ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಶಿಕ್ಷಣ

“ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ನಾಗರತ್ನ. ಹೆಚ್ ಗಂಗಾವತಿ

ವಿದ್ಯಾರ್ಥಿ ಸಂಗಾತಿ ನಾಗರತ್ನ. ಹೆಚ್ ಗಂಗಾವತಿ “ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ಪರೀಕ್ಷೆಗಳು ವಿದ್ಯಾರ್ಥಿಗಳ ಜ್ಞಾನ ಕೌಶಲ್ಯ ಮತ್ತು ವಿಷಯದ ಆಳವಾದ ತಿಳುವಳಿಕೆಯನ್ನು ಅಳೆಯುವ ಪ್ರಮುಖ ಶೈಕ್ಷಣಿಕ ಮೌಲ್ಯಮಾಪನ ಸಾಧನವಾಗಿದೆ ಇವು ಶಿಸ್ತು ,ಸಮಯ, ನಿರ್ವಹಣೆ ಮತ್ತು ಕಠಿಣ ಪರಿಶ್ರಮವನ್ನು ಉತ್ತೇಜಿಸುತ್ತವೆ. ವೈಯಕ್ತಿಕ ಬೆಳವಣಿಗೆಗೆ ಮತ್ತು ಮುಂದಿನ ಹಂತದ ಶಿಕ್ಷಣದ ಅಗತ್ಯವಾದ ತಾರ್ಕಿಕ ಚಿಂತನೆಗಳನ್ನು ಬೆಳೆಸುವಲ್ಲಿ ಸಹಾಯ ಮಾಡುತ್ತವೆ ಅಷ್ಟೇ ಅಲ್ಲದೆ ಇದು ಕಲಿಕೆಯ ಪ್ರಕ್ರಿಯೆ ಪ್ರಮುಖ ಭಾಗವಾಗಿದೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಸಾಧನವಾಗಿದೆ. ಪರೀಕ್ಷೆಗಳು ವಿದ್ಯಾರ್ಥಿ ಒಂದು ನಿರ್ದಿಷ್ಟ ಅವಧಿಯಲ್ಲಿ ಎಷ್ಟು ವಿಷಯವನ್ನು ಕಲಿತಿದ್ದಾನೆ ಮತ್ತು ವಿಷಯವನ್ನು ಎಷ್ಟರಮಟ್ಟಿಗೆ ಅರ್ಥಮಾಡಿಕೊಂಡಿದ್ದಾನೆ ಎಂಬುದನ್ನು ನಿರ್ಣಯಿಸುವುದು ಹಾಗೂ ಕೇವಲ ಅಂಕ ಗಳಿಗಾಗಿ ಅಲ್ಲ ಬದಲಿಗೆ ವಿಷಯದ ಮೇಲಿನ ಹಿಡಿತವನ್ನು ಪರೀಕ್ಷಿಸುತ್ತದೆ. ಹಾಗೂ ಪರೀಕ್ಷೆಗಳು ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುವುದಷ್ಟೇ ಅಲ್ಲದೆ ಅವನ ಜ್ಞಾನವನ್ನು ಅಳೆಯುವಂತಹ ಒಂದು ಸಾಧನವು ಕೂಡ ಹೌದು. ಮತ್ತು ವಿದ್ಯಾರ್ಥಿಗೆ ಸಮಯವನ್ನು ಹಾಗೂ ಬರವಣಿಗೆ ಕೌಶಲ್ಯವನ್ನು ಯಾವ ರೀತಿ ಉಪಯೋಗ ಸುವಂತಹ ಕಲೆಯನ್ನ ಬಳಸುತ್ತದೆ ಮತ್ತು ಎಷ್ಟೇ ಸವಾಲುಗಳು ಇದ್ದರೂ ಸಹ ಪರೀಕ್ಷೆಯಲ್ಲಿ ಉತ್ತಮ ಬರೆಯಬೇಕು ಎಂಬ ಛಲವನ್ನ ಮೂಡಿಸುತ್ತದೆ. ಹಾಗೂ ವಿಷಯದ ಕಲ್ಪನೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ . ವೈಯಕ್ತಿಕ ಬೆಳವಣಿಗೆಗೆ ಮತ್ತು ಮುಂದಿನ ಹಂತದ ಶಿಕ್ಷಣಕ್ಕೆ ಅಗತ್ಯವಾದ ಜ್ಞಾನವನ್ನು ಬೆಳೆಸುತ್ತದೆ. ಕಲಿಕೆಯ ಗುಣಮಟ್ಟ ಮತ್ತು ವಿಷಯದ ಜ್ಞಾನದ ಮಟ್ಟವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪರೀಕ್ಷೆಗಳು ಸಹಾಯ ಮಾಡುತ್ತವೆ. ಓದಲು ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದಷ್ಟೇ ಅಲ್ಲದೆ ಪ್ರೇರಣೆಯನ್ನು ಒದಗಿಸುತ್ತದೆ ಪರೀಕ್ಷೆಯು ಕೇವಲ ಅಂಕಗಳಿಗಾಗಿ ಅಲ್ಲ ಬದಲಾಗಿ ಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ. ಹಾಗೂ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವುದರಿಂದ ತಪ್ಪದೇ ಸಮಯಕ್ಕೆ ಸರಿಯಾಗಿ ಹಾಜರಾಗುವುದು ಅಷ್ಟೇ ಮುಖ್ಯವಾಗಿರುತ್ತದೆ ಮತ್ತು ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ ಹಾಗಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ ಹಾಗೂ ಪರೀಕ್ಷೆಗಳು ವಿದ್ಯಾರ್ಥಿಯ ಜೀವನದಲ್ಲಿ ಮಹತ್ವವಾದಗಳು *ಉದಾಹರಣೆಗೆ*ಶಿಕ್ಷಣ ಎಷ್ಟು ಮುಖ್ಯ ಎನ್ನುವುದನ್ನು ನೋಡುವುದಾದರೆ ಹೀಗೆ ಒಂದು ಊರಿನಲ್ಲಿ ಗಿರೀಶ ಮತ್ತು ಹರೀಶ್ ಎನ್ನುವ ಇಬ್ಬರು ಗೆಳೆಯರಿದ್ದರು.ಇಬ್ಬರೂ ಓದಿದಲ್ಲಿ ಅಷ್ಟೇ ಜಾಣನಿದ್ದರೂ ಕೂಡ ಗಿರೀಶನಿಗೆ ಅನಾರೋಗ್ಯದ ಕಾರಣದಿಂದ ಪರೀಕ್ಷೆಯಲ್ಲಿ ಹಾಜರಾಗದೆ ಹಿಂದುಳಿದ ತೊಡಗಿದ ಆಗ ಹರೀಶನು ಆತನಿಗೆ ಉತ್ತಮ ಅಂಕ ಗಳಿಸಲು ತನಗೆ ತಿಳಿದಂತಹ ಎಲ್ಲಾ ಸಲಹೆಗಳನ್ನು ನಿತ್ಯವೂ ಹೇಳುತ್ತಾ ಬಂದನು ಆಗ ಆತನು ಕೂಡ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಮತ್ತು ಅವರಿಬ್ಬರು ಕೂಡಿ ತಮ್ಮ ಗ್ರಾಮದಲ್ಲಿ ಇರುವಂತಹ ಅನಕ್ಷರಸ್ಥರನ್ನು ಸೇರಿಸಿನಿತ್ಯವೂ ಸಂಜೆ ಸಮಯದಲ್ಲಿ ಅವರುಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಾ ಬಂದರು ಆಗ ಊರಿಗೆ ಊರೇ ಸಾಕ್ಷರತಾ ಗ್ರಾಮವಾಗಿ ಪರಿವರ್ತನೆಗೊಂಡಿತು.ಅದಕ್ಕೆ ಹೇಳುವುದು *ವಿದ್ಯೆ ಕದಿಯಲಾರದ ಸಂಪತ್ತು*ಹೀಗೆ ಪ್ರತಿಯೊಬ್ಬರ ಜೀವನದಲ್ಲಿ ಕೂಡ ಪರೀಕ್ಷೆಗಳು ಅವರ ಜೀವನವನ್ನೇ ಬದಲಾಯಿಸುವಂತಹ ಮಹತ್ವದ ಪಾತ್ರವನ್ನು ವಹಿಸುತ್ತವೆ ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯಕ್ಕಾಗಿ ಕೇವಲ ಅಂಕಗಳಿಗಾಗಿ ಅಷ್ಟೇ ಅಲ್ಲದೆ ಜ್ಞಾನಕ್ಕಾಗಿ ಓದುವುದು ಅಷ್ಟೇ ಮುಖ್ಯ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಪರೀಕ್ಷೆಗಳು ಪ್ರಮುಖ ಸಾಧನಗಳಾಗಿವೆ. ನಾಗರತ್ನ. ಹೆಚ್ ಗಂಗಾವತಿ

“ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ನಾಗರತ್ನ. ಹೆಚ್ ಗಂಗಾವತಿ Read Post »

ಅಂಕಣ ಸಂಗಾತಿ, ವೀಣಾ-ವಾಣಿ

ಅಂಕಣ ಸಂಗಾತಿ ವೀಣಾ ವಾಣಿ ವೀಣಾ ಹೇಮಂತ್‌ ಗೌಡ ಪಾಟೀಲ್ ಬದುಕಿನ ಪಯಣ ಬದುಕು ಒಂದು ರೀತಿಯ ರೈಲು ಗಾಡಿಯ ಪಯಣ ಇದ್ದಂತೆ. ರೈಲುಗಾಡಿಯಲ್ಲಿ ಹತ್ತಿ ಕುಳಿತುಕೊಳ್ಳುವ  ನಾವುಗಳು ಮಾರ್ಗ ಮಧ್ಯದಲ್ಲಿ ಹತ್ತುವ-ಇಳಿಯುವ, ನೂರಾರು ಜನರೊಂದಿಗೆ ಸ್ನೇಹ ಸಂಬಂಧಗಳನ್ನು ಬೆಳೆಸುತ್ತೇವೆ ಅವರವರ ನಿಲ್ದಾಣ ಬಂದಾಗ ಅವರವರು ಇಳಿದು ಹೋಗುತ್ತಾರೆ….. ಅಂತೆಯೇ ನಾವು ಕೂಡನಮ್ಮ ಬದುಕಿನ ಪಯಣ ಕೂಡ ಹಾಗೆಯೇ…. ಆದರೆ ಈ ಪಯಣ ಅನಿರೀಕ್ಷಿತ ಸಂತೆಗಳ ಆಗರ.ಇದಮಿತ್ಥಂ ಎಂದು ಹೇಳುವ ಹಾಗೆಯೇ ಇಲ್ಲ. ನಮ್ಮ ಮುಂದಿನ ನಿಲ್ದಾಣ ಯಾವುದು ಎಂಬುದು ನಮಗೆ ಗೊತ್ತಿರುವುದಿಲ್ಲ.ತಂದೆ ತಾಯಿಯ ಕೈ ಹಿಡಿದು ಬದುಕಿನ ಪಯಣವನ್ನು ಆರಂಭಿಸುವ ನಾವು ನಮ್ಮ ಜೀವಿತದ ಕೊನೆಯವರೆಗೂ ಅವರು ನಮ್ಮೊಂದಿಗೆ ಇರುತ್ತಾರೆ ಎಂಬ ಭರವಸೆಯ ಜೊತೆಗೆ ಜೀವಿಸುತ್ತೇವೆ…. ಆದರೆ ತಮ್ಮ ಪ್ರಯಾಣ ಪೂರೈಸುವ ಅವರು ಯಾವ ಘಳಿಗೆ ಯಲ್ಲಾದರೂ ನಮ್ಮನ್ನು ಬಿಟ್ಟು ಹೊರಟು ಹೋಗಬಹುದು ಹಾಗೂ ಅವರಿಲ್ಲದೆ ನಾವು ನಮ್ಮ ಬದುಕಿನ ಪಯಣವನ್ನು ಮುಂದುವರಿಸಬೇಕು ಎಂಬ ನಿಷ್ಟುರ ಸತ್ಯದ ಅರಿವಿದ್ದು ಕೂಡ ಅರಿವಿಲ್ಲದ ರೀತಿಯಲ್ಲಿ ನಾವು ಬಾಳುತ್ತೇವೆ.ಆದರೂ ಕೂಡ ಯಾವುದೇ ಸೀಟುಗಳು ಖಾಲಿ ಉಳಿಯುವುದಿಲ್ಲ. ನಮಗೆ ಸ್ವಲ್ಪ ಹಿಂದು ಮುಂದಾಗಿ ನಮ್ಮ ಒಡಹುಟ್ಟಿದವರು, ಸ್ನೇಹಿತರು, ಸಂಬಂಧಿಗಳು ಹಾಗೂ ನಾವು ಪ್ರೀತಿಸುವ ಬದುಕಿನಲ್ಲಿ ನಮ್ಮೊಂದಿಗೆ ಇರಲಿ ಎಂದು ಬಯಸುವ ಹತ್ತು ಹಲವು ಸಂಗತಿಗಳು ನಮ್ಮೊಂದಿಗೆ ಬದುಕಿನ ಪಯಣದ ಸ್ಥಾನವನ್ನು ಆಕ್ರಮಿಸಿಕೊಳ್ಳುತ್ತವೆ.  ತಮ್ಮ ತಮ್ಮ ಪಯಣ ಮುಗಿಸಿ ಕೆಲವರು ನಿರೀಕ್ಷಿತ ಸಮಯಕ್ಕೆ ಇಳಿದು ಹೊರಟು ಹೋದರೆ ಮತ್ತೆ ಕೆಲವರು ನಮ್ಮ ಬದುಕಿನ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುವ ನಮ್ಮಲ್ಲಿ ಖಾಲಿತನವನ್ನುಹುಟ್ಟು ಹಾಕುವ ರೀತಿಯಲ್ಲಿ ಕಣ್ಮರೆಯಾಗುತ್ತಾರೆ…. ಮತ್ತೆ ಕೆಲವರ ನಿರ್ಗಮನ ಅದೆಷ್ಟು ಅನಿರೀಕ್ಷಿತವಾಗುತ್ತದೆ೦ದರೆ ಅದನ್ನು ಅರಗಿಸಿಕೊಳ್ಳುವುದು ಬಹಳವೇ ಕಷ್ಟ .ಈ ಪಯಣವು ಸುಖ ದುಃಖಗಳ ಏರಿಳಿವುಗಳ ಮೇಲೆ ತೂಗುಯ್ಯಾಲೆಯಂತೆ ಭಾಸವಾಗುತ್ತದೆ. ಕೆಲ ಭೇಟಿಗಳು ಮನಸ್ಸನ್ನು ಪ್ರಫುಲ್ಲಗೊಳಿಸಬಹುದು ಎಷ್ಟೋ ಬಾರಿ ಭರವಸೆಗಳು ಹುಸಿಯಾಗಬಹುದು…. ವಿದಾಯಗಳು ಎದೆಯ ಭಾರವನ್ನು ಹೆಚ್ಚಿಸಬಹುದು ಕೆಲವರ ಜೊತೆಯು ಸಂತಸವನ್ನು ಉಂಟುಮಾಡಿದರೆ ಮತ್ತೆ ಕೆಲವರ ಸಾಂಗತ್ಯ ರೇಜಿಗೆಯನ್ನುಂಟು ಮಾಡಬಹುದುಬದುಕಿನಲ್ಲಿ ಪಯಣದಲ್ಲಿ ಚೆನ್ನಾಗಿ ಬದುಕುವುದು ಎಂದರೆ ನಮ್ಮ ಜೊತೆಗಿರುವ ಸಹ ಪ್ರಯಾಣಿಕರ ಕುರಿತು ಒಳ್ಳೆಯ ಅರಿವನ್ನು ಹೊಂದಿರಬೇಕು. ಉತ್ತಮ ಸಂವಹನವನ್ನು ಹೊಂದಿರಬೇಕು…. ಅದರಲ್ಲೂ ಮುಖ್ಯವಾಗಿ ನಮ್ಮ ಬದುಕಿನ ಹೊರೆಗಳನ್ನು ಹಂಚಿಕೊಂಡಿರುವವರೊಂದಿಗೆ ಅತ್ಯಂತ ಆತ್ಮೀಯವಾದ  ಸಂಬಂಧವನ್ನು ಮುಂದುವರಿಸಬೇಕು  ಜೀವನದ ಪಯಣದಲ್ಲಿ ನಮ್ಮ ಪಯಣದ ಆರಂಭದ ಸಮಯದಲ್ಲಿ ನಮಗೆ ನೀಡಲಾದ ಟಿಕೇಟಿನಲ್ಲಿ ಆರಂಭಿಸಿದ ಸಮಯ ದಿನ, ತಿಂಗಳು ವಾರ ಮತ್ತು ವರ್ಷಗಳನ್ನು ನಮೂದಿಸುತ್ತದೆ ನಿಜ ಆದರೆ ಯಾವಾಗ ನಾವು ಜೀವನದ ಪಯಣ ಮುಗಿಸಿ ಇಳಿಯಬಹುದು ಎಂಬ ಸಣ್ಣ ಸುಳಿವು ಕೂಡ ನಮಗೆ ಇರುವುದಿಲ್ಲ. ನಮ್ಮ ಪಯಣದ ಹಾದಿಯನ್ನು ನಾವು ಹೇಗೆ ಇಟ್ಟುಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಬದುಕಿನ ಗುಣಮಟ್ಟವನ್ನು ಅಳೆಯಬಹುದು.. ನಾವು ದೇವರನ್ನು ಪ್ರೀತಿಸಬೇಕು ಅತ್ಯಂತ ಸರಳವಾಗಿ ಕ್ಷಮಿಸಬೇಕು ಜೊತೆಗೆ ನಮ್ಮ ನೈಜತೆಯನ್ನು ಹೊರ ಹಾಕಬೇಕು.ಅಂತಿಮ ಪಯಣದ ಸಮಯದಲ್ಲಿ ನಮಗೆ ದೊರೆಯುವ ಸಂಜ್ಞೆಗಳನ್ನು ಗುರುತಿಸಿ ಮೆಲ್ಲಗೆ ಹೊರಟು ಬಿಡಬೇಕು. ಮರದ ಗೊಂಬೆಯನ್ನು ಆಶ್ರಯಿಸಿದ ಹಕ್ಕಿ ಒಂದೇ ಏಟಿಗೆ ರೆಕ್ಕೆಗಳನ್ನು ಅಗಲಿಸಿ ಹಾರಿ ಹೋಗುವಂತೆ ನಾವು ಕೂಡ ಬದುಕಿನ ಈ ಪಯಣವನ್ನು ಮುಗಿಸಿ ಹೊರಟು ಬಿಡಬೇಕು.. ಉಳಿದವರ ಬದುಕಿನ ಅತ್ಯಂತ ಸುಂದರ ನೆನಪಾಗಿ ನಾವು ಉಳಿದುಕೊಳ್ಳಬೇಕೆ ಹೊರತು ಅವರ ಚಿತ್ತವನ್ನು ಕಲಕಿ ಮಾನಸಿಕ ಸ್ವಾಸ್ಥ್ಯವನ್ನು ಕದಡುವ, ನಮ್ಮ ನೆನಪು ಅವರಲ್ಲಿ ಬೇಸರ ಹುಟ್ಟಿಸುವ ರೀತಿಯಲ್ಲಿ ಬದುಕಬಾರದು.ಬದುಕಿನ ಪ್ರಯಾಣದಲ್ಲಿ ಸಂತೋಷ, ತೃಪ್ತಿ,ನೆಮ್ಮದಿ ಇಂತಹ ಹಗುರವಾದ ಭಾವಗಳನ್ನು ನಮ್ಮ ಲಗೇಜ್ ಗಳನ್ನಾಗಿ ಕೊಯ್ಯಬೇಕೇ ಹೊರತು ಮನಸ್ಸನ್ನು ಭಾರವಾಗಿಸುವ ನೋವು ನಿರಾಶೆ ಅತೃಪ್ತಿ ಆ ಸಂತೋಷಗಳೆಂಬ ಭಾರವಾದ ವಸ್ತುಗಳನ್ನು ಅಲ್ಲಲ್ಲಿಯೇ ಬಿಟ್ಟು ಮುಂದೆ ಹೊರಡಬೇಕು.ಲೆಸ್ ಲಗೇಜ್ ಮೋರ್ ಕಂಫರ್ಟ್ ಎಂಬ ಮಾತು ಬದುಕಿನ ಪಯಣಕ್ಕೂ ಸೂಕ್ತವಾಗಿದೆ.ನಮ್ಮ ಬದುಕಿನಲ್ಲಿ ನಾವು ಬಹು ದೂರ ಸಾಗಬೇಕಾದ ಪರಿಸ್ಥಿತಿಯಲ್ಲಿ ನಮ್ಮೊಂದಿಗೆ ಹೆತ್ತವರು, ಒಡಹುಟ್ಟಿದವರು, ಸಂಗಾತಿ, ಮಕ್ಕಳುಸಂಬಂಧಿಗಳು ಸ್ನೇಹಿತರು ಜೊತೆ ಇರಬೇಕು. ನಮ್ಮ ಹೆಗಲ ಮೇಲೆ ನಾವು ಮಲಗಲು ಸಾಧ್ಯವಿಲ್ಲ…. ನಮ್ಮ ಮನದ ಭಾವನೆಗಳನ್ನು ಹಂಚಿಕೊಂಡು ಹಗುರವಾಗಲು ನಮಗೆ ಬೇರೊಬ್ಬರ ಹೆಗಲು ಬೇಕೇ ಬೇಕು.ನಮ್ಮ ಬದುಕಿನ ಉದ್ದೇಶ ಮತ್ತು ಗುರಿಗಳು ಸ್ಪಷ್ಟವಾಗಿದ್ದು ತಲುಪುವ ಗಮ್ಯದ ಅರಿವು ನಮಗಿರಬೇಕು….. ಅಂದರೆ ನಮ್ಮ ಪಯಣ ಅತ್ಯಂತಸುರಕ್ಷಿತ ಹಾಗೂ ತೃಪ್ತಿದಾಯಕವಾಗಿರುತ್ತದೆ. ಏನಂತೀರಾ ಸ್ನೇಹಿತರೇ?….. ನೀವು ಕೂಡ ನಿಮ್ಮ ಬದುಕಿನ ಪಯಣವನ್ನು ಅತ್ಯಂತ ಸರಳ ಹಾಗೂ ಸುಂದರವಾದ ಬದುಕಿನ ಪಯಣ ನಿಮ್ಮದಾಗಿರಲಿ ವೀಣಾ ಹೇಮಂತ್ ಗೌಡ ಪಾಟೀಲ್ 

Read Post »

ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ”ನೀಲಿ ಆಕಾಶ – ನೀನೇ ನನ್ನ ಹಾಡು”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ನೀಲಿ ಆಕಾಶ – ನೀನೇ ನನ್ನ ಹಾಡು” ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯ ಹೇಳಿದೆನಿನ್ನ ನನ್ನ ಪ್ರೀತಿಯ ಹಾಡು. ನಿನ್ನ ಕಣ್ಣೊಳಗೆನೋಡುವ ಕನಸು,ನನ್ನ ಉಸಿರಲ್ಲೇನಿನ್ನ ಸುಗಂಧದ ಸೊಗಸು. ಎದೆ ಬಡಿತ ಎನ್ನುವಹೃದಯದ ಸದ್ದು,ಪ್ರತಿ ಕ್ಷಣ ಹೇಳುತ್ತದೆಪ್ರೀತಿ ಒಂದು ಮದ್ದು. ಓ ನಲ್ಲೆ, ನೀನುಆ ತೀರದ ನಕ್ಷತ್ರ,ನಾನು ಈ ತೀರದಒಂಟಿ ಯಾತ್ರಿಕ.ನಡುವೆ ನದಿ ಹರಿಯುತ್ತದೆಜುಳು ಜುಳು ಧ್ವನಿ,ನಿನ್ನ ನೆನಪಲ್ಲಿನಿಂತುಹೋಗುತ್ತದೆ ನನ್ನ ಪಯಣ. ಸುಪ್ರಿಯಾ, ನಾನುದೂರದಲ್ಲಿದ್ದರೂ,ನಿನ್ನ ಧ್ವನಿಯಲ್ಲೇಹತ್ತಿರವಾಗುತ್ತೇನೆ ನೋಡು.ನೀನು “ಬಾ ನಲ್ಲ” ಎಂದರೆಹೃದಯ ನಗುತ್ತದೆ,ಕೇಳಿಸದ ಮಾತನ್ನೂಮನಸ್ಸು ಅರಿತುಕೊಳ್ಳುತ್ತದೆ. ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯದಲ್ಲಿನೀನೇ ಆ ಪ್ರೀತಿಯ ಹಾಡು. ನೀಲಿ ಆಕಾಶದ ಮೋಡಎಲ್ಲಿ ಮಳೆಯಾಗುತ್ತವೋ,ನನ್ನ ಕಣ್ಣಿನ ಮೋಡನಿನ್ನ ನೆನಪಲ್ಲೇ ಕರಗುತ್ತವೋ.ಸ್ವಪ್ನದಲ್ಲಿ ಬಂದವನೇಮೌನದ ಸಂಗೀತ,ನಿನ್ನ ಸ್ಪರ್ಶವೇಮನಸ್ಸಿಗೆ ಸಿಹಿ ಸಂಪ್ರಿತ ಕೋಗಿಲೆ ಕೂಗುವಾಗನಿನ್ನ ನೆನಪು,ನಿನ್ನ ನಗುವೇನನ್ನ ಬದುಕಿನ ಹೊನಪು ನಿನ್ನ ಮಾತು ಕೇಳಿದರೆಮರೆತುಹೋಗುತ್ತದೆ ನೋವು,ನಿನ್ನ ಪ್ರೀತಿ ಸಾಕುನನ್ನ ಜೀವನದ ಔಷಧಿ ಅದು. ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯದಲ್ಲಿನೀನೇ ಆ ಪ್ರೀತಿಯ ಹಾಡು. ಸಮುದ್ರದ ಮುಂದೆ ನಿಂತುಅಲೆಗಳನ್ನು ನೋಡಿದರೆ,ನಿನ್ನ ಭಾವನೆಗಳುಅಲೆ ಅಲೆಯಾಗಿ ಬರುವುದು ನನಗೆ. ದೂರದಲ್ಲಿದ್ದರೂ ನೀನುಹತ್ತಿರವೇ ಕಾಣಿಸುವೆ,ನನ್ನ ಮನಸ್ಸಿನೊಳಗೆಪ್ರತಿ ಕ್ಷಣ ನಗಿಸುವೆ. ಮರೆಯಲು ನೋಡಿದರೂಮರೆಯಲಾಗದ ಕಮಾನು,ಬಣ್ಣದ ಚಿಟ್ಟೆಗಳಂತೆಮನಸಲ್ಲಿ ಹಾರಾಡು ನೀನು. ಕಾಲ ತಿರುಗಿದರೂಪ್ರೀತಿ ತಿರುಗದು,ಉಸಿರು ಇರುವವರೆಗೆಈ ಬಾಂಧವ್ಯ ಮುರಿಯದು.ಮತ್ತೊಂದು ಜನ್ಮ ಬಂದರೂಮತ್ತೆ ನೀನೇ ಸಾಕು,ಪ್ರೀತಿಯ ಹಾಡಾಗಿಯೇನಮ್ಮ ಕಥೆ ಇರಬೇಕು. ನೀಲಿ ಆಕಾಶದಲ್ಲಿತೇಲುವ ಬಿಳಿ ಮೋಡ,ನನ್ನ ಹೃದಯದಲ್ಲಿನೀನೇ ನನ್ನ ಜೀವದ ಹಾಡು. ಕೊನೆಯ ಉಸಿರಿರುವವರೆಗೆಹೇಳುತ್ತೇನೆ ನಿನ್ನ ಹೆಸರು,ನೀನು ಎಲ್ಲಿದ್ದರೂನನ್ನ ಪ್ರೀತಿ ನಿನ್ನತ್ತಲೇ ಹರಿದು ಹೋಗು. ಡಾ. ಹೆಚ್. ನಟರಾಜ್ ಆರ್ಯ.

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ”ನೀಲಿ ಆಕಾಶ – ನೀನೇ ನನ್ನ ಹಾಡು” Read Post »

You cannot copy content of this page

Scroll to Top