ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಪರವಿನಬಾನು ಯಲಿಗಾರ ಅವರ ಕವಿತೆ”ಪ್ರೀತಿ”

ಕಾವ್ಯ ಸಂಗಾತಿ ಪರವಿನಬಾನು ಯಲಿಗಾರ “ಪ್ರೀತಿ” ಪ್ರೀತಿ ಎಂದರೆ ಅಂಬರ ,ಅಲ್ಲಿ ಮೇಘದ ತಂಪು ಸಿಂಚನ ,ಜೊತೆಗೆ ಗುಡುಗು , ಕೋಲ್ಮಿಂಚಿನಅಬ್ಬರವು ಇದೆ….. ಪ್ರೀತಿ ಎಂದರೆ ಇಳೆ ,ಕರುಣೆಯ ಹಸಿರು ಇದೆ ,ಬದುಕು ಕಸಿಯುವ ಜ್ವಾಲೆಯಕಂಪನವೂ ಇದೆ….. ಪ್ರೀತಿ ಎಂದರೆ ಸಾಗರ ,ವಡಲಿನಲ್ಲಿ ಮುತ್ತು ಮಾಣಿಕ್ಯ ಇವೆ ,ರಕ್ಕಸ ರೂಪದ ಅಲೆಗಳಆರ್ಭಟದ ಸುನಾಮಿ ಇದೆ….. ಪ್ರೀತಿ ಎಂದರೆ  ಗಾಳಿ ,ಉಸಿರು ಕಟ್ಟುವ ಬಿರುಗಾಳಿ ಇದೆ,ಜೀವ ಕೊಡುವ ಪ್ರಾಣವಾಯುವು ಹೌದು  ….. ಪ್ರೀತಿ ಎಂದರೆ  ಬೆಂಕಿ ,ಬೆಳಗುವ ನಂದಾ ದೀಪವು ಆಗುವುದು,ಸರ್ವನಾಶಕ್ಕೆ ಚಾಚುವಕೆನ್ನಾಲಿಗೆಯೂ ಇದೆ …. ಪರವಿನಬಾನು ಯಲಿಗಾರ.

ಪರವಿನಬಾನು ಯಲಿಗಾರ ಅವರ ಕವಿತೆ”ಪ್ರೀತಿ” Read Post »

ಇತರೆ, ಶಿಕ್ಷಣ

“ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ನಾಗರತ್ನ. ಹೆಚ್ ಗಂಗಾವತಿ

ವಿದ್ಯಾರ್ಥಿ ಸಂಗಾತಿ ನಾಗರತ್ನ. ಹೆಚ್ ಗಂಗಾವತಿ “ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ಪರೀಕ್ಷೆಗಳು ವಿದ್ಯಾರ್ಥಿಗಳ ಜ್ಞಾನ ಕೌಶಲ್ಯ ಮತ್ತು ವಿಷಯದ ಆಳವಾದ ತಿಳುವಳಿಕೆಯನ್ನು ಅಳೆಯುವ ಪ್ರಮುಖ ಶೈಕ್ಷಣಿಕ ಮೌಲ್ಯಮಾಪನ ಸಾಧನವಾಗಿದೆ ಇವು ಶಿಸ್ತು ,ಸಮಯ, ನಿರ್ವಹಣೆ ಮತ್ತು ಕಠಿಣ ಪರಿಶ್ರಮವನ್ನು ಉತ್ತೇಜಿಸುತ್ತವೆ. ವೈಯಕ್ತಿಕ ಬೆಳವಣಿಗೆಗೆ ಮತ್ತು ಮುಂದಿನ ಹಂತದ ಶಿಕ್ಷಣದ ಅಗತ್ಯವಾದ ತಾರ್ಕಿಕ ಚಿಂತನೆಗಳನ್ನು ಬೆಳೆಸುವಲ್ಲಿ ಸಹಾಯ ಮಾಡುತ್ತವೆ ಅಷ್ಟೇ ಅಲ್ಲದೆ ಇದು ಕಲಿಕೆಯ ಪ್ರಕ್ರಿಯೆ ಪ್ರಮುಖ ಭಾಗವಾಗಿದೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಸಾಧನವಾಗಿದೆ. ಪರೀಕ್ಷೆಗಳು ವಿದ್ಯಾರ್ಥಿ ಒಂದು ನಿರ್ದಿಷ್ಟ ಅವಧಿಯಲ್ಲಿ ಎಷ್ಟು ವಿಷಯವನ್ನು ಕಲಿತಿದ್ದಾನೆ ಮತ್ತು ವಿಷಯವನ್ನು ಎಷ್ಟರಮಟ್ಟಿಗೆ ಅರ್ಥಮಾಡಿಕೊಂಡಿದ್ದಾನೆ ಎಂಬುದನ್ನು ನಿರ್ಣಯಿಸುವುದು ಹಾಗೂ ಕೇವಲ ಅಂಕ ಗಳಿಗಾಗಿ ಅಲ್ಲ ಬದಲಿಗೆ ವಿಷಯದ ಮೇಲಿನ ಹಿಡಿತವನ್ನು ಪರೀಕ್ಷಿಸುತ್ತದೆ. ಹಾಗೂ ಪರೀಕ್ಷೆಗಳು ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುವುದಷ್ಟೇ ಅಲ್ಲದೆ ಅವನ ಜ್ಞಾನವನ್ನು ಅಳೆಯುವಂತಹ ಒಂದು ಸಾಧನವು ಕೂಡ ಹೌದು. ಮತ್ತು ವಿದ್ಯಾರ್ಥಿಗೆ ಸಮಯವನ್ನು ಹಾಗೂ ಬರವಣಿಗೆ ಕೌಶಲ್ಯವನ್ನು ಯಾವ ರೀತಿ ಉಪಯೋಗ ಸುವಂತಹ ಕಲೆಯನ್ನ ಬಳಸುತ್ತದೆ ಮತ್ತು ಎಷ್ಟೇ ಸವಾಲುಗಳು ಇದ್ದರೂ ಸಹ ಪರೀಕ್ಷೆಯಲ್ಲಿ ಉತ್ತಮ ಬರೆಯಬೇಕು ಎಂಬ ಛಲವನ್ನ ಮೂಡಿಸುತ್ತದೆ. ಹಾಗೂ ವಿಷಯದ ಕಲ್ಪನೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ . ವೈಯಕ್ತಿಕ ಬೆಳವಣಿಗೆಗೆ ಮತ್ತು ಮುಂದಿನ ಹಂತದ ಶಿಕ್ಷಣಕ್ಕೆ ಅಗತ್ಯವಾದ ಜ್ಞಾನವನ್ನು ಬೆಳೆಸುತ್ತದೆ. ಕಲಿಕೆಯ ಗುಣಮಟ್ಟ ಮತ್ತು ವಿಷಯದ ಜ್ಞಾನದ ಮಟ್ಟವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪರೀಕ್ಷೆಗಳು ಸಹಾಯ ಮಾಡುತ್ತವೆ. ಓದಲು ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದಷ್ಟೇ ಅಲ್ಲದೆ ಪ್ರೇರಣೆಯನ್ನು ಒದಗಿಸುತ್ತದೆ ಪರೀಕ್ಷೆಯು ಕೇವಲ ಅಂಕಗಳಿಗಾಗಿ ಅಲ್ಲ ಬದಲಾಗಿ ಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ. ಹಾಗೂ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವುದರಿಂದ ತಪ್ಪದೇ ಸಮಯಕ್ಕೆ ಸರಿಯಾಗಿ ಹಾಜರಾಗುವುದು ಅಷ್ಟೇ ಮುಖ್ಯವಾಗಿರುತ್ತದೆ ಮತ್ತು ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ ಹಾಗಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ ಹಾಗೂ ಪರೀಕ್ಷೆಗಳು ವಿದ್ಯಾರ್ಥಿಯ ಜೀವನದಲ್ಲಿ ಮಹತ್ವವಾದಗಳು *ಉದಾಹರಣೆಗೆ*ಶಿಕ್ಷಣ ಎಷ್ಟು ಮುಖ್ಯ ಎನ್ನುವುದನ್ನು ನೋಡುವುದಾದರೆ ಹೀಗೆ ಒಂದು ಊರಿನಲ್ಲಿ ಗಿರೀಶ ಮತ್ತು ಹರೀಶ್ ಎನ್ನುವ ಇಬ್ಬರು ಗೆಳೆಯರಿದ್ದರು.ಇಬ್ಬರೂ ಓದಿದಲ್ಲಿ ಅಷ್ಟೇ ಜಾಣನಿದ್ದರೂ ಕೂಡ ಗಿರೀಶನಿಗೆ ಅನಾರೋಗ್ಯದ ಕಾರಣದಿಂದ ಪರೀಕ್ಷೆಯಲ್ಲಿ ಹಾಜರಾಗದೆ ಹಿಂದುಳಿದ ತೊಡಗಿದ ಆಗ ಹರೀಶನು ಆತನಿಗೆ ಉತ್ತಮ ಅಂಕ ಗಳಿಸಲು ತನಗೆ ತಿಳಿದಂತಹ ಎಲ್ಲಾ ಸಲಹೆಗಳನ್ನು ನಿತ್ಯವೂ ಹೇಳುತ್ತಾ ಬಂದನು ಆಗ ಆತನು ಕೂಡ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಮತ್ತು ಅವರಿಬ್ಬರು ಕೂಡಿ ತಮ್ಮ ಗ್ರಾಮದಲ್ಲಿ ಇರುವಂತಹ ಅನಕ್ಷರಸ್ಥರನ್ನು ಸೇರಿಸಿನಿತ್ಯವೂ ಸಂಜೆ ಸಮಯದಲ್ಲಿ ಅವರುಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಾ ಬಂದರು ಆಗ ಊರಿಗೆ ಊರೇ ಸಾಕ್ಷರತಾ ಗ್ರಾಮವಾಗಿ ಪರಿವರ್ತನೆಗೊಂಡಿತು.ಅದಕ್ಕೆ ಹೇಳುವುದು *ವಿದ್ಯೆ ಕದಿಯಲಾರದ ಸಂಪತ್ತು*ಹೀಗೆ ಪ್ರತಿಯೊಬ್ಬರ ಜೀವನದಲ್ಲಿ ಕೂಡ ಪರೀಕ್ಷೆಗಳು ಅವರ ಜೀವನವನ್ನೇ ಬದಲಾಯಿಸುವಂತಹ ಮಹತ್ವದ ಪಾತ್ರವನ್ನು ವಹಿಸುತ್ತವೆ ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯಕ್ಕಾಗಿ ಕೇವಲ ಅಂಕಗಳಿಗಾಗಿ ಅಷ್ಟೇ ಅಲ್ಲದೆ ಜ್ಞಾನಕ್ಕಾಗಿ ಓದುವುದು ಅಷ್ಟೇ ಮುಖ್ಯ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಪರೀಕ್ಷೆಗಳು ಪ್ರಮುಖ ಸಾಧನಗಳಾಗಿವೆ. ನಾಗರತ್ನ. ಹೆಚ್ ಗಂಗಾವತಿ

“ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ನಾಗರತ್ನ. ಹೆಚ್ ಗಂಗಾವತಿ Read Post »

ಅಂಕಣ ಸಂಗಾತಿ, ವೀಣಾ-ವಾಣಿ

ಅಂಕಣ ಸಂಗಾತಿ ವೀಣಾ ವಾಣಿ ವೀಣಾ ಹೇಮಂತ್‌ ಗೌಡ ಪಾಟೀಲ್ ಬದುಕಿನ ಪಯಣ ಬದುಕು ಒಂದು ರೀತಿಯ ರೈಲು ಗಾಡಿಯ ಪಯಣ ಇದ್ದಂತೆ. ರೈಲುಗಾಡಿಯಲ್ಲಿ ಹತ್ತಿ ಕುಳಿತುಕೊಳ್ಳುವ  ನಾವುಗಳು ಮಾರ್ಗ ಮಧ್ಯದಲ್ಲಿ ಹತ್ತುವ-ಇಳಿಯುವ, ನೂರಾರು ಜನರೊಂದಿಗೆ ಸ್ನೇಹ ಸಂಬಂಧಗಳನ್ನು ಬೆಳೆಸುತ್ತೇವೆ ಅವರವರ ನಿಲ್ದಾಣ ಬಂದಾಗ ಅವರವರು ಇಳಿದು ಹೋಗುತ್ತಾರೆ….. ಅಂತೆಯೇ ನಾವು ಕೂಡನಮ್ಮ ಬದುಕಿನ ಪಯಣ ಕೂಡ ಹಾಗೆಯೇ…. ಆದರೆ ಈ ಪಯಣ ಅನಿರೀಕ್ಷಿತ ಸಂತೆಗಳ ಆಗರ.ಇದಮಿತ್ಥಂ ಎಂದು ಹೇಳುವ ಹಾಗೆಯೇ ಇಲ್ಲ. ನಮ್ಮ ಮುಂದಿನ ನಿಲ್ದಾಣ ಯಾವುದು ಎಂಬುದು ನಮಗೆ ಗೊತ್ತಿರುವುದಿಲ್ಲ.ತಂದೆ ತಾಯಿಯ ಕೈ ಹಿಡಿದು ಬದುಕಿನ ಪಯಣವನ್ನು ಆರಂಭಿಸುವ ನಾವು ನಮ್ಮ ಜೀವಿತದ ಕೊನೆಯವರೆಗೂ ಅವರು ನಮ್ಮೊಂದಿಗೆ ಇರುತ್ತಾರೆ ಎಂಬ ಭರವಸೆಯ ಜೊತೆಗೆ ಜೀವಿಸುತ್ತೇವೆ…. ಆದರೆ ತಮ್ಮ ಪ್ರಯಾಣ ಪೂರೈಸುವ ಅವರು ಯಾವ ಘಳಿಗೆ ಯಲ್ಲಾದರೂ ನಮ್ಮನ್ನು ಬಿಟ್ಟು ಹೊರಟು ಹೋಗಬಹುದು ಹಾಗೂ ಅವರಿಲ್ಲದೆ ನಾವು ನಮ್ಮ ಬದುಕಿನ ಪಯಣವನ್ನು ಮುಂದುವರಿಸಬೇಕು ಎಂಬ ನಿಷ್ಟುರ ಸತ್ಯದ ಅರಿವಿದ್ದು ಕೂಡ ಅರಿವಿಲ್ಲದ ರೀತಿಯಲ್ಲಿ ನಾವು ಬಾಳುತ್ತೇವೆ.ಆದರೂ ಕೂಡ ಯಾವುದೇ ಸೀಟುಗಳು ಖಾಲಿ ಉಳಿಯುವುದಿಲ್ಲ. ನಮಗೆ ಸ್ವಲ್ಪ ಹಿಂದು ಮುಂದಾಗಿ ನಮ್ಮ ಒಡಹುಟ್ಟಿದವರು, ಸ್ನೇಹಿತರು, ಸಂಬಂಧಿಗಳು ಹಾಗೂ ನಾವು ಪ್ರೀತಿಸುವ ಬದುಕಿನಲ್ಲಿ ನಮ್ಮೊಂದಿಗೆ ಇರಲಿ ಎಂದು ಬಯಸುವ ಹತ್ತು ಹಲವು ಸಂಗತಿಗಳು ನಮ್ಮೊಂದಿಗೆ ಬದುಕಿನ ಪಯಣದ ಸ್ಥಾನವನ್ನು ಆಕ್ರಮಿಸಿಕೊಳ್ಳುತ್ತವೆ.  ತಮ್ಮ ತಮ್ಮ ಪಯಣ ಮುಗಿಸಿ ಕೆಲವರು ನಿರೀಕ್ಷಿತ ಸಮಯಕ್ಕೆ ಇಳಿದು ಹೊರಟು ಹೋದರೆ ಮತ್ತೆ ಕೆಲವರು ನಮ್ಮ ಬದುಕಿನ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುವ ನಮ್ಮಲ್ಲಿ ಖಾಲಿತನವನ್ನುಹುಟ್ಟು ಹಾಕುವ ರೀತಿಯಲ್ಲಿ ಕಣ್ಮರೆಯಾಗುತ್ತಾರೆ…. ಮತ್ತೆ ಕೆಲವರ ನಿರ್ಗಮನ ಅದೆಷ್ಟು ಅನಿರೀಕ್ಷಿತವಾಗುತ್ತದೆ೦ದರೆ ಅದನ್ನು ಅರಗಿಸಿಕೊಳ್ಳುವುದು ಬಹಳವೇ ಕಷ್ಟ .ಈ ಪಯಣವು ಸುಖ ದುಃಖಗಳ ಏರಿಳಿವುಗಳ ಮೇಲೆ ತೂಗುಯ್ಯಾಲೆಯಂತೆ ಭಾಸವಾಗುತ್ತದೆ. ಕೆಲ ಭೇಟಿಗಳು ಮನಸ್ಸನ್ನು ಪ್ರಫುಲ್ಲಗೊಳಿಸಬಹುದು ಎಷ್ಟೋ ಬಾರಿ ಭರವಸೆಗಳು ಹುಸಿಯಾಗಬಹುದು…. ವಿದಾಯಗಳು ಎದೆಯ ಭಾರವನ್ನು ಹೆಚ್ಚಿಸಬಹುದು ಕೆಲವರ ಜೊತೆಯು ಸಂತಸವನ್ನು ಉಂಟುಮಾಡಿದರೆ ಮತ್ತೆ ಕೆಲವರ ಸಾಂಗತ್ಯ ರೇಜಿಗೆಯನ್ನುಂಟು ಮಾಡಬಹುದುಬದುಕಿನಲ್ಲಿ ಪಯಣದಲ್ಲಿ ಚೆನ್ನಾಗಿ ಬದುಕುವುದು ಎಂದರೆ ನಮ್ಮ ಜೊತೆಗಿರುವ ಸಹ ಪ್ರಯಾಣಿಕರ ಕುರಿತು ಒಳ್ಳೆಯ ಅರಿವನ್ನು ಹೊಂದಿರಬೇಕು. ಉತ್ತಮ ಸಂವಹನವನ್ನು ಹೊಂದಿರಬೇಕು…. ಅದರಲ್ಲೂ ಮುಖ್ಯವಾಗಿ ನಮ್ಮ ಬದುಕಿನ ಹೊರೆಗಳನ್ನು ಹಂಚಿಕೊಂಡಿರುವವರೊಂದಿಗೆ ಅತ್ಯಂತ ಆತ್ಮೀಯವಾದ  ಸಂಬಂಧವನ್ನು ಮುಂದುವರಿಸಬೇಕು  ಜೀವನದ ಪಯಣದಲ್ಲಿ ನಮ್ಮ ಪಯಣದ ಆರಂಭದ ಸಮಯದಲ್ಲಿ ನಮಗೆ ನೀಡಲಾದ ಟಿಕೇಟಿನಲ್ಲಿ ಆರಂಭಿಸಿದ ಸಮಯ ದಿನ, ತಿಂಗಳು ವಾರ ಮತ್ತು ವರ್ಷಗಳನ್ನು ನಮೂದಿಸುತ್ತದೆ ನಿಜ ಆದರೆ ಯಾವಾಗ ನಾವು ಜೀವನದ ಪಯಣ ಮುಗಿಸಿ ಇಳಿಯಬಹುದು ಎಂಬ ಸಣ್ಣ ಸುಳಿವು ಕೂಡ ನಮಗೆ ಇರುವುದಿಲ್ಲ. ನಮ್ಮ ಪಯಣದ ಹಾದಿಯನ್ನು ನಾವು ಹೇಗೆ ಇಟ್ಟುಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಬದುಕಿನ ಗುಣಮಟ್ಟವನ್ನು ಅಳೆಯಬಹುದು.. ನಾವು ದೇವರನ್ನು ಪ್ರೀತಿಸಬೇಕು ಅತ್ಯಂತ ಸರಳವಾಗಿ ಕ್ಷಮಿಸಬೇಕು ಜೊತೆಗೆ ನಮ್ಮ ನೈಜತೆಯನ್ನು ಹೊರ ಹಾಕಬೇಕು.ಅಂತಿಮ ಪಯಣದ ಸಮಯದಲ್ಲಿ ನಮಗೆ ದೊರೆಯುವ ಸಂಜ್ಞೆಗಳನ್ನು ಗುರುತಿಸಿ ಮೆಲ್ಲಗೆ ಹೊರಟು ಬಿಡಬೇಕು. ಮರದ ಗೊಂಬೆಯನ್ನು ಆಶ್ರಯಿಸಿದ ಹಕ್ಕಿ ಒಂದೇ ಏಟಿಗೆ ರೆಕ್ಕೆಗಳನ್ನು ಅಗಲಿಸಿ ಹಾರಿ ಹೋಗುವಂತೆ ನಾವು ಕೂಡ ಬದುಕಿನ ಈ ಪಯಣವನ್ನು ಮುಗಿಸಿ ಹೊರಟು ಬಿಡಬೇಕು.. ಉಳಿದವರ ಬದುಕಿನ ಅತ್ಯಂತ ಸುಂದರ ನೆನಪಾಗಿ ನಾವು ಉಳಿದುಕೊಳ್ಳಬೇಕೆ ಹೊರತು ಅವರ ಚಿತ್ತವನ್ನು ಕಲಕಿ ಮಾನಸಿಕ ಸ್ವಾಸ್ಥ್ಯವನ್ನು ಕದಡುವ, ನಮ್ಮ ನೆನಪು ಅವರಲ್ಲಿ ಬೇಸರ ಹುಟ್ಟಿಸುವ ರೀತಿಯಲ್ಲಿ ಬದುಕಬಾರದು.ಬದುಕಿನ ಪ್ರಯಾಣದಲ್ಲಿ ಸಂತೋಷ, ತೃಪ್ತಿ,ನೆಮ್ಮದಿ ಇಂತಹ ಹಗುರವಾದ ಭಾವಗಳನ್ನು ನಮ್ಮ ಲಗೇಜ್ ಗಳನ್ನಾಗಿ ಕೊಯ್ಯಬೇಕೇ ಹೊರತು ಮನಸ್ಸನ್ನು ಭಾರವಾಗಿಸುವ ನೋವು ನಿರಾಶೆ ಅತೃಪ್ತಿ ಆ ಸಂತೋಷಗಳೆಂಬ ಭಾರವಾದ ವಸ್ತುಗಳನ್ನು ಅಲ್ಲಲ್ಲಿಯೇ ಬಿಟ್ಟು ಮುಂದೆ ಹೊರಡಬೇಕು.ಲೆಸ್ ಲಗೇಜ್ ಮೋರ್ ಕಂಫರ್ಟ್ ಎಂಬ ಮಾತು ಬದುಕಿನ ಪಯಣಕ್ಕೂ ಸೂಕ್ತವಾಗಿದೆ.ನಮ್ಮ ಬದುಕಿನಲ್ಲಿ ನಾವು ಬಹು ದೂರ ಸಾಗಬೇಕಾದ ಪರಿಸ್ಥಿತಿಯಲ್ಲಿ ನಮ್ಮೊಂದಿಗೆ ಹೆತ್ತವರು, ಒಡಹುಟ್ಟಿದವರು, ಸಂಗಾತಿ, ಮಕ್ಕಳುಸಂಬಂಧಿಗಳು ಸ್ನೇಹಿತರು ಜೊತೆ ಇರಬೇಕು. ನಮ್ಮ ಹೆಗಲ ಮೇಲೆ ನಾವು ಮಲಗಲು ಸಾಧ್ಯವಿಲ್ಲ…. ನಮ್ಮ ಮನದ ಭಾವನೆಗಳನ್ನು ಹಂಚಿಕೊಂಡು ಹಗುರವಾಗಲು ನಮಗೆ ಬೇರೊಬ್ಬರ ಹೆಗಲು ಬೇಕೇ ಬೇಕು.ನಮ್ಮ ಬದುಕಿನ ಉದ್ದೇಶ ಮತ್ತು ಗುರಿಗಳು ಸ್ಪಷ್ಟವಾಗಿದ್ದು ತಲುಪುವ ಗಮ್ಯದ ಅರಿವು ನಮಗಿರಬೇಕು….. ಅಂದರೆ ನಮ್ಮ ಪಯಣ ಅತ್ಯಂತಸುರಕ್ಷಿತ ಹಾಗೂ ತೃಪ್ತಿದಾಯಕವಾಗಿರುತ್ತದೆ. ಏನಂತೀರಾ ಸ್ನೇಹಿತರೇ?….. ನೀವು ಕೂಡ ನಿಮ್ಮ ಬದುಕಿನ ಪಯಣವನ್ನು ಅತ್ಯಂತ ಸರಳ ಹಾಗೂ ಸುಂದರವಾದ ಬದುಕಿನ ಪಯಣ ನಿಮ್ಮದಾಗಿರಲಿ ವೀಣಾ ಹೇಮಂತ್ ಗೌಡ ಪಾಟೀಲ್ 

Read Post »

ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ”ನೀಲಿ ಆಕಾಶ – ನೀನೇ ನನ್ನ ಹಾಡು”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ನೀಲಿ ಆಕಾಶ – ನೀನೇ ನನ್ನ ಹಾಡು” ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯ ಹೇಳಿದೆನಿನ್ನ ನನ್ನ ಪ್ರೀತಿಯ ಹಾಡು. ನಿನ್ನ ಕಣ್ಣೊಳಗೆನೋಡುವ ಕನಸು,ನನ್ನ ಉಸಿರಲ್ಲೇನಿನ್ನ ಸುಗಂಧದ ಸೊಗಸು. ಎದೆ ಬಡಿತ ಎನ್ನುವಹೃದಯದ ಸದ್ದು,ಪ್ರತಿ ಕ್ಷಣ ಹೇಳುತ್ತದೆಪ್ರೀತಿ ಒಂದು ಮದ್ದು. ಓ ನಲ್ಲೆ, ನೀನುಆ ತೀರದ ನಕ್ಷತ್ರ,ನಾನು ಈ ತೀರದಒಂಟಿ ಯಾತ್ರಿಕ.ನಡುವೆ ನದಿ ಹರಿಯುತ್ತದೆಜುಳು ಜುಳು ಧ್ವನಿ,ನಿನ್ನ ನೆನಪಲ್ಲಿನಿಂತುಹೋಗುತ್ತದೆ ನನ್ನ ಪಯಣ. ಸುಪ್ರಿಯಾ, ನಾನುದೂರದಲ್ಲಿದ್ದರೂ,ನಿನ್ನ ಧ್ವನಿಯಲ್ಲೇಹತ್ತಿರವಾಗುತ್ತೇನೆ ನೋಡು.ನೀನು “ಬಾ ನಲ್ಲ” ಎಂದರೆಹೃದಯ ನಗುತ್ತದೆ,ಕೇಳಿಸದ ಮಾತನ್ನೂಮನಸ್ಸು ಅರಿತುಕೊಳ್ಳುತ್ತದೆ. ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯದಲ್ಲಿನೀನೇ ಆ ಪ್ರೀತಿಯ ಹಾಡು. ನೀಲಿ ಆಕಾಶದ ಮೋಡಎಲ್ಲಿ ಮಳೆಯಾಗುತ್ತವೋ,ನನ್ನ ಕಣ್ಣಿನ ಮೋಡನಿನ್ನ ನೆನಪಲ್ಲೇ ಕರಗುತ್ತವೋ.ಸ್ವಪ್ನದಲ್ಲಿ ಬಂದವನೇಮೌನದ ಸಂಗೀತ,ನಿನ್ನ ಸ್ಪರ್ಶವೇಮನಸ್ಸಿಗೆ ಸಿಹಿ ಸಂಪ್ರಿತ ಕೋಗಿಲೆ ಕೂಗುವಾಗನಿನ್ನ ನೆನಪು,ನಿನ್ನ ನಗುವೇನನ್ನ ಬದುಕಿನ ಹೊನಪು ನಿನ್ನ ಮಾತು ಕೇಳಿದರೆಮರೆತುಹೋಗುತ್ತದೆ ನೋವು,ನಿನ್ನ ಪ್ರೀತಿ ಸಾಕುನನ್ನ ಜೀವನದ ಔಷಧಿ ಅದು. ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯದಲ್ಲಿನೀನೇ ಆ ಪ್ರೀತಿಯ ಹಾಡು. ಸಮುದ್ರದ ಮುಂದೆ ನಿಂತುಅಲೆಗಳನ್ನು ನೋಡಿದರೆ,ನಿನ್ನ ಭಾವನೆಗಳುಅಲೆ ಅಲೆಯಾಗಿ ಬರುವುದು ನನಗೆ. ದೂರದಲ್ಲಿದ್ದರೂ ನೀನುಹತ್ತಿರವೇ ಕಾಣಿಸುವೆ,ನನ್ನ ಮನಸ್ಸಿನೊಳಗೆಪ್ರತಿ ಕ್ಷಣ ನಗಿಸುವೆ. ಮರೆಯಲು ನೋಡಿದರೂಮರೆಯಲಾಗದ ಕಮಾನು,ಬಣ್ಣದ ಚಿಟ್ಟೆಗಳಂತೆಮನಸಲ್ಲಿ ಹಾರಾಡು ನೀನು. ಕಾಲ ತಿರುಗಿದರೂಪ್ರೀತಿ ತಿರುಗದು,ಉಸಿರು ಇರುವವರೆಗೆಈ ಬಾಂಧವ್ಯ ಮುರಿಯದು.ಮತ್ತೊಂದು ಜನ್ಮ ಬಂದರೂಮತ್ತೆ ನೀನೇ ಸಾಕು,ಪ್ರೀತಿಯ ಹಾಡಾಗಿಯೇನಮ್ಮ ಕಥೆ ಇರಬೇಕು. ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯದಲ್ಲಿನೀನೇ ನನ್ನ ಜೀವದ ಹಾಡು. ಕೊನೆಯ ಉಸಿರಿರುವವರೆಗೆಹೇಳುತ್ತೇನೆ ನಿನ್ನ ಹೆಸರು,ನೀನು ಎಲ್ಲಿದ್ದರೂನನ್ನ ಪ್ರೀತಿ ನಿನ್ನತ್ತಲೇ ಹರಿದು ಹೋಗು. ಡಾ. ಹೆಚ್. ನಟರಾಜ್ ಆರ್ಯ.

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ”ನೀಲಿ ಆಕಾಶ – ನೀನೇ ನನ್ನ ಹಾಡು” Read Post »

ಕಾವ್ಯಯಾನ

ಕಲ್ಪನಾ ಎಸ್‌ ಪಾಟೀಲ್‌ ಅವರ ಕವಿತೆ “ನೀ ನನಗೆ ನಾ ನಿನಗೆ”

ಕಾವ್ಯ ಸಂಗಾತಿ ಕಲ್ಪನಾ ಎಸ್‌ ಪಾಟೀಲ್‌ ಅವರ ಕವಿತೆ ನೀ ನನಗೆ ನಾ ನಿನಗೆ” ದತ್ತ ಪದ :- ಪ್ರಿಯ ನೀ ನನಗಾಗಿ..ಶೀರ್ಷಿಕೆ:- ನೀ ನನಗೆ ನಾ ನಿನಗೆ ನಿನಗೆಂದೆ ಕಾಯ್ದು ಕುಳಿತೆ ಆ ಇರುಳಲಿಮಾಮರವು ಜೊತೆಯಾಗಿ ಮೌನದಲಿಬಂದೆ ಬರುವನೆಂಬ ಭರವಸೆ ಮನದಲಿನೀ ಕೊಟ್ಟ ಮಾತು ನೆನೆದು ನಗುತಲಿ ಪ್ರಿಯ ನೀ ನನಗಾಗಿ ಮೊಳ ಮಲ್ಲಿಗೆಯತಂದೆ ತರವೆ ಎನ್ನುವ ಆಸೆಯತರದೆ ಇದ್ದರೆ ತೋರೆ ನಾ ನಿರಾಸೆಯಬಲ್ಲೆ ನಾ ನಿನ್ನ ಅಂತಃಕರಣದ ಪ್ರೀತಿಯ ತೇಲಿದೆ ಮನ ನಿನ್ನ ನಾಮವ ಆಲಿಸೆಹಾರಿದೆ ಹಕ್ಕಿಯಾಗಿ ಆಗಸ ಚುಂಬಿಸೆಬಲ್ಲೆ ಏನು ಮಿಡಿವ ಹೃದಯದ ಒತ್ತಾಸೆಆಗುವಾಸೆ ನಿನ್ನ ಮಡಿಲೊಳು ನಾ ನಿನ್ನ ಕೂಸೆ ನೀ ನನಗೆ ನಾ ನಿನಗೆ ಜೊತೆಯಾಗುವದುಂಬಿಯಂತಾಗಿ ಮಕರಂದ ಹೀರುವಹೊಸೆದು ಬೆಸೆಯೋಣ ಮಧುರ ಬಂಧವಬೆರೆಯೋಣ ಮರೆತು ಈ ಜಗವ. ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್‌ ಪಾಟೀಲ್‌ ಅವರ ಕವಿತೆ “ನೀ ನನಗೆ ನಾ ನಿನಗೆ” Read Post »

ಕಾವ್ಯಯಾನ, ಗಝಲ್

ಜಯಂತಿ ಸುನಿಲ್ ಅವರ ಗಜಲ್

ಕಾವ್ಯ ಸಂಗಾತಿ ಜಯಂತಿ ಸುನಿಲ್ ಗಜಲ್ ಹೂವೆಂದು ಕೈಗೆತ್ತಿಕೊಂಡೆ ಮುಳ್ಳಾಗಿ ಚುಚ್ಚಿತುಬಳ್ಳಿಯೆಂದು ನೀರೆರೆದೆ ಹಾವಾಗಿ ಮೇಲೆರಗಿತು!! ಹೇಗೆ ತೋರಲಿ? ಹಸಿಯಾದ ಹೃದಯದ ಗಾಯವನುಕರುಣೆಗಾಗಿ ಕೈಮುಗಿದೆ ಕಠೋರವಾಗಿ ಎದೆಗಿರಿಯಿತು!! ನಂಬಿಸಿ ಅನಾಯಾಸವಾಗಿ ಗಿಚ್ಚಬಹುದೇ ಹೀಗೆ ಮುತ್ತಿಟ್ಟು ಕೆನ್ನೆಯನು,ಗಲ್ಲವನು ಜೋರಾಗಿ ಕಿರುಚಿ ಹೇಳಿದೆ..ಕಿವುಡಾಗಿ ಕಚ್ಚಿತು!! ಮಾಯಾವಿ ಮಾತುಗಳು ಮನಸ್ಸಿಗಿಳಿದವು..ಈ ಯುದ್ಧ ಸಾಕು ಬೇಡವೆಂದೇ,ಮೋಹವಾಗಿ ಪಾಶವಾಯ್ತು!! ದೀಪಾವಳಿಯ ರಾತ್ರಿ ಕತ್ತಲೆಯಿತ್ತು..ಬೆಳಕಿನ ಜೊತೆ ಸರಸಬೇಡವೆಂದೇ..ಬೀಜವಾಗಿ  ಸಸಿಯಾಯಿತು!! ಬಾಳ ಕದ್ದವನಿನ್ನೂ ಸಿಕ್ಕಿಬಿದ್ದಿಲ್ಲಾ,,ಬಗಲಲ್ಲಿ ಕಂದ ನಗುತ್ತಿಲ್ಲಾಹುಡುಕಾಡಿದೆ ಬದುಕೇ ಮರಳುಗಾಡಾಗಿ ಭಾಸವಾಯ್ತು!! ಮರುಕವಷ್ಟೇ ಹುಟ್ಟೀತು,ನಷ್ಟವನು ಯಾವುದರಿಂದ ತುಂಬಲಿ ಜಯ?ಅಮೃತವೆಂದು ಸೇವಿಸಿದೆ ವಿಷವಾಗಿ ಕೊಂದಿತು!! ಜಯಂತಿ ಸುನಿಲ್

ಜಯಂತಿ ಸುನಿಲ್ ಅವರ ಗಜಲ್ Read Post »

ಅನುವಾದ

ಶೀಲಾ ಸುಭದ್ರಾದೇವಿಯವರ ತೆಲುಗು ಕವಿತೆ “ಸ್ನೇಹವೆಂಬ ಬಣ್ಣದ ವಿಷ” ಕನ್ನಡಾನುವಾದ ಕೋಡೀಹಳ್ಳಿ ಮುರಳೀ ಮೋಹನ್

ಅನುವಾದ ಸಂಗಾತಿ “ಸ್ನೇಹವೆಂಬ ಬಣ್ಣದ ವಿಷ” ತೆಲುಗು ಮೂಲ: ಶೀಲಾ ಸುಭದ್ರಾದೇವಿಕನ್ನಡಕ್ಕೆ: ಕೋಡೀಹಳ್ಳಿ  ಮುರಳೀ ಮೋಹನ್ ಇಪ್ಪತ್ತು ವರ್ಷಗಳ ಹಿಂದೆ ಒಂದು ಸ್ನೇಹದ ಕೂಟದಲ್ಲಿಸ್ನೇಹವೆಂಬ ಬಣ್ಣದ ವಿಷಸ್ನೇಹದ ಲೇಪ ಹಚ್ಚಿದ ಒಮ್ಮೆಗಿನ ಮಾತುಕತೆ –ಅದು ಮಾತುಕತೆ ಅಲ್ಲಮರೆಯಾಗದ ಗಾಯಕ್ಕೆ ಸವರಿದ ಉಪ್ಪುಕಣ್ಣುಗಳಲ್ಲಿ ಸುಳಿದಾಡಿದ ಸುಡಿಗುಂಡಿಗಳು ಹತ್ತು ವರ್ಷಗಳ ಹಿಂದೆಒಂದು ಮದುವೆ ಮಂಟಪದಲ್ಲಿಮದುವೆಯ ಸಂಭ್ರಮ ತುಟಿಗಳ ನಗುವಾದಾಗಸ್ನೇಹದ ನಗುವಿನೊಂದಿಗೆ ಒಮ್ಮೆಗಿನ ಮಾತುಕತೆಅದು ಮಾತುಕತೆ ಅಲ್ಲವಾಸಿಯಾದ ಪುಣ್ಣಿನ ಮೇಲೆ  ಕಾರದ ಮಳೆ ಐದು ವರ್ಷಗಳ ಹಿಂದೆ ಬಜಾರಿನಲ್ಲಿಹರಟೆಗಳ ಗಾಳಿಪಟಗಳನ್ನು ಹಾರಿಸುತ್ತಿದ್ದಾಗಗಾಳಿಯ ಹೊಡೆತದಂತೆ ಒಮ್ಮೆಗಿನ ಮಾತುಕತೆಅದು ಮಾತುಕತೆ ಅಲ್ಲಪಟಕ್ಕನೆ ಮಂಜಾ ದಾರಿಯನ್ನು ಕತ್ತರಿಸಿಕುತ್ತಿಗೆಗೆ ಸುತ್ತಿದ ವಿಷದ ನಗು ನಿನ್ನೆ ಮೊನ್ನೆಯ ರಾತ್ರಿಕನಸಿನಲ್ಲಿ ಕಣ್ಣು ಮುಚ್ಚಲೊಡನೆಕರೆ ಮಾಡಿ ಬಂದುಕುಣಿಯುತ್ತಿದ್ದ ಕನಸುಗಳನ್ನುನೆಟ್ಟಗೆ ಸುಟ್ಟುಹಾಕಿತುಅವಳು ಯಾರೇ ಆಗಿರಲಿ;ಸ್ನೇಹದ ಲೇಪ ಹಚ್ಚಿದ ಕಟುವಾದ ಮುಳ್ಳಿನಿಂದಗುಣವಾಗುತ್ತಿದ್ದ ಹೃದಯಗಾಯವನ್ನು ಕೆದಕಿದಾಗಆ ಕಣ್ಣುಗಳಲ್ಲಿ ಎಷ್ಟು ಮಿನುಗು!ಅವಳೋ  ಅಥವಾ ಅವನೋ  ಯಾರಾದರೇನು?ನಮ್ಮ ಸುತ್ತಲೂ ಅಂಥವರು ಎಷ್ಟು ಜನವೋ! ತೆಲುಗು ಮೂಲ: ಶೀಲಾ ಸುಭದ್ರಾದೇವಿಕನ್ನಡಕ್ಕೆ: ಕೋಡೀಹಳ್ಳಿ  ಮುರಳೀ ಮೋಹನ್

ಶೀಲಾ ಸುಭದ್ರಾದೇವಿಯವರ ತೆಲುಗು ಕವಿತೆ “ಸ್ನೇಹವೆಂಬ ಬಣ್ಣದ ವಿಷ” ಕನ್ನಡಾನುವಾದ ಕೋಡೀಹಳ್ಳಿ ಮುರಳೀ ಮೋಹನ್ Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-29 ವೃತ್ತಿ ವೃತ್ತಾಂತವೃತ್ತಿ ಬದುಕಿನ ಹಿನ್ನೋಟನೋಟ ~ ೨೯ ಈ ಹಿಂದೆ ಮೈಸೂರಿನಿಂದ ವರ್ಗವಾಗಿ ಹೋಗಿದ್ದ ರೇಣುಕುಮಾರಿ ಹಾಗೂ ಪದ್ಮಿನಿ ಎನ್ನುವರು ಅಲ್ಲಿ ಒಬ್ಬರ ಮನೆಯಲ್ಲಿ ಪೇಯಿಂಗ್ ಗೆಸ್ಟ್ ಆಗಿ ಇದ್ದರು. ಅವರು ಮತ್ತೆ ವಾಪಸ್ ಮೈಸೂರಿಗೆ ವರ್ಗವಾಗಿದ್ದರಿಂದ ಅವರ ಜಾಗದಲ್ಲಿ ಆ ಹಾಸ್ಟೆಲಿಗೆ ನಾವು ಸೇರುವುದು ಎಂದು ಈಗಾಗಲೇ ನಾನು ಸುಲೋಚನ ನಿರ್ಧರಿಸಿದ್ದೆವು. ರವೀಶ್ ನನ್ನ ಜೊತೆ ಬರಲು ನಿರ್ಧರಿಸಿದ್ದರಿಂದ ಸುಲೋಚನ ಅವರ ಅಕ್ಕ ಬರುವುದು ಬೇಡ ಎಂದು ಹೇಳಿ ನಾವು ಡಿಸೆಂಬರ್ ೧ ೧೯೯೭ರ  ಬೆಳಿಗ್ಗೆ 5:30 ಬಸ್ಸಿಗೆ ಸಕಲೇಶಪುರಕ್ಕೆ ಹೊರಟೆವು.ಮೊದಲು ರವೀಶ್ ಅವರ ಸಂಬಂಧಿ ಸತ್ಯ ಅವರ ಮನೆಗೆ ಹೋಗಿ ತಿಂಡಿ ತಿಂದು ನಂತರ ಆಫೀಸಿನ ಕಡೆ ಹೋದೆವು. ಮಾಮೂಲಿನಂತೆ ಡ್ಯೂಟಿ ರಿಪೋರ್ಟ್ ಹಾಗೂ ವರ್ಗಾವಣೆ ಅರ್ಜಿ ಎರಡನ್ನು ಸಲ್ಲಿಸಿಆಯಿತು. ಆದರೆ ಕನ್ಫರ್ಮೇಷನ್ ಆಗುವ ತನಕ ನಮ್ಮ ಅರ್ಜಿಗೆ ಮಾನ್ಯತೆ ಇರುವುದಿಲ್ಲ.  ನಾನು ಈಗಾಗಲೇ ಹೊಸ ವ್ಯವಹಾರ ವಿಭಾಗದಲ್ಲಿ ವಿಭಾಗ ಕಚೇರಿಯಲ್ಲಿ ಇದ್ದುದರಿಂದ ನನಗೆ ಅದೇ ಡಿಪಾರ್ಟ್ಮೆಂಟ್ ಕೊಟ್ಟರು. ಸುಲೋಚನಾ ಅವರು ಪಾಲಿಸಿ ಸೇವಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವುದರಿಂದ ಅವರಿಗೆ ಗೊತ್ತಿದ್ದ ಅದೇ ಡಿಪಾರ್ಟ್ಮೆಂಟ್. ಮಧ್ಯಾಹ್ನ ರವೀಶ್ ಅವರು ವಾಪಸ್ ಹೋದರು. ಸಂಜೆ ಕಚೇರಿ ಮುಗಿದ ನಂತರ ರೇಣು ಅವರ ಜೊತೆಯಲ್ಲಿ ಹಾಸ್ಟೆಲ್ ಗೆ ಹೋದೆವು. ಈಗಾಗಲೇ ಅಲ್ಲಿ ಮತ್ತೊಬ್ಬರು ಉಪಾಧ್ಯಾಯಿನಿ ಶಿಲ್ಪ ಎನ್ನುವವರು ಇದ್ದರು.  ಒಟ್ಟು ಮೂರು ಜನ ಒಂದು ಕೋಣೆಯಲ್ಲಿ ಇದ್ದುದ್ದು. ನಾವು ಹೊಸಬರು ಡ್ಯೂಟಿ ರಿಪೋರ್ಟ್ ಮಾಡಿಕೊಂಡ ನಂತರ ಮುಂದಿನ ವಾರ ಅವರು ಅಲ್ಲಿಂದ ರಿಲೀವ್ ಆಗಬೇಕಿದ್ದು ಹಾಗಾಗಿ ಆ ಒಂದು ವಾರ ಆ ಚಿಕ್ಕ ಕೋಣೆಯಲ್ಲಿ ನಾವು ಇರಲು ಸಾಧ್ಯವಿರಲಿಲ್ಲ. ಆ ಪ್ರಶ್ನೆ ನಮಗೆ  ಎದುರಾಗಿಯೇ ಇರದುದ್ದರಿಂದ ಎಲ್ಲಿ ಇರುವುದು ಎನ್ನುವ ಪ್ರಶ್ನೆ ಉದ್ಭವವಾಯಿತು. ಸಂಬಂಧಿಗಳ ಮನೆ ಸಹ ಚಿಕ್ಕದಾಗಿದ್ದರಿಂದ ಅಲ್ಲಿ ಉಳಿಯುವುದು ಸಾಧ್ಯವಿರಲಿಲ್ಲ. ಕಡೆಗೆ ಊರಿಗೆ ವಾಪಸ್ ಆಗಿ ಮುಂದಿನ ವಾರ ಬರುವುದು ಎಂಬ ನಿರ್ಧಾರಕ್ಕೂ ಬಂದೆವು. ಸದ್ಯ ಅಲ್ಲಿಯೇ ಮೂರು ಜನ ಬೇರೆ ನಮ್ಮ ಕಚೇರಿಯ ಉದ್ಯೋಗಿಗಳು ಒಂದು ಮನೆ ಮಾಡಿಕೊಂಡು ಇದ್ದರು. ಇನ್ನುಳಿದ ಐದು ದಿನ ಇಲ್ಲಿಯೇ ಇರಿ ಎಂದು ಅವರು ಆಹ್ವಾನಿಸಿದ್ದರಿಂದ ರಜೆ ಹಾಕುವ  ಯೋಚನೆ ಕೈ ಬಿಟ್ಟು ಅಲ್ಲಿಯೇ ಇರಬೇಕಾಯಿತು. ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಇದ್ದ ಅವರ ಮನೆ ಅಲ್ಲೇ ಬಸ್ಟಾಂಡ್. ಎದುರಿಗೆ ಆಫೀಸ್. ಅಂತೂ ಅವರ ಜೊತೆ ಅವರಿಗೆ ತೊಂದರೆ ಕೊಟ್ಟುಕೊಂಡು 5 ದಿನ ಇದ್ದು ಹಾಸ್ಟೆಲ್ ಗೆ ಅಡ್ವಾನ್ಸ್ ಕೊಟ್ಟು ಜಾಗ ಖಚಿತಪಡಿಸಿಕೊಂಡಿದ್ದಾಯಿತು.ನನಗೆ ಹೊಸ ವ್ಯವಹಾರ ವಿಭಾಗದಲ್ಲಿ ಆಗ ಜವರಯ್ಯ ಮತ್ತು ಕುಮಾರ್ ಎಂಬುವವರು ಸಹಾಯಕರು. ಇಸ್ಮಾಯಿಲ್ ಎನ್ನುವರು ಅಲ್ಲಿನ ರೆಕಾರ್ಡ್ ಕ್ಲರ್ಕ್. ತುಂಬಾ ಹೊಂದಿಕೊಳ್ಳುವಂತಹ ವ್ಯಕ್ತಿತ್ವದವರು. ಅಲ್ಲಿ ಇದ್ದ ಚಂದ್ರು ಎನ್ನುವವರು ಕ್ಯಾಶಿಯರ್ ಆಗಿ ಹೋಗಿದ್ದರು ಸ್ವಲ್ಪ ಕೆಲಸ ಬಾಕಿ ಉಳಿದಿತ್ತು ಡಿಸೆಂಬರ್ ಅಂತ್ಯದ ವೇಳೆಗೆ ಶೆಡ್ಯೂಲ್ ಗಳನ್ನು ಸಲ್ಲಿಸಬೇಕಿತ್ತು ಅದರ ಕಡೆಯ ಕೆಲಸ ಏನು ಆಗಿರಲಿಲ್ಲ ಸ್ವಲ್ಪ ಹೆಚ್ಚಿನ ಶ್ರಮ ಹಾಕಬೇಕಿತ್ತು.ಐದು ವರೆಗೆ ಸರಿಯಾಗಿ ನಾವು ಹೊರಟರೆ ಅಲ್ಲಿ ಎಲ್ಲರಿಗೂ ಆಶ್ಚರ್ಯ. ಎಲ್ಲರೂ ಅಲ್ಲಿ ಆರು ವರೆ ಏಳು ಗಂಟೆಯ ತನಕ ಆಫೀಸಿನಲ್ಲಿಯೇ ಇರುತ್ತಿದ್ದವರು. ಕೆಲಸ ಬಾಕಿ ಉಳಿದಿದ್ದವರು ಕೆಲಸ ಮಾಡುತ್ತಿದ್ದರು. ಇಲ್ಲದಿದ್ದವರು ಕೇರಂ ಅಥವಾ ಟಿಟಿ ಆಡುತ್ತಾ ಕಾಲ ಕಳೆಯುತ್ತಿದ್ದರು. ಬಹಳಷ್ಟು ಜನ ಮನೆಗಳಿಂದ ದೂರ ಬಂದು ಇಲ್ಲಿ ರೂಮ್ ಮಾಡಿಕೊಂಡು ಇರುತ್ತಿದುದರಿಂದ ಇಲ್ಲಿ ಅದೇ ಸಂಸ್ಕೃತಿ ಬೆಳೆದು ಬಂದಿತ್ತು. ಆ ಒಂದು ವಾರ ನಾವು ಉಳಿದಿದ್ದ ನಮ್ಮ ಉದ್ಯೋಗಿಗಳು ಎಲ್ಲರೂ ಉಡುಪಿಯ ಕಡೆಯವರು. ಅವರಲ್ಲಿ ನೀರಜ ಎನ್ನುವವರಿಗೆ ಮದುವೆಯಾಗಿ ಒಂದು ಮಗುವಿತ್ತು. ಈ ಹಿಂದೆ ಪೋಸ್ಟಲ್ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದವರು ಅದನ್ನು ಬಿಟ್ಟು ಇಲ್ಲಿ ಸೇರಿದ್ದರು. ಮಂಗಳೂರಿಗೆ ವರ್ಗಾವಣೆ ಅರ್ಜಿ ಕೋರೊದ್ದರು. ಪ್ರತಿ ಶನಿವಾರ ಮಧ್ಯಾಹ್ನ ಅವರು ಮಂಗಳೂರಿಗೆ ಹೋಗಿ ಸೋಮವಾರ ಬೆಳಿಗ್ಗೆ ವಾಪಸ್ ಆಗುತ್ತಿದ್ದರು. ಇನ್ನೊಬ್ಬರು ಶುಭದಾ. ಅವರು ಅಷ್ಟೇ ಉಡುಪಿಯವರು. ಅವರ ತಂದೆ ಸಹ ಭಾರತೀಯ ಜೀವ ವಿಮಾ ನಿಗಮದಲ್ಲಿ ಸೇವೆ ಸಲ್ಲಿಸುತ್ತಿದ್ದರು ಅವರಿಗೂ ಒಂದು ಪುಟ್ಟ ಮಗು ಇತ್ತು .ಮತ್ತು ಒಬ್ಬರು ಶ್ರೀಲತಾ ಆಗತಾನೇ ವಿವಾಹವಾಗಿ ವಿವಾಹದ ಆಧಾರದ ಮೇಲೆ ಮಂಗಳೂರಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈಗ ಅವರೊಂದಿಗೆ ನಾವು ಇಬ್ಬರು ಸೇರಿದ್ದೆವು ತುಂಬಾ ಒಳ್ಳೆಯವರು ಚೆನ್ನಾಗಿ ಹೊಂದಿಕೊಂಡು ಹೋಗುತ್ತಿದ್ದರು ನಮ್ಮ ಕಡೆಯ ಅಡುಗೆ ಇಷ್ಟವಾಗಿದ್ದರಿಂದ ಆ ಐದು ದಿನ ಅಡುಗೆಯ ಹೊಣೆ ನಾನೇ ಹೊತ್ತಿದ್ದೆ ಅಲ್ಲಿ ಎಷ್ಟು ಹೊಂದಾಣಿಕೆ ಇತ್ತೆಂದರೆ ಹಾಸ್ಟೆಲ್ ಬದಲು ಅಲ್ಲೇ ಮುಂದುವರೆಯಬಹುದಿತ್ತು ಆದರೆ ಐದು ಜನಕ್ಕೆ ಆ ಮನೆ ಸ್ವಲ್ಪ ಚಿಕ್ಕದಾಗುತ್ತಿತ್ತು ಹಾಗಾಗಿ ಆ ಯೋಜನೆ ಕೈ ಬಿಟ್ಟೆವು. ನಮ್ಮ ಜೊತೆಗೆ ಶಶಿಕಲಾ ಎನ್ನುವವರು ಹುಣಸೂರಿನಿಂದ ಇಲ್ಲಿಗೆ ಉನ್ನತ ದರ್ಜೆ ಸಹಾಯಕಿಯಾಗಿ ಬಂದಿದ್ದರು ಅವರಿಗೆ ಇಬ್ಬರು ಮಕ್ಕಳು, ಬೆಂಗಳೂರಿನಲ್ಲಿ ಅವರ ಪತಿ ಹಾಗೂ ತಾಯಿಯ ಮನೆ ಇತ್ತು ಪ್ರತಿವಾರ ಬೆಂಗಳೂರಿಗೆ ಹೋಗಲು ಕಷ್ಟ ಎಂದು ಎರಡು ವಾರಕ್ಕೊಮ್ಮೆ ಹೋಗುತ್ತಿದ್ದರು ಅವರು ಈ ಬೇರೆ ಇನ್ನೊಂದು ಹಾಸ್ಟೆಲ್ ಸೇರಿದ್ದರು ಆದರೆ ಅದು ನಾನ್-ವೆಜ್ ಸಹ ಇರುವುದರಿಂದ ನಾವು ಹೋಗಲು ಇಷ್ಟಪಡಲಿಲ್ಲ.ಮೊದಲು ನಮ್ಮ ಶಾಖೆ ಬಸ್ ನಿಲ್ದಾಣದ ಎದುರಿನ ರಸ್ತೆ ಮಸೀದಿಯ ಎದುರು ಇತ್ತು ಆದರೆ ಜನವರಿ ತಿಂಗಳಿನಲ್ಲಿ ಬಸ್ ನಿಲ್ದಾಣದ ಎದುರು ಮುಖ್ಯರಸ್ತೆಯ ಒಂದು ಹೊಸ ಕಾಂಪ್ಲೆಕ್ಸ್ ನ ೧ ಹಾಗೂ ೨ ನೆಯ ಮಹಡಿಗೆ ಸ್ಥಳಾಂತರ ಗೊಳ್ಳಲಿತ್ತು. ಆ ನಿಟ್ಟಿನಲ್ಲಿ ಪ್ಯಾಕಿಂಗ್ ಮತ್ತು ಸಾಗಣೆ ಕೆಲಸಗಳ ಹೊರೆಯೂ ಇತ್ತು.ಈ ಹಿಂದೆ ಹೊಸದಾಗಿ ಕೆಲಸಕ್ಕೆ ಸೇರುವಾಗ ನಮ್ಮ ಜೊತೆಯ ಬ್ಯಾಚ್ನಲ್ಲಿ ಇದ್ದ ಮುಕುಂದನ್ ಅವರೂ ಸಹ ಉನ್ನತ ದರ್ಜೆ ಸಹಾಯಕರಾಗಿ ಈ ಶಾಖೆಯಲ್ಲೇ ಇದ್ದರು. ವಿಕ್ರಯ ವಿಭಾಗದಲ್ಲಿ ಅವರಿದ್ದುದು. ಅವರ ಪತ್ನಿ ಅಲ್ಲಿನ ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದುದರಿಂದ ಅವರು ಇಲ್ಲಿಗೆ ವರ್ಗಾವಣೆ ತೆಗೆದುಕೊಂಡಿದ್ದರು. ನಮ್ಮ ಹೊಸ ವ್ಯವಹಾರ ವಿಭಾಗಕ್ಕೆ ಸಹಾಯಕ ಆಡಳಿತ ಅಧಿಕಾರಿಯಾಗಿ ಇದ್ದವರು ಮಂಜುನಾಥ್ ಎಂಬವರು ಅವರ ಪತ್ನಿ ನವರತ್ನಮ್ಮ ಅವರು ಸಹ ನಮ್ಮ ನಿಗಮದ ಉದ್ಯೋಗಿ ಅದೇ ಶಾಖೆಯಲ್ಲಿ ಇದ್ದರು. ಇತ್ತೀಚಿಗೆ ಸರ್ವಿಸ್ ನಲ್ಲಿ ಇದ್ದಾಗಲೇ ನವರತ್ನ ಅವರು ನಿಧನ ಹೊಂದಿದ್ದರು. ತುಂಬಾ ಒಳ್ಳೆಯವರು. ಸ್ನೇಹಜೀವಿ ಕೂಡ. ಮೊದಲ ವಾರ ಶನಿವಾರ ಮುಗಿದ ನಂತರವೇ ನಾನು ಸುಲೋಚನಾ ಮೈಸೂರಿಗೆ ವಾಪಸ್ ಆದೆವು. ಆನಂತರ ಒಂದೆರಡು ಮೂರು ದಿನ ರಜಾ ಹಾಕಿ ಮತ್ತೆ ಬರುವುದು ಎಂದು ನಿರ್ಧರಿಸಿದ್ದರಿಂದ ಗುರುವಾರದ ದಿನ ಸಕಲೇಶಪುರಕ್ಕೆ ಹೋಗಿ ಸಂಜೆ ಹಾಸ್ಟೆಲ್ ಗೆ ಹೋದೆವು. ಸಕಲೇಶಪುರದ ಚಂಪಕ ನಗರದಲ್ಲಿ ರೋಟರಿ ಎಕ್ಸ್ಟೆಂಶನ್ ಎಂದು ಅದನ್ನು ಕರೆಯುತ್ತಿದ್ದರು. ಮೊದಲ ದಿನ ಮಾತನಾಡಲು ಹೋದಾಗಲೇ ತಲಾ 600 ಅಡ್ವಾನ್ಸ್ ತೆಗೆದುಕೊಂಡಿದ್ದರು. ಚಿಕ್ಕ ರೂಂ ಒಂದು ಡಬಲ್ ಕಾಟ್ ಹಾಕಿದರೆ ಬೆಳಗ್ಗೆ ಸ್ವಲ್ಪ ಜಾಗ ಉಳಿದಿರುತ್ತಿತ್ತು ಅಷ್ಟೇ, ಮೂರು ಜನ ಆದುದರಿಂದ ಹಾಸಿಗೆಯನ್ನು ಸಹ ನಾವೇ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇಬ್ಬರು ಮಂಚದ ಮೇಲೆ ಒಬ್ಬರು ನೆಲದ ಮೇಲೆ. ಏಕೋ ವಾತಾವರಣವೇ ಸರಿ ಹೋಗಲಿಲ್ಲ .ಇನ್ನು ಊಟ ತಿಂಡಿ ಆ ದೇವರಿಗೆ ಪ್ರೀತಿ .ಎಲ್ಲಾ ಮಾಡಿ ಡೈನಿಂಗ್ ಟೇಬಲ್ ಮೇಲೆ ಇಟ್ಟುಬಿಡುತ್ತಿದ್ದರು. ನಾವು ತಿನ್ನಲು ಹೋಗುವ ವೇಳೆಗೆ ಆರಿ ಅಕ್ಷತೆ ಆಗಿರುತ್ತಿತ್ತು. ಲೆಕ್ಕಾಚಾರವಾಗಿ ಅಷ್ಟೇ ಇಡುತ್ತಿದ್ದರು ನಮಗೇನು ಆ ರುಚಿ ಗೆ ಹೆಚ್ಚು ಬೇಕಾಗುತ್ತಲೂ ಇರಲಿಲ್ಲ. ಆದರೆ ಒಂದು ತರಹ ಇರಸುಮುರಸು ಮೊದಲ ದಿನದಿಂದಲೇ. ನಾಲ್ಕೈದು ದಿನ ಕಳೆದ ನಂತರ ನಮಗೆ ಇಲ್ಲಿ ಸರಿ ಬರುವುದಿಲ್ಲ ಬೇರೆ ಮನೆ ಮಾಡಿಕೊಳ್ಳುವ ಎಂದು ನಿರ್ಧರಿಸಿದೆವು. ಆಫೀಸಿನಲ್ಲಿ ಎಲ್ಲರಿಗೂ ಮನೆ ನೋಡಲು ಹೇಳಿದೆವು.  ಸಂಜೆ ಆಯಿತೆಂದರೆ ಯಾರಾದರೂ ಮನೆ ಖಾಲಿ ಇದೆ ಎಂದು ಹೇಳಿದ ಕಡೆ ಹೋಗುವುದು. ಮನೆ ನೋಡುವುದು .ಆದರೆ ಯಾಕೋ ಯಾವುದೂ ಸರಿ ಹೋಗುತ್ತಿರಲಿಲ್ಲ. ಸರಿ ಹೋದ ಮನೆಗೆ ಸಿಕ್ಕಾಪಟ್ಟೆ ಬಾಡಿಗೆ. ಸಕಲೇಶಪುರ ಬೆಂಗಳೂರಿಗಿಂತಲೂ ದುಬಾರಿ ಎಂದು ನಮಗೆ ಅರಿವಾಗಿದ್ದು ಆಗಲೇ. ಹೋಗಲಿ ಎಂದರೆ ಯಾವುದು ಸರಿ ಹೋಗುತ್ತಲೂ ಇರಲಿಲ್ಲ .ಮೈಸೂರಿನಿಂದಲೇ ಒಂದಷ್ಟು ಪುಡಿಗಳು ಚಟ್ನಿಪುಡಿ ಮೆಂತ್ಯದ ಹಿಟ್ಟು ಅನ್ನದ ಪುಡಿ ತುಪ್ಪ ಮತ್ತು ಉಪ್ಪಿನಕಾಯಿ ತೊಕ್ಕುಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಹೇಗೋ ಅದನ್ನೇ ಬಳಸಿಕೊಂಡು ಊಟ ಮಾಡುತಿದ್ದೆವು. ಬೆಳಿಗ್ಗೆ ಕಾಫಿಗೆ ಹೋದಾಗ ಎದುರುಗಿನ ಹೋಟೆಲ್ನಲ್ಲಿ ಅಲ್ಲಿನ ಸ್ಪೆಷಾಲಿಟಿ ಕಡುಬು ಮತ್ತು ಅಕ್ಕಿ ರೊಟ್ಟಿ ಒಂದರಲ್ಲಿ ಅರ್ಧ ಮಾಡಿ ತ ತಿನ್ನುತ್ತಿದ್ದುದು.  ಸಂಜೆ ಕಚೇರಿ ಮುಗಿದ ನಂತರ ಮನೆ ಹುಡುಕಲು ಯಾರಾದರೂ ಮನೆಗೆ ಹೋದಾಗ ಅಲ್ಲಿ ಕಾಫಿ ಇನ್ನೇನಾದರೂ ಆತಿಥ್ಯ ಆಗುತ್ತಿತ್ತು. ಇಲ್ಲದಿದ್ದರೆ ಸಂಜೆಯ ವೇಳೆಯೂ ಅಲ್ಲಿ ಹೋಗಿ ತಿಂಡಿ ತಿಂದು ಮನೆಗೆ ಹೋಗುತ್ತಿದ್ದುದು.. ಹೋದ ತಕ್ಷಣ ಒಂದರ್ಧ ಲೋಟ ಕಾಫಿ ಕೊಡುತ್ತಿದ್ದರು ಅಷ್ಟೇ. ರಾತ್ರಿಯ ಊಟವೂ ಅಷ್ಟೇ ಬೆಳಗ್ಗೆ ಉಳಿದದ್ದನ್ನು ಹಾಕುತ್ತಿದ್ದು ಎಷ್ಟು ಬಾರಿ ಹೇಳಿದರು ಒಂದು ದಿನವೂ ಬಿಸಿ ಊಟ ತಿಂಡಿ ಹಾಕಲಿಲ್ಲ .ಆ ಡಿಸೆಂಬರ್ ಚಳಿಗೆ ಆ ಊರಿನ ವಾತಾವರಣಕ್ಕೆ ಆರಿದ್ದು ತಿನ್ನುವುದು ತುಂಬಾ ಹಿಂಸೆ ಎನಿಸುತ್ತಿತ್ತು. ಯಾವಾಗ ನಾವು ನಮಗೆ ಬೇರೆ ಮನೆ ಮಾಡುತ್ತೇವಪ್ಪಾ ಅಂತ ಅನ್ನಿಸತೊಡಗಿತ್ತು. ಯಾವುದೇ ಹಾಸ್ಟೆಲ್ ನಲ್ಲಿದ್ದು‌ ಅಭ್ಯಾಸ ಇಲ್ಲದ ನಮಗೆ ಹೊರಗಿನ ಊಟದ ಕಷ್ಟ ಏನೆಂದು ಆಗ ಅರ್ಥವಾಯಿತು. ಅಲ್ಲದೆ ಹೆಚ್ಚು ಕಡಿಮೆ ಮೂರು ಕಿಲೋಮೀಟರ್ ದೂರ ಇತ್ತು ಅದು ನಮ್ಮ ಕಚೇರಿಯಿಂದ. ಹೋಗಿ ಬರುವುದು ಸಹ ಕಷ್ಟವೇ. ಸದ್ಯ ಆಗ ಡಿಸೆಂಬರ್ ನಲ್ಲಿ ಮಳೆ ಇಲ್ಲದಿದ್ದರಿಂದ ಹೇಗೋ ನಡೆಯಿತು ಹಾಗಾಗಿ ಕಚೇರಿಗೆ ಹತ್ತಿರದ ಸ್ಥಳಗಳಲ್ಲಿ ನಾವು ಮನೆ ಹುಡುಕುತ್ತಿದ್ದು. ಕೆಲವು ದೂರದ ಪ್ರದೇಶ ಏರಿಯಾದಲ್ಲಿ ಮನೆ ಸಿಕ್ಕುತ್ತಿದ್ದರು ನಮ್ಮ ಬಳಿ ವಾಹನ ಇಲ್ಲದ್ದರಿಂದ ಅಲ್ಲಿನ ಮಳೆ ಸಮಯದಲ್ಲಿ ಓಡಾಡಲು ಕಷ್ಟ ಎಂದು ಎಲ್ಲರೂ ಹೇಳಿದ್ದರಿಂದ ದೂರದ ಏರಿಯಾಗಳಿಗೆ ಹೋಗಲು ಮನಸ್ಸು ಮಾಡಲಿಲ್ಲ.ಕಡೆಗೆ ಕಚೇರಿಯಿಂದ ಒಂದೇ ಕಿಲೋಮೀಟರ್ ದೂರ ಇದ್ದ ಕುಶಾಲನಗರ ಎಕ್ಸ್ಟೆಂಶನ್ ಎಂಬಲ್ಲಿ ಮಹಡಿಯ ಮೇಲೆ ಒಂದು ಮನೆ ಖಾಲಿ ಇದೆ ಎಂದು ತಿಳಿಯಿತು ರಾಜಮ್ಮ ಎನ್ನುವವರು ಅಲ್ಲಿನ ರಾಜಕೀಯ ಪುಡಾರಿ ಅವರದೇ ಮನೆ. ಕೆಳಗಡೆ ಅವರದೊಂದು ದೊಡ್ಡ ಮನೆ. ಪಕ್ಕದಲ್ಲಿ ಸ್ವಲ್ಪ ಜಾಗ ಅವರ ಮನೆಗೆ ಸೇರಿದಂತೆಯೇ ಮಹಡಿಯ ಮೇಲೆ ಎರಡು ಮನೆಗಳು ಅಲ್ಲಿ ಕೆಳಗಡೆ ಅಟಾಚ್ಡ್ ಬಾತ್ರೂಮ್ ಇರುವಂತಹ ಎರಡು ಕೊಠಡಿಗಳು. ಅಂತಹ ಒಂದು ಕೊಠಡಿಯಲ್ಲಿ ನಮ್ಮದೇ ಆಫೀಸಿನ ಹೊಸ ರೆಕ್ರೂಟ್ಮೆಂಟ್ ಆದ ಆನಂದ್ ಮತ್ತು ಮೋಹನ್ ಎನ್ನುವವರು ಇದ್ದುದರಿಂದ ಅವರ ಮೇಲಿನ ಮನೆ ಖಾಲಿಯಾಗುತ್ತದೆ ಎಂದು ತಿಳಿಸಿದರು. ಹಾಗಾಗಿ ಅಲ್ಲಿ ನೋಡಲು ಹೋದೆವು. ಅವರ ಮನೆಯಲ್ಲಿ ಟೀ ಚೌಚೌ ಆತಿಥ್ಯ ಸ್ವೀಕರಿಸಿ ಮನೆ ನೋಡಲು ಹೋದೆವು. ಒಂದು ರೂಮಿನ ಮನೆ. ಮನೆ ಏನೋ ಚೆನ್ನಾಗಿತ್ತು ಆದರೆ ಅಲ್ಲಿ ಯಾರು

Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಬಹುಮಾನ”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಬಹುಮಾನ” ಸದ್ದು ಗದ್ದಲವಿಲ್ಲದಪ್ರಸಿದ್ಧಿ ಪ್ರಚಾರವಿಲ್ಲದಗಟ್ಟಿ ಜೀವಹಲವು ಕನಸುನಿತ್ಯ ಪಯಣಹೆಜ್ಜೆ ಹಾಕುವುದುನಿಂತಿಲ್ಲ ಸೋಲೋ ಗೆಲುವೋಗೊತ್ತಿಲ್ಲಅಳುಕು ಆತಂಕಆನಂದ ಐಸಿರಿಎಲ್ಲವೂ ವಿಧಿಯಾಟನಡೆದ ದಾರಿಯಶ್ರಮ ದೂರಸಂತೃಪ್ತಿ ಮೌನನನ್ನ ನಿನ್ನಯಪ್ರೀತಿ ಬಹುಮಾನ ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಬಹುಮಾನ” Read Post »

ಕಾವ್ಯಯಾನ

ಡಾ.ಗೀತಾ ದಾನಶೆಟ್ಟಿ ಕವಿತೆ “ಬಚ್ಚಿಟ್ಟ ಬಯಕೆ”

ಕಾವ್ಯ ಸಂಗಾತಿ ಡಾ.ಗೀತಾ ದಾನಶೆಟ್ಟಿ “ಬಚ್ಚಿಟ್ಟ ಬಯಕೆ” ಎದೆಯ ಗೂಡಿನಲ್ಲಿತುಂಬಿ ತುಳುಕುವಬಚ್ಚಿಟ್ಟ ಬಯಕೆಗಳನುಬಿಚ್ಚಿಡುವ ಆತುರ ಮನದ ಆಲಯದಲ್ಲಿಹುದುಗಿದ್ದ ಅದೆಷ್ಟೋಆಕರ್ಷಣೆಗಳ ಸೆಳೆತಕೆತೆರೆದುಕೊಳ್ಳುವ ಕಾತುರ ಮುಗಿಯದಷ್ಟು ಮಾತುಗಳುಮನದಾಳದಲ್ಲಿ ಮೊಳೆತಿವೆಚಿಗುರೊಡೆವ ಬಯಕೆಗೆಕನಸುಗಳು ಸಾವಿರ ಮಾತುಗಳು ಮೌನವಾಗಿಮೌನದಲ್ಲೇ ಹರಿಸಿ ಹಾರೈಸಿಸ್ಪಂದಿಸುವ ಜೀವಕ್ಕೆನೆನಪುಗಳ ನಿರಾಳತೆ ಮಧುರ ಕಾಣದ ಕಡಲನುಸೇರುವ ಕಾತುರಅಬ್ಬರದ ಅಳೆಗಳನ್ನುಅಪ್ಪಿಕೊಳ್ಳುವ ಅವಸರ ಆಕಾಶದ ನೀಲಿಗೆಕಾರ್ಮೋಡಗಳ ತೋರಣಇಳೆಗೆ ಮಳೆಯ ಸಿಂಚನಸೇರಲು ಮಾನಸ ಸರೋವರ ಡಾ.ಗೀತಾ ದಾನಶೆಟ್ಟಿ

ಡಾ.ಗೀತಾ ದಾನಶೆಟ್ಟಿ ಕವಿತೆ “ಬಚ್ಚಿಟ್ಟ ಬಯಕೆ” Read Post »

You cannot copy content of this page

Scroll to Top