ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

“ಸಮನ್ವಯದ ಶತಮಾನದ ಕವಿ ಡಾ ಜಿ ಎಸ್ ಶಿವರುದ್ರಪ್ಪನವರು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಪುಣೆ.

ಹಿರಿಯರ ಸಂಗಾತಿ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಪುಣೆ “ಸಮನ್ವಯದ ಶತಮಾನದ ಕವಿ ಡಾ ಜಿ ಎಸ್ ಶಿವರುದ್ರಪ್ಪನವರು” ಕನ್ನಡ ಸಾಹಿತ್ಯದಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಂಡ ಸಮನ್ವಯ ಕವಿ ನವೋದಯ ನವ್ಯ ಬಂಡಾಯ ಸಾಹಿತ್ಯ ಪ್ರಕಾರಗಳಲ್ಲಿ ಸೈ ಎನಿಸಿಕೊಂಡ ಭಾವ ಗೀತೆಗಳ ಕವಿ ಬೆಳಕಿನ ಕವಿ ಜಿ ಎಸ್ ಶಿವರುದ್ರಪ್ಪನವರು. ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ( ಜಿ. ಎಸ್. ಶಿವರುದ್ರಪ್ಪ )ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ನಂತರ ‘ರಾಷ್ಟ್ರಕವಿ’ ಗೌರವಕ್ಕೆ ಪಾತ್ರರಾದವರು. 1ನವೆಂಬರ್ , 2006 ರಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು. ಅವರನ್ನು ಸಮನ್ವಯ ಕವಿ ಎಂದೇ ಗುರುತಿಸಲಾಗುತ್ತದೆ. *ಹುಟ್ಟು ಮತ್ತು ಬಾಲ್ಯ* .ಜಿ.ಎಸ್.ಶಿವರುದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ತಾಲೂಕಿನ ಈಸೂರುಗ್ರಾಮದಲ್ಲಿ ಫೆಬ್ರವರಿ 7, 1926 ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ. *ಶಿಕ್ಷಣ*ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (1949) ಪದವಿ ಪಡೆದರು.ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (1953) ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು.  1955 ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದಡಾಕ್ಟರೇಟ್ ಪಡೆದುಕೊಂಡ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. *ವೃತ್ತಿ ಜೀವನ/ನಿರ್ವಹಿಸಿರುವ ಜವಾಬ್ದಾರಿಗಳು*  ಡಾ.ಜಿ.ಎಸ್.ಶಿವರುದ್ರಪ್ಪ ನವರು ಮೈಸೂರು ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.1963ರ ನವೆಂಬರ್‌ನಿಂದ 2 ವರ್ಷಗಳ ಕಾಲ ಹೈದರಾಬಾದಿನ ಉಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ ಕನ್ನಡ ವಿಭಾಗದ ಉಪ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. 1971 ರ ನವೆಂಬರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾದ ಅವರು, ಮುಂದೆ ಅದು “ಕನ್ನಡ ಅಧ್ಯಯನ ಕೇಂದ್ರ” ವಾಗಿ ಪರಿವರ್ತಿತವಾದಾಗ, ಅದರ ನಿರ್ದೇಶಕರೂ ಆದರು.ಹಸ್ತಪ್ರತಿಗಳ ಸಂಗ್ರಹಣೆ, ಅವುಗಳ ರಕ್ಷಣೆಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಶಿವರುದ್ರಪ್ಪನವರು 1971 ರಲ್ಲಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ‘ಹಸ್ತಪ್ರತಿ ವಿಭಾಗ’ ವನ್ನು ಪ್ರಾರಂಭಿಸಿದರು. ಕೇವಲ 4 ವರ್ಷಗಳಲ್ಲಿ 3000 ಕ್ಕೂ ಹೆಚ್ಚು ಓಲೆಗರಿಯ ಹಾಗೂ 1000 ಕ್ಕೂ ಹೆಚ್ಚು ಕಾಗದದ ಹಸ್ತ ಪ್ರತಿಗಳ ಸಂಗ್ರಹಣೆಯಾಯಿತು. ತಾವು ಓದಿದ ಮೈಸೂರು ವಿಶ್ವವಿದ್ಯಾನಿಲಯದಲ್ಲೇ 1949 ರಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಆರಂಭಿಸಿದರು.1963 ರಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ ರೀಡರ್ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ 1966 ರ ವರೆಗೂ ಅಲ್ಲಿ ಸೇವೆ ಸಲ್ಲಿಸಿದರು. 1966 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹಾಗೂ ನಿರ್ದೇಶಕರಾಗಿ ಆಯ್ಕೆಯಾಗಿ 1987 ರವರೆವಿಗೂ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಅವರ ಕಾಲದಲ್ಲೇ ಕನ್ನಡ ವಿಭಾಗವು ಕನ್ನಡ ಅಧ್ಯಯನ ಕೇಂದ್ರವಾಯಿತು.ನಿವೃತ್ತಿಯ ನಂತರವೂ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕುವೆಂಪು ಪೀಠದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಗಣನೀಯ ಸೇವೆ ಸಲ್ಲಿಸಿರುತ್ತಾರೆ.  ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. ದೆಹಲಿಯ ರಾಷ್ಟ್ರೀಯ ಕವಿ ಸಮ್ಮೇಳನ, ತುಮಕೂರಿನ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿ, ಮದರಾಸಿನ ಕನ್ನಡ ಸಮ್ಮೇಳನ ದ ಅಧ್ಯಕ್ಷರಾಗಿ, 1992 ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಗೌರವಿಸಲ್ಪಟ್ಟಿದ್ದಾರೆ. *ಕೃತಿಗಳು**ಕವನ ಸಂಕಲನಗಳು*ಸಾಮಗಾನ (1947)ಚೆಲುವು-ಒಲವು (1951)ದೇವಶಿಲ್ಪ (1953)ದೀಪದ ಹೆಜ್ಜೆ (1956)ಕಾರ್ತಿಕ (1959)ಅನಾವರಣ (1961)ತೆರೆದ ದಾರಿ (1963)ಗೋಡೆ (1966)ಕಾಡಿನ ಕತ್ತಲಲ್ಲಿ (1972)ಪ್ರೀತಿ ಇಲ್ಲದ ಮೇಲೆ (1982)ಚಕ್ರಗತಿ (1987)ವ್ಯಕ್ತಮಧ್ಯ (1993)ಅಗ್ನಿಪರ್ವ (2000)ತೀರ್ಥವಾಣಿ (1953)ಜಾರಿದ ಹೊವುಸಮಗ್ರ ಕಾವ್ಯಎದೆತುಂಬಿ ಹಾಡಿದೆನುಮೇರಾ ದಿಯಾ ಮತ್ತು ಇತರ ಕವನಗಳು (ರಾಜಮಂಗಲ ಪಬ್ಲಿಕೇಷನ್ಸ್ 2022) *ವಿಮರ್ಶೆ/ಗದ್ಯ*ಪರಿಶೀಲನವಿಮರ್ಶೆಯ ಪೂರ್ವ ಪಶ್ಚಿಮಸೌಂದರ್ಯ ಸಮೀಕ್ಷೆ. (ಇದು ಅವರ ಪಿಹೆಚ್‌ಡಿ ಮಹಾ ಪ್ರಬಂಧ)ಕಾವ್ಯಾರ್ಥ ಚಿಂತನಗತಿಬಿಂಬಅನುರಣನಪ್ರತಿಕ್ರಿಯೆಕನ್ನಡ ಸಾಹಿತ್ಯ ಸಮೀಕ್ಷೆಮಹಾಕಾವ್ಯ ಸ್ವರೂಪಕನ್ನಡ ಕವಿಗಳ ಕಾವ್ಯ ಕಲ್ಪನೆಹೊಸಗನ್ನಡ ಕವಿತೆಗಳಲ್ಲಿ ಕಾವ್ಯ ಚಿಂತನಕುವೆಂಪು : ಪುನರವಲೋಕನಸಮಗ್ರ ಗದ್ಯ ಭಾಗ 1 2  ಮತ್ತು 3ಬೆಡಗುನವೋದಯ –ಕುವೆಂಪು-ಒಂದು ಪುನರ್ವಿಮರ್ಶೆ – ಕರ್ನಾಟಕ ಸರ್ಕಾರಕ್ಕೆ ಕುವೆಂಪು ಮೇಲೆ ಜೀವನಚರಿತ್ರೆಯ ಕೆಲಸ *ಪ್ರವಾಸ ಕಥನ*ಮಾಸ್ಕೋದಲ್ಲಿ ೨೨ ದಿನ -(ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ ಬಂದಿದೆ)ಇಂಗ್ಲೆಂಡಿನಲ್ಲಿ ಚತುರ್ಮಾಸಅಮೆರಿಕದಲ್ಲಿ ಕನ್ನಡಿಗಗಂಗೆಯ ಶಿಖರಗಳಲ್ಲಿ *ಜೀವನ ಚರಿತ್ರೆ*ಕರ್ಮಯೋಗಿ (ಸಿದ್ದರಾಮನ ಜೀವನ ಚರಿತ್ರೆ) *ಪ್ರಮುಖ ಪ್ರಶಸ್ತಿಗಳು* ಪಂಪ ಪ್ರಶಸ್ತಿ,ಮಾಸ್ತಿ ಪ್ರಶಸ್ತಿ,ಅನಕೃ ಪ್ರತಿಷ್ಠಾನ ಪ್ರಶಸ್ತಿ,ನಾಡೋಜ ಪ್ರಶಸ್ತಿ,ಸೋವಿಯತ್ ಲ್ಯಾಂಡ್ ಪ್ರಶಸ್ತಿ ಜಿ.ಎಸ್.ಶಿವರುದ್ರಪ್ಪನವರು 1992 ರಲ್ಲಿ ದಾವಣಗೆರೆಯಲ್ಲಿ ಜರುಗಿದ 61 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸ್ನೇಹ ಕಾರ್ತೀಕ,ಗೌರವ,ಹಣತೆ, ಇವು ಜಿ.ಎಸ್.ಎಸ್ ಅವರಿಗೆ ಅಭಿಮಾನಿಗಳು ಸಲ್ಲಿಸಿದ ಅಭಿನಂದನಾ ಗ್ರಂಥಗಳು. *ನಿಧನ*ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಎಸ್.ಶಿವರುದ್ರಪ್ಪನವರು 23 ಡಿಸೆಂಬರ್ 2013ರಂದು ತಮ್ಮ ಬನಶಂಕರಿಯ ನಿವಾಸದಲ್ಲಿ ಸ್ವರ್ಗಸ್ಥರಾದರು. ಜಿ.ಎಸ್. ಶಿವರುದ್ರಪ್ಪನವರ ಆಣತಿಯಂತೆಯೆ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಬೆಂಗಳೂರು ವಿ.ವಿ. ಸಮೀಪವಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಾದರಗಳೊಂದಿಗೆ 24 ಡಿಸೆಂಬರ್ 2013ರಂದು ನೇರವೇರಿಸಲಾಯಿತು. ಎದೆತುಂಬಿ ಹಾಡಿದ ಕನ್ನಡದ ಶ್ರೇಷ್ಠ ಕವಿ ಡಾ ಜಿ ಎಸ್ ಶಿವರುದ್ರಪ್ಪನವರ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಭಕ್ತಿಪೂರ್ವಕ ಶರಣಾರ್ಥಿಗಳು.ಕನ್ನಡಕ್ಕೊಬ್ಬರೇ ಜಿ ಎಸ್ ಎಸ್ ಎನ್ನುವಂತೆ ಅವರ ಸಾಹಿತ್ಯ ಕೊಡುಗೆ ನಮ್ಮೆಲ್ಲರ ಆಸ್ತಿ. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

“ಸಮನ್ವಯದ ಶತಮಾನದ ಕವಿ ಡಾ ಜಿ ಎಸ್ ಶಿವರುದ್ರಪ್ಪನವರು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಪುಣೆ. Read Post »

ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಕೊಡಚಾದ್ರಿ”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ಕೊಡಚಾದ್ರಿ” ಕೊಡಚಾದ್ರಿ—ನೀನು ಪರ್ವತವಲ್ಲ,ಪ್ರತಿದಿನ ಹೊಸದಾಗಿ ಹುಟ್ಟುವನಿತ್ಯ ಸುಂದರಿ. ಶೋಲಾ ಕಾಡಿನ ಹಸಿರು ಸೀರೆಯಲಿನೀನು ಮೌನವಾಗಿ ನಿಂತಾಗ,ಮೋಡಗಳು ನಿನ್ನ ಕೆನ್ನೆಗೆಮುತ್ತಿಟ್ಟು ಹೋಗುತ್ತವೆ—ನನಗೆ ಮಾತ್ರದೂರದಿಂದ ನೋಡುವ ಹಕ್ಕು. ಹಿಡ್ಲುಮನೆನಿನ್ನ ಕೂದಲ ತುದಿಯಿಂದಜಾರಿ ಬೀಳುವ ನಗುವಿನಂತೆ,ಅದು ನೆಲ ತಾಕುವ ಮುನ್ನವೇನನ್ನ ಮನಸ್ಸು ತಾಕಿನನ್ನನ್ನು ಕರಗಿಸುತ್ತದೆ. ನಿನ್ನ ಹಾದಿಯಲ್ಲಿಜಿಗಣೆ ನನ್ನ ರಕ್ತ ಹೀರುವಾಗ,ನೋವಿಗಿಂತನಿನ್ನ ಹತ್ತಿರ ಇರುವ ಸವಿಹೆಚ್ಚಾಗಿ ಗೊತ್ತಾಗುತ್ತದೆ. ಬೆವರು ದೇಹ ಬಿಟ್ಟುನಿನ್ನ ಮಣ್ಣಲ್ಲಿ ಬೆರೆತಾಗ,ನಾನು ನಿಧಾನವಾಗಿನಿನ್ನೊಳಗೆ ಲೀನವಾಗುತ್ತೇನೆ—ಹೆಸರಿಲ್ಲದೆ,ಆಕಾರವಿಲ್ಲದೆ. ಏರುವೆಡೆಗೆ ಹೆಜ್ಜೆ ಹಾಕುತ್ತಾಉಸಿರು ಕಷ್ಟವಾದಾಗ,ನಿನ್ನ ಗಾಳಿ ಬಂದುಎದೆಯ ಮೇಲೆ ಕೈ ಇಟ್ಟುಹೇಳುತ್ತದೆ—“ನನ್ನನ್ನು ಬಯಸುವುದೂಒಂದು ತಪಸ್ಸೇ”. ಸರ್ವಜ್ಞ ಪೀಠದ ಬಳಿನೀನು ಶಾಂತಳಾಗುತ್ತೀಯ,ಅಲ್ಲಿನನ್ನ ಆಸೆಗಳು ಕೂಡತಲೆಯೊಗ್ಗಿ ಕುಳಿತುಕೊಳ್ಳುತ್ತವೆ. ಚಿತ್ರಮೂಲದ ಮೌನದಲ್ಲಿನಿನ್ನ ಕಣ್ಣು ಮಿಟುಕಿದಂತೆಒಂದು ಸಂಕೆತ,ಅದು ನನ್ನೊಳಗೆಹುಟ್ಟು–ಸಾವು ಎರಡನ್ನೂಒಂದೇ ಕ್ಷಣದಲ್ಲಿ ಕಲಿಸುತ್ತದೆ. ಸೂರ್ಯಾಸ್ತದ ಹೊತ್ತಿಗೆನೀನು ಕೆಂಪಾಗಿ ನಾಚಿದಾಗ,ಅರಬ್ಬೀ ಸಮುದ್ರವೂನಿನ್ನ ಸೌಂದರ್ಯಕ್ಕೆಅಲೆಗಳನ್ನೇ ಮರೆತು ನಿಂತುಬಿಡುತ್ತದೆ. ಕೊಡಚಾದ್ರಿ—ನಿನ್ನನ್ನು ಏರುವುದುಚಾರಣವಲ್ಲ,ನಿನ್ನೊಳಗೆ ಕಳೆದುಕೊಳ್ಳುವಪ್ರೇಮಯಾನ. ನೀನು ಆಧ್ಯಾತ್ಮ,ನೀನು ಆಕಾಂಕ್ಷೆ,ನೀನು ಶಿಖರ,ನೀನು ಶೃಂಗಾರ. ಒಂದು ದಿನನಾನು ಸಂಪೂರ್ಣವಾಗಿನಿನ್ನೊಳಗೆ ಲೀನವಾದರೆ—ಅಂದುನಾನು ಮಾನವನಲ್ಲ,ನಿನ್ನ ಮೌನದಒಂದು ಉಸಿರಾಗಿಬಿಡುತ್ತೇನೆ. ಅಷ್ಟೇ ಸಾಕು. ಡಾ. ಹೆಚ್. ನಟರಾಜ್ ಆರ್ಯ  

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಕೊಡಚಾದ್ರಿ” Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-28 ಪದೋನ್ನತಿ ವೃತ್ತಿ ವೃತ್ತಾಂತವೃತ್ತಿ ಬದುಕಿನ ಹಿನ್ನೋಟನೋಟ ~ ೨೮ ೧೯೯೭……..  ಮಕ್ಕಳಾಗಲು ಎಷ್ಟೇ ಚಿಕಿತ್ಸೆ ತೆಗೆದುಕೊಂಡರೂ ಫಲಕಾರಿಯಾಗದೆ ಏಕೋ ತುಂಬಾ ಬೇಸರ. ಹಾರ್ಮೋನ್ ಚಿಕಿತ್ಸೆಯ ಪರಿಣಾಮ ತೂಕದಲ್ಲಿ ಹೆಚ್ಚಳ. ಒಂದು ತರಹ ಖಿನ್ನತೆಗೆ ಒಳಗಾಗುತ್ತಿದ್ದೆ. ವಿಭಾಗೀಯ ಕಛೇರಿಯಲ್ಲಿ ಡಿಪಾರ್ಟ್ಮೆಂಟ್ ಬದಲಾವಣೆಗೆ ಅವಕಾಶವಿರಲಿಲ್ಲ ಆಗ. ಇತ್ತೀಚೆಗೆ ೧೫ ವರ್ಷಗಳಿಂದ ಶಾಖೆಗಳಲ್ಲಿರುವಂತೆ ೩ ವರ್ಷಕ್ಕೊಮ್ಮೆ ಬದಲಾವಣೆ ಇದೆ. ಈಗ ನನ್ನೊಂದಿಗೆ ಸಹಾಯಕರಾಗಿ ರಾಮಚಂದ್ರ ಮತ್ತು ಉನ್ನತದರ್ಜೆ ಸಹಾಯಕರಾಗಿ ಮುರಳಿ ಇದ್ದರು. ಸಹಾಯಕ ವಿಭಾಗಾಧಿಕಾರಿಯಾಗಿ  ಶ್ರೀಮತಿ ಪ್ರಮದಾ ಪ್ರಕಾಶ್ ಅವರು ಬೆಂಗಳೂರಿನಿಂದ ಬಂದಿದ್ದರು. ಇದೇ ಮೊದಲು ನಾನು ಮಹಿಳಾ ಅಧಿಕಾರಿಯೊಂದಿಗೆ ಕೆಲಸ ಮಾಡಿದ್ದು. ಸುವರ್ಣ ಅವರಂತೂ ಇದ್ದರು. ತುಂಬಾ ಸೌಹಾರ್ದಕರ ವಾತಾವರಣವಿತ್ತು. ಆ ಸಮಯದಲ್ಲೇ ನನ್ನ ತಂಗಿ ವೈಶಾಲಿಯ ವಿವಾಹವೂ ಜರುಗಿದ್ದು. ಪ್ರಮದಾ ಮೇಡಂ ಅವರು ತುಂಬಾ ತಿಳಿ ಹೇಳಿ ಉನ್ನತ ದರ್ಜೆ ಸಹಾಯಕಿಯಾಗಿ ಬಡ್ತಿ ತೆಗೆದುಕೊಳ್ಳಲು ಪ್ರೇರೇಪಿಸಿದರು. ಸ್ಥಳ ಬದಲಾವಣೆ ಆದರೆ ಚಿಕಿತ್ಸೆಗು ಒಳ್ಳೆಯದು ಎಂದು ಅವರು ಹೇಳಿದ ಮಾತು ನನ್ನಲ್ಲೂ ಒಂದು ಹೊಸ ಆಸೆ ಮೂಡಿಸಿತು. ಹಾಗಾಗಿ ಆ ವರ್ಷ ಉನ್ನತ ದರ್ಜೆ ಸಹಾಯಕರ ಬಡ್ತಿಗಾಗಿ ಕರೆ ಕೊಟ್ಟಾಗ ನಾನು ಸಹ ಅರ್ಜಿ ಕೊಟ್ಟೆ. ನಮ್ಮ ತಂದೆ ಅಂತೂ ಉದ್ಯೋಗದಲ್ಲಿ ಮುಂದೆ ಬರಲಿ ಎಂದು ತುಂಬಾನೇ ಇಷ್ಟಪಡುತ್ತಿದ್ದರು ಹಾಗಾಗಿಯೇ ನನ್ನ ತಂಗಿ ಸಹ  ಸಹಾಯಕ ಅಧಿಕಾರಿಯಾಗಿ ಹೋಗಿದ್ದು.  ನನಗೂ ಅವರು ಬಡ್ತಿ ತೆಗೆದುಕೊಳ್ಳಲು ಹೇಳಿ ಅದನ್ನು ರವೀಶ್ ಅವರು ಅನುಮೋದಿಸಿದಾಗ ಆಯಿತು ಎಂದುಕೊಂಡಿದ್ದೆ. ಸಾಮಾನ್ಯ ಎಲ್ಲರಿಗೂ ದಿನ ಓಡಾಡುವ ಸ್ಥಳಕ್ಕೆ ಪೋಸ್ಟಿಂಗ್ ಆಗುತ್ತಿತ್ತು . ಒಂದು ಅಥವಾ ಎರಡು ವರ್ಷ ಹೀಗೆ ಓಡಾಡಿದ ನಂತರ ಮೈಸೂರಿಗೆ ವಾಪಸ್ ಬರಬಹುದಿತ್ತು. ಆದರೂ ಕೆಲವು ಗೆಳತಿಯರು ಆರಾಮವಾಗಿ ಮೈಸೂರಿನಲ್ಲಿ ಇರುವುದನ್ನು ಬಿಟ್ಟು ಓಡಾಡುವ ತೊಂದರೆ ತೆಗೆದುಕೊಳ್ಳುವುದು ಏಕೆ ಎಂದು ಸಹ ಕೇಳಿದ್ದರು. ಆದರೂ ಬದಲಾವಣೆಗೆ ಏನೋ ಒಂದು ರೀತಿಯ ತುಡಿತ ಏಕತಾನತೆಯಿಂದ ದೂರ ಹೋಗುವ ಆಸೆ ನನ್ನನ್ನು ಪದೋನ್ನತಿಗೆ ಪ್ರಯತ್ನಿಸುವ ಹಾಗೆ ಮಾಡಿತು. ಇದಕ್ಕೂ ಒಂದು ಪ್ರವೇಶ ಪರೀಕ್ಷೆ ಇರುತ್ತದೆ. ಆದರೆ ಅಸೋಸಿಯೇಟ್ ಪರೀಕ್ಷೆ ಪಾಸಾದವರಿಗೆ ಪ್ರವೇಶ ಪರೀಕ್ಷೆಯಿಂದ ರಿಯಾಯಿತಿ. ಆ ವೇಳೆಗೆ ನನ್ನದು ಅಸೋಸಿಯೇಟ್  ಆಗಿದ್ದರಿಂದ ನಾನು ನೇರ ಸಂದರ್ಶನಕ್ಕೆ ಅರ್ಹಳಾಗಿದ್ದೆ. ಎಂದಿನಂತೆ ಆ ಸಂದರ್ಶನಕ್ಕೆ ನಮ್ಮ ಹೊಸ ವ್ಯವಹಾರ ವಿಭಾಗದಿಂದ ಕೇಳಬಹುದಾದ ಸಂಭವನೀಯ ಪ್ರಶ್ನೆಗಳ ಪಟ್ಟಿ ನಾನೇ ತಯಾರು ಮಾಡಿ ಕೊಟ್ಟಿದ್ದೆ. ಆ ಬಾರಿ ಸಂದರ್ಶನ ಸಮಿತಿಯಲ್ಲಿ ನಮ್ಮ ಹೊಸ ವ್ಯವಹಾರ ವಿಭಾಗದ ಆಡಳಿತ ಅಧಿಕಾರಿಯಾಗಿದ್ದ ಶ್ರೀ ಟಿ ಎಂ ಪರಶಿವಮೂರ್ತಿ ಅವರು ಹಾಗೂ ಪಕ್ಕದಲ್ಲಿ ಇದ್ದ ಯೋಜನಾ ವಿಭಾಗದ ಸಹಾಯಕ ವಿಭಾಗ ಅಧಿಕಾರಿಯಾದ ಶ್ರೀ ಅಶ್ವತ್ಥ ನಾರಾಯಣಾಚಾರ್ ಅವರು ಇದ್ದರು. ನಂಜನಗೂಡಿನಲ್ಲಿ ನಾನು ಕಾರ್ಯನಿರ್ವಹಿಸುತ್ತಿರುವಾಗ ಅಶ್ವತ್ಥನಾರಾಯಣಾಚಾರ್  ಅವರೇ ನಮ್ಮ ಶಾಖಾಧಿಕಾರಿ ಆಗಿದ್ದರು . ಆ ಸಮಿತಿಯ ಅಧ್ಯಕ್ಷರಾಗಿ ಗೃಹ ಸಾಲ ವಿಭಾಗದ ಶ್ರೀ ನಾಗರಾಜ್ ಅವರು ನಿಯುಕ್ತರಾಗಿದ್ದರು. ವಿಭಾಗಿಯ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಒಂದು ಅನುಕೂಲವೆಂದರೆ ಸಂದರ್ಶನ ಸಮಿತಿಯ ಎಲ್ಲರೂ ನಮಗೆ ತಿಳಿದವರಾಗಿ ಜೊತೆಯಲ್ಲಿ ಕೆಲಸ ಮಾಡಿದವರಾಗಿದ್ದರಿಂದ ಸಂದರ್ಶನ ಎಂದರೆ ಒಂದು ವಿಶೇಷ ಭಯ ಇರುವುದಿಲ್ಲ. ಸಂದರ್ಶನದ ಸ್ವಲ್ಪ ದಿನ ಮುಂಚೆ ಒಂದು ಹೊಸ ಚೂಡಿದಾರ್ ಕೊಂಡಿದ್ದೆ .ಅದನ್ನೇ ಸಂದರ್ಶನಕ್ಕೆ ಹಾಕಿಕೊಂಡು ಹೋಗುವುದು ಎಂದು ನಿರ್ಧರಿಸಿದೆ. ನನಗೆ ಇಷ್ಟವಾದ ಬೂದಿ ಬಣ್ಣದ ಡ್ರೆಸ್ ಅದು. ಸಂದರ್ಶನದ ಕೊಠಡಿ ಒಳಗೆ ಪ್ರವೇಶಿಸಿ  ಅವರುಗಳಿಗೆ ವಂದಿಸಿ ಕುರ್ಚಿಯಲ್ಲಿ ಕುಳಿತಿದ್ದಾಯಿತು. ಪರಶಿವಮೂರ್ತಿಯವರು ನಗುನಗುತ್ತಲೆ ಏನ್ರೀ ಕೇಳೋದು ನಿಮ್ಮನ್ನ ನೀವೇ ತಯಾರು ಮಾಡಿ ಕೊಟ್ಟಿರುವುದು ಈ ಪಟ್ಟಿ ಎಂದರು. ನಂತರ ನಮ್ಮ ಹೊಸ ವ್ಯವಹಾರ ವಿಭಾಗದಲ್ಲಿ ಅವರು ಹೊಸಬರಾಗಿದ್ದಾಗ ಅವರಿಗೆ ಅಲ್ಲಿನ ಕೆಲಸ ನಾನೇ ಹೇಳಿಕೊಟ್ಟಿದ್ದು.  ಹಾಗಾಗಿ ಏನು ಕೇಳಲಿ ಎಂದು ತಮಾಷೆ ಮಾಡಿದ್ದರು. ಅಶ್ವಥನಾರಾಯಣಚಾರ್ ಅವರು ಸಹ ಒಂದೆರಡು ಔಪಚಾರಿಕ ಪ್ರಶ್ನೆಗಳನ್ನು ಕೇಳಿದರು ಅಷ್ಟೇ. ನಾಗರಾಜ ಅವರು ಪಾಲಿಸಿ ಸರ್ವಿಸ್ ಗೆ ಸಂಬಂಧಿಸಿದಂತೆ ಒಂದೆರಡು ಪ್ರಶ್ನೆಗಳನ್ನು ಕೇಳಿದರು. ನನಗೆ ನೆನಪಿರುವುದು ಕಚೇರಿಯಲ್ಲೇ ಪಾಲಿಸಿ ಬಾಂಡ್ ಕಳೆದು ಹೋದಾಗ ಅದರ ತಯಾರಿಕೆಗಾಗಿ ಪಾಲಿಸಿದಾರರಿಂದ ವಸೂಲು ಮಾಡಬೇಕಾದ ಹಣ ಎಷ್ಟು ಎಂದು. ಕಚೇರಿಯಲ್ಲಿ ನಾವೇ ಪಾಲಿಸಿ ಕಳೆದು ಹಾಕಿದಾಗ ನಮ್ಮ ಖರ್ಚಿನಲ್ಲೇ ನಕಲು ಪ್ರತಿಯನ್ನು ತಯಾರು ಮಾಡಬೇಕು ಅದಕ್ಕಾಗಿ ಒಂದು ಆಫೀಸ್ ನೋಟ್ ತಯಾರು ಮಾಡಬೇಕು. ಪಾಲಿಸಿದಾರರಿಂದ ಯಾವ ಹಣವನ್ನು ಪಡೆಯುವಂತಿಲ್ಲ ಎಂದು ಹೇಳಿದ್ದಕ್ಕೆ ಅವರು ತಲೆಯಾಡಿಸಿದರು ಅಷ್ಟೇ. 10 ನಿಮಿಷಗಳಲ್ಲಿ ನನ್ನ ಸಂದರ್ಶನ ಮುಗಿದು ಹೋಗಿತ್ತು ನಮ್ಮ ವಿಭಾಗದ ಎದುರುಗಡೆಯ ಕೊಠಡಿಯಲ್ಲಿ ಸಂದರ್ಶನ ನಡೆದದ್ದು ಹಾಗಾಗಿ ಬಂದವರು ಎಲ್ಲ ನನ್ನ ಸೀಟಿನ ಬಳಿ ಕುಳಿತಿರುತ್ತಿದ್ದರು. ಕೆಲವರನ್ನಂತೂ ಬಹಳ ಪ್ರಶ್ನೆ ಕೇಳಿದ್ದರು ಎಂದು ತಿಳಿಯಿತು. ಹೀಗೆ ಪದೋನ್ನತಿಗೆ ಆಯ್ಕೆ ಮಾಡುವಾಗ ನಾವು ಮಾಡಿದ ಸೇವಾ ಅವಧಿ ಹಾಗೂ ನಮಗೆ ಪ್ರತಿ ವರ್ಷ ಕೊಡುವ ನಮ್ಮ ಸಿ ಅರ್ ಅಂದರೆ ನಮ್ಮ ಕೆಲಸದ ಬಗೆಗಿನ ವಾರ್ಷಿಕ ವರದಿ ಮತ್ತು ಸಂದರ್ಶನದಲ್ಲಿ ನಾವು ಕಳಿಸಿದ ಅಂಕ ಇವೆಲ್ಲವುಗಳನ್ನು ಆಧರಿಸಿ ಅಂಕೆಗಳನ್ನು ಕೊಡುತ್ತಾರೆ. ನಮ್ಮ ಜೀವ ವಿಮಾ ನಿಗಮದ ಒಂದು ಅಲಿಖಿತ ನಿಯಮದಂತೆ ಅಂದು ಶನಿವಾರ ಮಧ್ಯಾಹ್ನ ಫಲಿತಾಂಶ ಹೊರಬಿದ್ದಿತ್ತು. ಅರ್ಹತೆವಾರು ಪಟ್ಟಿಯಲ್ಲಿ ನನ್ನದು ಮೊದಲ ಹೆಸರು. ಇಷ್ಟೆಲ್ಲಾ ಆದರೂ ಒಂದು ರೀತಿಯ ಸಂಧಿಗ್ಧ. ಹೋಗುವುದು ಬೇಡವೋ ಎಂದು. ನೋಡೋಣ ಎಲ್ಲಿಗೆ ಪೋಸ್ಟಿಂಗ್ ಸಿಕ್ಕತ್ತೆ ಅದರ ಮೇಲೆ ನಿರ್ಧರಿಸೋಣ ಎಂದುಕೊಂಡಿದ್ದು.  ನಾನು ಆಯ್ಕೆ ಮಾಡಿ ಕೊಟ್ಟಿದ್ದ ಸ್ಥಳಗಳು ಕೆ ಆರ್ ನಗರ ಹುಣಸೂರು ಮತ್ತು ಚಾಮರಾಜನಗರ ಆದರೆ ನನ್ನ ಜೊತೆ ಆಯ್ಕೆಯಾದವರು ನನಗಿಂತ ವಯಸ್ಸಿನಲ್ಲಿ ಸೀನಿಯರ್ ಆಗಿದ್ದರಿಂದ ದಿನವು ಓಡಾಡಬಹುದಾದ ಈ ಸ್ಥಳಗಳು ಸಹ ನನಗೆ ಸಿಗುವ ಸಾಧ್ಯತೆ ಇರಲಿಲ್ಲ. ಆ ಪಟ್ಟಿ ಬಿಟ್ಟರೆ ಮುಂದೆ ಒಂದು ಕಂಟಿನ್ಜೆನ್ಸಿ ಪಟ್ಟಿಯಲ್ಲಿ ಕೆ ಆರ್ ಪೇಟೆ ಸಿಗುವ ಸಾಧ್ಯತೆ ಇತ್ತು. ದಿನವೂ ಓಡಾಡಬಹುದಾದರು ಹೆಚ್ಚು ಬಸ್ಸುಗಳು ಇರಲಿಲ್ಲ ಮತ್ತು ರಸ್ತೆ ಸಹ ತುಂಬಾ ಕೆಟ್ಟದಾಗಿ ಇತ್ತು . ನಂಜನಗೂಡಿನಲ್ಲಿ ನನ್ನೊಂದಿಗೆ ಕೆಲಸ ಮಾಡುತ್ತಿದ್ದ ಸುಲೋಚನಾ ಅವರಿಗೂ ಪದೋನ್ನತಿ ಸಿಕ್ಕಿದ್ದು ಅವರು ಸಹ ಪೋಸ್ಟಿಂಗ್ ವಿಷಯದಲ್ಲಿ ಸಂದಿಗ್ಧದಲ್ಲಿ ಇದ್ದರು ನಮ್ಮ ಆಡಳಿತ ಅಧಿಕಾರಿಯಾಗಿದ್ದ ಟಿ ಎಂ ಪರಶಿವಮೂರ್ತಿ ಅವರು ಸುಲೋಚನಾ ಅವರಿಗೆ ಬಹಳ ಆಪ್ತರು ಅವರು ನಮ್ಮಿಬ್ಬರ ಜೊತೆ ಮಾತನಾಡಿ ನಿಮ್ಮಿಬ್ಬರ ಸ್ವಭಾವ ತುಂಬಾ ಚೆನ್ನಾಗಿ ಹೊಂದುತ್ತದೆ ಇಬ್ಬರು ಮಾತನಾಡಿಕೊಂಡು ಒಂದೇ ಕಡೆಗೆ ಪೋಸ್ಟಿಂಗ್ ತೆಗೆದುಕೊಳ್ಳಿ ಒಂದು ವರ್ಷ ಒಟ್ಟಿಗೆ ಇದ್ದು ನಂತರ ವಾಪಸ್ ಬರಬಹುದು ಎಂದರು. ರವೀಶ್ ಮತ್ತು ನನ್ನ ತಂದೆ ಸಹ ದಿನ ಓಡಾಡಿ ಕಷ್ಟಪಡುವುದರ ಬದಲು ಇದು ಒಳ್ಳೆಯ ಸಲಹೆ ಎಂದಾಗ ಸಂಬಂಧ ಪಟ್ಟವರೊಡನೆ ಮಾತನಾಡಿದಾಗ ಇಬ್ಬರನ್ನು ಒಟ್ಟಿಗೆ ಸಕಲೇಶಪುರಕ್ಕೆ ಪೋಸ್ಟಿಂಗ್ ಮಾಡಿದರು. ಈಗಾಗಲೇ ಮೊದಲ ವರ್ಷಗಳಲ್ಲಿ ಹೋದವರು ಅಲ್ಲಿ ಒಂದು ಪ್ಲೇಯಿಂಗ್ ಗೆಸ್ಟ್ ಮನೆಯಲ್ಲಿ ಇದ್ದರು ಎಂಬ ವಿಷಯ ತಿಳಿದು ಹೋಗೋಣ ಎಂದು ನಾನು ಸುಲೋಚನಾ ನಿರ್ಧರಿಸಿದೆವು.ರವೀಶ್ ಅವರ ಊರಿನ ಕೆಲವರು ಆಗ ಸಕಲೇಶಪುರದಲ್ಲೇ ಇದ್ದುದರಿಂದ ಅವರ ಸಹಾಯ ಪಡೆಯಬಹುದು ಎಂಬ ಒಂದು ನಂಬಿಕೆಯು ಇತ್ತು.ಸರಿ ಹೋಗುವುದು ನಿರ್ಧಾರವಾಗಿ ವಿಭಾಗಿಯ ಕಚೇರಿಯ ಎಲ್ಲರಿಗೂ ಸಿಹಿ ಹಂಚಿದ್ದು ಆಯಿತು ನಮ್ಮ ವಿಭಾಗದವರು ಮತ್ತು ನನಗೆ ಆಪ್ತರಾಗಿದ್ದ ಸರಸ್ವತಿ ಕಮಲ ಮತ್ತು ಸುಮಾ ಇವರುಗಳನ್ನು ಕರೆದುಕೊಂಡು ಹೋಗಿ ಫಾರಸ್ ಹೋಟೆಲಿನಲ್ಲಿ ಪಾರ್ಟಿ ಕೊಡಿಸಿದ್ದು ಆಯಿತು. ಸುಮಾ ಮತ್ತು ಕಮಲ ಒಂದು ಚೆಂದದ ವ್ಯಾನಿಟಿ ಬ್ಯಾಗ್ ಅನ್ನು ನಮಗೆ ಗಿಫ್ಟ್ ಆಗಿ ನೀಡಿದರು. ನಮ್ಮ ಹೊಸ ವ್ಯವಹಾರ ವಿಭಾಗದವರು ಸೇರಿಕೊಂಡು ಒಂದು ಸೂಟ್ಕೇಸ್ ಉಡುಗೊರೆ ನೀಡಿದರು. ನಾನು ತುಂಬಾ ಅಮೃತಾಂಜನ್ ಅಥವಾ ಜಂಡು ಬಾಮನ್ನು ಹಣೆಗೆ ಹಚ್ಚಿಕೊಳ್ಳುತ್ತಲೇ ಇರುತ್ತಿದ್ದೆ .ಅದಕ್ಕೆ ಮುರಳಿಯವರು ರೇಗಿಸಿ ಇಲ್ಲಿಯೇ ಇಷ್ಟೊಂದು ಬಳಸುತ್ತೀರಿ . ಇನ್ನು ಆ ಥಂಡಿ ಪ್ರದೇಶದಲ್ಲಿ ಎಷ್ಟೊಂದು ಬೇಕಾಗುತ್ತದೆ. ಒಂದು ಡಝನ್ ಗಿಫ್ಟ್ ಕೊಡೋಣವಾ  ಅಂತ ರೇಗಿಸಿದ್ದರು. ಅಂತೂ ಏಳು ವರ್ಷಗಳಿಂದ ಇದ್ದ ವಿಭಾಗೀಯ ಕಚೇರಿಯನ್ನು ಬಿಡಲು ತುಂಬಾನೇ ಬೇಸರ ಅನಿಸಿತು. ಆದರೂ ಹೊಸ ಜಾಗ ಹೊಸ ಸವಾಲುಗಳು ಒಂದು ರೀತಿಯ ಥ್ರಿಲ್ ಎಂದು ಕೂಡ ಎದುರು ನೋಡುತ್ತಿದ್ದೆ. ಸುಜಾತಾ ರವೀಶ್

Read Post »

ಇತರೆ

ಕನ್ನಡದ ಶ್ರೇಷ್ಠ ಕವಿ ನಿಸ್ಸಾರ್ ಅಹ್ಮದ್ ಮತ್ತು ಹಿರಿಯ ಸಾಹಿತ್ಯ ದಿಗ್ಗಜರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ನಡುವಿನ ಸೌಜನ್ಯ ತುಂಬಿದ ಸ್ನೇಹ” ಒಂದು ನೆನಪು, ಗೊರೂರು ವಸಂತಿ ಮೂರ್ತಿ (ಕೆನಡಾ) ಅವರಿಂದ

ಹಿರಿಯರ ಸಂಗಾತಿ ಗೊರೂರು ವಸಂತಿ ಮೂರ್ತಿ (ಕೆನಡಾ) ಗೊರೂರುರಾಮಸ್ವಾಮಿ ಅಯ್ಯಂಗಾರ್‌ ಅವರ ಸುಪುತ್ರಿ ಕನ್ನಡದ ಶ್ರೇಷ್ಠ ಕವಿ ನಿಸ್ಸಾರ್ ಅಹ್ಮದ್ ಮತ್ತು ಹಿರಿಯ ಸಾಹಿತ್ಯ ದಿಗ್ಗಜರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ನಡುವಿನ ಸೌಜನ್ಯ ತುಂಬಿದ ಸ್ನೇಹ” ಒಂದು ನೆನಪು, ಈ ದಿನ ಶ್ರೀ ನಿಸ್ಸಾರ್ ಅಹ್ಮದ್ ಅವರ ಜನ್ಮದಿನೋತ್ಸವ.  ಅವರು  1936 ಫೆಬ್ರವರಿ 5 ನೆಯ  ತಾರೀಕು ಜನಿಸಿದರು.  ಕರ್ನಾಟಕದಲ್ಲಿ ಅವರ ಹೆಸರನ್ನು ಕೇಳದವರು ಯಾರಿದ್ದಾರೆ? ಅವರು ನನ್ನ ತಂದೆ Dr. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸ್ನೇಹಿತರು .  ಆ ಸ್ನೇಹ, ಸೌಜನ್ಯದಿಂದ ತುಂಬಿದ ಸ್ನೇಹ.  ಒಮ್ಮೆ ನಿಸ್ಸಾರ್ ಅಹ್ಮದ್ ಅವರು ನಮ್ಮ ಬೆಂಗಳೂರಿನ ರಾಜಾಜಿನಗರದ ಮನೆಗೆ ಬೆಂಗಳೂರು ಆಕಾಶವಾಣಿಯ ಪರವಾಗಿ ಬಂದು ನಮ್ಮ ತಂದೆಯವರ ಸಂದರ್ಶನವನ್ನು ಧ್ವನಿಮುದ್ರಣ ಮೂಲಕ ಮಾಡಿದರು.  ಈ ಸಂದರ್ಶನ ಇಂದಿಗೂ ಯು ಟ್ಯೂಬ್ನಲ್ಲಿ ದೊರೆಯುತ್ತದೆ. ಕನ್ನಡ ಸಾಹಿತ್ಯದ ದಿಗ್ಗಜರು ಕುಳಿತು ಮಾತನಾಡಿರುವ ಅಪೂರ್ವ ಸಂದರ್ಭ.  ಈ ಸಂದರ್ಶನವನ್ನು ನೋಡಿದವರಿಗೆ ಅವರಿಬ್ಬರಲ್ಲಿರುವ ಪರಸ್ಪರ ಗೌರವ  ತಾನೇತಾನಾಗಿ ವ್ಯಕ್ತ ವಾಗುತ್ತದೆ. ಆ ಸಂದರ್ಶನದ ಲಿಂಕ್ ಇಲ್ಲಿದೆ.  ಒತ್ತಿ ಕೇಳಬಹುದು. https://youtu.be/KYBBBtwaJ7Q?si=UJ3FFcw4dsoSlNsy. ಶ್ರೀ ನಿಸ್ಸಾರ್ ಅವರ ಉತ್ತಮ ಸಾಹಿತ್ಯ. ಕವನಗಳಿಗೆ ಅನೇಕ ಬಿರುದು, ಪ್ರಶಂಸೆ ಹಾಗೂ ಬಹುಮಾನಗಳು ಸಂದಿವೆ.  ಅವರ ನಿತ್ಯೋತ್ಸವದ ಧ್ವನಿಮುದ್ರಣವಂತೂ ಕನ್ನಡಿಗರ ಮನಸ್ಸನ್ನು ಸೂರೆಗೊಂಡಿದೆ. ಅವರು ನಿಧನರಾದುದು 2020 May 3 ನೆಯ ತಾರೀಕು.  ಆದಿನ ಅನೇಕ ಲೇಖಕರು, ಅಭಿಮಾನಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಆದ ತುಂಬಲಾರದ ನಷ್ಟವನ್ನು ಕುರಿತು ಬರೆದರು.  ಆ ಸಮಯದಲ್ಲಿ ಕನ್ನಡ ಓದಲು ಮತ್ತು ಬರೆಯಲು ತಿಳಿಯದ ನನ್ನ ಕೆಲವು ಸ್ನೇಹಿತರಿಗಾಗಿ ನಾನು ನಿಸ್ಸಾರ್ ಅಹ್ಮದ್ ಅವರ ಒಂದು ಖ್ಯಾತ ಪದ್ಯವನ್ನು ಇಂಗ್ಲಿಷಿಗೆ ತರ್ಜುಮೆ ಮಾಡಿದ್ದೆ.  ಅ ಪದ್ಯದ ಹೆಸರು: ನಿಮ್ಮೊಡನಿದ್ದರೂ ನಿಮ್ಮಂತಾಗದೇ ಕನ್ನಡ ಮೂಲ:ನಿಮ್ಮೊಡನಿದ್ದೂ ನಿಮ್ಮಂತಾಗದೆಸಾಹಿತ್ಯ : ಪ್ರೊ. ಕೆ ಎಸ್ ನಿಸಾರ್ ಅಹಮದ್. ನಿಮ್ಮೊಡನಿದ್ದೊ ನಿಮ್ಮಂತಾಗದೆಜಗ್ಗಿದ ಕಡೆ ಬಾಗದೆನಾನು ನಾನೇ ಆಗಿ ಈ ನೆಲದಲ್ಲೆ ಬೇರೊತ್ತಿದ್ದರೂ ಬೀಗಿ ಪರಕೀಯನಾಗಿತಲೆಯೆತ್ತುವುದಿದೆ ನೋಡಿಅದು ಬಲುಕಷ್ಟದ ಕೆಲಸ. ವೃತ್ತದಲ್ಲಿ ಉನ್ಮತ್ತರಾದನಿಮ್ಮ ಕುಡಿತ ಕುಣಿತ ಕೂಟಗಳುಕೆಣಕಿ ಎಸೆದಿದ್ದರೂಪಂಚೇಂದ್ರಿಯಕ್ಕೆ ಲಗಾಮು ಜಡಿದು ಜಾರದೆ ನಿಮ್ಮತ್ತಸಂಯಮವನ್ನೇ ಪೋಷಿಸಿ ಸಾಕುತ್ತರೇಖೆಯಲ್ಲೇ ದೊಂಬರಾಟ ನಡೆಸುವುದಿದೆ ನೋಡಿಅದು ಬಲು ಕಷ್ಟದ ಕೆಲಸ. ಒಳಗೊಳಗೆ ಬೇರುಕೊಯ್ದುಲೋಕದೆದುರಲ್ಲಿ ನೀರು ಹೊಯ್ದುನನ್ನ ಸಲಹುವ ನಿಮ್ಮ ಕಪಟ ಗೊತ್ತಿದ್ದರೂಗೊತ್ತಿಲ್ಲದಂತೆ ನಟಿಸಿಚಕಾರವೆತ್ತದೆ ನಿಮ್ಮೊಡನೆ ಕಾಫಿಹೀರಿ ಪೇಪರೋದಿ ಹರಟಿಬಾಳ ತಳ್ಳುವುದಿದೆ ನೋಡಿಅದು ಬಲು ಕಷ್ಟದ ಕೆಲಸ. ನಿಮ್ಮ ಮಾತುಕತೆಗಳಲ್ಲಿ ಹುದುಗಿದ ಬೆಕ್ಕುಸಂಶಯದ ಪಂಜವೆತ್ತಿನನ್ನ ನಂಬಿಕೆ ನೀಯತ್ತು ಹಕ್ಕುಕೊನೆಗೆ ಸಾಚಾತನವನ್ನು ಪರಚಿ, ಒತ್ತಿನೋವಿಗೆ ಕಣ್ಣು ತುಂಬಿದ್ದರೂ, ಚೆಲ್ಲಿದ ರಕ್ತದಲ್ಲಿ ರಾಷ್ಟ್ರೀಯತೆಯ ಧಾತುಗಳನನ್ನದುರಿನಲ್ಲೇ ತನಿಖೆಮಾಡುವ ಕ್ಷಣವನ್ನುಹುಸಿನಗುತ್ತ ಎದುರಿಸುವುದಿದೆಯಲ್ಲಅದು ಬಲು ಕಷ್ಟದ ಕೆಲಸ My translation:Nimmodaniddu NimmanthagadeByNissar Ahmed Even while being with youNot being able to become like you,Not leaning towards any pull and being myselfWhile all of me and my whole existence are rooted in this landYet I am shirking like a foreignerTrying to lift my head you seeIt is a very difficult task!! In your circle of intoxication, drunkenness, dancing partiesEven while being provokedKeeping the five senses under the leashNot sliding down, maintaining disciplineAnd walking a fine lineWhile participating in the show you seeIt is a very difficult task While having chopped my roots insideAnd pouring water for the purpose of showAlthough I know of your hypocrisyBut having to pretend like I do not know thisWithout a single sign of objectionDrinking coffee with youReading the newspaper and making small talkLiving the entire life like this you seeIs a very difficult talk ಈ ಪದ್ಯದಲ್ಲಿ.ನಿಸ್ಸಾರ್ ಅಹ್ಮದ್ ಅವರು ತಮ್ಮ ಹೃದಯದ ಅಂತರಾಳದಲ್ಲಿ ಇರುವ ಒಂದು ನೋವನ್ನು ನಮಗೆ ಒಂದು ಸಣ್ಣ ಕಿಂಡಿಯ ಮೂಲಕ ಬೆಳಕು ಬಿಟ್ಟು ತೋರಿಸಿದ್ದಾರೆ.  ಈ ಪದ್ಯ ಪ್ರತಿ ದಿನವೂ, ಪ್ರತಿ ಕ್ಷಣವೂ ಅವರ ಮನಸ್ಸಿನಲ್ಲಿ ನಡೆಯುತ್ತಿರುವ ತುಮುಲ ಯುದ್ಧದ ಪರಿಚಯವನ್ನು ನಮಗೆ ಮಾಡಿಸುತ್ತದೆ.  ಶ್ರೀ ನಿಸ್ಸಾರ್ ಅಹ್ಮದ್ ಅವರ ಸಾಹಿತ್ಯ ಸಾಧನೆ ಕನ್ನಡ ಭಾಷೆಯಲ್ಲಿ ಅದ್ವಿತೀಯ.  ಅವರಿಗೆ ಹೃತ್ಪೂರ್ವಕ ನಮನಗಳು. ಲೇಖಕಿ: ಗೊರೂರು ವಸಂತಿ ಮೂರ್ತಿ (ಕೆನಡಾ)ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸುಪುತ್ರಿ

ಕನ್ನಡದ ಶ್ರೇಷ್ಠ ಕವಿ ನಿಸ್ಸಾರ್ ಅಹ್ಮದ್ ಮತ್ತು ಹಿರಿಯ ಸಾಹಿತ್ಯ ದಿಗ್ಗಜರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ನಡುವಿನ ಸೌಜನ್ಯ ತುಂಬಿದ ಸ್ನೇಹ” ಒಂದು ನೆನಪು, ಗೊರೂರು ವಸಂತಿ ಮೂರ್ತಿ (ಕೆನಡಾ) ಅವರಿಂದ Read Post »

You cannot copy content of this page

Scroll to Top