ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

“ನಿಶ್ಶಬ್ದರತ್ನಾಕರ” ತೆಲುಗು ಕವಿತೆ- ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್

ಅನುವಾದ ಸಂಗಾತಿ “ನಿಶ್ಶಬ್ದರತ್ನಾಕರ” ತೆಲುಗು ಕವಿತೆ- ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್ ನನ್ನೊಳಗಿನ ನಿಶ್ಶಬ್ದವೇನನಗೆ ಅರ್ಥವಾಗದೆ ಸಾಯುತ್ತಿದೆ;ಇನ್ನು ಎದುರಿಗಿರುವವರ ಮೌನವನುನಾನೇಗೆ ತಾನೇ ಅರಿಯಲಿ? ಹೇಗಾದರೂ ಮಾಡಿ ಈ ಮೌನಕ್ಕೆಒಂದು ಪರಿಹಾರ ಕಂಡುಕೊಳ್ಳಬೇಕು;ಜಗದ ಮಾತುಗಳೆಲ್ಲವೂಬತ್ತಿ ಹೋಗುವ ಮುನ್ನವೇಒಂದು ‘ನಿಶ್ಶಬ್ದರತ್ನಾಕರ’ವ ರೂಪಿಸಿಕೊಳ್ಳಬೇಕು.ನಿಶ್ಶಬ್ದದ ಮರ್ಮಕ್ಕೆ ಸಾವಕಾಶವಾಗಿ ಟೀಕು-ಟಿಪ್ಪಣಿಗಳನ್ನು ಬರೆದಿಡಬೇಕು; ಎದುರಿಗಿರುವವರ ಮೌನವನ್ನಅವರ ಪಾಡಿಗೆ ಬಿಟ್ಟರೆ-ಕನಿಷ್ಠ ಪಕ್ಷ, ಆಗಲಾದರೂನನ್ನ ನಿಶ್ಶಬ್ದ ನನಗೆ ಅರ್ಥವಾಗಬಹುದೇನೋ! ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್

“ನಿಶ್ಶಬ್ದರತ್ನಾಕರ” ತೆಲುಗು ಕವಿತೆ- ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್ Read Post »

ಕಾವ್ಯಯಾನ

“ಅವ್ವನ ಮಡಿಲು”ಡಾ ವಿಜಯಲಕ್ಷ್ಮಿ ಪುಟ್ಟಿ

ಕಾವ್ಯ ಸಂಗಾತಿ ಡಾ ವಿಜಯಲಕ್ಷ್ಮಿ ಪುಟ್ಟಿ “ಅವ್ವನ ಮಡಿಲು” ​ಅವ್ವ, ನೀನೆಷ್ಟು ನೆನಪಾಗುತ್ತಿ ಗೊತ್ತಾ?ಜಗತ್ತಿನ ಭಾರವೆಲ್ಲ ಹೆಗಲ ಮೇಲಿರುವಾಗ,ಬಾಲ್ಯದ ಆ ನಿಶ್ಚಿಂತೆಯ ದಿನಗಳು ಕಾಡುತ್ತಿವೆನಿನ್ನ ಸೆರಗಿನ ನೆರಳಲ್ಲಿ ಹಾಯಾಗಿ ಮಲಗುವ ಆಸೆ ಹೆಚ್ಚುತ್ತಿದೆ. ​ಮನಸಿಗೆ ಬೇಜಾರಾದಾಗಲೆಲ್ಲ,ಸಂತೈಸಲು ಸಾವಿರ ಜನರಿದ್ದರೂಅವರ ಮಾತುಗಳಲ್ಲಿ ಸಿಗದ ಆ ನೆಮ್ಮದಿ,ನಿನ್ನ ಮಡಿಲಲ್ಲಿ ತಲೆ ಇಟ್ಟು ಮಲಗಿದಾಗ ಸಿಗುತ್ತಿತ್ತು. ​ಕಣ್ಣೀರು ಸುರಿಸಿದರೆ ಪದೇ ಪದೇ ಕೇಳದೆ,ತಲೆ ಸವರಿ ಸಮಾಧಾನ ಪಡಿಸುತ್ತಿದ್ದ ಆ ನಿನ್ನ ಕೈಗಳು..ಮತ್ತೆ ಬೇಕೆನಿಸುತ್ತಿದೆ ಅವ್ವ,ನಿನ್ನ ಮಡಿಲಲ್ಲಿ ಮಗುವಾಗಿ ಕರಗುವ ಹಂಬಲವಾಗುತ್ತಿದೆ. ​ಯಾರೇ ಏನೇ ಅಂದರೂ, ಎಷ್ಟೇ ಬೆಳೆದರೂ,ನನಗೆ ನೀನೇ ಸಾಟಿಯಿಲ್ಲದ ದೇವತೆ..ನಿನ್ನ ಮಡಿಲ ಆ ಬೆಚ್ಚಗಿನ ಅಪ್ಪುಗೆಯೇ,ನನ್ನ ಬದುಕಿನ ಅತಿ ದೊಡ್ಡ ಆಸ್ತಿ. ಡಾ ವಿಜಯಲಕ್ಷ್ಮಿ ಪುಟ್ಟಿ

“ಅವ್ವನ ಮಡಿಲು”ಡಾ ವಿಜಯಲಕ್ಷ್ಮಿ ಪುಟ್ಟಿ Read Post »

ಕಾವ್ಯಯಾನ

ಡಾ ಅನ್ನಪೂರ್ಣ ಹಿರೇಮಠ “ನಮ್ಮ ಹಳ್ಳಿ”

ಕಾವ್ಯ ಸಂಗಾತಿ ಡಾ ಅನ್ನಪೂರ್ಣ ಹಿರೇಮಠ “ನಮ್ಮ ಹಳ್ಳಿ” ಊರ ಮುಂದಿನ ತ್ವಾಟ ಐತಿ ಬಾಳ ಮಾಟಬರ್ತೀ ಏನ ನೀ ಊಟಕ್ಕ//ಪ// ನೀ ಬರ್ತೀ ಅಂದ್ರ ಸಜ್ಜಿ ರೊಟ್ಟಿಹಿಟ್ಟಿನ ಚಕ್ಳಿ ಶೇಂಗಾ ಗುರೆಳ್ಳು ಚಟ್ನಿಹುಳಿಬಾಣ ಮಾದೇಲಿ ಮಾಡಿಬುತ್ತಿ ಕಟ್ಟಿಕೊಂಡ ಬರ್ತೀನಿತೋಪ್ ಸೆರಿಗಿನ ಕಡ್ಡಿ ಸೀರಿ ಉಟ್ಕೊಂಡಗಾಡಿ ನತ್ತ ಇಟ್ಕೊಂಡ ಬರ್ತೀನಿ// ಎತ್ತಿಗೆ ಸಿಂಗಾರ ಮಾಡ್ಕೊಂಡಕೊರಳಿಗೆ ಹುರಿಗೆಜ್ಜೆ ಕಟ್ಟಿಬಂಡಿಗೆ ಕೊಲಾರಿ ಕಟ್ಟಿಕೊಂಡಸಜ್ಜ ಮಾಡಿಕೊಂಡ ಬಿಡಹೊತ್ತಾರೆ ಎದ್ದ ಹೋಗೋಣಉಂಡ  ತಿಂದ ಸುತ್ತಾಡಿ ಬರೋಣ // ನನ್ನವ್ವನ ಹೊಲದಾಗ ಏನಿಲ್ಲ ಏನ ಐತಿ  ಕೇಳ್ತಿ ಏನ ನೀ ಕಿವಿಗೊಟ್ಟಎಳೆನೀರ ಬೇಕಾದ ಹಣ್ಣ ಹಂಪಲಗೋದಿ ಕಡ್ಲಿ ಹುಣಸಿ ಮಾವುಉಳ್ಳಾಗಡ್ಡಿ ಮೆಂತ್ಯೆ ಮೂಲಂಗಿನೆರಳಿಗೆ ಕೊಂಡ್ರಾಕ ಅಲ್ಲಲ್ಲಿ ಬೇವಿನ ಗಿಡ// ಬಾಜು ಜುಳು ಜುಳು ಹರಿಯೋ ಹಳ್ಳಮೂಲಿಗೊಂದ ಭಾವಿ ಸುತ್ತೆಲ್ಲಾ ಬೇಲಿಹೋಗಾಕೈತಿ ಎನ್ ಹೆಚ್ ಫೋರ್ ರಸ್ತಾನಮ್ಮೂರಾಗ ಏನ ಕೊಂಡ್ರು ಸಸ್ತಾಎಲ್ಲಾ ಮಸ್ತ್ ಮಸ್ತ್ ಹಂಗಂತಬಾಳ ಸುತ್ತಿ ಆಗಬ್ಯಾಡ ನೀ ಸುಸ್ತ// ಗಾಣಿಗ್ಯಾರ ಹೊಲ್ದಾಗ ಸಿಹಿ ಕಬ್ಬಹಳಬರ ಹೊಲ್ದಾಗ ಪ್ಯಾರಲ ಹಣ್ಣಮತ್ತಿಕೊಪ್ಪದಾರಲ್ಲೇ ಸವಿಜೇನ ಐತಿಸಾವಕಾರ ಹೊಲ್ದಾಗ ನೋರೊಂದ ದಿನಸಎಲ್ಲಿಲ್ಲ ನೋಡ ನಮ್ಮ ಹಳ್ಳಿ ಅಂತ ಹಳ್ಳಿನಮ್ಮಣ್ಣನ ಪಾಲಿಗೆ ಇದ ಕನ್ನಡದ ಕಾಶ್ಮೀರ// ಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ “ನಮ್ಮ ಹಳ್ಳಿ” Read Post »

You cannot copy content of this page

Scroll to Top