ಅನುವಾದಿತ ಅಬಾಬಿಗಳು
ಆಕರ : ಕಾಲಂ ಸಾಕ್ಷಿಗಾ
(ತೆಲುಗು ಅಬಾಬಿಗಳ ಸಂಕಲನ)
ಕಾಣೆಯಾಗಿದ್ದಾನೆ ದಿನದ ಒಡನಾಡಿ
ಉಗುಳುತಿದೆ ಆತ್ಮವ ಬೊಗಳಿ ಬೊಗಳಿ ದಿನದ
ನಾಯಿಯೂ
ಅಶೋಕ್ ಹೊಸಮನಿಯವರ ಕವಿತೆಗಳು Read Post »
ಗಜಲ್ ಪ್ರೊ.ರಾಜನಂದಾ ಘಾರ್ಗಿ ನಿನ್ನ ಮಡಿಲಿಗೆ ಜಾರಿ ಬಿದ್ದ ನನ್ನ ಹೃದಯವನ್ನು ಮರಳಿಸಿಬಿಡುನಿನ್ನ ಸುತ್ತ ಸುತ್ತಿರುವ ಕನಸುಗಳ ಜಾಲವನ್ನು ಮರಳಿಸಿಬಿಡು ಭಾವನೆಗಳ ಮತ್ತೇರಿ ಸುತ್ತಲ ಜಗವ ಮರೆಯುತ್ತಿರುವೆನನ್ನನೇ ಮರೆಯುವ ಮುನ್ನ ನನ್ನ ಅರಿವನ್ನು ಮರಳಿಸಿಬಿಡು ನಿನ್ನ ಮೋಹಕ ನಗೆಯ ಪಾಷದಲಿ ನರಳುತಿದೆ ನನ್ನ ಚೇತನಸಂವೇದನೆ ಸ್ಥಬ್ದವಾಗುವ ಮುನ್ನ ನನ್ನ ನಗುವನ್ನು ಮರಳಿಸಿಬಿಡು ಕಾಯುತಿರುವೆ ದೂರದ ದಾರಿಯಲಿ ಕಣ್ಣಿಟ್ಟು ಹಗಲಿರುಳುರಾತ್ರಿ ಕಳೆದು ಬೆಳಕಾಗುವ ಮುನ್ನ ಕಸಿದ ನಿದ್ರೆಯನ್ನು ಮರಳಿಸಿಬಿಡು ಕಳೆದುಕೊಂಡಿಹಳು ರಾಜಿ ತನ್ನನ್ನು ನಿನ್ನ ಅಂಧ ಪ್ರೀತಿಯಲಿಕಣ್ಣೀರು ಬತ್ತಿ ಕುರುಡಾಗುವ ಮುನ್ನ ಸುರಿದ ಪ್ರೀತಿಯನ್ನು ಮರಳಿಸಿಬಿಡು ನಿನ್ನ ಮಡಿಲಿಗೆ ಜಾರಿ ಬಿದ್ದ ನನ್ನ ಹೃದಯವನ್ನು ಮರಳಿಸಿಬಿಡುನಿನ್ನ ಸುತ್ತ ಸುತ್ತಿರುವ ಕನಸುಗಳ ಜಾಲವನ್ನು ಮರಳಿಸಿಬಿಡು ಭಾವನೆಗಳ ಮತ್ತೇರಿ ಸುತ್ತಲ ಜಗವ ಮರೆಯುತ್ತಿರುವೆನನ್ನನೇ ಮರೆಯುವ ಮುನ್ನ ನನ್ನ ಅರಿವನ್ನು ಮರಳಿಸಿಬಿಡು ನಿನ್ನ ಮೋಹಕ ನಗೆಯ ಪಾಷದಲಿ ನರಳುತಿದೆ ನನ್ನ ಚೇತನಸಂವೇದನೆ ಸ್ಥಬ್ದವಾಗುವ ಮುನ್ನ ನನ್ನ ನಗುವನ್ನು ಮರಳಿಸಿಬಿಡು ಕಾಯುತಿರುವೆ ದೂರದ ದಾರಿಯಲಿ ಕಣ್ಣಿಟ್ಟು ಹಗಲಿರುಳುರಾತ್ರಿ ಕಳೆದು ಬೆಳಕಾಗುವ ಮುನ್ನ ಕಸಿದ ನಿದ್ರೆಯನ್ನು ಮರಳಿಸಿಬಿಡು ಕಳೆದುಕೊಂಡಿಹಳು ರಾಜಿ ತನ್ನನ್ನು ನಿನ್ನ ಅಂಧ ಪ್ರೀತಿಯಲಿಕಣ್ಣೀರು ಬತ್ತಿ ಕುರುಡಾಗುವ ಮುನ್ನ ಸುರಿದ ಪ್ರೀತಿಯನ್ನು ಮರಳಿಸಿಬಿಡು
ಮಕ್ಕಳ ಕವಿತೆ ಕುದುರೆ ಸವಾರ ಸೋಮಲಿಂಗ ಬೇಡರ ಬಂದನೊಬ್ಬ ಸವಾರಬಿಳಿಯ ಕುದುರೆ ಹತ್ತಿಕೋರೆ ಮೀಸೆ ತಿರುವುತಓಣಿ ಓಣಿ ಸುತ್ತಿ ಓಣಿ ಮಕ್ಕಳೆಲ್ಲರುನೋಡುತವನ ಮೆಚ್ಚಿಕುದುರೆ ಹಿಂದೆ ನಡೆದರುಹಾಕುತವರು ಹೆಜ್ಜಿ ಊರ ಜಾತ್ರೆ ಮರುದಿನಕುಸ್ತಿ ಗೆದ್ದ ವೀರತಾನೇ ಎನುತ ಗತ್ತಲಿಸಾರುತ್ತಿದ್ದ ಧೀರ ಬೆಳಗುತ್ತಿದ್ದರಾರುತಿದೃಷ್ಟಿ ಬೊಟ್ಟು ಇಟ್ಟುನಗುತಲಿದ್ದ ಸವಾರಹೆಚ್ಚು ಹೆಮ್ಮೆ ಪಟ್ಟು ಢಂ! ಎಂದು ಒಮ್ಮೆಲೆಸಿಡಿಯಿತಲ್ಲಿ ಮದ್ದುಕುದರೆ ಬೆಚ್ಚಿ ನೆಗೆಯಲುಬಿದ್ದನವ ಜಟ್ಟಿಯು ಕಣ್ಣು ಬಿಟ್ಟು ನೋಡಿದನಗುತಲಿದ್ದ ತಮ್ಮಮಂಚದಿಂದ ತಿಮ್ಮನುಬಿದ್ದು ಎದ್ದ ಸುಮ್ಮ!
ಕಾವ್ಯ ಸಂಗಾತಿ ನೀನಿರದ ದಿನ ಲಕ್ಷ್ಮಿ ಕೆ.ಬಿ ನೀನಿರದ ದಿನಸೂರ್ಯ ಉದಯಿಸಲೇ ಇಲ್ಲ….. ಮೋಡಗಳೆಲ್ಲ ಅಲ್ಲಲ್ಲೇ ನಿಂತುಒಮ್ಮೆಲೆ ಚೀರುತ್ತಾಅಳಲಾರಂಭಿಸಿವೆ ಬಾನಿಗೂ ಭಯ ವೆಂಬಂತೆಗುಡುಗು-ಸಿಡಿಲು ಮಿಂಚುಹೆಚ್ಚಾದ ಹೃದಯಬಡಿತ ಗೂಡೊಳಗಿನ ಹಕ್ಕಿ-ಮರಿಗಳಿಗೂಚಳಿ ಶೀತ ಜ್ವರಹಾರಲಾಗದ ಹಕ್ಕಿಗೆ ಗಂಟಲು ಬಿಗಿತ ಕಾಮನಬಿಲ್ಲಿನ ಬಣ್ಣಗಳೂಕಾರ್ಮುಗಿಲ ನೆರಳಲ್ಲಿಕಳೆಗುಂದಿ ನಿಂತಿವೆ ಹಸಿರೂ, ಭುವಿಎಷ್ಟು ತಾನೇ ಸಹಿಸಿಯಾಳುಮುಗಿಲ ನೋವಾ ಎಷ್ಟು ನುಂಗಿಯಾಳು ಹಗಲಿಗಿಂದು ರಾತ್ರಿಯ ನೆರಳುರವಿಗೆ ಹಗಲಲ್ಲೇ ನಿದ್ರೆಯ ಮಂಪರುರಾತ್ರಿ ಚಂದ್ರಮನಿಗೆ ಮತ್ತದೇ ಕತ್ತಲು ಕತ್ತಲ ರಾಜ ಶಶಿಗೆ ಆಕಳಿಕೆ, ತೂಕಡಿಕೆಬಾನಿಗೆಲ್ಲ ಬೆಳಕ ಚೆಲ್ಲಿ, ನಿದ್ರೆ ಇರದೆನರಳಾಡುತ್ತಿದ್ದಾನೆಬಾನ ತುಂಬಾ ಹೊರಳಾಡುತ್ತಿದ್ದಾನೆ….
ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ ಹಾರೋಹಳ್ಳಿ ರವೀಂದ್ರ ಬಲಿ ಚಕ್ರವರ್ತಿಯ ರಾಜ್ಯವು ಮಹಾರಾಷ್ಟ್ರದಿಂದ ಅಯೋಧ್ಯೆವರೆವಿಗೂ ವ್ಯಾಪಿಸಿತ್ತು. ಈತನ ಆಳ್ವಿಕೆಯಲ್ಲಿ ಯಾರಿಗೂ ತೊಂದರೆ ಇರಲಿಲ್ಲ. ಬಲಿಯ ರಾಜ್ಯದಲ್ಲಿ ಯಾರಿಗೂ ದುಃಖವಿರಲಿಲ್ಲ. ಗೂಂಡಾಗಿರಿಗಂತು ಅವಕಾಶವೇ ಇರಲಿಲ್ಲ. ಆದರೆ ವಿದೇಶಿ ದಾಳಿಕೋರರಾದ ಆರ್ಯರು ಇದನ್ನು ಸಹಿಸದೆ ಬಲಿಯನ್ನು ಕೊಂದು ಐತಿಹಾಸಿಕ ಚರಿತ್ರೆಯನ್ನು ಪುರಾಣದೊಳಗೆ ತುರುಕಿ ಮಕ್ಕಳನ್ನು ರಂಜಿಸುವ ಕಥೆಯನ್ನಾಗಿ ಸೃಷ್ಟಿಸಲಾಗಿದೆ. ವಾಮನ ಭಿಕಾರಿಯ ವೇಷದಲ್ಲಿ ಬಂದು ಮೂರು ಹೆಜ್ಜೆ ಭೂಮಿ ಕೇಳಿದನಂತೆ ಬಲಿಯು ಅದಕ್ಕೆ ಸಮ್ಮತಿಸಿದನಂತೆ, ವಾಮನ ಮೂರು ಹೆಜ್ಜೆಯಲ್ಲಿ ಒಂದು ಹೆಜ್ಜೆಯನ್ನು ಭೂಮಿಗೆ ಇಟ್ಟನಂತೆ, ಭೂ ಮಂಡಲವೇ ಆವರಿಸಿಕೊಳ್ಳಿತಂತೆ. ಮತ್ತೊಂದು ಹೆಜ್ಜೆಯನ್ನು ಆಕಾಶಕ್ಕೆ ಇಟ್ಟನಂತೆ, ಆಕಾಸವೇ ಆವರಿಸಿಕೊಳ್ಳಿತಂತೆ. ಮತ್ತೊಂದು ಹೆಜ್ಜೆಯನ್ನು ಎಲ್ಲಿ ಹಿಡುವುದು ಎಂದಾಗ ಬಲಿಯು ನನ್ನ ತಲೆ ಮೇಲಿರಿಸಿ ಎಂದನಂತೆ. ಬಲಿಯ ತಲೆ ಮೇಲೆ ಪಾದವಿಟ್ಟಾಕ್ಷಣ ಬಲಿಯು ಪಾತಾಳಕ್ಕೆ ಹೋದನಂತೆ. ವಾಮನವಿಟ್ಟ ಪಾದ ಭೂಮಿಯನ್ನೆಲ್ಲಾ ಆವರಿಸಿಕೊಂಡಿತೆಂದರೆ ಭೂ ಮಂಡಲದ ಜೀವರಾಶಿಗಳು ಪಾದದ ಕೆಳಗೆ ಸಿಕ್ಕಿ ಯಾವೊಂದು ಜೀವಿಯು ಸಾಯಲಿಲ್ಲವೇ? ಪ್ರಸ್ತುತದಲ್ಲಿ ಸೌರಮಂಡಲದ ಅನ್ವೇಷಣೆಗೆಂದು ಸಾವಿರಾರು ಕೋಟಿ ಖರ್ಚು ಮಾಡಿ ವಿಜ್ಞಾನಿಗಳನ್ನು ಕಳುಹಿಸುತ್ತಿದ್ದಾರೆ. ಅದರ ಬದಲಾಗಿ ಆಕಾಶಕ್ಕೆ ಪಾದವಿಟ್ಟ ವಾಮನ ಪಾದವೇರಿಯೇ ಕಂಡು ಹಿಡಿಯಬಹುದಿತ್ತಲ್ಲ? ಭೂಮಿಗೊಂದು ಕಾಲು, ಆಕಾಶಕ್ಕೊಂದು ಪಾದವಿಡುವ ಮುನ್ನ ವಾಮನ ನಿಂತಿದ್ದ ಜಾಗಯಾವುದು? ಆಕಾಶಕ್ಕೊಂದು ಕಾಲು, ಭೂಮಿಗೊಂದು ಕಾಲಿಟ್ಟಮೇಲೆ, ಮೂರನೇ ಪಾದವನ್ನು ಬಲಿಯ ಮೇಲಿಡಲು ಎಲ್ಲಿಂದ ತಂದ? ಇಷ್ಟೆಲ್ಲಾ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ. ಈ ಪ್ರಶ್ನೆಗಳಿಗೆ ಉತ್ತರ ಕೊಡಲು ಅವರಲ್ಲಿ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ. ಇತಿಹಾಸವನ್ನು ತಿರುಚಿ ವಿರೂಪಗೊಳಿಸುವುದಷ್ಟೇ ಅವರ ಕಾಯಕವಾಗಿದೆ. ಕಶ್ಯಪನ ಮಗ ಪ್ರಹ್ಲಾದ, ಪ್ರಹ್ಲಾದನ ಮಗ ವಿರೋಚನ. ಈ ವಿರೋಚನನ ಮಗನೇ ಬಲಿ. ಕಶ್ಯಪನನ್ನು ಮೋಸದಿಂದ ಕೊಂದರು. ಬಲಿರಾಜನ ತಾತ ಪ್ರಹ್ಲಾದನನ್ನು ವಂಚಿಸಿ ತಂದೆಯ ವಿರುದ್ಧವೇ ಎತ್ತಿಕಟ್ಟಿ ತಮ್ಮ ಕೈವಶ ಮಾಡಿಕೊಂಡಿದ್ದರು. ಅನಂತರ ಇವರ ಎಲ್ಲಾ ನಯವಂಚನೆಯ ಬುದ್ಧಿ ಅರ್ಥವಾಗಿ ಆರ್ಯ ಸಂಸ್ಕೃತಿಯನ್ನು ವರ್ಜಿಸಿ ಮುಂದೆ ಬೌದ್ಧ ಉಪಾಸಕನಾದ. ವಿರೋಚನನು ಮತ್ತು ಬಲಿಯು ಕೂಡ ಆರ್ಯ ಸಂಸ್ಕೃತಿಯ ವಿರೋಧಿಗಳೇ ಆಗಿದ್ದರೂ. ವಿರೋಚನನ ನಂತರ ಸಾಮ್ರಾಜ್ಯ ಬಲಿಯ ಕೈಗೆ ಬಂತು. ಈತನ ಆಳ್ವಿಕೆಯನ್ನು ಹೇಗಾದರು ಮಾಡಿ ಕಸಿದುಕೊಳ್ಳಬೇಕೆಂದು ವಾಮನ ತನ್ನ ಸೇನೆಯನ್ನು ಕೂಡಿಕೊಂಡು ಬಲಿಯ ರಾಜ್ಯಕ್ಕೆ ನುಗ್ಗಿ, ರಾಜಧಾನಿಯ ಸಮೀಪದಲ್ಲಿ ಬೀಡುಬಿಟ್ಟಿದ್ದ. ಬಲಿಗೆ ವಾಮನ ಮಾಡಿದ ಅನಿರೀಕ್ಷಿತ ದಾಳಿಯ ಕಲ್ಪನೆ ಇಲ್ಲವಾದ್ದರಿಂದ ಅಲ್ಪ ಸೈನ್ಯದೊಡನೆಯೆ ಹೋರಾಡಿದ. ಆತನಿಗೆ ತಮ್ಮ ಸಾಮ್ರಜ್ಯದಾಧ್ಯಂತ ಯುದ್ಧದ ಸಲುವಾಗಿ ಸೈನ್ಯ ಕರೆಸುವಷ್ಟು ಸಮಯವೂ ಇರಲಿಲ್ಲ. ವಾಮನೊಡನೆ ಯುದ್ದ ನಡೆದು ಬಲಿರಾಜ ಹತನಾದ. ಬಾಣಾಸುರ ವಾಮನನ್ನು ಹತ್ತಿಕ್ಕಲು ಸಾಕಷ್ಟು ಸಾಹಸ ಮಾಡಿದರು ಸಾಧ್ಯವಾಗದೇ ಸೈನ್ಯದೊಡನೆ ವಾಪಸ್ಸು ಮರಳಿಬಿಟ್ಟ. ಬಾಣಾಸುರ ಬರುವಷ್ಟರಲ್ಲಿ ಎರಡನೇ ಬಲಿಗೆ ಅಧಿಕಾರವಹಿಸಿ ಸಾಮ್ರಾಜ್ಯದಲ್ಲಿನ ಸಮಸ್ತ ಜನರು ‘ದ್ವಿಜರ ಅಧಿಕಾರ ಹೋಗಬೇಕು ಬಲಿಯ ರಾಜ್ಯ ಬರಬೇಕು’ ಎಂದು ದೀಪ ಹಚ್ಚಿದ್ದರು. ಆ ದಿವಸದಿಂದ ಇಂದಿಗೂ ನಮ್ಮ ನೆಲಮೂಲರು ದೀಪ ಹಚ್ಚುತ್ತಲೇ ಇದ್ದಾರೆ. ಬಲಿರಾಜನ ಸರದಾರರಿಗೆಲ್ಲಾ ಈ ವಿಷಯ ತಿಳಿದು ಬಾಣಾಸುರನ ಬಳಿ ಬಂದರು. ಈ ವಿಷಯ ತಿಳಿದ ಆರ್ಯರು ಜೀವ ಕೈಲಿ ಹಿಡಿದುಕೊಳ್ಳಲು ಪ್ರಾರಂಭಿಸಿದರು. ಎಲ್ಲಾ ಸೈನ್ಯವನ್ನು ತೆಗೆದುಕೊಂಡು ಹೋದ ಬಾಣಾಸುರ ವಾಮನನ್ನು ಅವನ ಸೈನ್ಯದ ಸಮೇತ ಧೂಳಿಪಟ ಮಾಡಿದನು. ಅನಂತರ ವಾಮನ ಅಪಮಾನಿತನಾಗಿ ಹಿಮಾಲಯ ಪರ್ವತಕ್ಕೆ ಓಡಿಹೋದ. ಇದಾದ ಬಳಿಕ ಅಬಾಲವೃದ್ಧ ಸ್ತ್ರೀಯರಿಗೆ ಅಪಾರ ಆನಂದವಾಗಿ ಕಾರ್ತೀಕ ಶುದ್ಧ ದ್ವಿತೀಯದಂದು ತಮ್ಮ ಬಾಂಧುಬಾಂಧವರನ್ನು ಕರೆಯಿಸಿ ಯಥಾಪ್ರಕಾರ ಭೋಜನಾ ಕೂಟ ಏರ್ಪಡಿಸಿ ಆರತಿ ಮಾಡಿ ದೀಪಗಳನ್ನೆಲ್ಲಾ ಹಚ್ಚುವ ಮೂಲಕ ‘ಇಡಾಪೀಡಾ ಹೋಗಲಿ ಬಲಿರಾಜ್ಯ ಬರಲಿ’ ಎಂದು ಬಲಿರಾಜನನ್ನು ನೆನೆಯುತ್ತಾರೆ. ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳು- ಸಂಪುಟ 21’ ಕನ್ನಡ ಸಂಸ್ಕೃತಿ ಇಲಾಖೆ ತಂದಿರುವ 2015ರ ಪರಿಷ್ಕೃತ ಮುದ್ರಣದಲ್ಲಿ ಪದ್ಮಪುರಾಣದಲ್ಲಿನ ಬಲಿಯ ವಿಷಯವನ್ನು ಹೀಗೆ ಪ್ರಸ್ತಾಪಿಸಿದ್ದಾರೆ. ಬಲಿನಾಮ ಮಹಾದೈತ್ಯೋ ದೇವಾರಿರಪರಾಜಿತಃ ಧರ್ಮೇಣ ಯಶ ಸಾಚೈವ ಪ್ರಜಾ ಸಂರಕ್ಷಣೇ ಚ ತಸ್ಮಿನ್ ಶಾಸತಿ ರಾಜ್ಯಂ ತು ತ್ರೈಲೋಕ್ಯ ಹತಕಷ್ಟಕಮ್ ನಾರಯೋ ವ್ಯಾಧಯೋಪಾಡಪಿ ನಾಧಯೋಯಾ ಕಥಂ ಚ ನ ಅನಾವೃಷ್ಟಿಧಮರ್ೋ ವಾ ನಾಸ್ತಿ ಶಬ್ದೋ ನ ದುರ್ಜನಃ ಸ್ವಸ್ನೇ ಪಿ ನೈವ ಧೃಶ್ಯತೇ ಬಲೌ ರಾಜ್ಯ ಪ್ರಶಾಸತಿ ಮೇಲಿನ ಪದ್ಮಪುರಾಣದ ಉಲ್ಲೇಖದ ಅರ್ಥ ಹೀಗಿದೆ : ಬಲಿ ಹೆಸರಿನ ಮಹಾದೈತ್ಯ ದೇವರ ಶತ್ರುವಾಗಿ ಅಪರಾಜೇಯನಾಗಿದ್ದ. ಧರ್ಮ ಯಶ ಮತ್ತು ಪ್ರಜೆಗಳ ರಕ್ಷಣೆಯಲ್ಲಿ ಅವನು ಅತ್ಯಂತ ತರ್ಕಬದ್ಧವಾಗಿದ್ದ. ಬಲಿಯ ರಾಜ್ಯದಲ್ಲಿ ಯಾರಿಗೂ ದುಃಖವಿರಲಿಲ್ಲ, ಯಾರು ಯಾರಿಗೂ ಶತ್ರುವಾಗಿರಲಿಲ್ಲ. ಯಾರಿಗೂ ಯಾವ ಚಿಂತೆಯೂ ಇರಲಿಲ್ಲ. ಅವನ ಆಡಳಿತ ಕಾಲದಲ್ಲಿ ಜನರ ದುಃಖ ಕಷ್ಟ ದೂರವಾಗಿತ್ತು. ಅವನ ರಾಜ್ಯದಲ್ಲಿ ನೀರಿನ ಕೊರತೆ ಇರಲಿಲ್ಲ. ಗೂಂಡಾಗಿರಿ, ಹಠಮಾರಿತನ ಇರಲಿಲ್ಲ. ಮತ್ತು ಕನಸಿನಲ್ಲಿಯೂ ಸಹ ಅಂಥವರು ಕಾಣಿಸುತ್ತಿರಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಉಲ್ಲೇಖವನ್ನು ಗಮನಿಸಿದರೆ ಬಲಿ ರಾಜ್ಯವು ಎಂತಹ ಪ್ರಜಾಪ್ರಭುತ್ವ ಮಾದರಿಯನ್ನು ಒಳಗೊಂಡಿತ್ತು ಎಂಬುದು ಸ್ಪಷ್ಟವಾಗುತ್ತದೆ. ಆದರೆ ವೈದಿಕರು ಇಂತಹ ಬಹುದೊಡ್ಡ ಚರಿತ್ರೆಯನ್ನು ವಿರೂಪಗೊಳಿಸಿದ್ದಾರೆ. ಬಲಿ ಚಕ್ರವತರ್ಿಯ ವಂಶಾವಳಿಯ ಪರಂಪರೆಯು ಮೂಲತಹ ಬೌದ್ಧ ಪರಂಪರೆಯನ್ನು ಸಾರಿಕೊಂಡು ಬಂದವರು. ಬೌದ್ಧರ ಈ ಪರಂಪರೆಯನ್ನು ನಾಶ ಮಾಡಲೆಂದೆ ಚರಿತ್ರೆಯನ್ನೆಲ್ಲಾ ವಿರೂಪಗೊಳಿಸಿ ಇವರನ್ನು ಜನರು ನೆನೆಯಬಾರದು ಬೌದ್ಧ ಚರಿತ್ರೆ ತಿಳಿಯಬಾರದೆಂದು ಹೀಗೆ ವ್ಯವಸ್ಥಿತವಾಗಿ ಹತ್ತಿಕ್ಕಲಾಗಿದೆ. ಭಗವಾನ್ ಬುದ್ಧರ ಪೂರ್ವ ಚರಿತ್ರೆ ಹಾಗೂ ಬುದ್ಧರ ನಂತರದ ಚರಿತ್ರೆ ಎರಡನ್ನು ವಿರೂಪಗೊಳಿಸಲಾಗಿದೆ. ಭಗವಾನ್ ಬುದ್ಧರಿಗೂ ಹಿಂದೆ ಬೌದ್ಧ ಪರಂಪರೆ ಅಸ್ಥಿತ್ವದಲ್ಲಿತ್ತು. 1911 ರಲ್ಲಿ ಆರ್.ಡಿ. ಬ್ಯಾನರ್ಜಿಯವರು ಸಿಂಧೂ ಬಯಲಿನ ಹರಪ್ಪ ಮತ್ತು ಮಹೆಂಜೊದಾರೊಗಳಲ್ಲಿ ಭೂ ಉತ್ಕನನ ಮಾಡುವಾಗ ಸಿಕ್ಕ ಚಕ್ರ ಮತ್ತು ಪಶುಪತಿನಾಥನ ಕೆತ್ತನೆಗಳು ಬೌದ್ಧ ಸಂಸ್ಕೃತಿಯನ್ನು ಬಿಂಬಿಸುತ್ತವೆ. ಬುದ್ಧರು ಬರುವ ಮುನ್ನವೇ ಹಿಂದೆ ಈ ಸಂಸ್ಕೃತಿ ಇತ್ತು ಎಂದು ಅಭಿಪ್ರಾಯ ಪಡುತ್ತಾರೆ. ಪ್ರತಾಪ್ ಚೆಟ್ಸೆ ಅವರ ಇಂಗ್ಲೀಷ್ ಮೂಲ ಕೃತಿಯಾದ ‘ದ ರೆವ್ಯುಲುಷನರಿ ಬುದ್ಧ’ ಕೃತಿಯನ್ನು ‘ಕ್ರಾಂತಿಕಾರಿ ಬುದ್ಧ’ಎಂದು ಲೇಖಕ ಹಾಗೂ ಪತ್ರಕರ್ತ ರವಿಂದ್ರ ಸುಂಟನಕರ Ravindra N S ಕನ್ನಡಕ್ಕೆ ಅನುವಾದಿಸುತ್ತಿದ್ದಾರೆ. ಈ ಕೃತಿಯಲ್ಲು ಸಹ ಬುದ್ಧರು ನಾನೆ ಮೊದಲಲ್ಲ ನಾನು 28ನೇಯವನು. ನನಗಿಂತ ಹಿಂದೆಯೇ ಪಶುಪತಿನಾಥ, ಚಕ್ರವಾಕ, ಬಾವಲಿ, ಪ್ರಹ್ಲಾದ, ವಿರೋಚನಾ ಮುಂತಾದ ಬೌದ್ಧ ತತ್ವಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರದಲ್ಲಿ ನಿರಂತರ ಅಧ್ಯಯನಕಾರರಾಗಿದ್ದರು. ಅವರ ತತ್ವಶಾಸ್ತ್ರ ಮತ್ತು ಸಂಖ್ಯಾಶಾತ್ರವನ್ನು ನಾನು ಕೂಡ ಅಳವಡಿಸಿಕೊಂಡಿದ್ದೇನೆ ಹಾಗಾಗಿ ನಾನು 28ನೇ ಬುದ್ಧ ಎಂದು ಕರೆದುಕೊಂಡಿರುವುದು ಕ್ರಾಂತಿಕಾರಿ ಬುದ್ಧ ಪುಸ್ತಕದಲ್ಲಿ ದಾಖಲಾಗಿದೆ. ಬುದ್ಧ ಎನ್ನುವ ಪದ ಹೆಸರಲ್ಲ ಅದೊಂದು ಡಿಸಿಗ್ನೇಶನ್. ಕಾಲಾನಂತರದಲ್ಲಿ ಅದು ಹೆಸರಿನ ಸ್ವರೂಪ ಪಡೆದುಕೊಂಡಿದೆ. ಬುದ್ಧ ಪೂರ್ವ ಮತ್ತು ಭಗವಾನ್ ಬುದ್ಧರ ನಂತರ ಚರಿತ್ರೆಯನ್ನು ಎರಡು ರೀತಿಯಲ್ಲಿ ವಿರೂಪಗೊಳಿಸಲಾಗಿದೆ. ಭಗವಾನ್ ಬುದ್ಧರ ಪೂರ್ವದಲ್ಲಿ ಬರುವ ಬಲಿ ಚಕ್ರವರ್ತಿಯ ವಂಶಜರು ಮೂಲತಹ ಬೌದ್ಧ ಪ್ರತಿಪಾದಕರಾಗಿದ್ದು ಅವರನ್ನು ಪುರಾಣಗಳಲ್ಲಿ ಬರೆದುಕೊಂಡು ಹಿಂದೂಕರಣ ಮಾಡಿಕೊಳ್ಳಲಾಗಿದೆ ಜೊತೆಗೆ ಅವರನ್ನು ದುಷ್ಟರು ಎಂಬಂತೆ ಬಿಂಬಿಸಲಾಗಿದೆ. ಭಗವಾನ್ ಬುದ್ಧರ ಅನಂತರದ ಚರಿತ್ರೆಯನ್ನು ಮೂಲಭಾಷೆಗೆ ಬರೆಯದೆ ಸಂಸ್ಕೃತದಲ್ಲಿ ಬರೆದುಕೊಂಡು ಅದನ್ನು ಮೂಲನಿವಾಸಿಗಳು ಓದಿ ತಿಳಿದುಕೊಳ್ಳದ ರೀತಿಯಲ್ಲಿ ಬಂಧಿಸಲಾಗಿದೆ. ಒಂದು ವೇಳೆ ಓದಿದರು ಸಹಿತ ಬುದ್ಧರ ನಿಜವಾದ ಚರಿತ್ರೆಯು ಜನರ ಕೈಗೆ ಸಿಗದಂತೆ ಮಾಡಲಾಗಿದೆ. ಈ ರೀತಿ ಮಾಡಿದವರಲ್ಲಿ ಮೊದಲಿಗರು ಬ್ರಾಹ್ಮಣ ಲೇಖಕ ಅಶ್ವಘೋಷ ‘ಬುದ್ಧಚರಿತಂ’ ಬರೆಯುವ ಮೂಲಕ ಬೌದ್ಧ ಸಂಸ್ಕೃತಿ ಹಾಗೂ ಬುದ್ಧರ ನಿಜವದ ಬೊಧನೆಗಳನ್ನು ವಿರೂಪಗೊಳಿಸಿದ್ದಾರೆ ಎಂದು ‘ದ ರೆವ್ಯುಲುಷನರಿ ಬುದ್ಧ’ ಕನ್ನಡಾನುವಾದ ‘ಕ್ರಾಂತಿಕಾರಿ ಬುದ್ಧ’ ಕೃತಿಯಲ್ಲಿ ನಾವು ಬುದ್ಧರ ಚಿಂತನೆಗಳನ್ನು ಹೇಗೆ ಹತ್ಯೆ ಮಾಡಲಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಬೌದ್ಧ ಸಂಸ್ಕೃತಿ ಮತ್ತು ಜೀವನ ಕ್ರಮ ವೈಜ್ಞಾನಿಕವಗಿದ್ದು ಯಾವುದೇ ಮೌಢ್ಯವನ್ನು ಬೆಂಬಲಿಸಿಲ್ಲ. ಆದರೆ ವಿಪ್ರರು ಬೌದ್ಧ ಚರಿತ್ರೆಯನ್ನು ಧ್ವಂಸಗೊಳಿಸಿದ್ದಾರೆ. ಬುದ್ಧರ ಪೂರ್ವದಲ್ಲಿನ ಪಶುಪತಿನಾಥ, ಚಕ್ರವಾಕ, ಬಾವಲಿ, ಪ್ರಹ್ಲಾದ ಮತ್ತು ವಿರೋಚನರಂತಹ ಮಹಾನ್ ಬೌದ್ಧರನ್ನು ಅವರ ತಾತ್ವಿಕತೆಯನ್ನು ಪೌರಾಣಿಕಗೊಳಿಸಿ ಜನರನ್ನು ಧಿಕ್ಕು ತಪ್ಪಿಸಿದ್ದಾರೆ. ಬಲಿಯನ್ನು ಕೊಲ್ಲುವ ಮೂಲಕ ಬೌದ್ಧ ಸಂಸ್ಕೃತಿ ಬಿಂಬವನ್ನು ಅಳಿಸಲಾಗಿದೆ. ಭಗವಾನ್ ಬುದ್ಧರ ಮರಣದ ನಂತರ ಸಾಹಿತ್ಯಾತ್ಮಕ ಚರಿತ್ರೆಯನ್ನು ಭಗ್ನಗೊಳಿಸಲಾಗಿದೆ. ಈ ಮೂಲಕ ಎರಡು ರೀತಿಯ ಸಾಂಸ್ಕತಿಕ ಹತ್ಯೆಯನ್ನು ವೈದಿಕರು ಬಹಳ ಕುತಂತ್ರದಿಂದ ಮಾಡಿದ್ದರೆ. ಇನ್ನು ಮುಂದಾದರು ನಮ್ಮ ಚರಿತ್ರೆಯನ್ನು ಮತ್ತೆ ಪುನರುತ್ಥಾನಗೊಳಿಸಿಕೊಳ್ಳುವ ಕಡೆ ನಾವು ಹೆಜ್ಜೆಯನ್ನಿಡಬೇಕಿದೆ.
ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ Read Post »
ಕಾವ್ಯ ಸಂಗಾತಿ ಅನುವಾದಿತ ಅಬಾಬಿಗಳು (೬ನೇ ಕಂತು) ಆಕರ : ಕಾಲಂ ಸಾಕ್ಷಿಗಾ(ತೆಲುಗು ಅಬಾಬಿಗಳ ಸಂಕಲನ)ಮೂಲ ಲೇಖಕರು : ಷೇಕ್ ಅಬ್ದುಲ್ ಹಕೀಮ್ಕನ್ನಡಾನುವಾದ : ಧನಪಾಲ ನಾಗರಾಜಪ್ಪ ೧೩)ಮೊನ್ನೆ ರಥ ಇಂದು ವಿಗ್ರಹದಿನಕ್ಕೊಂದು ಹೊಸ ಯೋಜನೆದೇಶದಲ್ಲಿ ರಾಜಕೀಯ ಆಧ್ಯಾತ್ಮಿಕಹಕೀಮುಪ್ರಮಾಣಗಳಿಂದ ಪ್ರಸಿದ್ಧರಾಗುವ ಯೋಚನೆ. ೧೪)ದೇವಾಲಯವೋ? ವಿದ್ಯಾಲಯವೋ?ಎಲ್ಲಾದರೂ ಆಣೆಗಳನ್ನು ಮಾಡುವರುಅಸಲು ಆಣೆ ಅಂದರೇನು ಗೊತ್ತಾ?ಹಕೀಮುದೈವವೆಂದರೆ ಇವರಿಗೆ ಆಟದ ವಸ್ತುವೇನು? ೧೫)ಎಲ್ಲರಿಗೂ ತಿಳಿದ ರಹಸ್ಯವೇಪಕ್ಷಗಳ ದೌರ್ಭಾಗ್ಯದ ವಾಗ್ದಾನಗಳುಇಂದಿನ ರೌಡಿಗಳು ನಾಳೆಯ ನಾಯಕರೆ?ಹಕೀಮುದೇಶವೇ ಕಬ್ಜಾ ಆಗುತ್ತಿದೆಯೇನೋ!
ಅನುವಾದಿತ ಅಬಾಬಿಗಳು (೬ನೇ ಕಂತು) Read Post »
ಧಾರಾವಾಹಿ ಆವರ್ತನ ಅದ್ಯಾಯ-41 ಸುಮಿತ್ರಮ್ಮ ಕೋಪದಿಂದ ಕೇಳಿದ ಪ್ರಶ್ನೆಗೆ ನರಹರಿ ತಾನು ಉತ್ತರಿಸಬೇಕೋ, ಬೇಡವೋ ಎಂಬ ಉಭಯಸಂಕಟಕ್ಕೆ ಸಿಲುಕಿದ. ಆದರೆ ಮರುಕ್ಷಣ,‘ನೀನೊಬ್ಬ ಜವಾಬ್ದಾರಿಯುತ ವೈದ್ಯನು ಹೇಗೋ ಹಾಗೆಯೇ ಪ್ರಜ್ಞಾವಂತ ನಾಗರೀಕನೂ ಹೌದು! ಆದ್ದರಿಂದ ನಿನ್ನ ಸುತ್ತಮುತ್ತದ ಅಮಾಯಕ ಜನರಲ್ಲಿ ನಿನ್ನ ಗಮನಕ್ಕೆ ಬರುವಂಥ ತಪ್ಪು ತಿಳುವಳಿಕೆಗಳನ್ನು ನಿವಾರಿಸುವುದೂ ನಿನ್ನ ಕರ್ತವ್ಯ ಎಂಬುದನ್ನು ಮರೆಯಬೇಡ!’ಎಂದು ಅವನ ವಿವೇಕವು ಎಚ್ಚರಿಸಿತು. ಹಾಗಾಗಿ ಕೂಡಲೇ ಚುರುಕಾದ. ‘ಸುಮಿತ್ರಮ್ಮ ನಿಮ್ಮ ಮತ್ತು ಊರಿನವರ ನಂಬಿಕೆಗಳು ಹಾಗೂ ಆ ಗುರೂಜಿಯವರ ಮಾತುಗಳು ಎಷ್ಟು ಸತ್ಯವೋ ಆ ಕುರಿತು ನಾನು ಮಾತಾಡುವುದಿಲ್ಲ. ಅದು ನಿಮಗೂ ಅವರಿಗೂ ಸಂಬಂಧಿಸಿದ ವಿಚಾರ. ಆದರೆ ನೀವೀಗ ಆಸಕ್ತಿಯಿಂದಲೋ, ಅಸಮಾಧಾನದದಿಂದಲೋ ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವುದು ನನ್ನ ಧರ್ಮ. ಆ ಉದ್ದೇಶದಿಂದ ಹೇಳುತ್ತೇನೆ ಕೇಳಿ. ನಾಗರಹಾವೇ ಅಂತಲ್ಲ ಬೇರೆ ಯಾವುದೇ ಹಾವೊಂದು ನಮ್ಮ ಮನೆ ಮತ್ತು ವಠಾರದೊಳಗೆ ಪ್ರವೇಶಿಸಬೇಕಾದರೆ ಆ ಜೀವಿಗೆ ಹಸಿವು ಅಥವಾ ಬಾಯಾರಿಕೆಯಾಗಿದೆ ಮತ್ತದರ ಆಹಾರದ ಜೀವಿಗಳಾದ ಇಲಿ, ಹೆಗ್ಗಣ, ನಾಯಿಮರಿ, ಬೆಕ್ಕು, ಕೋಳಿ ಅಥವಾ ಇನ್ನಿತರ ಜೀವಿಗಳು ಹಾಗೂ ನೀರು ನಮ್ಮ ವಠಾರದಲ್ಲಿಯೇ ಇದೆ ಅಥವಾ ಆ ಹಾವು ಅಲ್ಲಿರಬಹುದಾದ ತನ್ನ ಸಂಗಾತಿಯನ್ನು ಅರಸುತ್ತಲೂ ಬಂದಿರಬಹುದು ಎಂದರ್ಥ. ಆದ್ದರಿಂದ ಯಾವುದೇ ಒಂದು ಬಡಾವಣೆಯೊಳಗೆ ಹಾವುಗಳಿಗೆ ಸಂಬಂಧಿಸಿದ ಇಂಥ ವಸ್ತುಗಳು ಇಲ್ಲವೇ ಇಲ್ಲವೆಂದಾದಲ್ಲಿ ಖಂಡಿತವಾಗಿಯೂ ಆ ಪ್ರದೇಶದಲ್ಲಿ ಯಾವ ಹಾವುಗಳೂ ಕಾಣಿಸಿಕೊಳ್ಳಲು ಸಾಧ್ಯವಿಲ್ಲ. ಹಾಗೂ ಒಂದುವೇಳೆ ಕಾಣಿಸಿಕೊಂಡವೆಂದರೆ ಅದು ಪ್ರಪಂಚದ ಅದ್ಭುತಗಳಲ್ಲಿ ಒಂದೆನ್ನಬಹುದು. ನಾವೆಲ್ಲರೂ ಯೋಚಿಸಬೇಕಾದ ಇನ್ನೊಂದು ಮುಖ್ಯ ಸಂಗತಿಯೇನೆಂದರೆ ಕೇರೆಹಾವು ಅಥವಾ ಇನ್ನಿತರ ಯಾವುದೇ ಹಾವುಗಳು ನಮ್ಮ ಸುತ್ತಮುತ್ತ ಕಂಡು ಬಂದರೆ ಸ್ವಲ್ಪವೂ ತಲೆಕೆಡಿಸಿಕೊಳ್ಳದ ನಾವುಗಳು ಅದೇ ನಾಗರಹಾವೊಂದು ಕಾಣಿಸಿಕೊಂಡ ಕೂಡಲೇ ಏನೇನೋ ತಪ್ಪುನಂಬಿಕೆ ಮತ್ತು ಅರ್ಥವಿಲ್ಲದ ಭಯಕ್ಕೆ ಬಿದ್ದು ಸೋತು ಕುಗ್ಗುತ್ತೇವೆ ಯಾಕೆ…? ಈ ಪ್ರಶ್ನೆಯನ್ನು ಯಾವತ್ತಾದರೂ ನಮಗೆ ನಾವೇ ಕೇಳಿಕೊಂಡಿದ್ದುಂಟಾ…? ಇಲ್ಲ ಅಲ್ಲವೇ? ಬದಲಿಗೆ ನಾವೇನು ಮಾಡುತ್ತೇವೆಂದರೆ ಹಿಂದಿನವರು ಹೇಳುತ್ತ ಬಂದಿರುವ ಅಥವಾ ಯಾರೋ ಅಜ್ಞಾನಿಗಳು ಅಂಥ ಸಂದರ್ಭದಲ್ಲೇ ಹೆಣೆಯುವ ಕಟ್ಟುಕಥೆ ಮತ್ತು ಮೂಢನಂಬಿಕೆಗಳನ್ನೇ ನಂಬಿ ಭಯದಿಂದ ನೆಮ್ಮದಿಯನ್ನು ಕಳೆದುಕೊಳ್ಳುತ್ತೇವಲ್ಲದೇ ಅದೇ ವಿಷಯವನ್ನು ಹಿಡಿದುಕೊಂಡು ಮುಂದಿನ ಜೀವನದ ಸಣ್ಣಪುಟ್ಟ ಸುಖಸಂತೋಷಗಳನ್ನೂ ಹಾಳು ಮಾಡಿಕೊಳ್ಳಲು ತೊಡಗುತ್ತೇವೆ! ಹಾಗಾಗಿ ಸುಮಿತ್ರಮ್ಮಾ ಎಲ್ಲಿಯವರೆಗೆ ನಮ್ಮಲ್ಲಿ ಯಾವುದೇ ಒಂದು ವಿಷಯದ ಕುರಿತು ಸಾಮಾನ್ಯ ಜ್ಞಾನವೇ ಇರುವುದಿಲ್ಲವೋ ಅಲ್ಲಿಯತನಕ ಅದರ ಕುರಿತ ಅಜ್ಞಾನ ಮತ್ತು ಭಯಗಳೂ ನಮ್ಮನ್ನು ಕಾಡುವುದು ಸಹಜವೇ. ಅಂಥ ಭಯ ಪೀಡಿತರಾದವರಿಗೆ ನೀವು ಹೇಳಿದ ಹಾಗೆ ಹಾವಿನ ಸಮಸ್ಯೆಯೂ ಎದುರಾಯಿತೆಂದರೆ ಅವರು ಸಂಪೂರ್ಣ ಕಂಗೆಟ್ಟುಬಿಡುತ್ತಾರೆ. ಅಂಥ ಪರಿಸ್ಥಿತಿಯಲ್ಲಿಯೇ ಆ ಅಮಾಯಕರ ದೌರ್ಬಲ್ಯವನ್ನು ಸುತ್ತಮುತ್ತಲಿನ ಅರೆಬರೆ ಜ್ಞಾನಿಗಳೋ ಅಥವಾ ಪ್ರಕೃತಿಯ ಜೀವಜಾಲ ಪ್ರಕ್ರಿಯೆಯ ಬಗ್ಗೆ ಎಳ್ಳಷ್ಟೂ ತಿಳಿವಳಿಕೆಯಿಲ್ಲದ ಜ್ಯೋತಿಷ್ಯರುಗಳೋ ಅಥವಾ ಸ್ವಯಂಘೋಷಿತ ಗುರೂಜಿ, ಬಾಬಾಗಳೋ ತಮ್ಮ ಲಾಭಕ್ಕಾಗಿ ಬಳಸಿಕೊಂಡು ತಾವೇ ಸೃಷ್ಟಿಸಿದ ಮೂಢನಂಬಿಕೆಗಳನ್ನು ಅವರೊಳಗೆ ತುರುಕಿಸುತ್ತ ಜೀವನ ಪರ್ಯಂತ ಅವರನ್ನು ಶೋಷಿಸುತ್ತಾ ಬಂದಿರುವುದು ಈಗೀಗ ದೇಶದಾದ್ಯಂತ ಕಂಡು ಬರುವ ವಿಲಕ್ಷಣ ಸಮಸ್ಯೆಯಲ್ಲವೇ!’ ಎಂದು ನರಹರಿಯು ಸುಮಿತ್ರಮ್ಮನನ್ನು ಅನುಕಂಪದಿಂದ ನೋಡುತ್ತ ವಿವರಿಸಿದ. ಆದರೆ ಆರಂಭದಲ್ಲಿ ಅವನ ಮಾತುಗಳನ್ನು ಒಲ್ಲದ ಮನಸ್ಸಿನಿಂದ ಕೇಳಿಸಿಕೊಳ್ಳುತ್ತಿದ್ದ ಸುಮಿತ್ರಮ್ಮನಲ್ಲಿ ಬಳಿಕ ವಿಚಿತ್ರ ತಳಮಳವೂ ಗೊಂದಲವೂ ಆರಂಭವಾಗಿತ್ತು. ಹಾಗಾಗಿ ಅವರು ಮೌನವಾಗಿ ಅವನ ವಿಚಾರಧಾರೆಯನ್ನು ಆಲಿಸತೊಡಗಿದ್ದರು. ಅವರ ಸ್ಥಿತಿಯನ್ನು ಗಮನಿಸಿದ ನರಹರಿಯು ಮತ್ತೆ ಮಾತು ಮುಂದುವರೆಸಿದ. ‘ನಮ್ಮ ವಠಾರದಲ್ಲೂ ಸುತ್ತಾಡುತ್ತಿರುವ ಹಾವಿನ ಕಥೆಯೂ ಇದೇ ಸುಮಿತ್ರಮ್ಮ. ಹಸಿದ ಹಾವೊಂದಕ್ಕೆ ಅದರ ಆಹಾರದ ಜೀವಿಗಳು ನೇರವಾಗಿ ಬಾಯಿಗೆ ಬಂದು ಬೀಳುತ್ತವೆಯೇ ಹೇಳಿ…? ಆ ಹಾವು ಅವುಗಳನ್ನು ಹುಡುಕಾಡಿ ಬೆನ್ನುಹತ್ತಿ ಬೇಟೆಯಾಡಿಯೇ ತಿನ್ನಬೇಕಲ್ಲವೇ. ನಾನು ಸ್ವತಃ ಕಂಡ, ಓದಿದ ಮತ್ತು ಒಂದಷ್ಟು ಉರಗತಜ್ಞರಿಂದಲೂ ತಿಳಿದುಕೊಂಡ ಮಾಹಿತಿಯ ಪ್ರಕಾರ ಇನ್ನೊಂದೆರಡು ತಿಂಗಳಲ್ಲಿ ಹಾವುಗಳ ಸಂತಾನೋತ್ಪತ್ತಿ ಕಾಲ ಆರಂಭವಾಗಲಿದೆ. ಆ ಕಾಲಕ್ಕಿಂತ ಒಂದೆರಡು ತಿಂಗಳು ಮುಂಚಿತವಾಗಿ ಹೆಚ್ಚಿನ ಪ್ರಭೇದದ ಹಾವುಗಳೆಲ್ಲ ತೀವ್ರ ಆಹಾರದ ಹುಡುಕಾಟದಲ್ಲಿ ತೊಡಗುತ್ತವೆ. ಆ ಮೂಲಕ ಅವು ಮುಂದಿನ ಎರಡು, ಮೂರು ತಿಂಗಳಿಗೆ ಬೇಕಾಗುವಷ್ಟು ಆಹಾರವನ್ನು ತಿಂದು ಕೊಬ್ಬನ್ನಾಗಿ ಪರಿವರ್ತಿಸಿಕೊಂಡು ದಷ್ಟಪುಷ್ಟವಾಗಿ ಬೆಳೆದು ವಂಶೋತ್ಪತ್ತಿಗೆ ತಯಾರಾಗುತ್ತವೆ. ಅಂಥ ಕಾಲದಲ್ಲಿ ಹಾವುಗಳ ಓಡಾಟವೂ ಹೆಚ್ಚಾಗಿರುತ್ತದೆ. ಅದೇ ಸಮಯದಲ್ಲಿ ನಾಗನಿಗೆ ಸಂಬಂಧಿಸಿದ ನಮ್ಮ ನಂಬಿಕೆ, ಆಚರಣೆಗಳಿಗೂ ಜೀವ ಬರುತ್ತದೆ. ಹಾಗಾಗಿ ಆ ನಾಗರಹಾವಿನ ವಿಷಯದಲ್ಲೂ ಯಾರ್ಯಾರೋ ಏನೇನೋ ಹೇಳಿದ್ದನ್ನೂ ಮತ್ತು ನಿಮಗೆ ನೀವೇ ಒಂದಷ್ಟು ಕಲ್ಪಿಸಿಕೊಂಡದ್ದನ್ನೂ ಕಲಸುಮೇಲೊಗರ ಮಾಡಿಕೊಂಡು ಮನಸ್ಸನ್ನು ಕೆಡಿಸಿಕೊಂಡಿದ್ದೀರಷ್ಟೆ!’ ಎಂದು ಆಪ್ತವಾಗಿ ವಿವರಿಸಿದ. ನರಹರಿಯ ಮಾತುಗಳನ್ನು ಪೂರ್ತಿಯಾಗಿ ಕೇಳಿಸಿಕೊಂಡ ಸುಮಿತ್ರಮ್ಮ ಕೊನೆಯಲ್ಲಿ ಅವನ ವಿಚಾರದಲ್ಲಿದ್ದ ಸತ್ಯವನ್ನು ಅರಗಿಸಿಕೊಳ್ಳಲಾಗದೆ ಪೇಚಾಡತೊಡಗಿದರು. ಅತ್ತ ರಾಧಾಳಿಗೂ ತನ್ನ ನಂಬಿಕೆಯು ನಿಂತ ನಿಲುವಿನಲ್ಲೇ ಬುಡಮೇಲಾದುದು ಗೊಂದಲವನ್ನೂ ವಿಸ್ಮಯವನ್ನೂ ತರಿಸಿತ್ತು. ಆದರೆ ಡಾ. ನರಹರಿ ಅವರದೇ ಹಿತಚಿಂತಕನಾಗಿ ಕರುಣೆಯಿಂದ ಮಾತಾಡಿದ್ದ. ಅವಳು ಕೂಡಾ ಅವನ ಮಾತುಗಳನ್ನು ಯಾವುದೇ ವಿರೋಧವಿಲ್ಲದೆ ತಲ್ಲೀನತೆಯಿಂದ ಕೇಳಿಸಿಕೊಂಡಿದ್ದಳು. ಆದ್ದರಿಂದ ಅಷ್ಟರವರೆಗೆ ಅವಳನ್ನು ಪೀಡಿಸುತ್ತಿದ್ದ ನಾಗದೋಷವೆಂಬ ಭಯವು ಮೆಲ್ಲನೆ ಕಣ್ಮರೆಯಾಗಿ ಹಗುರ ಭಾವವು ಮೂಡಿತು. ಹಾಗಾಗಿ ಅವಳು, ‘ದೇವರೇ ನಮ್ಮನ್ನು ಕಾಪಾಡಿದೆಯಪ್ಪಾ…!’ ಎಂದು ಕಣ್ಣು ತುಂಬಿಕೊಂಡು ಮನದಲ್ಲೇ ಕೈಮುಗಿದವಳು,‘ಅಂದರೆ ಡಾಕ್ಟ್ರೇ, ನನ್ನ ಗಂಡನನ್ನು ಕಾಡುತ್ತಿರುವುದು ನಾಗದೋಷದ ತೊಂದರೆಯಲ್ಲವಾ…? ಎಂದು ಇನ್ನಷ್ಟು ಸ್ಪಷ್ಟವಾಗಿ ತಿಳಿದುಕೊಳ್ಳುವ ಆತುರದಿಂದ ಪ್ರಶ್ನಿಸುತ್ತ ಕಣ್ಣೀರೊರೆಸಿಕೊಂಡಳು. ‘ಛೇ, ಛೇ! ಅಲ್ಲಮ್ಮಾ. ಇದೊಂದು ಯಾರಿಗೂ ಬರಬಹುದಾದ ಗಂಭೀರ ಕಾಯಿಲೆ! ಆದರೂ ಹೆದರಬೇಕಾಗಿಲ್ಲ. ಇದಕ್ಕೂ ಸರಿಯಾದ ಚಿಕಿತ್ಸೆಯಿದೆ! ಎಂದು ನರಹರಿ ಮೃದುವಾಗಿ ಹೇಳಿ ಅವಳನ್ನು ಸಂತೈಸಿದ. ಮರುಕ್ಷಣ ರಾಧಾ ಅವನನ್ನು ಧನ್ಯತೆಯಿಂದ ದಿಟ್ಟಿಸಿದವಳು ತಟ್ಟನೆ ಸುಮಿತ್ರಮ್ಮನತ್ತ ಹೊರಳಿ,‘ನಮ್ಮಂಥ ಬಡವರನ್ನು ಹೀಗೆಲ್ಲ ಶೋಷಿಸಬಾರದಿತ್ತು ಸುಮಿತ್ರಮ್ಮಾ ನೀವು…!’ ಎಂಬಂತೆ ವಿಷಾದದಿಂದ ದಿಟ್ಟಿಸಿದಳು. ಅವಳ ನೋಟವನ್ನು ಕಂಡ ಸುಮಿತ್ರಮ್ಮನಿಗೆ ಅವಮಾನದಿಂದ ನಿಂತ ನೆಲವೇ ಕುಸಿದಂತಾಯಿತು. ಆದ್ದರಿಂದ ಎತ್ತಲ್ಲೋ ನೋಡುತ್ತ ನಿಂತರು. ಅದನ್ನು ಗಮನಿಸಿದ ನರಹರಿಯು,‘ಸುಮಿತ್ರಮ್ಮಾ, ನಮ್ಮ ನಾಡಿನ ಒಂದಷ್ಟು ಅಮಾಯಕ ಜನರು, ನಾಗರ ಹಾವಿಗೆ ಸಂಬಂಧಿಸಿದೆ ಎಂದು ನಂಬಿರುವ ನಾಗದೋಷ ಎಂಬ ಸಂಗತಿ ಅಥವಾ ಅಂಥದ್ದೊಂದು ನಂಬಿಕೆಯ ಕುರಿತು ನಮ್ಮ ಸನಾತನವಾದ ಯಾವ ಶಾಸ್ತ್ರಗ್ರಂಥಗಳಲ್ಲೂ ಉಲ್ಲೇಖವಿಲ್ಲಮ್ಮಾ…! ಇದು ನಮ್ಮ ನಡುವೆಯೇ ಇರುವ ಕೆಲವು ಸ್ವಾರ್ಥ ಬುದ್ಧಿಗಳು ತಮ್ಮ ತಮ್ಮ ಲಾಭಕ್ಕೋಸ್ಕರ ಸೃಷ್ಟಿಸಿರುವ ವ್ಯಾಪಾರಿ ನಂಬಿಕೆಗಳಷ್ಟೆ!’ ಎಂದು ಒತ್ತಿ ಹೇಳಿದ. ಅಷ್ಟು ಕೇಳಿದ ಸುಮಿತ್ರಮ್ಮ ಈಗ ತೀವ್ರ ಗೊಂದಲಕ್ಕೆ ಬಿದ್ದರು. ಆದರೂ ನರಹರಿಯೊಂದಿಗೆ ವಾದಿಸುವ ಶಕ್ತಿಯಾಗಲೀ, ಜ್ಞಾನವಾಗಲೀ ಇಲ್ಲದ ಅವರು,‘ಏನೋ ಡಾಕ್ಟ್ರೇ, ನನಗೊಂದೂ ಅರ್ಥವಾಗುವುದಿಲ್ಲ. ಆ ಗುರೂಜಿಯವರು ನೋಡಿದರೆ ನಾಗದೋಷದಿಂದಲೇ ನಾಗರಹಾವು ಸುತ್ತಾಡುವುದು. ಅದೇ ಕಾರಣಕ್ಕೆ ನಿಮ್ಮನ್ನು ಕಾಯಿಲೆ ಕಸಾಲೆಗಳೂ ಮತ್ತಿತರ ತೊಂದರೆಗಳೂ ಕಾಡುತ್ತಿರುವುದು. ಆ ದೋಷವನ್ನು ನಿವಾರಿಸಿಕೊಳ್ಳದಿದ್ದರೆ ಕೊನೆಯ ತನಕವೂ ನೀವೆಲ್ಲ ನರಳುತ್ತಲೇ ಸಾಯಬೇಕಾಗುತ್ತದೆ! ಅದಕ್ಕೆ ಆ ಶಾಸ್ತ್ರ ಮಾಡಿಸಿ, ಈ ಪೂಜೆ ಮಾಡಿಸಿ ಅಂತಾರೆ. ನೀವು ನೋಡಿದರೆ ಬೇರೇನೋ ಹೇಳುತ್ತಿದ್ದೀರಿ. ಯಾವುದನ್ನು ನಂಬಬೇಕೋ ಯಾವುದನ್ನು ಬಿಡಬೇಕೋ ಒಂದೂ ಅರ್ಥವಾಗುತ್ತಿಲ್ಲ. ಆದರೆ ಈಗ ಯೋಚಿಸಿದರೆ ಆ ಗುರೂಜಿಯನ್ನೂ ಊರ ಕೆಲವರ ಮಾತುಗಳನ್ನೂ ನಂಬಿಕೊಂಡು ನಾನೂ ಹೆದರಿದೆನಲ್ಲದೇ ಈ ಪಾಪದ ಹುಡುಗಿಯನ್ನೂ ಹೆದರಿಸಿಬಿಟ್ಟೆನೇನೋ ಅಂತನೂ ಅನ್ನಿಸುತ್ತದೆ. ಅಯ್ಯೋ ದೇವರೇ…!’ಎಂದು ಪಶ್ಚಾತ್ತಾಪಪಟ್ಟರು. ಅಷ್ಟು ಕೇಳಿದ ರಾಧಾಳಲ್ಲೂ ನೆಮ್ಮದಿಯ ಭಾವ ಮೂಡಿತು. ‘ಸುಮಿತ್ರಮ್ಮಾ, ಒಬ್ಬ ಮನುಷ್ಯನ ಬಹಳ ದೊಡ್ಡ ಗೆಲುವೆಂದರೆ ಅವನು ತನ್ನ ತಪ್ಪಿಗೆ ಪಡುವ ಪಶ್ಚಾತ್ತಾಪವಂತೆ! ಆದ್ದರಿಂದ ಯಾವುದೇ ಒಂದು ವಿಷಯವಿರಲಿ ಅದನ್ನು ಕುರುಡಾಗಿ ನಂಬುವುದಕ್ಕಿಂತ ಧೈರ್ಯದಿಂದ ಪ್ರಶ್ನಿಸುತ್ತ ಸ್ವಂತ ಬುದ್ಧಿ ಮತ್ತು ವಿವೇಕದಿಂದ ವಿಚಾರ ಮಾಡಿ ನೋಡಿ ಸ್ವೀಕರಿಸುವುದು ಒಳ್ಳೆಯದಲ್ಲವೇ. ನಾವೆಲ್ಲರೂ ಆ ಮನಸ್ಥಿತಿಯನ್ನು ಬೆಳೆಸಿಕೊಂಡೆವೆಂದರೆ ಆಮೇಲೆ ಯಾರೂ ನಮ್ಮನ್ನು ಮೋಸಗೊಳಿಸಲು ಸಾಧ್ಯವಿಲ್ಲ! ನಮ್ಮ ಗೋಪಾಲ ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಿದ್ದಾನೆ. ಈ ರೋಗ ಭಾದಿಸುವ ಮನುಷ್ಯರು ಕೆಲವೊಮ್ಮೆ ಅದರ ತೀವ್ರತೆಗೆ ಸಂಪೂರ್ಣ ಸ್ವಾಧೀನವನ್ನು ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಾರೆ. ಅವನ ವರ್ತನೆಗಳನ್ನೂ, ನಿಮ್ಮೊಳಗಿನ ನಂಬಿಕೆಗಳನ್ನೂ ಒಂದಕ್ಕೊಂದು ತಾಳೆ ಹಾಕಿ ಭ್ರಮೆಗೆ ಬಿದ್ದು ಹೆದರಿಕೊಂಡಿದ್ದೀರಷ್ಟೆ!’ ಎಂದು ಹೇಳಿದ ನರಹರಿ ರಾಧಾಳತ್ತ ತಿರುಗಿ,‘ನೋಡಮ್ಮಾ ನಿಮ್ಮ ಬಂಧುಗಳು ಯಾರಾದರಿದ್ದರೆ ಬೇಗ ಕರೆಸಿಕೊಂಡು ಇವನನ್ನು ಆದಷ್ಟು ಬೇಗ ಆಸ್ಪತ್ರೆಗೆ ಸೇರಿಸಿ. ಹುಷಾರಾಗುತ್ತಾನೆ!’ಎಂದು ಹೇಳಿ ಹೊರಡಲನುವಾದ. ಆದರೆ ರಾಧಾಳಿಗೆ ಭಯವಾಯಿತು.‘ಅಯ್ಯಯ್ಯೋ ಡಾಕ್ಟ್ರೇ… ಇಲ್ಲಿ ಸಮೀಪದಲ್ಲಿ ನಮ್ಮವರು ಯಾರೂ ಇಲ್ಲವಲ್ಲ ಏನು ಮಾಡಲೀ…!’ಎಂದು ಅಳತೊಡಗಿದಳು. ನರಹರಿಗೆ ಕನಿಕರವೆನಿಸಿತು.‘ಆಯ್ತಮ್ಮ ಅಳಬೇಡಿ. ಕಾರು ತರುತ್ತೇನೆ. ಅಡ್ಮಿಟ್ ಮಾಡೋಣ!’ಎಂದವನು ಕೂಡಲೇ ಮನೆಗೆ ಹೋಗಿ ಕಾರು ತಂದು ರಾಧಾಳೊಂದಿಗೆ ಗೋಪಾಲನನ್ನು ಕೂರಿಸಿಕೊಂಡು ಆಸ್ಪತ್ರೆಗೆ ಹೊರಟ. ನರಹರಿಯ ಕಾರು ಕಣ್ಮರೆಯಾಗುವವರೆಗೂ ಮರಗಟ್ಟಿ ನಿಂತು ನೆಟ್ಟದೃಷ್ಟಿಯಿಂದ ನೋಡುತ್ತಿದ್ದ ಸುಮಿತ್ರಮ್ಮ ಆಮೇಲೆ ನಿಧಾನವಾಗಿ ಮನೆಯತ್ತ ಹೆಜ್ಜೆ ಹಾಕಿದರು. ಆದರೆ ಅರ್ಥವಾಗದ ಆಲೋಚನೆ ಮತ್ತು ದ್ವಂದ್ವ ತಾಕಲಾಟಗಳಿಗೆ ಸಿಲುಕಿದ್ದ ಅವರ ಮನಸ್ಸು ಗಿಡುಗನ ದಾಳಿಯಿಂದ ನೆಲೆ ತಪ್ಪಿದ ಹಕ್ಕಿಯಂತೆ ಒದ್ದಾಡುತ್ತಿತ್ತು. ಅವರು ಅದನ್ನು ಸಹಿಸಲಾಗದೆ ಅಶಾಂತರಾಗಿ ನಡೆಯುತ್ತಿದ್ದರು. *** ಆಸ್ಪತ್ರಗೆ ಹೋಗುತ್ತಿದ್ದ ನರಹರಿಯು ರಾಧಾಳೊಡನೆ ಮಾತಿಗಾರಂಭಿಸಿದವನು, ನಮ್ಮ ಪ್ರಾಚೀನರಿಂದ ಸೃಷ್ಟಿಯಾದ ನಾಗಾರಾಧನೆ ಮತ್ತು ಅದರ ಮಹತ್ವದ ಕುರಿತು ಹಾಗೂ ಅಂಥದ್ದೊಂದು ನಿಸರ್ಗಾರಾಧನೆಯ ಆಚರಣೆಗೆ ಈಚೀಚೆಗೆ ಸೋಕಿರುವ ‘ದೋಷ’ ಎಂಬ ಹುಸಿನಂಬಿಕೆಯ ಕುರಿತೂ ಅವಳಿಗೆ ಸರಳವಾಗಿ ವಿವರಿಸಿ ಸ್ಪಷ್ಟವಾಗಿ ಮನವರಿಕೆ ಮಾಡಿಸುತ್ತ ಸಾಗಿದ. ಅದರಿಂದ ಅವಳಲ್ಲೂ ಆ ಕುರಿತ ಅಜ್ಞಾನ ಮತ್ತು ಭಯ ನಿಧಾನವಾಗಿ ಕಡಿಮೆಯಾಗುತ್ತ ಅವಳು ಮತ್ತಷ್ಟು ಗೆಲುವಾದಳು. ಆಗ ಅವಳಿಗೊಂದು ವಿಚಾರವೂ ನೆನಪಿಗೆ ಬಂತು. ಆದ್ದರಿಂದ ತಮ್ಮ ವಠಾರದಲ್ಲಿ ಸುತ್ತಾಡುತ್ತಿದ್ದ ನಾಗರಹಾವಿನ ಕಥೆಯನ್ನೂ ಮತ್ತದರ ಸಲುವಾಗಿ ಸುಮಿತ್ರಮ್ಮ ಬಂದು ತಮ್ಮನ್ನು ಹೆದರಿಸುತ್ತಿದ್ದುದನ್ನೂ, ಅದಕ್ಕೆ ಸಂಬಂಧಿಸಿ ಸಮೀಪದ ದೊಡ್ಡ ಕಾಡೊಂದು ಇನ್ನು ಕೆಲವೇ ತಿಂಗಳೊಳಗೆ ನೆಲಸಮವಾಗಿ ಜೀರ್ಣೋದ್ಧಾರವಾಗಲಿರುವುದನ್ನೂ, ಆ ಕೆಲಸವನ್ನು ಊರಿನವರೂ ಮತ್ತು ತಮ್ಮ ವಠಾರದವರೂ ಕೂಡಿಯೇ ಮಾಡಬೇಕೆಂದು ಏಕನಾಥ ಗುರೂಜಿಯವರು ಆಜ್ಞೆ ಮಾಡಿರುವುದನ್ನೂ ಸವಿವರವಾಗಿ ಅವನಿಗೆ ತಿಳಿಸಿದಳು. ಅಷ್ಟು ಕೇಳಿದ ನರಹರಿಗೆ ತನ್ನ ಹೃದಯವನ್ನು ಯಾರೋ ಬಲವಾಗಿ ಹಿಂಡಿದಂತಾಯಿತು! ಏಕೆಂದರೆ ಅವನು ಕೂಡಾ ಬುಕ್ಕಿಗುಡ್ಡೆಯ ಸುತ್ತಮುತ್ತಲಿನ ಕಾಡು ಗುಡ್ಡಗಳನ್ನೂ ಮುಖ್ಯವಾಗಿ ನಿತ್ಯ ಹರಿದ್ವರ್ಣದ ಆ ದೇವರಕಾಡನ್ನೂ, ಅದರ ಶುದ್ಧ ಆಮ್ಲಜನಕವನ್ನೂ ಹಾಗೂ ವರ್ಷವಿಡೀ ತುಂಬಿ ಹರಿಯುತ್ತ ಇಡೀ ಊರಿಗೆ ತಣ್ಣನೆಯ ನೀರನ್ನು ಪೂರೈಸುತ್ತಿದ್ದ ಅಲ್ಲಿನ ಬೃಹತ್ ಮದಗವನ್ನೂ ನೋಡಿಯೇ ಮನಸೋತು ಅಲ್ಲಿ ಜಾಗವನ್ನು ಕೊಂಡು ಮನೆ ಕಟ್ಟಿಸಿ ಬಾಳಲು ಮನಸ್ಸು ಮಾಡಿದ್ದವನು. ಅಷ್ಟುಮಾತ್ರವಲ್ಲದೇ, ಅವನು ತನ್ನ ಬಿಡುವಿನ ಸಮಯವನ್ನು ಹಾಗೂ ರಜಾದಿನಗಳ ಬಹುಪಾಲನ್ನು ಸ್ವರ್ಗದಂಥ ಆ ಕಾಡಿನಲ್ಲೂ, ಅದರೊಳಗಿನ ಸರೋವರದ ದಡದಲ್ಲೂ ಕುಳಿತು ಕಳೆಯುತ್ತ ಅಲ್ಲಿನ ಪ್ರಾಣಿಪಕ್ಷಿಗಳ ಕಲವರವನ್ನೂ ಇತರ ಜೀವರಾಶಿಗಳ ವಿಸ್ಮಯ ಜಗತ್ತನ್ನೂ ಕಂಡು ಆಸ್ವಾದಿಸುತ್ತ ಬಂದಂಥ ಮನಸ್ಥಿತಿಯವನು. ಹಾಗಾಗಿ ಆ ಹಸಿರು ತಾಣವನ್ನು ಅವನು ತನ್ನ ಜೀವಕ್ಕಿಂತಲೂ ಮಿಗಿಲಾಗಿ ಪ್ರೀತಿಸುತ್ತಿದ್ದ. ಆದರೆ ಆ ಅಮೂಲ್ಯ ಪರಿಸರವು ಇನ್ನು ಕೆಲವೇ ಕಾಲದೊಳಗೆ ಸುಡುಗಾಡಾಗಿ ಬಿಡಲಿದೆ ಎಂಬ ಸತ್ಯವನ್ನು ಅವನಿಂದ ಅರಗಿಸಿಕೊಳ್ಳಲಾಗಲಿಲ್ಲ! ಅದೇ ನೋವಿನಿಂದ ಮೌನವಾಗಿ ಕಾರು ಚಲಾಯಿಸುತ್ತಿದ್ದ. ಅವನು ಸಾಗುತ್ತಿದ್ದ ದಾರಿಯುದ್ದಕ್ಕೂ ಕಣ್ಣ ಮುಂದೆ ಚಿತ್ರಪಟಗಳಂತೆ ಸರಿದು ಹೋಗುತ್ತಿದ್ದ ಬೆಟ್ಟಗುಡ್ಡಗಳೂ, ಗಿಡಮರ ಬಳ್ಳಿಗಳೂ
ಕಾವ್ಯ ಸಂಗಾತಿ ಒಂಥರಾ ಭಯ ಸಂತೆಬೆನ್ನೂರು ಫೈಜ್ನಟ್ರಾಜ್ ಬೆಳೆದಷ್ಟೂ ಭಯಬಿದಿರಿಗೆಬೆತ್ತ, ಬುಟ್ಟಿ, ಕೊಳಲಾಗುವ ಹುನ್ನಾರಕೆ* ಹರಿದಷ್ಟೂ ನದಿಗೆ ಭಯಸಾಗರದಿಕಳೆದೇ ಹೋಗುವ ದುಗುಡಕೆ* ಮಣ್ಣಲಿ ಮಲಗಿದಷ್ಟೂ ಬೀಜಕ್ಕೆ ಭಯಟಿಸಿಲೊಡೆದುಮಣ್ಣ ಬಂಧ ದೂರಾದೀತೆಂದು* ನಡೆದಷ್ಟು ಆತಂಕಗುರಿ ಮುಟ್ಟಿ ಮುಂದೆಮೈಲಿಗಲ್ಲಾಗಿ ತಟಸ್ಥನಾಗೋ ತುಮುಲ* ಒಲವೂ ಅಷ್ಟೇ ಪ್ರೀತಿಸಿದಷ್ಟು ಭಯಕಳೆದುಕೊಂಡುಒಳಗೇ ಸತ್ತು ಹೋಗಬಹುದೆಂದು!
ಕಾವ್ಯ ಸಂಗಾತಿ ದೀಪಾವಳಿ ಬಾಪು ಗ. ಖಾಡೆ ತಳಿರು-ತೋರಣದ ಚಿತ್ತಾರ ಬಾಗಿಲುರಂಗವಲ್ಲಿಯ ಸಿಂಗಾರ ಬಯಲುಸಡಗರ ಸಂಭ್ರಮ ಸುಳಿಸುಳಿದಾಡಲುಮನೆ-ಮನೆಯಲ್ಲಿ ದೀಪೋತ್ಸವ ಹೂ ಬಾಣ ಪಟಾಕಿ ಸುರು-ಸುರು ಬತ್ತಿಆಕಾಶ ಬುಟ್ಟಿಯ ಮಿನುಗುವ ಜ್ಯೋತಿಸಾಲು ದೀಪಗಳ ಹೊಣ್ಣಿನ ಕಾಂತಿಮನೆ-ಮನೆಯಲ್ಲಿ ದೀಪೋತ್ಸವ ನಗುಮೊಗದಿಂದಲಿ ನಾರಿಯರೆಲ್ಲರೂಬಂಧು-ಬಳಗಕೆ ಆರತಿ ಬೆಳಗಿಸವಿ ಸವಿ ಮಾತಲಿ ಸಿಹಿಯನು ಹಂಚಲುಮನೆ-ಮನೆಯಲ್ಲಿ ದೀಪೋತ್ಸವ ಮಹಾಲಕುಮಿಗೆ ಮಂಗಳದಾರುತಿಅಂಗಡಿಯಲ್ಲಿ ಹೊಸ ಲೆಕ್ಕದ ಪುಸ್ತಕಶುಭ ಕಾರ್ಯಕ್ಕೆ ಬಲಿಪಾಡ್ಯಮಿಮನೆ ಮನೆಯಲ್ಲಿ ದೀಪೋತ್ಸವ ಕಾರ್ತಿಕ ಮಾಸದ ಮಾಗಿಯ ಚಳಿಗೆಸಗ್ಗವೇ ಇಳಿದಿದೆ ನಮ್ಮೀ ಧರೆಗೆಚಿಣ್ಣರ ಕಣ್ಣಲ್ಲಿ ಬೆಳ್ಳಿಯ ಮಿಂಚುಮನೆ-ಮನೆಯಲ್ಲಿ ದೀಪೋತ್ಸವ
You cannot copy content of this page