ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

 “ದಯಾಮರಣ ಮತ್ತು ಕರಿಬಸಮ್ಮ ಎಂಬ ವಾರ್ನಿಂಗ್ ಬೆಲ್”  ಗಂಗಾಧರ ಬಿ ಎಲ್ ನಿಟ್ಟೂರ್

ಬದುಕಿನ ಸಂಗಾತಿ ಗಂಗಾಧರ ಬಿ ಎಲ್ ನಿಟ್ಟೂರ್  “ದಯಾಮರಣ ಮತ್ತು ಕರಿಬಸಮ್ಮ ಎಂಬ ವಾರ್ನಿಂಗ್ ಬೆಲ್”   ಇದು ಮೊನ್ನೇ ಮೊನ್ನೆಯ ಸುದ್ದಿ. ನಿಮಗೆ ಗೊತ್ತಿರಬಹುದು, ಸುಮಾರು 13 ವರ್ಷಗಳಿಂದ ಕೋಮಾ ಆವಸ್ಥೆಯಲ್ಲಿ ಇದ್ದ  ಹರೀಶ್ ರಾಣಾ ಎಂಬ ವ್ಯಕ್ತಿ 2026 ರ ಮಾರ್ಚ್ 24 ರಂದು ಕೊನೆಯುಸಿರೆಳೆದರು.   ದಯಾಮರಣಕ್ಕೆ ಒಳಗಾದ ಭಾರತದ ಮೊದಲ ವ್ಯಕ್ತಿ ಇವರು. ದಯಾಮರಣಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಮಾರ್ಗಸೂಚಿಯೊಂದಿಗೆ ಅನುಮತಿ ನೀಡಿದ ಮೊದಲ ಪ್ರಕರಣ ಇದು. ಪ್ರಸ್ತುತ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿದೆ. ಆದರೆ ಇಂದು ಕಾನೂನು ಮಾನ್ಯತೆಗೆ ಒಳಪಟ್ಟಿರುವ ಈ ದಯಾಮರಣ ಕಾಯ್ದೆಯ ಹಿಂದೆ ಹಲವಾರು ವರ್ಷಗಳ ಹೋರಾಟದ  ಹೆಜ್ಜೆ ಗುರುತುಗಳಿವೆ . ಭಾರತದಲ್ಲಿ ಸುಮಾರು 1980 ರ ದಶಕದಲ್ಲಿಯೇ ದಯಾಮರಣದ ಕೂಗು ಮೊಳಗಿತ್ತು . ಈ ಹೊತ್ತಿಗೆ ಹಲವು ದೇಶಗಳಲ್ಲಿ ಈ ಕಾನೂನು ಜಾರಿಯಾಗಿತ್ತು . ಭಾರತದ ಜ್ಞಾನ್ ಕೌರ್, ಕಾಮನ್ ಕಾಸ್ ರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ 1996 ರ ಹೊತ್ತಿಗೆ ದಯಾಮರಣ ಚರ್ಚೆ ತೀವ್ರಗೊಳ್ಳುತ್ತಾ ಸಾಗಿತು. ಆದರೆ ಬದುಕುವ ಹಕ್ಕನ್ನು ಮಾತ್ರ ಬಲವಾಗಿ ನಂಬಿದ್ದ ಭಾರತದಂಥ ಒಂದು ಸಾಂಪ್ರದಾಯಿಕ ದೇಶಕ್ಕೆ ಇದು ಸೂಕ್ತವಲ್ಲ ಎಂಬ ಹಿನ್ನೆಲೆಯಲ್ಲಿ ಈ ಪ್ರಸ್ತಾವಕ್ಕೆ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಅಸ್ತು ಹೇಳಿರಲಿಲ್ಲ. ಆದಾಗ್ಯೂ ಎಲ್ಲಾ ವಿರೋಧದ ನಡುವೆಯೂ ಈ ದಯಾಮರಣ ಕಾಯ್ದೆಗೆ ಸಂಬಂಧಿಸಿದಂತೆ 2011 ರಲ್ಲಿ ಐತಿಹಾಸಿಕ ತೀರ್ಪು ಹೊರ ಬಿದ್ದಿತು. 37 ವರ್ಷಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ (Persistent Vegetative State) ದಾದಿ ಅರುಣಾ ಶಾನ್‌ಬಾಗ್ ಪರವಾಗಿ ಅವರ ಸ್ನೇಹಿತೆ ಪಿಂಕಿ ವಿರಾನಿ ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಪರೋಕ್ಷ ದಯಾಮರಣಕ್ಕೆ ಅನುಮತಿ ನೀಡಲಾಯಿತು. ಆದರೆ ಸೂಕ್ತ ಮಾರ್ಗಸೂಚಿಗಾಗಿ ಮುಂದುವರಿದ ಹೋರಾಟದ ಪರಿಣಾಮವಾಗಿ 2018 ರಲ್ಲಿ  ಸುಪ್ರೀಂ ಕೋರ್ಟ್ ತನ್ನ ಮತ್ತೊಂದು ಐತಿಹಾಸಿಕ ತೀರ್ಪಿನಲ್ಲಿ ಬದುಕುವ ಹಕ್ಕಿನಂತೆ ಗೌರವಯುತವಾಗಿ ಸಾಯುವುದು ಕೂಡ ಒಂದು ಮೂಲಭೂತ ಹಕ್ಕು ಎಂದು ಪರಿಗಣಿಸಿತು. ಆದರೆ ನಿರ್ದಿಷ್ಟ ಮಾರ್ಗಸೂಚಿ ನೀಡುವಲ್ಲಿ ಇನ್ನೂ ವಿಳಂಬವಾದ ನಿಟ್ಟಿನಲ್ಲಿ ದಯಾಮರಣ ಹೋರಾಟಗಾರರ ಹೋರಾಟ ಮತ್ತಷ್ಟು ತೀವ್ರ ಗೊಂಡಿತು. ಅಂತಿಮವಾಗಿ 2025 ರ ಫೆಬ್ರವರಿ ತಿಂಗಳಲ್ಲಿ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ದೊರಕಿತು. ಆದಾಗ್ಯೂ ಭಾರತದಲ್ಲಿ ಸಕ್ರಿಯ ದಯಾಮರಣ (ಅಂದರೆ ಚುಚ್ಚುಮದ್ದಿನ ಮೂಲಕ ಅಥವಾ ವಿಷಕಾರಿ ದ್ರವ್ಯ ನೀಡಿ ಪ್ರಾಣ ತೆಗೆಯುವುದು) ಇಂದಿಗೂ ಕಾನೂನುಬಾಹಿರ. ಇದನ್ನು ಕೊಲೆ ಅಥವಾ ಆತ್ಮಹತ್ಯೆಗೆ ಪ್ರೇರಣೆ ಎಂದು ಪರಿಗಣಿಸಲಾಗುತ್ತದೆ.  ಈ ವಿಷಯದ ಕುರಿತು ವೈಯುಕ್ತಿಕವಾಗಿ  ಇಷ್ಟೊಂದು ಕುತೂಹಲ ಹುಟ್ಟಲು ಕಾರಣ ಹಲವಾರು ವರ್ಷಗಳಿಂದ ದಯಾಮರಣಕ್ಕಾಗಿ ಹೋರಾಡುತ್ತಿರುವ ದಾವಣಗೆರೆಯ ಎಚ್.ಬಿ ಕರಿಬಸಮ್ಮ ಎಂಬ ನಿವೃತ್ತ ಶಿಕ್ಷಕಿ ಹಾಗೂ ಆದರ್ಶ ಮಹಿಳೆ.  ಅವರ ಸಂದರ್ಶನದ ಬರೆಹವಿದು. Iಇದು ಅವರ ಮೂಲಕ ದಯಾಮರಣ ಬೇಡುತ್ತಿರುವ ನೊಂದ ಹೃದಯಗಳ ಆಳಕ್ಕಿಳಿದು ಅಂತರಂಗವನ್ನು ಅವಲೋಕಿಸುವ ಒಂದು ಚಿಕ್ಕ ಪ್ರಯತ್ನವೂ ಹೌದು. ಕಾಡಿದ ಕುತೂಹಲ : ಸುಮಾರು ಹತ್ತದಿನೈದು ವರ್ಷಗಳ ಹಿಂದೆ ಈ ಸುದ್ದಿ ನನ್ನ ಕಿವಿಗೆ ಬಿದ್ದಾಗ, ಬದುಕುವುದಕ್ಕಾಗಿ ಹೋರಾಡುವ ಜನರ ಮಧ್ಯೆ ಸಾವಿಗಾಗಿಯೂ ಹೋರಾಡುವ ಜನಗಳಿದ್ದಾರೆ ಎಂಬುದನ್ನು ಕೇಳಿದಾಗ ಅಂತಹ ವಿಶೇಷ ಅನಿಸಿರಲಿಲ್ಲ. ಸಾಯುವ ಮಾತಾಡುವುದು, ಸಾಯಲು ಬಯಸುವುದು ಹೇಡಿಗಳ ಲಕ್ಷಣ ಎಂದು ಕೆಲವರು ಹೇಳುತ್ತಿದ್ದನ್ನು ಕೇಳಿ ಈ ಕುರಿತು ಚಿಂತಿಸಲು ಕೂಡ ಯಾವುದೋ ಅಳುಕು ಕಾಡುತ್ತಿತ್ತು. ಆದರೂ ಸಾಯುವ ಹಕ್ಕಿಗಾಗಿ ಹೋರಾಡುತ್ತಿರುವ ದಾವಣಗೆರೆ ಎಚ್.ಬಿ ಕರಿಬಸಮ್ಮನವರನ್ನು ಒಮ್ಮೆ ಕಂಡು ಮಾತಾಡಿಸಿ ಆ ಸಾಯುವ ಮನೋ ತೀವ್ರತೆಗೆ ಅಂತಹ ಘನ ಕಾರಣ ಏನಿರಬಹುದು ಎಂಬುದನ್ನು ಕೇಳಿ ಬರಬೇಕೆಂಬ ಕುತೂಹಲ ಮಾತ್ರ ಮನದೊಳಗೆ ಮೂಡಿ, ಆಗಾಗ್ಗೆ ಕಾಡುತ್ತಿತ್ತು. ಆ ಭೇಟಿಗೆ ಈಗ ಕಾಲ ಕೂಡಿ ಬಂತು.  ಆದರೆ ಈ ಸುದೀರ್ಘ ಕಾಲಾವಧಿಯಲ್ಲಿ ಮನಸ್ಸು ಕರಿಬಸಮ್ಮನಂತಹ ಅದೆಷ್ಟೋ ಕೋಟ್ಯಾಂತರ ಜನತೆಯ ಸಾವಿನ ಬಯಕೆಯ ಕಾರಣವನ್ನು ಬರೀ ಕೇಳಿರಲಿಲ್ಲ ಹತ್ತಿರದಿಂದ ಕಂಡಿತ್ತು ಕೂಡ. ಹಾಗಾಗಿ ಅವರ ಭೇಟಿಯ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳುವ ಅವಶ್ಯಕತೆ ಬರಲೇ ಇಲ್ಲ. ಅವರ ಎದೆಯೊಳಗಿನ ಬೇಗುದಿಗೆ ಪರಿಹಾರವಿದೆಯೇ ? ಇದ್ದರೂ ಅದು ಕೇವಲ ಮರಣವೇ ? ಎಂಬುದರ ಕುರಿತಷ್ಟೇ ಮನಸ್ಸು ಪರಿ ಪರಿಯಾಗಿ ಆಲೋಚಿಸಲು ತೊಡಗಿತ್ತು . ಬದುಕಿ ಬಾಳಬೇಕು, ನೆಮ್ಮದಿಯ ನಾಳೆಗಳನ್ನು ಕಂಡುಕೊಳ್ಳಬೇಕು, ನಾವು – ನಮ್ಮವರೆಂಬ ಬಾಂಧವ್ಯ ಬೆಸುಗೆಯಲ್ಲಿ ಆಪ್ತತೆಯ ಸೊಗಸು ಕಾಣಬೇಕು ಎಂಬಿತ್ಯಾದಿ ಕನಸುಗಳ ಹೃದಯದಿಂದ ಹೊಸೆದು, ಉಸಿರಾಗಿಸಿಕೊಂಡು ನನಸಾಗಿಸಿಕೊಳ್ಳಲು ಬಯಸುವ ಹೃದಯಗಳು ಅದ್ಯಾಕೆ ಹೀಗೆ ತಮಗಿನ್ನು ಸಾವು ಒಂದೇ ಪರಿಹಾರ ಎಂದು ತೀರ್ಮಾನಿಸಿ ಬಿಡುವ ಹಂತ ತಲುಪಿ ಬಿಡುತ್ತವೆ ಎಂದು ಗಾಢವಾಗಿ ಯೋಚಿಸಿದಾಗ ಎಂತಹ ಗಟ್ಟಿ ಗುಂಡಿಗೆಯೂ ಕೂಡ ಕರಗದಿರದು, ಎಂತಹ ಕಲ್ಲು ಹೃದಯವೂ ಕೂಡ ದ್ರವಿಭೂತವಾಗದಿರದು.  ಮರಣದಲ್ಲಿ ಮಹಾನವಮಿ ಬಯಸುವ ಕಲಿಬಸಮ್ಮ ಎಂಬ ಆತ್ಮ ಚೇತನ : ಎಚ್.ಬಿ ಕರಿಬಸಮ್ಮನವರು ಶಿಕ್ಷಕಿಯಾಗಿ, ಗೃಹಿಣಿಯಾಗಿ, ಸಮಾಜ ಸೇವಕಿಯಾಗಿ ಜೀವನದ ಅನೇಕ ಏಳು-ಬೀಳು, ಸಿಹಿ-ಕಹಿ, ವೈರುಧ್ಯಗಳನ್ನು ಬಲು ಹತ್ತಿರದಿಂದ ಕಂಡ 86 ರ ವಯೋವೃದ್ಧೆ, ಮಾಗಿದ ಜೀವ. ನಾಲ್ಕು ದಶಕಗಳ ಕಾಲ ಸ್ವಮೂತ್ರ ಸೇವನೆ, ಡಯಾಬಿಟಿಸ್, ನೆಟ್ಟಗಾಗದ ಬೆನ್ನು ಹುರಿ ( ಸ್ಲಿಪ್ ಡಿಸ್ಕ್ ) ಇತ್ಯಾದಿ ದೈಹಿಕ ಬಾಧೆ, ನೋವು ಕಿತ್ತು ತಿನ್ನುತ್ತಿದೆ. ಬಾಲ್ಯದಲ್ಲೇ ವೈಧವ್ಯಕ್ಕೆ ತುತ್ತಾದ ಅವರು ಮರು ಮದುವೆ ಆದರೂ, ಜೀವನದ ಒಳ ಹೊರಹುಗಳ ಮರ್ಮಾಘಾತಗಳು ಅವರನ್ನು ಬಿಡದೆ ಕಾಡಿವೆ. ಸೂಕ್ಷ್ಮಾತಿ ಸೂಕ್ಷ್ಮ ಮನಸ್ಸಿನ ಅವರು ಅನೇಕ ಮಾನಸಿಕ ತುಮುಲಗಳಿಂದ ಬೆಂದು ಹೋಗಿದ್ದಾರೆ. ಹತ್ತು ಹಲವು ಸಾಮಾಜಿಕ ಅನಿಷ್ಟಾದಿಗಳನ್ನು ಹತ್ತಿರದಿಂದ ಕಂಡು ನಲುಗಿದ್ದಾರೆ. ಒಟ್ಟಾರೆ ಅವರ ಮನಸ್ಸು ಮುರಿದು ಹೋಗಿದೆ, ಹೃದಯ ಜಜ್ಜಿ ಹೋಗಿದೆ. ಹಾಗಾಗಿ ಅವರೀಗ ಸಾವೆಂಬ ಶೂಲಕ್ಕೇರಲು ಸಿದ್ಧವಾಗಿ ನಿಂತಿದ್ದಾರೆ !. ಆದರೂ. ಅವರ ಕಂಗಳಲ್ಲಿ ಯಾವುದೋ ಚೈತನ್ಯ ಪ್ರಜ್ವಲಿಸುತ್ತಿದೆ. ಕನಸುಗಳು ಬಾಡಿಲ್ಲ, ಎದೆ ನಡುಗಿಲ್ಲ, ಅಚಲತೆ ಅಡಗಿಲ್ಲ. ಇಂತಹ ದಿಟ್ಟ, ಛಲಗಾತಿ ಕರಿಬಸಮ್ಮ ಸಾವು ಬಯಸುತ್ತಾರೆಂದರೆ ಅವರನ್ನು ಹಾಗೆ ಸಾಯಲು ಬಿಡಲು ಯಾರಿಗಾದರೂ ಖಂಡಿತ ಮನಸ್ಸಾಗದು.  ಸಾವಿನ ಈ ಬಯಕೆ – ಬೇಡಿಕೆ, ಆ ಆರ್ತನಾದ ಕೇವಲ ಕರಿಬಸಮ್ಮ ಒಬ್ಬರದ್ದೂ ಮಾತ್ರವಲ್ಲ. ಆ ಧ್ವನಿಯ ಹಿಂದೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಎದೆಯಾಳದ ನೋವಿದೆ. ಕೈಲಾಗದವರ, ನಿರ್ಗತಿಕರ, ದೀನ-ದಲಿತರ, ಬಡ-ಬಗ್ಗರ, ನೊಂದು-ಬೆಂದವರ ಅಸಹಾಯಕತೆಯ ಕೂಗಿದೆ. ಸಾಮಾಜಿಕ ಏಣಿ-ಶ್ರೇಣಿ ವ್ಯವಸ್ಥೆ, ಅಸಮಾನತೆ, ದೌರ್ಜನ್ಯ, ಭ್ರಷ್ಟಾಚಾರ, ಮೋಸ-ವಂಚನೆ, ಕ್ರೌರ್ಯ, ಅನುಭವಿಸಿದವರ ಅಳಲಿದೆ. ವೈಫಲ್ಯತೆ ಮತ್ತು ಹಿಂಸೆಯ ವಿರುದ್ಧದ ಆಕ್ರೋಶವಿದೆ ಎಂಬುದು ಅವರನ್ನು ಹತ್ತಿರದಿಂದ ಕಂಡವರಿಗೆ ಮಾತ್ರ ಮನವರಿಕೆಯಾಗುತ್ತದೆ. ಸಾವನ್ನು ಬೇಡುವವರು ಹೇಡಿಗಳು ಎನ್ನುವ ವೀರಾಧಿವೀರರಿಗೆ ಕರಿಬಸಮ್ಮನಂಥವರ ಮೂಕ ವೇದನೆ ಹಾಗೂ ಸಾಮಾಜಿಕ ಕಳಕಳಿ ಅರ್ಥವಾಗಬೇಕಿದೆ. ಸಾವನ್ನು ಬೇಡುವ ಮನದ ಹಿಂದಿರುವ ನೆಮ್ಮದಿಯ ಬದುಕಿನ ಹೆಬ್ಬಯಕೆಯನ್ನೂ ಸಮಾಜ ಅರಿಯಬೇಕಿದೆ. ದಯಾ ಮರಣದ ಸುತ್ತ ಮುತ್ತ :  ದೈಹಿಕವಾಗಿ ಜರ್ಝರಿತವಾದವರು, ವಾಸಿಯಾಗದ ರೋಗದಿಂದ ಬಳಲುತ್ತಿರುವವರು, ಸಾವಿನ ಹೊರತು ಬೇರೇನೂ  ತಮಗೆ ಬೇಕಿಲ್ಲ ಎಂದು ಬೆಂದು ಬಸವಳಿದು ಮಾನಸಿಕ ಖಿನ್ನತೆಗೊಳಗಾದವರು, ಜೀವನದಲ್ಲಿ ಬದುಕುಳಿಯುವ ಎಲ್ಲಾ ಭರವಸೆಗಳನ್ನು ಕಳೆದುಕೊಂಡ ವಯೋವೃದ್ಧರಿಗೆ ದಯಾಮರಣ ದಯಪಾಲಿಸಿ ಎಂಬುದು ಕರಿಬಸಮ್ಮನವರ ಹೋರಾಟ. ಸುಮಾರು 36 ವರ್ಷಗಳ ಅವರ ಈ ಸತತ ಹೋರಾಟಕ್ಕೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ಅವರು ಅನೇಕ ಎಡರು ತೊಡರುಗಳನ್ನು ಅನುಭವಿಸಿದ್ದಾರೆ. ಹಲವರ ಮನೆ, ಹಾದಿ-ಬೀದಿಗಳನ್ನು ಎಡತಾಕಿದ್ದಾರೆ. ಆದರೂ ಹಿಡಿದ ಪಟ್ಟು ಬಿಡದ ಅವರ ಹೋರಾಟದ ಮನೋಭಾವಕ್ಕೆ ಅಲ್ಲಲ್ಲೇ ಬೆಂಬಲ ವ್ಯಕ್ತವಾಗಿದ್ದು, ಈವರೆಗೆ 20 ಸಾವಿರಕ್ಕೂ ಅಧಿಕ ಜನರ ಸಹಿ ಸಂಗ್ರಹಿಸಿದ್ದಾರೆ. 2012 ರಲ್ಲಿ ಸದನದಲ್ಲಿ ಕೂಡ ದಯಾಮರಣದ ಕುರಿತು ಸುದೀರ್ಘ ಚರ್ಚೆ ನಡೆಯಲು ಕಾರಣೀಭೂತರಾಗಿದ್ದಾರೆ. ರಾಷ್ಟ್ರಪತಿ, ಮುಖ್ಯಮಂತ್ರಿ, ಪ್ರಧಾನ ಮಂತ್ರಿ, ಸಚಿವರು, ಮಂತ್ರಿ ಮಹೋದಯರಿಗೂ ಕೂಡ ಪತ್ರ ಮುಖೇನ ದಯಾಮರಣದ ಕುರಿತು ಗಮನ ಸೆಳೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ. ಕೆಲ ಸ್ವಾಮೀಜಿಗಳನ್ನು ಖುದ್ದಾಗಿ ಭೇಟಿ ನೀಡಿ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ.  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲೂ ಧರಣಿ ನಡೆಸಿ ಬಂದಿದ್ದಾರೆ. ದಯಾಮರಣದ ಕಾಯ್ದೆ ಜಾರಿಯಾದಲ್ಲಿ ದುರುಪಯೋಗದ ಸಾಧ್ಯತೆಗಳೇ ಹೆಚ್ಚು, ಇದು ಶಿಕ್ಷಾರ್ಹ ಅಪರಾಧ ಹಾಗೂ ಇದು ಕೊಲೆಗೆ ಸಮ ಎಂಬ ಎರಡು ಮಹತ್ವದ ಕಾರಣ ನೀಡಿ ಸುಪ್ರೀಂಕೋರ್ಟ್ ಪ್ರಸ್ತಾವವನ್ನು ತಿರಸ್ಕರಿಸುತ್ತಲೇ ಬಂದಿತ್ತು . ಹಾಗಾಗಿಯೇ ಕರಿಬಸಮ್ಮನವರು ತೀರಾ ಅಗತ್ಯ ಇರುವವರಿಗೆ ಮಾತ್ರ ಈ ಕಾಯ್ದೆ ಅನ್ವಯವಾಗಲಿ ಎಂಬ ಕಾರಣಕ್ಕಾಗಿ ಕೆಲ ಸಲಹೆಗಳನ್ನು ಕೂಡ ತಮ್ಮ ಮನವಿಯಲ್ಲಿ ಮಂಡಿಸಿದ್ದರು. ಖಾಸಗಿ ಆಸ್ಪತ್ರೆ ಹೊರತುಪಡಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರ ಈ ದಯಾಮರಣದ ಒಂದು ಪ್ರತ್ಯೇಕ ವಿಭಾಗ ತೆರೆಯುವಂತೆ ಕೋರಿದ್ದಾರೆ. ಸಾವು ಬಯಸುವವರ ಸಮ್ಮತಿಯ ಸ್ಪಷ್ಟತೆ ಮತ್ತು ನಿಖರತೆಯ ಪರಿಶೀಲನೆಗೆ ಬೆಂಚ್‌ಕೋರ್ಟ್ ನಿರ್ಮಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಸ್ಥಳೀಯ ಜಿಲ್ಲಾಧಿಕಾರಿ, ನ್ಯಾಯಾಧೀಶರು, ತಜ್ಞ ವೈದ್ಯಾಧಿಕಾರಿ ಸೇರಿದಂತೆ ಒಟ್ಟು 15-20 ನಿವೃತ್ತ ಅಧಿಕಾರಿಗಳು, ತಜ್ಞರು, ಪ್ರಾಜ್ಞರನ್ನೊಳಗೊಂಡ ಸಮಿತಿ ರಚಿಸುವುದು ಸೇರಿದಂತೆ ಇತ್ಯಾದಿ ವಿಚಾರಗಳನ್ನು ಪ್ರಸ್ತುತಪಡಿಸಿದ್ದಾರೆ. ದಯಾ ಮರಣ ದಯಪಾಲಿಸಿರುವ ದೇಶಗಳು : ಈಗಾಗಲೇ ನೆದರೆಂಡ್, ಸ್ವಿಡ್ವರ್ಲ್ಯಾಂಡ್, ಬೆಲ್ಲಿಯಂ, ನಾರ್ವೆ, ಸ್ವೀಡನ್, ಫಿಗ್ಲೆಂಡ್, ಲುಕ್ಸೆಂಬರ್ಗ್, ಅಲ್ವೇನಿಯಾ, ಥಾಯ್ಲೆಂಡ್ ಹಾಗೂ ಅಮೇರಿಕಾ, ಒರೆಗಾನ್ನ ಕೆಲವೆಡೆ ದಯಾಮರಣಕ್ಕೆ ಅವಕಾಶ ಕಲ್ಪಿಸಲಾಗಿದ್ದು ಭಾರತದಲ್ಲೂ ಇದಕ್ಕೆ ಮಾನ್ಯತೆ ನೀಡಬೇಕು ಎಂದು ಹೋರಾಡುತ್ತಲೇ ಇದ್ದರು ಕರಿಬಸಮ್ಮ. ಭಾರತದಲ್ಲಿ ದಯಾ ಮರಣದ ಬಗೆಗಿನ ದೃಷ್ಟಿಕೋನ : ಹೇಳಿ ಕೇಳಿ ಭಾರತ ದೇವರು, ಧರ್ಮ, ಸಂಪ್ರದಾಯಕ್ಕೆ ಹೆಚ್ಚು ಮಾನ್ಯತೆ ನೀಡುವ ದೇಶ. ದಯಾಮರಣದ ಕೋರಿಕೆ ಭಾರತದ ದೃಷ್ಟಿಯಲ್ಲಿ ಅಪರಾಧವಾಗಿ ಕಾಣುತ್ತಿದೆ. ಇದು ಕೇವಲ ಭಾವನಾತ್ಮಕ ಮಾತ್ರವಲ್ಲ ವಾಸ್ತವ ಬದುಕಿನೊಡನೆ ಮಿಳಿತಗೊಂಡಿರುವ ಬೇಡಿಕೆ ಎಂಬುದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಯಬೇಕಿದೆ. ಅಮಾನವೀಯವಾಗಿ ಅತ್ಯಾಚಾರಕ್ಕೆ ಒಳಗಾಗಿ ಅನೇಕ ವರ್ಷಗಳ  ಕಾಲ ಜೀವಚ್ಛವವಾಗಿ ನರಳಿದ ಮುಂಬೈನ ಕೆಎಂಇ ಆಸ್ಪತ್ರೆಯ ನರ್ಸ್ ಅರುಣ ಶಾನಬಾಗ್ ಅವರು ದಯನೀಯ ಸ್ಥಿತಿಯಲ್ಲೇ ಕೊನೆಯುಸಿರೆಳೆದರು. ಅವರ ಸ್ಥಿತಿ ಕಂಡು ಕರಗಿದ್ದ ಅವರ ಸ್ನೇಹಿತೆ ಪತ್ರಕರ್ತೆ ಪಿಂಕಿ ಏರಾನಿ ಕೂಡ ಸುಪ್ರೀಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ನೇರಾ ಪುರಸ್ಕಾರ ದೊರೆಯಲಿಲ್ಲ.  ಇಂತಹ ಅದೆಷ್ಟೋ ಮನವಿಗಳು ನೆನೆಗುದಿಗೆ ಬಿದ್ದಿರುವಾಗ ನನ್ನ ಮನವಿಗೆ  ಮನ್ನಣೆ ಸಿಗುವುದೇ ಎಂಬುದು ಯಕ್ಷಪ್ರಶ್ನೆಯಾಗಿತ್ತು. ಆದರೆ ಈಗ ಅದಕ್ಕೆ ಪರಿಹಾರ ದೊರಕಿದೆ ಎನ್ನುತ್ತಾರೆ ಕರಿಬಸಮ್ಮ.  ಪ್ರಯತ್ನ, ಪ್ರತಿಭೆ, ಆಶಾವಾದಿತನ, ವಿವೇಚನೆ ಎಲ್ಲಕ್ಕೂ ಮಂಕು ಕವಿಸಿ ಮರ್ಮಾಘಾತ ಉಂಟು ಮಾಡುವ ಕಾಣದ ಕೈಗಳ ಕೈ ಚಳಕ ತಿಳಿದಾಗ,  ಯಾರದ್ದೋ ಮೋಸ ದ್ರೋಹಕ್ಕೆ ತಾವು ನೋವು ನಲಿವುಗಳಿಗೆ ಗುರಿಯಾಗಿ ಭವಿಷ್ಯವನ್ನು ಕಳೆದುಕೊಳ್ಳುವವರನ್ನು ಕಂಡಾಗ,  ನೆಮ್ಮದಿಯಾಗಿ ಬದುಕುವುದಕ್ಕೆ ಸಾಧ್ಯವಾಗುತ್ತಿದೆಯೇ ಎಂಬ ಜಿಜ್ಞಾಸೆ ಮೂಡಿದಾಗ , ಜೀವನದುದ್ದಕ್ಕೂ ನೆಮ್ಮದಿಯ ಹರಸಿ ನೋವುಂಡ ಜೀವಗಳು ಸಾವಿನಲ್ಲಾದರೂ ನೆಮ್ಮದಿ  ಕಂಡುಕೊಳ್ಳಲಿ ಎಂದು ಆಶಿಸುವುದು ಅನಿವಾರ್ಯ. ಇಂತಹ ಸಂದರ್ಭಗಳಿಗೆ ಖಂಡಿತ ದಯಾ ಮರಣವೇ ಮದ್ದು ಎನ್ನದೆ ವಿಧಿಯಿಲ್ಲ ಎಂದು ನೋವಿನಿಂದ ನುಡಿಯುತ್ತಾರೆ ಕರಿಬಸಮ್ಮ . ದಯಾಮರಣದ ಜಾರಿಗೆ ಸುಪ್ರೀಕೋರ್ಟ್ ದುರುಪಯೋಗದ ನೆಪವೊಂದನ್ನೆ ಮುಂದೆ ಇಟ್ಟುಕೊಂಡು ಮನವಿ ತಳ್ಳಿದಾಗ, ಪ್ರಸ್ತುತ

 “ದಯಾಮರಣ ಮತ್ತು ಕರಿಬಸಮ್ಮ ಎಂಬ ವಾರ್ನಿಂಗ್ ಬೆಲ್”  ಗಂಗಾಧರ ಬಿ ಎಲ್ ನಿಟ್ಟೂರ್ Read Post »

ಕಾವ್ಯಯಾನ

ಹಮೀದಾ ಬೇಗಂ ದೇಸಾಯಿಯವರ ಗಜಲ್

ಕಾವ್ಯ ಸಂಗಾತಿ ಹಮೀದಾ ಬೇಗಂ ದೇಸಾಯಿ ಗಜಲ್ ಮುಗ್ಧ ಜೀವಿಗಳ ರಕ್ತಪಾತಕೆ  ಬೆಚ್ಚಿದ  *ರಾತ್ರಿಗಾಗಿ* ಹಣತೆ ಬೆಳಗುವೆದ್ವೇಷ ಕಲಹ ಕ್ರಾಂತಿಗಳಿಂದ  ನರಳಿದ  *ಧಾತ್ರಿಗಾಗಿ* ಹಣತೆ  ಬೆಳಗುವೆ ತಲ್ಲಣ ಗೊಂಡಿದೆ  ಮನುಕುಲ ಭೀಕರ ಯುದ್ಧಗಳ  ಸಿಡಿಲಿನಿಂದಕವಿದ ಕರಾಳ  ಮುಖವಾಡಗಳ ಕಳಚುವ  *ಖಾತ್ರಿಗಾಗಿ* ಹಣತೆ  ಬೆಳಗುವೆ ನಾನೆಂಬ ಅಹಂಕಾರದ ಕ್ರೂರ ವರ್ತುಲಗಳು   ಸುತ್ತಿವೆ  ಜಗದಗಲಕ್ಷುದ್ರರಲಿ ಅವಿತ  ದುರುಳತನಗಳ ಮೆಟ್ಟುವ  *ಕ್ಷಾತ್ರಿಗಾಗಿ* ಹಣತೆ ಬೆಳಗುವೆ ಭಯದ ನೆರಳುಗಳು ಆವರಿಸಿ  ಹೆದರಿಸುತಿವೆ  ಹೆಜ್ಜೆ  ಹೆಜ್ಜೆಗೆ ಅಲ್ಲವೇಭ್ರಾತೃತ್ವದ ಸ್ನೇಹ ವಿಶ್ವಾಸಗಳು  ಮೆರೆಯುವ  *ಜಾತ್ರಿಗಾಗಿ* ಹಣತೆ  ಬೆಳಗುವೆ ಒಳಗೊಳಗೆ ಉಸಿರುಗಳು ಮೌನವಾಗಿ  ಬಿಕ್ಕುತ್ತಿವೆ ಪ್ರತಿಷ್ಠೆಯ ಜಾಲಗಳಲಿ  ಸಿಲುಕಿ ಬೇಗಂಶಾಂತಿ ಪ್ರೇಮಗಳನು ನೀಡುವ  ದೂತನಾಗಿ  ಬರುವ  *ಯಾತ್ರಿಗಾಗಿ* ಹಣತೆ  ಬೆಳಗುವೆ ಹಮೀದಾಬೇಗಂ ದೇಸಾಯಿ

ಹಮೀದಾ ಬೇಗಂ ದೇಸಾಯಿಯವರ ಗಜಲ್ Read Post »

ಪುಸ್ತಕ ಸಂಗಾತಿ

ದಿ 29ರಂದು ಕವಿ ಮಕಾನದಾರರ ದರ್ವೇಶಿ ಪದ್ಯ ಜನಾರ್ಪಣೆ

ಪುಸ್ತಕ ಸಂಗಾತಿ ದಿ 29ರಂದು ಕವಿ ಮಕಾನದಾರರ ದರ್ವೇಶಿ ಪದ್ಯ ಜನಾರ್ಪಣೆ ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ  ಕವನ ಸಂಕಲನ ದಿ 29 ರ ರವಿವಾರ ದಂದು ಹೂವಿನಹಡಗಲಿಯ ಸರ್ಕಾರಿ ನೌಕರರ  ಭವನದಲ್ಲಿ ಜನಾರ್ಪಣೆ ಗೊಳ್ಳಲಿದೆ. ಹೂವಿನ ಹಡಗಲಿಯ ಸಿಂಚನ ಪ್ರಕಾಶನ ಮತ್ತು ಮೇ ಸಾಹಿತ್ಯ ಮೇಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆಕುವೆಂಪು ವಿಶ್ವ ವಿದ್ಯಾಲಯ ಮತ್ತು ವಿಜಯನಗರ ಜಿಲ್ಲೆಯ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯಗಳ ವಿವಿಧ ಪದವಿ  ಪಠ್ಯ ಪುಸ್ತಕಗಳಲ್ಲಿ  ಸೇರ್ಪಡೆ ಯಾದ ಕವಿತೆಗಳುಳ್ಳ ದರ್ವೇಶಿ ಪದ್ಯ ಕವನ ಸಂಕಲನವನ್ನು ಕವಿ ಇಸ್ಮಾಯಿಲ್ ಯಲಿಗಾರರವರು ಲೋಕಾರ್ಪಣೆಗೊಳಿಸುವರು.ಹಾವೇರಿ ಜಿಲ್ಲೆ ಹಾನಗಲ್ ನ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥೆ  ಡಾ. ಪುಷ್ಪ ವತಿ ಶೆಲವಡಿಮಠ ಅವರು ಕೃತಿ ಅವಲೋಕನ ಮಾಡುವರು.2023ನೇ ಸಾಲಿನ ಸಿಂಚನ ಕಾವ್ಯ ಪ್ರಶಸ್ತಿ ಬೀಳಗಿಯ ಸೋಮಲಿಂಗ ಬೇಡರ ಆಳೂರ ಅವರ ಗೋರಿ ಮತ್ತು ಧರ್ಮ, 2024ನೇ ಸಾಲಿನ ಕಾವ್ಯ ಪ್ರಶಸ್ತಿ ಗೆ ಬಾಚಿಗೊಂಡನ ಹಳ್ಳಿಯ ಹಿರಿಯ ಸಾಹಿತಿ ಹುರಕಡ್ಲಿ ಶಿವಕುಮಾರ್ ಅವರ ಕನ್ನಡ ಮಾನಿಪ್ಪಾ ನಾಡು ಕೃತಿಗಳು ಆಯ್ಕೆ ಆಗಿದ್ದು ಪ್ರತಿ ಪುರಸ್ಕಾರವೂ 5ಸಾವಿರ ನಗದು ಎರಡು ಸಾವಿರ ಮುಖ ಬೆಲೆಯ ಪುಸ್ತಕ, ಸ್ಮರಣಿಕೆ ನೀಡಿ ಸನ್ಮಾನಿಸಲಾಗುವದುಹಿರಿಯ ಸಾಹಿತಿ ರಾಮಪ್ಪ ಕೋಟಿಹಾಳ್  ಪುರಸ್ಕೃತ ಕೃತಿಗಳ ಪರಿಚಯ ಮಾಡಲಿದ್ದು  ತೊ ಮ ಶಂಕ್ರಯ್ಯ ಸಮಾರಂಭ ದ ಅಧ್ಯಕ್ಷ ತೆ ವಹಿಸುವರುಇದೆ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವಿಸಲಗುವದೆಂದು ಪ್ರಕಾಶಕಿ ಸವಿತಾ ಅಂಗಡಿ, ಸಂಚಾಲಕ ಸುರೇಶ್ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ

ದಿ 29ರಂದು ಕವಿ ಮಕಾನದಾರರ ದರ್ವೇಶಿ ಪದ್ಯ ಜನಾರ್ಪಣೆ Read Post »

ಕಾವ್ಯಯಾನ

ಡಾ.ಗೀತಾ ದಾನಶೆಟ್ಟಿ ಬಾಗಲಕೋಟ “ಗುಬ್ಬಿಗೂಡು”

ಕಾವ್ಯ ಸಂಗಾತಿ ಡಾ.ಗೀತಾ ದಾನಶೆಟ್ಟಿ ಬಾಗಲಕೋಟ “ಗುಬ್ಬಿಗೂಡು” ಅದೆಲ್ಲಿಂದ ವಲಸೆ ಬಂದ ಹಕ್ಕಿಮನೆಯ ಮೂಲೆಯಮರದ ರೆಂಬೆಗೆಕನಸಿನ ಗೂಡು ಕಟ್ಟಿ ಹಾರಿ ಹೋಗಿ ಅಲ್ಲಲ್ಲಿ ಸಿಕ್ಕಹುಲ್ಲು ತಂತುಗಳನು ತಂದುಬೆಚ್ಚನೆಯ ಗೂಡು ಹೆಣೆದುಮರಿ  ನಿರೀಕ್ಷೆಯ ನಿರಾಳತೆ ಮಮತೆಯ ಮಡಿಲಲ್ಲಿಮುದ್ದು ಜೀವಕೆಪ್ರೀತಿಯ ಧಾರೆ ಎರೆಯುತಜಗವ ತೋರುವ ಆಸೆ ಪಿಳಿಪಿಳಿ ಬಿಡಲು ಕಣ್ಣುಚಿಲಿಪಿಲಿ ಧ್ವನಿಯ ನಾದಹಾರಾಟದ ಹೊಸ ಮಾತುಮನದೊಳಗೆ ಮಧುರ ಭಾವ ಗೂಡಿನ ಗಡಿಯನು ಮೀರಿಬಾಳಿನ ಹೊಸ ಅಧ್ಯಾಯಕೆ ನಾಂದಿಬೀಳುವ ಭಯವಿಲ್ಲದ ಮನಬಾನಿಗೆ  ಹಾರುವ ಮೊದಲ ಹೆಜ್ಜೆ ಚಿಕ್ಕ ರೆಕ್ಕೆಗಳನು ಬಿಚ್ಚಿಭರವಸೆಯ ಹಾದಿಯಲ್ಲಿಧೈರ್ಯದಿಂದ ಹೆಜ್ಜೆ ಇಟ್ಟುಜಗವ ಸುತ್ತುವ ಸಂತಸ ಡಾ.ಗೀತಾ ದಾನಶೆಟ್ಟಿ ಬಾಗಲಕೋಟ

ಡಾ.ಗೀತಾ ದಾನಶೆಟ್ಟಿ ಬಾಗಲಕೋಟ “ಗುಬ್ಬಿಗೂಡು” Read Post »

ಕಾವ್ಯಯಾನ, ಗಝಲ್

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್

ಕಾವ್ಯ ಸಂಗಾತಿ ಪ್ರಭಾವತಿ ಎಸ್ ದೇಸಾಯಿ ಗಜಲ್ ಜಗವು ಉರಿಯುತಿದೆ ಜೀವಿಗಳು ನರಳುತಿವೆ ನೀ ಸುಮ್ಮನಿರುವಿಹೃದಯಗಳು ಬೆಂಕಿಯಲಿ ಬಿದ್ದು ಬೇಯುತಿವೆ ನೀ ಸುಮ್ಮನಿರುವಿ ಕಂದಮ್ಮಗಳು ಹುಡುಕುತಿವೆ  ಹೆತ್ತವರನು ನೆತ್ತರಿನಲಿ ನೋಡುದೀನರು ಕಂಡ ಕನಸುಗಳು ಮಣ್ಣಾಗುತಿವೆ  ನೀ ಸುಮ್ಮನಿರುವಿ ವಿಶ್ವದಲ್ಲಿ ನಾನೆಂಬ ಅಹಂಕಾರದ ಕಹಿ ಕಳೆಯು ಬೆಳೆಯುತಿದೆನಂಬಿದ  ದೈವಗಳೆಲ್ಲಾ ಸಾಯುತಿವೆ ನೀ ಸುಮ್ಮನಿರುವಿ ನಿತ್ಯ ಉರುಳುತಿವೆ ರಾಶಿ ಹೆಣಗಳು ಅಂತ್ಯಕ್ರಿಯೆ ಇಲ್ಲದೆಯೇಭೂಮಂಡಳದಲಿ ಮಸಣಗಳು ಬೆಳೆಯುತಿವೆ ನೀ ಸುಮ್ಮನಿರುವಿ ಪ್ರೀತಿಯಲಿ ಎಲ್ಲರನು ಬಂಧಿಸುವ ಶಕ್ತಿಯು ನಿನಗಿದೆ ಪ್ರಭೆದ್ವೇಷ ಅಸೂಯೆಯ ಬಾಂಬುಗಳು  ಸಿಡಿಯುತಿವೆ  ನೀ ಸುಮ್ಮನಿರುವಿ ಪ್ರಭಾವತಿ ಎಸ್ ದೇಸಾಯಿ

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್ Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-12 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ *೧೯೪೪-೪೫*ರ ಸಮಯ….. ಸೋಲ್ಲಾಪುರದಲ್ಲಿ ಕಾಲರಾ ರೋಗ ಭೀಕರವಾಗಿ ಹರಡಲಾರಂಭಿಸಿತು…ಜನರು ಭಯದಿಂದ ನಡುಗುತ್ತಿದ್ದರು. ಮನೆಮನೆಯಲೂ ಅಳಲು, ಆತಂಕ, ನಿರಾಶೆಯ ಕತ್ತಲೆ ಆವರಿಸಿತ್ತು.ಜಯದೇವಿ ತಾಯಿಯವರು ಮತ್ತು ಅವರ ತಾಯಿ ಸಂಗವ್ವ ಬಾಯಿಯವರು ಇನ್ನುಳಿದ ಮಹಿಳೆಯರನ್ನು ಕರೆದುಕೊಂಡು ರೋಗ ಪೀಡಿತರಿಗೆ ಸಹಾಯ ಹಸ್ತ ಚಾಚಲಾರಂಭೀಸಿದರು. ಅವರ ಸಹಾಯಕ್ಕಾಗಿ ಅಕ್ಕನ ಬಳಗದ ಹೆಣ್ಣು ಮಕ್ಕಳನ್ನೆಲ್ಲ ಕರೆದುಕೊಂಡು ಹೋಗುತ್ತಿದ್ದರು. ಅಂಥ ಸಮಯದಲ್ಲಿ ಜಯದೇವಿತಾಯಿಯವರು ಮಾಡಿದ ಸೇವೆ ಕೇವಲ ಸಹಾಯವಲ್ಲ… ಅದು ಮಾನವೀಯತೆಯ ಜೀವಂತ ರೂಪ.ರೋಗಿಗಳ ಬಳಿ ಹೋಗುವುದಕ್ಕೂ ಜನ ಹೆದರುತ್ತಿದ್ದಾಗ…ಜಯದೇವಿ ತಾಯಿಯವರು…. ಅವರ ಮನೆಗಳಿಗೆ ಹೋಗಿ ಧೈರ್ಯ ತುಂಬಿದವರು.ಅವರು ತಮ್ಮ ಕೈಯಿಂದಲೇ ಔಷಧಿ ಕೊಡುತ್ತಿದ್ದರು, ಪೌಷ್ಟಿಕ ಆಹಾರ  ರೋಗಿಗಳಿಗೆ ಒದಗಿಸುತಿದ್ದರು.ಕಾಲರಾ ಹರಡುವುದನ್ನು ತಡೆಯಲು ಸ್ವಚ್ಛತೆಯ ಮಹತ್ವವನ್ನು ಜನರಿಗೆ ತಿಳಿಸುತ್ತಿದ್ದರು.ನೀರನ್ನು ಕುದಿಸಿ ಕುಡಿಯಬೇಕು, ಪರಿಸರ ಸ್ವಚ್ಛವಾಗಿರಬೇಕು ಎಂದೆಲ್ಲಿ ತಿಳಿಸಿ ಹೇಳುತಿದ್ದರು. ಈ ರೋಗದಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳನ್ನು ಅವರು ಒಬ್ಬ ತಾಯಿಯಾಗಿ ಅಪ್ಪಿಕೊಂಡರು. ರೋಗದ ಬಗ್ಗೆ ಭಯಾನಕವಾದ ಆತಂಕವು ಎಲ್ಲರಲ್ಲಿ ನೆಲ ಮಾಡಿತು.ಆ ಕರಾಳಭಯ ನೀಗಿಸಿ ಧೈರ್ಯ ಹೇಳಿದವರು.ಅನಾಥ ಮಕ್ಕಳಿಗೆ ಇರಲು ವ್ಯವಸ್ಥೆ ಮಾಡಿ ಬಟ್ಟೆ ಪುಸ್ತಕವನ್ನು ಕೊಟ್ಟು ಶಾಲೆ ಕಲಿಸಿದರು. ರೋಗ ಪೀಡೆತರಿಗಾಗಿ ,ಬಡ ಮಕ್ಕಳಿಗಾಗಿ, ಅನಾಥರಿಗಾಗಿ ಸಿದ್ದರಾಮನ ದೇವಸ್ಥಾನಕ್ಕೆ ಹೋಗಿ ಬೇಡಿಕೊಂಡು ಬರುತ್ತಿದ್ದರು. *ಬಡ ಮಕ್ಕಳಿಗೆ ಹಾಲು,ಉಡಲು ತಾಯಿಗೆ ಸೀರೆ, ಒಡಲ ತುಂಬ ಅನ್ನ ನೀಡುತ್ತ, ರೋಗಗಳಓಡಿಸಲು ಕರುಣಿಸ ಬೇಕಯ್ಯ ಸಿದ್ದೇಶ!!*ಎಂದು ಹಾಡಿ ಕಳಕಳಿಯಿಂದ ಪ್ರಾರ್ಥನೆ ಮಾಡಿದವರು..“ನಾವು ಒಟ್ಟಿಗೆ ಇದನ್ನು ಎದುರಿಸೋಣ” ಎಂದು ಜನರಿಗೆ ಮನೋಬಲ ತುಂಬುತ್ತಿದ್ದರು.ಆ ದಿನಗಳಲ್ಲಿ… ತಮ್ಮ ವೈಯುಕ್ತಿಕ ಜೀವದ ಹಂಗು ಹರಿದು… ಇತರರ ಜೀವ ಉಳಿಸಲು ಓಡಾಡುತ್ತಿದ್ದರು.ರಾತ್ರಿ-ಹಗಲು ಎನ್ನದೆ…ಅವರ ಕಣ್ಣುಗಳಲ್ಲಿ ನಿದ್ರೆ ಮರೆತರು…ಹೃದಯದಲ್ಲಿ ಒಂದೇ ಉದ್ದೇಶವಿತ್ತು.“ಯಾರೂ ಸಹಾಯವಿಲ್ಲದೆ ನಿಸ್ಸಾಯಕರು ನಿರ್ಗತಿಕರಾಗಿ ರೋಗಿಗಳುಸಾಯಬಾರದೆಂದು …!!! ಸೋಲಾಪುರದ ಜನರು ನಂತರ ಹೇಳುತ್ತಿದ್ದರು…“ಆ ಕಾಲರಾ ಕಾಲದಲ್ಲಿ… ದೇವರು ನಮ್ಮನ್ನು ಕಾಪಾಡಲು ಜಯದೇವಿಯವರನ್ನು ತಾಯಿ ರೂಪದಲ್ಲಿ…ಕಳುಹಿಸಿದನೆಂದು…ಅವರ ಸೇವೆ ಕೇವಲ ರೋಗವನ್ನು ಎದುರಿಸುವುದು ಅಷ್ಟೇ ಅಲ್ಲ..ಅದರ ಜೊತೆಗೆ ಉದ್ಭವಿಸುತ್ತಿರುವ ಅನೇಕ ಸಮಸ್ಯೆಗಳನ್ನು ಪರಿಹರಿಸಿದರು.!! ಆದರೂ ಅದೆಷ್ಟೋ ಜನರ ಜೀವವನ್ನು ಉಳಿಸಲು ಆಗಲಿಲ್ಲ. ಅನ್ನುವ ಕಳವಳ ಅವರಲ್ಲಿ ಇತ್ತು.ಮನೆಯಲ್ಲಿ ಪತಿಯ  ಆರೋಗ್ಯ ಕೂಡ ಸರಿ ಇರಲಿಲ್ಲ ಆದರೂ ಅಂಥ ನೋವಿನಲ್ಲಿಯೂ ಇನ್ನೊಬ್ಬರ ಕಣ್ಣೀರನ್ನು ಒರಿಸಲು ತಾಯಿಯವರು ಸದಾ ಬದ್ಧರಾಗಿರುತ್ತಿದ್ದರು. ಇದು ಒಂದು ಮಾನವೀಯ ಐತಿಹಾಸಿಕ ಪುಟದಲ್ಲಿ ಮರೆಯಲಾಗದ ಘಟನೆ. *೧೯೪೬ ರ *ಸಮಯದಲ್ಲಿ  ಕಾಂಗ್ರೆಸ್ಸಿಗರು ಕರ್ನಾಟಕ ಪರಿಷತ್ತು, ಮಹಾರಾಷ್ಟ್ರ ಪರಿಷತ್ತು ಮತ್ತು ಆಂಧ್ರ ಸಭೆಗಳು ಸೇರಿ ಸ್ಥಳೀಯವಾಗಿ ಪ್ರಬಲವಾಗಿ ರಾಜಕಿಯೇತರ ಸಂಘಟನೆಗಳಾಗಿ ಬೆಳೆದು ನಿಂತಿದ್ದವು.ಗಾಂಧಿ ತತ್ವ ಆದರ್ಶಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಾಂತೀಯ ಸರ್ಕಾರಗಳು ರಚನೆಗೊಂಡಿತು.  ಇದನ್ನೆಲ್ಲಾ ಗಮನಿಸುತ್ತಿದ್ದ ಆಗಿನ ನಿರಂಕುಶ ರಾಜನಾದ ನಿಜಾಮನಲ್ಲಿ ಭಯವ ಹುಟ್ಟಿಸಿದ್ದವು.ಕಾಂಗ್ರೆಸ್ ಚಳುವಳಿಗಳು ಹೈದರಾಬಾದ್ ಪ್ರಾಂತದ ಮೇಲೆ ಹೆಚ್ಚು ಪರಿಣಾಮ ಬೀರಲಾರಂಭಿಸಿದ್ದು ನಿಜಾಮನಿಗೆ ಸಹನೆ ಆಗಲಿಲ್ಲ.  ಹೈದರಾಬಾದ್ ನಿಜಾಮ ಸರ್ಕಾರವು ಕಾಂಗ್ರೆಸ್ ಚಟುವಟಿಕೆಗಳನ್ನು ವಿರೋಧಿಸುತ್ತಿತ್ತು. ಭಾರತದ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಹೈದರಾಬಾದ್ ಪ್ರಾಂಥದಲ್ಲಿ ತನ್ನದೇ ಆದ ಅಸ್ತಿತ್ವವನ್ನು ಕಂಡುಕೊಂಡಿತ್ತು. ಅಲ್ಲಿ ಹೈದರಾಬಾದ್ ಸ್ಟೇಟ್ ಕಾಂಗ್ರೆಸ್ ಆರಂಭವಾಗಿತ್ತು ಇದಕ್ಕೆ ಸ್ವಾಮಿ *ರಮಾನಂದ ತೀರ್ಥರು* ಅಧ್ಯಕ್ಷರಾಗಿದ್ದರು.  ಬ್ರಿಟಿಷರ ಪರವಾಗಿದ್ದ ನಿಜಾಮನು ತನ್ನ ಜನತೆ ಕಾಂಗ್ರೆಸ್ ಜೊತೆಗೆ ಬಲವಾದ ಯಾವ ರೀತಿಯ ವ್ಯವಹಾರಗಳನ್ನಾಗಲಿ ಅಥವಾ ಸಂಬಂಧವನ್ನಾಗಿ ಇಟ್ಟುಕೊಳ್ಳಬಾರದೆಂದು ಅದಕ್ಕೆ ಬದಲಾಗಿ *ಇಂಡಿಯನ್ ಪೆಟ್ರಿಯಾಟಿಕ್ ಅಸೋಶಿಯೇಶನ್* ಜೊತೆ ಸಹಕರಿಸಬೇಕೆಂದು ತಿಳಿಸಿದಾ. ಅದರಂತೆ ನಿಜಾಮನು  ತನ್ನ ಪ್ರಾಂತ್ಯದಲ್ಲಿ ತಿಲಕರು ಜಾರಿಗೆ ತಂದಿದ್ದ ಗಣೇಶ ಶಿವಾಜಿ ಉತ್ಸವವನ್ನು ನಿಶೇಸಿದ್ದ…ಯಾವುದೇ ಚಟುವಟಿಕೆಗಳು ನಡೆಯಬಾರದೆಂದು ಕಟ್ಟಪ್ಪಣೆ ಮಾಡಿದ್ದ….. ನಿಜಾಮನ ನಿರಂಕುಶ ಪ್ರಭುತ್ವದ ವಿರುದ್ಧ ಮಾತನಾಡುವದು, ಹೋರಾಡುವುದು ಅವಶ್ಯಕವಾಗಿತ್ತು…ಜಯದೇವಿ ತಾಯಿಯವರು ಕಾಂಗ್ರೆಸ್ ಸದಸ್ಯರಾಗಿದ್ದರು.ತಮ್ಮ ವಿಚಾರಗಳನ್ನು ಮುಕ್ತವಾಗಿ ಯಾರ ಭಯವಿಲ್ಲದೆ ಪ್ರಸ್ತಾಪಿಸುತ್ತಿದ್ದರು. ಆಗಿನ ಕಾಲದಲ್ಲಿ ಮಹಿಳೆಯರು ತಮ್ಮ ಧ್ವನಿಯನ್ನು ಎತ್ತುವುದು ಅಷ್ಟು ಸುಲಭದ ವಿಷಯವಾಗಿರಲಿಲ್ಲ. ಆದರೆ ಜಯದೇವಿ ತಾಯಿಯವರು  ಅನ್ಯಾಯವನ್ನು ಸಹಿಸುವ ಮೌನವನ್ನು ಒಪ್ಪಿಕೊಂಡವರಲ್ಲ, ಸತ್ಯವನ್ನು ನಿಂತು ಹೇಳುವ ಶಕ್ತಿಯುಳ್ಳವರಾಗಿದ್ದರು.ಕಾಂಗ್ರೆಸಿನ ಸದಸ್ಯೆಯಾಗಿದ್ದ .. ಹೆಸರಿಗಾಗಿ ಅಲ್ಲ ಮನಸ್ಸಿನ ಆಳದಿಂದ ನಂಬಿದ ಮೌಲ್ಯಗಳಿಗಾಗಿ ಆ ಸಂಘಟನೆಯೊಂದಿಗಿದ್ದರು.ದೇಶದ ಸ್ವಾತಂತ್ರ್ಯ, ಸಮಾನತೆ, ಹಾಗೂ ಸಾಮಾಜಿಕ ನ್ಯಾಯ ಎಂಬ ತತ್ವಗಳು ಅವರ ಹೃದಯದಲ್ಲಿ ಬೆಳೆದ ಮರದಂತೆ ಬೇರೂರಿದ್ದವು.ಯಾರೇ ಎದುರು ಬಂದರೂ, ಯಾವ ಪರಿಸ್ಥಿತಿ ಬಂದರೂ, ತಮ್ಮ ಮಾತು ಹೇಳಲು ಅವರು ಹೆದರಲಿಲ್ಲ. ಅವರ ಧ್ವನಿಯಲ್ಲಿ ತಾಳ್ಮೆ ಇತ್ತಾದರು  ಹೆಚ್ಚು ದೃಢತೆ ಇತ್ತು…..“ಸತ್ಯದ ಮಾರ್ಗದಲ್ಲಿ ನಡೆಯುವವನಿಗೆ ಭಯವೇ ಇಲ್ಲ” ಎಂಬ ನಂಬಿಕೆ ಅವರ ಜೀವನದ ದೀವಿಗೆಯಾಗಿತ್ತು.ಸಮಾಜದಲ್ಲಿ ನಡೆಯುತ್ತಿದ್ದ ಅನ್ಯಾಯಗಳನ್ನು ನೋಡಿ ಕಣ್ಣೀರಿಟ್ಟು ಕುಳಿತುಕೊಳ್ಳುವವರಲ್ಲ ಅವರು. ಅದರ ವಿರುದ್ಧ ನಿಲ್ಲುವ ಧೈರ್ಯ ಅವರ ರಕ್ತದಲ್ಲೇ ಹರಿಯುತ್ತಿತ್ತು. ತಮ್ಮ ನಂಬಿಕೆಗಳಿಗಾಗಿ ಹೋರಾಡುವುದು ಅವರಿಗೊಂದು ಕರ್ತವ್ಯವಾಗಿತ್ತು…ಅವರ ಮನಸ್ಸು ಒಂದು ಹೋರಾಟದ ಮೈದಾನವಾಗಿತ್ತು .  ಯಾವ ಸಂಕಷ್ಟ ಬಂದರೂ, “ನಾನು ನನ್ನ-ಸತ್ಯ ನನ್ನ ಜೊತೆ ಇದೆ” ಎಂಬ ಆತ್ಮವಿಶ್ವಾಸದಿಂದ ಮುಂದೆ ಸಾಗುತ್ತಿದ್ದವರು ಜಯದೇವಿ ತಾಯಿಯವರು.ಅವರ ಜೀವನವೇ ಒಂದು ಸಂದೇಶ: “ದಿಟ್ಟತನದಿ ಮಾತನಾಡಿ, ನಂಬಿಕೆಯೊಂದಿಗೆ ಹೋರಾಡಿ, ಸತ್ಯದೊಂದಿಗೆ ಸ್ಥಿರವಾಗಿ ನಿಲ್ಲಿರಿ ಅನ್ನುವ ಕರೆ ಕೊಡುತ್ತಿದ್ದರು.ಇಂತಹ ದೈರ್ಯ ಮತ್ತು ದೃಢ ನಂಬಿಕೆ ಅವರ ವ್ಯಕ್ತಿತ್ವವನ್ನು ಅಸಾಧಾರಣವಾಗಿಸಿದೆ.  ಈ ಕಾರಣಕ್ಕಾಗಿ 1946ರಲ್ಲಿ ಜಹೀರಾಬಾದಿನ   ಕಾಂಗ್ರೆಸ್ ಪ್ರಾಂತೀಯ ಪರಿಷತ್ತಿನ ಮೂರನೆ ಅಧೀವೇಶನಕ್ಕೆ ಜಯದೇವಿ ತಾಯಿಯವರನ್ನು ಆಹ್ವಾನಿಸಿದ್ದರು. ಅಧಿವೇಶನದ ದ್ವಾರಕ್ಕೆ” ಜಯದೇವಿ ತಾಯಿ ದ್ವಾರ “ಅಂತ ಹೆಸರಿಡಲಾಯಿತು. ಜಯದೇವಿ ತಾಯಿಯವರು ಆ ಸಮಾರಂಭಕ್ಕೆ ಬರುತ್ತಿರುವರು ಎನ್ನುವದ ಕೇಳಿದ ನಿಜಾಮನು ಕೋಪದಿಂದ ಜಯದೇವಿತಾಯಿಯವರು ತನ್ನ ಭೂಮಿಯಲ್ಲಿ ಬರೆದಿದ್ದಂತೆ ಫರ್ಮಾನ್  ಹೊರಡಿಸಿದ್ದ.ಅವರು ಬರಬಾರದು” ಎಂಬುದೇ ಆ ಆದೇಶದ ಅರ್ಥ. ನಿಜಾಮನ ಆದೇಶ“ಪರ್ಮಾನ್”—ಎಂದರೆ ಸಾಮಾನ್ಯರಿಗೆ ಅದು ಒಂದು ಗಡಿ, ಒಂದು ಭೀತಿ, ಒಂದು ತಡೆಯ ಗೋಡೆ. ಆ ಮಣ್ಣಿನಲ್ಲಿ ಕಾಲಿಡುವುದು ಎಂದರೆ ಆ ಆದೇಶವನ್ನು ಮೀರಿ ನಿಲ್ಲುವವರಿಗೆ ಎಂಟೆದೆಯ ಧೈರ್ಯ ಬೇಕಾಗಿತ್ತು.ಆದರೆ ಜಯದೇವಿ ತಾಯಿಯವರಿಗೆ ಭಯ ಎನ್ನುವುದು ಅಡ್ಡಿಯಾಗಲಿಲ್ಲ… ಅದು ಅವರ ಹೆಜ್ಜೆಗಳ ಕೆಳಗೆ ಬಿದ್ದ ನೆರಳಷ್ಟೇ….. ಸರಳವಾಗಿ ಆ ಭೂವಿಯಲ್ಲಿ ಕಾಲಿಟ್ಟರು.ಸತ್ಯದ ದಾರಿಯಲ್ಲಿ ನಡೆಯುವವರನ್ನು ಯಾರ ಆದೇಶ ತಡೆಯಬಲ್ಲದು?ಅಂದು… ಆ ಬೆಳಗಿನ ಹೊತ್ತಿನಲ್ಲಿ, ಹೈದರಾಬಾದಿನ ಜೈರಾಬಾದಿನ ಮಣ್ಣಿನ ಮೇಲೆ ಮೊದಲ ಹೆಜ್ಜೆಯನ್ನು ಇಡುವಾಗ, ಜಯದೇವಿ ತಾಯಿಯವರ ಕಾಲುಗಳು ನಡುಗಲಿಲ್ಲ ಇನ್ನಷ್ಟು ದೃಢತೆ ಇತ್ತು, ಧೈರ್ಯ ಇತ್ತು, ನಂಬಿಕೆಯ ಶಕ್ತಿ ಇತ್ತು.ಅವರ ಹೆಜ್ಜೆಗಳು ನಿಧಾನವಾಗಿರಲಿಲ್ಲ… ಪ್ರತಿ ಹೆಜ್ಜೆಯೂ ಒಂದು ಘೋಷಣೆಯಂತಿತ್ತು. “ನ್ಯಾಯಕ್ಕಾಗಿ ನಾನು ಬಂದಿದ್ದೇನೆ” ಎಂದು. ಅಲ್ಲಿ ನೆರೆದಂಥ ಜನರ ಕಣ್ಣುಗಳಲ್ಲಿ ಆಶ್ಚರ್ಯ, ಭಯ, ಮತ್ತು ಗೌರವ ಮಿಶ್ರವಾಗಿತ್ತು. ಆದರೆ ತಾಯಿಯವರ ಮುಖದಲ್ಲಿ ಮಾತ್ರ ಶಾಂತಿ ಹೊಳೆಯುತ್ತಿತ್ತು ಒಂದು ಸಣ್ಣ ನಗು, ಆದರೆ ಅದರಲ್ಲಿ ಅನೇಕ ಹೋರಾಟಗಳ ಶಕ್ತಿ ಅಡಗಿತ್ತು.ಪರ್ಮಾನ್ ಎಂಬುದು ಕಾಗದದ ಮೇಲೆ ಬರೆದ ಅಕ್ಷರ ಮಾತ್ರ… ಆದರೆ ಅವರ ನಂಬಿಕೆ ಕಲ್ಲಿನಂತೆ ಗಟ್ಟಿತನ ಹೊಂದಿತ್ತು.ಆ ಕ್ಷಣದಲ್ಲಿ, ಜ್ಯೆರಾಬಾದ್‌ನ ಮಣ್ಣು ಕೂಡ ಅವರ ಹೆಜ್ಜೆಗಳಿಗೆ ಹೆಮ್ಮೆಪಟ್ಟಂತೆ ಕಾಣಿಸಿತು… ಯಾಕೆಂದರೆ ಅದು ಸಾಮಾನ್ಯ ಹೆಜ್ಜೆಯಲ್ಲ, ಒಬ್ಬ ಧೈರ್ಯಶಾಲಿ ಮಹಿಳೆಯು ಇಟ್ಟ ಹೆಜ್ಜೆಯಾಗಿತ್ತು. *ಆ ಸನ್ನಿವೇಶವೇ ಒಂದು ಇತಿಹಾಸ* ಒಬ್ಬ ಮಹಿಳೆ, ಒಂದು ಆದೇಶವನ್ನು ಅಲ್ಲ, ಒಂದು ಅನ್ಯಾಯವನ್ನು ಮೀರಿ ನಿಂತ ಕ್ಷಣ…..ಜಯದೇವಿ ತಾಯಿಯವರು ಆ ದಿನ ಹೈದರಾಬಾದ್‌ಗೆ ಬಂದಿದ್ದು ಭಾರತ ಮಾತೆಯ ವೀರ ಮಹಿಳೆಯ ಧೈರ್ಯ ಸಾಹಸದ ಪತಾಕೆ ಹಾರಿಸಿದ್ದರು. ಸಬಲೆಯರ ವ್ಯಕ್ತಿತ್ವಕ್ಕೆ ಹೊಸ ಅರ್ಥ ಕೊಟ್ಟರು. ಜಯದೇವಿ ತಾಯಿಯವರು ಜೇಹರಾಬಾದ್ ನಿಜಾಮನ “ಪರ್ಮನ್” (ಅಂದರೆ ನಿರ್ಬಂಧ ಆದೇಶ) ವನ್ನು ಲೆಕ್ಕಿಸದೇ ಹೈದರಾಬಾದ್‌ನ ಮಣ್ಣಿನಲ್ಲಿ ಕಾಲಿಟ್ಟ ಘಟನೆ ಧೀಮಂತ ಮಹಿಳೆಯ ಮನೋಬಲವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಆ ಕಾಲದಲ್ಲಿ ನಿಜಾಮನ ಆಡಳಿತದಲ್ಲಿ ಇಂತಹ ನಿರ್ಬಂಧವನ್ನು ಉಲ್ಲಂಘಿಸುವುದು ಅತಿ ದೊಡ್ಡ ಅಪಾಯದ ಮುನ್ಸೂಚನೆಯಾಗಿತ್ತು  ನಿಜಾಮನು ಯಾವ ಕಾಲಕ್ಕಾದರೂ ಬಂಧನ, ಶಿಕ್ಷೆ, ಅಥವಾ ಜೀವ ಹಾನಿಯೂ ಎಡೆ ಮಾಡಬಹುದಾಗಿತ್ತು. ಯಾವುದನ್ನು ಲೆಕ್ಕಿಸದೆ ಅವರು ಮುಂದುವರಿದದ್ದು ಅವರ ಧೀರೋದ್ಯಾಥ್ಯ ವ್ಯಕ್ತಿತ್ವದ ಮೆರಗಿನ ಮಹತ್ವವನ್ನು ತೋರಿಸುತ್ತದೆ.ಜಯದೇವಿ ತಾಯಿಯವರ  ಅಚಲ ಧೈರ್ಯದಲಿನಿಜಾಮನ ಭಯದ ನೆರಳು ಕೂಡ ಅವರನ್ನು ತಟ್ಟಲಿಲ್ಲ. ಸತ್ಯ ಮತ್ತು ನ್ಯಾಯಕ್ಕಾಗಿ ಅವರು ಯಾವ ಅಪಾಯವನ್ನೂ ಎದುರಿಸಲು ಸಿದ್ಧರಾಗಿದ್ದರು.  *ಅವರಲ್ಲಿದ್ದ ರಾಷ್ಟ್ರಪ್ರೇಮ,ಹೃದಯದಲ್ಲಿ  ದೇಶದ ಮೇಲೆದ್ದ ಅಪಾರ ಪ್ರೀತಿ,. ದೇಶದ ಸ್ವಾತಂತ್ರ್ಯ ಮತ್ತು ಜನರ ಹಕ್ಕುಗಳಿಗಾಗಿ ತಮ್ಮ ವೈಯಕ್ತಿಕ ಭದ್ರತೆಯನ್ನೇ ತ್ಯಜಿಸಿದರು.* ಒಮ್ಮೆ ತೀರ್ಮಾನ ಮಾಡಿದ ಮೇಲೆ ಹಿಂದಿರುಗುವ ಸ್ವಭಾವ ಅವರದಾಗಿರಲಿಲ್ಲ… ನಿರ್ಧಾರಾತ್ಮಕತೆ ಎಂಥದ್ದು ಅಂದರೆ ನಿಜಾಮನ ಆದೇಶವೂ ಅವರ ನಿರ್ಧಾರವನ್ನು ತಡೆಯಲಿಲ್ಲ….!!ರಜಾಕಾರರ ನಿರಂತರ ಶೋಷಣೆಯಿಂದ ಜನರನ್ನು ಮುಕ್ತಗೊಳಿಸಲು ಅಲ್ಲಿಯ ಸಮಸ್ಯೆ ಮತ್ತು ಪರಿಹಾರವನ್ನು ಕುರಿತು ಚರ್ಚಿಸುವ ಸಮಾವೇಶ ಅದಾಗಿತ್ತು .ಅಲ್ಲಿ ಹತ್ತರಿಂದ ಹನ್ನೆರಡು ಸಾವಿರ ಜನ ಪಾಲ್ಗೊಂಡಿದ್ದರು. ಜಯದೇವಿ ತಾಯಿಯವರು. ಸಭಾಮಂಟಪವನ್ನು ಪ್ರವೇಶಿಸಿ ಭಾಷಣ ಮಾಡಿದರು….ಅವರ ವ್ಯಕ್ತಿತ್ವ ಎಂಥ ಮೆರಗುಗೊಳಿಸುವಂಥದ್ದು ಅಂದರೆ ಅವರನ್ನು ನೋಡುತ್ತಿದ್ದಂತೆ ಜನರೆಲ್ಲರೂ ಮಂತ್ರ ಮುಗ್ಧರಾಗುತ್ತಿದ್ದರು.ಕಣ್ಣು ಕಿವಿಗಳು‌ ಅರಳಿಸಿ ಎಚ್ಚೆತ್ತು ತದೇಕಚಿತದಿಂದ ಭಾಷಣ ಕೇಳಲು ಅಣಿಯಾಗುತ್ತಿದ್ದರು. ಜಯದೇವಿ ತಾಯಿಯವರು ಭಾಷಣವನ್ನು ಕೇಳಿದವರು ಹೇಳುತ್ತಿದ್ದರು…. ತಾಯಿಯವರ ಭಾಷಣಕ್ಕೆ ಎದ್ದು ನಿಂತರೆ   ಸಭಾಂಗಣದಲ್ಲಿ ಅದೆಂಥ ಶಾಂತಿ ನೆಲೆಗೊಳ್ಳುತ್ತಿತು ಅಂದರೆ ಜನಜಂಗುಳಿಯ ಮಧ್ಯದಲ್ಲಿ ಒಂದು ಸೂಜಿ ಕೂಡ ಬಿದ್ದರೂ ಅದರ ಸಪ್ಪಳ ಕೇಳಬಹುದಾಗಿತ್ತು. ಅನ್ನುವ ಮಟ್ಟಿಗೆ ಜನರು ಮೈ ಮನ ಮರೆತು ಕುಳಿತುಕೊಳ್ಳುತ್ತಿದ್ದರು ಅಂತ ಹೇಳುತಿದ್ದರು. ನಿಜಾಮನ ನಿರಂಕುಶ ಆಡಳಿತದ ವಿರುದ್ಧ ಜ್ವಾಲಾಮುಖಿಯಂತೆ ಉಕ್ಕಿ ಬಂದ ಜಯದೇವಿ ತಾಯಿಯವರ ಧ್ವನಿ ಕೇವಲ ವಿರೋಧದ ಧ್ವನಿ ಮಾತ್ರವಲ್ಲ ಅದು ಸ್ವಾತಂತ್ರ್ಯದ ಕಿರುಚಾಟ, ನ್ಯಾಯದ ಹೋರಾಟ, ದೇಶಭಕ್ತಿಯ ಮಹಾ ಘೋಷವಾಗಿತ್ತು.ದೇಶಭಕ್ತಿಯ ಘೋಷಣೆದಂತೆ ಜಯದೇವಿ ತಾಯಿಯವರ ಭಾಷಣ…ಮೊಟ್ಟ ಮೊದಲಿಗೆ ಶಿವಯೋಗಿ ಸಿದ್ದರಾಮನನ್ನು ನೆನೆಯುವುದು,“ಯೋಗಿ ಬಂದಿದಾರೇನ…..ಯೋಗದ ಕೀಲ ತಿಳಿಸುವರೇನ ಯೋಗಿ ಬಂದಿದಾರೇನ….!!ರಾಗಭೋಗದ ಆಚೆ ಒಯ್ಯುವರೇನಾ…ಯೋಗಿ ಬಂದಿದಾರೇನ …!!”“ನನ್ನ ಪ್ರಿಯ ಸಹೋದರ ಸಹೋದರಿಯರೇ…ನಾನು ವೀರ ಗಣಾಚಾರಿ ಶ್ರೀ ಯೋಗಿ ಸಿದ್ದರಾಮನ ಭೂಮಿಯ ಅಲ್ಲಿ ಹುಟ್ಟಿದವಳು ಸಿದ್ದರಾಮನ ಕರುವೆಯ ಕೂಸಾಗಿ ನಿಮ್ಮೊಂದಿಗೆ ಜೊತೆಯಾಗಲು ಬಂದಿದ್ದೇನೆ ಈ ಭಾರತದ ಮಣ್ಣಿನಲ್ಲಿ ಹುಟ್ಟಿದ ನಾವು, ಈ ಮಣ್ಣೇ ನಮ್ಮ ತಂದೆ ತಾಯಿಯೆಂದು ಬದುಕುತ್ತಿರುವ ನಾವು, ಯಾವ ಕಾರಣಕ್ಕೂ ದಾಸ್ಯವನ್ನು ಒಪ್ಪಿಕೊಳ್ಳಲಾರೆವು!ನಿಜಾಮನ ನಿರಂಕುಶ ಪ್ರಭುತ್ವದ ಉಚ್ಛಾಟನೆ ಆಗಲೇಬೇಕು!ಇದು ಕೇವಲ ನಮ್ಮ ಬೇಡಿಕೆ ಅಲ್ಲ….ಇದು ನಮ್ಮ ಹಕ್ಕು!ಬಹು ಸಂಖ್ಯಾತರಾದ ಹಿಂದೂ ಪ್ರಜೆಗಳು ಜಾತ್ಯಾಂಧತೆಯ ಜುಗ್ಗಿನಲ್ಲಿ ಬದುಕುವುದನ್ನು ಇನ್ನೂ ಸಹಿಸಲಾರರು.ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ, ಅಧಿಕಾರದ ಹೆಸರಿನಲ್ಲಿ ಅನ್ಯಾಯ….ಇವು ನಮ್ಮ ಭೂಮಿಯಲ್ಲಿ ಮುಂದುವರಿಯಲಾರವು!ನಾವು ಶಾಂತಿಯ ಪ್ರಜೆಯಾದರೂ, ನಮ್ಮ ಸಹನೆಯನ್ನು ದುರ್ಬಲತೆ ಎಂದು ಯಾರೂ ಭಾವಿಸಬಾರದು.ನಮ್ಮ ಸಹನೆಗೆ ಒಂದು ಮಿತಿ ಇದೆ… ಆ ಮಿತಿಯನ್ನು ದಾಟಿದಾಗ, ನಮ್ಮ ಪ್ರತಿಯೊಂದು ಉಸಿರು ಕ್ರಾಂತಿಯ ಕಿಡಿಯಾಗುತ್ತದೆ!ಈ ಮಣ್ಣಿನಲ್ಲಿ ಸ್ವಾತಂತ್ರ್ಯವೇ ನಮ್ಮ ಉಸಿರು, ಸಮಾನತೆಯೇ ನಮ್ಮ ಹಕ್ಕು!ನಾವು ಯಾರಿಗೂ ದಾಸರಲ್ಲ… ನಾವು ಈ ದೇಶದ ಯಜಮಾನರು!ನಾವು ಒಂದಾಗಿ ನಿಂತರೆ, ಯಾವ ಶಕ್ತಿ ನಮ್ಮನ್ನು ತಡೆಯಲು ಸಾಧ್ಯವಿಲ್ಲ!ನಮ್ಮ ಏಕತೆಯೇ ನಮ್ಮ ಬಲ, ನಮ್ಮ ಧೈರ್ಯವೇ ನಮ್ಮ ಶಕ್ತಿ!ಇಂದು ನಾನು ನಿಮ್ಮ ಮುಂದೆ ಒಂದು ಮಾತು ಮಾತ್ರ ಹೇಳುತ್ತೇನೆ……!!!!ಭಯವನ್ನು

Read Post »

ಕಾವ್ಯಯಾನ

ಶುಭಲಕ್ಷ್ಮಿ ಆರ್ ನಾಯಕ “ಚಿವುಟಿದಷ್ಟು ಚಿಗುರು”

ಕಾವ್ಯ ಸಂಗಾತಿ ಶುಭಲಕ್ಷ್ಮಿ ಆರ್ ನಾಯಕ “ಚಿವುಟಿದಷ್ಟು ಚಿಗುರು” ಚಿವುಟಿದಷ್ಟು ಚಿಗುರುವ ರೀತಿಯುನಿನ್ನದಾಗಲಿ ಮನವೆಕವಿಯುವ ಕತ್ತಲ ಹಾದಿಯಲಿದೀಪವಾಗು ಮನವೆ// ತಿವಿಯುವ ಮುಳ್ಳಿನ ಮೇಲೆ ಹೆಜ್ಜೆಯಹಾಕದಿರು ತನುವೆಅವಿತಿಹ ಧೈರ್ಯವ ಹೊರಗೆ ಎಳೆದುಬಾಳುತಿರು ಸುಮವೆ// ಛಲವದು ಇದ್ದರೆ ಚಿವುಟಿದ ಹಾಗೆಚಿಗುರುವೆ ನೀಗಿಡವೆಒಲವನು ಬದುಕಲಿ ಅನುಕ್ಷಣ ತೋರುತಸಾಗುತಿರು ಬಲವೆ// ಚುಚ್ಚುವ ಮಾತಿಗೆ ಇರಿಯುವ ನುಡಿಗೆಅಳುಕದಿರು ಎಂದೂಹಚ್ಚು ಎಲ್ಲರ ಮನದಲಿ ಸಮತೆಯ ಹಣತೆಯ ನೀ ಮುಂದೂ// ಗೋಳನು ಹೊಯ್ಸುತ ಖುಷಿಯ ಪಡುವರುಕುಹಕದ ಜನರಿಲ್ಲಿಗಾಳವ ಹಾಕುತ ಸಿಕ್ಕಿಸಿ ಹಾಕಲುಕಾಯುವ ಸ್ಥಿತಿಯಿಲ್ಲಿ// ಕಮರದೆ ಕುಂದದೆ ಬಾಡಿ ಹೋಗದೆಬೆಳೆಯೋ ಬದುಕಲ್ಲಿವಿಮಲ ಚರಿತಗೆ ಸಕಲವ ಒಪ್ಪಿಸಿಶರಣಾಗು ಬಾಳಲ್ಲಿ// ಶುಭಲಕ್ಷ್ಮಿ ಆರ್ ನಾಯಕ

ಶುಭಲಕ್ಷ್ಮಿ ಆರ್ ನಾಯಕ “ಚಿವುಟಿದಷ್ಟು ಚಿಗುರು” Read Post »

ಕಥಾಗುಚ್ಛ

 ಶ್ರೀದೇವಿ. ಮ. ಗುಮ್ಮಗೋಳ ಅವರ ಸಣ್ಣಕಥೆ “ಬಾಡಿದ ಮೊಗ್ಗು ಅರಳಿತು”

ಕಥಾ ಸಂಗಾತಿ  ಶ್ರೀದೇವಿ. ಮ. ಗುಮ್ಮಗೋಳ “ಬಾಡಿದ ಮೊಗ್ಗು ಅರಳಿತು” pic=chat gpt ಅಂದು ನಾನು ಯುನಿವರ್ಸಿಟಿ ಕ್ಲಾಸ್ ಮುಗಿಸಿ ಮನೆಗೆ ಹೋಗಲು ಬಸ್ ಸ್ಟಾಪ್ ನಲ್ಲಿ ನಿಂತಿದ್ದೆ. ಹಿಂದಿನಿಂದ ಬೆನ್ನಿಗೆ ಯಾರೊ ಗುದ್ದಿದಂತಾಯಿತು‌. ಹೊರಳಿ ನೋಡಿದೆ. “ಎಯ್ ಭಾರತಿ…. ಹೇಗಿದ್ದಿಲೇ…. ನಾನು ಸುಜಾತಾ. ಎಷ್ಟ ವರಷ ಆತು ನಿನ್ನ ನೋಡಿ….. ಹೆಂಗದ್ದಿ ಹಂಗ ಇದಿ….. ಒಂಚೂರು ಬದಲಾಗಿಲ್ಲ” ಎಂದ ಅವಳನ್ನೆ ದಿಟ್ಟಿಸಿ ನೋಡತೊಡಗಿದೆ.  ಗುಲಾಬಿ ಬಣ್ಣದ ಸೀರೆ ಉಟ್ಟು ಬಿಳಿ ಬಣ್ಣದ ರವಿಕೆ ತೊಟ್ಟಿದ್ದಳು. ಮುಖ ನೋಡಿ ಗುರುತು ಹಿಡಿದೆ. ಅವಳು ನನ್ನ ಪ್ರೈಮರಿ ಸ್ಕೂಲಿನ ಸ್ನೇಹಿತೆ ಕ್ಲಾಸ್ ಮೇಟ್ ಸುಜಾತಾ. ಆಗ ನಾವು ಹಳ್ಳಿಯಲ್ಲಿದ್ದೇವು. ನಮ್ಮ ತಂದೆ ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ನನ್ನ ಪ್ರೈಮರಿ ಎಜುಕೇಶನ್ ಹಳ್ಳಿಯಲ್ಲೆ ಆಯಿತು. ನಂತರ ನಮ್ಮ ತಂದೆಗೆ ವರ್ಗವಾಗಿ ನಗರಕ್ಕೆ ಬಂದೇವು.    “ಓ… ನೀನಾ ಅರಾಮ ಅದೇನಿ.   ನೀನು ಇಲ್ಲಿ….. ಕಾಲೇಜ ಅಡ್ಮಿಶನ್ ಮಾಡ್ಸಿದಿಯಾ….?  ನಾನು ಎಂ.ಏ ಎಕ್ಸಟರ್ನಲ್ ಮಾಡಾಕ್ಕತ್ತೇನಿ… ನಿನ್ನ ನೋಡಿ ಎಷ್ಟೊ ವರಷಗಳಾದವು ಬಾ ಇಲ್ಲಿ ಕೂತು ಮಾತಾಡೋಣ” ಎಂದು ಪಕ್ಕದಲ್ಲೆ ಇದ್ದ ಪಾರ್ಕಗೆ ಕರೆದುಕೊಂಡು ಹೋದೆ. ಸಮೀಪದಲ್ಲೆ ಇದ್ದ ಒಂದು ಬೆಂಚ್ ಮೇಲೆ‌ ಇಬ್ಬರು ಕುಳಿತೇವು.  ಒಬ್ಬರಿಗೊಬ್ಬರು ಕುಶಲೋಪಚರಿ ಮಾತನಾಡಿದೇವು. ಅವಳು ಸಮೀಪದ ಒಂದು ಹಳ್ಳಿಯಲ್ಲಿ ಸ್ಕೂಲ್ ಟೀಚರ್ ಆಗಿ ಕೆಲಸ ಮಾಡುತ್ತಿದ್ದಾಳೆ ಎಂದು ಹೇಳಿದಳು. “ಲೇ… ಅಂದು ನೀನು ನನಗೆ ಸಹಾಯ ಮಾಡದ ಇದ್ದಿದ್ದರ ನಾ ಇವತ್ತು ಟೀಚರ್ ಆಗಿರ್ತಿದ್ದಿಲ್ಲ. ನನ್ನ ಮಾವನ ಊರಲ್ಲಿ ಪಾತ್ರೆ ಮುಸುರೆ ತಿಕ್ಕುತ ನಾಲ್ಕೈದು ಮಕ್ಕಳ ತಾಯಿಯಾಗಿ ಹಳ್ಳಿಯಲ್ಲಿ ಕೆಲಸಕ್ಕೆ ಬಾರದವಳಾಗಿ ಬದಕ್ತಿದ್ನಿ. ಶಿಕ್ಷಣದಿಂದ ವಂಚಿತಳಾಗ್ತಾ ಇದ್ನಿ. ನನ್ನ ಮದುವೆಯೊಳಗ ಆದ ಘಟನೆಯಿಂದ ಮನಿಯವರಿಗೂ ತಿಳುವಳಿಕೆ ಬಂದು ನನಗ ಓದು ಮುಂದ ವರಿಸಿದರು.  ಈಗ ಟೀಚರಾಗಿ ಹಳ್ಳಿಯಲ್ಲಿ ಕೆಲಸಾ ಮಾಡಕ್ಕತ್ತೇನಿ. ಅದಕ ನೀನ.. ಕಾರಣ ನಿನಗ.. ಎಷ್ಟ ಥ್ಯಾಂಕ್ಸ ಹೇಳಿದರು ಸಾಲದು….” ಅಂದ್ಲು. “ಎಯ್ ಬಿಡ ಸುಜಾತಾ… ಆ ಟೈಮ್ನಾಗ ನನಗ ಏನೊ ತಿಳಿತೊ… ಏನೊ ಒಟ್ಟನಲ್ಲಿ ನೀನು ಶಿಕ್ಷಣದಿಂದ ವಂಚಿತಳಾಗುದು ತಪ್ಪತು ಅನ್ನುದು ನನಗ ಬಾಳ ಖುಷಿ ಅನಸ್ತದ….. ನಡಿ ನಮ್ಮನಿಗ ಹೋಗುನ ನಿನ್ನ ನೋಡಿ ಮನಿಯೊಳಗ ಅಪ್ಪ ಅವ್ವನು ಖುಷಿ ಪಡತಾರ” ಅಂದೆ. “ಇಲ್ಲ ಇನ್ನೊಂದಿನ ಬರತೇನಿ ನಿನ್ನ ಅಡ್ರೆಸ್ ಕೊಡು.” ಎಂದು ನನ್ನ ವಿಳಾಸ ಇಸಿದುಕೊಂಡಳು. ನನ್ನ ನೆನಪುಗಳು ಬಾಲ್ಯ ದಿನಗಳತ್ತ ಜಾರಿದವು. ************ ಸುಜಾತಾ ಮತ್ತು ನಾನು ಒಂದೇ ತರಗತಿಯಲ್ಲಿ ಓದುತಾ ಇದ್ವಿ. ಸುಜಾತಾ ಅಪ್ಪ ಹೊಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ತುಂಬಾ ಬಡವರು. ಇಬ್ಬರು ಅಣ್ಣಂದಿರು.  ಸುಜಾತಾ ಓದುವದರಲ್ಲಿ ಮುಂದಿದ್ದಳು. ಯಾವಾಗಲೂ ಕ್ಲಾಸಿಗೆ ಫಸ್ಟ ಬರುತ್ತಿದ್ದಳು. ಮಾಸ್ತರು “ನೋಡ್ರಿ ಸುಜಾತನ ನೋಡಿ ಕಲಿರಿ…. ಅವರಪ್ಪ ಕೂಲಿ ಕೆಲಸಾ ಮಾಡತಾನು. ಆದರೂ… ಹೆಂಗ ಕಷ್ಟ ಪಟ್ಟ ಓದತಾಳು.” ಎಂದು ಹೇಳುತ್ತಿದ್ದರು.  ನಾವಿಬ್ಬರೂ ಆಗ ಏಳನೇ ತರಗತಿಯಲ್ಲಿದ್ದಿವಿ. ಸಜಾತಾ ಒಂದು ವಾರ ಶಾಲೆಗೆ ಬರಲಿಲ್ಲ. ಅವರಜ್ಜಿ ತೀರಿಕೊಂಡಿದ್ದರು. ಮೂರ್ನಾಲ್ಕು ತಿಂಗಳಿಗೆ ಪರೀಕ್ಷೆ ಇತ್ತು.  ಶಾಲೆಗೆ ಬರಲು ಶುರು ಮಾಡಿದ ಮೇಲೆ ಯಾಕೊ ಸುಜಾತ ಮೊದಲಿನ ತರಹ ಲವಲವಿಕೆಯಿಂದ ನಗನಗತಾ ಇರಲಿಲ್ಲ. ಯಾವಾಗಲೂ ಒಬ್ಬಂಟಿಯಾಗಿ ಮೌನವಾಗಿರ ತೊಡಗಿದಳು. ನಾನು ಆಟಕ್ಕೆಲ್ಲಾ ಅವಳನ್ನು ಒತ್ತಾಯದಿಂದ ಹಿಡಿದೇಳದುಕೊಂಡು ಹೋಗುತ್ತಿದ್ದೆ. ಅವಳ ಬದಲಾಗಿರುವದನ್ನು ನೋಡಿ ಒಂದ ದಿನ ಕೇಳಿದೆ “ಸುಜಿ…ಯಾಕೆ ಒಂತಾರ ಅದಿ. ಹಿಂಗ್ಯಾಕ ಮಾಡಕ್ಕತ್ತಿ….. ನನ್ನ ಜೊತಿ ಆಟನು ಅಡವಲ್ಲಿ.‌‌‌‌ ಚಂದಂಗ….. ಮಾತಾಡುವಲ್ಲಿ ಹಂಗಂದರ…‌ ನಾನ ನಿನ್ನ ಚಾಳಿ ಟೂ ಬಿಡತೇನಿ ನೋಡ ಮತ್ತ…” ಆಗ ಸುಜಾತ ಅಳತೊಡಗಿದಳು. ನಾನು ಅವಳನ್ನು ಗಟ್ಡಿಯಾಗಿ ಹಿಡಿದು ತಬ್ಬಿಕೊಂಡು “ಯಾಕ ಸುಜಿ…ಯಾಕ ಅಳಾತಿ…. ಏನ ಆತು ಹೇಳು..” “ಲೇ ಭಾರಿ… ನಮ್ಮನ್ಯಾಗ ನಮ್ಮಾವನ ಜೋಡಿ ನನಗ ಮದ್ವಿ…..ಮಾಡತರಂತ ನನಗ ಇಷ್ಟ ಇಲ್ಲ ನಾನ ಓದಬೇಕು. ಸಾಲಿ ಕಲಿಬೇಕು” ಅಂದು ಒಂದೇ ಸವನೇ ಅಳತೊಡಗಿದಳು. ನನಗೂ ಅಳು ಬಂದಂಗ ಆತು. “ಲೇ ಹಂಗರ ನೀನು… ನನ್ನ ಬಿಟ್ಟ ಹೋಗ್ತಿ… ನೀನು ಹೋಗುದ ಬ್ಯಾಡ. ಸ್ಯಾಣ ಅದಿ ನೀ… ಸಾಲಿ ಕಲಿಬೇಕು” ಎಂದೆ. ಇಬ್ಬರು ಒಬ್ಬರಿಗೊಬ್ಬರು ಸಮಾದಾನ ಮಾಡಿಕೊಂಡು ಮನಿಗೆ ಹೋದೆವು. ಮುಂದಿನ ವಾರ ಅವಳ ಮದುವೆ ಇತ್ತು. ಏಕೊ ನನಗೂ ಪಾಪ ಅನಿಸಿತ್ತು. ಎನ ಮಾಡೊದು ತಿಳಿಯಲಿಲ್ಲ. ಹಿರಿಯರನ್ನು ಎದುರಿಸಿ ನಡೆಯುವಂತ ದಿನಗಳು ಆಗಿರಲಿಲ್ಲ. ಮನೆಯಲ್ಲಿ ನನ್ನ ಅಪ್ಪ ಅಮ್ಮ ಸುಶಿಕ್ಷಿತರಾಗಿದ್ದರು. ಶಾಲೆಯ ಎಲ್ಲ ವಿಷಯಗಳನ್ನ ನಾನು ಮನೆಯಲ್ಲಿ ಹೇಳತಾ ಇದ್ದೆ. ಮರುದಿನ ಊಟಕ್ಕೆ ಕೂತಾಗ ಅಪ್ಪ ಅಮ್ಮನಿಗೆ “ಅಪ್ಪ ಅಮ್ಮಾ ಪಾಪ ಸುಜಾತನ್ನ ಮದ್ವಿ ಮಾಡತಾರಂತ….ಅವಳಗ ಮದ್ವಿ ಆಗಾಕ ಇಷ್ಟನ ಇಲ್ಲಂತ‌. ಪಾಪ ಅಳಾಕ್ಕತ್ತಿದ್ಲು. ಅಕೀನ ಮದ್ವಿ ನಿಲ್ಲಸಾಕ ಬರುದಿಲ್ಲಾ? ” ಅಂತ ಕೇಳದೆ.  ನಮ್ಮ ತಂದೆ “ಅಯ್ಯೊ! .. ಇಷ್ಟ ಸಣ್ಣ ವಯಸ್ಸಿಗೆ ಮದುವಿ ಮಾಡಾಕತ್ತಾರು….. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಪರಾಧ. ಇದಕ್ಕೆ ದಂಡ ಮತ್ತು ಶಿಕ್ಷೆ‌ ಐತಿ… ಏನ್ ತಿಳಲಾರದ ಅನಕ್ಷರಸ್ಥರು…. ಹಿಂಗ… ಮಕ್ಕಳ ಭವಿಷ್ಯನ ಹಾಳ ಮಾಡತಾರು…. ನನ್ನ ಸ್ನೇಹಿತನೊಬ್ಬ ಮಕ್ಕಳ ಮತ್ತು ಕಲ್ಯಾಣ ಇಲಾಖೆಯೊಳಗ ಕೆಲಸಾ ಮಾಡತಾನು ನಾನು ವಿಚಾರಸತೇನಿ” ಅಂದರು. “ಅಪ್ಪಾ …ಅಪ್ಪಾ ಹೆಂಗರ ಮಾಡಿ ಸುಜಾತನ ಮದ್ವಿ ನಿಲ್ಲುಂಗ ಮಾಡು” ಅಂತ ಗೋಗರದೆ. ನನ್ನಪ್ಪ ಪೊನಿನಲ್ಲಿ ಯಾರದೊ ಜೊತೆ ಮಾತನಾಡಿದರು. ******* ಅಂದು ಮನೆಯ ಮುಂದೆ ಸುಜಾತಳ ಮದುವೆ ನಡೆಯುತ್ತಿತ್ತು. ಸುಜಾತ ಕೆಂಪು ಸೀರೆಯನ್ನು ಉಟ್ಟು, ಹಣೆಗೆ ಕುಂಕುಮ ಕೈ ತುಂಬ ಹಸಿರು ಬಳೆ ತೊಟ್ಟು ವಧುವಿನಂತೆ ಶೃಂಗಾರಗೊಂಡಿದ್ದಳು. ಆದರೆ ಮುಖದಲ್ಲಿ ಹರ್ಷವಿರಲಿಲ್ಲ. ಅಳು ಒತ್ತಿ ಒತ್ತಿ ಬರುತ್ತಿತ್ತು. ಅಲಂಕರಿಸಿದ ತಾಟಿನಲ್ಲಿ ಬಾಡಿದ ಹೂವನ್ನು ಇಟ್ಟಂತೆ ಬಾಸವಾಗುತ್ತಿತ್ತು.  ಅರಳುತಿರುವ ಮೊಗ್ಗನ್ನು ಚಿವುಟಿದಂತೆನಿಸಿತು. ಅವಳ ಸೋದರ ಮಾವನಿಗೆ ಅವಳು ಬುಜಕ್ಕಿಂತಲೂ ಕೆಳಗೆ ಅವನ ಮೊಣಕೈ ಗೆ ಬರುತ್ತಿದ್ದಳು. ನಾನು ಒಳಗೊಳಗೆ ವ್ಯಥೆ ಪಡುತ್ತಿದ್ದೆ ಅಪ್ಪನಿಗೆ ಹೇಳಿದ್ದೆ. ಅಪ್ಪನಿಂದ ಮದುವೆ ನಿಲ್ಲಸಲು ಆಗುವದಿಲ್ಲವೆಂದು ಕಾಣಿಸುತ್ತದೆ. ಇಲ್ಲವಾದರೆ ಇಷ್ಟೊತ್ತಿಗೆ ಅಪ್ಪ ಸುಜಾತಳ ತಂದೆ ತಾಯಿಗೆ ತಿಳಿ ಹೇಳಿ ಮದುವೆ ನಿಲ್ಲಿಸಿತ್ತಿದ್ದರು. ಪಾಪ ಸುಜಾತಾಳನ್ನು ತಾನಿನ್ನು ಶಾಲಿಯಲ್ಲಿ ನೋಡಲು ಸಾದ್ಯವಿಲ್ಲ ಎಂದುಕೊಂಡು ಒಳಗೆ ಮನಸ್ಸಿಗೆ ನೋವಾಯಿತು.  ಅಷ್ಟರಲ್ಲಿ ಯಾವುದೊ ಗಾಡಿಯೊಂದು ಜನರ ಮಧ್ಯೆ ಬಂದು ನಿಂತಿತು. ತಿರುಗಿ ನೋಡಿದೆ ಜೀಪಿನಿಂದ ಸೀರೆಯುಟ್ಟ ಇಬ್ಬರು ಹೆಂಗಸರು ಒಬ್ಬ ಪೊಲಿಸ್ ಮತ್ತು ಮತ್ತೊಬ್ಬ ದಡೂತಿ ಮನುಷ್ಯನಿದ್ದ. ಪೊಲಿಸ್ ನನ್ನು ನೋಡಿ ಜನರೆಲ್ಲಾ ಗಾಬರಿಯಾದರು. ಅವರು ಸುಜಾತಳ ತಂದೆ ತಾಯಿಯನ್ನು ಕರೆಯಿಸಿದರು. ಪೊಲಿಸ್ “ನೋಡಮ್ಮಾ ಹದಿನೆಂಟು ವರುಷದ ಒಳಗಿನ ಹೆಣ್ಣು ಮಕ್ಕಳನ್ನ ಮದುವೆ ಮಾಡು ಹಾಗಿಲ್ಲ. ಅದರಲ್ಲೂ ಇನ್ನೂ ಸಾಲಿ ಕಲಿಯುತ್ತಿರುವ ಇಂತಹ ಪುಟ್ಟ ಮಕ್ಕಳನ್ನು ಮದುವೆ ಮಾಡಿಸುವದು ಅಪರಾಧ. ಮೊದಲು ಮದುವೆಯನ್ನು ನಿಲ್ಲಿಸಿ ಇಲ್ಲಾ ಅಂದರೆ ಜೈಲಗೆ ಹೋಗಬೇಕಾಗುತ್ತದೆ ದಂಡ ಕಟ್ಟಬೇಕಾಗುತ್ತದೆ.” ಎಂದು ಗದರಿಸಿದ. ಇಬ್ಬರು ಹೆಂಗಸರು ಬಂದು ಸುಜಾತಳನ್ನು ಮದುವೆ ಮಂಟಪದಿಂದ ಹೊರಗೆ ಕರೆದು ಕೊಂಡು ಬಂದು ಅವಳ ಉಡುಗೆ ತೊಡುಗೆಗಳನ್ನು ಬದಲಾಯಿಸಲು ಹೇಳಿದರು. ಹೆದರಿದ ಸುಜಾತಳ ತಂದೆ ತಾಯಿ ಅವರು ಹೇಳಿದಂತೆ ಮದುವೆ ನಿಲ್ಲಿಸಿದರು. ನಾನು ನನ್ನ ಗೆಳತಿ ಸುಜಾತಳನ್ನು ಹೋಗಿ ತಬ್ಬಿಕೊಂಡೆ. ಬಾಡಿದ ಅವಳ ಮುಖದಲ್ಲಿ ಮಂದಹಾಸವನ್ನು ಕಂಡೆ. ಬಾಡಿದ ಮೊಗ್ಗು ಸಂತೊಷದಿಂದ ಹಿರಿ ಹಿರಿ ಹಿಗ್ಗಿತು. ನಳನಳಸಿತು.……. ಅದರ ಮುಂದಿನ ವರುಷ ನಮ್ಮ ತಂದೆಗೆ ನಗರಕ್ಕೆ ವರ್ಗವಾಗಿ ನಾವು ಊರು ಬಿಟ್ಟು ಹೋದೇವು.  ಸುಜಾತ ಮತ್ತು ನನ್ನ ಸಂಪರ್ಕವೇ ಇರಲಿಲ್ಲ. ಈಗ ಅವಳು ಸಿಕ್ಕಿದ್ದು ನನಗೆ ಬಹಳವೇ ಸಂತೋಷ ತಂದಿತ್ತು. ಅಂದೇನಾದರೂ ಅವಳ ಮದುವೆ ನಿಲ್ಲದಿದ್ದರೆ ಮೊಗ್ಗಾಗಿದ್ದ ಸುಜಾತ ಹೂವಾಗಿ ಅರಳುವ ಮುಂಚೆಯೇ ಬಾಡಿ ಹೋಗುತ್ತಿದ್ದಳು. ಇಂದು ಅವಳ ಮುಖ ನೋಡಿ ಬಾಡಿದ ಮೊಗ್ಗು ಅರಳಿ ನಕ್ಕಂತೆ ಕಂಡಿತು.  ಶ್ರೀದೇವಿ. ಮ. ಗುಮ್ಮಗೋಳ

 ಶ್ರೀದೇವಿ. ಮ. ಗುಮ್ಮಗೋಳ ಅವರ ಸಣ್ಣಕಥೆ “ಬಾಡಿದ ಮೊಗ್ಗು ಅರಳಿತು” Read Post »

ಕಾವ್ಯಯಾನ

ಪ್ರಶಾಂತ್ ಬೆಳತೂರು ಅವರ ಕವಿತೆ ” ಇದ್ದಿಲು ಮತ್ತು ಪ್ರೇಮ”

ಕಾವ್ಯ ಸಂಗಾತಿ ಪ್ರಶಾಂತ್ ಬೆಳತೂರು ” ಇದ್ದಿಲು ಮತ್ತು ಪ್ರೇಮ” ಕಡು ಕಪ್ಪಿನರಾಶಿ ರಾಶಿ ಇದ್ದಿಲಿನ ಚೂರುಗಳಿಗೆಬೆಂಕಿ ತಾಕಿಸಿ ಮತ್ತೆ ಉರಿಸುವಂತೆಎದೆಯಾಳದಲ್ಲಿಬೆಂದು ಬೂದಿಯಾಗದೆಉಳಿದಿರುವ ನಿನ್ನ ನೆನಪುಗಳಿಗೆವಿನಾಕಾರಣ ತನ್ನಷ್ಟಕ್ಕೆ ತಾನೇಸಣ್ಣ ಕಿಡಿಯೊಂದುಹೊತ್ತಿಕೊಂಡು ಬಿಡುತ್ತದೆ..! ನಿನ್ನ ನೆನಪಿನ ಹೊಗೆಯೇಳುತ್ತದೆನನ್ನ ಉಚ್ಛ್ವಾಸ ನಿಸ್ವಾಸಗಳತಲೆಕೆಳಗಾಗಿಸಿ ಉಸಿರುಗಟ್ಟಿಸುತ್ತದೆಜೀವ ಹಿಂಡಿ ಪ್ರಾಣ ಹಾರಿತುಎನ್ನುವ ಹೊತ್ತಿಗೆಹೃದಯ ಬಗ್ಗನೇ ಉರಿದುಉಗುಳುತ್ತದೆಪ್ರೇಮವಿಲಾಪದ ಕೆಂಡದುಂಡೆಗಳವೈಶಾಖದ ಸೂರ್ಯನಂತೆ..! ತುದಿ ಮೊದಲಿಲ್ಲದಅನಂತ ನೆನಪುಗಳ ರಾಶಿಯಲ್ಲಿಛಿದ್ರಗೊಳ್ಳುವ  ಹೃದಯಚೂರಾದ ಇದ್ದಿಲುಗಳಂತೆಹಗುರವಾಗಿಮುಕ್ತಿ ದೊರಕದೆನಾಮಾವಶೇಷವಾಗುತ್ತದೆ..! ಅರಳುವುದಿಲ್ಲ ಮತ್ತೆಂದೂ..ಬೆಂದ ಎದೆಯ ಬನದಲ್ಲಿನವ ಪ್ರೇಮದ ಚಿಗುರು..!ಉರಿದ ಇದ್ದಿಲುಗಳ ರಾಶಿಯನ್ನೇನಿನ್ನ ಪ್ರೇಮದ ನೆನಪುಗಳಲ್ಲಿಮತ್ತೆ ಹೊತ್ತಿಸುತ್ತೇನೆ..! ಬೆಂದು ಬೂದಿಯಾಗಿ ಬಿಡಬೇಕೆಂಬಜಿದ್ದಿಗೆ ಬೀಳದೆನಿನ್ನ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿಕಡುಕಪ್ಪು ಇದ್ದಿಲಿನಂತಾಗುವಕಳಂಕವನ್ನುಸುಲಭದಲ್ಲಿ ಕಳಚಿಕೊಳ್ಳಲಾಗದೆಪ್ರೇಮದ ಹೆಸರಲ್ಲಿಸುಮ್ಮನೆ ಉರಿಯುತ್ತೇನೆ..! ಎಷ್ಟೇ ಬೆಂದರೂ ನೊಂದರೂಭುಗಿಲೇಳುವಪ್ರೇಮದ ಜ್ವಾಲೆಯಂತಾಗದೆಇಷ್ಟಿಷ್ಟೇ ಉರಿವಇದ್ದಿಲುಗಳ ಚೂರಾಗುತ್ತೇನೆ..! ಕಡೆಗೊಮ್ಮೆಈ ಬದುಕು ಥೇಟ್ ಇದ್ದಿಲಿನಂತೆಇಷ್ಟಿಷ್ಟೇ ನಶಿಸಿ ಹೋಗುತ್ತಿರುವಹೊತ್ತಿನಲ್ಲೂನಿನ್ನಂತೆ ನೂರೆಂಟು ಬಣ್ಣ ಬದಲಿಸದೆಮೂಲದಲ್ಲೇ ಕ್ಷಯವಾಗುವಅದರ ಅಸಲಿಯತ್ತಿಗೆತಲೆಬಾಗುತ್ತಾ… ಅಳಿದುಳಿದಪ್ರೇಮದ ಪಳೆಯುಳಿಕೆಗಳನ್ನುಒಟ್ಟುಗೂಡಿಸಿ ಸುಟ್ಟುಕೊಳ್ಳುತ್ತಾ  ನನ್ನನ್ನು ನಾನೇಎಂದಾದರೊಮ್ಮೆನಿನ್ನನ್ನು ಪ್ರೇಮಿಸಿದ ತಪ್ಪಿಗೆಬೆಂದುರಿದ ಗುರುತು ಸಿಗದಂತೆನಿಚ್ಚಳವಾಗಿಕೊನೆಗಾಣಿಸಿಕೊಳ್ಳುತ್ತೇನೆಅದೇ ಇದ್ದಿಲಿನ ಹಾಗೆ…! ಪ್ರಶಾಂತ್ ಬೆಳತೂರು

ಪ್ರಶಾಂತ್ ಬೆಳತೂರು ಅವರ ಕವಿತೆ ” ಇದ್ದಿಲು ಮತ್ತು ಪ್ರೇಮ” Read Post »

ಕಾವ್ಯಯಾನ

ಜ್ಯೋತಿ ಮಾಳಿ ಅವರ ಗಜಲ್

ಕಾವ್ಯ ಸಂಗಾತಿ ಜ್ಯೋತಿ ಮಾಳಿ ಗಜಲ್ ಉಕ್ಕಿಹೋದ ಹಾಲು ಹೆಕ್ಕಿ ತೆಗೆಯುವುದು ಹೇಗೆಮಿಕ್ಕಿ ಹೋದ ಕಾಲ ಹೊಕ್ಕು ಬಗೆಯುವುದು ಹೇಗೆ ಸವಿಸವಿ ಕ್ಷಣಗಳ ಚಿಕ್ಕ ಪಾಲೂ ಇಲ್ಲವೆಸವಿಯದ ಸಿಹಿಯನು ನೆಕ್ಕಿ ಜಗಿಯುವುದು ಹೇಗೆ ಹಾಲೆರೆದು ಹಾವಿನ ಜೊತೆಯಲಿ ನಡೆದಿದೆ ಸರಸವಿಧಿ ಕೊಟ್ಟ ವಿಷವನು ಮುಕ್ಕಿ ಉಗಿಯುವುದು ಹೇಗೆ ಬೆಂಕಿಕಡ್ಡಿ ಮಕ್ಕಿನಲಿ ಅಡಗಿ ಕಾದಿದೆ ಕಿಡಿದಕ್ಕದ  ಪ್ರೀತಿಯನು ತಿಕ್ಕಿ ಮೊಗೆಯುವುದು ಹೇಗೆ ಸಾರಾಯಿ ಕುಡಿದ ಮಂಗನಂತಾಗಿದೆ ಮನವುಹಕ್ಕಿ ರೆಕ್ಕೆ ಬೀಸಿ ಸೊಕ್ಕಿ ನೆಗೆಯುವುದು ಹೇಗೆ ಬೇಡೆಂದರೂ ಕಾಡಿವೆ ಅರಿವಿನ ಘಳಿಗೆಗಳುಕಹಿ ಕಹಿ ನೆನಪುಗಳ ಕಕ್ಕಿ ಹುಗಿಯುವುದು ಹೇಗೆ ಕಲ್ಲು ಕುಕ್ಕಿ ಜ್ಯೋತಿಯ ಕೊಕ್ಕು ರಗುತಾಗಿದೆಬದುಕಿನ ಭವಣೆಗಳ ಲೆಕ್ಕ ಮುಗಿಯುವುದು ಹೇಗೆ  ಜ್ಯೋತಿ ಮಾಳಿ ಬೆಳಗಾವಿ

ಜ್ಯೋತಿ ಮಾಳಿ ಅವರ ಗಜಲ್ Read Post »

You cannot copy content of this page

Scroll to Top