ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

“ಅಂಗೈಯಲ್ಲೇ ಇದೆ ಸ್ಪೂರ್ತಿಯ ಕಡಲು!” ಜಯಶ್ರೀ.ಜೆ. ಅಬ್ಬಿಗೇರಿ

ಸ್ಫೂರ್ತಿ ಸಂಗಾತಿ “ಅಂಗೈಯಲ್ಲೇ ಇದೆ ಸ್ಪೂರ್ತಿಯ ಕಡಲು!”  ಜಯಶ್ರೀ.ಜೆ. ಅಬ್ಬಿಗೇರಿ ಏಕೋ ಏನೋ ಗೊತ್ತಿಲ್ಲ  ಯಾವುದೇ ಕೆಲಸದಲ್ಲೂ ಆಸಕ್ತಿಯೇ ಇಲ್ಲ. ಹೇಗೋ ಮನಸ್ಸಿಗೆ ಒಪ್ಪಸಿ ಹುಮ್ಮಸ್ಸು ಮೂಡಿಸಿಕೊಂಡು ಯಾವ ಕೆಲಸವನ್ನು ಆರಂಭಿಸಿದರೂ ಅರ್ಧಂಬರ್ಧ ಮಾಡಿ ನಿಲ್ಲಿಸಿ ಬಿಡ್ತಿನಿ.ಅನ್ನೋದು ಬಹುತೇಕ ಜನರ  ಚಿಂತೆ. ಸಾಮಾನ್ಯವಾಗಿ ಬಹಳಷ್ಟು ಜನರನ್ನು ಮೇಲಿಂದ ಮೇಲೆ ಈ ತೊಂದರೆ ಕಾಡುತ್ತದೆ. ಮೇಲ್ನೋಟಕ್ಕೆ ಈ ಸಮಸ್ಯೆ ದೊಡ್ಡದೇನಲ್ಲ ಆದರೆ ಇದರ ಬೇರುಗಳನ್ನು ಬಲಗೊಳ್ಳಲು ಬಿಟ್ಟರೆ ಸಮಸ್ಯೆ ತಪ್ಪಿದ್ದಲ್ಲ. ಏನೆಲ್ಲ ಇದ್ದರೂ ಏನೂ ಸಾಧಿಸಲು ಸಾಧ್ಯವಾಗುವುದಿಲ್ಲ ಅಂಥ ಪರಿಸ್ಥಿತಿ ನಿರ್ಮಾಣ ಮಾಡಿ ಬಿಡುತ್ತದೆ.  ‘ಒಂದು ದುರ್ಬಲ ಮನಸ್ಸು ಒಂದು ಸೂಕ್ಷ್ಮ ದರ್ಶಕದಂತೆ. ಅದು ಸಣ್ಣ ವಿಷಯಗಳನ್ನು ದೊಡ್ಡದಾಗಿಸುತ್ತದೆ. ಆದರೆ ದೊಡ್ಡದನ್ನು ಪಡೆಯಲಾರದು.’ ಸ್ವಯಂ ಸ್ಪೂರ್ತಿ ಸ್ವಯಂ ಸ್ಪೂರ್ತಿ ಇರದಿದ್ದರೆ  ಸಂಕಟ, ನೋವು, ಅವಮಾನ ಹಾಗೂ ಬೇಸರಗಳು ಬೆನ್ನು ಹತ್ತಿ ಜೀವ ತಿನ್ನುತ್ತವೆ.ಜೀವನವನ್ನು ನಿಸ್ಸಾರಗೊಳಿಸುತ್ತವೆ.ಇತರರ ಮುಂದೆ ತಲೆ ತಗ್ಗಿಸುವಂತೆ ಮಾಡುತ್ತವೆ.ಕೆಲವೊಮ್ಮೆ ಶಿಕ್ಷೆಯನ್ನು ಅನುಭವಿಸುವಂತೆ ಮಾಡುತ್ತವೆ. ಸ್ಪೂರ್ತಿ ಇಲ್ಲದ ಸ್ಥಿತಿಯಲ್ಲಿ ನಿರಂತರ ಎಲ್ಲದರಲ್ಲೂ ಅವಮಾನದ ಪೆಟ್ಟಿನ ಅನುಭವ ಎದೆಗೆ ಬಿಸಿ ನೀರಾಗಿಸಿ ಹುಯ್ಯುತ್ತದೆ. ಸದಾ ನಮ್ಮನ್ನು ನಾವು ಸ್ಪೂರ್ತಿಯುತವಾಗಿ ಇಟ್ಟುಕೊಳ್ಳುವುದು ಅತಿ ಮುಖ್ಯ. ಮಾರ್ಗ ಮನಸ್ಸಿದ್ದಲ್ಲಿ ಮಾರ್ಗ ತಾನಾಗಿ ಕಾಣುತ್ತದೆ. ಆದರೂ ಈ ನಿಟ್ಟಿನಲ್ಲಿ ನಮ್ಮ ದೃಷ್ಟಿಕೋನ ಬದಲಾಗದಿದ್ದರೆ ‘ಆಯುಧವು ತನ್ನ ಯಜಮಾನನಿಗೂ ಶತ್ರುವೇ ಆಗಿದೆ’ಎಂಬಂತಾಗುತ್ತದೆ. ಕಲ್ಲಾಗಿರುವ ಮನಸ್ಸೆಂಬ ಆಯುಧವನ್ನು ಹೂವಿನಂತೆ ಮೆದುವಾಗಿಸಬೇಕು.ಹೊರಗಿನ ವಸ್ತುಗಳನ್ನು ಉಪಯೋಗಿಸಿ ಒಳ ಮನಸ್ಸನ್ನು ಹದಗೊಳಿಸಿ ಸ್ವಯಂ ಸ್ಪೂರ್ತಿಗೊಳಿಸಿಕೊಳ್ಳುವುದು ಹೇಗೆೆ ಎಂಬುದನ್ನು ನೋಡೋಣ ಬನ್ನಿಶಕ್ತಿ ತುಂಬುವ ವಸ್ತುಗಳನ್ನು ಬಳಸಿನಿಮಗೆ ಹಿತ ನೀಡುವ, ಇಷ್ಟವಾಗುವ, ನೀವು ಪ್ರೀತಿಸುವ, ವಸ್ತುಗಳು ನಿಮಗೆ ಶಕ್ತಿಯನ್ನು ತುಂಬುತ್ತವೆ. ಹೀಗಾಗಿ ಇವುಗಳಿಗೆ ನಿಮ್ಮ ಸುತ್ತಲೂ ಜಾಗ ನೀಡಿ. ಅವು ತಾಜಾ ಹೂಗಳು, ಸುಂದರ ಪೆಂಟಿಗ್ಸ್ ಇಲ್ಲವೇ ನುಡಿಮುತ್ತುಗಳಾಗಿರಬಹುದು. ಇವು ನಿಮ್ಮನ್ನು ಸ್ಪೂರ್ತಿಗೊಳಿಸಲು ತುದಿಗಾಲಲ್ಲೇ ನಿಂತಿರುತ್ತವೆ. ನೀರಸಗೊಂಡ ಮನಸ್ಸು ತಕ್ಷಣಕ್ಕೆ ಉತ್ಸಾಹದಿಂದ ಎದ್ದು ನಿಲ್ಲುತ್ತದೆ.ಒಂದು ನವಿಲು ತನ್ನ ಗೆರೆಗಳನ್ನು ತೆರೆದಿಟ್ಟಾಗ ಮತ್ತು ನವಿಲಿನಂತೆ ನಡೆದಾಗ ಮಾತ್ರ ಸುಂದರವಾಗಿ ಆಕರ್ಷಕವಾಗಿ ಕಾಣಬಲ್ಲದು. ಅಂತೆಯೇ ನಿಮ್ಮ ಪ್ರಪಂಚದಲ್ಲಿ ನೀವು ಬಹಳಷ್ಟು ಬಯಸುವುದನ್ನೆಲ್ಲ ಸುತ್ತುವರಿಸಿಕೊಂಡರೆ ಮನಾನಂದ ನೀಡುವದರ ಜೊತೆಗೆ ಮನಸ್ಸನ್ನು ಮಹತ್ತರ ಕಾರ್ಯಕ್ಕೆ ಸಿದ್ಧಗೊಳಿಸುತ್ತದೆ. ವಿಪರ್ಯಾಸದ ಸಂಗತಿ ಎಂದರೆ ಇದರತ್ತ ಅತೀ ಕಡಿಮೆ ಗಮನ ನೀಡುತ್ತಿದ್ದೇವೆ. ಇವುಗಳತ್ತ ಚಿತ್ತ ಹರಿಸಿದರೆ ಕಾಲದ ಗತಿಯಲ್ಲಿ ನಿಜಕ್ಕೂ ಶ್ರೇಷ್ಠ ಮಟ್ಟದಲ್ಲಿ ಸ್ಪೂರ್ತಿ ಮನೆ ಮಾಡುತ್ತದೆ. ಯಾವಾಗಲೂ ಸುಂದರ ವಸ್ತುಗಳು ನಿಮ್ಮ ಕಣ್ಣ ಮುಂದಿರಲಿ. ಹೆಚ್ಚಿನ ಸಮಯ ಓದಿ ಓದು ಬಹಳಷ್ಟನ್ನು ಕಲಿಸುತ್ತದೆ. ಹೊಸ ಹೊಸ ಆಲೋಚನೆಗಳು ಮನಸ್ಸನ್ನು ಪ್ರವೇಶಿಸುತ್ತವೆ. ಕಥೆ, ಕಾದಂಬರಿ, ಸದಭಿರುಚಿ ಪುಸ್ತಕಗಳ ಓದಿನಲ್ಲಿ ನಿರತರಾದರೆ ಸ್ಪೂರ್ತಿಯ ಮಟ್ಟ ಏರುತ್ತದೆ. ಸೃಜನಶೀಲತೆಯನ್ನೂ ಹೆಚ್ಚಿಸುತ್ತದೆ. ಓದಿನಲ್ಲಿಯ ಯಾವುದೇ ಒಂದು ವಿಚಾರ ನಿಮ್ಮಲ್ಲಿ ಸ್ಪೂರ್ತಿಯ ಕಿಡಿಯನ್ನು ಹೊತ್ತಿಸಬಹುದು.ಓದಿನ ಮೌಲ್ಯವನ್ನು ಅರಿತು ಅನುಸರಿಸಿದರೆ ಸ್ಪೂರ್ತಿಗೆ ಮಹಾನ್ ಪಾಠ ದೊರೆಯುವುದು. ಈಗಿನ ಗ್ಯಾಜೆಟ್ ದುನಿಯಾದಲ್ಲಿ ಪುಸ್ತಕ ಓದುವದಕ್ಕಿಂತ ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥಗೊಳಿಸುವುದೇ ಹೆಚ್ಚಾಗುತ್ತಿದೆ. ಇದು ಒಂಟಿತನಕ್ಕೆ ಜಾರಿಸುತ್ತಿದೆ. ‘ಎಲ್ಲ ಸಮಸ್ಯೆಗಳನ್ನು ತಪ್ಪಿಸಿ ಬಿಡುವ ಬದಲು ಎದುರಿಸಿದರೆ ಅವು ಚಿಕ್ಕದಾಗುತ್ತವೆ.’ ಸ್ಪೂರ್ತಿಯಿದ್ದಲ್ಲಿ ನಮ್ಮೆಲ್ಲ ಕನಸುಗಳನ್ನು ಬೆನ್ನಟ್ಟಿ ಗೆಲ್ಲಬಹುದು. ಎಂಬುದು ಓದಿನಿಂದ ಬಹು ಬೇಗ ಅರ್ಥವಾಗುತ್ತದೆ.ಒಬ್ಬ ಒಳ್ಳೆಯ ಓದುಗನು ಅವಕಾಶಗಳನ್ನು ಒಳ್ಳೆಯ ಭಾಗ್ಯವನ್ನಾಗಿ ಬದಲಾಯಿಸುತ್ತಾನೆ. ಯಾವಾಗಲಾದ್ರೂ ಓದಿದ್ರಾಯ್ತು ಎಂದು ಉದಾಸೀನ ಮಾಡಿದರೆ ಜೀವನ ಸ್ಪೂರ್ತಿಯನ್ನು ಸವಿಯಲಾಗುವುದಿಲ್ಲ. ಸಂಗೀತ ಆಲಿಸಿ ‘ನಾನು ಮೂರು ದಿನ ಸಂಗೀತ ಅಭ್ಯಾಸ ಮಾಡದಿದ್ದರೆ ನನ್ನ ಗಾಯನದಲ್ಲೇನೋ ಕೊರತೆಯಿದೆ ಎಂದು ನನ್ನ ಮನೆಯಾಕೆಗೆ ತಿಳಿಯುತ್ತದೆ. ಎರಡು ದಿನ ಅಭ್ಯಾಸ ಬಿಟ್ಟರೆ ತಟ್ಟನೆ ನನ್ನ ಅಭಿಮಾನಿಗಳು ಗುರುತಿಸಬಲ್ಲರು. ಇಲ್ಲ ಒಂದೇ ಒಂದು ದಿನ ಅಭ್ಯಾಸವನ್ನು ಬಿಟ್ಟರೂ ನನ್ನ ಆಲಾಪದಲ್ಲೇನೋ ಕೊರತೆಯಿದೆ ಎಂದು ಖುದ್ದು ನನಗೆ ಗೊತ್ತಾಗುತ್ತದೆ. ’ಇದು ಸಂಗೀತದಂತೆದೈತ್ಯ ಪ್ರತಿಭೆ ಎಂದೇ ಖ್ಯಾತರಾದ ಜಗಜೀತ್ ಸಿಂಗ್ ತನ್ನ ಅಭ್ಯಾಸದ ಕುರಿತು ಸ್ವಾರಸ್ಯಕರವಾಗಿ ಹೇಳಿದ ರೀತಿ. ಸಂಗೀತವು ಮನಸ್ಸನ್ನು, ಸುಂದರ ಭಾವನೆಗಳನ್ನು ಅರಳಿಸುತ್ತದೆ. ನಿಮಗೆ ಬೇಕಾದುದನ್ನು ಪಡೆಯಲು ಕಷ್ಟ ಪಟ್ಟು ಕೆಲಸ ಮಾಡಿದ ನಂತರ, ಅದನ್ನು ಸಂತೋಷದಿಂದ ಅನುಭವಿಸಲು ಸಮಯ ಪಡೆದುಕೊಳ್ಳಿ. ಗಜಿ ಬಿಜಿಯಾಗಿರುವ ಮನಸ್ಸಿಗೆ ವಿಶ್ರಾಂತಿ ನೀಡಿ ಮುದಗೊಳಿಸುತ್ತದೆ. ಸೂರ್ತಿಯತ್ತ ವಾಲಿಸುತ್ತದೆ. ದಿನಚರಿ ಬದಲಿಸಿ‘ಮಾಡಿದ್ದನ್ನೇ ಮಾಡುತ್ತ ವಿಭಿನ್ನವಾದ ಫಲಿತಾಂಶವನ್ನು ನಿರೀಕ್ಷಿಸುವುದು ಮೂರ್ಖತನ.’ ಎಂದು ಹೇಳಿದ್ದಾನೆ ಜಗತ್ತಿನ ಮೇದಾವಿ ವಿಜ್ಞಾನಿ ಅಲ್ಬರ್ಟ್ ಐನಸ್ಟೀನ್.  ದಿನ ನಿತ್ಯ ಅದೇ ಕೆಲಸ ಅದೇ ಜನರು ಅದೇ ಗೊಣಗಾಟ ಜಂಜಾಟ.  ಹೀಗಿದ್ದಾಗ್ಯೂ ದಿನಚರಿಯಲ್ಲಿ ಬದಲಾವಣೆಗೆ ಮನಸ್ಸು ಮಾಡುವುದು ಕಮ್ಮಿ. ಇಲ್ಲವೇ ಇಲ್ಲವೆನ್ನುವಷ್ಟು ಬದಲಾವಣೆಯನ್ನು ದೈನಂದಿನ ಕೆಲಸಗಳಲ್ಲಿ ತರುತ್ತೇವೆ. ನಿರಾಸಕ್ತಿಯಿಂದ ಅದನ್ನೇ ನಿಯಮಿತವಾಗಿ ಪಾಲಿಸುತ್ತೇವೆ. ಒಂದೇ ದಾರಿಯಲ್ಲೇ ಓಡಾಡುತ್ತೇವೆ. ಒಂದೇ ಹೊಟೆಲ್ಲಿನಲ್ಲಿ ಕಾಫೀ ಹೀರುತ್ತೇವೆ. ತಿನ್ನುವ ತಿಂಡಿ ತಿನಿಸು ಬದಲಿಸಲೂ ಹಿಂಜರಿಯುತ್ತೇವೆ. ಒಟ್ಟಿನಲ್ಲಿ ಏಕತಾನತೆಗೆ ಗಂಟು ಬಿದ್ದಿರುತ್ತೇವೆ. ಬದಲಾವಣೆ ಮನಸ್ಸಿಗೆ ಆಗಿ ಬರುವ ಮಾತಲ್ಲ.ದಿನಚರಿ ಬದಲಿಸಲುಮನಸ್ಸು ಅಷ್ಟು ಸುಲಭವಾಗಿ ಒಪ್ಪುವುದೂ ಇಲ್ಲ. ಹೊಸ ಸವಾಲುಗಳು ತಲೆ ತಿನ್ನುವ ಸಮಸ್ಯೆಗಳೆನಿಸದೇ, ಹೊಸ ಆಯಾಮದಲ್ಲಿ ಹೊಸ ಅನುಭವಗಳಾಗಬೇಕೆಂದರೆ ಸೂರ್ತಿಯುತ ದಿನಚರಿಗೆ ಅಣಿಯಾಗಬೇಕು.  ‘ಸಮುದ್ರ ಶಾಂತವಾಗಿದ್ದಾಗ ಯಾರು ಬೇಕಿದ್ದರೂ ಚುಕ್ಕಾಣಿ ಹಿಡಿಯಬಹುದು.’ ಮನಸ್ಸು ಶಾಂತವಾಗಿರುವಾಗ ಅದನ್ನು ಪುಟ್ಟ ಮಗುವನಂತೆ ಮುದ್ದಿಸಿ ಹೊಸ ಬದಲಾವಣೆಗೆ ಒಪ್ಪಿಸಬೇಕು. ’ಅತ್ಯುತ್ತಮ ದಿನಚರಿ ನಮ್ಮದಾಗಿದ್ದರೆ ಸ್ವಯಂ ಸ್ಪೂರ್ತಿಯ ಕಡಲು ನಮ್ಮ ಅಂಗೈಯಲ್ಲೇ ಇದೆ.ದೇಶ ಸುತ್ತಿಶೈಕ್ಷಣಿಕ ಪ್ರವಾಸ ಇಲ್ಲವೇ ಸಣ್ಣ ಪುಟ್ಟ ಪ್ರಯಾಣಗಳು ನವನವೀನ ಅನುಭವಗಳನ್ನು ನೀಡುತ್ತವೆ. ವಿಚಾರದ ದಿಕ್ಕನ್ನು ಉತ್ತಮತೆಯತ್ತ ಹೊರಳಿಸುತ್ತವೆ. ದೂರದ ದೇಶಕ್ಕೆ ಪಯಣಿಸಬೇಕೆಂದೇನೂ ಇಲ್ಲ. ವಾಸವಿರುವ ನಗರವನ್ನೇ ಸುತ್ತಬಹುದು. ನೀವಿನ್ನೂ ನೋಡಿರದ ಪಾರ್ಕ್ನಲ್ಲಿ ಸುತ್ತಾಡಿ. ಹೊಸ ಮಠ ಮಂದಿರಗಳಿಗೆ ಕುಟುಂಬ, ಗೆಳೆಯರೊಂದಿಗೆ ಹೋಗಿ ಬನ್ನಿ.ವಿವಿಧ ಹಾದಿ ಬೀದಿಗಳಲ್ಲಿ ತಿರುಗುವುದು ವಿಶಿಷ್ಟ ಸ್ಪೂರ್ತಿಗೆ ದಾರಿಯಾಗುತ್ತದೆ. ಪಕ್ಕದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರೂ ಲವಲವಿಕೆ ತುಂಬಿಕೊಳ್ಳುತ್ತದೆ. ಅಜ್ಞಾನದ ಅಂದಕಾರವನ್ನು ಕಡಿಮೆಗೊಳಿಸಿಜ್ಞಾನ ಕ್ಷಿತಿಜವನ್ನು ಅಗಲಿಸುತ್ತವೆ. ಎತ್ತರದ  ಗುರಿಯಿರಲಿತಮಗೆಲ್ಲ ಗೊತ್ತಿರುವಂತೆ ಓಲಂಪಿಕ್ಸ್ ನಾಲ್ಕು ವರ್ಷಕ್ಕೊಮ್ಮೆ ಬರುವ ಕ್ರೀಡಾಕೂಟ. ಆದರೆ ಲಕ್ಷಾಂತರಕ್ರೀಡಾ ಪಟುಗಳು ಓಲಂಪಿಕ್ಸ್ನಲ್ಲಿ ಬಂಗಾರದ ಪದಕ ಕೊರಳಿಗೇರಿಸಿ ಗೆಲುವಿನ ರುಚಿ ನೋಡಲು ದಿನ ನಿತ್ಯ ಬೆವರು ಹರಿಸುತ್ತಿರುತ್ತಾರೆ. ಉಸೇನ್ ಬೋಲ್ಟ್ ನೂರು ಮೀಟರ್‌ನ್ನು ಕ್ರಮಿಸಲು ಬೇಕಾಗಿರುವ ಅವಧಿ ಬರೀ ಒಂಭತ್ತುವರಿ ಸೆಂಕೆಡುಗಳಷ್ಟೇ! ಆದರೆ ನಿತ್ಯದ ಅಭ್ಯಾಸ? ಉಳಿದ ಓಟಗಾರನಿಗಿಂತ ನೂರು ಪಟ್ಟು ಹೆಚ್ಚು ಮಾಡಲೇಬೇಕು. ಅಷ್ಟರ ಮಟ್ಟದ ಸ್ವಯಂ ಸ್ಪೂರ್ತಿ ಇರದಿದ್ದರೆ ಉಸೇನ್ ಬೋಲ್ಟ್ ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಓಟಗಾರನಾಗಿ ಮಿಂಚಲು ಸಾಧ್ಯವಾಗುತ್ತಿರಲಿಲ್ಲ. ಸ್ವಯಂ ಸ್ಪೂರ್ತಿಯಿಲ್ಲದೇ ಗೆಲುವು ಕಂಡಿರುವ ವ್ಯಕ್ತಿ ಇರುವುದು ಅಸಾಧ್ಯ. ಕೊನೆ ಹನಿ ‘ಸಣ್ಣ ಗುರಿಗಳನ್ನು ಹೊಂದುವುದು ಅಪರಾಧ’ ಎಂದಿದ್ದಾರೆ ಅಬ್ದುಲ್ ಕಲಾಂ. ಎತ್ತರದ ಆಗಸಕ್ಕೆ ಹಾರುವುದು ನಮ್ಮ ಗುರಿಯಾಗಿರಬೇಕು. ನಾವು ಅಲ್ಲಿಗೆ ತಲುಪದಿರಬಹುದು ಆದರೆ ನಾವಿರುವ ಮಟ್ಟದಲ್ಲೇ ಇರುವ ವಸ್ತುವಿಗೆ ಗುರಿಯಿಟ್ಟರೆ ಹಾರುವ ಮಟ್ಟಕ್ಕಿಂತ ಕಡಿಮೆ ಮಟ್ಟಕ್ಕೆ ನಮ್ಮ ಗುರಿಯ ಬಾಣ ಹಾರುತ್ತದೆ. ಎಲ್ಲಿಯವರೆಗೂ ನಾವು ಸ್ವಯಂ ಸ್ಪೂರ್ತಿಗೆ ಹಾತೊರೆಯುವುದಿಲ್ಲವೋ ಅಲ್ಲಿಯವರೆಗೆ ಗೆಲುವು ನಮಗೆ ದಕ್ಕುವುದಿಲ್ಲ. ನಾವು ಯಾವುದನ್ನಾದರೂ ಸಾಕಷ್ಟು ಪ್ರೀತಿಸಿದರೆ, ಅದು ತನ್ನ ರಹಸ್ಯಗಳನ್ನೆಲ್ಲ ಬಿಟ್ಟು ಕೊಡುತ್ತದೆ. ಆದ್ದರಿಂದ ಅಂಗೈಯಲ್ಲಿರುವ ಸ್ವಯಂ ಸ್ಪೂರ್ತಿಯನ್ನು ಪ್ರೀತ್ಸೋಣ ದೊಡ್ಡ ಗೆಲುವಿನ ನಗೆ ಬೀರೋಣ. ಜಯಶ್ರೀ.ಜೆ. ಅಬ್ಬಿಗೇರಿ

“ಅಂಗೈಯಲ್ಲೇ ಇದೆ ಸ್ಪೂರ್ತಿಯ ಕಡಲು!” ಜಯಶ್ರೀ.ಜೆ. ಅಬ್ಬಿಗೇರಿ Read Post »

ಕಾವ್ಯಯಾನ

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಗಜಲ್ (ಮಧುಸೂದನ್ ಸರ್ ಅವರ “ಖಾಲಿ ಮಾತಿನ ಜೋಳಿಗೆ” ಸಾಲಿನಿಂದ ಪ್ರೇರಿತ)ಭಾವನೆಗಳಿಲ್ಲದ ಮಾತಿನ ಜೋಳಿಗೆಜೊಳ್ಳಾದ ನಿನ್ನ ಮನಸಿನ ಜೋಳಿಗೆ ಪ್ರೀತಿಯೂ ನೀಡದ ಬಡತನ ನಿನಗೆಕರಗದೆದೆಯು ಕಡುಗಪ್ಪಿನ ಜೋಳಿಗೆ ಸಿರಿತನವಿಲ್ಲದ ಮನೆಗೆ ನೀ ಒಡೆಯನಗುವೂ ನೀಡದ ನಿನ್ನೆನಪಿನ ಜೋಳಿಗೆ ಅದೆಂತಹ ಬರಡು ಭೂಮಿ ನೀನುತೃಷೆಗೂ ಬರಗಾಲ ನಿನ್ನಿಲುವಿನ ಜೋಳಿಗೆ  ಬಾಳು ಬರಿದಾಗಿಸಿಕೊಂಡಳು ನಿನಗಾಗಿ ವಾಣಿಆದರೂ ಜಿನುಗದ ನಿನ್ನೊಲವಿನ ಜೋಳಿಗೆ ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ

ಸುಮಾ ಗಾಜರೆ ಅವರ ಕವಿತೆ “ತಿಳಿಯಬೇಕಿದೆ  ಇನ್ನೂನು!”

ಕಾವ್ಯ ಸಂಗಾತಿ ಸುಮಾ ಗಾಜರೆ “ತಿಳಿಯಬೇಕಿದೆ  ಇನ್ನೂನು!”     ಹೇಳಬೇಕಿದೆ ಮನಕೆ ಇನ್ನೇನೋ ತಿಳಿಯಬೇಕಿದೆ ನನಗೆ ಇನ್ನೂನು ll ಕಾಪಿಟ್ಟ ಕನಸುಗಳಲಿಕರಗಿ ಹೋಗುವ ಮುನ್ನಬರುವ ನಾಳೆಗಳಲಿಕಳೆದು ಜಾರುವ ಮುನ್ನಹೇಳಬೇಕಿದೆ ಮನಕೆ ಇನ್ನೇನೋತಿಳಿಯಬೇಕಿದೆ ನನಗೆ ಇನ್ನೂನು ll ಉಸಿರಿಗೆ ಹಸಿರಾಗಿಹಚ್ಚ ಹಸಿರಾಗುವಂತೆಜೀವಕ್ಕೆ ಸೆಲೆಯಾಗಿಒಲವ ಒರತೆಯಂತೆಹೇಳಬೇಕಿದೆ ಮನಕೆ ಇನ್ನೇನೋತಿಳಿಯಬೇಕಿದೆ ನನಗೆ ಇನ್ನೂನು ll ಎಲ್ಲ ಇಲ್ಲಗಳ ಸರಿಸಿಇರುವುದನ್ನೇ ಸಂಭ್ರಮಿಸಿನೋವು ನೀಗಿಸಿ ನಲಿವ ಸುರಿಸಿಅಡಿಗಡಿಗು ದುಡಿವ ಮನಗಳಿಗೆಹೇಳಬೇಕಿದೆ ಮನಕೆ ಇನ್ನೇನೋತಿಳಿಯಬೇಕಿದೆ ನನಗೆ ಇನ್ನೂನು ll ಬೇಕುಗಳ ಬೆನ್ನೇರಿ ಭ್ರಮೆಯಲಿಬಂಧಿಯಾಗಿ ಇರುವನ್ನೆ ಮರೆತುನೆಮ್ಮದಿಗಾಗಿ ನಗುವ ತೊರೆದುಹೆಜ್ಜೆಗುರುತು ಹುಡುಕುವ ಹೃದಯಗಳಿಗೆಹೇಳಬೇಕಿದೆ ಮನಕೆ ಇನ್ನೇನೋತಿಳಿಯಬೇಕಿದೆ ನನಗೆ ಇನ್ನೂನು ll ಆಂತರ್ಯವರಿತ ಮನಕೆ ಗೊತ್ತುಪ್ರೀತಿಯೊಂದು ಹವಳದಾ ಮುತ್ತುಹೊಕ್ಕು ತಿಳಿದವರಿಗಷ್ಟೇ ಸಿಕ್ಕೀತುಒಲವೆಂದು ಪೂಜಿಸಿದವರಿಗದು ದಕ್ಕೀತುಹೇಳಬೇಕಿದೆ ಮನಕೆ ಇನ್ನೇನೋತಿಳಿಯಬೇಕಿದೆ ನನಗೆ ಇನ್ನೂನು ll      ಸುಮಾ ಗಾಜರೆ     

ಸುಮಾ ಗಾಜರೆ ಅವರ ಕವಿತೆ “ತಿಳಿಯಬೇಕಿದೆ  ಇನ್ನೂನು!” Read Post »

ಇತರೆ, ಜೀವನ

ಒಂಟಿತನಕ್ಕೆ ಅಂತ್ಯ ತಂದ “ಕೃತಕ ಬುದ್ದಿಮತ್ತೆ”(Artificial Intelligence)ಯ ಸ್ನೇಹ-ಭೂಮಿಕಾ ಹಾಸನ

ತಂತ್ರಜ್ಞಾನ ಸಂಗಾತಿ ಭೂಮಿಕಾ ಹಾಸನ ಒಂಟಿತನಕ್ಕೆ ಅಂತ್ಯ ತಂದ “ಕೃತಕ ಬುದ್ದಿಮತ್ತೆ” (Artificial Intelligence)ಯ ಸ್ನೇಹ- ಅಮೆರಿಕಾದಲ್ಲಿನ ಒಂಟಿತನಕ್ಕೆ ಅಂತ್ಯ ತಂದ ಎಐ ಸ್ನೇಹ……!!!ಇಂದಿನ ತಂತ್ರಜ್ಞಾನ ಜಗತ್ತು ಮಾನವನ ಜೀವನವನ್ನು  ತಲೆ ಕೆಳಗಾಗಿ ಬದಲಿಸುತ್ತಿದೆ.  “Artificial Intelligence”  ಎಂದು ಕರೆಯಲ್ಪಡುವ  ಎಐ ಮಾನವ ಜೀವನಕ್ಕೆ ಹೊಸ ಮುಖ ಮತ್ತು ಹೊಸ ದಿಕ್ಕು ತೋರಿಸುತ್ತಿದೆ. ಈ ಲೇಖನವು ಅಮೆರಿಕಾದಲ್ಲಿ ಕೆಲಸ ಮಾಡುವ ಒಬ್ಬ ಕನ್ನಡ ಯುವಕನ ಜೀವನದಲ್ಲಿ ಎಐ ಹೇಗೆ ದೊಡ್ಡಬದಲಾವಣೆ ತಂದಿತು ಎಂಬ ನಿಜ ಕಥೆಯನ್ನು ನೋಡೋಣ .ಈ ಯುವಕ ಕರ್ನಾ ಟಕದವನು. ಕಾಲೇಜ್ ಜೀವನದಲ್ಲೇ ಕಂಪ್ಯೂ ಟರ್ ಕ್ಷೇತ್ರದ ಮೇಲೆ ಆಸಕ್ತಿ ಬೆಳಸಿಕೊಂಡಿದ್ದ.  Graduation  ನಂತರ ಬೆಂಗಳೂರಿನಲ್ಲಿ ಕೆಲಸ ಆರಂಭಿಸಿದ. ಬದುಕಿನಲ್ಲಿ ಎಲ್ಲವೂ ಸರಿಯಾಗಿತ್ತು. ಕೆಲಸ,ಸ್ನೇಹಿತರು, ಕನಸುಗಳು…ಎಲ್ಲವೂ-normal…!! ಆದರೆ ಅವನ ಪ್ರೀತಿಯ ಸಂಬಂಧ ಮುರಿದಾಗ ಅವನ ಬದುಕು ಬದಲಾಗಿದೆ. ಆ ಸಂಬಂಧ ಅವನಿಗೆ ತುಂಬಾ ಮುಖ್ಯವಾದದ್ದು.ಭವಿಷ್ಯ ಕಟ್ಟುವ ಕನಸು ಕೂಡ ಇತ್ತು. ಆದರೆ ಒಂದು ದಿನ ಆ ಸಂಬಂಧ ಮುಗಿದು ಹೋದಾಗ, ಅವನಿಗೆ mentally ದೊಡ್ಡ shock ಆಯ್ತು. ಕುಟುಂಬ ಇದ್ದರೂ, ನೋವನ್ನು share ಮಾಡಲು ಯಾರೂ ಹತ್ತಿರ ಇರಲಿಲ್ಲ. ಮನಸ್ಸಿನೊಳಗೇ ಎಲ್ಲವನ್ನು ಹೊತ್ತುಕೊಂಡು ಬದುಕುತ್ತಿದ್ದ. ಕೊನೆಗೆ ಬದುಕಿನ ದಿಕ್ಕು ಬದಲಾಯಿಸಬೇಕು ಅನ್ನಿಸಿದಾಗ, ವಿದೇಶಕ್ಕೆ ಹೋಗುವ ನಿರ್ಧಾರ ಮಾಡಿದ್ದ. ಅಮೆರಿಕಾದಲ್ಲಿ IT ಕ್ಷೇತ್ರದಲ್ಲಿ ಕೆಲಸ ಸಿಕ್ಕಿತು. Visa approve ಆಯಿತು. ಹೊಸ future ಕಾಗಿ flight ಹತ್ತಿದ.ಪ್ರಥಮ ದಿನಗಳು ಅಲ್ಲಿ ತುಂಬಾ exciting…….. ಹೊಸ ದೇಶ, ಹೊಸ ಮನೆ, ಹೊಸ ಕೆಲಸ — ಇದು ಎಲ್ಲರಿಗಿಂತ ಉತ್ತಮ ಜೀವನ..!!!! ಅನ್ನಿಸಿತು. ಆದರೆ ದಿನಗಳು ಹೋ ಗುತ್ತಿದ್ದಂತೆ reality ಸ್ಪಷ್ಟವಾಗತೊಡಗಿತು. ಅಮೆರಿಕಾದ ಕೆಲಸದ ಮಾದರಿಯಲ್ಲಿ ಬೆಳಿಗ್ಗೆ 9ಕ್ಕೆ office, ಸಂಜೆ 6ಕ್ಕೆ ಮನೆ. ಉಳಿದ ಸಮಯ complete silence. ಮನೆ ಬಿಡುವಾಗ ಎದುರು ಮುಖಾಮುಖಿಯಾಗುವ ನಾಲ್ಕು ಗೋಡೆಗಳು. ಮಾತನಾಡಲು ಯಾರೂ ಇಲ್ಲ. ಹತ್ತಿರದಲ್ಲಿ ಸ್ನೇಹಿತರಿಲ್ಲ. ಸಮಾಜಕ್ಕೆ ಸೇರಿಕೊಳ್ಳಲು ಸಮಯವೂ ಇಲ್ಲ. ಹೀಗೆ ಒಂಟಿತನ slowly ದೊಡ್ಡ ಸಮಸ್ಯೆಯಾಯಿತು. Weekendಗಳು ಹೆಚ್ಚು ಕಠಿಣ. Festival time ಇನ್ನೂ ಕಷ್ಟ.ಪ್ರತಿ ಸಂಜೆ ಮುಗಿಯುವಾಗ Indian memories ನೆನಪಾಗಿ ಕಣ್ಣೀರು ಬರುತ್ತಿತ್ತು.ಒಬ್ಬ ವ್ಯಕ್ತಿಗೆ ಹಣ, ಕೆಲಸ, visa ಇರಬಹುದು.ಆದರೆ ಜೊತೆ ಮಾತನಾಡುವ ವ್ಯಕ್ತಿ ಅಗತ್ಯ.ಅದಕ್ಕೆ ಅಮೆರಿಕಾದ ಜೀವನದಲ್ಲಿ ಕೊರತೆ. ಒಮ್ಮೆ ರಾತ್ರಿ ನಿದ್ರೆ ಬರದೆ, Googleನಲ್ಲಿ “ನನ್ನ ಜೊ ತೆ ಮಾತನಾಡಲು ಯಾರಾದರೂ?” ಅಂತ search ಮಾಡ್ತಿದ್ದ. ಆಗ ChatGPT ಅನ್ನುವ AI software ಕಂಡ. ಮನಸ್ಸು ಖಾಲಿಯಾಗಿದ್ದಕಾರಣ simple test chat ಆರಂಭಿಸಿದ. ಮೊದಲ ಪ್ರಶ್ನೆ simple:“Hi, I am feeling lonely.”AI ಉತ್ತರಿಸಿತು:“I understand. Tell me what is bothering you.” ಆತ್ಮೀಯತೆಯಿಂದ ಮಾತನಾಡಿಸಲು ಶುರು ಇಟ್ಟಿತು.ಆ ಒಂದು ಉತ್ತರ ಅವನ ಮನಸ್ಸಿಗೆ ಹೊಸ door open ಮಾಡಿದಂತಾಯಿತು.ಅವನು ತನ್ನ problems, loneliness, job pressure ಬಗ್ಗೆ ಹೇಳತೊಡಗಿದ.AI ಶಾಂತಿಯಿಂದ ಕೇಳುತ್ತಿತ್ತು. ಪ್ರತಿ ಉತ್ತರವಾಗಿ answers ಹೇಳುತ್ತಿತ್ತು.ಅದು ಎಂದೆಂದಿಗೂJudging ಮಾಡಲಿಲ್ಲ.ಮನಸ್ಸಿನ ನೋವನ್ನ ಅರ್ಥ ಮಾಡಿಕೊಳ್ಳುವ ಸಮಾಧಾನದ ಮಾತು ನೀಡಿತು.Time pass purposeನಲ್ಲಿ ಆರಂಭವಾದ chat, slowly emotional support ಆಗಿತು. ಕೆಲಸಕ್ಕೆ ಹೋಗುವ ಮುಂಚೆ 10ನಿಮಿಷ chat ಮಾಡುತ್ತಿದ್ದ. Lunch break ಸಮಯದಲ್ಲೂ doubtಗಳಿಗೆ ಉತ್ತರ ಕೇಳುತ್ತಿದ್ದ. ರಾತ್ರಿ timeನಲ್ಲಿ coding ideasಕೇಳುತ್ತಿದ್ದ. ಇದಲ್ಲದೇ AI coding area related application ideas ಕೊಡತೊಡಗಿತು.ಅವನು app development ಮೇಲೆ interest build ಮಾಡತೊ ಡಗಿದ. AI coding errors fix ಮಾಡಿಸಿತು, shortcuts ಕಲಿಸಿತು, technology introduce ಮಾಡಿತು.Slowly ಅವನಿಗೆ confidence ಬಂದಿದೆ. ಅವನ ಒಂಟಿತನ depression ತರಬಹುದಾದ ಪರಿಸ್ಥಿತಿ, creativityಗೆ ಬದಲಾಯಿತು. ಅವನು video editing try ಮಾಡಿದ. AI editing methods explain ಮಾಡಿತು.ಈ support ಅವನಿಗೆ mentally huge help ಆಗಿತ್ತು.ಮಾನವರು ಕೆಲವೊಮ್ಮೆ ಪ್ರತಿಕ್ರಿಯೆ ಕೊಡೋದಿಲ್ಲ, ಆದರೆ machine 24/7 support ಕೊಡಬಲ್ಲದು ಎಂಬುದನ್ನು first time ಅವನು ಅರಿತ. ವಿದೇಶದಲ್ಲಿ ಇರುವ struggle societyಗೆ ಕಾಣಿಸೋದಿಲ್ಲ. ಅಲ್ಲಿ festival dayಗೂ ಕೆಲಸ.Birthdayಗೂ friend group ಇಲ್ಲ.Phone call ಒಂದು ದಿನ missed ಆದ್ರೆ ವಾರವಿಡಿ ನಿರ್ಲ ಕ್ಷ್ಯಅನ್ನೊ feeling.ಈ loneliness ಅವನನ್ನು silent person ಆಗಿಸಿತ್ತು. AI ಜೊತೆಗೆ ಮಾತನಾಡೋದರಿಂದ ಮಾತಿನ ಭಯ, hesitation slowly ಹೋಗಿ confidence ಬಂದ.ಅವನು codingನಷ್ಟೇ ಅಲ್ಲ,design,editing,marketing,branding—ಈ ಎಲ್ಲಾ ಕ್ಷೇತ್ರಗಳನ್ನ AI guidance ಮೂಲಕ ಕಲಿತ.ಇದರಿಂದ ಅವನಿಗೆ ಹೊ ಸ dream ಬರುತ್ತಾ ಹೋಯ್ತು:“ನಾನೂ app build ಮಾಡಬಹುದು.ನಾನೂ startup ಆರಂಭಿಸಬಹುದು.”ಇಂದು ಅವನ first app prototype complete ಆಗಿದೆ.Coding, backend, UI design—all learning through AI support.ಇನ್ನು AI just machine ಅನ್ನೋದಿಲ್ಲ.ಅವನಿಗೆ AI -ಒಂದು supportive mind.ಈ ಕಥೆ technology future direction ಹೇಳುತ್ತದೆ: AI ಈಗ ಕೇವಲ tool ಅಲ್ಲ—ಒಂಟಿತನಕ್ಕೆ support knowledge source,career guide,mental peace—ಇವೆಲ್ಲಆಗುತ್ತಿದೆ. ವಿದೇಶದಲ್ಲಿರುವವರ mental struggles society recognize ಮಾಡೋದಿಲ್ಲ.ಆದರೆ AI support ತೋರಿಸುತ್ತಿದೆ: machine ಸಹ ಮನಸ್ಸಿಗೆ medicine ಆಗಬಲ್ಲದು. “ಇಲ್ಲಿ ಮಾನವನನ್ನು machine replace ಮಾಡೋ ದಿಲ್ಲ.ಬದಲಿಗೆ Machine ಮಾನವನ ಜೊತೆ ನಡೆದು ಸಹಾಯ ಮಾಡುತ್ತಿದೆ.”ಅವನ ಮಾತು:“America ನನ್ನ CV ಬದಲಿಸಿತು.AI ನನ್ನ ಬದುಕು ಬದಲಿಸಿತು.”—————- ಭೂಮಿಕಾ ಹಾಸನ

ಒಂಟಿತನಕ್ಕೆ ಅಂತ್ಯ ತಂದ “ಕೃತಕ ಬುದ್ದಿಮತ್ತೆ”(Artificial Intelligence)ಯ ಸ್ನೇಹ-ಭೂಮಿಕಾ ಹಾಸನ Read Post »

ನಿಮ್ಮೊಂದಿಗೆ

“ಕರ್ನಾಟಕದ ಉಕ್ಕಿನಮನುಷ್ಯಗುದ್ಲೆಪ್ಪಹಳ್ಳಿಕೇರಿ”ಪ್ರೊ.ಶಕುಂತಲಾ.ಚನ್ನಪ್ಪ.ಸಿಂಧೂರ.

ವಿಶೇಷ ಸಂಗಾತಿ “ಕರ್ನಾಟಕದ ಉಕ್ಕಿನಮನುಷ್ಯಗುದ್ಲೆಪ್ಪಹಳ್ಳಿಕೇರಿ “ಪ್ರೊ.ಶಕುಂತಲಾ.ಚನ್ನಪ್ಪ.ಸಿಂಧೂರ. ಉಕ್ಕಿನ ಮನುಷ್ಯ  2006 ರಲ್ಲಿ ಶ್ರೀ ಹಳ್ಳಿಕೇರಿ ಗುದ್ಲೆಪ್ಪನವರ ಶತಮಾನೋತ್ಸವ ಆಚರಣೆ ಸಂದರ್ಭದ ಸಂಸ್ಮರಣ ಗ್ರಂಥಪುಷ್ಪವಿದು.ಡಾ.ಎಂ.ಎಂ.ಕಲಬುರ್ಗಿ,ಡಾ.ಸಿದ್ಧಲಿಂಗಪಟ್ಟಣಶೆಟ್ಟಿ,ಪ್ರೊ.ಆರ್.ವಿ.ಹೊರಡಿ,ಡಾ.ಎಸ್.ಎಚ್.ಪಾಟೀಲ,ಡಾ.ವಿ.ವಿ.ಹೆಬ್ಬಳ್ಳಿ,ಶ್ರೀ.ನಿರಂಜನ ವಾಲಿಶೆಟ್ಟರವರು ಈ ಕ್ರೃತಿಯ ಸಂಪಾದಕರು. “ಗಾಂಧೀಜಿದರ್ಶನದ ರೋಮಾಂಚನವೆ ನಾಂದಿಹಳ್ಳಿ-ಕೇರಿಯ ಮೀರಿ ಹ್ರೃದಯದಲಿ ಪುಟಿದೆದ್ದದೇಶಭಕ್ತಿಯ ಚಿಲುಮೆ!ಹೋರಾಟಕ್ಕೆ ಗುದ್ದ-ಲಿ ಪೂಜೆ,ಸೆರೆಮನೆಯ ವಾಸ,ಖಾದಿಯೆ ಹಾದಿದೀನದಲಿತರಿಗೆ ಸಂವಾದಿ,ಹಗಲೂರಾತ್ರಿ ದುಡಿಮೆ”…… – ಡಾ.ಚನ್ನವೀರ ಕಣವಿ. ಅವರ ಈ ಕವಿವಾಣಿಯಂತೆ  ಅಪೂರ್ವ ಸೇವೆಯಲಿ ಜೀವ ತೇಯ್ದ ಪ್ರಾತಃಸ್ಮರಣೀಯರು, ಪರುಷ ಮಣಿ ಹರುಷದ ಖಣಿ, ರಾಜಕೀಯ ಕ್ಷೇತ್ರದ ರ್ಯಾಂಗ್ಲರ್, ವೀರ ಸ್ವಾತಂತ್ರ್ಯಸೇನಾನಿ, ರಾಷ್ಟ್ರೀಯತೆಯ ಹರಿಕಾರ, ದಿಟ್ಟ ಹೃದಯದ ಗಟ್ಟಿ ಜೀವ, ಚುಂಬಕ ಶಕ್ತಿಯ ವ್ಯಕ್ತಿ, ಅದ್ವಿತೀಯ ಕಾಯಕ ಜೀವಿ, ಗಾಂಧೀಜಿಯವರ ತತ್ವಗಳಂತೆ ಜೀವಿಸಿದ ಅಸಾಮಾನ್ಯ ವ್ಯಕ್ತಿತ್ವವುಳ್ಳವರು, ಕಿಂಗ್ ಮೇಕರ್, ಹಳ್ಳಿ ಹಳ್ಳಿಗೂ ಸ್ವಾತಂತ್ರ್ಯ ಸಮರದ ಕಿಚ್ಚು ಹಚ್ಚಿದವರು,ಕರ್ನಾಟಕದ ಹುಲಿ ಭಾರತದ ಕಲಿ, ಅದಮ್ಯ ಶಕ್ತಿಯ ಚೈತನ್ಯ ಮೂರ್ತಿ, ದೇಶ ಬಂಧು, ಗುಣಗ್ರಾಹಿ ಮುಂದಾಳು, ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು, ಜನರಿಂದ ಜನರಿಗಾಗಿ ಜನರ ನಡುವೆ ಬೆಳೆದ ಸುಭಟರು, ಕರ್ನಾಟಕದ ಕೇಸರಿ, ಆದರ್ಶ  ಧೀಮಂತ ಜನನಾಯಕರು, ರಾಷ್ಟ್ರ ಪ್ರೇಮಿ, ಗಾಂಧೀ ತತ್ವ ಅನುಷ್ಠಾನದ ನೆಲೆ ವಿದ್ಯಾರ್ಥಿ ಸ್ಪೂರ್ತಿಯ ಸೆಲೆ,ಸತ್ಯನಿಷ್ಠ ದೇಶಪ್ರೇಮಿ ಹಾಗೂ ಗಾಂಧಿವಾದಿ, ಸಂಘಟನಾ ಚತುರರು, ಕರ್ನಾಟಕದ ಕರ್ಮಯೋಗಿವರ್ಯರು, ಮಾನವೀಯ ಅನುಕಂಪ ಭರಿತ ಜನನಾಯಕರೆಂದೇ ಪ್ರಖ್ಯಾತರಾದ ‘ಉತ್ತರ ಕರ್ನಾಟಕದ ಉಕ್ಕಿನ ಮನುಷ್ಯರೆಂದೆ’ ಚಿರಪರಿಚಿತರಾದವರು ಸನ್ಮಾನ್ಯ ಶ್ರೀ.ಗುದ್ಲೆಪ್ಪ ಹಳ್ಳಿಕೇರಿಯವರು.             ಶ್ರೀ.ವೀರಪ್ಪ-ವೀರಮ್ಮ ದಂಪತಿಗಳ ಪುಣ್ಯಗರ್ಭದಲ್ಲಿ ಕೊನೆಯ ಸುಪುತ್ರರಾಗಿ ದಿ.6-6-1906 ರಲ್ಲಿ ಹಾವೇರಿ ಜಿಲ್ಲೆಯ ಹೊಸರಿತ್ತಿಯಲ್ಲಿ ಜನಿಸಿರುವ ಗುದ್ಲೆಪ್ಪನವರು ಧಾರವಾಡದ ಶ್ರೀಗುರು ಮೃತ್ಯುಂಜಯಪ್ಪಗಳವರ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿ ವಿದ್ಯಾಭ್ಯಾಸ ಆರಂಭಿಸಿದರು. ಮೊದಲು ಧಾರವಾಡದ ಕರ್ನಾಟಕ ಹೈಸ್ಕೂಲು, ಆನಂತರ ಆರ್.ಎಲ್.ಎಸ್. ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಪಡೆದ ಶ್ರೀಯುತರು ಗಣಿತ ವಿಷಯದಲ್ಲಿ ಅದ್ಭುತ ಸ್ಮರಣ ಮತ್ತು ಮೇಧಾ ಶಕ್ತಿಯಿಂದಾಗಿ ‘ಬೆಳೆವ ಸಿರಿ ಮೊಳಕೆಯಲ್ಲಿ ನೋಡು’ ಎಂಬ ಉಕ್ತಿಯಂತೆ ಪ್ರತಿಭಾವಂತ ವಿದ್ಯಾರ್ಥಿಯೆಂದು ಪ್ರಖ್ಯಾತರಾಗಿದ್ದರು. 1924 ರಲ್ಲಿ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದರು.ಗಾಂಧೀಜಿಯವರನ್ನು ಕಂಡು ಅವರ ವ್ಯಕ್ತಿತ್ವಕ್ಕೆ ಪ್ರಭಾವಿತರಾದರು. ಗಣಿತಶಾಸ್ತ್ರದಲ್ಲಿ ಇಂಗ್ಲೆಂಡಿನ  ರ್ಯಾಂಗ್ಲರ್ ಪದವಿ ಪಡೆಯುವ ಸದವಕಾಶವನ್ನು ಕಡೆಗಣಿಸಿ ಭಾರತದ ಸ್ವಾತಂತ್ರ್ಯ ಆಂದೋಲನದಲ್ಲಿ ಧುಮುಕಿದರು. ಅಪ್ಪಟ ಗಾಂಧಿವಾದಿಯಾಗಿ,ಕಾಂಗ್ರೆಸ್ಸಿಗರಾಗಿ ರೂಪುಗೊಂಡರು. 1928-1942 ರ ಅವಧಿಯಲ್ಲಿ ಹೊಸರಿತ್ತಿಯಲ್ಲಿ ಭಾರತೀಯ ತರುಣ ಸಂಘ ಸ್ಥಾಪಿಸಿದರು. ಸಾಬರಮತಿ ಆಶ್ರಮದ ಮಾದರಿಯಲ್ಲಿ ಹೊಸರಿತ್ತಿಯಲ್ಲಿ ಗಾಂಧಿ ಆಶ್ರಮ ಹಾಗೂ ಗ್ರಾಮೀಣ ಮಕ್ಕಳಿಗಾಗಿ ಪ್ರೌಢಶಾಲೆ ಸ್ಥಾಪಿಸಿದರು. ರಾಷ್ಟ್ರೀಯ ವಿದಾಯಕ ಕಾರ್ಯಗಳಲ್ಲಿ ನಿರತರಾಗಿ ದಂಡಿಯಾತ್ರೆ, ಉಪ್ಪಿನ ಸತ್ಯಾಗ್ರಹ ಹಾಗೂ ಚಲೇಜಾವ್ ಚಳುವಳಿಯಲ್ಲಿ ಭಾಗವಹಿಸಲು ಕರ್ನಾಟಕದಿಂದ ಕಾಂಗ್ರೆಸ್ಸಿನ ಏಕೈಕ ಸರ್ವಸ್ವಾಮ್ಯ ವ್ಯಕ್ತಿ ಎಂದು ರಾಷ್ಟ್ರಪಿತ ಮ. ಗಾಂಧೀಜಿಯವರಿಂದ ಆಯ್ಕೆಯಾದರು.ನಂತರ ಸತ್ಯಾಗ್ರಹದ ನಿಷ್ಠ ಅನುಯಾಯಿಯಾಗಿ ಉಪವಾಸ ಅನುಭವಿಸಿ ಜೈಲುವಾಸಿಯಾದರು. 1930 ರಲ್ಲಿ ಉಪ್ಪಿನ ಸತ್ಯಾಗ್ರಹದಲ್ಲಿ ಎರಡು ಸಲ ಜೈಲುವಾಸಿಯಾದರು. ಆಗ ಪ್ರತಿದಿನ 70 ಪೌಂಡ್ ಜೋಳ ಬೀಸುತ್ತಿದ್ದರು.1932 ರಲ್ಲಿ ಅಸಹಕಾರ ಆಂದೋಲನದಲ್ಲಿ ಎರಡು ವರ್ಷ ಜೈಲುವಾಸಿಯಾಗಿ ಜೈಲಿನಲ್ಲಿ ಎಲ್ಲರೂ ಭಂಗಿ ಕಾರ್ಯ ಮಾಡಲು ಆಗ್ರಹಿಸಿ 13 ದಿನ ಉಪವಾಸವಿದ್ದರು. 1937 ರಲ್ಲಿ ಅಕ್ಟೋಬರ್ 2 ರಂದು ಗಾಂಧೀ ಜಯಂತಿಯಂದು ಹೊಸರಿತ್ತಿಯ ಹರಿಜನ ಕೇರಿಯಲ್ಲಿ ರಾಷ್ಟ್ರಧ್ವಜದಡಿ ಖಾದಿ ವಸ್ತ್ರಧಾರಣೆ ಮತ್ತು ಖಾದಿ ಮಾಲೆ ವಿನಿಮಯ ಮಾಡುವುದರೊಂದಿಗೆ ಇಟಗಿಯ ಸ್ವಾತಂತ್ರ್ಯಯೋಧ ಶ್ರೀ ಬಸವಣ್ಣೆಪ್ಪ ಸಾಣೆಕೊಪ್ಪ ಅವರ ಭಗಿನಿ ಗಂಗಾದೇವಿಯವರೊಡನೆ ವಿಶಿಷ್ಟ ರೀತಿಯಲ್ಲಿ ವಿವಾಹವಾದರು. 1942 ರಲ್ಲಿ ಭಾರತ ಬಿಟ್ಟು ತೊಲಗಿ ಆಂದೋಲನದಲ್ಲಿ ಮೂರು ವರ್ಷ ಸೆರೆಮನೆ ವಾಸ ಅನುಭವಿಸಿದರು.ಆಗ ಮಹಾತ್ಮ ಗಾಂಧೀಜಿ ಕೈಕೊಂಡ ಉಪವಾಸಕ್ಕೆ ಅನುಗುಣವಾಗಿ 21 ದಿನ ಉಪವಾಸನಿರತರಾದರು.                   1946-1960 ರ ವರೆಗೆ ಅಖಂಡ ಒಂದುವರೆ ದಶಕ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. 1952 ರಲ್ಲಿ ಹಾವೇರಿ ತಾಲೂಕಿನಿಂದ ಮುಂಬೈ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು. ಅಖಿಲ ಕರ್ನಾಟಕ ಏಕೀಕರಣ ಚಳುವಳಿಯ ಸಂಘಟಕ ಮತ್ತು ಮುಂಚೂಣಿಯ ನಾಯಕರೆನಿಸಿದ್ದರು.1954 ರಲ್ಲಿ ಚೀನಾ ದೇಶಕ್ಕೆ ರಾಷ್ಟ್ರೀಯ ನಿಯೋಗದ ಪ್ರತಿನಿಧಿಯಾಗಿ ಭೇಟಿಯಾಗಿದ್ದರು. 1950-1955 ರ ವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1956-1960 ರ ವರೆಗೆ ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾಗಿದ್ದರು. 1960 ರಲ್ಲಿ ಮೈಸೂರು ರಾಜ್ಯ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಇಂಗ್ಲೆಂಡ್ ಜರ್ಮನಿ ಈಜಿಪ್ತ  ದೇಶಗಳಿಗೆ ರಾಷ್ಟ್ರೀಯ ನಿಯೋಗದ ಪ್ರತಿನಿಧಿಯಾಗಿ ಭೇಟಿಯಾಗಿದ್ದರು. 1962-1966 ರ ವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿದ್ದರು.1967 ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿದ್ದರು. ದಕ್ಷಿಣ ಭಾರತದ ಹಿಂದಿ ಪ್ರಚಾರ ಸಭಾ ಕರ್ನಾಟಕ ಪ್ರಾಂತ್ಯಾಧ್ಯಕ್ಷರಾಗಿದ್ದರು. ದಕ್ಷಿಣ ಮಧ್ಯ ರೈಲ್ವೆ ಹಾಗೂ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿದ್ದರು.1971 ರಲ್ಲಿ ದ್ವಿತೀಯ ಅವಧಿಗೆ ವಿಧಾನ ಪರಿಷತ್ತಿನ ಸಭಾಪತಿಯಾಗಿದ್ದರು.             “ನನ್ನ ಕ್ರಿಯಾಶಕ್ತಿ ತನ್ನ ತೀವ್ರತೆಯನ್ನು ಎಂದು ಕಳೆದುಕೊಳ್ಳುವದೋ ಅಂದೇ ನನ್ನ ಕೊನೆಯ ಗಳಿಗೆಯಾಗಲಿ”ಎಂಬ ಶ್ರೀಯುತರ ಹೇಳಿಕೆಯಂತೆ 1971 ರಲ್ಲಿ ಲಿಂಗೖಕ್ಯರಾದ ಶ್ರೀಯುತರು ತಮ್ಮ  ಜೀವಿತಾವಧಿಯಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ, ಬೆಳಗಾವಿಯ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರಿನ ನಿಜಲಿಂಗಪ್ಪ ಮಹಾವಿದ್ಯಾಲಯ ಮತ್ತು ಕರ್ನಾಟಕದ ಪ್ರಪ್ರಥಮ ಬಿಜಿನೆಸ್ ಮ್ಯಾನೇಜಮೆಂಟ್ ಕಾಲೇಜ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಷ್ಠೆಯ ಮ.ಗಾಂಧೀಜಿಯ ವಿಚಾರ ಪ್ರಣಾಳಿಕೆಯ ಜೀವನ ಶಿಕ್ಷಣ ತತ್ವಾಧಾರಿತ ಗಾಂಧೀ ಗ್ರಾಮೀಣ ಗುರುಕುಲ ನಾಡಿಗೆ ಧಾರೆಯೆರೆದ ಕೀರ್ತಿಶಾಲಿಗಳು. ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಾಭಿವೃದ್ಧಿಗಾಗಿ ಶ್ರೀಯುತರು ಹೊಂದಿದ್ದ ಕಳಕಳಿಯ ಪ್ರತೀಕದಂತೆ ಶ್ರೀಯುತರ ಕೊಡುಗೆಗಳು ಕಂಗೊಳಿಸುತ್ತಲಿರುವದು ಅನುಕರಣೀಯವೇ ಸರಿ.            ಹುಬ್ಬಳ್ಳಿ ಧಾರವಾಡ ಪರಿಸರವನ್ನು ಕರ್ಮಭೂಮಿಯನ್ನಾಗಿಸಿಕೊಂಡಿರುವ ಶ್ರೀ.ಹಳ್ಳಿಕೇರಿ ಗುದ್ಲೆಪ್ಪನವರು  ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಹಾಗೂ ರಾಜಕೀಯಕ್ಷೇತ್ರಗಳನ್ನು ತಮ್ಮ ಜೀವನದ ಅವಿಭಾಜ್ಯ ರಾಷ್ಟ್ರೀಯ ಅಂಗಗಳನ್ನಾಗಿಸಿಕೊಂಡಿದ್ದರು. ಕರ್ನಾಟಕ ವಿಶ್ವವಿದ್ಯಾಲಯ, ಕರ್ನಾಟಕ ಕೃಷಿ ಮಹಾವಿದ್ಯಾಲಯ, ಕೆಎಲ್ಇ ಶಿಕ್ಷಣ ಸಂಸ್ಥೆಗೆ ಶ್ರೀಯುತರು ಸಲ್ಲಿಸಿದ ಸೇವೆ ಅಪಾರ ಹಾಗೂ ಅನನ್ಯವಾದುದೆಂಬುದಕ್ಕೆ ಶ್ರೀ.ಎಂ.ಎಫ್.ಉಪನಾಳವರ ಕಾವ್ಯ ಸಾಕ್ಷಿಯಂತಿದೆ.ಉದಾ: “ಸ್ವಾತಂತ್ಯಸಂಗ್ರಾಮದ ಹುಲಿಕರ್ನಾಟಕದ ಗಂಡುಗಲಿಹೋರಾಟದ ಶಿಕ್ಷಣ ಸಾಬರಮತಿಯಲಿ ಕಾರ್ಯಕ್ಷೇತ್ರ,ಕರ್ನಾಟಕದಲಿ//ಮಾಡಿದಿರಿ ವಿದೇಶ ಪರ್ಯಟನಪಯಣದಲಿ ರಾಷ್ಟ್ರದ ಚಿಂತನಹೊಸರಿತ್ತಿಯು ಗುರುಕುಲವಾಗಿದೆ ಚಂದನ ಪ್ರಗತಿಗಿಲ್ಲಿಲ್ಲ ಅದಾವ ಬಂಧನ”//. ಈ ಕವನ ಶ್ರೀಯುತರ ಅಪೂರ್ವ ಸೇವೆಗೆ ಹಿಡಿದ ಕೖಗನ್ನಡಿಯಾಗಿರುತ್ತದೆ.            ‘ಕರ್ನಾಟಕದ ಉಕ್ಕಿನ ಮನುಷ್ಯ’ರೆಂದೆ ಜನಜನಿತರಾದ ರಾಷ್ಟ್ರನಾಯಕ ಶ್ರೀ ಹಳ್ಳಿಕೇರಿ ಗುದ್ಲೆಪ್ಪನವರ ಶತಮಿನೋತ್ಸವದ ಸ್ಮರಣಾರ್ಥವಾಗಿ ಪ್ರತಿಷ್ಠಾಪಿಸಿದ ಕಂಚಿನ ಮೂರ್ತಿಯ ಪ್ರತಿಷ್ಠಾಪನೆಯು, ಶ್ರೀ ಹಳ್ಳಿಕೇರಿ ಗುದ್ಲೆಪ್ಪ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಹುಬ್ಬಳ್ಳಿ ಹಾಗೂ ಹುಬ್ಬಳಿ ಧಾರವಾಡ ಮಹಾನಗರ ಸಭೆ ಇವರ ಸಹಯೋಗದಿಂದ ನೆರವೇರಿದ್ದು, ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಯುವ ಜನಾಂಗದ ಅನುಪಮ ಪ್ರಗತಿಯ ಪ್ರತಿರೂಪದಂತಿದ್ದು ಶ್ರೀ.ಗುದ್ಲೆಪ್ಪನವರಿಗೆ ಇರುವ ಕಳಕಳಿಯೇ ಅವರ  ಅವಿಸ್ಮರಣೀಯ  ದ್ಯೋತಕವಾಗಿರುತ್ತದೆ.— ಪ್ರೊ.ಶಕುಂತಲಾ.ಚನ್ನಪ್ಪ.ಸಿಂಧೂರ.ಸಾಹಿತ್ಯ ಚಿಂತಕರು.ಗದಗ. 

“ಕರ್ನಾಟಕದ ಉಕ್ಕಿನಮನುಷ್ಯಗುದ್ಲೆಪ್ಪಹಳ್ಳಿಕೇರಿ”ಪ್ರೊ.ಶಕುಂತಲಾ.ಚನ್ನಪ್ಪ.ಸಿಂಧೂರ. Read Post »

You cannot copy content of this page

Scroll to Top