್ಕೆ ದಕ್ಕದಂತೇ.. ತುದಿ ಮೊದಲಿಲ್ಲದ ಎಷ್ಟೋ ಪ್ರಶ್ನೆಗಳಕಣ್ಣಿನಾಳದಲಿ ಇಳಿದು ತಿಳಿದುಕೊಟ್ಟ ಮುಗುಳು ನಗುವಿನ ಉತ್ತರಅರ್ಥವಾಗಿದೆ ನನಗೆ ಮಾತ್ರಮಾತಾಗಿ ಬರದಿರುವುದನೆಲ್ಲಕವಿತೆಯಾಗಿ ಬರೆಯಲೇ…?ನಿನಗೆ ಮಾತ್ರ. *****************************************************

ಭಾವ ಭುವನ Read Post »

ಕಾವ್ಯಯಾನ

ಗುಲಾಬಿ ಮುಖ

ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು ? ನಿನ್ನ ಪದ ಪದಗಳುಹೆಜ್ಜೆ ಹೆಜ್ಜೆಗೂ ನನ್ನ ಊರು ಪಾದಗಳನ್ನು ಬಗೆದುಎದೆಯಲ್ಲಿ ಮುರಿದ ಅಲುಗುಗಳಾದರೂನೆತ್ತರು ಸುರಿಯುವ ಹೃದಯದಲ್ಲಿ ನೀನು ಹೂವಂತೆ ಅರಳುತ್ತಿರುತ್ತಿನನ್ನ ಕವನಗಳ ಒಳಗಿಂದಲೇ ಪದ ಪದಗಳ ಮುಳ್ಳುಗಳನ್ನೊಡೆದು ಗುಲಾಬಿಮುಖವರಳಿಸಿ ಮುಗುಳು ನಗುತ್ತಲೇ ಇರುತ್ತಿ … ನಿನ್ನ ನಾಲಗೆ ಚೂರಿಯಾದರೂನನ್ನ ಹೃದಯ ಕೇಕಾಗಿಯೇ ಇರುತ್ತದೆತುಂಡು ತುಂಡುಗಳು ಬಾಯ್ತೆರೆದುನೀನು ನನ್ನ ಎದೆಯಲ್ಲಿ ಹುಟ್ಟಿದದಿನವನ್ನು ನೆನಪಿಸಿಕೊಳ್ಳುತ್ತನಿನ್ನ ಮುಂದೆ‘ಹ್ಯಾಪಿ ಬತ್೯ಡೇ ಟೂ ಯೂ..’ ಹಾಡುತ್ತಮೇಣದ ಬತ್ತಿ ಊದಿ ಆರಿಸುವ ನಿನ್ನ ಹಿಂದೆ ಕತ್ತಲಿಗೆ ಮುಖ ಮಾಡಿ ಎದೆಯು ಒಳಗೊಳಗೇ ಬಿಕ್ಕಿಬಿಕ್ಕಿ ಅಳುವ ಕಂಬನಿಗಳನ್ನುಆಗಸದ ಒಂದು ತುಂಡು ಕಚೀ ೯ಫಲ್ಲಿ ಒರಸಿಕೊಂಡುಅವು ಕಾಮೋ೯ಡಗಳಾಗಿಮಳೆ ಸುರಿಯುವುದನ್ನೇ ನೋಡುತ್ತ…ಬೆನ್ನು ತಿರುವಿ ನಡೆದ ನಿನ್ನ ನೆರಳನ್ನುದೀಪ ಹಿಡಿದು ಹಿಂಬಾಲಿಸುತ್ತಒಳಗಿನ ಕತ್ತಲಲ್ಲಿ ಕುಳಿತ ನನ್ನನ್ನುಆತ್ಮದಲ್ಲೇ ಸಂತೈಸಿಕೊಳ್ಳುತ್ತ… *****************************************

ಗುಲಾಬಿ ಮುಖ Read Post »

ಪುಸ್ತಕ ಸಂಗಾತಿ

ಪರಿಮಳದ ಹನಿಗಳು

ಪುಸ್ತಕ ಸಂಗಾತಿ ಪರಿಮಳದ ಹನಿಗಳು “ಸಖ ಸತ್ತ ಹೃದಯ ಮಸಣ ಸೇರಿತು ನಿನ್ನ ಕುಡಿಮೀಸೆಯ ಕುಂಚ ದಿಂದ ತುಟಿಯ ಮಾಸ್ತಿಗಲ್ಲಿಗೆ ಹೆಸರು ಬರೆದುಬಿಡು ಭಗ್ನ ಪ್ರೇಮಿಗಳು ಅಧ್ಯಯನಕ್ಕೆ ಬರುತ್ತಾರೆ”. ಇದು ಎ. ಎಸ್. ಮಕಾನದಾರ ಅವರ “ಪ್ಯಾರಿ ಪದ್ಯ” ಹನಿಗವನ ಸಂಕಲನದ ಒಂದು ಹನಿ. “ ಮನಸ್ಸಿನ ಆಳದಲ್ಲಿ ಮುದಿವಯಸ್ಸಿನವರಿಗಿಂತ ಯುವ ಜನರೇ ಹೆಚ್ಚು ಏಕಾಂಗಿತನವನ್ನು ಅನುಭವಿಸುತ್ತಾರೆ” ಅನ್ನೋ  ಮಾತಿದೆ. ಆ ಏಕಾಂತಕ್ಕೆ ಸಂಗಾತಿಯೇ ಕವಿತೆ.  ಇಲ್ಲಿರುವ ಹನಿಗವನಗಳು ಪ್ರೀತಿ, ಪ್ರೇಮ ವಿರಹ ಹಾಗೂ ಶೋಷಣೆಯ ವಿರುದ್ಧ ತಣ್ಣಗಿನ ಹನಿಯಂತೆ ಕೆಲವು ಬಾರಿ ನುಡಿದರೆ, ಮತ್ತೊಮ್ಮೆ ಭೋರ್ಗರೆವ ನದಿಯಂತೆ ಬೊಬ್ಬಿರುತ್ತವೆ.  ಪ್ರೇಮ ಕವಿ ಪ್ರೀತಿಯ ತಳಮಳವನ್ನು ಅದರ ಜೊತೆಗೆ ಸೃಷ್ಟಿಯ ಸೊಬಗನ್ನು ಅದರ ವಿಶ್ವರೂಪ ಅನನ್ಯತೆಯನ್ನು ಶಬ್ದಗಳ ಹಾರದಲ್ಲಿ ಪೋಣಿಸುವ ಪ್ರಯತ್ನವನ್ನು ತನ್ನ ಅನುಭವಗಳ ಆಧಾರದ ಮೇಲೆ ಮಾಡುತ್ತಲೇ ಕಾವ್ಯ ಕನ್ನಿಕೆಯ ಸೆರಗಲ್ಲಿ ಪುಷ್ಪವೇಷ್ಟಿತ ಪರಿಮಳವನ್ನು ತುಂಬುವ ಪ್ರಯತ್ನ ಮಾಡುತ್ತಾನೆ. ಅಂತಹ ಪ್ರೇಮದ ತಹತಹವನ್ನು ತೋಡಿಕೊಳ್ಳುವ ಇಲ್ಲಿಯ ಸಾಲುಗಳು ವಿಚಿತ್ರವಾಗಿ ಆಕರ್ಷಿಸುತ್ತವೆ. ಇಂತಹ ಸಾಲುಗಳನ್ನು  ಉರ್ದು ಸಾಹಿತ್ಯದಲ್ಲಿ ಹೇರಳವಾಗಿ ಶಾಯರಿ ರೂಪದಲ್ಲಿ ಬಳಸುತ್ತಾರೆ. ಅಂತಹ ಆಕರ್ಷಕ ಉರ್ದು ಪದಗಳನ್ನು ಕನ್ನಡಕ್ಕೆ ಹೊಂದಿಸಿಕೊಂಡು ಇಲ್ಲಿಯ  ಹನಿಗಳಿಗೆ ತೀವ್ರತೆಯನ್ನು ನೀಡಿದ್ದಾರೆ ಎ. ಎಸ್. ಮಕಾನದಾರ. ಪ್ರೇಮ ಮತ್ತು ವಿರಹ ಇಲ್ಲಿಯ ಹನಿಗವನಗಳಲ್ಲಿ ವ್ಯಕ್ತವಾಗಿಯೂ ಅಲ್ಲಿಯೇ ಸಾಮಾಜಿಕ ಅಂತರಗಳಿಗೆ, ವಿಘಟನಾ ವಿಧಾನಗಳಿಗೆ ಸಣ್ಣ ಚಾಟಿಯನ್ನು ಬೀಸುತ್ತವೆ ಕವನಗಳು. “ಕಬರಸ್ಥಾನದಲ್ಲಿ ಜಾಗ ನಿಗದಿಯಾಗಿದೆ ಸ್ಮಾರಕ ಶಿಲೆ ಕೆತ್ತಲಾಗಿದೆ ದಿನಾಂಕ ಬಿಟ್ಟಿದ್ದಾನೆ ಕಲೆಗಾರ ಜನಾಜ್ ಇನ್ನೇನು ಬರಬಹುದು ಅನ್ನ ತಿನ್ನುವ ಕೈಗಳಿಗೆ ಧರ್ಮದ ಅಮಲು ಏರಿದೆ ಪಂಡಿತರ ಭಾಷಣ ಪಾಶಾಣಕ್ಕಿಂತ ಸಿಹಿಯಾಗಿದೆ” ಎನ್ನುವ ಸಾಲುಗಳಲ್ಲಿ ಜ್ಞಾನವಲಯವನ್ನು ತರಾಟೆಗೆ ತೆಗೆದುಕೊಂಡರೆ, ಧರ್ಮದ ಕುರುಡನ್ನು ವಿಡಂಬಿಸುತ್ತಾರೆ. ಪ್ರೇಮದಲ್ಲಿಯೇ  ಧ್ಯಾನಸ್ಥ ಸ್ಥಿತಿಯನ್ನ ಕಂಡ ಕವಿ ಪರಂಪರೆ ನಮ್ಮಲ್ಲಿದೆ.  “ಡೆತ್ ಇನ್ ಲವ್. ಲವ್ ಇನ್ ಡೆತ್” ಪ್ರೀತಿಯಲ್ಲೆ ಸಾವು, ಸಾವಿನಲ್ಲಿಯೂ ಮೂಡುವ ಪ್ರೀತಿ. ಆ ಸ್ಥಿತಿ ಇಲ್ಲಿದೆ. “ಖಬರ್‌ನಲ್ಲಿ ಲೀನವಾಗಿರುವೆ ದೀಪವಾಗಿ ಬಂದರೆ ಪತಂಗವಾಗಿ ಸುತ್ತುವೆ” ಇಂತಹ ಸೊಗಸಾದ ಸಾಲುಗಳು ನೆನಪಿನಲ್ಲಿ ಉಳಿದೇ ಬಿಡುತ್ತವೆ. “ಸಾವಿನ ಕದ ತಟ್ಟಿದ ಫಕೀರನಿಗೆ ಜೀವದ ಹಂಗೂ ಇಲ್ಲಾ ಸಾವಿನ ಹಂಗೂ ಇಲ್ಲಾ ಚಮಲಾದ ಚುಂಗ ಇದೆ ತೋಡಿದ ಗೋರಿ ಜನಾಜಾ ತಬ್ಬಿದರೂ ತಬ್ಬಲಿ ಆಗಲಾರ ಪ್ಯಾರಿ” . ಸಾಹಿತ್ಯದ ವಸ್ತು ಇತಿಹಾಸವೇ ಇರಲಿ, ಸಮಕಾಲೀನ ಸಂಗತಿಯೇ ಆಗಿರಲಿ, ಅದು ಸತ್ಯಕ್ಕೆ ವಿಮುಖವಾಗಿರಬಾರದು. ಭಾವ ಜಗತ್ತಿನ ಉತ್ಪ್ರೇಕ್ಷೆ ಇದ್ದರೂ ವಾಸ್ತವಕ್ಕೆ ನಿಕಟವಾಗಿರಬೇಕು. ಇಲ್ಲಿ ಒಂದೇ ಕವನದಲ್ಲಿ ಬಳಕೆಯಾಗಿರುವ  ಫಕೀರ, ಚಮಲಾ, ಚುಂಗ, ಜನಾಜ್ , ಪ್ಯಾರಿ ಇತ್ಯಾದಿ ಉರ್ದು ಪದಗಳು ಕಟ್ಟಿಕೊಟ್ಟ ಸಂವೇದನೆ ಮಹತ್ವದ್ದು. ಸಾವು, ಬದುಕು, ಹಂಗು, ಗೋರಿ, ತಬ್ಬಲಿ ಕನ್ನಡದಲ್ಲಿ ಮಾತಾಡಿದರೆ,ಉಳಿದವು ಉರ್ದುವಿನಲ್ಲಿ ಮಾತನಾಡಿಯೂ ಸಮಕಾಲೀನವೂ ಆಗಿವೆ ಹಾಗೇ ಇತಿಹಾಸದ ಉದ್ದಕ್ಕೂ ಹಬ್ಬಿದ ಪ್ರೇಮಜಗತ್ತಿನ ವಿಷಾದವೇ ಆಗಿದೆ. ಪ್ರೀತಿಯ ಹಂಬಲಿಕೆಯ ಇನ್ನೊಂದು ಕವನ ಹೇಳುವ ಆಶಯ ಹಳತಾದರೂ ಬಳಸಿದ ಉಪಮೆಗಳು ಮನಃಸೆಳೆಯುತ್ತವೆ. “ಸಾಕಿ ನಿನ್ನ ಪ್ರೀತಿ ಹಿಡಿ ನವಣಿಯಷ್ಟು ಪಡೆದೆ ತೀರಲು ಮಾಡಿಕೊಂಡಿರುವೆ ಸಾಲ ಪಡಿ ಹೊನ್ನಿನಷ್ಟು.” ಈ ಅಲ್ಪ ಸಾಲುಗಳು ಹೇಳುವುದು ಅಲ್ಪವೇನಲ್ಲ ಅವಳ ಪ್ರೀತಿಗಾಗಿ ಹಂಬಲಿಸಿದವನಿಗೆ ಸಿಕ್ಕಿದ್ದು ಹಿಡಿ ನವಣೆಯಷ್ಟು. ಅಲ್ಪ ಪ್ರೀತಿ. ಆದರೆ ನವಣೆ ಅಲ್ಪವಾಗುವುದಾರೂ ಹೇಗೆ? ಹಾಗೇ ಪ್ರೇಮಿ ಅದಕ್ಕಾಗಿ ಹಂಬಲಿಸಿ ಮಾಡಿದ್ದು ಪಡಿ ಹೊನ್ನಿನಷ್ಟು ಸಾಲ. ಸಾಲಗಾರನಾಗಲೂ ಹಿಂದೆ ಮುಂದೆ ನೋಡದಂತಹ ಸ್ಥಿತಿ ಅವನದು.  ಮನಸ್ಸನ್ನು ಉಲ್ಲಸಿತಗೊಳಿಸುವುದು ಕಾವ್ಯ. ರಸಸ್ವಾದನೆಯೇ ಕವಿತೆ ಮೂಲ ಆಶಯ. ಇಲ್ಲಿಯ ಕವಿತೆಗಳು ಪ್ರೇಮ ರಸಾನುಭವದ ಮತ್ತನ್ನು ಓದುಗನಿಗೆ ಕುಡಿಸುವಂತಿವೆ. ಪ್ರೇಮಬದುಕಿನ ಕ್ಷಣಗಳು ಸುಖದ ದುಃಖದ ನೋವಿನ, ನಿರಾಶೆಯ, ಆಕ್ರೋಶದ ಅನುಭವಗಳನ್ನು  ಇಲ್ಲಿ ಬಿಚ್ಚು ನುಡಿಗಳಲ್ಲಿ ತೆರೆದಿಡಲಾಗಿದೆ. “ಧರ್ಮ, ಧರ್ಮಗುರುವಿನ ಉಪದೇಶ ಸಾಕು ರಟ್ಟೆಯ ಬಲ ರೊಟ್ಟಿಯ ರುಚಿ ಕುರಿತು ಉಪದೇಶ ಬೇಕು. ಪ್ರೇಮದ ಒಳದನಿಯನ್ನು ಮುಕ್ತವಾಗಿ ಅಭಿವ್ಯಕ್ತಿಸುವ  ಹನಿಗವನಗಳನ್ನು ಓದುತ್ತಾ ಪ್ರೀತಿಯ ಕಾವು ಮೈಗೂ ಏರಿದಂತಾಗಿ ಓದುಗ ಮೈಮರೆಯಬಹುದು. ಪ್ರೇಮದ ಅಭಿವ್ಯಕ್ತಿಗೆ ಅಂತಹ ಹೃದಯವಿದೆ. ಕತ್ತಲೆಯಾಚೆಗಿನ ಅನೂಹ್ಯ ನಿಗೂಢತೆಗಳನ್ನು ಶೋಧಿಸುವ ಬೆಳಕಿನ ಸೂಡಿಗಾಗಿ ಹುಡುಕುತ್ತಾ, ಆ ತೇಜದ ಹಂಬಲವನ್ನೇ ಕಣ್ಣಲ್ಲಿ ಸೃಷ್ಟಿಸಿಕೊಂಡವ ಒಂದೋ  ಕವಿಯಾಗಿರಲು ಸಾಧ್ಯ. ಇಲ್ಲ ವ್ಯಾಕುಲ ಪ್ರೇಮಿಯಾಗಿರಬಹುದು. ತಂತ್ರದ ಮೂಲಕ ರಚಿಸಿದ ವಿನ್ಯಾಸ ಯಾವಾಗಲೂ ಸುಂದರವಾಗಿಯೇ ಇರುತ್ತದೆ. ಈ ಪ್ರಯತ್ನ ಎಲ್ಲ ಪ್ರಕಾರಗಳಿಗೂ ಅನ್ವಯಿಸುತ್ತದೆ. ಆದರೆ ಮಕಾನದಾರ ಅವರ ಎಲ್ಲ ಹನಿಗವನಗಳು ವಿನ್ಯಾಸಕ್ಕೆ ಪಕ್ಕಾಗಿಲ್ಲ. ಆದರೆ ಆಶಯದಲ್ಲಿ ಹಿಂದೆ ಬಿದ್ದಿಲ್ಲ. ಅರ್ಥದಲ್ಲಿ ಸೋತಿಲ್ಲ. ಹಾಗಾಗಿ ಓದುಗ ಒಮ್ಮೆ ಕೈಗೆತ್ತಿಕೊಂಡರೆ ಸರಸರನೇ ಓದಿ ಮುಗಿಸುವವರೆಗೂ ಸರಾಗವಾಗಿ ಕರೆದೊಯ್ಯುತ್ತವೆ ಹನಿಗಳು.ಕೆಲವನ್ನು ಗಪದ್ಯದ ಗತಿಯಲ್ಲಿ ಕಟ್ಟಿಕೊಟ್ಟರೆ ಇನ್ನು ಕೆಲವು ಎರಡು ಸಾಲುಗಳ ಪದ ಮಿತಿಯಲ್ಲಿ ಅರ್ಥ ಮಹತ್ತನ್ನು ಮೈಗೂಡಿಸಿಕೊಂಡಿವೆ. ಅಲ್ಲಲ್ಲಿ ಅಸ್ಪಷ್ಟ ಪದ್ಯಗಳು ಇದ್ದು ಅವು ಸಂಕಲನದ ಒಟ್ಟಂದಕ್ಕೆ ಭಂಗ ತರುವುದಿಲ್ಲ. ಕವಿ ಇನ್ನಷ್ಟು ಈ ಕವಿತಾ ಬಂಧದೊಳಗೆ ಮುಳುಗಿ ಸಾಕಿಯನ್ನು ಇನ್ನು ಒಳಗೊಳ್ಳುವ ಪ್ರಯತ್ನ ಮಾಡಿದ್ದರೆ ಹನಿಗವನಗಳು ಇನ್ನಷ್ಟು ಉತ್ಕಟವಾಗಿ ಹೊಮ್ಮುತ್ತಿದ್ದವು.  ಕವಿತೆಗಳಿಗೆ ಸುಂದರ ಚಿತ್ರಗಳ ಬರೆದು ಹನಿಗವನಗಳ ಗಹನತೆಯನ್ನು ಹೆಚ್ಚಿಸಿದ ಚಿತ್ರಕಾರನಿಗೂ ಹಾಗೂ ಕವಿಗೂ ಶುಭಾಶಯಗಳು. ******************************************** ನಾಗರೇಖಾ ಗಾಂವಕರ್

ಪರಿಮಳದ ಹನಿಗಳು Read Post »

ಕಾವ್ಯಯಾನ

ಪ್ರೀತಿಯೆಂದರೆ

ಪ್ರೀತಿಯೆಂದರೆ ಅರುಣಾ ನರೇಂದ್ರ ಪ್ರೀತಿ ಎಂದರೆಬೇರೇನೂ ಅಲ್ಲಅದು ನಿನ್ನ ನೋಟಕಣ್ಣರೆಪ್ಪೆಗಳ ಹುಡುಕಾಟ ಪ್ರೀತಿ ಎಂದರೆನಾನು ನಿನ್ನ ನೀನು ನನ್ನತಿಳಿದುಕೊಳ್ಳುವುದುಸೆಳೆದುಕೊಳ್ಳುವುದು ಪ್ರೀತಿ ಎಂದರೆಒಣಗಿದ ಮರಚಿಗುರುವುದುಹೂ ಅರಳುವುದು ಪ್ರೀತಿಯೆಂದರೆನನಗೆ ನೀನು ನಿನಗೆ ನಾನುಗಂಧ ತೇಯುವುದುಗಾಳಿಯಲಿ ತೂರುವುದು ಪ್ರೀತಿ ಎಂದರೆನಿನಗಾಗಿ ಬರೆದಕವಿತೆಯ ಸ್ವಗತಕಡಲಿನ ಮೊರೆತ *******************************

ಪ್ರೀತಿಯೆಂದರೆ Read Post »

ಕಾವ್ಯಯಾನ

ನನ್ನ-ಅವಳು

ನನ್ನ-ಅವಳು ಸಿದ್ಧರಾಮ ಕೂಡ್ಲಿಗಿ ನನ್ನ ಅವಳು ನನ್ನೆದೆಯೊಳಗಿನ ಪುಟ್ಟ ಹಣತೆ ನೋವು, ನಿರಾಸೆ, ದು:ಖಗಳಾದಾಗಲೆಲ್ಲ ಪಟ್ಟನೆ ಬೆಳಗಿ ಕತ್ತಲೆಯ ದೂಡುವ ಒಳಬೆಳಕು – ನನ್ನ ಅವಳು ಸಾಗರದ ಅಲೆಗಳನ್ನೆಲ್ಲ ತನ್ನ ಹೆರಳೊಳಗೆ ಸುರುಳಿಯಾಗಿಸಿಕೊಂಡು ನನ್ನೆದೆಯ ತೀರಕೆ ಒಲವಿನ ಮುತ್ತಿಕ್ಕುವ ತಣ್ಣನೆಯ ಸಿಂಚನ – ನನ್ನ ಅವಳು ಪ್ರೇಮದ ಹಸಿರ ಮೇಲೆ ಒರಗಿ ಆಗಸವ ನೋಡಿದಾಗಲೆಲ್ಲ ಕಾಣಸಿಗುವ ಬೆಳ್ಮೋಡದ ಸುಂದರ ನಗೆ – ನನ್ನ ಅವಳು ದಣಿವಾದಾಗಲೆಲ್ಲ ಮೈಮನದ ತುಂಬ ಜುಳುಜುಳುನೆ ಹರಿದು ಪ್ರೀತಿಯ ಕಚಗುಳಿಯಿರಿಸಿ ನಕ್ಕುನಲಿಸುವ ಜೀವ-ನದಿ – ನನ್ನ ಅವಳು ನನ್ನೆದೆಯ ಭಾವಗಳ ಗಿರಿಶಿಖರದ ಉತ್ತುಂಗಕ್ಕೇರಿ ನಿಂತಾಗ ಪ್ರೀತಿಯ ಅಗಾಧತೆಯ ತೋರಿ ಬೆನ್ನ ಹುರಿಗುಂಟ ಹರಿವ ತಣ್ಣನೆಯ ಪುಳಕ – ನನ್ನ ಅವಳು ಎದೆಯ ಕಿಟಕಿಯಿಂದ ಇಣುಕಿದಾಗಲೊಮ್ಮೆ ಕಣ್ಣೋಟದಗುಂಟ ಹರಿದುಬಂದು ಮೈದಳೆದು ನಿಲುವ ಪ್ರೇಮವನೇ ಹೊತ್ತ ಬೆಳದಿಂಗಳ ಬಾಲೆ *********************************** –

ನನ್ನ-ಅವಳು Read Post »

ವಾರದ ಕವಿತೆ

ಒಲವಾಗಿ ಬಿಡೋಣ ನಳಿನ ಡಿ. ಎಲ್ಲದರಂತಲ್ಲದ ಈ ರೋಸುಆತ್ಮಕೆ ಅಂಟಿಸಿದವರ್ಯಾರು?ಗುಡಿಸಿದಷ್ಟೂ ಕಾಮದ ಕಸ,ತೊಳೆದಷ್ಟೂ ಪ್ರೇಮದ ನೊರೆ,ಉಳಿ ಪಿಡಿದು ಕೆತ್ತಿಸಿದವರ್ಯಾರು?ನಿನ್ನೆದೆಯಲಿ ನನ್ನ? ಬಹು ಜೋಕೆ ಹುಡುಗಾ,ನೀ ನಡೆಯುತಿರುವುದುಕತ್ತಿಯಂಚಿನ ಮೇಲೆ..ಸೀರೆಯ ಸೆರಗ ಮೇಲೆಲ್ಲಾ,ನಿನ್ನ ಹೆಸರಿನ ಕಸೂತಿಉಟ್ಟ ಮೈ ಜುಂ ಅಂದಾಗನಿನ್ನಲ್ಲೂ ತಲ್ಲಣ ಬುದ್ದ ಇದಿರಾದಂತೆ,ತೆವಲಿನ ಜಗತಿಗೆಪ್ರೇಮ ತೆರೆದಿದೆಕಾಮದ ಕೊರಳಿಗೆ..ಎಲ್ಲೆಲ್ಲೂ ಜಯಿಸಿದಬುದ್ದನಂತೆ,ಪ್ರೇಯ ಜಯಿಸಿರಲುನೀನೂಸುಮ್ಮನೇ ಕಾರಣ ಹೇಳದೆಬಂದುಬಿಡಬಹುದುಕಾದವಳ ಅಗ್ನಿಪರೀಕ್ಷೆಗೆವರವಾಗಿ.. ಬಲ್ಲಂಥವರ ಮಾತಲ್ಲಪ್ರೇಮ?ಮೂಗನ ಹಾಡಿನಂತೆ..ಬಾ ದೂರದ ಮರಳುನಾಡಿನಪಯಣಕೆ ಓಯಸಿಸ್ ನಂತೆನಿಂತ ಜಲವಾಗಿಒಲವಾಗಿ ಬಿಡೋಣ.. **********************************************

Read Post »

ಕಥಾಗುಚ್ಛ

ಸಿನಿಮಾ ಅಲ್ಲ… ಜೀವನ

ಸಿನಿಮಾ ಅಲ್ಲ… ಜೀವನ ಮಧುರಾ ಕರ್ಣಮ್             ಬಾಲಸೂರ್ಯ ತನ್ನ ಹೊಂಗಿರಣಗಳನ್ನು ಸೂಸುತ್ತಿದ್ದಂತೆ ರಾಜರಥದ ಹೊರಭಾಗದಲ್ಲಿ ಅಂಟಿಸಿದ್ದ ಗಣೇಶನ ಚಿತ್ರದ ಮೇಲೆ ಬೆಳಕು ಪ್ರತಿಫಲಿತವಾಗಿ ಗಣೇಶ ಹೊಳೆಯತೊಡಗಿದ್ದ. ಅದೇ ತಾನೆ ತಟ್ಟೆ ಇಡ್ಲಿ ತಿಂದು ‘ಅ..ಬ್’ಎಂದು ತೇಗಿ ಮೇಲೊಂದು ಲೋಟ ಕಾಫಿ ಇಳಿಸಿ ಸಂತೃಪ್ತನಾಗಿ ಒಮ್ಮೆ ಹೊಟ್ಟೆಯ ಮೇಲೆ ಕೈಯಾಡಿಸಿಕೊಂಡೆ. “ನಿತ್ಯ ಹೊರಗೇ ಏಕೆ ತಿಂಡಿ ಮಾಡಾದು? ಮನೆಗೆ ಬಂದ್ರೆ ಒಳ್ಳೆ ತಿಂಡಿ ಹಾಕಾಕಿಲ್ವ?”ಎಂಬ ಅಮ್ಮನ ಕೋಪದ ನುಡಿಗಳು ನೆನಪಾಗಿ ನಗು ಸೂಸಿತು. ಬೆಳಿಗ್ಗೆ ಆರು ಗಂಟೆಗೆಲ್ಲ ಸ್ನಾನ ಮಾಡಿ ನನ್ನ ರಾಜರಥವನ್ನು ಎತ್ತಿಕೊಂಡು ಹೊರಬಿದ್ದು ಯಶವಂತಪುರದ ಸ್ಟೇಷನ್ ಬಳಿ ಬಂದರೆ ಬೇಕಾದಷ್ಟು ಬಾಡಿಗೆಗಳು. ತಿಂಡಿಗೆ ಕಾಯ್ದರೆ ಮನೆಯಲ್ಲೇ ಹತ್ತಾಗುತ್ತದೆ. ಅಲ್ದೇ ಪಾಪ.. ಅಮ್ಮ ಬೇಗ ಬೆಳಿಗ್ಗೆ ಎದ್ದು ಮಾಡಬೇಕು. ಮನೆಯ ಯೋಚನೆ ಕೊಡವಿ ನನ್ನ ರಾಜರಥವನ್ನು ಪ್ರೀತಿ..ಅಭಿಮಾನದಿಂದ ನೋಡಿದೆ. ಹೌದು..ನನ್ನ ರಾಜರಥ..ಕುದುರೆ ..ವಾಹನ ಎಲ್ಲ ಈ ಆಟೋ ಆಗಿತ್ತು. ನನ್ನ ಜೀವನಾಧಾರ ಎಂದರೂ ತಪ್ಪಿಲ್ಲ. ಹಿಂದೆ ಶಂಕರನಾಗ್‌ರ ‘ಆಟೋರಾಜ’ಚಿತ್ರದ ಪೋಸ್ಟರ್ ಸಣ್ಣದಾಗಿ ರಾರಾಜಿಸುತ್ತಿತ್ತು. ಆಟೊ ಚಾಲಕರೆಲ್ಲ ಇಷ್ಟ ಪಡುವ ಹೆಮ್ಮೆಯ ಚಿತ್ರವದು. ಪಾಪ..ಸದಾ ಟ್ರಾಫಿಕ್‌ನಲ್ಲೇ ಇರುವುದರಿಂದ ಮೇಲೆಲ್ಲ ದೂಳು ಹರಡಿತ್ತು. ತುಸು ದೂರ ಕ್ರಾಸ್ ರೋಡಿನಲ್ಲಿ ತಂದು ನಿಲ್ಲಿಸಿ ಹಳೆಯ ಬಟ್ಟೆಯಿಂದ ಒರೆಸಲಾರಂಭಿಸಿದೆ. ಆಗಲೇ ಅವಳು “ಅಮ್ಮಾ..”ಎಂದು ಕೂಗಿಕೊಂಡು ಅತ್ತಲಿಂದ ಓಡಿ ಬಂದದ್ದು. ನಾನೂ ಗಾಬರಿಯಿಂದ “ಏನು..ಏನಾಯ್ತು?”ಎಂದು ಕೇಳಿದೆ. ಉತ್ತರಿಸಲಾರದೆ ಕೈ ತೋರಿದಳು. ಪುಟ್ಟ ಹಾವೊಂದು ಅವಳಿಗಿಂತ ಹೆಚ್ಚು ಹೆದರಿಕೊಂಡು ಸರಸರನೆ ಸರಿದು ಹೋಗುತ್ತಿತ್ತು. ‘ಒಹ್! ಇದಕ್ಕಾ.. ಇವಳು ಇಷ್ಟು ಹೆದರಿ ಕೂಗಿಕೊಂಡದ್ದು..’ಎಂದುಕೊಂಡೆ.  ದಾರಿಯಲ್ಲಿ ಜನರಾರೂ ಇರಲಿಲ್ಲ. ಸೀದಾ ಬಂದವಳು ನನ್ನ ಆಟೋ ಏರಿ ಕುಳಿತಳು. ಒಂದು ನಿಮಿಷ ಸುಮ್ಮನಿದ್ದು ನಾನು “ಅದು ಹೋಯಿತಮ್ಮ”ಎಂದೆ. ಅತ್ತಲಿಂದ ಉತ್ತರವಿಲ್ಲ. ಸೂಕ್ಷ್ಮವಾಗಿ ಅವಳನ್ನು ಗಮನಿಸಿದೆ. ಸೌಂರ‍್ಯದ ಖನಿ ಎಂದು ಹೇಳಲಾಗದಿದ್ದರೂ ಅಂದವಾಗಿದ್ದಳು. ಹಾಲು ಬಣ್ಣ, ನೀಳ ಮೂಗು, ಅರಳು ಕಂಗಳಲ್ಲಿ ಮಡುಗಟ್ಟಿದ್ದ ನೀರು, ಅಗಲ ಬಾಯಿಯಲ್ಲಿ ಅದರುತ್ತಿದ್ದ ಕೆಂಪು ತುಟಿಗಳು, ಹಣೆಯ ಮೇಲೆ ಸಾಲುಗಟ್ಟಿದ್ದ ಬೆವರ ಹನಿಗಳು.. ಅವಳಿನ್ನೂ ಕಂಪಿಸುತ್ತಿದ್ದಳು.             ತುಸು ಮೃದುವಾಗಿ “ಮೇಡಮ್.. ಹೆದರಬೇಡಿ. ಅದು ಹೊರಟು ಹೋಯಿತು. ಇಳಿಯಿರಿ”ಎಂದೆ. ಅವಳು ನಡಗುತ್ತಲೇ “ಉಹ್ಞೂಂ.. ಹೆಬ್ಬಾಳಕ್ಕೆ ನಡೀರಿ” ಎಂದಳು. “ನಾನಲ್ಲಿಗೆ ಬರಲ್ಲ ಮೇಡಮ್. ಏರಿಯಾ ಸರಿಯಾಗಿ ಗೊತ್ತಿಲ್ಲ”ಎಂದೆ. ಚಿಕ್ಕ ಮಗು ರಚ್ಚೆ ಹಿಡಿದು ಕೇಳುವಂತೆ  “ನಾನೀಗ ಇಳಿಯಲ್ಲ. ಕೆಳಗೆ ಕಾಲಿಡಲೂ ಹೆದರಿಕೆ ನಂಗೆ. ನಡೀರಿ.. ಪ್ಲೀಸ್..”ಎಂದು ಅಂಗಲಾಚಿದಳು. ಛೆ! ಇಂದು ಬೆಳಿಗ್ಗೆ ಯಾರ ಮುಖ ನೋಡಿದ್ದೆನೋ ಎನಿಸಿದರೂ ಅವಳ ಸ್ಥಿತಿ ಕಂಡು ಅಯ್ಯೋ.. ಎನಿಸದಿರಲಿಲ್ಲ. ಸುಮ್ಮನೆ ಒಳಗೆ ಕುಳಿತು ಮೀಟರ್ ಹಾಕಿ ಗಾಡಿ ಶುರು ಮಾಡಿದೆ. ಕನ್ನಡಿಯಲ್ಲಿ ಅವಳ ಪ್ರತಿಬಿಂಬ ಕಾಣುತ್ತಿತ್ತು. ಸ್ವತಂತ್ರವಾಗಿ ಹಾರಾಡಲು ಬಿಟ್ಟ ಕೂದಲು, ಕೈಗೆ ದುಬಾರಿ ವಾಚು, ಬೆಲೆ ಬಾಳುವ ಕ್ಲಚ್ ರೂಪದ ಪರ್ಸು.. ಸ್ಥಿತಿವಂತರ ಮನೆಯ ಹುಡುಗಿ ಎನ್ನುವುದರಲ್ಲಿ ಅನುಮಾನವೇ ಇಲ್ಲ. ವಿಳಾಸ ಹೇಳಲು ತಡವರಿಸುತ್ತಿದ್ದವಳನ್ನು “ಸಣ್ಣ ಪುಟ್ಟದ್ದಕ್ಕೆಲ್ಲಾ ಇಷ್ಟು ಹೆದರಬಾರದು ಮೇಡಮ್. ಮುಂದೆ ಜೀವನದಲ್ಲಿ ಎಂಥೆಂಥದ್ದಕ್ಕೆಲ್ಲಾ ತಲೆ ಕೊಡಬೇಕಾಗುತ್ತೆ. ‘ಧೈರ್ಯಂ ಸರ್ವತ್ರ ಸಾಧನಂ’ ಎಂಬಂತೆ ಧರ‍್ಯ ತಂದುಕೊಳ್ಳಿ” ಎಂದು ಸಾಂತ್ವನಿಸಿದಾಗ ಕೊಂಚ ತಹಬಂದಿಗೆ ಬಂದಿದ್ದಳು. ‘ಭರ್‌ರ್..’ಎಂದು ಓಡಿದ ನನ್ನ ರಥ ‘ವೀರಪ್ಪನ ಪಾಳ್ಯ’ಎಂದು ಬರೆದ ಕಮಾನಿನ ಮೂಲಕ ಹಾದು ತಿರುವುಗಳಲ್ಲಿ ತಿರುಗಿ ಅವಳು ತೋರಿಸಿದ ಭವ್ಯ ಬಂಗಲೆಯ ಮುಂದೆ ನಿಂತುಕೊಂಡಿತು. ಇಳಿದವಳು ಮೀಟರ್‌ನತ್ತ ನೋಡುವ ಗೊಡವೆಗೂ ಹೋಗದೇ ಐನೂರರ ನೋಟೊಂದನ್ನು ಕೊಟ್ಟು “ಥ್ಯಾಂಕ್ಸ.. ತುಂಬಾ ಥ್ಯಾಂಕ್ಸ”ಎಂದು ಹೊರಟು ಬಿಟ್ಟಳು. ರ‍್ರೀ.ಮೇಡಮ್, ಚಿಲ್ಲರೆನಾರೂ ತೊಗೊಳ್ಳಿ”ಎಂದು ಕೂಗಿದೆ. ತೆಗೆದುಕೊಂಡವಳು ಮನೆಯತ್ತ ನಾಲ್ಕು ಹೆಜ್ಜೆ ಹಾಕಿ ತಿರುಗಿ ನನ್ನತ್ತ ನೋಡಿ ಹೂನಗು ಬೀರಿದಳು. ಮೋಡ ಕರಗಿ ಮಳೆಯಲ್ಲಿ ಮಿಂದ ಹೂ ಶುಭ್ರವಾಗಿ ನಗುವಂತೆ.. ಹಾವು ನೋಡಿ ಹೆದರಿ ಕಂಪಿಸಿ ಕಣ್ತುಂಬಿದ ಕುರುಹೂ ಇರದಂತೆ.. ನನಗೆ ಅಚ್ಚರಿಯೊಂದಿಗೆ ಯಾವುದೋ ಪುಳಕದಲ್ಲಿ ಮಿಂದ ಭಾವ. ಒಂದೊಂದೇ ಹೆಜ್ಜೆಯನ್ನಿಡುತ್ತ ಮನೆಯೊಳಗೆ ನಡೆಯುವಾಗ ಮತ್ತೊಮ್ಮೆ ತಿರುಗಿ ಕೈ ಮಾಡಿದಳು. ನಾನೂ ಮುಗುಳ್ನಕ್ಕು ಕೈ ಮಾಡಿದೆ. ಮನಸ್ಸಿಗೆ ಎಂದೂ ಇಲ್ಲದ ವಿಚಿತ್ರ ಸಿಹಿ ಅನುಭವ. ಅದೆಂಥ ಆಕರ್ಷಣೆಯೋ.. ಗೊತ್ತಿಲ್ಲ.             ಅದು ಅಲ್ಲಿಗೆ ಮುಗಿದ ಅಧ್ಯಾಯವಾಗಿದ್ದರೆ ಬೆಳೆದು ಕಥೆಯಾಗುತ್ತಿರಲಿಲ್ಲ. ನಾನು ನಿಮಗೆ ಹೇಳಬೇಕಾಗೂ ಇರಲಿಲ್ಲ. ಮರುದಿನ ನಾನು ಮಹಾಲಕ್ಷ್ಮಿಲೇಔಟಿನ ಪಂಚಮುಖಿ ಆಂಜನೇಯನಿಗೆ ನಮಿಸಿ ಮೂಲೆಯಲ್ಲಿದ್ದ ಅಂಗಡಿಯಲ್ಲಿ ಚಿತ್ರಾನ್ನ ತಿಂದು.. ಕಾಫಿ ಕುಡಿದು ನನ್ನ ರಥದ ಬಳಿ ಬಂದೆ. ತುಸುದೂರದಲ್ಲಿ ಕಾಯುತ್ತ ನಿಂತವಳು ಹೂನಗು ಬೀರುತ್ತ ಹತ್ತಿರ ಬಂದಳು. ನಿನ್ನೆ ಕಂಡ ಜಾಗ.. ಅದೇ ಹುಡುಗಿ..ಎಂದು ಖಚಿತಪಡಿಸಿಕೊಂಡೆ. “ಈವತ್ತೇನು.. ತಿಂಡಿ ಲೇಟಾ?”ಎಂದು ತುಂಬಾ ಪರಿಚಯವಿರುವಂತೆ ಕುಶಲೋಪರಿ ಆರಂಭಿಸಿದಳು. “ಹ್ಞೂಂ, ಏಳಲು ತಡವಾಯ್ತು”ಎಂದೆ. ತಟಕ್ಕನೆ ಆಟೋ ಏರಿ ಕುಳಿತು “ನಡೀರಿ ಹೆಬ್ಬಾಳಕ್ಕೆ..”ಎಂದಳು. ನಾನು ನುಸುಗೋಪದಿಂದ “ಆಗಲ್ಲ ಮೇಡಮ್.. ನಾನಲ್ಲಿಗೆ ಬರೋದೇ ಇಲ್ಲ. ನಿನ್ನೆ ನೀವು ತುಂಬಾ ಹೆದರಿಕೊಂಡಿದ್ರೀಂತ ಬಂದದ್ದಷ್ಟೇ.. ಬೇರೆ ಆಟೋ ನೋಡ್ಕೊಳಿ”ಎಂದೆ ಮಾಮೂಲಿ ಧಾಟಿಯಲ್ಲಿ. ಅವಳೂ ಭಂಡತನ ತೋರುತ್ತ “ನಾನಂತೂ ಇಳಿಯಲ್ಲ. ನನ್ನ ಬಿಟ್ಟು ಮುಂದೆ ಹೋಗಿ”ಎಂದಳು. ಕೋಪವೇರಿ “ಏನಂದುಕೊಂಡಿದ್ದೀರಿ ನನ್ನನ್ನ..?” ಎಂದು ಕೇಳಿದೆ. “ಒಬ್ಬ ಒಳ್ಳೆಯ ಸ್ನೇಹಿತ..ಹಿತೈಷಿ..” ಎಂದು ಮುದ್ದಾಗಿ ಉಲಿದಳು. ಹಾಳು ಮನಸ್ಸು ಮತ್ತೆ ಮೃದುವಾಯಿತು. ಮತ್ತೆ ಈ ಹುಡುಗಿ ಕಣ್ತುಂಬಿಕೊಂಡು ಹನಿ ಪಟಪಟನೆ ಉದುರಿಸಿದರೆ ಕಷ್ಟವೆನಿಸಿ ಸೀದಾ ಓಡಿಸಿದೆ. ಮಾಮೂಲು ದಾರಿಯಲ್ಲಿ ಓಡಿದೊಡನೆ ಹಸನ್ಮ್ಮಖಿಯಾದವಳು ದಾರಿಯಲ್ಲಿ ಪ್ರವರ ಆರಂಭಿಸಿದಳು.             ಅವಳ ಹೆಸರು ಮಾನ್ಯ. ಇಂಜಿನಿಯರಿಂಗ್‌ನ ನಾಲ್ಕು ವರ್ಷಗಳು ಮುಗಿದರೂ ಕೆಲವು ವಿಷಯಗಳು ಉಳಿದುಕೊಂಡಿವೆಯಂತೆ. ಅದಕ್ಕೇ ಟ್ಯೂಟರ್ ಹತ್ತಿರ ಹೇಳಿಸಿಕೊಳ್ಳಲು ಮಹಾಲಕ್ಷ್ಮಿಲೇಔಟಿಗೆ ಬರುತ್ತಾಳೆ. ಬೆಳಿಗ್ಗೆ ಏಳು ಗಂಟೆಗೆಲ್ಲ ಅಪ್ಪನ ಡ್ರೆöÊವರ್ ಬಿಟ್ಟು ಹೋಗುತ್ತಾನೆ. ಅಪ್ಪ ಒಂಬತ್ತಕ್ಕೆಲ್ಲ ಆಫೀಸಿಗೆ ಹೊರಟುಬಿಡುತ್ತಾರೆ. ಹೀಗಾಗಿ ಮನೆ ಸೇರಲು ನನ್ನ ಬೆನ್ನು ಬಿದ್ದಿದ್ದಾಳೆ. ಅಪ್ಪ ಆದಾಯ ತೆರಿಗೆ ಅಧಿಕಾರಿ. ಭವ್ಯ ಬಂಗಲೆ ನೋಡಿಯೇ ‘ಭಾರೀ ಕುಳ’ಎನ್ನಬಹುದು. ಅಮ್ಮ ಮಹಿಳಾ ಸಮಾಜ, ಕ್ಲಬ್‌ಗಳ ಮೆಂಬರ್. ಅಣ್ಣ ಅಮೆರಿಕೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಇತ್ಯಾದಿ..ಇತ್ಯಾದಿಗಳನ್ನು ಹೇಳಿಕೊಳ್ಳುತ್ತ ತಟಕ್ಕನೇ ಅವಳು “ಇನ್ನು ಮುಂದೆ ನಿತ್ಯ ನಾನು ಟ್ಯೂಷನ್‌ಗೆ ಬರುವಷ್ಟು ದಿನ ನೀವೇ ನನ್ನನ್ನು ಮನೆಗೆ ಬಿಟ್ಟುಬಿಡಿ”ಎಂದಳು. “ಆಗಲ್ಲ ಮೇಡಮ್.. ಈ ರೂಟು ತುಂಬಾ ಬಿಝಿ ಇರುತ್ತೆ. ಟ್ರಾಫಿಕ್‌ನಲ್ಲಿ ತುಂಬಾ ಟೈಮ್ ಹಾಳಾಗುತ್ತೆ. ನೀವು ಓಲಾ..ಊಬರ್ .. ಬುಕ್ ಮಾಡಿದ್ರೆ ಬರ್ತಾರೆ”ಎಂದೆ. “ಅದೆಲ್ಲಾ ನನಗೆ ಗೊತ್ತು. ಅವರು ಬೇಡ. ನೀವೇ ಒಪ್ಕೊಳ್ಳಿ. ದುಡ್ಡು ಎಷ್ಟಾದ್ರೂ ಕೇಳಿ. ನಮ್ಮ ಏರಿಯಾದ ಶಾಪಿಂಗ ಕಾಂಪ್ಲೆಕ್ಸನಿಂದ ನಿಮಗೆ ಬೇಕಾದಷ್ಟು ಬಾಡಿಗೆಗಳೂ ಸಿಗುತ್ವೆ”ಎಂದು ಪಟ್ಟು ಹಿಡಿದಳು. ನಾನು ದ್ವಂದ್ವದಲ್ಲಿ ಮುಳುಗಿದರೂ ಯೋಚಿಸಿದೆ. ಒಳ್ಳೆ ಅವಕಾಶ. ಇಲ್ಲಿ ಕಾಯೋ ಬದಲು ಅಲ್ಲೇ ಹೊಡೀಬಹುದು. ಒಂದು ಲಾಂಗ್ ರೂಟ್ ಬಾಡಿಗೆಯಂತೂ ಫಿಕ್ಸು ಎನಿಸಿ ಒಪ್ಪಿಕೊಂಡೆ. ಹುಡುಗಿ ಫುಲ್ ಖುಷಿಯಾಗಿ“ಹರ‍್ರೇ..”ಎಂದಳು. ನನಗೋ.. ಒಮ್ಮೆ ಅಚ್ಚರಿ.. ಮತ್ತೊಮ್ಮೆ ನಗು..ಅದೇಕೆ ಈ ಹುಡುಗಿ ನನ್ನನ್ನು ಹಚ್ಚಿಕೊಳ್ಳುತ್ತಿದ್ದಾಳೆ ಎನ್ನುವ ಆತಂಕ.             ದಿನಗಳು ಓಡುತ್ತಿದ್ದವು. ಬಿಡುವೇ ಇರದಂತೆ.. ಆಟೋ ಕೂಡ ಹಾಗೇ ಹೆಬ್ಬಾಳಕ್ಕೆ ಓಡುತ್ತಿತ್ತು. ಅವಳು ತನ್ನ ತಾಯಿ, ತಂದೆ, ಗೆಳತಿಯರ ಬಗ್ಗೆ ನಿತ್ಯವೂ ಹೇಳುತ್ತಿದ್ದಳು. ಒಬ್ಬ ಆಪ್ತ ಸ್ನೇಹಿತೆಗೆ.. ಹಿತಚಿಂತಕರಿಗೆ ಹೇಳುವಂತೆ.. “ಅಪ್ಪ ತುಂಬಾ ಸ್ಟಿçಕ್ಟ. ಮೊದಲು ಮಾಮೂಲಿಯಾಗಿದ್ದರು. ನನ್ನನ್ನು, ಅಣ್ಣನನ್ನು ಚೆನ್ನಾಗಿ ಮಾತನಾಡಿಸುತ್ತ ಪಿಕ್ಚರ್, ಪಾರ್ಕುಗಳಿಗೆಲ್ಲ ಕರೆದೊಯ್ಯುತ್ತಿದ್ದರು. ನಮ್ಮದೊಂದು ಮಧ್ಯಮ ವರ್ಗದ ಕುಟುಂಬವಾಗಿರುವವರೆಗೂ ಎಲ್ಲ ಚೆನ್ನಾಗೇ ಇತ್ತು. ಅಮ್ಮ ನಮ್ಮ ಬೇಕುಬೇಡಗಳನ್ನು ಪೂರೈಸುತ್ತ ಮನೆಗೆ ಆಧಾರವಾಗಿದ್ದಳು. ವಾರವಾರವೂ ಹೊಸ ತಿಂಡಿ, ಅಡಿಗೆ ಮಾಡೋಳು. ನಾವು ಅವಳಿಗೆ ಸಹಾಯ ಮಾಡುತ್ತಿದ್ದೆವು. ನಾನೂ ಸ್ನೇಹಿತೆಯರೊಂದಿಗೆ ಆಟ, ಓದು.. ಪಿಕ್ಚರ್ ಎಂದೆಲ್ಲ ಹಾಯಾಗಿದ್ದೆ. ಅಪ್ಪನಿಗೆ ಪ್ರಮೋಷನ್ ಆಗಿ ಇನ್‌ಕಮ್‌ಟ್ಯಾಕ್ಸ ಆಫೀಸರ್ ಆದ ಮೇಲೆ ಮನೆಯ ಚಿತ್ರವೇ ಬದಲಾಯಿತು. ಬಂಗಲೆ ದೊಡ್ಡದಾದಷ್ಟೂ ನಾವೆಲ್ಲ ದೂರವಾದೆವು. ನಮ್ಮೊಂದಿಗೆ ಮಾತನಾಡಲು ಅಪ್ಪನಿಗೆ ಸಮಯವೇ ಇರುವುದಿಲ್ಲ. ವಿಪರೀತ ಮೂಡಿಯಾಗಿ ಸದಾ ವ್ಯವಹಾರಗಳಲ್ಲೇ ಮುಳುಗಿ ಎಲ್ಲ ಮರೆತುಬಿಡುತ್ತಾರೆ. ನನ್ನ ಅಕೌಂಟಿಗೆ ದುಡ್ಡು ಹಾಕುವುದನ್ನು ಬಿಟ್ಟು.. .. ಎಲ್ಲವನ್ನೂ. ಅಮ್ಮ ಸದಾ ಕ್ಲಬ್‌ನ ಮೀಟಿಂಗಿನಲ್ಲೋ.. ಮಹಿಳಾ ಸಮಾಜದ ಸೋಷಿಯಲ್ ವರ್ಕಿನ ಹೆಸರಿನ ಫಂಕ್ಷನ್‌ಗಳಲ್ಲೋ ಲೀಡರ್ ಆಗಿ ಮಿಂಚುತ್ತಾರೆ. ಅದಕ್ಕೆ ಬ್ಯೂಟಿ ಪಾರ್ಲರ್‌ಗೆ ಹೆಚ್ಚು ಟೈಮು, ದುಡ್ಡು ಹಾಕ್ತಾರೆ. ನನಗೋಸ್ಕರ ಯಾರ ಬಳಿಯೂ ಸಮಯವಿಲ್ಲ.”ಎಂದಾಗ ನನಗಾಗಿ ಊಟ, ತಿಂಡಿ ಸಿದ್ಧ ಮಾಡಿ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಾ “ನಾಗಾ.. ಒಂತುತ್ತು ತಿಂದು ಹೋಗೋ.. ಹಸಿದುಕೊಂಡು ಕೆಲಸ ಮಾಡ್ಬಾರ್ದು ಮಗಾ”ಎಂದು ಅಲವತ್ತುಕೊಳ್ಳುವ ನನ್ನಮ್ಮನ ನೆನಪಾಗಿತ್ತು. ಈ ರೀತಿಯ ಬಡ ಸಿರಿವಂತಿಕೆಗಿಂತ ನನ್ನಂಥವರ ಹೊಟ್ಟೆ ತುಂಬಿದ..ಪ್ರೀತಿ ತುಂಬಿದ ಶ್ರೀಮಂತ ಬಡತನವೇ ಲೇಸು ಎನಿಸಿತು.  “ಅಣ್ಣ ಅಮೆರಿಕದಿಂದ ಆಗಾಗ ಫೋನ್ ಮಾಡ್ತಿರ್ತಾನೆ. ಅವನಿಗೆ ಇಲ್ಲಿ ಬರಲು ಇಷ್ಟವೇ ಇಲ್ಲ. ಇಲ್ಲಿನ ರೀತಿ, ನೀತಿಗಳೊಂದಿಗೆ ಅಪ್ಪನ ಲಂಚಗುಳಿತನ, ಭ್ರಷ್ಟಾಚಾರ, ಅಮ್ಮನ ಬೂಟಾಟಿಕೆ, ಆಡಂಬರ.. ಯಾವುದೂ ಇಷ್ಟವಾಗಲ್ಲ” ಇತ್ಯಾದಿ ವಿವರಗಳು ನಾನು ಕೇಳದೆಯೇ ನನಗೆ ದೊರಕಿದ್ದವು. ನಾನು ಬರೀ ‘ಹ್ಞೂಂ..’ಗುಡುವ ಯಂತ್ರವಾಗಿದ್ದೆ. ಆದರೆ ಮನದ ಮೂಲೆಯಲ್ಲಿ ತಟ್ಟನೆ ‘ಹಾಗಾದರೆ ಕಾಳು ಹಾಕಿದವರಿಗೆ ದೊಡ್ಡ ಸಾಮ್ರಾಜ್ಯವೇ ದೊರಕುವುದುಂಟು’ಎನಿಸಿದ್ದು ಸುಳ್ಳಲ್ಲ. “ಮನೇಲಿ ಅಡಿಗೆಯವಳು, ಕೆಲಸದವಳು, ಮಾಲಿ.. ಬಿಟ್ಟರೆ ಯಾರಿರುವುದಿಲ್ಲ. ದೊಡ್ಡ ಸುಂದರ ಮನೆಯನ್ನು ಅವರೇ ಎಂಜಾಯ್ ಮಾಡ್ತಾರೆ. ಎಲ್ಲರೂ ರಾತ್ರಿಯೇ ಬರುವುದು. ಅದಕ್ಕೇ ಸಿ.ಸಿ.ಟಿವಿ. ಬೇರೆ ಹಾಕಿಸಿದ್ದಾರೆ”ಎಂದು ನಕ್ಕಳು. ವಿಷಾದಭರಿತ ನಗೆ. ‘ತುಂಬಾ ಮುಗ್ಧೆ’ಎನಿಸಿತು. ಶ್ರೀಮಂತಿಕೆಯ ಮೆಟ್ಟಿಲೇರುವ ಹುಚ್ಚಿನಲ್ಲಿ ಅಮಾಯಕ ಮನವನ್ನು ಮರೆತಿದ್ದಾರೆ ಎಂಬ ಬೇಜಾರೂ ಸೇರಿಕೊಂಡಿತು. ಯಾರ ಅಕ್ಕರೆಯೂ ಸಿಗದ ಶ್ರೀಮಂತ ಸಕ್ಕರೆಯ ಗೊಂಬೆ ಪ್ರೀತಿಗೆ.. ವಿಶ್ವಾಸಕ್ಕೆ ಹಂಬಲಿಸುತ್ತಿದ್ದಾಳೆ ಎನ್ನುವುದು ಸ್ಪಷ್ಟವಾಗಿತ್ತು. ಯಾವ ವಿಷಯ ಹೇಳಬೇಕು.. ಹೇಳಬಾರದೆಂಬ ಅರಿವಿಲ್ಲದೇ ಮನೆಯ ಚಿತ್ರವನ್ನೆಲ್ಲ ಬಿಡಿಸಿಡುತ್ತಿದ್ದಾಳೆ. ಮಧ್ಯಾಹ್ನ ಹೋಗಿ ಕೊಳ್ಳೆ ಹೊಡೆಯಬಹುದು ಎನಿಸಿ ನಗು ಬಂತು. ಮಳೆಗಾಲ ಆರಂಭವಾಗಿತ್ತು. ತುಂತುರಾಗಿ ನೀರ ಧಾರೆ ಸುರಿಯತೊಡಗಿತ್ತು. ಆಟೋ ಹೆಬ್ಬಾಳಕ್ಕೆ ನಿತ್ಯವೂ ಓಡುತ್ತಿತ್ತು. “ಮಳೆಗಾಲ.. ಕಾರಲ್ಲೇ ಓಡಿಯಾಡಬಹುದಲ್ಲ..”ಎಂದೆ. ಅದಕ್ಕೆ ಅವಳು “ಹ್ಞಾಂ, ಅಪ್ಪ ಕೂಡ ಅದನ್ನೇ ಹೇಳಿದರು. ಡ್ರೈವರ್‌ನ ಕಳಿಸ್ತೀನಿ ಅಂದ್ರು. ನಾನೇ ಕ್ಯಾಬ್ ಬುಕ್ ಮಾಡ್ಕೋತೀನಿ ಅಂದೆ. ನಾನು ಆಟೋದಲ್ಲಿ ಓಡಿಯಾಡುವುದು ಅವರ ಅಂತಸ್ತಿಗೆ ಕಡಿಮೆ ಅಂತಾರೆ. ಈಗ ನಿತ್ಯ ನಾನು ಮನೆಗೆ ಹಿಂತಿರುಗುವಾಗ ಮನೇಲಿ ಯಾರೂ ಇರಲ್ಲ. ನೋಡಲ್ಲ..” ಎಂದಳು. “ಫ್ರೆಂಡ್ಸ ಜೊತೆ ಕ್ಯಾಬ್‌ನಲ್ಲೂ ಹೋಗಬಹುದು”ಎಂದೆ. “ಫ್ರೆಂಡ್ಸಾ.. ಶಬ್ದಾನೇ ಮರೆತು ಎಷ್ಟೋ ದಿನ ಆದಂಗಾಗಿದೆ. ಮೊದಲು ನಾವು ಚಿಕ್ಕ ಮನೇಲಿದ್ದಾಗ ತುಂಬಾ ಜನ ಫ್ರೆಂಡ್ಸ ಇದ್ದರು. ನಾವೆಲ್ಲ ಸಿನಿಮಾ, ಮಾಲ್, ಶಾಪಿಂಗ್ ಅಂತ ಓಡಾಡ್ತಿದ್ವಿ. ಎಲ್ಲರೂ ಕೊಳ್ಳೋದು ಜಾಸ್ತಿ ಇರಲಿಲ್ಲವಾದರೂ ವಿಂಡೋ ಶಾಪಿಂಗ್ ಮಾಡಿದ್ದೇ ಹೆಚ್ಚು. ಸಿನಿಮಾ ಅಂತೂ ಒಂದೂ ಬಿಡದೇ ನೋಡ್ತಿದ್ದೆವು. ಕನ್ನಡ, ಹಿಂದಿ, ತೆಲಗು, ತಮಿಳು, ಇಂಗ್ಲಿಷ್.. ನೋಡಿ ಮಜಾ ಮಾಡ್ತಿದ್ದೆವು. ಕನ್ನಡ ಸಿನಿಮಾದ ಡೈಲಾಗ್‌ಗಳನ್ನ ಉರು ಹೊಡೆದು ಹೇಳಿದ್ದೇ ಹೇಳಿದ್ದು. ದೊಡ್ಡ ಮನೆಗೆ ಬಂದ ಮೇಲೆ ಅವರು ಅಮ್ಮ, ಅಪ್ಪನಿಗೆ ಇಷ್ಟವಾಗಲಿಲ್ಲ. ಬಿಡಿಸಿಬಿಟ್ರು. ಅಮ್ಮ ತೋರಿಸಿದ ಹೈಕ್ಲಾಸ್ ಒಣ ಡಂಭಾಚಾರದ ಫ್ರೆಂಡ್ಸ

ಸಿನಿಮಾ ಅಲ್ಲ… ಜೀವನ Read Post »

ಕಾವ್ಯಯಾನ

ಒಲವಧಾರೆ ಜಯಶ್ರೀ.ಭ.ಭಂಡಾರಿ. ಬದುಕು‌ ಅದ್ಹೇಗ್ಹೆಗೊ ಸಾಗಿತ್ತು ತನ್ನ ಪಾಡಿಗೆಮಧ್ಯರಾತ್ರಿ ಫೋನ ರಿಂಗಣಿಸಿ ಹಾಡಿತುಭಯದಲಿ ಕಣ್ಣುಜ್ಜುತ್ತಾ ಹಲೋ ಎಂದೆಕಂಗ್ಲೀಷಿನಲ್ಲಿ‌ ಏನೋ ಉಲಿಯಿತುಒರಟು ದನಿ.. ಮತ್ತೆ ಮತ್ತೆ ಫೋನ ರಿಂಗುಣಿಸಿ ಹೇಗೋನಂಟಿನ ಗಂಟು ಶುರುವಾಯಿತುಹೀಗೆ‌ ಬಂದ ನೀನು ಹಾಗೆ ಹೋಗುವೆಅಂದುಕೊಂಡಿದ್ದೆ ಆದರೆ ಆದದ್ದೆ ಬೇರೆ. ಮನದ ಕಾಮನ ಬಿಲ್ಲು ಕಮಾನು ಕಟ್ಟೀತುಅಂದುಕೊಂಡಿರಲಿಲ್ಲ ಆಗಂತುಕನೆ..ನೀನು ಗೆಳೆಯನೇ ನೂರು ಬಾರಿ ಯೋಚಿಸಿದೆನಿನ್ನ ನಿನ್ನೆಗಳ ಬಗ್ಗೆ ನನಗ್ಯಾವ ಆಸಕ್ತಿಯಿಲ್ಲ. ನನ್ನ ನಾಳೆಗಳು ಏನಾಗುತ್ತವೆಯೋ ತಿಳಿದಿಲ್ಲ.ನಾವಿಬ್ಬರೂ ಒಂದಾಗಿ ಪಯಣಿಸಲು ಸಾದ್ಯವೆಒಂದೇ ದೋಣಿಯಲಿ ಸಾಗುವದು ಸಾಧುವೆ.ಹಂಬಲದ ಹರಿಗೋಲು ಹಾರೈಸಲಿ ಒಲವೇ.. ಮೊದಮೊದಲು ಆಸಕ್ತಿಯಿಲ್ಲದ ಭಾವನೆಗಳುಈಗ ನಿನ್ನ ನೆನಪುಗಳಿಗೆ ಮುಪ್ಪು ಎನ್ನುವುದೇ ಇಲ್ಲಸದಾ ನಿನ್ನ ನೆನಪಲಿ ಬೆಂದ ಹೃದಯದ ಜ್ವರಕೂನಿನ್ನ ನೆನಪೆ ಮದ್ದು ಕಣೋ ಮಹಾರಾಯಾ ಮಲಗಿದ್ದ ಭಾವನೆಗಳನ್ನು ಬಡಿದೆಬ್ಬಿಸುವ ಹಠಏತಕೋ ಹೇ ಗೆಳೆಯ ಅರಿಯೆ ನಾ ಹೇಳು ನೀಈ ಬದುಕನ್ನು ಎಲ್ಲಿಗೆ ಕೊಂಡೊಯ್ಯುತ್ತಿಯಾವ ದಡ ಸೇರಿಸುತ್ತಿ ನದಿಯಾಗಿ ಹರಿದು ಬರಲೇ. ನೀನಾಡಿದ ಮಾತುಗಳನ್ನೇ ಹೆಕ್ಕಿ ಹೆಕ್ಕಿಕವನವಾಗಿರಿಸಿರುವೆ ನೋಡು ಬಾ ಗೆಳೆಯಾಮಿಂದ ಕಣ್ಣಂಚು ಅದರುವ ಅಧರಗಳುಕಾಯುತ್ತಿವೆ ನಿನ್ನಾಗಮನಕ್ಕಾಗಿ …ಪ್ರೀತಿಯಿಲ್ಲದೆ ಜಗವಿಲ್ಲ ಮತ್ತೆ ಮತ್ತೆ ಸಾಬಿತಾಗಲಿ.* ************************************

Read Post »

ಕಾವ್ಯಯಾನ

ಪ್ರೇಮಮೂರುತಿ ಆಶಾ ಆರ್ ಸುರಿಗೇನಹಳ್ಳಿ ಬಿಕ್ಕುತ್ತಿದ್ದವು..ಮೌನವೊದ್ದು,ಸೊರಗುತ್ತಿದ್ದ ಕನಸುಗಳು..ಹಗಲು-ರಾತ್ರಿಗಳ ಪರಿವಿಲ್ಲದೆ,ಏರುತ್ತಿದ್ದ ನಶೆಗೂ..ನಿಶೆಯ ಗಾಢ ಮೌನವೇಒಲವ ಆಲಿಂಗನ. ಮಡುಗಟ್ಟಿದ ನೋವುಗಳುಅಧರಗಳ ಕಂಪಿಸಿತೋಯಿಸುವಾಗ..ವಿರಹಕ್ಕಾಗಿ ಚಡಪಡಿಕೆಯೊ?ಸನಿಹಕ್ಕಾಗಿ ಬೇಡಿಕೆಯೊ?ಅಶ್ರುವಿಗೂ ಗೊಂದಲ ಮೂಡಿಉರುಳುರುಳಿ ಸತ್ತವು.. ನೋವುಗಳೊ? ನೆನಪುಗಳೊ?ಖಾಲಿಯಾದ ದುಃಖ,ಉಳಿಸಿದ್ದೇನೆಂಬುದೇ ಗುಟ್ಟುಬಯಸಿದ್ದು ಮಾಯಾಜಿಂಕೆಯಂತೆಸರಿಯುತ್ತಲೇ ಇತ್ತು.. ಒಲವಾಂಕುರ ಜಿನುಗುತಾಪುಟಿ ಪುಟಿದು ನೆಗೆವಾಗಅವಳ ಒದ್ದಾಟವೆಲ್ಲಾನಿರರ್ಥಕವಾಗಿ..ಒಲುಮೆಯ ಘಮಲುಬಿಡದೆ ಪಸರಿಸುತಿತ್ತು.. ಆ ನೋವು-ನಲಿವ ಮಂಥನದಲೂನೋವಿನದೆ ಮೇಲುಗೈ ಆದಾಗವಿಷಕಂಠನಂತವಳುದಿನವೂ ನೊವನುಣ್ಣುತಾಭರವಸೆಯ ದೀವಿಗೆ ಬೆಳಗುತಾಒಲವ ದೀಪವಚ್ಚುವಪ್ರೇಮಮೂರುತಿಯಾದಳು..ದೀಪದ ಬೆಳಕಲಿಬದುಕಿನ ಸತ್ಯವ ಕಂಡಳು..! ********************************

Read Post »

You cannot copy content of this page

Scroll to Top