ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,”ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”-ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಶರಣ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಮಾಲಿಕೆ, “ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”- ಕಿತ್ತೂರು ಸಂಸ್ಥಾನ ಪೇಶ್ವೆ ಮರಾಠರು ಹೀಗೆ ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ಸಾಂಸ್ಕೃತಿಕ ಸಂಬಂಧ ಹಲವು ಶತಮಾನಗಳಿಂದ ನಿರಂತರ ಸಾಗಿ ಬಂದಿವೆ. ಒಂದು ಅರ್ಥದಲ್ಲಿ ಮಹಾರಾಷ್ಟ್ರದ ಕುಲ ದೇವತೆ ಪಂಡರಾಪುರದ  ವಿಠ್ಠಲ ಹಂಪಿಯುವನು. ಹೀಗಾಗಿ ಮಹಾರಾಷ್ಟ್ರದ ಜನರು ಮತ್ತು  ವಾರಕರಿ ಪಂಥ ಈಗಲೂ ಕೂಡ ವಿಠಲನನ್ನು ಕಾನಡೋ ವಿಠ್ಠಲ.ಅಂದರೆ ಕನ್ನಡದ ವಿಠ್ಠಲ ಎನ್ನುತ್ತಾರೆ. ಅನೇಕ ಕರ್ನಾಟಕದ  ಅರಸು ಮನೆತನಗಳು  ಮಹಾರಾಷ್ಟ್ರದಲ್ಲಿ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿವೆ.  ರಾಷ್ಟ್ರಕೂಟರ  ದಂತಿದುರ್ಗ ಅಜಂತಾ ಎಲ್ಲೋರ ಕೈಲಾಸ ದೇವಾಲಯವನ್ನು. ಮಹಾರಾಷ್ಟ್ರದಲ್ಲಿ ಸ್ಥಾಪಿಸಿದರು. ರಾಮದುರ್ಗ ನರಗುಂದ ಜಮಖಂಡಿ ಸಂಸ್ಥಾನಗಳನ್ನು ಮರಾಠಿ ಮೂಲದ ಕೊಂಕಣಿ ಬ್ರಾಹ್ಮಣರು ಸ್ಥಾಪಿಸಿದರು.ಮುಧೋಳ ಘೋರ್ಪಡೆ ಮನೆತನದ ಮರಾಠರು ಆಳಿದರು. ಹೀಗೆ ಮುಂದುವರೆದ ಕನ್ನಡ ಮರಾಠಿ ಭಾಷೆಗಳ ಸಾಂಸ್ಕೃತಿಕ ಸಂಬಂಧ ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಗೆ ಒಮ್ಮೆ ಕುತ್ತು ತರುವ ಹಾಗಾಯಿತು. ಇಂತಹ ಆಪತ್ತನ್ನು ಮುಕ್ತ ಗೊಳಿಸಿದ ದಿಟ್ಟ ಯೋಧ ಡೆಪ್ಯುಟಿ ಚೆನ್ನಬಸಪ್ಪನವರು. 19ನೆಯ ಶತಮಾನದ ಉತ್ತರಾರ್ಧವು ಮುಂಬೈ ಕರ್ನಾಟಕದಲ್ಲಿ ಮರಾಠಿಯ ಪ್ರಾಬಲ್ಯದ ಹಾಗೂ ಇಂಗ್ಲೀಷಿನ ಪ್ರಾರಂಭದ ಕಾಲ.  ಆಗ ಕನ್ನಡ ಭಾಷೆ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಮಹಾ ಕಾರ್ಯಕ್ಕೆ ನಾಂದಿ ಹಾಡಿದವರು ಡೆಪ್ಯುಟಿ ಚನ್ನಬಸಪ್ಪನವರು.  ಜನನ  ಚನ್ನಬಸಪ್ಪನವರು 1834 ವರ್ಷದ ನವೆಂಬರ್ 1ರಂದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಜನಿಸಿದರು.  ತಂದೆ ಬಸಲಿಂಗಪ್ಪನವರು ಮತ್ತು ತಾಯಿ ತಿಮ್ಮಮ್ಮನವರು (ತಿಪ್ಪವ್ವ). ಚೆನ್ನಬಸಪ್ಪನವರ ತಂದೆಯವರು ತಮ್ಮ ಮನೆತನದ ಮೂಲ ಕಾಯಕವಾದ ವ್ಯಾಪಾರಕ್ಕಾಗಿ  ಧಾರವಾಡಕ್ಕೆ ಬಂದರು. ಶಿಕ್ಷಣ ಅವರ ಪ್ರಾರಂಭಿಕ ಶಿಕ್ಷಣ ನಡೆದಿದ್ದು ಧಾರವಾಡದಲ್ಲಿ.  ಕಲಿತದ್ದು ಕನ್ನಡ, ಮರಾಠಿ ಮತ್ತು ಗಣಿತ.  ಬಾಲಕ ಚನ್ನಬಸಪ್ಪನವರು ಇಂಗ್ಲಿಷ್ ಕಲಿಯುವ ಹಂಬಲದಿಂದ ಯಾರಿಗೂ ಹೇಳದೆ ಕೇಳದೆ, ಧಾರವಾಡದಿಂದ ಗೋಕಾಕಕ್ಕೆ ಬರಿಗಾಲಿನಿಂದ ನಡೆದುಕೊಂಡು ಹೋಗಿ ಅಲ್ಲಿ ತಮ್ಮ ಸಂಬಂಧಿಗಳ ಹತ್ತಿರ ಐವತ್ತು ರೂಪಾಯಿ ಕೂಡಿಸಿಕೊಂಡು ಮತ್ತೆ ಕಾಲ್ನಡಿಗೆಯಲ್ಲಿ   ಪುಣೆ ತಲುಪಿದರು. ಪುಣೆಯಲ್ಲಿ ಅವರಿಗೆ ಆಶ್ರಯ ನೀಡಿದವರು ಗೋವಿಂದರಾವ್ ಮೆಹಂಡಳೇಕರ ಅವರು. ಓದಿನಲ್ಲಿ ಪಾರಂಗತರೆನಿಸಿದ ಡೆಪ್ಯುಟಿ ಚೆನ್ನಬಸಪ್ಪನವರು ಅವರಿಗೆ  ಪ್ರತಿ ತಿಂಗಳೂ ಹತ್ತು ರೂಪಾಯಿ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರಂತೆ.  ಅಂದಿನ ದಿನದಲ್ಲಿ ಕೆಲಸದಲ್ಲಿದ್ದವರಿಗೆ ಸಂಬಳ ಅಷ್ಟು ಬರುತಿದ್ದರೆ ಹೆಚ್ಚಿರುತ್ತಿದ್ದ ಕಾಲ.  ಈ ಸಮಯದಲ್ಲಿ ತಮ್ಮ  ತಾಯಿಯನ್ನು ತಮ್ಮ ಬಳಿ ವಾಸಕ್ಕೆ ಪುಣೆಗೆ ಕರೆಸಿಕೊಂಡಾಗ ತಿಪ್ಪಮ್ಮನಿಗೆ  ಅಪರಿಮಿತ ಸಂತೋಷ ಖುಷಿ ಆಗಿತ್ತು. ಚನ್ನಬಸಪ್ಪನಾವರು ಇಂಗ್ಲೆಂಡಿನಲ್ಲಿ ಅದೇ ತಾನೇ ತೆರೆದ ಕೂಪರ್ಸ್‌ಹಿಲ್ ಇಂಜಿನಿಯರಿಂಗ್ ಕಾಲೇಜಿಗೆ ಸೇರಲು ಆಯ್ಕೆಯಾದ ಐವರು ಪ್ರತಿಭಾವಂತ ವಿದ್ಯಾರ್ಥಿಗಳಲ್ಲೊಬ್ಬರಾಗಿದ್ದರು.  ದಾದಾಬಾಯಿ ನವರೋಜಿಯವರ ಈ ಯೋಜನೆ ಅಯಶಸ್ವಿಯಾಗಿ ಇಂಗ್ಲೆಂಡ್ ಪ್ರಯಾಣ ರದ್ದುಗೊಂಡಿತು.  ಆಗ ಅವರು ವಿಧಿಯಿಲ್ಲದೆ  1855ರಲ್ಲಿ ಮತ್ತೆ ಧಾರವಾಡಕ್ಕೆ ವಾಪಸ್ಸು ಬಂದರು.   ವೃತ್ತಿ ಜೀವನ ಕೆಲಕಾಲ ಅಂಚೆ ಕಚೇರಿಯಲ್ಲಿ ಕೆಲಸ ಮಾಡಿದರು.  ಅಷ್ಟರಲ್ಲಿ ಧಾರವಾಡದಲ್ಲಿ ನೂತನವಾಗಿ ಆರಂಭಗೊಂಡ ನಾರ್ಮಲ್ ಶಾಲೆಯ ಮುಖ್ಯೋಪಾಧ್ಯಾಯರಾಗಿ ಆಯ್ಕೆಗೊಂಡರು.  ಶಿಕ್ಷಣ ಇಲಾಖೆಯನ್ನು ಪ್ರವೇಶಿಸಿ 1861ರಲ್ಲಿ  ಬೆಳಗಾಂ ಜಿಲ್ಲೆಯ ಡೆಪ್ಯೂಟಿ ಇನ್‌ಸ್ಪೆಕ್ಟರೆನಿಸಿದರು.  ಹೀಗಾಗಿ ಅವರ ಹೆಸರಿಗೆ  ಡೆಪ್ಯೂಟಿ  ವಿಶೇಷಣ ಅಂಟಿಕೊಂಡಿತು.  ಚನ್ನಬಸಪ್ಪನವರು ಅಧಿಕಾರಕ್ಕೆ ಬರುವ ಮುನ್ನ ಧಾರವಾಡ, ಬೆಳಗಾವಿ, ಬಿಜಾಪುರ ಜಿಲ್ಲೆಯ ಕನ್ನಡ ಶಾಲೆಯ ಸಂಖ್ಯೆ ಕೇವಲ 34 ಇತ್ತು.  ಚನ್ನಬಸಪ್ಪನವರ ಹತ್ತು ವರುಷದ ಆಡಳಿತದಲ್ಲಿ ಕನ್ನಡ ಶಾಲೆಗಳ ಸಂಖ್ಯೆ 668ಕ್ಕೆ ಏರಿತು.  ಚನ್ನಬಸಪ್ಪನವರು, ತಮ್ಮ ಸ್ನೇಹಿತರಾದ  ರಾಮಚಂದ್ರ ಚುರಮುರಿ, ಗಂಗಾಧರ ಮಡಿವಾಳೇಶ್ವರ ತುರಮರಿ ಮೊದಲಾದ ಕನ್ನಡ ಭಕ್ತರಿಗೆ ಕನ್ನಡದಲ್ಲಿ ಗ್ರಂಥ ರಚಿಸಲು  ಪ್ರೇರಣೆ, ಪ್ರೋತ್ಸಾಹ, ಬೆಂಬಲಗಳನ್ನು ಒದಗಿಸಿದರು. ಸ್ವಯಂ ತಾವೇ ಪಠ್ಯ ಪುಸ್ತಕಗಳನ್ನು ರಚಿಸಿದರು.  ಉಚಿತ ವಿದ್ಯಾರ್ಥಿ ನಿಲಯದ ಸ್ಥಾಪನೆ  ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಚಿತ್ರದುರ್ಗದ ನಿರಂಜನ ಜಗದ್ಗುರು ಬೃಹನ್ಮಠದ ಮಹಾಲಿಂಗ ಸ್ವಾಮಿಗಳ ( ಶಿರಸಂಗಿ) ಮನವೊಲಿಸಿ ಬೆಳಗಾವಿಯಲ್ಲಿ ವೀರಶೈವ ಉಚಿತ ವಿದ್ಯಾರ್ಥಿನಿಲಯವನ್ನು ತೆರೆದರು. ಸ್ವಾಮಿಗಳ ನಿಧನಾನಂತರ ತಾವೇ ಇದರ  ಆರ್ಥಿಕ ಹೊಣೆ ಹೊತ್ತರು.  ಹೆಂಡತಿ ಮೈಮೇಲಿನ ನಗ, ಆಭರಣ ಒಡವೆ ಮಾರಿದರು. ಸಾಲದ ಬಾಧೆಗೆ  ಮನೆ-ಮಠಮಾರಿ ವಿದ್ಯಾರ್ಥಿ ನಿಲಯದ ನಿರ್ವಹಣೆ ಮಾಡಿದರಂತೆ. ಸಾಹಿತ್ಯ ಕೃತಿಗಳು ಚನ್ನಬಸಪ್ಪನವರು ‘ಕಾಮೆಡಿ ಆಫ್ ಎರರ್ಸ್‌’ (ನಗದವರನ್ನು ನಗಿಸುವ ಕಥೆ) ಮತ್ತು ‘ಮ್ಯಾಕ್‌ಬೆತ್’ ಕೃತಿಗಳನ್ನು ಪ್ರಕಟಿಸಿದರು. ‘ಮ್ಯಾಕ್‍ಬೆತ್’ ಕೃತಿಯ ಮೂಲಕ ಶೇಕ್ಸಪಿಯರ್ ಅನ್ನು ಮೊದಲು ಕನ್ನಡಕ್ಕೆ ತಂದವರು ಚನ್ನಬಸಪ್ಪನವರು. ಚನ್ನಬಸಪ್ಪಾ ಇವರು ಹುಟ್ಟು ಹಾಕಿದ ಮತ್ತು ಶತಮಾನೋತ್ಸವವನ್ನು ಆಚರಿಸಿದ ಕನ್ನಡದ ಏಕಮೇವ ಶೈಕ್ಷಣಿಕ ಮಾಸಿಕ “ಜೀವನ ಶಿಕ್ಷಣ” ಪತ್ರಿಕೆ. ಈ ಪತ್ರಿಕೆ ಸ್ಥಾಪಕರಾಗಿ ಹಲವು ಆರ್ಥಿಕ ಸಂಕಷ್ಟಕೆ ಈಡಾದರೂ  ಮಕ್ಕಳ ಕಲಿಕೆಗೆ ತಮ್ಮ ಸರ್ವಸ್ವವನ್ನು ಮಾರಿದ ಸದಾ ಸ್ಮರಣೀಯರು.  ಮಕ್ಕಳ ಶಿಕ್ಷಣಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡಿದ್ದ ಚನ್ನಬಸಪ್ಪನವರಿಗೆ ಜೀವನವೇ ಶಿಕ್ಷಣ ಶಾಲೆಯಾಗಿದ್ದರಲ್ಲಿ ಅಚ್ಚರಿಯಿಲ್ಲ. ಡೆಪ್ಯುಟಿ ಚೆನ್ನಬಸಪ್ಪನವರು ಧಾರವಾಡ ಟಿಸಿಏಚ್ ಕಾಲೇಜನ್ನು ಸ್ಥಾಪಿಸಿ ಕನ್ನಡ ಶಾಲಾ ಶಿಕ್ಷಕರ ತರಬೇತಿ ಕೇಂದ್ರ ಸ್ಥಾಪಿಸಿ ಅದರ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸಿದ ಮಹಾನುಭಾವರು. ಡೆಪ್ಯುಟಿ ಚನ್ನಬಸಪಪ್ನವರು 1881 ವರ್ಷದ ಜನವರಿ 4 ರಂದು ಈ ಲೋಕವನ್ನಗಲಿದರು.  1981 ವರ್ಷದಲ್ಲಿ ಚನ್ನಬಸಪ್ಪನವರು ನಿಧನರಾದ ನೂರು ವರ್ಷಗಳಾದ ಸಂದರ್ಭದಲ್ಲಿ ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಲಾಯಿತು. ಇದು ಪ್ರಾಥಮಿಕ ಶಿಕ್ಷಣ ಹಾಗೂ ಶಿಕ್ಷಕ ತರಬೇತಿ ರಂಗದಲ್ಲಿ ಕಾರ್ಯನಿರ್ವಹಿಸುವ ಸೇವಾಸಂಸ್ಥೆಯಾಗಿದೆ. ಕನ್ನಡದ ಪುನರುಜ್ಜೀವನ ಮತ್ತು ಶಿಕ್ಷಣ ಪ್ರಸಾರ ಕಾರ್ಯದ ಶಕಪುರುಷಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡ ಡೆಪ್ಯೂಟಿ ಚನ್ನಬಸಪ್ಪನವರ ನೆನಪು ಎಲ್ಲಕಾಲಕ್ಕೂ ಸ್ಪೂರ್ತಿದಾಯಕ. ತಮ್ಮ ಬದುಕಿನ ಕೇವಲ 47 ನೆಯ  ವಯಸ್ಸಿನಲ್ಲಿ ಅಗಾಧವಾದ ಕಾರ್ಯ ಮಾಡಿ ಗಡಿ ನಾಡು ವಿಜಯಪುರ ಧಾರವಾಡ ಬೆಳಗಾವಿ ಕಾರವಾರ ಬೀದರ ಮುಂತಾದ ರಾಜ್ಯಗಳಲ್ಲಿ ಕನ್ನಡ ಶಾಲೆಗಳನ್ನು ತೆರೆದು ಕನ್ನಡವ ಉಳಿಸಿ ಬೆಳೆಸಿದ ಕನ್ನಡದ ಕಟ್ಟಾಳು ಮತ್ತು ಗಡಿ ರಕ್ಷಣೆಗೆ ನಿಂತ ದಿಟ್ಟ ಯೋಧರು. ಕರ್ನಾಟಕ ರಾಜ್ಯ ಸರ್ಕಾರ ಇವರ ಹೆಸರಿನಲ್ಲಿ ಪ್ರತಿಷ್ಠಾನ ಮಾಡಲಿ ಮತ್ತು ಕರ್ನಾಟಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಡೆಪ್ಯುಟಿ ಚೆನ್ನಬಸಪ್ಪನವರ ಅಧ್ಯಯನ ಪೀಠ ತೆರೆಯ ಬೇಕು. ಅಪ್ಪಟ ಬಸವ ಭಕ್ತ ಲಿಂಗಾಯತ ಧರ್ಮದ ಅನುಯಾಯಿ ತಮ್ಮ ನಿಸ್ವಾರ್ಥ ಸೇವೆಗೆ ಕನ್ನಡಿಗರ ಮನದಲ್ಲಿ ಚಿರಾಯುವಾಗಿದ್ದಾರೆ. ಇಂತಹ ಶರಣರಿಗೆ ನಮ್ಮ ಭಕ್ತಿ ಪೂರ್ವಕ ಶತ ಕೋಟಿ ನಮನಗಳು. __________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರು ಮಾಲಿಕೆ,”ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”-ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ Read Post »

ಕಾವ್ಯಯಾನ, ಗಝಲ್

ಅರುಣಾ ನರೇಂದ್ರ ಅವರ ಗಜಲ್

ಕಾವ್ಯ ಸಂಗಾತಿ ಅರುಣಾ ನರೇಂದ್ರ ಗಜಲ್ ನಂಬಿದೆದೆಯಲಿ ಇಂಬಿರದೆ ಬಿಕ್ಕುತಿದೆ ಹಕ್ಕಿಜೊತೆ ನಡೆದ ಗುರುತಿರದೆ ಅಳುತಿದೆ ಹಕ್ಕಿ ಮುರಿದು ಹೋಯಿತು ತಾ ಕುಳಿತ ಕೊಂಬೆಹಾರಲು ಬಲವಿರದೆ ನೋಯುತಿದೆ ಹಕ್ಕಿ ಸುರಿಯುತಿದೆ ಮಳೆ ಬೀಸುತಿದೆ ಬಿರುಗಾಳಿಸುತ್ತ ಕತ್ತಲಲಿ ದಿಕ್ಕಿರದೆ ತೋಯುತಿದೆ ಹಕ್ಕಿ ರೆಕ್ಕೆಯ ಬಣ್ಣ ಮಾಸಿದೆ ಕೊರಳು ಬಿಗಿದಿದೆದುಃಖದಿ ಜೊತೆಯಿರದೆ ಕಾಯುತಿದೆ ಹಕ್ಕಿ ಮೂಕವಾಗಿವೆ ಗಿಡ ಮರ ಹೂ ಬಳ್ಳಿಗಳುಕಾನು ಕಣಿವೆ ಹಿತವಿರದೆ ಕೊರಗುತಿದೆ ಹಕ್ಕಿ ದೂರವಾಗಿದೆ ಬಲು ಬಿತ್ತರದ ನೀಲಿ ಬಾನುಅವನ ಪ್ರೀತಿಯಿರದೆ ಸೋಲುತಿದೆ ಹಕ್ಕಿ ಬದುಕಿಗಾಗಿ ಗಟ್ಟಿಗೊಳ್ಳಬೇಕು ಅರುಣಾನಲಿವಿನಲಿ ನೋವಿರದೆ ಬಾಳುತಿದೆ ಹಕ್ಕಿ ಅರುಣಾ ನರೇಂದ್ರ

ಅರುಣಾ ನರೇಂದ್ರ ಅವರ ಗಜಲ್ Read Post »

ಕಾವ್ಯಯಾನ

“ಅಜೀಬ್ ದಾಸ್ತಾಂ ಹೈ ಏ” ಸುಮತಿ ನಿರಂಜನ

ಕಾವ್ಯ ಸಂಗಾತಿ ಸುಮತಿ ನಿರಂಜನ “ಅಜೀಬ್ ದಾಸ್ತಾಂ ಹೈ ಏ ಸಂಪಾದಕರ ಸುಗ್ರೀವಾಜ್ಞೆ !“ಏನೇ ಇರಲಿ ಹೊಸತು ಬರಲಿಏನಾದ್ರೂ ವಿಭಿನ್ನ ಬರೀರ್ರೀಪ್ರಾಸ ಗೀಸದ ಬೆನ್ನಟ್ಟದಿರಿ!”“ಆದ್ರೆ ಸರ್, ಕಲ್ಪನಾ ವಿಲಾಸಪ್ರಾಸದ್ದೇ ಬೆನ್ನೇರಿ ಬಂದ್ರೆ ?”“ಏನಾದ್ರೂ ಮಾಡ್ರೀ ಹೋಗ್ರೀ !ಆದ್ರೆ ಹಳೇ ದಾಸ್ತಾನಿಂದಮಾತ್ರ ತೆಗೀಬೇಡ್ರೀ !” ಪೆನ್ನು ಪೇಪರು ಹಿಡಿದು ಹೊರಟೆಚಿನ್ನದ ಗಣಿಯೆಲ್ಲಾದರೂಇದೆಯೇನು ಪಕ್ಕ್ದಲ್ಲೇ ?ಅಗ್ದು ಅಗ್ದು“ಪುಟ”ಕ್ಕಿಟ್ಟು ಕೊಡ್ಲಿಕ್ಕೆ ?ಹೋಗ್ಲಿ, ಅಮ್ಮನಅವಳಮ್ಮನ ಒಡವೆ ಮುರಿದುಹೊಸ ಡಿಸೈನು ಮಾ‌ಡಿಸ್ಲೆ ?ಯಾಕೋ ಮನಸ್ಸಾಗ್ಲಿಲ್ಲಬರೇ ಆಂಟಿಕ್ ವಾಲ್ಯೂಎಂದಾರು ಸಂ.ಸಾಹೇಬ್ರು ! ಅಥವಾ,ಪಳ ಪಳ ಹೊಳೆಯುವಹೊಸ ಹೊಸ ಪದಗಳಟಂಕಿಸಿ ಅಂಟಿಸಿ ಪೇಜಿನ ಮೇಲೆಅಂಚೆಗೆ ಹಾಕ್ಲೆ ಈಗ್ಲೆ ?ಹೊಸ ನಾಣ್ಯ ನಡೆಯೋದಲ್ಲಓಡ್ತಾವೆ ನೋಡಿ, ಮಿಂಟ್ ಫ್ರೆಶ್ !ಎಂದನಲ್ಲವೇ ಸಂ ಮಹಾಶಯ !ಆದರೆ…ಹತ್ರ ಎಲ್ಲೂ ಟಂಕಸಾಲೆನೇಕಾಣಿಸ್ತಿಲ್ವಲ್ರೀ !ಈಗ ಅದೇನೋ ಬಂದಿದ್ಯಂತಲ್ಲಾಕೃತ್ರಿಮ ಬುದ್ಧಿ ಮತ್ತೆ ಅಂತ ?ಅದಕ್ಕೇ ಮೊರೆ ಹೋಗ್ಲೇನು ?“ಅದ್ ಬಂದ್ ಮೇಲೆನಿಮ್ಗ್ ಯಾರ್ರೀ ಹಾಕ್ತಾರ್ರ್ ಸೊಪ್ಪು ?”ಎಂದಾನು ಮಹಾನುಭಾವ ! ಸರಿ, ನಡಿ ಮತ್ತೆಹಳೆ ಉಗ್ರಾಣಕ್ಕೆ…ಏನೇನೋ ದಾಸ್ತಾಂ…ಅಳಿದಿದ್ದು ಉಳಿದಿದ್ದುಮುರಿದಿದ್ದು ಮಬ್ಬಾದದ್ದುಎದ್ದಿದ್ದು ಅರ್ಧನಿದ್ರೆಲಿದ್ದಿದ್ದುಏನೇ ಆಗ್ಲಿ ನಂದೇ ಎಲ್ಲಾಬೇರೆಯವ್ರ್ ದಾಸ್ತಾನಂತೂ ಅಲ್ಲಯಾವ್ದೋ ಒಂದನ್ನೆಬ್ಸಿಉಜ್ಜಿ ತೊಳ್ದು ಒಪ್ಪ ಮಾಡಿಹೊಸ ಇಸ್ತ್ರಿ ಅಂಗಿ ಹಾಕಿಕಳಸ್ತೀನಿ ಮಾರಾಯಂಗೆನಡೀಯತ್ತೋ ಓಡತ್ತೋಎಡವಿ ಬೀಳತ್ತೋನೋಡೇ ಬಿಡಾಣ ! ಸುಮತಿ ನಿರಂಜನ

“ಅಜೀಬ್ ದಾಸ್ತಾಂ ಹೈ ಏ” ಸುಮತಿ ನಿರಂಜನ Read Post »

ಇತರೆ, ಜೀವನ

“ಹೆತ್ತವರು..ಯಾರಿಗೆ ಭಾರ ಯೋಚಿಸಿ!” ವಿಶೇಷ ಲೇಖನ ಶಿವಲೀಲಾ ಶಂಕರ್

ಜೀವನ ಸಂಗಾತಿ ಶಿವಲೀಲಾ ಶಂಕರ್ “ಹೆತ್ತವರು..ಯಾರಿಗೆ ಭಾರ ಯೋಚಿಸಿ!” ನಾವು ಫೇಸ್ ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ವಯಸ್ಸಾದವರ ಬಗ್ಗೆ ಅದೆಷ್ಟು ಕಾಳಜಿಯಿಂದ  ಮರುಕ ವ್ಯಕ್ತಪಡಿಸುತ್ತೆವೆ.ಅಯ್ಯೋ.. ಪಾಪ ಮಗ,ಮಗಳು,ಸೋಸೆ ಇಂತವಳು…ಸಾಕಷ್ಟು ಉತ್ತೇಜಕ ಕಾಮೆಂಟ್ ಹಾಕುತ್ತ ಮನದ ಮೂಲೆಯ ಅಭಿವ್ಯಕ್ತಿ ಹೊರ ಹೊಮ್ಮಿಸುತ್ತೆವೆ..ಅಲ್ಲಗೆ ಮುಗಿತು ನಮ್ಮ ಮಾತು ಕಥೆಗಳು.ಆದರೆ ದೀಪದ ಬುಡದಲ್ಲಿ ಕತ್ತಲೆ ಅಷ್ಟೇ.. ವೃದ್ಧ ದಂಪತಿಗಳು ತಮ್ಮ ಇಳಿವಯಸ್ಸಿನಲ್ಲಿ ಒದ್ದಾಡುವುದು, ಪೇಚಾಡುವುದು ಬೇಕಿತ್ತಾ? ಎಂಬ ಮಾತಿಗೆ ಉತ್ತರ ಕೊಡುವವರು ಯಾರು?.ಮನಸ್ಸು ಒಮ್ಮೆ ಭಾರವಾಗಿ ಮಗ್ಗುಲಾಗಿದ್ದು ಇದೆ.ತಂದೆ ತಾಯಿಗೆ ಮಕ್ಕಳು ಒಂದೇ. ಆದರೆ ಮಕ್ಕಳಿಗೆ ತಂದೆ-ತಾಯಿ ಬೇರೆ ಬೇರೆ..ಹತ್ತಿರವಾಗುವುದು ಯಾವಾಗ? ಅಂದರೆ ಆಸ್ತಿ ಪಾಸ್ತಿ ಯಾರಲ್ಲಿ ಹೆಚ್ಚಿರುತ್ತದೆಯೋ ಅಲ್ಲಿ ಸಂಬಂಧಗಳು ಸಾಪ್ಟ್ ಆಗಿ ಹ್ಯಾಂಡಲ್ ಮಾಡುವಂತಹ ಮನೋಭಾವಕ್ಕೆ ಒಳಗಾಗಿರುತ್ತಾರೆ.ಆಗ ಹೆತ್ತವರು ಭ್ರಮೆಯಲ್ಲಿ..ಮಕ್ಕಳು ನಮ್ಮವರೆಂಬ ಆತ್ಮ ವಿಶ್ವಾಸದ ಸಾಗರದಲ್ಲಿ. ನಾವು ಚಿಕ್ಕವರಿದ್ದಾಗ ಅಪ್ಪ ಅಮ್ಮ ನಮ್ಮ ಬೆಳೆಸಿದ ರೀತಿ,ಅವರು ಕಷ್ಟ ಪಟ್ಟದಿನವನ್ನು ನೆನೆದರೆ ಸಾಕು!. ಅವರ ರೆಟ್ಟೆಗಳು,ಹರಿದ ಚಪ್ಪಲಿ,ಹರಿದ ಅಂಗಿಗಳು,ಅರೆಹೊಟ್ಟೆಯ ದಿನಗಳು.ಅವರಿಗೆಲ್ಲ ಕಾಮನ್.. ಯಾಕೆಂದರೆ ಮಕ್ಕಳ ಭವಿಷ್ಯದ ಬಗ್ಗೆ ಜವಾಬ್ದಾರಿ ಕನಸು ಎಲ್ಲವೂ ನಿರ್ಭರ.ಇಳಿವಯಸ್ಸಿನಲ್ಲಿ ಆಸರಾಗುವರೆಂಬ ಅತಿಆಸೆ.ತಮ್ಮ ಕರ್ತವ್ಯ ಪ್ರಜ್ಞೆಯನ್ನು ಚಾಚು ತಪ್ಪದೆ ಪಾಲಿಸಿದ್ದರ ಪ್ರತಿಫಲ ನಾವೆಲ್ಲ ಪ್ರಪಂಚಕ್ಕೆ ಗುರುತಿಸಲ್ಪಡುವ ವಿಶೇಷ ವ್ಯಕ್ತಿಗಳಾಗಿ ರೂಪುಗೊಂಡಿದ್ದು.ಇಷ್ಟೆಲ್ಲಾ ಆದರೂ ನಮ್ಮ ಅಸಹಜ ಗುಣದಿಂದ ನಾವು ಭಿನ್ನವಾಗಿಯೇ ಬೆಳೆದು ನಿಂತಿದ್ದೆವೆ.ಅವರು ನೆಟ್ಟ ಮಾವಿನ ಮರ ನೀಡಿದ ಫಲ ಸಿಹಿಯಾಗದೇ ಕಹಿಯ ಫಲವಾದರೆ ಪ್ರಾಣಿ ಪಕ್ಷಿಗಳ ಗತಿಯೇನು? ಹೌದರಿ…ಜವಾಬ್ದಾರಿ ಹೊರುವ ಕಾಯಕವನ್ನು ಕೈಗೆತ್ತಿಕೊಂಡು ನೆಡದವರಿಗೆ ಭಗವಂತ ರಕ್ಷಣೆ ಖಂಡಿತ ನೀಡುವನು..ಅದೆಷ್ಟೋ ಸಾಂತ್ವಾನ ನೀಡಿದರೂ ಅದ್ಯಾಕೋ… ಮನಸ್ಸು ‘ವಿಲವಿಲ’ ವೆಂದು ಒದ್ದಾಡುತ್ತಿದೆ.ಮಕ್ಕಳು ಮುಪ್ಪಿನಲಿ..ಇದ್ದು ಇಲ್ಲದಂತಾಗುವ ಗಳಿಗೆ ಯಾವ ಜೀವಿಗೂ ಬೇಡ! ನೂರು ದೇವರ ಅನುಗ್ರಹಕ್ಕೆ ನೂರಾರು ದೇವಾಲಯ ಅಲೆದು,ಬೇಡಿ ಬಯಸಿ ಜನ್ಮಕೊಟ್ಟ ಹಸುಗೂಸಿಗೆ ಬೆನ್ನೆಲುಬಾಗಿ ನಿಂತು,ಸಲುಹಿ,ರಟ್ಟೆಯಲ್ಲಿ ಬಲಬರುವ ತನಕವೂ ರೆಸ್ಟಲೆಸ್ ಆಗಿ ದುಡಿದು ದಣಿವಾರಿಸಲು ಬಯಸದ ಕಂಗಳಿಗೆ,ಅದ್ಯಾವ ಪೊರೆ ಮೆತ್ತಿತ್ತೊ ಕಾಣೆ?. ಮನೆಯಂಗಳದಲಿ ನಲಿದಾಡುವ ಪುಟ್ಟ ಜೀವಕ್ಕೊಸ್ಕರ ಎಲ್ಲವನ್ನೂ ಮರೆತು ದುಡಿದಿದ್ದು ಯಾಕಂತ ಅರ್ಥವಾಗುವ  ಸಮಯ ಬರದೆ ಹೋದರೆ ಆ ಬದುಕಿಗೆ ಅರ್ಥವೇನು?.. ಎಷ್ಟೊಂದು ಪರಿಣಾಮವನ್ನು ಬೀರಿತು ನಮ್ಮೆದೆಯೊಳಗೆ..ಆದರೆ ಅದ್ಯಾವ ಭಾವವೂ ಕೂಡ ನಮಗೀಗ ಅರಿವಿಗೆ ಬೇಕಿಲ್ಲ!. ದಿನಕಳೆದಂತೆಲ್ಲ ದೇಹಕ್ಕೊ,ಮನಸ್ಸಿಗೂ ಬಿರುಕುಗಳು ಮೂಡುವ ಕಾಲಘಟ್ಟ.ಯೌವ್ವನದ ಹೇಳ ಹೆಸರಿಲ್ಲದಂತೆ,ಸಂತೆಯೊಳು ಮಾಯವಾದಂತೆ.ಹಿಡಿದಿಟ್ಟುಕೊಳ್ಳುವ ಸಾಹಸ ಯಾರಿಂದ ಸಾಧ್ಯವಾದಿತು!. “ಯಯಾತಿ” ಪ್ರಸಂಗವೊಂದು ಇದಕ್ಕೆ ಸಾಕ್ಷಿಯಾದಿತು.ಸುಖ,ವೈಭೋಗ ಎಷ್ಟು ದಿನ,ವರುಷ ಅನುಭವಿಸಲು ಸಾಧ್ಯ?.ಮುಪ್ಪು ಸದ್ದಿಲ್ಲದೆ ಮೈಗಂಟಿಕೊಳ್ಳುವ ಜಾದೂಗಾರ!.ಅಲ್ಲಿಯೇ ನೋಡಿ ನಮಗಿರುವ ಕಿಮ್ಮತ್ತು ಅಂದರೆ ಸತ್ಯ ದರ್ಶನ !. ಹೌದು ನಾವೆಲ್ಲ ಏನನ್ನೂ ಸಾಧಿಸದೆ…ಒಂದಿಷ್ಟು ಆಸ್ತಿ ಪಾಸ್ತಿ ಹೊಂದಿದ್ದು..ಮಗ,ಮಗಳಿಗೆ ಕಷ್ಟ ಬರಬಾರದೆಂದು ತಮ್ಮೆಲ್ಲಾ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ. ಮಕ್ಕಳ ಭವಿಷ್ಯಕ್ಕೆ ಆಕಾರನೀಡುವಲ್ಲಿ ಯೌವ್ವನ ಯಾವಾಗ ಮುಪ್ಪಾಗಿ ಪರಿಣಮಿಸಿತೋ ಅರಿವಿಗೆ ಬರಲಿಲ್ಲ.ತಾಕತ್ತು ಎಲ್ಲಿಯವರೆಗೆ?.. ಮಗ,ಮಗಳು ಬಲಿಷ್ಠರಾಗುವ ತನಕ.ಅಲ್ಲಿಗೆ ಒಂದು ಧೀರ್ಘಕಾಲದ ಅಧ್ಯಾಯ ಮುಕ್ತಾಯವಾದಂತೆ.ನಿರೀಕ್ಷೆಯ ಮಹಾಪೂರವೇ ಹರಿದುಬಂದಿತೆಂಬ ಕನಸು.ಅಪ್ಪ ಅಮ್ಮ ಮಕ್ಕಳನ್ನು ತಿದ್ದಿ ತೀಡಿ ಆನಂದ ಕಂಡ ಜೀವಗಳು.ತಮ್ಮ ತ್ಯಾಗಕ್ಕೆ ಫಲ ಸಿಗುದೆಂಬುದು ಊಹೆ ಅಷ್ಟೇ!. ರೆಕ್ಕೆ ಬಲಿತ ಮರಿಗಳು ಗೂಡು ಬಿಟ್ಟು ಹಾರಿಹೋದಂತೆ.ವಿದ್ಯೆ, ಸಂಸ್ಕಾರ, ಉದ್ಯೋಗ ಎಲ್ಲವೂ ದಕ್ಕಿದ ಮೇಲೆ ಅಂದರೆ,ಹೊಳೆ ದಾಟಿದ ಮೇಲೆ ಅಂಬಿಗನ ಮರೆತಂತೆ!. ಮಕ್ಕಳ ಬದುಕಿಗೆ ಎಣಿಯಾದ ತಂದೆ ತಾಯಿ ಕೊನೆಗೊಂದು ದಿನ ಮೂಲೆಗುಂಪು.ಇದು ಕಾಲಚಕ್ರದ ಪರಿಣಾಮವೂ,ವಿಧಿಯ ಆಟವೋ,ಅಥವಾ ಬೆಳೆಸುವುದರಲ್ಲಿ ಹೆಚ್ಚು ಪ್ರಾಮಾಣಿಕರಾಗಿದ್ದೋ ಗೊತ್ತಿಲ್ಲ.ಯಾರಾದರೇನು? ಸಮಯಕ್ಕೆ ಆಗದ ಹಣವಾದರೇನು? ನೆಂಟರಾದರೇನು? ಮಕ್ಕಳಾದರೇನು?. ನೋವು ನೋವೆ!. ಅದನ್ನು ಸರಿದೂಗಿಸಲು ಯಾರಿಂದಲೂ ಸಾಧ್ಯವಿಲ್ಲ. ಹೌದು..ಇದೆಲ್ಲ ಯಾಕೆ? ಹೆತ್ತವರ ಎದೆಗೊದ್ದು ಬದುಕುವ ಅವಕಾಶ ಗಿಟ್ಟಿಸಿಕೊಂಡ ಮಕ್ಕಳು.ಕೇವಲ ಅವರ ಆಸ್ತಿಗಾಗಿಯೇ ಹೊರತು ಹೆತ್ತವರ ಆರೈಕೆಗಲ್ಲ. ಮನಸ್ಸು ಭಾರವಾದಿತು ಒಂದುಕ್ಷಣ!. ಹೆಣ್ಣಾಗಲಿ,ಗಂಡಾಗಲಿ ನಡೆದುಕೊಳ್ಳುವ ರೀತಿಗೆ ಕರುಳು ಚುರ್ ಅನ್ನುತ್ತೆ. ಮಕ್ಕಳಿಗೆ ಹೆತ್ತವರು ಭಾರವಾದರೆ ಬೇರಾವ ಮಾತಿದೆ?. ಕೂಲಿನಾಲಿ ಮಾಡಿ,ತಾವು ಉಪವಾಸವಿದ್ದು ನಮಗೆ ತುತ್ತು ನೀಡಿ ಬೆಳೆಸಿದ ಅವರಿಗೆ…ಊಟ ಹಾಕದೆ ಕೊಂದ ಮಕ್ಕಳ ಬಗ್ಗೆ ಆಕ್ರೋಶವಿದೆ…ಹೌದು.ವಯಸ್ಸಾದ ಮೇಲೆ ದುಡಿಯುವ ಕ್ಷಮತೆ ಕ್ಷೀಣಿಸುತ್ತದೆ ಎಂಬ ಸಣ್ಣ ಅಂಶ ಅರಿವಿಗೆ ಬಾರದಿದ್ದರೆ ಈ ಜನ್ಮಕೆ ಬೆಲೆಯಿಲ್ಲ!.ಹೆತ್ತವರು ಯಾರಿಗೆ ಭಾರ ಯೋಚಿಸಿ!. ನಿಜ ಅಲ್ವಾ…ವಯಸ್ಸಾದವರು ಕಾಯಿಲೆಗೆ ಬಿದ್ದರೆ ಅವರನ್ನು ಮನೆಯಿಂದ ಹೊರದೂಡುವುದು..ಈಗೀಗ ಸಾಮಾನ್ಯವಾಗಿ ಬಿಟ್ಟಿದೆ. ನನ್ನಪ್ಪನ ಹೋರಾಟ ಇದಷ್ಟುದಿನ ಒಮ್ಮೆ ಹಸಿವ ನೀಗಿಸಲು ಕಠಿಣ ಪರಿಶ್ರಮದ ಬಾಗಿಲು ತಟ್ಟಿದವ,ಒಂದು ಪೈಸೆಯು ಸಾಲವಿಲ್ಲದೆ ನಿವೃತ್ತಿಯಾದವ..ಕೈಗಡ ಸಾಲವೂ ಉಳಿಸಿಕೊಳ್ಳದವ‌..೧೦ ರೂಪಾಯಿಯಲ್ಲೆ ಬದುಕುವುದು ಹೇಗೆ ಎಂಬುದನ್ನು ಬಲ್ಲವ..ತನಗಾಗಿ ಕೂಡಿಡುವ ಕನಸು ಕಂಡವನಲ್ಲ.ಕಲಿಯುವ ಆಸೆ ಹೊತ್ತ ನನಗೆ ಕಲಿಯಲು ಬಿಂದಾಸ್ ಆಗಿ ಬಿಟ್ಟವ.ಅವನ ಭರವಸೆ,ನಂಬಿಕೆ ಉಳಿಸಿಕೊಂಡು ಕಲಿತ ಫಲ ಇವತ್ತು ನಾನು ಉಣ್ಣುವ ಅನ್ನವೆಂದರೆ ತಪ್ಪಾಗದು..ಅಪ್ಪ ಅಮ್ಮರನ್ನು ನೋಡಿಕೊಳ್ಳುವ ಭಾಗ್ಯ ನನ್ನದು..ಅವರು ಸ್ವಾವಲಂಬಿ ನಿಲುವಿನ ವ್ಯಕ್ತಿಗಳು.. ಆದರೆ ಮುಪ್ಪು,ಕಾಯಿಲೆ ಯಾರ ಮನೆ ಸೊತ್ತು?… ಅದು ಬಂದಾಗಲೇ ಯಾರು? ಯಾರಿಗೆ? ಹತ್ತಿರವಾಗುತ್ತಾರೆ ಎಂಬುದು?…. ಮಗನಾದವ ಕೈ ಚೆಲ್ಲಿದ ಮೇಲೆ…ಮಗಳಾಗಿ ನನ್ನ ಕರ್ತವ್ಯ ಮಾಡುವುದು ಪುಣ್ಯವೆಸರಿ.. ಅಪ್ಪ…ಕಲ್ಲು ತಿಂದು ಕಲ್ಲು ಕರುಗಿಸಿದ ದೇಹ…ಕೆಮ್ಮು,ದಮ್ಮು,ಕಫಕ್ಕೆ ನಲುಗಿದ್ದ…ನಮ್ಮ ಯಜಮಾನ್ರು,ಇನ್ನೋರ್ವ ಸಹೋದರ ಡಾಕ್ಟರ್ ದಂಪತಿಗಳು,ನನ್ನ ಮಕ್ಕಳು ಅಜ್ಜನ ಸೇವೆ ಮಾಡಲು ಎಚ್ಚರಿದ್ದವರು.ಅವ್ವ ಸಾಕಷ್ಟು ಪ್ರಯತ್ನ ಮಾಡಿ ಒಂದು ಚೇತರಿಕ ಹಂತಕ್ಕೆ.ತಂದಿದ್ದರು.ನಮಗೆಲ್ಲ 81 ರ ಅಪ್ಪನ ಮಾತು ಖಡಕ್…ಅವನ ಒದ್ದಾಟ,ನೋವು ಅನುಭವಿಸುವುದು ಕಂಡಾಗೆಲ್ಲ ಕಣ್ಣೀರ ಹೊರತು ಮತ್ತೇನಿಲ್ಲ..ಗಂಜಿ ಕುಡಿಸುವಾಗ ಅವನ ಅಸಹಾಯಕ ಸ್ಥಿತಿ ಯಾರಿಗೂ ಈ ನೋವು ಬೇಡ ಅನ್ನುತ್ತಿದ್ದರು.ಹಾಗಂತ ಮಲಗಿದವರಲ್ಲ.. ಓಡಾಡುತ್ತಿದ್ದರು.ರೂಮನ್ನು ಹೀಟರ್ ಮೂಲಕ ಗರಂ ಇಟ್ಟರೂ,ಅದ್ಯಾಕೆ ಈ ಸಲ ವಿಪರೀತ ಚಳಿ ನಡುಕ..ರಕ್ತ ಹಾಕಿಸಿ ಇನ್ನೇನು ಗುಣಮುಖರಾದರೂ ಅನ್ನುವ ಮೂರುದಿನ ಅವರು ತನ್ನ ಪೂರ್ವಜರ ಹೊಲದಲ್ಲಿಯ ದೃಶ್ಯಾವಳಿಗಳನ್ನು ಹೇಳತೊಡಗಿದ್ದ…ವಯಸ್ಸಾದ ಮೇಲೆ ಹಿರಿಯರು ಪುಟ್ಟ ಮಕ್ಕಳಂತೆ ಅನ್ನೊ ಮಾತು ಅಕ್ಷರಶಃ ಸತ್ಯ.ಮನೆಯವರು ಉಸಿರಾಟಕ್ಕೆ ತೊಂದರೆಯಾದಿತೆಂದು ಚಕ್ ಮಾಡಿಸಿ ರಕ್ತ ಪರೀಕ್ಷೆ,ಎಕ್ಷರೆ ತಗಿಸಿಕೊಂಡು ಕರೆತಂದಿದ್ದರು.ಮನೆಯ ಅಂಗಳ ಕಟ್ಟೆಯ ಮೇಲೆ ಕುಳಿತು ಗಂಜಿ ಕುಡಿದು,,ಮೆಡಿಸಿನ್ ತಗೊಂಡು ಸ್ವಲ್ಪ ಹೊತ್ತಿಗೆ ಇಹಲೋಕ ತ್ಯಜಿಸಿದರು… ಆಗ ನಾನು ಶಾಲೆಯಲ್ಲಿ!. ಬೆಳಿಗ್ಗೆ ಮಾತಾಡಿದ್ದೆ ಬಂತು.ಒಂದು ಸುಳಿವು ಕೊಡದೆ ನನ್ನಪ್ಪ ಮೌನಕ್ಕೆ ಜಾರಿದ್ದ. ಒಟ್ಟಾರೆ ಹೇಳುವುದಾದರೆ, ಹೆತ್ತವರನ್ನು ಮಕ್ಕಳು ಭಾರವಾಗಿ ನೋಡಬಾರದು…ಅವರಿಗಾಗಿ ಸಮಯ ಕಳೆಯಬೇಕು..ಅವರು ತಮ್ಮ ಸುಖಸಂತೋಷವನ್ನು ತ್ಯಾಗ ಮಾಡಿ ನಮ್ಮ ಬದುಕ ಕಟ್ಟಿರುವಾಗ.. ಇಳಿವಯಸ್ಸಿನಲ್ಲಿ ನಾವುಗಳು ಅವರ ಆತ್ಮ ಬಲವಾಗದಿದ್ದರೆ ಏನು ಪ್ರಯೋಜನ?. ಹೆಣ್ಣಿರಲಿ,ಗಂಡಿರಲಿ ಯಾರಾದರೇನು? ಕರ್ತವ್ಯ ಮಾಡಲೇಬೇಕು..ಅವರ ಆಶೀರ್ವಾದ ನಮಗೆ ಶ್ರೀರಕ್ಷೆ..ಆದರೆ ನಾನು ನನ್ನ ಮಕ್ಕಳು ಹೆಂಡತಿಯಂತ ಇದ್ದರೆ ಅವರೆಲ್ಲಿ ಹೋಗಬೇಕು? ಮೌಲ್ಯಗಳನ್ನು ಬಿತ್ತುವುದು ಬರಿ ಶಾಲೆಯ ಕೆಲಸವಲ್ಲ, ಮನೆಯಿಂದ ಬರಬೇಕಾದ ಸಂಸ್ಕಾರ! ತಂದೆ ತಾಯಿ ಇದ್ದ ಮನೆಗೆ ಹೆಣ್ಣು ಕೊಡುದಿಲ್ಲ ಅನ್ನೊ ವಿಷಯ ಒಂದಾದರೆ,ಮಗನಾದವ ತಂದೆಯ ಆಸ್ತಿ ಪಾಸ್ತಿ ಗಾಗಿ ಮಾತ್ರ ಬರುವುದು..ಹತ್ತು ಹಲವಾರೂ ರೂಪಗಳು ಹೆತ್ತವರನ್ನು ಪೀಡಿಸಲು!. ಇದ್ದಾಗ ಅವರಿಗೆ ಹೊಟ್ಟೆ ತುಂಬ ಊಟ ಮಾಡಿಸಿ,ಅವರು ಖುಷಿಯಿಂದ ಇರುವಂತೆ ನೋಡಿ.. ಅಂದರೆ ಅವರು ಇಲ್ಲದಾಗ ಮಾಡುವ ‘ತಿಥಿ’ ಊಟಕ್ಕೆ ಬೆಲೆ ಬಂದಿತು!. ಆಡಂಬರದ ಬದುಕಿಗಿಂತ ಸಾಮರಸ್ಯದ ಜೀವನ ಬಹುಮುಖ್ಯ… ಏನಂತಿರಿ?. ಶಿವಲೀಲಾ ಶಂಕರ್

“ಹೆತ್ತವರು..ಯಾರಿಗೆ ಭಾರ ಯೋಚಿಸಿ!” ವಿಶೇಷ ಲೇಖನ ಶಿವಲೀಲಾ ಶಂಕರ್ Read Post »

ಕಾವ್ಯಯಾನ

ರಾಶೇ ಬೆಂಗಳೂರು ಅವರ ಕವಿತೆ “ನೆನಪುಗಳು”

ಕಾವ್ಯ ಸಂಗಾತಿ ರಾಶೇ ಬೆಂಗಳೂರು “ನೆನಪುಗಳು” ಸೊಗಸು ಸೊಗಸಾದಸಿಹಿ ಸಿಹಿಯಾದಆ ನೆನಪುಗಳುಮಧುರವಾಗಿರಲಿ.. ಜೀವ ಭಾವದಪ್ರೀತಿ ಮರೆಯದಹೊಂಗನಸುಗಳುಸದಾ ನನಗಿರಲಿ.. ಮತ್ತೆ ಬಾರದನೋವು ಗಾಯದಕಹಿ ಘಟನೆಗಳುಮರುಕಳಿಸದಿರಲಿ.. ಕಳೆದುಹೋದಕೆಣಕಿ ದೂರಾದಉರಿ, ದಳ್ಳುರಿಗಳುಬೆಂದು ಬೂದಿಯಾಗಲಿ.. ರಾಶೇ ಬೆಂಗಳೂರು

ರಾಶೇ ಬೆಂಗಳೂರು ಅವರ ಕವಿತೆ “ನೆನಪುಗಳು” Read Post »

You cannot copy content of this page

Scroll to Top