ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಸಮರಸವು ಮೂಡಲಿ”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಸಮರಸವು ಮೂಡಲಿ” ಈ ನೆಲದ ಭಾಷೆಯಿದುಬುದ್ಧ ಬಸವರ ವಚನಗಳುಸತ್ಯ ಸಮತೆ ಶಾಂತಿ ಪ್ರೀತಿಮನುಜ ಪಥದ ಮಂತ್ರವು ನಾನು ಹುಟ್ಟಿ ನಾವು ಬೆಳೆದುನಾಡ ಗೋಡೆ ಕಟ್ಟ ಬೇಕುವರ್ಗ ವರ್ಣ ಬೇಧ ಅಳೆದುದೇಶ ಒಂದೇ ಎನ್ನ ಬೇಕು ನೇಯ್ಗೆ ಕೃಷಿ ಗ್ರಾಮ ರಾಜ್ಯಬಾಪು ಕನಸಿನ ಭಾರತಭಗತ ಸಿಂಗರ ತ್ಯಾಗ ನೆಲದಬಾಬಾಸಾಹೇಬರ ಭಾರತ ದ್ವೇಷ ಮತ್ಸರ ಕರಗಿ ಹೋಗಲಿಮಮತೆ ಪ್ರೀತಿ ಅರಳಲಿಕೊಲೆ ಹಿಂಸೆ ಮಾಯವಾಗಿಸಮರಸವು ಮೂಡಲಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಸಮರಸವು ಮೂಡಲಿ” Read Post »

ಕಾವ್ಯಯಾನ, ಗಝಲ್

ಇಂದಿರಾ ಕೆ ಅವರ ಗಜಲ್

ಕಾವ್ಯ ಸಂಗಾತಿ ಇಂದಿರಾ ಕೆ ಗಜಲ್ ದೇಶ – ದೇಶ ನಡುವೆ ದ್ವೇಷ ಜ್ವಾಲೆ ಆರಿಸುವವರು ಯಾರಿಲ್ಲಿಮುಗಿಲು ಮುಟ್ಟಿದ ಅಳಲು ಆಕ್ರಂದನ ಆಲಿಸುವವರು ಯಾರಿಲ್ಲಿ ಯುದ್ಧ ರಣಾರ್ಭಟಕೆ ಬೆಚ್ಚಿ ಬಿದ್ದಿದೆ ಮನುಕುಲವುಜಗದಗಲ ಹರಡಿದ ಅಶಾಂತಿಯ ಅಳಿಸುವವರು ಯಾರಿಲ್ಲಿ ಬಲಿಷ್ಠತೆ ಮೆರೆದು ದೀನರಿಲ್ಲಿ ಬಲಿಪಶುಗಳಾದರುರಕ್ತ- ಸಿಕ್ತದಲಿ ಸಿಕ್ಕ ಹೆಣಗಳ ಎಣಿಸುವವರು ಯಾರಿಲ್ಲಿ ಅಸೂಯೆ ಅಹಂನ ಪ್ರದರ್ಶನ ಕರಾಮತ್ತೋಅಮಾಯಕರ ಜೀವ ಬೆಲೆ ತಿಳಿಸುವವರು ಯಾರಿಲ್ಲಿ ಕ್ರಾಂತಿ ಕಹಳೆ ಹೊತ್ತಿಸಿ ಕ್ಷಿಪಣಿಗಳ ಮಳೆಗೈಯುತಿವೆಹಲ್ಲೋಲ- ಕಲ್ಲೋಲ ಜಗತ್ತು ದಂಡಿಸುವವರು ಯಾರಿಲ್ಲಿ ಭಯದ ಭೀತಿ ಆವರಿಸಿದೆ ಅಳಿದುಳಿದ ಮನಗಳಲಿ  ವಿರಾಮವಿಲ್ಲದೆ ವಿರಾಜಿಸುತಿದೆ ವಿನಾಶ ಕದನ ತ್ಯಜಿಸುವವರು ಯಾರಿಲ್ಲಿ ವಿಶ್ವದಾದ್ಯಂತ ಶಾಂತಿ ಸ್ನೇಹ – ಭಾತೃತ್ವ ನೆಲೆಸಲೆಂದು ಪ್ರಾರ್ಥಿಸಿಬೇಕಿದೆ ಇಂದಿರೆದಾಳಿ – ಪ್ರತಿದಾಳಿಗೆ ನಲುಗಿದವರ ರಕ್ಷಿಸುವವರು ಯಾರಿಲ್ಲಿ ಇಂದಿರಾ ಕೆ

ಇಂದಿರಾ ಕೆ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಕಲ್ಪನಾ ಎಸ್‌ ಪಾಟೀಲ್‌ ಅವರ ಗಜಲ್

ಕಾವ್ಯ ಸಂಗಾತಿ ಕಲ್ಪನಾ ಎಸ್‌ ಪಾಟೀಲ್‌ ಗಜಲ್ ತೆರೆದ ಎದೆಯ ಕದವ ಬಡೆಯುತಲೆ ಇದ್ದೆಅದಾವ ಊರ ಕನಸಿನೊಡೆಯನೊನೀನಾಗಿದ್ದೆ ಕನಸಲೆ ಕನಸುಗಳು ಬಹುದೂರದಿ ಸಾಗುತಲೆ ಇದ್ದವುನೀನು ಹೋದ ದೂರದೂರಿನ ದಾರಿಯಬೆನ್ನಟ್ಟಿಯೆ ಇದ್ದವು ನೀ ದಾರಿ ತಪ್ಪಿಸಿದರೂ ನೀನು ಕ್ರಮಿಸುವದಾರಿಯ ಮರೆಯದಂತೆ ಮಾಡಿದ್ದವು ಕನಸೆ ಗುರಿಯಾಗಿಸಿಕೊಂಡು ನಡೆದಿದ್ದೆ ನೀನುಆ ಕನಸೆ ಗುರಿಯ ತೀರ ತಲುಪಿಸಿದನು ಮರೆತೆ ಏನು ನನ್ನ ಕನಸೆ ನೀನು ನಿನ್ನ ಕನಸಿಗಾಗಿ ನಾನೆ ಎಂದೆನೀ ಬರಿ ಕನಸ ಕಂಡರೆ ಕಾವ್ಯಧರೆಗೆ ಕನಸೆ ನೀನಾಗಿದ್ದೆ ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್‌ ಪಾಟೀಲ್‌ ಅವರ ಗಜಲ್ Read Post »

You cannot copy content of this page

Scroll to Top