ಕಾವ್ಯ ಜುಗಲ್ ಬಂದಿ ಖಾಲಿತನದ ಗಳಿಗೆಯ ಕವಿತೆಗಳು ಬದುಕಿನ ಖಾಲಿತನದ ಕುರಿತಾಗಿ ಕವಯತ್ರಿ ಶ್ರೀಮತಿ ವೀಣಾ ಪಿ. ಹಾಗೂ ಮಾಧವ ‘ತನ್ನ ಗುರುತನ್ನು ಹೊರಜಗತ್ತಿಗೆ ತೋರಿಸಿಕೊಳ್ಳಲಿಚ್ಛಿಸದ ಕವಿ’ – ಇವರಿಬ್ಬರ ಕಾವ್ಯ ಜುಗಲ್ ಬಂದಿ ಸಂಗಾತಿ ಓದುಗರಿಗಾಗಿ… ಖಾಲಿತನದ ಗಳಿಗೆಯ ಕವಿತೆಗಳು ಗಳಿಗೆ-೧ ಖಾಲಿತನ ಹ್ಞೂಂ……..!! ಖಾಲಿತನವೆಂಬುದು ಬರೀ ಭ್ರಮೆಯಷ್ಟೇ..ಒಲವು- ಚೆಲುವು-ಬೆರಗು ಭಾವಗಳ ತೇವ ಇಂಗಿದ ಮೇಲೂಹಾಯ್ವ ನೆನಪ ಮಂದಾನಿಲ ಒತ್ತುತ್ತಲಿರುವುದುಕಾಣದಂತೆಮನದ ಗಡಿಗೆಯಲ್ಲಿ.. ಖಾಲಿತನವೆಂದೆಯಲ್ಲವೇ ತೋರು ಅದೆಲ್ಲಿ…?? ವೀಣಾ ಪಿ. ಭ್ರಮೆಯ ಭಾವವೇನಲ್ಲ ನನ್ನೊಳಗಿನ ಖಾಲಿತನ ಬಿಸಿಲ ಧಗೆಗೆ ಮುದುಡಿಹೋದ ಹೂವಿನ ಒಂಟಿತನ ತೆರೆದು ತೋರಲಿದೇನು ತನುವಿನ ಮೇಲಣ ಗಾಯವೇ ಕೆದಕಿ ಕೇಳಿ ಹಸಿಗಾಯವ ಮತ್ತೆ ಬಗೆಯುವುದು ತರವೇ?? ಮಾಧವ *****(ಮುಂದುವರೆಯಲಿದೆ)*****…. ಪರಿಚಯ: ಶ್ರೀಮತಿ ವೀಣಾ ಪಿ., ಹರಿಹರ …ಇತಿಹಾಸ ಉಪನ್ಯಾಸಕಿ, ಸಂಶೋಧಕಿ, ಕವಯಿತ್ರಿ ಹಾಗೂ ಬರಹಗಾರ್ತಿಯಾಗಿದ್ದು, ಕನ್ನಡ ಸಾಹಿತ್ಯ ಹಾಗೂ ಐತಿಹಾಸಿಕ ಸಂಶೋಧನಾ ಕ್ಷೇತ್ರದಲ್ಲಿ ಅತೀವ ಆಸಕ್ತಿಯಿಂದ ತೊಡಗಿಸಿಕೊಂಡಿದ್ದು, ಇವರ ಚೊಚ್ಚಲ ಕೃತಿ “ಭಾವೋದ್ದೀಪ್ತಿ”ಯು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹ ಧನ ಯೋಜನೆಯಡಿ ಆಯ್ಕೆಗೊಂಡು ಪ್ರಕಟಗೊಂಡಿದೆ. ಬದುಕಿನಲ್ಲಿ ಭರವಸೆಗಳ ಬೆಂಬತ್ತುವಿಕೆ ಇವರ ಬರವಣಿಗೆಯ ಮೂಲ ಆಶಯವಾಗಿದೆ.
ಗಜಲ್
ಗಜಲ್ ಡಾ.ರೇಣುಕ ಅರುಣಕುಮಾರ ಕಠಾರಿ ಹಣೆ ಬರಹವೆಂದು ಕೈ ಕಟ್ಟಿ ಮಾತಿದ್ದೂ ಸುಮ್ಮನೆ ಕೂಡಬೇಕೆ ಈ ಲೋಕದೆದುರುಒಳಮನೆಯ ಹೊಸ್ತಿಲಳೊಗೆ ಮೈಲಿಗೆಂದು ಕುದಿಯಬೇಕೆ ಈ ಲೋಕದೆದುರು ಮಡಿ ಮೈಲಿಗೆಯ ಮನದೆದುರು ಬೆತ್ತಲೆ ಒಂದಾಗಿದೆ ಬದುಕುಮನಸಿಗೆ ಮೈಲಿಗೆ ಇಲ್ಲವೆಂದು ತಿಳಿದರು ದೂರವಾಗಬೇಕೆ ಈ ಲೋಕದೆದುರು ಮೂರರೊಳಗೆ ಬಂಧನ ಮೂರರೊಳಗೆ ಬೆಂದೇನಾ ಧರ್ಮದೆದುರುಹೆಣ್ಣನೇ ದೇವರು ಮಾಡಿದ ಬದುಕಿನೊಳಗೆ ಮಾತನು ಅಡವಿಡಬೇಕೆ ಈ ಲೋಕದೆದುರು ಬೆಂಕಿಗೆ ಹಾರಿದವಳೊಬ್ಬಳು ಬೆನ್ನು ಹತ್ತಿದವಳೊಬ್ಬಳು ಕಲ್ಲಾಗಿ ಕಾದವಳೊಬ್ಬಳು ಚರಿತ್ರೆಯೇ ಹೀಗೆಗಾದೆಯೊಳಗೆ ನೇಣು ಬಿಗಿದರೂ ನಮ್ಮ ಕುಲವನು ಕುರುಡಾಗಬೇಕೆ ಈ ಲೋಕದೆದುರು ‘ರೇಣು’ ಕೇಳೆ ಮುಡಿಗಳೆಲ್ಲ ಒಂದಾಗಬೇಕು ನಡೆ ನುಡಿಯೊಳಗೆ ಇಂದೇಕತ್ತಲಾದ ಬೊಗಸೆಯೊಳಗೆ ಮೈಲಿಗೆ ತೊಳೆದು ಬೆಳಕ ಬುಗ್ಗೆ ಚಿಮ್ಮಿಸಬೇಕು ಈ ಲೋಕದೆದುರು. ************************************************************
ಅಮ್ಮಾ-ನೆನಪು!
ಕವಿತೆ ಅಮ್ಮಾ-ನೆನಪು! ಹೇಮಚಂದ್ರದಾಳಗೌಡನಹಳ್ಳಿ ಸದಾ ಕಾಡುವನನ್ನೊಳಗಲಿ ಇಣುಕುವ ಕೆಡುಕನು ಸುಡುವ,,ಹೊಸ ಆಲೋಚನೆ ಯೋಜನೆಗೆ ಪ್ರೇರಿಸುವ,,ನನ್ನುಸಿರೊಳಗೆ ಬೆರೆತೇನೋ ಉಸುರುತಿರುವಂತೆ,ನಿನ್ನ ನೆನಪು…. ಸದಾ ಕಾಡುವನನ್ನನಾಗ ತಿದ್ದಿ ತೀಡಿ ನಿನ್ನ ಮೆಚ್ಚು ರೂಪ ನೀಡಿಇಂದಿಗೂ ಕನಸಾಗಿ ಬಂದು ಕೂಗಿ ಎಬ್ಬಿಸುವ..ಸರಿ ದಾರಿದೋರಿ ಮುನ್ನಡೆಸುವ ಹಂಬಲಿ..ಹಸಗಟ್ಟಿದ ಹೊಟ್ಟೆಯ ಮಾಸಲು ಬಟ್ಟೆಯಮುಗುಳುನಗುಮೊಗದ ನಿನ್ನಾ ನೆನಪು ಸದಾ ಕಾಡುವದುಡಿದು ನೀನು ದಣಿದು ನಮಗೆ ತಣಿಸಿಹಸಿವನೇ ಹೊತ್ತು ಹುಸಿನಗುವಲದನು ಮುಚ್ಚಿಖಾಲಿಮಡಕೆ ನಮಗೆ ಹಣ್ಣುಗಳನೇ ತುಂಬಿಹಣ್ಣಿನಮಡಕೆ ಸ್ಥಾನ ನೀಡಿ..ತಿನ್ನದೊಂದನೂಜೋಪಾನಿಸಿ ನಡೆದಾ..ನಿನ್ನ ನೆನಪು.. ಸದಾ ಕಾಡುವಬೇಕು ನೀನೆಂಬ ಭಾವದ ನೋವತಾಳಿಕೊಂಡಿದೆ ಜೀವ; ಮಗಳಾಗಿ ಬಂದೆಂಬ ನಚ್ಚುಅವಳಿಗೆ ನೀನಿಲ್ಲದ ನೋವು ಒತ್ತರಿಸಿ ಒಮ್ಮೊಮ್ಮೆತಾಳಿಕೆಯ ಕಟ್ಟೆಯೊಡೆದ ಹನಿಯ ಕಣ್ಣುಣ್ಣುತದೆ..ನೀ ಕಲಿಸಿದ ಪಾಟ ಮರೆತಿಲ್ಲ ‘ನುಂಗಬೇಕುನಮ್ಮೊಳಗ ನೋವ ನಾವು..ಶಾಖವದು ಕಾಯಿ ಹಣ್ಣಾಗಲು ನಮಗೆ ನೋವು..ನುಂಗತೇನೆ..ಕಾಯತದೆ ನನ್ನ ಅಮ್ಮಾನಿನ್ನ ನೆನಪು…. ***************
ನನ್ನಪ್ಪನ ಕನ್ನಡಕ
ಕವಿತೆ ನನ್ನಪ್ಪನ ಕನ್ನಡಕ ವಿಶ್ವನಾಥ ಎನ್. ನೇರಳಕಟ್ಟೆ ನನ್ನಪ್ಪ ತೊಟ್ಟ ಕನ್ನಡಕ ಕಂಡಿದೆ ಎಲ್ಲವನ್ನೂ- ಏಳ್ನೂರರ ಪಗಾರದಲ್ಲಿ ಪ್ರತಿ ತಿಂಗಳ ಕ್ಯಾಲೆಂಡರ್ ತಿರುವಿಹಾಕಿದ್ದನ್ನುತಣ್ಣೀರು ಕುಡಿದು ಹೊಟ್ಟೆ ತಂಪಾಗಿಸಿಕೊಂಡದ್ದನ್ನುಕಣ್ಣೀರು ಕಾಣದಂತೆ ನಗೆಯಾಡಿದ್ದನ್ನು ಬಾಡಿಗೆ ಮನೆಯ ಮುರುಕುಬಾಗಿಲನ್ನು ರಾತ್ರಿ ಕಾದದ್ದನ್ನುವಾರಾನ್ನದ ಬೆಳಕಲ್ಲಿ ಬಾಳುಬೆಳಗಿಸಿಕೊಂಡದ್ದನ್ನುಬಿಟ್ಟಿ ಚಾಕರಿಗೆಜೊತೆಗಾರನಾದುದನ್ನು ಮನೆಯ ಫೌಂಡೇಶನ್ನಿಗೆಬೆವರಹನಿ ಬಿದ್ದುದನ್ನುಮಕ್ಕಳನ್ನು ನೆರಳಲ್ಲಿಟ್ಟುಬಿಸಿಲಲ್ಲಿ ಶತಪಥ ಓಡಾಡಿದ್ದನ್ನು ಮಕ್ಕಳಿಗೆ ಹೊಡೆದುದನ್ನುಹೆಂಡತಿಗೆ ಬೈದುದನ್ನುಹೊದಿಕೆಯೊಳಗಿನ ಕತ್ತಲಲ್ಲಿಸದ್ದೇಳದಂತೆ ಅತ್ತುದನ್ನು ಮಾಡದ ತಪ್ಪಿಗೆಬೈಸಿಕೊಂಡದ್ದನ್ನುಮರ್ಯಾದೆಗೆ ಅಳುಕಿತೆಪ್ಪಗಿದ್ದುದನ್ನುಬಿಗಿಗೊಂಡ ಮುಷ್ಟಿಸಡಿಲವಾದದ್ದನ್ನು *********************************
ಸಾಕು ಪ್ರಾಣಿಗಳು
ಮಕ್ಕಳ ಕಥೆ ಸಾಕು ಪ್ರಾಣಿಗಳು ಡಾ. ಗುರುಸಿದ್ಧಯ್ಯಾ ಸ್ವಾಮಿ “ಅಪ್ಪ, ನಾನು ನಾಳೆಯಿಂದ ಶಾಲೆಗೆ ಹೋಗುವುದಿಲ್ಲ….” ಎಂದು ಅನಿಕೇತ ಒಂದು ಮೂಲೆಯಲ್ಲಿ ಹೋಗಿ ಕುಳಿತು ಬಿಟ್ಟ.“ಯಾಕೆ ಮರಿ, ಏನಾಯಿತು?” ಎಂದು ಪ್ರಕಾಶ ಅವರು ಅನಿಕೇತನನ್ನು ತಮ್ಮ ಬಳಿ ಕರೆದುಕೊಂಡು ಒಂದು ಮುತ್ತು ಕೊಟ್ಟು ತಲೆ ನೇವರಿಸುತ್ತ ಕೇಳಿದರು.“ಅಪ್ಪ, ಇಂದು ನಮ್ಮ ಶಿಕ್ಷಕರು ನಾನು ಸರಿಯಾಗಿ ಬರೆದ ಉತ್ತರಕ್ಕೆ ಸೊನ್ನೆ ಗುಣ ಕೊಟ್ಟಿದ್ದಾರೆ.”“ಹೌದಾ…? ಯಾವ ಪ್ರಶ್ನೆ ಅದು?”“ಸಾಕು ಪ್ರಾಣಿಗಳ ಹೆಸರು ಬರೆಯಿರಿ ಎಂಬ ಪ್ರಶ್ನೆ ಇತ್ತು.”“ಸರಿ, ಅದಕ್ಕೆ ನೀ ಬರೆದ ಹೆಸರುಗಳು ಯಾವುವು?”“ಅದಕ್ಕೆ ನಾನು, ಆಕಳು, ಎಮ್ಮೆ, ಬೆಕ್ಕು, ನಾಯಿ, ಹುಲಿ, ಹಾವು ಇತ್ಯಾದಿ ಹೆಸರುಗಳನ್ನು ಬರೆದಿದ್ದೆ.”“ಓ ಹೌದಾ, ಸರಿ ನಾನು ನಾಳೆ ಶಾಲೆಗೆ ಬಂದು ನಿಮ್ಮ ಶಿಕ್ಷಕರ ಜೊತೆ ಮಾತನಾಡುವೆ.”ಅಪ್ಪ ತನ್ನ ಪರವಾಗಿ ಮಾತನಾಡಿದ್ದಕ್ಕೆ ಅನಿಕೇತನಿಗೆ ಎಲ್ಲಿಲ್ಲದ ಖುಷಿ. ಸ್ವರ್ಗ ಮೂರೇ ಗೇಣು. ಮರುದಿನ ಅನಿಕೇತನ ಜೊತೆ ಪ್ರಕಾಶ ಅವರೂ ಕೂಡ ಶಾಲೆಗೆ ಹೋದರು. ಪ್ರಕಾಶ ಆಮಟೆಯವರು ವರ್ಗಕೋಣೆಯಲ್ಲಿ ಬರುತ್ತಿರುವುದನ್ನು ನೋಡಿ ಶಿಕ್ಷಕರು ಎದ್ದು ನಿಂತು “ಬನ್ನಿ ಸರ್, ಬನ್ನಿ ಬನ್ನಿ” ಎಂದು ಸ್ವಾಗತಿಸಿದರು.“ನಮಸ್ಕಾರ ಸರ್, ಹೇಗಿದಿರಿ?” ಎಂದು ಮುಗುಳ್ನಗೆ ಬೀರುತ್ತ ಪ್ರಕಾಶ ಅವರು ಶಿಕ್ಷಕರಿಗೆ ಕುಳಿತುಕೊಳ್ಳಲು ಹೇಳಿ ತಾವೂ ಅವರ ಪಕ್ಕದ ಚೇಅರನಲ್ಲಿ ಕುಳಿತರು.“ಸರ್, ನಿಮ್ಮ ಒಪ್ಪಿಗೆ ಇದ್ದರೆ ನಿನ್ನೆ ನಡೆದ ಪರೀಕ್ಷೆಯ ಬಗ್ಗೆ ಸ್ವಲ್ಪ ಚರ್ಚೆ ಮಾಡಬಯಸುತ್ತೇನೆ.” ಎಂದರು ಪ್ರಕಾಶ.“ಅಯ್ಯೋ, ದೊಡ್ಡ ಮಾತು. ನೀವು ತುಂಬ ದೊಡ್ಡವರು. ನಿಮ್ಮ ಅಭಿಪ್ರಾಯ ನೇರವಾಗಿ ಹೇಳಿ.” ಶಿಕ್ಷಕರು ಅಂದರು.“ನಿನ್ನೆ ನಡೆದ ಪರೀಕ್ಷೆಯಲ್ಲಿ ಸಾಕು ಪ್ರಾಣಿಗಳ ಹೆಸರುಗಳನ್ನು ಬರೆಯುವ ಪ್ರಶ್ನೆಯ ಬಗ್ಗೆ ಸ್ವಲ್ಪ ಮಾತನಾಡುವೆ ಸರ್. ನಮ್ಮ ಆಶ್ರಮದಲ್ಲಿ ಹುಲಿ, ಹಾವು ಮುಂತಾದ ಅನೇಕ ಕಾಡು ಪ್ರಾಣಿಗಳನ್ನು ಸಾಕಿರುವ ವಿಷಯ ನಿಮಗೂ ಗೊತ್ತಿದೆ. ಅವು ಕಾಡುಪ್ರಾಣಿಗಳು ಎಂಬುದು ನಮಗೆ ಮತ್ತು ನಿಮಗೆ ಗೊತ್ತಿದೆ. ಆದರೆ ನಮ್ಮ ಆಶ್ರಮದಲ್ಲಿ ಸಾಕು ಪ್ರಾಣಿಗಳ ಜೊತೆ ಕೆಲವು ಕಾಡು ಪ್ರಾಣಿಗಳನ್ನೂ ಸಾಕಿದ್ದೇವೆ. ಹೀಗಾಗಿ ಅನಿಕೇತ ಸಾಕು ಪ್ರಾಣಿಗಳ ಪಟ್ಟಿಯಲ್ಲಿ ಅವುಗಳ ಹೆಸರುಗಳನ್ನು ಬರೆದಿದ್ದಾನೆ. ಇದರಲ್ಲಿ ಅವನ ತಪ್ಪು ಏನೂ ಇಲ್ಲ. ಅವನ ಉತ್ತರಕ್ಕೆ ನೀವು ಗುಣ ಕೊಟ್ಟಿಲ್ಲ. ನೀವು ನಿಮ್ಮ ಕರ್ತವ್ಯವನ್ನು ಸರಿಯಾಗಿಯೇ ಮಾಡಿರುವಿರಿ. ಆದರೆ ಇದೊಂದು ಸಲ ಅವನ ಅನುಭವ ವಿಶ್ವಕ್ಕೂ ಸ್ವಲ್ಪ ಗೌರವ ಕೊಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಮುಂದೆ ದೊಡ್ಡವನಾದ ಮೇಲೆ ಅವನು ಇವೆಲ್ಲವುಗಳ ಬಗ್ಗೆ ವಿವರವಾಗಿ ತಾನಾಗಿಯೇ ತಿಳಿದುಕೊಳ್ಳುತ್ತಾನೆ.ನಿಮ್ಮ ಹೆಚ್ಚು ಸಮಯ ನಾನು ತೆಗೆದುಕೊಳ್ಳುವುದಿಲ್ಲ. ಬರುತ್ತೇನೆ, ನಮಸ್ಕಾರ” ಎಂದು ಪ್ರಕಾಶ ಹೊರಟೇ ಬಿಟ್ಟರು. ಕೈ ಮುಗಿದು ಎದ್ದು ನಿಂತ ಶಿಕ್ಷಕರು ಪ್ರಕಾಶ ಅವರು ನಡೆದು ಹೋದ ಮಾರ್ಗವನ್ನೇ ರೆಪ್ಪೆ ಬಡಿಯದೆ ನೋಡುತ್ತಿದ್ದರು. ****************




