ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಅಂಬೇಡ್ಕರ್ ಜಯಂತಿ ವಿಶೇಷ

ಡಾ ಶಶಿಕಾಂತ ಪಟ್ಟಣ ಪುಣೆ

ಕೆಂಪು ಸೂರ್ಯ

ಕಪ್ಪು ಮಣ್ಣಿನ
ದಲಿತ ಕೇರಿಯ
ಮಹಾರಾಷ್ಟ್ರದ
ಕೆಂಪು ಸೂರ್ಯ.

ಬುದ್ಧ ಬಸವ ಮಾರ್ಕ್ಸ್
ಪುಲೆ ಶಾಹು ಚಿಂತನ
ಬರಿಗಾಲಿನ ಪಯಣ
ಕಿತ್ತು ತಿನ್ನುವ ಬಡತನ

ಶೃದ್ಧೆ ಶ್ರಮದ ಗೆಳೆತನ
ಕೊಲಂಬಿಯಾ ಶಿಕ್ಷಣ
ನೂರು ಪದವಿಯ ಜಾಣ
ಸತ್ಯ ಸಮತೆಯ ಬಾಣ .

ಹಗಲಿರುಳು ಕಠಿಣ ಕಾರ್ಯ
ಬರೆದಿಟ್ಟರು ಲಿಖಿತ ಘಟನಾ ,
ಭಾರತ ದೇಶದ ಮಾನ ಸಮ್ಮಾನ
ಡಾ ಅಂಬೇಡ್ಕರರ ದಿವ್ಯ ಜ್ಞಾನ .

ನ್ಯಾಯಕ್ಕಾಗಿ ಘೋಷಣಾ
ಇಲ್ಲವಾಯಿತು ಶೋಷಣಾ
ಬನ್ನಿ ಭಾರತೀಯರೇ
ಉಳಿಸುವ ನಮ್ಮ ಸಂವಿಧಾನ.

ಕೆಂಪು ಸೂರ್ಯ ಮುಳಗಲಾರ
ಸಮಾನತೆಯ ಹರಿಕಾರ .
ಬಾಬಾ ಸಾಹೇಬ ಅಮರ ರಹೇ
ಬುದ್ಧ ಬಸವ ಜಿಂದಾಬಾದ್ .


About The Author

2 thoughts on “”

Leave a Reply

You cannot copy content of this page

Scroll to Top