ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಹಾಸ್ಯಬರಹ ಗೊರೂರು ಅನಂತರಾಜು ಅವರ ಲೇಖನಿಯಿಂದ “ನಿಮ್ಮಪ್ಪ ಏನಂತಾ ಕರೀತಾರೆ..ಈಡಿಯಟ್..ಸ್ಟುಪಿಡ್..!”

ಹಾಸ್ಯ ಸಂಗಾತಿ ಗೊರೂರು ಅನಂತರಾಜು “ನಿಮ್ಮಪ್ಪ ಏನಂತಾ ಕರೀತಾರೆ.. ಈಡಿಯಟ್..ಸ್ಟುಪಿಡ್..!” ಮುದ್ದಣ್ಣ: ಮನೋರಮೆ, ನೀನು ಯುಗಾದಿ ಹಬ್ಬಕ್ಕೆ ಮಾಡಿರುವ ಪಾಯಸ ತುಂಬಾ ರುಚಿಯಾಗಿದೆ ಕಣೆ.ಮನೋರಮೆ: ಅದಕ್ಕೆ ಬೆಕ್ಕು ಬಾಯಿ ಹಾಕಿರದೆ ಇದ್ದಿದ್ರೇ..ಚೆನ್ನಾಗಿರುತ್ತಿತ್ತು. ಮು: ರಾತ್ರಿ ಒಂಭತ್ತು ಗಂಟೇಲಿ ಎಲ್ಲಿಗ್ಹೊರಟೆ..?ಮ: ನರಕಕ್ಕೆ.. ಇಲ್ಲಿ ಮೂರ‍್ಹೊತ್ತು ನಿಮ್ಮತ್ರ ಜಗಳ ಆಡ್ಕೊಂಡು ಇರೋದಕ್ಕಿಂತ ಅಲ್ಲಿ ಇರೋದೆ ವಾಸಿ.ಮು: ನರಕದಲ್ಲಿರುವ ನಿನ್ನ ಅಮ್ಮನಿಗೆ ನನ್ನ ನಮಸ್ಕಾರ ತಿಳಿಸು. ಸದ್ಯ ಸರ್ಕಾರದ ಉಚಿತ ಬಸ್ಸಿನಲ್ಲಿಯೇ ಸಾವಕಾಶವಾಗಿ ಹೋಗಿ ಬಾ. ಮ: ರೀ, ನೀವು ಈ ರೀತಿ ಜಗಳ ಆಡ್ತಿದ್ರೆ ಅಕ್ಕಪಕ್ಕ ಮನೆಯವರಿಗೆ ಕೇಳಿಸುತ್ತೆ..ಮು: ಸರಿ ಹಾಗಾದ್ರೇ, ಬೇರೆ ಯಾವ ರೀತಿ ಜಗಳ ಆಡಬೇಕು ಅಂತ ನೀನೇ ಹೇಳು. ದಿನಾ ರಾತ್ರಿ ಬಿಗ್ ಬಾಸ್ ಹಾಕ್ಕೊಂಡು ನೋಡ್ತ ಇರ‍್ತಿಯಲ್ಲಾ.. ಅದು ಅಕ್ಕಪಕ್ಕ ಮನೆಗೆ ಹಾಗೇ ಕೇಳಿಸುತ್ತೇ ತಾನೇ.. ಮ: ರೀ, ನಾನು ಮುಂದೆ ದಪ್ಪ ಆದ್ರೂ ನೀವು ಇದೇ ರೀತಿ ಪ್ರೀತಿ ಮಾಡ್ತೀರಾ..?ಮು: ಅದ್ಹೇಗೆ ಸಾಧ್ಯ..?ಮ: ತಾಳಿ ಕಟ್ಟುವ ವೇಳೆ ಅಗ್ನಿಸಾಕ್ಷಿಯಾಗಿ ಪ್ರಮಾಣ ಮಾಡಿದ್ರಿ..!ಮು: ನಿನ್ನ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ ಎಂದಷ್ಟೇ ಪ್ರಮಾಣ ಮಾಡಿದ್ದೇನೆ. ಆದರೆ ನೀನು ದಪ್ಪ ಆಗುವ ವಿಚಾರದಲ್ಲಿ ಮಾತು ಕೊಟ್ಟಿಲ್ಲ..ದಯವಿಟ್ಟು ಒಂದ್ಹೊತ್ತು ಊಟ ಬಿಟ್ಟು ಡಯಾಟ್ ಮಾಡು. ಐದು ವರ್ಷದಲ್ಲಿ ನೀನು ಗ್ಯಾರಂಟಿ ತೆಳ್ಳಗಾಗ್ತಿಯಾ.. ಮ: ರೀ, ನೀವು ಪಿಹೆಚ್‌ಡಿ ಮಾಡಿದ್ರಲ್ಲಾ. ನಿಮ್ಮನ್ನೀಗ ಡಾಕ್ಟರ್ ಅಂತ ಕರಿಲೋ ಫ್ರೊಫೆಸರ್ ಅಂತ್ಲೇ ಕರಿಲೋ..?ಮು: ನಿನ್ನಿಷ್ಟ ಬಂದಾಗೆ ಕರಿ..ಮ: ನಿಮ್ಮಪ್ಪ ಏನಂತ ಕರೀತಾರೆ..?ಮು: ಈಡಿಯಟ್.. ಸ್ಟುಪಿಡ್..! ಮ: ಏಳ್ರೀ ಹತ್ತು ಗಂಟೆಗ ಗೊರಕೆ ಹೊಡಿತ್ತಿದ್ದೀರಾ..ಮು: ಯಾಕೆ ನನ್ನನ್ನು ಎಬ್ಬಿಸಿದೆ..?ಮ: ರಾತ್ರಿ ಹತ್ತು ಗಂಟೆಗೆ ಸರಿಯಾಗಿ ನಿದ್ರೆ ಮಾತ್ರೆ ಕೊಡಿ ಅಂತ ಡಾಕ್ಟರ್ ಹೇಳಿದ್ರಲ್ಲಾ..! ಮು: ಇದೇ ತಿಂಗಳು ಇಪ್ಪತ್ತಕ್ಕೆ ನನ್ನ ಫ್ರೆಂಡ್ ಮಗನ ಮದುವೆ ಇದೆ. ನಾವಿಬ್ರೂ ಹೋಗಲೇಬೇಕು. ನನಗೆ ಅವರು ಆತ್ಮೀಯ ಮಿತ್ರರು. ಮರೆಯದೆ ನೆನಪು ಮಾಡು.ಮ: ಇವತ್ತು ತಾರೀಖು ಇಪ್ಪತ್ತೆರೆಡು..!ಮು: ಹಾಗಾದರೇ ನಾವು ಮದುವೆ ಫಂಕ್ಷನ್ ಮಿಸ್ ಮಾಡ್ಕೊಂಡ್ವಿ ಅಲ್ಲವಾ..?ಮ: ನೀವು ನಾನು ಮೊನ್ನೆ ಮದುವೆಗೆ ಹೋಗಿ ಗಡದ್ದಾಗಿ ತಿಂದು ಬಂದಿಲ್ವಾ..! ಮ: ಇದೇನ್ರೀ ಮನೆಗೆ ಇಷ್ಟು ಬೇಗ ಬಂದ್ರೀ..?ಮು: ನಮ್ಮ ಬಾಸ್ ನರಕಕ್ಕೆ ಹೋಗು ಅಂತ ಬೈದ್ರು.. ಅದಕ್ಕೆ ಇಲ್ಲಿಗೆ ಬಂದೆ. ಮ: ರೀ, ಒಂದು ನಿಮಿಷ ಬಂದು ಬಿಡ್ತಿನಿ. ಮನೇಲಿರಿ.ಮು: ಎಲ್ಲಿಗೆ ಹೋಗ್ತಿದ್ದಿಯಾ..?ಮ: ಪಕ್ಕದ್ಮನೆ ಪದ್ಮಕ್ಕನ ಮನೆಗೆ ಸಕ್ಕರೆ ಸಾಲ ತರ‍್ಲಿಕ್ಕೆ..ಮು: ಸಾಲ ಯಾಕೆ ತರಬೇಕು. ನಿನ್ನೆ ತಾನೇ ೨ ಕೆಜಿ ಸಕ್ಕರೆ ತಂದಿದ್ದೀನಲ್ಲ.ಮ: ಈಗ ನಾನು ಹೋಗ್ದೆ ಇದ್ರೇ ಅವಳೇ ಸಾಲ ಕೇಳ್ಕೊಂಡು ಇಲ್ಲಿಗೆ ಬಂದುಬಿಡ್ತಾಳೆ..! ಮ: ರೀ, ನೀವು ನನಗೆ ಮುತ್ತಿನ ಹಾರ ಕೊಡಿಸುತ್ತಿದ್ದಂತೆ ಕನಸು ಬಿತ್ತು.ಮು: ಹೌದಾ..! ಅದನ್ನು ಭದ್ರವಾಗಿ ಬೀರುನಲ್ಲಿ ಇಡು. ಮ: ರೀ, ನಮಗೆ ಮಕ್ಕಳಿಲ್ಲ. ಅದಕ್ಕೆ ನನ್ನ ತಾಯಿ ಮನೆಯಿಂದ ಕೊಟ್ಟ ಮನೆಯನ್ನು ಯಾರಾದ್ರೂ ಸನ್ಯಾಸಿಗೆ ಮಾರಿಬಿಡೋಣವೆಂದುಕೊಂಡಿದ್ದೇನೆ..ಮು: ಬಾಗಿಲು ತೆಗಿಮ: ಎಲ್ಲಿಗೆ ಹೋಗ್ತಿರಾ..?ಮು: ಸನ್ಯಾಸಿಯಾಗಲಿಕ್ಕೆ..! ಮ: ರೀ, ನಾಳೆ ನಿಮ್ಮ ಹ್ಯಾಪಿ ಬರ್ತಡೆ. ಏನ್ ಗಿಫ್ಟ್ ಕೊಡ್ಲಿ..?ಮು: ಡ್ಯೆವೋರ್ಸ್ ಕೊಟ್ಟುಬಿಡು.. ಗೊರೂರು ಅನಂತರಾಜು,

ಹಾಸ್ಯಬರಹ ಗೊರೂರು ಅನಂತರಾಜು ಅವರ ಲೇಖನಿಯಿಂದ “ನಿಮ್ಮಪ್ಪ ಏನಂತಾ ಕರೀತಾರೆ..ಈಡಿಯಟ್..ಸ್ಟುಪಿಡ್..!” Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-14 ಅರ್ಜುನ ಉವಾಚ ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅನಲ ಅಳಿಯನಾದ ಬಗೆ ಹೀಗೆ ಅನಲ ಅಳಿಯನಾದ ಬಗೆ ಹೀಗೆ‘ಮೇಧಾಶ್ವವನ್ನು ಯಾವ ಕಾರಣಕ್ಕೂ ಬಿಡಲಾರೆ. ನನ್ನ ಜೊತೆಗೆ ಹೋರಾಟ ಮಾಡಿಯೇ ಕುದುರೆಯನ್ನುಕರೆದೊಯ್ಯಬೇಕು ನೀನು. ಇದು ಖಚಿತ’ ಎಂಬ ನೀಲಧ್ವಜ ಉದ್ಘೋಷಿತ ಸಂದೇಶ ನನ್ನನ್ನು ಬಂದು ತಲುಪಿತು.ನನಗಾದದ್ದು ಅಚ್ಚರಿ.ಅಗ್ನಿಯ ಮಾತಿನಂತೆ ಯುದ್ಧವನ್ನು ನಿಲ್ಲಿಸಿದ್ದವನು ನೀಲಧ್ವಜ. ಕುದುರೆಯನ್ನವನು ಬಿಟ್ಟುಕೊಡುತ್ತಾನೆಎನ್ನುವುದು ನನಗಿದ್ದ ಸರಳ ಸಹಜ ಅಂದಾಜು. ಆದರೆ ಇದ್ದಕ್ಕಿದ್ದಂತೆಯೇ ಅವನು ಮನಸ್ಸು ಬದಲಾಯಿಸಿದ್ದ.ಮಾಹಿಷ್ಮತಿಯರಸನ ಮನ ತಕ್ಷಣ ಬದಲಾದುದಕೆ ಏನದು ಕಾರಣ ಎಂಬ ಮೂಲ ಮರ್ಮಲತೆಯನ್ನು ಹುಡುಕಿಹೊರಟನನಗೆ ತಿಳಿದುಬಂದದ್ದು ಜ್ವಾಲೆಯೆಂಬವಳ ಮಾತು.ಜ್ವಾಲೆ, ನೀಲಧ್ವಜನ ಪ್ರೀತಿಯ ರಾಣಿ. ಅರ್ಜುನನ ಕುದುರೆಯನ್ನು ಬಿಟ್ಟು ಕಳುಹಿಸಬೇಕು ಎಂದು ಮಂತ್ರಿಗಳಲ್ಲಿನೀಲಧ್ವಜ ಮಾತನಾಡುತ್ತಿದ್ದುದು ಅವಳಿಗೆ ತಿಳಿಯಿತಂತೆ. ಅವಳಿಗದು ಮೆಚ್ಚುಗೆಯಾಗಲಿಲ್ಲ. “ಹೆದರಿಕೆ ಅದೇತಕೆ!ಬಿಡದಿರು ಕುದುರೆಯನ್ನು. ನಿಲ್ಲಿಸದಿರು ಯುದ್ಧವನ್ನು. ಅರ್ಜುನನಿಗೆದುರಾಗಿ ನಿಂತು ಕದನವ ಮಾಡು” ಎಂಬ ಸಲಹೆಇತ್ತಳಂತೆ ತನ್ನೊಡೆಯನಿಗೆ. ಅದಾವ ಮಾಯೆಯಲ್ಲಿ ಅವಳ ಮಾತಿನ ಸುಳಿಗೆ ಸಿಲುಕಿದನೋ ಆ ನೀಲಧ್ವಜ! ಹಯವಬಿಟ್ಟುಕೊಡದಿರುವ ಛಲವ ಹೊತ್ತುಮೆರೆಯುತಿಹ ಸಂದೇಶವ ನನಗೆ ಕಳುಹಿಸಿಕೊಟ್ಟ.ಜ್ವಾಲೆಯ ಮನೋಭೂಮಿಕೆ ಹೊಸದೆನಿಸಿತು ನನಗೆ. ಸಾಮಾನ್ಯವಾಗಿ ಕ್ಷಾತ್ರಪುರುಷರು ಕಲಹದೆಡೆಗೆಕುತೂಹಲಿಗಳಾಗಿರುತ್ತಾರೆ. ಅವರ ಆಸಕ್ತಿಯದು ಸಹಜ. ಹೆಂಗಳೆಯರು ಯುದ್ಧ ಬೇಡವೆಂದು ಗಂಡಂದಿರನ್ನು ತಡೆಯುವಪ್ರಯತ್ನ ಮಾಡುತ್ತಾರೆ. ಕದನವಾದರೆ ತನ್ನವನಿಗೆ ಅದೇನಾದೀತೋ ಎಂಬ ಆತಂಕ ಅವರಲ್ಲಿರುತ್ತದೆ. ಆದರೆ ಈ ಜ್ವಾಲೆಯುದ್ಧದಿಂದ ವಿಮುಖನಾಗಿ ಶಾಂತಿಯೆಡೆಗೆ ಮನಸ್ಸು ಮಾಡಿದ ರಮಣನ ಮನಸ್ಸನ್ನು ಮತ್ತೆ ಕ್ರಾಂತಿಯೆಡೆಗೆ ಸೆಳೆಯುವಮನಸ್ಸು ಮಾಡಿದ್ದಳು. ರಮಣನ ಪ್ರಾಣದೆಡೆಗೆ ಅವಳಿಗೆ ಮಮಕಾರ ಭಾವ ಇರಲಿಲ್ಲವೇ?! ಗೊತ್ತಿಲ್ಲ.ಅವಳಿಗೆ ನನ್ನ ಮೇಲೇನಾದರೂ ದ್ವೇಷವಿತ್ತೇ! ನನಗೆ ಅರಿವಿಲ್ಲ. ನಾನ್ಯಾವತ್ತೂ ಅವಳಲ್ಲಿ ಮಾತನಾಡಿದ್ದಿಲ್ಲ.ಜಗಳ ಆಡಿದ್ದಿಲ್ಲ. ಹಾಗಿರುವಾಗ ನನ್ನ ಮೇಲೆ ಅವಳಿಗೆ ದ್ವೇಷ ಇರಲು ಸಾಧ್ಯವೇ! ತಿಳಿಯಲಿಲ್ಲ.ಇನ್ನೊಂದು ಬಗೆಯ ಯೋಚನೆ ಮೂಡಿತು ನನಗೆ ಆ ಕ್ಷಣದಲ್ಲಿ. ಯುದ್ಧ ಸಂಧಾನಕಾರನಾಗಿ ನಡೆದುಕೊಂಡವನುಅಗ್ನಿ. ಅವನು ನೀಲಧ್ವಜನ ಅಳಿಯ. ಮಾಹಿಷ್ಮತಿಯಲ್ಲಿಯೇ ನೆಲೆನಿಂತು ಆ ನಗರದ ಅಳಿಯನಂತೆ ಗುರುತಿಸಿಕೊಂಡವನು.ಮಗಳನ್ನು ಮದುವೆಯಾದ ಅಳಿಯನ ಮೇಲೇನಾದರೂ ಕೋಪ ಇರಬಹುದೇ ಜ್ವಾಲೆಗೆ?! ಎಂಬ ಆಲೋಚನೆ ನನ್ನಲ್ಲಿಉದಯಿಸಿತು.ಈ ಬಗೆಯ ಚಿಂತನೆ ನನ್ನಲ್ಲಿ ಮೂಡುವುದಕ್ಕೆ ಸಕಾರಣವಿತ್ತು. ನೀಲಧ್ವಜನ ಮಗಳು ಅಗ್ನಿಯನ್ನು ಪ್ರೀತಿಸಿಮದುವೆ ಆದವಳು.ನೀಲಧ್ವಜ ಜ್ವಾಲೆಯರ ಮಗಳು ಅಪ್ರತಿಮ ರೂಪವತಿಯಾಗಿದ್ದಳು. ಗುಣಶೀಲೆ ಎನಿಸಿಕೊಂಡಿದ್ದಳು. ಹೀಗಿದ್ದಚೆಲುವೆ ಯೌವ್ವನಾವಸ್ಥೆಯನ್ನು ತಲುಪಿದಾಗ ನೀಲಧ್ವಜನಲ್ಲಿ ಮಗಳ ಮದುವೆಯ ಯೋಚನೆ ಮೂಡಿತು. ಮೂರೂ ಲೋಕಗಳಲ್ಲಿ ಖ್ಯಾತಿ ಗಳಿಸಿದ, ವೀರರೆಂದು ಹೆಸರು ಪಡೆದ, ಸಿರಿವಂತರೆAದು ಗುರುತಿಸಿಕೊಂಡ ಪುರುಷರ ಚಿತ್ರವನ್ನುಅವಳೆದುರು ಹಿಡಿದು, “ಇವರಲ್ಲಿ ನಿನ್ನ ಪತಿಯಾಗುವವರು ಯಾರೆಂದು ನೀನೇ ಹೇಳು ಮುದ್ದು ಮಗಳೇ” ಎಂದ.ತಂದೆಯ ಮಾತಿನಂತೆ ಚಿತ್ರಪಟದೆಡೆಗೆ ಹರಿಣಿನೇತ್ರವನ್ನು ಹರಿಸಿದ ಸುಂದರಿಗೆ ಚೆಲುವನಾಗಿ ಕಂಡದ್ದು ಅಗ್ನಿದೇವ.ತಂದೆ ತಂದು ಕೈಗಿಟ್ಟಿದ್ದ ಚಿತ್ರಪಟದಲ್ಲಿ ಅಗ್ನಿ ಗಂಧರ್ವ ಯಕ್ಷ ದೇವತೆಗಳನ್ನು ತನ್ನ ಚೆಲುವಿನಿಂದಲೇ ಅಪಹಾಸ್ಯ ಮಾಡಿನಗುತ್ತಿದ್ದ. ಸಕಲ ಭೂಮಂಡಲದ ರಾಜಾಧಿರಾಜರನ್ನು ಮೀರುವಂತೆ ತೋರುತ್ತಿದ್ದ. ಮನ್ಮಥರಾಜ ವಸಂತರಾಜರನ್ನೂಮೀರಿದ ಸೌಂದರ್ಯವನ್ನು ಆವಾಹಿಸಿಕೊಂಡು ಕುಳಿತಿದ್ದ. ತಕ್ಷಣವೇ ನೀಲಧ್ವಜಕುವರಿಯ ಚಿತ್ತ ಚಿತ್ರಪಟದಲ್ಲಿದ್ದಅಗ್ನಿದೇವನ ಹೃದಯವನ್ನು ಕೂಡಿಕೊಂಡಿತು. “ಎನಗಿನ್ನು ಇವನೇ ರಮಣ” ಎಂದಳು ತಂದೆಯಲ್ಲಿ, ನಸುನಾಚಿಕೆತೋರುತ್ತ.ನಡೆಯಲಾರದ್ದರೆಡೆಗೆ, ಸಾಧ್ಯವಾಗದ್ದರ ಕಡೆಗೆ ಮಗಳು ಮನಸ್ಸು ಹರಿಸಿದ್ದಾಳೆ ಎನಿಸಿತು ನೀಲಧ್ವಜನಿಗೆ.ಅದನ್ನೇ ತನುಜೆಗೆ ಹೇಳಿದ. ತಂದೆಯ ಮಾತು ಅಪಥ್ಯವಾಯಿತು ಆ ಚೆಲುವೆಗೆ. ಜನಕನನ್ನು ಜರಿದವಳು ಅರಮನೆಯನ್ನುತೊರೆದುಹೋದಳು.ತಾರುಣ್ಯವೆಂದರೆ ಹಾಗೆಯೇ. ಹೃದಯ ಏನನ್ನು ಬಯಸುತ್ತದೆಯೋ ಅದು ದಕ್ಕದಾದಾಗ ನಿರಾಸೆ ಮೂಡುತ್ತದೆ;ಹಠ ಕುಡಿಯೊಡೆಯುತ್ತದೆ. ಪಡೆಯದಿರಲಾರೆ ಮನ ಬಯಸಿದ ಅನಲನನ್ನು ಎಂದುಕೊಂಡಳು ನೀಲಧ್ವಜಸುತೆ.ಅರಮನೆಯನ್ನು ತೊರೆದವಳು ನರ್ಮದಾ ತೊರೆಯ ತೀರವನ್ನು ಸೇರಿದಳು, ತೀರದಾಸೆಯನ್ನು ಎದೆಯಲ್ಲಿಹೊತ್ತುಕೊಂಡು. ನಾನಾ ವಿಧಗಳಲ್ಲಿ ಅಗ್ನಿದೇವನನ್ನು ಅರ್ಚಿಸಿದಳು.ಅವಳ ಪೂಜೆಯ ಸೊಗಸದು ಅಗ್ನಿಗೆ ಮೆಚ್ಚುಗೆಯಾಯಿತು. ಅವಳನ್ನು ಮದುವೆಯಾಗುವ ಇಚ್ಛೆ ಅವನಲ್ಲಿಯೂಮೂಡಿತು.ಬ್ರಾಹ್ಮಣ ವೇಷವನ್ನು ತಾಳಿದ ಅನಲ ಕಾಣಿಸಿಕೊಂಡದ್ದು ನೀಲಧ್ವಜನ ಆಸ್ಥಾನದಲ್ಲಿ. ಸಭೆಗೆ ಬಂದಭೂಸುರನನ್ನು ಸ್ವಾಗತಿಸಿದ ನೀಲಧ್ವಜ. ಬಂದ ಕಾರಣವನ್ನು ನಯವಾಗಿ ಕೇಳಿದ. “ಕನ್ಯೆಯನ್ನು ಬಯಸಿ ಬಂದಿದ್ದೇನೆ.ನಿನ್ನ ಸುತೆಯನ್ನು ಕೊಡು ಎನಗೆ. ರಾಜನಾಗಿರುವ ನೀನು ಬ್ರಾಹ್ಮಣನಾದ ನನಗೆ ಮಗಳನ್ನು ಮದುವೆಮಾಡಿಕೊಡಬಹುದು. ಶಾಸ್ತçದ ಅಭ್ಯಂತರವಿಲ್ಲ” ಎಂದ ಬ್ರಾಹ್ಮಣ ವೇಷದ ಅನಲ.ಮಗಳು ಅಗ್ನಿಯನ್ನು ಮದುವೆಯಾಗುವ ಮನಸ್ಸು ಮಾಡಿದ್ದಾಳೆ. ಏನು ಮಾಡಲಿ! ಎಂದು ಅಸಹಾಯಕತೆತೋರಿದ ನೀಲಧ್ವಜ. ತಕ್ಷಣವೇ ತಾನೇ ಅಗ್ನಿ ಎಂಬ ಸತ್ಯವನ್ನು ಅರುಹಿದ ಅನಲ.ನೀಲಧ್ವಜನ ಆಪ್ತಮಂತ್ರಿ ಪರೀಕ್ಷಿಸಿದ. ಅವನು ಅಗ್ನಿಯೆನ್ನುವುದು ಸಾಬೀತಾಯಿತು. ನೀಲಧ್ವಜನ ಸತಿಯೂಪರೀಕ್ಷೆ ಮಾಡಿದಳು. ವಿಪ್ರ ವೇಷವದು ನಕಲು. ನಿಜವಾಗಿಯೂ ಅಗ್ನಿಯವನು ಎನ್ನುವುದವರ ಅರಿವಿಗೆ ಬಂತು. ನೀಲಧ್ವಜಅಗ್ನಿಯಲ್ಲಿ “ಮಗಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ಇದೇ ನಗರದಲ್ಲಿ ಇರಬೇಕು” ಎಂದ. ಅಗ್ನಿಒಪ್ಪಿದ. ಅನಲ ನೀಲಧ್ವಜನ ಅಳಿಯ ಎನಿಸಿಕೊಂಡ.ಹೀಗೆ ಅಳಿಯನಾದ ಅಗ್ನಿಯ ಮೇಲೆ ರಾಣಿ ಜ್ವಾಲೆಗೆ ಏನಾದರೂ ಅಸಮಾಧಾನ ಇತ್ತೋ ಏನೋ! ಈಕಾರಣದಿಂದಲೇ ಅವನು ಏರ್ಪಡಿಸಿದ ಸಂಧಾನವದು ಅವಳಿಗೆ ಸಹ್ಯವಾಗಲಿಲ್ಲವೋ ಏನೋ! ನೀಲಧ್ವಜ ಸೇನೆಯೊಡನೆ ಮತ್ತೆ ಕದನ ಹೂಡುವುದೀಗ ಅನಿವಾರ್ಯವಾಗಿಬಿಟ್ಟಿತ್ತು ನಮಗೆ. ಕುದುರೆಯಕಾಲುಗಳು ಮಾಹಿಷ್ಮತಿ ನಗರವನ್ನು ತೊರೆದು ಮುಂದೆ ಚಲಿಸಬೇಕಾದರೆ ನಮ್ಮ ಕಾಲುಗಳು ಕದನರಂಗಕ್ಕಿಳಿಯಬೇಕಿತ್ತು. ಡಾ. ವಿಶ್ವನಾಥ ಎನ್ ನೇರಳಕಟ್ಟೆ

Read Post »

You cannot copy content of this page

Scroll to Top