ಎಮ್ಮಾರ್ಕೆ ಕವಿತೆ”ಸದ್ದಿಲ್ಲದ ಬಂದೈತಿ”
ಕಾವ್ಯ ಸಂಗಾತಿ ಎಮ್ಮಾರ್ಕೆ “ಸದ್ದಿಲ್ಲದ ಬಂದೈತಿ” ಸದ್ದಿಲ್ಲದ ಬಂದೈತಿ ಈ ಸಂಕ್ರಾಂತಿತರಲಿ ಪ್ರತಿ ಜೀವಿಗೂ ಸುಖಶಾಂತಿಬನ್ನಿ ನೂಕೋಣ ನಮ್ಮೆಲ್ಲ ನೋವಪ್ರತಿ ಮನದಾಗೂ ಅರಳಲಿ ಹೂವ ಎಳ್ಳು ಬೆಲ್ಲವ ಸವಿಯೋಣ ಕೂಡಿನಾಕು ಒಳ್ಳೊಳ್ಳೆ ಮಾತುಗಳ ಆಡಿಸುಗ್ಗಿ ಮಾಡೋಣ ಹಿರಿ ಹಿರಿ ಹಿಗ್ಗಿಹೊಟ್ಟ್ತುಂಬ ಉಣ್ಣೋಣ ಹಾಲ್ಹುಗ್ಗಿ ನೇಸರ ಬದಲಿ ಮಾಡ್ಯಾನೋ ದಿಕ್ಕಬಲ್ಲವರಾರಯ್ಯ ಆ ದೇವರ ಲೆಕ್ಕಈ ಸಂಕ್ರಾಂತಿ ಕರಿಯ ಕಟ್ಟು ಹಬ್ಬನೋಡಬೇಕ ಮ್ಯಾಲೇರಿಸಿ ಹುಬ್ಬ ಹಳ್ಳಿಯ ಹಾದಿ-ಬೀದೆಲ್ಲ ಸಿಂಗಾರಬಿತ್ತಿ ಬೆಳೆದಾರೋ ಬಗಸಿ ಬಂಗಾರಮನಿ ಮುಂದ ಬಿಡಿಸಿ ರಂಗೋಲಿಮೈ ಮರೆತಾರ ಖುಷಿಯ ಗುಂಗಲ್ಲಿ ಬನ್ನಿ ಕುಣಿಯೋಣ ಮೈ ಚಳಿ ಬಿಟ್ಟಭಗವಂತನ ಮ್ಯಾಲ ನಂಬಿಕಿ ಇಟ್ಟನೋಡಲಾಕತ್ಯಾನು ಕುಂತ ಮ್ಯಾಲಅವಗ ಒಪ್ಪಿಸಿವ್ನಿ ನನ್ನೆರಡು ಸಾಲ ಎಮ್ಮಾರ್ಕೆ
ಎಮ್ಮಾರ್ಕೆ ಕವಿತೆ”ಸದ್ದಿಲ್ಲದ ಬಂದೈತಿ” Read Post »





