ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಗಾಯತ್ರಿ ರವಿ. ಹುಬ್ಬಳ್ಳಿ ಅವರ ಕವಿತೆ “ಗಾಂಧಿ ನೋಟು”

ಕಾವ್ಯ ಸಂಗಾತಿ ಗಾಯತ್ರಿ ರವಿ. ಹುಬ್ಬಳ್ಳಿ “ಗಾಂಧಿ ನೋಟು”  ಕಚೇರಿಯ ಖಜಾನೆಯಲ್ಲಿ ಗಾಂಧಿ ನೋಟಿನದೇ ದರ್ಬಾರು ಹೊಸ ನೋಟುಗಳು  ಬಂದರೆನೋಟವೆಲ್ಲ ಅವನೆಡೆಗೆ ಸೂಸುವ ನೋಟಿನ ಸುವಾಸನೆ  ಒಂದೇ ದಾರದಲ್ಲಿ ನೂರರ ಕಟ್ಟು ಈಗಷ್ಟೇ  ಜನ್ಮತಳೆದ ಎದ್ದೇಳಲು  ಓಲಾಡುವ ಎಳೆಗರುವಿನ  ನೊಸಲು  ಲೆಕ್ಕ ಒಪ್ಪಿಸುವಾಗ ಹೆಚ್ಚಿಗೆ ಬಂದರೆ ತಪ್ಪಿದೆ ಅಂತಲೇ ಅರ್ಥ  ಕಡಿಮೆಯಾದರೆ ಮತ್ತೆ ಮತ್ತೆ ಎಣಿಸುವ ಯಂತ್ರದ ಬಾಯಿಂದ ಹೊರಗೆ ಬರುವ  ಅಲ್ಲಿಯೂ ಸರಿಯಾಗಲಿಲ್ಲವೆಂದರೆ ಕೈಯಿಂದ ಒಂದೊಂದೇ ನೋಟನ್ನು ಎತ್ತಿ ಎತ್ತಿ ಹಾಕುವುದು  ಒಂದೊಮ್ಮೆಹರಿದ ನೋಟಿಗೆ  ಹಾಳೆಯ ತುಂಡರಿಸಿ ಹದವಾಗಿ ಹಚ್ಚಿ ಆಪರೇಷನ್ ಮಾಡಿದ್ದುಉಂಟು ಎಂದೂ ಕಳೆಗುಂದದ ನಗು ಅವನದು  ಮಾಸಿದ ಕಪ್ಪಾದ ಇಟ್ಟಲ್ಲೇ ಇಟ್ಟು ಧೂಳು ತಿಂದ ಕಮಟು ವಾಸನೆಯ ಮಳೆಯಲ್ಲಿ ತೋಯಿದ ಬಣ್ಣ ವಾಡಿದ ಬೆವರಲಿ ಬೆಂದಬರಿ ಮೈ ಕುಬೇರ  ಕೌಂಟರಿನಿಂದ  ಖಜಾನೆಗೆ ಬರುವಷ್ಟರಲ್ಲಿ ನಾಲ್ಕಾರು ಬಾರಿ ಎಣಿಸಿಕೊಳ್ಳುವ  ಸ್ಥಿರವಾಗಿ ನಿಲ್ಲದ ಪಾದರಸ  ಗಾಂಧಿ ನೋಟುಗಳೆಂದರೆ ಬರಿ ಸಂಖ್ಯೆಗಳಲ್ಲ ನೋಟಿನ ನೋಟದಲ್ಲೂ ಗಾಂಧಿಯ ಸತ್ಯಾನ್ವೇಷಣೆ. ಗಾಯತ್ರಿ ರವಿ. ಹುಬ್ಬಳ್ಳಿ

ಗಾಯತ್ರಿ ರವಿ. ಹುಬ್ಬಳ್ಳಿ ಅವರ ಕವಿತೆ “ಗಾಂಧಿ ನೋಟು” Read Post »

ಇತರೆ

“ಕವಿ ಚಿಂತಕ ಬಸವ ಭಕ್ತ ಡಾ ಸಿದ್ದಯ್ಯ ಪುರಾಣಿಕ”ವಿಶೇಷ ಲೇಖನ, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ವ್ಯಕ್ತಿ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ಕವಿ ಚಿಂತಕ ಬಸವ ಭಕ್ತ ಡಾ ಸಿದ್ದಯ್ಯ ಪುರಾಣಿಕ”  ಅತ್ಯಂತ ಬಡತನದಲ್ಲಿ ಹೈದ್ರಾಬಾದ ನಿಜಾಮನ ಕಾಲದಲ್ಲಿ ಹುಟ್ಟಿದ ಸಿದ್ದಯ್ಯ ಎಂಬ ಬಾಲಕ ಕನ್ನಡ ಉರ್ದು ಇಂಗ್ಲಿಷ್ ಹಿಂದಿ ಮರಾಠಿ ಭಾಷೆಯ ಮೇಲೆ ಪ್ರಭುತ್ವವನ್ನು ಹೊಂದಿ ಕನ್ನಡ ಸಾಹಿತ್ಯ ಲೋಕದ ವಿಶ್ವ ಮಾನವನ ಸಂದೇಶವನ್ನು ಸಾರಿದ ಶ್ರೇಷ್ಠ ಶಿವಯೋಗ ಸಾಧಕರು ಸಾವಿಲ್ಲದ ಶರಣರು . ಕನ್ನಡ ಸಾಹಿತ್ಯ ಅದರಲ್ಲೂ ವಚನ ಸಾಹಿತ್ಯದ ಮೌಲ್ಯವನ್ನು ಪಸರಿಸುವ ವೈಚಾರಿಕ ನೆಲೆಯಲ್ಲಿ ರೂಪಗೊಂಡ ಅಪ್ರತಿಮ ಸಾಹಿತ್ಯದ ರಾಯಭಾರಿ ಡಾ ಸಿದ್ದಯ್ಯ ಪುರಾಣಿಕ ಅವರು.ಮನೆಯಲ್ಲಿ ಅಜ್ಜ ಅಪ್ಪ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಸಂಪ್ರದಾಯ ಜಂಗಮತ್ವದಿಂದ ಹೊರ ಬಂದು ಅಪ್ಪ ಬಸವಣ್ಣನವರ ವಿಚಾರಧಾರೆಗಳನ್ನು ಬದುಕಿನುದ್ದಕ್ಕೂ ಪಸರಿಸಿದ ಧೀಮಂತ ಸಾಹಿತಿ. ಉನ್ನತ ಅಧಿಕಾರಗಳಲ್ಲಿದ್ದು ಕನ್ನಡದಲ್ಲಿ ಶ್ರೇಷ್ಠ ಕೆಲಸ ಮಾಡಿದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ನವರತ್ನ ರಾಮರಾವ್ ಅಂಥಹ ಮಹನೀಯರ ಸಾಲಿನಲ್ಲಿ ನಿರಂತರ ರಾರಾಜಿಸುವವರು.  ‘ವಚನೋದ್ಯಾನದ ಅನುಭಾವಿ ಬಿರುದಾಂಕಿತ,  ‘ಕಾವ್ಯಾನಂದ’ ಕಾವ್ಯನಾಮಾಂಕಿತ, ‘ಐಎಎಸ್’ ಸ್ಥಾನಾಲಂಕೃತ, ಸಹೃದಯತೆಯ ಶ್ರೇಷ್ಠ ಔನ್ನತ್ಯರಾದ ಕನ್ನಡ ನಾಡಿನ ಅಗ್ರಗಣ್ಯ ಶ್ರೇಯಾಂಕಿತ ಮಹನೀಯ ಡಾ. ಸಿದ್ಧಯ ಪುರಾಣಿಕರು. *ಹುಟ್ಟು ಮತ್ತು ಜೀವನ* ಸಿದ್ಧಯ್ಯ ಪುರಾಣಿಕರು ಲಿಂಗಾಯತ ಜಂಗಮ ಕುಟುಂಬದಲ್ಲಿ‌ ೧೮ನೇ ಜೂನ್ ೧೯೧೮ರಲ್ಲಿ ಜನಿಸಿದರು. ಈಗಿನ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ದ್ಯಾಂಪುರ ಪುರಾಣಿಕರು ಹುಟ್ಟಿದ ಊರು. ಶ್ರೀ ಪಂಡಿತ ಕಲ್ಲಿನಾಥ ಶಾಸ್ತ್ರೀ ಪುರಾಣಿಕ ಹಾಗೂ ಶ್ರೀಮತಿ ದಾನಮ್ಮ ಪುರಾಣಿಕರಿಗೆ ಜನಿಸಿದ ಐದು ಮಕ್ಕಳಲ್ಲಿ ಹಿರಿಯವರು ಡಾ. ಸಿದ್ಧಯ್ಯ ಪುರಾಣಿಕರು. ಸಿದ್ಧಯ್ಯ ಪುರಾಣಿಕರು ಬಾಲ್ಯದಿಂದಲೇ ಉತ್ತಮವಾದ ಸಾಂಸ್ಕೃತಿಕ ವಾತಾವರಣ ಪಡೆದಿದ್ದರು.ಅವರ ತಂದೆಯವರಾದ ಪಂಡಿತ ಕಲ್ಲಿನಾಥ ಶಾಸ್ತ್ರಿಗಳು ನೂರಾರು ನಾಟಕ-ರಂಗಗೀತೆಗಳನ್ನು,೬ ಪುರಾಣಗಳು ಮತ್ತು ವಚನ ಸಾಹಿತ್ಯದ ಕುರಿತು ೧೦ ಕೃತಿಗಳನ್ನು ರಚಿಸಿದವರು.ಪ್ರಸಿದ್ಧ ಆರ್ಯುವೇದ ಪಂಡಿತರಾದ ಇವರು ಜನಸಾಮಾನ್ಯರಿಗಾಗಿ ಆರೋಗ್ಯದ ಕುರಿತು ಕನ್ನಡದಲ್ಲಿ ಅನೇಕ ಲೇಖನಗಳು ಬರೆದಿದ್ದಾರೆ.ಇದಲ್ಲದೆ ಪ್ರಪ್ರಥಮ ಕನ್ನಡ ಶಾಲೆಯನ್ನು ಸ್ಥಾಪಿಸಿ,ಮುನ್ನೆಡಿಸಿದವರು.ಜೈಮಿನಿ ಭಾರತ, ಶಬರಶಂಕರ ವಿಲಾಸ,ಪ್ರಭುಲಿಂಗ ಲೀಲೆ ಮೊದಲಾದ ಕಾವ್ಯಗಳನ್ನು,ವ್ಯಾಕರಣ,ಛಂದಸ್ಸು ಶಾಸ್ತ್ರಗಳನ್ನೂ, ವಚನ,ಸುಭಾಷಿತಗಳು,ಹಾಡುಗಳು,ಶತಕ ಮೊದಲಾದುವುಗಳನ್ನು ಮಗ ಸಿದ್ಧಯ್ಯನಿಗೆ ಕಲಿಸಿಕೊಟ್ಟರು. ತಮ್ಮ ತಂದೆಯವರು ಬರೆದು ಆಡಿಸುತ್ತಿದ್ದ ನಾಟಕ, ಆಗಾಗ ರಚಿಸಿ ಹಾಡುತ್ತಿದ್ದ ಕವಿತೆ ಇವುಗಳನ್ನೆಲ್ಲಾ ಕೇಳಿದಾಗ ಬೆಳೆಯುವ ಸಿದ್ಧಯ್ಯ ಪುರಾಣಿಕರ ಮನಸ್ಸಿನಲ್ಲಿ ತಾನೂ ಹಾಗಾಗಬೇಕೆನ್ನುವ ಹಂಬಲ ಮೂಡಿಬಂತು. ಸಿದ್ಧಯ್ಯ ಪುರಾಣಿಕರ ಅಜ್ಜಂದಿರಾದ ಕವಿರತ್ನ ಚೆನ್ನಕವಿಗಳಂತೂ ಕವಿಗಳಾಗಿ ವಿಖ್ಯಾತರಾದವರು ಸೋದರಮಾವಂದಿರಾದ ಕಾಲ ಕಾಲೇಶ್ವರ ಶಾಸ್ತ್ರಿಗಳಂತೂ ದೊಡ್ಡ ವೇದಾಂತಿಗಳು. ವಿದ್ವತ್ತು, ಕಾವ್ಯ ರಚನೆ, ಪುರಾಣ ಪ್ರವಚನ ಹಾಗೂ ತಾತ್ವಿಕ ಜಿಜ್ಞಾಸೆಗಳಿಗೆ ಅಪರೂಪವಾದ ವಾತಾವರಣ ಮನೆಯಲ್ಲೇ ದೊರೆತದ್ದು ಪುರಾಣಿಕರ ಪುಣ್ಯ. ಬಾಲ್ಯದಿಂದ ಸಾಹಿತ್ಯವೆನ್ನುವುದು ಅವರ ಬದುಕಿನ ಅವಿಭಾಜ್ಯ ಅಂಗವಾಗಿಬಿಟ್ಟಿತ್ತು. ಮುಂದೆ ಶರಣ ಸಾಹಿತ್ಯದಲ್ಲಿ ಸಿದ್ಧಯ್ಯ ಪುರಾಣಿಕರು ಮಾಡಿರುವ ಕಾರ್ಯಸಾಧನೆಗಳಿಗೆ ಅಗತ್ಯವಾದ ವಾತಾವರಣ ಮತ್ತು ಸ್ಫೂರ್ತಿಗಳು ಬಾಲ್ಯದಲ್ಲೇ ಅವರಿಗೆ ಒದಗಿದ್ದವೆಂಬುದು ಸ್ಮರಣೀಯ ಅಂಶವಾಗಿದೆ. ಸಿದ್ಧಯ್ಯ ಪುರಾಣಿಕರದು ತುಂಬಾ ಶಿಸ್ತಿನಿಂದ ಕೂಡಿದ ಅಧ್ಯಯನಶೀಲ ಪ್ರವೃತ್ತಿ. ವ್ಯಾಯಾಮದಿಂದ ಶರೀರವನ್ನು ದೃಢಗೊಳಿಸಿಕೊಳ್ಳುವ ಹಾಗೆಯೇ ಸಾಹಿತ್ಯಾಧ್ಯಾಯನದಿಂದ ಮನಸ್ಸನ್ನು ಶಕ್ತಗೊಳಿಸಿಕೊಂಡವರು. ಏಕಾಗ್ರತೆಯೆನ್ನುವುದು ಅವರಿಗೆ ವರವಾಗಿತ್ತು. ಹೀಗಾಗಿಯೇ ಅವರು ವಿದಾರ್ಥಿಜೀವನದ ಉದ್ದಕ್ಕೂ ತಮ್ಮ ಉತ್ತಮವಾದ ಮಟ್ಟವನ್ನು ಉಳಿಸಿಕೊಂಡು ಬಂದದ್ದೇ ಅಲ್ಲದೆ ಪರೀಕ್ಷೆಗಳೆಲ್ಲದರಲ್ಲಿ ಗೌರವದ ಸ್ಥಾನಗಳನ್ನು ಉಳಿಸಿಕೊಳ್ಳುತ್ತಲೇ ಬಂದವರು. ಬಿ.ಎ ಪರೀಕ್ಷೆಯಲ್ಲಿ ಸಕಲ ವಿಷಗಳಲ್ಲೂ ಅವರಿಗೆ ಪ್ರಥಮ ಸ್ಥಾನ. *ವಿಜ್ಞಾನಿಯಾಗುವುದ ಬಿಟ್ಟು ಕವಿಯಾದ* ಜೀವನದ ಎಲ್ಲ ರಂಗಗಳಲ್ಲಿ ಉತ್ತಮಿಕೆಯನ್ನು ಮೆರೆದ ಸಿದ್ಧಯ್ಯ ಪುರಾಣಿಕರು ಕನ್ನಡದತ್ತ ಬಂದದ್ದು ಒಂದು ಯೋಗಾಯೋಗ. ಪ್ರೌಢಶಾಲೆಯಲ್ಲಿದ್ದಾಗ ಇವರು ಬಯಸಿದ್ದು ಯಂತ್ರಜ್ಞನಾಗಬೇಕೆಂದು. ಅದಕ್ಕಾಗಿ ಉನ್ನತ ಗಣಿತಶಾಸ್ತ್ರವನ್ನು ಐಚ್ಚಿಕ ವಿಷಯವನ್ನಾಗಿ ಆಯ್ಕೆಮಾಡಿಕೊಂಡಿದ್ದರು. ಇವರ ಮೆಚ್ಚಿನ ಗುರುಗಳಾದ ರಹಮತ್ತುಲ್ಲಾ ಖಾನ್ ಸಾಹೇಬರು ಹೋಮ್ ವರ್ಕ್ ಬಗ್ಗೆ ತುಂಬಾ ಕಟ್ಟುನಿಟ್ಟಿನವರಾಗಿದ್ದು ಒಂದು ದಿನ ಸಿದ್ಧಯ್ಯ ಪುರಾಣಿಕರು ಹೋಮ್ ವರ್ಕ್ ಮಾಡಿರದಿದ್ದರಿಂದ ಸಿಟ್ಟಾದದ್ದೇ ಅಲ್ಲದೆ ಈ ವಿಷಯ ಬಿಟ್ಟು ಬೇರೆಯದನ್ನು ಆರಿಸಿಕೋ ಹೋಗು ಎಂದು ಗದರಿಸಿಬಿಟ್ಟರು. ಸ್ವಾಭಿಮಾನಿಯಾಗಿದ್ದ ಸಿದ್ಧಯ್ಯ ಪುರಾಣಿಕರು ತಟ್ಟನೆ ಒಂದು ನಿರ್ಧಾರಕ್ಕೆ ಬಂದು ಬಿಟ್ಟರು. ಕನ್ನಡಕ್ಕೆ ಹೆಸರಾಗಿದ್ದ ತವಗ ಭೀಮಸೇನರಾಯರ ಬಳಿಗೆ ಹೋಗಿ ಕನ್ನಡವನ್ನು ಐಚ್ಚಿಕವಾಗಿ ಆರಿಸಿಕೊಳ್ಳುವ ಇಚ್ಛೆ ವ್ಯಕ್ತಪಡಿಸಿ ಅವರ ಶಿಷ್ಯತ್ವವನ್ನೂ ಪಡೆದುಕೊಂಡುಬಿಟ್ಟರು. ಇಷ್ಟೆಲ್ಲಾ ಆದರೂ ಅವರ ಗಣಿತಶಾಸ್ತ್ರದ ಅಧ್ಯಾಪಕರು ಇವರ ಮೇಲೆ ಯಾವುದೇ ರೀತಿಯ ಆಕ್ರೋಶ ತೋರದೆ ಇವರನ್ನು ಪ್ರೀತಿಯಿಂದಲೇ ಕಂಡದ್ದು ಅಂದಿನ ಅಧ್ಯಾಪಕ ವೃತ್ತಿಯವರ ಸದ್ಗುಣಗಳಿಗೆ ಸಾಕ್ಷಿಯಾಗಿತ್ತು. ಅಂತೂ ಸಿದ್ಧಯ್ಯ ಪುರಾಣಿಕರು ಯಂತ್ರಜ್ಞನಾಗದೇ ಕನ್ನಡಕ್ಕೆ ಹೊರಳಿದ್ದು ಈ ಪರಿಯಲ್ಲಿ. ಸಿದ್ಧಯ್ಯ ಪುರಾಣಿಕರು ಅಧ್ಯಯನ ಮಾಡುತ್ತಿದ್ದಾಗ ಅವರಿಗೆ ನೆರವಾದವರು ಒಬ್ಬಿಬ್ಬರಲ್ಲ. ಅವರಲ್ಲಿ ಮುಖ್ಯರಾದವರು ಅಲಿಬನ್ ಗಾಲಿಬ್ ಸಾಹೇಬರು, ಮೀನಾಯಿ ಸಾಹೇಬರು, ಇಮಾಂ ಸಾಹೇಬರು, ಅಜೀಜ್ ಖಾನ್ ಸಾಹೇಬರು, ಹಕ್ಕನಿ ಸಾಹೇಬರು ಮತ್ತು ಹುಸೇನ ಆಲೀಖಾನ ಸಾಹೇಬರು ಮುಂತಾದವರ ದೊಡ್ಡ ಗುಣಗಳನ್ನು ಪುರಾಣಿಕರು ಮತ್ತೆ ಮತ್ತೆ ನೆನೆಯುತ್ತಿದ್ದರು. ಅಷ್ಟೇ ಅಲ್ಲ ಅವರ ಬದುಕಿನಲ್ಲಿ ಅದರಲ್ಲೂ ತಹಶೀಲ್ದಾರರಾಗಿ ಆಯ್ಕೆಯಾಗುವ ಸಂದರ್ಭದಲ್ಲಿ ಹುಸೇನ ಆಲೀಖಾನರು ಸ್ವಂತ ಮಗನನ್ನು ಬಿಟ್ಟು ಇವರ ಬಗ್ಗೆ ಮಾಡಿದ ಶಿಫಾರಸ್ಸನ್ನು ಅಷ್ಟೇ ಕೃತಜ್ಞತೆಯಿಂದ ಸ್ಮರಿಸುತ್ತಿದ್ದರು. *ಕಾವ್ಯಾನಂದರಾದ ಕುರಿತು* ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಕಲಬುರ್ಗಿಯಲ್ಲಿ ನಡೆದ ಕವನ ಸ್ಪರ್ಧೆಯಲ್ಲಿ ಪ್ರಥಮಸ್ಥಾನಗಳಿಸಿದ ಸಿದ್ಧಯ್ಯನವರು ಕವಿಯೆಂಬ ಹೆಮ್ಮೆಗೂ ಪಾತ್ರರಾದವರು. ಜಯಕರ್ನಾಟಕದಲ್ಲಿ ಇವರ ಪದ್ಯವೊಂದು ಅಚ್ಚೂ ಆಯಿತು. ಆಲಮಟ್ಟಿಯಲ್ಲಿದ್ದಾಗ ಇವರ ಕವಿತೆಯೊಂದು ‘ಶರಣ ಸಂದೇಶ’ ಪತ್ರಿಕೆಯಲ್ಲಿ ಪ್ರಕಟವಾಯಿತು. ಕಾವ್ಯದೇವಿ ಎಂಬ ನೀಳ್ಗವಿತೆಯಲ್ಲಿರುವ ಸಾಲುಗಳು -“ನಿನ್ನಾತ್ಮವಾನಂದ ನನ್ನಾತ್ಮ ಕಾವ್ಯ! ಇಂತೂ ಕಾವ್ಯಾನಂದ’ ನಾಮ ಸುಶ್ರಾವ್ಯ” – ಕವಿ ಸಿದ್ಧಯ್ಯ ಪುರಾಣಿಕರು ಕಾವ್ಯಾನಂದರಾದ ರೀತಿ ಇದು. *ಉದ್ಗಿರ ಪೀಠಾಧ್ಯಕ್ಷತೆಗೆ  ಆಹ್ವಾನ* ಅಧ್ಯಯನ, ಕಾವ್ಯರಚನೆ, ಸಾಹಿತ್ಯ ಪ್ರೇಮಗಳಿಂದ ಬದುಕಿಗೆ ಒಂದು ಆದರ್ಶವನ್ನು ಕಟ್ಟಿಕೊಳ್ಳುತ್ತಿದ್ದ ಕಾಲದಲ್ಲೇ ಮದುವೆಯ ಒತ್ತಡ ಬಂದಾಗ ತಂದೆಗೆ ಸುದ್ದಿಕೊಡದೆ ಹರ್ಡೇಕರ್ ಮಂಜಪ್ಪನವರ ಆಶ್ರಮದಲ್ಲಿ ಆಶ್ರಯ ಪಡೆದಿದ್ದರು. ಯೋಗ, ಅಧ್ಯಯನ ಹಾಗೂ ಮಂಜಪ್ಪನವರ ಪ್ರಭಾವಗಳಿಂದ ಮನಸ್ಸು ಸ್ವಲ್ಪಮಟ್ಟಿಗೆ ವೇದಾಂತದ ಕಡೆಗೆ ಎಳೆಯುತ್ತಾ ಇದ್ದುದೂ ಉಂಟು. ಆದರೆ ಸಂಗ್ರಾಮಪ್ಪ ಶೆಟ್ಕರ್ ಅವರಿಂದ  ಬಂದ ಸುದೀರ್ಘ ಪತ್ರ ಇವರ ಬದುಕಿನ ದಿಕ್ಕನ್ನು ಬದಲಿಸಿತು. ಉದಯಗಿರಿಯ ಹಾವಗಿಸ್ವಾಮಿ ಮಠ ಆ ಭಾಗದ ಪ್ರಸಿದ್ಧ ಮಠವಾಗಿದ್ದು ಅದಕ್ಕೆ ಪೀಠಾಧ್ಯಕ್ಷರಾಗಲು ನಿಮ್ಮ ಮಗನನ್ನು ದಾನವಾಗಿ ನೀಡಬೇಕೆಂದು ಸಿದ್ಧಯ್ಯ ಪುರಾಣಿಕರ ತಂದೆಯವರಿಗೆ ಬಂದ ಪತ್ರ ಅದು. ಸಿದ್ಧಯ್ಯ ಪುರಾಣಿಕರ ತಂದೆ ಆ ಪತ್ರವನ್ನೋದಿ ಮಂಕಾದುದೇನೋ ನಿಜ, ಆದರೆ ಅದನ್ನು ಮಗನ ಕೈಯಲ್ಲಿಟ್ಟು ‘ಈ ಬಗ್ಗೆ ನಿನ್ನ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ’ ಎಂದು ಹೇಳಿದಂತೆಯೇ ನಡೆದುಕೊಂಡರು. ಸಿದ್ಧಯ್ಯನವರು ಬಹಳಷ್ಟು ಯೋಚಿಸಿದರು. ತಂದೆಯವರ ಬಡತನ, ತಮ್ಮಂದಿರ ಕಷ್ಟ ಕಾರ್ಪಣ್ಯದ ಸ್ಥಿತಿ ಇವುಗಳೆಲ್ಲಾ ಕಣ್ಣೆದುರು ನಿಂತವು. ಸಂಯಮಿಯೆಂದು ಖ್ಯಾತರಾಗಿದ್ದ ಸಿದ್ಧಯ್ಯನವರು ತಾವು ಮೆಚ್ಚಿದ್ದ ಗವಿಯೊಂದರಲ್ಲಿದ್ದ ಯೋಗಿಯನ್ನೇ ಈ ಬಗ್ಗೆ ಸಲಹೆ ಕೇಳಲು ಹೊರಟರು. ಗುಹೆಯ ಸಮೀಪ ಬರುತ್ತಿದ್ದಾಗ ಕಂಡ ಭೋಗದ ದೃಶ್ಯ ಅವರ ಮನಸ್ಸನ್ನು ಕ್ಷಣಕಾಲ ಗೊಂದಲದಲ್ಲಿ ಬೀಳಿಸಿದರೂ ಬದುಕಿನ ಹಾದಿ ಅವರಿಗೀಗ ನಿಚ್ಚಳವಾಗಿತ್ತು, ಸಂನ್ಯಾಸಿಯಾಗುವ ಹಂಬಲವನ್ನು ದೂರಮಾಡಿಬಿಟ್ಟರು. *ಅಧಿಕಾರಿಗಳಾಗಿ* ಬಿ. ಎ. ತೇರ್ಗಡೆಯಾಗಿ ವಿಶ್ವವಿದ್ಯಾಲಯಕ್ಕೆ ಪ್ರಥಮರಾದಾಗ ವಕೀಲರಾಗುವ ಸಲಹೆ ಮೇಲೆ ಎಲ್.ಎಲ್.ಬಿ ಪರೀಕ್ಷೆಗೂ ಕುಳಿತರು. ಬಿ. ಎ. ಪರೀಕ್ಷೆಯ ಉನ್ನತ ಸ್ಥಾನದ ದೆಸೆಯಿಂದ ಸಿದ್ಧಯ್ಯ ಪುರಾಣಿಕರು 1943ರಲ್ಲಿ ತಹಶೀಲ್ದಾರರಾಗಿ ಆಯ್ಕೆಯಾದರು. ಮುಂದೆ ಅವರು ನಾಂದೇಡ, ಕಲಬುರಗಿ, ತಾಂಡೂರು,, ಯಾದಗಿರಿ, ಬೆಂಗಳೂರು, ಮಡಿಕೇರಿ, ಬೆಳಗಾವಿಗಳಲ್ಲಿ ಸೇವೆ ಸಲ್ಲಿಸಿ ಬೆಂಗಳೂರಿನಲ್ಲಿ ನಿವೃತ್ತರಾದರು. ತಹಶೀಲ್ದಾರರಾಗಿ ನೌಕರಿಗೆ ಸೇರಿದ ಅವರು ಹೈದರಾಬಾದು ಸಂಸ್ಥಾನದಲ್ಲಿದ್ದು ಪಡೆದ ಅನುಭವ ಅಪಾರವಾದದ್ದು. ಅವರಿಗೊದಗಿದ ವಿಪತ್ತುಗಳು ಕೆಲವಲ್ಲ. ಆದರೆ ಒಪ್ಪಿಕೊಂಡ ಕೆಲಸವನ್ನು ಅತ್ಯಂತ ಪ್ರೀತಿ, ದಕ್ಷತೆಗಳಿಂದ ನಿರ್ವಹಿಸಿ, ಕರ್ತ್ಯವ್ಯ ಎನ್ನುವುದು ಸೇವೆಯ ಅವಕಾಶ ಎಂದು ಭಾವಿಸಿದ ಸಿದ್ಧಯ್ಯ ಪುರಾಣಿಕರು ಡೆಪ್ಯೂಟಿ ಕಲೆಕ್ಟರ್, ಅಧೀನ ಕಾರ್ಯದರ್ಶಿ, ಉಪಕಾರ್ಯದರ್ಶಿ, ವಾರ್ತಾ ಮತ್ತು ಪ್ರವಾಸೋದ್ಯ್ಯಮ ಇಲಾಖೆಯ ಮುಖ್ಯಾಧಿಕಾರಿ, ಜಿಲ್ಲಾಧಿಕಾರಿ, ಸಾರಿಗೆ ಕಮಿಷನರ್, ಕಾರ್ಮಿಕ ಕಮಿಷನರ್ ಹೀಗೆ ವಿವಿಧ ಹಂತಗಳಲ್ಲಿ ಹಾಗೂ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ಬಹುಮುಖವಾಗಿ ಜನಪರವಾದ ಕಾರ್ಯಗಳನ್ನು ಮಾಡಿದವರು. *ಕುಟುಂಬ*ಅಮಲ್ದಾರರಾಗಿ ನೇಮಕಗೊಂಡ ಕಾಲದಲ್ಲಿಯೇ ಸಿದ್ಧಯ್ಯ ಪುರಾಣಿಕರು ತಾವು ನೋಡಿ ಮೆಚ್ಚಿದ ಗಿರಿಜಾದೇವಿಯವರನ್ನು ಮದುವೆಯಾದರು. ವಿಜಯಾ, ಶಿವಗೀತಾ ಮತ್ತು ಭಾರತಿ ಎಂಬ ಮೂವರು ಹೆಣ್ಣು ಮಕ್ಕಳು ಮತ್ತು ಪ್ರಸನ್ನ ಕುಮಾರ ಪುರಾಣಿಕ ಎಂಬ ಪುತ್ರರ ಸಂಸಾರ ಅವರದಾಗಿತ್ತು. *ಕನ್ನಡದ ಕಹಳೆ* ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿದ್ದಾಗ ಕನ್ನಡದ ಕೆಲಸಕ್ಕಾಗಿ ಬಿ.ಎಂ.ಶ್ರೀ, ಎ. ಎನ್. ಮೂರ್ತಿರಾವ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ. ಸೀತಾರಾಮಯ್ಯ ಮೊದಲಾದ ಸಾಹಿತ್ಯ ಕ್ಷೇತ್ರದ ದಿಗ್ಗಜರನ್ನು ಕರೆಯಿಸಿ ಕನ್ನಡದ ಕಹಳೆಯನ್ನು ಮೊಳಗಿದ್ದೇ ಅಲ್ಲದೆ ಕನ್ನಡದ ವಾತಾವರಣ ನಿರ್ಮಾಣಕಾಯಕದಲ್ಲಿ ಸಿದ್ಧಯ್ಯ ಪುರಾಣಿಕರು ವಹಿಸಿದ ಪಾತ್ರ ಮಹತ್ವದ್ದು. ಈಗಿನ ಬೀದರ್, ರಾಯಚೂರು, ಗುಲ್ಬರ್ಗಾ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಕನ್ನಡದ ಕೆಲಸ ಆಗುವುದಕ್ಕೆ ಕಾರಣರಾದ ಪ್ರಾತಃಸ್ಮರಣೀಯರೆಂದರೆ ಜಯದೇವ ತಾಯಿ ಲಿಗಾಡೆ, ಹರ್ಡೇಕರ್ ಮಂಜಪ್ಪ, ಡೆಪ್ಯೂಟಿ ಚನ್ನಪ್ಪ ಮೊದಲಾದವರು. ಈ ಮಹಾ ಕಾರ್ಯದಲ್ಲಿ ಸಿದ್ಧಯ್ಯ ಪುರಾಣಿಕರ ಪಾತ್ರ ಸಾಮಾನ್ಯವಾದುದಲ್ಲ. 1976ರ ವರ್ಷದಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಸಿದ್ಧಯ್ಯ ಪುರಾಣಿಕರು ಮಡಿಕೇರಿ, ಬೆಳಗಾವಿ ಜಿಲ್ಲೆಗಳ ಜನರು ಸಿದ್ಧಯ್ಯ ಪುರಾಣಿಕರು ಅಲ್ಲಿ ಮಾಡಿದ ಕೆಲಸದ ಬಗ್ಗೆ ಅಪಾರ ಅಭಿಮಾನದಿಂದ ಮಾತನಾಡುತ್ತಿದ್ದುದನ್ನು ಅಪಾರ ಸಂತಸದಿಂದ ನೆನೆಯುತ್ತಿದ್ದರು. ಕನ್ನಡದ ವಿಶ್ವಕೋಶ ಯೋಜನೆ, ಕನ್ನಡ ಸಾಹಿತ್ಯ ಪರಿಷತ್ತಿನ ನಿಘಂಟು ಯೋಜನೆ, ಸರ್ಕಾರದಿಂದ ಪ್ರಕಟವಾದ ಸುಲಭಾವೃತ್ತಿಯ ಲೀಲಾವತಿ ಪ್ರಂಬಂಧ, ಹರಿಶ್ಚಂದ್ರ ಕಾವ್ಯ, ಜೈಮಿನಿ ಭಾರತ, ವಚನ ಸಾಹಿತ್ಯ ಸಂಗ್ರಹ, ಸರ್ವಜ್ಞನ ವಚನಗಳಂಥ ಕೃತಿಗಳ ಪ್ರಕಟಣೆಯ ಯೋಜನೆಗಳಲ್ಲಿ ತಾವು ನಿರ್ವಹಿಸಿದ ಪಾತ್ರದ ಬಗ್ಗೆ ಅವರಿಗೆ ತುಂಬು ಅಭಿಮಾನವಿತ್ತು. *ಸಾಹಿತ್ಯ ಸೇವೆ* ಸಿದ್ಧಯ್ಯ ಪುರಾಣಿಕರು ವೃತ್ತಿಯಲ್ಲಿ ಅಧಿಕಾರಿಗಳಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಗಳು. ಅವರ ಸಾಹಿತ್ಯರಾಶಿ ವಿಪುಲವಾಗಿದೆ. ಹಾಗೂ ವೈವಿಧ್ಯಮಯವೂ ಆಗಿದೆ. ಆತ್ಮಾರ್ಪಣೆ, ಭಾರತವೀರ, ರಜತ ರೇಖೆ, ಭಿನ್ನನೂಪುರು ಅಲ್ಲದೆ ಕೆಲವು ಗೇಹ ನಾಟಕಗಳು ಎಂಬ ನಾಟಕಗಳನ್ನವರು ರಚಿಸಿದ್ದಾರೆ. ಭಾರತವೀರ ನಾಟಕ ಚೀನಿಯರ ದಾಳಿಯ ಸಂದರ್ಭದಲ್ಲಿ ಹುಟ್ಟಿದ್ದು. ತ್ರಿಭುವನ ಮಲ್ಲ ಎಂಬ ಕಾದಂಬರಿಯೂ ಇವರದೆ. ವಿಕಾಸವಾಣಿ ಎಂಬುದು ವಯಸ್ಕರಿಗಾಗಿ ಬರೆದ ಕೃತಿ. ಮಕ್ಕಳಿಗಾಗಿ ತುಪ್ಪಾರೊಟ್ಟಿ ಗೇಗೇಗೇ, ಗಿಲ್ ಗಿಲ್ ಗಿಲಗಚ್ಚಿ, ತಿರುಗೆಲೇ ತಿರುಗೆಲೆ ತಿರುಗುಯ್ಯಾಲೆ, ನ್ಯಾಯ ನಿರ್ಣಯ, ಮಕ್ಕಳ ಲೋಕ ಸಂಚಾರ, ಬಣ್ಣ ಬಣ್ಣದ ಓಕುಳಿ ಎಂಬ ಆರು ಕೃತಿಗಳನ್ನು ರಚಿಸಿದ್ದಾರೆ. ಬಸವಣ್ಣನವರ ಜೀವನ ಹಾಗೂ ಸಂದೇಶ, ಮಹಾದೇವಿ, ಹರ್ಡೇಕರ್ ಮಂಜಪ್ಪನವರು, ಸಿದ್ಧರಾಮ, ಮಿರ್ಜಾಗಾಲಿಬ್, ಅಲ್ಲಮ ಪ್ರಭು ಎಂಬ ಜೀವನ ಚರಿತ್ರೆಗಳನ್ನು ರಚಿಸಿದ್ದಾರೆ. ಕಥಾ ಮಂಜರಿ ಹಾಗೂ ತುಷಾರ ಹಾರ ಎಂಬ ಎರಡು ಕಥಾ ಸಂಕಲನಗಳನ್ನೂ ಬರೆದಿದ್ದಾರೆ. ಹದಿಮೂರಕ್ಕೂ ಹೆಚ್ಚು ಕೃತಿಗಳ ಸಂಪಾದನೆ ಕಾರ್ಯವನ್ನು ಮಾಡಿದ್ದಾರೆ. ಇವುಗಳಲ್ಲಿ ಕೆಲವು ಅನ್ಯಮಹನೀಯರೊಡನೆ ಸಂಪಾದಿಸಿದವುಗಳಾಗಿವೆ. ಹಲವೊಂದು ಅನುವಾದಗಳನ್ನೂ ಮಾಡಿದ್ದಾರೆ. ಜಲಪಾತ, ಕರುಣಾ ಶ್ರಾವಣ, ಮಾನಸ ಸರೋವರ, ಮೊದಲು ಮಾನವನಾಗು, ಕಲ್ಲೋಲ ಮಾಲೆ, ಚರಗ, ಹಾಲ್ದೆನೆ, ಮರುಳ ಸಿದ್ಧನ ಕಂತೆ, ಆಯ್ದ ಕವನಗಳು ಎಂಬ ಕವನ ಸಂಕಲನಗಳು ಪ್ರಕಟವಾಗಿವೆ. ಕುವೆಂಪು, ಅಂಬಿಕಾತನಯದತ್ತ, ಡಿ. ಎಸ್. ಕರ್ಕಿ ಮೊದಲಾದವರ ಮೆಚ್ಚುಗೆಗೆ ಪಾತ್ರವಾದ ಇವರ ಕಾವ್ಯ ನವೋದಯ ಮಾರ್ಗಕ್ಕೆ ಸೇರಿದುದಾಗಿದೆ. ಬಾಳಪ್ಪ ಹುಕ್ಕೇರಿ ಅವರು ಹಾಡಿರುವ ಮೊದಲು ಮಾನವನಾಗು ಗೀತೆ ಮುಟ್ಟದ ಕನ್ನಡದ ಕಿವಿಗಳಿಲ್ಲ, ತಟ್ಟದ ಹೃದಯಗಳೇ

“ಕವಿ ಚಿಂತಕ ಬಸವ ಭಕ್ತ ಡಾ ಸಿದ್ದಯ್ಯ ಪುರಾಣಿಕ”ವಿಶೇಷ ಲೇಖನ, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ligade
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ24 ಸವಿತಾ ದೇಶಮುಖ ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನ ಡ ಸಾಹಿತ್ಯಕ್ಕೆ ಮಹತ್ತರ ಕೊಡುಗೆ ನೀಡಿದಮಹಾನ್‌ ಚೇತನ *ಜಯದೇವಿ ತಾಯಿಯವರ ಸಮಾಜಮುಖಿ, ಸಾಹಿತ್ಯಿಕ ಹಾಗೂ ಭಕ್ತಿಮಯ ಬದುಕು*  ಜಯದೇವಿ ತಾಯಿಯವರ ವ್ಯಕ್ತಿತ್ವವು ಕೇವಲ ಕುಟುಂಬದ ಚೌಕಟ್ಟಿನೊಳಗೆ ಸೀಮಿತವಾಗಿರಲಿಲ್ಲ.   ಸಂಸಾರದ ಹೊಣೆ ಹೊತ್ತು… ಸಿದ್ದರಾಮೇಶ್ವರರ ಶ್ರೇಷ್ಠ ಭಕ್ತಿಯಾಗಿ, ತ್ರಿಭಾಷಾ ಪಾಂಡಿತ್ಯವನ್ನು ಪಡೆದು ,ಕನ್ನಡ ಸರಸ್ವತ ಲೋಕದ ಕಣ್ಣಾಗಿ, ಕನ್ನಡಿಗರ ತಾಯಿಯಾಗಿ , ಶ್ರೇಷ್ಠ ಶಿವಶರಣಿಯಾಗಿ ಬದುಕಿ… ಜನಮನಗಳಲ್ಲಿ ಅಳಿಯದ ಛಾಪು ಮೂಡಿಸಿದ ಮುಂದಿನ ಬದುಕನ್ನು ನೋಡೋಣ ಬನ್ನಿ …… *ಸವಿಧಾನ ಜೀವನ| ನೋವು ನಾವುಗೆಲಿದು ಪಾವನ ಬದುಕಿ -ನಂದನವನಲಿದು ಬೇವು ಬೆಲ್ಲಾಗಿ ಸವಿದೇನ*|| ಎನ್ನುತ ಸಮಾಜದ ನೋವು-ನಲಿವುಗಳಿಗೆ ಸದಾ ಸ್ಪಂದಿಸುತ್ತಿದ್ದ ಜಯದೇವಿ ತಾಯಿಯವರು ಅನೇಕ ಜನಪರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಬಡವರು, ನಿರ್ಗತಿಕರು, ಮಹಿಳೆಯರು ಹಾಗೂ ಯುವಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದರು. ಸಮಾಜದಲ್ಲಿ ಮಾನವೀಯ ಮೌಲ್ಯಗಳು, ಶಿಕ್ಷಣ ಮತ್ತು ಸಂಸ್ಕಾರಗಳು ಬೆಳೆಯಬೇಕು ಎಂಬ ಆಶಯದಿಂದ ಹಲವು ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಾಧನೆ ವಿಶಿಷ್ಟವಾದುದು. ಜೀವನದ ಅನುಭವಗಳು, ಭಕ್ತಿ, ಸಾಮಾಜಿಕ ಚಿಂತನೆಗಳು ಮತ್ತು ಸ್ತ್ರೀ ಸಂವೇದನೆಗಳನ್ನು ತಮ್ಮ ಕೃತಿಗಳ ಮೂಲಕ ಜನರಿಗೆ ತಲುಪಿಸಿದರು. ಅವರ ಬರಹಗಳು ಕೇವಲ ಓದಿಗಾಗಿ ಅಲ್ಲ, ಬದುಕಿಗೆ ದಾರಿದೀಪವಾಗುವಂತಿದ್ದವು. ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲಿನ ಅವರ ಅಪಾರ ಪ್ರೀತಿಯು ಅನೇಕ ಮೌಲಿಕ ಕೃತಿಗಳ ಸೃಷ್ಟಿಗೆ ಕಾರಣವಾಯಿತು. *ಬರದೇನೆನ್ನುವ ಭಾವ| ಬರಿತಾಯ್ತೆನಗವ್ವ ಕರೆದೇನೆನ್ನುವ ಭಕುತಿ ಬಯಲಾಯ್ತ- ತಾಯವ್ವಕೊರಗೇನೆಂಬುವ ಮನ ಮಾಯಾಯಿತು||* ಎನ್ನುತ  ಶ್ರೀ ಸಿದ್ದರಾಮೇಶ್ವರಲಿ ಅಪಾರ ಭಕ್ತಿಯ ಲೀನರಾಗಿದ್ದರು. ಭಕ್ತಿ ಎಂದರೆ ಕೇವಲ ಪೂಜೆ-ಪುನಸ್ಕಾರಗಳಲ್ಲ, ಸಮಾಜ ಸೇವೆಯೇ ನಿಜವಾದ ದೇವರ ಸೇವೆ ಎಂಬ ತತ್ವವನ್ನು ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು .*ಕೃಪೆ ಮಾಡಿ ಎನಗೆ | ಶ್ರೀಪಾದವ ತೋರಿದನುಉಪಮೀಸ ಬಾರದ ಸಂತಸ -ಗೊಳಿಸಿದಆ ಪರಬ್ರಹ್ಮನಿಗೆ ಶರಣೆಂಬೆ||* ಎನ್ನುವಂತೆ ಸಮಾಜ ಸೇವೆಯೇ ದೇವರ ಸೇವೆಯಂತೆ ಸ್ವೀಕರಿಸಿದರು.ಸಿದ್ದರಾಮರ ಆದರ್ಶಗಳಾದ ದಾಸೋಹ, ಕಾಯಕ, ಸಮಾನತೆ ಮತ್ತು ಮಾನವ ಪ್ರೇಮವನ್ನು ತಮ್ಮ ಬದುಕಿನ ಮೂಲಕ ಸಾಕಾರಗೊಳಿಸಲು ಪ್ರಯತ್ನಿಸಿದರು.  ಈಗ ಒಂದೊಂದಾಗಿ ತಿಳಿದುಕೊಳ್ಳೋಣ. ಅವರ ಬದುಕಿನ ಅಧ್ಯಾಯಗಳು ನಿಸ್ವಾರ್ಥ ಸೇವೆ, ಆಧ್ಯಾತ್ಮಿಕತೆ ಮತ್ತು ಜನಪರ ಕಾಳಜಿಯ ಅಮೂಲ್ಯ ಕಥನಗಳಾಗಿವೆ.ಆದರ್ಶ ಗೃಹಿಣಿ, ಸಮಾಜಸೇವಕಿ, ಸಾಹಿತಿ ಮತ್ತು ಶ್ರೇಷ್ಠ ಭಕ್ತೆಯಾಗಿ ಜಯದೇವಿ ತಾಯಿಯವರು ನಡೆಸಿದ ಬದುಕು ಬಹುಮುಖ ಸಾಧನೆಯ ಪ್ರತೀಕವಾಗಿದೆ. *ಬಿಂಕಿನ ಮಾತಿಲ್ಲ ಕೊಂಕೀನ ನುಡಿಯಲ್ಲಕಿಂಕರಳ ಕೂಗು ಕೇಳಿರಿ,- ಶರಣರಲೆಂಖಿನ ನಾ ನೋಡಿ ನಂಬೀದ* ಎನ್ನುತ ಕಿಂಕರರಲಿ ಕಿಂಕರಳಾಗಿ ಕನ್ನಡಾಂಬೆಯ   ಸೇವೆಯಲ್ಲಿ ಜನಸೇವೆಯಲ್ಲಿ ತೊಡಗಿದರು.  ೧೯೪೯ರಲ್ಲಿ ಕಲ್ಬುರ್ಗಿಯಲ್ಲಿ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ೩೨ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು* ಶ್ರೀ ಉತ್ತಂಗಿ ಚನ್ನಪ್ಪನವರು* ಅಧ್ಯಕ್ಷತೆ ವಹಿಸಿದ್ದರು. ಇಲ್ಲಿ ತಾಯಿಯವರು ಮಹಿಳಾ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿದ್ದರು. ೧೯-೨-೧೯೫೦ ರಂದು ಸೊಲ್ಲಾಪುರದಲ್ಲಿ ೩೩ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು ಇಲ್ಲಿ ಶ್ರೀ ಎಂ ಆರ್ ಶ್ರೀ ಅವರ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಮಹಿಳಾಪರಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿದ್ದರು. ಮುಂದೆ ೨೫-೧೨-೧೯೫೦ರಂದು ಮುಂಬೈಯಲ್ಲಿ ೩೪ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು ಇಲ್ಲಿ ರಾಷ್ಟ್ರಕವಿ* ಶ್ರೀ ಮಂಜೇಶ್ವರ ಗೋವಿಂದ ಪೈ *ಅವರು ಅಧ್ಯಕ್ಷತೆ ವಹಿಸಿದ್ದರು. ಇಲ್ಲಿಯೂ ಕೂಡ ಮಹಿಳೆಯರ ಸಮಾರಂಭಕ್ಕೆ ಅಧ್ಯಕ್ಷತೆ ವಹಿಸಿದ್ದರು.ಈ ಮೂರು ಸಮ್ಮೇಳನಗಳ ಮಹಿಳಾ ಗೋಷ್ಟಿಯಲ್ಲಿ ಜಯದೇವಿ ತಾಯಿಯವರು ಅಧ್ಯಕ್ಷತೆ ವಹಿಸಿದ್ದರು. ಜಯದೇವಿ ತಾಯಿಯವರ ಶಿಕ್ಷಣ ಕ್ರಾಂತಿ  ಸೊಲ್ಲಾಪುರದ ಇತಿಹಾಸದಲ್ಲೊಂದು ಸುವರ್ಣ ಅಧ್ಯಾಯ.೧೯೪೯ನೇ ವರ್ಷ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಇನ್ನೂ ಕೆಲವು ವರ್ಷಗಳಷ್ಟೇ ಆಗಿದ್ದವು. ಸಮಾಜದಲ್ಲಿ ಬಡತನ, ಅಸಮಾನತೆ ಮತ್ತು ನಿರಕ್ಷರತೆ ವ್ಯಾಪಕವಾಗಿದ್ದ ಕಾಲ ಅದು. ವಿಶೇಷವಾಗಿ ಗಿರಣಿಗಳಲ್ಲಿ ದುಡಿಯುತ್ತಿದ್ದ ಸಾವಿರಾರು ಕಾರ್ಮಿಕರು ಹಾಗೂ ದಲಿತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಜೀವನೋಪಾಯಕ್ಕಾಗಿ ದಿನವಿಡೀ ದುಡಿಯಬೇಕಾಗಿದ್ದ ಕಾರಣ ಅವರಿಗೆ ಶಾಲೆಯ ಮುಖವೇ ಕಾಣುತ್ತಿರಲಿಲ್ಲ. ಇಂತಹ ಸಂದರ್ಭದಲ್ಲಿ ಜಯದೇವಿ ತಾಯಿಯವರು ಸಮಾಜದ ತಳಮಳವನ್ನು ಕಂಡು “ಶಿಕ್ಷಣವೇ ಬದುಕಿನ ಬೆಳಕು” ಎಂಬ ದೃಢ ನಂಬಿಕೆಯೊಂದಿಗೆ ಅವರು ಒಂದು ಮಹತ್ತರ ಸಾಮಾಜಿಕ ಚಳವಳಿಗೆ ಚಾಲನೆ ನೀಡಿದರು….. ಯಾವುದೇ ದೊಡ್ಡ ಕಟ್ಟಡವಿಲ್ಲ, ಸರ್ಕಾರದ ನೆರವಿಲ್ಲ. ಆದರೆ ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಮತ್ತು ಮಾನವೀಯತೆ ಅವರಲ್ಲಿತ್ತು.ತಮ್ಮ ಮನೆಯ ಆವರಣದಲ್ಲಿಯೇ ಒಂದು ಸಣ್ಣ ಶಾಲೆಯನ್ನು ಆರಂಭಿಸುವ ಮೂಲಕ ಅವರು ಶಿಕ್ಷಣ ಯಜ್ಞಕ್ಕೆ ನಾಂದಿ ಹಾಡಿದರು. ಗಿರಣಿಯಲ್ಲಿ ದುಡಿಯುತ್ತಿದ್ದ ಸುಮಾರು ೩೦,೦೦೦ ಕಾರ್ಮಿಕರ ಕುಟುಂಬಗಳ ಮಕ್ಕಳು ಹಾಗೂ ದಲಿತ ಸಮುದಾಯದ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಕನಸನ್ನು ಕಂಡರು.ಆರಂಭದಲ್ಲಿ ಕೆಲವು ಅಡೆತಡೆಗಳು ಬಂದರೂ ತಾಯಿಯವರ ಪ್ರೀತಿ, ತಾಳ್ಮೆ ಮತ್ತು ಸೇವಾ ಭಾವದಿಂದ ಆ ಪ್ರಯತ್ನ ಬೇಗನೆ ಜನಮನ ಗೆದ್ದಿತು. ನಂತರ* ಕಾರ್ಮಿಕ ಸಾಕ್ಷರತಾ ಸಮಿತಿಯ* ಸಹಯೋಗದೊಂದಿಗೆ ವಿವಿಧ ಪ್ರದೇಶಗಳಲ್ಲಿ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಮೊದಲಿಗೆ ೨೫ ಕೇಂದ್ರಗಳು ಆರಂಭವಾದವು.  ಕೇಂದ್ರಗಳಲ್ಲಿ ಮಕ್ಕಳ ಜೊತೆಗೆ ಅಕ್ಷರಜ್ಞಾನವಿಲ್ಲದ ಕಾರ್ಮಿಕರಿಗೂ ಓದು-ಬರಹ ಕಲಿಸಲಾಗುತ್ತಿತ್ತು. ಶಿಕ್ಷಣವನ್ನು ಸಮಾಜದ ಕೊನೆಯ ವ್ಯಕ್ತಿಗೂ ತಲುಪಿಸಬೇಕು ಎಂಬುವದು ಅವರ ಉದ್ದೇಶವಾಗಿತ್ತು. ತಾಯಿಯವರ ಪರಿಶ್ರಮ ಮತ್ತು ಜನರ ವಿಶ್ವಾಸದಿಂದ ಈ ಚಳವಳಿ ದಿನದಿಂದ ದಿನಕ್ಕೆ ವಿಸ್ತರಿಸಿತು. ೨೫ ಕೇಂದ್ರಗಳಾಗಿದ್ದವು ಮುಂದೆ ೧೨೫  ಶಿಕ್ಷಣ ಕೇಂದ್ರಗಳಾಗಿ ಬೆಳೆದವು. ಸಾವಿರಾರು ಮಕ್ಕಳು ಮತ್ತು ವಯಸ್ಕರು ಈ ಕೇಂದ್ರಗಳ ಮೂಲಕ ಅಕ್ಷರಜ್ಞಾನ ಪಡೆದರು. ಶಿಕ್ಷಣದ ಬೆಳಕು ಮನೆಮನೆಗೂ ಹರಡಿತು.ಈ ಕಾರ್ಯ  ಶಾಲೆಗಳನ್ನು ಆರಂಭಿಸಿದ ಸಾಧನೆಯೊಂದಿಗೆ….*ಅದು ಸಮಾಜ ಪರಿವರ್ತನೆಯ ಚಳವಳಿಯಾಗಿತ್ತು. * ಶಿಕ್ಷಣದಿಂದ ವಂಚಿತರಾಗಿದ್ದ ಮಕ್ಕಳಿಗೆ ಹೊಸ ಭವಿಷ್ಯಕೆ ದಾರಿ ಮಾಡಿಕೊಟ್ಟರು  ಬಡವರ ಮನೆಗಳಲ್ಲಿ ಆಶಾಕಿರಣ ಮೂಡಿಸಿದ ಪ್ರಯತ್ನವಾಗಿತ್ತು. ಅನೇಕ ಕುಟುಂಬಗಳ ಬದುಕಿನ ದಿಕ್ಕನ್ನೇ ಬದಲಿಸಿದ ಮಹಾನ ಸೇವೆಯಾಗಿತ್ತು.ಆದ್ದರಿಂದಲೇ ಜಯದೇವಿ ತಾಯಿಯವರು ಕೈಗೊಂಡ ಶೈಕ್ಷಣಿಕ ಅಭಿಯಾನ ಸೊಲ್ಲಾಪುರದ ಶೈಕ್ಷಣಿಕ ಇತಿಹಾಸದಲ್ಲೇ ಒಂದು ದಾಖಲೆಯ ಸಾಧನೆಯಾಗಿ ಗುರುತಿಸಲ್ಪಟ್ಟಿದೆ.  ಒಬ್ಬ ಮಹಿಳೆ ತನ್ನ ಮನೆಯ ಆವರಣದಲ್ಲಿ ಆರಂಭಿಸಿದ ಸಣ್ಣ ಶಿಕ್ಷಣ ಸೇವೆ ಮುಂದೆ ೧೨೫ ಕೇಂದ್ರಗಳ ಮಹಾ ಚಳವಳಿಯಾಗಿ ಬೆಳೆದು ಸಾವಿರಾರು ಜನರ ಬದುಕನ್ನು ಬೆಳಗಿಸಿತು ಎಂಬುದು ನಿಜಕ್ಕೂ ಅಪೂರ್ವ ಸಾಧನೆ.ಜಯದೇವಿ ತಾಯಿಯವರ ಈ ಕಾರ್ಯ ನಮಗೆ ಶಿಕ್ಷಣದ ಮಹತ್ವವನ್ನು ಯಾವ ರೀತಿಯಲ್ಲಿ, ಒಬ್ಬ ವ್ಯಕ್ತಿಯ ಸಂಕಲ್ಪ ಸಮಾಜದ ಇತಿಹಾಸವನ್ನೇ ಬದಲಾಯಿಸಬಲ್ಲದು ಎಂಬುದನ್ನೂ ಸಾರುತ್ತದೆ. ಅವರ ಜೀವನವು ಸೇವೆ, ತ್ಯಾಗ ಮತ್ತು ಶಿಕ್ಷಣದ ಮೂಲಕ ಸಮಾಜೋತ್ಥಾನ ಮಾಡಿದ  ಆದರ್ಶದ ಪ್ರತೀಕವಾಗಿದೆ. ಶಿಕ್ಷಣವು ಎಲ್ಲರಿಗೂ ಲಭಿಸಬೇಕು, ಸಮಾನತೆಯನ್ನು ಮೂಡಿಸಬೇಕು ಅನ್ನುವ ಉದ್ದೇಶ ಶಿಕ್ಷಣದ ತಳಹದಿಯಾಗಿರಬೇಕು ಅನ್ನುತ್ತಿದ್ದರು. *ಜಗವು ಒಂದಾಗಲಿ |ನಗುತ ಕೈಗೂಡಿಸಿರಿಬಗೆಯಲಿ ಅಣ್ಣತಮ್ಮರಂತೆ ಲೋಕದಿಹಗೆ ಎಂಬ ಭಾವ ಅಳಿಯಲಿ||* (ಮುಂದುವರೆಯುವುದು) ಸವಿತಾ ದೇಶಮುಖ

Read Post »

ಕಾವ್ಯಯಾನ

ನಾಮದೇವ ಕಾಗದಗಾರ “ಗಡಿರೇಖೆಯ ನೆತ್ತರಿನ ಹಬ್ಬ.”

ಕಾವ್ಯ ಸಂಗಾತಿ ನಾಮದೇವ ಕಾಗದಗಾರ “ಗಡಿರೇಖೆಯ ನೆತ್ತರಿನ ಹಬ್ಬ.” ಭೂಪಟದ ಗೆರೆಗಳಲಿರಕ್ತದ ಕಲೆಗಳ ಹಸಿವು,ಅಧಿಕಾರದ ಅಮಲಿಗೆಅನಾಥ ಮಗುವಿನ ಅಳುವೇ ನೈವೇದ್ಯ, ಉಕ್ಕಿನ ಹಕ್ಕಿಗಳ ಅಬ್ಬರಕೆಮಣ್ಣಾದವು ಬದುಕು,ಗೆಲುವಿನ ಪಟಾಕಿ ಅಡಿಯಲ್ಲಿಹೂತುಹೋದವು ಸಾವಿರ ಉಸಿರು, ತುತ್ತು ಅನ್ನದ ಪಾತ್ರೆಯಲಿಬೆಂದು ಹೋದವು ಮದ್ದು-ಗುಂಡು,ಮನೆಮಠದ ನೆನಪುಗಳಿಗೆಈಗ ಸ್ಮಶಾನವೇ ಕಡೆಯ ಉಡುಗೊರೆ, ದೇಶಪ್ರೇಮದ ಘೋಷಣೆಯಲಿಕಾಣದಾದವು ಒಲವಿನ ಕಣ್ಣು,ಯುದ್ಧದ ಬೂದಿಯಲಿ ಉಳಿದದ್ದುಬರಿಯ ಬೂದುಬಣ್ಣದ ಮಣ್ಣು, ಗಡಿ ದಾಟದ ಕನಸುಗಳಿಗೆಬಾಂಬುಗಳೇ ಅಂತಿಮ ವಿರಾಮ,ಗೆದ್ದವನ ಅಟ್ಟಹಾಸದಲಿಸತ್ತವನ ಹೆಸರಿಗಿಲ್ಲ ಆರಾಮ, ಬಂಕರಿನ ಕತ್ತಲಲಿ ಬಿಕ್ಕಳಿಸುತಿದೆ ಬಾಲ್ಯ,ಸಮಾಧಿಯ ಮೇಲೆ ನಿಂತು ನಗುತ್ತಿದೆ ಸಾಮ್ರಾಜ್ಯ;ಗೆದ್ದವನ ಇತಿಹಾಸದಲಿ ರಕ್ತದ ವಾಸನೆ,ಸತ್ತವನ ಮನೆಯಲಿ ಬರಿ ಗೋಡೆಯ ಮೌನ ರೋಧನೆ…. ನಾಮದೇವ ಕಾಗದಗಾರ

ನಾಮದೇವ ಕಾಗದಗಾರ “ಗಡಿರೇಖೆಯ ನೆತ್ತರಿನ ಹಬ್ಬ.” Read Post »

ಕಾವ್ಯಯಾನ, ಗಝಲ್

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್

ಕಾವ್ಯ ಸಂಗಾತಿ ಪ್ರಭಾವತಿ ಎಸ್ ದೇಸಾಯಿ ಗಜಲ್ ಮುಂಗಾರಿನ ಕರಿ ಮುಗಿಲು ಜಲಧಾರೆಯ ಸುರಿಸುತಿದೆ ನೋಡಾಇಳೆಯ ಮೊಗದಿ ನಗೆ ಮೊಗ್ಗು ಬಿರಿದು ಕಂಪು ಹರಡುತಿದೆ ನೋಡಾ ನೀಲಿ ಆಕಾಶದಿ ನೇಸರ ಮೂಡಿಸಿದ ಹೊಂಬಣ್ಣದ ಹೊನಲುಪ್ರಕೃತಿ ಮಡಿಲಲಿ ಮುಂಜಾವು ಪಕ್ಷಿಗಳ ಗಾನ ಕೇಳುತಿದೆ ನೋಡಾ ಒಲವಿನ ಚೈತ್ರ ಬರುವಿಗೆ ಬನವು ಹಸಿರುಟ್ಟು ಹೂ ಅರಳಿಸಿದೆನಿಸರ್ಗದ ಸೊಬಗು ಪ್ರೇಮಿಯ ಎದೆಯವೀಣೆ  ಮಿಡಿಯುತಿದೆ ನೋಡಾ ಧಾರಿಣಿಯ ಹೃದಯ ಸೂರ್ಯ ಕೋಪಕೆ ನಲುಗಿ ನರಳುತಿದೆ  ಮೌನದಿಬಿದ್ದ ಮಳೆಯ ರಭಸಕೆ ನದಿಯು ಕಡಲಾಗಿ ಮೊರೆಯುತಿದೆ ನೋಡಾ ಬೀಸುವ ಸುಳಿಗಾಳಿ ಪಾರಿಜಾತದ  ಪರಿಮಳ ತರುತಿದೆ ಸಂಜೆಇರುಳು ತಿರುಗುವ ತಿರೆಯಲಿ ಚಂದ್ರ ಪ್ರಭೆಯು ಕಾಣುತಿದೆ‌ ನೋಡಾ ( ಸಂಜು ಕೋಳೂರ ಹಳಿಯಾಳ ರಾಗಸಂಯೋಜನೆ ಮಾಡಿದ್ದಾರೆ ) ಪ್ರಭಾವತಿ ಎಸ್ ದೇಸಾಯಿ

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್ Read Post »

ಕಾವ್ಯಯಾನ

ಡಾ. ದಾನಮ್ಮ ಝಳಕಿ ಅವರ ಕವಿತೆ “ಹಸಿರು ತೇರು”

ಕಾವ್ಯ ಸಂಗಾತಿ ಡಾ. ದಾನಮ್ಮ ಝಳಕಿ “ಹಸಿರು ತೇರು” ಹಸಿರು ತೇರು ಹೊರಟಿದೆ,ಭುವಿಯೆಲ್ಲ ಹಬ್ಬವಾಗಿದೆ;ಮರದ ನೆರಳು ಹರಡಿದೆ,ಮನದೊಳಗೆ ಮುದತಂದಿದೆ. ಗಿಡವ ನೆಟ್ಟು ಬೆಳಸೋಣ,ಗಿರಿಯ ಸೊಬಗು ಉಳಿಸೋಣ;ನದಿಯ ನಗುವು ಕೇಳೋಣ,ನಾಳೆಯ ಬದುಕು ಕಾಪಾಡೋಣ. ಎಲೆಯ ನಾದವು ವೀಣೆಯದು,ಹೂವಿನ ಪರಿಮಳ ಗೀತೆಯದು;ಹಕ್ಕಿಯ ಕಲರವ ವೇದವದು,ಪ್ರಕೃತಿಯ ಮಡಿಲೇ ಸ್ವರ್ಗವದು. ಮಳೆ ಸುರಿಯಲು ಕಾಡಿರಬೇಕು,ಕಾಡು ಬೆಳೆಯಲು ನಾವಿರಬೇಕು;ಉಸಿರು ಉಳಿಯಲು ಮರವಿರಬೇಕು,ಜಗವು ಉಳಿಯಲು ಹಸಿರಿರಬೇಕು. ಬನ್ನಿ ಎಲ್ಲರು ಕೈಜೋಡಿಸಿ,ಭೂಮಿತಾಯಿಯ ಪ್ರೀತಿಗೋಸ್ಕರ;ಹಸಿರು ತೇರನು ಎಳೆಯೋಣ,ಭವ್ಯ ಭವಿಷ್ಯವ ಕಟ್ಟೋಣ. ಹಸಿರು ನಮ್ಮ ಉಸಿರಾಗಲಿ,ಹಸಿರು ನಮ್ಮ ಹೆಸರಾಗಲಿ;ಹಸಿರು ತೇರು ಸಾಗುತಿರಲಿ,ಭುವಿಯೆಲ್ಲ ನಗುತಿರಲಿ. ಡಾ. ದಾನಮ್ಮ ಝಳಕಿ

ಡಾ. ದಾನಮ್ಮ ಝಳಕಿ ಅವರ ಕವಿತೆ “ಹಸಿರು ತೇರು” Read Post »

ಕಾವ್ಯಯಾನ

ಆದಪ್ಪ ಹೆಂಬಾ ಅವರ ಕವಿತೆ “ಜಗದೊಡೆಯಮುನಿದರೇ….”

ಕಾವ್ಯ ಸಂಗಾತಿ ಆದಪ್ಪ ಹೆಂಬಾ “ಜಗದೊಡೆಯಮುನಿದರೇ….” ಇನಿತು ಮುನಿಯದೆಎನಿತು ದಣಿಯದೆನಗುತಲಿಹನು ನೇಸರಹೊನ್ನ ಬೆಳಕುಅರುಣ ಕಿರಣಚೆಲ್ಲುತಿಹನು ದಿನಕರ|| ಮತಿಹೀನ ಮನುಜಭೂಮಾತೆಯ ತನುಜಅಮ್ಮನೆಂಬುದ ನೋಡದೇಹೊನ್ನ ಮಣ್ಣನು ಅಗೆಯುತಲಿರುವೆಹಸಿರು ವನಸಿರಿಯ ಬಗೆಯುತಲಿರುವೆಬೆತ್ತಲಾಗುತಿಹಳು ಅಮ್ಮ ನಿನಗಿನ್ನು ಕಾಣದೆ|| ಜಗವ ಬೆಳಗುವಅವನ ಕಣ್ಣಿಗೇ ಮಣ್ಣಂತೆಕಾಣಲೊಲ್ಲದು ತಿಳಿಯಲೊಲ್ಲದುನಿಮ್ಮಗಳ ಕಪ್ಪು ರಂಗಿನಾಟಕೊಂಚ ತಾಳಿಪಾಪದ ಫಲ ಉಣ್ಣುವಿರಂತೆ|| ನೇಸರನೊಬ್ಬಮಹಾ ಮರೆಗುಳಿನಿತ್ಯ ಬರುವನುಎಲ್ಲವ ಮರೆತುಮತ್ತೆ ಮುಳುಗುವನುಬೇಸರದಿ ಮುನಿದು|| ಜಗದೊಡೆಯ ಮುನಿದರೆಉಳಿಗಾಲ ನಮಗಿಲ್ಲಯೋಚಿಸಿ ಮುಂದಡಿ ಇಡಿಮಿಂಚಿ ಹೋದರೆ ಕಾಲಚಿಂತಿಸಿಯೂ ಫಲವಿಲ್ಲ|| ಇಂದಿದೆಯೋಮುಂದಿದೆಯೋಎಂದಿದೆಯೋಮನುಕುಲದ ಮಾರಿಹೋಮತಿಳಿದೇಳು ಸಿಡಿದೇಳು ಕೂಗೇಳುತಡೆಯೋಣ ಭೂರಮೆಯ ನಾಶವನ್ನ|| ಆದಪ್ಪ ಹೆಂಬಾ

ಆದಪ್ಪ ಹೆಂಬಾ ಅವರ ಕವಿತೆ “ಜಗದೊಡೆಯಮುನಿದರೇ….” Read Post »

ಕಾವ್ಯಯಾನ

ತೇಜಾವತಿ .ಎಚ್ .ಡಿ. ಅವರ ಕವಿತೆ “ಸೀಮೆ ಜಾಲಿ”

ಕಾವ್ಯ ಸಂಗಾತಿ ತೇಜಾವತಿ .ಎಚ್ .ಡಿ. “ಸೀಮೆ ಜಾಲಿ” ಅಂಕುಡೊಂಕಾದ ಕರಿ ನಾಗರಗಳಾಗಿಉದಯರಶ್ಮಿಗೆ ಮೈಯೊಡ್ಡಿರುವರಸ್ತೆಯ ಇಕ್ಕೆಲಗಳಲ್ಲಿದಶದಿಕ್ಕಿಗೂ ಕಬಂಧ ಬಾಹುಗಳನ್ನು ಚಾಚಿರುವಸಾಲು ಸಾಲು ಸೀಮೆಜಾಲಿಯ ಮರಗಳುಮೈತುಂಬಾ ಮುಳ್ಳು, ಕೆಸರು ದುರ್ನಾತ ಅವುಗಳ ನಡುವಲ್ಲೊಂದು ಪುಟ್ಟ ರಾಯಸಕ್ಕರಿ ಮರ ತಲೆಯೆತ್ತಿ ನಿಂತು ಸೂರ್ಯನೆಡೆಗೆ ಮುಖಮಾಡಿ ಕಂಗೊಳಿಸಿಚಿಗುರು ಹೂ ಮಿಡಿ ಕಾಯಿಹಣ್ಣು ತೊಟ್ಟು ಹಸಿರು ಉಟ್ಟು ಸಂಭ್ರಮಿಸಿದೆ ಅದೇ ಕೊಳಕು ಅದೇ ಕೆಸರು ಅದೇ ಗಾಳಿ ಅದೇ ಬಿಸಿಲನ್ನು ಉಂಡುಬರಡು ಭೂಮಿಯಲ್ಲಿ ತಂಪೆರೆದು ಅತ್ಮಾಭಿಮಾನವ ಸೂಸುತ್ತಿದೆಪರಿಸರದ ಹಂಗು ತೊರೆದು ಸುತ್ತಲಿದ್ದರೇನಂತೆ ಸೀಮೆಜಾಲಿ ಮುಳ್ಳು ಕಳ್ಳಿ ತಾನು ಮಧುಫಲವನ್ನೇ ನೀಡುವೆನೆಂದುಭೀಷ್ಮಪ್ರತಿಜ್ಞೆ ಮಾಡಿದೆಮುಳ್ಳಿನ ನಡುವೆ ಸುಳಿವ ಹೂಗಳಿಗೆ ಅಲ್ಲಿಂದಲೇ ಹರಕೆಯ ಕೊಟ್ಟಿದೆ ಜಾಲಿಯ ಮರದಾಗಗುಬ್ಬಿ ಗೂಡು ಕಟ್ಟಲಿಕಟ್ಟಿದ ಗೂಡು ನೂರಾಗಿಹಕ್ಕಿಗಳ ಬಾಳು ಹಸನಾಗಲಿ ಹಸನಾದ ಬದುಕು ಹೊನ್ನಾಗಿ ಸುಡು ಬಿಸಿಲ ಈ ನಾಡು ತಂಪಾಗಲಿ ತೇಜಾವತಿ .ಎಚ್ .ಡಿ. ಕ

ತೇಜಾವತಿ .ಎಚ್ .ಡಿ. ಅವರ ಕವಿತೆ “ಸೀಮೆ ಜಾಲಿ” Read Post »

ಕಾವ್ಯಯಾನ

ಮನ್ಸೂರ್ ಮುಲ್ಕಿ “ನೀಲಿ ನೀಲಿ ಆಕಾಶ”

ಕಾವ್ಯಸಂಗಾತಿ ಮನ್ಸೂರ್ ಮುಲ್ಕಿ “ನೀಲಿ ನೀಲಿ ಆಕಾಶ” ನೀಲಿ ನೀಲಿ ಆಕಾಶ ಚುಕ್ಕಿಗಳಿಲ್ಲದೆ ಹೊಳೆಯುವುದೇಸೂರ್ಯನು ಕೊಡದಿರೆ ಆ ಶಾಖ ಚಂದಿರ ಸುಮ್ಮನೆ ಹೊಳೆಯುವನೇ ಹೂವುಗಳಿರದ ತೋಟಗಳು ಪರಿಮಳ ಬೀರಲು ಸಾಧ್ಯವೇಜೇನುಗಳಿರುವ ಗೂಡಿನಲಿ ಸಿಹಿಗಳು ಸಿಗದೇ ಇರುವುದೇ ಪ್ರೀತಿಯೇ ಇರದ ಹೃದಯದಲಿ ನಗುವನ್ನು ಕಾಣಲು ಸಾಧ್ಯವೇನಂಬಿಕೆ ಇಲ್ಲದ ಬದುಕಿನಲಿ ನೆಮ್ಮದಿ ಹುಡುಕಲು ಸಾಧ್ಯವೇ ವಿಶ್ವಾಸದ ನಡೆಯಲಿ ಬೆರೆತಾಗ ಜೀವನ ಸಾರ್ಥಕ ಆಗದೇಸೃಷ್ಟಿಗಳೆಲ್ಲ ಹೇಳುವುದು ಶಾಶ್ವತವಾದ ಸತ್ಯವೇ ನದಿಯು ಸಾಗರ ಸೇರದೆ ಭೂಮಿಯ ಒಡಲಲ್ಲಿ ನಿಲ್ಲುವುದೇಗಾಳಿಯು ಸನಿಹಕ್ಕೆ ಬರದಿರಲು ಉರಿಯುವ ದೀಪವು ಕೂಡ ಶಾಶ್ವತವೇ ಪ್ರೀತಿ ಇರದ ಮನುಜನಲಿ ಬದುಕಿನ ಅರ್ಥವು ತಿಳಿಯುವುದೇನ್ಯಾಯದ ಬದುಕೇ ಜಗದ ನಿಯಮ ಎಂದು ಮನುಜನು ಅರಿಯುವನೇ ಮನ್ಸೂರ್ ಮುಲ್ಕಿ

ಮನ್ಸೂರ್ ಮುಲ್ಕಿ “ನೀಲಿ ನೀಲಿ ಆಕಾಶ” Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ “ನೆನಪಿನ ಸಾಲು”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ “ನೆನಪಿನ ಸಾಲು” ತಿರುಗಿ ಬಾರದ  ಪುಟಗಳು,ನೆನಪಿನ ಬಂಡಿಯಲಿ ಮರೆ ಕ್ಷಣಗಳು,ಚಿನ್ನದ ರಥದಲ್ಲಿ ಓಡಿದ  ಬಾಲ್ಯ,ಇಂದಿನ ನೆನಪಲಿ ಅರಳಿದ ಕಾವ್ಯ. ಕೆಸರಲಿ ಹೊರಳಾಡಿದ  ದಿನಗಳು,ಹಸಿರಲಿ ಓಡಿದ  ಹೆಜ್ಜೆಗಳು,ಅಮ್ಮನ ಮಡಿಲ ಸವಿ ನಿದ್ದೆಯ ಸುಖ, ಇಂದು ಬರಿ ನೆನಪಿನ ಮುಖ. ಗೆಳೆಯರ ಜೊತೆಗೂಡಿ ನಕ್ಕ  ದಿನಗಳು,ಕಾಗದದ ದೋಣಿ ತೇಲಿದ ದಿನಗಳು,ಚಿಂತೆಯಿಲ್ಲದ ನಿರಾತಂಕದ ನಗೆ,ಮರಳಿ ಬಾರದು  ಸಂಭ್ರಮ ಜಗತ್ತಿನೆಡೆಗೆ. ಕಾಲ ಚಕ್ರ ಉರುಳುತ ಸಾಗಿದೆ,ವರ್ತಮಾನದ ಬದುಕು ಯಾಂತ್ರಿಕ,ಹಳೆಯ ದಿನಗಳ ನೆನೆದ ಮನಕೆ, ಮಧುರ ಮೌನ ಆವರಿಸಿದೆ ತನಗೆ. ಹಿಂತಿರುಗಿ ನೋಡಿದೆ  ನೆನಪಿನ ಸಾಲು,ಕಳೆದು ಹೋದ  ದಿನಗಳು ಜೀವನದ ಹಾಲು.ಬಾಲ್ಯ ಯೌವನ ಮುಪ್ಪು  ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ “ನೆನಪಿನ ಸಾಲು” Read Post »

You cannot copy content of this page

Scroll to Top