ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

“ಲಾಲ ಬಹದ್ದೂರ ಶಾಸ್ತ್ರಿ ಒಂದು ನೆನಪು”ವಿಜಯಲಕ್ಷ್ಮಿ ಹಂಗರಗಿ

ನೆನಪುಗಳ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ಲಾಲ ಬಹದ್ದೂರ ಶಾಸ್ತ್ರಿ ಒಂದು ನೆನಪು” ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಕ್ಟೋಬರ್ 12 1904 ರಲ್ಲಿ ಜನಿಸಿದರು. ಇವರು ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವತಂತ್ರಕ್ಕಾಗಿ ಅವಿರತವಾಗಿ ಹೋರಾಡಿದರು.ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ಪ್ರಮಾಣಿಕತೆ ಅವರ ಜೀವನದುದ್ದಕ್ಕೂ ಎದ್ದು ಕಾಣಿಸುತ್ತದೆ. ರೈಲ್ವೆ ಸಚಿವರಾಗಿದ್ದಾಗ ಸಂಭವಿಸಿದ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದು, ಪ್ರಧಾನಿಯಾದ ನಂತರ ಕಡಿಮೆ ವೇತನಕ್ಕೆ ತೃಪ್ತಿ ಪಟ್ಟಿ ಕೊಂಡು ಕಠಿಣ ಪರಿಸ್ಥಿತಿಯಲ್ಲಿ ದೇಶವನ್ನು ಮುನ್ನಡೆಸಿದ್ದು ಇವರ ಸರಳತೆಗೆ ಉದಾಹರಣೆಗಳು ಜಾತಿ ಪದ್ಧತಿಯನ್ನು ವಿರೋಧಿಸಿ ತಮ್ಮ ಹೆಸರಿನಲ್ಲಿದ್ದ ಜಾತಿ ಸೂಚಕವ ಪದವನ್ನು ತೆರೆದಿದ್ದು ಅವರ ಸರಳ ಮನೋಭಾವವನ್ನು ತೋರಿಸುತ್ತದೆ.ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆಯ ಉದಾಹರಣೆಗಳು . *ನೈತಿಕ ಹೊಣೆಗಾರಿಕೆ:* ರೈಲ್ವೆ ಸಚಿವರಾಗಿದ್ದಾಗ ಕಲ್ಲೇಕುಚಿ ರೈಲು ದುರಂತ ಸಂಭವಿಸಿ ಅನೇಕ ಜನರು ಸಾವನ್ನಪ್ಪಿದಾಗ ಅದಕ್ಕೆ ನೈತಿಕಹೊಣೆ ಬರಲು ಅವರ ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.  *ಆರ್ಥಿಕ ಸರಳತೆ* ಪ್ರಧಾನಿಯಾಗಿದ್ದರೂ ಅವರು ಕೇವಲ 400 ತಿಂಗಳಿಗೆ ವೇತನ ಪಡೆಯುತ್ತಿದ್ದರು ತಮ್ಮ ಕುಟುಂಬದ ನಿರ್ವಹನಿಗೆ ಇದು ಸಾಕು ಎಂದು ಅವರು ಹೇಳಿದ್ದರು. ಅವರ ದೊಡ್ಡ ಮನೆ ನಿರ್ಮಾಣ ಮಾಡದೆ ತಮ್ಮ ಹಳೆಯ ವಾಸಸ್ಥಾನದಲ್ಲಿ ಮುಂದುವರೆದರು. ಜಾತಿ ಪದ್ಧತಿ ವಿರೋಧ ಅವರ ಹೆಸರಿನ ಜೊತೆಗಿದ್ದ ಜಾತಿ ಸೂಚಕ ಪದವನ್ನು ಅವರು ತೊರೆದರು. ಇದರ ಬದಲಾಗಿ ಕಾಶಿ ವಿದ್ಯಾರ್ಥಿದಲ್ಲಿ ಪದವಿ ಪಡೆದ ನಂತರ ಸಿಕ್ಕ ಶಾಸ್ತ್ರ ಎಂಬ ಬಿರುದನ್ನು ಅವರು ಬಳಸಲು ಪ್ರಾರಂಭಿಸಿದರು. ಜನರೊಂದಿಗೆ ನಿಕಟ ಸಂಬಂಧ ಆಹಾರ ಕೊರತೆಯ ಸಂದರ್ಭದಲ್ಲಿ ಅವರು ಜನರಿಗೆ ವಾರಕ್ಕೆ ಒಂದು ದಿನ ಉಪವಾಸ ಮಾಡಲು ಕರೆ ನೀಡಿದರು. ಇದು ಅವರ ಸರಳ ಜೀವನ ಶೈಲಿ ಮತ್ತು ಬದ್ಧತೆಯನ್ನು ತೋರಿಸುತ್ತದೆ. “ಜೈ ಜವಾನ್ ಜೈ ಕಿಸಾನ್ ಘೋಷಣೆ “1965ರ ಭಾರತ್ ಪಾಕಿಸ್ತಾನ ಯುದ್ಧದ ಸಮಯದಲ್ಲಿ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯನ್ನು ನೀಡಿದರು. ಇದು ದೇಶದ ಸೈನಿಕರು ಮತ್ತು ರೈತರ ಶ್ರಮವನ್ನು ಮತ್ತು ದೇಶದ ಏಕತೆಯನ್ನು ಸಾರಿತು.ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಕ್ಟೋಬರ್ 2 194 ರಂದು ಉತ್ತರ ಪ್ರದೇಶದ ಮುಗಲ್ ಸೈರಾಂನಲ್ಲಿ ಜನಿಸಿದರು ಅವರು ಭಾರತೀಯ ಹೋರಾಟದಲ್ಲಿ ಗಾಂಧೀಜಿಯವರ ಆದರ್ಶಗಳಿಂದ ಪ್ರಭಾವಿತರಾಗಲು 1921 ರಲ್ಲಿ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ತಮ್ಮ ಅಧ್ಯಯನವನ್ನು ಸ್ಥಗಿತಗೊಳಿಸಿದರು. 1926ರಲ್ಲಿ ಕಾಶಿ ವಿದ್ಯಾಪೀಠದಿಂದ ಪದವಿ ಪಡೆದ ನಂತರ ಅವರಿಗೆ ಶಾಸ್ತ್ರಿ ಎಂಬ ಬಿರುದು ನೀಡಲಾಯಿತು. ಸ್ವತಂತ್ರ ಹೋರಾಟಗಾರರಾಗಿ ಅನೇಕ ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಿದರು. ಸ್ವತಂತ್ರ ನಂತರ ಅವರು ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದರು. ಮತ್ತು ಅರಿಯಲೂರ್ ರೈಲ್ವೆ ಅಪಘಾತ ಜವಾಬ್ದಾರಿಯನ್ನು ತೆಗೆದುಕೊಂಡು ರೈಲ್ವೆ ಸಚಿವರಾಗಿ ರಾಜೀನಾಮೆ ನೀಡಿದರು 1964 ರಲ್ಲಿ ಭಾರತದ ಎರಡನೇ ಪ್ರಧಾನಮಂತ್ರಿಯಾದರು. *ಜೀವನದ ಪ್ರಮುಖ* *ಘಟ್ಟಗಳು* ಆರಂಭಿಕ ಜೀವನ ಅಕ್ಟೋಬರ್ 2 194 ರಂದು ಉತ್ತರ ಪ್ರದೇಶದ ಮುಘಲ್ ರಾಯನಲ್ಲಿ ಜನಿಸಿದರು. ಅವರ ತಂದೆ ಶಾರದಾ ಪ್ರಸಾದ್ ಶ್ರೀವಾಸ್ತವ್ ಮತ್ತು ತಾಯಿ ರಾಮ ಧೂಲಾರಿ ದೇವಿ ಆರು ತಿಂಗಳು ಮಗುವಾಗಿದ್ದಾಗ ತಂದೆ ನಿಧನರಾದರು. ಸ್ವತಂತ್ರ ಚಳುವಳಿ 1921 ರಲ್ಲಿ ಗಾಂಧೀಜಿಯವರ ಅಸಹಕಾರ ಚಳುವಳಿಯಲ್ಲಿ ಪಾಲ್ಗೊಂಡರು ಅವರು 1926 ರಲ್ಲಿ ಕಾಶಿ ವಿದ್ಯಾಪೀಠದಿಂದ ಶಾಸ್ತ್ರಿ ಪದವಿಯನ್ನು ಪಡೆದರು. ಸ್ವತಂತ್ರ ಹೋರಾಟದಲ್ಲಿ ಹಲವಾರು ಬಾರಿ ಜೈಲು ಶಿಕ್ಷೆ ಅನುಭವಿಸಿದರು. 1930ರಲ್ಲಿ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎರಡುವರೆ ವರ್ಷ ಜೈಲು ಸೇರಿದರು. ರಾಜಕೀಯ ವೃತ್ತಿ 1937ರಲ್ಲಿ ಉತ್ತರ ಪ್ರದೇಶದ ಸಂಸದೀಯ ಮಂಡಳಿಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಸ್ವತಂತ್ರದ ನಂತರ ಅವರು ಉತ್ತರ ಪ್ರದೇಶದ ಪೊಲೀಸ್ ಸಚಿವರಾಗಿ ನೇಮಕಗೊಂಡರು. ಮತ್ತು ಗಲಭೆ ಕೋರರನ್ನು ಚದುರಿಸಲು ಲಾಠಿಗಳ ಬದಲಿಗೆ ನೀರಿನ ಫಿರಂಗಿಗಳನ್ನು ಬಳಸಲು ಸೂಚಿಸಿದರು. 1956 ರಲ್ಲಿ ಅರಿಯಲೂರ್ ರೈಲು ಗಾತ್ರದ ಜವಾಬ್ದಾರಿಯನ್ನು ಹೊತ್ತು ರೈಲ್ವೆ ಸಚಿವರಾಗಿ ರಾಜೀನಾಮೆ ನೀಡಿದರು. ಪ್ರಧಾನ ಮಂತ್ರಿ 1964ರಲ್ಲಿ ಭಾರತದ ಎರಡನೇ ಪ್ರಧಾನಮಂತ್ರಿಯಾಗಲು ಅವರು ತಮ್ಮ ಸರಳತೆ ನೈತಿಕತೆ ಮತ್ತು ಆಂತರಿಕ ಶಕ್ತಿಗಾಗಿ ಹೆಸರುವಾಸಿಯಾಗಿದ್ದರು. “ಜೈ ಜವಾನ್ ಜೈ ಕಿಸಾನ್” ಎಂಬ ಅವರ ಘೋಷಣೆ ಕೃಷಿಕರನ್ನು ಮತ್ತು ಸೈನಿಕರನ್ನು ಬೆಂಬಲಿಸುತ್ತದೆ. ನಿಧನ 1966 ರಲ್ಲಿ ತಾಸ್ಕೆಂಟ್ ನಲ್ಲಿ ನಿಧನರಾದರು ಅವರ ಅಕಾಲಿಕ ಮರಣ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿತು. ವಿಜಯಲಕ್ಷ್ಮಿ ಹಂಗರಗಿ

“ಲಾಲ ಬಹದ್ದೂರ ಶಾಸ್ತ್ರಿ ಒಂದು ನೆನಪು”ವಿಜಯಲಕ್ಷ್ಮಿ ಹಂಗರಗಿ Read Post »

ಕಾವ್ಯಯಾನ

ಶಂಕರ್ ಪಡಂಗ ಕಿಲ್ಪಾಡಿ-“ಕವಿತೆ ಹುಟ್ಟಿದ್ದು ಹೇಗೆ?”

ಕಾವ್ಯ ಸಂಗಾತಿ ಶಂಕರ್ ಪಡಂಗ ಕಿಲ್ಪಾಡಿ- “ಕವಿತೆ ಹುಟ್ಟಿದ್ದು ಹೇಗೆ?” ನನ್ನೊಳಗಿನ ಕವಿತೆಯನ್ನುಬಡಿದೆಬ್ಬಿಸಿದವರುತಿದ್ದಿ ತೀಡಿದವರು ಯಾರು..?ಅಕ್ಷರದ ,ಹಿಡಿತ, ತುಡಿತ, ಮಿಡಿತಗಳಅರಿವಿಲ್ಲದಿದ್ದರೂ,ಪಡುವಣದ ಶರಧಿಯಜೊತೆಲಲ್ಲೆಗರೆಯುವಚಂದಿರನ ನೋಡಿ  ನನ್ನೊಳಗಿನ ಕವಿತೆಯ ಹುಟ್ಟು ,ಜೀವನದ ಅರ್ದ ಸತ್ಯದ ಬವಣೆಯ ನೆನೆದು,ಪೊಳ್ಳು ಭರವಸೆಯ ನೋಡಿಹುಟ್ಟಿತ್ತು ಕವಿತೆ.ನೀರುಣಿಸದೆ ಬೆಳೆದಹೆಮ್ಮರಗಳ ಕತ್ತರಿಸಿದರೂ,ಹಠ ಬಿಡದ ತ್ರಿವಿಕ್ರಮನಂತೆಮತ್ತೆ ಮತ್ತೆ ಚಿಗುರಿ,ಹಕ್ಕಿಗಳಿಗಾಸರೆಯನೀಡುವುದ ನೋಡಿ ,ಹುಟ್ಟಿತ್ತು ಕವಿತೆ.ಅಂತಸತ್ವವ ಮರೆತಂತೆಜೀವಿಸುವವರ ನೋಡಿ,ಬದುಕೆಲ್ಲ ಸವೆಸಿದರೂತೃಪ್ತಿ ಇಲ್ಲದ ಜನರ ನೋಡಿ,ಹುಟ್ಟಿತ್ತು ಕವಿತೆ.ಬದುಕು ಬಂಧುರವಾಗಲುನಿನ್ನನ್ನು ಅಪ್ಪಿಕೊಂಡೆ,ಒಪ್ಪಿಕೊಂಡೆ ಈಗನೀ ನನ್ನ ಜೀವಾಳವಾದೆ. ಶಂಕರ್ ಪಡಂಗ ಕಿಲ್ಪಾಡಿ

ಶಂಕರ್ ಪಡಂಗ ಕಿಲ್ಪಾಡಿ-“ಕವಿತೆ ಹುಟ್ಟಿದ್ದು ಹೇಗೆ?” Read Post »

ಇತರೆ, ಜೀವನ

“ನೆಂಟಸ್ತನದ ಸಂಬಂಧಗಳ ನಡೆ” ವಿಶೇಷ ಲೇಖನ ಸುಮನಾ ರಮಾನಂದ

ಸಂಬಂಧಗಳ ಸಂಗಾತಿ ಸುಮನಾ ರಮಾನಂದ “ನೆಂಟಸ್ತನದ ಸಂಬಂಧಗಳ ನಡೆ” ಇದ್ಯಾವ ಸಂಬಂಧಗಳ ಉಳಿಸುವಿಕೆ ಬಗ್ಗೆ ನಾ ಹೇಳಲು ಹೊರಟಿದ್ದೀನಿ ಇಂದಿನ ಅಂಕಣದಲಿ ಅಂತ ಆಶ್ಚರ್ಯಪಡದಿರಿ.ನಮ್ಮನು ಹೊಗಳಿದಂತೆ ಮಾಡಿ ನಮಗೇ ಗೊತ್ತಾಗದಂತೆ ತೆಗಳುವ,ತೆಗಳಿದರೂ ಅದನೇ ಸರಿಯೆಂದು ಸಮರ್ಥಿಸಿಕೊಳ್ಳುವ ಅದೇ ನಮ್ಮ ಹತ್ತಿರದ ನೆಂಟರ ಬಗ್ಗೆ ಕಣ್ರಿ… ಈಗಿನ ನಮ್ಮ ಕಾಲಮಾನದಲಿ ನಮ್ಮೆಲ್ಲರ ನೆಂಟರ ಜೊತೆಗಿನ ಸಂಬಂಧ ನಿಧಾನವಾಗಿ ಕಳೆಗುಂದುತಾ ಇರೋದು ನಿಮ್ಮೆಲ್ಲರ ಗಮನಕೂ ಬಂದಿರಬಹುದು.ಇದರ ಕಾರಣ  ಏನಿರಬಹುದು ಅಂತ ಒಮ್ಮೆ ವಿಚಾರ ಮಾಡಿದರೆ ತಿಳಿಯುತ್ತದೆ.ಮೊದಲನೆಯ ಕಾರಣ ಪ್ರತಿಯೊಬ್ಬರಿಗೂ ನೆಂಟರ ಜೊತೆ ಕಳೆಯಲು ಸಮಯ ಹೊಂದಾಣಿಕೆಯಾಗದಿರುವುದು.ಯಾರಾದ್ರೂ ನೆಂಟರು ಮನೆಗೆ ಬರ್ತಾರೆಂದರೆ ನಾವು ಮೊದಲು ಯೋಚಿಸುವುದೇ ಅವರಿಗೆ ನಾವು ಸಾಕಷ್ಟು ಸಮಯ ಕೊಡಲಾಗುವುದೇ ಆತಿಥ್ಯ ಮಾಡಲು ಹಾಗೂ ಅವರ ವಸತಿಗೆಲ್ಲ ಸರಿಯಾಗಿ ವ್ಯವಸ್ಥೆ ಮಾಡಲಾದೀತೇ ಎಂದು.ಎಲ್ಲರೂ ಹೀಗಿರುತ್ತಾರೆಂದು ಹೇಳಲಾಗದು.ನೆಂಟರೆಂದರೆ ಇಷ್ಟಪಡುವ ಮಂದಿಯೂ ಸಹ ಹೆಚ್ಚಾಗಿ ಇರುತ್ತಾರೆ. ಇನ್ನೊಂದು ಕಾರಣವೆಂದರೆ ಕೆಲವರಿಗೆ ನಂಟರು ಬರುತ್ತಾರೆಂದರೆ ಇರಿಸುಮುರಿಸು ಉಂಟಾಗುವುದು ಏಕಂದರೆ ಕೆಲವು ನೆಂಟರಿಗೆ ಅಲ್ಲಿಂದಿಲ್ಲಿಗೆ ಚಾಡಿಮಾತು ಹೇಳಿ ಜಗಳ ತಂದು ಹಾಕುವ ಸ್ವಭಾವಿರುತ್ತದೆ,ಆ ಸ್ವಭಾವದವರನ್ನು ದೂರವಿರಿಸುವ ಅಭ್ಯಾಸ ಆತಿಥ್ಯ ನೀಡುವವರಿಗೆ ಇರುತ್ತದೆ ಹಾಗಾಗಿ ಅಂತಹ ನೆಂಟರು ತಮ್ಮ ಮನೆಗೆ ಬರದಂತೆ ಕಾರಣ ಹುಡುಕುತ್ತಾರೆ.ಒಂದುವೇಳೆ ಬಂದರೂ ಮರ್ಯಾದೆಯಿಂದಲೇ ಚೆನ್ನಾಗಿ ಆತಿಥ್ಯ ಮಾಡಿ ಕಳಿಸುತ್ತಾರೆ.  ಇನ್ನು ಹಲವರಿಗೆ ತಮ್ಮ ಆಫೀಸ್ ಹಾಗೂ ಮನೆಯ ಕೆಲಸಗಳ ಮಧ್ಯೆಯೂ ಅವರೆಲ್ಲರ  ಇಷ್ಟಾನುಸಾರವಾಗಿ ನೆಂಟರ ಬೇಕು ಬೇಡಗಳನು ಪೂರೈಸಲಾದೀತೇ ಅನ್ನುವ ಆತಂಕ ಮನಸಲಿ‌ ಕಾಡುತ್ತದೆ.ಪಾಪ ಚೆನ್ನಾಗಿ ಆತಿಥ್ಯ ಮಾಡಿ ಕಳಿಸಿದರೂ ಸಹ ಅದೇ ನೆಂಟರು ಹೊರಗೆ ಬಂದಾಗ ತಮ್ಮ ಬಗ್ಗೆ ಹಾಗೂ ತಮ್ಮ ಆತಿಥ್ಯದ ಬಗ್ಗೆಯೇ ಕೊಂಕು ಅಥವಾ ವ್ಯಂಗ್ಯದ ಮಾರಾಡುತ್ತಾರೆನ್ನುವ ಆತಂಕದಲಿ ದಿನ ದೂಡುತ್ತಾರೆ…ಹಾಗಾಗಿ ನೆಂಟರ ಬರುವಿಕೆ ಇಂದಿನ ದಿನಗಳಲಿ ಬಲು ಅಪರೂಪವಾಗಿದೆ ಅಂತಲೇ ಹೇಳಬಹುದು.ಅವರವರ ದೃಷ್ಟಿಕೋನದಲ್ಲಿ ನೋಡಿದಾಗ  ಇದರಲಿ ಯಾರದೂ ತಪ್ಪಿಲ್ಲವೆಂತಲೂ ಅನಿಸುವುದು.ಆದರೂ ಮನೆಗೆ ನೆಂಟರ ಆಗಮನ ಚೈತನ್ಯದಾಯಕವೂ ಹೌದು ಜೊತೆಗೆ ಹಲವು ವಿಚಾರಗಳ ವಿನಿಮಯವಾಗುವಿಕೆ ಮನಸಿನ ಏಕಾತಾನತೆಗೆ ಒಳ್ಳೆಯ ಮದ್ದು ಆಗುವುದಂತೂ ಸತ್ಯ. ನೆಂಟಸ್ತನವನು ಉಳಿಸುವ ನಡೆಯನು ವಿವರಿಸುತಾ ಹೀಗೂ ಯೋಚಿಸಬಹುದು..ನೆಂಟರು ಒಂದು ಮದುವೆಯ ಸಮಾರಂಭದಲ್ಲೊ ಅಥವಾ ಒಂದು ಹೋಮ- ಹವನದ ಕಾರ್ಯಕ್ರಮದಲ್ಲೋ  ಸೇರಿದಾಗ ಎಲ್ಲರಿಗೂ ತಮ್ಮ ಕುಟುಂಬದ ಈ ಐಕ್ಯತೆಯನು ಕಂಡು ಸಂತಸವಾಗುತ್ತದೆ.ಕುಟುಂಬದ ಹೊಸ ಸದಸ್ಯರನು ಹಳೆಯ ತಲೆಮಾರಿನವರು ತಮ್ಮ‌ ಕಾಲವಿನ್ನು ಮುಗಿಯಿತಪ್ಪಾ ಎನ್ನುತಾ ತುಂಬು ಮನಸಿಂದ ಅವರೆಲ್ಲರ ಪರಿಚಯ ಮಾಡಿಕೊಡುವುದನು ಕಂಡು ಒಮ್ಮೆಗೇ ಮನಸು ಭಾವುಕವಾಗುತ್ತದೆ. ಮುಂದೊಂದಿನದ  ಸಮಾರಂಭದಲಿ ಈ ಹಿರಿಯ ತಲೆಮಾರಿನವರು ಕಣ್ಮರೆಯಾಗದಿದ್ರೆ ಸಾಕು ಅಂತಲೂ ಮನಸು ಹಾರೈಸುತ್ತದೆ. ಜೊತೆಗೆ ನೆಂಟಸ್ತನ ಕುಂಠಿತವಾಗುವಿಕೆಯ ಮತ್ತೊಂದು ಮುಖ್ಯ ಕಾರಣವೆಂದರೆ..ಮೊಬೈಲ್ ಚಟ ಹಾಗೂ ಸಾಮಾಜಿಕ ತಾಣವೆನ್ನಬಹುದು. ಇತ್ತೀಚೆಗಿನ ಮೊಬೈಲಿನ YouTube Shorts ವೀಕ್ಷಣೆಯ ಮಟ್ಟ ಯಾವ ಯಾವ ರೀತಿಯಲಿ ಏರಿದೆಯೆಂದರೆ ಇಂದಿನ ಯುವಜನತೆ,ಹದಿಹರೆಯದ ಮಕ್ಕಳು,ಮಧ್ಯೆ ವಯಸ್ಸಿನ ಹೆಂಗಸರು, ಅರ್ಧ ಶತಕದ ಅಂಚಲಿರುವ ಗಂಡಸರೆನ್ನುವಭೇಧಭಾವವಿಲ್ಲದೆ ಈ ಚಟ ಆವರಿಸಿಕೊಂಡು ಬಿಟ್ಟಿದೆ. ಇದಕ್ಕೆ ದಾಸರಾಗಿರೊದರಿಂದ  ಮನೆಗೆ ಯಾರು ಬಂದರೂ ಅಥವಾ ಯಾವ ಫಂಕ್ಷನ್ ಗೆ ಹೋಗಬೇಕೆಂದರೂ ಇದಕೆ ಅಡ್ಡಿಯಾದೀತೆಂಬ ನೆಪವೊಡ್ಡಿ ಹೋಗದೇ ಇದ್ದುಬಿಡುತ್ತಾರೆ.ಇಂತಹ ಚಟದಿಂದ ಹೊರ ಬಂದರೆ ಮಾತ್ರ ಸಂಬಂಧಗಳ ಉಳಿಯುವಿಕೆ ಸಾಧ್ಯವಾಗುತ್ತದೆ.ಇಲ್ಲದಿದ್ರೆ ತಾವಾಯ್ತು ತಮ್ಮ ಪಾಡಾಯ್ತು ಅನ್ನುವ ಸ್ಥಿತಿಗೆ ಈ Gen Z ಹೋಗುವುದರಲಿ ಹೆಚ್ಚು ಕಾಲ ಉಳಿದಿಲ್ಲ ಅನ್ನಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಸಮಾಜದಲಿ ಒಳ್ಳೆಯ ಮನಸ್ಸಿರುವ ಎಲ್ಲರ ಜೊತೆಗೆ ಅದರಲೂ ತಮ್ಮ ಕುಟುಂಬದ ತೀರ ಹತ್ತಿರದ ನೆಂಟರಿಷ್ಟರ ಜೊತೆಯಲಿ ಬೆರೆತಾಗ ಮಾತ್ರ ಸಾಮರಸ್ಯದಿಂದ ಬಾಳು ಸಾಗುತಾ ನಮ್ಮೆಲ್ಲರ ಬಾಳ್ವೆ ಸುಂದರವೆನಿಸುತ್ತದೆ.ಇಲ್ಲವಾದರೆ ಏಕಾತಾನತೆಯ ಏಕಾಂತ ಕಾಡಿ,ಬೇರೆ ಯಾರ ಬಗ್ಗೆಯೂ ಯೋಚಿಸದಂತಹ ಸ್ವಾರ್ಥದತ್ತ ಮನಸು ಸಾಗುತ್ತದೆ. ನಮ್ಮ ಬದುಕು ಇವೆರಡು ದೃಷ್ಟಿಕೋನದಲಿ ನೋಡಿದಾಗ ಅದು  ಹೇಗಿರಬೇಕು ಅನ್ನುವ ಆಯ್ಕೆ ನಮ್ಮದೇ! ಸುಮನಾ ರಮಾನಂದ, ಕೊಯ್ಮತ್ತೂರು 

“ನೆಂಟಸ್ತನದ ಸಂಬಂಧಗಳ ನಡೆ” ವಿಶೇಷ ಲೇಖನ ಸುಮನಾ ರಮಾನಂದ Read Post »

ನಿಮ್ಮೊಂದಿಗೆ

ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಅವರ ಕವಿತೆ, “ಚಳಿ-ಚಳಿ”

ಕಾವ್ಯ ಸಂಗಾತಿ ಶರಣಪ್ಪ ತಳ್ಳಿ ಕುಪ್ಪಿಗುಡ್ಡ “ಚಳಿ-ಚಳಿ”   ಎಲ್ಲವನು ಕಳೆದುಕೊಂಡೆತನುವು ಮನವುಒಲವು ಬಲವುಈ ಚಳಿಯರಾತ್ರಿಗೆ! ಏಕಾಂತದ ನಡುಕಎದೆಯೊಳಗೆವಿರಹದ ಉರಿಅರಿವು ಜರಿದುಮರೆವು ಮಸೆದು ಹೊರಗೆ-ರಂಧ್ರ ಕೊರೆವ ಚಳಿಒಳಗೆ-ದಹಿಸುವ ನಿನ್ನನೆನಪ ಸುಳಿ ನೀನಿರದ ವೇಳೆಜೀವ ಬಾದಿತನಿದಿರೆ ಬಾರದೆನೆಮ್ಮದಿ ಗದ್ಗದಿತ ಮೆಲ್ಲುವ ವೇದನಕನ್ನಡಿ ನಗುತಕಾಯಿಲೆಗೆ ಕೆಡವಿದಮೇಧಾವಿ ಶಕುನ ಗಡಿಯಾರದ ಮುಳ್ಳುಗಳಶಬ್ಧವು-ಕಿವಿಯೊಳಗೆಸಲಾಕೆ ಬಾರಿಸಿದ ಹಾಗೆಮಿಣುಕು ದೀಪಅಣಕಿಸಿದ ಹಾಗೆ ನೀನಿರದಈ ಚಳಿಯ ರಾತ್ರಿಹಿಂಡುತಿವೆಕರಳು ನರಳಗಳನುಹಿಮದ ಗರ್ಭದೊಳಗೆಮಲಗಿಸಿ ——– ಶರಣಪ್ಪ ತಳ್ಳಿ ಕುಪ್ಪಿಗುಡ್ಡ

ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಅವರ ಕವಿತೆ, “ಚಳಿ-ಚಳಿ” Read Post »

You cannot copy content of this page

Scroll to Top