ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

“ವಾಕ್ಯದಲ್ಲಿ ನಾಡಿ” ಡಾ.ದೇವರಾಜು ಮಹಾರಾಜು ಅವರ ತೆಲುಗು ಕವಿತೆಯ ಕನ್ನಡಾನುವಾದ ರಂಗನಾಥ ರಾಮಚಂದ್ರ ರಾವು

ಅನುವಾದ ಸಂಗಾತಿ ವಾಕ್ಯದಲ್ಲಿ ನಾಡಿ ತೆಲುಗು ಮೂಲ : ಡಾ. ದೇವರಾಜು ಮಹಾರಾಜುಕನ್ನಡಕ್ಕೆ : ರಂಗನಾಥ  ರಾಮಚಂದ್ರರಾವು ಸಮುದ್ರದಲ್ಲಿ ಕವನವಿದೆಮಂಜಿನ ಹನಿಯಲ್ಲಿ ಕವನವಿದೆಮಂಜಿನ ಹನಿ ಸಾಗರದಲ್ಲಿ  ಅದೃಶ್ಯವಾಗುವುದರಲ್ಲಿಅಮೋಘವಾದ ಕವನವಿದೆ! ಮಣ್ಣಿನಲ್ಲಿ ಕವನವಿದೆಬೀಜದಲ್ಲಿ ಕವನವಿದೆಬೀಜ ಮಣ್ಣಿನಲ್ಲಿ ಅದೃಶ್ಯವಾಗಿಮರದಂತೆ ಬೆಳೆಯುವುದರಲ್ಲಿಅದ್ವಿತೀಯವಾದ ಕವನವಿದೆ! ಸೂರ್ಯೋದಯ –ಸೂರ್ಯಾಸ್ತಮಯಆರಂಭವು-ಅಂತ್ಯಗಳಂತೆಪ್ರಕೃತಿ ಕವನಕ್ಕೆ ಎರಡು ಮುಖ್ಯವಾದ ಚರಣಗಳು! ತೆಗೆಯುತ್ತಿರುವ ಪ್ರತಿಯೊಂದು ಉಸಿರಿನಲ್ಲಿಕವನ ಇರುವುದರಿಂದಲೇನಿನ್ನಲ್ಲಿ ಇನ್ನೂ ಜೀವವಿದೆ ಜೀವವೆಂದರೆ ಕೇವಲ ಚಲನವಲ್ಲಕವನವೆಂದರೆ ಕೇವಲ ವಾಕ್ಯ ವಿನ್ಯಾಸವಲ್ಲವಾಕ್ಯದಲ್ಲಿ  ನಾಡಿ ಮಿಡಿಯುವುದು ಕವನಚಲನದಲ್ಲಿ ಸ್ಪೃಹೆ ಧ್ವನಿಸುವುದು ಕವನ! ತೆಲುಗು ಮೂಲ : ಡಾ. ದೇವರಾಜು ಮಹಾರಾಜುಕನ್ನಡಕ್ಕೆ : ರಂಗನಾಥ  ರಾಮಚಂದ್ರರಾವು

“ವಾಕ್ಯದಲ್ಲಿ ನಾಡಿ” ಡಾ.ದೇವರಾಜು ಮಹಾರಾಜು ಅವರ ತೆಲುಗು ಕವಿತೆಯ ಕನ್ನಡಾನುವಾದ ರಂಗನಾಥ ರಾಮಚಂದ್ರ ರಾವು Read Post »

ಇತರೆ, ನಿಮ್ಮೊಂದಿಗೆ

ಣಮೋ ಅರಿಹಂತಾಣಂ- ಕನ್ನಡ ಜೈನ ನೋಂಪಿಕಥೆಗಳು:(ಧಾರ್ಮಿಕ ಆಚರಣೆ ಮತ್ತು ನೈತಿಕಬೋಧೆ-ಸಂಶೋಧನಾತ್ಮಕ ಲೇಖನ) ಡಾ. ಯಲ್ಲಮ್ಮ ಕೆ

ಸಂಶೋಧನಾ ಸಂಗಾತಿ ಡಾ.ಯಲ್ಲಮ್ಮ ಕೆ. ಡಾ. ಯಲ್ಲಮ್ಮ ಕೆ ಣಮೋ ಅರಿಹಂತಾಣಂ- ಕನ್ನಡ ಜೈನ ನೋಂಪಿಕಥೆಗಳು: [ಧಾರ್ಮಿಕ ಆಚರಣೆ ಮತ್ತು ನೈತಿಕಬೋಧೆ-ಸಂಶೋಧನಾತ್ಮಕ ಲೇಖನ] ಒಂದಾನೊಂದು ಕಾಲದಲ್ಲಿ.., ಒಂದು ಊರಲ್ಲಿ.., ಬಹಳ ಹಿಂದೆ, ದೂರದ ಒಂದು ಹಳ್ಳಿಯಲ್ಲಿ.., ಹಿಂದೆ ಕಾಲದಲ್ಲಿ ಒಬ್ಬ ರಾಜನಿದ್ದನಂತೆ.., ನಮ್ಮ ಅಜ್ಜ-ಅಜ್ಜಿ ಹೇಳ್ತಿದ್ದ ಕಥೆಯಿದು.., ಪುರಾತನ ಕಾಲದಲ್ಲಿ.., ತ್ರೇತಾಯುಗದಲ್ಲಿ.., ದ್ವಾಪರ ಯುಗದಲ್ಲಿ.., ಈ ಕಲಿಯುಗದ ಆರಂಭದಲ್ಲಿ.., ವೇದ ಪುರಾಣಗಳಲ್ಲಿ ಹೇಳಿದಂತೆ.., ಮಹರ್ಷಿಗಳು ವರ್ಣಿಸಿರುವಂತೆ.., ನಮ್ಮ ಜನಪದ ಅಥವಾ ಪೌರಾಣಿಕ ಕಥೆಗಳು ಆರಂಭಗೊಳ್ಳುವುದೇ ಹೀಗೆ! ಕೇಳುಗಳ [ಶ್ರೋತೃಗಳ] ಗಮನ ಸೆಳೆಯಲು ಕಾಲ ಮತ್ತು ಸ್ಥಳವನ್ನು ಅಸ್ಷಷ್ಟವಾಗಿಟ್ಟು ಕಲ್ಪನೆಗೆ ಅವಕಾಶ ಕೊಡುವಂತೆ; ಪುರಾತನ ಕಾಲದಲ್ಲಿ ಧರ್ಮವೇ ರಾಜ್ಯದ ಆಧಾರವಾಗಿದ್ದ ಯುಗದಲ್ಲಿ, ಒಂದು ಸಮೃದ್ಧ ರಾಜ್ಯವನ್ನು ಆಳುತ್ತಿದ್ದ ಧರ್ಮನಿಷ್ಠ ರಾಜನೊಬ್ಬನಿದ್ದನು.., ಆ ರಾಜನಿಗೆ ಎಲ್ಲವೂ ಇತ್ತು ಆದರೆ.., ಆದರೆ.., ಒಂದು ಚಿಂತೆ ಮಾತ್ರ ಅವನನ್ನು ಬಿಡದೆ ದಹಿಸುತ್ತಿತ್ತು.., ಎನ್ನುತ್ತಿರುವಾಗಲೇ ಇಡೀ ಕಥಾನಕವನ್ನು ನೀವು ಊಹಿಸಿಬಿಡುತ್ತೀರಿ.., ಚಿತ್ರದ ಮೊದಲರ್ಧವನ್ನು ನೋಡುತ್ತಿರುವಾಗಲೇ ನೀವು ಕ್ಲೈಮ್ಯಾಕ್ಸ್ ಅನ್ನು ಹೇಳಿಬಿಡುವಂತೆ.., ಕಥೆಗಳು ಆಗಲ್ಲ ಇಲ್ಲಿನ ಅನಿರೀಕ್ಷಿತ ತಿರುವುಗಳು ಓದುಗರ ಸ್ಮೃತಿಪಟಲದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿಬಿಡುತ್ತವೆ. *_ಹಿನ್ನಲೆ:_*ಜೈನಧರ್ಮವು ಭಾರತದ ಅತ್ಯಂತ ಪ್ರಾಚೀನ ಧರ್ಮಗಳಲ್ಲಿ ಒಂದಾಗಿದೆ. ಇದರ ಹುಟ್ಟಿನ ಹಿನ್ನಲೆ ಕಿ.ಪೂ.ಆರನೇ ಶತಮಾನಕ್ಕೆ ಸೇರಿದೆ ಎಂದು ಇತಿಹಾಸಕಾರರು ಅಭಿಪ್ರಾಯ ಪಡುತ್ತಾರೆ. ಜೈನ ಪರಂಪರೆಯ ಪ್ರಕಾರ ಈ ಧರ್ಮವು ಅನಾದಿಕಾಲದಿಂದಲೂ ಅಸ್ತಿತ್ವದಲ್ಲಿದ್ದು ಇಪ್ಪತ್ನಾಲ್ಕು ತೀರ್ಥಂತಕರರ ಮೂಲಕ ಬೆಳೆದುಬಂದಿದ್ದು, ಕೊನೆಯ ತೀರ್ಥಂಕರರಾದ ವರ್ಧಮಾನ ಮಹಾವೀರರು ಜೈನಧರ್ಮಕ್ಕೆ ಸಂಘಟಿತ ರೂಪುನೀಡಿ ಪ್ರಚಾರ ಮತ್ತು ಪ್ರಸಾರ ಮಾಡಿದನೆಂದು ತಿಳಿಯಲಾಗಿದೆ. ವೈದಿಕ ಕಾಲಘಟ್ಟದಲ್ಲಿ ಯಜ್ಷ-ಯಾಗಗಳ ಅಧಿಕ್ಯ, ಪಶುಬಲಿ, ಬ್ರಾಹ್ಮಣರ ಪ್ರಾಬಲ್ಯ ಹಾಗೂ ವರ್ಣವ್ಯವಸ್ಥೆಯ ಕಾಠಿಣ್ಯತೆ ಸಮಾಜದಲ್ಲಿ ಅಸಮಾಧಾನವನ್ನುಂಟು ಮಾಡಿತ್ತು. ಇವುಗಳಿಗೆ ಪ್ರತಿರೋಧದ ಹಿನ್ನಲೆಯಲ್ಲಿ ಬೌದ್ಧ ಮತ್ತು ಜೈನಧರ್ಮಗಳು ಉದಯವಾದವು ಎನ್ನಬಹುದು.ಜೈನಧರ್ಮವು ಸರಳ ಆಚರಣೆ, ನೀತಿಪಾಠಗಳ ಮೂಲಕ ಜೀವನ ಮತ್ತು ಆತ್ಮಶುದ್ಧಿಗೆ ಮಹತ್ವ ನೀಡಿತು. ಸಾಮಾಜಿಕವಾಗಿ ನಗರೀಕರಣ, ವ್ಯಾಪಾರ ಮತ್ತು ವೈಶ್ಯವರ್ಗದ ವೃದ್ಧಿಯೂ ಜೈನಧರ್ಮದ ಬೆಳವಣಿಗೆಗೆ ಕಾರಣವಾಯಿತು. ಅಹಿಂಸೆ, ಅಪರಿಗ್ರಹ, ಅನೇಕಾಂತವಾದ ಹಾಗೂ ತ್ರಿರತ್ನಗಳಾದ ಸಮ್ಯಕ್ ದರ್ಶನ, ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರಿತ್ಯ್ರ  ಜೈನಧರ್ಮದ ಮೂಲ ತತ್ತ್ವಗಳಾಗಿವೆ. ಬೌದ್ಧ ಮತ್ತು ಜೈನಧರ್ಮಗಳೆರೆಡು ಶ್ರಮಣ ಪರಂಪರೆಯಿಂದ ಉದ್ಭಭವಿಸಿದ್ದು, ತಪಸ್ಸು, ಸಂಯಮ ಮತ್ತು ವೈರಾಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿದವು. ಜೈನಧರ್ಮಕ್ಕೆ ಮಗಧ ಪ್ರದೇಶದ ರಾಜಾಶ್ರಯ ಮತ್ತು ವ್ಯಾಪಾರಿಗಳ ಬೆಂಬಲದಿಂದ ಇದು ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ವ್ಯಾಪಕವಾಗಿ ಹರಡಿತೆನ್ನಬಹುದು.ಈ ರೀತಿಯಾಗಿ ವೈದಿಕ ಧರ್ಮದ ಜಟಿಲ ಆಚರಣೆಗಳಿಗೆ ವಿರುದ್ಧವಾಗಿ ಮಾನವೀಯತೆ, ಅಹಿಂಸೆ ಮತ್ತು ಆತ್ಮಸಾಧನೆಯನ್ನು ಕೇಂದ್ರವಾಗಿಟ್ಟುಕೊಂಡ ಒಂದು ಧರ್ಮವಾಗಿ ಬೆಳೆದು ಬಂದಿತು.ಕೊಲ್ಲದ ಧರ್ಮಕ್ಕೆ ಜಿನಾಗಮವೇ ತೌರುಮನೆಯಾಗಿದೆ:ಕ್ಷಮೆಯೇ ಧರ್ಮ, ಧರ್ಮಕ್ಕೆ ದಯವೇ ಮೂಲ, ದಯವೇ ಅಹಿಂಸೆ, ಅಹಿಂಸೆಯೇ ಶಾಂತಿ, ಶಾಂತಿಯೇ ಸುಖ, ಸುಖದ ಅನುಭವವೇ ಜ್ಞಾನ, ಜ್ಞಾನಿಯೇ ಆತ್ಮ. ಆದುದರಿಂದ ಆತ್ಮನಿರೀಕ್ಷಣೆಗೆ ಮೊದಲು ಕ್ಷಮಾಗುಣವನ್ನು ಹೊಂದಬೇಕು. ಅಧ್ಯಾತ್ಮರಸಾನುಭವಿಯಾಗಲು ಕ್ಷಮಾಗುಣಧಾರಿಯೇ ಆಗಬೇಕು. ಕ್ಷಮಾ ವೀರಸ್ಯ ಭೂಷಣಂ! *ರತ್ನಾಕರ ಕವಿ ಹೇಳಿರುವಂತೆ* : ಕ್ಷಮೆ ಮಾಳ್ಪಂತೆ ವಿರೋಧಮೇಂ ಕೊಡುವುದೇ ಸಂತೋಷಮಂ? ಜೀವನದಲ್ಲಿ ಸಂತೋಷವನ್ನು ಕಾಣಲು ಕ್ಷಮೆಯನ್ನು ತಾಳಬೇಕು ಎಂಬಿತ್ಯಾದಿ ಜೈನಧರ್ಮದ ಉದಾತ್ತ ತ್ತ್ವ ಧ್ಯೇಯಗಳನ್ನು ಪಾಲಿಸಿದರೆ ಪತಿತ ಪಾವನನಾಗಬಲ್ಲ, ಜೀವ ಜೀವನ್ಮುಕ್ತನಾಗಬಲ್ಲ, ನರ ನಾರಾಯಣನಾಗಬಲ್ಲ, ಬುದ್ಧನು ಸಿದ್ಧನು ಸಿದ್ಧನಾಗಬಲ್ಲ ಎಂಬ ವಿಚಾರಗಳಿಗೆ ಮಾರುಹೋಗಿ ಜನ ತಲೆಬಾಗಿ ಜೈನಧರ್ಮವನ್ನು ಶಿರೋಧಾರಣೆ ಮಾಡಿ ಅನುಸರಿಸಲಾರಂಭಿಸಿದರು.ಕರ್ನಾಟಕದಿ ಶ್ರವಣಬೆಳಗೊಳ, ಪುಲಿಗೆರೆ, ಕೊಪ್ಪಳ, ಬ್ರಹ್ಮಪುರಿ, ಬಳ್ಳಿಗಾವೆ, ತಾಲಗುಂದ, ಬನವಾಸಿ, ಐಹೊಳೆ, ಹುಂಚ, ಕಾರ್ಕಳ, ಮೂಡಬಿದ್ರೆ, ಗೇರುಸೊಪ್ಪೆ ಮುಂತಾದ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ವಿದ್ಯಾಕೇಂದ್ರಗಳಿದ್ದವು. ಕನ್ನಡದ ಆದಿಗ್ರಂಥ ಕವಿರಾಜಮಾರ್ಗಕಾರ, ಆದಿಕವಿ ಪಂಪ, ಪೊನ್ನ, ರನ್ನ, ಜನ್ನ, ಚಾವುಂಡರಾಯ, ಅಗ್ಗಳ, ಸಾಳ್ವ, ನಯಸೇನ, ನೇಮಿಚಂದ್ರ, ರತ್ನಾಕರ, ಆಂಡಯ್ಯ ಪ್ರಮುಖ ಕವಿಗಳು ಹಾಗೂ ಸಮಂತಭದ್ರರು, ಭಟ್ಟಾಕಲಂಕರು, ಪೂಜ್ಯಪಾದರು, ಸಿಂಹನಂದಿಗಳೇ ಮುಂತಾದ ಪ್ರಮುಖ ಆಚರ‍್ಯರುಗಳು ಬರೆದಿರುವ ಮಹಾಕಾವ್ಯಗಳು, ಪುರಾಣಗಳು, ಸಿದ್ಧಾಂತಗಳು ಅಷ್ಟಿಷ್ಟಲ್ಲ, ಹೀಗೆ ಕನ್ನಡ ಸರಸ್ವತಿಯನ್ನು ಜೈನರು ಅನೇಕ ಗ್ರಂಥಗಳಿಂದ ಅಲಂಕರಿಸಿದ್ದಾರೆ. ಧರ್ಮ ಪ್ರಸಾರದೊಂದಿಗೆ ಸಾಹಿತ್ಯ ಸೇವೆ ಗೈದವರಲ್ಲಿ ಜೈನಮಹಿಳೆಯರು ದಾನಚಿಂತಾಮಣಿಗಳೆನಿಸಿದ್ದಾರೆ. ಸಂಗೀತ, ನೃತ್ಯ ಪ್ರವೀಣರೆನಿಸಿ, ವೀರ ರಮಣಿಗಳೆನಿಸಿ, ಸ್ತ್ರೀ ಸಮುದಾಯಕ್ಕೆ ಆದರ್ಶಪ್ರಾಯರಾದ ಅತ್ತಿಮಬ್ಬೆ, ಮಲ್ಲಿಕಬ್ಬೆ, ಜಕ್ಕೆಯಬ್ಬೆ, ರಾಣೀ ಶಾಂತಲಾದೇವಿ ಮುಂತಾದವರು ಜೈನ ನಾರೀರತ್ನಗಳಾಗಿದ್ದಾರೆ..ಜೈನರೇ ಕನ್ನಡ ಭಾಷೆಯ ಆದಿಕವಿಗಳು, ಎಲ್ಲ ಪ್ರಾಚೀನ ಉತ್ತಮ ಕೃತಿಗಳು ಜೈನಕವಿಗಳದ್ದೆ ಆಗಿವೆ. ಕನ್ನಡ ಭಾಷೆಯ ಸೌಂಧರ‍್ಯವೂ, ಕಾಂತಿಯೂ ಹೆಚ್ಚಲು ಜೈನಕವಿಗಳೇ  ಕಾರಣ. ಪಂಪ, ರನ್ನ, ಪೊನ್ನರು ಕವಿಗಳಲ್ಲಿ ರತ್ನತ್ರಯರೇ ಆಗಿರುವರು. ಹದಿನಾಲ್ಕನೇ ಶತಮಾನದವರಗೆ ಕನ್ನಡ ಭಾಷೆಯ ಸಹಾಯಕ ಗ್ರಂಥಗಳಾದ ಛಂದಸ್ಸು, ಅಲಂಕಾರ, ವ್ಯಾಕರಣ, ಕೋಶ ಮೊದಲಾದ ಗ್ರಂಥಗಳು ಜೈನರಿಂದಲೇ ರಚಿತವಾದವು ಎಂದು ದಿ. ಆರ್. ನರಸಿಂಹಾಚರ‍್ಯರು ತಮ್ಮ ಕರ್ಣಾಟಕ ಕವಿಚರಿತೆಯಲ್ಲಿ ಬರೆದಿರುವರು; ಇದು ಜೈನರು ಕನ್ನಡ ಭಾಷೆಗೆ ನೀಡಿದ ಮಹತ್ತರ ಕೊಡುಗೆಯನ್ನು ಎತ್ತಿಹಿಡಿಯುತ್ತದೆ.ಕನ್ನಡ ಜೈನ ನೋಂಪಿ[ವ್ರತ]ಕಥೆಗಳು:ಜೈನಧರ್ಮದಲ್ಲಿ ಪರಿಪಾಲಿಸಲ್ಪಡುವ ನೋಂಪಿ[ವ್ರತ-ಉಪವಾಸ]ಗಳು ಮತ್ತು ಅವುಗಳಿಂದ ವ್ಯಕ್ತಿಗೆ ದೊರಕುವ ಆತ್ಮಶುದ್ಧಿ. ಸಂಯಮ ಹಾಗೂ ಕರ್ಮಕ್ಷಯದ ಫಲಗಳನ್ನು ವಿವರಿಸುವ ಧಾರ್ಮಿಕ-ನೈತಿಕ ಕಥಾನಕಗಳಾಗಿವೆ. ಈ ಕಥೆಗಳು ಜೈನಧರ್ಮದ ತಾತ್ವಿಕ ಅಂಶಗಳನ್ನು ಸರಳ ಕಥನರೂಪದಲ್ಲಿ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿವೆ ಎಂದು ಹೇಳಬಹುದು. ವಿಷಯ, ಪಾತ್ರ ಮತ್ತು ಉದ್ದೆಶಗಳ ಆಧಾರದ ಮೇಲೆ ನೋಂಪಿ ಕಥೆಗಳನ್ನು ಕೆಳಕಂಡ ವಿಧಗಳಲ್ಲಿ ವಿಂಗಡಿಸಬಹುದು:೧. ಪಾತ್ರಾಧಾರಿತ ವಿಂಗಡಣೆ: ಸ್ತ್ರೀ, ಪುರುಷ, ರಾಜ, ಯೋಧ, ವ್ಯಾಪಾರಿ, ಮಕ್ಕಳು ಮುಂತಾದ ಪಾತ್ರಗಳನ್ನು ಕೇಂದ್ರವಾಗಿಟ್ಟುಕೊಂಡ ಕಥೆಗಳು, ಇವುಗಳಲ್ಲಿ ಗೃಹಸ್ಥ ಜೀವನ ಮತ್ತು ಧರ್ಮಾಚರಣೆ ಪ್ರಮುಖವಾಗಿರುತ್ತದೆ.೨. ವಿಷಯಾಧಾರಿತ ವಿಂಗಡಣೆ: ಪಾಪದಿಂದ ಪಶ್ಚಾತ್ತಾಪಕ್ಕೆ ಹೋಗುವ, ದುಃಖದಿಂದ ಧರ್ಮದತ್ತ ಸಾಗುವ, ವೈರಾಗ್ಯ ಮತ್ತು ತ್ಯಾಗದ ಕಥೆಗಳು ಈ ವಿಭಾಗಕ್ಕೆ ಸೇರುತ್ತವೆ.೩. ಫಲಾಪೇಕ್ಷಾಧಾರಿತ ವಿಂಗಡಣೆ: ಐಹಿಕ ಫಲ[ಸಂತಾನ, ಆರೋಗ್ಯ, ಸಂಪತ್ತು] ಪಡೆಯುವ ಉದ್ದೇಶದ ಮತ್ತು ಆತ್ಮಶುದ್ಧಿ-ಮೋಕ್ಷದಂತಹ ಅಧ್ಯಾತ್ಮಿಕ ಫಲವನ್ನು ಗುರಿಯಾಗಿಟ್ಟುಕೊಂಡ ಕಥೆಗಳು. *೪. ಧರ್ಮತತ್ತ್ವಾಧಾರಿತ* *ವಿಂಗಡಣೆ:* ಅಹಿಂಸೆ, ಅಸ್ತೇಯ, ಬ್ರಹ್ಮರ‍್ಯೆ, ಅಪರಿಗ್ರಹ, ಕ್ಷಮೆ ಮುಂತಾದ ಜೈನತತ್ತ್ವಗಳನ್ನು ಬೋಧಿಸುವ ಕಥೆಗಳು.೫ *. ಸಾಹಿತ್ಯಿಕ ಸ್ವರೂಪದ ಆಧಾರಿತ* ವಿಂಗಡಣೆ: ಸರಳ ಜನಪದ ಶೈಲಿ, ಉಪದೇಶಾತ್ಮಕ, ಪುರಾಣಾಧಾರಿತ ಹಾಗೂ ರೂಪಕಾತ್ಮಕ ನೋಂಪಿಕಥೆಗಳು.೬. *ಗುರಿ ವಾಚಕರ ಆಧಾರಿತ* ವಿಂಗಡಣೆ: ಮಕ್ಕಳಿಗಾಗಿ, ಗೃಹಸ್ಥರಿಗಾಗಿ ಮತ್ತು ಸಾಧು-ಸಾಧ್ವಿಗಳಿಗೆ ಉದ್ದೇಶಿಸಿದ ಕಥೆಗಳು.ಈ ರೀತಿ ಜೈನನೋಂಪಿ ಕಥೆಗಳು ಧಾರ್ಮಿಕ ಆಚರಣೆಗೂ ಜೊತೆಗೆ ನೈತಿಕ ಜೀವನದ ಮಾರ್ಗದರ್ಶನ ನೀಡುವ ಕಾರಣದಿಂದ ವಿವಿಧ ವಿಧಗಳಲ್ಲಿ ವಿಂಗಡಿಸಬಹುದಾದ ಸಮೃದ್ಧ ಸಾಹಿತ್ಯ ಪರಂಪರೆಯಾಗಿದೆ ಎಂದು ಹೇಳಬಹುದು.ಕನ್ನಡ ಜೈನಸಾಹಿತ್ಯದಲ್ಲಿ ನೋಂಪಿಕಥೆಗಳು ತೀರ್ಥಂಕಕರರ ಜೀವನ, ಶ್ರಾವಕ-ಶ್ರಾವಿಕೆಯರ ತಪಸ್ಸು, ರಾಜರು ಮತ್ತು ಸಾಮಾನ್ಯ ಜನರು ನೋಂಪಿ ಪಾಲನೆಯ ಮೂಲಕ ಸತ್ಸಂಸ್ಕಾರಗಳಿಸಿದ ಘಟನೆಗಳನ್ನು ಒಳಗೊಂಡಿರುತ್ತವೆ. ವಿಶೇಷವಾಗಿ ಪರ್ಯುಷಣ [ಜೈನಧರ್ಮದ ಅತ್ಯಂತ ಪವಿತ್ರ ಹಾಗೂ ಮಹತ್ವದ ಧಾರ್ಮಿಕ ಆಚರಣೆಯಾಗಿದ್ದು, ಶ್ವೇತಾಂಬರರಲ್ಲಿ ಎಂಟುದಿನ, ದಿಗಂಬರರಲ್ಲಿ ಹತ್ತು ದಿನಗಳ ಕಾಲ – ಉಪವಾಸ, ಏಕಾಸನ, ನಿಯಮಿತ ಆಹಾರ ಆತ್ಮಪರಿಶೀಲನೆಯೊಂದಿಗೆ ಆತ್ಮಶುದ್ಧಿ, ಪಾಪಕ್ಷಮೆ ಯಾಚನೆ, ಸ್ವಯಂ ಸಂಯಮ ಸಾಧಿಸುವುದಾಗಿದೆ], ವರ್ಷೀತಪ [ಜೈನಧರ್ಮದ ಅತ್ಯಂತ ಕಠಿಣ ತಪಸ್ಸುಗಳಲ್ಲಿ ಒಂದಾಗಿದ್ದು, ಸುಮಾರು ಹದಿಮೂರು ತಿಂಗಳು, ಹದಿಮೂರು ದಿನಗಳ ಕಾಲ – ಒಂದು ದಿನ ಉಪವಾಸ ಅದರ ಮುಂದಿನ ದಿನ ಏಕಾಸನಗೈಯುತ್ತ ಕರ್ಮಕ್ಷಯ, ಇಂದ್ರಿಯ ನಿಗ್ರಹ ಹಾಗೂ ಆತ್ಮೋದ್ಧಾರ ಹೊದುವುದು ಮುಖ್ಯ ಉದ್ದೇಶವಾಗಿದೆ], ಏಕಾಸನ [ದಿನಕ್ಕ ಒಂದೇ ಸಮಯ, ಒಂದೇ ಸ್ಥಳದಿ ಆಸನ ಬದಲಿಸದೆ ಮಿತಆಹಾರ ಸೇವಿಸುವುದರೊಂದಿಗೆ ಮನಸ್ಸಿನ ಓಟಕ್ಕೆ ಅಥವಾ ಆಸೆಗೆ ಕಡಿವಾಣ ಹಾಕುವುದು, ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ], ಉಪವಾಸ[ಆಹಾರ ತ್ಯಾಗ: ಏಕೋಪವಾಸ– ಒಂದುದಿನ, ಅಠ್ಠಮ– ಮೂರುದಿನ, ಮಾಸಾಕ್ಷಣ ಮೂವತ್ತು ದಿನ ಬರೀ ನೀರು ಕುಡಿಯುತ್ತಾ.., ಅದೂ ಇಲ್ಲದೇ ನಡೆಸುವ ವ್ರತಾಚರಣೆಯಾಗಿದ್ದು, ದೇಹಕ್ಕಿಂತ ಆತ್ಮಕ್ಕೆ ಮಹತ್ತು ನೀಡುವುದು, ಕರ್ಮಬಂಧನ ಕಡಿಮೆಮಾಡಿಕೊಳ್ಳುವುದು ಇದರ ಮುಖ್ಯ ಉದ್ದೆಶವಾಗಿದೆ] ಈ  ಮೊದಲಾದ ನೋಂಪಿಗಳ ಕಥನಗಳು ಹೆಚ್ಚಾಗಿ ಕಂಡುಬರುತ್ತವೆ.ವೈದಿಕ – ಜೈನ ಪ್ರತಿರೋಧ:ಬಿಡಲಾರದ ನೋಂಪಿ[ವ್ರತ]ಗಳು– ಅಹಿಂಸಾತತ್ತ್ವಪರಿಪಾಲನೆಯಿಂದಲೇ ಮಾನವರಿಗೆ ಮುಕ್ತಿ:ಸೋಮಶರ್ಮಭಟ್ಟ ವೈದಿಕ ಕರ್ಮಗಳನ್ನು ತಪ್ಪದೆ ಆಚರಿಸುತ್ತಿದ್ದ ನಿಷ್ಠಧಾರ್ಮಿಕ ವ್ಯಕ್ತಿ. ಅವನಿಗೆ ಸದ್ಗುಣಸಂಪನ್ನೆಯಾದ ನಾಗಶ್ರೀ ಎಂಬ ಮಗಳಿದ್ದಳು. ಹೀಗೆ ಒಮ್ಮೆ ಆ ಊರಿಗೆ ಸರ‍್ಯಮಿತ್ರಾಚರ‍್ಯರೆಂಬ ಜೈನಮುನಿಗಳು ಬಂದು ಪ್ರತಿದಿನ ಪ್ರವಚನಗಳನ್ನು ನೀಡಿ ಅನೇಕ ಬಗೆಯ ಧರ್ಮೋಪದೇಶಗಳನ್ನು ನೀಡುತ್ತಿದ್ದರು. ಆ ಪ್ರವಚನಗಳನ್ನು ಕೇಳಿದ ನಾಗಶ್ರೀ ಪ್ರಭಾವಿತಳಾಗಿ ಗುರುಗಳಲ್ಲಿ ತನಗೂ ವ್ರತಗಳನ್ನು ನೀಡುವಂತೆ ಕೇಳಿಕೊಂಡಳು; ಚತುರೆ-ಬುದ್ಧಿವಂತೆಯಾದ ನಾಗಶ್ರೀ ವ್ರತಗಳನ್ನು ಪಾಲಿಸಬಲ್ಲಳು ಎಂದೆಣಿಸಿದ ಗುರುಗಳು– ಅಹಿಂಸೆ, ಸತ್ಯ, ಅಸ್ತೇಯ [ಕಳ್ಳತನ ಮಾಡದಿರುವುದು], ಬ್ರಹ್ಮರ‍್ಯ ಮತ್ತು ಅಪರಿಗ್ರಹ [ದುರಾಸೆಯನ್ನು ಮಾಡದಿರುವುದು] ವ್ರತಗಳನಿತ್ತರು. ಭಕ್ತಿ-ಭಾವದಿಂದ ಸ್ವೀಕರಿಸಿದ ನಾಗಶ್ರೀ ಮನೆಗೆ ಬಂದಳು. ವಿಷಯ ತಿಳಿದ ಸೋಮಶರ್ಮಭಟ್ಟ ಮಗಳೇ, ನಾವು ಬ್ರಾಹ್ಮಣರು, ಜಗತ್ತಿನಲ್ಲಿ ಶ್ರೇಷ್ಠರಾದವರು, ನಾವು ಜೈನರ ವ್ರತಗಳನ್ನು ಪರಿಗ್ರಹಿಸಬಾರದು, ವ್ರತಗಳನ್ನು ಮರಳಿಸುವಂತೆ ತಂದೆಯು ಸೂಚಿಸಲು, ನೀವೂ ನನ್ನ ಜೊತೆಬನ್ನಿ ಎಂದು ಮುನಿಗಳ ಬಳಿಗೆ ಕರೆದೊಯ್ಯುವಾಗ ದಾರಿ ಮಧ್ಯೆ ನಡೆದ ಘಟನಾವಳಿಗಳೂ ಕಥೆಗೆ ಮುಖ್ಯತಿರುವನ್ನು ನೀಡುತ್ತವೆ.ಅವು ಇಂತಿವೆ: ಬಂಧಿತ ಕೊಲೆಪಾತಕ–ಅಹಿಂಸಾ ವ್ರತ, ಬಂಧಿತ ಸುಳ್ಳುಗಾರ-ಜನರನ್ನು ವಂಚಿಸುವವ- ಸತ್ಯವ್ರತ, ಬಂಧಿತ ಕಳ್ಳ– ಅಸ್ತೇಯ ವ್ರತ, ಬಂಧಿತ ಮೋವಾಳಿ ಹೆಂಗಸು ಮತ್ತು ನಾಗಸೂರ ವರ್ತಕನ ಮಗ– ವ್ಯಭಿಚಾರ-ಪರಪುರುಷನ ಸ್ನೇಹ ತಪ್ಪು- ಬ್ರಹ್ಮಚರ‍್ಯೆ ವ್ರತ, ಬಂಧಿತ ದುರಾಸೆಯ ವ್ಯಕ್ತಿ– ಅಪರಿಗ್ರಹ ವ್ರತ, ಕೊನೆಗೆ ತಂದೆಯು ಮಗಳ ಎಲ್ಲ ವ್ರತಗಳನ್ನು ಆಚರಿಸಲು ಒಪ್ಪಿದ. ಮಗಳು ಮುನಿಗಳ ಬಳಿಗೆ ಬಂದು ನಡೆದ ವೃತ್ತಾಂತವನ್ನೆಲ್ಲ ಹೇಳಿದಳು; ಆಗ ಮುನಿಗಳು ಬ್ರಾಹ್ಮಣ ಧರ್ಮವಾದರೇನು? ಸೂಕ್ಷ್ಮವಾಗಿ ಅವಲೋಕಿಸಿದರೆ ಸತ್ಯಧರ್ಮವೇ ಧರ್ಮ! ಅಂತಹ ಧರ್ಮ ಆತ್ಮನಿಷ್ಟವಾದದ್ದು, ಧರ್ಮವನ್ನು ಜಾತಿಯಿಂದ ಪರಿಗಣಿಸಿದಾಗ ವ್ಯಕ್ತಿನಿಷ್ಟವಾಗಿ ರಾಗಾದ್ವೇಷಾದಿಗಳು ಉದ್ಭವಿಸುವುವು, ಈ ಪಂಚಾಣುವ್ರತಗಳು ಯಾವ ಧರ್ಮಕ್ಕೆ ತಾನೇ ವಿರೋಧ? ಜಗತ್ತಿನ ಸಕಲ ಜನರೂ ಅನುಸರಿಸಲು ಯೋಗ್ಯವಾದವುಗಳು; ಜಿನಪೂಜೆಗೆ ಅಡ್ಡಿಮಾಡಿದವರು ತಿರುಕರಾಗಿ ಅನ್ನಅನ್ನ ಎಂದು ಬಾಯಿ ಬಿಡಬೇಕಾಗುವುದು, ಜಿನಧರ್ಮವನ್ನು ದೂಷಿಸುವವರು ಕುಷ್ಠರೋಗಕ್ಕೆ ತುತ್ತಾಗುವರು, ಅನ್ನದಾನಕ್ಕೆ ಅಡ್ಡಿಮಾಡಿದವರು ಹಸಿವಿನಿಂದ ಕಂಗಾಲಾಗುವರು; ಬಡವನ ಸುಖ, ಹೇಡಿಯ ಕೋಪ, ಮುಗಿಲ ನೆಳಲು, ಪ್ರಿಯರ ಮುನಿಸು, ಮಹಾಮೂರ್ಖರ ತಪಸ್ಸು ಇವಾವೂ ಸ್ಥಿರವಲ್ಲ; ಶ್ರೀಶೇಣನು ದಾನಮಾಡಿದ ಮಹಾಪುಣ್ಯದಿಂದಲೇ ಮುಂದೆ ಶಾಂತಿನಾಥ ತೀರ್ಥಂಕರ ನಾಗಲಿಲ್ಲವೇ? ಆಹಾರ, ಅಭಯ, ಔಷಧಿ ಮತ್ತು ಶಾಸ್ತ್ರದಾನಗಳು ಗೃಹಸ್ಥರಿಗೆ ಅನಂತ ಸಿರಿಯ ವ್ಯವಸಾಯದಲ್ಲಿ ಬಿತ್ತಬೇಕಾದ ಗಟ್ಟಿ ಬೀಜಗಳಾಗಿವೆ ಎಂದು ಅನೇಕ ವಿಧದಿಂದ ಬೋಧಿಸಿದರು.ಪೂರ್ವಭವದ ಸ್ಮರಣೆ – ಜನ್ಮಾಂತರಗಳ ಕಥೆ:ಭಗವಾನ್ ಮಹಾವೀರ ತೀರ್ಥಂಕರರ ವಿಹಾರ ಮಗಧ ದೇಶದಲ್ಲಿ ನಡದಿತ್ತು, ರಾಜಗೃಹ ಅದರ ರಾಜಧಾನಿಯಾಗಿದ್ದು, ಶ್ರೇಣುಕನೆಂಬ ಮಹಾರಜ ರಾಜ್ಯಭಾರ ಮಾಡುತ್ತಿದ್ದನು. ಅದೇ ನಗರದಲ್ಲಿ ನಾಗದತ್ತನೆಂಬ ಧನಿಕ ಆತನ ಹೆಂಡತಿ ಭವದತ್ತೆ ದಂಪತಿಗಳಿಬ್ಬರೂ ಧರ್ಮಮಾರ್ಗದಲ್ಲೇ ನಡೆಯುತ್ತಿದ್ದರು. ಆದರೆ ಕಾಲಗರ್ಭದಲ್ಲಿ ಏನ್ ಅಡಗಿದೆಯೋ ಬಲ್ಲವರಾರು? ನಾಗದತ್ತ ಅಕಾಲಿಕ ಮರಣಕ್ಕೆ ತುತ್ತಾದ, ಹೆಂಡತಿಯ ಮೇಲಿನ ವ್ಯಾಮೋಹದಿಂದ ಮೃತ್ಯುವಶನಾದ ನಾಗದತ್ತ ಮರುಜನ್ಮದಿ ಕಪ್ಪೆಯಾಗಿ ಹುಟ್ಟಿದ. ತನ್ನ ಮನೆಯ ಹಿತ್ತಲಿನ ಬಾವಿಯೇ ಆವಾಸಸ್ಥಾನವಾಗಿತ್ತು. ದಿನದಿನವೂ ಸೊರಗುತ್ತಿತ್ತು, ಆ ಬಾವಿಯಿಂದ ಹೊರಬರಲಾರದೆ ತಳಮಳಿಸುತ್ತಿತ್ತು.ಒಂದು ದಿನ ಅಚಾನಕ್ಕಾಗಿ ಬಾವಿಯಿಂದ ನೀರು ಸೇದುವಾಗ ಬಿಂದಿಗೆಯೊಳಕ್ಕೆ ತೂರಿ ಹೊರಕ್ಕೆ ಬಂದುಬಿಟ್ಟಿತು.., ಕುಪ್ಪಳಿಸುತ್ತಾ ಕುಪ್ಪಳಿಸುತ್ತಾ ಮನೆಯೊಳಕ್ಕೆ ಸೇರಿಕೊಂಡಿತು, ಹೆಂಡತಿ ಭವದತ್ತೆಯನ್ನು ಕಂಡಕೂಡಲೇ ಪ್ರೀತಿಯಿಂದ ಆಕೆಯ ಮೇಲೆ ಜಿಗಿಯುತ್ತ ಜಿಗಿಯುತ್ತಾ ಹೋಯಿತು ಹೆದರಿದ ಆಕೆಯ ಮನೆಯಿಂದ

ಣಮೋ ಅರಿಹಂತಾಣಂ- ಕನ್ನಡ ಜೈನ ನೋಂಪಿಕಥೆಗಳು:(ಧಾರ್ಮಿಕ ಆಚರಣೆ ಮತ್ತು ನೈತಿಕಬೋಧೆ-ಸಂಶೋಧನಾತ್ಮಕ ಲೇಖನ) ಡಾ. ಯಲ್ಲಮ್ಮ ಕೆ Read Post »

You cannot copy content of this page

Scroll to Top