ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

“ಪೊಡವಿ ಸಗ್ಗ” ಏಳೆ ಕವನ-ಗುಣಾಜೆ ರಾಮಚಂದ್ರ ಭಟ್

ಕಾವ್ಯ ಸಂಗಾತಿ ಗುಣಾಜೆ ರಾಮಚಂದ್ರ ಭಟ್ “ಪೊಡವಿ ಸಗ್ಗ” ಏಳೆ ಕವನ-*ಛಂದಸ್ಸು: ಏಳೆ:೫೪೩/543/ ಜಗವಿದು ನಮ್ಮದು ಸೊಗಸಿದೆ ಕಾಣಲುಖಗಗಳ ಕಂಡು ಗಗನದಿ.. ಮೂಡುವ ನೇಸರ ಬಾಡದ ಚೇತನಕಾಡಿನ ಹಸಿರು ನಂದನ .. ನೀಲಿಯ ಕಡಲಿದೆ ನಾಲೆಯ ಹರಿವಿದೆಕಾಲನ ನಡೆಯು ಸಂತತ .. ಹರಿಯುವ ನದಿಗಳು ಕರೆಯುವ ಹಸುಗಳುಸುರಿಸುವ ನೋಟ ಸುಂದರ ಕೆಂಪಿನ ಹೂಗಳು ಕಂಪನು ಪಸರಿಸಿತಂಪನು ನೀಡಿ ಸಾನಂದ.. ಬಣ್ಣದ ಕುಸುಮವು ಕಣ್ಣನು ತುಂಬುತಬಣ್ಣಿಸೆ ಕವನ ಹೊಳಪಂತೆ.. ಮಿಗಗಳು ಕೋಟಿಯ ಅಗಣಿತ ಲೆಕ್ಕದಿಮಿಗಿಲಾದ ಸೃಷ್ಟಿ ವಿಸ್ಮಯ ಜೀವಿಗೆ ಬಾಳಲು ನಾವಿಹ ಭೂಮಿಯೆತಾವಿದು ಸಗ್ಗ ನಮಗೆಲ್ಲ.. ಮಾನವ ಶ್ರೇಷ್ಠನು ದಾನವನಾದರೆಕಾನನ ರಾಜ್ಯ ತಪ್ಪದು.. ——– ಗುಣಾಜೆ ರಾಮಚಂದ್ರ ಭಟ್

“ಪೊಡವಿ ಸಗ್ಗ” ಏಳೆ ಕವನ-ಗುಣಾಜೆ ರಾಮಚಂದ್ರ ಭಟ್ Read Post »

ಕಾವ್ಯಯಾನ

“ನೀತಿ ನಿಯಮ” ಹಮೀದ್ ಹಸನ್ ಮಾಡೂರು

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ನೀತಿ ನಿಯಮ” ಹಗೆಯ ಸಾಧಿಸ ಬೇಡ,ಜಿದ್ದಿಗೆ ಹೊರಳಾಡ ಬೇಡ,ತಗ್ಗಿ ಮುನ್ನಡೆದರೆ ಜಯವಿದೆ,! ಶತ್ರುತ್ವವೆಂದೂ ಬೇಡ,ಸಂಶಯಕ್ಕೆ ಎಡೆಯು ಬೇಡ,ಅರಿತು ಬಾಳಿದಾಗ ಜಯವಿದೆ,! ಮಿತ್ರತ್ವವೇ ಮುತ್ತಿನ ಹಾರ,ದುಷ್ಟ ಶಕ್ತಿಗಳ ಅದು ಸಂಹಾರ,ಬೆರೆತು ಬಾಳಲು ನಮಗೆ ಜಯವಿದೆ.! ದೇವನೆಂದೂ ಗೊಂದಲವಲ್ಲ,ಧರ್ಮವೆಂದೂ ಕಚ್ಚಾಡಿ ಕೊಳ್ಳಲಲ್ಲ,ನೀತಿ ನಿಯಮ ಪಾಲಿಸಲು ಜಯವಿದೆ.! ಹಮೀದ್ ಹಸನ್ ಮಾಡೂರು.

“ನೀತಿ ನಿಯಮ” ಹಮೀದ್ ಹಸನ್ ಮಾಡೂರು Read Post »

ಇತರೆ, ಗಾಂಧಿ ವಿಶೇಷ

ಗಾಂಧೀಜಿಯವರ “ಸತ್ಯದೊಂದಿಗೆ ನನ್ನ ಪ್ರಯೋಗಗಳ ಕಥೆ” ಆತ್ಮಚರಿತ್ರೆಯ ಶತಮಾನೋತ್ಸವ,ಡಾ.ಎಸ್.ಬಿ. ಬಸೆಟ್ಟಿ

ಪುಸ್ತಕ ಸಂಗಾತಿ ಗಾಂಧೀಜಿಯವರ “ಸತ್ಯದೊಂದಿಗೆ ನನ್ನ ಪ್ರಯೋಗಗಳ ಕಥೆ” ಆತ್ಮಚರಿತ್ರೆಯ ಶತಮಾನೋತ್ಸವ ಡಾ.ಎಸ್.ಬಿ. ಬಸೆಟ್ಟಿ “ನನ್ನ ಜೀವನವೇ ನನ್ನ ಸಂದೇಶ”-ಮಹಾತ್ಮ ಗಾಂಧೀಜಿ. ‘ಸತ್ಯದೊಂದಿಗೆ ನನ್ನ ಪ್ರಯೋಗಗಳ ಕಥೆ ಅಥವಾ ಆತ್ಮಚರಿತ್ರೆ’ ಎಂಬ ಪುಸ್ತಕವು ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯಾಗಿದ್ದು, ಇದು ಪ್ರಕಟಗೊಂಡು ೨೦೨೫ಕ್ಕೆ ನೂರು ವರ್ಷಗಳಾಗಿವೆ. ಇಂದು ಈ ಆತ್ಮಚರಿತ್ರೆ  ಶತಮಾನ ಪೂರ್ಣಗೊಂಡ ಸಂದರ್ಭದಲ್ಲಿ, ಅದು ಮಾನವ ಸಮಾಜದ ಅಕ್ಕಸಾಕ್ಷಾತ್ಕಾರದ ದಾರಿದೀಪವಾಗಿದೆ. ಗಾಂಧಿಯವರು ‘ನನ್ನ ಸತ್ಯದ ಪ್ರಯೋಗಗಳು’ ಎಂದು ಹೆಸರಿಸಿದ್ದ ಆತ್ಮಚರಿತ್ರೆಯನ್ನು ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಮತ್ತು ಅತ್ಯಂತ ಪ್ರಭಾವಶಾಲಿ ಪುಸ್ತಕಗಳಲ್ಲಿ ಒಂದೆಂದು ಪರಿಗಣಿಸಬಹುದು. ಸ್ವಾಮಿ ಆನಂದ್ ಮತ್ತು ಗಾಂಧೀಜಿಯವರ ಇತರ ನಿಕಟ ಸಹೋದ್ಯೋಗಿಗಳ ಒತ್ತಾಯದ ಮೇರೆಗೆ ಇದನ್ನು ಬರೆಯಲಾಗಿದೆ. ಇದು ಬಾಲ್ಯದಿಂದ ೧೯೨೧ರವರೆಗಿನ ಅವರ ಜೀವನವನ್ನು ಒಳಗೊಂಡಿದೆ. ಇದನ್ನು ಸಾಪ್ತಾಹಿಕ ಕಂತುಗಳಲ್ಲಿ ಬರೆಯಲಾಯಿತು ಮತ್ತು ೧೯೨೫ ರಿಂದ ೧೯೨೯ ರವರೆಗೆ ಅವರ ‘ನವಜೀವನ’ ವಾರಪತ್ರಿಕೆಯಲ್ಲಿ ಪ್ರಕಟವಾಯಿತು. ಇದರ ಇಂಗ್ಲಿಷ್ ಅನುವಾದವು ಅವರ ಇನ್ನೊಂದು ಜರ್ನಲ್ ‘ಯಂಗ್ ಇಂಡಿಯಾ’ದಲ್ಲಿಯೂ ಕಂತುಗಳಲ್ಲಿ ಪ್ರಕಟವಾಯಿತು. ೧೯೯೮ರಲ್ಲಿ ಜಾಗತಿಕ ಆಧ್ಯಾತ್ಮಿಕ ಮತ್ತು ಧಾರ್ಮಿಕ ಅಧಿಕಾರಿಗಳ ಸಮಿತಿಯು ಈ ಪುಸ್ತಕವನ್ನು “೨೦ ನೇ ಶತಮಾನದ ೧೦೦ ಅತ್ಯುತ್ತಮ ಆಧ್ಯಾತ್ಮಿಕ ಪುಸ್ತಕಗಳಲ್ಲಿ” ಒಂದೆಂದು ಹೆಸರಿಸಿತು.ಈ ಆತ್ಮಚರಿತ್ರೆಯನ್ನು ಗಾಂಧೀಜಿಯವರ ಅಪ್ತ ಶಿಷ್ಯ ಮಹಾದೇವ ದೇಸಾಯಿ ಗುಜರಾತಿಯಿಂದ ಆಂಗ್ಲ ಭಾಷೆಗೆ ಅನುವಾದಿಸಿದರು. ಬಳಿಕ ಪ್ರಸಿದ್ದ ಸಾಹಿತಿ ಹಾಗೂ ಗಾಂಧೀವಾದಿ ಗೊರೂರು ರಾಮಸ್ವಾಮಿ ಅಯ್ಯಂಗಾರ ಅದನ್ನು ಕನ್ನಡಕ್ಕೆ ಅನುವಾದಿಸಿದರು. ಗೊರೂರು ಅವರ ಅನುವಾದ ಕೇವಲ ಭಾಷಾಂತರವಲ್ಲ, ಅದು ಗಾಂಧೀಜಿಯ ಚಿಂತನೆಯ “ಸತ್ಯ”ವನ್ನು ಕನ್ನಡಿಗರ ಮನಸ್ಸಿಗೆ ಹತ್ತಿರವಾದ ಶ್ರೇಷ್ಠ ಸೇವೆ ಎಂದು ಹೇಳಬಹುದು. ಕನ್ನಡ ಓದುಗರಿಗೆ ಹೆಮ್ಮೆಯ ಕೊಡುಗೆಯಾಗಿದೆ.ಮುನ್ನುಡಿಯಲ್ಲಿ ಗಾಂಧಿಯವರು ಹೀಗೆ ಹೇಳುತ್ತಾರೆ: “ನಿಜವಾದ ಆತ್ಮಚರಿತ್ರೆಯನ್ನು ಪ್ರಯತ್ನಿಸುವುದು ನನ್ನ ಉದ್ದೇಶವಲ್ಲ. ಸತ್ಯದೊಂದಿಗಿನ ನನ್ನ ಪ್ರಯೋಗಗಳ ಕಥೆಯನ್ನು ನಾನು ಹೇಳಲು ಬಯಸುತ್ತೇನೆ, ಮತ್ತು ನನ್ನ ಜೀವನವು ಪ್ರಯೋಗಗಳನ್ನು ಮಾತ್ರ ಒಳಗೊಂಡಿರುವುದರಿಂದ, ಕಥೆಯು ಆತ್ಮಚರಿತ್ರೆಯ ರೂಪವನ್ನು ಪಡೆಯುತ್ತದೆ ಎಂಬುದು ನಿಜ. ಆದರೆ ಅದರ ಪ್ರತಿಯೊಂದು ಪುಟವು ನನ್ನ ಪ್ರಯೋಗಗಳ ಬಗ್ಗೆ ಮಾತ್ರ ಮಾತನಾಡುತ್ತದೆಯೇ ಎಂದು ನನಗೆ ಅಭ್ಯಂತರವಿಲ್ಲ.”ಆತ್ಮಚರಿತ್ರೆಯ ಪರಿಚಯವನ್ನು ಅಧಿಕೃತವಾಗಿ ಗಾಂಧಿಯೇ ಬರೆದಿದ್ದಾರೆ, ಅದರಲ್ಲಿ ಯೆರ್ವಾಡಾ ಸೆಂಟ್ರಲ್ ಜೈಲಿನಲ್ಲಿ ತಮ್ಮ ಜೊತೆ ಕೈದಿಯಾಗಿದ್ದ ಜೈರಾಮ್‌ದಾಸ್ ದೌಲತ್ರಾಮ್ ಅವರ ಒತ್ತಾಯದ ಮೇರೆಗೆ ಅವರು ತಮ್ಮ ಆತ್ಮಚರಿತ್ರೆಯನ್ನು ಹೇಗೆ ಮತ್ತೆ ಬರೆಯಲು ಪ್ರಾರಂಭಿಸಿದ್ದಾರೆಂದು ಉಲ್ಲೇಖಿಸಿದ್ದಾರೆ. ಆತ್ಮಚರಿತ್ರೆ ಬರೆಯುವ ಬಗ್ಗೆ ಸ್ನೇಹಿತರೊಬ್ಬರು ಕೇಳಿದ ಪ್ರಶ್ನೆಯ ಬಗ್ಗೆ ಅವರು ಯೋಚಿಸುತ್ತಾರೆ, ಇದು ಪಾಶ್ಚಿಮಾತ್ಯ ಅಭ್ಯಾಸ, ಇದು “ಪೂರ್ವದಲ್ಲಿ ಯಾರೂ ಮಾಡುವುದಿಲ್ಲ” ಎಂದು ಪರಿಗಣಿಸುತ್ತಾರೆ. ಗಾಂಧಿಯವರು ತಮ್ಮ ಆಲೋಚನೆಗಳು ನಂತರದ ಜೀವನದಲ್ಲಿ ಬದಲಾಗಬಹುದು ಎಂದು ಒಪ್ಪುತ್ತಾರೆ. ಆದರೆ ಅವರ ಚರಿತ್ರೆಯ ಉದ್ದೇಶ ಜೀವನದಲ್ಲಿ ಸತ್ಯದೊಂದಿಗಿನ ಅವರ ಪ್ರಯೋಗಗಳನ್ನು ಹೇಳುವುದು ಮಾತ್ರ. ಈ ಪುಸ್ತಕದ ಮೂಲಕ ಅವರು ರಾಜಕೀಯಕ್ಕಿಂತ ಹೆಚ್ಚಾಗಿ ತಮ್ಮ ಆಧ್ಯಾತ್ಮಿಕ ಮತ್ತು ನೈತಿಕ ಪ್ರಯೋಗಗಳನ್ನು ಹೇಳಲು ಬಯಸುತ್ತಾರೆ. ಕೆಲ ಸಹಸಚರರು “ಆತ್ಮಚರಿತ್ರೆಯ ಬರೆಯುವುದು ಪಾಶ್ಚಾತ್ಯ ಪದ್ದತಿ” ಎಂದು ವಿರೋಧಿಸಿದರೂ ಗಾಂಧೀಜಿಯವರು ಅದನ್ನು ವೈಯಕ್ತಿಕ ಕೀರ್ತಿಗಾಗಿ ಅಲ್ಲಾ, ಬದಲಿಗೆ “ಸತ್ಯದೊಂದಿಗೆ ನನ್ನ ಪ್ರಯೋಗಗಳ ದಾಖಲೆಯಾಗಿರಲಿ” ಎಂದು ಸ್ಪಷ್ಟಪಡಿಸಿದರು. ನವಜೀವನ ಪತ್ರಿಕೆಯ ಮುಖಾಂತರ ಅವರು ದಕ್ಷಿಣ ಆಫ್ರಿಕಾದ ಸತ್ಯಾಗ್ರಹ ಹೋರಾಟದ ಕುರಿತು ಬರೆದ ಲೇಖನಗಳೇ ನಂತರ ಈ ಮಹತ್ವದ ಕೃತಿಗೆ ಆಧಾರವಾದವು. ೧೯೧೫ರಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಗ್ಪುರ ಅಧಿವೇಶನದ ಚರ್ಚೆಯ ನಂತರ ಪುಸ್ತಕವು ಕೊನೆಗೊಳ್ಳುತ್ತದೆ.ಗಾಂಧಿಯವರು ಜನನ ಮತ್ತು ಪೋಷಕರಿಂದ ಪ್ರಾರಂಭಿಸಿ, ಗಾಂಧಿಯವರು ಬಾಲ್ಯ, ಬಾಲ್ಯವಿವಾಹ, ಪತ್ನಿ ಮತ್ತು ಪೋಷಕರೊಂದಿಗಿನ ಸಂಬಂಧ, ಶಾಲೆಯಲ್ಲಿನ ಅನುಭವಗಳು, ಲಂಡನ್‌ಗೆ ಅವರ ಅಧ್ಯಯನ ಪ್ರವಾಸ, ಇಂಗ್ಲಿಷ್ ಸಂಭಾವಿತ ವ್ಯಕ್ತಿಯಂತೆ ಇರಲು ಮಾಡಿದ ಪ್ರಯತ್ನಗಳು, ಆಹಾರ ಪದ್ಧತಿಯಲ್ಲಿನ ಪ್ರಯೋಗಗಳು, ದಕ್ಷಿಣ ಆಫ್ರಿಕಾಕ್ಕೆ ಅವರ ಪ್ರಯಾಣ, ವರ್ಣ ಪೂರ್ವಾಗ್ರಹದ ಅನುಭವಗಳು, ಧರ್ಮದ ಅನ್ವೇಷಣೆ, ಆಫ್ರಿಕಾದಲ್ಲಿ ಸಾಮಾಜಿಕ ಕೆಲಸ, ಭಾರತಕ್ಕೆ ಮರಳುವಿಕೆ, ರಾಜಕೀಯ ಜಾಗೃತಿ ಮತ್ತು ಸಾಮಾಜಿಕ ಚಟುವಟಿಕೆಗಳಿಗಾಗಿ ಅವರ ನಿಧಾನ ಮತ್ತು ಸ್ಥಿರವಾದ ಕೆಲಸದ ನೆನಪುಗಳನ್ನು ನೀಡುತ್ತಾರೆ.ಗಾಂಧೀಜಿಯವರು ಸ್ನೇಹಿತರ ಜೊತೆಗೆ ಸೇರಿ ಸಿಗರೇಟು ಸೇದಿದ್ದು, ಸಿಗರೇಟು ಖರೀದಿಸಲು ಹಣ ಕದ್ದಿದ್ದು, ಮೇಕೆಮಾಂಸ ತಿಂದಿದ್ದು, ಮುಂತಾದ ಪ್ರಸಂಗಗಳನ್ನು ಆತ್ಮಾವಲೋಕನದ ಮಾದರಿಯಲ್ಲಿ ಕಟ್ಟಿಕೊಡುತ್ತಾರೆ. ಮೇಕೆಮಾಂಸ ತಿಂದ ಪ್ರಸಂಗ ಮತ್ತು ಆನಂತರದ ಬೆಳವಣಿಗೆಗಳ ನಿರೂಪಣೆ ಆಸಕ್ತಿದಾಯಕವಾಗಿದೆ. ಮಾಂಸ ಸೇವನೆಯು, ಶಕ್ತಿವಂತ ಹಾಗೂ ಧೈರ್ಯವಂತನನ್ನಾಗಿ ಮಾಡುತ್ತದೆ. ಇಂಗ್ಲಿಷರನ್ನು ಮಣಿಸಲು ಇದು ಸಹಾಯಕವಾಗುತ್ತದೆ ಎಂದು ಬಾಲಕ ಗಾಂಧಿ ಭಾವಿಸುತ್ತಾರೆ. ಬ್ರಿಟಿಷರನ್ನು ಮಣಿಸಲು ಮಾಂಸ ತಿನ್ನಬೇಕೆಂಬ ಬಯಕೆ ವಿಚಿತ್ರ ಎನ್ನಿಸಿದರೂ, ಬ್ರಿಟಿಷರ ವಿರುದ್ಧ ಬಾಲ್ಯದಲ್ಲೇ ಮೂಡಿದ್ದ ಅವರ ಪ್ರತಿರೋಧವನ್ನು ಇಲ್ಲಿ ಗಮನಿಸಬಹುದು. ಆನಂತರ ಧೂಮಪಾನ, ಮಾಂಸ ಸೇವನೆಗಳನ್ನು ತೊರೆದು ತಂದೆಗೆ ತಪ್ಪೊಪ್ಪಿಗೆ ಪತ್ರ ಬರೆದು ನೇರವಾಗಿ ಕೊಟ್ಟ ಸನ್ನಿವೇಶವನ್ನು ಗಾಂಧೀಜಿ ಭಾವುಕವಾಗಿ ವಿವರಿಸಿದ್ದಾರೆ. ಹಾಗೆಂದು ಗಾಂಧೀಜಿ ಮಾಂಸಾಹಾರದ ವಿರೋಧಿಯಾಗಿರಲಿಲ್ಲ. ತಾಯಿ-ತಂದೆಗೆ ನೋವಾಗುತ್ತದೆಯೆಂದು ತಾನು ಅವರು ಬದುಕಿರುವವರೆಗೆ ಮಾಂಸಾಹಾರ ಸೇವನೆ ಮಾಡುವುದಿಲ್ಲವೆಂದೂ, ಅವರು ಗತಿಸಿದ ನಂತರ ತನಗೆ ‘ಸ್ವಾತಂತ್ರ‍್ಯ’ ಬಂದಾಗ, ಬಹಿರಂಗವಾಗಿಯೇ ತಿನ್ನುವುದಾಗಿಯೂ ಬರೆದುಕೊಂಡಿದ್ದಾರೆ. ತಾಯಿ, ತಂದೆ ಹಾಗೂ ಹಿರಿಯರ ಬಗ್ಗೆ ಇದ್ದ ಗೌರವ ಮತ್ತು ಅವರ ಕಟ್ಟುಪಾಡುಗಳು ತಮ್ಮ `ಹವ್ಯಾಸಗಳಿಗೆ’ ಅಡ್ಡಿಯಾಗಿ ‘ಸ್ವಾತಂತ್ರ‍್ಯ’ವನ್ನು ಕಸಿಯುತ್ತಿವೆಯೆಂಬ ಅನುಭವದಿಂದ ಬಾಲಕ ಗಾಂಧೀಜಿ, ತಳಮಳಕ್ಕೆ ಒಳಗಾಗುತ್ತಾರೆ. ತೃಪ್ತಿಯೇ ಇಲ್ಲದ ಮಾನಸಿಕ ತಳಮಳಗಳನ್ನು ತಾಳಿಕೊಳ್ಳಲಾರದೆ ಸ್ನೇಹಿತರೊಂದಿಗೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬರುತ್ತಾರೆ. ದತ್ತೂರಿ ಗಿಡದ ಬೀಜಗಳನ್ನು ತಿಂದರೆ ಸಾವು ಸಂಭವಿಸುತ್ತದೆಯೆಂದು ತಿಳಿದಿದ್ದ ಇವರು ಆ ಗಿಡಕ್ಕಾಗಿ ಹುಡುಕಿ, ಪತ್ತೆ ಮಾಡಿ, ಒಂದೆರಡು ಬೀಜ ತಿಂದು, ತಕ್ಷಣವೇ ಆತ್ಮಹತ್ಯೆಯ ನಿರ್ಧಾರದಿಂದ ಹಿಂದೆ ಸರಿಯುತ್ತಾರೆ. ‘ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ಆಲೋಚನೆಯಷ್ಟು ಅದನ್ನು ಸಾಧಿಸುವುದು ಸುಲಭವಲ್ಲ ಎಂದು ನಾನು ಮನಗಂಡೆ’ ಎಂದು ಬರೆಯುತ್ತಾರೆ.ಗಾಂಧಿ ಆತ್ಮಚರಿತ್ರೆಯ ಒಂದು ಮುಖ್ಯ ಘಟನೆಯೆಂದರೆ ಅವರನ್ನು ಜಾತಿಭ್ರಷ್ಟರನ್ನಾಗಿ ಮಾಡಿದ್ದು. ವಿದ್ಯಾಭ್ಯಾಸಕ್ಕಾಗಿ ಲಂಡನ್‌ಗೆ ಹೊರಟಾಗ ಜಾತಿ ಮುಖಂಡರು ‘ಸಮುದ್ರಯಾನವು ತಮ್ಮ ಜಾತಿಯಲ್ಲಿ ನಿಷಿದ್ಧ’ವೆಂದು ವಿರೋಧಿಸುತ್ತಾರೆ. ಸಮುದ್ರಯಾನ ಮಾಡಿದರೆ ಬಂಧುಬಳಗದವರು ಗಾಂಧಿ ಜೊತೆಗೆ ಒಡನಾಡುವಹಾಗಿಲ್ಲ, ನೀರನ್ನು ಕೂಡ ಕೊಡುವಂತಿಲ್ಲ. ಆದರೆ ಗಾಂಧೀಜಿ ಬಗ್ಗಲಿಲ್ಲ. ‘ಜಾತಿ ಭ್ರಷ್ಟನನ್ನಾಗಿಸಿ; ನಾನು ಹೆದರುವುದಿಲ್ಲ’ ಎಂದರು. ಜಾತಿಯಿಂದ ಹೊರಹಾಕಲ್ಪಟ್ಟರು; ಜಾತಿಯಿಲ್ಲದವರಾದರು. ಇಂತಹ ಅನೇಕ ಪ್ರಸಂಗಗಳು ಗಾಂಧಿ ಆತ್ಮಚರಿತ್ರೆಯಲ್ಲಿ ಹಾಸುಹೊಕ್ಕಾಗಿವೆ. ವೈರುಧ್ಯಗಳೂ ಇವೆ. ಬ್ರಹ್ಮಚರ್ಯದ ಪ್ರಯೋಗ, ಅಸ್ಪೃಶ್ಯ ಮೂಲದ ಕ್ರಿಶ್ಚಿಯನ್ ಉದ್ಯೋಗಿಯ ಕಕ್ಕಸ್ಸಿನ ಕೊಡವನ್ನು ಶುದ್ಧ ಮಾಡದೆ ಇದ್ದ ಕಸ್ತೂರ್ ಬಾ ಅವರ ಬಗ್ಗೆ ನಡೆದುಕೊಂಡ ಗಂಡಾಳಿಕೆಯ ದರ್ಪ, ಆನಂತರದ ಪಶ್ಚಾತ್ತಾಪ- ಇಂತಹ ಅನೇಕ ಆತ್ಮಾವಲೋಕನ ಮತ್ತು ಮಂಥನಗಳಿಂದ ಗಾಂಧಿ ಆತ್ಮಚರಿತ್ರೆಯ ವೈರುಧ್ಯಗಳನ್ನು ಮೀರಿದ ಮಾಹಿತಿ ಕೇಂದ್ರವೂ ಆಗಿದೆ. ಗಾಂಧೀಜಿಯವರು ರೈಲಿನ ಮೂರನೇ ದರ್ಜೆ ಬೋಗಿಯಲ್ಲಿ ಪ್ರಯಾಣಿಸಿ ಭಾರತವನ್ನು ‘ಕಂಡುಕೊಂಡದ್ದು’ ಅವರ ಬದುಕಿನ ಒಂದು ಮುಖ್ಯಘಟ್ಟ; ತನ್ನ ‘ವರ್ಗ’ವು ಅನುಭವಿಸುತ್ತಿರುವ ವಿಶೇಷ ಸವಲತ್ತುಗಳ ಬಗ್ಗೆ ಆಗ ಮೂಡಿದ್ದು ಪಾಪಪ್ರಜ್ಞೆ. ಹೀಗಾಗಿ ಈ ಕೃತಿ ಗಾಂಧೀಜಿಯ ಅಂತರಂಗಕ್ಕೆ ಹಿಡಿದಂತಹ ಕನ್ನಡಿ ಸತ್ಯವನ್ನು ಹುಡುಕುವ ಮನುಷ್ಯನ ಅಂತರ್ಯಾನದ ದಾಖಲೆಯಾಗಿದೆ.೧೯೨೦ರ ದಶಕದ ಆರಂಭದಲ್ಲಿ ಗಾಂಧಿಯವರು ಹಲವಾರು ನಾಗರಿಕ ಅಸಹಕಾರ ಅಭಿಯಾನಗಳನ್ನು ನಡೆಸಿದರು. ಶಾಂತಿಯುತವಾಗಿರಬೇಕೆಂಬ ಅವರ ಉದ್ದೇಶದ ಹೊರತಾಗಿಯೂ, ಹಲವಾರು ಸಂದರ್ಭಗಳಲ್ಲಿ ಹಿಂಸಾಚಾರದ ಘಟನೆಗಳು ಭುಗಿಲೆದ್ದವು. ಗಾಂಧಿಯವರು ೧೯೨೧ರ ಹಿಂದೆಯೇ ತಮ್ಮ ಆತ್ಮಚರಿತ್ರೆಯನ್ನು ಬರೆಯಲು ಪ್ರಾರಂಭಿಸಿದ್ದರು ಆದರೆ ಅವರ ರಾಜಕೀಯ ಕಾರ್ಯಗಳಿಂದಾಗಿ ಆ ಕೆಲಸವನ್ನು ಪಕ್ಕಕ್ಕೆ ಇಡಬೇಕಾಯಿತು ಎಂದು ನೆನಪಿಸಿಕೊಂಡರು. ಅವರ ಹಿನ್ನೆಲೆ ಮತ್ತು ಜೀವನದ ಬಗ್ಗೆ ಏನಾದರೂ ಹೇಳಬೇಕೆಂಬ ಬಯಕೆಯನ್ನು ಸಹೋದ್ಯೋಗಿಗಳು ವ್ಯಕ್ತಪಡಿಸಿದ ನಂತರ ಅವರು ಆ ಕೆಲಸವನ್ನು ವಹಿಸಿಕೊಂಡರು ಎಂದು ಅವರು ತಿಳಿಸುತ್ತಾರೆ. ವಸಾಹತುಶಾಹಿ ಅಧಿಕಾರಿಗಳು ೧೯೨೨ರಲ್ಲಿ ಅವರ ಮೇಲೆ ಪ್ರಚೋದನೆ ಮತ್ತು ನಿರ್ದಿಷ್ಟವಾಗಿ ಸರ್ಕಾರದ ವಿರುದ್ಧ ದ್ವೇಷವನ್ನು ಹುಟ್ಟುಹಾಕಿದ ಆರೋಪ ಹೊರಿಸಿದರು ಮತ್ತು ಇದರ ಪರಿಣಾಮವಾಗಿ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅವರು ಕೇವಲ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದರು, ಅನಾರೋಗ್ಯದ ಕಾರಣದಿಂದ ಬೇಗನೆ ಬಿಡುಗಡೆಯಾದರು.೧೯೨೫ರವರೆಗಿನ ಗಾಂಧೀಜಿಯವರ ಆತ್ಮಚರಿತ್ರೆ ಕೂಡ ಅವರ ಬೆಳವಣಿಗೆ ಮತ್ತು ಬದಲಾವಣೆಯ ಚರಿತೆಯಾಗಿದೆ. ತಾಯಿ, ತಂದೆಯವರ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಗಾಂಧೀಜಿ ತಮ್ಮ ದೌರ್ಬಲ್ಯಗಳನ್ನು ತೆರೆದಿಡುತ್ತಲೇ ಆನಂತರ ಆದ ಬದಲಾವಣೆಗಳನ್ನು ಉಲ್ಲೇಖಿಸುತ್ತಾರೆ. ತಮ್ಮ ಪ್ರತಿಯೊಂದು ಪ್ರಮುಖ ಪ್ರಸಂಗವನ್ನು ‘ಪ್ರಯೋಗ’ ಎಂದೇ ಕರೆಯುತ್ತಾರೆ. ಈ ಪ್ರಯೋಗಗಳ ಆಂತರ್ಯದಲ್ಲಿ ಆಧ್ಯಾತ್ಮಿಕ, ಧಾರ್ಮಿಕ ಭಾವನೆಯಿದೆಯೆಂದು ಸ್ಪಷ್ಟಪಡಿಸುತ್ತಾರೆ. ‘ನಾನು ಕಟ್ಟಿಕೊಡುತ್ತಿರುವ ಕಥನಗಳು  ಆಧ್ಯಾತ್ಮಿಕವಾದವು ಅಥವಾ ಖಚಿತವಾಗಿ ನೈತಿಕವಾದವು. ಧರ್ಮದ ಮೂಲಸಾರವೇ ನೈತಿಕತೆ’ ಎಂದು ಹೇಳಿದ್ದಾರೆ.ಈ ಆತ್ಮಚರಿತ್ರೆಯನ್ನು ೨೫ ನವೆಂಬರ್, ೧೯೨೫ ರಿಂದ ೩ ಫೆಬ್ರವರಿ, ೧೯೨೯ ರವರೆಗೆ ೧೬೬ ಕಂತುಗಳಲ್ಲಿ ಬರೆಯಲಾಯಿತು. ಆರಂಭದಲ್ಲಿ ಅವರು ಪುಸ್ತಕ ಸ್ವರೂಪವನ್ನು ಅಳವಡಿಸಿಕೊಳ್ಳಲು ನಿರಾಕರಿಸಿದರು, ಆದರೆ ನಂತರ ಅದನ್ನು ವಾರಕ್ಕೊಮ್ಮೆ ಪ್ರಕಟವಾಗುವ ಪ್ರತ್ಯೇಕ ಅಧ್ಯಾಯಗಳೊಂದಿಗೆ ಧಾರಾವಾಹಿ ರೂಪದಲ್ಲಿ ಬರೆಯಲು ಒಪ್ಪಿಕೊಂಡರು. ಇದು ನವಜೀವನದಲ್ಲಿ ಕಾಣಿಸಿಕೊಂಡಿತು. ಅನುಗುಣವಾದ ಇಂಗ್ಲಿಷ್ ಅನುವಾದಗಳನ್ನು ಯಂಗ್ ಇಂಡಿಯಾದಲ್ಲಿ ಮುದ್ರಿಸಲಾಯಿತು ಮತ್ತು ದಕ್ಷಿಣ ಆಫ್ರಿಕಾದಲ್ಲಿ ಇಂಡಿಯನ್ ಒಪೀನಿಯನ್ ಮತ್ತು ಅಮೇರಿಕನ್ ಜರ್ನಲ್ ಯೂನಿಟಿಯಲ್ಲಿ ಮರುಮುದ್ರಣ ಮಾಡಲಾಯಿತು. ಹಿಂದಿ ಅನುವಾದವನ್ನು ನವಜೀವನದ ಹಿಂದಿ ಆವೃತ್ತಿಯಲ್ಲಿ ಬಹುತೇಕ ಏಕಕಾಲದಲ್ಲಿ ಪ್ರಕಟಿಸಲಾಯಿತು. ಪುಸ್ತಕದ ಮೂಲ ಇಂಗ್ಲೀಷ್ ಆವೃತ್ತಿಯು ಎರಡು ಸಂಪುಟಗಳನ್ನು ಒಳಗೊಂಡಿತ್ತು, ಅದರಲ್ಲಿ ಮೊದಲನೆಯದು ೧-೩ ಭಾಗಗಳನ್ನು ಒಳಗೊಂಡಿತ್ತು, ಆದರೆ ಎರಡನೆಯದು ೪-೫ ಭಾಗಗಳನ್ನು  ಒಳಗೊಂಡಿತ್ತು. ಮೂಲ ಗುಜರಾತಿ ಆವೃತ್ತಿಯನ್ನು ಸತ್ಯ ನಾ ಪ್ರಯೋಗೋ (ಲಿಟ್. ಎಕ್ಸ್ಪರಿಮೆಂಟ್ಸ್ ವಿತ್ ಟ್ರುತ್) ಎಂದು ಪ್ರಕಟಿಸಲಾಯಿತು, ಇದು ಆತ್ಮಕಥಾ (ಲಿಟ್. ದಿ ಸ್ಟೋರಿ ಆಫ್ ಎ ಸೋಲ್) ಎಂಬ ಉಪಶೀರ್ಷಿಕೆಯನ್ನು ಹೊಂದಿತ್ತು. ಇಂಗ್ಲಿಷ್ ಆವೃತ್ತಿಯಾದ ಆನ್ ಆಟೋಬಯಾಗ್ರಫಿ, ಎಕ್ಸ್ಪರಿಮೆಂಟ್ಸ್ ವಿತ್ ಟ್ರುತ್ ಎಂಬ ಉಪಶೀರ್ಷಿಕೆಯನ್ನು ಹೊಂದಿತ್ತು.ಗಾಂಧಿ ಆತ್ಮಚರಿತ್ರೆ ಅವಧಿ ೫೬ ವರ್ಷಗಳು ಮಾತ್ರ. ಗಾಂಧೀಜಿ ಹುಟ್ಟಿದ್ದು ೧೮೬೯ರ ಅಕ್ಟೋಬರ್ ೨ರಂದು. ಆತ್ಮಚರಿತ್ರೆ ಹೊರಬಂದದ್ದು ೧೯೨೫ರ ನವೆಂಬರ್ ತಿಂಗಳಲ್ಲಿ. ಆನಂತರ ೨೩ ವರ್ಷಗಳ ಕಾಲ ಗಾಂಧೀಜಿ ಬದುಕಿದ್ದರು. ಈ ೨೩ ವರ್ಷ ಗಾಂಧೀಜಿ ಬದುಕಿನ ಅತ್ಯಮೂಲ್ಯ ಆಕರಗಳೆಂದರೆ ತಪ್ಪಾಗಲಾರದು. ಯಾಕೆಂದರೆ, ಗಾಂಧೀಜಿಯವರು ಜಾತಿ, ವರ್ಣವೇ ಮುಂತಾದ ಸಾಮಾಜಿಕ ಸಂರಚನೆಗಳನ್ನು ಕುರಿತು ಮೊದಲು ಪ್ರತಿಪಾದಿಸಿದ್ದ ಸಾಂಪ್ರದಾಯಿಕ ಜಡ ಚಿಂತನೆಗಳಿಗೆ, ಚಲನಶೀಲ ಪ್ರಗತಿಪರ ಆಯಾಮದೊರಕಿದ್ದು, ಇದೇ ಅವಧಿಯಲ್ಲಿ. ಆತ್ಮಚರಿತ್ರೆ ಫೆಬ್ರವರಿ ೧೯೨೯ರಲ್ಲಿ ಪೂರ್ಣಗೊಂಡಿತು.ದಕ್ಷಿಣ ಆಫ್ರೀಕಾದಿಂದ ಭಾರತಕ್ಕೆ ಮರಳಿದನಂತರ, ಗಾಂಧೀಜಿ ಸ್ವಾತಂತ್ರ‍್ಯವನ್ನು ಮತ್ತು ಸತ್ಯದ ಶಕ್ತಿಯಿಂದ ಸಾಧಿಸಬೇಕೆಂಬ ದ್ರಢ ಸಂಕಲ್ಪ ಕೈಕೊಂಡರು. ತಮ್ಮ ಸಹಚರರೊಂದಿಗೆ ಶಾಂತಿ, ನೈತಿಕ ಜೀವನವನ್ನು ನಡೆಸಲು ಗುಜರಾತಿನ ಅಹಮದಾಬಾದನ ಕರ‍್ಚರಬ್ ಪ್ರದೇಶದಲ್ಲಿ ಮೊದಲ ಆಶ್ರಮವನ್ನು ಸ್ಥಾಪಿಸಿದರು. ನಂತರ ಆಶ್ರಮವನ್ನು ಸಾಬರಮತಿ ತೀರಕ್ಕೆ ಸ್ತಳಾಂತರಿಸಿ  ಸ್ವಾವಲಂಬನೆ ಮತ್ತು ಶುದ್ಧ ಜೀವನದ ತತ್ವಗಳನ್ನು ಕಾಯಕದ ಮೂಲಕ ಅನುಷ್ಟಾನಗೊಳಿಸಿದರು. ಸಾಬರಮತಿ ಆಶ್ರಮವು ಗಾಂಧೀಜಿಯವರ ಚಿಂತನೆÀಗಳ ಜೀವಂತ ಕರ್ಮಭೂಮಿಯಾಗಿ, ಭಾರತದ ನೈತಿಕ ಪುನರುತ್ಥಾನದ ಕೇಂದ್ರವಾಗಿ ರೂಪುಗೊಂಡಿತು. “ಸತ್ಯದೊಂದಿಗೆ ನನ್ನ ಪ್ರಯೋಗಗಳು” ೧೮೬೯ ರಿಂದ ೧೯೨೫ ರವರಗೆ ಅಂದರೆ ಗಾಂಧೀಜಿ ೫೬ ವರ್ಷಗಳ ಜೀವನಯಾನದ ದಾಖಲೆ ಆಗಿದೆ. ಈ ಅವಧಿಯಲ್ಲಿ ಅವರು ಸತ್ಯ, ಅಹಿಂಸೆ, ಸ್ವಾಲಂಭನೆ ಮತ್ತು ಮಾನವತೆಯ ಮೌಲ್ಯಗಳ ಮೇಲೆ ಮಾಡಿದ ಪ್ರಯೋಗಗಳೆಲ್ಲ ಈ

ಗಾಂಧೀಜಿಯವರ “ಸತ್ಯದೊಂದಿಗೆ ನನ್ನ ಪ್ರಯೋಗಗಳ ಕಥೆ” ಆತ್ಮಚರಿತ್ರೆಯ ಶತಮಾನೋತ್ಸವ,ಡಾ.ಎಸ್.ಬಿ. ಬಸೆಟ್ಟಿ Read Post »

ಕಾವ್ಯಯಾನ

ಅವನಲ್ಲ ಅವಳು! ಸುರೇಶ ತಂಗೋಡ

ಕಾವ್ಯ ಸಂಗಾತಿ ಸುರೇಶ ತಂಗೋಡ ಅವನಲ್ಲ ಅವಳು! ನಡುವಿನ ಉಡುದಾರಕಿತ್ತೊಗೆದುಕಾಲಿಗೆ ಗೆಜ್ಜೆ ಕಟ್ಟಿರುವೆಕೈಗೆ ಬಳೆ ಹಾಕುವಹೊತ್ತಿಗೆದೂರದಲೆಲ್ಲೊ ಅಪಸ್ವರ.// ಹಣೆಗೆ ವಿಭೂತಿಯಬದಲು ಕುಂಕುಮದ ಬೊಟ್ಟಿಟ್ಟೆತುಂಡು ಕೂದಲು ಉದ್ದ  ಬಿಟ್ಟೆಗಂಡಸರುಡುವ ಬಟ್ಟೆಯನ್ನು ಬದಲಿಸಿದೆಸೀರೆಯ ಸೆರಗೂ ಇಷ್ಟವಾಯಿತು.ನಾಚಿಕೆ ಮೂಡಿತುಶ್! ನನ್ನ ಮೇಲಲ್ಲ ಸಮಾಜದ ಮೇಲೆ.// ನನ್ನೊಳಗಿನ  ಹೆಣ್ತನವ ಕಾಪಿಡಲುನಾನು ಅದೇಷ್ಟು ಸತ್ತು ಬದುಕಿದ್ದೇನೆ.ಕುಂತು ಮೂತ್ರ ಮಾಡುವಾಗಬೆರಳುಗಳಿಗೆ ನೆಲ್ ಪಾಲಿಸ್ ಹಾಕಿಕೊಳ್ಳುವಾಗಕೊರಳಿಗೆ ಸರ ತೊಡುವಾಗವಿಚಿತ್ರವಾದ ಹಿಂಸೆ ನನಗೆ.// ಸೃಷ್ಟಿಯೊಳಗಿನ ಅದ್ಭುತ ನಾನೆಂದುಹೇಳಲು ಅವಕಾಶ ನೀಡಲಿಲ್ಲಸೌಂದರ್ಯ ನನ್ನಾಸ್ತಿಎಂದು ತೋರಿಸಲುಸಮಯ ನೀಡಲಿಲ್ಲಮಂಗಳಮುಖಿ ಎಂದುಅವಮಾನಿಸಿದರುಅಪಮಾನಿಸಿದರುಆದರೆನನಗೆ ನನ್ನ ಮೇಲೆ ಹೆಮ್ಮೆನಾನು ಅರ್ಧನಾರೀಸ್ವರನಪ್ರತಿರೂಪನನಗೂ ಸುಂದರ ಬದುಕಿದೆಬದುಕಿ ತೋರಿಸುವ ಛಲವಿದೆ. ಸುರೇಶ ತಂಗೋಡ

ಅವನಲ್ಲ ಅವಳು! ಸುರೇಶ ತಂಗೋಡ Read Post »

ಇತರೆ, ಮಕ್ಕಳ ವಿಭಾಗ

ತುಂ ತುಂ ಚಬೂರ್(ಮಕ್ಕಳ ಕಥೆ ) ಕಂಚುಗಾರನಹಳ್ಳಿ ಸತೀಶ್

ಮಕ್ಕಳ ಸಂಗಾತಿ ಕಂಚುಗಾರನಹಳ್ಳಿ ಸತೀಶ್ ತುಂ ತುಂ ಚಬೂರ್(ಮಕ್ಕಳ ಕಥೆ ) ಭೀಮನಹಳ್ಳಿ ಎಂಬ ಪುಟ್ಟ ಹಳ್ಳಿಯಲ್ಲಿ ರಾಮಪ್ಪ ಎಂಬ ರೈತ ವಾಸವಾಗಿದ್ದನು. ಅವನಿಗೆ ಧನಪಾಲ ಮತ್ತು ಲೋಕಪಾಲನೆಂಬ ಇಬ್ಬರು ಗಂಡು ಮಕ್ಕಳಿದ್ದರು. ಧನಪಾಲ ವಿದ್ಯಾವಂತ ಹಾಗೂ ಬುದ್ಧಿವಂತನಾಗಿದ್ದ. ಆದರೆ ಲೋಕಪಾಲ ವಿದ್ಯೆ ತಲೆಗೆ ಹತ್ತದೆ, ಇತ್ತ ವಿದ್ಯಾವಂತನೂ ಆಗದೆ ಅತ್ತ ಬುದ್ಧಿವಂತನೂ ಆಗದೆ ಸೋಮಾರಿತನ ಮೈಗೂಡಿಸಿಕೊಂಡಿದ್ದ. ಆದರ್ಶ ರೈತನಾಗಿದ್ದ ರಾಮಪ್ಪ ತನ್ನ ಇಳಿವಯಸ್ಸಿನಲ್ಲಿ ವ್ಯವಸಾಯ ಮಾಡಲಾಗದೆ, ತನ್ನ ಇಬ್ಬರು ಮಕ್ಕಳಿಗೆ ಅಂದದ ಹೆಣ್ಣನ್ನು ಹುಡುಕಿ ಮದುವೆ ಮಾಡಿದ, ಇದ್ದ ಹತ್ತು ಎಕರೆ ಜಮೀನನ್ನು ಮಕ್ಕಳಿಗೆ ಸಮನಾಗಿ ಹಂಚಿ, ಶ್ರಮವಹಿಸಿ ದುಡಿದು ಬದುಕಿ ಎಂದು ಹೇಳಿ ಕೆಲವೇ ದಿನಗಳಲ್ಲಿ ಮರಣವನ್ನು ಹೊಂದಿದ.ವಿದ್ಯಾವಂತ, ಬುದ್ಧಿವಂತನಾದ ಧನಪಾಲ ತಂದೆ ನೀಡಿದ ಐದು ಎಕರೆ ಜಮೀನಿನಲ್ಲಿ ತಾನು ಕಲಿತ ಅಲ್ಪ ಸ್ವಲ್ಪ ವಿದ್ಯೆಯಿಂದ ಹೊಸ ಹೊಸ ತಂತ್ರಜ್ಞಾನದ ಬಗ್ಗೆ ತಿಳಿದುಕೊಂಡ. ಆಧುನಿಕ ಕೃಷಿ ಉಪಕರಣಗಳನ್ನು ಬಳಸಿ, ಹೊಸ ಬಗೆಯ ಬೀಜ, ಗೊಬ್ಬರಗಳನ್ನು ಬಳಸಿ, ಬೆಳೆ ಬೆಳೆಯಲು ಪ್ರಾರಂಭಿಸಿದ. ಇದರ ಪರಿಣಾಮ ಸಹಜವಾಗಿ ಹೆಚ್ಚು ಇಳುವರಿ ಪಡೆದು ಉತ್ತಮ ಲಾಭ ಗಳಿಸಿದ. ಬಂದ ಲಾಭವನ್ನು ದುಂದು ವೆಚ್ಚ ಮಾಡದೆ ಕೂಡಿಡುತ್ತಾ ಹೋದ. ಕೂಡಿಟ್ಟ ಹಣದಲ್ಲಿ ಪ್ರತಿವರ್ಷ ಒಂದೊಂದು ಎಕರೆ ಜಮೀನು ಖರೀದಿಸುತ್ತಾ 5 ರಿಂದ 10 ಎಕರೆ, 10 ರಿಂದ 20 ಎಕರೆ ಹೀಗೆ ಖರೀದಿಸುತ್ತಾ ಧನಪಾಲ ಭಾರೀ ಶ್ರೀಮಂತನಾದ. ಆದರೆ ಹುಟ್ಟಿನಿಂದಲೇ ಸೋಮಾರಿಯಾಗಿದ್ದ ಲೋಕಪಾಲ, ತಂದೆ ಕೊಟ್ಟಿದ್ದ 5 ಎಕರೆ ಜಮೀನಿನಲ್ಲಿ ಶ್ರಮಪಟ್ಟು ದುಡಿಯದೇ ದುಂದು ವೆಚ್ಚ ಮಾಡುತ್ತಾ ಪ್ರತಿವರ್ಷ ಒಂದೊಂದೇ ಎಕರೆ ಜಮೀನು ಮಾರಿ ಜೀವನ ಸಾಗಿಸುತ್ತಾ ಬಂದ. ಇದರ ಪರಿಣಾಮ ಕೆಲವೇ ವರ್ಷಗಳಲ್ಲಿ ಇದ್ದ 5 ಎಕರೆ ಜಮೀನನ್ನು ಕಳೆದುಕೊಂಡು ತುತ್ತು ಕೂಳಿಗೂ ಸಂಚಕಾರ ತಂದುಕೊಂಡ. ಅಣ್ಣ ಧನಪಾಲನ ಶ್ರೀಮಂತಿಕೆ, ವೈಭವದ ಜೀವನ ನೋಡಿ ಲೋಕಪಾಲ ಮತ್ತು ಅವನ ಹೆಂಡತಿಗೆ ಸಹಿಸಲಾಗದಷ್ಟು ಅಸೂಯೆ ಮೂಡತೊಡಗಿತು. ಆದರೆ ಅಣ್ಣ ಧನಪಾಲ ಶ್ರಮಪಟ್ಟು ಬೆವರು ಸುರಿಸಿ ದುಡಿಯುತ್ತಾ ಹೊಸ ಮನೆ, ಕಾರು, ಬೇಕಾದ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಂಡ. ಬುದ್ಧಿವಂತನಾಗಿದ್ದ ಧನಪಾಲ ಬಂದ ಲಾಭವನ್ನೆಲ್ಲ ಕೂಡಿಡಲು ಆಧುನಿಕ ಶೈಲಿಯ ತಿಜೋರಿ ತರಲು ನಿರ್ಧರಿಸಿದ. ಕಳ್ಳ ಕಾಕರ ಭಯದಿಂದ ವಿಶೇಷ ರೀತಿಯ ಸೀಕ್ರೆಟ್ ಸೌಂಡ್ ಲಾಕರ್ ಇರುವ ತಿಜೋರಿ ತಂದು ತುಂ ತುಂ ಚಬೂರ್ ಎನ್ನುವ ಸೌಂಡ್ ಅನ್ನು ಸೀಕ್ರೆಟ್ ಲಾಕ್ ಗೆ ಅಳವಡಿಸಿದ. ಬಾಗಿಲು ತೆರೆಯುವ ಮುನ್ನ ತುಂ ತುಂ ಚಬೂರ್ ಎಂದರೆ ಬಾಗಿಲು ತೆರೆಯುತ್ತಿತ್ತು. ಬಾಗಿಲು ಮುಚ್ಚಲು ಪುನಃ ತುಂ ತುಂ ಚಬೂರ್ ಎಂದರೆ ಬಾಗಿಲು ಮುಚ್ಚುತ್ತಿತ್ತು.ತಿಜೋರಿ ತಂದ ಧನಪಾಲ ಸಂಪಾದಿಸಿದ ಹಣವನ್ನೆಲ್ಲ ಇಟ್ಟು ತುಂ ತುಂ ಚಬೂರ್ ಎಂದು ಪರೀಕ್ಷಿಸಿದ. ಆಗ ತಿಜೋರಿಯ ಬಾಗಿಲುಗಳು ಮುಚ್ಚಿದವು. ಪುನಃ ತುಂ ತುಂ ಚಬೂರ್ ಎಂದಾಗ ಬಾಗಿಲುಗಳು ತೆರೆದವು. ಮತ್ತೊಮ್ಮೆ ತುಂ ತುಂ ಚಬೂರ್ ಎಂದ ಬಾಗಿಲು ಮುಚ್ಚಿದವು ಆಗ ನೆಮ್ಮದಿಯ ನಿದ್ರೆಗೆ ಜಾರಿದನು.ಕೆಲವೇ ದಿನಗಳಲ್ಲಿ ತಿಜೋರಿಯ ವಿಷಯ ಲೋಕಪಾಲನ ಹೆಂಡತಿಗೆ ತಲುಪಿತು. ಅಸೂಯೆಯಿಂದ ಹೊಂಚು ಹಾಕುತ್ತಿದ್ದ ಅವಳು ಗಂಡನ ತಲೆಯಲ್ಲಿ ವಿಷ ಬೀಜ ಬಿತ್ತಿ, ಹೇಗಾದರೂ ಮಾಡಿ ತಿಜೋರಿಯಲ್ಲಿರುವ ಹಣವನ್ನು ಕಳ್ಳತನ ಮಾಡುವಂತೆ ದಿನೇ ದಿನೇ ಗಂಡನನ್ನು ಪೀಡಿಸುತ್ತಿದ್ದಳು. ಹೆಂಡತಿಯ ಮಾತು ಕೇಳಿ ಅಣ್ಣನ ಮನೆಯಲ್ಲಿ ಕಳ್ಳತನ ಮಾಡಲು ನಿರ್ಧರಿಸಿದನು. ಎಳ್ಳಷ್ಟು ಕೆಟ್ಟದ್ದನ್ನು ಬಯಸದ ಧನಪಾಲನ ಮನೆಗೆ ಕುಂಟು ನೆಪವೊಡ್ಡಿ ಮನೆಯ ಕಷ್ಟವನ್ನೆಲ್ಲ ಹೇಳಿ ಸಾಲ ಕೇಳಿದ. ಏನು ಅರಿಯದ ಧನಪಾಲ ತಮ್ಮನ ಹೀನಾಯ ಸ್ಥಿತಿಗೆ ಮರುಗಿ ರಕ್ತ ಹಂಚಿಕೊಂಡು ಹುಟ್ಟಿದ ಒಡಹುಟ್ಟಿದ ತಮ್ಮನನ್ನು ಮಂಚದ ಮೇಲೆ ಕೂರಿಸಿದ. ತಿಜೋರಿ ಬಳಿ ಹೋಗಿ ತುಂ ತುಂ ಚಬೂರ್ ಎಂದು ಹೇಳಿದ. ತುಂ ತುಂ ಚಬೂರ್ ಎಂದ ತಕ್ಷಣ ತಿಜೋರಿಯ ಬಾಗಿಲುಗಳು ತೆರೆದವು. ದೂರದಿಂದಲೇ ಇಣುಕಿ ನೋಡಿದ ಲೋಕಪಾಲನಿಗೆ ತಿಜೋರಿಯಲ್ಲಿನ ಹಣ, ಬೆಳ್ಳಿ, ಬಂಗಾರ ನೋಡಿ ಮತ್ತಷ್ಟು ಆಸೆ ಹೆಚ್ಚಾಯಿತು. ಬಿಟ್ಟ ಕಣ್ಣು ಬಿಟ್ಟಂತೆ ನೋಡತೊಡಗಿದ. ಅಣ್ಣ ಹತ್ತು ಸಾವಿರದ ಒಂದು ಕಂತೆಯನ್ನು ತೆಗೆದುಕೊಂಡು ತುಂ ತುಂ ಚಬೂರ್ ಎಂದ, ಪುನಃ ಬಾಗಿಲು ಮುಚ್ಚಿದವು. ಇದನ್ನು ಗಮನಿಸುತ್ತಿದ್ದ ಲೋಕಪಾಲ ಮನಸ್ಸಿನಲ್ಲಿಯೇ ಎರಡು ಮೂರು ಸಲ ತುಂ ತುಂ ಚಬೂರ್ ಎಂದು ಹೇಳಿಕೊಂಡು ಅಣ್ಣ ಕೊಟ್ಟ ಹತ್ತು ಸಾವಿರ ರೂಪಾಯಿ ಕಂತೆಯನ್ನು ತೆಗೆದುಕೊಂಡು ಮನೆಗೆ ಬಂದ. ಬಕಪಕ್ಷಿಯಂತೆ ಕಾಯುತ್ತಿದ್ದ ಹೆಂಡತಿಗೆ ಹಣದ ಕಂತೆಯನ್ನು ಕೊಟ್ಟು ನಡೆದ ಘಟನೆಯನ್ನು ವಿವರಿಸಿದ. ನಾಳೆ ಮಧ್ಯಾಹ್ನ ಅಣ್ಣ-ಅತ್ತಿಗೆ ಹೊಲಕ್ಕೆ ಹೋದಾಗ ತಿಜೋರಿ ಕಳ್ಳತನ ಮಾಡುವುದಾಗಿ ತಿಳಿಸಿದ. ಅದೇ ಗುಂಗಿನಲ್ಲಿ ಗಂಡ-ಹೆಂಡತಿ ಪಿಸುಗುಡುತ್ತಾ ನಿದ್ರೆಗೆ ಜಾರಿದರು. ಬೆಳಗಾಗುತ್ತಲೇ ಅಣ್ಣ-ಅತ್ತಿಗೆ ಎಂದಿನಂತೆ ಕೃಷಿ ಕೆಲಸದಲ್ಲಿ ತೊಡಗಲು ಹೊರಟರು. ಹೊಲಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಲೋಕಪಾಲ, ಅಕ್ಕಪಕ್ಕದ ಮನೆಯವರು ಯಾರು ಇಲ್ಲದ ಸಮಯ ನೋಡಿ ಮನೆಯ ಬೀಗ ಮುರಿದು ಕಳ್ಳ ಬೆಕ್ಕಿನಂತೆ ನಿಧಾನವಾಗಿ ಒಳಗೆ ಹೋಗಿ ತಿಜೋರಿ ಮುಂದೆ ನಿಂತು ತುಂ ತುಂ ಢಮಾರ್ ಎನ್ನುವನು. ಬಾಗಿಲು ತೆರೆಯಲೇ ಇಲ್ಲ ಮತ್ತೆ ತುಂ ತುಂ ಡಿಮೀರ್ ಎನ್ನುವನು. ಆಗಲು ತಿಜೋರಿಯ ಬಾಗಿಲು ತೆರೆಯಲೇ ಇಲ್ಲ. ಗಲಿಬಿಲಿಗೊಂಡ ಲೋಕಪಾಲ ಮತ್ತೊಮ್ಮೆ ತುಂ ತುಂ ಘಮಾರ್ ಎಂದ ಬಾಗಿಲು ತೆಗೆಯಲೇ ಇಲ್ಲ. ಅಯ್ಯೋ! ಅಣ್ಣ ಹೇಳಿದ ಸೀಕ್ರೆಟ್ ಕೋಡ್ ಮರೆತೇ ಹೋಗಿದೆ ಎಂದು ನಿರಾಸೆಯಾಗಿ ಮನೆಗೆ ಹೋದನು. ಹಣ ತರುತ್ತಾನೆ ಎಂದು ಕಾಯುತ್ತಿದ್ದ ಹೆಂಡತಿಗೆ ಪಿತ್ತ ನೆತ್ತಿಗೇರಿ ಒಂದು ಹೆಸರು ನೆನಪಿಡೋಕೆ ಆಗಲ್ವಾ? ಎಂದು ಕೆನ್ನೆಗೆ ತಿವಿಯುತ್ತಾಳೆ. ಆಗ ಅಯ್ಯೋ! ನಾನೇನು ಮಾಡಲಿ? ಅದೇನೋ ತುಂ ತುಂ ಢಮಾರ್ ಎಂದು ಅಣ್ಣ ಹೇಳಿದ್ದ. ನಾನು ಅದನ್ನೇ ಹೇಳಿದೆ ಆದರೆ ತೆರೆಯಲಿಲ್ಲ ಅಣ್ಣ ಹೇಳಿದ ಮಂತ್ರ ಮರತೇ ಹೋಯಿತು ಎಂದನು. ಕೋಪಗೊಂಡ ಹೆಂಡತಿ ಅದೆಲ್ಲ ನಂಗೆ ಗೊತ್ತಿಲ್ಲ. ನಿಮ್ಮ ಅಣ್ಣನಿಗಿಂತ ನಾವು ಶ್ರೀಮಂತರಾಗಬೇಕು ಎಂದು ಹಠ ಮಾಡುತ್ತಾಳೆ. ಹೆಂಡತಿಯ ಹಠಕ್ಕೆ ಕಟ್ಟುಬಿದ್ದು ತಮ್ಮ ಊರಲ್ಲೇ ಇದ್ದ ದೊಡ್ಡ ಚಿನ್ನದ ಅಂಗಡಿಯಲ್ಲಿ ಕಳ್ಳತನ ಮಾಡಲು ನಿರ್ಧರಿಸಿದ. ಅವತ್ತು ರಾತ್ರಿ ಒಂದು ದೊಡ್ಡ ಚೀಲದೊಂದಿಗೆ ಚಿನ್ನದ ಅಂಗಡಿಗೆ ಹೋಗಿ ಬೀಗ ಮುರಿದು ಚಿನ್ನದ ಆಭರಣಗಳನ್ನು ಚೀಲದಲ್ಲಿ ತುಂಬಿಕೊಳ್ಳುತ್ತಿರುವಾಗ ಗಡಿಬಿಡಿಯಲ್ಲಿ ಆಭರಣದ ಪೆಟ್ಟಿಗೆ ಜಾರಿ ನೆಲಕ್ಕೆ ಬಿದ್ದುಬಿಡುತ್ತದೆ. ನಿಶ್ಯಬ್ದವಾದ ರಾತ್ರಿಯಲ್ಲಿ ಆಭರಣದ ಸದ್ದಿಗೆ ಬೀದಿ ನಾಯಿಯೊಂದು ಒಂದೇ ಸಮನೆ ಬೊಗಳುತ್ತದೆ. ನಾಯಿ ಬೊಗಳುವ ಶಬ್ದಕ್ಕೆ ಅಕ್ಕಪಕ್ಕದ ಮನೆಯವರೆಲ್ಲ ಓಡಿ ಬಂದು ಆಭರಣ ಕದಿಯುತ್ತಿದ್ದ ಲೋಕಪಾಲನನ್ನು ಹಿಡಿದು ಪೋಲೀಸರಿಗೆ ಒಪ್ಪಿಸುತ್ತಾರೆ. ಬೆಳಗಾಗುತ್ತಿದ್ದಂತೆ ವಿಷಯ ತಿಳಿದ ಲೋಕಪಾಲನ ಹೆಂಡತಿ ಧನಪಾಲನ ಬಳಿ ಹೋಗಿ ಅಂಗಲಾಚಿ ಗಂಡನನ್ನು ಬಿಡಿಸುವಂತೆ ಕೇಳಿಕೊಳ್ಳುತ್ತಾಳೆ. ಮೃದು ಹೃದಯಿ ಧನಪಾಲ ತಮ್ಮನ ತಪ್ಪನ್ನು ಮನ್ನಿಸಿ ಜಾಮೀನು ಕೊಟ್ಟು ಬಿಡಿಸುತ್ತಾನೆ. ಹೆಂಡತಿ ಮಾತು ಕೇಳಿ ನಿನಗಿಂತ ಶ್ರೀಮಂತನಾಗಲು ನಿನ್ನ ಮನೆಗೂ ಕಳ್ಳತನ ಮಾಡಲು ಬಂದಿದ್ದೆ. ಆದರೆ ತಿಜೋರಿಯ ಸೀಕ್ರೆಟ್ ಕೋಡ್ ಮರೆತು ಹೋಗಿ ಬಾಗಿಲು ತೆರೆಯಲಿಲ್ಲ. ನನ್ನ ಹೆಂಡತಿ ನಾವು ನಿಮ್ಮ ಅಣ್ಣನಿಗಿಂತ ಹೆಚ್ಚು ಶ್ರೀಮಂತರಾಗಬೇಕು ಎಂದು ದುಂಬಾಲು ಬಿದ್ದಿದ್ದಳು. ಅವಳ ಒತ್ತಾಯಕ್ಕೆ ಮಣಿದು ಕೆಟ್ಟದಾರಿ ಹಿಡಿದು ಅವತ್ತೇ ರಾತ್ರಿ ನಮ್ಮೂರಿನ ಚಿನ್ನದ ಅಂಗಡಿಗೆ ಕಳ್ಳತನ ಮಾಡಲು ಬಂದೆ. ನಮ್ಮ ಅತಿಯಾಸೆಯಿಂದಾಗಿ ಜೈಲು ಸೇರುವಂತಾಯಿತು. ಪರರ ಸ್ವತ್ತು ಎಂದೂ ದಕ್ಕದು. ನನ್ನದು ತಪ್ಪಾಯಿತು ಅಣ್ಣ ಎಂದು ಅಣ್ಣ ಧನಪಾಲನ ಕಾಲಿಗೆ ಬೀಳುವನು. ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಬೇರೊಂದಿಲ್ಲ. ಬಾ ಇಬ್ಬರೂ ಸೇರಿ ಒಟ್ಟಿಗೆ ದುಡಿಯೋಣ ಎಂದ ಅಣ್ಣ ತನ್ನ ತಮ್ಮ ಲೋಕಪಾಲನನ್ನು ಕರೆದುಕೊಂಡು ಹೋಗುವನು. ಹಳೆಯ ಕಹಿ ನೆನಪುಗಳನ್ನು ಮರೆತು ಅಂದಿನಿಂದ ಇಬ್ಬರೂ ಒಟ್ಟಾಗಿ ಶ್ರಮವಹಿಸಿ ದುಡಿಯುವರು. ಸುತ್ತಮುತ್ತಲಿನ ಹಳ್ಳಿಗಳಿಗೆಲ್ಲ ಮಾದರಿ ರೈತರಾಗುವರು. ಕಂಸ( ಕಂಚುಗಾರನಹಳ್ಳಿ ಸತೀಶ್ )

ತುಂ ತುಂ ಚಬೂರ್(ಮಕ್ಕಳ ಕಥೆ ) ಕಂಚುಗಾರನಹಳ್ಳಿ ಸತೀಶ್ Read Post »

ಕಾವ್ಯಯಾನ

ಹನಿಬಿಂದು ಭಾವಗೀತೆ, ಪ್ರೀತಿ

ಕಾವ್ಯ ಸಂಗಾತಿ ಹನಿಬಿಂದು ಪ್ರೀತಿ ನನ್ನ ನಿನ್ನ ನಡುವೆ ಬಂಧಕಣ್ಣ ಸಂಚು ಮಾಡಿತುಸಣ್ಣ ಸಣ್ಣ ನೋಟವಿಂದುಬಣ್ಣದರ್ಥ ಕೊಟ್ಟಿತು ನಿನ್ನೆ ಯಾರೋ ಇದ್ದವರುಮುನ್ನ ಒಟ್ಟು ಸೇರಲುಸುಣ್ಣದಂಥ ಬಿಳಿಯ ಪ್ರೀತಿಮಣ್ಣ ಮೇಲೆ ಮೂಡಲು ಭಿನ್ನ ಭಾವ ಬದಿಗೆ ಸರಿಸಿತನ್ನ ನೋವನೆಲ್ಲ ಬೆರೆಸಿ ಜ್ಞಾನ ಧಾರೆ ಹೆಚ್ಚಿಸುತ್ತಾಹೃಣ್ಮನಗಳ ಜೊತೆ ಸೇರಿಸಿ ರನ್ನ ಮುದ್ದು ಆತ್ಮೀಯತೆಪುಣ್ಯ ಕಾರ್ಯ ಮಾಡುತಹೆಣ್ಣ ಜನ್ಮ ಸಾರ್ಥಕ್ಯದಹೊನ್ನ ಭಾವ ಮೂಡುತ ——– ಹನಿಬಿಂದು

ಹನಿಬಿಂದು ಭಾವಗೀತೆ, ಪ್ರೀತಿ Read Post »

ಕಾವ್ಯಯಾನ

“ಪೂರ್ಣಗೊಳ್ಳದ ಚಿತ್ರಕ್ಕೆ ಬಣ್ಣವ ಬಳಿಯುತ್ತ….” ವೈ.ಯಂ.ಯಾಕೊಳ್ಳಿ

ಕಾವ್ಯ ಸಂಗಾತಿ ವೈ.ಯಂ.ಯಾಕೊಳ್ಳಿ “ಪೂರ್ಣಗೊಳ್ಳದ ಚಿತ್ರಕ್ಕೆ ಬಣ್ಣವ ಬಳಿಯುತ್ತ….” ಇಲ್ಲಿ ಇದ್ದ ಮೇಲೆ ಏನೂತೊರೆಯಲಾಗದುಬೆನ್ನತ್ತಿ ಬಂದಿರುವದನುನಮ್ಮದೆ ಎಂಬುದಮರೆಯಬಾರದು ಬಿಡಲೆನು ಮೂರು ದಿನದಸಂತೆಯಲ್ಲ ಜೀವನದಾಟಬಡಿದಾಡಿ ಮುಗಿಸಲುಅಪರಿಚಿತರೊಡನೆ ಜಗಳವಲ್ಲಸಂಸಾರ ಕೂಟ ಒಡನೆ ಇದ್ದವರು ಬಿಡದೆಕಾಡುವರು ನಿಜದ ಮಾತುಅನಿವಾರ್ಯ ಹೊಂದಿಕೆಯೆಇಲ್ಲಿ‌ ಮುಖ್ಯ ಧಾತು ಯಾರನೆ ದೂಷಿಸುತ ಏನನೋನಿಂದಿಸುತ ಅತ್ತರೇನು ಬಂತುಹೊತ್ತು ತಂದ ತಟ್ಟೆಯಅನ್ನವ ನಾವೇ ಉಣ್ಣಬೇಕು ಎನಿತು ಬಡಿದಾಡಿದರೂ.ಎಷ್ಟು ಕಾದಾಡಿದರೂಅಂತಿಮ ನಿರ್ಣಯವಾಗದ ಯುದ್ದಯಾವ ನ್ಯಾಯಾಲಯದಲೂದಾವೆ ಹೂಡಿದರೂ ಉತ್ತರಸಿಗದ ವ್ಯಾಜ್ಯ ಹೃದಯದ‌ ಪ್ರಶ್ನೆಗಳಿಗುತ್ತರವಹೃದಯವೆ ಕೊಡಬೇಕುದೊರಕದು‌ ಬೇರೆಡೆಗೆಎನಿತು ಹುಡುಕಿದರೂ ತಾಜಮಹಲಿ ಮುಂದೆ ನಗುತರಾಜರಾಣಿಯಂತೆ ನಿಂತುತಗೆಸಿಕೊಂಡ ಪೋಟೊಬಂದು ಕಾಡುತ್ತವೆ ಆಗಾಗಎಲ್ಲರಿಗೂ ಕನಸಿನಲ್ಲಿಅದನೆ ನಿಜವೆಂದು‌ ನಂಬಿಹೊರಡಲಾಗದುಮರುದಿನದ ನನಸಿನಲ್ಲಿ ಹಾಗೆಂದುಮಧ್ಯ ರಾತ್ರಿಯಲಿಎದ್ದು ಹೋಗಲಸಾಧ್ಯಅದು ಕವಿತೆಕಥೆಯಲಷ್ಟೇ ಬರೆದದ್ದು ತೂತಿರುವ ದೋಸೆಯನೆ ಕತ್ತರಿಸಿ ತಿನ್ನುತ್ತಸುಖವ ಅನುಭವಿಸಬೇಕುಹರಿದ ಹಾಸಿಗೆಯನೆಹೊಲಿದು ಹೊದ್ದುಕೊಂಡುಮತ್ತೆ ಕನಸುಗಳ ಕಾಣಬೇಕು —–ವೈ. ಎಂ.ಯಾಕೊಳ್ಳಿ

“ಪೂರ್ಣಗೊಳ್ಳದ ಚಿತ್ರಕ್ಕೆ ಬಣ್ಣವ ಬಳಿಯುತ್ತ….” ವೈ.ಯಂ.ಯಾಕೊಳ್ಳಿ Read Post »

ಕಾವ್ಯಯಾನ

ಡಾ ಸಾವಿತ್ರಿ ಕಮಲಾಪೂರ “ಮಾರ್ಧನಿ”

ಕಾವ್ಯ ಸಂಗಾತಿ ಡಾ ಸಾವಿತ್ರಿ ಕಮಲಾಪೂರ “ಮಾರ್ಧನಿ” ಅಂದು ಇದೇ ಹಾದಿಯಲ್ಲಿಬೆಂದ ಕಾಲುಗಳುಬಸವಳಿದು ರೋಧಿಸಿದವುದಿಕ್ಕು ದಿಕ್ಕಿಗೂ ಕೂಗಿ ಕರೆದ ಧ್ವನಿಮರಳಿ ಬಂದಿತುನನ್ನದೇ ಕನಸುಗಳ ಹಾದಿಗೆಸಂತಸದ ದಿನಗಳನ್ನು ಮೆಲುಕು ಹಾಕುತ್ತಾ   ಅಂತರಾತ್ಮದ ಅರಿವಿನ ಪ್ರಜ್ಞೆಗೆಮೂಕ ಸಾಕ್ಷಿಯಾಗಿಕಂಗಳಲ್ಲಿ ತುಂಬಿದ ಕನಸುಗಳಿಗೆಸೋತು ಹೋಗಿದ್ದೇನೆದುಡಿದು ಸವೆಸಿದ ಹಾದಿಗೆ ಹಸಿರುಕ್ರಾಂತಿಯ ಹರಿಕಾರಬಾಬು ಜಗಜ್ಜೀವನರಾಮ್  ನೆಹರು ಭೋಸರ ಅಂತರಾತ್ಮದಸ್ವಾತಂತ್ರ್ಯದ ಕಿಚ್ಚಿನ ರಕುತದಕಲೆಗಳು ಮಾಯವಾಗಿಲ್ಲ ಮಾಯದ ಜಿಂಕೆ ಬೆನ್ನತ್ತಿದರಾವಣನ ಅರಿ ರಾಮನರಾಮರಾಜ್ಯದ ಪರಿಕಲ್ಪನೆಮಹಾತ್ಮಾ ಗಾಂಧೀಜಿಯಕನಸು ನನಸಾಗಲೇ ಇಲ್ಲ ಸುಡುವ ಕಾಲು ನೆಲದಲ್ಲಿತಂಪು ತಂಗಾಳಿ ಸೂಸಿದಚಳಿ ಮಳೆ ಗಾಳಿ ಬಿಸಿಲಿಗೆಬೆವರು ಸುರಿಸಿದ ಕಂಗಳುಇನ್ನೂ ಸಂತಸ ಕಂಡಿಲ್ಲಸಂತರು ಶರಣರು ದಾಸರುಇದೆ ಹಾದಿಯಲ್ಲಿ ನಡೆದು ಹೋದಹೆಜ್ಜೆ ಗುರುತು ಪಾದಗಳ ಪೋಟೋನಮ್ಮ ನಮ್ಮ ಜಗುಲಿಯ ಮೇಲೆಹಾಗೇ ಕುಳಿತುಕೊಂಡುರಾರಾಜಿಸುತ್ತಿವೆ ನಮ್ಮದೇ ಕಟ್ಟೆಯೊಳಗೆ ಬಂಧಿಸಿ ಪರದೆಯೊಳಗೆ ಮಡಿ ಮಾಡಿ ಶೋಷಣೆಯ ಸುಲಿಗೆಯೊಳಗೆ ಬಂದಿಖಾನೆ ಆಗಿದ್ದಾವೆನಮ್ಮ ನಮ್ಮ ದೇವರುಗಳು ನಾಡು ಸಮತೆಯ ಗೂಡುಹುಡುಕುತ್ತಿರುವೆಅಲ್ಲಿ ಇಲ್ಲಿ ಬಸವಣ್ಣ ಬುದ್ಧ ಗಾಂಧಿಯ ಪೋಟೋಗಳ ಮೇಲೆಕುಳಿತ ಧೂಳು ವರೆಸುತ್ತ ಕಣ್ಣಗಲ ಮಾಡಿ ವರುಷಕ್ಕೊಮ್ಮೆತಳಿರು ತೋರಣ ಕಟ್ಟಿಸಿಂಗರಿಸಿ ಧ್ವಜವು ಹಾರಿಸಿಜೈಕಾರ ಕೂಗುವ ನಮ್ಮೆದೆಯಗಟ್ಟಿ ಕೂಗಿಗೆ ಎಚ್ಚರಗೊಳ್ಳಲಿಲ್ಲ ನಾಡು ತೆಂಗು ಬಾಳೆ ಶ್ರೀಗಂಧದ ಬೀಡುಅನೇಕ ಗುಡಿ ಗೋಪುರ ದೊಳಗೆಬಚ್ಚಿಕೊಂಡು ತಿರುಗುವಅಲೆಮಾರಿಯಂತೆನಮ್ಮ ನಮ್ಮ ಬದುಕುಎಲ್ಲಿಂದ ? ಬರಬೇಕುಸಮ ಸಮಾಜದ ಪರಿಕಲ್ಪನೆಇದು ನಮ್ಮ ಭ್ರಮೆ ಎನ್ನಲೇ? —————ಡಾ ಸಾವಿತ್ರಿ ಕಮಲಾಪೂರ

ಡಾ ಸಾವಿತ್ರಿ ಕಮಲಾಪೂರ “ಮಾರ್ಧನಿ” Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟನೋಟ ~ ೨೦ ಮೊಗೆದಷ್ಟೂ ನೆನಪುಗಳು. ಹೀಗೆ ಸ್ನೇಹಿತರೊಂದಿಗೆ ಜಾಲಿಯಾಗಿ ಪ್ರಯಾಣ ಮಾಡುತ್ತಾ ಆಫೀಸಿನಲ್ಲಿ ಹೊಸ ವ್ಯವಹಾರ ವಿಭಾಗದಲ್ಲಿ ಕೆಲಸ ಕಲಿಯುತ್ತಾ ದಿನಗಳು ಬಹಳ ಬೇಗನೆ ಓಡಿ ಹೋದ ಹಾಗೆ ಅನಿಸುತ್ತಿತ್ತು. ಆಗ ಬಹಳ ಜನ ಅವಿವಾಹಿತ ಸಹೋದ್ಯೋಗಿಗಳು ಇದ್ದುದರಿಂದ ಅವರ ಮದುವೆ ಸಮಾರಂಭಗಳು ಆಗಾಗ ಆಗುತ್ತಿದ್ದವು. ಅಲ್ಲದೆ ಅವರ ಸೋದರ ಸೋದರಿಯರ ಮದುವೆಗಳು ನಡೆಯುತ್ತಿದ್ದವು .ಹಾಗೆ ನಂಜನಗೂಡಿನಲ್ಲಿ ಇದ್ದಾಗ ಹೋದ ಮದುವೆ ಸಮಾರಂಭಗಳಲ್ಲಿ ಮೊದಲನೆಯದು ಗಾಯತ್ರಿ ದೇವಿ ಅವರ ಅಕ್ಕನ ಮದುವೆ. ಅಂದು ಭಾನುವಾರವಾಗಿದ್ದರಿಂದ ಎಲ್ಲರೂ ಮಾತನಾಡಿಕೊಂಡು ಕೇಂದ್ರ ಬಸ್ ನಿಲ್ದಾಣದಲ್ಲಿ ಸೇರಿ ಅಲ್ಲಿಂದ ಮತ್ತೊಂದು ಬಸ್ನಲ್ಲಿ ಹೋಗಿ ಮದುವೆ ಸಮಾರಂಭ ಮುಗಿಸಿ ಬಂದಿದ್ದೆವು. ಈ ಮೊದಲೇ ಹೇಳಿದ ಹಾಗೆ ಮಂಡ್ಯದಲ್ಲಿ ಸಹೋದ್ಯೋಗಿಯಾಗಿದ್ದು ಈಗ ನಂಜನಗೂಡಿಗೆ ಬಂದಿದ್ದ ಮಂಜುಳಾ ಅವರ ಮದುವೆ ನಮ್ಮದೇ ಶಾಖೆಯ ರೇವಣ್ಣ ಅವರೊಂದಿಗೆ ನಿಶ್ಚಯವಾಗಿದ್ದು ಮೈಸೂರಿನಲ್ಲಿ ಮದುವೆ ಇತ್ತು. ಅದು ಜುಲೈ ಒಂದರಂದು. ನಮಗೆ ಆಗ ಸಾಂದರ್ಭಿಕ ರಜೆ, ಜುಲೈನಿಂದ ಆರಂಭವಾಗಿ ಜೂನ್ ಗೆ ಕೊನೆಗೊಳ್ಳುತ್ತಿತ್ತು ಹಾಗಾಗಿ ಆ ರಜೆ ವರ್ಷದ ಮೊದಲ ದಿನವೇ ರಜೆ ಹಾಕಲು ಯಾರಿಗೂ ಇಷ್ಟ ಇರಲಿಲ್ಲ. ಬೆಳಿಗ್ಗೆ ಬೇಗ ಹೋಗಿ ಮದುವೆ ಮಂಟಪಕ್ಕೆ ಹಾಜರಾತಿ ಹಾಕಿ 11:30ಗೆ ಶಾಖೆಗೆ ವಾಪಸ್ ಆಗಿದ್ದೆವು. ಹಾಗೆಯೇ ಗೆಳತಿ  ಸರಸ್ವತಿಯ ಮದುವೆಯು ಒಂದು ವಾರ ಬಿಟ್ಟು ಜುಲೈ 8ಕ್ಕೆ ಇದುದರಿಂದ ಅವಳ ಮದುವೆಗೆ ಸಹ ಹಾಗೆಯೇ ಬೆಳಿಗ್ಗೆಯೇ ಹೋಗಿ ಆಫೀಸಿಗೆ ಬಂದಿದ್ದೆವು. 11:30ಗೆ ಬಂದೆವು ಎಂದು ಹೇಳಿದೆನಲ್ಲ ಅದರ ವಿವರ ಹೇಳುತ್ತೇನೆ ಕೇಳಿ. ನಮ್ಮ ಉದ್ಯೋಗಿಗಳ ನಿಯಮಾವಳಿ Staff Regulation ಅನುಸಾರ ತಿಂಗಳಿನಲ್ಲಿ ಎರಡು ಬಾರಿ ಬೆಳಗ್ಗಿನ ಹೊತ್ತು ಒಂದು ಗಂಟೆ ಕಾಲ ಪರ್ಮಿಷನ್ ಹಾಗೂ ಸಂಜೆಯ ಹೊತ್ತು ಒಂದು ಗಂಟೆಕಾಲ ಪರ್ಮಿಷನ್ ತೆಗೆದುಕೊಳ್ಳಲು ಅವಕಾಶವಿದೆ .ಅಂದರೆ ತಿಂಗಳಲ್ಲಿ ಎರಡು ಬಾರಿ ಬೆಳಿಗ್ಗೆ 11:30ಗೆ ಬರಬಹುದು ಹಾಗೂ ಎರಡು ಬಾರಿ ನಾಲ್ಕು ವರೆಗೆ ಹೋಗಬಹುದು ಹಾಗೆ ಹೋಗಿದ್ದನ್ನು ಹಾಜರಾತಿ ಪುಸ್ತಕದಲ್ಲಿ ಬರೆಯುತ್ತಾರೆ ಏನಾದರೂ ಅನಿವಾರ್ಯ ತುರ್ತಿನ ಪರಿಸ್ಥಿತಿ ಇದ್ದಲ್ಲಿ ಆ ರೀತಿಯ ಅವಕಾಶವನ್ನು ಬಳಸಿಕೊಳ್ಳಬಹುದು. ಚಿಕ್ಕಬಳ್ಳಾಪುರದಲ್ಲಿ ಇದ್ದಾಗ ಮೈಸೂರಿಗೆ ಬರುವ ಮತ್ತು  ವಾಪಸು ಹೋಗುವ ಸಂದರ್ಭದಲ್ಲಿ ಈ ಸೌಲಭ್ಯವನ್ನು ಬಳಸಿಕೊಳ್ಳುತಿದ್ದೆ. ನಂಜನಗೂಡಿಗೆ ರೈಲಿನಲ್ಲಿ ಹೋಗಿ ಬರುತ್ತಿದ್ದುದರಿಂದ ಆ ಸಮಯ ಈ ರೀತಿಯ ಅರ್ಲಿ ಪರ್ಮಿಷನ್ ಮತ್ತು ಲೇಟ್ ಪರ್ಮಿಷನ್ ಗಳಿಗೆ ಹೊಂದದೆ ಇದ್ದದರಿಂದ ಅಲ್ಲಿ ಹೆಚ್ಚು ಈ ಸೌಲಭ್ಯವನ್ನು ಬಳಸಿಕೊಳ್ಳುತ್ತಿರಲಿಲ್ಲ ಒಮ್ಮೊಮ್ಮೆ ದೇವಸ್ಥಾನಕ್ಕೆ ಹೋಗುವಾಗ ಬಳಕೆಯಾಗುತ್ತಿತ್ತು ಅಷ್ಟೇ. ಮತ್ತೊಂದು ಸಮಾರಂಭದ ನೆನಪು ಎಂದರೆ ಸಹೋದ್ಯೋಗಿ ಪ್ರಕಾಶ್ ಅವರ ಮನೆಯ ಗೃಹಪ್ರವೇಶದ ಸಂದರ್ಭ ಅವರ ಮನೆ ಶ್ರೀ ರಾಮಪುರದ ಮಧುವನ ಲೇಔಟ್ ನಲ್ಲಿ ಕಟ್ಟಿದ್ದರು. ಅರ್ಧ ದಿನ ರಜೆ ಹಾಕಿ ನಾವು ಎಂಟು ಹತ್ತು ಜನದ ಗುಂಪು ಆ ಸಮಾರಂಭಕ್ಕೆ ಬಂದಿದ್ದೆವು. ವಾಪಸ್ ಹೋಗುವಾಗ ಅಲ್ಲಿಂದ ವಿವೇಕಾನಂದ ನಗರಕ್ಕೆ ಬಂದು ಅಲ್ಲಿಂದ ಬಸ್ ಹಿಡಿದು ಹೋಗಿದ್ದು.  ಬರೀ ಬಯಲೇ ಕಾಣುತ್ತಿದ್ದ ಆ ಜಾಗ ಈಗ ಅದೆಷ್ಟು ಬ್ಯುಸಿ ಆಗಿದೆ ಎಂದರೆ ನಂಬಲು ಅಸಾಧ್ಯ. ಈ ಮಧ್ಯೆ ಗೆಳತಿ ಕೃಪಾಳ ಮದುವೆ ನಿಶ್ಚಯವಾಗಿ ನಿಶ್ಚಿತಾರ್ಥವು ಸಹ ನಡೆಯಿತು. ಅವರ ಮನೆಯಲ್ಲೇ ನಡೆದ ನಿಶ್ಚಿತಾರ್ಥಕ್ಕೆ ನಾನು ಮತ್ತು ಶೈಲಾ ಹೋಗಿದ್ದೆವು. ನಗದು ಗುಮಾಸ್ತೆಯಾಗಿ ಕೆಲಸ ಮಾಡಿದ್ದು ಸಹ ನಂಜನಗೂಡು ಶಾಖೆಯಲ್ಲಿ ಪ್ರಪ್ರಥಮ ಬಾರಿಗೆ. ಸಾಮಾನ್ಯವಾಗಿ ನಿಗಮದ ಎಲ್ಲಾ ಶಾಖೆಗಳಲ್ಲೂ ಕಾಯಂ ಆದ ಕ್ಯಾಶಿಯರ್ ನಗದು ಗುಮಾಸ್ತೆ ಇರುತ್ತಾರೆ. ಅವರು ರಜೆ ಹೋದಾಗ ಮಿಕ್ಕ ಸಹಾಯಕ ಹುದ್ದೆಯಲ್ಲಿರುವ ಉದ್ಯೋಗಿಗಳನ್ನು ಅವರ ಸೀನಿಯಾರಿಟಿ ಪ್ರಕಾರ ಪಟ್ಟಿ ಮಾಡಿ ಒಬ್ಬರಾದ ನಂತರ ಒಬ್ಬರ ಪಾಳಿ ಬರುವಂತೆ ಮಾಡಿರುತ್ತಾರೆ. ಚಿಕ್ಕಬಳ್ಳಾಪುರದಲ್ಲಿ ಇದ್ದಾಗ ಖಾಯಂ ಕ್ಯಾಶಿಯರ್ ಹೆಚ್ಚು ರಜೆ ಹೋಗುತ್ತಿರಲಿಲ್ಲ. ಅಲ್ಲದೆ ಮೊದಲ ಆರು ತಿಂಗಳು ನಮ್ಮನ್ನು ಕ್ಯಾಶಿಯರ್ ಹುದ್ದೆಯಲ್ಲಿ ಕೂಡಿಸುತ್ತಿರಲಿಲ್ಲ. ಹಾಗಾಗಿ ನನಗೆ ಒಂದು ದಿನವೂ ನಗದುಗುಮಾಸ್ತೆಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರಲಿಲ್ಲ. ನಂಜನಗೂಡಿನಲ್ಲಿ ಆಗ ವೇಣುಗೋಪಾಲ್ ಎನ್ನುವವರು ಕ್ಯಾಶಿಯರ್ ಆಗಿದ್ದರು. ಅವರ ವೈಯುಕ್ತಿಕ ಕಾರಣಗಳಿಂದಾಗಿ ಅವರು ದೀರ್ಘ ರಜೆ ಹೋಗಿದ್ದರಿಂದ ನಮ್ಮೆಲ್ಲರಿಗೂ ನಗದು ಗುಮಾಸ್ತೆಯ ಸರದಿ ಬಂದಿತ್ತು. ನನಗೋ ನೋಟುಗಳನ್ನು ಕೈಯಲ್ಲಿ ಸರಿಯಾಗಿ ಹಿಡಿಯಲು ಸಹ ಬರುತ್ತಿರಲಿಲ್ಲ. ಅಲ್ಲದೆ ಒಂದು ರೀತಿಯ ಅಂಜಿಕೆ ಬೇರೆ ಆದರೆ ನನ್ನ ಸಹೋದ್ಯೋಗಿಗಳು ತುಂಬಾ ಸಹಕಾರ ನೀಡಿ ನನಗೆ ರಶೀದಿ ಬರೆಯುವ ಕೆಲಸ ಮಾತ್ರ ಬಿಟ್ಟು ರೂಢಿಯಾಗುವವರೆಗೆ ಬೇರೆಯವರೇ ಒಬ್ಬರಾದ ನಂತರ ಒಬ್ಬರು ಬಂದು ಹಣ ಎಣಿಸಿಕೊಳ್ಳುತ್ತಿದ್ದರು. ಇಲ್ಲಿನ ಅನುಭವದ ಮೇಲೆ ಇತ್ತೀಚೆಗೆ ಸಾಹಿತ್ಯ ರಂಗಕ್ಕೆ ಬಂದ ನಂತರ ಒಂದು ಕಥೆ ಬರೆದಿದ್ದೆ. ಕ್ಯಾಶ್ ಕೌಂಟರ್ ಎಂದಾಗ ಮತ್ತೊಂದು ಘಟನೆ ನೆನಪಿಗೆ ಬರುತ್ತದೆ. ಆಗ ಕ್ಯಾಶ್ ಕೌಂಟರ್ ಗಳಲ್ಲಿ ನಗದು ಗುಮಾಸ್ತೆಯ ಜೊತೆಗೆ ಒಬ್ಬರು ಉನ್ನತ ಶ್ರೇಣಿ ಸಹಾಯಕರು ಸಹ ಇರುತ್ತಿದ್ದರು. ರಶೀದಿಗಳಿಗೆ ಸಹಿ ಹಾಕುತ್ತಿದ್ದು ಅವರೇ. ನಾವು ನಂಜನಗೂಡಿನಲ್ಲಿ ಇದ್ದಾಗ ಮಲಿಕ್ ಅನ್ನುವವರು ಕ್ಯಾಷ್ ಕೌಂಟರಿನ ಉನ್ನತ ಶ್ರೇಣಿ ಸಹಾಯಕರು. ಬೆಂಗಳೂರಿನವರನ್ನು ನಂಜನಗೂಡಿಗೆ ಪೋಸ್ಟ್ ಮಾಡಿದ್ದರು. ಅದು ಮೈಸೂರು ಬೆಂಗಳೂರು ವಿಭಾಗಗಳು ಪ್ರತ್ಯೇಕವಾಗುವ ಮೊದಲು. ಈಗ ಅವರು ಬೆಂಗಳೂರಿಗೆ ವರ್ಗಾವಣೆ ಕೇಳಿದ್ದರು. ಆದರೆ ವಿಭಾಗಗಳು ಬದಲಾಗಿದ್ದರಿಂದ ಸ್ವಲ್ಪ ತಡವಾಗಿತ್ತು. ಅವರು  ಪ್ರತಿ ಶನಿವಾರ ಮಧ್ಯಾಹ್ನ  ಬೆಂಗಳೂರಿಗೆ ತೆರಳಿ ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ನಂಜನಗೂಡಿಗೆ ಬರುತ್ತಿದ್ದರು. ಹೀಗೆ ಒಮ್ಮೆ ಬರುವಾಗ ಅವರ ಬಳಿ ಇದ್ದ ಕ್ಯಾಶ್ ಬಾಕ್ಸ್ ನ ಕೀ ಕಳೆದುಕೊಂಡು ಬಿಟ್ಟಿದ್ದರು. ಅದಕ್ಕೆ ತಗಲುವ ವೆಚ್ಚ ಅವರಿಂದ ವಸೂಲು ಮಾಡಿದ್ದು ಅಲ್ಲದೆ ಶಿಸ್ತಿನ ಕ್ರಮ ತೆಗೆದುಕೊಂಡು ಆಗ ಅವರಿಗೆ ಎರಡು ಇಂಕ್ರಿಮೆಂಟ್ ಗಳನ್ನು ಕಡಿತ ಮಾಡಲಾಗಿತ್ತು. ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎನ್ನುವ ಎಚ್ಚರಿಕೆಯನ್ನು ನಾವು ಕಲಿತದ್ದೇ ಆಗ. ಈಗಲೂ ಕ್ಯಾಶ್ ಕೀ ನನ್ನ ಬಳಿ ಇರುವಾಗ ತುಂಬಾನೇ ಜಾಗ್ರತೆ ವಹಿಸುತ್ತೇನೆ. ಆ ಘಟನೆ ಮನಸ್ಸಿನಿಂದ ಮಾಸಿಯೇ ಇಲ್ಲ. ಹಾಗೆ ಹೀಗೆ ನೋಡನೋಡುತ್ತಲೇ ನಂಜನಗೂಡಿಗೆ ಬಂದು ಒಂದು ವರ್ಷ ಕಳೆದೇ ಬಿಟ್ಟಿತು.1991 ಅಕ್ಟೋಬರ್  ಒಂದು ವರ್ಗಾವಣೆ ಪಟ್ಟಿ ಬಿಡುಗಡೆಯಾಗಿ ಕೆಲವು ಜನರಿಗೆ ಮೈಸೂರು ನಗರದ ಶಾಖೆಗಳಿಗೆ ವರ್ಗಾವಣೆ ಸಿಕ್ಕಿತು. ಮಧ್ಯೆ ಮಂಡ್ಯಗೆ ಹೋಗಿ ಬಂದಿದ್ದರಿಂದ ನಾನು ಒಂದು ತಿಂಗಳು ತಡವಾಗಿ ನಂಜನಗೂಡಿಗೆ ಬಂದಿದ್ದೆ. ಹಾಗಾಗಿ ನನಗೆ ಆ ಪಟ್ಟಿಯಲ್ಲಿ ಮೈಸೂರಿಗೆ ವರ್ಗಾವಣೆ ಸಿಕ್ಕಿರಲಿಲ್ಲ. ಮತ್ತೊಂದು ವರ್ಷ ಕಾಯಬೇಕಾಗಿತ್ತು. ಆದರೆ ನಂಜನಗೂಡು ಓಡಾಟ ಹೋಗಿದ್ದರಿಂದ ಅಷ್ಟೇನೂ ಬೇಸರ ಆಗಲಿಲ್ಲ. ಈ ಮಧ್ಯೆ ಗೆಳತಿ ಶೈಲಾಳಿಗೆ ವಿವಾಹವಾಗಿ ಮೈಸೂರಿಗೆ ವರ್ಗಾವಣೆ ಸಿಕ್ಕಿತು. ನಿಗಮದ ನೀತಿಯ ಪ್ರಕಾರ ಕೆಲಸ ಸಿಕ್ಕ ನಂತರ ಮದುವೆಯಾದರೆ ಪತಿ ಇರುವ ಜಾಗಕ್ಕೆ ಆದಷ್ಟು ಬೇಗ ವರ್ಗಾವಣೆ ಸಿಗುತ್ತದೆ. ಹಾಗಾಗಿ ಅವಳ ಪತಿ ಮೈಸೂರಿನಲ್ಲಿ ಇದ್ದಿದ್ದರಿಂದ ತಕ್ಷಣವೇ ಅವಳಿಗೆ ವರ್ಗಾವಣೆ ಸಿಕ್ಕಿತ್ತು. ಹಾಗೆಯೇ ಗೆಳತಿ ಸರಸ್ವತಿಯೂ ಸಹ ವಿವಾಹವಾದ ಒಂದೆರಡು ತಿಂಗಳಲ್ಲಿಯೇ ಮೈಸೂರಿಗೆ ವರ್ಗಾವಣೆ ಹೊಂದಿ ಹೋಗಿದ್ದಳು. ವಿಭಾಗಿಯ ಕಚೇರಿಗಳಿಂದ ಶಾಖಾ ಕಚೇರಿಗಳಿಗೆ ವರಿಷ್ಠರು ಬಂದು ಇಲ್ಲಿನ ಕೆಲಸ ಕಾರ್ಯಗಳು ಹೇಗೆ ನಡೆಯುತ್ತಿದೆ ಎನ್ನುವುದನ್ನು ಪರಿಶೀಲಿಸುತ್ತಾರೆ. ಏನಾದರೂ ಮಾರ್ಗದರ್ಶನ ಬೇಕಾದರೆ ಕೊಡುತ್ತಾರೆ. ಹಾಗೆ ನಾನು ಹೊಸ ವ್ಯವಹಾರ ವಿಭಾಗದಲ್ಲಿ ಇದ್ದಾಗ ಆಗ ಅಲ್ಲಿನ ಮ್ಯಾನೇಜರ್ ಆಗಿದ್ದ ಆಚಾರ್ಯ ಎನ್ನುವವರು ಮತ್ತು ಆಡಳಿತ ಅಧಿಕಾರಿ ಆಗಿದ್ದ ಎಸ್ಎಂಎಸ್ ಗೋಪಾಲನ್ ಅವರು ಕಚೇರಿಗೆ ಬಂದಿದ್ದರು. ಕೆಲವೊಂದು ಕೆಲಸಗಳು ಮಾಡದೆ ಪೆಂಡಿಂಗ್ ಉಳಿದಿದ್ದನ್ನು ನನಗೆ ಹೇಗೆ ಮಾಡಬೇಕೆಂದು ಹೇಳಿಕೊಟ್ಟು ಮುಗಿಸಲು ಹೇಳಿದ್ದರು. ಹಾಗೆಯೇ ನಾನು ಮಾಡಿ ಮುಗಿಸಿದ್ದೆ ಮತ್ತೆ ಅದಕ್ಕಾಗಿ ಶಾಖಾಧಿಕಾರಿಗಳ ಕೋಣೆಗೆ ಫೋನ್ ಮಾಡಿ ಕರೆಸಿ, ಒಳ್ಳೆಯ ಪ್ರೋತ್ಸಾಹದ ನುಡಿಗಳನ್ನು ಆಡಿದ್ದರು ನಮ್ಮ ನಿಗಮದಲ್ಲಿ ಯಾವುದೇ ವರ್ಗದಲ್ಲೂ ಬೇರೆ  ಹೊಸಬರು ವರ್ಗಾವಣೆಯಾಗಿ ಬಂದಾಗ ಮೊದಲಿನಿಂದ ಶಾಖೆಯಲ್ಲೇ ಇರುವವರಿಗೆ ವಿಭಾಗಗಳಲ್ಲಿ ಬದಲಾವಣೆ ಬೇಕಾಗಿದ್ದರೆ ಮೊದಲ ಆದ್ಯತೆ ಕೊಡುತ್ತಾರೆ. ಹಾಗಾಗಿ ನಾನು ಹೊಸ ವ್ಯವಹಾರ ವಿಭಾಗವನ್ನು ಬಿಟ್ಟು ಪಾಲಿಸಿ ಸೇವೆ ವಿಭಾಗಕ್ಕೆ ಬದಲಾವಣೆ ಕೋರಿಕೊಂಡೆ. ಪಾಲಿಸಿಗಳ ಪುನರುಜ್ಜೀವನ‌ revival ಮಾಡುವ ವಿಭಾಗಕ್ಕೆ ನನಗೆ ಬದಲಾವಣೆ ಸಿಕ್ಕಿತು. ಮೊದಲಿನಿಂದ ನನಗೆ ಪಾಲಿಸಿ ಸೇವಾ ವಿಭಾಗ ಎಂದರೆ ಒಂದು ರೀತಿಯ ಆಕರ್ಷಣೆ ಆದರೆ ಮಂಡ್ಯದಲ್ಲಿ ಅವಕಾಶ ಸಿಕ್ಕಿದ್ದರೂ ಹೆಚ್ಚು ದಿನ ಆ ವಿಭಾಗದಲ್ಲಿ ಕೆಲಸ ಮಾಡಲು ಆಗಿರಲಿಲ್ಲ ಈಗ ನನ್ನಿಷ್ಟದ ವಿಭಾಗ ಸಿಕ್ಕಿತು ಎಂಬ ಖುಷಿಯಿಂದ ಹೊಸ ಕೆಲಸ ಕಲಿಯಲು ಆರಂಭಿಸಿದೆ. ಪಾಲಿಸಿಗಳ ಪ್ರೀಮಿಯಂ ಕಟ್ಟದೆ 6 ತಿಂಗಳುಗಳ ಕಾಲ ಆಗಿ ಹೋದರೆ ಪಾಲಿಸಿಗಳು ಲ್ಯಾಬ್ಸ್ ಆಗುತ್ತದೆ ಹಾಗೆ ಲ್ಯಾಪ್ಸ್ ಆದ ಪಾಲಿಸಿಗಳನ್ನು ಗೊಳಿಸಲು ಅವರ ಆರೋಗ್ಯದ ಬಗ್ಗೆ ಒಂದು ಡಿಕ್ಲರೇಷನ್ ಅದರಲ್ಲಿ ಏನಾದರೂ ಋಣಾತ್ಮಕ ಸಂಗತಿಗಳು ಇದ್ದರೆ ಅದಕ್ಕೆ ಸಂಬಂಧಿಸಿದ ಮೆಡಿಕಲ್ ರಿಪೋರ್ಟ್ ಇವೆಲ್ಲವನ್ನು ತೆಗೆದುಕೊಂಡು ಮತ್ತೆ ಪ್ರೀಮಿಯಂ ಪಡೆದುಕೊಳ್ಳಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ನಂತರ ಪ್ರೀಮಿಯಂ ಕಟ್ಟಿ ಅದನ್ನು ಚಾಲ್ತಿಗೆ ತರಬೇಕು. ಹಾಗೆ ಪರಿಶೀಲಿಸುವ ಕೆಲಸ ನನ್ನದು. ಮತ್ತೆ ಕೆಲವೊಮ್ಮೆ ಚೆಕ್ ಮುಖಾಂತರ ಅಥವಾ ಪೋಸ್ಟ್ ನಲ್ಲಿ ಕಳಿಸಿದ ಚೆಕ್ಗಳ ಮೊತ್ತಗಳು ತಾಳೆ ಯಾಗದೆ ಅವುಗಳನ್ನು ಪ್ರೀಮಿಯಂಗೆ ಸರಿದೂಗಿಸಲು ಆಗುವುದಿಲ್ಲ ಕೆಲವೊಮ್ಮೆ ಹಣ ಹೆಚ್ಚಾಗಿ ಅದನ್ನು ಡಿಪಾಸಿಟ್ ಎಂದು ಪರಿಗಣಿಸಿ ಇಡಲಾಗುತ್ತದೆ ಆ ತರಹದ ಕೇಸುಗಳನ್ನು ಪರಿಶೀಲಿಸಿ ಮುಂದಿನ ಪ್ರೀಮಿಯಂ ಗಳಿಗೆ ಅಡ್ಜಸ್ಟ್ ಮಾಡುವುದು ಅಥವಾ ಪಾಲಿಸಿದಾರರಿಗೆ ಹಣ ಹಿಂತಿರುಗಿಸುವುದು ಎಂಬುದನ್ನು ನಿರ್ಧರಿಸಿ ಹಾಗೆ ಮಾಡಬೇಕಿತ್ತು ಹಾಗೆಲ್ಲ ಮೊತ್ತಗಳು ಬಹಳ ಕಡಿಮೆ ಇದ್ದುದರಿಂದ ಮನಿ ಆರ್ಡರ್ ಮೂಲಕವೇ ಪಾಲಿಸಿದಾರರಿಗೆ ಹೆಚ್ಚಿನ ಹಣ ಇದ್ದಲ್ಲಿ ಹಿಂದಿರುಗಿಸಲಾಗುತ್ತಿತ್ತು.  8/10 ರೂಪಾಯಿಗಳನ್ನು ಸಹ ಆಗ ಮನಿ ಆರ್ಡರ್ ಮಾಡುತ್ತಿದ್ದೆವು. 40 ಗಳಿಗಿಂತ ಹೆಚ್ಚಾಗಿ ಇದ್ದರೆ ಚೆಕ್ ಮೂಲಕ ವಾಪಸ್ ಮಾಡಲಾಗುತ್ತಿತ್ತು. ಹೊಸ ವಿಭಾಗಕ್ಕೆ ಬಂದು 15 ದಿನ ಆಗಿತ್ತು ಅಷ್ಟೇ ಒಂದು ದಿನ ಪ್ರಸಾದ್ ಅವರು ಶಾಖೆಗೆ ಬಂದು ಮತ್ತೊಂದು ಪಟ್ಟಿ ಸಹಾಯಕರ ವರ್ಗಾವಣೆಗೆ ಸಿದ್ಧವಾಗುತ್ತಿದೆ ಆ ಪಟ್ಟಿಯಲ್ಲಿ ನನಗೂ ಮೈಸೂರಿಗೆ ವರ್ಗಾವಣೆ ಸಿಕ್ಕಬಹುದು ಎಂಬ ವಿಷಯ ತಿಳಿಸಿದರು ಇದು ತುಂಬಾ ಅನಿರೀಕ್ಷಿತವೇ ಆಗಿತ್ತು ಆದರೆ ಹೆಚ್ಚಿನ ಖುಷಿ ಸಹ ತಂದಿತ್ತು. ಅಂತೆಯೇ ಪಟ್ಟಿ ಬಿಡುಗಡೆಯಾಗಿತ್ತು. ನನಗೆ ಮೈಸೂರಿನ ವಿಭಾಗ ಕಚೇರಿಯ ಹೊಸ ವ್ಯವಹಾರ ವಿಭಾಗದ ಸಹಾಯಕಳಾಗಿ ವರ್ಗಾವಣೆ ಸಿಕ್ಕಿತು .ನಂತರ ತಿಳಿದ ವಿಷಯ ನನ್ನ ಕಾರ್ಯ ವೈಖರಿ ನೋಡಿದ ಮ್ಯಾನೇಜರ್ ಹಾಗೂ ಆಡಳಿತ ಅಧಿಕಾರಿ ಅವರು ನನ್ನ ಹೆಸರನ್ನು ಅವರ ವಿಭಾಗಕ್ಕೆ ಸೂಚಿಸಿದ್ದರು ಎಂದು. ಕೃಪಾಳಿಗೆ ಮೈಸೂರು ಶಾಖೆ 4 ಸಿಕ್ಕಿತ್ತು ನನ್ನ ತಂಗಿ ಛಾಯಾಳಿಗೆ ಮೈಸೂರು ಶಾಖೆ ಎರಡಕ್ಕೆ ವರ್ಗಾವಣೆ ಸಿಕ್ಕಿತು. ಒಂದು ರೀತಿಯ ನೆಮ್ಮದಿಯ ಭಾವ. ಒಟ್ಟು ನಾವು ಎಂಟು ಜನ ನಂಜನಗೂಡಿನಿಂದ ವರ್ಗಾವಣೆಯಾಗಿ ಮೈಸೂರಿಗೆ ಬಂದದ್ದು. ನಮ್ಮದೇ ಬ್ಯಾಚ್ನ ಪ್ರಕಾಶ್ ಶ್ರೀಹರಿ ಸುಬ್ರಮಣ್ಯ ನಾನು ಎಲ್ಲಾ ಮೈಸೂರಿಗೆ ವರ್ಗಾವಣೆ ಕೋರಿದ್ದರೂ ಪ್ರಸಾದ್ ಒಬ್ಬರು ಮಾತ್ರ ವರ್ಗಾವಣೆ ಬಯಸದೆ ನಂಜನಗೂಡಿನಲ್ಲಿಯೇ ಉಳಿದುಕೊಂಡಿದ್ದರು. ಮೊದಲಿನಿಂದ ಬಂದ ಅಭ್ಯಾಸದಂತೆ

Read Post »

You cannot copy content of this page

Scroll to Top