ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಗೀತಾ ಆರ್‌ ಅವರ ಕವಿತೆ “ನಿನ್ನ ನಯನ”.

ಕಾವ್ಯ ಸಂಗಾತಿ ಗೀತಾ ಆರ್‌ ಅವರ ಕವಿತೆ “ನಿನ್ನ ನಯನ” ಸಂಭಾಷಣೆ ಸಮ್ಮಿಲನ ನಿನ್ನ ಆನಯನಗಳಲ್ಲಿ…ಆಡದೇ ಉಳಿದಿರುವ ಮಾತುಸಾವಿರಾರು….ನಿರ್ಮಿಸಿರುವೆ ಮನದೊಳಗೊಂದುವೇದಿಕೆ ನಿನಗಾಗಿ…ನಾನಂದು ಅಗಲಿಕೆ ನೋವಿನಲ್ಲೂಅರಸುತ್ತಿದೆ ನಿನ್ನ ಇರುವಿಕೆ…ಮಾಸಾದಿದ್ದ ನಿನ್ನ ನೆನಪುಗಳೆಲ್ಲಾಮರೀಚಿಕೆಯಾಯಿತು….ಎಲೆ ಮರೆಯ ಕಾಯಿಯಂತೆ ಅದುಕಾಣದಾಯಿತು…ನಾನೆಲ್ಲೋ ನೀನೆಲ್ಲೋ ಬದುಕಿನಬಾಳಾಪಯಣದಲೀ….ನೀನ್ಯಾರೋ ನಾನ್ಯಾರೋ ಊರದಾರಿಯಲ್ಲಿ….ವರುಷ ಉರುಳಿತು ಮಾಸ ಕಳೆಯಿತುತಡೆವರಾರು ಕಾಲಾವ…. ————   ಗೀತಾ ಆರ್.

ಗೀತಾ ಆರ್‌ ಅವರ ಕವಿತೆ “ನಿನ್ನ ನಯನ”. Read Post »

ಕಾವ್ಯಯಾನ

ನೀನೆಂದರೆಪ್ರೀತಿ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಕಾವ್ಯ ಸಂಗಾತಿ ನೀನೆಂದರೆಪ್ರೀತಿ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ನೀನೆಂದರೆ ಪ್ರೀತಿ ಬವಣೆ ಕಳೆದ ಭರವಸೆ ರೀತಿಭಾವ ತವರ ಪ್ರೇಮನಿನ್ನೊಲುಮೆ ಸ್ನೇಹನೆಲದ ಮರೆಯ ಹೇಮನಿನ್ನ ಗುಣ ಮನಸಿರಿ ಸಗ್ಗದ ತಾಣಸುಳಿವ ಗಾಳಿಯನಡುವೆ ಅರಳುಮಲ್ಲಿಗೆ ಹೂವುನಿನ್ನ ಪ್ರೇಮದಲಿಮರೆವೆ ನೋವುನೀನೆಂದರೆ ಪ್ರೀತಿ________________________ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ನೀನೆಂದರೆಪ್ರೀತಿ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಇತರೆ

“ಗೌರವ ಡಾಕ್ಟರೇಟ್ ಮಾರಾಟಕ್ಕಿದೆ” ಲತಾ ಎ ಆರ್‌ ಬಾಳೆಹೊನ್ನೂರು

ಸತ್ಯ ಸಂಗಾತಿ “ಗೌರವ ಡಾಕ್ಟರೇಟ್ ಮಾರಾಟಕ್ಕಿದೆ” ಲತಾ ಎ ಆರ್‌ ಬಾಳೆಹೊನ್ನೂರು . ಅದೊಂದು ಕಾಲವಿತ್ತು ಡಾಕ್ಟರ್ ಎಂಬ ಪದಕ್ಕೆ ಅದರದೇ ಆದ ಘನತೆ ಗಾಂಭೀರ್ಯವಿತ್ತು. ಎಂ ಬಿ ಬಿ ಎಸ್ ಮಾಡಿದ ಮಹನೀಯರಿಗೆ ಕೊಡುವ ಗೌರವ ಪದವಿಯಾಗಿತ್ತು. ಅದೊಂದು ಹೆಮ್ಮೆಯ ಪ್ರತೀಕ ವಾಗಿತ್ತು. ಹಾಗೆಯೇ ಎಲ್ಲಾ ಕ್ಷೇತ್ರ ದಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆ ಮಾಡಿದವರಿಗೆ ನೀಡುವ ಗೌರವ ಡಾಕ್ಟರೇಟ್ ಅಮೋಘವಾದದ್ದು. ಪಿ ಹೆಚ್. ಡಿ ಮಾಡಿ ಸಾಧನೆ ತೋರಿಗೌರವ ಡಾಕ್ಟರೇಟ್ ಪಡೆದವರಿಗೆ ಅದರದೇ ಆದ ಸ್ಥಾನ ಮಾನವಿತ್ತು. ಗೌರವ ಸ್ಥಾನ ವಿತ್ತು ಹೀಗೆ ಡಾಕ್ಟರೇಟ್ ಪಡೆದವರಿಗೆ ಹೃದಯದ ವಂದನೆಗಳು.       ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಸಂಘ ಸಂಸ್ಥೆಗಳು ಹಾಗೂ ವೇದಿಕೆಗಳು ನೀಡುತ್ತಿರುವ ಗೌರವ ಡಾಕ್ಟರೇಟ್ ಅಕ್ಷಮ್ಯ ಅಪರಾಧವಾಗಿದೆ. ಏಕೆಂದರೆ ಗೌರವ ಡಾಕ್ಟರೇಟ್ ಮಾರಾಟಕ್ಕಿದೆ. ದುಡ್ಡಿಗಾಗಿ ಮಾರಾಟ ಹಾಗೂ ಹೆಸರಿನ ಮುಂದೆ ಡಾ. ಎಂದು ಹಾಕಿಸಿಕೊಳ್ಳುವ ಹುಚ್ಚು ಕೆಲವರ ತಲೆಗೇರಿದೆ 10.000.12000.ಕ್ಕೆ ಗೌರವ ಡಾಕ್ಟರೇಟ್ ಪಡೆಯುವ ಅಚ್ಚುಕಟ್ಟಾದ ಷಡ್ಯಂತ್ರ ನಡೆದು ಮಾರಾಟವಾಗುತ್ತಿದೆ. ಹೂವು ಮಾರುವವರು ಹಣ್ಣು ಮಾರುವವರು ಕಡಲೆ ಕಾಯಿ ಮಾರುವವರು ಇವರೆಲ್ಲ ಹಣ ನೀಡಿ ಡಾಕ್ಟರೇಟ್ ಪಡೆಯಲು ಹಲವು ವೇದಿಕೆಗಳು ತಯಾರಾಗಿವೆ ಸಾಧನೆ ಇಲ್ಲದವರೆಲ್ಲ ವೇದಿಕೆ ಅಲಂಕರಿಸುತ್ತಿದ್ದಾರೆ ಹಣದಾಹದಲ್ಲಿ ಅನರ್ಹರಿಗೆ ಈ ರೀತಿಯ ಸನ್ಮಾನ ಅವಶ್ಯಕತೆ ಇದೆಯೇ? ಕೊಡುವವರಿಗೆ ಹಣದ ದಾಹ ತೆಗೆದುಕೊಳ್ಳುವವರಿಗೆ ಮರ್ಯಾದೆ ಇಲ್ಲ. ಮೂರು ಬಿಟ್ಟವರು ಊರಿಗೆ ದೊಡ್ಡವರು ಗಾದೆ ಮಾತು ಸುಳ್ಳಲ್ಲ. ಈ ರೀತಿಯ ನಾಚಿಕೆಗೇಡಿನ ಸನ್ಮಾನ ಅವಶ್ಯಕತೆ ಇದೆಯೇ? ಕೇವಲ ಒಂದು 50,100 ಕವನವಿರುವ ಕವನ ಸಂಕಲನ ಬಿಡುಗಡೆ ಮಾಡಿ ಹಲವಾರು ಜನರಿಗೆ ಬಕೆಟ್ ಹಿಡಿದು ಸನ್ಮಾನ. ಡಾಕ್ಟರೇಟ್ ಪಡೆಯುವ ಕೀಳು ಮನಸ್ಸಿನ ಸ್ವಾಭಿಮಾನವಿಲ್ಲದ ಆತ್ಮಸಾಕ್ಷಿ ವಿರೋಧಿಗಳಿಗೆ ಧಿಕ್ಕಾರವಿರಲಿ. ಹೆಸರಿನ ಮುಂದೆ ಡಾ. ಬರೆಸಿಕೊಳ್ಳುವ ಹುಚ್ಚು ತೊಲಗಲಿ. ಜನ ಮರುಳೋ ಜಾತ್ರೆ ಮರುಳೋ ತಿಳಿಯುತ್ತಿಲ್ಲ. ನಿಜವಾದ ಡಾಕ್ಟರ್ ಯಾರು ಎಂದು ಕಂಡು ಹಿಡಿಯುವುದೇ ಕಷ್ಟಕರವಾಗಿದೆ. ಮುಂದೊಂದು ದಿನ ಮೆಡಿಕಲ್ ನಲ್ಲಿ ಜ್ವರ ತಲೆನೋವಿನ ಮಾತ್ರೆ ಖರೀದಿಸಿ ಡಾ. ಎಂಬ ಬೋರ್ಡ್ ಹಾಕಿಕೊಂಡು ಕ್ಲಿನಿಕ್ ತೆರೆದುಕೊಳ್ಳುವರೇನೋ ತಿಳಿದಿಲ್ಲ ಹುಚ್ಚರ ಸಂತೇಲಿ ಡಾ ಪಡೆದವನೇ ಮಹನೀಯ ಆಗಬಾರದು. ಡಾಕ್ಟರೇಟ್ ಪಡೆಯಲು ಅದರದೇ ಆದ ಅರ್ಹತೆ ಇರುವವರಿಗೆ ನೀಡಬೇಕು. ಈ ರೀತಿಯ ಅನ್ಯಾಯದ ವಿರುದ್ಧ ಸಂಭಂದ ಪಟ್ಟವರು ಗಮನಹರಿಸಲಿ ಲತಾ ಎ ಆರ್ ಬಾಳೆಹೊನ್ನೂರು

“ಗೌರವ ಡಾಕ್ಟರೇಟ್ ಮಾರಾಟಕ್ಕಿದೆ” ಲತಾ ಎ ಆರ್‌ ಬಾಳೆಹೊನ್ನೂರು Read Post »

You cannot copy content of this page

Scroll to Top