ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಪರವಿನ ಬಾನು ಯಲಿಗಾರ ಅವರ “ನಾರಿ”

ಕಾವ್ಯ ಸಂಗಾತಿ ಪರವಿನ ಬಾನು ಯಲಿಗಾರ “ನಾರಿ” ನೀನೇಷ್ಟುಸಾಧಿಸಿದರೆನು ,ತಪ್ಪುತ್ತಿಲ್ಲವಲ್ಲ  ನಿನ್ನ ಮೇಲಿನ ದೌರ್ಜನ್ಯ . ನೀನೇಷ್ಟು ಓದಿದರೆನು , ನಿನ್ನ ಪಾಲಿನನ್ಯಾಯಕ್ಕಗಿ ನಿ ಹೋರಾಡುವುದು ತಪ್ಪಲಿಲ್ಲ. ನೀನ್ಯಾವ  ಅಧಿಕಾರ ಪಡೆದರೇನು ,ನಿನಗೇ ರಕ್ಷಣೆ ಇನ್ನೂ ಸಿಕ್ಕಿಲ್ಲ . ನೀನೆಷ್ಟು ಹಕ್ಕಿನ ಪಾಠ ಮಾಡಿದರೇನು ,ನಿನ್ನ ಮನೆಯಲ್ಲೇ ನಿನ್ನ ಹಕ್ಕು ಗೌಣ . ನಿನಗೆಷ್ಟು ಪದವಿ ಪುರಸ್ಕಾರ ದಕ್ಕಿದರೇನು ,ನಿನಾಗಿರುವೆ ಮತ್ತೊಬ್ಬರ ಅಡಿಯಾಳು . ನೀ ಛಾಪು ಮೂಡಿಸಿದರೆನು ,ಅನ್ಯ ಗೃಹದಲ್ಲಿ ಕಾಲೂರಿ ,ನಿನಗೇ  ನೆಲೆ ಇಲ್ಲ  , ನೀ ಇರುವಲ್ಲಿ . ನೀನಾಗಿರುವೆ ಯಾವಾಗಲೂ ದ್ವಿತೀಯಳು ,ಆದರೆ  , ಆದ್ವಿತೀಯಳಾಗುವ ದಿನ ಬಂದೆ ಬರುವುದು ,  ಒಂದು ದಿನ ….. ——————— ಪರವೀನ ಬಾನು ಯಲಿಗಾರ

ಪರವಿನ ಬಾನು ಯಲಿಗಾರ ಅವರ “ನಾರಿ” Read Post »

ಕಾವ್ಯಯಾನ

ಸತೀಶ್ ಬಿಳಿಯೂರು “ನನ್ನೊಲವಿನ ಪಯಣ”

ಕಾವ್ಯ ಸಂಗಾತಿ ಸತೀಶ್ ಬಿಳಿಯೂರು “ನನ್ನೊಲವಿನ ಪಯಣ” ಸನಿಹ ಬಾ ಮೌನವೆಲ್ಲ ತೊರೆದುಭಾವಗಳ ಪಥವನ್ನು ತುಳಿದುಒಲವಲ್ಲಿ ನಗುವನ್ನು ಕರೆದುಒಡಲನ್ನು ಸೇರು ಬಂಧ ಬೆಸೆದು ಬದುಕೊಳಗೆ ನೀನಿರಬೇಕು ಒಲವೆಹೃದಯದ ಕದ ತಟ್ಟು ಬೇಗ ಚೆಲುವೆತವಕಿಸುತಿಹುದು ಈ ನನ್ನ ಮನವೆಬಾಗಿಲಲ್ಲಿ ಕಾದು ನಿಂತಿಹೆನು ನೀ ನನ್ನ ಜಗವೆ ಕಣ್ಣ ಅಪ್ಪುವ ಕನಸುಗಳು ಬಳಿಯಿರಲುಆಸೆ ಬಯಕೆ ನಿತ್ಯ ಜೊತೆಯಿರಲುಇನ್ನೂ ಎಷ್ಟು ದಿನ ನೀನೊಂದು ತೀರದೇವರೇ ಗೀಚಿದ ಸಂಬಂಧವೇ ಸುಮಧುರ ನಮ್ಮಿಬ್ಬರ ಬಾಳ ಪಯಣ ಹೊರಡಲಿಸಂತೋಷ ತುಂಬಿರೋ ದಾರಿಯಲಿನನಸಿನ ರಥ ಮುಂದೆ ಮುಂದೆ ಸಾಗಲಿಎಡವದಿರುವ ಜೀವನದ ಪಥದಲಿ ಸತೀಶ್ ಬಿಳಿಯೂರು

ಸತೀಶ್ ಬಿಳಿಯೂರು “ನನ್ನೊಲವಿನ ಪಯಣ” Read Post »

ಕಾವ್ಯಯಾನ

ಪೂರ್ಣಿಮಾ ಸಾಲೆತ್ತೂರು ಅವರಕವಿತೆ ” ದೀಪ”

ಕಾವ್ಯ ಸಂಗಾತಿ ಪೂರ್ಣಿಮಾ ಸಾಲೆತ್ತೂರು ” ದೀಪ”  ಹಬ್ಬದಲಿ ಹಚ್ಚೋಣ ಸಾಲು ದೀಪವ ಕವಿದ ಕತ್ತಲೆಯ ಓಡಿಸುವ ಜಗದ ರೂಪವ ದ್ವೇಷ ಅಸೂಯೆಯ ಉರಿಸುತ ತೋರಿಸೋಣ ಸಹಸ್ಪಂದನದ ಸಹಮತ  ಆಗಲಿ ನಿರಾಸೆಯ ಬಾಳಿಗೆ ಆಶಾದೀಪ ಬೆಳಗಿಸೋಣ ಬಾಳಲಿ ಸದ್ಗುಣಗಳ ಹೊಳಪ ಬಾಳ ಬಾಂದಳದಿ ಬೆಸೆಯಲಿ ಸೌಹಾರ್ದ ಭಾವ ಹೆಗಲಿಗೆ ಹೆಗಲು ಕೊಟ್ಟು ಮರೆಯೋಣ ನೋವ  ಅಜ್ಞಾನದ ಕತ್ತಲು ಕಳೆಯಲಿ ಮನದ ಕೊಳೆಯು ತೊಳೆದು ಹೋಗಲಿ ದೀಪವಾಗಿ ಹೊಳೆವ ಬೆಳಕಿನ ರೂಪ ಪ್ರತಿದಿನ ಹಚ್ಚೋಣ ನಂದಾದೀಪ ಪೂರ್ಣಿಮಾ ಸಾಲೆತ್ತೂರು

ಪೂರ್ಣಿಮಾ ಸಾಲೆತ್ತೂರು ಅವರಕವಿತೆ ” ದೀಪ” Read Post »

ನಿಮ್ಮೊಂದಿಗೆ

ಸಾವಿಲ್ಲದ ಶರಣರು ,”ಅಪ್ಪಟ ದೇಶ ಭಕ್ತ ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ ಎಸ್ ಆರ್ ಕಂಠಿ”

ಶರಣ ಸಂಗಾತಿ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು “ಅಪ್ಪಟ ದೇಶ ಭಕ್ತ ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ ಎ ಸ್ ಆರ್ ಕಂಠಿ” ಕರ್ನಾಟಕವು ಕಂಡ ಶ್ರೇಷ್ಠ ಆಡಳಿತಗಾರರು ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ ಎಂದು ಎನಿಸಿಕೊಂಡ  ಎಸ್ ಆರ್ ಕಂಠಿ (ಶಿವಲಿಂಗಪ್ಪ ರುದ್ರಪ್ಪ ಕಂಠಿ )ಯವರು ಬಾಗಲಕೋಟ(ಹಳೆಯ ವಿಜಯಪುರ) ಜಿಲ್ಲೆಯ ಹುನಗುಂದ ತಾಲ್ಲೂಕಿನ ಇಳಕಲ್ಲ ನಗರದವರು. 1962ರಲ್ಲಿ ಅಲ್ಪ ಕಾಲ ಕರ್ನಾಟಕ (ಆಗಿನ ಮೈಸೂರು) ರಾಜ್ಯದ ಮುಖ್ಯಮಂತ್ರಿಯಾಗಿದ್ದರು. *ವೈಯಕ್ತಿಕ ಮಾಹಿತಿ* ಜನನ 21 ಡಿಸೆಂಬರ್ 1908 ಕೆರೂರ, ಬದಾಮಿ, ಬಾಗಲಕೋಟೆ ಜಿಲ್ಲೆ ರಾಜಕೀಯ ಪಕ್ಷ ಕಾಂಗ್ರೆಸ್ ಜನನ ಹಾಗೂ ವಿದ್ಯಾಭ್ಯಾಸ ಬಾಗಲಕೋಟೆ(ಹಳೆಯ ಬಿಜಾಪುರ) ಜಿಲ್ಲೆಯ ಬದಾಮಿ ತಾಲ್ಲೂಕಿನ ಕೆರೂರನಲ್ಲಿ 1908 ಡಿಸೆಂಬರ್ 21ರಂದು ಜನಿಸಿದರು. *ಶಿಕ್ಷಣ* ಧಾರವಾಡದ ಕರ್ನಾಟಕ ಕಾಲೇಜು, ಕೊಲ್ಲಾಪುರದ ರಾಜಾರಾಮ್ ಕಾಲೇಜು ಮತ್ತು ಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಇವರು ಬಾಗಲಕೋಟೆಯಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. *ಸಮಾಜ ಸೇವೆ* ಹರಿಜನರ, ರೈತರ ಮತ್ತು ನೇಕಾರರ ಏಳ್ಗೆಗಾಗಿ ಶ್ರಮಿಸಿದರು. 1939ರಲ್ಲಿ ಕೆ.ಪಿ.ಸಿ.ಸಿ. ಮತ್ತು ಎ.ಐ.ಸಿ.ಸಿಗಳಿಗೆ ಸದಸ್ಯರಾಗಿ ಆಯ್ಕೆಯಾದರು. 1940-41ರಲ್ಲಿ ಬಿಜಾಪುರ ಜಿಲ್ಲೆಯಲ್ಲಿ ಸತ್ಯಾಗ್ರಹ ವ್ಯವಸ್ಥೆ ಮಾಡಿ 10 ತಿಂಗಳ ಸೆರೆಮನೆವಾಸ ಅನುಭವಿಸಿದರು. 1942ರ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿ ಮತ್ತೊಮ್ಮೆ ಸೆರೆಯಾಗಿ ಅದೇ ವರ್ಷ ಬಿಡುಗಡೆ ಹೊಂದಿದರು. ಅನಂತರ ಮುಂಬಯಿ ಸ್ಥಳೀಯ ಆಹಾರ ಸಮಿತಿಯ ಕ್ರಿಯಾಶೀಲ ಸದಸ್ಯರಾಗಿದ್ದುಕೊಂಡು ಕ್ಷಾಮ ಪರಿಹಾರ ಸಮಿತಿಯ ಪರವಾಗಿ ಕ್ಷಾಮಪೀಡಿತ ಪ್ರದೇಶಗಳಿಗೆ ಊಟ, ಬಟ್ಟೆ ಇತ್ಯಾದಿ ಸರಬರಾಜು ಮಾಡುವ ಸಾರ್ವಜನಿಕ ಸೇವೆಯಲ್ಲಿ ಪ್ರವೃತ್ತರಾದರು. *ಹೋರಾಟ* 1946ರಲ್ಲಿ ಬಿಜಾಪುರ ಜಿಲ್ಲೆಯ ರೈತ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದರು. ಅನಂತರ ಅಂದಿನ ಮುಂಬಯಿ ಮಂತ್ರಿ ಮಂಡಲದಲ್ಲಿ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡು 6 ವರ್ಷಗಳ ಕಾಲ ಸೇವೆಸಲ್ಲಿಸಿದರು (1946-52). ಆಗ ಸುಮಾರು ಎರಡು ವರ್ಷಗಳ ಕಾಲ ಹಣಕಾಸಿನ ಶಾಖೆಯನ್ನು ಹಾಗೂ ಮೂರು ವರ್ಷಗಳ ಕಾಲ ವ್ಯವಸಾಯ, ಅರಣ್ಯ ಮತ್ತು ಸಹಕಾರ ಇಲಾಖೆಗಳ ಅಧಿಕಾರವನ್ನು ವಹಿಸಿಕೊಂಡಿದ್ದರು. 1952-56ರ ವರೆಗೆ ಮುಂಬಯಿ ವಿಧಾನಸಭೆಯ ಉಪಾಧ್ಯಕ್ಷರಾಗಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕರ್ನಾಟಕ ರಾಜ್ಯದ ನಿರ್ಮಾಣದ ಬಗ್ಗೆ ವಿಷಯ ಸಂಗ್ರಹಿಸಿ ಭಾರತ ಸರ್ಕಾರಕ್ಕೆ ಮನವಿ ಸಲ್ಲಿಸಲು ರಚಿಸಿದ ಸಮಿತಿಗೆ ಇವರನ್ನು ಕಾರ್ಯದರ್ಶಿಯಾಗಿ ನೇಮಿಸಿತ್ತು. ಕರ್ನಾಟಕ ರಾಜ್ಯ ನಿರ್ಮಾಣವಾದ ಮೇಲೆ 1956ರಲ್ಲಿ ಮೈಸೂರು ವಿಧಾನ ಸಭೆಯ ಅಧ್ಯಕ್ಷರಾದ ಕಂಠಿಯವರು ಸುಮಾರು 6 ವರ್ಷಗಳ ಕಾಲ ಆ ಹುದ್ದೆಯಲ್ಲಿದ್ದರು. 1961ರಲ್ಲಿ ಪಶ್ಚಿಮ ಜರ್ಮನಿಗೆ ಭೇಟಿ ನೀಡಿದ ಸಂಸದೀಯ ನಿಯೋಗಕ್ಕೆ ಇವರು ಮುಖ್ಯಸ್ಥರಾಗಿದ್ದರು. ಮೂರನೆಯ ಸಾರ್ವತ್ರಿಕ ಚುನಾವಣೆಯಲ್ಲಿ ಹುನಗುಂದ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಇವರು 1962 ಮಾರ್ಚ್ 9ರಿಂದ 1962 ಜುಲೈ 20ರವರೆಗೆ ವಿಶಾಲ ಮೈಸೂರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅನಂತರ 1962 ಜುಲೈ 21ರಂದು ವಿದ್ಯಾಮಂತ್ರಿಯಾಗಿ ನೇಮಕಗೊಂಡರು. ಬೆಂಗಳೂರು ವಿಶ್ವವಿದ್ಯಾಲಯ ಸ್ಥಾಪನೆಯಾದದ್ದು ಇವರು ವಿದ್ಯಾಮಂತ್ರಿಯಾಗಿದ್ದಾಗ. ನಾಲ್ಕನೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ವಿಧಾನಸಭೆಗೆ ಆಯ್ಕೆಯಾಗಿ 1967 ಮಾರ್ಚ್ 14ರಿಂದ 1968 ಏಪ್ರಿಲ್ 29ರವರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಂತ್ರಿಯಾಗಿದ್ದರು. ಇವರು ಕೆಲಕಾಲ ಕರ್ನಾಟಕ ಹಿಂದಿ ಪ್ರಚಾರ ಸಭೆಯ ಅಧ್ಯಕ್ಷರೂ ಮೈಸೂರು ಪ್ರದೇಶದ ಭಾರತ ಸೇವಕ ಸಮಾಜದ ಅಧ್ಯಕ್ಷರೂ ಆಗಿದ್ದರು. 1959ರಲ್ಲಿ ಲಂಡನಿನಲ್ಲಿ ನಡೆದ ಕಾಮನ್ವೆಲ್ತ್‌ ಸಂಸದೀಯ ಸಮ್ಮೇಳನಕ್ಕೆ ಕರ್ನಾಟಕ ಸರ್ಕಾರ ಇವರನ್ನು ತನ್ನ ಪ್ರತಿನಿಧಿಯನ್ನಾಗಿ ಕಳಿಸಿತ್ತು. ಆ ಸಂದರ್ಭದಲ್ಲಿ ತಮಗಾದ ಅನುಭವಗಳನ್ನು ಇವರು ನೋಟ್ಸ್‌ ಆನ್ ದಿ ಪಾರ್ಲಿಮೆಂಟರಿ ಕೋರ್ಸ್ ಎಂಬ ಗ್ರಂಥದಲ್ಲಿ ನಿರೂಪಿಸಿದ್ದಾರೆ. *ಮುಖ್ಯಮಂತ್ರಿ* 1962ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ನಡೆಸಿತು. ಫೆಬ್ರವರಿ 19ರಂದು ನಡೆದ ಚುನಾವಣೆಯಲ್ಲಿ 208 ಕ್ಷೇತ್ರಗಳಲ್ಲಿ ಕಾಂಗ್ರೆಸ್ 138 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆಗೇರಿತು. ಆದರೆ, ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಎಸ್. ನಿಜಲಿಂಗಪ್ಪ ಅವರು ಹೊಸದುರ್ಗದಲ್ಲಿ 5709 ಮತಗಳ ಅಂತರದಲ್ಲಿ ಸೋತಿದ್ದರು. ಹೀಗಾಗಿ, ಶಿವಲಿಂಗಪ್ಪ ರುದ್ರಪ್ಪ ಕಂಠಿ ರಾಜ್ಯದ ಆರನೇ ಮುಖ್ಯಮಂತ್ರಿಯಾದರು. ಎಸ್.ಆರ್. ಕಂಠಿ ಅವರ ಮುಖ್ಯಮಂತ್ರಿ ಸ್ಥಾನ ಬಹುದಿನ ಉಳಿಯಲಿಲ್ಲ. ಮೂರು ತಿಂಗಳು ಮುಗಿಯುವುದರೊಳಗೇ ಒಲ್ಲದ ಮನಸ್ಸಿನಿಂದ ರಾಜಿನಾಮೆ ನೀಡಿದರು. ಏಕೆಂದರೆ, ನಿಜಲಿಂಗಪ್ಪ ಮುಖ್ಯಮಂತ್ರಿಯಾಗಲಿ ಎಂದು ಬಾಗಲಕೋಟೆ ಶಾಸಕ ಬಿ.ಟಿ. ಮುರ್ನಾಳ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಸ್. ನಿಜಲಿಂಗಪ್ಪ ಹಾಗೂ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಇತರೆ ಇಬ್ಬರ ನಾಮಪತ್ರ ತಿರಸ್ಕಾರವಾದ್ದರಿಂದ ಎಸ್. ನಿಜಲಿಂಗಪ್ಪ ಅವಿರೋಧವಾಗಿ ಆಯ್ಕೆಯಾದರು. ಕಾಂಗ್ರೆಸ್  ಪಕ್ಷದ  ಹಿಂದಿನ ಯೋಜನೆಯಂತೆ ಎಸ್. ನಿಜಲಿಂಗಪ್ಪ ಅವರಿಗೆ ಮುಖ್ಯಮಂತ್ರಿ ಪಟ್ಟ ಬಿಟ್ಟು ಕೊಟ್ಟರು.  ಮೂರನೇ ವಿಧಾನಸಭೆಯ ಅವಧಿ 1962ರ ಮಾರ್ಚ್ 15ರಿಂದ 1967ರ ಫೆಬ್ರವರಿ 28. ಎಸ್. ನಿಜಲಿಂಗಪ್ಪ ಈ ಅವಧಿಯನ್ನು ಪೂರ್ಣಗೊಳಿಸಿದರು. ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ನೀರಾವರಿ ಕ್ಷೇತ್ರದಲ್ಲಿ ಹಲವು ಸೌಲಭ್ಯ ನೀಡುವ ಜತೆಗೆ ಹೊಸತನ ತಂದರು. ಹೀಗಾಗಿ ಎಸ್. ನಿಜಲಿಂಗಪ್ಪ ಅವರನ್ನು ‘ಆಧುನಿಕ ಕರ್ನಾಟಕದ ನಿರ್ಮಾತೃ’ ಎಂದೂ ಕರೆಯಲಾಗುತ್ತಿತ್ತು.  ವಿಧಾನಸಭೆಯ ಈ ಅವಧಿಯಲ್ಲಿ ಪ್ರಥಮ ಬಾರಿಗೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಯಿತು. *ನಿರ್ವಹಿಸಿದ ಹುದ್ದೆಗಳು* ಕರ್ನಾಟಕ ಸಾಹಿತ್ಯ ಅಕಾಡೆಮೆಯ ಅಧ್ಯಕ್ಷರು (1961-1966) ಕರ್ನಾಟಕ ವಿಧಾನಸಭಾ ಸದಸ್ಯರು (1957 – 1962) ಕರ್ನಾಟಕ ವಿಧಾನಸಭಾ ಸಭಾಪತಿ (19 ಡಿಸೆಂಬರ್ 1956- 9 ಮಾರ್ಚ್ 1962) ಕರ್ನಾಟಕದ ಮುಖ್ಯಮಂತ್ರಿ (1962 ಮಾರ್ಚ್ 9ರಿಂದ 1962 ಜುಲೈ 20) ಕರ್ನಾಟಕ ಸರ್ಕಾರದಲ್ಲಿ ಶಿಕ್ಷಣ ಮಂತ್ರಿ *ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಸ್ಥಾಪಕರು* ರಾಜಕೀಯದಲ್ಲಿ ಆಧುನಿಕ ಭರತ ಎಂದೇ ಕರೆಸಿಕೊಂಡಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಆರ್ ಕಂಠಿ ಅವರ ದೂರದೃಷ್ಟಿಯಿಂದ 1969 ರಲ್ಲಿ ಆರಂಭವಾದ ಈ ಶಾಲೆಯು ಬಾಲಕಿಯರಿಗಾಗಿ ಸೈನಿಕ ಶಿಕ್ಷಣ ನೀಡುವ ಏಕೈಕ ಶಾಲೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಕಿತ್ತೂರ ಇರುವ ಈ ಶಾಲೆಯಲ್ಲಿ ಆರನೇ ತರಗತಿಯಿಂದ ಹನ್ನೆರಡನೇ ತರಗತಿಯವರೆಗೂ ಇಲ್ಲಿ ಶಿಕ್ಷಣಕ್ಕೆ ಅವಕಾಶವಿದ್ದು ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ. *ನಿಧನ* ಕರ್ನಾಟಕದ ಏಳಿಗೆಗೆ ಅಪಾರವಾಗಿ ಶ್ರಮಿಸಿದ ಕಂಠಿಯವರು ರಾಜ್ಯ ವಿಧಾನಸಭೆಯ ಸದಸ್ಯರಾಗಿರುವಾಗಲೇ, 1969 ಡಿಸೆಂಬರ್ 25ರಂದು ಕಿತ್ತೂರಿನಲಿ ಹೃದಯಾಘಾತಕ್ಕೆ ಒಳಗಾಗಿ  ನಿಧನ ಹೊಂದಿದರು. ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಸ್ನೇಹ ಪ್ರೀತಿ ಪ್ರೇಮ ಮತ್ತು ವಿಶ್ವಾಸದ ಘನ ವ್ಯಕ್ತಿತ್ವ ಹೊಂದಿದ ಶ್ರೀ ಎಸ್ ಆರ್ ಕಂಠಿ ಅವರುರಾಷ್ಟ್ರ ನಾಡು ಕಂಡ ಅಪರೂಪದ ಪ್ರಬುದ್ಧ ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ. ಆರು ದಶಕ ಬದುಕಿ ಆರು ಶತಕದ ನೆರಳನ್ನು ಕೊಟ್ಟ ಶ್ರೇಷ್ಠ ಹೆಮ್ಮರವಾಗಿದೆ. ಇವತ್ತು ಶ್ರೀ ಎಸ್ ಆರ್ ಕಂಠಿ ಭೌತಿಕವಾಗಿ ನಮ್ಮ ಜೊತೆಗೆ ಇಲ್ಲ. ಆದರೆ ಅವರು ಮಾಡಿದ ಅತ್ಯಂತ ಜನಪರ ಕೆಲಸಗಳು ಇಂದಿಗೂ ಅವರನ್ನು ನೆನಪಿಡುವಂತೆ ಮಾಡುತ್ತಿವೆ. ವಿದ್ಯಾರ್ಥಿ ನಿಲಯಕ್ಕೆಂದು ತಮ್ಮ ಮನೆಯನ್ನೇ ಮಾರಾಟ ಮಾಡಿದ ಕರ್ಣ ಅಪಾರ ಬಂಧು ಬಳಗವನ್ನು ಬಿಟ್ಟು ಹೋದ ಭರತ. ಎಸ್ ನಿಜಲಿಂಗಪ್ಪನವರ ಪಡಿ ನೆರಳು ಪ್ರಾಮಾಣಿಕತೆಯ ನಿಜ ರೂಪ ಆಗಿದ್ದರು. ಇವರಿಗೆ ಶತ ಕೋಟಿ ನಮನಗಳು __________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರು ,”ಅಪ್ಪಟ ದೇಶ ಭಕ್ತ ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ ಎಸ್ ಆರ್ ಕಂಠಿ” Read Post »

You cannot copy content of this page

Scroll to Top