ಒಲವ ಸ್ಪರ್ಶ
ಮಳೆಸುರಿದ ಮುಗಿಲು
ನಿನ್ನೊಲವ ನವಿಲು
ಸಾಕ್ಷಿ ನುಡಿಯಲು ಕಾಯುತ್ತಾ ಕುಳಿತ ಮುದುಕಿ
ಕೋರ್ಟಿನಂಗಳದ ಕಸಗುಡಿಸುವಾಗ…
ಥಟ್ಟನೆ ನೆನಪಾಗುತ್ತಾಳೆ ಅವ್ವ.
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ ಸಾಧ್ಯವಾದಷ್ಟೂ ಸಿದ್ಧತೆ ಮಾಡಿಕೊಂಡಿದ್ದೆ. ಪತ್ನಿ ನಿರ್ಮಲಾ ಮೊದಲ ಹೆರಿಗೆಗಾಗಿ ತವರೂರು ಹುಬ್ಬಳ್ಳಿಗೆ ಹೋಗಿದ್ದಳು. ನಮ್ಮೂರು ಮಾಸ್ಕೇರಿಗೆ ಹೊರಟು ಅಲ್ಲಿನ ನನ್ನ ಯಕ್ಷಗಾನ ಪ್ರೇಮಿಗಳಾದ ಬಾಲ್ಯದ ಗೆಳೆಯರನ್ನು ಕೂಡಿಕೊಂಡು ಆಟಕ್ಕೆ ಹೋಗಲು ನಿರ್ಧರಿಸಿ ಊರಿಗೆ ಬಂದೆ. ಹೇಗೂ ಎರಡನೆಯ ಪ್ರಸಂಗದಲ್ಲಿ ನನ್ನ ಪಾತ್ರವಿದೆ. ಅವಸರವೇನೂ ಇಲ್ಲವೆಂದು ರಾತ್ರಿಯ ಊಟ ಮನೆಯಲ್ಲೇ ಮುಗಿಸಿ ಗೋಕರ್ಣ ಬಸ್ಸು ಹಿಡಿದು ಗೆಳೆಯರೊಂದಿಗೆ ಹೊರಟೆ. ಅದಾಗಲೇ ನುರಿತ ಭಾಗವತನೂ ಆಗಿದ್ದ ಕೃಷ್ಣ ಮಾಸ್ಕೇರಿ, ಮಾಸ್ತರಿಕೆಯೊಂದಿಗೆ ‘ಚಿನ್ನದ ಪೆಟ್ಟಿಗೆ’ಯ ಸಣ್ಣ ವ್ಯವಹಾರ ಆರಂಭಿಸಿದ್ದ ಭಾವ ಹೊನ್ನಪ್ಪ ಮಾಸ್ತರ, ನನ್ನ ಸಹೋದರ ಶಿಕ್ಷಕ ನಾಗೇಶ ಗುಂದಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಎನ್.ಬಿ.ಗಣಪತಿ, ನಿರಕ್ಷರಿ ಗೆಳೆಯ ನಾರಾಯಣ ಮತ್ತು ನಮ್ಮ ದಾಯಾದಿ ಚಿಕ್ಕಪ್ಪ ನಾರಾಯಣ ಎಂಬ ಹಿರಿಯರು ಸೇರಿ ಆಟಕ್ಕೆ ಹೊರಟೆವು. ನಾವು ಗೋಕರ್ಣದಿಂದ ತದಡಿ ಎಂಬ ಊರಿಗೆ ಇನ್ನೊಂದು ಬಸ್ಸಿನಲ್ಲಿ ಪ್ರಯಾಣಿಸಿ ಅಲ್ಲಿಂದ ಅಘನಾಶಿನಿ ನದಿಯನ್ನು ನಾವೆಯ ಮೂಲಕ ದಾಟಿ ಆಚೆ ದಂಡೆಯ ಮೇಲಿರುವ ಮಿರ್ಜಾನ ಎಂಬ ಊರು ಸೇರಬೇಕಿತ್ತು. ಆದರೆ ನಾವು ತದಡಿಗೆ ಬಂದಿಳಿಯುವಾಗ ರಾತ್ರಿ ಒಂಭತ್ತರ ಮೇಲಾಗಿತ್ತು. ಅಷ್ಟು ಹೊತ್ತಿಗೆ ಪ್ರಯಾಣಿಕರನ್ನು ಅಘನಾಶಿನಿ ನದಿ ದಾಟಿಸುವ ಮಶಿನ್ ಬೋಟ್ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು. ಹೇಗಾದರೂ ನಮ್ಮನ್ನು ನದಿ ದಾಟಿಸಲು ವಿನಂತಿಸೋಣವೆಂದರೆ ಮಶಿನ್ ಬೋಟ್ ಆಚೆ ದಡವನ್ನು ಸೇರಿ ಲಂಗರು ಹಾಕಿತ್ತು. ನದಿ ಸಮುದ್ರ ಸೇರುವ ಸ್ಥಳವಾದುದರಿಂದ ನದಿಯ ವಿಸ್ತಾರವೂ ಅಧಿಕವಾಗಿತ್ತು. ನಾವು ಧ್ವನಿಗೈದು ಕರೆದರೂ ಕೇಳುವ ಸ್ಥಿತಿ ಇರಲಿಲ್ಲ. ಇನ್ನು ನಮಗಿರುವ ದಾರಿಯೆಂದರೆ ಮರಳಿ ಹೊರಟು ಸಾಣಿಕಟ್ಟಾ, ಮಾದನಗೇರಿ, ಹಿರೇಗುತ್ತಿ ಮೊದಲಾದ ಊರುಗಳನ್ನು ಸುತ್ತಿ ಮಿರ್ಜಾನ್ ಸೇರುವುದು. ಇದು ಬಹಳ ಸುತ್ತಿನ ದಾರಿ ಮಾತ್ರವಲ್ಲದೆ ನಮಗೆ ಸಕಾಲದಲ್ಲಿ ವಾಹನಗಳು ದೊರೆಯುವುದೂ ದುಸ್ತರವಾದ ಸಮಯ. ನಾವು ಯೋಚನೆಗೆ ಒಳಗಾದೆವು. ಉಳಿದವರ ಮಾತು ಅಂತಿರಲಿ ನಾನು ಆಟವನ್ನು ತಪ್ಪಿಸಿಕೊಳ್ಳುವಂತೆಯೇ ಇರಲಿಲ್ಲ. ಯಾವ ಸಬೂಬು ಹೇಳಿದರೂ ಹಣಕೊಟ್ಟು ಬಂದ ಪ್ರೇಕ್ಷಕರು ತಗಾದೆ ಮಾಡದೇ ಇರುವುದಿಲ್ಲ. ಸಂಘಟಕರಿಗೆ ಇದು ತುಂಬಾ ತೊಂದರೆಗೆ ಈಡು ಮಾಡುತ್ತದೆ. ಹಾಗಾಗಿ ನನಗೆ ಆಟಕ್ಕೆ ಹೋಗಲೇಬೇಕಾದ ಅನಿವಾರ್ಯತೆ ಇದೆ. ನಾವು ದಿಕ್ಕುಗಾಣದವರಂತೆ ಯೋಚಿಸುತ್ತ ನಿಂತಿರುವಾಗ ಆಪತ್ದ್ಭಾಂದವನಂತೆ ನಾವಿಕನೊಬ್ಬ ನಮ್ಮ ಬಳಿಗೆ ಬಂದ. ಯುವಕನಂತೆ ಕಾಣುವ ಆತ ನಮ್ಮ ಸಮಸ್ಯೆಯನ್ನು ಕೇಳಿ ತಾನು ನದಿ ದಾಟಿಸುವ ಭರವಸೆ ನೀಡಿದ. ಕೊಡಬೇಕಾದ ಹಣಕಾಸಿನ ತೀರ್ಮಾನವಾದ ಬಳಿಕ ಸಮೀಪದಲ್ಲಿಯೇ ಬೇಲೆಯ ಮೇಲೆ ಎಳೆದು ಹಾಕಿದ ಒಂದು ಚಿಕ್ಕ ದೋಣಿಯನ್ನು ನೀರಿಗೆಳೆದು ನಮ್ಮ ಬಳಿಗೆ ತಂದು ನಿಲ್ಲಿಸಿದ. ಆಗಲೇ ನಾವು ಏಳು ಜನರಿದ್ದೆವು. ನಾವಿಕನೂ ಸೇರಿ ಎಂಟು ಜನ ಈ ದೋಣಿಯಲ್ಲಿ ಪ್ರಯಾಣಿಸುವುದು ಕಷ್ಟವೆನ್ನಿಸಿತು. ಆ ಪುಟ್ಟ ದೋಣಿಯಲ್ಲಿ ಒತ್ತಾಗಿ ಕುಳಿತು ನೋಡಿದೆವು. ನಮ್ಮ ದಾಯಾದಿ ಚಿಕ್ಕಪ್ಪ ಮತ್ತು ನಾರಾಯಣ ದೋಣಿಗೆ ಭಾರವಾಗುವುದೆಂದೇ ನಿರ್ಧರಿಸಿ ತಮ್ಮ ಆಟ ನೋಡುವ ಆಸೆಗೆ ತಿಲಾಂಜಲಿ ಇಟ್ಟು ಹಿಂದೆ ಸರಿದರು. ನಾವಿಕನೂ ಸೇರಿದಂತೆ ಆರು ಜನ ಪ್ರಯಾಣ ಹೊರಟೆವು. ಬೆಳದಿಂಗಳು ಹರಡಿ ವಿಸ್ತಾರವಾದ ನದಿಯ ಹರಹನ್ನೂ ತೆರೆಯ ಏರಿಳಿತದ ಭಯಾನಕತೆಯನ್ನು ಕಣ್ಣಿಗೆ ರಾಚುವಂತೆ ಪ್ರದರ್ಶಿಸುತಿತ್ತು. ನಾವಿಕನನ್ನು ಹೊರತುಪಡಿಸಿ ನಾವೆಲ್ಲ ಜೀವ ಕೈಯಲ್ಲಿ ಹಿಡಿದು ಕುಕ್ಕುರುಗಾಲಿನಲ್ಲಿ ಕುಳಿತುಕೊಂಡಿದ್ದೆವು….. ಪಶ್ಚಿಮಕ್ಕೆ ಹೊರಳಿ ನೋಡಿದರೆ ತೀರ ಸನಿಹದಲ್ಲೇ ಭೋರ್ಗರೆಯುವ ಕಡಲು….. ಉತ್ತರ ದಿಕ್ಕಿನಿಂದ ವಿಶಾಲವಾಗಿ ತೆರೆಯನ್ನೆಬ್ಬಿಸುತ್ತ “ಇನ್ನೇನು ಬಂದೇ ಬಿಟ್ಟಿತು ನನ್ನಿನಿಯನ ಅರಮನೆ………” ಎಂಬ ಸಂಭ್ರಮದಲ್ಲಿ ಧಾವಿಸುವ ಅಘನಾಶಿನಿಯ ಪ್ರವಾಹ………..! ನಾವೆಯು ನದಿಯ ಅರ್ಧಭಾಗವನ್ನು ಕ್ರಮಿಸಿರಬಹುದು. ನಮ್ಮ ಅರಿವಿಗೇ ಬಾರದಂತೆ ನಾವೆಯಲ್ಲಿ ನೀರು ತುಂಬುತ್ತಿರುವುದು ನಮ್ಮ ಗಮನಕ್ಕೆ ಬಂದಿತು! ನಾವೆಯ ತಳದಲ್ಲಿ ಸಣ್ಣ ಸಣ್ಣ ರಂಧ್ರಗಳಿರುವುದು ನೀರು ಉಕ್ಕಿ ಬರುವುದನ್ನು ನೋಡಿದಾಗಲೇ ನಮ್ಮ ಗಮನಕ್ಕೆ ಬಂದಿತು. ನಮ್ಮೆಲ್ಲರ ಎದೆಗೂಡಿನಲ್ಲಿ ಅಳಿದುಳಿದ ಧೈರ್ಯವೂ ಒಮ್ಮಿಂದೊಮ್ಮೆಲೇ ಸೋಸಿ ಹೋದಂತೆ ಕಳವಳಗೊಂಡೆವು. ಕ್ಷಣಕ್ಷಣಕ್ಕೂ ನಾವೆಯಲ್ಲಿ ನೀರು ತುಂಬುವುದನ್ನು ಕಂಡಾಗ ನಮ್ಮೆಲ್ಲರ ಜಂಘಾಬಲವೇ ಉಡುಗಿ ಹೋಯಿತು. ತುಂಬಾ ಗಾಬರಿಗೊಂಡಿದ್ದ ಭಾವ ಹೊನ್ನಪ್ಪ ಮಾಸ್ತರ ಮತ್ತು ಗೆಳೆಯ ಗಣಪತಿ ಅಂಜಿಕೆಯನ್ನು ತೋರಗೊಡದೆ ದೋಣೆಯಲ್ಲಿ ತುಂಬಿದ ನೀರನ್ನು ಬೊಗಸೆಯಲ್ಲಿ ಎತ್ತಿ ನದಿಗೆ ಚೆಲ್ಲುತ್ತಿದ್ದರು. ಸಹೋದರ ನಾಗೇಶ ಮಾತೇ ಬಾರದವನಂತೆ ಕುಳಿತಿದ್ದ. ಕೃಷ್ಣ ಭಾಗವತರು ಮಾತ್ರ “ಏನೂ ಆಗುವುದಿಲ್ಲ ಹೆದ್ರಬೇಡಿ” ಎಂದು ಸುಳ್ಳು ಸಾಂತ್ವನ ಹೇಳುತ್ತಿದ್ದರು. ನನಗೆ ಆಚೆ ಕುಣಿಯಬೇಕಿದ್ದ ದುರ್ಯೋಧನ, ಚೊಚ್ಚಿಲ ಹೆರಿಗೆಯ ಸಂಭ್ರಮದಲ್ಲಿ ಹುಬ್ಬಳ್ಳಿಯ ತೌರುಮನೆಯಲ್ಲಿರುವ ಪತ್ನಿ ನಿರ್ಮಲಾ, “ಕೌರವ ಜೋರಾಗ್ಲಿ ಹಾಂ……” ಎಂದು ಹರೆಸಿ ಕಳಿಸಿದ ಅವ್ವ, ಮುಗುಳ್ನಕ್ಕು ಅನುಮೋದಿಸಿದ ಅಪ್ಪ, ಮನೆಯಲ್ಲಿ ಉಳಿದ ತಮ್ಮ-ತಂಗಿಯರೆಲ್ಲ ಸಾಲು ಸಾಲಾಗಿ ನೆನಪಾಗತೊಡಗಿದರು…… ನಾವಿಕ ಮಾತ್ರ ಒಂದೂ ಮಾತನಾಡದೇ ಜೋರಾಗಿ ಹುಟ್ಟು ಹಾಕುವ ಕಾಯಕದಲ್ಲೇ ನಿರತನಾಗಿದ್ದ. “ದೋಣಿಗೆ ತೂತು ಬಿದ್ದದ್ದು ನಿನಗೆ ಗೊತ್ತಿಲ್ವಾಗಿತ್ತೇನೋ?” ಎಂದು ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸುವ ಸೌಜನ್ಯವನ್ನೂ ತೋರಲಿಲ್ಲ. ನದಿಯ ಅರ್ಧಕ್ಕಿಂತ ಹೆಚ್ಚು ಭಾಗ ಕ್ರಮಿಸಿದ್ದೆವು. ಮರಳಿ ಹಿಂದೆ ಸಾಗುವ ಪ್ರಶ್ನೆಯೇ ಇಲ್ಲ. ಇನ್ನೂ ಅರ್ಧದಷ್ಟು ನದಿಯನ್ನು ದಾಟಬೇಕಿದೆ. ಸುಲಭದ ಮಾತಲ್ಲ. ಸಂಕಷ್ಟಕ್ಕೆ ನಾವೆಲ್ಲ ಮುಖಾಮುಖಿಯಾಗಿರುವುದು ಸ್ಪಷ್ಟವಾಗಿತ್ತು. ಅಂಜತ್ತಲೇ ಹೊರಳಿ ನೋಡಿದೆ. ಸಮುದ್ರದ ಮೀನುಗಾರಿಕೆಗೆ ಹೊರಟು ಬಂದು ದಂಡೆಯ ಕೊಂಚ ದೂರ ಲಂಗರು ಹಾಕಿ ನಿಂತಿರುವ ಮರ್ನಾಲ್ಕು ಬೋಟುಗಳು ಮಸುಕು ಮಸುಕಾಗಿ ಕಾಣಿಸಿದವು. ದಂಡೆಯನ್ನಂತೂ ಸುರಕ್ಷಿತ ತಲುಪುವುದು ಅಸಾಧ್ಯ. ನಡುವೆಯೇ ನಿಂತ ಬೋಟುಗಳನ್ನಾದರೂ ಮುಟ್ಟಬಹುದೇನೋ ಎಂಬ ಯೋಚನೆ ಬಂದದ್ದೇ ನಾವಿಕನಿಗೆ ಸೂಚನೆ ನೀಡಿದೆ, ಎಲ್ಲರೂ ಬೋಟುಗಳನ್ನು ಗಮನಿಸಿದರು. ನಾವಿಕನೂ ಅತ್ತ ಹೊರಳಿಸಿ ದೋಣಿಯನ್ನು ಮುನ್ನಡೆಸತೊಡಗಿದ. ತುಂಬಿದ ನೀರನ್ನು ಮೊಗೆದು ಹಾಕುವ ಕಾಯಕವನ್ನು ಗೆಳೆಯರು ಮುಂದುವರಿಸಿದ್ದರು. ಮಸುಕು ಮಸುಕಾಗಿ ಕಾಣಿಸುತ್ತಿದ್ದ ಬೋಟುಗಳು ಸಮೀಪಿಸುತ್ತಿದ್ದಂತೆ ಸ್ಪಷ್ಟವಾಗತೊಡಗಿದವು. ತೀರ ಸನಿಹಕ್ಕೆ ಬಂದಾಗ ಲಂಗರು ಇಳಿಬಿಟ್ಟ ಹಗ್ಗವನ್ನು ಯಾರೋ ಕೈಚಾಚಿ ಹಿಡಿದುಕೊಂಡ ಕ್ಷಣದಲ್ಲಿ ಎಲ್ಲರೂ ಹೋದ ಜೀವ ಬಂದಂತೆ ಹಗುರಾದೆವು. ಕಷ್ಟಪಟ್ಟು ಹಗ್ಗದೊಡನೆ ಸರ್ಕಸ್ಸು ಮಾಡದೇ ವಿಧಿ ಇರಲಿಲ್ಲ. ನಾವೆಲ್ಲ ಬೋಟುಗಳನ್ನು ಸೇರಿದ ಬಳಿಕ ನಾವಿಕ ಆಚೆ ದಂಡೆಗೆ ಕೂಗು ಹಾಕಿ ಅಲ್ಲಿರುವ ನಾವಿಕರನ್ನು ಕರೆದ. ಯಾರೋ ಪುಣ್ಯಾತ್ಮರು ನಮ್ಮ ಸಂಕಷ್ಟವನ್ನು ತಿಳಿದು ಕನಿಕರ ತೋರಿ ಬೇರೆ ನಾವೆಯನ್ನು ತಂದು ನಮ್ಮನ್ನು ಆಚೆ ದಡಕ್ಕೆ ಮುಟ್ಟಿಸಿದರು. ನಮ್ಮನ್ನು ಕರೆದು ತಂದ ನಾವಿಕ ಮಾತ್ರ ತನ್ನ ನಾವೆಯನ್ನು ತನ್ನ ಪಾಡಿಗೆ ಬಿಟ್ಟು ನಮ್ಮೊಡನೆ ಆಟದ ಡೇರೆಯತ್ತ ಹೊರಟಾಗ ಯಾರೋ ಆತನನ್ನು ಪ್ರಶ್ನಿಸಿದರು. “ಹೌದು…….ಎಲ್ಲಿ ಕಟ್ಟ ಹಾಕಿ ಬಂದ್ಯೋ ಇಲ್ವೋ ನಿನ್ನ ದೋಣಿಯ……….. ಅದರ ತಳಕ್ಕೆ ತೂತು ಇರೋದು ಗೊತ್ತಿದ್ರೂ ನಮ್ಮ ಕರಕೊಂಬಂದ್ಯಲ್ಲ ಮಾರಾಯ….” ಎಂದು ಬೇಸರ ತೋಡಿಕೊಂಡರು. ಆತ ಅತ್ಯಂತ ನಿರ್ಭಾವುಕನಾಗಿ “ನಂಗೇನ ಗೊತ್ತಿತ್ರಾ…… ಅದು ನನ್ನ ದೋಣಿ ಅಲ್ಲ…….. ನಿಮ್ಮಂಗೇ ನಾನು ಆಟ ನೋಡುಕ ಬಂದವ…….” ಎಂದು ಉತ್ತರಿಸಿದಾಗ ನಮಗೆಲ್ಲ ಮತ್ತೊಮ್ಮೆ ನೀರಿಗೆ ಬಿದ್ದು ಮುಳುಗಿಯೇ ಹೋದಂಥ ಅನುಭವವಾಯಿತು! ನಡೆದ ಎಲ್ಲ ವಿದ್ಯಮಾನಗಳಿಂದ ಗೊಂದಲಗೊಂಡಿದ್ದ ನಾನು ಈ ಎಲ್ಲ ಅಧ್ವಾನಗಳನ್ನು ಮನಸ್ಸಿನಿಂದ ತೊಡೆದು ಹಾಕಿ ಪಾತ್ರದ ಕುರಿತು ಯೋಚಿಸತೊಡಗಿದೆ. ಸಂಪೂರ್ಣ ತನ್ಮಯನಾಗಿ ಪಾತ್ರ ನಿರ್ವಹಿಸಿದೆ. ಪ್ರದರ್ಶನ ಯಶಸ್ವಿಯಾಯಿತು. ಪ್ರೇಕ್ಷಕರ ಚಪ್ಪಾಳೆ, ಸಿಳ್ಳೆಗಳ ಪ್ರತಿಕ್ರಿಯೆಯಿಂದ ನಾನು ಯಶಸ್ವಿಯಾದೆ ಎಂಬ ಸಮಾಧಾನವಾಯಿತು. ಸಹ ಕಲಾವಿದರೂ ಮುಕ್ತ ಮನಸ್ಸಿನಿಂದ ಪ್ರಸಂಶೆಯ ಮಾತನಾಡಿದರು. ಪಾತ್ರ ಮುಗಿಸಿ ಒಳಗೆ ಬಂದಾಗಲೂ ಚೌಕಿ ಮನೆಗೆ ಬಂದ ಅನೇಕ ಸಹೃದಯರು ಮೆಚ್ಚುಗೆಯ ಮಾತನಾಡಿ ಅಭಿನಂದಿಸಿದರು. ನಾನು ಹೆಮ್ಮೆಯಿಂದ ಬೀಗಿದೆ! ಆದರೆ ಮರುಕ್ಷಣವೇ ತನ್ನ ವೇಷ ಕಳಚುತ್ತಿದ್ದ ಧರ್ಮರಾಯನ ಪಾತ್ರಧಾರಿ ನನ್ನನ್ನು ಉದ್ದೇಶಿಸಿ, “ನೀವು ಹಾಗೆಲ್ಲ ಮಾತಾಡಬಾರದ್ರಿ……….ಎದುರು ಪಾತ್ರಗಳನ್ನು ಗೌರವಿಸಿ ಮಾತನಾಡಬೇಕು……ಇದು ಒಳ್ಳೆ ಕಲಾವಿದರ ಲಕ್ಷಣವಲ್ಲ……” ಎಂದು ಕಟುವಾಗಿ ಮಾತಾಡಿದ. ಪಾತ್ರ ಯಶಸ್ವಿಯಾಯಿತೆಂದು ಉಬ್ಬಿಹೋದ ನಾನು ಗಾಳಿ ಬಿಟ್ಟ ಬಲೂನಿನಂತೆ ಒಮ್ಮೆಯೇ ಕುಸಿದು ಹೋದೆ. “ಏನು ತಪ್ಪಾಯಿತು?” ಎಂದೆ. “ನಾನು ದೇವಸ್ಥಾನಗಳಲ್ಲಿ ಪೂಜೆ ಮಾಡುವುದಕ್ಕೇ ಯೋಗ್ಯ ಎಂದು ಹಂಗಿಸಿದರಲ್ಲ? ಅದು ಸರಿಯಲ್ಲ” ಎಂದು ಉತ್ತರಿಸಿದ. ನನಗೆ ಏನು? ಏತ್ತ? ಎಂಬುದೇ ತಿಳಿಯದೇ ಗೊಂದಲಗೊಂಡೆ. ಅಷ್ಟೂ ಜನರ ಮುಂದೆ ಅವನ ನಿಷ್ಠುರವಾದ ನುಡಿಗಳು ನನ್ನನ್ನು ಸಿಗ್ಗಾಗಿಸಿದವು. ನಡೆದದ್ದು ಇಷ್ಟೆ.. ಪಾಂಡವರೈವರನ್ನೂ ಒಂದೊಂದು ಬಗೆಯಿಂದ ನಿಂದಿಸಿ ಅವರ ದೌರ್ಬಲ್ಯವನ್ನು ಎತ್ತಿ ಹೇಳುವುದು ದುರ್ಯೋಧನನ ಪಾತ್ರಕ್ಕೆ ಪೂರಕವಾದದ್ದೇ. ಹಾಗೆಯೇ ವಿರಾಟ ನಗರಿಯಲ್ಲಿ ಪೂಜಾರಿಯಾಗಿ ವೇಷ ಮರೆಸಿಕೊಂಡಿದ್ದ ಧರ್ಮರಾಯನ ಮೋಸವನ್ನು ಎತ್ತಿ ಹೇಳಿ ಸಹಜವಾಗಿ ನಾನು ಕೆಣಕಿದ್ದೆ. ಇದರಲ್ಲಿ ಪಾತ್ರಪೋಷಣೆಯಲ್ಲದೆ ನನಗೆ ಬೇರೆ ದುರುದ್ದೇಶವಿರಲಿಲ್ಲ. ಆದರೆ ಧರ್ಮರಾಯ ಪಾತ್ರಧಾರಿ ಇಷ್ಟೊಂದು ಮನಸ್ಸಿಗೆ ಹಚ್ಚಿಕೊಳ್ಳಲು ಕಾರಣವೇನೆಂದು ಸಹಕಲಾವಿದರು ನನಗೆ ತಿಳಿಸಿ ಹೇಳಿದಾಗಲೇ ನನಗೆ ನನ್ನ ತಪ್ಪಿನ ಅರಿವಾಯಿತು……….. ಧರ್ಮರಾಯನ ಪಾತ್ರ ಮಾಡಿದವರು ಬೀರಪ್ಪ ಗುನಗ ಎಂಬುವವರು. ಅವರು ವೃತ್ತಿಯಿಂದ ಗ್ರಾಮ ದೇವತೆಯ ಪೂಜಾರಿಯಂತೆ. ನನಗೆ ಇದು ಗೊತ್ತಿರಲಿಲ್ಲ. ತನ್ನ ವೃತ್ತಿಯನ್ನೇ ಉಲ್ಲೇಖಿಸಿ ಮಾತನಾಡಿದುದ್ದಕ್ಕೆ ಆತ ಬೇಸರಗೊಂಡಿದ್ದ ಎಂಬುದು ನಂತರ ತಿಳಿಯಿತು. ನಾನು ವೇಷ ಕಳಚಿದ ಬಳಿಕ ಆತನಿಗೆ ವಾಸ್ತವವನ್ನು ವಿವರಿಸಿ ಸಾಂತ್ವನ ಹೇಳಿದೆ. ಆತ ಸಮಾಧಾನಗೊಂಡ. ಮಾತ್ರವಲ್ಲದೆ ಬೀರಪ್ಪ ಗುನಗ ಉತ್ತಮ ಪ್ರಸಾದನ ಕಲಾವಿದನೂ ಆದುದರಿಂದ ಮುಂದಿನ ದಿನಗಳಲ್ಲಿ ಹಲವು ಯಕ್ಷಗಾನ ಪ್ರದರ್ಶನಗಳಲ್ಲಿ ನನಗೆ ಮೇಕಪ್ ಮಾಡಿ ಪಾತ್ರವನ್ನು ರೂಪಿಸಿ ನೆರವಾಗಿದ್ದಾನೆ. ಆಗೆಲ್ಲ ತದಡಿಯ ಅಂದಿನ ಘಟನೆಯನ್ನು ಸ್ಮರಿಸಿಕೊಂಡು ನಾವು ನಕ್ಕು ಹಗುರಾಗುತ್ತಿದ್ದೆವು. ಹಗಲು ನಿದ್ದೆ ಮುಗಿಸಿ ನಾಳೆ ಕಾಲೇಜು ಉಪನ್ಯಾಸಕ್ಕೆ ಸಜ್ಜುಗೊಳ್ಳುವ ಅನಿವಾರ್ಯತೆಯಿಂದ ನಾನು ಊರಿಗೆ ಹೋಗದೆ ಗೆಳೆಯರಿಂದ ಬೀಳ್ಕೊಂಡು ಅಂಕೋಲೆಯ ಬಸ್ಸು ಹಿಡಿದೆ. ಮಧ್ಯಾಹ್ನದ ನಾಲ್ಕು ಗಂಟೆಯ ಹೊತ್ತಿಗೆ ನಾನು ಗಾಢ ನಿದ್ದೆಯಲ್ಲಿರುವಾಗ ಟೆಲಿಗ್ರಾಮ ಸಂದೇಶವೊಂದು ನನ್ನನ್ನು ಹುಡುಕಿ ಬಂದಿತು. ನನ್ನ ಭಾವ ಕೃಷ್ಣರಾವ್ ಸುಲಾಖೆ “ಮೇಲ್ ಚೈಲ್ಡ ಬೋಥ್ ದಿ ಮದರ್ ಎಂಡ್ ಚೈಲ್ಡ್ ಆರ್ ಸೇಫ್….” ಎಂಬ ತಂತಿ ಸಂದೇಶ ಕಳುಹಿಸಿದ್ದರು. ಅಂದು ೧೯೮೫ ರ ಏಪ್ರಿಲ್ ಇಪ್ಪತ್ನಾಲ್ಕನೇಯ ತಾರೀಖು. ನನಗೆ ಗಂಡು ಮಗು ಹುಟ್ಟಿದ ಸಂತೋಷ ತಂದ ದಿನ. ಮನೆಯಲ್ಲಿ ನಾನೊಬ್ಬನೇ ಇದ್ದುದರಿಂದ ಸಂತಸ ತಡೆಯಲಾಗದೆ ತಂತಿ ಸಂದೇಶವನ್ನು ಮುದ್ದಿಸಿ ಮತ್ತೊಮ್ಮೆ ದುರ್ಯೋಧನನ ದಿಗಿಣ ಹೊಡೆದೆ! ಅದು ದೇಶದ ನೆಚ್ಚಿನ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಹುಟ್ಟಿದ ದಿನವೇ ಆದುದರಿಂದ ನನ್ನ ಜೇಷ್ಠ ಪುತ್ರನಿಗೂ ‘ಸಚಿನ್ ಕುಮಾರ್’ ಎಂದೇ ಹೆಮ್ಮೆಯಿಂದ ನಾಮಕರಣ ಮಾಡಲಾಯಿತು. ರಾಮಕೃಷ್ಣ ಗುಂದಿ
ಧಾರಾವಾಹಿ ಆವರ್ತನ ಅದ್ಯಾಯ-44 ಏಕನಾಥರು ಒಂದು ಕಾಲದಲ್ಲಿ ತಮ್ಮನ್ನು ಕಾಡುತ್ತಿದ್ದಂಥ ದಟ್ಟದಾರಿದ್ರ್ಯವನ್ನು ಮೀರಿ ಬೆಳೆದಿದ್ದರು. ಹಾಗಾಗಿ ಅಂದು, ‘ಹೊಟ್ಟೆಪಾಡಿಗೊಂದು ಉದ್ಯೋಗ!’ ಎಂದಿದ್ದ ಅವರ ಆ ಬೀಜಮಂತ್ರದ ಅರ್ಥವು ಈಗ ಸಂಪೂರ್ಣ ಬದಲಾಗಿ, ‘ಆಗರ್ಭ ಶ್ರೀಮಂತಿಕೆ ಮತ್ತು ಸಾಮಾಜಿಕ ಪ್ರತಿಷ್ಠೆಯೇ ತಮ್ಮ ಜೀವನದ ಪರಮೋಚ್ಛ ಗುರಿ!’ ಎಂದಾಗಿತ್ತು. ಆದ್ದರಿಂದ ತಮ್ಮ ಹಠಯೋಗದಂಥ ಜೀವನಶೈಲಿಯಿಂದ ತಾವು ಅಂದುಕೊಂಡಂತೆಯೇ ಭರ್ಜರಿ ಯಶಸ್ಸು ಗಳಿಸಿದ್ದರು. ಆವತ್ತು ಒಂದು ಹೊತ್ತಿನ ತುತ್ತಿಗೂ ಗತಿಯಿಲ್ಲದ ಕಾಲದಲ್ಲಿ ಏನೇನು ಬಯಸಿದ್ದರೋ ಅವೆಲ್ಲವೂ ಇಂದು ಅವರ ಪಾದಗಳ ಬಳಿ ಬಂದು ಬಿದ್ದಿದ್ದವು. ಮುಖ್ಯವಾಗಿ ಲಕ್ಷ್ಮಿದೇವಿಯ ಕಟಾಕ್ಷವು ಅವರ ಮೇಲೆ ಇನ್ನಿಲ್ಲದಂತೆ ಆಗಿತ್ತು! ಹಾಗಾಗಿ ಈಗ ಅವರ ಬಳಿ ಲೆಕ್ಕವಿಲ್ಲದಷ್ಟು ಹಣವಿದೆ. ಅಳತೆಗೆ ಮೀರಿದಷ್ಟು ಆಸ್ತಿಯಿದೆ. ಎರಡೋ ಮೂರೋ ವಿದೇಶಿ ಕಾರುಗಳಿವೆ. ಶಂಕರನದಕ್ಕಿಂತಲೂ ದೊಡ್ಡ ಬಂಗಲೆಯಿದೆ. ಊರಿನ ಕೆಲವಾರು ಕಡೆ ಎಕರೆಗಟ್ಟಲೆ ಜಮೀನು ಕೊಂಡಿದ್ದಾರೆ. ಸಮಾಜ ಮತ್ತು ಸರಕಾರದ ಮಾನ್ಯತೆ ಪಡೆಯಲೆಂಬಂತೆ ಉಗ್ರಾಣಿಬೆಟ್ಟಿನಲ್ಲಿ ಕೊಂಡಿದ್ದ ಒಂದೂವರೆ ಎಕರೆ ತೋಟವನ್ನು ಕೋಮಲದೇವಿ ಎಂಬ ಸಮಾಜ ಸೇವಕಿಯ ‘ಕರುಣಾಳು ಬಾ ಬೆಳಕೇ!’ ಎಂಬ ವೃದ್ಧಾಶ್ರಮಕ್ಕೆ ಬಾಡಿಗೆಯಿಲ್ಲದೆ ಕೊಟ್ಟಿದ್ದಾರೆ. ಊರ ಪರವೂರ ಜನಾಭಿವೃದ್ಧಿ ಮತ್ತು ಧಾರ್ಮಿಕಾಭಿವೃದ್ಧಿ ಚಟುವಟಿಕೆಗಳಿಗೆ ಮನಸೋಇಚ್ಛೆ ದಾನಧರ್ಮಗಳನ್ನು ಮಾಡುತ್ತ ಬಂದಿದ್ದಾರೆ. ಅಂದು ತಮ್ಮ ಪುಟಗೋಸಿ ಗೆಳೆಯ ಶಂಕರ, ‘ಗುರೂಜೀ!’ ಎಂದು ಕರೆದ ಹೆಸರಿಗೆ ತಕ್ಕಂತೆ ನಾಡಿನಾದ್ಯಂತ ಜನರ ಗೌರವಾದರಗಳಿಗೆ ಪಾತ್ರರಾಗಿದ್ದಾರೆ. ಹೀಗಿದ್ದ ಗುರೂಜಿಯವರ ಈ ಎಲ್ಲಾ ಚಟುವಟಿಕೆ ಮತ್ತು ಕಾರ್ಯಸಾಧನೆಗಳನ್ನು ಅಂತರ್ಜಾಲದ ಮೂಲಕವೇ ಕಣ್ಗಾವಲಿಟ್ಟು ಅಧ್ಯಯನ ಮಾಡುತ್ತ ಬಂದಿರುವ ಉತ್ತರ ಭಾರತದಾಚೆಗಿನ ಯಾವುದೋ ಅನಾಮಧೇಯ ವಿಶ್ವವಿದ್ಯಾಲಯವೊಂದು ತಮ್ಮ ವಿದ್ಯಾ ಸಂಸ್ಥೆಗೆ ಗುರೂಜಿಯವರು ಪ್ರೀತಿಯಿಂದ ನೀಡಿದ ಎರಡು ಲಕ್ಷ ರೂಪಾಯಿಗಳ ಉದಾರ ದೇಣಿಗೆಯ ಕೃತಜ್ಞಾರ್ಥವಾಗಿ ಅವರಿಗೆ ‘ಗೌರವ ಡಾಕ್ಟರೇಟ್’ ಪದವಿಯನ್ನೂ ನೀಡಿ ಗೌರವಿಸಿದೆ. ಹಾಗಾಗಿ ಈಗ ಜನರು ಅವರನ್ನು, ‘ಡಾಕ್ಟರ್ ಏಕನಾಥ ಗುರೂಜಿ!’ ಎಂದೂ ಕರೆಯುತ್ತಾರೆ. ಜನರ ಬಾಯಿಯಿಂದ ತಮ್ಮ ಹೆಸರನ್ನು ಆ ಮಾದರಿಯಲ್ಲಿ ಕೇಳುವಾಗ ಗುರೂಜಿಯವರಿಗೆ ತಮ್ಮ ಜನ್ಮ ಸಾರ್ಥಕವಾದಂತೆನ್ನಿಸುತ್ತದೆ. ತಾವೆಂದಾದರೂ ಈ ಮಟ್ಟದ ಯಶಸ್ಸಿನ ಶಿಖರವೇರುತ್ತೇವೆ ಎಂದು ಕನಸು ಮನಸಿನಲ್ಲಾದರೂ ಅಂದುಕೊಂಡಿದ್ದುಂಟಾ? ಇದೆಲ್ಲ ನಾವು ನಂಬಿದ ನಾಗ ಪರಿವಾರ ದೈವಗಳ ಅನುಗ್ರಹವಲ್ಲದೆ ಮತ್ತೇನು? ಎಂದು ತಮ್ಮ ಬಿಡುವಿನ ಸಮಯದಲ್ಲೆಲ್ಲ ಯೋಚಿಸುತ್ತ ಖುಷಿಯಿಂದ ತನ್ಮಯರಾಗುತ್ತಾರೆ. ಗುರೂಜಿಯವರ ಇಂಥ ಯಶಸ್ಸಿಗೆ ಶಂಕರನಂಥ ಅನೇಕ ಬಿಲ್ಡರ್ಗಳು, ಗುತ್ತಿಗೆದಾರರು, ಸಾಫ್ಟ್ವೇರ್ ಇಂಜಿನೀಯರ್ಗಳು, ವಿವಿಧ ಉದ್ಯಮಿಗಳು, ಒಂದಷ್ಟು ಪ್ರಸಿದ್ಧ ವೈದ್ಯರು, ಮನೋದುರ್ಬಲರು, ಕೊಲೆಗಡುಕರು, ವಂಚಕರು ಮತ್ತು ಅಮಾಯಕ ಬಡ ಜನರಿಂದ ಹಿಡಿದು ನಾಡಿನ ಕೆಲವಾರು ಸಚಿವರು ಹಾಗೂ ಶಾಸಕರವರೆಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ನಿರಂತರ ಸಹಕಾರ ನೀಡುತ್ತಲೇ ಬಂದಿದ್ದಾರೆ. ಹಾಗಾಗಿ ಗುರೂಜಿಯವರಿಗೆ ಇವರೆಲ್ಲರ ಮೇಲೂ ಅಪಾರ ಅಭಿಮಾನವಿದೆ. ಆದರೆ ಆವತ್ತು ತಾವು ಪೆದುಮಾಳರಿಗೆ ವಿದಾಯ ಹೇಳಿ ಮುಂಬೈಯಿಂದ ಹಿಂದಿರುಗುವಾಗ, ‘ಇಂದಲ್ಲ ನಾಳೆ ನಿಮ್ಮ ಕಣ್ಣ ಮುಂದೆ ನಿಮಗಿಂತಲೂ ಎತ್ತರಕ್ಕೆ ಬೆಳೆದು ತೋರಿಸದಿದ್ದರೆ ನನ್ನ ಹೆಸರು ಏಕನಾಥನೇ ಅಲ್ಲ. ಆ ದಿನವನ್ನು ಎಣಿಸುತ್ತಿರಿ!’ ಎಂದು ನೋವಿನಿಂದ ಶಪಥ ಮಾಡಿ ಬಂದಿದ್ದು ಇವತ್ತಿಗೂ ಅವರನ್ನು ಕಾಡುತ್ತದೆ. ಅದೇ ಕಾರಣಕ್ಕೋ ಏನೋ ಎಂಬಂತೆ ಅವರ ಹೆಸರು ಬಹಳ ಬೇಗನೇ ಮುಂಬೈ ನಗರಕ್ಕೂ ಹಬ್ಬಿತ್ತು. ಮುಂಬೈಯ ಖ್ಯಾತ ಉದ್ಯಮಿ ಯಶಪಾಲರ ಬಂಗಲೆಯಲ್ಲಿ ಕೆಲವು ವಿಶೇಷ ಹೋಮ ಹವನಗಳನ್ನು ನಡೆಸಿಕೊಡಲು ಗುರೂಜಿಯವರಿಗೆ ಆಹ್ವಾನ ಬಂದಿತು. ಅಂದು ಬೆಳಿಗ್ಗೆ ತಮ್ಮ ಕಛೇರಿಗೆ ಆಗಮಿಸಿದ ಯಶಪಾಲರನ್ನು ಕುಳ್ಳಿರಿಸಿಕೊಂಡ ಗುರೂಜಿಯವರು ನಿಧಾನವಾಗಿ ತಮ್ಮ ಪಂಚಾಂಗ ಮತ್ತು ಜ್ಯೋತಿಷ್ಯ ಪುಸ್ತಕಗಳನ್ನು ತಿರುವಿ ಹಾಕುತ್ತ ಮುಂಬೈ ಕಾರ್ಯಕ್ರಮಕ್ಕೆ ದಿನ ಗೊತ್ತುಪಡಿಸಲೂ ಮತ್ತು ಹಣಕಾಸಿನ ಚೌಕಾಶಿಗೂ ಒಂದು ಗಂಟೆ ಸಮಯವನ್ನು ವಿನಿಯೋಗಿಸಿಕೊಂಡರು. ಬಳಿಕ ಅವರನ್ನು ತೃಪ್ತಿಪಡಿಸಿ ಕಳುಹಿಸಿಕೊಟ್ಟವರು ತಮ್ಮೊಳಗೆ ಸುಪ್ತವಾಗಿ ಹೊಗೆಯಾಡುತ್ತಿರುವ ಪೆದುಮಾಳರ ಮೇಲಿನ ಸೇಡನ್ನು ಇನ್ನು ಕೆಲವೇ ದಿನಗಳಲ್ಲಿ ತೀರಿಸಿಕೊಳ್ಳಲಿಕ್ಕಿದೆ! ಎಂದುಕೊಂಡು ವಿಲಕ್ಷಣ ಖುಷಿಪಟ್ಟು ಉದ್ವೇಗಗೊಂಡರು. ಆ ದಿನವೂ ಬಂದದುಬಿಟ್ಟಿತು. ಆವತ್ತು ಅತಿಯಾದ ಚಡಪಡಿಕೆಯಲ್ಲಿದ್ದ ಗುರೂಜಿಯವರು ವಿಮಾನದ ಮೂಲಕ ಮುಂಬೈಗೆ ಹಾರಿದರು. ಯಶಪಾಲರ ಪೂಜೆಗಳನ್ನು ತರಾತುರಿಯಲ್ಲಿ ಮುಗಿಸಿಕೊಟ್ಟರು. ಅಲ್ಲೇ ಸ್ವಲ್ಪ ಕಾಲ ವಿಶ್ರಾಂತಿ ಪಡೆದು ಕೂಡಲೇ ಪೆದುಮಾಳ ಗುರುಗಳ ಮನೆಗೆ ಧಾವಿಸಿದರು. ಅಂದು ನಿರ್ಗತಿಕ ಹುಡುಗನಿಂದ ಪ್ರಾಣಿಯಂತೆ ದುಡಿಸಿಕೊಂಡು ಉಟ್ಟ ಬಟ್ಟೆಯಲ್ಲೇ ಹೊರಗೆ ದಬ್ಬಿದ ವಂಚಕ ಗುರುವಿಗೆ ಇವತ್ತು ತಮ್ಮ ಸಾಧನೆ ಮತ್ತು ಶ್ರೀಮಂತಿಕೆ ಎಂಥದ್ದೆಂಬುವುದನ್ನು ತೋರಿಸಬೇಕು. ಅದನ್ನು ನೋಡಿ ಆ ಮುದುಕ ಹಾರ್ಟ್ ಅಟ್ಯಾಕ್ ಆಗಿ ನರಳುವುದನ್ನು ತಾವು ಕಣ್ಣಾರೆ ಕಂಡು ಒಳಗೆ ಧಗಧಗಿಸುವ ಸೇಡಿನ ಜ್ವಾಲೆಯನ್ನು ತಣಿಸಿಕೊಳ್ಳಬೇಕು ಎಂದು ಯೋಚಿಸುತ್ತ ಪೆದುಮಾಳರ ಮನೆಯ ಬಾಗಿಲಿಗೆ ಬಂದು ನಿಂತು ಕರೆಗಂಟೆ ಬಾರಿಸಿದರು. ತುಸುಹೊತ್ತಿನ ನಂತರ ಮುದುಕಿಯೊಬ್ಬಳು ಮೆಲ್ಲನೆ ಬಂದು ಬಾಗಿಲು ತೆರೆದಳು. ಗುರೂಜಿಯವರನ್ನು ಪ್ರಶ್ನಾರ್ಥಕವಾಗಿ ದಿಟ್ಟಿದಳು. ಆದರೆ ಗುರೂಜಿಯವರಿಗೆ ಆಕೆ ಪೆದುಮಾಳರ ಪತ್ನಿ ಅನಸೂಯಮ್ಮ ಎಂದು ತಟ್ಟನೆ ಗುರುತು ಸಿಕ್ಕಿತು. ಆದರೆ ಆಕೆ, ‘ಯಾರು ಬೇಕಾಗಿತ್ತು… ಎಲ್ಲಿಂದ ಬಂದಿರಿ…?’ ಎಂದು ಗುರೂಜಿಯ ಗುರುತು ಹತ್ತದೆ ಪ್ರಶ್ನಿಸಿದಳು. ಆಗ ಗುರೂಜಿಯವರ ಮುಖದಲ್ಲಿ ವ್ಯಂಗ್ಯ ನಗುವೊಂದು ಹೊಮ್ಮಿತು. ಆವತ್ತು ತನ್ನ ಗಂಡನೊಂದಿಗೆ ಸೇರಿ ಈ ಮುದುಕಿಯೂ ತಮ್ಮನ್ನು ಎಷ್ಟೊಂದು ಬಗೆಯಲ್ಲಿ ಹಿಂಸಿಸುತ್ತಿದ್ದಳು! ತಮ್ಮನ್ನು ಆಜನ್ಮ ಗುಲಾಮನಂತೆ ನಡೆಸಿಕೊಂಡು ಹೊಟ್ಟೆಬಟ್ಟೆಗೂ ಸರಿಯಾಗಿ ಕೊಡದೆ ನೋಯಿಸುತ್ತಿದ್ದಳಲ್ಲ ಇವಳು! ಎಂದುಕೊಂಡವರ ಮನಸ್ಸು ಕಹಿಯಾಯಿತು. ‘ಹೌದೌದು. ನಿಮಗೆ ಹೇಗೆ ಗುರುತು ಹತ್ತೀತು ಹೇಳಿ…? ನಮ್ಮ ಏಳಿಗೆಯೇ ಆ ಮಟ್ಟಕ್ಕಾಗಿಬಿಟ್ಟಿದೆಯಲ್ಲ! ಹಾಗಾಗಿ ಯಾರೀಗೂ ಪಕ್ಕನೆ ನಮ್ಮ ಪರಿಚಯವಾಗಲಿಕ್ಕಿಲ್ಲ ಬಿಡಿ. ನಮ್ಮ ಗುರುತನ್ನು ನಾವೇ ಹೇಳಿಕೊಳ್ಳುತ್ತೇವೆ ಕೇಳಿ!’ ಎಂದು ಅಸಡ್ಡೆಯಿಂದ ಅನ್ನುತ್ತ ಅನಸೂಯಮ್ಮನ ಹಿಂದೆಯೇ ಒಳಗೆ ನಡೆದರು. ಅಷ್ಟು ಕೇಳಿದ ಆಕೆ ತಟ್ಟನೆ ಹಿಂದಿರುಗಿ ಗುರೂಜಿಯವರನ್ನು ಅವಕ್ಕಾಗಿ ದಿಟ್ಟಿಸಿದರು. ಆಗ ಗುರೂಜಿ ಮರಳಿ ಹಮ್ಮಿನಿಂದ ನಕ್ಕವರು, ‘ಅರೆರೇ, ಗಾಬರಿಯಾಗಬೇಡಿ ಅನಸೂಯಮ್ಮಾ… ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಏಕನಾಥ ಎನ್ನುವ ಒಬ್ಬ ನತದೃಷ್ಟ ಹುಡುಗ ನಿಮ್ಮ ಈ ಮನೆಯಲ್ಲಿ ಚಾಕರಿಗಿದ್ದ ನೆನಪುಂಟಾ…?’ ಎಂದು ಅವರನ್ನು ಇರಿಯುವಂತೆ ದಿಟ್ಟಿಸುತ್ತ ಕೇಳಿದರು. ಆಗ ಗುರುಪತ್ನಿಗೆ ತಟ್ಟನೆ ನೆನಪಾಯಿತು. ಆದರೆ ಮರುಕ್ಷಣ ಗುರೂಜಿಯವರ ವೇಷಭೂಷಣವನ್ನೂ ಅವರ ಮೈಕೈಯಲ್ಲಿ ನೇತಾಡುತ್ತಿದ್ದ ಚಿನ್ನಾಭರಣವನ್ನೂ ಕಂಡ ಅನಸೂಯಮ್ಮನಿಗೆ ದಿಗಿಲಾಗಿಬಿಟ್ಟಿತು! ‘ಓ ದೇವ, ದೇವಾ…, ನೀನಾ ಮಾರಾಯಾ…! ನನಗೆ ಮೊದಲು ಗುರುತೇ ಸಿಕ್ಕಲಿಲ್ಲ ನೋಡು. ನೀನೆಂಥದು ಮಾರಾಯಾ ಇಷ್ಟೊಂದು ಬದಲಾಗಿದ್ದು! ಅದೆಂಥದು ವ್ಯವಹಾರ ನಿನ್ನದು…?’ ಎಂದು ಬೊಚ್ಚು ಬಾಯಿ ಬಿಟ್ಟುಕೊಂಡು ಪ್ರಶ್ನಿಸಿದರು. ‘ವ್ಯವಹಾರವೆಂಥದು, ನಾವು ಕಲಿತ ವಿದ್ಯೆಯೇ ನಮ್ಮನ್ನು ಈ ಮಟ್ಟಕ್ಕೇರಿಸಿತು. ಹ್ಞಾಂ! ಆದರೆ ನಿಮ್ಮ ಗಂಡನಿಂದ ಕಲಿತ ಆ ಪೊಟ್ಟು ಶಾಸ್ತ್ರವಲ್ಲ. ನಾವೇ ನಮ್ಮೂರಿನಲ್ಲಿ ಅನೇಕ ವರ್ಷಗಳ ಕಾಲ ಹಠ ಹಿಡಿದು ಕಲಿತ ವಿದ್ಯೆಯಿಂದಲೇ ಇಷ್ಟೆಲ್ಲ ಆದುದು! ಅದೇನು ನಿಮ್ಮ ಗಂಡನಿಗೆ ಮಾತ್ರ ದೇವರು ದಿಂಡರ ವೈಹಿವಾಟು ಮಾಡಲು ಬರುವುದಾ? ನಮಗೆ ಸಾಧ್ಯವಿಲ್ಲವಾ… ಎಲ್ಲಿದ್ದಾರೆ ಅವರು…? ಒಮ್ಮೆ ನೋಡಬೇಕಲ್ಲ ಅವರನ್ನು. ಹೊರಗೆ ಕರೆಯಿರಿ ನೋಡುವ!’ ಎಂದು ನಂಜು ಕಾರುತ್ತ ಹೇಳಿದರು. ಗುರೂಜಿಯವರ ಅಂಥ ಅಹಂಕಾರದ ಮಾತುಗಳನ್ನು ಕೇಳಿದ ಅನಸೂಯಮ್ಮನ ಜೋಲು ಮೋರೆ ತಟ್ಟನೆ ಕಳೆಗುಂದಿತು. ಆದರೂ ಸಂಭಾಳಿಸಿಕೊಂಡು, ‘ಅಯ್ಯೋ ಮಾರಾಯಾ…ಅವರ ಕಥೆ ಏನು ಹೇಳುವುದು. ಅವರು ಚಾಪೆ ಹಿಡಿದು ಐದು ವರ್ಷವಾಗುತ್ತ ಬಂತು…!’ ಎಂದರು ದುಃಖದಿಂದ. ಅಷ್ಟು ಕೇಳಿದ ಗುರೂಜಿಯವರಿಗೆ ಒಮ್ಮೆಲೇ ನಿರಾಶೆಯಾಯಿತು. ‘ಹೌದಾ,… ಏನಾಯ್ತು, ಯಾವುದಾದ್ರೂ ಕಾಯಿಲೆಯಾ…?’ ‘ಕಾಯಿಲೆಯೋ ಕಸಾಲೆಯೋ ದೇವರೇ ಬಲ್ಲ. ಅದೊಂದು ದೊಡ್ಡ ಕಥೆ. ಹೇಳುತ್ತೇನೆ ಕುಳಿತುಕೋ. ಬಾಯಾರಿಕೆ ತಗೊಳ್ಳುತ್ತೀಯಾ…?’ ‘ಸದ್ಯಕ್ಕೇನೂ ಬೇಡ. ಗುರುಗಳಿಗೇನಾಯ್ತು ಹೇಳಿ!’ ‘ಹೇಳುತ್ತೇನೆ…’ ಎಂದ ಅನಸೂಯಮ್ಮ ಗುರೂಜಿಯೆರೆದುರು ಕುಳಿತುಕೊಳ್ಳುತ್ತ ವಿಷಯ ಆರಂಭಿಸಿದರು. ‘ಕೆಲವು ವರ್ಷಗಳ ಹಿಂದೆ ಬಾಂದ್ರಾದ ಲೇಡಿಸ್ ಬಾರೊಂದರಲ್ಲಿ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಮತ್ತು ಕೊಲೆ ನಡೆಯಿತಲ್ಲ ಗೊತ್ತುಂಟಾ ನಿನಗೆ?’ ‘ಹೌದಾ…? ಇಲ್ವಲ್ಲಾ. ಯಾರು ಮಾಡಿದ್ದು…?’ ‘ಯಾರೂಂತ ಗೊತ್ತಿಲ್ಲ. ಅದನ್ನು ಮಾಡಿಸಿದ್ದು ಮಾತ್ರ ಅದೇ ಹೊಟೇಲು ಮಾಲಿಕ ಎಂಬ ಸುದ್ದಿ ಹಬ್ಬಿತ್ತು. ಅದು ಆ ಹೆಣ್ಣುಮಕ್ಕಳ ಹೆತ್ತವರಿಗೆ ತಿಳಿಯಿತು. ಅವರು ಅವನ ಮೇಲೆ ಕೇಸು ಹಾಕಿದರು. ಆದರೆ ಹೊಟೇಲು ಶೇಟಿನ ದುಡ್ಡಿನ ಬಲತ್ಕಾರದ ಮುಂದೆ ಅವರ ಕೇಸು ಪುಸ್ಕಾಯಿತು. ಅದರಿಂದ ಆ ಜನರು ಹತಾಶರಾದರು. ಆದರೂ ಹಠ ಬಿಡದೆ ಅವನನ್ನು ಯಾವುದಾದರೂ ರೀತಿಯಲ್ಲಿ ಸರ್ವನಾಶ ಮಾಡಲು ಹೊರಟವರು ಇಲ್ಲಿನ ಒಬ್ಬ ದೊಡ್ಡ ಮಂತ್ರವಾದಿಯನ್ನು ಹಿಡಿದು ಅವನಿಗೆ ಭಯಂಕರ ಮಾಟ ಮಾಡಿಸಿದರಂತೆ! ಅದು ಹೊಟೇಲು ಶೇಟಿಗೂ ಗೊತ್ತಾಯಿತು. ಅವನು ಕೂಡಲೇ ಇವರ ಹತ್ತಿರ ಓಡಿ ಬಂದು ದುಃಖವನ್ನು ತೋಡಿಕೊಂಡ. ಇವರಿಗೆ ಮೊದಲೇ ಆ ಮಂತ್ರವಾದಿಯ ಮೇಲೆ ಅಸಮಾಧಾನವಿತ್ತು. ಅದೇ ನೆಪದಿಂದ ಇವರು ಕೂಡಾ ಯಾವುದೋ ಭೀಕರ ತಾಂತ್ರಿಕವಿಧಿಯೊಂದನ್ನು ಆಚರಿಸಿ, ಆ ಹೆಣ್ಣು ಹೆತ್ತವರು ಹೊಟೇಲು ಮಾಲಿಕನ ಮೇಲೆ ಪ್ರಯೋಗಿಸಿದ್ದ ಕೃತ್ರಿಮವನ್ನು ಉಚ್ಛಾಟಿಸಿಬಿಟ್ಟರು! ಆದರೆ ಈ ವಿಷಯವೂ ಅದು ಹೇಗೋ ಆ ಹೆಣ್ಣುಮಕ್ಕಳ ಹೆತ್ತವರಿಗೆ ತಿಳಿದುಬಿಟ್ಟಿತು. ಆದ್ದರಿಂದ ಆವತ್ತೊಮ್ಮೆ ಸೂರ್ಯ ಕಂತುವ ಹೊತ್ತಿನಲ್ಲಿ ಅವರು ಐದಾರು ಮಂದಿ ತಲೆಕೂದಲು ಕೆದರಿಸಿಕೊಂಡು ಮನೆಗೆ ಬಂದವರು ಅಂಗಳದಲ್ಲಿ ನಿಂತುಕೊಂಡು ನಮ್ಮನ್ನು ಹೊರಗೆ ಕರೆದು ಅಸಭ್ಯವಾಗಿ ಬೈಯ್ಯುತ್ತ ಬೊಬ್ಬೆಯಿಟ್ಟು ಅಳುತ್ತ, ‘ನಮ್ಮ ಮಕ್ಕಳ ಶೀಲವನ್ನೂ, ಅವರ ಬದುಕನ್ನೂ ಹಾಳು ಮಾಡಿದ ಆ ರಾಕ್ಷಸನೂ, ನೀನೂ ಸರ್ವನಾಶವಾಗಿ ಹೋಗುತ್ತಿರಾ ನೋಡುತ್ತಿರಿ!’ ಎಂದು ನೆಲಕ್ಕೆ ಕೈ ಅಪ್ಪಳಿಸಿ ಶಪಿಸುತ್ತ ಅಂಗಳವಿಡೀ ಹೊರಳಾಡಿ ಗಲಾಟೆಯೆಬ್ಬಿಸಿ ಹೊರಟು ಹೋದರು. ಆವತ್ತಿನಿಂದ ಇವರಿಗೇನಾಯಿತೋ? ಎಲ್ಲರೊಂದಿಗೂ ಮಾತುಕಥೆಯನ್ನು ನಿಲ್ಲಿಸಿಬಿಟ್ಟರು. ಇದಾದ ಮೇಲೆ ಸ್ವಲ್ಪ ಸಮಯದ ನಂತರ ದಿನವಿಡೀ ಮಲಗಿಕೊಂಡೇ ಇರತೊಡಗಿದರು. ಹಾಗೆ ಒಮ್ಮೆ ಮಲಗಿದವರು ಮುಂದೆ ಮಲಗಿಯೇಬಿಟ್ಟರು. ಸುಮಾರು ಬಗೆಯ ಔಷಧಿ ಉಪಚಾರಗಳನ್ನೆಲ್ಲ ಮಾಡಿಸಿದ್ದಾಯಿತು. ಏನೂ ಪ್ರಯೋಜನವಾಗಲಿಲ್ಲ!’ ಎಂದು ಅನಸೂಯಮ್ಮ ನಿಟ್ಟುಸಿರುಬಿಟ್ಟರು. ಪೆದುಮಾಳರ ಕಥೆಯನ್ನು ಕೇಳಿದ ಗುರೂಜಿಯವರ ಮನಸ್ಸಿಗೇನೋ ಒಂಥರಾ ಹಿಂಸೆಯಾಯಿತು. ಅದರ ಬೆನ್ನಿಗೆ ಆವತ್ತು ಬುಕ್ಕಿಗುಡ್ಡೆಯ ದೇವರಕಾಡಿನಲ್ಲಿ ನಂದಿಮರದ ಕೊಂಬೆಯೊಂದು ತಲೆಯ ಮೇಲೆ ಮುರಿದು ಬೀಳಲಿದ್ದಾಗ ಕಾಣಿಸಿಕೊಂಡಂಥ ಹೆದರಿಕೆಯೂ ಮತ್ತದೇ ರೀತಿಯ ಎದೆ ತಿವಿದಂಥ ನೋವೂ ಮರಳಿ ಕಾಣಿಸಿಕೊಂಡಿದ್ದರೊಂದಿಗೆ ಮೈಕೈಯೆಲ್ಲ ತಣ್ಣಗೆ ಬೆವರಿ ಉಸಿರುಗಟ್ಟಿದಂತಾಯಿತು. ಆಗ ಮತ್ತಷ್ಟು ಭಯಪಟ್ಟರು. ಆದರೆ ಮರುಕ್ಷಣ, ‘ಅರೇರೇ, ನಾವೇನು ಇವರಂತೆ ಅಮಾಯಕರ ಮೇಲೆಲ್ಲ ಮಾಟಮಂತ್ರ ಪ್ರಯೋಗಿಸಿ ಮೇಲೆ ಬಂದವರಾ…? ಅಂಥದ್ದು ಒಂದೆರಡು ಘಟನೆಗಳು ನಮ್ಮಿಂದಲೂ ನಡೆದಿರಬಹುದಾದರೂ ಅದರ ಹತ್ತು ಪಟ್ಟು ದಾನಧರ್ಮಗಳನ್ನು ಮಾಡುತ್ತ ಬಂದಿದ್ದೇವೆ. ಮತ್ತ್ಯಾಕೆ ಹೆದರಬೇಕು!’ ಎಂದು ಧೈರ್ಯ ತಂದುಕೊಂಡರು. ಆಗ ಅವರ ಹೃದಯವು ಯಥಾಸ್ಥಿತಿಗೆ ಬಂತು. ‘ಅವರೀಗ ಎಲ್ಲಿದ್ದಾರೆ…?’ ಎಂದು ಅನಸೂಯಮ್ಮನನ್ನು ಕೇಳಿದರು. ‘ಒಳಗೆ ಮಲಗಿದ್ದಾರೆ ಮಾರಾಯಾ. ನೋಡುತ್ತೀಯಾ ಬಾ. ಆದರೆ ಅವರಿಗೆ ಪಕ್ಕನೆ ಯಾರ ಗುರುತೂ ಹತ್ತುವುದಿಲ್ಲ. ಹತ್ತಿದರೂ ಮಾತಾಡುವುದಿಲ್ಲ!’ ಎಂದು ಹತಾಶೆಯಿಂದ ಹೇಳಿದ ಅನಸೂಯಮ್ಮ ಎದ್ದು ಒಳಗೆ ನಡೆದರು. ‘ಮಾತನಾಡದಿದ್ದರೆ ತೊಂದರೆಯಿಲ್ಲ. ಅವರನ್ನು ನೋಡಲೇಬೇಕೆಂಬ ದೊಡ್ಡ ಆಸೆಯಿಂದ ಬಂದಿದ್ದೇವೆ!’ ಎನ್ನುತ್ತ ಗುರೂಜಿಯವರು ಅವರನ್ನು ಹಿಂಬಾಲಿಸಿದರು. ಅಲ್ಲಿ ಒಳಕೋಣೆಯಲ್ಲಿ ಹಳೆಯ ಮಂಚದ ಮೇಲೆ ಮಲಗಿದ್ದ ಪೆದುಮಾಳರು ಎಲುಬಿನ ಚಕ್ಕಳವಾಗಿದ್ದರು. ಅವರ ಅವಸ್ಥೆಯನ್ನು ಕಂಡ ಗುರೂಜಿಯವರಿಗೆ ತೀವ್ರ ನಿರಾಶೆಯಾಯಿತು. ಏಕೆಂದರೆ ಅವರ ಯಶಸ್ಸು ಮತ್ತು ಶ್ರೀಮಂತಿಕೆಯನ್ನು ನೋಡಿ ಗುರುಗಳು ಹೊಟ್ಟೆ ಉರಿದುಕೊಂಡು ಕೊರಗಬೇಕು
You cannot copy content of this page