ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಪ್ರಕಾಶ್.ಆರ್ ಅವರ ಕವಿತೆ “ಸಾರ್ಥಕ ಬದುಕು”

ಕಾವ್ಯ ಸಂಗಾತಿ ಪ್ರಕಾಶ್‌ ಆರ್ ಸಾರ್ಥಕ ಬದುಕು ವಿದ್ಯೆಯ ನೆರಳು ಕಾಣದ ಹೆಣ್ಣು ಜೀವವೊಂದುಕರುಳ ಕುಡಿಯ ವಿದ್ಯೆಯಆಶ್ರಯ ಕೊಡಲೆಂದುಕರುಳನೇ ಬತ್ತಿಯಾಗಿಸಿ ಬೆಳಕನೀಡಿದಜೀವಕೆ ನೆರಳಾದರೆ ಬದುಕು ಸಾರ್ಥಕವಲ್ಲವೇ? ಹೆಗಲನೇ ನೊಗವಾಗಿಸಿಬೆನ್ನು ಮೂಳೆಯ ಬಲವಾಗಿಸಿಎತ್ತಾಡಿಸಿ ತುತ್ತನೊದಗಿಸಿದ ತಂದೆಗೆಊರುಗೋಲಾಗಿ ನಿಂತರೆಬದುಕು ಸಾರ್ಥಕವಲ್ಲವೇ? ಕಣ್ಣನು ಮಣ್ಣಿಗಿಡುವ ಮುನ್ನಕಣ್ಣಿಲ್ಲದೆ ಕತ್ತಲಲಿರುವ ಜೀವಕೆಕಣ್ಣಾಗಿ ಬೆಳಕಾದರೆ ಬದುಕು ಸಾರ್ಥಕವಲ್ಲವೇ ಅಂಗವಿಕಲನಾದರೇನುಅಂಗಗಳ ಹಂಗಿನ ಗುಂಗಿಲ್ಲದೆಸಕಲಾಂಗವಿರುವ ಮನವು ವಿಕಲವಾದ ಜನರ ನಡುವೆಛಲದಿಂದ ಬಾಳಿದರೆಬದುಕು ಸಾರ್ಥಕವಲ್ಲವೇ  ಪ್ರಕಾಶ್.ಆರ್ ತುಮಕೂರು ಡಿಸ್ಟ್ರಿಕ್ಟ್ ದಿವ್ಯಂಗ್ ಸ್ಪೋರ್ಟ್ಸ್ ಅಕಾಡೆಮಿ ಸಂಸ್ಥಾಪಕರು

ಪ್ರಕಾಶ್.ಆರ್ ಅವರ ಕವಿತೆ “ಸಾರ್ಥಕ ಬದುಕು” Read Post »

ಇತರೆ

“ಕರುಣೆ ತೋರಿಸಿ” ವಿಶೇಷ ಲೇಖನ ವಾಣಿ ಶಿವಕುಮಾರ್

ಜೀವ ಸಂಗಾತಿ ವಾಣಿ ಶಿವಕುಮಾರ್ “ಕರುಣೆ ತೋರಿಸಿ” ಮೂಕ ಪ್ರಾಣಿಗಳೆಂದ ಮಾತ್ರಕ್ಕೆ ದಯವಿಟ್ಟು ನಮ್ಮನ್ನು ಕೀಳಾಗಿ ಕಾಣಬೇಡಿ ನಾವೂ ಸಹ ನಿಮ್ಮಂತೆಯೇ ಉಸಿರಾಡುತ್ತೇವೆ. ನಾಯಿ,ಹಸು,ಕುರಿ, ಕೋಳಿ,ಮೇಕೆ ಹೆಸರುಗಳಿಂದ ನಮ್ಮನ್ನು ಗುರುತಿಸುತ್ತೀರಾ.  ಬೇಸಿಗೆಕಾಲ ಶುರುವಾಗಿದೆ ನಿಮಗೆ ಹೇಗೆ ನೀರಿನ ಅಗತ್ಯವಿದೆಯೋ, ಅದೇ ರೀತಿ ನಮಗೂ ಸಹ ಅಗತ್ಯವಿರುತ್ತದೆ. ದಯವಿಟ್ಟು ನಿಮ್ಮ ನಿಮ್ಮ ಮನೆಯ ಮುಂದೆ ಒಂದು ಬಟ್ಟಲಿನಲ್ಲಿ ಅಥವಾ ಅಗಲವಾದ ಪಾತ್ರೆಯಲ್ಲಿ ನಮಗಾಗಿಯೇ ಅಂತ ಕುಡಿಯಲು ನೀರಿನ ವ್ಯವಸ್ಥೆಯನ್ನು ಮಾಡಿ ಕರುಣೆಯನ್ನು ತೋರಿಸಿ.  ಗೇಟಿನ ಮುಂದೆ ಬಂದರೆ ಸಾಕು ನಮ್ಮನ್ನು ಓಡಿಸುತ್ತೀರಾ ಯಾವ ಕಾರಣಕ್ಕಾಗಿ ಬಂದಿದೀವಿ ಅಂತ ಸ್ವಲ್ಪ ಮಟ್ಟಿಗಾದರೂ ಯೋಚಿಸಿ ಕೆಲವರ ಮನೆಯ ಮುಂದೆ ನಮಗಾಗಿ ಅಂತ ಸದಾ ನೀರಿನ ವ್ಯವಸ್ಥೆಯನ್ನು ಮಾಡಿರುತ್ತಾರೆ ಇನ್ನೂ ಕೆಲವರು ನೀರನ್ನು ಕುಡಿಯಲು ಕೊಡುವ ಬದಲು ಆ ನೀರನ್ನೇ ನಮ್ಮ ಮೇಲೆ ಎರಚಿ ನಮ್ಮನ್ನು ಓಡಿಸುತ್ತಾರೆ.  ನಿಮ್ಮಂತೆಯೇ ನಾವೂ ಸಹ ಮಾತನಾಡುವ ಸಾಮರ್ಥ್ಯವನ್ನು ಹೊಂದಿದ್ದರೆ ಬಿರು ಬಿಸಿಲಿನಲ್ಲಿ ಬೀದಿಬೀದಿ ಅಲೆದಾಡುವ ಪ್ರಸಂಗ ಬರುತ್ತಿರಲಿಲ್ಲ. ಮನೆಯಲ್ಲಿ ಹಳಸಿದ ಅನ್ನ,ಒಣಗಿರುವ ರೊಟ್ಟಿ, ಕೊಳೆತ ಹಣ್ಣು ತರಕಾರಿಗಳನ್ನು ಒಂದು ಕವರಿನಲ್ಲಿ ಹಾಕಿ ಬೀದಿ ಬದಿಯಲ್ಲಿ ಎಸೆಯುತ್ತೀರ  ಹಸಿವೆಯನ್ನು ತಾಳಲಾರದೆ ಕವರಿನಲ್ಲಿರುವ ಆಹಾರವನ್ನು ತಿನ್ನುವುದರ ಜೊತೆಗೆ ಹಾನಿಕಾರಕ ಪ್ಲಾಸ್ಟಿಕ್ ನಮ್ಮ ದೇಹವನ್ನು ಸೇರಿ ಗಂಭೀರ ಖಾಯಿಲೆಯಿಂದ ಬಳಲಿ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದೇವೆ.  ಪ್ಲಾಸ್ಟಿಕ್ ಕವರಿನಲ್ಲಿ ಆಹಾರ ಪದಾರ್ಥಗಳನ್ನು ಗಂಟು ಕಟ್ಟಿ ಎಸೆಯುವ ಬದಲು ಯಾವುದಾದರೊಂದು ಕಲ್ಲಿನ ಮೇಲೆ ಅಥವಾ ಒಂದು ಎಲೆಯ ಮೇಲೆ ನಮಗಾಗಿ ಅಂತ ಮೀಸಲಿಟ್ಟಿರುವ ಆಹಾರವನ್ನು ಇಟ್ಟರೆ ಪ್ಲಾಸ್ಟಿಕ್ ಬಳಕೆ ಕಮ್ಮಿಯಾಗುವುದರ ಜೊತೆಗೆ ನಮ್ಮ ಜೀವವೂ ಸಹ ಉಳಿಯುತ್ತದೆ. ಬಾನಾಡಿಯಲ್ಲಿ ಸ್ವಚ್ಛಂದವಾಗಿ ಹಾರಾಡುವ ನಮ್ಮ ಗೆಳೆಯ ಗೆಳತಿಯರಿಗಾಗಿ ನಿಮ್ಮ ಮನೆಯ ಮೇಲ್ಛಾವಣಿಯಲ್ಲಿ ಅವರಿಗೂ ಸಹ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ. ದಯವಿಟ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ನಮ್ಮನ್ನು ಉಳಿಸಿ. ವಾಣಿ ಶಿವಕುಮಾರ್

“ಕರುಣೆ ತೋರಿಸಿ” ವಿಶೇಷ ಲೇಖನ ವಾಣಿ ಶಿವಕುಮಾರ್ Read Post »

ಕಾವ್ಯಯಾನ

ಡಾ.ರೇಖಾ ಉದಯ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾ ಉದಯ ಗಜಲ್ ಅತಿಯಾದ ನಂಬಿಕೆಗೆ *ದ್ರೋಹವಾಗಿದೆ* ಸಖ ನನ್ನವರಿಂದ ನನಗೀಗ *ಮೋಸವಾಗಿದೆ* ಸಖ ಅತಿಯಾದರೆ ಅಮೃತವು ವಿಷವಾಗುವುದಲ್ಲವೇಬಣ್ಣದ ಮಾತುಗಳಿಗೆ ಬೆಲೆ *ಹೆಚ್ಚಾಗಿದೆ* ಸಖ ಕಣ್ಣೀರ ಹನಿಗಳು ಜಾರುತಿವೆ ಪ್ರತಿದಿನ ನೊಂದುಪ್ರಖರ ಸೂರ್ಯಂಗೀಗ ಗ್ರಹಣ *ಹಿಡಿದಿದೆ* ಸಖ  ಬೆನ್ನಿಗೆ ಚೂರಿ ಹಾಕುವವರೇ ಕಾಣುತಿಹರು ಇಲ್ಲಿನಂಬಿಕೆಯ ಗೋಪುರವು *ಕುಸಿಯುತಿದೆ* ಸಖ  ಈ ರೇಖೂ ಎದೆಗುಂದದೆ ಮುಂದೆ  ಸಾಗುತಿಹಳುನಮ್ರ ನಡೆಯ ಅಗ್ನಿ ಪರೀಕ್ಷೆ *ನಡೆಯುತ್ತಿದೆ* ಸಖ ಡಾ.ರೇಖಾ ಉದಯ 

ಡಾ.ರೇಖಾ ಉದಯ ಅವರ ಗಜಲ್ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರುಮಾಲಿಕೆ “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ” ಭವ್ಯ ಭಾರತದ ಇತಿಹಾಸವು ತೆರೆದಿಟ್ಟ ಅಪ್ಪಟ ರಾಷ್ಟ್ರ ಪ್ರೇಮಿ ಸೇನಾನಿ ಹೈದ್ರಾಬಾದ ಕರ್ನಾಟಕದ ಹುಲಿ ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ.  ಮಹದೇವಪ್ಪ ರಾಂಪುರೆ (1920-1973) ಒಬ್ಬ ಭಾರತೀಯ ರಾಜಕಾರಣಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಘದ (H.K.E. Society) ಸ್ಥಾಪಕರು, ಗುಲ್ಬರ್ಗಾದಲ್ಲಿ ಮಹದೇವಪ್ಪ ರಾಂಪುರೆ ಮೆಡಿಕಲ್ ಕಾಲೇಜ್ ಅನ್ನು 1963ರಲ್ಲಿ ಸ್ಥಾಪಿಸಿ, ಆ ಭಾಗದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ; ಅವರು ಮೈಸೂರು ವಿಧಾನ ಪರಿಷತ್ ಉಪಾಧ್ಯಕ್ಷರಾಗಿ, ಕಲಬುರಗಿ ಲೋಕಸಭಾ ಸದಸ್ಯರಾಗಿ ಮೂರು ಭಾರಿ ಸೇವೆ ಸಲ್ಲಿಸಿದ್ದಾರೆ.  ಸಂಕ್ಷಿಪ್ತ ಜೀವನ ಚರಿತ್ರೆ: ಜನನ ಮತ್ತು ಆರಂಭಿಕ ಜೀವನ: ಮಹದೇವಪ್ಪ ರಾಂಪುರೆ ಅವರು 1920ರಲ್ಲಿ ಜನಿಸಿದರು.ತಾಯಿ ಗುರುದೇವಿ ತಂದೆ ಯಶವಂತಪ್ಪ ರಾಂಪುರೆ  ಮಹದೇವಪ್ಪ ರಾಮಪುರೆ ಅವರು  6 ಜನ ಅಣ್ಣ – ತಮ್ಮಂದಿರು ಹಾಗೂ ಒಬ್ಬಳೆ  ಒಬ್ಬಳು ತಂಗಿ. ಆರಂಭಿಕ ಶಿಕ್ಷಣವನ್ನು ಸೊಲ್ಲಾಪುರದಲ್ಲಿ ಮುಗಿಸಿದರು. ಇವರ ಅಜ್ಜನವರು ಸುಮಾರು ನಾಲ್ಕು ನೂರು ಎಕರೆ ಭೂಮಿಯನ್ನು ಹೊಂದಿದ್ದರು. ಮೂಲತಃ ಸೋಲಾಪುರ ಜಿಲ್ಲೆಯ ಕುಂಬಾರಿ ಗ್ರಾಮದಲ್ಲಿ ಒಂದು ಅಡತಿ ಅಂಗಡಿ ಕೃಷಿ ವ್ಯಾಪಾರ ಮಾಡಿಕೊಂಡಂತಹ ಶ್ರೀಮಂತ ಮನೆತನವಾಗಿತ್ತು. ಶ್ರೀ ಮಹದೇವಪ್ಪ ರಾಮಪುರೆ ಅವರು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಸ್ವಾತಂತ್ರ್ಯ ಹೋರಾಟದೊಳಗೆ ಧುಮುಕಿದರು. ಮಹಾರಾಷ್ಟ್ರದಲ್ಲಿ ಇವರ ಮೇಲೆ ಬ್ರಿಟಿಷ್ ಸರ್ಕಾರ ವಾರಂಟ್ ಜಾರಿ ಮಾಡಿದ ಮೇಲೆ ಸಂಘರ್ಷವನ್ನು ಮುನ್ನಡೆದ ಬೇಕೆಂಬ ಯೋಚನೆ ಹಂಬಲದಿಂದ ಕಲಬುರ್ಗಿಗೆ ಬಂದರು . ತಮ್ಮ 26 ನೆಯ ವಯಸ್ಸಿನಲ್ಲಿ ಹೈದ್ರಾಬಾದ ಸರಕಾರದ ಎಂ ಎಲ್ ಸಿ ಆಗಿ ಆಯ್ಕೆಯಾದರು ಮುಂದೆ ಕರ್ನಾಟಕ ಏಕೀಕರಣವಾದ ಮೇಲೆ  ಕರ್ನಾಟಕದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಉಪಸಭಾಪತಿಯಾಗಿ ಆಯ್ಕೆಯಾದರು. ರಾಜಕೀಯ ಜೀವನ: ಶ್ರೀ ಮಹದೇವಪ್ಪ ರಾಂಪುರೆ ಅವರು ಮೂಲತಃ ಸಮಾಜವಾದಿ ಎಡಪಂಥೀಯ ವೈಚಾರಿಕ ನೆಲೆಯಲ್ಲಿ ಬೆಳೆದವರು. ಡಾ ಎಂ ಎನ್ ರಾಯ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು. ಕರ್ನಾಟಕದ ನವ ನಿರ್ಮಾಪಕ  ಶ್ರೀ ಎಸ್ ನಿಜಲಿಂಗಪ್ಪನವರ ಬಲಗೈ ಬಂಟನಾಗಿ ಕಾರ್ಯ ಮಾಡಿದವರು. ಶ್ರೀ ಚಂದ್ರಶೇಖರ ಪಾಟೀಲ ಶ್ರೀ ವೀರೇಂದ್ರ ಪಾಟೀಲ ಮುಂತಾದ ಯುವ ನಾಯಕರ ಜೊತೆಗೂಡಿ ಹೈದ್ರಾಬಾದ ಕರ್ನಾಟಕದ ಸಮಗ್ರ ಏಳ್ಗೆಗೆ ಕನಸು ಕಂಡವರಲ್ಲಿ ಪ್ರಮುಖರು  ಹಾಗೂ ರಜಾಕಾರ ಹಾವಳಿ ಎದುರಿಸಿದ ಸೇನಾನಿಯಾಗಿದ್ದರು. ಇವರು ಶ್ರೀಮತಿ ತಾರಾದೇವಿ ಅವರನ್ನು ವಿವಾಹವಾದರು.ಇವರಿಗೆ. 5  ಜನ ಗಂಡುಮಕ್ಕಳು  3 ಜನ ಹೆಣ್ಣುಮಕ್ಕಳು  ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ನಂತರ ರಾಜಕೀಯ ಪ್ರವೇಶಿಸಿದರು. ಮೈಸೂರು ವಿಧಾನ ಪರಿಷತ್ ಉಪಾಧ್ಯಕ್ಷರಾಗಿ (1956-1957) ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ (1957-1970) ಸೇವೆ ಸಲ್ಲಿಸಿದರು. ಶ್ರೀ ಎಸ್ ನಿಜಲಿಂಗಪ್ಪನವರ ಮೊರಾರ್ಜಿ ದೇಸಾಯಿ ಡಾ ಎಂ.ಎನ್ ರಾಯ್ ಡಾ ನೀಲಂ ಸಂಜೀವ ರೆಡ್ಡಿ ಮುಂತಾದವರ ಜೊತೆಗೆ ರಾಜಕೀಯ ಒಡನಾಟವನ್ನು ಹೊಂದಿದ್ದರು. ತೀವ್ರಗಾಮಿ ಸತ್ಯ ಸಮತೆ ಶಾಂತಿ ಪ್ರೀತಿ ಮಂತ್ರ ಜಪಿಸಿದ ರಾಜಕೀಯ ಮುತ್ಸದ್ಧಿ. ಇವರ ಲೋಕ ಸಭೆಯಲ್ಲಿ ಮಾತನಾಡುವ ವೈಖರಿ ಕಂಡು ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣ ಅವರು ಶ್ರೀ ಮಹದೇವಪ್ಪ ರಾಮಪುರೆ ಅವರನ್ನು ಶ್ರೇಷ್ಠ ಸಂಸತ್ತ ಪಟು ಎಂದು ಬಣ್ಣಿಸಿದ್ದಾರೆ. ಶಿಕ್ಷಣಕ್ಕೆ ಕೊಡುಗೆ: ಡಾ ಡಿ ಸಿ ಪಾವಟೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಣದ ಬೆಳವಣಿಗೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇದರ ಫಲವಾಗಿ 1963ರಲ್ಲಿ ಗುಲ್ಬರ್ಗಾದಲ್ಲಿ ಮಹದೇವಪ್ಪ ರಾಂಪುರೆ  ವೈದ್ಯಕೀಯ  ಮಹಾವಿದ್ಯಾಲಯವನ್ನು ಸ್ಥಾಪಿಸಿದರು.  ಪ್ರಮುಖ ಕೊಡುಗೆಗಳು: H.K.E. ಸೊಸೈಟಿ: ಇದರ ಸಂಸ್ಥಾಪಕರು .ಇದಕ್ಕೂ ಮುಂಚೆ ದೊಡ್ಡಪ್ಪ ಅಪ್ಪ ಅವರ ಶ್ರೀ ಶರಣ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ನೂರಾರು  ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. M.R. ಮೆಡಿಕಲ್ ಕಾಲೇಜ್: ಭಾರತದ  ಖಾಸಗಿ ವೈದ್ಯಕೀಯ ಕಾಲೇಜಾಗಿ, ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಮಾನ್ಯತೆ ಪಡೆದು, ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುತ್ತಿದೆ. ದೂರದೃಷ್ಟಿ ಈ ಭಾಗದ ಜನರ ಕಲ್ಯಾಣಕ್ಕಾಗಿ ಶಿಕ್ಷಣ ಮತ್ತು ಆರೋಗ್ಯದ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂಬ ದೂರದೃಷ್ಟಿಯನ್ನು ಹೊಂದಿದ್ದರು.  ವಂಶಪರಂಪರೆ: ಅವರ ದೂರದೃಷ್ಟಿ ಮತ್ತು ಶ್ರಮದಿಂದ ಸ್ಥಾಪಿಸಲಾದ ಸಂಸ್ಥೆಗಳು ಇಂದಿಗೂ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಇವರ ಮೂರು ಜನ ಗಂಡು ಮಕ್ಕಳು ವೈದ್ಯರಾಗಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಸಲ್ಲಿಸಿದ್ದಾರೆ. ಇಂತಹ ಒಬ್ಬ ಸೃಜನಶೀಲ ವೈಚಾರಿಕ ಚಿಂತಕ ಶಿಕ್ಷಣ ಪ್ರೇಮಿ ಅಪ್ಪಟ ದೇಶ ಭಕ್ತ 1973 ರಲ್ಲಿ ತಮ್ಮ 53 ನೆಯ  ವಯಸ್ಸಿನಲ್ಲಿ ಬಯಲಾದರು. ಇಂತಹ ದಿವ್ಯ ಜ್ಯೋತಿ ಇಂದಿಗೂ ಬೆಳಗುತ್ತಿದೆ ನಮ್ಮೆಲ್ಲರ ಮಧ್ಯೆ.  __________________________ *ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರುಮಾಲಿಕೆ “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಇತರೆ, ಜೀವನ

“ಸಂತೃಪ್ತಿಯೇ ಮನುಜನ ಶ್ರೇಷ್ಠ ಸಂಪತ್ತಾಗಲಿ” ವಿಶೇಷ ಲೇಖನ ಡಾ. ಸುಮತಿ ಪಿ.

ಜೀವನಸಂಗಾತಿ ಡಾ. ಸುಮತಿ ಪಿ. “ಸಂತೃಪ್ತಿಯೇ ಮನುಜನ ಶ್ರೇಷ್ಠ ಸಂಪತ್ತಾಗಲಿ” “ಅತಿಯಾಸೆ ಗತಿ ಕೇಡು”ಎಂಬ ಮಾತಿನಂತೆ ಮನುಷ್ಯನಿಗೆ ಅತಿಯಾದ ಆಸೆಗಳಿದ್ದರೆ, ಒಂದು ಆಸೆ ಅಥವಾ ಬಯಕೆಯ ಈಡೇರಿಕೆಯ ನಂತರ ಇನ್ನೊಂದು ಆಸೆ ಗರಿಗೆದರಿ ಎದ್ದು ನಿಲ್ಲುತ್ತದೆ. ಅಂತಹ ಸಂದರ್ಭದಲ್ಲಿ ಮನುಷ್ಯನಿಗೆ ಸಂತೃಪ್ತಿ ಎನ್ನುವುದು ಸಿಗದೇ ಇರಬಹುದು. ಅದಕ್ಕೆ ಮನುಷ್ಯರಾದ ನಾವು ಸಂತಸದಿಂದ  ಜೀವನ ನಡೆಸಬೇಕಾದರೆ ಇದ್ದದ್ದರಲ್ಲಿ ತೃಪ್ತಿಯನ್ನು ಅನುಭವಿಸುವ ಗುಣ ನಮ್ಮದಾಗಬೇಕು. ಸಂಪತ್ತು ಎಂದರೆ ಶ್ರೇಷ್ಠವಾದದ್ದು,ಮೌಲ್ಯಯುತವಾದದ್ದು ಎಂದರ್ಥ. ಯಾವುದರಿಂದ ನಮಗೆ ಒಳಿತಾಗುತ್ತದೆಯೋ ಅದುವೇ ಸಂಪತ್ತು ಎನಿಸಿಕೊಳ್ಳುತ್ತದೆ.ಸಂತೃಪ್ತಿ ಎನ್ನುವುದು ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿನ ಪರಿಸ್ಥಿತಿಯಿಂದ ತೃಪ್ತನಾಗುವ ಸ್ಥಿತಿಯಾಗಿದೆ, ಸಂತೃಪ್ತಿ ಇದ್ದವರು ಜೀವನದಲ್ಲಿ ಆಂತರಿಕ ಶಾಂತಿಯನ್ನು ಹೊಂದಿರುತ್ತಾರೆ .ಆಗ ಅವರಲ್ಲಿ ಸಂತೃಪ್ತಿಯೇ ದೊಡ್ಡ ಸಂಪತ್ತಾಗಿ ವಿಜೃಂಭಿಸುತ್ತದೆ.ಸಂತೃಪ್ತಿ ಎಂದರೆ ಇದ್ದಹಾಗೆ ಜೀವನವನ್ನು ಸಾಗಿಸುವುದು ಎಂಬರ್ಥ ಬಂದಿದೆ. ಆದರೆ ನಿಜಾರ್ಥದಲ್ಲಿ ಸಂತೃಪ್ತಿಯೆಂದರೆ, ಸರಿಯಾದುದರಲ್ಲಿ, ಉದಾತ್ತವಾದುದರಲ್ಲಿ ನಾವು ನೆಲೆಗೊಳ್ಳುವುದಾಗಿದೆ.. ಸಂತೃಪ್ತಿಯು ಬಯಕೆಗಳ ಬಿರುಗಾಳಿಯಿಂದ ನಮ್ಮನ್ನು ರಕ್ಷಿಸುತ್ತದೆ. ನಮ್ಮದೇ ಜೀವನವನ್ನು ತೆಗೆದುಕೊಂಡರೆ, ನಾವು ಅನುಭವಿಸುವ ಸಂತೃಪ್ತಿಯೆಂಬುವುದು ನಮ್ಮ ಬದುಕಿನ ಅತ್ಯಂತ ಸಂತೋಷದ ಕ್ಷಣಗಳಾಗಿ , ಮನಸ್ಸು ಶಾಂತಿ ಸಮಾಧಾನದಿಂದ ಇರುತ್ತದೆ. ಕೆಲವರನ್ನು ನಾವು ಸ್ಥಿತಪ್ರಜ್ಞರು ಎನ್ನುತ್ತೇವೆ. ಸ್ಥಿತಪಜ್ಞರು ಶಾಂತವಾಗಿರುತ್ತಾರೆ. ಸಂತೃಪ್ತಿಯನ್ನು ಹೊಂದುವವರಾಗಿರುತ್ತಾರೆ. ಸಾಗರದ ನೀರನ್ನು ಕಲಕಲು ಪ್ರಯತ್ನಿಸಿದರೂ, ಸಾಗರ ತನ್ನದೇ ಲಯದಲ್ಲಿರುತ್ತದೆ. ಹಾಗೆಯೇ ಸ್ಥಿತಪ್ರಜ್ಞೆಯ  ವ್ಯಕ್ತಿಯೂ  ಸಂತೃಪ್ತ  ಮನಸ್ಸಿನಿಂದ ಧನಾತ್ಮಕ ಭಾವನೆ ಹೊಂದಿರುತ್ತಾನೆ. ಪ್ರಾಣಿಗಳಲ್ಲಿ ಮನುಷ್ಯ ಜನ್ಮ ಅತೀ ಶ್ರೇಷ್ಠವಾದದ್ದು.ಮನುಷ್ಯ ಜನ್ಮದಲ್ಲಿ ಬದುಕು ನಡೆಸುವಾಗ ಸುಖ ಕಾಣಬೇಕಾದರೆ ಸಂತೃಪ್ತಿ ಇರಬೇಕು.ಸಂತೃಪ್ತಿ ಎಂಬುದು ಮನುಷ್ಯನ ಜೀವನದಲ್ಲಿ ಮೂಡಬೇಕಾದ ತೃಪ್ತ ಭಾವನೆ. ‘ಪಾಲಿಗೆ ಬಂದದ್ದು ಪಂಚಾಮೃತ’ ಎಂಬಂತೆ ತನಗೆ ಸಿಕ್ಕಿದಷ್ಟು ಪಡೆದು, ತೃಪ್ತಿಯಿಂದ ಜೀವನ ಸಾಗಿಸುವುದು. ಎಲ್ಲಾ ಜನರು ಒಂದೇ ರೀತಿ ಇರುವುದಿಲ್ಲ. ಬೇರೆ ಬೇರೆ ಜನರ ಜೀವನ ರೀತಿ ಬೇರೆ ಬೇರೆ ಇರುತ್ತದೆ .ಆದುದರಿಂದ ತನ್ನನ್ನು ಇನ್ನೊಬ್ಬರೊಂದಿಗೆ ಹೋಲಿಸಿ ಕೀಳರಿಮೆಯಿಂದ ಶಾಂತಿ ನೆಮ್ಮದಿಯನ್ನು ಕಳೆದುಕೊಂಡರೆ ಬದುಕಲ್ಲಿ ಸಂತೃಪ್ತಿಯನ್ನು ಕಾಣಲು ಸಾಧ್ಯವಾಗದು. ಮನುಷ್ಯರು ಎಂದ ಮೇಲೆ ಒಬ್ಬರ ತರಹ ಇನ್ನೊಬ್ಬರು ಇರುವುದಿಲ್ಲ. ಕೆಲವರು ಯಾವಾಗಲೂ ಸಂತೋಷವಾಗಿರುತ್ತಾರೆ. ಇನ್ನು ಕೆಲವರು ಸುಖ ದುಃಖಗಳನ್ನು ಸಮನಾಗಿ ಸ್ವೀಕರಿಸುತ್ತಾರೆ. ಮತ್ತು ಕೆಲವರು ಹಿಂದೆ ನಡೆದ ಯಾವುದೋ ಕಹಿ ಘಟನೆಯನ್ನು ಮೆಲುಕು ಹಾಕುತ್ತಾ ಕೊರಗುತ್ತಿರುತ್ತಾರೆ. ಆದರೆ ಇರುವಷ್ಟು ದಿನ ನೆಮ್ಮದಿಯಾಗಿ ಬದುಕಬೇಕು ಎಂದರೆ  ಬದುಕಿನಲ್ಲೇ ಸಂತೋಷವನ್ನು ಕಾಣಬೇಕು. ಜೀವನದಲ್ಲಿ ಸಂತೋಷಕ್ಕೆ ಸಂತೃಪ್ತಿಯೇ ಮುಖ್ಯ ಎಂದು ನಾವು ತಿಳಿದುಕೊಳ್ಳಬೇಕು. ಒಬ್ಬ ವ್ಯಕ್ತಿಯು ಎಷ್ಟೇ ಸಂಪತ್ತನ್ನು ಹೊಂದಿದ್ದರೂ, ಅವನು ತೃಪ್ತನಾಗದ ಹೊರತು, ಎಂದಿಗೂ ಸಂತೋಷವಾಗಿರಲು ಸಾಧ್ಯವಿಲ್ಲ.ಮನುಷ್ಯ ಜೀವನದಲ್ಲಿ ಸಂತೃಪ್ತಿಯನ್ನು ಕಾಣಬೇಕಾದರೆ ತನ್ನ ಆಸೆಗಳಿಗೆ ಕಡಿವಾಳ ಹಾಕಲೇಬೇಕು “ಆಸೆಯೇ ದುಃಖಕ್ಕೆ ಮೂಲ”ವೆಂದು ಗೌತಮ ಬುದ್ಧ ತಿಳಿಸಿದಂತೆ,ಅತಿ ಆಸೆಯಿಂದ ಮಾನವ ಇತರರನ್ನು ನೋಡಿ, ತಾನು ಅವರಂತೆ ಆಗಬೇಕು ಎಂದು ಏನೇನೋ  ಮಾಡಲು ಸಾಗಿ, ಇರುವ ಸುಖ, ನೆಮ್ಮದಿಯನ್ನು ಕಳೆದುಕೊಳ್ಳುತ್ತಾನೆ. ಪ್ರತಿಯೊಬ್ಬನೂ  ಬೇರೆಯವರ ಸುಖವನ್ನೇ ಅಳೆಯುವುದು ಜಾಸ್ತಿ.ಸ್ವಾರ್ಥ ಮನೋಭಾವದಲ್ಲಿ ಸುಖದ ಸುಪ್ಪತ್ತಿಗೆಯಲ್ಲಿ ಬದುಕುವ ಕನಸಲ್ಲಿ, ಇರುವ ಸುಖವನ್ನು ನಿರ್ಲಕ್ಷಿಸಿ, ಅತೃಪ್ತಿಯ ಬಾಳು ಸಾಗಿಸುವುದಕ್ಕಿಂತ ನಮಗಿಂತಲೂ ಕಷ್ಟದಲ್ಲಿರುವವರನ್ನು ಕಂಡು “ನಾವೇ ಅವರಿಗಿಂತ ಸುಖಿಗಳು “ಎನ್ನುವ ಭಾವನೆ ತಾಳುವುದೇ ಸಂತೃಪ್ತಿ.ಸಂತೃಪ್ತಿಯೆ ಬದುಕಿನ ಸಂಪತ್ತು. ಬದುಕಿನಲ್ಲಿ  ಸಂತೃಪ್ತಿ ಇದ್ದಾಗ ,ಸಕಾರಾತ್ಮಕ ದೃಷ್ಟಿಕೋನದಿಂದ ಶಾಂತಿ, ಸಹನೆ ,ನೆಮ್ಮದಿ, ತಾಳ್ಮೆ ಮುಂತಾದಂತಹ ಗುಣಗಳು ಬೆಳೆದು ಬದುಕಿನ ಸಂಪತ್ತಾಗಿ ವಿಜೃಂಭಿಸುತ್ತದೆ ಯಮರಾಜ ಯುಧಿಷ್ಠಿರನಿಗೆ ಅದ್ಭುತವಾದ ಪ್ರಶ್ನೆಗಳನ್ನು ಕೇಳಿದಂತಹ ಸಂದರ್ಭದಲ್ಲಿ ರಾಜನು ಅವುಗಳಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾನೆ ಎಂಬುವುದನ್ನು ನಾವು ಓದಿದ್ದೇವೆ.ಅದೇ ಅವನು ಕೇಳಿದ ಪ್ರಶ್ನೆಗಳಲ್ಲೊಂದು“ಶ್ರೇಷ್ಠ ಸಂತೋಷ ಯಾವುದು?”. ಯುಧಿಷ್ಠಿರ  ಅದಕ್ಕೆ ಕೊಟ್ಟ ಶ್ರೇಷ್ಠವಾದ ಉತ್ತರ “ತೃಪ್ತಿಯಿಂದ ಪಡೆದ ಸಂತೋಷವೇ ಶ್ರೇಷ್ಠ ಸಂತೋಷ”. ಆದ್ದರಿಂದ ತೃಪ್ತಿಯು ಯಾವುದೇ ಸಮಯದಲ್ಲಿ ಹೊಂದಬಹುದಾದ ಶ್ರೇಷ್ಠ ಸಂಪತ್ತು. ಒಳ್ಳೆಯ ಗುಣವನ್ನು ಅಭಿವೃದ್ಧಿಪಡಿಸುವ ಮೂಲಕ,ಉತ್ಸಾಹ ಮತ್ತು ಅಜ್ಞಾನದ ಗುಣಗಳನ್ನು ನಿಗ್ರಹಿಸುವ ಮೂಲಕ  ತೃಪ್ತರಾಗಿರುತ್ತೇವೆ.ಸಂತೃಪ್ತ ಜೀವನವು ಯಶಸ್ವಿ ಜೀವನವೆಂದರೆ ತಪ್ಪಾಗಲಾರದು ಜೀವನದ ಯಶಸ್ಸಿನ ಅಂಶವೆಂದರೆ ಸಂತೃಪ್ತಿ ಎಂದು ಹೇಳಬಹುದು. ನಮಗೆ ಜೀವನದಲ್ಲಿ ಸಂತೃಪ್ತಿ ಇಲ್ಲದಿದ್ದರೆ, ನಮಗೆ ಯಾವುದೇ ಗೆಲುವಿನ ಸಂತಸ ಸಿಗಲಾರದು. ನಮ್ಮಲ್ಲಿ ಹಣವಿರಬಹುದು, ಆಸ್ತಿಗಳಿರಬಹುದು,ಆದರೆ ಆಂತರಿಕ ತೃಪ್ತಿ ಇಲ್ಲ ಎಂದಾದಲ್ಲಿ. ಅದು ಸಂತಸದ ಯಶಸ್ವಿ ಜೀವನವಲ್ಲ. ‘ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ’ ಎಂದು ಕವಿಗಳು ಹೇಳುತ್ತಾರೆ. ಮನುಷ್ಯನಿಗೆ ಇಂದು ಎಷ್ಟೇ ಸುಖ. ಸಮೃದ್ಧಿ, ಸಂಪತ್ತು ಇದ್ದರೂ ಬದುಕಿನಲ್ಲಿ ಸಂತೃಪ್ತಿ ಇಲ್ಲವಾಗಿದೆ. ಇಂದು ಸ್ಪರ್ಧಾತ್ಮಕ ಜಗತ್ತಿನಲ್ಲಿರುವ ನಮಗೆ ಸಂತೃಪ್ತಿಯೇ ಬದುಕಿನ ದೊಡ್ಡ ಸಂಪತ್ತು ಎಂಬುದು ಒಪ್ಪಿಕೊಂಡು,ಅದನ್ನು ಪಡೆಯುವುದು ಕಷ್ಟವಾದರೂ  ಇಷ್ಟಪಟ್ಟು ಜೀವನದಲ್ಲಿ ಸಂತೃಪ್ತಿಯನ್ನು ಗಳಿಸಬೇಕಾಗುತ್ತದೆ.ಸಂತೃಪ್ತಿಯಿಂದಲೇ ನಾವು ಜೀವನದಲ್ಲಿ ಎದುರಿಸಬೇಕಾದ ಅನೇಕ ಸಮಸ್ಯೆಗಳಿಗೆ ಮುಕ್ತಿಯನ್ನು ಹಾಡಬಹುದು, ಸಂತೃಪ್ತಿ ಇದ್ದರೆ ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು. ಆದುದರಿಂದ ಸಂತೃಪ್ತಿಯೇ ದೊಡ್ಡ ಸಂಪತ್ತು. ಸಂತೃಪ್ತಿ ಅನ್ನೋದು ಬದುಕಿನಲ್ಲಿ ಇರಬೇಕಾದ ಮೂಲಭೂತವಾದ ಅಂಶವಾಗಿದೆ. ಸಂತೃಪ್ತಿಯೇ ಯಶಸ್ವಿ ಬದುಕಿನ ಮೂಲ ಆಧಾರಸ್ತಂಭವೆಂದೇ ಹೇಳಬಹುದು. ಈ ಭೂಮಿಯ ಮೇಲಿನ ಬದುಕೆಂಬ ನಾಲ್ಕು ದಿನದ ಬಾಳು ಅದು ಗೋಳಾಗದೆ ಇರಬೇಕಾದರೆ ಬದುಕಿನಲ್ಲಿ ಸಂತೃಪ್ತಿಯನ್ನು ಕಾಣುವಂತಹ ಮನಸ್ಸು ನಮ್ಮದಾಗಬೇಕು. ಸಂತೃಪ್ತಿಯನ್ನೇ ನಮ್ಮ ಬದುಕಿನ ದೊಡ್ಡ ಸಂಪತ್ತನ್ನಾಗಿಸಬೇಕು. ಬದುಕಿನ ದಿನಗಳನ್ನು ಚಿಂತೆ, ದುಃಖ, ನಿರಾಸೆಯಿಂದ ಅತೃಪ್ತರಾಗಿ ಕಳೆಯದೆ ಶಾಂತಿ ಸಮಾಧಾನದಿಂದತೃಪ್ತ ಜೀವನ ನಡೆಸುವುದು ನಮ್ಮೆಲ್ಲರ ಕೈಯಲ್ಲಿದೆ ಅಲ್ಲವೇ? ಡಾ.ಸುಮತಿ ಪಿ

“ಸಂತೃಪ್ತಿಯೇ ಮನುಜನ ಶ್ರೇಷ್ಠ ಸಂಪತ್ತಾಗಲಿ” ವಿಶೇಷ ಲೇಖನ ಡಾ. ಸುಮತಿ ಪಿ. Read Post »

ಕಾವ್ಯಯಾನ

ಸಂಧ್ಯಾ ರಾಯ್ಕರ ಅವರ ಕವಿತೆ, “ಯುದ್ದ ಬೇಕೇಕೆ”

ಕಾವ್ಯ ಸಂಗಾತಿ ಸಂಧ್ಯಾ ರಾಯ್ಕರ “ಯುದ್ದ ಬೇಕೇಕೆ” ಮನುಜ… ಎಚ್ಚೆತ್ತುಕೋ ವಿನಾಶದತ್ತ ಸಾಗುವ ಮುನ್ನ …ಎಲ್ಲೋ ಹಚ್ಚಿದ ಬೆಂಕಿಯ ಕಾವು ನಿನ್ನ ಸುಡುವ ಮುನ್ನ…ಅದೆಷ್ಟೋ ಜೀವಗಳು ಹೆಣವಾದವು ಕಾಲ ಕಸದಂತೆ…. ತಮ್ಮವರ ಕಳೆದುಕೊಂಡು ಅನಾಥರಾದರು ,ಜೀವ ಇದ್ದು ಇಲ್ಲದಂತೆ…ಸಾಮ್ರಾಜ್ಯ ಕಟ್ಟುವ ನಿನ್ನಾಸೆಗೆ ಮನುಜ ಕುಲದ ವಿನಾಶವೇ…… ಅಲೆಕ್ಸಾಂಡರ್ ನ ಕೊನೆಯ ಸಂದೇಶ ಮರೆತೆಯ …ವಿಶ್ವವನೇ ಗೆದ್ದರೂ ಹೋಗುವೆ  ನೀ ಬರಿ ಕೈಯಲ್ಲಿ…ಸುಧಾರಿಸಿಕೋ …ಬೆಂದು ಹೋಗದಿರು ನೀನು ಈ ತೈಲದ  ಕೂಪದಲ್ಲಿ…….ಇಂದಿರುವವನು ನಾಳೆ ಇಲ್ಲ ಎಂಬಂತಿರುವಾಗ ಯುದ್ಧದ ರಣ ಕಹಳೆಯ ಅನಿವಾರ್ಯತೆ ಏಕೆ…… ..ನಾಲ್ಕು ದಿನದ ಈ ಬದುಕಿನಲ್ಲಿ ಪ್ರೀತಿಯ ಗೋಡೆಯನೇ ಕಟ್ಟಬಾರದೇ…..

ಸಂಧ್ಯಾ ರಾಯ್ಕರ ಅವರ ಕವಿತೆ, “ಯುದ್ದ ಬೇಕೇಕೆ” Read Post »

ನಿಮ್ಮೊಂದಿಗೆ

ಧಾರಾವಾಹಿ ಸಂಗಾತಿ-16 ಅರ್ಜುನ ಉವಾಚ ವಿಶ್ವನಾಥ್‌ ಎನ್‌ ನೇರಳೆ ಕಟ್ಟೆ ಜ್ವಾಲೆಯೊಡಲಿನ ಕ್ರೋಧಜ್ವಾಲೆಯದು ಎನಗೆ ಶಾಪವನುಣಿಸಿತು              ಜ್ವಾಲೆಯೊಡಲಿನ ಕ್ರೋಧಜ್ವಾಲೆಯದು ಎನಗೆ ಶಾಪವನುಣಿಸಿತು ಜ್ವಾಲೆಯನ್ನು ನಿರಾಸೆಗೊಳಿಸಿತು ಕಲಹಕ್ಕೊಪ್ಪದ ಉನ್ಮುಖನ ಮಾತು. ಉನ್ಮುಖ ಯುದ್ಧೋನ್ಮುಖನಾಗಲಿಲ್ಲ. ಹರಿಭಕ್ತಮುಖದವನಾಗಿ ಶಾಂತಭಾವದಿ ಕುಳಿತ. ಶ್ರೀಕೃಷ್ಣನ ಸಹಾಯವನ್ನು ಪಡೆದು ಬಂದಿರುವ ನನ್ನ ಜೊತೆ ಯುದ್ಧವನ್ನು ಮಾಡುವ ಮನಸ್ಸಿರಲಿಲ್ಲ ಅವನಿಗೆ. ಜ್ವಾಲೆಯ ರೀತಿಯದು ಹಿಂದಣ ತ್ರೇತಾಯುಗದ ಶೂರ್ಪನಖಿಯ ನೆನಪನ್ನು ಮೂಡಿಸಿತು ಅವನಿಗೆ. ತನಗೊಲಿಯದೆ ಮೂಗು ಕೊಯ್ದವರ ಮೇಲಿನ ಸೇಡಿಗೆ ರಾಮ ರಾವಣ ಸಂಘರ್ಷವನ್ನು ತಂದಿತ್ತ ಶೂರ್ಪನಖಿಯಂತೆಯೇ ತನ್ನಕ್ಕನ ಕಲಹಪ್ರಿಯವಾದ ನಡೆಯಿದೆ ಎನಿಸಿತು ಅವನಿಗೆ. ಆ ಮಾತನ್ನೇ ಕಟುವಾಗಿ ಆಡಿ ಅವಳನ್ನು ಬೈದು ಅಲ್ಲಿಂದ ಕಳುಹಿಸಿಕೊಟ್ಟ. ಅಕ್ಕನ ರೋಷದ ನೆಪದಲ್ಲಿ ನನ್ನನ್ನು ಎದುರುಹಾಕಿಕೊಳ್ಳುವ ಮನಮಾಡಿ ಅಪಾಯಕ್ಕೆ ಮನೆಮಾಡಿಕೊಡುವ ಆಸಕ್ತಿಯಿರಲಿಲ್ಲ ಉನ್ಮುಖನಿಗೆ.       ತಮ್ಮನಿಂದಲೂ ತಿರಸ್ಕೃತಳಾದ ಜ್ವಾಲೆ ಪಯಣವನ್ನು ಬೆಳೆಸುತ್ತಾ ಹೋದವಳು ಗಂಗಾತೀರವನ್ನು ಸೇರಿದಳು. ಪಾಪ ಪರಿಹಾರ ಪುಣ್ಯಜಲದಂತೆ ಹರಿಹರಿಯುತ್ತಿದ್ದ ಗಂಗೆಯನ್ನು ಕಂಡಳು. ಅಮರನದಿಯದು ಜ್ವಾಲೆಯಲ್ಲಿ ಅಮರಭಾವವನ್ನು ಬಿತ್ತಬೇಕಿತ್ತು. ಆದರೆ ಮೊಳಕೆಯೊಡೆದದ್ದು ಅಸುರಭಾವ. ಕೆಲವರ ವರ್ತನೆ ಹಾಗೆಯೇ. ದಿವ್ಯವಾದದ್ದನ್ನು ದರ್ಶಿಸಿದಾಗಲೂ ದುಷ್ಟಭಾವವೇ ಅವರಲ್ಲಿ ಚಿಗುರೊಡೆಯುತ್ತದೆ. ಆ ಬಗೆಯಲ್ಲಿ ಅವರ ಮನೋಭೂಮಿಕೆ ಸಿದ್ಧಗೊಂಡಿರುತ್ತದೆ. ಗಂಗೆಯನ್ನು ಬಳಸಿಕೊಂಡು ತನ್ನಂತರಂಗದ ಮಾತ್ಸರ್ಯಕ್ಕೊಂದು ಗಮ್ಯವನ್ನು ಕಾಣಿಸುವ ಕುಯೋಚನೆ ಮೂಡಿತು ಜ್ವಾಲೆಯಲ್ಲಿ.       ದೋಣಿ ನಡೆಸುವವರೊಂದಷ್ಟು ಜನ ಗಂಗಾತಟದಲ್ಲಿಯೇ ಕುಳಿತಿದ್ದರು. ಅವರನ್ನು ನೋಡುತ್ತಾ ಜ್ವಾಲೆ “ಗಂಗಾನದಿಯ ಒಂದು ಬಿಂದೂ ನನ್ನ ದೇಹವನ್ನು ಸೋಂಕದಂತೆ ನನ್ನನ್ನು ಈ ದಡದಿಂದ ಆ ದಡದೆಡೆಗೆ ಒಯ್ಯುವವರು ಯಾರಾದರೂ ಇರುವಿರಾ?” ಎಂದಳು.      ಅಂಬಿಗರಿಗೆ ಅಚ್ಚರಿಯಾಯಿತು. ಹನಿ ಹನಿ ಗಂಗಾಜಲವದು ಪರಮ ಪಾವನ ಪುಣ್ಯ ಪವಿತ್ರ ಎಂದು ನಂಬುವ ಅನೇಕಾನೇಕ ಜನರನ್ನವರು ಕಂಡಿದ್ದರು. ಗಂಗೆಯ ನೀರದು ಮೈಯ್ಯನ್ನು ಸ್ಪರ್ಶಿಸಿದರೆ ಘನಮಲಿನವೆಂಬ ಬಗೆಯಲ್ಲಿ ಮಾತನ್ನು ಆಡಿದವರಿರಲಿಲ್ಲ; ವರ್ತಿಸಿದವರಿರಲಿಲ್ಲ. ಜ್ವಾಲೆಯ ರೀತಿಯದು ಹೊಸದೆನಿಸಿತು ಅವರಿಗೆ. “ಬಂದದ್ದಾವ ಉದ್ದೇಶದಿಂದ? ಗಂಗಾಜಲವನ್ನು ಮುಟ್ಟಬಾರದು ಎಂದೆನಲು ಕಾರಣವೇನು?” ಎಂದು ವಿಸ್ಮಯ ಭಾವದಲ್ಲಿ ಕೇಳಿದರು.      ತನ್ನ ಪಾಡಿಗೆ ಹರಿಯುತಿರುವ ಗಂಗೆಗೆ ಕೌತುಕ ಹುಟ್ಟುವಂತೆ ಆ ಜ್ವಾಲೆ “ಗಂಗೆಗೆ ಒಂದು ದೋಷವಿದೆ. ಅದೇನೆಂದು ನಿಮಗೆ ಹೇಳಲಾರೆ. ಆ ಗಂಗೆಯೇ ನನ್ನೆದುರು ಮೈದೋರಲಿ. ಹೇಳುತ್ತೇನೆ” ಎಂದಳು.     ಅಪವಾದದ ಅಪನುಡಿಯದು ಅಂಜಿಸಿತು ಅಮರನದಿಯನ್ನು. ತನಗಿರುವ ದೋಷ ಅದಾವುದು ಎನ್ನುವುದನ್ನು ತಿಳಿಯುವ ಕುತೂಹಲಿಯಾದಳು ಗಂಗೆ. ತಕ್ಷಣವೇ ಪ್ರತ್ಯಕ್ಷಳಾದಳು. “ಇನ್ನೊಬ್ಬರ ದೋಷಗಳನ್ನೂ, ಪಾಪಗಳನ್ನೂ ದೂರ ಮಾಡುವವಳೆಂದು ವೇದಶಾಸ್ತçಗಳು ಗುರುತಿಸಿವೆ ನನ್ನನ್ನು. ಸೋಂಕಬಾರದು ಎನ್ನನ್ನು ಎಂದು ದೂಷಿಸುತ್ತಿರುವವಳು ನೀನು. ಇದಕ್ಕೆ ಕಾರಣವೇನು?” ಎಂದು ಆಶ್ಚರ್ಯದಿಂದ ಕೇಳಿದಳು ಜ್ವಾಲೆಯಲ್ಲಿ.      ಮೋಡಿಯ ಮಾತುಗಳನ್ನಾಡಿದಳು ಜ್ವಾಲೆ. “ನಾನೇನೂ ನಿನ್ನನ್ನು ಬೈದದ್ದಲ್ಲ. ಲೋಕರೂಢಿಯ ಮಾತನ್ನು ಹೇಳಿದ್ದೇನೆ ಅಷ್ಟೇ. ಮಕ್ಕಳಿಲ್ಲದ ಬಂಜೆಯನ್ನು ದೋಷವಿರುವವಳು ಎಂದು ಗುರುತಿಸುವ ಕ್ರಮವುಂಟು ಈ ಲೋಕದೊಳಗೆ” ಎಂದಳು.      ಗಂಗೆಗೆ ಈ ಮೊದಲಿಗಿಂತಲೂ ಹೆಚ್ಚಿನ ಅಚ್ಚರಿಯಾಯಿತು. ಕೋಪ ಬಂತು. “ಇಚ್ಛಾಮರಣಿಯೆಂದು ಹೆಸರು ಪಡೆದು, ತ್ರೆöÊಲೋಕ ವೀರನೆಂದು ಖ್ಯಾತಿ ಗಳಿಸಿದ ಭೀಷ್ಮ ನನ್ನ ಮಗನಾಗಿರುವಾಗ ನನ್ನನ್ನು ಮಕ್ಕಳಿಲ್ಲದವಳೆಂದು ಹಂಗಿಸುವುದು ಸರಿಯಲ್ಲ” ಎಂದು ಜ್ವಾಲೆಯನ್ನು ಬೈದಳು.      ವಾಸ್ತವವಾಗಿ ಜ್ವಾಲೆಗೆ ಬೇಕಿದ್ದುದೂ ಅದೇ, ಗಂಗೆಯ ಮನವನ್ನು ಕೆರಳಿಸುವುದು. ಭೀಷ್ಮ ಗಂಗಾಸುತನೆನ್ನುವುದು ಜ್ವಾಲೆಗೆ ತಿಳಿಯದ ಸಂಗತಿಯೇನಲ್ಲ. ಎಂಟು ಮಕ್ಕಳನ್ನು ಪಡೆದ ಗಂಗೆ ಕೊನೆಯದಾಗಿ ಭೀಷ್ಮನನ್ನು ಮಾತ್ರ ಉಳಿಸಿಕೊಂಡ ಬಗೆ ಜ್ವಾಲೆಗೆ ಗೊತ್ತಿತ್ತು. ಬಿಂದು ಬಿಂದುಗಳನ್ನು ಒಂದೊಂದಾಗಿ ಕ್ರಮಿಸುತ್ತಾ ಜ್ವಾಲೆ ಸಾಗಿಬಂದದ್ದು ಈ ಘನಸಿಂಧುವಿನೆಡೆಗೆ, ಭೀಷ್ಮ ಮರಣವನ್ನು ತಿಳಿಸುವ ಅಂತಿಮ ಗಳಿಗೆಯ ಕಡೆಗೆ. “ಹೌದು! ನಿನ್ನ ಸುತ ಭೀಷ್ಮ ಎನ್ನುವುದು ಗೊತ್ತಿದೆ. ಅವನು ವೀರ ಎನ್ನುವ ಅರಿವೂ ಇದೆ. ಅವನು ಇನ್ನೂ ಹೆಚ್ಚಿನ ಔನ್ನತ್ಯವನ್ನು ಗಳಿಸುತ್ತಿದ್ದನೋ ಏನೋ! ಆದರೆ ಆ ಅರ್ಜುನ ಕುರುಕ್ಷೇತ್ರ ಕದನದಲ್ಲಿ ನಿನ್ನ ತನುಜನನ್ನು ಕೊಂದುಹಾಕಿದ. ಹೀಗಿರುವಾಗ ನೀನು ಮಕ್ಕಳಿಲ್ಲದವಳು ಎಂದೇ ಕರೆಸಿಕೊಳ್ಳಬೇಕಾಗುತ್ತದೆ” ಎಂಬ ನುಡಿಸಿಡಿಲು ಸಿಡಿಯಿತು ಜ್ವಾಲೆಯೊಳಗಿಂದ.      ಒಣಗಿದ ಮರಕ್ಕೆ ಬಿದ್ದ ಕಿಚ್ಚು ಹಸಿಹಸಿಯಾದ ಗಿಡವನ್ನೂ ಸುಟ್ಟುಹಾಕುವಂತೆ, ಈಗಾಗಲೇ ನನ್ನ ಮೇಲಿನ ಮುನಿಸಿನಿಂದ ಉರಿಯುತ್ತಿದ್ದ ಜ್ವಾಲೆಯ ಅಂತರಂಗದ ಕಿಚ್ಚು ಗಂಗೆಯ ಮನವನ್ನೂ ಸುಟ್ಟಿತು. ಮಗ ಭೀಷ್ಮ ಅಳಿದನೆಂಬ ಸುದ್ದಿಯನ್ನು ತಾಳಿಕೊಳ್ಳುವುದಕ್ಕಾಗಲಿಲ್ಲ ಅವಳಿಗೆ. ಭೀಷ್ಮ ಮರಣಕ್ಕೆ ಕಾರಣನೆನಿಸಿದ ನನ್ನ ಮೇಲೆ ಕ್ರೋಧ ಉಕ್ಕಿಬಂತು. “ನನ್ನ ಮಗನನ್ನು ಯುದ್ಧದಲ್ಲಿ ಕೊಂದ ಆ ಅರ್ಜುನನ ತಲೆಯನ್ನು ಅವನ ಮಗನೇ ಇನ್ನು ಆರು ತಿಂಗಳುಗಳಲ್ಲಿ ಯುದ್ಧದಲ್ಲಿ ಕೊಚ್ಚಿ ಕೆಡಹಲಿ” ಎಂದು ಶಾಪ ಕೊಟ್ಟು, ಮತ್ತೆ ಮೊದಲಿನ ಸ್ಥಿತಿಯನ್ನು ಪಡೆದಳು.      ಜ್ವಾಲೆಯ ಕ್ರೋಧಜ್ವಾಲೆಯಿಂದಾಗಿ ನಾನು ಗಂಗೆಯ ಶಾಪಕ್ಕೆ ತುತ್ತಾದೆ. ಅಲ್ಲಿಗೇ ಜ್ವಾಲೆಯ ದ್ವೇಷವದು ತಣಿಯಲಿಲ್ಲ. ನನ್ನನ್ನು ಕೊಲ್ಲುವ ಹರಿತವಾದ ಬಾಣವಾಗುತ್ತೇನೆ ಎಂದು ಬಯಸಿದವಳು ಅಲ್ಲಿಯೇ ಗಂಗೆಯ ತೀರದಲ್ಲಿ ಅಗ್ನಿಪ್ರವೇಶ ಮಾಡಿದಳು. ಮಣಿಪುರದ ಅರಸನಾಗಿದ್ದ ಬಭ್ರುವಾಹನನ ಬತ್ತಳಿಕೆಯಲ್ಲಿನ ಹರಿತ ಬಾಣವಾದಳು.      ಗಂಗೆ ನನಗಿತ್ತ ಶಾಪವದು ಅಶ್ವಮೇಧ ಯಾಗದ ಪೂರ್ಣತೆಗೆ ಸಂಚಕಾರವನ್ನೊಡ್ಡುವ ಘನಶಾಪವಾಗಿತ್ತು. ಶಾಪ ನಿಜವಾಗುವ ಗಳಿಗೆಯನ್ನು ಅದೆಂತು ಮೀರುವೆನೋ! ನನಗೆ ತಿಳಿದಿರಲಿಲ್ಲ.                                          ಡಾ. ವಿಶ್ವನಾಥ ಎನ್ ನೇರಳಕಟ್ಟೆ         

Read Post »

You cannot copy content of this page

Scroll to Top