ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಹಬ್ಬದ ಸಂತೆ

ಕವಿತೆ ಹಬ್ಬದ ಸಂತೆ ಡಾ. ಅರಕಲಗೂಡು ನೀಲಕಂಠ ಮೂರ್ತಿ ಇನ್ನೇನುಹತ್ತಿರ ಹಬ್ಬದ ಕಾಲಸಂತೆಗಳಲಿ ಮಾರಾಟಕೆಪಂಚೆ ಸೀರೆ ಒಂದೆರಡು ಪಿಂಡಿಮುತುವರ್ಜಿ ವಹಿಸಿನೇಯತೊಡಗಿರುವನುನೇಕಾರ ಹಗಲು ರಾತ್ರಿ ಎನ್ನದೆಮುಂದಿನ ನಾಲ್ಕಾರು ತಿಂಗಳಹೊಟ್ಟೆಪಾಡಿಗೆ! ಇನ್ನು ವಾರದಲ್ಲೆಸಂತೆಗಳ ಸುರಿಮಳೆ…ಅಷ್ಟರಲ್ಲಿ ಅದೆಂಥದೋ ಕಾಯೆಲೆಜಗಕೆಲ್ಲ ಸುಂಟರಗಾಳಿಯ ಹಾಗೆಹಬ್ಬಿಅದೇನೋ ಸಂಜೆ ಕರ್ಫ್ಯೂಅಂತ ಹೇರಿದರುಜೊತೆಜೊತೆಗೆ ಘಂಟೆ ಜಾಗಟೆಬಾರಿಸಿರೆಂದರುದೀಪ ಬೆಳಗಿಸಿ ಕುಣಿಸಿದರುಎಲ್ಲರೊಡನೆ ತಾವೂ ಕೂಡಿಕೊಂಡರುಈ ನೇಕಾರರುಅಮಾಯಕರು… ಹಾಗೆ ಕುಣಿಕುಣಿದುದೀಪ ಜಾಗಟೆಗಳಶಬ್ದ ಬೆಳಕಿನಾಟದ ನಡುವೆಯಲಿದಿಢೀರನೆ ಸಿಡಿಲು ಬಡಿದುಮರಗಳು ಬೆಂದು ಉರಿದ ಹಾಗೆಲಾಕ್ ಡೌನ್! ಲಾಕ್ ಡೌನ್!ಎಂದು ಗುಡುಗಿದರುನಾಡೆಲ್ಲ ಒಟ್ಟೊಟ್ಟಿಗೆ ಬಂದ್ ಬಂದ್!ಮತ್ತೆ ಗುಡುಗುಟ್ಟಿದರು… ಮೂಲೆಯಲಿ ಸದ್ದಿಲ್ಲದೆ ಕೂತಿದ್ದಪಿಂಡಿಗಳುಇದ್ದಕ್ಕಿದ್ದಂತೆ ನೆಲಕ್ಕುರುಳಿಅಂಗಾತ ಮಲಗಿಬಿಟ್ಟವುನೇಕಾರನ ಕಣ್ಣುಗಳುಅಸಹಾಯಕವಾಗಿಆ ಪಿಂಡಿಗಳನೇ ನೆಟ್ಟಗೆ ದಿಟ್ಟಿಸಿತಮಗೆ ತಾವೇ ಬಲವಾಗಿ ಒತ್ತಿಮುಚ್ಚಿಮೆಲ್ಲ ಮೆಲ್ಲ ಸುರಿದ ಕಣ್ಣೀರೊಡನೆಉರುಳಿದವು ಒಂದೆರಡುಕೆಂಪು ಹನಿ…! *********

ಹಬ್ಬದ ಸಂತೆ Read Post »

ಕಾವ್ಯಯಾನ

ಹೊಸ ಹಿಗ್ಗು…..!!

ಕವಿತೆ ಹೊಸ ಹಿಗ್ಗು…..!! ಯಮುನಾ.ಕಂಬಾರ ಎಲ್ಲಿಹುದು ಹೊಸಹಿಗ್ಗು – ಕ್ಷಣ ನಾನುಕಣ್ತೆರೆವೆ – ಮೈ ಮನ ಒಂದಾಗಿ ಕಾಯುತಿರುವೆಬೆಳ್ಳಿ ಮೋಡದಕಪ್ಪಿನಲ್ಲೋ …ಇಲ್ಲಾಕರಿಯ ನೆಲದ ಕಣ್ಣಿನಲ್ಲೋ …ಅಂತೂ ರಚ್ಚೆಹಿಡಿದು ಕುಳಿತಿರುವೆ. //ಪ// ನೀಲಿ ಆಗಸದಎದೆ ತುಂಬಿತುಳುಕಿದೆ – ಮೊಗ್ಗಿನೊಲು ಹೊಸ ಕಬ್ಬ ಹೀರಲು ಮುಂದಾಗಿಅದೇ ಆ ಎಂದಿನಕಲುಷಿತ ಹವೆಏರಿ ಬರುತಿದೆ ಮುಗಿಲ ಮಾರಿಗೆ ನಾಚಿಕೆಯ ಸರಿಸಿ //ಪ// ಋಷಿ ಮುನಿಯತಪದಂತೆ ಏಕವೃತಸ್ಥೆಯಾಗಿ ಹಸಿರು ಚಿಮ್ಮಿದ ಚಲುವೆ ದೀನಳಾಗಿಹಳುಹೊಸ ಚಿಗುರುಹಸಿರೆಲೆಯು ಕಳೆಗುಂದಿ ನಲುಗುತಿವೆ ನುಂಗದ ವಿಷ ಜಲವ ಒಕ್ಕಿ //ಪ// ಹೊರಳುತಿವೆ ಹಗಲುಗಳುಸರಿಯುತಿವೆ ರಾತ್ರಿಗಳುಅಂಕೆ ಸಂಕಲೆಗಳಿಲ್ಲದೇ ನವಿರು ನವಿರಾಗಿಗಡಿಯ ದಾಟಿದಲೆಕ್ಕ ವಿಧಿ ಮಿಕ್ಕಿ ಹರಿಯುತಿದೆಮೂಗಿನ ನೇರಕ್ಕೆ ಗುಣಕ ಚಿನ್ಹವ ಹಾಕಿ //ಪ// ಅಧಿಕಾರ ಅಂತಸ್ತುಕೇಕೆ ಹಾಕಿವೆ ಇಲ್ಲಿಭಾತೃತ್ವ ಸಹಕಾರ ಕೊಲೆಯ ಮಾಡಿಸತ್ತ ಶವಗಳಕಬ್ಬವಾಸನೆಯು ಎಲ್ಲೆಲ್ಲೂಹೊಸ ಹಿಗ್ಗು ಎಲ್ಲಿಹುದು ಹುಡುಕುತಿರುವೆ. //ಪ್// ಇದ್ದ ಮೂವರಲ್ಲಿಕದ್ದವರು ಯಾರೆಂದುಹುಡುಕುವುದು ಕಷ್ಟವೇ….!!?? ಅಂತೂ ಒಗಟುಜಾಳಿಗೆ ಬಗರಿಕೈಯಲ್ಲಿ ಇರಲುತಿರಗದೇನು…..??!! ಬುಗುರಿ ತಡವೇತಕೇ……!!!?? //ಪ// ನಾನು ನಾನೇ ಎಂಬನನ್ನ ಸುಖವೇ ಮೊದಲೆಂಬವರ್ತುಳಗಳು ಸುತ್ತಿತ್ತಿರುವ ನಿತ್ಯ ಸಮಯನನ್ನ ವರ್ತುಳ ಫರಿಧಿಮತ್ತೊಂದ ವರ್ತುಳಗಡಿಗೆ ಬದುಕ ಹಂಚಿಕೊಂಡ ಸತ್ಯ ಮರೆತಿಹೆವು ಇಂದು //ಪ// ಅಂಗೈ ಹುಣ್ಣಿಗೆಕನ್ನಡಿ ಏಕೆ..?ಬಲ್ಲೆವಾದರೂ ನಾವು ಕೈ ನೋಡಲಾರೆವುಹೊಸ ಹೊಸ ಶಬ್ದಹೊಸ ಹೊಸ ಕವಿತೆಬರೆದೆವಾದರೂ ನಾವು ಓದಲಾರೆವು. //ಪ// ****************************************

ಹೊಸ ಹಿಗ್ಗು…..!! Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1)ಹೆಣ್ಣಲ್ಲವೇ ನೀ :ಕಲ್ಲು ರೂಪದಿ ಕೂಡಾಮಮತೆ ಸೆಲೆ. 2)ಕಲ್ಲಾಗಿ ಹೋದೆ :ಸ್ವಾರ್ಥಿ ಜಗವು ಕೊಟ್ಟನೋವು ಕಾಣಿಕೆ. 3)ಹಣೆಯ ಬೊಟ್ಟುಅವನಿಟ್ಟ ನೆನಪುಹೃದಯೋಡೆಯ 4)ಕಾದು ಕಲ್ಲಾದೆ :ನಲ್ಲನ ಆಗಮನಕಾಮನಬಿಲ್ಲು. 5)ಅಹಲ್ಯ ರೂಪಶ್ರೀ ರಾಮ ಬರುವನೇ,ಕಲಿಯುಗದಿ. 6)ಗಂಭೀರ ಮೊಗಕಂದನಂದದ ಮನಬಾಳು ನಂದನ. 7)ಮೌನದ ತಾಣಹೆಣ್ಣು ಜೀವದ ಕಣ್ಣು,ತೀರದ ಋಣ. *************************************

ಹಾಯ್ಕುಗಳು Read Post »

ಇತರೆ

ಯುಗ ಯುಗಾದಿ ಕಳೆದರೂ..!

ಯುಗಾದಿ ವಿಶೇಷ ಬರಹ ಯುಗ ಯುಗಾದಿ ಕಳೆದರೂ..! ಯುಗ ಯುಗಾದಿ ಕಳೆದರೂ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.                     ಹೊಂಗೆ ಹೂವ ತೊಂಗಳಲಿ,                     ಭೃಂಗದ ಸಂಗೀತ ಕೇಳಿ                     ಮತ್ತೆ ಕೇಳ ಬರುತಿದೆ.                     ಬೇವಿನ ಕಹಿ ಬಾಳಿನಲಿ                     ಹೂವಿನ ನಸುಗಂಪು ಸೂಸಿ                     ಜೀವಕಳೆಯ ತರುತಿದೆ. ವರುಷಕೊಂದು ಹೊಸತು ಜನ್ಮ, ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ. ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ.                     ನಿದ್ದೆಗೊಮ್ಮೆ ನಿತ್ಯ ಮರಣ,                     ಎದ್ದ ಸಲ ನವೀನ ಜನನ,                     ನಮಗೆ ಏಕೆ ಬಾರದು?                     ಎಲೆ ಸನತ್ಕುಮಾರ ದೇವ,                     ಎಲೆ ಸಾಹಸಿ ಚಿರಂಜೀವ,                     ನಿನಗೆ ಲೀಲೆ ಸೇರದೂ. ಯುಗ ಯುಗಗಳು ಕಳೆದರೂ ಯುಗಾದಿ ಮರಳಿ ಬರುತಿದೆ. ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.               # ಅಂಬಿಕಾತನಯದತ್ತ ……………………………………………. ಯುಗಾದಿ ಹಬ್ಬದ ಮಹತ್ವವೂ..! ಯುಗಾದಿ ಹಬ್ಬ ಆಗಲೇ ಬಂದಿದೆ. ಜನರು ಹೇಗೆ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಮತ್ತು ವಿಶೇಷ ಆಚರಣೆಗೆ ಹೇಗೆ ಸಿದ್ಧರಾಗಬೇಕು. ಯುಗಾದಿಯ ವಿಶೇಷ ಆಚರಣೆ ಏನು ಎಂಬುದರ ವಿವರಣೆ ಇಲ್ಲಿದೆ… ಯುಗಾದಿ ಹಬ್ಬದ ಮಹತ್ವ, ಇತಿಹಾಸ, ಮತ್ತು ಆಚರಿಸುವ ವಿಧಾನ..! ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಯುಗಾದಿ ಆಚರಣೆ ಎದುರಿಗಿದೆ. ಮುಂಬರುವ ಮಂಗಳವಾರ ಏಪ್ರಿಲ್​ 13 ನೇ ತಾರೀಕಿನಂದು ಈ ವರ್ಷದ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ.  ತಮಿಳುನಾಡು ಮತ್ತು ಕೇರಳದಲ್ಲಿ ವಿಷು ಎಂದು ಈ ಹಬ್ಬವನ್ನು ಕರೆಯಲಾಗುತ್ತದೆ. ಇನ್ನು, ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ ಎಂದು ಕರೆಯುತ್ತಾರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ ಎಂದರೆ, ಪಾಡ್ಯಮಿ ದಿವಸ ಗುಡಿ ಏರಿಸುವುದು ಎಂದರ್ಥ. ಅಂದರೆ, ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ಗುಡಿ ಎಂದು ಮೂಲೆಯಲ್ಲಿ ಇರಿಸುವ ಸಂಪ್ರದಾಯವಿದೆ. ಇದು ಹೊಸ ವರ್ಷದ ಆಗಮಕ್ಕೆ ಸಂಕೇತವಾಗಿದೆ. ಜೊತೆಗೆ ಮನೆಯಲ್ಲಿ ವೀಶೆಷ ಪೂಜೆಯನ್ನೂ ಕೈಗೊಳ್ಳಲಾಗುತ್ತದೆ. ಪೂಜೆ ಅಂದರೆ ಬೇರೇನೂ ಅಲ್ಲ. ನಮ್ಮ ಬದುಕಿನ ಹೊಸ ಜೀವನದ ಮುಖ್ಯ ವಿಚಾರಗಳು ಹೇಗಿರಬೇಕೆಂಬ ವಿಧಾನದ ಕ್ಯಾಲೆಂಡರ್ ಅಷ್ಟೇ. ಯುಗಾದಿ ಹಬ್ಬ ಅಂದಾಕ್ಷಣ ಹೊಸ ವರ್ಷ ಪ್ರಾರಂಭದ ದಿನ. ಹೊಸ ವರ್ಷದ ಜೊತೆಗೆ ಹೊಸ ಭರವಸೆ ಮತ್ತು ಹೊಸ ಚೈತನ್ಯ ತುಂಬುವ ದಿನ. ಯುಗ, ಅಂದರೆ ವಯಸ್ಸು ಮತ್ತು ಆದಿ ಅಂದರೆ ಪ್ರಾರಂಭ ಎಂಬುದಾಗಿ ‘ಯುಗಾದಿ’ ಎಂಬ ಹೆಸರೂ ಬಂದಿದೆ. ಯುಗಾದಿ ಆಚರಣೆ– ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಇದು ಚೈತ್ರ ನವರಾತ್ರಿಯ ಮೊದಲ ದಿನವೂ ಹೌದು. ಚಳಿಗಾಲದ ಅಂತ್ಯ ಮತ್ತು ಸುಗ್ಗಿಯ ಋತುವಿನ ಆರಂಭದಲ್ಲಿ ಯುಗಾದಿ ಹಬ್ಬ ಬರುವುದು. ಚಂದ್ರಮನ ಯುಗಾದಿ 2021 ದಿನಾಂಕ ಮತ್ತು ಮುಹೂರ್ತ ಸಮಯವೂ– ಯುಗಾದಿ ಹಬ್ಬ 2021 ರ ಏಪ್ರಿಲ್ 12 ನೇ ತಾರೀಕು ಪ್ರತಿಪದ ತಿಥಿಯಂದು ಬೆಳಿಗ್ಗೆ 7:59 ಕ್ಕೆ ಆರಂಭಗೊಳ್ಳುತ್ತದೆ. ಮರುದಿನ ಏಪ್ರಿಲ್​ 13 ನೇ ತಾರೀಕು ಬೆಳಿಗ್ಗೆ 10.16 ರ ಸಮಯಕ್ಕೆ ಮುಕ್ತಾಯಗೊಳ್ಳುತ್ತದೆ ಹಿಂದೂ ಸಾಂಪ್ರದಾಯದಂತೆ. ಈ ಆಚರಣೆ ಗೊಡ್ಡು ಆಚರಣೆ ಆದರೆ ಯಾವ ಫಲವೂ ಇಲ್ಲ. ಸರ್ವವಿಧದ, ಸರ್ವ ಜಾತಿ ಜನಾಂಗದ ಜನರ ಒಗೂಡಿಕೆವೊಂದೆಗೇ ಆಚರಣೆ ಆಗಬೇಕು. ಹಬ್ಬಕ್ಕೆ ಸಿದ್ಧತೆಗಳು– ಭಾರತೀಯ ಸಂಸ್ಕೃತಿಯ ಪ್ರಕಾರ ಯುಗಾದಿ ಹಬ್ಬ ಹೊಸ ವರ್ಷದ ಆಗಮನ. ಮನೆಯನ್ನು ಸ್ವಚ್ಛಗೊಳಿಸಿ ಮನೆಯ ಮುಂದೆ ರಂಗೋಲಿಯನ್ನಿಟ್ಟು ಹಬ್ಬಕ್ಕೆ ಬೆಳಿಗ್ಗೆಯಿಂದಲೇ ಮೆರಗುಗೊಳಿಸಲಾಗುತ್ತದೆ. ಯುಗಾದಿಯಂದು ಹೊಸ ಬಟ್ಟೆ, ಹೊಸ ವಿಚಾರ ಹೊಸ ಭರವಸೆಯತ್ತ ಇಡೀ ವರ್ಷ ಸಾಗಲಿ ಎಂಬ ನಂಬಿಕೆಯ ಜೊತೆ ಮುನ್ನಡೆಯವ ಹೆಜ್ಜೆಯಾಗಿರುತ್ತದೆ ಯುಗಾದಿ. ಯುಗಾದಿ ಹಬ್ಬದ ಆಚರಣೆ ಹೇಗೆ?– ಬೆಳಗ್ಗೆ ಬೇಗ ಎದ್ದು ಮನೆಯಲ್ಲಿ ಸಡಗರ, ಸಂಭ್ರಮ. ಮನೆಯ ಅಂಗಳವನ್ನು ಸ್ವಚ್ಛಗೊಳಿಸಿ ರಂಗಿನ ರಂಗೋಲಿ ಬಿಡಿಸುತ್ತಾರೆ. ಬೆಳಿಗ್ಗೆ ಎಣ್ಣೆ ಹಚ್ಚಿ ಸ್ನಾನ ಮಾಡಿ ಶುದ್ಧಗೊಳ್ಳುತ್ತಾರೆ. ಮನೆಯ ಎದುರಿನ ಬಾಗಿಲು, ದೇವಾಲಯದ ಬಾಗಿಲಿಗೆ ಮಾವಿನ ಎಲೆಗಳ ಹಾರ (ತಳಿರು ತೋರಣ) ಮಾಡಿ ಹೂವಿನ ಅಲಂಕಾರ ಮಾಡಲಾಗುತ್ತದೆ. ಯುಗಾದಿ ದಿನದಂದು ಸಂತೋಷದ ಪ್ರತೀಕವಾಗಿ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾಗಿ ಬೇವನ್ನು ಬೆರೆಸಿ ಪ್ರಸಾದವಾಗಿ ಸೇವಿಸುತ್ತಾರೆ. ಇದಿಷ್ಟೇ ಆದರೆ ಸಾಲದು ಹೊಸ ಸವಂತವನು ಹೊಸ ಜೀವನದ ಭರವಸೆಯೊಂದಿಗೆ ಆಚರಣೆಯಾಗಬೇಕು. ಸರ್ವರಳೊಂದುಗೂಡಿ ಬದುಕಿನ ಆಚರಣೆ ಆಗಬೇಕು. ಆ ಮಾತ್ರ ಈ ಯುಗಾದಿ ಆಚರಣೆಗೆ ಮಹತ್ವ ಬರುವುದು..! ************************ ಕೆ.ಶಿವು.ಲಕ್ಕಣ್ಣವರ

ಯುಗ ಯುಗಾದಿ ಕಳೆದರೂ..! Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಅಶೋಕ ಬಾಬು ಟೇಕಲ್ ಹಾಲುಂಡ ಹಸುಳೆಯೇ ಹದ್ದಂತೆ ಕುಕ್ಕಿ ಕುಕ್ಕಿ ತಿನ್ನುತ್ತಿದೆ ಈಗಹೊತ್ತೊತ್ತಿಗೂ ಮಡಿಲೇರಿದ ಕೂಸೇ ಕಾಳ ಸರ್ಪದಂತೆ ಬುಸುಗುಟ್ಟುತ್ತಿದೆ ಈಗ ನಿತ್ರಾಣಗೊಂಡು ಪಾತಾಳ ತುಳಿದಾಗ ಕೈ ಹಿಡಿದು ಮೇಲೆತ್ತಿದ್ದೆಕೃತಜ್ಞತೆಯ ಮರೆತು ನೇಣು ಕುಣಿಕೆ ಹುರಿಗೊಳಿಸುತ್ತಿದೆ ಈಗ ಮಾನವೀಯತೆ ಮುಂದೆ ಮಿಕ್ಕೆಲ್ಲವೂ ಗೌಣವೆಂದೇ ಭಾವಿಸಿದ್ದೆಅದೇ ಮಾನವೀಯತೆಗೆ ಚಟ್ಟ ಕಟ್ಟಿ ಬೀದಿಗಿಟ್ಟು ಹರಾಜಾಕುತ್ತಿದೆ ಈಗ ಊರಿಗೆ ಊರೇ ಅಪಸ್ವರದ ಕೊಳಲು ನುಡಿಸುತಿತ್ತು ಅಲ್ಲಿ !ಬುದ್ಧ ಸಾಗಿ ಬಂದ ಹಾದಿಯೂ ಮುಳ್ಳುಗಳನು ಮೊಳೆಸುತ್ತಿದೆ ಈಗ ಈಚಲು ಮರದ ನೆರಳು ಮಜ್ಜಿಗೆಗೆ ಯೋಗ್ಯವಲ್ಲ ಎಂದು ಅಬಾಟೇ ಗೆ ಹೇಳಿದ್ದೆಕಂಡವರ ಕಣ್ಣು ನಶೆ ಕುಡಿದು ಅಮಲೇರಿ ಬೊಬ್ಬೆ ಇಡುತ್ತಿದೆ ಈಗ. *************************************

ಗಜಲ್ Read Post »

ಪುಸ್ತಕ ಸಂಗಾತಿ

ಒಳಿತಿನ ಉಣಿಸಿನ ಕಥೆಗಳು…

ಪುಸ್ತಕ ಸಂಗಾತಿ ಒಳಿತಿನ ಉಣಿಸಿನ ಕಥೆಗಳು… “ಚಮತ್ಕಾರಿ ಚಾಕಲೇಟ” “ಚಮತ್ಕಾರಿ ಚಾಕಲೇಟ” ಮಕ್ಕಳ ಕಥಾಸಂಲನ.ಲೇಖಕರು: ಸೋಮು ಕುದರಿಹಾಳ.ಬೆಲೆ:100ರೂ.ಪ್ರಕಟಣೆ:2020.ಪ್ರಕಾಶಕರು: ತುಂಗಾ ಪ್ರಕಾಶನ ಚಂದಾಪುರ. ಗಂಗಾವತಿ.9035981798 ಸೋಮು ಕುದರಿಹಾಳ ಮಕ್ಕಳ ಪ್ರೀತಿಯ ಶಿಕ್ಷಕರಾಗಿ ನಮಗೆಲ್ಲಾ ಪರಿಚಿತರು. ಅವರನ್ನು ನಾನಿನ್ನೂ ಮುಖತಹ ಭೆಟ್ಟ ಆಗಿಲ್ಲವಾದರೂ ಅವರ ಬರಹ, ಅವರು ಶಾಲೆಯಲ್ಲಿ ನಡೆಸುತ್ತಿರುವ ಪ್ರಯೋಗಗಳು. ಒಂದು ಪುಟ್ಟ ಸರಕಾರಿ ಶಾಲೆಯನ್ನು ಮಕ್ಕಳ ಎಲ್ಲ ಒಳಿತಿನ ಕಡೆಗೆ ಅಣಿಗೊಳಿಸುತ್ತಿರುವ ರೀತಿ ಎಲ್ಲ ಗಮನಿಸುತ್ತ ಅವರ ಸ್ನೇಹದ ವರ್ತುಲದಲ್ಲಿ ನಾನೂ ಸೇರಿ ಹೋಗಿದ್ದೇನೆ. ಅವರು ಈಗ ಮಕ್ಕಳ ಕಥಾ ಸಂಕಲನ ತರುವ ಮೂಲಕ ತಮ್ಮ ಸ್ನೇಹದ ವರ್ತುಲ ಇನ್ನೂ ವಿಸ್ತರಿಸಿಕೊಂಡಿದ್ದಾರೆ. ಇರಲಿ. ನಾನು ಶಿಕ್ಷಕನಾಗಿ ಬಹಳ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಆಗಿದ್ದರೂ ನನ್ನ ಆಲೋಚನೆಗಳೆಲ್ಲ ಮಕ್ಕಳ ಸುತ್ತಲೇ ಅರಳಿಕೊಳ್ಳುತ್ತಿರುತ್ತವೆ. ಅದು ಯಾವುದೋ ಮಗುವಿನ ತುಂಟಾಟವನ್ನೋ, ಪ್ರತಿಭೆಯನ್ನೋ, ಮಕ್ಕಳ ಸುತ್ತಲೂ ನಾವು ನಿರ್ಮಿಸಬೇಕಾದ ಪರಿಸರವನ್ನೋ, ಅವರ ಖುಷಿ ಹೆಚ್ಚಿಸುವ ಹಂಬಲವನ್ನೋ, ಮಕ್ಕಳು ಅನುಭವಿಸುವ ನೋವನ್ನೋ ಧ್ಯಾನಿಸುತ್ತಿರುತ್ತದೆ. ಹೌದು ಶಿಕ್ಷಕರಾಗಿದ್ದವರಿಗೆ ಹಾಗೂ ಮಕ್ಕಳ ಒಳಿತನ್ನು ಅಪಾರವಾಗಿ ಪ್ರೀತಿಸುವವರಿಗೆಲ್ಲ ಹಾಗೇ ಅನಿಸುತ್ತದೆ. ಇದೆಲ್ಲಾ ಏಕೆ ಹೇಳುತ್ತಿದ್ದೇನೆ ಅಂದರೆ ಸೋಮು ಕುದರೀಹಾಳ ಅವರ ‘ಚಮತ್ಕಾರಿ ಚಾಕಲೇಟ’ ಕಥಾಸಂಕಲನ ಮಕ್ಕಳ ಸುತ್ತಲೇ ಹರಡಿಕೊಳ್ಳುತ್ತ ಒಂದಿಷ್ಟು ಮಕ್ಕಳಿಗೆ ಒಳಿತಿನ ಉಣಿಸನ್ನು ಉಣಿಸಬೇಕು ಎಂಬ ಚೌಕಟ್ಟನ್ನು ಹಾಕಿಕೊಳ್ಳುತ್ತ ಅರಳಿದ ಕಥೆಗಳು ಎಂದು ನನಗೆ ಅನಿಸುತ್ತದೆ. ಸೋಮು ಅವರು ಇಲ್ಲಿ ಮಕ್ಕಳ ಸುತ್ತಲಿನ ಹಲವಾರು ಸಂಗತಿಗಳನ್ನು ಕಥೆಯಾಗಿಸಿದ್ದಾರೆ. ಇಲ್ಲಿ ಕೆಲವು ಜಾನಪದ ಮಾದರಿಗಳಿವೆ ಹಾಗೂ ಅವನ್ನು ಇಂದಿನ ತುರ್ತಿಗೆ ಅಗತ್ಯವಾದ ಕುಲಾವಿ ಆಗಿಸುವ ಪ್ರಯತ್ನವೂ ಇದೆ. ಬಹು ಪ್ರಚಲಿತವಾದ ಕಾಗಕ್ಕ ಗುಬ್ಬಕ್ಜಕನ ಕಥೆಯನ್ನೇ ಮಕ್ಕಳು ಇಂದು ಉಪಯೋಗಿಸುವ ಮೊಬೈಲ ಬಳಕೆಗೆ ಬೇಕಾಗುವ ಡಾಟಾ ಕದಿಯುವ ಕಾಗೆಯನ್ನಾಗಿಸಿ ಗುಬ್ಬಿಗೆ ಮೋಸ ಮಾಡುವಂತೆÀ ಕಥೆಯನ್ನು ಹೆಣೆದಿದ್ದಾರೆ. ಡಾಟಾ… ಪಾಸವರ್ಡ… ಅದರ ಸಾಫಲ್ಯತೆ ಗೆಲ್ಲಾ ಮಕ್ಕಳು ವಿಸ್ತರಿಸಿ ತಿಳುವಳಿಕೆ ಮೂಡಲಿ ಎಂಬ ಹಂಬಲದೊಂದಿಗೆ ಮೋಸ ಸರಿಯಲ್ಲ ಎನ್ನುವ ತಿಳುವಳಿಕೆಯನ್ನೂ ಕಥೆ ಇಡಲಿ ಎಂಬ ಹಂಬಲವಿದೆ.   ಯಾರು ಹೆಚ್ಚು ಕಥೆಯಲ್ಲಿ ಪೆನ್ನು, ಪೆನ್ಸಿಲ್, ಕ್ರೆಯಾನ್ಸ, ರಬ್ಬರ ಮುಂತಾದ ಮಕ್ಕಳ ಬ್ಯಾಗಿನಲ್ಲಿ ಯಾವಾಗಲೂ ಇರುವ ಅವರಿಗೆ ಆಪ್ತವಾದ ವಸ್ತುಗಳ ಸಂಗತಿ ಇದೆ. ಇವೆಲ್ಲ ತಾನು ಹೆಚ್ಚು ತಾನು ಹೆಚ್ಚು ಎಂದು ಕಿತ್ತಾಡಿ ಚಲ್ಲಾಪಿಲ್ಲಿ ಆಗುವುದು ಇದರಿಂದಾಗಿ ಅವು ಕಸದ ಬುಟ್ಟಿ ಸೇರುವುದು ಇದೆ. ಎಲ್ಲರೂ ಒಂದಾಗಿರಬೇಕು, ಜಗಳವಾಡಬಾರದು ಎಂದು ಹೇಳುವ ಈ ಕಥೆ ಮಕ್ಕಳನ್ನು ಸೆಳೆಯುತ್ತದೆ. ಶಾಲೆಯಲ್ಲಿ ನಡೆಯುವ ವಾಸ್ತವ ಸಂಗತಿಯ ಎಳೆಯೊಂದನ್ನು ಹಿಡಿದು ಬರೆದಿರುವ ‘ತಿಮ್ಮನ ಸಾಲ’ ಕಥೆಯಲ್ಲಿ ತಿಮ್ಮ ಹಿರಿಯರೊಬ್ಬರಿಗೆ ಸಹಾಯ ಮಾಡುವುದಕ್ಕಾಗಿ ಕೌಜುಗ ಹಕ್ಕಿಯನ್ನು ಹಣಕ್ಕೆ ಪಡೆದು ಸಾಲಗಾರನಾಗುತ್ತಾನೆ. ಇದರಿಂದ ಮಕ್ಕಳೆಲ್ಲ ಅವನನ್ನು ಸಾಲಗಾರನೆಂದು ಹೀಯಾಳಿಸುತ್ತಾರೆ. ಆದರೆ ತಿಮ್ಮನ ನಿಜವಾದ ಉದ್ಧೇಶ ತಿಳಿದ ಶಿಕ್ಷಕರು ಅವನ ಕುರಿತಾದ ತಪ್ಪು ಅಭಿಪ್ರಾಯ ಹೋಗಲಾಡಿಸುತ್ತಾರೆ. ಹೀಗೆ ವಾಸ್ತವಕ್ಕೆ ಹತ್ತಿರವಾದ ಇಂತಹ ಕಥೆಗಳು ಮಕ್ಕಳನ್ನು ಹೆಚ್ಚುಬೇಗ ಆವರಿಸಿಕೊಳ್ಳುತ್ತವೆ ಎಂದು ನನಗೆ ಅನಿಸುತ್ತದೆ. ಅಜ್ಜ ಹೇಳುವ ಚಾಕಲೇಟ ತಿನ್ನುತ್ತ ಚೆನ್ನ ಎನ್ನುವ ಬಾಲಕ ಎಡಬಿಡದ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಗೆಲುವು ಕಾಣುವುದನ್ನು ‘ಚಮತ್ಕಾರಿ ಚಾಕಲೇಟ’ ಕಥೆÀ ಹೇಳುತ್ತದೆ. ಆತ್ಮವಿಶ್ವಾಸ ಮತ್ತು ಪ್ರಯತ್ನಗಳು ಮುಖ್ಯ ಎಂಬ ಸಂದೇಶ ನೀಡುತ್ತದೆ ಈ ಕಥೆ. ವಿಚಿತ್ರ ಸುದ್ದಿ ಹೇಳದಿದ್ದರೆ ಸಾಹುಕಾರ ಕೆಲಸದಿಂದ ತೆಗೆದುಹಾಕುತ್ತಿದ್ದ. ವಿಚಿತ್ರ ಸುದ್ದಿಯ ಮೂಲಕವೇ ಸಾಹುಕಾರ ರಾತ್ರಿ ಪೂರಾ ಸೈಕಲ್ ಹೊಡೆಯುವಂತೆ ಮಾಡಿ ಅವನಿಗೆ ಬುದ್ಧಿ ಕಲಿಸುವುದು ಒಂದು ಕಥೆಯಾದರೆ… ಅಜ್ಜ ಕೊಡುವ ಹಣದಿಂದ ಏನಾದರೂ ಖರೀದಿಸುವ ರೋಸಿ ಎನ್ನುವ ಬಾಲಕಿ ಅಂಗಡಿಯವನೊಬ್ಬನ ಮೋಸದಿಂದ ತೊಂದರೆಗೆ ಒಳಗಾಗುತ್ತಾಳೆ. ಆದರೆ ತನ್ನ ಜಾಣತನದಿಂದ ತಾನು ಕಳೆದುಕೊಂಡ ಹಣ ಪುನಹ ದೊರಕಿಸಿಕೊಳ್ಳುವ ಕಥೆ ಇನ್ನೊಂದು.  ‘ಮನಸ್ಸಿನಂತೆ ಫಲ’, ‘ಕೆಟ್ಟ ಮೇಲೆ ಬುದ್ಧಿ ಬಂತು’ ಮುಂತಾದ ಕಥೆಗಳ ತಲೆಬರಹಗಳೇ ಉದ್ಧೇಶಗಳನ್ನು ಹೇಳಿಬಿಡುತ್ತವೆಯಾದರೂ ಒಳ್ಳೆಯ ಮನಸ್ಸು, ಹಿರಿಯರ ಜಾಣ್ಮೆ ಎಲ್ಲ ನಮ್ಮ ಮುಂದೆ ಇಡುತ್ತ ಗೆಲುವು ಪಡೆಯುತ್ತವೆ. ಸೋಮು ಕುದರಿಹಾಳ ಅವರು ಮಕ್ಕಳ ಒಳಿತಿನ ವಿಸ್ತಾರಕ್ಕೆ ಯತ್ನಿಸುತ್ತ ಅವರಿಗೆ ಆಪ್ತವಾಗುವ ಕಥೆಗಳ ಮೂಲಕವೇ ಪಠ್ಯಗಳಿಗಿಂತಲೂ ವಿಸ್ತಾರದ ಉಣಿಸನ್ನು ನೀಡಲು ಪ್ರಯತ್ನಿಸಿದ್ದಾರೆ. ಇದು ಅವರ ಮೊದಲ ಪ್ರಯತ್ನ. ದೊಡ್ಡವರಿಗಾಗಿಯೂ ಬರೆಯುತ್ತ, ಒಳ್ಳೊಳ್ಳೆಯ ಕವಿತೆಗಳನ್ನು ನೀಡುತ್ತ ನಮ್ಮ ಮುಂದಿರುವ ಸೋಮು ಅವರು ಮಕ್ಕಳ ಪ್ರೀತಿಯನ್ನು ಈ ಸಂಕಲನದ ಮೂಲಕ ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ. ಈ ಪ್ರೀತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾತ್ಮಕವಾಗಿ ಅರಳುವ ಎಲ್ಲ ಸಾಧ್ಯತೆಗಳಿಗೆ ಅವರು ತೆರೆದುಕೊಳ್ಳಿಲಿ ಎಂದು ಹೇಳುತ್ತ ಒಂದು ಒಳ್ಳೆಯ ಪ್ರಯತ್ನದೊಂದಿಗೆ ನಮ್ಮೊಂದಿಗಿರುವ ಅವರಿಗೆ ಕೃತಜ್ಞತೆ ಸಲ್ಲಿಸುತ್ತ… ತಾವೆಲ್ಲರೂ ಅವರ ಕಥಾ ಸಂಕಲನ ಓದಿ ಪ್ರೋತ್ಸಾಹಿಸಿ ಎಂದು ಕೇಳಿಕೊಳ್ಳುತ್ತೇನೆ. ***************************************************** ತಮ್ಮಣ್ಣ ಬೀಗಾರ.

ಒಳಿತಿನ ಉಣಿಸಿನ ಕಥೆಗಳು… Read Post »

ಕಾವ್ಯಯಾನ

ಕವಿತೆ ಮತ್ತೆ ಯುಗಾದಿ ಹೊಸ ವರ್ಷವ ಸ್ವಾಗತಿಸುತ ಬಂದಿದೆ ಯುಗಾದಿಯುಗ ಯುಗಗಳ ಹೊಸ ಪಲ್ಲವಿಯನು ಹಾಡಿ. ಮಾರನ ಹೂ ಬಾಣದ ಜುಮ್ಮೆನ್ನುವ ಅಮಲುಪ್ರತಿ ಹೃದಯದ ಮೇಲೆರಗಿದೆ ಮೈಗಂಧದ ಘಮಲು. ಎಲೆಯುದುರುವ ಕಾಡಲ್ಲಿ ಚಿಗುರಿನ ದನಿ ಹಾಡುಪ್ರತಿ ಗಿಡಗಳು ಹಸಿರುಟ್ಟಿವೆ ಹೂ ಬಟ್ಟೆಯ ನೋಡು. ಹೂ ಹೂಗಳ ಕೇಸರದಲಿ ದುಂಬಿಯ ಹೂ ಮುತ್ತುಗಿಡ ಮರಗಳು ಅನುಭವಿಸಿವೆ ಪ್ರಣಯದ ನಶೆ ಮತ್ತು! ಒಣ ಶಿಶಿರವು ಚೇತರಿಸದು ಹೂ ಚೈತ್ರದ ಹೊರತುವನಮಾಲಿಯ ಅಡಿ ಅಡಿಯಲು ಮಧು ಮಾಸದ ಗುರುತು. ಪ್ರತಿ ಕಾಡಲು ಬರಿ ಬಯಲಲು ಹೂ ಹಣ್ಣಿನ ರಾಶಿಹಕ್ಕಿಗಳುಲಿ ಇಂಪಲು ಸವಿ ಕಂಪನು ಸೂಸಿ. ಯುಗ ಯುಗಾದಿಯು ಬರುತಿರಲಿ ನಮ್ಮಯ ಹೊಸತನಕೆನಾಳೆಯ ಸದ್ವಿಕಾಸಕೆ ನವ ಚೈತನ್ಯದ ಹರಕೆ ************************************************************ ಫಾಲ್ಗುಣ ಗೌಡ ಅಚವೆ

Read Post »

ಇತರೆ

ಯುಗಾದಿ ವಿಶೇಷ ಬರಹ ಯುಗಾದಿಯೆಂಬ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಹೇಳುವುದು ಪ್ರಮುಖವಾಗಿ ಭಾಷೆ,  ಆಚರಣೆ-ಸಂಪ್ರದಾಯಗಳು, ಉಡುಗೆ-ತೊಡುಗೆ, ಆಹಾರ ಮೊದಲಾದವುಗಳಿಗೆ ಸಂಬಂಧಿಸಿದಂತೆ . ಇಲ್ಲಿನ  ವೈವಿಧ್ಯತೆ ಎಷ್ಟೆಂದರೆ  ರಾಜ್ಯ ರಾಜ್ಯಗಳ ನಡುವಿನ ಮಾತಿರಲಿ, ಅಕ್ಕಪಕ್ಕದ ತಾಲೂಕುಗಳಲ್ಲಿ, ಊರುಗಳಲ್ಲೇ ಭಿನ್ನತೆಯನ್ನು ಕಾಣಬಹುದು.   ಆದರೆ ಕಳೆದ 2 ದಶಕಗಳಿಂದ ಇಂಥ ಪ್ರಾದೇಶಿಕ ಭಿನ್ನತೆಗಳು ಬದಲಾಗುತ್ತಿವೆ  ಅಥವಾ  ಕೆಲವು  ಇಲ್ಲವಾಗಿವೆ. ಇದಕ್ಕೆ ಬಹುಮುಖ್ಯ ಕಾರಣ ದೊಡ್ಡ ಪಟ್ಟಣ ಹಾಗೂ ಶಹರಗಳಿಗೆ ಉದ್ಯೋಗ ಹಾಗೂ  ಜೀವನ ನಿರ್ವಹಣೆಯ ದಾರಿಗಳನ್ನು ಅರಸುತ್ತ ನಡೆದಿರುವ  ನಿರಂತರ ವಲಸೆ. 20ನೇ ಶತಮಾನದ ಕೊನೆಯ ದಶಕದಲ್ಲಿ ಭಾರತದ ಮಹಾನಗರಗಳಿಗೆ ಲಗ್ಗೆ ಇಟ್ಟ ಐಟಿಬಿಟಿ ಕಂಪನಿಗಳು ಈ ನಗರಗಳ ಬದುಕನ್ನು ಅನಾಮತ್ತಾಗಿ ಎತ್ತಿ ಪಲ್ಟಿ ಮಾಡಿದವು.  ವಿದೇಶಿ ಮೂಲದ ಕಂಪನಿಗಳ ಮೂಲಕ  ಹಣದ ಹೊಳೆ  ಇಲ್ಲಿ ಹರಿಯಲಾರಂಭಿಸಿದಂತೆ ಅದರ ಉಪ ಉತ್ಪನ್ನವಾಗಿ ಹಳ್ಳಿಯ, ಸಣ್ಣ ಪಟ್ಟಣಗಳ ಯುವಜನತೆ ನಗರಗಳಿಗೆ ಗುಳೆ ಬಂದಿತು. ಅವರ ಮೂಲ ಊರುಗಳಲ್ಲಿ ಮಧ್ಯವಯಸ್ಸು ಮೀರಿದವರಷ್ಟೇ ಇರುವುದು ಅಂದಿನ ವಾಸ್ತವವಾಗಿತ್ತು.  ಇದರಿಂದ ದೊಡ್ಡ ಪ್ರಮಾಣದಲ್ಲಿ  ಆರ್ಥಿಕ, ರಾಜಕೀಯ ಬದಲಾವಣೆಗಳಾದರೆ, ಅದಕ್ಕಿಂತ ತೀವೃ ಪರಿಣಾಮಗಳು ಸಾಮಾಜಿಕವಾಗಿ ಕಂಡು ಬಂದವು. ಅದರಲ್ಲಿ ವಿಶೇಷವಾಗಿ  ನಮ್ಮ ಹಬ್ಬ- ಹರಿದಿನಗಳ ಆಚರಣೆಯಲ್ಲಾದ ಬದಲಾವಣೆಗಳು. ನಮ್ಮ ಬಹುತೇಕ ಹಬ್ಬಗಳನ್ನು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತ ಈಗ ದಶಕಗಳೇ ಕಳೆದಿವೆ. ನಗರಗಳಲ್ಲಿ   ಒದಗುವಿಕೆ, ಸಮಯಾವಕಾಶ, ರಜೆ, ಬಿಡುವು ಮೊದಲಾದ ವೈಯುಕ್ತಿಕವಾಗಿ ಮನೆಯ ಸದಸ್ಯರ ಅನುಕೂಲತೆಗಳಿಗೆ ತಕ್ಕಂತೆ ಹಿಗ್ಗುವ, ಕುಗ್ಗುವ ಅಥವಾ ಇಲ್ಲವಾಗುವ ಒಂದು ವಿಶೇಷ ದಿನ ಹಬ್ಬದ ದಿನ.  ಗ್ರಾಮೀಣ ಭಾಗಗಳಲ್ಲಿ ಅದು ಕಟ್ಟುನಿಟ್ಟಿನ  ಆಚರಣೆ , ಸಂಪ್ರದಾಯ, ರೀತಿ-ರಿವಾಜು, ಪರಂಪರೆಗಳ ಒಟ್ಟೂ ಮೊತ್ತ. ಅನೇಕ ಬಾರಿ  ಊರಿಗೆ ಊರೇ ಭಾಗವಹಿಸಿ ಸಂಭ್ರಮಿಸುವ ಊರ  ಹಬ್ಬ.         ನಮ್ಮ ಸಂವಿಧಾನ  ‘ ಇಂಡಿಯಾ ದಟ್ ಈಸ್ ಭಾರತ್ ‘ ಎಂದು ನಮ್ಮ ದೇಶವನ್ನು ಗುರುತಿಸಿದೆಯಷ್ಟೇ. ಅದರಂತೆ ಇಂಡಿಯಾ ಆಧುನಿಕ, ನಗರ ಕೇಂದ್ರಿತ  ದೇಶವನ್ನು ಪ್ರತಿನಿಧಿಸಿದರೆ ಭಾರತ ಅದಕ್ಕೆ ತದ್ವಿರುದ್ಧವಾದ ಹಿಂದುಳಿದ, ಗ್ರಾಮೀಣ ದೇಶವನ್ನು ಪ್ರತಿನಿಧಿಸುತ್ತದೆಯೋ ಎಂಬಷ್ಟು ಕಂದಕ ಈ ಹಬ್ಬ-ಹರಿದಿನಗಳ ಆಚರಣೆಯಲ್ಲಿ ಇತ್ತೀಚೆಗೆ  ಕಾಣುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ. ನಗರಗಳಲ್ಲಿ ಹಬ್ಬಗಳೆಂದರೆ ಜೋರಾದ ಹೂ-ಹಣ್ಣುಗಳ ಮಾರಾಟ, ಬೇಕರಿಗಳಲ್ಲಿ ತರಹೆವಾರು ಸಿಹಿತಿನಿಸುಗಳ ಜೋಡಣೆ, ಅಂಗಡಿಗಳಲ್ಲಿ ಭರಾಟೆಯ ಸೇಲ್, ಡಿಸ್ಕೌಂಟುಗಳ ಆಕರ್ಷಣೆ, ಹೊಟೆಲ್ಲುಗಳಲ್ಲಿ ಹಬ್ಬದಡಿಗೆಯ ಊಟ…ಎಲ್ಲವೂ ದುಬಾರಿ.  ಇಲ್ಲಿಗೆ ನಿಲ್ಲದೆ ಈ ಹಬ್ಬಗಳ ಸಡಗರ ದೇವಾಲಯಗಳಿಗೂ ವಿಸ್ತರಿಸಿದೆ. ಮೊದಲಾದರೆ ಕೆಲ ಹಬ್ಬಗಳಲ್ಲಿ ಮಾತ್ರ   ಅಭಿಷೇಕ, ಹೋಮಗಳು   ದೇವಾಲಯಗಳಲ್ಲಿ ನಡೆಯುತ್ತಿದ್ದವು. ಇಂದು ಹೆಚ್ಚವರಿ  ಗಳಿಕೆಗಾಗಿ  ಎಲ್ಲ ಹಬ್ಬಗಳಿಗೂ ಅವು ನಡೆಯುತ್ತವೆ.  ನಗರಗಳ ಹಬ್ಬಗಳೆಂದರೆ ದುಂದು, ಖರ್ಚು, ಹೆಚ್ಚು ಕಸ, ಮಾಲಿನ್ಯ ಎಂಬಂತಾಗಿದೆ  ಪರಿಸ್ಥಿತಿ. ಇದಕ್ಕೆ ಹಬ್ಬಗಳ ಮಾರನೇ ದಿನ ಬೀದಿಗಳನ್ನು  ಸ್ವಚ್ಛಗೊಳಿಸಲು ಹೆಣಗುವ  ಪೌರಕಾರ್ಮಿಕರ ಬವಣೆಯೇ ಸಾಕ್ಷಿ. ಈ ಕಾರಣದಿಂದ ಗ್ರಾಮೀಣ ಭಾಗದಲ್ಲಿ ನಡೆಯುವ ಸರಳ,  ನೆಲಮೂಲ ಸಂಸ್ಕೃತಿಯ. ಆಚರಣೆಯಾದ,  ಪರಿಸರ ಸ್ನೇಹಿ ಹಬ್ಬಗಳು ನನಗಿಷ್ಟ.    ಭಾರತೀಯ ಋತುಮಾನಕ್ಕೆ ಅನುಗುಣವಾಗಿ ಬರುವ ಯುಗಾದಿ  ವರ್ಷದ ಮೊದಲ ಹಬ್ಬ. ಪ್ರಕೃತಿಯ ನಲಿವಿನಲ್ಲಿ  ನಾವೂ ಜೊತೆಯಾಗುವ ಹಬ್ಬ. ನಮ್ಮ ಎಲ್ಲ ಹಬ್ಬಗಳೂ ಪ್ರಕೃತಿಗೆ ಪೂರಕವಾಗಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.  ಇದಕ್ಕೆ ಯುಗಾದಿಯೂ ಹೊರತಲ್ಲ. ವಸಂತನ ಆಗಮನವನ್ನು ಪ್ರಕೃತಿಯು ಹೊಸ ಹೂ-ಹಣ್ಣುಗಳನ್ನು ಒದಗಿಸುವುದರ ಮೂಲಕ ಸಂಭ್ರಮಿಸಿದರೆ,  ಅವುಗಳನ್ನು ಬಳಸಿ,  ವ್ಯಂಜನಗಳನ್ನು ತಯಾರಿಸಿ ಮನೆ-ಮಂದಿ, ಊರು-ಕೇರಿ ಸವಿದು ಸಂಭ್ರಮ ಪಡುತ್ತವೆ. ಅಂದು ತಯಾರಾಗುವ ಪದಾರ್ಥಗಳಾದರೂ ಎಂಥವು!   ನಾವು ಚಿಕ್ಕವರಿದ್ದಾಗ  ಮಾವಿನಕಾಯಿ ಚಿತ್ರಾನ್ನ,  ಮಾವಿನ ಉಪ್ಪಿನಕಾಯಿ, ಅಮಟೆಕಾಯಿಯ ಹುಳಿಸಿಹಿಪಲ್ಯ,  ಹೋಳಿಗೆ, ಕಡಲೆ ಬೇಳೆಯ ಸಿಹಿತಿನಿಸು ಮಾಲ್ದಿ, ಉದ್ದಿನ ಕಾಳಿನ ಷಂಡಿಗೆ ಇತ್ಯಾದಿ. ಜೊತೆಗೆ ಹದಮಜ್ಜಿಗೆ ಎಂದು ಕರೆಯಲ್ಪಡುವ ಮಸಾಲೆ ಮಜ್ಜಿಗೆ ಇವು ಮುಖ್ಯವಾದ ಕೆಲವು. ಇವನ್ನೆಲ್ಲ ಸಾಂಪ್ರದಾಯಿಕ ರುಚಿಕಟ್ಟಿನಲ್ಲೇ ಮಾಡುತ್ತಿದ್ದ ಅಮ್ಮನ ಕೈ ಅಡುಗೆಯ ರುಚಿಯೇ ರುಚಿ. ಇದನ್ನು ಅಪ್ಪ-ಅಮ್ಮ, ಅಕ್ಕ-ಅಣ್ಣಂದಿರೊಂದಿಗೆ  ಜೊತೆಯಾಗಿ  ನೆಲದ ಮೇಲೆ ಮಣೆಯಲ್ಲಿ ಕೂತು  ಹಿತ್ತಲ  ಬಾಳೆ ಎಲೆಯಲ್ಲಿ  ಉಂಡರೆ ಹಬ್ಬದ ಮಜವೇ ಬೇರೆ.     ಯುಗಾದಿ  ಹಬ್ಬದಲ್ಲಿ  ಮೊದಲು ಮನೆಯಲ್ಲಿ ಮಾಡುತ್ತಿದ್ದುದು ಹಿರಿಯರ ಪೂಜೆ. ಇದೊಂದು ಭಾವನಾತ್ಮಕ ಸಂದರ್ಭ. ನಾವು ಕಾಣದ ನಮ್ಮ ಅಜ್ಜ, ಮುತ್ತಜ್ಜಂದಿರನ್ನು ಸಾಂಕೇತಿಕವಾಗಿ ಹೊಸ ಬಟ್ಟೆ ಇಟ್ಟು, ಅವರಿಗೆ ದೊಡ್ಡ ಬಾಳೆ ಎಲೆಯಲ್ಲಿ ಎಡೆ ಇಟ್ಟು ಮನೆಯ ಎಲ್ಲರೂ ಆರತಿ ಮಾಡಿ ಕೈಮುಗಿಯುವಾಗ ಗಂಟಲುಬ್ಬಿ ಬರುವಂತೆ ದುಃಖ. ಕಣ್ಣರಿಯದಿದ್ದರೂ ಕರುಳು ಅರಿಯುವ ಬಾಂಧವ್ಯ. ಆ ಕ್ಷಣಕ್ಕೆ ಸಂಭ್ರಮವೆಲ್ಲ  ಮರೆಯಾಗಿ ಅಲ್ಲಿ ನೆಲೆಸುತ್ತಿದ್ದುದು ಗಂಭೀರ ಮೌನ.  ಇಂಥ ಆಚರಣೆಗಳು ನನ್ನನ್ನು ಸೋಲಿಸುತ್ತವೆ. ಬದುಕಿನ ವಿರಾಟ್ ದರ್ಶನವಾಗುವುದು ಇಂಥ ನಾಜೂಕಿನ ಸಂದರ್ಭದಲ್ಲಿ. ಆಗ ಚಿಕ್ಕವರಾದ ನಾವು ಧರಿಸುತ್ತಿದ್ದ ಹೊಸ ಬಟ್ಟೆಯ ಮೋಹಕ್ಕೂ ಮೀರಿ ಕಾಣದ ಹಿರಿಯರ ಅವ್ಯಕ್ತ ಇರುವು ನಮ್ಮನ್ನು ಹಿಡಿದು ಕಂಪಿಸುತ್ತಿತ್ತು. ಅಂದಿನ ದಿನವಿಡೀ ಕೆಲಸದ ಹೈರಾಣು ಬದುಕಿನಲ್ಲಿ ಇಂಥ ಒಂದು ದಿನ ಮರೆಯದೇ ಹಿರಿಯರನ್ನು ನೆನೆಯುವ ಆ ನಿರಾಡಂಬರ ಸಂಪ್ರದಾಯದಲ್ಲಿ  ನನಗೆ ಅಳಿದ ಮೇಲೂ ಉಳಿದ, ಉಳಿಯಲೇಬೇಕಾದ ಪ್ರೀತಿಯ  ದ್ಯೋತಕವಷ್ಟೇ ಕಾಣುತ್ತದೆ.  ದೇವರ  ಕೋಣೆಯಲ್ಲಿ  ಇಷ್ಟು ನಡೆದು ಬಾಗಿಲಾಚೆ ದಾಟಿದರೆ ಮತ್ತೆ ನಾವು ಚಿಮ್ಮುವ ನಡಿಗೆಯ ಮಕ್ಕಳೇ. ನನ್ನ ಅಮ್ಮ,” ಅಜ್ಜ- ಅಮ್ಮನಿಗೆ ಪೂಜೆ ಮಾಡ್ರಿ” ಎಂದು ಮೆಲುದನಿಯಲ್ಲಿ ನೀಡುತ್ತಿದ್ದ ಹುಕುಂ ಹಿಂದೆ ಅವರ ಬಗ್ಗೆ ಇದ್ದ ಗೌರವಾದರಗಳ ಭಾವ ಇಂದಿಗೂ ಕಿವಿಯಲ್ಲಿ ಅನುರಣಿಸುತ್ತದೆ.  ಇಂಥ ಅಮ್ಮ ನಮಗೆಂದೂ ಕಹಿ ಬೇವನ್ನು ತಿನ್ನಿಸಿಯೇ ಇರಲಿಲ್ಲ. ಮಾಲ್ದಿಯಲ್ಲಿ ಬೇವಿನ ಹೂಗಳನ್ನು ಹಾಕಿ ತಿನ್ನಲು ಕೊಡುತ್ತಿದ್ದರು. ಮಕ್ಕಳ  ಬದುಕಲ್ಲಿ ಸಿಹಿಯ ಪಾಲೇ ಹೆಚ್ಚಿರಲಿ ಎಂಬುದು ಎಲ್ಲ ತಾಯಂದಿರ ಹಾರೈಕೆಯಲ್ಲವೇ? ಅತ್ತೆಯ ಮನೆಯಲ್ಲಿ ಹಬ್ಬದ ಆರಂಭ ಕಹಿಬೇವು- ಬೆಲ್ಲವನ್ನು ತಿನ್ನುವುದರೊಂದಿಗೆ! ಇದನ್ನು ವಿಧಿಯೆನ್ನಿ ಬೇಕಾದರೆ. ಬದುಕಲ್ಲಿ ಕಹಿ- ಸಿಹಿ ಎರಡನ್ನೂ ಸಮನಾಗಿ ಸ್ವೀಕರಿಸಬೇಕು ಎಂಬ ತತ್ವದ ಈ ಆಚರಣೆ ನನಗೆ ಇಷ್ಟವಾಗಿ ಮುಂದುವರೆಸಿದೆ. ಪ್ರತಿ ವರ್ಷ ಬೇವಿನ ಎಲೆಯ ಚಿಕ್ಕ ತುಣುಕನ್ನು ತಿಂದು ಮೈ ಮುಖ ಹಿಸುಕುವ ಮಗನಿಗೆ ಜೀವನ ಹೀಗೆ. ಕಹಿಯನ್ನು ಅನುಭವಿಸಲೇಬೇಕು ಎಂದು ಹೆಳುತ್ತೇನೆ. ಈ ಸಂಪ್ರದಾಯ ಬಿಟ್ಟರೆ ಅಂಥ ಮುತ್ತಿನಂಥ ಮಾತು ಹೇಳುವ ಪ್ರಮೇಯವೆ ಬರದಲ್ಲ!  ನಮಗೆ ಯುಗಾದಿಯ ಇನ್ನೊಂದು    ವಿಶೇಷವೆಂದರೆ ಸಂಜೆಯ  ಚಂದ್ರದರ್ಶನ. ನಮ್ಮ ಮನೆಯಿದ್ದ ಉದ್ದನೆಯ ಮುಖ್ಯ ರಸ್ತೆಯ ಉದ್ದಕ್ಕೂ ಕೈಯಲ್ಲಿ ಊದಿನಕಡ್ಡಿ ಹಚ್ಚಿ ಹಿಡಿದುಕೊಂಡು ಪೂರ್ವ ಆಗಸದತ್ತ ಮುಖ ಮಾಡಿ ನಿಂತ ಸಾಲು ಸಾಲು ಜನ. ಪಾಡ್ಯದಂದು ತೆಳು ಗೆರೆಯಂತಿರುವ ಚಂದ್ರ ಸುಲಭವಾಗಿ ಗೋಚರಿಸಲಾರ. ಶುಭ್ರ ಆಕಾಶವಿದ್ದರೆ ಚುರುಕು ಕಣ್ಣುಗಳು ಬೆಳ್ಳಿಯ ಕೂದಲೆಳೆಯನ್ನು  ಗುರುತಿಸಿದಾಕ್ಷಣ ಉಸಿರು ಬಿಗಿ ಹಿಡಿದು ಕಾಯುತ್ತಿದ್ದವರಲ್ಲಿ ಮಿಂಚಿನ ಸಂಚಾರ ವಾಗುತ್ತಿತ್ತು. ಆಗ ಎಲ್ಲರ ತೋರು ಬೆರಳುಗಳೂ ಅದೇ ದಿಕ್ಕಿಗೆ ಚಾಚಿರುತ್ತಿದ್ದವು. ಕಂಡವರ ಮುಖದಲ್ಲಿ ಅರಳುತ್ತಿದ್ದ ಸಂತಸಕ್ಕೆ ಪಾರವಿರಲಿಲ್ಲ. ಕಾಣದಿದ್ದವರಲ್ಲಿ ಕೆಲವರು ಸಪ್ಪಗಾಗಿ ಒಪ್ಪಿಕೊಂಡರೂ ಕೆಲವರಿಗೆ ಕಾಣದಿದ್ದನ್ನು ಒಪ್ಪಿಕೊಳ್ಳಲಾಗದ ಬಿಗುಮಾನ. ಬೀದಿಯಲ್ಲಿ ಪರಸ್ಪರ  ಮಾತನಾಡದವರೂ ಚಂದ್ರನ  ಕಾಣಲು, ಕಾಣಿಸಲು ಒಂದಾಗುತ್ತಿದ್ದ ಅಪರೂಪದ ಕ್ಷಣವದು. ಬಹಳ ಹೊತ್ತಿನವರೆಗೂ ಅಲ್ಲಿ ಚಂದ್ರದರ್ಶನದ ಸುತ್ತಲೇ ಮಾತುಕತೆಗಳು ನಡೆಯುತ್ತಿದ್ದವು. ಕಳೆದ ಕೆಲ ವರ್ಷಗಳ ಚಂದ್ರದರ್ಶನದ ನೆನಪುಗಳು ತಾಜಾ ಆಗುತ್ತಿದ್ದವು. ಮತ್ತೆ ಇಂಥ ಭೇಟಿಗೆ ಒಂದು ವರ್ಷ ಕಾಯಬೇಕಲ್ಲ ಎಂಬ ಕಾರಣಕ್ಕೋ ಏನೋ ಯಾರಿಗೂ ಬೇಗನೇ ಅಲ್ಲಿಂದ ಕದಲಲು ಆಗುತ್ತಿರಲಿಲ್ಲ. ಕೊನೆಗೆ ಹಿರಿಯರೊಬ್ಬರು ನಡೀರಿ ದೇವರಿಗೆ ದೀಪ ಹಚ್ಚಬೇಕು ಎಂದಾಗ ಮತ್ತೊಮ್ಮೆ ಗಡಿಬಿಡಿ ಶುರುವಾಗುತ್ತಿತ್ತು. ಹಕ್ಕಿಗಳು ಗೂಡು ಸೇರುವಾಗಿನ ಕಲಕಲ  ಮನೆಯವರೆಗೂ ಸಂಚರಿಸಿ ನಿಧಾನಕ್ಕೆ ಬೀದಿ ಮೊದಲಿನಂತಾಗುತ್ತಿತ್ತು. ಸಂಜೆ ಮನೆಯ ಹಿರಿಯರಿಗೆ ನಮಸ್ಕರಿಸುವುದರೊಂದಿಗೆ  ಹಬ್ಬ ಮುಗಿಯುತ್ತಿತ್ತು.  ಈ ಒಂದು ದಿನಕ್ಕಾಗಿ ವಾರಗಳಿಂದ ಆರಂಭವಾಗುತ್ತಿದ್ದ ಮನೆಯ ಸ್ವಚ್ಛತೆ, ಅಟ್ಟದ ಧೂಳು ಕೊಡವುವುದು, ತಿಂಡಿ- ತಿನಿಸುಗಳನ್ನು ಮಾಡಲು, ತುಂಬಲು ಬೇಕಾದ ಪಾತ್ರೆಗಳನ್ನು ತೊಳೆಯುವುದು, ಸಾಮಾನುಗಳನ್ನು ಪಟ್ಟಿ ಮಾಡಿಕೊಂಡು ಶಾನಭಾಗರ ಅಂಗಡಿಗೆ ಹೋಗಿ ಕೊಟ್ಟು ಬರುವುದು, ನಸುಕಿನಲ್ಲೇ ಬಂದು ಬಾಗಿಲಿಗೆ ಹೂ ಸಿಕ್ಕಿಸಿ ಅದೃಶ್ಯವಾಗುವ   ವರ್ತನೆಯ ಹೂ ಮಾರುವವಳಿಗೆ ಹಬ್ಬಕ್ಕೆ ಎಲ್ಲರಿಗೂ ಒಂದೊಂದು ದಂಡೆ ಮಲ್ಲಿಗೆ ಹೂ ಇರಬೇಕು ಎಂದು ಹೇಳಲು  ಹಬ್ಬಕ್ಕೆ ಎರಡು ದಿನ ಮೊದಲು ಬೇಗ ಎದ್ದು  ಕಾದು ಕುಳಿತುಕೊಳ್ಳುವುದು, ಮನೆಯ ಮುಂಭಾಗದ ಅಂಗಳ ಸಾರಿಸಿ ಯಾವ ರಂಗೋಲಿ ಇಡಬೇಕು ಎಂದು ರಂಗೋಲಿ  ಬಿಡಿಸಿ ಸಂಗ್ರಹಿಸಿಟ್ಟುಕೊಂಡ ಪುಸ್ತಕವನ್ನು ಗಣಿತವೋ, ವಿಜ್ಞಾನವೋ ಅಭ್ಯಾಸ ಮಾಡಿದಂತೆ ಬಿಡಿಸಿ ಬಿಡಿಸಿ ಕಲಿತುಕೊಳ್ಳುವುದು….ಮುಂತಾಗಿ ಮನೆಯ ಎಲ್ಲರಿಗೂ ಕೆಲಸವೋ ಕೆಲಸ !!  ಹಬ್ಬದ ದಿನ  ಬೆಳಿಗ್ಗೆ ಬೇಗನೇ ಎದ್ದು   ಕೊಟ್ಟಿಗೆಯಲ್ಲಿದ್ದ ಸಗಣಿಯನ್ನು ಬಾಚಿ  ಹಳೆಯ ಬಕೀಟಿಗೆ ತುಂಬಿ ನೀರು ಸುರುವಿ ಕೈಯಾಡಿಸುತ್ತ ಅಂಗಳ ಸಾರಣೆಗೆ ಬೇಕಾಗುವ ಹದಕ್ಕೆ ಗಂಜಲ ತಯಾರಿಸುವುದನ್ನು ನಿಷ್ಠೆಯಿಂದಲೇ ಮಾಡುವುದು. ಅದರ ವಾಸನೆಗೆ ಯಾವತ್ತೂ ‘ ಇಶ್ಯಿ’  ಎನಿಸಲೇ ಇಲ್ಲ. ಅಂಗಳದ ಒಂದು ತುದಿಯಿಂದ ತಂಬಿಗೆಯಲ್ಲಿ ಸ್ವಲ್ಪ ಸ್ವಲ್ಪವೇ ಹಾಕುತ್ತ ಕಡ್ಡಿಹಿಡಿಯಲ್ಲಿ  ನಯವಾಗಿ ಕಸಬರಿಗೆಯ ಒಂದು ಕಡ್ಡಿಯ ಗುರುತೂ ಬರದಂತೆ  ಹರಡುತ್ತ ಅಂಗಳ ಪೂರ್ತಿ ಬಳಿದರೆ ನನಗೂ, ಅಮ್ಮನಿಗೂ ಖುಷಿ. ಇವೆಲ್ಲ ನಾವು ನೋಡಿ ಕಲಿತ ಪುಟ್ಟ ಜವಾಬ್ದಾರಿಗಳು. ಅದಕ್ಕಾಗಿ ಅಮ್ಮನ ಮುಖದಲ್ಲಿ ಆ ಸಂತಸದ ನಗು ಉಕ್ಕುತ್ತಿತ್ತು ಎಂದು ಈ ತಾಯಿಗೆ ಈಗ  ಅರಿವಾಗಿದೆ.  ಅದೆಂಥ ತುಂಬು ಬದುಕು!! ಈಗ ಬದಲಾಗಿದೆ ಎಂದೆನಲ್ಲವೇ? ಅಡುಗೆಗಳು ಬಹುತೇಕ  ಹಾಗೇ ಇವೆ. ಮಾಲ್ದಿ ಹೆಚ್ಚು ಇಷ್ಟ ಪಡದ ಕಾರಣ ಮೆನುವಿನಿಂದ ಕಣ್ಮರೆಯಾಗಿದೆ. ಹೊಸತಾಗಿ ಕೆಲವು ಸೇರ್ಪಡೆಯಾಗಿವೆ.  ಈಗಲೂ ಸಂಜೆ ಊದಿನಕಡ್ಡಿ ಹಚ್ಚಿಕೊಂಡು  ಟೆರೇಸಿನ ಮೇಲೆ ಹೋಗಿ ಚಂದ್ರನನ್ನು ಹುಡುಕುತ್ತೇನೆ. ಕಂಡರೆ ಎಲ್ಲ ಮೊದಲಿನಂತೆ..ಮಗ ಅಣಕಿಸಿದಾಗ ಹೇಳುತ್ತೇನೆ. ಇದು ನಮ್ಮ ಪರಂಪರೆಯ ಭಾಗ. ಬಿಟ್ಟರೆ ಕಳೆದು ಹೋಗಿಬಿಡುತ್ತದೆ. ಅನುಸರಿಸಿದರೆ ಕಳೆದ ಕಾಲವನ್ನು ಕಟ್ಟಿ ಹಾಕಿದ ಸಂತೋಷ ಆ ಕ್ಷಣಕ್ಕೆ ಆಗುತ್ತದೆ.  ಹೆಚ್ಚೇನಿಲ್ಲ.  ಇದನ್ನು ವ್ಯಾಮೋಹವೆನ್ನಿ. ಗೊಡ್ಡು ಎಂದು ಮೂಗು ಮುರಿಯಿರಿ. ಬೇಸರವಿಲ್ಲ. ಹೊಟೆಲ್ಲುಗಳಲ್ಲಿ ದುಬಾರಿ ಬಿಲ್ ತೆತ್ತು ಬೀಗುವ ಹಬ್ಬಕ್ಕಿಂತ ಇಂಥ ಬಾಗುವ ಹಬ್ಬವೇ ನನಗೆ ಪ್ರಿಯ.  ಅಡುಗೆಯನ್ನು ಹಂಚಿ ತಿನ್ನುವುದು ಹಳ್ಳಿಗಳ, ಸಣ್ಣ ಪಟ್ಟಣಗಳ ಸುಂದರ ಅಭ್ಯಾಸ. ಅದೇ ನೆವದಲ್ಲಿ ಹಾಲು- ಹೈನು ಸಮೃದ್ಧವಾಗಿ ನೀಡುವ ಆಕಳಿಗೆ ಒಂದು ಎಡೆ, ಮನೆ ದೇವರಿಗೆ ಒಂದು, ಹಿತ್ತಲಲ್ಲಿರುವ ಭೂತನ/ ಚೌಡಿ ಕಟ್ಟೆಗೆ ಒಂದು, ಊರು ದೇವರಿಗೆ ಒಂದು, ಹಿರಿಯರಿಗೆ ಒಂದು, ಹೊಸ್ತಿಲುಗಳಿಗೆ ಒಂದು..ಹೀಗೆ ಎಲ್ಲರನ್ನೂ- ಎಲ್ಲವನ್ನೂ ನೆನೆಯುವ ಸತ್ಸಂಪ್ರದಾಯವನ್ನು ಅಮ್ಮ ಅನುಸರಿಸಿಕೊಂಡು ಬಂದಿದ್ದರು.. ಇದನ್ನು ಬಿಡಲಾರದ ನಾನು ಮನೆಗೆ ಹಾಲು ಕೊಡುವವರಿಗೆ, ಅವರ ಮನೆಯ ಆಕಳಿಗೆ, ಎದುರು ಇರುವ ದೇವಸ್ಥಾನಕ್ಕೆ ಕೊಡುತ್ತೇನೆ. ಅಂದು ದೇವಾಲಯ ತುಂಬಿ ತುಳುಕುವುದರಿಂದ ಪಾಪ ಭಟ್ಟರಿಗೆ ಮನೆಗೆ ಹೋಗಲೂ ಪುರಸೊತ್ತಿರುವುದಿಲ್ಲ. ಪ್ರತಿ ಹಬ್ಬದಲ್ಲೂ ಅವರಿಗೆ ನಮ್ಮ ಮನೆಯದೇ ಊಟ. ಜೊತೆಗೆ ದೇವಾಲಯದ ಸುತ್ತಲೂ ಇರುವ ಉದ್ಯಾನ ನೋಡಿಕೊಳ್ಳುವ ಮಾಲಿಗಳಿಗೂ.  ಸಂಪ್ರದಾಯ ಗೊಡ್ಡಲ್ಲ. ಅದನ್ನು ನಾವು ಅರ್ಥಪೂರ್ಣವಾಗಿ ಮುಂದುವರೆಸಿಕೊಂಡು ಹೋಗಬಹುದು. ಹಬ್ಬದ ನೆವದಲ್ಲಿ ಇಷ್ಟೆಲ್ಲ ನೆನಪಾಗಿ ಮನಸ್ಸು ಒದ್ದೆಯಾಯಿತು. ಹೊಸ ವರ್ಷ ದುಡಿಯುವ ಕೈಗಳಿಗೆ ಬಲವನ್ನೂ,

Read Post »

ಇತರೆ

ಯುಗಾದಿ ವಿಶೇಷ ಬರಹ ಕೊನೆಗೂ ಸಿಕ್ಕ ಸದ್ಗುರು 1993 – 94 ರ ಮಾತದು. ನಾವಾಗ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಾಗ ವಿಜ್ಞಾನ ವಿಷಯ ಬೋಧಿಸಲು ಹೊಸ ಶಿಕ್ಷಕರೊಬ್ಬರ ಆಗಮನವಾಯಿತು. ಹಳ್ಳಿ ಶಾಲೆ. ಹಳ್ಳಿ ಹುಡುಗರಾಗಿದ್ದ ನಮಗೆ ಅವರ ಮಾತು – ಕತೆ, ರೀತಿ – ನೀತಿ & ಎಲ್ಲಕ್ಕೂ ಮಿಗಿಲಾಗಿ ಅವರ ಸ್ಟೈಲ್ ಅತ್ಯಾಕರ್ಷಿಸಿತು. ಮೊದಲ ನೋಟದಲ್ಲೇ ವಿದ್ಯಾರ್ಥಿಗಳ ಮನ ಗೆದ್ದ ಅವರು ನಮ್ಮ ಪಾಲಿಗೆ ಸ್ಟೂಡೆಂಟ್ ಐಕಾನ್ ಎನಿಸಿದರು.  ಅವರು ಪಾಠ ಹೇಳುತ್ತಿದ್ದ ರೀತಿ, ಬೋಧಿಸುವ ಪರಿ, ಸದಾ ಹಸನ್ಮುಖತೆಯಿಂದಲೇ ಮನವರಿಕೆ ಮಾಡಿಸುತ್ತಿದ್ದ ಅವರ ತಾಳ್ಮೆ, ತಪ್ಪು ಮಾಡಿದಾಗ ಹೊಡೆಯದೆ – ಬೈಯದೇ, ಯಾರೊಬ್ಬರ ಮನಸ್ಸಿಗೂ ನೋವಾಗದಂತೆ ನಯವಾಗಿ ತಿದ್ದಿ – ತೀಡುತ್ತಿದ್ದ ತಾಯ್ಮಮತೆಯ ಅವರ ಅಂತಃಕರಣ, ಬೋರ್ ಎನಿಸಿದಾಗ ಹಾಡು ಹೇಳಿ ರಂಜಿಸಿ ಪಾಠ ಮುಂದುವರೆಸುತ್ತಿದ್ದ ಕ್ರಮ … ಥೇಟ್ ರಾಜ್ ಕುಮಾರ್ ವಾಯ್ಸಲ್ಲೂ ಒಮ್ಮೊಮ್ಮೆ ಮಾತಾಡಿ, ಹಾಡ್ಹೇಳಿ, ಜೋಕ್ಸೇಳಿ ನಕ್ಕು ನಗಿಸಿ ಬೋಧಿಸುತ್ತಿದ್ದ ಅವರ ಬತ್ತದ ಉತ್ಸಾಹ, ಯಾವುದೇ ಕ್ರೀಡೆ – ಆಟೋಟದಲ್ಲೂ ವಿದ್ಯಾರ್ಥಿಗಳೊಂದಿಗೆ ತಾವೂ ಭಾಗವಹಿಸಿ ಹುರಿದುಂಬಿಸುತ್ತಿದ್ದ ಉತ್ಸುಕತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವ ಸಂದರ್ಭದಲ್ಲಿ ತಾವೇ ನೃತ್ಯ ನಿರ್ದೇಶನ ಮಾಡಿ ವಿದ್ಯಾರ್ಥಿಗಳೊಂದಿಗೆ ವೇದಿಕೆಯಲ್ಲಿ ತಾವೂ ಕೂಡ ಒಂದು ನೃತ್ಯಕ್ಕೆ ಹೆಜ್ಜೆ ಹಾಕುತ್ತಿದ್ದ ಅವರ ಬಹುಮುಖಿ ಪ್ರತಿಭೆ … ಹೀಗೆ ಒಂದೇ ಎರಡೇ ಎಲ್ಲವೂ ಅದ್ಭುತ – ಅಮೋಘ.         ಅವರ ವ್ಯಕ್ತಿತ್ವವೇ ಅಂಥದ್ದು. ಎಂಥಾ ವಿದ್ಯಾರ್ಥಿಗಾದರೂ ಎಷ್ಟೇ ವರುಷಗಳಾದರೂ ಮರೆಯಲಾಗದಂತಹ ಛಾಪು ಮೂಡಿಸುವಂಥದ್ದು.   ಹಾಗಾಗಿಯೇ ನಾವು ಅವರನ್ನ ಸದಾ ಸ್ಮರಿಸುತ್ತಲೇ ಇರುತ್ತಿದ್ದೆವು.  ನಮ್ಮ  SSLC ಪರೀಕ್ಷೆ ಮುಗಿಯುತ್ತಿದ್ದಂತೆಯೇ  ಅವರು ಆ ಶಾಲೆಯಿಂದ ನಿರ್ಗಮಿಸಿ ಬಿಟ್ಟಿದ್ದರು. ಎಲ್ಲಿಗೆ ಹೋದರು, ಯಾವ ಊರಿನಲ್ಲಿ ಜಾಬ್ ಮಾಡುತ್ತಿದ್ದಾರೆ ಎಂಬ ಕುರಿತು ಆ ಶಾಲೆಯ ಸಿಬ್ಬಂದಿಯವರಿಗಾಗಲಿ ಅಥವಾ ಯಾವೊಬ್ಬ ವಿದ್ಯಾರ್ಥಿಗಾಗಲಿ ಮಾಹಿತಿ ಇರಲಿ ಸುಳಿವು ಸಹ ಸಿಗಲಿಲ್ಲ . ಫೋನ್ ಮೂಲಕವಾದರೂ ಪತ್ತೆ ಹಚ್ಚೋಣವೆಂದರೆ ನಮ್ಮದು ಆಗ ಫೋನೇ ಇಲ್ಲದ ಕಾಲ, ನಮ್ಮೂರಲ್ಲಿ ಆಗ ಯಾರ ಮನೆಯಲ್ಲೂ ಲ್ಯಾಂಡ್ ಲೈನ್ ಕೂಡ ಇರಲಿಲ್ಲ . ಅಂತೆಯೇ ನಮ್ಮ ಆ ಗುರುಗಳ ಬಳಿ ಕೂಡ .. ಹಾಗಾಗಿ Long Period  Communication Gap ಆಯ್ತು …     ಹೈಸ್ಕೂಲ್ ಮತ್ತು M.Phil ವಿದ್ಯಾಭ್ಯಾಸದ ನಡುವಣ ಪಯಣದಲ್ಲಿ ಹತ್ತು ಹಲವು ಮೇರು ಶಿಕ್ಷಕರ ದಿಗ್ದರ್ಶನವೂ ಆಯ್ತು. ಆದರೂ, ಸುಮಾರು 25 ವರ್ಷಗಳೇ ಕಳೆದರೂ ಅವರನ್ನು ಕಾಣುವ ತವಕ ಮಾತ್ರ ಮನದಲ್ಲಿ ಮನೆ ಮಾಡಿತ್ತು.  ಅದೂ ಕೂಡ ಒಂದು ಅಚ್ಚರಿಯ ಸಂಗತಿಯಾಗಿ ಮನವ ಕಾಡಿತ್ತು … ಮರೆಯಲಾಗದ ಯುಗಾದಿ :    ಆ ತವಕಕ್ಕೆ ಪ್ರತಿಯಾಗಿ ಕಿಂಚಿತ್ತು ಫಲ ಎಂಬಂತೆ ಆ ಯುಗಾದಿಯ ದಿನದಂದು ಒಂದಷ್ಟು ಆ ಮಹನೀಯರ ಇರುವಿಕೆಯ ಮೂಲದ ಮಾಹಿತಿ ಲಭಿಸಿತ್ತು. 2018 ರ  ಯುಗಾದಿಯಂದು ಹಂಪಿ – ಹೊಸಪೇಟೆಯ ಕಡೆ ಸ್ನೇಹಿತರೊಂದಿಗೆ ಪ್ರಯಾಣ ಬೆಳೆಸಿದ್ದೆ. 2 ದಿನ ಅಲ್ಲಿಯೇ ತಂಗಿದ್ದ ನಾವು ವಾಪಸ್ ಊರಿಗೆ ಬರುತ್ತಿದ್ದಾಗ ನಮ್ಮ ಮಿತ್ರರೊಬ್ಬರ ಬಳಿ ಆಕಸ್ಮಾತ್ ಆಗಿ ನಮ್ಮ ಆ ಗುರುವಿನ ಬಗ್ಗೆ ಪ್ರಸ್ತಾಪಿಸಿದೆ. ಅದಕ್ಕವರು – ಅಯ್ಯೋ ನೀವು ಇಷ್ಟು ದಿನ ಹುಡುಕುತಿದ್ದ ನಿಮ್ಮ ಗುರುಗಳು ಅಲ್ಲೇ ಹಗರಿಬೊಮ್ಮನ ಹಳ್ಳಿಯ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಇದಾರಂತೆ, ಅಷ್ಟು ಮಾತ್ರ ನನಗೆ ಗೊತ್ತು. ಆದರೆ ಪಕ್ಕಾ ಅಡ್ರೆಸ್ ಆಗಲಿ ಅಥವಾ ಫೋನ್ ನಂಬರ್ ಆಗಲಿ ನಂಗೊತ್ತಿಲ್ಲ … ಆನ್ ದಿ ವೇ ಬರ್ತಾ ಪತ್ತೆ ಹಚ್ಕೊಂಡು ಬನ್ನಿ ಎಂದರು….     ಅದೇ ಜಾಡು ಹಿಡಿದು ಅಲ್ಲಿಗೆ ಹೋದ್ವಿ . ಕೆಲವರನ್ನು ಕೇಳಲಾಗಿ ಗೊತ್ತಿಲ್ಲ ಎಂಬ ಉತ್ತರ. ಇನ್ನೇನು ನಿರಾಸೆಯಿಂದ ಹೊರಡುವ ಹೊತ್ತಿಗೆ ಕೊನೆಯ ಪ್ರಯತ್ನವೆಂಬಂತೆ ಒಂದು ಪ್ರಾವಿಜನಲ್ ಸ್ಟೋರ್ನಲ್ಲಿ ವಿಚಾರಿಸಿದಾಗ – ” ಮೊದಲು 1 ವರ್ಷದ ಹಿಂದೆ ಅವರು ಇಲ್ಲೇ ಪಕ್ಕದ ಕೇರಿಯಲ್ಲಿ ಇದ್ರು. ಈಗ ಎಲ್ಲಿದ್ದಾರೋ ಗೊತ್ತಿಲ್ಲ ” ಅಂದು ಬಿಟ್ಟಾಗ ನಿಜಕ್ಕೂ ಒಂದಿಷ್ಟು ಖುಷಿ ಮತ್ತಿಷ್ಟು ಬೇಸರವೆನಿಸಿತು. ಅವರ ಫೋನ್ ನಂಬರ್ ಏನಾದ್ರೂ ಇದ್ರೆ ಕೊಡ್ತಿರಾ ಸರ್ ಎಂದೆವು. ಇಲ್ಲ ಎಂದ ಅವರು ಕೊಂಚ ಬಳಿಕ … ಅವರ ಅಳಿಯ ಒಬ್ರ ನಂಬರ್ ಇದೆ ಕೊಡ್ತಿನಿ, ಬೇಕಾದ್ರೆ ಅವರ ಬಳಿ ವಿಚಾರಿಸಿ ನೋಡಿ ಎಂದರು. ನಿಟ್ಟುಸಿರು ಬಿಟ್ಟ ನಾವು ಕೂಡಲೇ ನಂಬರ್ ಪಡೆದು ಫೋನಾಯಿಸಿದರೆ ಅವರೊಡನೆಯೇ ನಮ್ಮ ಗುರುಗಳೂ ಸಹ ಇದ್ದರು … ಸಂತಸಕ್ಕೆ ಪಾರವೇ ಇರಲಿಲ್ಲ. ಪರಿಚಯ ಹೇಳಿಕೊಂಡೆ …ಒಂದಷ್ಟು ಕುಶಲೋಪರಿಯೂ ಆಯಿತು.. “ಎಂಥಾ ಕೆಲಸ ಆಯ್ತಲ್ಲ, ನಾವು ಹಗರಿಬೊಮ್ಮನಹಳ್ಳಿಯಲ್ಲೇ ವಾಸವಿದ್ದೇವೆ. ಇನ್ನೊಮ್ಮೆ ಈ ಕಡೆ ಬಂದಾಗ ಮನೆಗೆ ಬಾ. ಖುದ್ದು ಭೇಟಿಯಾಗೋಣ ಗಂಗಾಧರ್, ನಾವೀಗ ಸಂಕ್ರಾಂತಿ ಪ್ರಯುಕ್ತ ಹೊಸಪೇಟೆ ಹತ್ತಿರದ ಹುಲಿಗಿ ಗ್ರಾಮಕ್ಕೆ ಬಂದಿದ್ದೇವೆ. ಮತ್ತೊಮ್ಮೆ ಖಂಡಿತಾ ಭೇಟಿ ಆಗೋಣ ” ಎಂದ್ಹೇಳಿ ತಮ್ಮ ಮೊಬೈಲ್ ನಂಬರ್ ಕೊಟ್ಟು ಅಡ್ರೆಸ್ ಹೇಳಿ ಫೋನ್ ಮೂಲಕವೇ ಬೀಳ್ಕೊಟ್ಟರು…. ಅಂತೂ.. , ಮುಖಭೇಟಿಯಾಗದಿದ್ದರೂ ಮತ್ತೊಮ್ಮೆ ಸಿಗುವ ಭರವಸೆಯೊಂದಿಗೆ ಅಲ್ಲಿಂದ ಸೀದಾ ಊರಿಗೆ ತೆರಳಿದೆವು … ಈಗ ನೆನಪಾದಲೆಲ್ಲಾ ಫೋನ್ ಮಾಡುತ್ತೇನೆ. ಆ ದಾರಿಯಲ್ಲಿ ಪ್ರಯಾಣಿಸಿದಾಗಲೆಲ್ಲಾ ಅವರ ಮನೆಗೆ ಹೋಗಿ ಬರುತ್ತೇನೆ.     ಆ ನಮ್ಮ ಮನೋ ಮಂದಿರದ ಗುರುಗಳ ಹೆಸರು ” ಶ್ರೀಯುತ ಕುಮಾರ್ ಸ್ವಾಮಿ ಹಿರೇಮಠದ್ “   ವೃತ್ತಿ ಪ್ರೇಮವೊಂದನ್ನೇ ಗುರಿಯಾಗಿಸಿಕೊಂಡು ಬೋಧಿಸುವ ಇಂತಹ ಶಿಕ್ಷಕರ ಸಂಖ್ಯೆ & ಸೇವೆ ಈಗ ವಿರಳವೇ ಸರಿ …     ಇಂತಹ ವಿರಳ ಗುರು ಮರಳಿ ಸಿಕ್ಕ 2018 ರ ಯುಗಾದಿಯ ಎಂದಿಗೂ ಮರೆಯಲಾಗದು. ಪ್ರತಿ ಯುಗಾದಿಗೂ ಅವ್ಯಾಹತ ಆ ಗುರುವಿನ ಸ್ಮರಣೆ. ತಸ್ಮೈ ಶ್ರೀ ಗುರುವೇ ನಮಃ … ********************************** ಗಂಗಾಧರ್ ಬಿ.ಎಲ್ ನಿಟ್ಟೂರ್

Read Post »

ಇತರೆ

ಯುಗಾದಿ ವಿಶೇಷ ಬರಹ ಯುಗಾದಿ ಯುಗಾದಿ        ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಒಂದು ಅತ್ಯುನ್ನತ ಸಾಂಸ್ಕೃತಿಕ ಮಹತ್ವವಿದೆ. ಆದುದರಿಂದಲೇ ಭಾರತೀಯರು ತಮ್ಮ ಹೊಸವರುಷದ ದಿನವೂ ಯುಗಾದಿಯ ದಿನದಿಂದಲೇ ಆರಂಭವಾಗುತ್ತದೆ ಎಂದು ನಂಬುತ್ತಾರೆ. ಗ್ರಾಮೀಣರ ಆಡುಮಾತಿನ ಲ್ಲಿ ಹೇಳುವುದಾದರೆ ಯುಗಾದಿಯು ‘ಉಗಾದಿ’ ಎನಿಸಿಕೊಳ್ಳುತ್ತದೆ. ಯುಗಾದಿ ಹಬ್ಬ ಶಿಶಿರ ಋತು ಕಳೆದು ವಸಂತನಾಗಮನದ ಮೊದಲ ಹಬ್ಬ. ಇದು ಭಾರತೀಯರ ಪಾಲಿಗೆ ನವಮನ್ವಂತರ, ಅಲ್ಲದೆ ಇದು ಭಾರತೀಯರಾದ ನಮ್ಮ ಪಾಲಿಗೆ ಹೊಸ ವರುಷದ ಮೊದಲ ದಿನ.     ಯುಗಾದಿಯನ್ನು ಚಾಂದ್ರಮಾನ- ಸೌರಮಾನ ಹೀಗೆ ಎರಡು ಬಗೆಯಲ್ಲಿ ಆಚರಿಸುವ ಪದ್ಧತಿಯಿದೆ. ಚಂದ್ರನ ಚಲನೆಯನ್ನು ಗುರುತಿಸಿ ಮಾಡುವ ಪದ್ದತಿಗೆ ಚಾಂದ್ರಮಾನ ಯುಗಾದಿ ಎನ್ನುವರು. ಸೂರ್ಯ ಮೇಷ ರಾಶಿಗೆ ಬಂದಾಗ ಸೌರಮಾನ ಯುಗಾದಿಯನ್ನು ಆಚರಿಸುವರು. ದಕ್ಷಿಣ ಭಾರತೀಯರು ಚಾಂದ್ರಮಾನ ವನ್ನು ಅನುಸರಿಸಿ ಚೈತ್ರ ಶುದ್ಧ ಪಾಡ್ಯಮಿಯಂದು ಯುಗಾದಿ ಆಚರಿಸುವರು.  ಬೇವು- ಬೆಲ್ಲ       ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನು ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು.ಬೇವು ಬೆಲ್ಲವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ…  ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ| ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ|| ಅದರರ್ಥ ಹೀಗಿದೆ– “ನೂರು ವರುಷಗಳ ಆಯುಷ್ಯ, ಸದ್ರಢ ಆರೋಗ್ಯ ,ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ”.   ಯುಗಾದಿ ಹಬ್ಬದಂದು ಬೇವು ಬೆಲ್ಲ ತಿನ್ನುವ ಆಚರಣೆಯು ಒಂದು ವಿಶಿಷ್ಟ ಪರಿಕಲ್ಪನೆಯೇ ಸರಿ. ಸಿಹಿ-ಕಹಿ,ಸುಖ- ದು:ಖ, ನಲಿವು,ನೋವು ಎಂಬ ಮಾತಿನಂತೆ ಜೀವನದಲ್ಲಿ ಇವೆರಡರ ಇರುವಿಕೆ ಅಗತ್ಯ ವಾಗಿದೆ. ಆಗ ಮಾತ್ರ ಜೀವನ ಸುಗಮವಾಗಿ ಸಾಗಲು ‌ಸಾಧ್ಯ. ಆದರೆ ಕಷ್ಟಕ್ಕಿಂತ ಸುಖವೆ ಬೇಕು‌ ಎಂದು ಬಯಸುವವರು ಹೆಚ್ಚಿರುವ ಪರಿಸ್ಥಿತಿಯಲ್ಲಿ ಕಷ್ಟವನ್ನು, ಕಹಿಯನ್ನು, ನೋವನ್ನು ಬಯಸುವವರೇ ಇಲ್ಲವೆನ್ನುವಂತಾಗಿದೆ. ಆದರೆ ಜೀವನ ಎನ್ನುವುದು ಕಷ್ಟ ಸುಖಗಳ ಸಂಯೋಜನೆಯಾಗಿದೆ. ಹಾಗಾಗಿ‌ ಇವೆರಡು ಒಂದನ್ನೊಂದು ಬಿಟ್ಟಿರಲಾರವು.        ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬುದು ಯುಗಾದಿ ಹಬ್ಬದ ಮುಖ್ಯ ಉದ್ದೇಶವಾಗಿದೆ. ಅಲ್ಲದೆ ಜೀವನದಲ್ಲಿ ಏನೇ ಏರುಪೇರಾದರೂ ಸರ್ವರೂ ಸುಖದಿಂದ, ಸಮನ್ವಯದಿಂದ ಒಟ್ಟಾಗಿ ಬಾಳಬೇಕೆನ್ನುವ ಆಶಯವೂ ಇದರಲ್ಲಿದೆ.       ಯುಗಾದಿ ಬಂದಿತೆಂದರೆ ಎಲ್ಲೆಡೆಯಲ್ಲಿ ಸಂತೋಷ, ಸಂಭ್ರಮ ತುಂಬಿ ತುಳುಕುತ್ತಿರುತ್ತದೆ. ಚೈತ್ರ ಮಾಸದಿಂದ ವಸಂತ ಋತು ಶುರುವಾಗುತ್ತದೆ. ವನಗಳೆಲ್ಲ ಚಿಗುರಿ ಹೂ ಬಿಟ್ಟು ಯುಗಾದಿಯ ವರ್ಷವನ್ನು ಬೀರುವವು. ಎಲ್ಲಿ ನೋಡಿದರೂ ಮರಗಿಡಬಳ್ಳಿಗಳು ಹಸಿರಾಗಿ ನಳನಳಿಸುತ್ತಿರುತ್ತದೆ.       ಹೊಸ ವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ ಬಲ್ಲಿದರೆಂಬ ತಾರತಮ್ಯವಿಲ್ಲದೆ ಎಲ್ಲಾ ಹಿಂದೂಗಳು ಆಚರಿಸುತ್ತಾರೆ. ರೈತರು ಎತ್ತುಗಳನ್ನು ಅಲಂಕರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ವನ್ನು ಭಾರತ ಪರ್ವದಲ್ಲಿ ಬೇರೆ ಬೇರೆ ಹೆಸರಿನಿಂದ ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಗುಜರಾತ್,ಮಹಾರಾಷ್ಟ್ರದಲ್ಲಿ ಯುಗಾದಿಯ ದಿನ ಪ್ರತಿಯೊಂದು ಮನೆಯ ಮುಂದೆ ಗುಡಿಯನ್ನು ನಿಲ್ಲಿಸುವ ಪದ್ದತಿ ಇರುವುದರಿಂದ ಯುಗಾದಿಯನ್ನು ಗುಡಿಪಾಡ್ಯ ಎಂದು ಕರೆಯುವರು. ಗುಡಿ ಎಂದರೆ ಧ್ವಜ. ಒಂದು ಕೋಲಿನ ತುದಿಗೆ ರೇಷ್ಮೆ ಬಟ್ಟೆ ಏರಿಸಿ ಅದರ ಮೇಲೆ ಬೆಳ್ಳಿ ಅಥವಾ ಹಿತ್ತಾಳೆಯ ಸಣ್ಣ ಬಿಂದಿಗೆಯನ್ನು‌ ಕಟ್ಡಿ ಬೇವು ಮತ್ತು ಮಾವಿನ ಎಲೆಗಳಿಂದ ಅಲಂಕರಿಸುವರು. ಮಹಾಭಾರತದಲ್ಲಿ ಇದರ ಪ್ರಸ್ತಾಪವಿದೆ.      ಸಿಹಿತಿನಿಸು……    ಒಬ್ಬಟ್ಟು ಅಥವಾ ಹೊಳಿಗೆ ಬಹಳ ದಿನ ಇರದೇ ಕೊಡುವುದೆಂದು ಕಡಲೆ ಅಥವಾ ತೊಗರಿ ಬೆಳೆಯ ಹೂರಣದಲ್ಲಿ ಮಾಡುವರು. ಇದನ್ನೆ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆಯುತ್ತಾರೆ. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆವರು.  ಯುಗಾದಿಯ ಖಗೋಳ ಘಟನೆಗಳು     ಯುಗಾದಿಯ ಸಂದರ್ಭದಲ್ಲಿ ಭೂಮಿಯ ಆಕ್ಸೆಸ್ ವಾಲುತ್ತದೆ. ಉತ್ತರ ಗೋಳಾರ್ಧವು ಹೆಚ್ಚಿನ ಪ್ರಮಾಣದ ಸೂರ್ಯನ ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಈ ಸಮಯದಲ್ಲಿ ಭೂಮಿಯು ಹೆಚ್ಚು ಉಷ್ಣತೆಗೆ ಒಳಗಾಗುತ್ತದೆ. ಆದ್ದರಿಂದ ಮನುಷ್ಯರಿಗೆ ಹೆಚ್ಚು ಶಾಖದ ಅನುಭವಾಗುತ್ತದೆ. ಅದನ್ನು ಸಹಿಸುವ ಶಕ್ತಿಯನ್ನು ಯುಗಾದಿ ಆಚರಣೆ ನೀಡುತ್ತದೆ‌. ಖಗೋಳ ಶಾಸ್ತ್ರದ ಪ್ರಕಾರ ಯುಗಾದಿಯ ಹಿಂದಿನ ದಿನ ಅಮವಾಸ್ಯೆ ಯಾಗಿರುತ್ತದೆ.       ಹೊಸ ಸಂವತ್ಸರದ ಪ್ರಾರಂಭದ ದಿನ ಇದು. ವಸಂತ ಋತುವಿನ ಪ್ರಾರಂಭದ ದಿನ ಇದಾಗಿರುತ್ತದೆ. ಇನ್ನು‌ “ವಸಂತ ಕಾಲ ಬಂದಾಗ ಮಾವು ಚಿಗುರಲೇ ಬೇಕು” ಎಂಬ ಹಾಡಿನಂತೆ ಪ್ರಕೃತಿಯೂ ಕೂಡ ಚಿಗುರೆಲೆಗಳಿಂದ‌ ಹೊಸ ಋತುವಿನ ಸ್ವಾಗತ ಕೋರಲು ಸಜ್ಜಾಗಿರುವ ಸಮಯ ಇದಾಗಿದೆ.       ಈ ಸಮಯದಲ್ಲಿ ಮರಗಳ ಎಲೆಗಳು ಉದುರುತ್ತದೆ, ಹೊಸ ಚಿಗುರು ಪ್ರಾರಂಭವಾಗುತ್ತದೆ. ಹಾಗಾಗಿ ಹೊಸತನದ ಸಂಕೇತವನ್ನು ಪ್ರಕೃತಿಯೂ ಕೂಡ ನೀಡಲು ಪ್ರಾರಂಭಿಸುವ ಸುದಿನ ಇದು.  ಪಂಚಾಂಗದ ಪ್ರಕಾರ ಯುಗಾದಿಯ ದಿನದಂದು ಹೊಸ ಹಿಂದೂ ಕ್ಯಾಲೆಂಡರ್ ಪ್ರಾರಂಭವಾಗುತ್ತದೆ.     ಹಿಂದೂ ಕ್ಯಾಲೆಂಡರ್ ಕೇವಲ ಸಾಂಪ್ರದಾಯಿಕವಾಗಿ ಮಾತ್ರವೇ ಮಹತ್ವಪೂರ್ಣ ವಾದುದಲ್ಲ. ಆದರೆ ಇದು ವೈಜ್ಞಾನಿಕವಾಗಿಯೂ ಮತ್ತು ಖಗೋಳ ಶಾಸ್ತ್ರದ ಪ್ರಕಾರವೂ ಕೂಡ ಹಲವು ಗ್ರಹಗಳ ಕ್ಷಣಗಳನ್ನು ವಿವರಿಸುವ ಸಂಪರ್ಕ ಸಾಧನವಾಗಿದೆ.      ನಮ್ಮ ಭಾರತೀಯ ಶ್ರೇಷ್ಠ ಗಣಿತಜ್ಞರೆನಿಸಿರುವ ಭಾಸ್ಕರಾಚಾರ್ಯರ ಪ್ರಕಾರ ಯುಗಾದಿಯ ಸೂರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆ ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ.      ಈ ರೀತಿಯಾಗಿ ಯುಗಾದಿಯು ನಾಡಿಗೆ ಮಾತ್ತವಲ್ಲದೆ, ಇಡೀ ವಿಶ್ವಕ್ಕೆ ಉಜ್ವಲತೆಯನ್ನು ಜನತೆಗೆ ಸುಖ ಶಾಂತಿಯನ್ನು ನೀಡುವ ವಜ್ರಸಮಾನ ಸಮಯ.      ಯುಗ ಯುಗಾದಿ ಕಳೆದರೂ      ಯುಗಾದಿ ಮರಳಿ ಬರುತಿದೆ      ಹೊಸವರುಷಕೆ ಹೊಸಹರುಷವ      ಹೊಸತು‌-ಹೊಸತು ತರುತಿದೆ…… ಎಂಬ ದ.ರಾ.ಬೇಂದ್ರೆ ಯವರ ಹಾಡಿನ ಸಾಲಿನಂತೆ ನಾವೆಲ್ಲರೂ ಯುಗಾದಿಯ ನಿಜ ಅರ್ಥ ಅರಿತು ಸಹಕಾರ, ಸಹಬಾಳ್ವೆಯಿಂದ ಹಬ್ಬವನ್ನು ಆಚರಿಸೋಣ. ******************************************************           ಅಕ್ಷತಾ ಜಗದೀಶ.

Read Post »

You cannot copy content of this page

Scroll to Top