ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಹಾ.ಮ ಸತೀಶ ಬೆಂಗಳೂರು ಅವರ ಗಜಲ್

ಕಾವ್ಯ ಸಂಗಾತಿ ಹಾ.ಮ ಸತೀಶ ಬೆಂಗಳೂರು ಗಜಲ್ ಸಾವಿರ ಬಾರಿ ಅಲೆದರೂ, ಪ್ರೀತಿಯು ಸಿಗಲಿಲ್ಲನಿನ್ನನೆ ಹುಡುಕುತ ಬಂದರೂ,ಪ್ರೀತಿಯು ಸಿಗಲಿಲ್ಲ ನಿನ್ನಯ ಹತ್ತಿರ ಬೇಡಿದೆ,ನೀನು ಹೋದೆ ಎಲ್ಲಿಗೆಜೀವ ನನಸಲಿ ನಿಂದರೂ,ಪ್ರೀತಿಯು ಸಿಗಲಿಲ್ಲ ಚೆಲುವ ಬೀರಿ ಮನಸನಿಂದು,ಕದಡಿ ಹೋದೆ ಏತಕೆಸವಿಯು ಬಂದು ಕೂತರೂ,ಪ್ರೀತಿಯು ಸಿಗಲಿಲ್ಲ ಚಿತ್ತದಲ್ಲಿ ಪ್ರೇಮರಾಗ, ಬೆರೆತು ಇರಲು ಹೋದೆಯಾಮೋಹ ಸಮಯ ಇದ್ದರೂ, ಪ್ರೀತಿಯು ಸಿಗಲಿಲ್ಲ ಸೊರಗಿ ಹೋದ ಮುಖದ ಭಾವ, ನನಗೆ ಏಕೆ ಈಶಅತ್ತು ಕರೆದು ಹೇಳಿದರೂ, ಪ್ರೀತಿಯು ಸಿಗಲಿಲ್ಲ ಹಾ.ಮ ಸತೀಶ ಬೆಂಗಳೂರು

ಹಾ.ಮ ಸತೀಶ ಬೆಂಗಳೂರು ಅವರ ಗಜಲ್ Read Post »

ಕಾವ್ಯಯಾನ

ಲಕ್ಷ್ಮೀದೇವಿ ಪತ್ತಾರ ” ಮುಂದುವರೆದಿದೆ”

ಕಾವ್ಯ ಸಂಗಾತಿ ಲಕ್ಷ್ಮೀದೇವಿ ಪತ್ತಾರ “ಮುಂದುವರೆದಿದೆ” ಹೊಸದೆನ್ನುವುದು ಈ ಜಗದಲ್ಲಿಯಾವುದಿದೆ ?ಗಮನವಿಟ್ಟು ನೋಡಿದರೆಎಲ್ಲವೂ ಹಳೆಯದರ ಹೊಸ ರೂಪವಷ್ಟೆ ಹುಟ್ಟುವುದು ಅದೇ ಹಳೆಯ ಆತ್ಮ ಸಾಯುವುದು ಅವೆ ಪಂಚಭೂತಗಳುಸತ್ತಿರುವುದು ಹಳೆಯ ಸಂಬಂಧಹುಟ್ಟುವುದು ಮತ್ಯಾವುದೋ  ಹೊಸ ಬಂಧ ಇದ್ದದ್ದನ್ನು ಲಯ ಮಾಡಲು ಬಾರದು ಇಲ್ಲದನ್ನು ಸೃಷ್ಟಿಸಲು  ಆಗದು ಸೃಷ್ಟಿಯು ಇಲ್ಲ  , ಲಯವೂ ಇಲ್ಲಅದೇ ಮುರಿದು ಕಟ್ಟುವ (  ಕಾರ್ಯ )ದೃಷ್ಟಿ ಕೆಟ್ಟದ್ದು ಕಳೆಯುವುದಿಲ್ಲಒಳ್ಳೆಯದು ಅಳಿಯುವುದಿಲ್ಲಕೊರಗಿ,ಮರುಗಲು ಕಾರಣವೇ ಇಲ್ಲ. ಈಗ ಇರುವುದೆಲ್ಲವೂ ಮೊದಲೂ ಇತ್ತುಮತ್ತೆ ಮತ್ತೆ ಮುಂದುವರಿಯುವದುಕಾಲಚಕ್ರದಲ್ಲಿ ಹಳೆಯದು ನವನವೀನ ಹೊಸದು ಹಳೆಯದಕ್ಕೆ ಹಚ್ಚಿದ ಬಣ್ಣಮುಂದುವರಿದಿದೆ ಹೊಸದೆನ್ನುವುದು ಈ ಜಗದಲ್ಲಿಯಾವುದಿದೆ ?ಗಮನವಿಟ್ಟು ನೋಡಿದರೆಎಲ್ಲವೂ ಹಳೆಯದರ ಹೊಸ ರೂಪವಷ್ಟೆ ಹುಟ್ಟುವುದು ಅದೇ ಹಳೆಯ ಆತ್ಮ ಸಾಯುವುದು ಅವೆ ಪಂಚಭೂತಗಳುಸತ್ತಿರುವುದು ಹಳೆಯ ಸಂಬಂಧಹುಟ್ಟುವುದು ಮತ್ಯಾವುದೋ  ಹೊಸ ಬಂಧ   ಇದ್ದದ್ದನ್ನು ಲಯ ಮಾಡಲು ಬಾರದು ಇಲ್ಲದನ್ನು ಸೃಷ್ಟಿಸಲು  ಆಗದು  ಸೃಷ್ಟಿಯು ಇಲ್ಲ  , ಲಯವೂ ಇಲ್ಲಅದೇ ಮುರಿದು ಕಟ್ಟುವ (  ಕಾರ್ಯ )ದೃಷ್ಟಿ ಕೆಟ್ಟದ್ದು ಕಳೆಯುವುದಿಲ್ಲಒಳ್ಳೆಯದು ಅಳಿಯುವುದಿಲ್ಲಕೊರಗಿ,ಮರುಗಲು ಕಾರಣವೇ ಇಲ್ಲ. ಈಗ ಇರುವುದೆಲ್ಲವೂ ಮೊದಲೂ ಇತ್ತುಮತ್ತೆ ಮತ್ತೆ ಮುಂದುವರಿಯುವದುಕಾಲಚಕ್ರದಲ್ಲಿ ಹಳೆಯದು ನವನವೀನ ಹೊಸದು ಹಳೆಯದಕ್ಕೆ ಹಚ್ಚಿದ ಬಣ್ಣ ಲಕ್ಷ್ಮೀದೇವಿ ಪತ್ತಾರ

ಲಕ್ಷ್ಮೀದೇವಿ ಪತ್ತಾರ ” ಮುಂದುವರೆದಿದೆ” Read Post »

ನಿಮ್ಮೊಂದಿಗೆ

ಲತಾ ಎ ಆರ್ ಬಾಳೆಹೊನ್ನೂರು ಕವಿತೆ “ಕಡಲ ತೆರೆಯ ಮೊರೆತ”

ಕಾವ್ಯ ಸಂಗಾತಿ ಲತಾ ಎ ಆರ್ ಬಾಳೆಹೊನ್ನೂರು “ಕಡಲ ತೆರೆಯ ಮೊರೆತ” ಸೆಳೆದಿರುವೆ ನನ್ನನ್ನು ಸೂಜಿಗಲ್ಲಿನಂತೆಯವ್ವನದ ಹುಚ್ಚು ಹೊಳೆಯಂತೆತಾಯಿ ತಂದೆಯ ತೊರೆವಂತೆಬಾಳು ಸಾಗಿಸುವ ಹುಮ್ಮನಸ್ಸಿನಂತೆ ಬೇರೆಲ್ಲ ಬೇಡದ ಛಲದಂತೆವಿಧಿಯಾಟದ ಸುಳಿಗೆ ಸಿಲುಕಿದಂತೆಆಡಿಸಿದಾತನ ಕೈ ಚಳಕದ ಪಾತ್ರವಂತೆನಾ ನಿನ್ನಾ ಸೇರಿರುವೆ ಸಂಗಾತಿಯಂತೆ ಕನಸು ನೂರು ನನಸಾಗುವಂತೆಸಾಧಿಸಿ ನಡೆವ ನಾವೆಣಿಸಿದಂತೆಬಾಳ ದಾರಿಯಲಿ ನೋವ ಮರೆತಂತೆಕಂಡಿದೆ ತೃಪ್ತಿ ಮನವಂತೆ ಅಂದುಕೊಂಡಂತಲ್ಲ ಜೀವನವಂತೆಬಗೆದಷ್ಟು ಮುಗಿಯದ ಕರ್ಮಫಲವಂತೆಏರಿಳಿತದ ಹಾದಿಯಲ್ಲಿ ಎಲ್ಲವಂತೆಪಯಣಿಸಬೇಕು ನಾವೆಲ್ಲ ಬೆರೆತಂತೆ ಕೂಗಿ ಕೂಗಿ ಕರೆಯುವಂತೆಕಡಲ ತೆರೆಯ ಮೊರೆವಂತೆಬಂದು ಸೇರಿಬಿಡು ಏನುವಂತೆವಿದಾಯಕ್ಕೆ ಕೇಳಿರುವೆ ಸಮಯವಂತೆ ಲತಾ ಎ ಆರ್ ಬಾಳೆಹೊನ್ನೂರು

ಲತಾ ಎ ಆರ್ ಬಾಳೆಹೊನ್ನೂರು ಕವಿತೆ “ಕಡಲ ತೆರೆಯ ಮೊರೆತ” Read Post »

ಕಾವ್ಯಯಾನ, ಗಝಲ್

ರತ್ನರಾಯಮಲ್ಲ ಅವರ ಗಜಲ್ -ಮಿರ್ಜಾ ಗಾಲಿಬ್‌ ಬಗ್ಗೆ

ಕಾವ್ಯಸಂಗಾತಿ ರತ್ನರಾಯಮಲ್ಲ ಗಜಲ್ ಅನುದಿನ ಹೊಸ ಹೊಸ ಪಾಠಗಳನ್ನು ಕಲಿಸುತಿದ್ದಿಯಾ ಗಾಲಿಬ್ನಮ್ಮವರಿಂದಾಗುವ ನೋವುಗಳನ್ನು ಮರಿಸುತಿದ್ದಿಯಾ ಗಾಲಿಬ್ ಗಾಲಿಬ್ ಎಂಬುದೇ ನನಗೊಂದು ಸಂಜೀವಿನಿ ಬರಹದಲೆಯಲಿಷೇರ್ -ಶಾಯರಿಯಿಂದ ನೀನು ಹುಚ್ಚು ಹಿಡಿಸುತಿದ್ದಿಯಾ ಗಾಲಿಬ್ ಬದುಕಿನ ಏರಿಳಿತದಲಿ ನಿನ್ನ ಜೀವನವೇ ಸುಂದರ ಪ್ರಯೋಗ ಶಾಲೆಕಂಬನಿ ಕಡಲಲಿ ಒಲವಿಂದ ಕೈ ಹಿಡಿದು ನಗಿಸುತಿದ್ದಿಯಾ ಗಾಲಿಬ್ ನಡೆಯುತಿರಲು ಕಲ್ಲು ಮುಳ್ಳಿನ ಹಾದಿ ಮೇಲೂ ಪ್ರೀತಿ ಉಕ್ಕುವುದುಗಜಲ್ ಗುರುವಾಗಿ ದುನಿಯಾದಲಿ ದೀಪ ಹಚ್ಚಿಸುತಿದ್ದಿಯಾ ಗಾಲಿಬ್ ಹತಾಶೆಯ ಒಡಲಲಿ ಮಲ್ಲಿಗೆಯ ಸುಮಕೆ ನೀರುಣಿಸಿ ಪೋಷಿಸಿರುವೆನಿನ್ನ ಬಾಳ ಪುಟಗಳಿಂದ ಮಹಾಕಾವ್ಯವನು ಓದಿಸುತಿದ್ದಿಯಾ ಗಾಲಿಬ್ ರತ್ನರಾಯಮಲ್ಲ

ರತ್ನರಾಯಮಲ್ಲ ಅವರ ಗಜಲ್ -ಮಿರ್ಜಾ ಗಾಲಿಬ್‌ ಬಗ್ಗೆ Read Post »

ನಿಮ್ಮೊಂದಿಗೆ

ಡಾ ಡೋ ನಾ ವೆಂಕಟೇಶ ಅವರ ಕವಿತೆ “ಅಮೃತ”

ಕಾವ್ಯ ಸಂಗಾತಿ ಡಾ ಡೋ ನಾ ವೆಂಕಟೇಶ “ಅಮೃತ” ಏನೆಂದು ಕರೆಯಲಿ ಈ ಭಾವಗಳನ್ನ ಜೀವ ನದಿಗಳನ್ನ.ಬಾಡಿಹೋಗುವ ಮುನ್ನಿನಹೊನ್ನುಗಳನ್ನಪನ್ನೀರ ಸಿಂಚನಗಳನ್ನಆಹ್ಲಾದಗಳನ್ನ. ಆ ಸ್ವಾದಗಳ ಘಮ ನಾಲಿಗೆಯಿಂದ ನಾಲಿಗೆಗೆಕೈ ಬಾಯಿ ತುಟಿ ಕಟಿಗಳ ಸಂಗೀತ ಸಂಭ್ರಮಗಳಿಗೆ ಹೌದೆಂದರೆ ಹೌದುಇಲ್ಲವೇ ಇಲ್ಲವೆಂದರೆನಾ ಯಾರುಇರುವ ತನಕ ಬದುಕಿದ್ದುಕನಸಲ್ಲೆ ಬದುಕು ಸಾಗಿಸಿದ್ದುಯಾರು. ಬಯಸಿದ್ದು ಸಾಕುಇರುವ ತನಕ ಇಲ್ಲಿಲ್ಲದಿರುವ ಬೇಕುಗಳೂ ಸಾಕು ಸಮುದ್ರ ಮಂಥನದ ಅಮೃತಮತ್ತೆ ಸಮುದ್ರಕ್ಕೇ!ಪುನಃ ಪುನಃ ದಡಕ್ಕಪ್ಪಳಿಸುವತೀರದ ಬಯಕೆಗಳಿಗೇ!! ಡಾ ಡೋ ನಾ ವೆಂಕಟೇಶ

ಡಾ ಡೋ ನಾ ವೆಂಕಟೇಶ ಅವರ ಕವಿತೆ “ಅಮೃತ” Read Post »

ಕಾವ್ಯಯಾನ, ಗಝಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್

ಕಾವ್ಯ ಸಂಗಾತಿ ಅನುರಾಧಾ ರಾಜೀವ್ ಸುರತ್ಕಲ್ ಗಜಲ್ ಬೆಳೆವ ಭಾವವು ಮರೆತು ಬೀಗಲುಎದೆಯು ನೋಯುತಿದೆ ನೋಡುಕಳೆದ ಕ್ಷಣವು ಬೆಂಬಿಡದೆ ಕಾಡಲುಚಿಂತೆಯು ಬೇಯುತಿದೆ ನೋಡು ಬದುಕ ಪಯಣವು ಕಲ್ಲು ಮುಳ್ಳಿನಬೇಲಿಯ ತಂತಿಯಲ್ಲವೇಮದಿರೆ ನಿಶೆಯಲಿ ನಿದಿರೆ ಕಾಣದೆ  ಮನವು ಕಾಯುತಿದೆ ನೋಡು ಬೇಗುದಿ ತುಂಬಿರೆ ತಿಳಿಸಿ ಹೇಳುವಪರಿಯ ಅರಿಯೆನು ನಾನುನೀಗದ ಹಸಿವು ದಾಹದಿ ಬರಿದೆಕನಸು ಸಾಯುತಿದೆ ನೋಡು ಕತ್ತಲೆ ತುಂಬಿದೆ ದಾರಿಯು ಕಾಣದೆಕುಸಿದು ಬಿದ್ದಿರೆ ಪಾತಾಳಕೆಸುತ್ತುತ ಜೇಡವು ಮರಳಿ ಯತ್ನದಿಬಲೆಯ ನೇಯುತಿದೆ ನೋಡು ಕಂಗಳ ನೋಟಕೆ ರಾಧೆಯ ಒಲುಮೆಗೆಲ್ಲುವ ಭರವಸೆ ಮೂಡಿದೆತಿಂಗಳ ಬೆಳಕಿನ ಶೀತಲ ತಂಪಲಿಪ್ರೇಮದಿ ಮೀಯುತಿದೆ ನೋಡು ಅನುರಾಧಾ ರಾಜೀವ್ ಸುರತ್ಕಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್ Read Post »

ಇತರೆ

ಯುಗದ ಕವಿ ಜಗದ ಕವಿ …ವಿಶ್ವ ಮಾನವ ರಸಋಷಿ ಕುವೆಂಪು ( ಡಿಸೆಂಬರ್ 29ರ ವಿಶ್ವಮಾನವ ದಿನಾಚರಣೆ ನಿಮಿತ್ತ) ವೀಣಾ ಹೇಮಂತ್‌ ಗೌಡ ಪಾಟೀಲ್

ಮಾನವತಾ ಸಂಗಾತಿ ವೀಣಾ ಹೇಮಂತ್‌ ಗೌಡ ಪಾಟೀಲ್ ಯುಗದ ಕವಿ ಜಗದ ಕವಿ … ವಿಶ್ವ ಮಾನವ ರಸಋಷಿ ಕುವೆಂಪು ( ಡಿಸೆಂಬರ್ 29ರ ವಿಶ್ವಮಾನವ ದಿನಾಚರಣೆ ನಿಮಿತ್ತ)  ವರ್ಷಗಳ ಹಿಂದೆ ಎಲ್ಲೋ ಓದಿದ ನೆನಪು. ಒಂದೇ ಮನೆಯ ಇಬ್ಬರು ಸಾಹಿತಿ ಸಹೋದರರ ನಡುವೆ ನಡೆದ ಮಾತುಕತೆ. ಅದು ಮಧ್ಯಾಹ್ನದ ಊಟದ ಸಮಯ. ಆ ಮನೆಯ ಯಜಮಾನರು ಅತ್ಯಂತ ವಯೋ ವೃದ್ಧರೂ, ಜ್ಞಾನ ವೃದ್ಧರೂ ಆಗಿದ್ದು ತನ್ನ ಇನ್ನೋರ್ವ ಬರಹಗಾರ ಸಹೋದರನನ್ನು ಕುರಿತು ಶ್ರೀ ರಾಮಾಯಣ ದರ್ಶನಂ ಬರೆದ ಕುವೆಂಪು ಅವರು ಬ್ರಾಹ್ಮಣರು ಇರಬೇಕಲ್ಲವೇ ಎಂದು ಪ್ರಶ್ನಿಸಿದರು. ಅದಕ್ಕೆ ಆ ಕಿರಿಯ ಸಹೋದರ ಇದ್ದರೂ ಇರಬಹುದು ಅಣ್ಣ ಎಂದು ಹೇಳಿದರು. ಆಗ ಅವರೊಂದಿಗೆ ಊಟಕ್ಕೆ ಕುಳಿತಿದ್ದ ಇನ್ನೋರ್ವರು ದಿಗ್ಭ್ರಮೆಯಿಂದ ತಲೆಯೆತ್ತಿ ನೋಡಿದರು. ಅವರನ್ನು ಕಣ್ಣಲ್ಲಿಯೇ ಸಮಾಧಾನಿಸಿದ ಕಿರಿಯ ಸಹೋದರ ಊಟವಾದ ನಂತರ ಹೊರಗೆ ಕರೆದೊಯ್ದರು. ನಿಮ್ಮ ಅನುಮಾನ ನಿಜ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯವನ್ನು ರಚಿಸಿದ ಕುವೆಂಪು ಅವರು ಬ್ರಾಹ್ಮಣರು ಎಂದು ಅಣ್ಣನವರೊಂದಿಗೆ ನಾನು ಹೇಳಿದ್ದು ತಪ್ಪು… ಆದರೆ ಈ ವಯಸ್ಸಿನಲ್ಲಿ ಅಣ್ಣನವರು ಅಂತಹ ಮಹಾಕಾವ್ಯವನ್ನು ಬ್ರಾಹ್ಮಣರು ಮಾತ್ರ ಬರೆಯಲು ಸಾಧ್ಯ ಎಂಬ ತಿಳುವಳಿಕೆಯನ್ನು ಅಲ್ಲಗಾಣಿಸುವ ಅವಶ್ಯಕತೆ ನನಗೆ ತೋರಲಿಲ್ಲ. *ನೀವೇ ಹೇಳಿ ಕುವೆಂಪು ಅವರು ಯಾವ ಬ್ರಾಹ್ಮಣರಿಗಿಂತ, ಯಾವ ಮಹಾಜ್ಞಾನಿಗಿಂತ ಕಡಿಮೆ* ಎಂದು ಉತ್ತರಿಸಿದರು. ಅವರ ಮಾತು ಹದಿನಾರಾಣೆ ಸತ್ಯವಾಗಿತ್ತು ಆದ್ದರಿಂದಲೇ ಅವರ ಸಹೋದ್ಯೋಗಿ ಸುಮ್ಮನೆ ತಲೆ ಆಡಿಸಿದರು. ಇಷ್ಟು ಸಾಕಲ್ಲವೇ ವಿಶ್ವಮಾನವ ಖ್ಯಾತಿಯ ಯುಗದ ಕವಿ ಜಗದ ಕವಿ ಎಂದು ಕರೆಯಲ್ಪಟ್ಟ, ರಾಷ್ಟ್ರಕವಿ, ರಸ ಋಷಿ, ಕನ್ನಡಕ್ಕೆ ಮೊಟ್ಟಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕುವೆಂಪು ಅವರ ಕುರಿತು ಹೇಳಲು.  ಕುಪ್ಪಳ್ಳಿಯ ವೆಂಕಟಪ್ಪನವರ ಮಗ ಪುಟ್ಟಪ್ಪ ಕುವೆಂಪು ಎಂಬ ಕಾವ್ಯನಾಮದಿಂದ ಜಗದ್ವಿಖ್ಯಾತಿ ಹೊಂದಿದರು.ಕುವೆಂಪು ಅವರ ಮೂಲ ಹೆಸರು ಪುಟ್ಟಪ್ಪ. ತಂದೆ ವೆಂಕಟಪ್ಪ, ತಾಯಿ ಸೀತಮ್ಮ. ಹುಟ್ಟಿದ್ದು ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ. 1904 ಡಿಸೆಂಬರ್ 29ರಂದು. ಕುವೆಂಪು ಅವರ ಬಾಲ್ಯದ ದಿನಗಳನ್ನು ಅವರ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯಲ್ಲಿ ಕಳೆದರು . ಮಲೆನಾಡಿನ ಸಿರಿ ಸೊಬಗನ್ನು ಹೊಂದಿದ್ದ ಕಾಡು ಬೆಟ್ಟ ಗುಡ್ಡಗಳು ಹಸಿರ ಸಿರಿ ಕುವೆಂಪು ಅವರ ಬಾಲ್ಯವನ್ನು ಸಮೃದ್ಧವಾಗಿಸಿದ್ದವು. ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂ.ಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು.ಮಹಾರಾಜ ಕಾಲೇಜಿನಲ್ಲಿ ಎಂ ಎ ಮಾಡಿದರು. ತಳುಕಿನ ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು. ಇವರು ಮೈಸೂರು ವಿಶ್ವವಿದ್ಯಾಲಯ ಮಾನಸಗಂಗೋತ್ರಿಯಲ್ಲಿ ಕನ್ನಡದ ಪ್ರಾಧ್ಯಾಪಕರಾಗಿ, ಉಪಕುಲಪತಿಗಳಾಗಿ ಕಾರ್ಯನಿರ್ವಹಿಸಿದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯವನ್ನು ಅಧ್ಯಯನಾಂಗ, ಸಂಶೋಧನಾ0ಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿ ಅತ್ಯಂತ ಕಡಿಮೆ ಅವಧಿಯಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಪ್ರಾರಂಭಿಸಿದರು. ಕನ್ನಡದ ಎರಡನೆಯ ರಾಷ್ಟ್ರಕವಿ , ಜ್ಞಾನಪೀಠ ಪ್ರಶಸ್ತಿಯನ್ನು, ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿಯನ್ನು ಮೊದಲ ಬಾರಿಗೆ ಪಡೆದವರು.ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಓದಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾವರು. 1937 ಎಪ್ರಿಲ್ 30 ರಂದು ಹೇಮಾವತಿಯವರನ್ನು ಕೈ ಹಿಡಿದರು..ಪೂರ್ಣಚಂದ್ರ ತೇಜಸ್ವಿ ಮತ್ತು ಕೋಕಿಲೋದಯ ಚೈತ್ರ ಎಂಬ ಪುತ್ರರು, ಇಂದುಕಲಾ ಮತ್ತು ತಾರಿಣಿ ಎಂಬ ಇಬ್ಬರು ಪುತ್ರಿಯರನ್ನೂ ಪಡೆದಿದ್ದರು.ಮೈಸೂರಿನಲ್ಲಿರುವ ಅವರ ಮನೆಯನ್ನು ಉದಯರವಿ ಎಂದು ಕರೆದರು. ಅವರ ಮಗ ಪೂರ್ಣಚಂದ್ರ ತೇಜಸ್ವಿಯವರೂ ಕೂಡ ಬಹುಮುಖಿಯಾಗಿದ್ದು, ಕನ್ನಡ ಸಾಹಿತ್ಯ, ಅರಣ್ಯ ಮತ್ತು ಪ್ರಾಣಿಗಳ ಸಂರಕ್ಷಣೆ, ಛಾಯಾಗ್ರಹಣ, ಕ್ಯಾಲಿಗ್ರಫಿ, ಡಿಜಿಟಲ್ ಇಮೇಜಿಂಗ್, ಸಾಮಾಜಿಕ ಚಳುವಳಿಗಳು ಮತ್ತು ಕೃಷಿಗೆ ಗಣನೀಯ ಕೊಡುಗೆ ನೀಡಿದರು.ಅವರ ವಿವಾಹವನ್ನು ಕೂಡ ಕುವೆಂಪು ತಮ್ಮದೇ ಕೊಡುಗೆಯಾದ ಸರಳ ವಿವಾಹ ಪದ್ಧತಿಯಾದ *ಮಂತ್ರ ಮಾಂಗಲ್ಯ*ದ ಮೂಲಕ ನೆರವೇರಿಸಿದರು. ಮಹಾರಾಜ ಕಾಲೇಜಿನಲ್ಲಿ ಕಲಿಯುತ್ತಿರುವಾಗಲೇ ಕುವೆಂಪು ಅವರು ತಮ್ಮ ಮೊಟ್ಟಮೊದಲ ಕವನವನ್ನು ಇಂಗ್ಲೀಷಿನಲ್ಲಿ ರಚಿಸಿದರು. ಆ ರಚನೆಯನ್ನು ತಮ್ಮ ಆಂಗ್ಲ ಪ್ರಾಧ್ಯಾಪಕರಿಗೆ ತೋರಿಸಿದಾಗ ಆ ಪ್ರಾಧ್ಯಾಪಕರು ಮಿಸ್ಟರ್ ಪುಟ್ಟಪ್ಪ ನೀವು ನಿಮ್ಮ ಮಾತೃಭಾಷೆಯಲ್ಲಿಯೇ ಕವನ ರಚಿಸಿ ಎಂದು ತಿಳಿ ಹೇಳಿದರು. ಮುಂದೆ ಕುವೆಂಪು ಅವರು ಸಂಪೂರ್ಣವಾಗಿ ಮಾತೃಭಾಷೆಯಲ್ಲಿಯೇ ಕವನ, ಕಾವ್ಯ, ಗದ್ಯ, ಕಥೆ-ಕಾದಂಬರಿಗಳ ರಚನೆಯನ್ನು ಆರಂಭಿಸಿದರು. ಆ ಆಂಗ್ಲ ಪ್ರಾಧ್ಯಾಪಕರಿಗೆ ಕನ್ನಡ ಸಾಹಿತ್ಯ ಲೋಕ ಯಾವತ್ತೂ ಚಿರಋಣಿ. ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ರಾಮಾಯಣದ ಮೇರು ಕೃತಿಯಾಗಿ ಜಗತ್ತಿಗೆ ಪರಿಚಿತವಾಗಿದೆ ಅಂತೆಯೇ ಕಾನೂರು ಸುಬ್ಬಮ್ಮ ಹೆಗ್ಗಡತಿ ಮತ್ತು ಮಲೆಗಳಲ್ಲಿ ಮದುಮಗಳು ಕೃತಿಗಳು ಅವರನ್ನು ವಿಶ್ವ ಲೇಖಕರ ಪಟ್ಟಿಗೆ ಸೇರಿಸುತ್ತವೆ.‘ಭಾರತಾಂಬೆಯೇ ಜನಿಸಿ ನಿನ್ನೊಳು ಧನ್ಯನಾದೆನು ದೇವಿಯೇ’ ಮತ್ತು ‘ಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ’ ಎಂಬ ಗೀತೆಗಳು ಭಾರತಮಾತೆಯ ಮತ್ತು ಕನ್ನಡ ತಾಯಿಯ ಹಿರಿಮೆ ಗರಿಮೆಗಳನ್ನು ಸಾರುತ್ತ ನಮ್ಮಲ್ಲಿ ದೇಶ ಪ್ರೇಮವನ್ನು ಉಕ್ಕಿಸುತ್ತವೆ. ‘ಓ ನನ್ನ ಚೇತನ ಆಗು ನೀ ಅನಿಕೇತನ’ ಎಂಬ ಕವನವಂತು ಮನುಷ್ಯನ ಜೀವನದ ನಿಲುವನ್ನು ಮಾರ್ಮಿಕವಾಗಿ ಸೂಚಿಸುತ್ತದೆ ಬೆರಳ್ಗೆ ಕೊರಳ್, ಪಕ್ಷಿಕಾಶಿ, ಕೊಳಲು, ಬೊಮ್ಮನಹಳ್ಳಿಯ ಕಿಂದರಿ ಜೋಗಿ,ರಕ್ತಾಕ್ಷೀ, ಶೂದ್ರ ತಪಸ್ವಿ, ಮಲೆನಾಡಿನ ಕಥೆಗಳು, ಶಿಲಾ ತಪಸ್ವಿ, ಸ್ವಾಮಿ ವಿವೇಕಾನಂದ, ಚಿತ್ರಾಂಗದ, ಪಾಂಚಜನ್ಯ, ವಿಚಾರ ಕ್ರಾಂತಿಗೆ ಆಹ್ವಾನ, ಕಬ್ಬಿಗನ ಕೈ ಬುಟ್ಟಿ, ಆಯ್ದ ಕವಿತೆಗಳುಮುಂತಾದ ಕೃತಿಗಳು ಯಮನ ಸೋಲು, ಸ್ಮಶಾನ ಕುರುಕ್ಷೇತ್ರ, ಜಲಗಾರ, ಮಹಾಭಾಗ್ಯ ವಾಲ್ಮೀಕಿಯ ಸೋಲು, ಮೋಡಣ್ಣನ ತಮ್ಮ ಗೋಪಾಲ ಎಂಬ ನಾಟಕಗಳು ಅವರ ಸಾಹಿತ್ಯದ ಉನ್ನತ ಕೃತಿಗಳು. ಆಡು ಮುಟ್ಟದ ಸೊಪ್ಪಿಲ್ಲ ಕುವೆಂಪು ಬರೆಯದ ಸಾಹಿತ್ಯವಿಲ್ಲ ಎಂಬಂತೆ ಕುವೆಂಪು ಅವರು ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಬರೆದಿದ್ದಾರೆ. ಓರ್ವ ಬರಹಗಾರ ತನ್ನ ಕೃತಿಗಳನ್ನು ಬರೆಯುತ್ತಾ, ಅಂತಪ್ರಜ್ಞೆಯಲ್ಲಿ ತಂತಾನೆ ಬೆಳೆಯುತ್ತಾ ಹೋದರೆ ಆತನಲ್ಲಿ ಉಂಟಾಗುವ ವಿಶ್ವಮಾನವ ಪ್ರಜ್ಞೆ ಕುವೆಂಪು ಅವರಲ್ಲಿಯೂ ಬೆಳೆಯಿತು. ಸಾಂಸಾರಿಕವಾಗಿ ಲೌಕಿಕವಾಗಿ ಓರ್ವ ಸಾಮಾನ್ಯ ವ್ಯಕ್ತಿ ಎಂಬಂತೆ ತೋರುತ್ತಿದ್ದ ಕುವೆಂಪು ಅವರು ಅಲೌಕಿಕವಾಗಿ ವಿಶ್ವಮಾನವರಾದರು. ಕುವೆಂಪು ಅವರು ಸ್ವಾಮಿ ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ ಮತ್ತು ಸ್ವಾಮಿ ಶ್ರದ್ದಾನಂದರ ಪರಮ ಅನುಯಾಯಿಯಾಗಿದ್ದರು. ತಮ್ಮ ಅತ್ಯುನ್ನತ ಗೌರವದ ಹುದ್ದೆಯ ಹೊರತಾಗಿಯೂ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಅವರ ಸಂಬಂಧ ಸಮಾಜದ ಇನ್ನಿತರ ಸಂಸಾರಿಕ ಜನಗಳಂತೆ ಸಾಮಾನ್ಯವಾಗಿಯೇ ಇತ್ತು. ಅವರೆಂದು ಮಕ್ಕಳನ್ನು ತಮ್ಮ ಅಧಿಕಾರದ ಕಬಂಧ ಬಾಹುಗಳಲ್ಲಿ ಬೆಳೆಸಲಿಲ್ಲ. ಮೈಸೂರಿನ ಮಾನಸ ಗಂಗೋತ್ರಿಯ ಉಪಕುಲಪತಿಯಾಗಿಯೂ ಕೂಡ ಅವರು ಇಡೀ ವಿಶ್ವವಿದ್ಯಾಲಯವನ್ನು 20ನೇ ಶತಮಾನದ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಎಲ್ಲಾ ವಿಧದಲ್ಲಿಯೂ ಬೆಳೆಯುವಂತೆ ಅಭಿವೃದ್ಧಿಪಡಿಸಿದರು. ಅದೇ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ತಮ್ಮ ಪುತ್ರ ಪೂರ್ಣಚಂದ್ರ ತೇಜಸ್ವಿ ಅವರಿಗೆ ಯಾವುದೇ ರೀತಿಯ ಕಟ್ಟುಪಾಡುಗಳನ್ನು ಹಾಕದೆ ಸ್ವತಂತ್ರವಾಗಿ ಬೆಳೆಯಲು ಬಿಟ್ಟರು. ಮೈಸೂರಿನಒಂಟಿಕೊಪ್ಪಲಿನಲ್ಲಿರುವ ತಮ್ಮ ನಿವಾಸ ‘ಉದಯರವಿ’ಯಲ್ಲಿ ನಿರಾತಂಕವಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡಿದ್ದರು. ಇದನ್ನೇ ಪೂರ್ಣಚಂದ್ರ ತೇಜಸ್ವಿ ಅವರು ಮತ್ತು ಅವರ ಸಹೋದರಿ ತಾರಿಣಿ ಅವರು ‘ ಅಣ್ಣನ ನೆನಪುಗಳು’ ಎಂಬ ತಂದೆಯವರ ಕುರಿತಾದ ಪುಸ್ತಕದಲ್ಲಿ ತಂದೆಯ ಕುರಿತು ಬರೆದಿದ್ದಾರೆ.1929 ರಲ್ಲಿ ಪ್ರಾಧ್ಯಾಪಕರಾಗಿ ಮೈಸೂರು ವಿಶ್ವವಿದ್ಯಾಲಯವನ್ನು ಸೇರಿದ ಕುವೆಂಪು ಅವರು 1960ರಿಂದ 1965 ರವರೆಗೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನಿವೃತ್ತರಾದರು.1938 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಅಧ್ಯಕ್ಷರಾಗಿ ಕುವೆಂಪು ಅವರು ಕಾರ್ಯನಿರ್ವಹಿಸಿದರು. 1957 ರಲ್ಲಿ ಧಾರವಾಡದಲ್ಲಿ ನಡೆದ 39ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. ಭಾರತ ದೇಶದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ (1968) ಪ್ರಶಸ್ತಿಯನ್ನು ಮಹಾಕಾವ್ಯ ಶ್ರೀ ರಾಮಾಯಣ ದರ್ಶನಕ್ಕೆ ಕೊಡ ಮಾಡಲಾಯಿತು. ಇದು ಕನ್ನಡದ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ. ಕರ್ನಾಟಕ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್, ರಾಜ್ಯ ಸರಕಾರದ ರಾಷ್ಟ್ರಕವಿ ಪ್ರಶಸ್ತಿ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಗಳು ಕುವೆಂಪು ಅವರ ಮುಡಿಗೇರಿದ್ದವು. 1988 ರಲ್ಲಿ ನಡೆದ ಪ್ರಪ್ರಥಮ ವಿಶ್ವಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡ ಅವರು ಉದ್ಘಾಟಿಸಿದ್ದರು.1988 ರಲ್ಲಿ ಪಂಪ ಪ್ರಶಸ್ತಿ 1994 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿಗಳು ಕೂಡ ಕುವೆಂಪು ಅವರಿಗೆ ಸಂದವು. 1994ರ ನವೆಂಬರ್ 11ರಂದು ಕುವೆಂಪು ಅವರು ಮರಣ ಹೊಂದಿದರು. ಕನ್ನಡ ಸಾಹಿತ್ಯ ಲೋಕದ ಮೇರು ಶಿಖರದ ಅಧ್ಯಾಯ ತನ್ನ ಅಂತ್ಯವನ್ನು ಕಂಡಿತು. ಕುಪ್ಪಳ್ಳಿಯ ಅವರ ಅತ್ಯಂತ ಪ್ರೀತಿ ಪಾತ್ರವಾದ ಕವಿಶೈಲದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಿತು.ಕುವೆಂಪು ಅವರ ಹುಟ್ಟೂರಿನ ಮನೆಯನ್ನು ಕವಿಮನೆ ಸ್ಮಾರಕ ಭವನವನ್ನಾಗಿ ಕರ್ನಾಟಕ ಸರ್ಕಾರ ಘೋಷಿಸಿ ಅಲ್ಲಿ ಕುವೆಂಪು ಅವರಿಗೆ ಸಂಬಂಧಪಟ್ಟ ಎಲ್ಲ ವಸ್ತುಗಳನ್ನು ಪುಸ್ತಕಗಳನ್ನು ಸಂಗ್ರಹಿಸಿ ಇಡಲಾಗಿದೆ.1995 ರಲ್ಲಿ ನಾಡೋಜ ಪ್ರಶಸ್ತಿಯನ್ನು ಕೂಡ ಅವರಿಗೆ ಮರಣೋತ್ತರವಾಗಿ ನೀಡಲಾಯಿತು. ಶಿವಮೊಗ್ಗದ ಬಳಿ ಇರುವ ವಿಶ್ವವಿದ್ಯಾಲಯಕ್ಕೆ ಕುವೆಂಪು ಅವರ ಹೆಸರನ್ನು ಇಡಲಾಗಿದೆ. ಅಂತೆಯೇ ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಕುವೆಂಪು ಹೆಸರು ಇಡಲಾಗಿದೆ. ಯಾವುದೇ ವಸ್ತು ವಿಷಯಗಳು ಆಯಾ ಕಾಲಕ್ಕೆ ಮಾತ್ರ ಸೀಮಿತವಾಗಿದ್ದು ಕಾಲಾಂತರದಲ್ಲಿ ಅವುಗಳ ಆಶಯಗಳು ಬದಲಾಗಬಹುದು… ಇಂತಹ ಆಶ್ರಯ ಅನಿಸಿಕೆಗಳನ್ನು ಕುವೆಂಪು ಅವರು ತಮ್ಮ ಶೂದ್ರ ತಪಸ್ವಿ ಮತ್ತು ಜಲಗಾರ ನಾಟಕಗಳಲ್ಲಿ ತೋರ್ಪಡಿಸಿದರು.ಅಂತೆಯೇ ಕುವೆಂಪು ಅವರನ್ನು ಕುರಿತು ಇನ್ನೋರ್ವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಅಂಬಿಕಾತನಯದತ್ತ ಕಾವ್ಯನಾಮದಿಂದ ಜಗದ್ವಿಖ್ಯಾತಿ ಹೊಂದಿದ ದ.ರಾ.ಬೇಂದ್ರೆ ಅವರು ‘ಯುಗದ ಕವಿ ಜಗದ ಕವಿ’ ಎಂದು ಬಣ್ಣಿಸಿದರು. ದಲಿತ ಮತ್ತು ಹಿಂದುಳಿದವರ ಬಂಡಾಯಕ್ಕೆ ಕುವೆಂಪು ಸ್ಪೂರ್ತಿದಾಯಕ ರಾಗಿದ್ದರು. ಮಂತ್ರ ಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ಅವರು ಜನರಿಗೆ ಪರಿಚಯಿಸಿದರು. 19ನೇ ಶತಮಾನದ ಉತ್ತರಾರ್ಧದಲ್ಲಿ ಮಹಾಕಾವ್ಯವನ್ನು ಮತ್ತೆ ಮರಳಿ ಕನ್ನಡ ಸಾಹಿತ್ಯ ಲೋಕಕ್ಕೆ ದೊರಕಿಸಿಕೊಟ್ಟ ಯುಗ ಪ್ರವರ್ತಕರಾಗಿ ಕುವೆಂಪು ಹೊರಹೊಮ್ಮಿದರು.ಕುವೆಂಪು ಕೇವಲ ಕರ್ನಾಟಕದವರಲ್ಲ, ಭಾರತದ ಮಹಾ ಲೇಖಕ. ಅವರ ‘ರಾಮಾಯಣ ದರ್ಶನಂ’ ಆಧುನಿಕ ಭಾರತೀಯ ಸಾಹಿತ್ಯದ ಶ್ರೇಷ್ಠ ಕೃತಿ. ಇಲ್ಲಿ ಬರುವ ರಾಮ, ಸೀತೆ ಯೊಂದಿಗೆ ಅಗ್ನಿ ಪ್ರವೇಶ ಮಾಡುತ್ತಾನೆ. ಎಲ್ಲೆಡೆ ಮಹಿಳೆಯ ಮೇಲೆ ದೌರ್ಜನ್ಯ, ಹಿಂಸೆಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಕುವೆಂಪು ಕಟ್ಟಿಕೊಟ್ಟ ಈ ಚಿತ್ರಣ ಪ್ರಸ್ತುತ ಮತ್ತು ಆದರ್ಶ. ಅವರ ಶೂದ್ರ ತಪಸ್ವಿ ನಾಟಕ, ಶೋಷಣೆ ಮತ್ತು ತಾರತಮ್ಯದ ವರ್ಣ ನೀತಿಗೆ ಮುಖಾಮುಖಿಯಾದ ನಾಟಕ. ಸಾರ್ವಕಾಲಿಕ ಕಾವ್ಯ ಮೀಮಾಂಸೆಯ ಅಧ್ವರ್ಯುಗಳಲ್ಲಿ ಕುವೆಂಪು ಒಬ್ಬರು. ತಾವು ನಂಬಿದ ಕಾವ್ಯ ತತ್ವವನ್ನು ತಮ್ಮ ‘ರಸೋ ವೈ ಸಃ’ದಲ್ಲಿ ಹೇಳಿದ್ದಾರೆ. ಕನ್ನಡಕ್ಕೆ ಹೊಸ ನುಡಿಗಟ್ಟು ಮತ್ತು ಹೊಸ ಕಲ್ಪನೆಗಳನ್ನು ನೀಡಿದವರು. ಕಲ್ಪನಾಶಕ್ತಿಯೊಂದಿಗೆ, ಬೌದ್ಧಿಕ ಸಾಮರ್ಥ್ಯವನ್ನು ಮೇಳೈಸಿ, ನೈತಿಕ ಮತ್ತು ಸೌಂದರ್ಯ ಮೀಮಾಂಸೆಯನ್ನು ಉನ್ನತ ಸ್ಥಾನಕ್ಕೆ ಒಯ್ದವರು ಕುವೆಂಪು ಎಂಬುದು ಅವರ ಸಮಕಾಲೀನ ಕವಿಗಳ ಅಭಿಪ್ರಾಯ. ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು “ಜಾತಿ,ಮತ”ದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ

ಯುಗದ ಕವಿ ಜಗದ ಕವಿ …ವಿಶ್ವ ಮಾನವ ರಸಋಷಿ ಕುವೆಂಪು ( ಡಿಸೆಂಬರ್ 29ರ ವಿಶ್ವಮಾನವ ದಿನಾಚರಣೆ ನಿಮಿತ್ತ) ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಅಂಕಣ ಸಂಗಾತಿ, ಭಾರತದಮಹಿಳಾ ಮುಖ್ಯಮಂತ್ರಿಗಳು

ಅಂಕಣ ಸಂಗಾತಿ ಭಾರತದ ಮಹಿಳಾ ಮುಖ್ಯಮಂತ್ರಿಗಳು ಸುರೇಖಾ ರಾಠೋಡ್ ಪಂಜಾಬ್ ನ ಮೊದಲ ಮಹಿಳಾ ಮುಖ್ಯಮಂತ್ರಿ ರಾಜೇಂದ್ರ ಕೌರ್ ಭಟ್ಟಾಲ್(ಅಧಿಕಾರಾವಧಿ 21/11/1996 ರಿಂದ 12/02/1997, 83 ದಿನಗಳು) ಪಂಜಾಬ್ ನ ಮೊದಲ ಮಹಿಳಾ ಮುಖ್ಯಮಂತ್ರಿ ರಾಜೇಂದ್ರ ಕೌರ್ ಭಟ್ಟಾಲ್(ಅಧಿಕಾರಾವಧಿ 21/11/1996 ರಿಂದ 12/02/1997, 83 ದಿನಗಳು) ರಾಜೆಂದ್ರ ಕೌರ್ ಇವರು 30 ಸೆಪ್ಟೆಂಬರ್ 1945 ರಲ್ಲಿ ಪಂಜಾಬ್ ನ ಲಾಹೋರ್ನಲ್ಲಿ ಜನಿಸಿದರು. ಇವರ ತಂದೆ ಹೀರಾಸಿಂಗ್ ಭಟ್ಟಲ್.  ತಾಯಿ ಹರ್ನಾಮ ಕೌರ್. ಇವರು ಸಂಗ್ರೂರ ಜಿಲ್ಲೆಯ ಲೆಹಗ್ರಾ ಗ್ರಾಮದಲ್ಲಿ ಚಂಚಲಿ ವಾಲಾದ ಲಾಲ್ಸಿಂಗ್ ಸಿದ್ದು ಅವರನ್ನು ವಿವಾಹವಾದರು. ಇವರಿಗೆ ಒಂದು ಗಂಡು ಒಂದು ಹೆಣ್ಣು ಮಗು.  ರಾಜೇಂದ್ರ ಕೌರ್ ಅವರು 1994ರಲ್ಲಿ  ಚಂಡಿಘಡದಲ್ಲಿ ರಾಜ್ಯ ಶಿಕ್ಷಣ ಸಚಿವರಾದರು. ಇವರು ಹರ್ಚರಣಸಿಂಗ್ ಅವರ ರಾಜೀನಾಮೆಯ ನಂತರ 21.11.1996 ರಂದು ಪಂಜಾಬ್ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇವರು ಮುಖ್ಯಮಂತ್ರಿ ಆಗಿದ್ದಾಗ ಸಣ್ಣ ರೈತರಿಗೆ ಕೊಳವೆಬಾವಿ ನೀರಾವರಿಗೆ ಸಂಬಂಧಿಸಿದ ಉಚಿತ ವಿದ್ಯುತ್ ಅನುದಾನವನ್ನು ಒದಗಿಸುವ ಹಲವು ಯೋಜನೆಗಳನ್ನು ಜಾರಿಗೆ ತಂದರು. ಹಾಗೇಯೆ ಇವರು ತಮ್ಮ ಅಧಿಕಾರ ಅವಧಿಯಲ್ಲಿ ಜನಪರ ಹಲವಾರು ಯೋಜನೆಗಳನ್ನು ಜಾರಿಗೆ ತಂದರು.  1997ರ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸೋತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರು. ನಂತರ ಮೇ ತಿಂಗಳಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ನಂತರ ವಿಧಾನಸಭಾ ಶಾಸನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ 12/02/ 1997 ರಿಂದ 10/10/1998 ವರೆಗೆ ಕಾರ್ಯನಿರ್ವಹಿಸಿದರು. ನಂತರ 6/01/2004 ರಿಂದ 1/03/ 2007 ರವರೆಗೆ ಪಂಜಾಬ್ ನ ಎರಡನೆಯ ಉಪಮುಖ್ಯಮಂತ್ರಿ ಆಗಿ ಕಾರ್ಯ ನಿರ್ವಹಿಸಿದರು. ಇವರು 1992 ರಿಂದ ಲೆಹ್ರಾ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಗೆದ್ದಿದ್ದಾರೆ. ಸುರೇಖಾ ರಾಠೋಡ್

Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-23 ಗಲಭೆಗಳು ಬಂದ್ಗಳು ಇತ್ಯಾದಿ ವೃತ್ತಿ ವೃತ್ತಾಂತವೃತ್ತಿ ಬದುಕಿನ ಹಿನ್ನೋಟನೋಟ ~ ೨೩ ನಾವು ವಿಭಾಗಿಯ ಕಚೇರಿಗೆ ವರ್ಗವಾಗಿ ಬಂದ ಸಮಯವೇ ಸರಿ ಇರಲಿಲ್ಲವೋ ಏನೋ ಡಿಸೆಂಬರ್ ೧೯೯೧ಲ್ ರಲ್ಲಿ ಕಾವೇರಿ ವಿವಾದ ಆರಂಭವಾಯಿತು. ಇಡೀ ತಿಂಗಳು ಗಲಭೆ . ಕನ್ನಡ ಚಳುವಳಿಯ ಜನಗಳು ಆಫೀಸಿಗೆ ನುಗ್ಗಿ ಕಚೇರಿಯನ್ನು ಬಂದ್ ಮಾಡಿಸುತ್ತಿದ್ದರು. ಸರಿ ನಂತರ ಅಲ್ಲಿಂದ ಮತ್ತೆ ಮನೆಯ ಕಡೆ ಪಯಣ. ಅಷ್ಟು ಹೊತ್ತಿಗೆ ಬಸ್ ಗಳ ಓಡಾಟ ನಿಂತು ಹೋಗಿರುತ್ತಿತ್ತು .ಆಟೋಗಳು ವಿಪರೀತ ದುಡ್ಡು ಕೇಳುತ್ತಿದ್ದರು. ಆದರೂ ಹೆಚ್ಚು ಜನರನ್ನು ಕೂಡಿಸಿಕೊಂಡು ಹೋಗುತ್ತಿದ್ದುದರಿಂದ ಎಲ್ಲರೂ ಸೇರುವ ಒಂದು ಕಾಮನ್ ಪ್ಲೇಸ್ ತನಕ ಆಟೋದಲ್ಲಿ ಬಂದು ಅಲ್ಲಿಂದ ಮುಂದೆ ನಟರಾಜ ಸರ್ವಿಸ್. ಒಂದು ರೀತಿಯ ಶಿಕ್ಷೆಯೇ ಸರಿ. ಆದರೆ ಆಫೀಸಿಗೆ ಬಂದು ಹಾಜರಾತಿಗೆ ಸಹಿ ಹಾಕದಿದ್ದಲ್ಲಿ ಅಂದು ಬಂದ್ ಇದ್ದರೂ ಸಹ ರಜೆ ಕೊಡಬೇಕಿತ್ತು . ಹೆಚ್ಚು ರಜೆಗಳು ಇರುತ್ತಿರಲ್ಲವಾದ್ದರಿಂದ ಕಷ್ಟಪಟ್ಟು ಹೇಗಾದರೂ ಬಂದು ಆಫೀಸ್ ಬಂದ್ ಆದ ನಂತರ ವಾಪಸ್ ಹೋಗುತ್ತಿದ್ದೆವು. ನಮ್ಮ ವಿಭಾಗೀಯ ಕಚೇರಿ ಹಾಗೂ ಶಾಖೆ ಎರಡು ಎರಡೂ ನಗರದ ಹೃದಯ ಭಾಗದಲ್ಲಿ ಇದ್ದುದರಿಂದ ಯಾವುದೇ ಒಂದು ಗಲಭೆ ಆದರೂ ಶಾಖೆಗಳು ಮುಚ್ಚುತ್ತಿದ್ದುದು ಗ್ಯಾರಂಟಿ. ಮುಖ್ಯವಾಗಿ ಡಿಸೆಂಬರ್ 1991ರಲ್ಲಿ ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಾದ್ಯಂತ ತೀವ್ರವಾಗಿ ಭುಗಿಲೆದ್ದವು, ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಆದೇಶಗಳ ವಿರುದ್ಧ ನಡೆದ ಪ್ರತಿಭಟನೆಗಳಿಂದ ಪ್ರಾರಂಭವಾಗಿ, ತಮಿಳರ ಮೇಲೆ ಹಿಂಸಾಚಾರ, ಆಸ್ತಿಪಾಸ್ತಿ ಹಾನಿ ಮತ್ತು ತಮಿಳರು ರಾಜ್ಯ ತೊರೆಯುವ ಪರಿಸ್ಥಿತಿಗೆ ಕಾರಣವಾಯಿತು, ಇದು ರಾಜ್ಯದ ಇತಿಹಾಸದ worst riots ಎಂದು ಕರೆಯಲ್ಪಟ್ಟಿತು. ಗಲಾಟೆಗಳಿಗೆ ಕಾರಣ ಕಾವೇರಿ ನ್ಯಾಯಮಂಡಳಿ ಆದೇಶ. ಭಾರತ ಸರ್ಕಾರ ನೇಮಿಸಿದ ಕಾವೇರಿ ಜಲ ವಿವಾದ ನ್ಯಾಯಮಂಡಳಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿತ್ತು, ಇದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆಗಳು ತೀವ್ರಗೊಂಡವು.ನ್ಯಾಯಮಂಡಳಿಯ ಆದೇಶದಂತೆ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರ ನಿರಾಕರಿಸಿದಾಗ ಪ್ರತಿಭಟನೆಗಳು ಹಿಂಸೆಗೆ ತಿರುಗಿದವು.ಮೈಸೂರು, ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ನಗರಗಳಲ್ಲಿ ತಮಿಳರ ಮೇಲೆ ಗುಂಪುಗಳ ದಾಳಿಗಳು ನಡೆದವು. ತಮಿಳು ಪತ್ರಿಕೆಗಳ ಕಚೇರಿಗಳಿಗೆ ಬೆಂಕಿ ಹಚ್ಚುವುದು ಸೇರಿದಂತೆ ದೊಡ್ಡ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಯಿತು.ಸಾವಿರಾರು ತಮಿಳು ಕುಟುಂಬಗಳು ಭಯದಿಂದ ಕರ್ನಾಟಕವನ್ನು ತೊರೆದರು.ಕನ್ನಡಪರ ಸಂಘಟನೆಗಳು ಕರೆ ನೀಡಿದ ಬಂದ್ ಪ್ರತಿಭಟನೆಗಳು ಹಿಂಸಾಚಾರಕ್ಕೆ ಕಾರಣವಾದವು. ಪೊಲೀಸರ ಗುಂಡೇಟು ಸೇರಿದಂತೆ ಹಲವು ಸಾವುಗಳು ಸಂಭವಿಸಿದವು (ಅಂದಾಜು 28 ಜನರು ಮೈಸೂರಿನಲ್ಲಿ).ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಸುಮಾರು ಒಂದು ತಿಂಗಳ ಕಾಲ ಮುಚ್ಚಬೇಕಾಯಿತು.ಆರ್ಥಿಕ ನಷ್ಟ: ಆಸ್ತಿಪಾಸ್ತಿ ನಷ್ಟ ಅಂದಾಜು 19 ಕೋಟಿ ರೂ. ಇತ್ತು.ಈ ಗಲಾಟೆಗಳು ಕಾವೇರಿ ವಿವಾದದ ಉದ್ವಿಗ್ನತೆಯನ್ನು ಮತ್ತು ಕನ್ನಡಿಗರು ಹಾಗೂ ತಮಿಳರ ನಡುವಿನ ಸಂಬಂಧದಲ್ಲಿ ಉಂಟಾಗಿದ್ದ ಉದ್ವಿಗ್ನತೆಯನ್ನು ತೋರಿಸಿಕೊಟ್ಟವು. ನಮಗೂ ಆ ಡಿಸೆಂಬರ್ ತಿಂಗಳಲ್ಲೇ 6 _ 7 ದಿನ ಕಚೇರಿಗಳನ್ನು ಮುಚ್ಚಿಸಿದ್ದರು. ನಂತರದ 1993 ಡಿಸೆಂಬರ್ ನಲ್ಲಿ ಬಾಬರಿ ಮಸೀದಿ ಪ್ರಕರಣ ಸಂಬಂಧ ಮೈಸೂರಿನಲ್ಲಿ ಕೋಮು ಗಲಭೆಗಳು ಆರಂಭವಾದವು ನಮ್ಮ ಕಚೇರಿಗಳಿದ್ದ ನಜರ್ಬಾದ್ ಏರಿಯಾ ಸೂಕ್ಷ್ಮ ಪ್ರದೇಶ ಎಂಬ ಹೆಸರು ಪಡೆದಿತ್ತು. ಅಲ್ಲಿ ಮುಸ್ಲಿಂ ಸಮುದಾಯವು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿತ್ತು ಹೆಚ್ಚು ಕಡಿಮೆ 27 ದಿನ ಕರ್ಫ್ಯೂ ಜಾರಿಯಲ್ಲಿತ್ತು. ಕರ್ಫ್ಯೂ ಹಾಕಿದ ವಿಷಯ ಮೊದಲೇ ಗೊತ್ತಿದ್ದ ಸಮಯದಲ್ಲಿ ಶಾಖೆಗೆ ಹೋಗುತ್ತಲೇ ಇರಲಿಲ್ಲ. ಕೆಲವೊಮ್ಮೆ ಕರ್ಫ್ಯೂ ಮುಂದುವರಿಸಿದ ವಿಷಯ ತಿಳಿಯದೆ ನಮ್ಮ ಏರಿಯಾಗಳ ಕಡೆ ಕರ್ಫ್ಯೂ ಜಾರಿಯಲ್ಲಿ ಇಲ್ಲದೆ ಇದ್ದಾಗ ಬಸ್ ಗಳು ಸಹ ಓಡಾಡುತ್ತಿದ್ದುದರಿಂದ ಶಾಖೆಗೆ ಹೋಗುತ್ತಿದ್ದೆವು. ದಾರಿಯಲ್ಲೇ ಪೊಲೀಸರು ತಡೆದು ಬೈದು ವಾಪಸ್ಸು ಕಳಿಸುತ್ತಿದ್ದರು ಅಲ್ಲದೆ ಒಂದು ರೀತಿಯ ಭಯ ಮಿಶ್ರಿತ ವಾತಾವರಣ. ಕೋಮುಗಲಭೆ ಅಂದರೆ ಹಾಗೆಯೇ. ಆಗ ಇಡೀ ಮೈಸೂರು ಪ್ರಕ್ಷುಬ್ಧ. ಹೊರಗೆ ಓಡಾಡಲು ಭಯ ಉಂಟಾಗುವ ಪರಿಸ್ಥಿತಿ. ಆ ಬಾರಿ ಎಂದು  ಅರೆ ಮಿಲಿಟರಿ ಹಾಗೂ ಮಿಲಿಟರಿ ಪಡೆಗಳನ್ನು ಸಹ ಕರೆಸಿಬಿಟ್ಟಿದ್ದರಿಂದ ಓಡಾಡುವ ದಾರಿಯಲ್ಲಿ ಸೈನಿಕರನ್ನು ಕಾಣುವಂತೆ ಆಗಿತ್ತು .ಇದು ಅಪರೂಪದ ಸಂಗತಿ ಆದ್ದರಿಂದ ಅವರ ಕಡೆ ಭಯದಿಂದಲೇ ನೋಡಿಕೊಂಡು ಹೋಗಬೇಕಾಗಿತ್ತು. ನನಗೆ ಇನ್ನೂ ಚೆನ್ನಾಗಿ ನೆನಪಿದೆ ಡಿಸೆಂಬರ್ 6 ನಮ್ಮ ತಾಯಿಯ ಹುಟ್ಟುಹಬ್ಬ .ಅಂದು ಸಂಜೆ ಅದಕ್ಕಾಗಿಯೇ ಜಾಮೂನ್ ಮತ್ತು ಸಿಹಿ ಅಡಿಗೆ ಮಾಡಿದ್ದರು ಟಿವಿ ನೋಡುತ್ತಾ ಊಟ ಮಾಡುವಾಗ ಬಾಬರಿ ಮಸೀದಿ ಧ್ವಂಸದ ದೃಶ್ಯಗಳನ್ನು ನೋಡುತ್ತಾ ಊಟ ಮಾಡಿದೆವು .ಆದರೆ ಮಾರನೆಯ ದಿನದಿಂದ ಮೈಸೂರಿನಲ್ಲಿ ನಡೆದ ಆ ಹಿಂಸಾಚಾರ ಮತ್ತು ಭಯದ ವಾತಾವರಣ ನೆನೆಸಿಕೊಂಡಾಗ ಈಗಲೂ ಮನಸ್ಸಿಗೆ ಒಂದು ರೀತಿಯ ಕಸಿವಿಸಿ ಉಂಟಾಗುತ್ತದೆ. ಆಗ ನಮ್ಮ ಬಳಿ ದ್ವಿಚಕ್ರ ವಾಹನಗಳು ಇಲ್ಲದಿದ್ದರಿಂದ ಬಸ್ ನಲ್ಲಿಯೇ ಓಡಾಟ ಹೋಗುತ್ತಾ ಬಸ್ ಸಿಕ್ಕಿದರು ಬರುವ ವೇಳೆಗೆ ಬಸ್ ಓಡಾಟ ನಿಂತು ಹೋಗಿರುತ್ತಿತ್ತು ಹಾಗಾಗಿ ಹೆಚ್ಚಿನ ಅಂಶ ನಡೆದೆ ಮನೆ ಸೇರುತ್ತಿದ್ದೆವು. ಆ ದಿಕ್ಕಿನಲ್ಲಿ ಹೋಗುವ ಎಲ್ಲರೂ ಒಟ್ಟಾಗಿ ನಡೆಯುವುದು ಅಂದಿನ ದಿನಗಳ ಸಾಮಾನ್ಯ ಪದ್ಧತಿಯಾಗಿ ಹೋಗಿತ್ತು. ಈ ನಡೆಯುವ ಕಷ್ಟಕ್ಕಾಗಿಯೇ ಬಂದಾದರೂ ಕಚೇರಿ ಬಂದ್ ಆಗುವುದು ಬೇಡಪ್ಪ ಎನ್ನಿಸಿ ಬಿಡುತ್ತಿತ್ತು ಮುಂದೆ ನಮ್ಮದೇ ದ್ವಿಚಕ್ರವಾಹನಗಳಲ್ಲಿ ಹೋಗುವಾಗ ರಜೆ ಸಿಕ್ಕಿದ ಖುಷಿ ಇರುತ್ತಿತ್ತು. ಇನ್ನು ಕಚೇರಿಯ ಕೆಲಸದ ವಿಷಯಕ್ಕೆ ಬಂದರೆ ನನ್ನ ಜೊತೆ ಸಹಾಯಕರಾಗಿದ್ದ ರಾಮನ್ ಅವರು ಉನ್ನತ ದರ್ಜೆ ಸಹಾಯಕರಾಗಿ ಪದೋನ್ನತಿ ಹೊಂದಿ ವರ್ಗವಾಗಿ ಹೋದರು ಈ ಹಿಂದೆ ಹೇಳಿದಂತೆ ವಿದ್ಯಾರಣ್ಯ ಅವರು ಹೋದಾಗಿನಿಂದ ನಮ್ಮ ವಿಭಾಗದಲ್ಲಿ ಉನ್ನತ ಶ್ರೇಣಿ ಸಹಾಯಕರು ಇರಲಿಲ್ಲ ಈಗ ಸತ್ಯನಾರಾಯಣ ಎನ್ನುವವರು ಸೋಮವಾರಪೇಟೆಯಿಂದ ವರ್ಗವಾಗಿ ಬಂದರು ಅಲ್ಲದೆ ರಾಮನ್ ಅವರ ಜಾಗಕ್ಕೆ ಸುಧಾ ಎನ್ನುವವರು ಸಿಎ ಬ್ರಾಂಚ್ ನಿಂದ ವರ್ಗವಾಗಿ ಬಂದರು. ಈ ವೇಳೆಗಾಗಲೇ ಎಸ್ಎಂಎಸ್ ಗೋಪಾಲನ್ ಅವರು ನನಗೆ ಒಳ್ಳೆಯ ಮಾರ್ಗದರ್ಶನ ನೀಡಿ ಚೆನ್ನಾಗಿ ತರಬೇತಿ ಕೊಟ್ಟುಬಿಟ್ಟಿದ್ದರು. ಒಳ್ಳೆ ಶಾಲೆಯ ಪರೀಕ್ಷೆಗೆ ಓದುವಂತೆ ಇಲಾಖೆಯ ಸುತ್ತೋಲೆಗಳನ್ನು ಚೆನ್ನಾಗಿ ಮನನ ಮಾಡಿಕೊಂಡಿರುತ್ತಿದ್ದೆ. ಹಾಗೆಲ್ಲ ಹೊಸ ಹೊಸ ಪ್ಲಾನ್ ಗಳು ಬಂದಾಗ ವಲಯ ಕಛೇರಿಯಿಂದ ಸುತ್ತೋಲೆಗಳು ಬರುತ್ತಿದ್ದವು ಹಾಗೆ ವಿಭಾಗಕ್ಕೆ ಸಂಬಂಧಿಸಿದ ಏನಾದರೂ ತಿದ್ದುಪಡಿಗಳು ಬದಲಾವಣೆಗಳು ಸಹ ಸುತ್ತೋಲೆಗಳ ಮೂಲಕವೇ ಬರುತ್ತಿತ್ತು ಇಲ್ಲಿ ಅವುಗಳನ್ನು ನಾವು ಮತ್ತೆ ಟೈಪ್ ಮಾಡಿಸಿ ಸೈಕ್ಲೋ ಸ್ಟೈಲ್ ಮಾಡಿ ಪ್ರತಿಗಳನ್ನು ಮಾಡಿ ಶಾಖಾ ಕಚೇರಿಗಳಿಗೆ ಕಳಿಸಿಕೊಡುತ್ತಿದ್ದೆವು. ವಿಭಾಗಿಯ ಕಚೇರಿಯ ಕ್ರಮ ಸಂಖ್ಯೆಗಳು ಸಹ ಸುತ್ತೋಲೆಗಳಲ್ಲಿ ಇರುತ್ತಿದ್ದವು. ಇವೆಲ್ಲ ಸಂಖ್ಯೆಗಳನ್ನು ನನ್ನ ನೆನಪಿನಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದೆ. ಯಾರಾದರೂ ಫೋನ್ ಮಾಡಿ ಕೇಳಿದಾಗ ಅಲ್ಲಲ್ಲೇ ಮಾರ್ಗದರ್ಶನ ನೀಡುವಷ್ಟು ಹೊಸ ವ್ಯವಹಾರ ವಿಭಾಗದಲ್ಲಿ ಪಳಗಿ ಬಿಟ್ಟಿದ್ದೆ .ಇದಕ್ಕೆಲ್ಲ ನಮ್ಮ ಆಡಳಿತಾಧಿಕಾರಿಗಳವರೇ ಕಾರಣ. ತಮಗೆ ತಿಳಿದ ಎಲ್ಲಾ ವಿಷಯಗಳು ನಮಗೆ ತಿಳಿಸಿಕೊಟ್ಟು ಸಹಾಯ ಮಾಡುತ್ತಿದ್ದರು. ಸಹಾಯಕ ವಿಭಾಗಾಧಿಕಾರಿಗಳಾಗಿದ್ದ ಆಚಾರ್ಯ ಅವರು ಸಹ ನಿವೃತ್ತಿ ಹೊಂದಿ ವಿ ನರಸಿಂಹನ್ ಎನ್ನುವ ಅಧಿಕಾರಿಗಳು ಆ ಜಾಗಕ್ಕೆ ಬಂದಿದ್ದರು. ಅವರು ಸಹ ಆಗ ಫೆಲೋ ಶಿಪ್ ಮಾಡಿದ ಕೆಲವೇ ಜನಗಳಲ್ಲಿ ಒಬ್ಬರು. ತುಂಬಾ ವಿಷಯ ತಿಳಿದುಕೊಂಡಿದ್ದರು. ಆದರೆ ಮಾತೃ ಭಾಷೆ ತಮಿಳು ಆದ್ದರಿಂದ ಕನ್ನಡದಲ್ಲಿ ವ್ಯವಹರಿಸಲು ಸ್ವಲ್ಪ ತೊಡಕು ಇತ್ತು .ಹಾಗಾಗಿ ಯಾರದೇ ಫೋನ್ಗಳು ಬಂದರೆ ನನ್ನನ್ನು ಅಥವಾ ಆಡಳಿತ ಅಧಿಕಾರಿಗಳನ್ನು ಕರೆಯುತ್ತಾ ಇದ್ದರು. ನಾನು ವಿಭಾಗೀಯ ಕಚೇರಿಗೆ ಬಂದ 3-4 ತಿಂಗಳಲ್ಲಿ ಅಲ್ಲಿನ ಶೀಘ್ರ ಲಿಪಿಕಾರ್ತಿ ಸುವರ್ಣ ಅವರು ಹೆರಿಗೆ ರಜೆಗೆ ಹೋಗಿದ್ದರು ಅಲ್ಪಕಾಲದ ರಜೆ ಆದ್ದರಿಂದ ಅವರ ಜಾಗಕ್ಕೆ ಬೇರೆಯವರನ್ನು ಕೊಟ್ಟಿರಲಿಲ್ಲ ನನಗೆ ಬೆರಳಚ್ಚು ಬರುತ್ತಿದ್ದುದರಿಂದ ನಾನೇ ಆ ಜಾಗದ ಕೆಲಸವನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದೆ. ಉಕ್ತಲೇಖನ ಕೊಡುವ ಪ್ರಮೇಯಗಳು ಅಷ್ಟೇನೂ ಬರುತ್ತಿರಲಿಲ್ಲ. ವಿಷಯ ಹೇಳಿದರೆ ಸಾಕು ನಾನೇ ಪತ್ರಗಳನ್ನು ಡ್ರಾಫ್ಟ್ ಮಾಡಿ ಟೈಪ್ ಮಾಡಿ ಕೊಟ್ಟು ಬಿಡುತ್ತಿದ್ದೆ.  ಆಗ ಸೈಕ್ಲೊ ಸ್ಟೈಲ್ ಅಂದರೆ ಕಲ್ಲಚ್ಚು ಪ್ರತಿಗಳ ಕಾಲ ಈಗಿನ ಹಾಗೆ ಜೆರಾಕ್ಸ್ ಹೆಚ್ಚು ಉಪಯೋಗದಲ್ಲಿ ಇರಲಿಲ್ಲ ಕಾರ್ಬನ್ ಶೀಟ್ ಇರುವ ಸೈಕ್ಲೋ ಸ್ಟೈಲ್ ಶೀಟ್ ಗಳಲ್ಲಿ ಟೈಪ್ ಮಾಡಿ ಕೊಟ್ಟರೆ ಅದನ್ನು ಸಹಿ ಮಾಡಿ ಕೊಟ್ಟ ನಂತರ ಹೆಚ್ಚಿನ ಪ್ರತಿಗಳನ್ನು ಕಲ್ಲಚ್ಚು ಯಂತ್ರದಲ್ಲಿ ತೆಗೆದು ಕೊಡುತ್ತಿದ್ದರು. ಈಗ ಪ್ರತಿಯೊಂದಕ್ಕೂ ಜೆರಾಕ್ಸ್ ಬಂದಿದೆ ಕಾಗದದ ಪ್ರತಿಗಳ ಬಳಕೆಯೂ ಕಡಿಮೆಯಾಗಿದೆ ಎಲ್ಲವೂ ಕಂಪ್ಯೂಟರ್ಗಳಲ್ಲಿಯೇ. ನಾವು ನೋಡ ನೋಡುತ್ತಿದ್ದಂತೆಯೇ ಎಷ್ಟೆಲ್ಲಾ ಬದಲಾವಣೆಗಳಿಗೆ ಸಾಕ್ಷಿಯಾದೆವಲ್ಲ ಎನಿಸುತ್ತದೆ. ವಿಭಾಗಿಯ ಕಚೇರಿಗಳಿಂದ ಶಾಖಾ ಕಚೇರಿಗೆ ಪರಿಶೀಲನೆಗೆಂದು ಹೋಗುವುದು ಒಂದು ಕ್ರಮ .ಆಗ ಅದಕ್ಕೆ ಕ್ವಾಲಿಟಿ ಕಂಟ್ರೋಲ್ ಎಂಬ ಪಾರಭಾಷಿಕ ಪದ ಇತ್ತು. ಈಗ ಅದನ್ನು ಕ್ವಾಲಿಟಿ ಮ್ಯಾನೇಜ್ಮೆಂಟ್ ಅನಾಲಿಸಿಸ್ ಎಂಬ ಹೆಸರಿನಿಂದ ಕರೆಯುತ್ತಾರೆ. ಒಬ್ಬರು ಅಧಿಕಾರಿ ಹಾಗೂ ಮತ್ತೊಬ್ಬರು ಉನ್ನತ ದರ್ಜೆ ಸಹಾಯಕರು ಅಥವಾ ಸಹಾಯಕರು ಅವರೊಂದಿಗೆ ಹೋಗುವುದು ವಾಡಿಕೆ. ಈವರೆಗೆ ರಾಮನ್ ಅವರು ಇದುದರಿಂದ ಅವರೇ ಎಲ್ಲಾ ಕಡೆಗೂ ಹೋಗುತ್ತಿದ್ದರು ನನಗೂ ವಿಭಾಗದ ಎಲ್ಲಾ ವಿಷಯಗಳು ಅಷ್ಟು ಚೆನ್ನಾಗಿ ತಿಳಿದಿರಲಿಲ್ಲ ಹಾಗಾಗಿ ನಾನು ಹೋಗಲು ಆಗಿರಲಿಲ್ಲಈಗ ರಾಮನ್ ಅವರು ಹೋದ ಮೇಲೆ ನಾನೇ ಸೀನಿಯರ್ ಆದ್ದರಿಂದ ಅಲ್ಲದೆ ಗೋಪಾಲನ್ ಸರ್ ಅವರಿಗೆ ನನ್ನ ಮೇಲೆ ತುಂಬಾ ನಂಬಿಕೆ ಇರುವುದರಿಂದ ನನ್ನನ್ನು ಅವರೊಂದಿಗೆ ಈ ರೀತಿಯ ಕ್ವಾಲಿಟಿ ಕಂಟ್ರೋಲ್ ಟೂರ್ ಗಳಿಗೆ ಬರಲು ಹೇಳುತ್ತಿದ್ದರು ಆದರೆ ತುಂಬಾ ದೂರದ ಕಡೆಗಳಿಗೆ ನನಗೆ ಹೋಗಲು ಆಗುತ್ತಿರಲಿಲ್ಲ ಹಾಗಾಗಿ ಶ್ರೀರಂಗಪಟ್ಟಣ ನಂಜನಗೂಡು, ಮೈಸೂರಿನ ವಿವಿಧ ಶಾಖೆಗಳು ಕೆ ಆರ್ ನಗರ ಹುಣಸೂರು ಹಾಗೂ ಕೊಳ್ಳೇಗಾಲ ಒಂದು ಬಾರಿ ಚಾಮರಾಜನಗರಕ್ಕೂ ಸಹ ಹೋಗಿದ್ದ ನೆನಪು ಈ ರೀತಿ ಅವರೊಂದಿಗೆ ಹೋಗುತ್ತಿದ್ದೆ. ಅಲ್ಲಿ  ಆಯಾಯಾ ಅವಧಿಯಲ್ಲಿ ವಿತರಿಸಿದ ಪಾಲಿಸಿಗಳ ಕಡತಗಳನ್ನು ತರಿಸಿ ಸರಿಯಾದ ರೀತಿಯಲ್ಲಿ ಮಾಡಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು. ಏನಾದರೂ ತಪ್ಪುಗಳು ಇದ್ದಲ್ಲಿ ಅವುಗಳನ್ನು ಬರೆದುಕೊಂಡು ಹೋಗುವುದು ಮತ್ತು ಅಲ್ಲಿಯೇ ನಡೆಯುತ್ತಿದ್ದ ಚರ್ಚೆಗಳಲ್ಲಿ ಅವುಗಳನ್ನು ಹೇಳಿ ತಿದ್ದಿಕೊಳ್ಳಲು ಹೇಳುತ್ತಿದ್ದೆವು. ವಾಪಸ್ಸು ಬಂದ ನಂತರ ಅದರ ಬಗ್ಗೆ ಒಂದು ವರದಿಯನ್ನು ತಯಾರಿಸಿ ವಿಭಾಗಿಯ ಅಧಿಕಾರಿಗಳ ಗಮನಕ್ಕೆ ತಂದು ಶಾಖೆಗೆ ಕಳುಹಿಸಿ ಕೊಡುತ್ತಿದ್ದೆವು.ಈ ರೀತಿ ತಿಂಗಳಲ್ಲಿ ನಾಲ್ಕು ಅಥವಾ ಐದು ದಿನಗಳು ಈ ರೀತಿಯ ಕ್ವಾಲಿಟಿ ಕಂಟ್ರೋಲ್ ಟೂರ್ ಗಳಿಗೆ ಹೋಗುತ್ತಿದ್ದು ಮಾಮೂಲಿ ಗಿಂತ ಸ್ವಲ್ಪ ಬೇಗನೆ ಹೊರಡಬೇಕಿತ್ತು ಹಾಗೂ ಬರುವುದು ಸಹ ತಡವಾಗುತ್ತಿತ್ತು ಆದರೆ ಈ ರೀತಿಯ ಟೂರ್ಗಳಿಗೆ ಪ್ರವಾಸ ಭತ್ಯೆ ಕೊಡುತ್ತಿದ್ದರಿಂದ ಅದು ಒಂದು ರೀತಿಯ ಆಕರ್ಷಣೆ .ಬಸ್ ಚಾರ್ಜ್ ಮಾತ್ರ ಖರ್ಚು ಮಾಡಿದರೆ ಬಸ್ ಚಾರ್ಜ್ ನೊಂದಿಗೆ ಒಂದು ದಿನದ ಪ್ರಯಾಣ ಭತ್ಯೆ ಸಿಗುತ್ತಿತ್ತು. ಆಗ ಒಂದು ದಿನಕ್ಕೆ ನೂರು ರೂಪಾಯಿಗಳ ವರೆಗೂ ಪ್ರವಾಸ ಭತ್ಯೆ ಸಿಗುತ್ತಿತ್ತು. ಈ ರೀತಿ ಮನಸ್ಸಿಗೆ ಒಂದು ರೀತಿ ಖುಷಿ ಕೊಡುವ ಕೆಲಸ. ದಿನಗಳು ಉರುಳುತ್ತಿದ್ದದು ಗೊತ್ತಾಗುತ್ತಲೇ ಇರಲಿಲ್ಲ. ಮುಂದಿನ ವಾರ,ಇಲಾಖಾ ಪರೀಕ್ಷೆಗಳು ಸುಜಾತಾ ರವೀಶ್

Read Post »

You cannot copy content of this page

Scroll to Top