ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ

ಸಾವಿಲ್ಲದಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ ಮಹಿಳಾ ಸಾಹಿತ್ಯದ ಚರಿತ್ರೆ ಎಂದರೆ ಮಹಿಳೆಯರು ತಮ್ಮ ಅನುಭವಗಳು, ಸಮಾಜದ ಸ್ಥಿತಿ, ರಾಜಕೀಯ ಅಭಿಪ್ರಾಯಗಳನ್ನು ಸಾಹಿತ್ಯದ ಮೂಲಕ ವ್ಯಕ್ತಪಡಿಸಿದ ಪಯಣವಾಗಿದ್ದು, ಇದು ಪ್ರಾಚೀನ ಕಾಲದಿಂದಲೂ ಇದ್ದು, ಅಮೇರಿಕಾದ ಕ್ರಾಂತಿಯಂತಹ ಸಂದರ್ಭಗಳಲ್ಲಿ ತೀವ್ರಗೊಂಡಿತು; ಇವರು ಮನೆ, ಸಮಾಜ ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳನ್ನು ಕಾದಂಬರಿ, ಕವಿತೆಗಳ ಮೂಲಕ ನಿರೂಪಿಸಿ, ಮಹಿಳೆಯರ ಸ್ಥಾನಮಾನದ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ, ಇದು ಮುಖ್ಯವಾಗಿ ಸ್ತ್ರೀವಾದಿ ಚಿಂತನೆಗಳನ್ನು ಜಗತ್ತಿಗೆ ಪರಿಚಯಿಸಿದೆ.ಮಹಿಳಾಪರ ಚಿಂತನೆ ಆಲೋಚನೆಗಳು ಕಥೆ ಕಾದಂಬರಿ ಕಾವ್ಯ ಸಾಹಿತ್ಯ ರಚನೆಯಲ್ಲಿ ಮುಕ್ತವಾಗಿ ಬರೆಯಲು ಆರಂಭಿಸಿದರು ಕನ್ನಡತಿಯರು. 12 ನೆಯ ಶತಮಾನದ ಶ್ರೇಷ್ಠ ವಚನಕಾರ್ತಿಯರು ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜ ಕಟ್ಟಿದರು.ನವ್ಯ ನವೋದಯ ಪ್ರಗತಿಶೀಲ ಬಂಡಾಯ ದಲಿತ ಸಾಹಿತ್ಯ ಹೀಗೆ ಎಲ್ಲಾ ಘಟ್ಟಗಳಲ್ಲಿವಚನ ಸಾಹಿತ್ಯ ಮತ್ತು ಶರಣೆಯರ ಸಾಹಿತಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಗಳನ್ನು ಮರೆಯಲಾಗದು. ಕನ್ನಡ ಸಾಹಿತ್ಯದಲ್ಲಿಜಯದೇವಿ ತಾಯಿ ಲಿಗಾಡೆ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತು ಸಮಗ್ರ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನುಪಮವಾಗಿ ದುಡಿದವರು ಶಾಂತಾದೇವಿ ಮಾಳವಾಡ ಅವರು. ಶಾಂತಾದೇವಿ ಮಾಳವಾಡ ಇವರು 1922 ಡಿಸೆಂಬರ್ 10 ರಂದು ಬೆಳಗಾವಿ ಯಲ್ಲಿ ಜನಿಸಿದರು. ತಾಯಿ ಜಯವಂತಿದೇವಿ; ತಂದೆ ಕರ್ಜಗಿ ಮುರಿಗೆಪ್ಪ ಶೆಟ್ಟರು. ತವರು ಮನೆ ಹೆಸರು ಕರ್ಜಗಿ ದಾನಮ್ಮ. ಎರಡು ವರ್ಷದವಳಿದ್ದಾಗ ತಂದೆಯನ್ನು ಹಾಗು ಹತ್ತು ವರ್ಷದವಳಿದ್ದಾಗ ತಾಯಿಯನ್ನು ಕಳೆದುಕೊಂಡ ದಾನಮ್ಮ ಅಜ್ಜಿಯ ಮಡಿಲಲ್ಲಿ ಬೆಳೆದಳು. ವನಿತಾ ವಿದ್ಯಾಲಯದಲ್ಲಿ ಹೈಸ್ಕೂಲ ಎರಡನೆಯ ತರಗತಿಯವರೆಗೆ ಅಂದರೆ ಒಂಬತ್ತನೆಯ ತರಗತಿ ಕಲಿತು, ವಿದ್ಯಾಭ್ಯಾಸವನ್ನು ನಿಲ್ಲಿಸಬೇಕಾಯಿತು. ಮದುವೆಶಾಂತಾದೇವಿ ಮಾಳವಾಡ ಅವರು ತಮ್ಮ 15 ನೆಯ ವಯಸ್ಸಿನಲ್ಲಿ1937 ನೆಯ ಇಸವಿಯಲ್ಲಿ ಪ್ರೊ. ಸ.ಸ. ಮಾಳವಾಡರ ಜೊತೆ ಮದುವೆ ಆಯಿತು. ಮುಂದೆ ತಮ್ಮ ಪತಿಯ ಒತ್ತಾಸೆಯಿಂದಾಗಿ ಶಾಂತಾದೇವಿಯವರು ಮನೆಯಲ್ಲಿಯೆ ಇಂಗ್ಲೀಷ್,ಹಿಂದಿ, ಪ್ರಾಚೀನ ಕನ್ನಡ ಸಾಹಿತ್ಯ ಹಾಗು ವಚನ ಸಾಹಿತ್ಯದ ಅಧ್ಯಯನ ಮಾಡಿದರು. 1940 ರಲ್ಲಿ ಕನ್ನಡ ಜಾಣ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಪತಿಯ ಪ್ರೋತ್ಸಾಹದಿಂದ 1938ರಲ್ಲಿ ಅಕ್ಕನ ಬಳಗ ವೆಂಬ ಮಹಿಳಾ ಸಂಘಟನೆಯನ್ನು ಹುಟ್ಟು ಹಾಕಿದರು.ಶಾಂತಾದೇವಿ ತಾಯಿಯ ಮಮತೆ ತಂದೆಯ ಪ್ರೀತಿ ಕಾಣದ ಮುಗ್ಧ ಬಾಲಕಿಸುಮಾರು ಹತ್ತು ಸಲ ಅವರಿಗೆ ಗರ್ಭಪಾತವಾಯಿತು.ಮಕ್ಕಳಿಲ್ಲದ ಕೊರಗು ಬಿಟ್ಟು ಸಂಪೂರ್ಣ ಸಾಹಿತ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದರು.ಅರಿವು (ಜ್ಞಾನ, ಅರಿವು), ಆಚಾರ (ಅಭ್ಯಾಸ) ಅನುಭವ (ಆಧ್ಯಾತ್ಮಿಕ ಅನುಭವ), ಕಾಯಕ (ದೈಹಿಕ ದುಡಿಮೆಯಿಂದ ಗಳಿಸುವುದು), ಸತ್ಯ ಮತ್ತು ಪರಿಶುದ್ಧತೆಯನ್ನು ಕಾಪಾಡುವುದು, ದಾಸೋಹ (ಯಾವುದೇ ಅಹಂ’ ಇಲ್ಲದೆ ದುಡಿದವರಿಗೆ ನೀಡುವುದು ಶರಣ ಸಂಸ್ಕೃತಿಯ ತತ್ವಗಳು.ಬಾಲ್ಯದಿಂದಲೂ ಇಂತಹ ಅಪೂರ್ವ ಶರಣ ಸಂಸ್ಕೃತಿ ಮೈಗೂಡಿಸಿಕೊಂಡ ಶಾಂತಾದೇವಿ ಮುಂದೊಂದು ದಿನ ನಾಡಿನ ಅಗ್ರ ಲೇಖಕಿ ಸಾಹಿತಿ ಲೇಖಕಿಯಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಾರ್ವಜನಿಕ ಸಾಮಾಜಿಕ ಸೇವೆ ಅಕ್ಕನ ಬಳಗ ಸ್ಥಾಪನೆ ( 1940)ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು (1965)ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿಯ ಸದಸ್ಯರು (1974-1978)ರಾಜ್ಯ ಸಾಹಿತ್ಯ ಅಕಾಡೆಮಿ ಸದಸ್ಯರು (1979)ಧಾರವಾಡ ಆಕಾಶವಾಣಿ ಆಡಿಶನ್ ಕಮಿತಿ ಸದಸ್ಯರು(1961-1962)ಗಾಂಧಿ ಶಾಂತಿ ಪ್ರತಿಷ್ಠಾನದ ಮಹಿಳಾವಿಭಾಗದ ಕಾರ್ಯಾಧ್ಯಕ್ಷರು(1967-1970)ಕರ್ನಾಟಕ ವಿದ್ಯಾವರ್ಧಕ ಸಂಘ,ಧಾರವಾಡ ದ ಉಪಾಧ್ಯಕ್ಷರು (1974-1978)ಉತ್ತರ ಕರ್ನಾಟಕ ಲೇಖಕಿಯರ ಸಂಘ (ಹುಬ್ಬಳ್ಳಿ-ಧಾರವಾಡ) ದ ಆಜೀವ ಗೌರವಾಧ್ಯಕ್ಷರು ಸಾಹಿತ್ಯ ಕೃತಿಗಳು ಕಥಾಸಂಕಲನ ಮೊಗ್ಗೆಯ ಮಾಲೆಕುಂಕುಮ ಬಲ ಗದ್ಯ ಸಾಹಿತ್ಯ ಹಚ್ಚೇವು ಕನ್ನಡದ ದೀಪ.ಕನ್ನಡದ ತಾಯಿ.ಮಹಿಳೆಯರ ಅಲಂಕಾರಸೊಬಗಿನ ಮನೆಮಹಿಳೆಯರ ಆತ್ಮಶ್ರೀ.ರಸಾಪಾಕಸಾರ್ವಜನಿಕ ರಂಗದಲ್ಲಿ ಮಹಿಳೆ.ದಾಂಪತ್ಯಯೋಗವಧುವಿಗೆ ಉಡುಗೊರೆ.ಜನನೀ ಜನ್ಮ ಭೂಮಿಶ್ಚ.ಮಹಿಳಾ ಚೇತನ.ಸಮುಚ್ಚಯ. ಕಾದಂಬರಿಬಸವ ಪ್ರಕಾಶ.ದಾನದಾಸೋಹಿ ದಾನಮ್ಮ.ವೀರ ಶೂರರಾಣಿ ಕೆಳದಿ ಚೆನ್ನಮ್ಮ ಮಕ್ಕಳ ಸಾಹಿತ್ಯಬೆಳವಡಿ ಮಲ್ಲಮ್ಮ.ಕೆಳದಿ ಚೆನ್ನಮ್ಮ.ನಾಗಲಾಂಬಿಕೆ.ನೀಲಾಂಬಿಕೆಕುಟುಂಬ.ಬಸವಯುಗದ ಶಿವಶರಣೆಯರುಭಾರತದ ಮಾನಸಪುತ್ರಿಯರುಗಂಗಾಂಬಿಕೆಶಿವಯೋಗಿಣಿಎಣ್ಣೆ ಹೊಳೆಯ ನಂದಾದೀಪಪುರಾತನ ಶರಣರುದಾನದಾಸೋಹಿ ದಾನಮ್ಮ. ಪ್ರಶಸ್ತಿ ಗೌರವಗಳು ಜ.ಚ.ನಿ. ಪೀಠಾರೋಹಣ ಬೆಳ್ಳಿಹಬ್ಬ ‘ ಸಾಹಿತ್ಯಸುಮ ‘ ಬಂಗಾರದ ಪದಕಸಾಹಿತ್ಯ ಅಕಾಡೆಮಿ ಪ್ರಶಸ್ತಿ (1973)ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1983)ಸಾವಿತ್ರಮ್ಮ ದೇ.ಜ.ಗೌ. ಪ್ರಶಸ್ತಿ (1991)ಷಷ್ಟ್ಯಬ್ದಿ ಸಮಾರಂಭ (‘ ಪ್ರಶಾಂತ’ ಆಭಿನಂದನ ಗ್ರಂಥ ಸಮರ್ಪಣೆ:1982) 1999 ರಲ್ಲಿ ಬಾಗಲಕೋಟೆಯಲ್ಲಿ ನಡೆದ 68 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೇಷ್ಠ ಸಾಹಿತಿ ಶಾಂತಾದೇವಿ ಮಾಳವಾಡ ಅವರು 7 ಆಗಸ್ಟ್ 2005 ರಲ್ಲಿ ಬಯಲಲ್ಲಿ ಬಯಲಾದರು.ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಸ್ನೇಹ ಪ್ರೀತಿ ಮತ್ತು ಆತ್ಮ ಸ್ಥೈರ್ಯದ ಸಂಕೇತವಾದ ಕನ್ನಡ ಸಾಹಿತ್ಯದ ದಿಗ್ಗಜೆ ಶಾಂತಾದೇವಿ ಮಾಳವಾಡ ಅವರು ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಗೆ ಕೊಟ್ಟ ಕೊಡುಗೆ ಅಪಾರವಾಗಿದೆ. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ Read Post »

ಕಾವ್ಯಯಾನ

“ಮಾನವರಾಗಿ” ಹಮೀದ್ ಹಸನ್ ಮಾಡೂರು

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಮಾನವರಾಗಿ” ದೇವನು ಭೂಮಿಯಸೃಷ್ಟಿಸಿ ಜಗತ್ತು ಎಂದಾಗಿಪ್ರಕೃತಿಯಿಂದ ಆಲಂಕರಿಸಿದ,ನಾವು ಜಗತ್ತಾಗಿಸಿ ದೇಶಗಳಾಗಿವಿಂಗಡಿಸಿ ಕೊಂಡು ಬಿಟ್ಟೆವು,! ಮನುಷ್ಯನನ್ನು ಸೃಷ್ಟಿಸಿಭೂಮಿಗೆ ಕಳುಹಿಸಿ ಕೊಟ್ಟನುಆ ಪರಮಾತ್ಮನ ನೆನೆಸಿ ಕೊಳ್ಳದೆನಾವು ಹಿಂದು ಮುಸ್ಲಿಂ ಕ್ರೈಸ್ತರಾಗಿವಿಂಗಡಿಸಿ ಕೊಂಡು ಬಿಟ್ಟೆವು.! ಹಮೀದ್ ಹಸನ್ ಮಾಡೂರು. ʼ

“ಮಾನವರಾಗಿ” ಹಮೀದ್ ಹಸನ್ ಮಾಡೂರು Read Post »

ಇತರೆ

“ಲಾಲ ಬಹದ್ದೂರ ಶಾಸ್ತ್ರಿ ಒಂದು ನೆನಪು”ವಿಜಯಲಕ್ಷ್ಮಿ ಹಂಗರಗಿ

ನೆನಪುಗಳ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ಲಾಲ ಬಹದ್ದೂರ ಶಾಸ್ತ್ರಿ ಒಂದು ನೆನಪು” ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಕ್ಟೋಬರ್ 12 1904 ರಲ್ಲಿ ಜನಿಸಿದರು. ಇವರು ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವತಂತ್ರಕ್ಕಾಗಿ ಅವಿರತವಾಗಿ ಹೋರಾಡಿದರು.ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ಪ್ರಮಾಣಿಕತೆ ಅವರ ಜೀವನದುದ್ದಕ್ಕೂ ಎದ್ದು ಕಾಣಿಸುತ್ತದೆ. ರೈಲ್ವೆ ಸಚಿವರಾಗಿದ್ದಾಗ ಸಂಭವಿಸಿದ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದು, ಪ್ರಧಾನಿಯಾದ ನಂತರ ಕಡಿಮೆ ವೇತನಕ್ಕೆ ತೃಪ್ತಿ ಪಟ್ಟಿ ಕೊಂಡು ಕಠಿಣ ಪರಿಸ್ಥಿತಿಯಲ್ಲಿ ದೇಶವನ್ನು ಮುನ್ನಡೆಸಿದ್ದು ಇವರ ಸರಳತೆಗೆ ಉದಾಹರಣೆಗಳು ಜಾತಿ ಪದ್ಧತಿಯನ್ನು ವಿರೋಧಿಸಿ ತಮ್ಮ ಹೆಸರಿನಲ್ಲಿದ್ದ ಜಾತಿ ಸೂಚಕವ ಪದವನ್ನು ತೆರೆದಿದ್ದು ಅವರ ಸರಳ ಮನೋಭಾವವನ್ನು ತೋರಿಸುತ್ತದೆ.ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆಯ ಉದಾಹರಣೆಗಳು . *ನೈತಿಕ ಹೊಣೆಗಾರಿಕೆ:* ರೈಲ್ವೆ ಸಚಿವರಾಗಿದ್ದಾಗ ಕಲ್ಲೇಕುಚಿ ರೈಲು ದುರಂತ ಸಂಭವಿಸಿ ಅನೇಕ ಜನರು ಸಾವನ್ನಪ್ಪಿದಾಗ ಅದಕ್ಕೆ ನೈತಿಕಹೊಣೆ ಬರಲು ಅವರ ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.  *ಆರ್ಥಿಕ ಸರಳತೆ* ಪ್ರಧಾನಿಯಾಗಿದ್ದರೂ ಅವರು ಕೇವಲ 400 ತಿಂಗಳಿಗೆ ವೇತನ ಪಡೆಯುತ್ತಿದ್ದರು ತಮ್ಮ ಕುಟುಂಬದ ನಿರ್ವಹನಿಗೆ ಇದು ಸಾಕು ಎಂದು ಅವರು ಹೇಳಿದ್ದರು. ಅವರ ದೊಡ್ಡ ಮನೆ ನಿರ್ಮಾಣ ಮಾಡದೆ ತಮ್ಮ ಹಳೆಯ ವಾಸಸ್ಥಾನದಲ್ಲಿ ಮುಂದುವರೆದರು. ಜಾತಿ ಪದ್ಧತಿ ವಿರೋಧ ಅವರ ಹೆಸರಿನ ಜೊತೆಗಿದ್ದ ಜಾತಿ ಸೂಚಕ ಪದವನ್ನು ಅವರು ತೊರೆದರು. ಇದರ ಬದಲಾಗಿ ಕಾಶಿ ವಿದ್ಯಾರ್ಥಿದಲ್ಲಿ ಪದವಿ ಪಡೆದ ನಂತರ ಸಿಕ್ಕ ಶಾಸ್ತ್ರ ಎಂಬ ಬಿರುದನ್ನು ಅವರು ಬಳಸಲು ಪ್ರಾರಂಭಿಸಿದರು. ಜನರೊಂದಿಗೆ ನಿಕಟ ಸಂಬಂಧ ಆಹಾರ ಕೊರತೆಯ ಸಂದರ್ಭದಲ್ಲಿ ಅವರು ಜನರಿಗೆ ವಾರಕ್ಕೆ ಒಂದು ದಿನ ಉಪವಾಸ ಮಾಡಲು ಕರೆ ನೀಡಿದರು. ಇದು ಅವರ ಸರಳ ಜೀವನ ಶೈಲಿ ಮತ್ತು ಬದ್ಧತೆಯನ್ನು ತೋರಿಸುತ್ತದೆ. “ಜೈ ಜವಾನ್ ಜೈ ಕಿಸಾನ್ ಘೋಷಣೆ “1965ರ ಭಾರತ್ ಪಾಕಿಸ್ತಾನ ಯುದ್ಧದ ಸಮಯದಲ್ಲಿ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯನ್ನು ನೀಡಿದರು. ಇದು ದೇಶದ ಸೈನಿಕರು ಮತ್ತು ರೈತರ ಶ್ರಮವನ್ನು ಮತ್ತು ದೇಶದ ಏಕತೆಯನ್ನು ಸಾರಿತು.ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಕ್ಟೋಬರ್ 2 194 ರಂದು ಉತ್ತರ ಪ್ರದೇಶದ ಮುಗಲ್ ಸೈರಾಂನಲ್ಲಿ ಜನಿಸಿದರು ಅವರು ಭಾರತೀಯ ಹೋರಾಟದಲ್ಲಿ ಗಾಂಧೀಜಿಯವರ ಆದರ್ಶಗಳಿಂದ ಪ್ರಭಾವಿತರಾಗಲು 1921 ರಲ್ಲಿ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ತಮ್ಮ ಅಧ್ಯಯನವನ್ನು ಸ್ಥಗಿತಗೊಳಿಸಿದರು. 1926ರಲ್ಲಿ ಕಾಶಿ ವಿದ್ಯಾಪೀಠದಿಂದ ಪದವಿ ಪಡೆದ ನಂತರ ಅವರಿಗೆ ಶಾಸ್ತ್ರಿ ಎಂಬ ಬಿರುದು ನೀಡಲಾಯಿತು. ಸ್ವತಂತ್ರ ಹೋರಾಟಗಾರರಾಗಿ ಅನೇಕ ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಿದರು. ಸ್ವತಂತ್ರ ನಂತರ ಅವರು ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದರು. ಮತ್ತು ಅರಿಯಲೂರ್ ರೈಲ್ವೆ ಅಪಘಾತ ಜವಾಬ್ದಾರಿಯನ್ನು ತೆಗೆದುಕೊಂಡು ರೈಲ್ವೆ ಸಚಿವರಾಗಿ ರಾಜೀನಾಮೆ ನೀಡಿದರು 1964 ರಲ್ಲಿ ಭಾರತದ ಎರಡನೇ ಪ್ರಧಾನಮಂತ್ರಿಯಾದರು. *ಜೀವನದ ಪ್ರಮುಖ* *ಘಟ್ಟಗಳು* ಆರಂಭಿಕ ಜೀವನ ಅಕ್ಟೋಬರ್ 2 194 ರಂದು ಉತ್ತರ ಪ್ರದೇಶದ ಮುಘಲ್ ರಾಯನಲ್ಲಿ ಜನಿಸಿದರು. ಅವರ ತಂದೆ ಶಾರದಾ ಪ್ರಸಾದ್ ಶ್ರೀವಾಸ್ತವ್ ಮತ್ತು ತಾಯಿ ರಾಮ ಧೂಲಾರಿ ದೇವಿ ಆರು ತಿಂಗಳು ಮಗುವಾಗಿದ್ದಾಗ ತಂದೆ ನಿಧನರಾದರು. ಸ್ವತಂತ್ರ ಚಳುವಳಿ 1921 ರಲ್ಲಿ ಗಾಂಧೀಜಿಯವರ ಅಸಹಕಾರ ಚಳುವಳಿಯಲ್ಲಿ ಪಾಲ್ಗೊಂಡರು ಅವರು 1926 ರಲ್ಲಿ ಕಾಶಿ ವಿದ್ಯಾಪೀಠದಿಂದ ಶಾಸ್ತ್ರಿ ಪದವಿಯನ್ನು ಪಡೆದರು. ಸ್ವತಂತ್ರ ಹೋರಾಟದಲ್ಲಿ ಹಲವಾರು ಬಾರಿ ಜೈಲು ಶಿಕ್ಷೆ ಅನುಭವಿಸಿದರು. 1930ರಲ್ಲಿ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎರಡುವರೆ ವರ್ಷ ಜೈಲು ಸೇರಿದರು. ರಾಜಕೀಯ ವೃತ್ತಿ 1937ರಲ್ಲಿ ಉತ್ತರ ಪ್ರದೇಶದ ಸಂಸದೀಯ ಮಂಡಳಿಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಸ್ವತಂತ್ರದ ನಂತರ ಅವರು ಉತ್ತರ ಪ್ರದೇಶದ ಪೊಲೀಸ್ ಸಚಿವರಾಗಿ ನೇಮಕಗೊಂಡರು. ಮತ್ತು ಗಲಭೆ ಕೋರರನ್ನು ಚದುರಿಸಲು ಲಾಠಿಗಳ ಬದಲಿಗೆ ನೀರಿನ ಫಿರಂಗಿಗಳನ್ನು ಬಳಸಲು ಸೂಚಿಸಿದರು. 1956 ರಲ್ಲಿ ಅರಿಯಲೂರ್ ರೈಲು ಗಾತ್ರದ ಜವಾಬ್ದಾರಿಯನ್ನು ಹೊತ್ತು ರೈಲ್ವೆ ಸಚಿವರಾಗಿ ರಾಜೀನಾಮೆ ನೀಡಿದರು. ಪ್ರಧಾನ ಮಂತ್ರಿ 1964ರಲ್ಲಿ ಭಾರತದ ಎರಡನೇ ಪ್ರಧಾನಮಂತ್ರಿಯಾಗಲು ಅವರು ತಮ್ಮ ಸರಳತೆ ನೈತಿಕತೆ ಮತ್ತು ಆಂತರಿಕ ಶಕ್ತಿಗಾಗಿ ಹೆಸರುವಾಸಿಯಾಗಿದ್ದರು. “ಜೈ ಜವಾನ್ ಜೈ ಕಿಸಾನ್” ಎಂಬ ಅವರ ಘೋಷಣೆ ಕೃಷಿಕರನ್ನು ಮತ್ತು ಸೈನಿಕರನ್ನು ಬೆಂಬಲಿಸುತ್ತದೆ. ನಿಧನ 1966 ರಲ್ಲಿ ತಾಸ್ಕೆಂಟ್ ನಲ್ಲಿ ನಿಧನರಾದರು ಅವರ ಅಕಾಲಿಕ ಮರಣ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿತು. ವಿಜಯಲಕ್ಷ್ಮಿ ಹಂಗರಗಿ

“ಲಾಲ ಬಹದ್ದೂರ ಶಾಸ್ತ್ರಿ ಒಂದು ನೆನಪು”ವಿಜಯಲಕ್ಷ್ಮಿ ಹಂಗರಗಿ Read Post »

ಕಾವ್ಯಯಾನ

ಶಂಕರ್ ಪಡಂಗ ಕಿಲ್ಪಾಡಿ-“ಕವಿತೆ ಹುಟ್ಟಿದ್ದು ಹೇಗೆ?”

ಕಾವ್ಯ ಸಂಗಾತಿ ಶಂಕರ್ ಪಡಂಗ ಕಿಲ್ಪಾಡಿ- “ಕವಿತೆ ಹುಟ್ಟಿದ್ದು ಹೇಗೆ?” ನನ್ನೊಳಗಿನ ಕವಿತೆಯನ್ನುಬಡಿದೆಬ್ಬಿಸಿದವರುತಿದ್ದಿ ತೀಡಿದವರು ಯಾರು..?ಅಕ್ಷರದ ,ಹಿಡಿತ, ತುಡಿತ, ಮಿಡಿತಗಳಅರಿವಿಲ್ಲದಿದ್ದರೂ,ಪಡುವಣದ ಶರಧಿಯಜೊತೆಲಲ್ಲೆಗರೆಯುವಚಂದಿರನ ನೋಡಿ  ನನ್ನೊಳಗಿನ ಕವಿತೆಯ ಹುಟ್ಟು ,ಜೀವನದ ಅರ್ದ ಸತ್ಯದ ಬವಣೆಯ ನೆನೆದು,ಪೊಳ್ಳು ಭರವಸೆಯ ನೋಡಿಹುಟ್ಟಿತ್ತು ಕವಿತೆ.ನೀರುಣಿಸದೆ ಬೆಳೆದಹೆಮ್ಮರಗಳ ಕತ್ತರಿಸಿದರೂ,ಹಠ ಬಿಡದ ತ್ರಿವಿಕ್ರಮನಂತೆಮತ್ತೆ ಮತ್ತೆ ಚಿಗುರಿ,ಹಕ್ಕಿಗಳಿಗಾಸರೆಯನೀಡುವುದ ನೋಡಿ ,ಹುಟ್ಟಿತ್ತು ಕವಿತೆ.ಅಂತಸತ್ವವ ಮರೆತಂತೆಜೀವಿಸುವವರ ನೋಡಿ,ಬದುಕೆಲ್ಲ ಸವೆಸಿದರೂತೃಪ್ತಿ ಇಲ್ಲದ ಜನರ ನೋಡಿ,ಹುಟ್ಟಿತ್ತು ಕವಿತೆ.ಬದುಕು ಬಂಧುರವಾಗಲುನಿನ್ನನ್ನು ಅಪ್ಪಿಕೊಂಡೆ,ಒಪ್ಪಿಕೊಂಡೆ ಈಗನೀ ನನ್ನ ಜೀವಾಳವಾದೆ. ಶಂಕರ್ ಪಡಂಗ ಕಿಲ್ಪಾಡಿ

ಶಂಕರ್ ಪಡಂಗ ಕಿಲ್ಪಾಡಿ-“ಕವಿತೆ ಹುಟ್ಟಿದ್ದು ಹೇಗೆ?” Read Post »

ಇತರೆ, ಜೀವನ

“ನೆಂಟಸ್ತನದ ಸಂಬಂಧಗಳ ನಡೆ” ವಿಶೇಷ ಲೇಖನ ಸುಮನಾ ರಮಾನಂದ

ಸಂಬಂಧಗಳ ಸಂಗಾತಿ ಸುಮನಾ ರಮಾನಂದ “ನೆಂಟಸ್ತನದ ಸಂಬಂಧಗಳ ನಡೆ” ಇದ್ಯಾವ ಸಂಬಂಧಗಳ ಉಳಿಸುವಿಕೆ ಬಗ್ಗೆ ನಾ ಹೇಳಲು ಹೊರಟಿದ್ದೀನಿ ಇಂದಿನ ಅಂಕಣದಲಿ ಅಂತ ಆಶ್ಚರ್ಯಪಡದಿರಿ.ನಮ್ಮನು ಹೊಗಳಿದಂತೆ ಮಾಡಿ ನಮಗೇ ಗೊತ್ತಾಗದಂತೆ ತೆಗಳುವ,ತೆಗಳಿದರೂ ಅದನೇ ಸರಿಯೆಂದು ಸಮರ್ಥಿಸಿಕೊಳ್ಳುವ ಅದೇ ನಮ್ಮ ಹತ್ತಿರದ ನೆಂಟರ ಬಗ್ಗೆ ಕಣ್ರಿ… ಈಗಿನ ನಮ್ಮ ಕಾಲಮಾನದಲಿ ನಮ್ಮೆಲ್ಲರ ನೆಂಟರ ಜೊತೆಗಿನ ಸಂಬಂಧ ನಿಧಾನವಾಗಿ ಕಳೆಗುಂದುತಾ ಇರೋದು ನಿಮ್ಮೆಲ್ಲರ ಗಮನಕೂ ಬಂದಿರಬಹುದು.ಇದರ ಕಾರಣ  ಏನಿರಬಹುದು ಅಂತ ಒಮ್ಮೆ ವಿಚಾರ ಮಾಡಿದರೆ ತಿಳಿಯುತ್ತದೆ.ಮೊದಲನೆಯ ಕಾರಣ ಪ್ರತಿಯೊಬ್ಬರಿಗೂ ನೆಂಟರ ಜೊತೆ ಕಳೆಯಲು ಸಮಯ ಹೊಂದಾಣಿಕೆಯಾಗದಿರುವುದು.ಯಾರಾದ್ರೂ ನೆಂಟರು ಮನೆಗೆ ಬರ್ತಾರೆಂದರೆ ನಾವು ಮೊದಲು ಯೋಚಿಸುವುದೇ ಅವರಿಗೆ ನಾವು ಸಾಕಷ್ಟು ಸಮಯ ಕೊಡಲಾಗುವುದೇ ಆತಿಥ್ಯ ಮಾಡಲು ಹಾಗೂ ಅವರ ವಸತಿಗೆಲ್ಲ ಸರಿಯಾಗಿ ವ್ಯವಸ್ಥೆ ಮಾಡಲಾದೀತೇ ಎಂದು.ಎಲ್ಲರೂ ಹೀಗಿರುತ್ತಾರೆಂದು ಹೇಳಲಾಗದು.ನೆಂಟರೆಂದರೆ ಇಷ್ಟಪಡುವ ಮಂದಿಯೂ ಸಹ ಹೆಚ್ಚಾಗಿ ಇರುತ್ತಾರೆ. ಇನ್ನೊಂದು ಕಾರಣವೆಂದರೆ ಕೆಲವರಿಗೆ ನಂಟರು ಬರುತ್ತಾರೆಂದರೆ ಇರಿಸುಮುರಿಸು ಉಂಟಾಗುವುದು ಏಕಂದರೆ ಕೆಲವು ನೆಂಟರಿಗೆ ಅಲ್ಲಿಂದಿಲ್ಲಿಗೆ ಚಾಡಿಮಾತು ಹೇಳಿ ಜಗಳ ತಂದು ಹಾಕುವ ಸ್ವಭಾವಿರುತ್ತದೆ,ಆ ಸ್ವಭಾವದವರನ್ನು ದೂರವಿರಿಸುವ ಅಭ್ಯಾಸ ಆತಿಥ್ಯ ನೀಡುವವರಿಗೆ ಇರುತ್ತದೆ ಹಾಗಾಗಿ ಅಂತಹ ನೆಂಟರು ತಮ್ಮ ಮನೆಗೆ ಬರದಂತೆ ಕಾರಣ ಹುಡುಕುತ್ತಾರೆ.ಒಂದುವೇಳೆ ಬಂದರೂ ಮರ್ಯಾದೆಯಿಂದಲೇ ಚೆನ್ನಾಗಿ ಆತಿಥ್ಯ ಮಾಡಿ ಕಳಿಸುತ್ತಾರೆ.  ಇನ್ನು ಹಲವರಿಗೆ ತಮ್ಮ ಆಫೀಸ್ ಹಾಗೂ ಮನೆಯ ಕೆಲಸಗಳ ಮಧ್ಯೆಯೂ ಅವರೆಲ್ಲರ  ಇಷ್ಟಾನುಸಾರವಾಗಿ ನೆಂಟರ ಬೇಕು ಬೇಡಗಳನು ಪೂರೈಸಲಾದೀತೇ ಅನ್ನುವ ಆತಂಕ ಮನಸಲಿ‌ ಕಾಡುತ್ತದೆ.ಪಾಪ ಚೆನ್ನಾಗಿ ಆತಿಥ್ಯ ಮಾಡಿ ಕಳಿಸಿದರೂ ಸಹ ಅದೇ ನೆಂಟರು ಹೊರಗೆ ಬಂದಾಗ ತಮ್ಮ ಬಗ್ಗೆ ಹಾಗೂ ತಮ್ಮ ಆತಿಥ್ಯದ ಬಗ್ಗೆಯೇ ಕೊಂಕು ಅಥವಾ ವ್ಯಂಗ್ಯದ ಮಾರಾಡುತ್ತಾರೆನ್ನುವ ಆತಂಕದಲಿ ದಿನ ದೂಡುತ್ತಾರೆ…ಹಾಗಾಗಿ ನೆಂಟರ ಬರುವಿಕೆ ಇಂದಿನ ದಿನಗಳಲಿ ಬಲು ಅಪರೂಪವಾಗಿದೆ ಅಂತಲೇ ಹೇಳಬಹುದು.ಅವರವರ ದೃಷ್ಟಿಕೋನದಲ್ಲಿ ನೋಡಿದಾಗ  ಇದರಲಿ ಯಾರದೂ ತಪ್ಪಿಲ್ಲವೆಂತಲೂ ಅನಿಸುವುದು.ಆದರೂ ಮನೆಗೆ ನೆಂಟರ ಆಗಮನ ಚೈತನ್ಯದಾಯಕವೂ ಹೌದು ಜೊತೆಗೆ ಹಲವು ವಿಚಾರಗಳ ವಿನಿಮಯವಾಗುವಿಕೆ ಮನಸಿನ ಏಕಾತಾನತೆಗೆ ಒಳ್ಳೆಯ ಮದ್ದು ಆಗುವುದಂತೂ ಸತ್ಯ. ನೆಂಟಸ್ತನವನು ಉಳಿಸುವ ನಡೆಯನು ವಿವರಿಸುತಾ ಹೀಗೂ ಯೋಚಿಸಬಹುದು..ನೆಂಟರು ಒಂದು ಮದುವೆಯ ಸಮಾರಂಭದಲ್ಲೊ ಅಥವಾ ಒಂದು ಹೋಮ- ಹವನದ ಕಾರ್ಯಕ್ರಮದಲ್ಲೋ  ಸೇರಿದಾಗ ಎಲ್ಲರಿಗೂ ತಮ್ಮ ಕುಟುಂಬದ ಈ ಐಕ್ಯತೆಯನು ಕಂಡು ಸಂತಸವಾಗುತ್ತದೆ.ಕುಟುಂಬದ ಹೊಸ ಸದಸ್ಯರನು ಹಳೆಯ ತಲೆಮಾರಿನವರು ತಮ್ಮ‌ ಕಾಲವಿನ್ನು ಮುಗಿಯಿತಪ್ಪಾ ಎನ್ನುತಾ ತುಂಬು ಮನಸಿಂದ ಅವರೆಲ್ಲರ ಪರಿಚಯ ಮಾಡಿಕೊಡುವುದನು ಕಂಡು ಒಮ್ಮೆಗೇ ಮನಸು ಭಾವುಕವಾಗುತ್ತದೆ. ಮುಂದೊಂದಿನದ  ಸಮಾರಂಭದಲಿ ಈ ಹಿರಿಯ ತಲೆಮಾರಿನವರು ಕಣ್ಮರೆಯಾಗದಿದ್ರೆ ಸಾಕು ಅಂತಲೂ ಮನಸು ಹಾರೈಸುತ್ತದೆ. ಜೊತೆಗೆ ನೆಂಟಸ್ತನ ಕುಂಠಿತವಾಗುವಿಕೆಯ ಮತ್ತೊಂದು ಮುಖ್ಯ ಕಾರಣವೆಂದರೆ..ಮೊಬೈಲ್ ಚಟ ಹಾಗೂ ಸಾಮಾಜಿಕ ತಾಣವೆನ್ನಬಹುದು. ಇತ್ತೀಚೆಗಿನ ಮೊಬೈಲಿನ YouTube Shorts ವೀಕ್ಷಣೆಯ ಮಟ್ಟ ಯಾವ ಯಾವ ರೀತಿಯಲಿ ಏರಿದೆಯೆಂದರೆ ಇಂದಿನ ಯುವಜನತೆ,ಹದಿಹರೆಯದ ಮಕ್ಕಳು,ಮಧ್ಯೆ ವಯಸ್ಸಿನ ಹೆಂಗಸರು, ಅರ್ಧ ಶತಕದ ಅಂಚಲಿರುವ ಗಂಡಸರೆನ್ನುವಭೇಧಭಾವವಿಲ್ಲದೆ ಈ ಚಟ ಆವರಿಸಿಕೊಂಡು ಬಿಟ್ಟಿದೆ. ಇದಕ್ಕೆ ದಾಸರಾಗಿರೊದರಿಂದ  ಮನೆಗೆ ಯಾರು ಬಂದರೂ ಅಥವಾ ಯಾವ ಫಂಕ್ಷನ್ ಗೆ ಹೋಗಬೇಕೆಂದರೂ ಇದಕೆ ಅಡ್ಡಿಯಾದೀತೆಂಬ ನೆಪವೊಡ್ಡಿ ಹೋಗದೇ ಇದ್ದುಬಿಡುತ್ತಾರೆ.ಇಂತಹ ಚಟದಿಂದ ಹೊರ ಬಂದರೆ ಮಾತ್ರ ಸಂಬಂಧಗಳ ಉಳಿಯುವಿಕೆ ಸಾಧ್ಯವಾಗುತ್ತದೆ.ಇಲ್ಲದಿದ್ರೆ ತಾವಾಯ್ತು ತಮ್ಮ ಪಾಡಾಯ್ತು ಅನ್ನುವ ಸ್ಥಿತಿಗೆ ಈ Gen Z ಹೋಗುವುದರಲಿ ಹೆಚ್ಚು ಕಾಲ ಉಳಿದಿಲ್ಲ ಅನ್ನಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಸಮಾಜದಲಿ ಒಳ್ಳೆಯ ಮನಸ್ಸಿರುವ ಎಲ್ಲರ ಜೊತೆಗೆ ಅದರಲೂ ತಮ್ಮ ಕುಟುಂಬದ ತೀರ ಹತ್ತಿರದ ನೆಂಟರಿಷ್ಟರ ಜೊತೆಯಲಿ ಬೆರೆತಾಗ ಮಾತ್ರ ಸಾಮರಸ್ಯದಿಂದ ಬಾಳು ಸಾಗುತಾ ನಮ್ಮೆಲ್ಲರ ಬಾಳ್ವೆ ಸುಂದರವೆನಿಸುತ್ತದೆ.ಇಲ್ಲವಾದರೆ ಏಕಾತಾನತೆಯ ಏಕಾಂತ ಕಾಡಿ,ಬೇರೆ ಯಾರ ಬಗ್ಗೆಯೂ ಯೋಚಿಸದಂತಹ ಸ್ವಾರ್ಥದತ್ತ ಮನಸು ಸಾಗುತ್ತದೆ. ನಮ್ಮ ಬದುಕು ಇವೆರಡು ದೃಷ್ಟಿಕೋನದಲಿ ನೋಡಿದಾಗ ಅದು  ಹೇಗಿರಬೇಕು ಅನ್ನುವ ಆಯ್ಕೆ ನಮ್ಮದೇ! ಸುಮನಾ ರಮಾನಂದ, ಕೊಯ್ಮತ್ತೂರು 

“ನೆಂಟಸ್ತನದ ಸಂಬಂಧಗಳ ನಡೆ” ವಿಶೇಷ ಲೇಖನ ಸುಮನಾ ರಮಾನಂದ Read Post »

ನಿಮ್ಮೊಂದಿಗೆ

ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಅವರ ಕವಿತೆ, “ಚಳಿ-ಚಳಿ”

ಕಾವ್ಯ ಸಂಗಾತಿ ಶರಣಪ್ಪ ತಳ್ಳಿ ಕುಪ್ಪಿಗುಡ್ಡ “ಚಳಿ-ಚಳಿ”   ಎಲ್ಲವನು ಕಳೆದುಕೊಂಡೆತನುವು ಮನವುಒಲವು ಬಲವುಈ ಚಳಿಯರಾತ್ರಿಗೆ! ಏಕಾಂತದ ನಡುಕಎದೆಯೊಳಗೆವಿರಹದ ಉರಿಅರಿವು ಜರಿದುಮರೆವು ಮಸೆದು ಹೊರಗೆ-ರಂಧ್ರ ಕೊರೆವ ಚಳಿಒಳಗೆ-ದಹಿಸುವ ನಿನ್ನನೆನಪ ಸುಳಿ ನೀನಿರದ ವೇಳೆಜೀವ ಬಾದಿತನಿದಿರೆ ಬಾರದೆನೆಮ್ಮದಿ ಗದ್ಗದಿತ ಮೆಲ್ಲುವ ವೇದನಕನ್ನಡಿ ನಗುತಕಾಯಿಲೆಗೆ ಕೆಡವಿದಮೇಧಾವಿ ಶಕುನ ಗಡಿಯಾರದ ಮುಳ್ಳುಗಳಶಬ್ಧವು-ಕಿವಿಯೊಳಗೆಸಲಾಕೆ ಬಾರಿಸಿದ ಹಾಗೆಮಿಣುಕು ದೀಪಅಣಕಿಸಿದ ಹಾಗೆ ನೀನಿರದಈ ಚಳಿಯ ರಾತ್ರಿಹಿಂಡುತಿವೆಕರಳು ನರಳಗಳನುಹಿಮದ ಗರ್ಭದೊಳಗೆಮಲಗಿಸಿ ——– ಶರಣಪ್ಪ ತಳ್ಳಿ ಕುಪ್ಪಿಗುಡ್ಡ

ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಅವರ ಕವಿತೆ, “ಚಳಿ-ಚಳಿ” Read Post »

ಕಾವ್ಯಯಾನ

ವಿಜಯಲಕ್ಷ್ಮಿ ಹಂಗರಗಿ “ಅಕ್ಕ ,ನೀನು ಮಹಾದೇವಿ”

ಕಾವ್ಯ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ಅಕ್ಕ ,ನೀನು ಮಹಾದೇವಿ” 12ರ ಶತಮಾನದಲ್ಲಿ ಉದಯಿಸಿಹೆಣ್ಣು ಕುಲಕ್ಕೆ ಮಾದರಿಯಾಗಿಹತ್ತು ಹಲವು ಕಷ್ಟಗಳನ್ನು ಸರಿಸಿದಿಟ್ಟ ಹೆಜ್ಜೆ ಇಟ್ಟು ಮುನ್ನಡೆದಿ ಅಕ್ಕ// ಯಾರ ಮಾತಿಗೂ ಕಿವಿಗೊಡದೆಯಾರ ಹಂಗಿಗೂ ಒಳಗಾಗದೆಯಾರ ಆಸರೆಯನ್ನು ಬಯಸದೆಚನ್ನಮಲ್ಲಿಕಾರ್ಜುನನ್ನು ಅರಸಿದೆ ಅಕ್ಕ// ಅರಮನೆ ಅರಸನನ್ನು ಬದಿಗಿರಿಸಿಲೌಕಿಕಸುಖ ಸಂಪತ್ತನ್ನು ಧಿಕ್ಕರಿಸಿಜಗದ ಜಂಜಾಟವ ಹಿಂಗಳಿಸಿಅರಸುತ್ತ ನಡೆದೆ ಅಕ್ಕ// ಅಲ್ಲಮನ ಅಧ್ಯಕ್ಷತೆಯಲ್ಲಿಬಸವಣ್ಣನ ಅನುಭವತೆಯಲ್ಲಿನೀ ಅರಸಿ ಶರಣರ ಸಂಗಡದಲ್ಲಿಕಲ್ಯಾಣದ ಕಾಶಿಗೆ ತೆರಳಿದೆ ಅಕ್ಕ// ಆಶೆ ಆಕಾಂಕ್ಷೆಯನ್ನು ಬದಿಗಿಟ್ಟುಸುಖ ಸುಪ್ಪತ್ತಿಗೆಯನ್ನು ಸರಿಸಿಟ್ಟುಚೆನ್ನಮಲ್ಲಿಕಾರ್ಜುನನ್ನು ಅರಸುತ್ತಾಕದಳಿವನ ಕಾಲಿಟ್ಟು ಲಿಂಗೈಕ್ಯಾದೆ ಅಕ್ಕ// ವಿಜಯಲಕ್ಷ್ಮಿ ಹಂಗರಗಿ

ವಿಜಯಲಕ್ಷ್ಮಿ ಹಂಗರಗಿ “ಅಕ್ಕ ,ನೀನು ಮಹಾದೇವಿ” Read Post »

ಕಾವ್ಯಯಾನ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಕಾವ್ಯ ಸಂಗಾತಿ ಡಾ ಅನ್ನಪೂರ್ಣ ಹಿರೇಮಠ ಗಜಲ್ ನಿನ್ನೊಡನಾಟದ ಕಡಲ ಹಾಯ್ ದೋಣಿಯಲಿ ವಿಹರಿಸುವಾಸೆಸರಸ ಸಲ್ಲಾಪ ಸಖ್ಯ ಸವಿಯ ತೋಳ ಸೆರೆಯಲಿ ಮೈಮರೆವಾಸೆ ಬಾಹುಬಂಧನದಿ ಬಂಧಿಯಾಗಿ ಬಯಕೆ ತೊಟ್ಟಿಲಲಿ ತೂಗುವಾಸೆಓಡೋ ಮೋಡ ಮೆದ್ದೆ ಮೇಲಿಹ ಸ್ವರ್ಗ ಪಥದಲಿ ಪಯಣದಾಸೆ ಚುಕ್ಕಿತಾರೆ ಚಂದ್ರನೂರಿಗೆ ಇಂದ್ರನ ಬೆಳ್ಳಿ ರಥದಲಿ ಹೋಗುವಾಸೆಹೃದಯದ ಅರಮನೆಯ ಪುಟ್ಟ ಗರ್ಭ ಗುಡಿಯಲಿ ನಿದ್ರಿಸುವಾಸೆ ಪಚ್ಚೆ ಮಲ್ಲಿಯ ಹಚ್ಚಹಸುರಿನ ನಿನ್ನೆದೆ ಬನದಲಿ ಹೂವಾಗುವಾಸೆಶುಭ್ರ ಹೊಳಪಿನ ಹಂಸವಾಗಿ ಕಣ್ಣ ಕೊಳದಲಿ ಈಜಾಡುವಾಸೆ ಮೇಘಮಂದಾರದ ನಾದತರಂಗ  ವೀಣೆಯಲಿ ಹಾಡಾಗುವಾಸೆಭೃಂಗದೊಲವಿನ ಮಕರಂದದ ಸಿಹಿ ಜೇನಿನಲಿ ಜಿನುಗುವಾಸೆ ಹೊನ್ನಾಸೆ ಚಿತ್ತಾರದ ಬಣ್ಣ ಬಣ್ಣದೊಕುಳಿ ಬೆಡಗಲಿ ಮಿನುಗುವಾಸೆಪ್ರಣಯ ಪಕ್ಷಿಗಳಂತೆ ಬಾನಂಗಳದ ಬಯಲಲಿ ಹಾರಾಡುವಾಸೆ ಅನುಳ ಜನುಮದ ಗೆಳೆಯನೇ ತನುವ ತುಡಿತದಲಿ ಬಚ್ಚಿಡುವಾಸೆಮಂಪರಿನ ಪ್ರೇಮಾಮೃತದ ಹೊನ್ನ ಗಿಂಡಿಯಲಿ ನಶೆಯಾಗುವಾಸೆ ಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »

ಕಥಾಗುಚ್ಛ

“ಏ ಭೇಟಾ ಸಬ್ಜಿ ಲೇ”ಡಾ. ರೇಣುಕಾ ಹಾಗರಗುಂಡಗಿ ಅವರ ಕಥೆ

ಕಥಾ ಸಂಗಾತಿ ಡಾ. ರೇಣುಕಾ ಹಾಗರಗುಂಡಗಿ “ಏ ಭೇಟಾ ಸಬ್ಜಿ ಲೇ” ಬೆಗಳಾಗುತ್ತಲೆ ಹೊರಗಡೆ “ಬೇಟಾ ಸಬ್ಜಿ ಲೇ” ಅಂತ ಕರೆಯುವ ಕೂಗಿನ ಧ್ವನಿಯ ಒಡತಿ ಹೀರಾ ನಿಜವಾಗಿಯೂ ಸೌಂದರ್ಯದ ಖಣಿಯೇ ಸರಿ.  ಸುಕ್ಕುಗಟ್ಟಿದ ಆಕೆಯ  ಚರ್ಮ,ಮುಖದ ತುಂಬೆಲ್ಲ ನೆರಿಗೆಗಳಿದ್ದರೂ ಚಿಕ್ಕಚಿಕ್ಕ ಕಣ್ಣುಗಳು ಮೀಟುಕಿಸುತ್ತ ಆ ಲಂಬಾಣಿಯ ಶ್ರೀಮಂತದ ಉಡುಪು ಅಲ್ಲಲ್ಲಿ ಸ್ವಲ್ಪ ತೇಪೆಹಚ್ಚಿದ್ದರು ನಾನಿಯ ಚೆಲುವಿನ ಮುಂದೆ ಯಾವದೂ ಲೆಕ್ಕಕ್ಕಿಲ್ಲ. ಅಂಥ ಸೌಂದರ್ಯವತಿ ಹೀರಾ ನಾನಿ.                ಇಳೆ ವಯಸ್ಸಿನಲ್ಲಿರುವ ಈ ತಾಯಿಗೆ ದುಡ್ಡಿನ ಅವಶ್ಯಕತೆಯಾದರೂ ಯಾಕೆ  ಅಂತ ನಾನು ಹಾಗೆ ತೆಲೆಕೆಡಿಸಿಕೊಳ್ಳುತ್ತಲೆ ಇರುವಾಗ  ನನ್ನ ಪಕ್ಕದ ಮನೆಯ ಮಗು ಹೇಳ್ತು ಆಂಟಿ ಈ ಅಜ್ಜಿನ ನೀವು ಯಾರಂತ ಭಾವಿಸಿರುವಿರಿ, ಅವರು ರೋಹಿತ್ ಅಣ್ಣನ ನಾನಿ ಅಂತ, ಅದಕ್ಕೆ ನಾನು ಮತ್ತೆ ಯಾಕೆ ಇವರು ಹೀಗೆ ಬರ್ತಾರೆ ಅಂತ ಥಟ್ಟನೆ ಕೇಳಿದ ನನ್ನ ಪ್ರಶ್ನೆಗೆ ಮಗು ಹೇಳ್ತು ಆ ಅಜ್ಜಿ ರೋಹಿತ್ ಅಣ್ಣನ ಮಮ್ಮಿ ಅವರ ಮಮ್ಮಿ. ಅವರ ಮಕ್ಕಳು ಅವರಿಗೆ ಮನೆಯಿಂದ ಹೊರ ದೂಡಿದ್ದಾರೆ ಅದಕ್ಕೆ ಅಜ್ಜಿ ಈಗ ಮಗಳ ಮನೆಯಲ್ಲಿದ್ದಾರೆ. ಹಾಗೆ ಯಾಕೆ ಬಿಟ್ಟಿಕೂಳ ತಿನ್ನೋದು ಅಂತ ಸಬ್ಜಿ ಮಾರ್ತಾರೆ ಎಂದು ಮಗು ಹೇಳ್ತಾ ಓಡಿಹೋಯಿತು.                ನನಗಂತೂ ತುಂಬಾ ಬೇಸರವಾಯಿತು. ಮಕ್ಕಳನ್ನ ಬೆಳೆಸೋದರಲ್ಲಿ  ಪಾಲಕರು ಎಲ್ಲಿ ಎಡವುತ್ತಿದ್ದಾರೆ ಅಂತ ಯೋಚಿಸುತ್ತಲೇ ಹಾಗೆ ಫ್ಲ್ಯಾಶ್ ಬ್ಯಾಕ್ ಹೋದೆ. ಇದು ಈ ಒಂದು ಮನೆಯ ಹೀರಾ ನಾನಿಯ ಕಥೆ ಅಲ್ಲ.ಹಿಂಥ ಅನೇಕ ಹೀರಾ ನಾನಿಯರು ಶ್ರೀಮಂತ, ಬಡವರೆನ್ನದೆ ಎಲ್ಲಡೆಯು   ಮೂಲೆಗುಂಪಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಕಾರಣವಾದರೂ ಏನು? ಅಂತ ಯೋಚಿಸುತ್ತಲೇ ಇರುವಾಗ ನೆನಪಾದದ್ದು ನಾನು ಕಂಡ ಒಂದು ಮಧ್ಯಮ ವರ್ಗದ ಕುಟುಂಬ. ಅಲ್ಲಿ ಆ ದಂಪತಿಗಳು ಮಕ್ಕಳಿಲ್ಲದೆ ಹರಕೆಯನ್ನ ಹೊತ್ತು ಹೆತ್ತ ಮಕ್ಕಳೆ ತಮ್ಮ ತಂದೆತಾಯಿಗೆ ಇಳೆ ವಯಸ್ಸಲ್ಲಿ ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ಸ್ವಾರ್ಥದ ಮದ, ಬಯಕೆಯ ಹುಚ್ಚಾಟ,ತಮ್ಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುತ್ತಿರುವುದನ್ನ ಮನಗಂಡು ಇಡೀ ಕುಟುಂಬವನ್ನೆ ಬಿರುಗಾಳಿಗೆ ಸಿಲುಕಿಸಿ  ಆಸ್ತಿ, ಅಂತಸ್ತು ಅಂತ ಮನೆ ಒಡೆಯುವ ಕಾರ್ಯಕ್ಕೆ ಮುಂದಾಗುತ್ತಾರೆ.   ತಮಗೆ ಬೇಕಾದ ಮಕ್ಕಳ ಪರವಹಿಸಿ ದಂಪತಿಗಳಿರ್ವರೂ  ಬೇರೆಯಾಗುತ್ತಾರೆ.ಆಸ್ತಿಗಾಗಿ ಮಕ್ಕಳ ಕಿರಿಕಿರಿ ಅನುಭವಿಸುತ್ತಲೇ ಯಜಮಾನ ತೀರಿಹೋಗುತ್ತಾರೆ. ಮತ್ತೊಬ್ಬ ಮಗ ತಾಯಿಯನ್ನು ತಿನ್ನುವ ಎಣ್ಣೆ ಕೈತಪ್ಪಿ ಚಲ್ಲಿದ್ದಕ್ಕೆ ಮುಖಕ್ಕೆ ಉಗಿದು ಈಗ ಅಡುಗೆ ಹೇಗೆ ಮಾಡೋದು ಅಂತ ಅವಾಚ್ಯ ಮಾತುಗಳನ್ನೆಲ್ಲ ಅಂದು ರೇಲ್ವೆ ಹಳಿಯ ಮೇಲೆ ಬಿದ್ದು ಸಾಯಿ ಅಂತ ಮಗ ಕಿರುಚಾಡಿದರು ಆ ತಾಯಿ ಮಗನಿಗೆ  ಹಿಂದಿರುಗಿಸಿ ಒಂದು ಮಾತನಾಡದೆ ದುಃಖವನ್ನ ನುಂಗಿದಳು. ಇವಳೂ ಮತ್ತೊಬ್ಬ ಹೀರಾ ನಾನಿಯೇ..ಸರಿ ..ಹಿಂತಹ ಅನೇಕ ಅವಮಾನಗಳು ಸಹಿಸುತ್ತ ಮಗನ ಮೇಲಿರುವ ಮಮಕಾರಕ್ಕೆ ಮೂಕವಿಸ್ಮಿತಳಾಗಿ ಎಲ್ಲವೂ ಸಹಿಸುತ್ತ ಕುಗ್ಗಿಹೋದರು ಮಕ್ಕಳ ಬಗ್ಗೆ ಒಂದು ದಿನವು ಮತ್ತೊಬ್ಬರಲ್ಲಿ ದೂರ ಹೇಳಲಿಲ್ಲ.               ಮಕ್ಕಳ ಭವಿಷ್ಯಕ್ಕಾಗಿ ತಂದೆತಾಯಿಗಳು ತಾವು ಅರೆಹೊಟ್ಟೆ ತಿಂದು ನಾಳೆ ಮಕ್ಕಳಿಗೆ ಏನಾದರೂ ಸಹಾಯ ಆಗಬಹುದು ಅಂತ ಎಲ್ಲವನ್ನು ಕೂಡಿಟ್ಟು ತಮ್ಮ ಆಸೆ,ಆಕಾಂಕ್ಷೆಗಳನ್ನೆಲ್ಲ ತ್ಯಾಗಮಾಡಿ ತಮ್ಮ ಇಡೀ ಜೀವನವನ್ನೆ ಮಕ್ಕಳಿಗಾಗಿ ಮೂಡುಪಾಗಿಡುತ್ತಾರೆ . ಮಕ್ಕಳು ಸಹ ಹೆತ್ತವರ  ಪರಿಶ್ರಮವನ್ನು ಅರಿಯಬೇಕು. ಹಿರಿಯರನ್ನು ಕಡೆಗಾಣಿಸದೇ ಅವರನ್ನು ಪ್ರೀತಿಯಿಂದ ಅಪ್ಪಿಕೊಳ್ಳಬೇಕಿದೆ.ನಮಗಾಗಿ ತಮ್ಮದೆಲ್ಲವನ್ನು ಧಾರೆಯೆರೆದ ದೇವತೆಗಳನ್ನು ನಮ್ಮ ಕಣ್ಣುರೆಪ್ಪೆಯಂತೆ ಕಾಪಾಡಿಕೊಳ್ಳಬೇಕಿದೆ. ಅವರಿಂದಲೇ ನಾವು ಎಂಬುದು ಮನಗಾಣಬೇಕಿದೆ. ನಮ್ಮದೆಲ್ಲವನ್ನು ಅವರಿಗಾಗಿ ಸಮರ್ಪಿಸಬೇಕೆಂದೇನಿಲ್ಲ, ಅದು ಅವರ ಬಯಕೆಯೂ ಅಲ್ಲ. ಅವರಿಗೆ ಬೇಕಾದದ್ದು ನಮ್ಮ ಪ್ರೀತಿ,ಕಾಳಜಿ,ನಮ್ಮ ಮಕ್ಕಳ ಪ್ರೀತಿ ಅಷ್ಟು ಕೊಟ್ಟರೆ ಅವರಿಗೆ ಅದೇ ಸ್ವರ್ಗ ಅಲ್ಲವೇ? ಮನುಷ್ಯರಾಗಿ ಹುಟ್ಟಿದ ಮೇಲೆ ಮನುಷ್ಯರಂತೆ ಬಾಳಬೇಕಲ್ಲವೇ? ಈ ಮೂಲಕವಾದರೂ ಅಲ್ಲಲ್ಲಿ ಕಂಡು ಬರುವ ಹೀರಾ ನಾನಿಯರನ್ನು  ಕಾಣದ ಹಾಗೆ ಮಾಡುತ್ತ ನಮ್ಮ ಜೀವನ ಸಾರ್ಥಕಗೊಳಿಸೋಣ ಅಂತ.. ಡಾ. ರೇಣುಕಾ ಹಾಗರಗುಂಡಗಿ

“ಏ ಭೇಟಾ ಸಬ್ಜಿ ಲೇ”ಡಾ. ರೇಣುಕಾ ಹಾಗರಗುಂಡಗಿ ಅವರ ಕಥೆ Read Post »

ಕಾವ್ಯಯಾನ

ಪಂದ್ಯ0ಡ ರೇಣುಕಾ ಸೋಮಯ್ಯ ಕವಿತೆ, ನೆನಪಿನ ಬುತ್ತಿ

ಕಾವ್ಯ ಸಂಗಾತಿ ಪಂದ್ಯ0ಡ ರೇಣುಕಾ ಸೋಮಯ್ಯ ನೆನಪಿನ ಬುತ್ತಿ ನೂರರು ನೆನಪಿನ ಬುತ್ತಿಗಳು ಬಿಚ್ಚುತಿವೆಇಂದಿನ ಮಕ್ಕಳ ನೋಡುತಲಿlಹಾರುತ ಓಡುತ ಕುಣಿಯುತಲಿದ್ದೆವು ಅಂದುಮನದೊಳು ಸಂತಸ ಚಿಮ್ಮುತಲಿll೧ll ಇರಲಿಲ್ಲವೆ ಅಂದು ಮೊಬೈಲು ಕೈಯ್ಯಲಿಇದ್ದುದು ಚಿಲುಕಿ-ಬುಗುರಿ ಲಗ್ಗೋರಿ lಮರಕೋತಿ ಆಟದಿ ಸಿಗುತಿದ್ದ ಸಂತಸವಇಂದು ಎಲ್ಲಿ ಹುಡುಕಲಿl೨l ಮಾವು ಕಿತ್ತಳೆ ಹಣ್ಣನು ಕೀಳುತತಿನ್ನುತಲಿದ್ದೆವು ಒ0ದಾಗಿlಕಾವಲುಗಾರನ ಕಣ್ಣನು ತಪ್ಪಿಸಿಓಡುತಲಿದ್ದೆವು ಬಿರುಸಾಗಿll೩ll ಕೆಸರುಗದ್ದೆಯ ಮೇಲೆಏಳು-ಬೀಳುತಲಿದ್ದೆವುಬಿತ್ತನೆ ಮಾಡುವಸಮಯದಲ್ಲಿlಹಸಿವಿನ ಚಿಂತೆಯು ಸುಳಿಯಲೇ ಇಲ್ಲತು0ಟಾಟವಾಡುವ ಭರ ದಲ್ಲಿll೪ll ಕಾಗದ ದೋಣಿಯ ತೇಲಿಸಿ ನೀರಲಿನೋಡುತಲಿದ್ದೆವು ಬದಿಯಲ್ಲಿlಸಾಗುತಲಿದ್ದ ದೋಣಿಯು ಮಗುಚಲುಮಾಂಕಾಯಿತು ಮೊಗವು ಕ್ಷಣದಲ್ಲಿll೫ll ಮರೆಯಲಿ ಹೇಗೆ ಅಂದಿನಆ ದಿನಕೋಟಿ ಕೊಟ್ಟರು ಸಿಗಕಿಲ್ಲlಸರಿಯಿತು ಕಾಲವು ಎಷ್ಟು ಬೇಗನೆವಯಸ್ಸು ಮಾಸಿದ್ದು ತಿಳಿಯಲೇಯಿಲ್ಲll೬llಆದಿ ಹಾಗೂ ಅಂತ್ಯ ಪ್ರಾಸದಲ್ಲಿ ಪಂದ್ಯ0ಡ ರೇಣುಕಾ ಸೋಮಯ್ಯ ಹೊಸೂರ್ ಅಮ್ಮತ್ತಿ ಕೊಡಗು

ಪಂದ್ಯ0ಡ ರೇಣುಕಾ ಸೋಮಯ್ಯ ಕವಿತೆ, ನೆನಪಿನ ಬುತ್ತಿ Read Post »

You cannot copy content of this page

Scroll to Top