ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ವೀಣಾ-ವಾಣಿ

“ಸಂಗೀತ ಶಿಕ್ಷಣ ಮತ್ತು ಮಕ್ಕಳ ಕಲಿಕೆ” ವೀಣಾ ಹೇಮಂತ್‌ ಗೌಡ ಪಾಟೀಲ್

ಮಕ್ಕಳ ಸಂಗಾತಿ “ಸಂಗೀತ ಶಿಕ್ಷಣ ಮತ್ತು ಮಕ್ಕಳ ಕಲಿಕೆ” ವೀಣಾ ಹೇಮಂತ್‌ ಗೌಡ ಪಾಟೀಲ್ ಅದೆಷ್ಟೇ ಮನಸ್ಸು ಕ್ಷೋಭೆಗೊಳಗಾಗಿರಲಿ ಆತಂಕಿತ ವಾಗಿರಲಿ ಸಂಗೀತದ ನಾದ ತರಂಗಕ್ಕೆ ಮನದ ನೋವು ನಿವಾರಿಸುವ ಶಕ್ತಿ ಇದೆ. ಮನಸ್ಸನ್ನು ಸಮಾಧಾನಗೊಳಿಸುವ, ಆಳವಾದ ನೆಮ್ಮದಿಯನ್ನು ನೀಡುವ ಮನಸ್ಸನ್ನು ಅದ್ವಿತೀಯ ವಿಶ್ರಾಂತ ಸ್ಥಿತಿಗೆ ಕರೆದೊಯ್ಯುವ ಶಕ್ತಿ ಇದೆ…. ಸಂಗೀತ ನಮ್ಮನ್ನು ನಾವಿರುವ ಭಾವದಿಂದ ತನ್ನದೇ ಆದ ಲೋಕಕ್ಕೆ ಕರೆದೊಯ್ಯುತ್ತದೆ.ಲಲಿತ ಕಲೆಗಳಲ್ಲಿ ಒಂದಾದ ಸಂಗೀತವು ಮಕ್ಕಳಲ್ಲಿ ರಾಗ, ತಾಳ, ಲಯಗಳ ಜ್ಞಾನದ ಜೊತೆಗೆ ಹತ್ತು ಹಲವು ವಿಭಿನ್ನ ಸಂಗತಿಗಳಲ್ಲಿ ಹೆಚ್ಚಿನ ಕಲಿಕೆಯನ್ನು ನೀಡುತ್ತದೆ.ವ್ಯಕ್ತಿಯ ಬೌದ್ಧಿಕ ಭಾವನಾತ್ಮಕ, ಸಾಮಾಜಿಕ  ಹಾಗೂ ಸಾಂಸ್ಕೃತಿಕ ಬದುಕಿಗೆ ಒಳ್ಳೆಯ ಬುನಾದಿಯನ್ನು ಹಾಕುತ್ತದೆ. ಆದ್ದರಿಂದಲೇ ಮಕ್ಕಳನ್ನು ಚಿಕ್ಕಂದಿನಲ್ಲಿಯೇ ಸಂಗೀತ ಕಲಿಯಲು ಪ್ರೋತ್ಸಾಹಿಸಲಾಗುತ್ತದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಆಟ ಪಾಠಗಳಂತೆ ಲಲಿತ ಕಲೆಗಳಲ್ಲಿ ಒಂದಾದ ಸಂಗೀತವೂ ಕೂಡ ಅತ್ಯವಶ್ಯಕ ಎಂಬುದನ್ನು ಮನಗಂಡಿರುವ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಪ್ರತಿ ವಾರಕ್ಕೆ ಎರಡರಿಂದ ಮೂರು ಅವಧಿಯಲ್ಲಿ ಸಂಗೀತ ಶಿಕ್ಷಣವನ್ನು ಕಡ್ಡಾಯವಾಗಿ ಕಲಿಸುವ ವ್ಯವಸ್ಥೆ ಮಾಡಿದೆ. ಪರಿಣಾಮವಾಗಿ ಶಾಸ್ತ್ರೀಯವಾಗಿ ಸಂಗೀತವನ್ನು ಕಲಿಯದೆ ಹೋದರೂ ಕೂಡ ತಕ್ಕಮಟ್ಟಿಗೆ ಸಂಗೀತದ ಜ್ಞಾನ ಮಕ್ಕಳಿಗೆ ದೊರೆಯುತ್ತದೆ. ಸಂಗೀತ ಕಲೆ…. ಕೇವಲ ಕಲೆಯಲ್ಲ..ಅದು ಜೀವನವನ್ನು ಅರಿಯುವ ಮಾರ್ಗ. ಸಂಗೀತವನ್ನು   ಕಲಿಯುವ ಮಕ್ಕಳಲ್ಲಿ ಗಮನಾರ್ಹ ಬದಲಾವಣೆಯನ್ನು ನಾವು ಕಾಣಬಹುದು. ಸೂಕ್ಷ್ಮವಾದ ಹಾಗೂ ಅತ್ಯುತ್ತಮವಾದ ಗ್ರಹಿಕೆಯ ಶಕ್ತಿ ಮಕ್ಕಳದಾಗುತ್ತದೆ. ಸ್ಮರಣಶಕ್ತಿ ಕೂಡ ಹೆಚ್ಚುತ್ತದೆ. ಚಿಕ್ಕ ಪುಟ್ಟ ಬದಲಾವಣೆಗಳಿಂದ ಉಂಟಾಗುವ ವ್ಯತ್ಯಾಸಗಳ ಅರಿವು ಮೂಡುತ್ತದೆ…. ಇದರ ಪರಿಣಾಮವಾಗಿ ಮಕ್ಕಳು ಶಾಲೆಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಬದುಕಿನ ಎಲ್ಲಾ ಹಂತಗಳಲ್ಲಿ ತಮ್ಮ ಗ್ರಹಣ ಶಕ್ತಿಯ ಸೂಕ್ಷ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುತ್ತಾರೆ. ಸಂಗೀತ ಶಿಕ್ಷಣವು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ. ಸಂಗೀತದ ಮೂಲಕ ಮಕ್ಕಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವಂತೆ ಮಕ್ಕಳನ್ನು ಕ್ರಿಯಾಶೀಲಗೊಳಿಸುತ್ತದೆ. ಮಕ್ಕಳ ಸೃಜನಶೀಲತೆ ಅರಳುವುದು ಇಂತಹ ಕ್ರಿಯಾಶೀಲ ಅಭಿವ್ಯಕ್ತಿಗಳಿಂದ ಮಾತ್ರ. ಹೊಸ ವಿಚಾರಗಳನ್ನು ಅರಿಯಲು, ಹೊಸ ವಿಷಯಗಳನ್ನು ಪ್ರಸ್ತುತಪಡಿಸಲು ಸಂಗೀತವು ಅವರಿಗೆ ಸೂಕ್ಷ್ಮವಾದ ಕಲಿಕಾ ಕೌಶಲ್ಯವನ್ನು ನೀಡುತ್ತದೆ.ಸಂಗೀತದಿಂದ ಮಾನಸಿಕ ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದರೆ ಅಚ್ಚರಿ ಪಡದಿರಿ. ನಿರಂತರವಾಗಿ ಸಂಗೀತದ ಅಭ್ಯಾಸವನ್ನು ಮಾಡುವುದರಿಂದ ಹಾಗೂ ಒಳ್ಳೆಯ ಸುಮಧುರವಾದ ಸಂಗೀತವನ್ನು ಕೇಳುವ ಮೂಲಕ ಉದ್ರಿಕ ನರಗಳನ್ನು  ಶಾಂತಗೊಳಿಸಬಹುದು. ಮೈ-ಮನಗಳಲ್ಲಿ ನೆಮ್ಮದಿ ಹಾಗೂ ಶಾಂತಿಯನ್ನು ತರುವ ಸಂಗೀತದ ನಾದ ತರಂಗಗಳು ಮನಸ್ಸಿನ ಬೇಗುದಿಯನ್ನು ತೊಡೆದು ಹಾಕುವ ಮೂಲಕ ಶಾಂತ ಮನಸ್ಥಿತಿಗೆ ಕಾರಣವಾಗುತ್ತದೆ. ಸಂಗೀತವು ವ್ಯಕ್ತಿಯ ಆತ್ಮವಿಶ್ವಾಸ ವೃದ್ದಿಗೆ ಸಾಧನ…. ನಿರಂತರವಾದ ತರಬೇತಿಯ ಮೂಲಕ ಕಲಿಕೆಯಲ್ಲಿ ಆತ್ಮವಿಶ್ವಾಸ ಹೆಚ್ಚಿದರೆ, ವೇದಿಕೆಯನ್ನು ಏರಿ ಕಲಿತ ವಿದ್ಯೆಯನ್ನು ಪ್ರಸ್ತುತಪಡಿಸಲು ಅತ್ಯವಶ್ಯಕವಾದ ಧೈರ್ಯವನ್ನು ಸಂಗೀತವು ನೀಡುತ್ತದೆ. ಆತ್ಮವಿಶ್ವಾಸ ವೃದ್ಧಿಗೆ ಇದಕ್ಕಿಂತ ಇನ್ನೇನು ಬೇಕು ? ಸಾರ್ವಜನಿಕರೊಂದಿಗೆ ಸಂವಹನ ಸಾಧ್ಯವಾಗುತ್ತದೆ. ಮತ್ತಷ್ಟು ಮಗದಷ್ಟು ಕಲಿಕಾ ಆಸಕ್ತಿ ಹೆಚ್ಚುತ್ತದೆ.ಸಾಂಸ್ಕೃತಿಕ ಮೌಲ್ಯಗಳ ಪರಿಚಯ ಮಾಡಿಕೊಡುವ ಸಂಗೀತವು ನಮ್ಮ ದೇಶದ ಮಹೋನ್ನತ ಸಂಗೀತ ಪರಂಪರೆಯ ಅರಿವನ್ನು ಮೂಡಿಸುತ್ತದೆ. ವಿವಿಧ ರಾಗ ತಾಳ ಲಯಗಳ ಜ್ಞಾನವನ್ನು ನಮಗೆ ಪ್ರಚುರಪಡಿಸುತ್ತದೆ. ಸಂಗೀತದ ವೈವಿಧ್ಯಗಳ ಕುರಿತು ಹೊಸ ಕುತೂಹಲವನ್ನು ಮೂಡಿಸುತ್ತದೆ. ವಿವಿಧ ಶೈಲಿಗಳ, ತಾಳ ವಾದ್ಯಗಳ ಅರಿವನ್ನು ಮೂಡಿಸಿ ನಮ್ಮ ಮಹೋನ್ನತ ಗುರು ಪರಂಪರೆಯ ಕುರಿತು ಕೃತಜ್ಞತಾ ಭಾವವನ್ನು ಮೂಡಿಸುತ್ತದೆ. ಸಂಗೀತ ಕಲಿಕೆಯು ನಮ್ಮ ಬದುಕಿನಲ್ಲಿ ಶಿಸ್ತಿನ ಪಾಲನೆಗೆ ಕಾರಣವಾಗುತ್ತದೆ… ಪ್ರತಿದಿನವೂ ಸಂಗೀತವನ್ನು ಕಲಿಯುವ ನಿಟ್ಟಿನಲ್ಲಿ ತರಬೇತಿ ಹೊಂದುವ ಪ್ರತಿ ಮಗುವು ಕೂಡ ತಮ್ಮದೇ ಆದ ಕೆಲ ಪದ್ಧತಿಗಳನ್ನು ರೂಡಿಸಿಕೊಳ್ಳುತ್ತಾರೆ. ತಮಗೆ ಒಗ್ಗುವ ಊಟೋಪಚಾರ, ಆಹಾರ ವಿಹಾರಗಳನ್ನು ಪಾಲಿಸುತ್ತಾರೆ ಇದು ಅವರಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಶಿಸ್ತಿನ ಪರಿಪಾಲನೆಗೆ ಸಹಕಾರಿಯಾಗುತ್ತದೆ. ನಿಯಮ ಹಾಗೂ ಸಮಯ ಪಾಲನೆಯ ಕಾರಣದಿಂದಾಗಿ ಒಂದು ಬಗೆಯ ಶಿಸ್ತು ಅವರಲ್ಲಿ ಉಂಟಾಗುತ್ತದೆ. ಗುಂಪಿನಲ್ಲಿ ಹಾಡುವ ಮೂಲಕ ಸಾಮಾಜಿಕ ಸಾಂಗತ್ಯದ ಸಾಮರ್ಥ್ಯ ಬೆಳೆಯುತ್ತದೆ ವಿಭಿನ್ನತೆಯಲ್ಲಿಯೂ ಏಕತೆಯನ್ನು ಕಾಣುವ ಶಕ್ತಿ ಸಂಗೀತಕ್ಕಿದೆ. ಇತರರಲ್ಲಿರುವ ವಿಭಿನ್ನ ಗ್ರಹಿಕೆಯ ಶಕ್ತಿ,, ಕಲಿಕಾ ಸಾಮರ್ಥ್ಯ, ಸಮಯ ಪಾಲನೆ, ಶ್ರದ್ಧೆ,ಕಾರ್ಯ ತತ್ವರತೆಗಳು ನಮ್ಮನ್ನು ಪ್ರೇರೇಪಿಸುತ್ತವೆ. ಸಂಗೀತವು ಸ್ನೇಹ ಭಾವವನ್ನು ಹಾಗೂ ಗೌರವವನ್ನು ವೃದ್ಧಿಸುತ್ತದೆ. ನಮ್ಮ ಮನದಾಳದ ಮಾತುಗಳನ್ನು ನಮಗರಿವಿಲ್ಲದೆ ಸಂಗೀತದ ಮೂಲಕ  ಹೊರಹಾಕುವ ಪ್ರತಿ ವ್ಯಕ್ತಿಯು ಇನ್ನಿಲ್ಲದ ನಿರುಮ್ಮಳತೆಯನ್ನು ಅನುಭವಿಸುತ್ತಾರೆ….ಆದ್ದರಿಂದ ತರಗತಿಯ ಕೋಣೆಯಲ್ಲಿ ಕಡ್ಡಾಯವಾಗಿ ದೊರೆಯುವ ಸಂಗೀತ ಶಿಕ್ಷಣದಿಂದ ನಿಮ್ಮ ಮಕ್ಕಳನ್ನು ವಂಚಿತಗೊಳಿಸದಿರಿ. ವೀಣಾ ಹೇಮಂತ್ ಗೌಡ ಪಾಟೀಲ್ 

“ಸಂಗೀತ ಶಿಕ್ಷಣ ಮತ್ತು ಮಕ್ಕಳ ಕಲಿಕೆ” ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ligade
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-21 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಜಯದೇವಿ ತಾಯಿಯವರು ಕೋರ್ಟ್ ಕೇಸ್ನ್ನ ಗೆದ್ದು…..“ನ್ಯಾಯಕ್ಕೆ ಜೀವ ತುಂಬಿದರು.*ಆಗಿನ ಕಾಲದಲ್ಲಿ ಜಯದೇವಿ ತಾಯಿಯವರ ಪತಿಯು ಬಾಲಕರೆಂದು  ಬ್ರಿಟಿಷರ ಮೇಲ್ವಿಚಾರಣೆಯಲ್ಲಿದ್ದ ದೊಡ್ಡ ಆಸ್ತಿ, ಜಮೀನು, ಮನೆ, ವ್ಯವಹಾರ—ಎಲ್ಲವು ಒಂದೇ ಕ್ಷಣದಲ್ಲಿ ತಾಯಿ ಯ ಹೆಗಲ ಮೇಲೆ ಬಿದ್ದವು.ಪುರುಷರೇ ಹೆದರಿಬಿಡುವಂತಹ ಜವಾಬ್ದಾರಿಯನ್ನು ಒಬ್ಬ ಹೆಣ್ಣು ಮಗಳು ಒಬ್ಬಳೇ ಹೊತ್ತು ನಿಲ್ಲುವುದು ಅಂದಿನ ಸಮಾಜದಲ್ಲಿ ಅಸಾಧ್ಯವೆಂದು ಎಲ್ಲರೂ ಭಾವಿಸಿದ್ದರು.ಆದರೆ ಜಯದೇವಿ ತಾಯಿ ಒಬ್ಬ ಸಬಲ ತಾಯಿತನದ ಶಕ್ತಿಯಾಗಿ ನಿಂದರು.ಒಂದೆಡೆ ಗಂಡನ ಅಗಲಿಕೆಯ ನೋವು ಹೃದಯದಿ ಮುಚ್ಚಿಟ್ಟು ಮತ್ತೊಂದೆಡೆ ಐದು  ಮಕ್ಕಳ ಭವಿಷ್ಯ ಅವರ ಕಣ್ಣೆದುರಿಗೆ ನಿಂತಿತ್ತು ಬೆಳಗ್ಗೆ ಉದಯಿಸುವ ಸೂರ್ಯನಿಗಿಂತ ಮುಂಚೆಯೇ ಎದ್ದು ಮನೆಯ ಕೆಲಸ, ಮಕ್ಕಳ ಆರೈಕೆ, ಕಾರ್ಮಿಕರ ನೋಡಿಕೊಳ್ಳುವುದು, ಆಸ್ತಿಯ ಲೆಕ್ಕಪತ್ರ, ನ್ಯಾಯದ ವಿಚಾರ …..ಎಲ್ಲವನ್ನೂ ನಿರ್ವಹಿಸುತ್ತಿದ್ದರು. ಅವರಲ್ಲಿ ಆವರಿಸಿದ ಖಾಲಿತನವನು ಸಿದ್ದರಾಮನ ನೆನಹುನಲಿ ನಮ್ಮೆದೆಯ ತುಂಬಲಾರಂಭಿಸಿದರು. ಇಚ್ಛೆಯಿಂದಲೇ ಸರ್ವ|ತುಚ್ಚಿೀಕರಿಸಿ ಬೇಗ ಎಚ್ಚರದಿಂದ ಇರಬೇಕು- ನಮ್ಮಲಿಯಸಚ್ಚಿದಾನಂದನ ಸ್ಮರಿಸೂತ||*B ಸಚ್ಚಿದಾನಂದ ಶಿವಮಯನಾದ ಸಿದ್ದರಾಮನು ನೆನೆಯುತ ಐದು ಮಕ್ಕಳ ಬದುಕನ್ನು ಕಟ್ಟುವ ಉಕ್ಕಿನ ಮನೋಬಲವಿತ್ತು. ಮಕ್ಕಳ ಬದುಕು ಅರಳಬೇಕೆಂಬು ಕನಸು ಹೊತಿದ್ದರು…    ಮಕ್ಕಳಿಗೆ ಪರ್ವತದಂತೆ ಬಲವಾಗಿ ನಿಂತರು.ಅದರಲ್ಲೇ ಅವರ ತಾಯಿತನದ ದಿವ್ಯತೆ ಇತ್ತು. ಇಲ್ಲಿ ಒಂದೆರಡು ಘಟನೆಗಳನ್ನು ನೆನಪಿಸಿಕೊಳ್ಳಲೇ ಬೇಕು ತಾಯಿಯವರು ಆಗಿಂದ್ದಾಂಗ  ಹೇಳುತ್ತಿದ್ದರು.  ಮೊದಲ ಮಗಳು ಶಶಿಕಲಾ ಅವರಿಗೆ ರಾಜಶೇಖರ ಮಡಕಿ  ಸ್ವಂತ ತಮ್ಮನಿಗೆ ಕೊಟ್ಟು ಮದುವೆ ಮಾಡಲಾಗಿತ್ತು‌ . ಅವರು ಸುಖ ಸಂಸಾರದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಸಾಹಿತ್ಯವನ್ನು ರಚಿಸುತ್ತಾ ಸುಖವಾಗಿ ಇದ್ದರು. ತಾಯಿಯವರ ಹಿರಿಯ ಮಗಳು ಶಶಿಕಲಾ ಮಡಕಿ ಅಳಿಯ ರಾಜಶೇಖರ್ ಮಡಿಕೆ ಎರಡನೇ ಮಗ ಶ್ರೀಕಂಠ ಮೂರನೇ ಮಗ ಪ್ರಭುರಾಜ ಇವರಿಬ್ಬರನ್ನು ಪಂಚಗಣಿಯ ಶಾಲೆಯಲ್ಲಿ ಓದಲು ಕಳಿಸಿಕೊಟ್ಟಿದ್ದರು‌ ‌.ಸುಖದ ಸುಪತ್ತಿನಲ್ಲಿ ಬೆಳೆದು ಬಂದ್ದಿದ್ದ ಮಕ್ಕಳಿಗೆ ಅಲ್ಲಿಯ ಕಠಿಣವಾದ ಶಿಸ್ತು ಬದ್ಧತೆ ,ಕಟ್ಟುನಿಟ್ಟಾದ ನಿಯಮಗಳು, ಶಾಲೆಯ ಅಭ್ಯಾಸದ ಭಾರವು ಅವರಿಗೆ ಸರಿ ಹೊಂದಲಿಲ್ಲ, ಊಟದಲಿ ವ್ಯತ್ಯಾಸ ಸಹಿಸಲಾಗಲಿಲ್ಲ. ಹೀಗಾಗಿ ಅವರು ಅಲ್ಲಿ ಇರಲು ಒಪ್ಪಿಕೊಳ್ಳಲಿಲ್ಲ… ಹಿರಿಯ ಮಗ ಶ್ರೀಕಂಠ ಆದರೂ ತಾಯಿಗೆ ಹೆದರಿ ಮೊದಲು ಮಗ ಶ್ರೀಕಂಠ ಶಾಲೆಯ ರಜೆ ಪ್ರಾರಂಭವಾಗುವವರೆಗೂ ಇದ್ದು ರಜೆಗೆಂದು ಮನೆಗೆ ಬಂದಾಗ ಹಿಂತಿರುಗಿ ಹೋಗಲು ಸಾಧ್ಯವೇ ಇಲ್ಲವೆಂದು ತನ್ನ ಅಭಿರುಚಿಯು ಕೃಷಿಯಲ್ಲಿ ಹಾಗೂ ಅಂಗಡಿ ಮನೆ ನೋಡಿಕೊಂಡು ಹೋಗುವದರಲ್ಲಿ ಇದೆ ಎಂದು ತಿಳಿಸಿದಾಗ ತಾಯಿಯವರು ಅವರ ವಿಚಾರದ ವಿರುದ್ಧ ಹೋಗಲು ಒಪ್ಪಲಿಲ್ಲ ಏಕೆಂದರೆ ಶ್ರೀಕಂಠವರಿಗೆ ಕೃಷಿಯಲ್ಲಿ ಅಭಿರುಚಿ ಹೆಚ್ಚಿಗೆ ಇರುವುದನ್ನು ಗಮನಿಸಿದ್ದ ತಾಯಿಯವರು ಅವರಂತೆ ಒಪ್ಪಿಕೊಂಡರು.ಇಲ್ಲಿ ತಾಯಿಯವರು ಮಕ್ಕಳಿಗೆ ಯಾವುದೇ ರೀತಿಯಾದ ಒತ್ತಾಯದಿಂದ ಯಾವ ಶಿಕ್ಷಣವನ್ನು ಕೊಡಬಾರದು ಅನ್ನುವುದನ್ನು ಮನಗಂಡಿದ್ದರು ಅವರವರ ಅಭಿರುಚಿಯಂತೆ ಅವರವರ ಜೀವನದ ದಾರಿಯನ್ನು ತೊರಿ ಕೊಡಬೇಕು ಅನ್ನುವ ಅಭಿಪ್ರಾಯ ಹೊಂದಿದ್ದರು. ಇನ್ನು ಎರಡನೇ ಮಗ ಪ್ರಭುರಾಜ ಅತ್ಯಂತ ಮೃದು ಹೃದಯ, ಜಾಣ ಬುದ್ಧಿವಂತನು ಇವರಿಗೆ ದೊಡ್ಡ ಶಿಕ್ಷಣವನ್ನು ಕೊಡಿಸಬೇಕೆನ್ನುವ ಆಸೆ ತಾಯಿಯವರು ಹೊತ್ತಿದ್ದರು .ಅವರು ಕೂಡ ತಿರುಗಿ ಹೋಗಲು ಒಪ್ಪದಿದ್ದಾಗ ತಾಯಿಯವರು ನನಗಾಗಿ ನೀನು ಹೋಗಲೇ ಬೇಕು ಅನ್ನುವ ಪ್ರಮಾಣ ತೆಗೆದುಕೊಂಡರು… ಏಕೆಂದರೆ ಅವರಲ್ಲಿ ಮುಂದೆ ಕಲಿಯುವ ಯೋಗ್ಯತೆ ಇದೆ ಅನ್ನುವುದನ್ನು ಅರೆತಿದ್ದರು …..ಅನಿವಾರ್ಯವಾಗಿ ಪ್ರಭುರಾಜರಿಗೆ ಹೋಗ ಬೇಕಾಗಿ ಬಂತು. ಎರಡನೆ ಮಗ ಪ್ರಭುರಾಜ ಪ್ರಭುರಾಜ್ ಅವರ ಪ್ರತ್ನಿ ಪ್ರಮೀಳಾ (ಗದಗಿನ ಎಳೆಮಲಿ ಶಾಂತಪ್ಪನವರ ಮಗಳು) ತಾಯಿಯವರನ್ನು ಒಂದು ಕ್ಷಣವು ಬಿಟ್ಟಿರದಿದ್ದ ಪ್ರಭು ರಾಜರು ತಾಯಿಯ ನೆರಳಲ್ಲಿದವರು ಹಾಗೂ ಕರುಳಿನ ಸಂಬಂಧ ಗಾಡವಾಗಿತ್ತು. ತಾಯಿಯ ಮೇಲೆ ಅಪಾರ ಪ್ರೀತಿ ಹೊಂದಿದ ಅವರಿಗೆ ತಾಯಿಯಿಂದ ದೂರಿರುವುದು ಬಹಳ ಅಸಹನಿಯವಾಗಿತ್ತು ಹಿಂಸೆ ಕೊಡಲಾರಂಭಿಸಿತ್ತು …. ತಾಯಿಗೆ ಪತ್ರ ಬರೆದು ಹಿಂತಿರುಗಿ ಬರುವುದಾಗಿ ಒತ್ತಾಯಿಸುತ್ತಿದ್ದರು. ಮನೆಯಲ್ಲಿ ಇದ್ದಾಗ ಕೂಡ ಪ್ರಭುರಾಜರಿಗೆ ತಾಯಿಯವರು  ಅವನ ಸಮೀಪದಲ್ಲಿ ಇದ್ದರೆ ಮಾತ್ರ ಮನಸ್ಸಿಗೆ ಶಾಂತಿ….ತಾಯಿ ಕಣ್ಣೆದುರಿನಿಂದ ಸ್ವಲ್ಪ ದೂರವಾದರೂ ಅವನ ಹೃದಯ ಖಾಲಿಯಾಗಿಬಿಡುತ್ತಿತ್ತು. ಇನ್ನು ದೂರದ ಊರಲ್ಲಿ ಇದ್ದರೆ ಕೇಳಬೇಕೆ ಅವರ ಸ್ಥಿತಿ ಹೇಳಲಾಗಿತ್ತುಶಾಲೆಯಲ್ಲಿ ಕುಳಿತಿದ್ದರು ಪ್ರಭುರಾಜ್ ಮನಸ್ಸು ಅಲ್ಲಿ ನೆಲಸಲೇ ಇಲ್ಲ. ಸುತ್ತಲೂ ವಿದ್ಯಾರ್ಥಿಗಳು ಕುಳಿತು ಶಿಕ್ಷಕರು ಪಾಠ ಮಾಡುತ್ತಿದ್ದರೆ ಅವನ ಕಿವಿಯಲ್ಲಿ ಕೇಳಿಸುತ್ತಿದ್ದದ್ದು ತಾಯಿಯ ಧ್ವನಿಯೇ. ಊಟಕ್ಕೆ ಕೂತರೂ ತಾಯಿಯ ಕೈತುತ್ತಿನ ನೆನಪು, ರಾತ್ರಿ ಮಲಗಿದರೂ ತಾಯಿಯ ಮುಖವೇ ಕಣ್ಣಮುಂದೆ ತೇಲುತ್ತಿತ್ತು. ದಿನದಿಂದ ದಿನಕ್ಕೆ ತಾಯಿಯ ನೆನಪು ಅವನ ಮನಸ್ಸನ್ನು ಕಾಡಲಾರಂಭಿಸಿತು …..!!ಪ್ರಿಯ ಓದುಗರೆಇದೆಲ್ಲಾ ಏನೋ ನಾನು ಅತಿಶೋಯುಕ್ತಿಯಾಗಿ ಬರೆಯುತ್ತಿದ್ದೇನೆ ಅಂತ ಏನು ತಿಳಿಯಬೇಡಿ…. ಪ್ರಭು ರಾಜರ ತಾಯಿಯ ಮೇಲಿದ್ದ ಅಗಾಧವಾದ ಪ್ರೀತಿ ಯಾವದಕ್ಕೂ ಸಾಟಿಯಾಗದು….!!!!ಏನು ಹೇಳಿದರೂ ತಾಯಿಯು ಯಾವುದಕ್ಕೂ ಒಪ್ಪದಾದಾಗ ಕೊನೆಗೆ ತಾಳಲಾರದೆ ತಾಯಿಗೆ ಪತ್ರ ಬರೆದನು.“ಅವ್ವಾ… ನನಗೆ ಇಲ್ಲಿ ಇರಲು ಆಗುತ್ತಿಲ್ಲ. ನಿಮ್ಮನ್ನು ಬಿಟ್ಟು ಒಂದು ಕ್ಷಣವೂ ಇರಲಾಗುತ್ತಿಲ್ಲ. ನಾನು ಹಿಂದಿರುಗಿ ಬರುತ್ತೇನೆ. ಇಲ್ಲವಾದರೆ ಇಲ್ಲಿಯೇ ಗುಡ್ಡು ಪರ್ವತಗಳನ್ನು ಏರಿ, ಬಿದ್ದು ಸಾಯ್ತೀನಿ…” ಎಂದು ಕಣ್ಣೀರಿನಿಂದ ಬರೆದ ಆ ಮಾತುಗಳಲ್ಲಿ ಮಗನ ಅತಿಯಾದ ಮಮತೆ ಮತ್ತು ಅಧೈರ್ಯ ಎರಡೂ ತುಂಬಿಕೊಂಡಿದ್ದವು.ಆ ಪತ್ರ ಓದಿದ ತಾಯಿಯವರು ಕ್ಷಣಕಾಲ ಮೌನವಾಗಿದ್ದರು. ಮಗನ ಪ್ರೀತಿಯ ತೀವ್ರತೆ ಅವರಿಗೆ ಗೊತ್ತಿತ್ತು. ಆದರೆ ಜೀವನವೆಂದರೆ *ಕೇವಲ ಭಾವನೆಗಳಿಗೆ ತಲೆಬಾಗುವುದಲ್ಲ, ಧೈರ್ಯದಿಂದ ಎದುರಿಸುವ ಪಥ ಎನ್ನುವರು…… *ಕಣ್ಣೊಳಗಿನ ಕ‌ಸ  |ಸಣ್ಣಾಗಿದ್ದರೆ ಏನುಕಣ್ಣು ಚುಚ್ಚಿ ನೀರು ಸುರಿವುದು- ಮಾಯೆಯುಸಣ್ಣಲ್ಲ ಕಣ್ಣಿನ ವಿಸ್ತಾರ ||* ಈ ರೀತಿಯ ಮನಸ್ಸಿನ ಪ್ರವೃತ್ತಿಯು ಚಿಕ್ಕದಲ್ಲ ಅನ್ನುವುದು ಅರ್ಥವಾಯಿತು ಹೀಗಾಗಿ ತಾಯಿಗೆ ಕಠಿಣವಾದರೂ ಜೀವನದ ಪಾಠವಾಗುವ ಉತ್ತರ ಬರೆದರು… *ಬಾಳಿನಲ್ಲಿ ಕೆಟ್ಟ |ಕೀಳತನಕ್ಕೆ ಜಾಗಎಳ್ಳಿನ ಮನೆಯಷ್ಟು ಕೊಡದಿರು- ನಿನ್ನಲ್ಲಿಒಳ್ಳೆತನದಿ  ಗಟ್ಟಿತನವು ಬೆಳೆಯಲಿ||* ಎನ್ನುತ….. ಹೀಗೆ ಬರೆದರು“ನನ್ನ ಹೊಟ್ಟೆಯಲ್ಲಿ ಹುಟ್ಟಿದವನು ಇಂಥ ಹೇಡಿಯೇ.. ಇಂಥ ಅಧೈರ್ಯ ಹೇಗೆ ಬಂತು? ಜೀವನದಲ್ಲಿ ಸಾಧನೆ ಮಾಡಲು ದೂರದ ಊರಿಗೆ ಹೋದರೆ ಕಷ್ಟಗಳು ಬರುತ್ತವೆ, ಏಕಾಂತ ಕಾಡುತ್ತದೆ. ಅದಕ್ಕೆ ಓಡಿ ಮನೆಗೆ ಬರಬೇಕೆಂದರೆ ಬದುಕಿನಲ್ಲಿ ಏನನ್ನೂ ಸಾಧಿಸಲಾಗದು. ಧೈರ್ಯವಾಗಿ ನಿಂತು ಹೋರಾಡಬೇಕು.‘ನಾನು ಅಲ್ಲೇ ಬಿದ್ದು ಸಾಯ್ತೀನಿ’ ಅಂತ ಹೇಳುವಷ್ಟು ದುರ್ಬಲನಾಗಿ ನನ್ನ ಮಗ ಹುಟ್ಟಿಲ್ಲ.ಸಾಯಬೇಕೆಂದರೆ ಅಲ್ಲೇ ಸಾಯಿ… ಆದರೆ ಓಡಿ ಬರುವ ಹೇಡಿತನದ ಮಾತು ಬೇಡ!” ಎಂದು ಕಡಾ ಖಂಡಿತವಾಗಿ ಪತ್ರವನ್ನು ಬರೆದರು. *ಹಿರಿಯರಲ್ಲಿ ಶ್ರದ್ಧೆ |ಸ್ಥಿರವಾಗಿ ಇರಲಿಹರಕೆ ಕೊಡುವವರು ನಿನಗೆ -ಈ ಮಾತುಪರಕಿಸಿ ನೋಡು ಬಾಳಲಿ ||*ಎನ್ನುವಂತೆ ತಾಯಿಯವರ ಆ ಮಾತುಗಳು ಪ್ರಭುರಾಜ್ ಹೃದಯಕ್ಕೆ ಮಿಂಚಿನಂತೆ ತಾಕಿದವು. ಮೊದಲಿಗೆ ಅವರ ಕಣ್ಣು ತುಂಬಿ ಬಂದರೂ, ತಾಯಿಯವರ ಮಾತಿನೊಳಗಿನ ಕಠೋರ ಪ್ರೀತಿಯನ್ನು ಅವರು ಅರ್ಥ ಮಾಡಿಕೊಂಡರು.ಆ ದಿನದಿಂದ ತನ್ನ ಕಲಿಕೆಯಲ್ಲಿ ಶ್ರದ್ಧೆಯಿಂದ ಓದಲಾರಂಭಿಸಿದರು ಮುಂದೆ ಎಲ್  ಎಲ್ ಬಿ…. ಕಲಿತು ವಕೀಲರಾದರು.. ಮುಂದೆ ದೊಡ್ಡ ರಾಜಕಾರಣಿ ಕೂಡ ಆದರು…ಮಮಕಾರದ ತಾಯಿಯಾಗಿ ಜೀವನದ ಬಿರುಗಾಳಿಯನ್ನು ಎದುರಿಸಲು ಮಕ್ಕಳ ಮನಸ್ಸನ್ನು ಉಕ್ಕಿನಂತೆ ಗಟ್ಟಿಗೊಳಿಸುವ ಗುರು ಕೂಡಾ ಆಗಿದ್ದರು. ಹೀಗೆ ಅತ್ಯಂತ ಧೈರ್ಯದಿಂದ ಆಸ್ತಿಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ. ಸಿದ್ದರಾಮನ ಅಪ್ಪಟ ಭಕ್ತಿಯಾಗಿ,  ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಹೊಂದಿದ ತಾಯಿಯವರು ಬಹಳ ಸುಭದ್ದವಾಗಿ ಭಧ್ಧತೆಯಿಂದ ತಾಯಿತನದ ಜವಾಬ್ದಾರಿಯನ್ನು, ಆಸ್ತಿಯ ಮಾಲೀಕತ್ವತೆಯನು ಹಾಗೂ ಜನ ಸೇವಕಿಯಾಗಿ ಕೆಲಸ ನಿರ್ವಹಿಸಲಾರಂಭಿಸಿದರು…. ಬಹಳ ಜನರು “ಹೆಂಗಸು ಒಬ್ಬಳೇ ಇಷ್ಟು ದೊಡ್ಡ ಜವಾಬ್ದಾರಿ ನಿಭಾಯಿಸಲಾರಳು” ಎಂದು ಮಾತಾಡಿದವರಿಗೆ ಉತ್ತರವಾಗಿ  ತಮ್ಮ ಬದುಕನ್ನು ಬದುಕಿ ತೋರಿಸಿದರು.ಅವರ ಜೀವನ ಒಂದು ಅಳಲಿನ ಕಥೆಯನು ಒರಸಿ ಅದು ತಾಯಿತನದ ಮಹಾಕಾವ್ಯವನು ಬರೆದರು. *ದುಃಖ ದುಮ್ಮಾನಗಳು |ಸಿಕ್ಕಿ ಒದ್ದಾಡದಿರುಸುಖ ಬಂದಿತ್ತೆಂದು ಹಿಗ್ಗದಿರು -ಮನವೇಸುಖ ದುಃಖ ಅರ್ಪಿಸು ಶಿವನಡಿಗೆ ||*ಎಂದು ಬಾಳನು ಆರಂಭಿಸಿದರು. ಸವಿತಾ ದೇಶಮುಖ್

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಶ್ರೇಷ್ಠ ಶಿವಯೋಗ ಸಾಧಕರು ಮಲೆ ಮಹದೇಶ್ವರ   ಹನ್ನೆರಡನೆಯ ಶತಮಾನದ ಶರಣರನ್ನು ಸಂತರನ್ನು ಹೊಂದಿರುವ ಕನ್ನಡದ ಈ ನೆಲದಲ್ಲಿ ಏಳು ಬೆಟ್ಟಗಳ ಮಲೆಯ ಮಹದೇಶ್ವರರು ಹುಟ್ಟಿ ಬರುತ್ತಾರೆ.  ಕರ್ನಾಟಕದ ಅತ್ಯಂತ ಪ್ರಸಿದ್ಧ ಮತ್ತು ಪವಿತ್ರ ಲಿಂಗಾಯತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಇದು ದಕ್ಷಿಣ ತುದಿಯ ಗಡಿ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿದೆ.  ಜನಪದ ಕಾವ್ಯಗಳು ಮತ್ತು ಸ್ಥಳ ಪುರಾಣಗಳ ಪ್ರಕಾರ, ಶ್ರೀ ಮಲೆ ಮಹದೇಶ್ವರ ಸ್ವಾಮಿಯ ತಂದೆ ತಾಯಿಗಳ ವಿವರ   ತಂದೆ: ಚಂದ್ರಶೇಖರ ಮೂರ್ತಿ (ಕೆಲವು ಕಡೆ ಚಂದ್ರಶೇಖರ ಗುರುಗಳು ಎಂದೂ ಕರೆಯಲಾಗುತ್ತದೆ). ತಾಯಿ: ಉತ್ತರಾಜಮ್ಮ (ಕೆಲವು ಜನಪದ ಕಥೆಗಳ ಪ್ರಕಾರ ಇವರನ್ನು ಸುಗುಣಾದೇವಿ ಎಂದೂ ಗುರುತಿಸಲಾಗುತ್ತದೆ).ಹಿನ್ನೆಲೆ ಮತ್ತು ನಂಬಿಕೆಗಳು: ದೈವಿಕ ಜನನ: ಜನಪದ ಚರಿತ್ರೆಯ ಪ್ರಕಾರ, ಉತ್ತರಾಜಮ್ಮನಿಗೆ ದೀರ್ಘಕಾಲ ಮಕ್ಕಳಾಗದಿದ್ದಾಗ ಅವರು ಶಿವನನ್ನು ಕುರಿತು ತಪಸ್ಸು ಮಾಡುತ್ತಾರೆ. ಭಕ್ತಿಗೆ ಮೆಚ್ಚಿದ ಶಿವನು ಅವಳ ಕನಸಿನಲ್ಲಿ ಬಂದು ಗಂಡು ಸಂತಾನದ ವರವನ್ನು ನೀಡುತ್ತಾನೆ. ಅದರಂತೆ ಜನಿಸಿದ ಬಾಲಕನೇ ಮುಂದೆ ‘ಮಹದೇಶ್ವರ’ರಾಗಿ ಪ್ರಸಿದ್ಧಿ ಪಡೆದರು ಎಂಬ ಪ್ರತೀತಿ ಇದೆ. *ಅವತಾರ ಪುರುಷ: ಮಹದೇಶ್ವರರು ಯಾವುದೇ ಸಾಮಾನ್ಯ ಮಾನವನಂತೆ ಜನಿಸದೆ, ಲೋಕ ಕಲ್ಯಾಣಕ್ಕಾಗಿ ಭೂಮಿಗೆ ಬಂದ ಶ್ರೇಷ್ಠ ಚಿಂತಕ ಅನುಭವಿ. ಎಂಬುದು ಭಕ್ತರ ದೃಢ ನಂಬಿಕೆಯಾಗಿದೆ. ಅವರು ಸಣ್ಣ ವಯಸ್ಸಿನಲ್ಲೇ ಸಂಸಾರ ಮತ್ತು ಲೌಕಿಕ ಜೀವನವನ್ನು ತೊರೆದು ಆಧ್ಯಾತ್ಮಿಕ ಹಾದಿ ಹಿಡಿದರು.ಮಹದೇಶ್ವರ ಸ್ವಾಮಿಯ ಬಾಲ್ಯದ ಪವಾಡಗಳು ಅಥವಾ ಅವರು ಶ್ರೀಶೈಲದಿಂದ ಕರ್ನಾಟಕಕ್ಕೆ ಬಂದ ಇತಿಹಾಸದ ಬಗ್ಗೆ ಪುರಾಣ ಕಥನಗಳ ದಾಖಲೆಗಳಿವೆ. *ಹಿನ್ನೆಲೆ ಮತ್ತು ಸ್ಥಳ*  ಪುರಾಣಮಹದೇಶ್ವರ ಸ್ವಾಮಿ: 14-15ನೇ ಶತಮಾನದಲ್ಲಿ ಬಾಳಿ ಬದುಕಿದ ಪವಾಡ ಪುರುಷ ಹಾಗೂ ಶರಣ ಸಂಸ್ಕೃತಿಯ  ಸಂತ ಶ್ರೀ ಮಹದೇಶ್ವರರು ಸಾಕ್ಷಾತ್ ಶಿವನ ಅವತಾರ ಎಂದು ಅಲ್ಲಿನ ಜನಪದಿಗರು ನಂಬಿದ್ದಾರೆ. *ತಪೋಭೂಮಿ ಮತ್ತು ಮುಕ್ತಿ:*  ಮಹದೇಶ್ವರರು ಈ ಬೆಟ್ಟಗಳಲ್ಲಿ ತಪಸ್ಸು ಆಚರಿಸಿ, ಭಕ್ತರ ಕಷ್ಟಗಳನ್ನು ನಿವಾರಿಸಿ, ಕೊನೆಗೆ ಇಲ್ಲೇ ಲಿಂಗ ರೂಪದಲ್ಲಿ ಐಕ್ಯರಾದರು (ಸಮಾಧಿ ಹೊಂದಿದರು). ಹುಲಿ ವಾಹನ: ಜನಪದ ಕಾವ್ಯಗಳ ಪ್ರಕಾರ, ಬಾಲಯೋಗಿ ಮಹದೇಶ್ವರರು ಕಾಡಿನ ಹುಲಿಯನ್ನೇ ತಮ್ಮ ವಾಹನವಾಗಿಸಿಕೊಂಡು ಬೆಟ್ಟಗಳಲ್ಲಿ ಸಂಚರಿಸುತ್ತಿದ್ದರು.ಶ್ರವಣ ಸಂಹಾರ: ಈ ಭಾಗದಲ್ಲಿ ಜನರಿಗೆ ಹಿಂಸೆ ನೀಡುತ್ತಿದ್ದ ಕ್ರೂರ ರಾಜ ‘ಶ್ರವಣ’ನನ್ನು ಮಹದೇಶ್ವರರು ಸಂಹರಿಸಿ ಜನರನ್ನು ಮುಕ್ತಗೊಳಿಸಿದರು ಎಂಬ ಇತಿಹಾಸವಿದೆ. ಏಳು ಮಲೆಗಳು (ಬೆಟ್ಟಗಳು)ಮಲೆ ಮಹದೇಶ್ವರ ಕ್ಷೇತ್ರವು ಸಮುದ್ರ ಮಟ್ಟದಿಂದ ಸುಮಾರು 3,200 ಅಡಿ ಎತ್ತರದಲ್ಲಿದ್ದು, ದಟ್ಟವಾದ ಅರಣ್ಯದಿಂದ ಆವೃತವಾದ ಏಳು ಬೆಟ್ಟಗಳ ಸಾಲನ್ನು ಒಳಗೊಂಡಿದೆ: ಆನೆಮಲೆ ಜೇನುಮಲೆ ಕಾಡುಮಲೆ ಕಾನುಮಲೆ ಪೊನ್ನಾಚಿಮಲೆ ಪಾವಲಮಲೆ (ಪವಲಮಲೆ) ಪಚ್ಚೆಮಲೆ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳುಲಿಂಗ ರೂಪದ ದರ್ಶನ: ದೇವಸ್ಥಾನದ ಗರ್ಭಗುಡಿಯಲ್ಲಿ ಮಹದೇಶ್ವರರು ಸ್ವಯಂಭೂ ಲಿಂಗ ರೂಪದಲ್ಲಿ ನೆಲೆಸಿದ್ದಾರೆ. ಅಂತರಗಂಗೆ: ಬೆಟ್ಟದ ಸಮೀಪವಿರುವ ಒಂದು ಪವಿತ್ರ ನೀರಿನ ಸೆಲೆ. ಇಲ್ಲಿ ವರ್ಷದ ಯಾವುದೇ ಋತುವಿನಲ್ಲೂ ನೀರು ಬತ್ತುವುದಿಲ್ಲ. ಭಕ್ತರು ಇಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುತ್ತಾರೆ. ದೊಡ್ಡ ನಂದಿ ವಿಗ್ರಹ: ದೇವಾಲಯದ ಆವರಣದಲ್ಲಿ ಶಿವನ ವಾಹನವಾದ ನಂದಿಯ ಬೃಹತ್ ಮೂರ್ತಿಯಿದೆ. ಜಾನಪದ ಕಾವ್ಯ: ಮಲೆ ಮಹದೇಶ್ವರ ಕಾವ್ಯ ಅಥವಾ ತಂಬೂರಿ ಶೈಲಿಯ ಗಾಯನವು ಕರ್ನಾಟಕದ ಪ್ರಸಿದ್ಧ ಜಾನಪದ ಪರಂಪರೆಯಾಗಿದೆ. ಭಕ್ತರು ಇಂದಿಗೂ ಕಾಲ್ನಡಿಗೆಯ ಮೂಲಕ ಬೆಟ್ಟ ಹತ್ತುತ್ತಾ ಮಾದಪ್ಪನ ಕಥೆಗಳನ್ನು ಹಾಡುತ್ತಾರೆ. ಕಾಡಿನ ಸೋಲಿಗರು ಮತ್ತು ಇತರೆ ಬುಡಕಟ್ಟಿನ ಜನರಿಗೆ ಲಿಂಗ ಸಂಸ್ಕಾರ ನೀಡಿ ಕಾಯಕ ದಾಸೋಹ ಗುರು ಲಿಂಗ ಜಂಗಮ ತತ್ವಗಳನ್ನು ಪರಿಚಯಿಸಿದ ಸಾವಿಲ್ಲದ ಶ್ರೇಷ್ಠ ಶಿವಯೋಗ ಸಾಧಕರು ಮತ್ತು ಶರಣರು. ಬಸವ ಪರಂಪರೆಯ ಶ್ರೇಷ್ಠ ಚಿಂತಕರ ಬದುಕಿನ ತಿರುಳನ್ನು ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ತಿರುಗಾಡಿ ಬಸವ ತತ್ವ ಅಧ್ಯಯನ ಶಿವಯೋಗ ಸಾಧನೆಯನ್ನು ಅಲ್ಲಿನ ಬುಡಕಟ್ಟು ಮುಂತಾದ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಿದರು. ________________________’ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ನಿಮ್ಮೊಂದಿಗೆ

ನಾಗರಾಜ್‌ ಹರಪನಹಳ್ಳಿ ಕವಿತೆ “ಭೂಮಿಗೆ ಆಕಳಿಕೆ ಸಮಯ”

ಕಾವ್ಯ ಸಂಗಾತಿ ನಾಗರಾಜ್‌ ಹರಪನಹಳ್ಳಿ “ಭೂಮಿಗೆ ಆಕಳಿಕೆ ಸಮಯ” ಸೀರೆ ಸೆರಗ ತಾಗಿದ ಗಾಳಿಪ್ರೇಮದ ನವಿರು ಹೊತ್ತುತಂತುಆಡಿದ  ಆಡದೇ ಉಳಿದ ಮಾತು ಮೌನಗಳ ಸಂಕಲನ ಮೋಡಗಳಲ್ಲಿಚಿತ್ರ ಬಿಡಿಸಿತುನೀನಿಡುವ ಪ್ರತಿ ಹೆಜ್ಜೆಯಲಿಕನಸು ಇಣುಕುತ್ತಿದೆ ಗೆಳತಿಮನಸುಗಳ ಅಗಣಿತ ತರಂಗಗಳುಎದೆತಾಕುತ್ತಲೇ ಇರುವ ಸೋಜಿಗಕ್ಕೆ ಏನೆನ್ನಲಿ ?*** ನಿನ್ನ ದನಿ ಕೇಳದ ಭೂಮಿಗೆಆಕಳಿಕೆ ಸಮಯಅದಕ್ಕೆ ಮಗ್ಗಲು ಬದಲಿಸುತ್ತಿದೆಮುಗಿಲಿಗೆ ದಿಗಿಲು ಬಡಿದಿದೆಎಲ್ಲಿ ಹೋದೆ ?ಗೆಜ್ಜೆ ಸದ್ದಿಗೆ ಅರಳುತ್ತಿದ್ದ ಹೂ ಸಹ ಮೌನವಾಗಿದೆ              ***                               ನಾನು ಸುಳಿದಾಡುವೆ  ಒಬ್ಬಳೇ ಇರುವೆ ಎಂದು ಭಾವಿಸಬೇಡಸುಳಿಯುವ ಗಾಳಿಯಲ್ಲಿಎರಡು ನಿಟ್ಟುಸಿರುಗಳಿವೆ ಅವು ಪ್ರೇಮದ ಪಲ್ಲವಿಗಳಾಗಿಬದಲಾಗಿ ಬಿಡಲಿಕಣ್ಣಲ್ಲಿ ನಕ್ಷತ್ರಗಳು ಹಾಡಲಿಕಾಲ್ಗೆಜ್ಜೆಗಳಲ್ಲಿ  ಏಳು ಸುತ್ತಿನ ಮಲ್ಲಿಗೆ ಅರಳಲಿ****ರುತುಗಳಿಗೆ ತಕ್ಕಂತೆಬಣ್ಣ ರೂಪ ಪಡೆಯುವ ಭೂಮಿಮನಸ್ಸಿನ ಏರಿಳಿತಕ್ಕೆ ತಕ್ಕಂತೆಬಣ್ಣಗಳ ಸೀರೆ ತೊಡುವ ಆಕೆಎಲ್ಲವೂ ಪ್ರಕೃತಿ ಕಲಿಸಿದ ಪಾಠಕ್ಕೆನಿಬ್ಬೆರಗಾಗುವುದು ಮಾತ್ರ ………**** ನೀನು ನಡೆದರೆಭೂಮಿ ಪಿಸುಗುಡುತ್ತದೆಮಣ್ಣ ಕಣ ಕಣವೂಜೀವಸೆಲೆಯಿಂದ ಪುಟಿದೇಳುತ್ತದೆ  ದಾರಿ ಪಕ್ಕದ ಗಿಡ ಮರಗಳುಕಣ್ಣು ಮಿಟುಕಿಸುತ್ತವೆಮುಂಗುರುಳ ಲಾಸ್ಯಕ್ಕೆಗಾಳಿ ರೋಮಾಂಚನಗೊಳ್ಳುತ್ತದೆ ನಾಗರಾಜ್ ಹರಪನಹಳ್ಳಿ

ನಾಗರಾಜ್‌ ಹರಪನಹಳ್ಳಿ ಕವಿತೆ “ಭೂಮಿಗೆ ಆಕಳಿಕೆ ಸಮಯ” Read Post »

ನಿಮ್ಮೊಂದಿಗೆ

ಎ ಎಸ್ ಮಕಾನದಾರ ಗದಗ ಅವರ “ಶಾಯಿರಿಗಳು”

ಕಾವ್ಯ ಸಂಗಾತಿ ಎ ಎಸ್ ಮಕಾನದಾರ ಗದಗ “ಶಾಯಿರಿಗಳು” ಶಾಯಿರಿಗಳುಧರ್ಮ ದೇವರ ಹೆಸರಿನ್ಯಾಗಹಿಡಿಬ್ಯಾಡ್ರಿ ಕೈಯಾಗ ಕಲ್ಲು ಕಲ್ಲು ಮಣ್ಣಿನ್ಯಾಗಹುಟ್ಟಿಲ್ಲ ದೇವರೆಲ್ಲೂ ***ಪ್ರೀತಿ ಅನ್ನೂ ದೇವರಮುಂದಯಾವ ದೇವರೂ ದೊಡ್ಡವಲ್ಲ ಸತ್ಯ ಅನ್ನೂ ತತ್ವದ ಮುಂದಯಾವ ಗ್ರಂಥವೂ ದೊಡ್ಡದಲ್ಲ***ಉಸಿರಾಡುವವರು ಜೀವಂತಅದಾರಂತ ಎನ್ ಗ್ಯಾರಂಟಿಸತ್ತವರಲ್ಲಿ ಕೆಲವರುಇನ್ನೂ ಜೀವಂತ ಅದಾರಲ್ಲಇದಕೆ ನೀ ಏನಂತೀ*** ಎ ಎಸ್ ಮಕಾನದಾರ ಗದಗ

ಎ ಎಸ್ ಮಕಾನದಾರ ಗದಗ ಅವರ “ಶಾಯಿರಿಗಳು” Read Post »

ಕಾವ್ಯಯಾನ

ಸುಮಲತಾ ಗಡಿಯಪ್ಪನವರ “ಮಾಯದ ಸೆರಗು ಮತ್ತು ಬದಲಾದ ಮಡಿಲು”

ಕಾವ್ಯ ಸಂಗಾತಿ ಸುಮಲತಾ ಗಡಿಯಪ್ಪನವರ “ಮಾಯದ ಸೆರಗು ಮತ್ತು ಬದಲಾದ ಮಡಿಲು” ಯುಗಗಳು ಉರುಳಿದರೂ ಮರೆಯದ ಆಸರೆ,ಅಮ್ಮನ ಸೀರೆಯ ಆ ಒಂದು ಸೆರಗು;ಅದರೊಳು ಅಡಗಿತ್ತು ಜಗದೊಳಗಿನ ಮಮತೆ,ಕಣ್ಣೀರ ಒರೆಸುತ್ತಿದ್ದ ದಿವ್ಯ ಬೆರಗು. ಬಿಸಿ ಪಾತ್ರೆಗೆ ಹಿಡಿಕೆಯಾಗಿದ್ದ ಆ ತುದಿ,ಮಗುವಿನ ಮುಖದ ಮಸಿ ತೊಳೆಯುವ ನದಿ;ನಾಚಿಕೆಗೆ ಅಡಗುದಾಣ, ಚಳಿಗೆ ಹೊದಿಕೆ,ಅಮ್ಮನ ಸೆರಗೊಂದೇ ಬಾಳಿನ ಅಸ್ತಿತ್ವದ ನಂಬಿಕೆ. ಗಂಟು ಹಾಕಿದರೆ ಕಳೆದುದ ಕರುಣಿಸುವ ಮಾಯೆ,ಕಾಸು ಬಚ್ಚಿಟ್ಟ ಚಲಿಸುವ ಬ್ಯಾಂಕಿನ ಛಾಯೆ;ಸುಡುವ ಕಣ್ಣಿಗೆ ಉಸಿರಿನ ಬಿಸಿ ಒತ್ತುವ ಸಾಂತ್ವನ,ಆ ಸೆರಗಿನ ನೆರಳಲ್ಲೇ ಅರಳಿತ್ತು ಧನ್ಯ ಬಾಲ್ಯದ ಜಗತ್ತಿನ ಪಯಣ. ಆದರೆ… ಕಾಲದ ಚಕ್ರ ಉರುಳಿದೆ ಇಂದು,ಉಡುಗೆ ತೊಡುಗೆಯ ರೂಪ ಬದಲಾಗಿದೆ ಅಂದು;ಜೀನ್ಸಿನ ಜೇಬಲಿ ಜಾಗವಿಲ್ಲ ಆ ಸೆರಗಿಗೆ,ಆಧುನಿಕತೆಯ ಓಟದಲಿ ಕಳೆದುಹೋಯಿತೇ ಆ ನೆರಳಿಗೆ? ಬಟ್ಟೆಯ ಸೆರಗು ಇಲ್ಲದಿರಬಹುದು ಜೀನ್ಸಿನ ಅಂಚಿನಲ್ಲಿ,ಆದರೆ ಅಮ್ಮನ ಮಮತೆ ಎಂದೂ ಕಮ್ಮಿಯಾಗದು ನೆನಪಿನಲ್ಲಿ;ಸೆರಗಿನ ಗಂಟಿನ ಹಣವೀಗ ಬ್ಯಾಂಕಿನ ಖಾತೆಯಾಗಿದೆ,ಕಣ್ಣೀರ ಒರೆಸುತ್ತಿದ್ದ ಕೈಗಳು ಈಗ ಹೆಗಲಿಗೆ ಹೆಗಲು ನೀಡಿದೆ. ರೂಪ ಬದಲಾದರೂ ಕರುಳಿನ ಕುಡಿ ಪ್ರೀತಿ ಬದಲಾಗದು,ಅಮ್ಮನ ಅಪ್ಪುಗೆಯ ಬೆಚ್ಚನೆಯ ಆಶ್ರಯ ಎಂದೂ ಮುಗಿಯದು;ಸೀರೆಯ ಸೆರಗಿಗೆ ತಲೆಬಾಗುತ್ತಲೇ ಇಂದಿನ ತಾಯ್ತನವನ್ನೂ ಗೌರವಿಸೋಣ,ಯುಗ ಯಾವುದೇ ಆದರೂ ಅಮ್ಮನ ಪ್ರೀತಿಯೇ ಜಗದ ಶಕ್ತಿ ಎನ್ನೋಣ. ಸುಮಲತಾ ಗಡಿಯಪ್ಪನವರ

ಸುಮಲತಾ ಗಡಿಯಪ್ಪನವರ “ಮಾಯದ ಸೆರಗು ಮತ್ತು ಬದಲಾದ ಮಡಿಲು” Read Post »

ಅರ್ಜುನ ಉವಾಚ

ಧಾರಾವಾಹಿ ಸಂಗಾತಿ ಅರ್ಜುನ ಉವಾಚ ಡಾ.ವಿಶ್ವನಾಥ ಎನ್‌ ನೇರಳೆಕಟ್ಟೆ ಹಯ ಹೆಣ್ಣಾಯಿತು; ಹುಲಿಯಾಯಿತು ಧರ್ಮರಾಯನಿದ್ದ ಪುರಕ್ಕೆ ಬಂದ ದಾನವಾಂತಕ ಚಂಪಕಾನಗರಿಯ ಸಮಸ್ತ ವಿಚಾರಗಳನ್ನು ಅವನಿಗೆ ಹೇಳಿದ. ಹಂಸಧ್ವಜ ಕೊಟ್ಟಿದ್ದ ಸಕಲ ಸಂಪದಗಳನ್ನು ಯುದಿಷ್ಠಿರನಿಗಿತ್ತ.ನಮ್ಮ ಯಾಗದ ಕುದುರೆಯದು ಈಗ ಉತ್ತರ ದಿಕ್ಕಿನಲ್ಲಿದ್ದ ಪಥವನ್ನು ಹಿಡಿದಿತ್ತು. ಆಗ ಗ್ರೀಷ್ಮ ಕಾಲ. ಬೇಸಿಗೆಯ ಬಿಸಿ ಸಂಪೂರ್ಣ ಧರೆಯನ್ನು ಇನ್ನಿಲ್ಲದಂತೆ ಸುಡತೊಡಗಿತ್ತು. ನಮಗೆ ಕಾಣುತ್ತಿದ್ದುದು ಸೂರ್ಯನುರಿಗೆ ಕಂಗೆಟ್ಟುಹೋಗಿದ್ದ ಕನಕಾಚಲ. ತನ್ನ ಕಣ್ಣಿಗೆ ಬೀಳದ ಹಾಗೆ ಈ ಪರ್ವತ ಮರೆಯಾಗಿನಿಂತಿದೆ ಎಂದು ಕ್ರೋಧಗೊಂಡ ಸೂರ್ಯ ಅದನ್ನು ಉರಿಸಿಹಾಕುವ ಸನ್ನಾಹದಲ್ಲಿದ್ದಾನೋ ಎನ್ನುವಂತೆ ಬಿರುಬಿಸಿಲು ಕನಕಾಚಲ ಪರ್ವತವನ್ನು ಬಿಸಿಬಿಸಿಯಾಗಿಸಿತ್ತು.ಸೂರ್ಯನ ಬಿಸಿ ತಾಪವನ್ನು ಹೊತ್ತು ಮೆರೆಯುತಿರುವ ತೇರು, ನೀರಿದೆಯೇನೋ ಎಂಬ ಭ್ರಮೆ ಹುಟ್ಟಿಸುವ ಬಿಸಿಲು ಕುದುರೆ, ಗಾಳಿಯನ್ನು ಹೊತ್ತುತರುತ್ತಿರುವ ಸೈನಿಕರು, ಬಿಸಿಲೆಂಬ ಆನೆ ಇವೆಲ್ಲವೂ ಗ್ರೀಷ್ಮರಾಜನ ಚತುರಂಗ ಬಲದಂತೆ ತೋರುತ್ತಿದ್ದವು.ಧರ್ಮಶಾಲೆಯಲ್ಲಿದ್ದ ಸುಂದರ ನೀರೆಯರು ದಾರಿಹೋಕರ ಕರಗಳಿಗೆ ನೀರನ್ನೆರೆಯುತ್ತಾ ಅವರ ದಾಹವನ್ನು ತಣಿಸುತ್ತಿದ್ದರು. ಬಯಲಿನಲ್ಲಿದ್ದ ತೊರೆಗಳು ಬಾಯಾರಿಕೆಯಿಂದ ಬಳಲಿದ್ದ ಮೃಗಗಳ ತೃಷೆಯನ್ನು ಮಣಿಸುತ್ತಿದ್ದವು. ಉಪ್ಪರಿಗೆಗಳ ಮೇಲೆ ಚೆಲುವೆಯರ ಜೊತೆ ದೇಹಸುಖವನ್ನು ಪಡೆಯುತ್ತಿದ್ದ ಕೆಲವರು ಸುಂದರಿಯರ ತುಟಿಗಳಿಂದ ಜಿನುಗುತ್ತಿದ್ದ ಅಮೃತದ ರುಚಿ ನೋಡುತ್ತಿದ್ದರು.ಪ್ರದ್ಯುಮ್ನ, ವೃಷಕೇತು, ಯೌವನಾಶ್ವ, ನೀಲಧ್ವಜ, ಅನುಸಾಲ್ವ ಈ ಐದು ಮಂದಿ ನನಗೆ ಸಹವರ್ತಿಗಳಾಗಿದ್ದರು. ನನ್ನ ಜೊತೆಜೊತೆಗೇ ಹೆಜ್ಜೆ ಹಾಕುತ್ತಿದ್ದರು. ಈಗ ಹಂಸಧ್ವಜನೂ ನಮ್ಮೊಡನೆ ಸೇರಿಕೊಂಡಿದ್ದ.ಹಾಗೆಯೇ ಮುಂದೆ ಮುಂದೆ ಹೋದ ಹಯವೀಗ ಪಾರಿಪ್ಲವ ಎಂಬ ಹೆಸರಿನ ದೇಶವನ್ನು ತಲುಪಿತ್ತು. ಅಲ್ಲಿಯ ನೆಲದ ಮೇಲೆ ಕುದುರೆ ಕಾಲಿಟ್ಟ ಕ್ಷಣದಲ್ಲಿಯೇ ನಾವೆಲ್ಲರೂ ವಿಸ್ಮಯಕ್ಕೀಡಾಗುವ ಪ್ರಸಂಗವದು ಎದುರಾಯಿತು. ಯಾಗಕ್ಕೆ ನಾವು ಆರಿಸಿದ ವಿಶೇಷಕುದುರೆಯದು ಗಂಡಾಗಿತ್ತು. ಪಾರಿಪ್ಲವದ ನೆಲದ ಸ್ಪರ್ಶವಾದೊಡನೆಯೇ ಹೆಣ್ಣುಗುದುರೆಯಾಗಿ ಬದಲಾಯಿತು. ಅಲ್ಲೇ ಇದ್ದ ಸರೋವರದ ನೀರನ್ನು ಕುಡಿದ ತಕ್ಷಣವೇ ಹುಲಿಯಾಯಿತು. ಇದಾವ ಬಗೆಯ ಮಾಯೆಯಿದು ಎಂದು ನಾವೆಲ್ಲರೂ ಸೋಜಿಗಪಟ್ಟೆವು. ನನ್ನಲ್ಲಿ ಆ ಕ್ಷಣಕ್ಕೆ ಮೂಡಿದ್ದು ಕೃಷ್ಣ ಸ್ಮರಣೆ. ನೆನೆದೆ ಶ್ರೀಹರಿಯನ್ನು. ಮೊದಲಿನಂತೆಯೇ ಗಂಡು ಕುದುರೆಯಾಯಿತು ನಮ್ಮ ಯಜ್ಞಾಶ್ವ. ಹೀಗೆ ನಮ್ಮ ಅಶ್ವವದು ತಕ್ಷಣದಲ್ಲಿಯೇ ಎರಡು ರೂಪಗಳನ್ನು ಹೊಂದುವುದಕ್ಕೆ ಕಾರಣವಿತ್ತು.ಹಿಂದೊಮ್ಮೆ ಪರ್ವತರಾಜನ ಮಗಳಾದ ಪಾರ್ವತಿದೇವಿ ಶಿವನನ್ನು ಪೂರ್ಣಮನಸ್ಸಿನಿಂದ ಅರ್ಚಿಸುವೆನೆಂಬ ನಿರ್ಧಾರ ಮಾಡಿದಳು. ತನ್ನ ತಪಸ್ಸಿಗೆ ಸರಿಹೊಂದುವ ತಾಣವೆಲ್ಲಿದೆ ಎಂದು ಹುಡುಕಾಟ ಆರಂಭಿಸಿದಳು. ಪ್ರಶಾಂತಮಯವಾದ, ಚಿತ್ತಾಕರ್ಷಕವಾದ ಸ್ಥಳವನ್ನು ಅವಳ ಮನಸ್ಸು ಬಯಸುತ್ತಿತ್ತು.ಹೀಗೆ ಅರಸಿ ಬರುತ್ತಿದ್ದ ಶಿವನರಸಿಗೆ ಕಾಣಿಸಿದ್ದು ನಯನಮನೋಹರವೆನಿಸುವ ಒಂದು ಸರೋವರ. ಹಂಸಗಳು ಜಲದಲ್ಲಿ ಈಜುತ್ತಿದ್ದವು. ದುಂಬಿಗಳು ಹಾರಾಡುತ್ತಿದ್ದವು. ಕಮಲಗಳು ಅರಳಿನಿಂತಿದ್ದವು. ಕೋಗಿಲೆಗಳ ಮಧುರ ಧ್ವನಿಯದು ಕೇಳಿಬರುತ್ತಿತ್ತು. ಹೊಳೆವ ಶುಭ್ರ ಜಲವದು ರತ್ನದಿಂದ ನಿರ್ಮಿಸಲಾದ ಹಾಸಿಗೆಯಂತೆ ತೋರುತ್ತಿತ್ತು. ಸುಂದರವಾದ ಮೀನುಗಳಿದ್ದವು. ಸರೋವರದ ಸವಿನೀರನ್ನು ಸವಿಯುವ ಚಕ್ರವಾಕ ಪಕ್ಷಿಗಳಿದ್ದವು. ಮೊಸಳೆಗಳಿದ್ದವು. ಸುಗಂಧಭರಿತವಾದ ಗಾಳಿ ಅಲ್ಲೆಲ್ಲಾ ಬೀಸುತ್ತಿತ್ತು. ತಂಪುತAಪಾದ ವಾತಾವರಣವಿತ್ತು. ಹೀಗೆ ಕಣ್ಣಿಗೆ ಶೋಭಾಯಮಾನವಾಗಿ ಕಾಣುತ್ತಿತ್ತು ಆ ಸರೋವರ.ಕಮಲದೆಲೆಗಳ ಹಸಿರು ಕಾಂತಿ. ಕೆಂದಾವರೆಗಳ ಕೆಂಪು ಕಾಂತಿ. ಬಿಳಿದಾವರೆಗಳ ಬಿಳುಪಿನ ಕಾಂತಿ. ಹೊಂದಾವರೆಗಳ ಹಳದಿ ಕಾಂತಿ. ಹೀಗೆ ಹಲವು ಬಣ್ಣಗಳ ಬೆಳಕಿನಿಂದ ಕಂಗೊಳಿಸುತ್ತಿದ್ದ ಆ ಸರೋವರ ಕಾಮನಬಿಲ್ಲಿನ ನೆನಪನ್ನು ತರುವಂತಿತ್ತು.ಶಿವಧ್ಯಾನಕ್ಕಿದು ಸೂಕ್ತ ಸ್ಥಳ ಎಂದು ತೋರಿತು ಗಿರಿಜೆಗೆ. ಸರೋವರವಿದ್ದ ತಾಣವನ್ನು ತನ್ನ ತಪಸ್ಸಿನ ಸ್ಥಾನವಾಗಿ ಆಯ್ಕೆ ಮಾಡಿದಳು. ಹೀಗೆ ಅಂದು ಪಾರ್ವತಿ ಆರಿಸಿದ ತಾಣವದು ಈಗ ನಮ್ಮ ಯಾಗದ ಕುದುರೆ ಪ್ರವೇಶಿಸಿದ್ದ ಪಾರಿಪ್ಲವ ದೇಶ.ಆಶ್ರಮವೊಂದನ್ನು ನಿರ್ಮಿಸಿಕೊಂಡಳು ಪಾರ್ವತಿ. ಈಶ್ವರನ ಅನುಮೋದನೆಯೂ ದೊರಕಿತು. “ನಿನ್ನ ತಪಸ್ಸಿಗೆ ಯಾವ ತೊಂದರೆಯೂ ಎದುರಾಗದು ಇಲ್ಲಿ” ಎಂದು ಗಿರಿಜೆಯನ್ನು ಆಶೀರ್ವದಿಸಿದ ಗೌರೀರಮಣ. ಆ ತಾಣವೇ ಅನುದಿನದ ತಾಣವಾಯಿತು ಅವಳಿಗೆ. ತಪಸ್ಸಿನಲ್ಲಿ ಸುಖ ಕಂಡುಕೊಳ್ಳುವ ಯೋಗಿನಿಯಂತಾದಳು ಶಿವನ ಮಡದಿ. ಇದು ನಿಜಕ್ಕೂ ವಿಸ್ಮಯ. ಶಿವನ ಅರ್ಧ ಶರೀರ ಎನಿಸಿಕೊಂಡಿದ್ದ ಪಾರ್ವತಿ ಅವನಿದ್ದ ತಾಣವನ್ನು ತೊರೆದು ಇಲ್ಲಿಗೆ ಬಂದು ಮತ್ತೆ ಅವನನ್ನೇ ಧ್ಯಾನಿಸುವುದೆಂದರೆ, ಪೂಜಿಸುವುದೆಂದರೆ ಅದು ಭಕ್ತಿ ಪ್ರಕಟಣೆಯ ಇನ್ನೊಂದು ರೀತಿ. ದೇಹಗಳ ಅಂತರ ಅಧಿಕವಾದಾಗ ಪ್ರೀತಿ ಹೆಚ್ಚುವಂತೆ ಭಕ್ತಿಯೂ ಹೆಚ್ಚುವುದು ಎಂಬ ತತ್ವವನ್ನು ಸ್ವಯಂ ಮನಗಾಣಲು ಬಯಸಿದ್ದಳೋ ಏನೋ ಆ ಪಾರ್ವತಿದೇವಿ!ಸರೋವರದ ನೀರಿನಲ್ಲಿ ಜಳಕ. ಬಳಿಕ ಶಿವಜಪದ ಪುಳಕ. ಇದು ಗಿರಿಜೆಯ ಅನುದಿನದ ಬದುಕಾಗಿಹೋಯಿತು.ಅವಳ ತಪಜಪಗಳು ಆರಂಭಗೊAಡ ನಂತರ ಪೂರ್ಣ ವಾತಾವರಣವದು ಸುಂದರತೆಯನ್ನು ಪಡೆಯಿತು. ಬಿಸಿಗಾಳಿ ಬೀಸಲಿಲ್ಲ. ಗಿಡಮರಗಳು ಒಣಗಲಿಲ್ಲ. ನೀರ ಮೂಲಗಳು ಅಳಿಯಲಿಲ್ಲ. ಸದಾಕಾಲ ತಂಪುತಂಪಾದ ವಾತಾವರಣ. ಇಂಪುಇಂಪಾದ ಧ್ವನಿಯ ಅನುರಣನ. ಪಾರ್ವತಿಯಿದ್ದ ಕಾರಣದಿಂದಾಗಿ ಅಲ್ಲಿಯ ಪ್ರಾಣಿ ಪಕ್ಷಿಗಳು ತಮ್ಮ ವೈರತ್ವವನ್ನು ಮರೆತವು. ಶಿವಪೂಜೆಯನ್ನು ಅತೀವ ಭಕ್ತಿಭಾವದಿಂದ ನಡೆಸುತ್ತಿದ್ದಳು ಪಾರ್ವತಿ. ಜಗನ್ಮಾತೆಯಾದ ಪಾರ್ವತಿಗೇಕೆ ಶಿವನ ತಪಸ್ಸಿನ ಕಡು ಒಲವು! ಎಂದು ದೇವವೃಂದವೇ ಅಚ್ಚರಿಪಡುವ ರೀತಿಯಲ್ಲಿ ತ್ರಿನೇತ್ರನನ್ನು ಅರ್ಚಿಸುತ್ತಿದ್ದಳು ಭಕ್ತಿಭಾವನೇತ್ರೆ.ಅದೊಂದು ದಿನ ಎಂದಿನಂತೆ ಪಾರ್ವತಿದೇವಿ ಶಿವಧ್ಯಾನದಲ್ಲಿದ್ದಳು. ಆಗಲೇ ಅಲ್ಲಿ ಕಾಣಿಸಿದ್ದು ರಾಕ್ಷಸನೊಬ್ಬನ ದೈತ್ಯ ನೆರಳು… ಡಾ. ವಿಶ್ವನಾಥ ಎನ್ ನೇರಳಕಟ್ಟೆ

Read Post »

ಕಾವ್ಯಯಾನ

ಡಾ.ಶಶಿಕಾಂತ.ಪಟ್ಟಣ ಪುಣೆ “ಹುಡುಕುತ್ತಿರುವೆ”

ಕಾವ್ಯ ಸಂಗಾತಿ ಡಾ.ಶಶಿಕಾಂತ.ಪಟ್ಟಣ ಪುಣೆ “ಹುಡುಕುತ್ತಿರುವೆ” ಸೂರ್ಯ ಉದಯಿಸುತ್ತಾನೆಈಗ ಕೋಳಿ ಕೂಗುವದಿಲ್ಲ.ಓಡುತ್ತಿದ್ದಾರೆ ಬದುಕಿನ ಬೆನ್ನ ಹತ್ತಿರೈಲು ಬಸ್ ಆಟೋದಲ್ಲಿ ಪಯಣಕಾರ್ಖಾನೆಗೆ ಜನರ ಜಂಗುಳಿ.ಕೈಯಲ್ಲಿ ಮೊಬೈಲ್ ವಾಟ್ಸ್ ಆಪ್ಜನರು ಮುಖ ಕೆಳಗಿಟ್ಟು ಬದುಕುತ್ತಾರೆ.ನಗುವುದೇ ಕಡಿಮೆ .ದುಗುಡು ತಳಮಳ ಆತಂಕ .ದೇಶದಲ್ಲಿ ಬರ ಬಡತನ ‘ಸುದ್ಧಿ ಮಾಧ್ಯಮಗಳ ಅಬ್ಬರ .ದಿನಸಿ ಅಂಗಡಿಯ ಮುಂದೆ ಸಾಲು.ಗುಡಿ ಮಸೀದೆ ಚರ್ಚು ಭಿಕ್ಷುಕರು.ಜಾತ್ರೆ ಹಬ್ಬ ಮೊಹರಮ್ಮಿನ ಕುಣಿತ.ಕಳೆದುಕೊಂಡಿದ್ದೇವೆ ಜೀವ ಜಾಲವಕಾಣುತ್ತಿಲ್ಲ ಸಂತಸ  ನೆಮ್ಮದಿ ದಿನಗಳು.ಹುಡುಕುತ್ತಿರುವೆ ನನ್ನ ನಾನುಹೊಲದ ಗದ್ದೆಯ ಮಧ್ಯೆಅಚ್ಚ ಹಸುರಿನ ಪೈರುಕೆರೆ ತುಂಬಿದ ನೀರು .ಪಕ್ಷಿ ಇಂಚರ ಧ್ವನಿಯ ಕೊರಳು .ಹುಡುಕುತ್ತಿರುವೆ ಹುಡುಕುತ್ತಲೇ ಇರುವೆ ಡಾ.ಶಶಿಕಾಂತ.ಪಟ್ಟಣ ಪುಣೆ

ಡಾ.ಶಶಿಕಾಂತ.ಪಟ್ಟಣ ಪುಣೆ “ಹುಡುಕುತ್ತಿರುವೆ” Read Post »

ನಿಮ್ಮೊಂದಿಗೆ

ಸವಿತಾ ದೇಶಮುಖ ಅವರ ಕವಿತೆ “ಕಾಡಿನ ಕಣ್ಣೀರು”

ಕಾವ್ಯ ಸಂಗಾತಿ ಸವಿತಾ ದೇಶಮುಖ “ಕಾಡಿನ ಕಣ್ಣೀರು” ಕಾನನಳ ಕಂಗಾಲ ಕಂಗಳ ಕಣ್ಣೀರುಕಾಣದಾದರೆ ಇಹದ ಮನುಜ ಕುಲದವರುಆಧುನಿಕ ಭರ ಭರಾಟೆಯಲಿ ನಿಂದವರು!!೧!! ಕಾಡಮ್ಮಳ ಒಡಲು ಪಶು ಪಕ್ಷಿ ಪ್ರಾಣಿವನ್ಯಜೀವಿ ಮರ ಗಿಡ ಗುಡ್ಡ-ಹಳ್ಳ ಕೊಳ್ಳಅವಳ ಬೆಚ್ಚನೆಯ ಗರ್ಭವೇ ಅವರ ತಾಣ!!೨!! ಸಕಲ ಜೀವ ರಾಶಿಗಳಿಗೆ ಉಸಿರಾಗಿಅಮೃತ ನಿಯುತ ನಿಂದಿಹಳು ಹಸಿರಾಗಿಸಕಲ ಪ್ರಾಣಿ ಪ್ರಾಣ ಸಂಜೀವಿನಿಯಾಗಿ !!೩!! ಹಚ್ಚ ಹಸಿರು ಬೆಚ್ಚನೆ ಸೌಖ್ಯದ ಹೊದಿಕೆಹೊಚ್ಚಿ ,ಕೊಡುತಿಹಳು ಪೋಷಣೆ ಪುಷ್ಟಿಕೆಸರ್ವರನು ಬೆಳೆಸಿ ತನ್ನೊಳಗೆ ಹುದುಗಿಸಿ !!೪!! ಸಾವಿರಾರು ಗಿರಿ-ಪರ್ವತಗಳ ತೊಟ್ಟಜಲ-ಹಣ್ಣು ಹಂಪಲ ಆಸರೆ ಕೊಟ್ಟುತಾಯಿಯಾಗಿ ನಿಂದವಳ ಕಟ್ಟಿಹರು ಚಟ್ಟ!!೫!! ಇಂದು ಬಾಡಿ ಒಣಗಿ ನಸಿಸುತಿಹಳುಲೆಕ್ಕವಿರದ ಪಶುಗಳ ಮರಗಿಡಗಳುಉರುಳಿತಿವೆ ನಿರ್ದಾಕ್ಷಣೆ ಮತಿಗೇಡಿತನದಿ!!೬!! ಎನಿತು ಪೇಳುಲಿ..ವೇದನೆಲಿ ಮರಗುತಿವೆಕರುಣೆ ತೋರಿ ನಿಲ್ಲಿಸಿ ನಾಶ ಕನವರಿಸುತ್ತಿವೆನದಿ ಹಳ್ಳ ಕೊಳ್ಳ ಬತ್ತುತಿವೆ ಬರಡಾಗುತಿವೆ!!೭!! ಕಾಡಿನ ಕಂಗಳಂಚಿನಲ್ಲಿ ಕಣ್ಣಿರ ಹನಿಹನಿಸುರಿಯುತ್ತಿವೆ ಬರಗಾಲದ ನೊರೆಯಾಗಿಮನುಕುಲದ ವಿನಾಶದ ಕರೆ ಓಲೆಯಾಗಿ ‌‌!!೮!! ಇನ್ನಾದರೂ ಎಚ್ಚೆತ್ತಲೇಬೇಕು- ಸಂರಕ್ಷಿಸು,ಮನವಿಟ್ಟು ಒನವ ಸೀರಿಯ ಉಳಿಸಿಬೆಳಿಸುಸ್ವಾರ್ಥ ಬಿಟ್ಟು- ಮುಂದಿನ ಪೀಳಿಗೆ ನೆನಸು!!೯!! ತಾಂತ್ರಿಕತೆ ಮುಂದುವರೆವ ವ್ಯವಹಾರದಿಅನಿವಾರ್ಯತೆ ಒಡ್ಡಿದರೂ,ಮರ ಕೆಡವಿದರೆವಿನಾಶ ನಿಶ್ಚಿತತೆ ಪರಿಜ್ಞಾನದ ಅರಿವು..!!೧೦!! ಇಲ್ಲವೇ ನಮ್ಮಲಿ..!! ಬನ್ನಿ ಕೈಗೂಡಿಸೋಣಒಂದು ಮರ ಕೆಡವಿದರೆ ಎರಡು ಮರವ ನೆಟ್ಟಿ…, ನಮ್ಮ ಕೃತಜ್ಞತೆ ಸಲ್ಲಿಸೋಣ!!೧೧!! ಅವಳ ಉಸಿರಿಗೆ ನಾವು ಉಸಿರಾಗದ ಹೊರತು ನಮ್ಮ ಉಸಿರು ಉಳಿಯದು !!೧೨!! ತಿಳಿದು ಎಚ್ಚರದಿ ಮುನ್ನಡೆದರೆ ಮಾತ್ರ ಉಳಿವು ನಿಮ್ಮದು..ನಮ್ಮ ಪ್ರತಿಯೊಬ್ಬರದು ಸವಿತಾ ದೇಶಮುಖ

ಸವಿತಾ ದೇಶಮುಖ ಅವರ ಕವಿತೆ “ಕಾಡಿನ ಕಣ್ಣೀರು” Read Post »

ಕಾವ್ಯಯಾನ

ಎನ್.ಜಯಚಂದ್ರನ್ ಅವರ ಕವಿತೆ “ಅಂತರ”

ಕಾವ್ಯ ಸಂಗಾತಿ -ಎನ್.ಜಯಚಂದ್ರನ್ “ಅಂತರ” ಒಂದೇ ಊರು, ಒಂದೇ ಗಾಳಿ,ಆದರೂ ಮನಸುಗಳು ದೂರದ ದ್ವೀಪಗಳು. ಮುಖದಲ್ಲಿ ನಗುಗಳ ಹೂವಿದ್ದರೂ,ಒಳಗೆ ನೋವಿನ ಮಳೆ ಸುರಿಯುತ್ತದೆ. ಕೈಗಳು ಕೈ ಹಿಡಿಯುವ ಕಾಲದಲ್ಲಿ,ಹೃದಯಗಳು ಏಕೆ ದೂರವಾಗಿವೆ? ಮಾತುಗಳು ಸಾವಿರ ಹರಿದರೂ,ಅರ್ಥಗಳು ಮಧ್ಯೆ ಕಣ್ಮರೆಯಾಗಿವೆ. ಗೋಡೆಗಳು ಮನೆಗಳಲ್ಲಿ ಮಾತ್ರವಲ್ಲ,ಮನಸ್ಸಿನೊಳಗೂ ಎತ್ತರವಾಗಿವೆ. ಸ್ವಾರ್ಥದ ನೆರಳು ಬೆಳೆದಂತೆ,ಸಂಬಂಧಗಳ ಬೆಳಕು ಮಂಕಾಗಿದೆ. ಒಬ್ಬರ ನೋವು ಮತ್ತೊಬ್ಬರಿಗೆ,ಕೇವಲ ಸುದ್ದಿಯ ಸಾಲಾಗುತ್ತಿದೆ. ಪ್ರೀತಿಯ ನದಿ ಒಣಗಿದ ಜಾಗದಲ್ಲಿ,ಅಹಂಕಾರದ ಮರಳು ಬೀಸುತ್ತಿದೆ. ಆದರೂ ಎಲ್ಲೋ ಒಂದು ಮೂಲೆದಲ್ಲಿ,ಮಾನವೀಯತೆ ಇನ್ನೂ ಉಸಿರಾಡುತ್ತಿದೆ. ಮನಸು ಮನಸಿಗೆ ಸೇರುವ ದಿನದಲ್ಲಿ,ಈ ಭೀಕರ ಅಂತರ ಕರಗಿಹೋಗುತ್ತದೆ.  ಎನ್.ಜಯಚಂದ್ರನ್ 

ಎನ್.ಜಯಚಂದ್ರನ್ ಅವರ ಕವಿತೆ “ಅಂತರ” Read Post »

You cannot copy content of this page

Scroll to Top