ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಏನು ದೈವವಿದು
ನಾವು ಬೆರೆತುಕೊಂಡು
ಹಲವು ದಶಕ
ಬದುಕು ಸಾಗಿಸುತ್ತಿರುವಾಗ
ಇಬ್ಬಾಗಿಸುವ ವಿಧಿಯೊಂದು
ಧಿಡೀರನೇ ಬಂದು ನಿಲ್ಲಬೇಕೆ ?
ಬಾಳ ಪಯಣದಲಿ
ಎಂದೂ ಕಂಡರಿಯದ
ಭೀಕರ ಭೂಕಂಪ
ಭೂಮಿ ಬಿರಿಯಿತು
ಮೋಡ ನೆಲ ಕಚ್ಚಿತು
ಕೆಂಡದ ಮಳೆ
ಮೌನದಲಿ ಸೂರ್ಯ
ಕಣ್ಣು ಮುಚ್ಚಿದ
ದಿಕ್ಕೆಟ್ಟು ನಿಂತೆವು
ಗೂಡು ತೊರೆದು
ಸಿಹಿ ಸಂಸಾರದ
ಜೋಡು ಹಕ್ಕಿ
ಪುಟ್ಟ ಮರಿ ಅಗಲಿದವು
ಸಾವು ನೋವಿನಲ್ಲಿ
ಅಳಿದುಳಿವರು ಸುಧಾರಿಸುವುದು
ಬಹು ದೀರ್ಘದ
ಶೋಕ ಕಾವ್ಯ
ಶಿವಶಂಕರನಿಗೆ
ಭಾವ ನಮನ
ಬದುಕು ನೂಕುವುದು
ಅವನ ನೆನಪಿನಲಿ
ಅವನ ನೆನಹಿನಲಿ
ತಾಯಿ ಮಗಳ ಪ್ರೀತಿ


About The Author

2 thoughts on “ಡಾ ದಾಕ್ಷಾಯಿಣಿ ಮಂಡಿ ಕವಿತೆ “ಭೀಕರ ಭೂಕಂಪ””

Leave a Reply

You cannot copy content of this page

Scroll to Top