ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಬಹುಮಾನ”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಬಹುಮಾನ” ಸದ್ದು ಗದ್ದಲವಿಲ್ಲದಪ್ರಸಿದ್ಧಿ ಪ್ರಚಾರವಿಲ್ಲದಗಟ್ಟಿ ಜೀವಹಲವು ಕನಸುನಿತ್ಯ ಪಯಣಹೆಜ್ಜೆ ಹಾಕುವುದುನಿಂತಿಲ್ಲ ಸೋಲೋ ಗೆಲುವೋಗೊತ್ತಿಲ್ಲಅಳುಕು ಆತಂಕಆನಂದ ಐಸಿರಿಎಲ್ಲವೂ ವಿಧಿಯಾಟನಡೆದ ದಾರಿಯಶ್ರಮ ದೂರಸಂತೃಪ್ತಿ ಮೌನನನ್ನ ನಿನ್ನಯಪ್ರೀತಿ ಬಹುಮಾನ ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಬಹುಮಾನ” Read Post »

ಕಾವ್ಯಯಾನ

ಡಾ.ಗೀತಾ ದಾನಶೆಟ್ಟಿ ಕವಿತೆ “ಬಚ್ಚಿಟ್ಟ ಬಯಕೆ”

ಕಾವ್ಯ ಸಂಗಾತಿ ಡಾ.ಗೀತಾ ದಾನಶೆಟ್ಟಿ “ಬಚ್ಚಿಟ್ಟ ಬಯಕೆ” ಎದೆಯ ಗೂಡಿನಲ್ಲಿತುಂಬಿ ತುಳುಕುವಬಚ್ಚಿಟ್ಟ ಬಯಕೆಗಳನುಬಿಚ್ಚಿಡುವ ಆತುರ ಮನದ ಆಲಯದಲ್ಲಿಹುದುಗಿದ್ದ ಅದೆಷ್ಟೋಆಕರ್ಷಣೆಗಳ ಸೆಳೆತಕೆತೆರೆದುಕೊಳ್ಳುವ ಕಾತುರ ಮುಗಿಯದಷ್ಟು ಮಾತುಗಳುಮನದಾಳದಲ್ಲಿ ಮೊಳೆತಿವೆಚಿಗುರೊಡೆವ ಬಯಕೆಗೆಕನಸುಗಳು ಸಾವಿರ ಮಾತುಗಳು ಮೌನವಾಗಿಮೌನದಲ್ಲೇ ಹರಿಸಿ ಹಾರೈಸಿಸ್ಪಂದಿಸುವ ಜೀವಕ್ಕೆನೆನಪುಗಳ ನಿರಾಳತೆ ಮಧುರ ಕಾಣದ ಕಡಲನುಸೇರುವ ಕಾತುರಅಬ್ಬರದ ಅಳೆಗಳನ್ನುಅಪ್ಪಿಕೊಳ್ಳುವ ಅವಸರ ಆಕಾಶದ ನೀಲಿಗೆಕಾರ್ಮೋಡಗಳ ತೋರಣಇಳೆಗೆ ಮಳೆಯ ಸಿಂಚನಸೇರಲು ಮಾನಸ ಸರೋವರ ಡಾ.ಗೀತಾ ದಾನಶೆಟ್ಟಿ

ಡಾ.ಗೀತಾ ದಾನಶೆಟ್ಟಿ ಕವಿತೆ “ಬಚ್ಚಿಟ್ಟ ಬಯಕೆ” Read Post »

ಕಾವ್ಯಯಾನ

ಸಿದ್ದಲಿಂಗಪ್ಪ ಬೀಳಗಿ ಅವರ ತನಗಗಳು

ಕಾವ್ಯ ಸಂಗಾತಿ ಸಿದ್ದಲಿಂಗಪ್ಪ ಬೀಳಗಿ ತನಗಗಳು ೧ಸೋತು ಹೋದೆನೆನ್ನುವಪಾಪ ಪ್ರಜ್ಞೆ ಬಿಸಾಕುಗೆಲುವಿನ ಕುದುರೆಹತ್ತಿ ಓಡಿಸು ಸಾಕು೨ಸಾಸಿವೆಯ ತರಲುಸಾಲುಗಟ್ಟಿದ ಜನಸಾವಿಲ್ಲದ ಮನೆಯಹುಡುಕಿ ಕಳಾಹೀನ೩ನನ್ನ ನಿನ್ನ ನಡುವೆಸುಮ್ಮನೇಕೆ ಬಿರುಕುತಣ್ಣನೆಯ ಪ್ರೀತಿಯುನೆಮ್ಮದಿಯ ಸರಕು೪ಮುಡಿ ತುಂಬ ಮಲ್ಲಿಗೆಮೊಗದಿ ನಗು ಹಾರನೋಡುವ ಮನದಲಿಪ್ರೀತಿ ಪೋಣಿಸು ದಾರ೫ಊರ ಮಂದಿಗೆ ಅಂಜಿಊರೂರು ಸುತ್ತಿದಾತದಾರಿ ಸರಿದ ಮೇಲೆವಾಸ್ತವಕೆ ಬಂದಾತ೬ನಗೆ ಬೀರಿದಾಗೊಮ್ಮೆಎದೆಯಲಿ ನಡುಕಹದವಾಗಿ ತಬ್ಬಲುಬಿಸಿ ಗಾಳಿಯ ತಾಪ ಸಿದ್ದಲಿಂಗಪ್ಪ ಬೀಳಗಿ

ಸಿದ್ದಲಿಂಗಪ್ಪ ಬೀಳಗಿ ಅವರ ತನಗಗಳು Read Post »

ಇತರೆ

“ವಿಶ್ವ  ಮಾತೃ ಭಾಷಾ ದಿನ” ಗಾಯತ್ರಿ ಸುಂಕದ

ಭಾಷಾ ಸಂಗಾತಿ “ವಿಶ್ವ  ಮಾತೃ ಭಾಷಾ ದಿನ” ಗಾಯತ್ರಿ ಸುಂಕದ ನಮ್ಮ ಜೀವನದಲ್ಲಿ  ತಾಯಿ, ತಾಯ್ನಾಡು, ಹೇಗೆ ಮುಖ್ಯವೋ ಹಾಗೆ ತಾಯಿ ನುಡಿ ಕೂಡ ಅಷ್ಟೇ ಮುಖ್ಯ.ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಎನ್ನುವಂತೆ ನಮ್ಮ ಮಾತೃ ಭಾಷೆ ಶುರು ಆಗುವುದು ನಮ್ಮ ಮನೆಯಲ್ಲಿ.ಮಾತೃ ಭಾಷೆ ನಮ್ಮ ಭಾವನೆಗಳಿಗೆ ಕನ್ನಡಿ ಇದ್ದ ಹಾಗೆ.ನಾವು ಎಷ್ಟೇ ಬೇರೆ ಭಾಷೆಗಳಲ್ಲಿ ಪರಿಣಿತಿ ಇದ್ದರೂ. ನಮ್ಮ ಭಾವನೆಗಳು ಮಾತೃಭಾಷೆ ಮುಖಾಂತರ ಹೊರ ಬರುತ್ತವೆ.ನಮಗೆ ದುಃಖ ಬಂದಾಗ ಅಯ್ಯೋ ರಾಮ  ಅನ್ನುತ್ತವೆಯೋ ಹೊರತು ಬೇರೆ ಯಾವ ಶಬ್ದ ಗಳು ಬರುವುದಿಲ್ಲ.ನಾವು ಚಿಕ್ಕವರಿದ್ದಾಗ ನಮ್ಮ ಮನೆಯಲ್ಲಿ ದೇವರಿಗೆ ಬೇಡಿ ಕೊಳ್ಳಬೇಕಾದಾಗ. ಕೇವಲ ಮಾತೃಭಾಷೆಯಲ್ಲಿ ಬೇಡಿಕೊ, ದೇವರು ಒಲಿಯುತ್ತಾನೆ ಎನ್ನುತ್ತಿದ್ದರು. ಹೀಗಾಗಿಯೇ ಈಗಲೂ ದೇವರ ಮುಂದೆ ನಿಂತಾಗ ನಮ್ಮ ಪ್ರಾರ್ಥನೆಗಳು ನಮ್ಮ ಆಡು ಭಾಷೆಯಲ್ಲಿ ಹೊರ ಬರುತ್ತವೆ.ನಮ್ಮ ಮಾತೃಭಾಷೆ ನಮ್ಮನ್ನು ಪ್ರತಿನಿಧಿಸುತ್ತದೆ. ಲಂಬಾಣಿ ಭಾಷೆ, ಕೊಂಕಣಿ ಭಾಷೆ,  ತುಳು ಭಾಷೆ ಈಗಲೂ ಉಳಿಯಬೇಕಾದರೆ ಮುಖ್ಯ ಕಾರಣ ಎಂದರೆ ಅವು ಕೆಲ ಪ್ರದೇಶದ ಜನರ ಮಾತೃಭಾಷೆ  ಆಗಿವೆ. ಕೆಲವೊಂದು  ಮಾತೃ ಭಾಷೆಗಳು ಲಿಪಿ ಇಲ್ಲದೆ ಇದ್ದರೂ ಈಗಲೂ ತಮ್ಮ ಅಸ್ತಿತ್ವವನ್ನು ಉಳಿಸಿ ಕೊಂಡಿವೆ.ನಮಗೆ ಕೆಟ್ಟ  ಕನಸು ಬಿದ್ದರೆ ಅಮ್ಮ ಎಂದು ಕೂಗುತ್ತೇವೆ ಹೊರತು  ಬೇರೆ ಯಾವ. ಭಾಷೆ ನಮ್ಮನ್ನು ಕೈ ಹಿಡಿಯುವುದಿಲ್ಲ.ಬನ್ನಿಮಾತೃ ಭಾಷೆ ಯನ್ನೂ ಉಳಿಸಿ ಬೆಳೆಸೋಣ. ಗಾಯತ್ರಿ ಸುಂಕದ

“ವಿಶ್ವ  ಮಾತೃ ಭಾಷಾ ದಿನ” ಗಾಯತ್ರಿ ಸುಂಕದ Read Post »

ಕಾವ್ಯಯಾನ

ಹಮೀದ್ ಹಸನ್ ಮಾಡೂರು “ಜೀವನ-ಮರಣ”

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಜೀವನ-ಮರಣ” ಅಯ್ಯೋ ಪ್ರಾಣವೇ…ನಿನಗಲ್ಲ, ನನಗಾಗಿದೆ ಪ್ರಾಯ,ತ್ರಾಣವಿಲ್ಲದ ಎಲುಬುಗಳ ಮಧ್ಯೆಉಸಿರೊಂದೇ ಈಗ ಉಳಿದಿರಲು,! ಪ್ರಾಣವೆಂಬ ಈ ಜೀವಾತ್ಮವುಜೀವನದಾಟಗಳ ಮುಗಿಸಿ ಕೂತಿದೆ,ಉಸಿರು ಹಾರುವ ತವಕದಲಿಜೀವನದ ಬಯಕೆಗಳ ಮುಗಿಸಲು,! ಬರೀ ಗೋಳು, ಈ ಬದುಕುದೇವನೇ ತೆಗೆದು ಬಿಡು ಪ್ರಾಣವ,ನನ್ನೂಸಿರನು ಈ ದೇಹದಿಂದೊಮ್ಮೆಈ ಜನ್ಮವು ಸಾಕು, ಮುಗಿಸಿ ಬಿಡಲು,! ಯಾರಿಗೂ ಹೊರೆಯಾಗದೆಯಾರಿಂದಲೂ ನನ್ನ ತಿರಸ್ಕರಿಸದೆನೋಯಿಸುವ ಮುನ್ನ, ನನ್ನನ್ನೊಮ್ಮೆಕರೆಸಿ ಬಿಡು ದೇವ, ನಿನ್ನ ಬಳಿ ಸೇರಲು,! ನನ್ನಾತ್ಮವನು ಸ್ವೀಕರಿಸಿನಿನ್ನೊಡನೆ ಸುಖವಾಗಿರಲು ಬಿಡು,ನನ್ನಯ ಸತ್ಕರ್ಮಗಳೊಮ್ಮೆಬೇಗನೆ ತೂಲನೆ ನೀ ಮಾಡಿ ಬಿಡಲು,! ದುಷ್ಟರಿಂದ ತುಂಬಿದ ಜಗತ್ತುಜಗಮಗಿಸುತ್ತಿರಲು,ನಾನಿರಲಾರೆ,ಹಿಂಸಿಸಿ ಕೊಲ್ಲುವ ಜನರೊಳಗಿಂದಸುರಕ್ಷಿತ ಮರಣವನು ದಯಪಾಲಿಸಲು.! ಹಮೀದ್ ಹಸನ್ ಮಾಡೂರು

ಹಮೀದ್ ಹಸನ್ ಮಾಡೂರು “ಜೀವನ-ಮರಣ” Read Post »

ಕಾವ್ಯಯಾನ

ಡಾ ತಾರಾ ಬಿ ಎನ್ ಧಾರವಾಡ ಅವರ ಕವಿತೆ “ಚೂರಾದ ಮನ ಗಾಜು”

ಕಾವ್ಯ ಸಂಗಾತಿ ಡಾ ತಾರಾ ಬಿ ಎನ್ ಧಾರವಾಡ ಅ “ಚೂರಾದ ಮನ ಗಾಜು” ಹೆಣ್ಣು ಮೃದು ಮನದ ಪಯಣದಲಿಮುಗ್ಧ ಮನದ ಹೂ ತೋಟದಲ್ಲಿನಂಬಿಕೆಯ ಹೂಗಳು ಅರಳಿದಾಗ,ಸಿಹಿ ಮಾತಿನ ಮಳೆ ಸುರಿಸಿಮನ ಕದಡುವ ಕಟುಕರು ನೆರಳಾಗಿ ನಿಲ್ಲಬೇಕಾದವರುಕಟುವಾಗಿ ವರ್ತನೆ ತೋರುವರುನಂಬಿಕೆಗೆ ಅರ್ಹತೆ ಇಲ್ಲದವರುಮೋಸದ  ಮುಖವಾಡದವರು ಕಣ್ಣಿನಲ್ಲಿ ಕನಸು ಕಟ್ಟಿಸಿನಾಳೆಯ ಚಿತ್ರ ಬರೆದವರು,ಅದೇ ಕೈಯಿಂದ ಕನಸು ಕಿತ್ತುಮೌನದ ಗಾಯ ಬಿತ್ತಿದವರು. ಹೃದಯವೆಂಬ ನಾಜೂಕಿನ ಗಾಜಿಗೆಸುಳ್ಳಿನ ಕಲ್ಲು ತೂರಿದವರುಚೂರುಚೂರಾದ ಪ್ರತಿಬಿಂಬದಲ್ಲಿನಗುವೂ ಕಳೆದುಹೋಗಲು ಕಾರಣವಾದವರು ಆದರೂ  ಹೆಣ್ಣು ಮಣ್ಣಲ್ಲಮಳೆ ಬಂದರೂ ಕರಗದ ಶಿಲೆ.ಗಾಯಗಳನ್ನೇ ಗರಿಗರಿಯಾಗಿ ಮಾಡಿಹೊಸ ಬದುಕಿಗೆ ಹೆಜ್ಜೆ ಇಡುವವಳು ಆಕೆಯ ಭಾವನೆಗಳ ಜೊತೆ ಆಟವಾಡುವವರಿಗೆಒಂದು ದಿನ ಅರಿವಾಗುತ್ತದೆಹೆಣ್ಣು ಮನವೆಂಬ ಸಮುದ್ರದ ಆಳವನ್ನು ಅಳೆಯಲು  ಸಾಧ್ಯವಾಗದು ಎಂದು. ಹೆಣ್ಣು ಹೃದಯವನ್ನು ನೋಯಿಸಿದ  ಮನ ,ಕೈಗಳುಒಮ್ಮೆ ಖಾಲಿಯಾಗುವ ಅರಿವಾಗುವುದೇ!ಆದರೆ ಆಕೆಯ ಆತ್ಮಸಮ್ಮಾನಎಂದೆಂದಿಗೂ ಎತ್ತರದಲ್ಲೇ ಇರುವುದು ಡಾ ತಾರಾ ಬಿ ಎನ್ ಧಾರವಾಡ

ಡಾ ತಾರಾ ಬಿ ಎನ್ ಧಾರವಾಡ ಅವರ ಕವಿತೆ “ಚೂರಾದ ಮನ ಗಾಜು” Read Post »

You cannot copy content of this page

Scroll to Top