ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಬಂದಿತೋ ಬಂದಿತು ಮೊದಲ ಹಬ್ಬ
ಸರಿಸಿ ಎಲ್ಲರ ಮನದ ಮಬ್ಬ
ಸವಿಯಲು ಕರೆಯಿತು ಸಿಹಿ ಕಬ್ಬ
ಒಟ್ಟಿಗೆ ಆಡೋಣ ಎತ್ತರದ ದಿಬ್ಬ

ದ್ವೇಷದ ಯೋಚನೆ ಎಂದಿಗೂ ಸಲ್ಲ
ಒಟ್ಟಿಗೆ ಸವಿಯೋಣ ಎಳ್ಳು ಬೆಲ್ಲ
ಸ್ನೇಹ ಸಂಪಾದಿಸೋಣ ಮೆಲ್ಲ ಮೆಲ್ಲ
ಪ್ರೀತಿಯಲಿ ಸಿಹಿ ಮಾತಾಡೋಣ ಎಲ್ಲಾ

ಉತ್ತರಾಯಣದ ಪುಣ್ಯಪರ್ವ ಕಾಲವಿದು
ಮಕರ ಸಂಕ್ರಮಣದ ಜ್ಯೋತಿಯಿದು.
ಸೂರ್ಯದೇವನ ಕರುಣೆ ನಮಗೆಂದು
ಮನುಕುಲದ ಉನ್ನತಿಗೆ ಸಹಕರಿಸೆಂದು

ಮಾನವರಲ್ಲಿ ತುಂಬಿರಲಿ ಪ್ರೀತಿ ಶಾಂತಿ
ಮನದಿಂದ ದೂರಗಲಿ ಕಲ್ಮಶದ ಬ್ರಾಂತಿ
ಸಾದಿಸಲು ಬೇಕಿದೆ ಸ್ವಲ್ಪ ಕ್ರಾಂತಿ
ಅದಕಾಗಿ ಬಂದಿಹುದು ಮಕರ ಸಂ…..ಕ್ರಾಂತಿ.

ದಬ್ಬಾಳಿಕೆ ಕಂಡರೆ ವಿರೋಧವಿರಲಿ
ಲಂಚದ ಅಧಿಕಾರಕ್ಕೆ ತಲೆ ಬಾಗದಿರಲಿ
ಪ್ರತಿ ಹೆಜ್ಜೆಯಲಿ ನಮ್ಮತನದ ದೃಢತನವಿರಲಿ
ದಿಟ್ಟತನದ ಬದುಕು ಎಂದೆಂದೂ ಸಾಗುತಿರಲಿ.


About The Author

Leave a Reply

You cannot copy content of this page

Scroll to Top