ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಡಾ.ವೈ.ಎಂ ಯಾಕೊಳ್ಳಿ ಅವರ ಕವಿತೆ “ನಾವಂದುಕೊಂಡಂತಲ್ಲ….”

ಕಾವ್ಯ ಸಂಗಾತಿ ಡಾ.ವೈ.ಎಂ ಯಾಕೊಳ್ಳಿ “ನಾವಂದುಕೊಂಡಂತಲ್ಲ….” ನಾವಂದಂತೆಬದುಕಲಾಗದಾದಾಗ‌ಬದುಕು ಬಂದಂತೆಬದುಕಬೇಕು ನಮ್ಮ ಆಸೆಗಳಿಗೆಅವಕಾಶವಿಲ್ಲದಾಗಜಗತ್ತಿ ಆಸೆಗಳ ಜೊತೆನಾವು ಸಾಗಬೇಕು ನಮ್ಮಿಚ್ಛೆಗಳನಷ್ಟೇಪೂರೈಸಲೆಂದು ಬಂದಿಲ್ಲಎಲ್ಲರಿಗೂ ತುಸುಸಮಯವಿತ್ತು ಕಾಯಬೇಕು ಜಗವು ಸ್ಪರ್ಧೆಯಕಣವಷ್ಟೇ ಅಲ್ಲಹೊಂದಾಣಿಕೆಯೂಬಾಳಿನ ಸೂತ್ರವಾಗಬೇಕು ಎಲ್ಲ ನಾನೆ ಗೆಲ್ಲಲಿಎನ್ನುವದು ಸರಿಯಲ್ಲಕೆಲವೊಮ್ಮೆ ನಾವೂ ನೂಸೋಲಿನ ಸವಿಯಅನುಭವಿಸಬೇಕು ಡಾ.ವೈ.ಎಂ‌.ಯಾಕೊಳ್ಳಿ

ಡಾ.ವೈ.ಎಂ ಯಾಕೊಳ್ಳಿ ಅವರ ಕವಿತೆ “ನಾವಂದುಕೊಂಡಂತಲ್ಲ….” Read Post »

ನಿಮ್ಮೊಂದಿಗೆ

ಮಹಾಂತೇಶ್.ಬಿ.ನಿಟ್ಟೂರು ಅವರ ಕವಿತೆ “ಅರಿವಿನ ಅರಿವೆ ಕೊಳಕಾದೊಡೆ”

ಕಾವ್ಯ ಸಂಗಾತಿ ಮಹಾಂತೇಶ್.ಬಿ.ನಿಟ್ಟೂರು “ಅರಿವಿನ ಅರಿವೆ ಕೊಳಕಾದೊಡೆ” ತಡವಾಗಿಯಾದರೂ ಬೆಳಕು ಹರಿದಿದೆ;ಎಚ್ಚರಗೊಳ್ಳದ ಮಬ್ಬು ಜನಗಳೇಎದ್ದೇಳಿ ಬೇಗ ಎದ್ದೇಳಿ… ಸೂರ್ಯನು ಬಂದು ಬೈದಾನುಚಂದ್ರನು ಕೆರಳಿ ಕೆಂಡವಾದಾನುಇಂದ್ರನು ಶಾಪ ಕೊಟ್ಟಾನು! ಅರಿವಿನ ಅರಿವೆ ಕೊಳಕಾಗಿಸ್ನಾನ ಮಾಡುವುದನ್ನು ಮರೆತರೆಬತ್ತಿ ಹೋದೀತು ಹೊಳೆಸಾಲು,ಒತ್ತುವರಿಯಾಗಿದೆ ಕೆರೆಯ ಬಯಲುಎದ್ದೇಳಿ ಬೇಗ ಎದ್ದೇಳಿ ಚರಂಡಿಯಲ್ಲಿ ಹುಟ್ಟಿ ಬೆಳೆದಸೊಳ್ಳೆಗಳಾಗದಿರಿಹಂದಿಗಳಂತೆ ಹೊರಳಾಡಿ ಗಬ್ಬು ನಾತ ಹೊಡೆಯದಿರಿ ಕಂಬಕ್ಕೆ ಕಟ್ಟಿದ ಹುಲ್ಲು ತಿನ್ನುತಮುಲಾಜಿಗೆ ಬಲಿಯಾಗುವಕುರಿಗಳಾಗದಿರಿಹೊಂಚು ಹಾಕಿ ಸಂಚು ಹೂಡುವನರಿ, ತೋಳಗಳಿಗೆ ಆಹಾರವಾಗದಿರಿ ಬೀಜ ಮೊಳಕೆಯೊಡೆದುಬೆಳೆಯುವುದು ನಿಲ್ಲಿಸಿಲ್ಲಅನಂತಾನಂತ ಅಂಬರದಲ್ಲಿಹಕ್ಕಿಗಳ ಹಾರಾಟಕ್ಕೆ ಅಡ್ಡಿಯಿಲ್ಲಗಾಳ ಹಾಕಿದರೂ, ಬಲೆ ಬೀಸಿದರೂಮೀನುಗಳು ಈಜುವುದನ್ನು ಬಿಟ್ಟಿಲ್ಲ ಪ್ರಕೃತಿ ಬೋಧಿಸುವ ಪಾಠ ಕಲಿತುಸಕಲ ಜೀವಾತ್ಮರಿಗೆ ಲೇಸನ್ನು ಬಯಸಿವಿಶ್ವಮಾನವ ಸಂದೇಶ ಸಾರುವಈಗಲಾದರೂ ಎದ್ದೇಳಿ ಬೇಗ ಎದ್ದೇಳಿಅರಿವಿನ ಅರಿವೆ ಕೊಳಕಾಗದಂತೆನೋಡಿಕೊಳ್ಳಿ….. ಮಹಾಂತೇಶ್.ಬಿ.ನಿಟ್ಟೂರು,       

ಮಹಾಂತೇಶ್.ಬಿ.ನಿಟ್ಟೂರು ಅವರ ಕವಿತೆ “ಅರಿವಿನ ಅರಿವೆ ಕೊಳಕಾದೊಡೆ” Read Post »

ಕಾವ್ಯಯಾನ

ಪರವಿನಬಾನು ಇ. ಯಲಿಗಾರ ಅವರ ಕವಿತೆ “ನೀನು ನೀನೇ”

ಕಾವ್ಯ ಸಂಗಾತಿ ಪರವಿನಬಾನು ಇ. ಯಲಿಗಾರ “ನೀನು ನೀನೇ” ಏನೆಂದು ಬಣ್ಣಿಸಲಿ ನಿನ್ನ ….?ಹೇಗೆಲ್ಲ ವರ್ಣಿಸಲಿ ನಿನ್ನ  ….? ಸೂರ್ಯನೆನ್ನಲೇ ? ಅಬ್ಭಾ ! ಕಡು ಕೋಪದಲ್ಲಿ ಸುಡುವವನು ,ಇರುಳಲಿ ಮರೆಯಾಗುವವನ ನಿನಗೆ  ಹೇಗೆ ಹೋಲಿಸಲಿ ,ತಂಪೆರೆಯುವ ಶೀತಲ ತಂಗಾಳಿ ನೀ ,ಎಂದೂ ಮರೆಯಾಗದ  ಬಂಧು ನೀ ….. ಚಂದ್ರನೆನ್ನಲೇ ? ಅಯ್ಯೋ ! ಅವನಿಗೂ ಗ್ರಹಣ ಬಾಧಿಸುವುದಲ್ಲ ,ಅಮವಾಸ್ಯೆಯಲಿ ಮಂಕು ಕವಿಯುವವನ ನಿನಗೆ ಹೇಗೆ ಹೋಲಿಸಲಿ ? ಕಲೆಗಳೇ ಇಲ್ಲದ ಶುಭ್ರ ಶ್ವೇತ ಮನಸಿಜ ನೀ ,ಸದಾ ಪಾದರಸ  …. ಸಾಗರವೆನ್ನಲೇ ? ಛೇ ! ಅದು ಉಕ್ಕುವುದು ನಿಷ್ಕರುಣಿಯಂತೆ , ಕೆಲವೊಮ್ಮೆ ಕೆರಳುವುದುರುದ್ರನಂತೆ  . ಹೇಗೆ ಹೋಲಿಸಲಿ ? ಶಾಂತ ಸಿಹಿ ನೀರಿನ ಸರೋವರ ನೀ , ಎಲ್ಲರನೂ ಪೊರೆದು ಪಾವನಗೋಳಿಸುವ ,ಅಂತರ್ಜಲ ನೀ …. ಗಾಳಿ ಎನ್ನಲೇ ? ಅಬ್ಬಬ್ಬಾ ! ನೋಡನೋಡುತ್ತಿದ್ದಂತೆ ಬಿರುಗಾಳಿ ,ಸುಂಟರ ಗಾಳಿಯಾಗಿ ಉಸಿರೇ ಕಸಿಯುವುದು  , ಹೇಗೆ ಹೋಲಿಸಲಿ ? ನೀ ದೇಹದೊಡನಾಡುವ ,ಹೃದಯ ಮಿಡಿಯುವ , ಜೀವ ನೀಡುವ ಉಸಿರು  ನೀ …. ಹೂ ಎನ್ನಲೇ ? ಪಾಪ ! ಅದು ಮುದುಡಿ ಬಾಡುವುದು ಸಂಜೆಗೆ , ಅಲ್ಪಾಯುಷಿಯಾದ ಅದಕೆ ಹೇಗೆ ಹೋಲಿಸಲಿ ? ನೀ ಚೀರಂಜೀವಿ ,ನಿತ್ಯ ನೂತನ ನಿನ್ನ ಜೀವನ  , ಬಾಡದ , ಬತ್ತದ ಅನುರಾಗದ ಸುಧೆ ನೀಯುವೆ ನೀ…… ಅಂಬರವೆನ್ನಲೇ ? ಛೇ ! ಒಂದು ದಿನಕ್ಕೆ ಹಲವು ಬಣ್ಣ ಬದಲಿಸುವುದು ,  ಕಣ್ಣಿಗೆ ಕಂಡರು ವಿಸ್ಮಯದಂತೆ ಕಾಡುವುದು , ಹೇಗೆ ಹೋಲಿಸಲಿ ?  ಎಂದೆಂದೂ ಒಂದೇ ಬಣ್ಣ , ನಿತ್ಯ ಸತ್ಯ ನೀ ….. ಯಾವ ಹೋಲಿಕೆಗೂ ಸಿಗದ , ಯಾವ ವರ್ಣನೆಗೂ ನಿಲುಕದ ನೀನು , ನೀನಾಗಿರು , ಬೇಡ ನಿನಗೆ ಯಾವ ಉಪಮಾನ , ಉಪಮೆಯ . ವರ್ಣನಾತೀತ ನೀ …… ಪರವಿನಬಾನು ಇ. ಯಲಿಗಾರ

ಪರವಿನಬಾನು ಇ. ಯಲಿಗಾರ ಅವರ ಕವಿತೆ “ನೀನು ನೀನೇ” Read Post »

ಕಾವ್ಯಯಾನ

ಡಾ ಡೋ ನಾ ವೆಂಕಟೇಶ ಅವರ ಕವಿತೆ “ಬಾಯಲ್ಲಿಯ ಅಕ್ಕಿ ಕಾಳು”

ಕಾವ್ಯ ಸಂಗಾತಿ ಡಾ ಡೋ ನಾ ವೆಂಕಟೇಶ “ಬಾಯಲ್ಲಿಯ ಅಕ್ಕಿ ಕಾಳು” ತಥಾಕಥಿತ ದೊಡ್ಡಣ್ಣ ದೂರದೇಶದಿಂದಲೇ ಕಳುಹಿದ ತನ್ನೆಲ್ಲ ಅಷ್ಟೈಶ್ವರ್ಯದ ಶಸ್ತ್ರಾಸ್ತ ಸಾಮರ್ಥ್ಯ ತನ್ನ ನೆಲ ತಣ್ಣಗಿರಲಿಬೇರೆಯವನ ನೆಲ ಜಲ ವಾಯುಗಳು ವಿಷಾನಿಲಗಳಾಗಲಿ, ಉರಿಯುತಿರಲಿ ಸದಾ. ತಾ ಮಾತ್ರ ಹೊಂದಬೇಕು ಮಾರಕಾಸ್ತ್ರ ಅಣ್ವಸ್ತ್ರಅವನಿಗೇಕೆ ಬೇಕು ಈ ಅಶ್ವತ್ಥಾಮಾಸ್ತ್ರ ದೊಡ್ಡಣ್ಣ ನಾನೇ ನಾನೇದುರ್ಯೋಧನನೇ ಅಂದವನು. ಇಬ್ಬರೂ ಮೂರ್ಖರುಇಬ್ಬರೂ ದುರ್ಬುದ್ಧಿಯವರುಇಬ್ಬರಿಗೂ ಹೇಳ ಬಹುದುವಿನಾಶ ಕಾಲೇ ವಿಪರೀತ ಬುದ್ಧಿಃ ಅಡಕತ್ತರಿಯಲ್ಲಿರುವ ನಾವುಇಹ ಪರಗಳ ನೆನೆವವರು ಡಾ ಡೋ ನಾ ವೆಂಕಟೇಶ

ಡಾ ಡೋ ನಾ ವೆಂಕಟೇಶ ಅವರ ಕವಿತೆ “ಬಾಯಲ್ಲಿಯ ಅಕ್ಕಿ ಕಾಳು” Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ- ಒಂಭತ್ತು ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಭಾಗ- ಒಂಬತ್ತುಜಯದೇವಿ ತಾಯಿಯ ಜೀವನ ವೃತ್ತಾಂತ   ಜಯದೇವಿ ತಾಯಿಯವರ ಒಂದು ಅಪೂರ್ಣ ಕನಸು ……ನನಸಾಗಿತ್ತು…!!ಕಷ್ಟ ಕಾರ್ಪಣ್ಯಗಳನ್ನು ಮೌನವಾಗಿ ಸಹಿಸುತಮನದಾಳದ ಕಿಚ್ಚಿನಲಿ ಮಂಥನಗೊಂಡು ಉಲ್ಬಣಗೋಳ್ಳುತ್ತಿದ್ದ ಭಾವನೆಗಳನ್ನು ಮೊದಲ ಬಾರಿಗೆ ಕನ್ನಡ ಭಾಷೆಲ್ಲಿ ಬರೆದಾಗ ಆದ ಆನಂದ ಹೇಳತಿರದಾಗಿತ್ತು…..,!!.  ಕನ್ನಡ ನುಡಿಗಳು ಅವರಿಗೊಂದು ಹೊಸ ಲೋಕದ ಬಾಗಿಲು ತೆರೆದವು. ವರ್ಷಗಳ ಕಾಲ ಮನದೊಳಗೆ ಸಂಗ್ರಹವಾಗಿದ್ದ ನಿಶ್ಶಬ್ದ ನೋವುಗಳು,  ಪ್ರಾರ್ಥನೆಗಳು,ಮಾತನಾಡಲಾಗದ ಮಾತುಗಳು  ಪದಗಳಾಗಿ ಹರಿಯಲಾರಂಭೀಸಿದವು….!! ಅವರು ಕನ್ನಡವನ್ನು ಅಪ್ಪಿಕೊಂಡದ್ದು ಕೇವಲ ಕಲಿಕೆಯ ಕಥೆಯಲ್ಲ,ಇದು ಸಾಹಿತ್ಯ ಲೋಕದ ವಿಜಯಗಾಥೆ! ಹೊಸ ಬೆಳಗಿನ ಉದಯ ಗಾಥೆ..!!  ಕನ್ನಡ ಭಾಷೆಯನು ಗಾಢವಾಗಿ ಪ್ರೀತಿಸುತ್ತ….ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ನಡೆದರು ಕರ್ನಾಟಕ ವಿಶ್ವವಿದ್ಯಾಲಯವೇ ಅವರ ಬಳಿ ಬಂದು ಡಾಕ್ಟರೇಟ್ ಪದವಿಯನ್ನು ಕೊಡಮಾಡಿತು. ಸರ್ವಜ್ಞ ನಂತರ ಪ್ರಥಮ ಬಾರಿಗೆ ತ್ರಿಪದಿಯಲ್ಲಿ ಪುರಾಣವನ್ನು ನಿರ್ಮಿಸಿದರು… ಕನ್ನಡ ಸರಸ್ವತ ಲೋಕದ ಅನಘ್ನ ರತ್ನರಾಗಿ ಖ್ಯಾತಿ ಪಡೆದುಕೊಂಡವರು. ಕನ್ನಡ ಭಾಷೆಯನ್ನು ಕಲಿತ ಜಯದೇವಿ ತಾಯಿಯವರು ಅತ್ಯಂತ ವೇದಾವಿ ಭಾಷಣಕಾರ್ತಿಯಾಗಿ ಹೊರಹೊಮ್ಮಿದರು. ನಾಡಿನ ಮೂಲೆ ಮೂಲೆಗಳಿಂದ ಸುತ್ತಮುತ್ತಲು ಹಳ್ಳಿಗಳಿಂದ ಅವರಿಗೆ ಅವ್ಹಾನ ಬರಲು ಆರಂಭಿಸಿತು . ತಮ್ಮ ಮಾತುಗಳಿಂದ ಜನರ ಮನವನ್ನು ಪರಿವರ್ತಿಸಲಾರಂಭಿಸಿದರು. ಜೊತೆ ಜೊತೆಗೆಪತಿ ಮತ್ತು ಅತ್ತೆ ಸಂತಸದಿಂದ ಸಹಕರಿಸಲಾರಂಭಿಸಿದರು.  ಸರಸ್ವತಿ ಮಂದಿರ ಸ್ಥಾಪನೆಯೊಂದಿಗೆ ಸ್ತ್ರೀಯರಿಗೆ ಶಿಕ್ಷಣ ಕೊಡಲು ಸೊಲ್ಲಾಪುರದಲ್ಲಿ ಪ್ರಾರಂಭಿಸಿದ್ದು.. ಅದು ಮಂದಗತಿಯಲ್ಲಿ ನಡೆದಿತ್ತು….ಆದರೆ ಜಯದೇವಿ ತಾಯಿಯವರು ಅಧ್ಯಕ್ಷತೆಯನ್ನು ವಹಿಸಿದ ಮೇಲೆ ಮೊದಲು ಸ್ತ್ರೀ ಶಿಕ್ಷಣದ ಅವಶ್ಯಕತೆಯನ್ನು ಹೆಚ್ಚು ಒತ್ತು  ಕೊಡಲಾರಂಭಿಸಿದರು. ಅವರ ದೃಷ್ಟಿಯಲ್ಲಿ ಶಿಕ್ಷಣವೆಂದರೆ *ಒಂದೆರಡು ಭಾಷೆಗಳನ್ನು ಮಾತನಾಡಲು ಕಲಿಯುವುದು ಮಾತ್ರವಲ್ಲ ನಿತ್ಯ ಜೀವನದಲ್ಲಿ ಉಪಯೋಗವಾಗುವಂತಹ ಗೃಹ ಜ್ಞಾನ..ಸಾಯನ್ಯಕಲಿಕಯೊಂದಿಗೆ …,ಉಚ್ಚ ಶಿಕ್ಷಣವು ಮಹಿಳೆಗೆ ಸಿಗಬೇಕು. ಇಂಗ್ಲೀಷರು ತಮ್ಮ ಅನುಕುಲಕ್ಕೆ ಹಾಕಿದ ಗಿಳಿ ಪಾಠದ ಪದ್ಧತಿಯ ಶಾಲೆ ಬದಲಾಗಬೇಕು. ಸುಸಂಸ್ಕೃತ ಜೀವನ ನಡೆಸುವಂತಹ  ಶಿಕ್ಷಣ ಸಿಗಬೇಕು. ಜೀವನದ ಎಲ್ಲಾ ಹಂತಗಳ ಅಧ಼ಃಪತನಕ್ಕೆ ಕಾರಣವಾದ ಅಜ್ಞಾನವನ್ನು ಹೊಡೆದು ಓಡಿಸಲು …..ಸಾಕ್ಷರತೆಯ ಅಸ್ತ್ರದಿಂದಲೇ  ಸಾಧ್ಯ. ಹಸಿರು ಕ್ರಾಂತಿ ಹೊಟ್ಟೆಯ ಹಸಿವನ್ನು ಹಿಂಗಿಸಿದರೆ ಅಕ್ಷರದ ಕ್ರಾಂತಿಯು ಬುದ್ಧಿ ಹಸಿವನ್ನು ಅಡಗಿಸುವದೆಂದು*ಅಭಿಪ್ರಾಯ ಪಡುತ್ತಿದ್ದರು. 1930ರ ಸಮಯದಲ್ಲಿ ಸೊಲ್ಲಾಪುರದ ಕೋರ್ಟ್ ಮಾರ್ಷಲ್ ನಡೆದಿತ್ತು… ಹಲವಾರು ಜನರು ಬ್ರಿಟಿಷರ ಗುಂಡಿಗೆ ಬಲಿಯಾಗಿದ್ದರು. ಇದರಲ್ಲಿ ಮಹಿಳೆಯರು ಸೇರಿದ್ದರು. ಎಲ್ಲಿ ನೋಡಿದರಲ್ಲಿ ಅಸಹಕಾರ ಚಳುವಳಿಗೆ ಸಂಬಂಧಿಸಿದ ಗಲಭೆ ನಡೆದಿದ್ದವು ‌. ಇಬ್ಬರು ಪೊಲೀಸರು ಹತರಾಗಿದ್ದರೆಂದರೆ ಕೇಳಬೇಕೆ.,… ಬ್ರಿಟಿಷರ ಕ್ರೌರ್ಯವೂ  ಹೇಳತೀರದಾಗಿತ್ತು . ಧನಶೆಟ್ಟಿ ಹಾಗೂ ಇನ್ನು ಮೂರು ಜನರ ಮೇಲೆ ಮೊಕದಮೆ ಹುಡಿ ಗಲ್ಲಿಗೆರಿಸಲಾಗಿತ್ತು.ಈ ಶಿಕ್ಷೆಯನ್ನು ವಿರೋಧಿಸಿ ಪುಣೆ ಮುಂಬೈ, ಕನ್ನಡ ನಾಡಿನಲ್ಲಿಯೂ ಪ್ರತಿಭಟನೆಗಳು, ಉಪವಾಸ ಸತ್ಯಾಗ್ರಹಗಳು ನಡೆದಿದ್ದವು. ಈ ಹೋರಾಟಗಳಲ್ಲಿ ಜಯದೇವಿ ತಾಯಿಯವರ ತಾಯಿ ಸಂಗವ್ವನ ಜೊತೆ  ತಾಯಿಯವರು ಬೆಂಬಲಿಸಿ ಉಗ್ರವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 1932 ರಲ್ಲಿ ಬ್ರಿಟಿಷ್ ಸೈನಿಕರು ರಾಷ್ಟ್ರಧ್ವಜವನ್ನು ಅಪಮಾನಿಸಿದ್ದರಿಂದ ದ್ವಜ ಸತ್ಯಾಗ್ರಹ ನಡೆದು ಅಲ್ಲಿ ದೇಶದ ವಿವಿಧ ಪ್ರಾಂತಗಳ ಜನರು ಸೇರಿದ್ದರು ಅಲ್ಲಿ ನಡೆದ ಗಲಿಬಿಯಲ್ಲಿ ನೂರಾರು ಜನ ಕನ್ನಡಿಗರು ಬಂದಿತ್ತರಾಗಿದ್ದರು.  ಈ ಸಂಘಟನೆಯು ಆರಂಭದಲ್ಲಿ ಹೆಚ್ಚಾಗಿ ಪುರುಷರೇ ಪಾಲ್ಗೊಳ್ಳುತ್ತಿದ್ದು ರಾಷ್ಟ್ರದ ಹಿತಕ್ಕಾಗಿ ಹೋರಾಡುವ ಮಹಿಳೆಯರಿಗೆ ಒಂದು ನಿರ್ದಿಷ್ಟವಾದ ಸಂಘಟನೆ ಇರ್ಲಿಲ್ಲ ನಂತರ ಮಹಿಳೆಯರನ್ನು ಸಂಘಟನೆಯಲ್ಲಿ ಸೇರಿಸಿಕೊಳ್ಳಲು ಜಯದೇವಿತಾಯಿ ಹಾಗೂ ಇನ್ನಿತರರು ರಾಷ್ಟ್ರೀಯ ಚಳುವಳಿ ತರಬೇತಿ ನೀಡುವ ಗುರಿಯನ್ನು ವಿಸ್ತರಿಸಿದರು . 1934ರಲ್ಲಿ ವೀರಶೈವ ಸಾಹಿತ್ಯ ಸಭೆಯ ಅಧ್ಯಕ್ಷಣೆಯಾಗಿ ಹೋದರು. 1939 ರಲ್ಲಿ ಜಯದೇವಿ ತಾಯಿಯವರು ವೀರಶೈವ ಮಹಾಸಭೆಯ ಮಹಿಳಾ ಪರಿಷತ್ತಿನ ಅಧ್ಯಕ್ಷರಾದರು 1938 ರಲ್ಲಿ ಜಯದೇವಿ ತಾಯಿಯವರು ಸೊಲ್ಲಾಪುರ .ಹುಬ್ಬಳ್ಳಿ ಧಾರವಾಡಗಳಲ್ಲಿ ಅಕ್ಕನ ಬಳಗವನ್ನು ಸ್ಥಾಪಿಸಿದರು ಆ ಮೂಲಕ ಶರಣರ  ವಿಚಾರಧಾರೆಯನ್ನು ಜನಮನಕ್ಕೆ ಮುಟ್ಟಿಸುವ ಕೆಲಸ ಪ್ರಾರಂಭಿಸಿದರು. ಶರಣರ ಸಾಹಿತ್ಯಕ್ಕೆ ತಮ್ಮನ್ನು ತಾವು  ಅರ್ಪಿಸಿಕೊಳ್ಳುತ್ತಾ ಸಮಾಜದವರೊಂದಿಗೆ ಅದನ್ನು ತಿಳಿಹೇಳುತ್ತ ಅನುಭವ ಪಥದಲ್ಲಿ ಸಾಗಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯರ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ಅವರಿಗೆ ರಾಷ್ಟ್ರದ ಆಗು-ಹೋಗುಗಳ ಅರಿವು ಮೂಡಿಸಿ  ರಾಷ್ಟ್ರೀಯತೆಯನ್ನು ಉತ್ತೇಜಿಸಲು ಅನೇಕ ಸಂಘ ಸಂಸ್ಥೆಗಳು ಹುಟ್ಟಿಕೊಂಡವು. ಜಯದೇವಿಯವರು ಮಹಿಳೆಯರ ಹೋರಾಟಕ್ಕೆ ಬೆಂಬಲಿಸಲು 1947ರಲ್ಲಿ ತಮ್ಮ ಮನೆಯಾದ ಜಯನಿಕೀತನದಲ್ಲಿ ಸೇವಾ ದಳದ ಪ್ರೌಢ ಶಾಖೆಯನ್ನು ಆರಂಭಿಸಿದರು.  ಎರಡನೆ ಮಹಾ ಯುಧ್ಧದ ಸಂದರ್ಭದಲ್ಲಿ ಬ್ರಿಟಿಷರಿಗೆ ಸೈನಿಕರ ಅವಶ್ಯಕತೆ ಎದುರಾದಾಗ ದೇಶದಾದ್ಯಂತ ಬೆಟಾಲಿಯನ್ ಕಟ್ಟಲು ಜನರನ್ನು ಮತ್ತು ಪ್ರಮುಖರನ್ನು ಪ್ರೋತ್ಸಾಹಿಸುತ್ತಿದ್ದರು. ಇದರ ಪರಿಣಾಮವಾಗಿ ವಾರದ ಮಲ್ಲಪ್ಪನವರಿಗೆ ರಾವ್ ಬಹದ್ದೂರ್ ಪದವಿ ಕೊಟ್ಟರೆ….ಮಡಿಕೆ ಚನ್ನಬಸಪ್ಪನವರಿಗೆ ಮ್ಯಾಜಿಸ್ಟ್ರೇಟ್ ಪದವಿಯನ್ನು ಕೊಟ್ಟರು. ಸೊಲ್ಲಾಪುರದಲ್ಲಿ ಲಿಂಗಾಯತರು ಹೆಚ್ಚು ಇರುವುದರಿಂದ ಲಿಂಗಾಯತ ಬೆಟಾಲಿಯನ್ ಕಟ್ಟಲು ಪ್ರೇರೇಪಿಸಿದರು ಬ್ರಿಟಿಷರು .ಅಲ್ಲಿಯ ಸ್ಥಳೀಯ ಮುಖಂಡರಾದ ವಾರದ, ಮಡಕಿ ಲಿಗಾಡೆ,ತಂಬಾಕಿ ಮನೆತನಗಳ ಮೇಲೆ ಒತ್ತಾಯ ಬೀರಲು ಪ್ರಯತ್ನಿಸಿದರು.  ಅದೇ ರೀತಿಯಾಗಿ ಲಿಗಾಡೆ ಅವರ ಆಸ್ತಿಯ ಮೇಲೆ ಋಣ ಭಾರ ಹೇರಿದ್ದೇವೆಂದು ಇದಕ್ಕಾಗಿ ಜಯದೇವಿ ತಾಯಿಯವರು ತಮ್ಮ ಕೆಲಸಕ್ಕೆ ಸಹಕರಿಸಬೇಕೆಂದು ಕೇಳಿಕೊಂಡರು.ಅಂದಿನ ದಿನಗಳಲ್ಲಿ ಪ್ರಭಾವಿ ಭಾಷಣ ಕಾರ್ತಿ ,ಪ್ರಸಿದ್ಧ‌ಸಮಾಜ ಸೇವೆವಕಿಯಾದ ತಾಯಿಯವರು ಲಿಂಗಾಯತರನ್ನು ಇಂಗ್ಲಿಷ್ ಸೇನಾ ಪಡೆಗೆ ಸೇರಿಸಲು ಹುರಿದುಂಬಿಸುವಂತೆ ಭಾಷಣ ಮಾಡಲು ಕೇಳಿಕೊಂಡರು…… ಬ್ರಿಟಿಷ್ ಸರ್ಕಾರವು ಪತಿ ಚೆನ್ನಮಲ್ಲಪ್ಪ ಲಿಗಾಡೆ ಅವರಿಗೆ ವ್ಯಾಪಾರದ ಋಣಭಾರ ಕಡಿಮೆ ಮಾಡುವುದಾಗಿ  ಆಮಿಷೆ ಒಡ್ಡಿತು….  ಪತ್ನಿ ಜಯದೇವಿ ತಾಯಿಯವರು ಲಿಂಗಾಯೆತರನ್ನು ಬ್ರಿಟಿಷ್ ಸೈನ್ಯಕ್ಕೆ ಸೇರುವಂತೆ ಪ್ರಯತ್ನಿಸುವಂತೆ ಕೇಳಿಕೊಂಡರು….. ಕೊನೆಗೆ ಲಿಂಗಾಯೆತರನ್ನು ಸಂಘಟಿಸಲೇಬೇಕೆನ್ನುವ   ಆದೇಶವಿತ್ತರು ..!!!!  ಚನ್ನಮಲ್ಲಪ್ಪನವರಿಗೆ ಚೆನ್ನಾಗಿ ಗೊತ್ತಿತ್ತು ….. ಬಲಾಡ್ಯ ಬ್ರಿಟಿಷರ ವಿರುದ್ಧ ಹಾಕಿಕೊಳ್ಳುವುದರಲ್ಲಿ ಅರ್ಥವಿಲ್ಲ … ದೇಶಪ್ರೇಮವೆನೋ ನಿಜ…..ದೇಶ ಸ್ವಾಭಿಮಾನ ,ದೇಶಮಾತೆಗಾಗಿ ಬಲಿದಾನ-ತ್ಯಾಗ ಇವೆಲ್ಲ ದುಷ್ಟ ಬ್ರಿಟಿಷರ ಎದುರು ನಿರರ್ಥಕ … ಬ್ರಿಟಿಷರ ಬಲದ ಎದುರು ನಾವು ತೃಣ ಸಮಾನರು  ವಿವೇಕತನವೆಂದರೆ ನಮ್ಮ ವ್ಯಾಪಾರವನ್ನು ನಮ್ಮ ಮನೆತನವನ್ನು ಉಳಿಸಿಕೊಳ್ಳುವುದರಲ್ಲಿ ಜಾಣತನವಿರುವದು ಇಲ್ಲದ್ದಿದರೆ ಹೇಳು ಹೆಸರಿಲ್ಲದಂತೆ ನಾಶವಾಗಿ ಹೋಗುವುದು ಖಚಿತ ಅನ್ನೋದು ದೃಢವಾಗಿ ನಂಬಿದವರು….ಹೀಗಾಗಿ  ವೈಯಕ್ತಿಕ ಹಿತಾಸಕ್ತಿಯುತರಾಗಿದ್ದರು, ತನ್ನ ವ್ಯಾಪಾರದತ್ತ ಹೆಚ್ಚು ಗಮನವನ್ನು ಕೊಡುತ್ತಿದ್ದರು. ಹಾಗೆ ಜಯದೇವಿತಾಯಿಯವರಿಗೆ ಸೈನ್ಯ ಕಟ್ಟುವುದಕ್ಕಾಗಿ ಕೇಳಿಕೊಂಡಿದ್ದರು ಕೂಡಾ ಪತಿ ಚೆನ್ನಲ್ಲಪ್ಪನವರು. ಬ್ರಿಟಿಷರು ಜಯದೇವಿ ತಾಯಿಯವರಿಗೆ ಕೇಸರಿ-ಇ- ಹಿಂದ್ ಪದವಿಯನ್ನು ಕೊಡುವುದಾಗಿ ಮುಂದೆ ಬಂದರು. ಇದ್ಯಾವದಕ್ಕೂ ಅವರು ವಿಚಲಿತರಾಗಲಿಲ್ಲ. ಅದಕ್ಕಾಗಿ ದೊಡ್ಡ ಮೊತ್ತದ *ವಾರ್ ಫಂಡ*ನ್ನು ಕಟ್ಟಬೇಕಾಯಿತು. ಮನೆಯವರ ಯಾವ ಒತ್ತಡಕ್ಕೂ ಮಣಿಯದ  ತಾಯಿಯವರು ರಾಷ್ಟ್ರೀಯ ಪ್ರೇಮ ಅಚಲವಾಗಿತು.. ಬ್ರಿಟಿಷರ  ಆಮಿಷದ ಪ್ರಸ್ತಾವನೆ, ಹೊರಗೆ ನೋಡಲು ಗೌರವದ ಹೊದಿಕೆ ಹೊದ್ದಿದ್ದರೂ, ಒಳಗೆ ದೇಶದ ಏಕತೆಯನ್ನು ಕುಗ್ಗಿಸುವ ಕುಯುಕ್ತಿಯೇ ಆಗಿತ್ತು…!!ಆ ಕ್ಷಣದಲ್ಲಿ ಜಯದೇವಿ ತಾಯಿಯವರು ಮೌನವಾಗಿರಲಿಲ್ಲ.ಅವರಲ್ಲಿ ಹೊತ್ತಿ ಉರಿದದ್ದು   ರಾಷ್ಟ್ರಪ್ರೇಮದ ಜ್ವಾಲೆ.“ಕೇಸರಿ-ಇ -ಹಿಂದ್” ಎಂಬ ಹೆಸರಿನಲ್ಲಿ ಅವರ ಗುಲಾಮರನ್ನಾಗಿ ಮಾಡಿಕೊಳ್ಳುವ ಹುನ್ನಾರ ಕುತಂತ್ರ ಅರಿತವರಾಗಿದ್ದರು. ದೇಶದ ಧ್ವಜಕ್ಕೆ ತೋರುವ ಆದರವು‌  ತ್ಯಾಗದ ಸಂಕೇತ, ಧೈರ್ಯದ ಪ್ರತೀಕ, ತಾಯ್ನಾಡಿನ ಗೌರವ.ಬ್ರಿಟಿಷರು ಅಧಿಕಾರದ ಸಿಂಹಾಸನವನ್ನು ತೋರಿಸಿದರು,ಸ್ಥಾನಮಾನಗಳ ಸಿಹಿ ಮಾತುಗಳನ್ನು ಹೇಳಿದರೂ ತಾಯಿಯ ಹೃದಯಕ್ಕೆ ಕೇಳಿಸಿಕೊಂಡದ್ದು ಒಂದೇ ಶಬ್ದ —“ಭಾರತಮಾತೆಯ ಹಿತಾಸಕ್ತಿ….“ನನ್ನ ದೇಶದ ಏಕತೆಯನ್ನು ಮಸುಕುಗೊಳಿಸುವ ಯಾವ ಒಪ್ಪಂದಕ್ಕೂ ನಾನು ಸಮ್ಮತಿಸುವುದಿಲ್ಲ,”ಎಂದು ಅವರು ಅಟಲ ಧೈರ್ಯದಿಂದ ಹೇಳಿದರು. ಆ ನಿರಾಕರಣೆ ಸಾಮಾನ್ಯ ಪದವಿರೋಧವಲ್ಲ —ಅದು ಮಣ್ಣಿನ ಮಗಳು ತನ್ನ ತಾಯ್ನಾಡಿಗೆ ಕೊಟ್ಟ ಶಪಥ.ಆ ದಿನ ಅವರು ಆಮಿಷವನ್ನು ತಳ್ಳಿಹಾಕಿದಾಗ,ದೇಶಪ್ರೇಮಿಗಳು ಸಾಕ್ಷಿಯಾಗಿ ನಿಂದರು. ಅವರ ಎತ್ತಿದ ಧ್ವನಿಯಲ್ಲಿ ರಾಷ್ಟ್ರಪ್ರೇಮವು ಘೋಷವಾಗಿ ಪ್ರತಿಧ್ವನಿಸಿತು.ಅವರು ತೋರಿಸಿದ ಧೈರ್ಯ  —ನಿಜವಾದ ದೇಶಭಕ್ತಿ ….ಹೃದಯದ ಆಳದಿಂದ ಹೊರಹೊಮ್ಮುವ ನಿಷ್ಠೆ; ಧೇಶಮಾತೆಗೆ ತೋರಿದ ಗೌರವ. . *ಬ್ರಿಟಿಷರ ಇಂಥ ಆಸೆ ಆಮಿಷಕ್ಕೆ ಒಳಗಾಗದೆ ಜಾತಿಯ ಹೆಸರಿನಲ್ಲಿ ಸೇನೆ ಕಟ್ಟುವುದು ದೇಶದ ಅಹಿತಕ್ಕೆ ಕಾರಣವಾಗುವುದೆಂದು…ಯಾವುದೇ ಭೀತಿಗೂ ತಲೆಬಾಗಲಿಲ್ಲ. ಬ್ರಿಟಿಷರ ಪ್ರತ್ತಸ್ಸಾವನೆಯನ್ನು ಖಡಾಖಂಡಿತವಾಗಿ ನಿರಾಕರಿಸಿದರು . *ನಡೆಯಣ್ಣ ಇಡು ಹೆಜ್ಜೆ ಮುಂದೆ ದೃಢತನದಿಂದೆ!! ಕದಳಿಯ ಬನಹೊಕ್ಕು ಚಣ ಮಜಗಜದ ತಾಣಎದುರಿಗೆ ಬರುವದು ಕಾಡಕೋಣ ತೆಗೆಯಲು ಪ್ರಾಣ ಕದಡಿಯ ಎಂಟು ದಿಕ್ಕು ಎಂಟಾನೇಗಳ ಸೊಕ್ಕು ಕಾನನದೊಳಗೆ ಪಕ್ಕು ಮುರಿಯಬೇಕಾದರೆ ಸೊಕ್ಕುಹೀಗೆ ಬ್ರಿಟಿಷರ ಸೊಕ್ಕನ್ನು ಮುರಿಯಬೇಕು ಅನ್ನುವ ಕರೆಯನ್ನು ಸಾರ್ವಜನಿಕರಿಗೆ ಕೊಡುತ್ತಿದ್ದರು *ನಡೆದಾರಿಗೆ ಅಡ್ಡ ಬಂದಿತಣ್ಣ ಹೆಡೆ ತೆಗೆದಾಚಣ ಬಿಡುವದು ತನ್ನು ಕೆಂಪುಗಣ್ಣ ಅದುವೆ ನಾಗಣ್ಣ ನಂಜೀನ ಅಂಜಿಕೆ ಹೊಲ್ಲ ಕೆಂಜೆಡೆಯವನ ಚಲ್ವ ಸಂಜೀವನಿ ಮದ್ದು ಬಲ್ಲ ಹಿಂಜರಿಯುವುದೇಕೆ ಇನ್ನು ಹಸಿದು ಹುಲಿ ಬರುವ ದಲ್ಲಿ ತಾಯಿ, ಪಸರಿಸಿ ಬಾಯಿ ವಸುಧೆ ನಡುಗುವ ಗುಡುಗಿನ ಛಾಯೆ ಅದುವೆ ಮಹಾಮಾಯಿ ಜಯ ಸಿದ್ದರಾಮನ ಸಿದ್ದಿ ಮಂತ್ರದ ಧ್ಯಾನ ಶುದ್ಧ ಮನದಿಂದಲೇ ಸಾಧನ ಇದ್ದುಗೆದೆ ಕದಳಿಯ ಬನ* ಹಸಿದು ಬರುವ ಬ್ರಿಟಿಷರನ್ನು ಬಗ್ಗು ಬಡಿಯಲೆಂದೆ ಅಂಜದೇ ಅಳುಕದೇ ಕೆಂಜಡಿಯವನ ಸಂಜೀವಿನಿ ಮದಿನ ಮೇಲೆ ನಂಬಿಕೆ ಇಟ್ಟು ಮುಂದೆ ನಡೆ ಅಂತ ಜನರಿಗೆ ಕರೆ ಕೊಡುತ್ತಿದ್ದರು.   ಭಾರತೀಯ ಸ್ವಾತಂತ್ರ ಹೋರಾಟ ಹಾಗೂ ಇನ್ನಿತರ ಚಳುವಳಿಗಳಲ್ಲಿ ಪುರುಷರೇ ಮುಖ್ಯ ಎದುರಿಸುತ್ತ ಬಂದಿದ್ದರು .ಅವರಿಗೆ ಭೌತಿಕವಾಗಿ ಮಹಿಳೆಯರ ಬೆಂಬಲವೂ ಇದ್ದಿತು. ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಮಹಿಳೆಯರು ಅದಾಗಲೇ ಸಾಮಾಜಿಕ ಸುಧಾರಣೆ ಸ್ವಾತಂತ್ರ ಹೋರಾಟ ಶೈಕ್ಷಣಿಕ ಬೆಳವಣಿಗೆ ಹಾಗೂ ಮಹಿಳಾ ದಿನಾಚರಣೆ ಅಂತ ಕ್ಷೇತ್ರಗಳಲ್ಲಿ ಮುಖ್ಯ ವಾಹಿನಿಯಲ್ಲಿ ಬಂದಿದ್ದರು. ಇದರೊಂದಿಗೆ ಗ್ರಾಮೀಣ ಭಾಗದ ಮಹಿಳೆಯರು ಸಹ ತಮ್ಮ ಮನೆಯ ಪುರುಷರಿಗೆ  ರಾಷ್ಟ್ರೀಯ ಹೋರಾಟದಲ್ಲಿ ಪಾಲ್ಗೊಳ್ಳಲು ನೈತಿಕ ಹಾಗೂ ಭೌತಿಕ ಬೆಂಬಲವನ್ನು ನೀಡುತ್ತಿದ್ದರು.  ತಮ್ಮ ಮನೆಯವರ ಬೆಂಬಲದಿಂದ ರಾಷ್ಟ್ರೀಯ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡಿದ್ದರು .ಸ್ವಾತಂತ್ರ ಹೋರಾಟದಲ್ಲಿ ಎಲ್ಲ ವರ್ಗದ ಜನರು ಪಾಲ್ಗೊಳ್ಳಬೇಕೆಂಬುದೇ ಬಹು ಮುಖ್ಯ ಉದ್ದೇಶ ವಾಗಿತ್ತು..ಪುರುಷರು ಸೆರೆವಾಸವನ್ನು ಅನುಭವಿಸಿದಾಗ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವ ಹೊಣೆ ಮಹಿಳೆಯರ ಮೇಲಿತ್ತು .ಸತ್ಯಾಗ್ರಹ ರಚನಾತ್ಮಕ ಕಾರ್ಯಕ್ರಮಗಳು…ಚಳುವಳಿಯ ರೂಪರೇಷೆಗಳು ಮಹಿಳೆಯರ ಮನೋಬಲಕ್ಕೆ ಸೂಕ್ತವಾಗಿದ್ದು ಎಂದು ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಸಭೆಗಳನ್ನು ಕರೆಯಲು ಹೇಳುತ್ತಿದ್ದರು .ಅಂತಹ ಸಮಿತಿಗಳಲಿ ಜಯದೇವಿ ತಾಯಿಯವರು ಮುಂಚೂಣಿಯಲ್ಲಿ ಇರುತ್ತಿದ್ದರು ಈ ಚಳುವಳಿಯ ಸಂದರ್ಭದಲ್ಲಿ ಮಹಿಳೆಯರು ಗೋಖಲೆ ,ಮಾರ್ಗರೇಟ್ ಕಸಿನ್ಸ ಹಾಗೂ ಅನಿಬೆಸೆಂಟರ ಪ್ರಭಾವಕ್ಕೆ ಒಳಗಾಗಿದ್ದನ್ನು ನಾವು ಗಮನಿಸಬಹುದಾಗಿದೆ.ಬಹು ವರ್ಷಗಳಿಂದ ಮಹಿಳೆಯರು ತಮ್ಮ ಆರಂಭದ ಹೋರಾಟವನ್ನು ರಚನಾತ್ಮಕ ಕಾರ್ಯಗಳಿಗೆ ಸೀಮಿತಗೊಳಿಸಿಕೊಂಡಿದ್ದರು ನಂತರ ತಮ್ಮ ಕಾರ್ಯ ವ್ಯಾಪ್ತಿಯನ್ನು ಉಪ್ಪಿನ ಸತ್ಯಾಗ್ರಹ ಸ್ವದೇಶಿ ಚಳುವಳಿ ಮಧ್ಯಪಾನ ನಿಷೇಧ ದಂತ ಚಟುವಟಿಕೆ ವಿಸ್ತರಿಸಿದರು. ಕಾನೂನು ಭಂಗ ಚಳುವಳಿಯಲ್ಲಿ ಮಹಿಳೆಯರು ಪಾಲ್ಗೊಳ್ಳದ ಕುರಿತು ರಾಷ್ಟ್ರೀಯ ನಾಯಕ ಯೋಚಿಸುವಂತಾಯಿತು.  ಕರ್ನಾಟಕದಲ್ಲಿ  ರಾಷ್ಟ್ರೀಯ ಚಳುವಳಿಯಲ್ಲಿ ಪಾಲ್ಗೊಂಡ ಪ್ರಮುಖ ಮಹಿಳೆಯರಲ್ಲಿ ಜಯದೇವಿತಾಯಿ ಲಿಗಾಡೆಯವರು ಒಬ್ಬರು ಇವರೊಂದಿಗೆ ಹಲವು ಮಹಿಳೆಯರು ಪಾಲ್ಗೊಂಡಿದ್ದರು…… ಮುಖ್ಯವಾಗಿ ಕಮಲಾದೇವಿ ಚಟ್ಟೋಪಾಧ್ಯಾಯ, ಉಮಾಬಾಯಿ ಕುಂದಾಪುರ, ಕೃಷ್ಣ ಬಾಯಿ ಪಣಜಿ ಕರ್, ಅವರಂಥ ಮಹಿಳೆಯರು ತಮ್ಮ ಚಟುವಟಿಕೆಗಳನ್ನು ಪ್ರೆಸಿಡೆನ್ಸಿಯಾಚೆ ವ್ಯಾಪಕಗೊಳಿಸಿದರು. ಇದರಿಂದಾಗಿ ಕರ್ನಾಟಕದ ಪ್ರತಿ ಭಾಗಗಳಿಂದಲೂ ಮಹಿಳೆಯರು ಚಳುವಳಿಯಲ್ಲಿ ಭಾಗವಹಿಸಹತ್ತಿದರು ಬಳ್ಳಾರಿ ಸಿದ್ದಮ್ಮ, ನಾಗಮ್ಮ ಪಾಟೀಲ, ಸುಬ್ಬಮ್ಮಾ ಜೋಯಿಸ್, ಟಿ. ಸುನಂದಮ್ಮ, ಯಶೋದಮ್ಮ ದಾಸಪ್ಪ, ನಾಗರತ್ನಮ್ಮ ಹಿರೇಮಠ, ಪದ್ಮಾವತಿ ಬಿದರಿ, ಜಯದೇವಿತಾಯಿ ಲಿಗಾಡಿ ಶಕುಂತಲಾ ಕುರ್ತುಕೋಟಿ, ಚೆನ್ನಮ್ಮ ಹಳ್ಳಿಕೇರಿ ಇನ್ನೂ ಅನೇಕ ಮಹಿಳೆಯರು ರಾಜಕೀಯ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿ

Read Post »

ಕಾವ್ಯಯಾನ

ಡಾ‌.ಗೀತಾ ದಾನಶೆಟ್ಟಿ ಬಾಗಲಕೋಟೆ ಅವರ ಕವಿತೆ “ಒಲವಿನ ಉಡುಗೊರೆ”

ಕಾವ್ಯ ಸಂಗಾತಿ ಡಾ‌.ಗೀತಾ ದಾನಶೆಟ್ಟಿ “ಒಲವಿನ ಉಡುಗೊರೆ” ಜೀವನವೆಂಬುದುದೇವರು ಕೊಟ್ಟ ಕೊಡುಗೆಕಳೆಯುವ ಪ್ರತಿಕ್ಷಣವೂ ಒಲವಿನ ಉಡುಗೊರೆ ಹುಟ್ಟಿ ಬಂದ ಈ ಜಗಕೆಕೊಟ್ಟು ಹೋಗುವುದು ಬೆಟ್ಟದಷ್ಟಿದೆಉಣಲು ಮುದ್ದೆ,ನೆಮ್ಮದಿಯ ನಿದ್ದೆಸದ್ಗುಣಗಳಿಂದ ಗೆದ್ದು ಬೀಗಬೇಕು ಮನವೆಂಬ ವನದಲ್ಲಿಪ್ರೀತಿ, ಪ್ರೇಮ,ಪ್ರೇರಣೆಪ್ರಾಮಾಣಿಕತೆ,ಪರಿಶ್ರಮ,ಉತ್ಸಾಹದಬೀಜಗಳ ಬಿತ್ತಿ ಬೆಳೆಯಬೇಕು ಬದುಕಿನ ಪಯಣದಲಿಏರಿಳಿತಗಳನು ಸ್ವೀಕರಿಸಿಸೋಲು,ಗೆಲುವಿನ ಸೋಪಾನದಿಸಾಧನೆ ಶಿಖರವೇರಬೇಕು ಸುಖ-ದುಃಖಗಳನು ಮರೆತುಮಾನವೀಯ ಮೌಲ್ಯಗಳನರಿತುದಿವ್ಯತೆಯ ದಾರಿಯಲಿಭವ್ಯತೆಯ ಬಾಳು ಬೆಳಗಬೇಕು ಪ್ರೀತಿಸುವರೆಷ್ಟೋ,ದ್ವೇಷಿಸುವರೆಷ್ಟೋಕೆಡಿಸಿಕೊಳ್ಳದೆ ಮನದ ಮತಿವಿಶಿಷ್ಟ ವಿಚಾರ,ಆಚಾರಗಳಿಂದಅರೆಕ್ಷಣ ಅರಿತುಕೊಳ್ಳಬೇಕುಡಾ‌.ಗೀತಾ ದಾನಶೆಟ್ಟಿ ಬಾಗಲಕೋಟೆ

ಡಾ‌.ಗೀತಾ ದಾನಶೆಟ್ಟಿ ಬಾಗಲಕೋಟೆ ಅವರ ಕವಿತೆ “ಒಲವಿನ ಉಡುಗೊರೆ” Read Post »

ಕಾವ್ಯಯಾನ

ನಿರಂಜನ ನಾಯಕ ಕವಿತೆ “ಹಗೆಯ ಸುಳಿ”

ಕಾವ್ಯ ಸಂಗಾತಿ ನಿರಂಜನ ನಾಯಕ “ಹಗೆಯ ಸುಳಿ” ಮಿತಿಯನು ನಾವು ಮೀರುವುದು ಯಾವಾಗ?ಮಾನವೀಯತೆಯು ಮಣ್ಣಾದಾಗ! ಹಗೆತನಕೆ ಮುಕ್ತಿ ದೊರೆಯುವುದು ಯಾವಾಗ?ನೆತ್ತರು ಹೊಳೆಯಾಗಿ ಹರಿದಾಗ! ಯಾವ ವಿಷವೃಕ್ಷದ ಕಟುಫಲವಿದು?ಒಡಲೊಳು ದ್ವೇಷದ ಬೀಜವೇ ತುಂಬಿಹುದು. ಗಡಿಯ ಗೋಡೆಯ ಒಡೆಯುವ ಹಂಬಲವ ಬಿಟ್ಟು,ಬಂಧನ ಬಿಗಿಯಾಗುತ ಸಾಗಿಹುದು! ಮುಳ್ಳಿನ ನಡುವೆ ನಗುವ ಗುಲಾಬಿಯ,ಕಪಟದ ಒಳಮರ್ಮ ಅರ್ಥವಾಗದಿರದು! ನಿರಂಜನ ನಾಯಕ

ನಿರಂಜನ ನಾಯಕ ಕವಿತೆ “ಹಗೆಯ ಸುಳಿ” Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-113 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ಎರಡನೇ ಮಗಳು ತನ್ನ ಬಟ್ಟೆ ಬರೆ ಪುಸ್ತಕಗಳು ಹಾಗೂ ತನಗೆ ಅತ್ಯವಶ್ಯಕವಾಗಿ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಅನಾಥಾಶ್ರಮಕ್ಕೆ ಹೊರಡಲು ಅನುವಾದಳು. ಸುಮತಿ ಹಾಗೂ ಮೂರನೇ ಮಗಳು ಒಲ್ಲದ ಮನಸ್ಸಿನಿಂದ ಅವಳನ್ನು ಬೀಳ್ಕೊಟ್ಟರು.  ಏಕೋ ಮಗಳನ್ನು ಬೀಳ್ಕೊಡುವಾಗ ಸುಮತಿಯ ಮನಸ್ಸು ಬಹಳ ಭಾರವಾಯಿತು. ಏನೋ ಅವ್ಯಕ್ತವಾದ ನೋವೊಂದು ಅವಳ ಹೃದಯವನ್ನು ಹಿಂಡಿತು….”ವಾರಕ್ಕೊಮ್ಮೆ ನಾನು ಬರುತ್ತೇನೆಲ್ಲವೇ ಅಮ್ಮಾ …. ವಾರದಲ್ಲಿ ಒಂದು ದಿನ ನಿಮ್ಮ ಜೊತೆ ಕಳೆಯುತ್ತೇನೆ….ದಯವಿಟ್ಟು ನೊಂದುಕೊಳ್ಳದೆ ನಸುನಗುತ್ತಾ ನನ್ನನ್ನು ಕಳುಹಿಸಿ ಕೊಡು”…. ಎಂದು ಮಗಳು ಹೇಳಿದಾಗ, ಅವಳನ್ನು ಅಪ್ಪಿ, ಹಣೆಗೊಂದು ಹೂಮುತ್ತನ್ನು ಕೊಟ್ಟಳು. ತಂಗಿಯು ಅವಳನ್ನು ಬಿಗಿಯಾಗಿ ಅಪ್ಪಿಕೊಂಡು ಸ್ವಲ್ಪ ಹೊತ್ತು ಹಾಗೇ ನಿಂತು ಬಿಟ್ಟಳು. ಗೇಟಿನ ಬಳಿ ಡ್ರೈವರ್ ಬಂದು….”ಬಾ ಮಗು ಹೊರಡೋಣ”…. ಅಮ್ಮ ಅಲ್ಲಿ ಕಾಯುತ್ತಿದ್ದಾರೆ… ಎಂದು ಹೇಳಲು, ಮಗಳು ಅವರ ಜೊತೆ ಹೊರಟಳು. ಮೆಟ್ಟಿಲುಗಳನ್ನು ಏರುತ್ತಾ ಅಮ್ಮನನ್ನು, ತಂಗಿಯನ್ನು ನೋಡಿ ಕೈಬೀಸಿದಳು. ಮಗಳು ಹೊರಟು ಹೋದ ನಂತರ ಸುಮತಿ ಮನೆ ಒಳಗೆ ಬಂದು ಕೆಲವು ನಿಮಿಷಗಳ ಕಾಲ ಸುಮ್ಮನೆ ಕುಳಿತುಬಿಟ್ಟಳು. ಮೂರನೇ ಮಗಳು ಸುಮತಿಯ ಪಕ್ಕ ಬಂದು ಕುಳಿತು ಹೆಗಲ ಮೇಲೆ ಕೈ ಇಟ್ಟು ತಾಯಿಗೆ ಸಮಾಧಾನ ಮಾಡುವಂತೆ ಹೆಗಲನ್ನು ತಟ್ಟಿದಳು. ದಿನಗಳು ಉರುಳಿದವು. ನಾಲ್ಕನೇ ಮಗಳು ಬೇಸಿಗೆ ರಜೆಯಲ್ಲಿ ಮನೆಗೆ ಬಂದಳು.  ಅವಳು ಬಂದ ಮೇಲೆ ಮೂರನೇ ಮಗಳು ಲವಲವಿಕೆಯಿಂದ ಇರುವಂತೆ ಆಯ್ತು. ಸುಮತಿಯ ಜೊತೆ ಇಬ್ಬರೂ ಶಾಲೆಗೆ ಹೋಗುತ್ತಿದ್ದರು. ಶಾಲೆಯ ಕೆಲಸದಲ್ಲಿ ಮತ್ತು ಮನೆಯ ಕೆಲಸಗಳಲ್ಲಿ ಸುಮತಿಗೆ ಸಹಾಯ ಮಾಡುತ್ತಿದ್ದರು. ಇತ್ತೀಚೆಗೆ ಯಾಕೋ ಸುಮತಿ ಇನ್ನೂ ಹೆಚ್ಚು ಬಳಲಿದಂತೆ ತೋರುತ್ತಿದ್ದಳು. ಶನಿವಾರ ಸಂಜೆಯಾದರೆ ಬಸ್ಸು ಬರುವ ವೇಳೆಗೆ ಮಗಳನ್ನು ಕಾಯುತ್ತಾ ಗೇಟಿನ ಬಳಿ ಇರುವ ಕಲ್ಲಿನ ಮೆಟ್ಟಿಲಿನ ಮೇಲೆ ಕುಳಿತುಕೊಳ್ಳುವಳು…. “ಅಮ್ಮಾ….ಅಕ್ಕ ಇಲ್ಲಿಗೇ ಬರುತ್ತಾಳಲ್ಲವೇ?…. ಮತ್ತೇಕೆ ನೀನು ಅಲ್ಲಿ ಗೇಟಿನ ಬಳಿ ಕುಳಿತಿರುವೆ…. ಬಾ ಒಳಗೆ”…. ಎಂದರೂ ಕೇಳದೇ ಸಂಜೆಯ ಬಸ್ಸು ಬರುವುದನ್ನೇ ಕಾಯುತ್ತಾ ಕುಳಿತುಕೊಳ್ಳುವಳು. ಬಸ್ಸು ಬರುವುದು ಕೊಂಚ ತಡವಾದರೂ ಚಡಪಡಿಸುವಳು. ಎಷ್ಟು ಬೇಗ ಮಗಳನ್ನು ನೋಡುವೆನೋ ಎನ್ನುವ ಕಾತರದಲ್ಲಿ ಅವಳ ಕಣ್ಣುಗಳು ಕಾಯುತ್ತಿದ್ದವು. ಬಸ್ಸು ಬಂದು ನಿಂತ ಕೂಡಲೇ ಎದ್ದು ನಿಂತು ಜನರು ಇಳಿಯುದನ್ನೇ ನೋಡುತ್ತಾ, ಮಗಳು ಇಳಿದು ಬಂದ ಕೂಡಲೇ ಅವಳನ್ನು ಅಪ್ಪಿಕೊಂಡು ಅವಳೊಂದಿಗೆ ನಿಧಾನವಾಗಿ ಮೆಟ್ಟಿಲು ಇಳಿಯುವಳು. ಅಕ್ಕ ಬಂದಿದ್ದು ತಿಳಿದುಕೊಡಲೆ ತಂಗಿಯರು ಒಳಗಿನಿಂದ ಓಡೋಡಿ ಬಂದು ಖುಷಿಯಿಂದ ಅಕ್ಕನನ್ನು ಅಪ್ಪಿಕೊಳ್ಳುತ್ತಿದ್ದರು. ಅವಳು ಸಕಲೇಶಪುರದಿಂದ ಬರುವಾಗ ತಂಗಿಯರಿಗಾಗಿ ತಿಂಡಿ ಮತ್ತು ಅಮ್ಮನಿಗೆ ಹಣ್ಣುಗಳನ್ನು ತರುವಳು. ಅವಳು ಬಂದಳೆಂದರೆ ಮನೆಯಲ್ಲಿ ಹಬ್ಬದಂತೆ ಸಂಭ್ರಮ ಪಡುವರು.  ರಾತ್ರಿ ಎಲ್ಲಾ ನಿದ್ರೆ ಮಾಡದೆ ನಾಲ್ವರೂ ಕುಳಿತು ಮಾತನಾಡುವರು. ಅವಳ ಕೆಲಸದ ಬಗ್ಗೆ, ಅವಳ ಓದಿನ ಬಗ್ಗೆ ಕೇಳಿ ತಿಳಿದುಕೊಳ್ಳುವರು. ಇವಳು ಕೂಡ ಎಲ್ಲರ ದಿನಚರಿಗಳನ್ನು ಕೇಳಿ ತಿಳಿದುಕೊಳ್ಳುವಳು. ಅಮ್ಮ ಇತ್ತೀಚೆಗೆ ಕ್ಷೀಣಿಸುತ್ತಿರುವುದನ್ನು ಗಮನಿಸಿ….. ಏಕಮ್ಮಾ… ಏನಾಯ್ತು?… ನಾನು ನಾಡಿದ್ದು ಹೊರಡುವಾಗ ನನ್ನ ಜೊತೆ ಬನ್ನಿ…. ನಾನು ಆಸ್ಪತ್ರೆಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ…. ಎಂದರೆ, ನನಗೇನೂ ಆಗಿಲ್ಲಪ್ಪಾ…. ಸ್ವಲ್ಪ ಆಯಾಸ ಇದೆ ಅಷ್ಟೇ…, ಎಂದಿನಂತೆ ಪಥ್ಯದಲ್ಲಿದ್ದೇನೆ… ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ…. ನನಗೇನಾಗಿದೆ? ನೀವು ಮೂವರೂ ನನ್ನ ಜೊತೆ ಇದ್ದರೆ ಅದೇ ನನಗೆ ಸ್ವರ್ಗ…. ಅದಕ್ಕಿಂತ ಹೆಚ್ಚಿನದು ನನಗೇನು ಬೇಡ…. ಎನ್ನುವಳು ಸುಮತಿ. ಅವಳ ತಂಗಿ….ಹೌದು ಅಕ್ಕ… ಅಮ್ಮ ಈ ನಡುವೆ ಮೊದಲಿನಂತೆ ಲವಲವಿಕೆಯಿಂದ ಇಲ್ಲ….ಯಾಕೋ ತುಂಬಾ ಆಯಾಸವಾದಂತೆ ಕಾಣಿಸುತ್ತಾರೆ…. ಶಾಲೆಗೆ ಹೋಗುವಾಗಲೂ ಅಷ್ಟೇ, ಇಲ್ಲಿಂದ ಅಷ್ಟು ದೂರ ಹೋಗಬೇಕು…. ನಾವು ಅಲ್ಲೇ ಇದ್ದಿದ್ದರೆ ಚೆನ್ನಾಗಿತ್ತು…. ಅಮ್ಮ ಅಷ್ಟೊಂದು ದೂರ ನಡೆದುಕೊಂಡು ಹೋಗಿ ಬರುವುದು ಕಷ್ಟವಾಗುತ್ತಿದೆ… ಅಲ್ಲಿ ಗುಡ್ಡ ಹತ್ತಿ ಬರುವಾಗ ಉಸಿರಾಡಲು ತುಂಬಾ ಕಷ್ಟಪಡುತ್ತಾರೆ…. ಸ್ವಲ್ಪ ಹೊತ್ತು ಅಲ್ಲಿ ದೇವಸ್ಥಾನದ ಆ ಮಾವಿನ ಮರದ ನೆರಳಲ್ಲಿ ಕುಳಿತು ದಣಿವಾರಿಸಿಕೊಂಡು ನಂತರ ನಿಧಾನವಾಗಿ ಹೆಜ್ಜೆ ಹಾಕುತ್ತಾರೆ”…. ಎಂದು ತಂಗಿ ಹೇಳಿದ್ದನ್ನು ಕೇಳಿ ಅವಳ ಮುಖ ಬಾಡಿತು…. ಇನ್ನೂ ಸ್ವಲ್ಪ ದಿನ ಅಷ್ಟೇ… ನನ್ನ ಓದು ಮುಗಿಯಲಿ ಯಾವುದಾದರೂ ಒಳ್ಳೆಯ ಕೆಲಸಕ್ಕೆ ಸಿಗುತ್ತದೆ…. ಅಮ್ಮನನ್ನು ಕೆಲಸಕ್ಕೆ ಕಳುಹಿಸುವುದು ಬೇಡ….ನಿಮ್ಮೆಲ್ಲರನ್ನು ನಾನು ನೋಡಿಕೊಳ್ಳುತ್ತೇನೆ….. ಎಷ್ಟೊಂದು ವರ್ಷಗಳಿಂದ ಅಮ್ಮ ಕಷ್ಟ ಪಟ್ಟು ದುಡಿದು ನಮ್ಮನ್ನು ಸಾಕುತ್ತಿದ್ದಾರೆ.  ಈಗ ನೀನು ಅಮ್ಮನ ಜೊತೆ ಇರುವುದು ನನಗೆ ದೊಡ್ಡ ಸಮಾಧಾನ…. ಅಮ್ಮನ ಸಹಾಯಕ್ಕೆ ಜೊತೆಗೆ ನೀನಿರುತ್ತೀಯ ಎನ್ನುವ ಧೈರ್ಯ….. ಇನ್ನೂ ಒಂದೆರಡು ವರ್ಷಗಳಷ್ಟೇ…. ನನ್ನ ಡಿಗ್ರಿ ಮುಗಿಯಲಿ….. ಸರ್ಕಾರಿ ಕೆಲಸ ಸಿಗಲಿ ಎಂದು ನಾನು ಕಾಯುವುದಿಲ್ಲ…. ಯಾವುದಾದರೂ ಸಣ್ಣ ಸಂಸ್ಥೆಯಲ್ಲಿ ಕಡಿಮೆ ಸಂಬಳ ಸಿಕ್ಕರೂ ಸೇರಿಕೊಳ್ಳುತ್ತೇನೆ…. ನಂತರ ನೀನು ಕಾಲೇಜಿಗೆ ಹೋಗುವೆಯಂತೆ…. ಕೆಲವು ವರ್ಷಗಳಲ್ಲಿ ನೀನೂ ದುಡಿಯಲು ಪ್ರಾರಂಭಿಸುತ್ತೀಯಾ…. ಆಗ ಅಮ್ಮನಿಗೆ ಸಂಪೂರ್ಣ ವಿಶ್ರಾಂತಿ ಸಿಕ್ಕಂತಾಗುತ್ತದೆ….. ಇವಳೂ ಕೂಡ ನವೋದಯ ಶಾಲೆಯಲ್ಲಿ ಪಿಯುಸಿ ಯವರೆಗೂ ವಿದ್ಯಾಭ್ಯಾಸ ಮುಗಿಸಿ ಬಂದರೆ, ನಂತರ ಇವಳ ಮುಂದಿನ ವಿದ್ಯಾಭ್ಯಾಸಕ್ಕೆ ನಾವಿಬ್ಬರೂ ಇರುತ್ತೇವೆ…. ಎಂದು ಮಗಳು ಹೇಳಿದಾಗ, ಸುಮತಿ ಮೂವರು ಮಕ್ಕಳನ್ನು ಅಪ್ಪಿಕೊಂಡು,….”ನೀವಿರುವಾಗ ನನಗೇನು ಚಿಂತೆ ಮಕ್ಕಳೇ….. ನನ್ನ ಕೈಲಿ ಆಗುವರೆಗೂ ನಾನು ದುಡಿಯುತ್ತೇನೆ…. ನಿಮ್ಮ ಈ ಮಾತುಗಳನ್ನು ಕೇಳಿ ನನ್ನ ಹೃದಯ ಹಗುರವಾಯಿತು…. ಇಷ್ಟು ವರ್ಷ ಕಷ್ಟಪಟ್ಟಿದ್ದು ಸಾಕಾಗಿದೆ…. ನಿಮ್ಮ ಕಾಲದಲ್ಲಾದರೂ ಒಂದಿಷ್ಟು ನೆಮ್ಮದಿಯಿಂದ ಕಳೆಯುವಂತಾದರೆ ಸಾಕು…. ಬನ್ನಿ ಎಲ್ಲರೂ ಊಟ ಮಾಡೋಣ…. ನಿಮಗೆಲ್ಲರಿಗೂ ಇಷ್ಟವಾದ ಅಡುಗೆಯನ್ನು ಮಾಡಿದ್ದೇನೆ”…. ಎಂದು ಹೇಳಿ ಸುಮತಿ ಅಡುಗೆ ಮನೆಯ ಕಡೆ ನಡೆದಳು. ಮೂವರು ಹೆಣ್ಣುಮಕ್ಕಳೂ ಅಮ್ಮನನ್ನು ಹಿಂಬಾಲಿಸಿದರು. 

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ “ರಾಜಯೋಗಿ ಶ್ರೀಬೀಳೂರುಗುರುಬಸವ ಸ್ವಾಮಿಗಳು”ಡಾ.ಶಶಿಕಾಂತ್ ಪಟ್ಟಣರಾಮದುರ್ಗ ಪುಣೆ

ಶರಣರ ಸಂಗಾತಿ “ಡಾ.ಶಶಿಕಾಂತ್ ಪಟ್ಟಣರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ “ರಾಜಯೋಗಿ ಶ್ರೀಬೀಳೂರುಗುರುಬಸವ ಸ್ವಾಮಿಗಳು ಬಸವೋತ್ತರ ಕಾಲದ  ಹತ್ತೊಂಬತ್ತನೆಯ ಶತಮಾನದ ಮಹಾತಪಸ್ವಿ ಶ್ರೀ ಅಥಣಿಯ ಮುರುಗೇಂದ್ರ ಸ್ವಾಮಿಗಳ ಪಡಿನೆರಳು ಅವರ ಕೃಪಾಕಟಾಕ್ಷದಲ್ಲಿ ಲಿಂಗ ಹಸ್ತದ  ಆಶೀರ್ವಾದದಿಂದ ಜಗವ ಬೆಳಗುವ ಧೈತ್ಯ ಚೇತನ ರಾಜಯೋಗಿ ಬೀಳೂರು ಗುರುಬಸವ ಸ್ವಾಮಿಗಳು.         ಕಲಬುರ್ಗಿ ಸಮೀಪದ  ಹತ್ತಿರವಿರುವ  ಹಂಗರಗಿ ಎಂಬ ಊರು ಇದೆ ಆ ಊರಿನ ಶ್ರೇಷ್ಠ ಸದ್ಗುಣ ಮಣಿಯಾದ ರಾಮನಗೌಡ ಮತ್ತು ಚೆನ್ನಮ್ಮ ಎಂಬ ಲಿಂಗಾಯತ ಬಣಜಿಗ ದಂಪತಿಗಳ   ಉದರದಿಂದ ಜನಿಸಿ  ಬಂದ ಶಿಶುವೇ ಶ್ರೀ ಗುರುಬಸವ ಶಿವಯೋಗಿಗಳು.1843ರಲ್ಲಿ ರಾಮನಗೌಡ ಮತ್ತು ಚೆನ್ನಮ್ಮನ ಉದರದಿಂದ ಜನಿಸಿದ ಮಗುವಿನ ಮೊದಲ ಹೆಸರು. ಈ   “ಜೀವಪ್ಪ” ಎಂಬ ಮಗು ಬಡ ಕುಟುಂಬದಲ್ಲಿ ನಾಲ್ಕನೆಯವ.   ಈ ಮಗು ಅತ್ಯಂತ ಚಿರದ್ರೂಪಿ, ಸುಗುಣ ಚಾಣಾಕ್ಷ ದಷ್ಟ ಪುಷ್ಟ ಚುರುಕಾಗಿದ್ದನು. ನೋಡುವವರ ಕಣ್ಮನಗಳನ್ನು ಸೆಳೆಯುವ ಆಕರ್ಷಕ ಬಾಲಕ ಜೀವಪ್ಪನದು. ಬಾಲ್ಯ ಮತ್ತು ಬಡತನ ——————-   ಬಾಲಕ ಜೀವಪ್ಪನು ಉಂಡು ತಿಂದು ಅಡ್ಡಾಡುವ ವಯಸ್ಸಿನಲ್ಲಿ (4-5 ವರ್ಷ) ಹಂಗರಗಿ ಗ್ರಾಮದಲ್ಲಿ ಭೀಕರ ಬರಗಾಲ ಕಾಲಿಟ್ಟಿತು. ಆ ಭಾಗದಲ್ಲಿಯ ಜೀವಿಗಳಿಗೆ ಊಟಕ್ಕೆ ಆಹಾರ ಇಲ್ಲದಾಯಿತು ಕುಡಿಯಲು ನೀರಿಲ್ಲದಾಯಿತು. ಅನ್ನ ನೀರಿಲ್ಲದೆ ಜೀವ ಬಿಡುವ ಪ್ರಸಂಗ ಬಂದೊದಗಿತು. ಆ ಬರಗಾಲ ಅತ್ಯಂತ ಭೀಕರವಾಗಿತ್ತು ಜನತೆಗೆ ಅನ್ನ, ನೀರು ಆಹಾರ ದೊರೆಯದೆ  ಕೆಲವರು ಪ್ರಾಣ ಕಳೆದುಕೊಂಡರು,ಹಲವರು ಊರು ಬಿಟ್ಟು ಹೋದರು. ಊರು ಬಿಟ್ಟು ಹೊರಟವರಲ್ಲಿ ರಾಮನಗೌಡರು ಒಬ್ಬರು, ಮಡದಿ ಮಕ್ಕಳನ್ನು ಕರೆದುಕೊಂಡು ಊರೂರ ಅಲೆಯುತ್ತಾ ಅಫ್ಜಲಪುರಕ್ಕೆ  ಬಂದು ನೆಲಿಸಿದರು. ಅಲ್ಲಿ ಕೆಲವು ದಿನ ಕಾಲ ಕಳೆದು, ಮತ್ತೆ ಕೆಲಸ ಹುಡುಕುತ್ತ  ಹೊಟ್ಟೆ ಪಾಡಿಗಾಗಿ ಮತ್ತೆ ಊರು ಅಲೆಯುತ್ತಾ ಸಿಂದಗಿ ಊರಿಗೆ ಬಂದು ತಲುಪುತ್ತಾರೆ. ಸಿಂದಗಿಯ ವಿರಕ್ತಮಠದ ಅಧಿಪತಿಗಳಾದ  ಶ್ರೀ ಷಣ್ಮುಖ ಸ್ವಾಮಿಗಳು ನೀವು ಯಾರು ಏತಕ್ಕಾಗಿ ಬಂದಿರಿ ಎಲ್ಲ ಸಮಾಚಾರವನ್ನು  ವಿಚಾರಿಸಿ ತನ್ನಲ್ಲೇ ಕೆಲವು ದಿನ ಉಳಿಯಲು ಹೇಳಿದರು. ಶ್ರೀಗಳ ಆಶ್ರಯ ಪಡೆದ ರಾಮನಗೌಡರು ನಾಲ್ಕಾರು ದಿನ ಇದ್ದು ಜೀವನದ ಮುಂದಿನ ದಾರಿಯನ್ನು ಚಿಂತಿಸುತ್ತಾ ಚೆನ್ನಮ್ಮನಿಗೆ ಹೇಳುತ್ತಾರೆ ಈ ಚಿಕ್ಕ ಮಗ ಜೀವನ ಈ ಅಲೆದಾಟ ಮತ್ತು ಕಷ್ಟದ ಜೀವನವನ್ನು ಹೇಗೆ ಸಹಿಸಿಯಾನು ಆದ್ದರಿಂದ ಅವನನ್ನು ಈ ಮಠದಲ್ಲಿಯೇ ಬಿಟ್ಟು ನಾವು ಮುಂದೆ ಹೋಗೋಣ ಎಂದು ಹೇಳುತ್ತಾರೆ ಆಗ ಒಪ್ಪದ ತಾಯಿ ಕರುಳಿನ ಕುಡಿಯನ್ನು ಬಿಟ್ಟು ಹೋದ ಮಹಾ ಪಾಪಿ ನಾನಾಗುವುದೇ ಎಂದು ಬಿಕ್ಕಿ ಬಿಕ್ಕಿ ಅತ್ತಳು.ಕೊನೆಗೆ ತನ್ನ  ನನ್ನ ಮಗ ಎಲ್ಲಿಯಾದರೂ ಇರಲಿ  ಸುಖವಾಗಿರಲಿ ಎಂದು ಗಂಡನ ನಿರ್ಧಾರವನ್ನು ಒಪ್ಪಿ  ಮಲಗಿದ ಕಿರಿ ಮಗನನ್ನು ಮಠದಲ್ಲಿ ಬಿಟ್ಟು ಮಕ್ಕಳೊಂದಿಗೆ ಮುಂದೆ  ಹೊರಟು ಹೋದರು.            ಇತ್ತ ಮರುದಿನ ಜೀವಪ್ಪ ತನ್ನ ಕುಟುಂಬದವರು  ತಂದೆ ತಾಯಿ ಕಾಣದಾಗಲು ಹೆದರಿ   ಮಠದಲ್ಲಿ ಹುಡುಕುತ್ತಾ ಅಳತೊಡಗಿದನು. ಅಂದಿನ ಮಠದೊಡೆಯರಾದ ಅಧಿಪತಿಗಳು ಶ್ರೀ  ಷಣ್ಮುಖ ಸ್ವಾಮಿಗಳು ಸಂತೈಷಿ ಸಮಾಧಾನಪಡಿಸಿ ಕೆಲಸಕ್ಕೆ ಬೇರೆ ಕಡೆಗೆ ಹೋಗಿದ್ದಾರೆ ಎಂಟು ದಿನಗಳಲ್ಲಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತಾರೆ ಎಂದು ಸಮಾಧಾನ ಪಡಿಸಿ   ತಮ್ಮ ಶ್ರೀ ಮಠದಲ್ಲಿ  ಇರಿಸಿಕೊಂಡರು.   ಕೆಲವು  ದಿನ ಕಳೆದ ನಂತರ ಮಗು ಜೀವಪ್ಪ ಗುರುವಿನ ಸೇವೆಯಲ್ಲಿ  ತಂದೆ ತಾಯಿಗಳನ್ನು ಮರೆತು  ಅಕ್ಷರ ಜ್ಞಾನ ಕಲಿಕೆ ಓದುವಿನಲ್ಲಿ ಕಾಲ ಕಳೆಯುತೊಡಗಿದನು. ಸುಂದರವಾದ  ಜೀವಪ್ಪನನ್ನು  ಚಿಕ್ಕವನಾಗಿದ್ದ ಕಾರಣ ಅವನ ಪಾಲನೆ ಪೋಷಣೆಗೆಂದು  ಗುರುಗಳು ಊರಿನ ಸೆಟ್ಟರ (ಪಟ್ಟಣಶೆಟ್ಟಿ )ಅವರ ಮನೆತನದವರಿಗೆ ಜೀವಪ್ಪನ ಜವಾಬ್ದಾರಿ  ಹೊರೆಯನ್ನು ವಹಿಸುತ್ತಾರೆ. ಮುಂದೆ ಜೀವಪ್ಪ  ಪಟ್ಟಣಶೆಟ್ಟಿಯವರ ಮನೆಯಲ್ಲಿ ಸುಖದಿಂದ ಬೆಳೆಯುತ್ತಾನೆ. ಮಠಗಳ ಉಸ್ತುವಾರಿ —————- ಜೀವಪ್ಪಾ ದೊಡ್ಡವನಾದನೆಂದು, ಮತ್ತು ಶ್ರೀ ಷಣ್ಮುಖಸ್ವಾಮಿಗಳಿಗೆ  ವಯಸ್ಸಾಯಿತು ಎಂದು  ತಮ್ಮ ಜೊತೆಗೆ ಜೀವಪ್ಪನನ್ನು ಮಠಗಳ ವ್ಯವಹಾರವನ್ನು ಕೊಡಲು ನಿರ್ಧರಿಸಿದರು.  ಜೀವಪ್ಪನನ್ನು ಮುಂದೆ ಇತ್ತು ಕೊಂಡು  ಪ್ರಶಸ್ತವಾದ ಹೊಸ ಕಲ್ಮಠದ    ಕಟ್ಟಡ ಕೆಲಸ ಸಂಪೂರ್ಣ ಮುಗಿಸುತ್ತಾರೆ. ಕಲ್ಮಠವು   ಪೂರ್ಣವಾದ ಮೇಲೆ ಹಲವಾರು ಮಠದ ಕೆಲಸಗಳಿಗೆ ಜೀವಪ್ಪನನ್ನು ಸ್ವಾಮಿಗಳು ಉಸ್ತುವಾರಿಗೆಂದು ನೇಮಿಸುತ್ತಾರೆ. ಗುರುಗಳು ಹೇಳಿದ ಎಲ್ಲಾ ಕೆಲಸಗಳನ್ನು ಅತ್ಯಂತ ನಿಷ್ಠೆಯಿಂದ ಶ್ರದ್ಧೆಯಿಂದ ಜೀವಪ್ಪ ಮಾಡುತ್ತಿದ್ದರು. ಇದನ್ನೆಲ್ಲಾ ನೋಡಿದ ಸಿಂಧಗಿ  ಊರಿನ ಭಕ್ತರು  ನೀಬ್ಬೆರಗಾಗಿ ಜೀವಪ್ಪನ ಕಾಯಕವನ್ನು ಶ್ಲಾಘಿಸುತ್ತಿದ್ದರು. ಗುರುಬಸವ ನಾಮಕರಣ ——————————-         ಜೀವಪ್ಪನ ಗುಣ ಸ್ವಭಾವವನ್ನು ಕಂಡು ಸಂತಸಗೊಂಡ ಪೂಜ್ಯರು ಅವನಲ್ಲಿ ಅತ್ಯಂತ ಪ್ರೀತಿಯ ಅದರ ಭಾವದಿಂದ  ಕಾಣಲಾರಂಭಿಸಿದರು. ಈಗ ಜೀವಪ್ಪನಿಗೆ 12 ವರ್ಷ .  12 ವರ್ಷದ ಬಾಲಕನನ್ನು ಗೆಳೆಯ ರಾಚಯ್ಯನ ಜೊತೆಗೆ ಷಣ್ಮುಖ ಸ್ವಾಮಿಗಳು ಸಂಖದ  ಗುರುಗಳ ಕಡೆಗೆ ಕಳುಹಿಸಿಕೊಡುತ್ತಾರೆ ಗೆಳೆಯ ರಾಚಯ್ಯನೊಂದಿಗೆ ಬಂದ ಜೀವಪ್ಪನವರು ಇಂದಿನ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಸಂಖ ಗ್ರಾಮದಲ್ಲಿರುವ ವಿರಕ್ತಮಠದಲ್ಲಿ ಗುರುಗಳ ಅಣತಿಯಂತೆ ಗುರು ದಿಕ್ಷೆಯನ್ನು ಪಡೆದು ಗುರು ಸೇವೆಯಲ್ಲಿ ತೊಡಗಿದರು. ಇವರ ಸೇವಾ ಮನೋಭಾವವನ್ನು, ಕಾಯಕ ನಿಷ್ಠೆ ಗುರುಭಕ್ತಿಯನ್ನು ಕಂಡು ಸಂಕದ ಗುರುಗಳು “ಗುರುಬಸವ” ಎಂದು ಹೊಸ ನಾಮಕರಣ ಮಾಡಿದರು. ಮತ್ತು ಮಠದ ಅಧಿಕಾರವನ್ನು ತೆಗೆದುಕೋ ಎಂದು ಗುರುಬಸವರಿಗೆ ಹೇಳಿದರು. ಆಗ ಸ್ವತಃ ಗುರುಬಸವರೇ ಮಠದ ಅಧಿಕಾರವನ್ನು ರಾಚಯ್ಯನಿಗೆ ಕೊಡಿರಿ ಎಂದು ನಸುನಗುತ್ತಾ ಹೇಳಿದರು. ಎಳೆ ಹರಿಯದ ಆ ಗುರುಬಸವ ದೇವರು ತನ್ನ ಗೆಳೆಯನಿಗಾಗಿ ಮಾಡಿದ ಉದಾರತೆಯ  ನಿಷ್ಕಾಮ ಭಾವ,ವಿರಕ್ತತೆ , ತ್ಯಾಗದ ವಿಷಯವನ್ನು ಅರಿತ ಸಂಖದ ಊರಿನ ಸಮಸ್ತರು ಆಶ್ಚರ್ಯದಿಂದ  ಬೆರಗಾದರು. ಗೆಳೆಯ ರಾಚಯ್ಯನಿಗೆ ಮಠದ ಅಧಿಕಾರವನ್ನು ಒಪ್ಪಿಸಿ ಗುರುಗಳ ಆಜ್ಞೆಯಂತೆ ಮುಚ್ಚಂಡಿ ಮತ್ತು ಬೀಳೂರಿಗೆ ಹೋಗುತ್ತಾರೆ. ಮೊದಲು ಮುಚ್ಚಂಡಿಯಲ್ಲಿ ಕೆಲವು ದಿನ ಇದ್ದು, ಮುಂದೆ ಬೀಳೂರಿಗೆ ಹೋಗುತ್ತಾರೆ. ಬೀಳೂರಿನಲ್ಲಿ ವಿರಕ್ತಮಠ ಹಾಳು ಬಿದ್ದಿರುತ್ತದೆ ಅದಕ್ಕೆಂದೆ ಬೀಳೂರು( ಬಿದ್ದ ಊರು – ಹಾಲು ಬಿದ್ದ ಮಠವೊಂದಿತ್ತು ) ಎಂದು ಹೇಸರು ಬಂದಿರಬಹುದು, ಹಾಳು ಬಿದ್ದ ವಿರಕ್ತ ಮಠವನ್ನು   ಅತ್ಯಂತ ಸುಪ್ರಸಿದ್ಧ ಮಾಡುವಲ್ಲಿ ಶ್ರೀ ಗುರುಬಸವ ಸ್ವಾಮಿಗಳು  ಹಗಲಿರುಳು ಅತ್ಯಂತ ಪರಿಶ್ರಮ, ಕಷ್ಟಪಟ್ಟು ಕಂತಿ  ಭಿಕ್ಷೆ ಬೇಡಿ, ಹೊಲ ಮೇಯುವ ಕೆಲಸ ಮಾಡಿ, ಅಲ್ಲಿಯ ಹಲವಾರು ಶರಣರ, ಶರಣೆಯರ ಸಹಕಾರ ಸಹಾಯದಿಂದ ಒಂದು ಹೆಸರಾಂತ ವಿರಕ್ತಮಠವನ್ನಾಗಿ ಮಾರ್ಪಡಿಸುತ್ತಾರೆ ಶ್ರೀ ಗುರುಬಸವ ಸ್ವಾಮಿಗಳು. ಅಥಣಿಯ ಶ್ರೀ ಮುರುಗೇಂದ್ರ  ಶಿವಯೋಗಿಗಳ ಸಂಪರ್ಕದಲ್ಲಿ —————————————————————————-    ಅಥಣಿಯ ಶ್ರೀ ಮುರುಗೇಂದ್ರ  ಶಿವಯೋಗಿಗಳ ಸಮಕಾಲೀನರಾದ ಶ್ರೀ ಗುರುಬಸವ ಸ್ವಾಮಿಗಳು ಸಮಾಜದ ಏಳಿಗೆಗಾಗಿ ಸಮಾಜದ ಉದ್ಧಾರಕ್ಕಾಗಿ ತಮ್ಮನ್ನು ತಾವು ಸಮಾಜಕ್ಕೆ ಅರ್ಪಿಸಿಕೊಂಡು ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವಲ್ಲಿ ಸೈ ಎನಿಸಿಕೊಂಡ ಶ್ರೀ ಗುರುಬಸವ ಶಿವಯೋಗಿಗಳು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗೈಯುವದರ ಮೂಲಕ  ಕಾರ್ಯ ಮಾಡುವುದನ್ನು ಕಂಡು ಅವರನ್ನು ಗಚ್ಚಿನ ಮಠಕ್ಕೆ ಬರ ಹೇಳುತ್ತಾರೆ. ಅಂದು ಅಥಣಿಯ ಗಚ್ಚಿನ ಮಠವೆಂದರೆ ಶ್ರೀ ಮುರುಗೇಂದ್ರ ಶಿವಯೋಗಿಗಳ ಸಮ್ಮುಖದಲ್ಲಿ ನಿತ್ಯ ಶಿವಯೋಗ ಅನುಭಾವ ಚಿಂತನಾ ಗೋಷ್ಠಿಗಳು ಜರುಗುತ್ತಿದ್ದವು.  ಬಿದರಿ ಶಿವಕುಮಾರಸ್ವಾಮಿಗಳು, ಹುಲ್ಯಾಳ ಶ್ರೀಗಳು, ಧಾರವಾಡದ ಮೃತ್ಯುಂಜಯ ಸ್ವಾಮಿಗಳು, ಅವರ ತಂಡದಲ್ಲಿ ದೊಡ್ಡ ಧಡೂತಿ ಮೈಕಟ್ಟನ್ನು ಹೊಂದಿದ ಶ್ರೀ ಗುರು ಬಸವ ಸ್ವಾಮಿಗಳು ಸೇರಿಕೊಳ್ಳುತ್ತಾರೆ.      ಶ್ರೀ ಗುರುಬಸವರ ದೈವಿಕ ಶಕ್ತಿಗೆ ಮಾರುಹೋದ ಭಕ್ತರು ಬೀಳೂರಿನ ಮೂರ ಅಂಕಣದ ಕೋಣೆಯ ಮುಂದೆ ಒಂದು ಮಠವನ್ನು ಕಟ್ಟಿಸುತ್ತಾರೆ. ಇವರ ಪ್ರಭಾವ ಕರ್ನಾಟಕ ಮಹಾರಾಷ್ಟ್ರಗಳಲ್ಲಿ ಬೆಳೆದಂತೆ ಇವರಿಗಾಗಿ ಕಟ್ಟಿಸಿದ ಮಠ ಸಣ್ಣದಾಗುತ್ತದೆ. ಅಥಣಿಯ ಮುರುಗೇಂದ್ರ ಶ್ರೀಗಳ ಮಾರ್ಗದರ್ಶನದ ಮೇರೆಗೆ ಭವ್ಯವಾದ ಮಠವನ್ನು ಕಟ್ಟಿಸುತ್ತಾರೆ. ಜತ್ತ ಮತ್ತು ಉಮರಾಣಿಯ ಸಂಸ್ಥಾನಿಕರು ಹತ್ತಾರು ಎಕರೆ ಭೂಮಿಗಳನ್ನು ಬೀಳೂರು ಮಠಕ್ಕೆ ದತ್ತಿಯಾಗಿ ಕೊಟ್ಟು ಪುನೀತರಾಗುತ್ತಾರೆ . ಅಸೂಹೆಯ  ಕಿಚ್ಚು ಆರಿತು —————————————    ಬೀಳೂರು ಶ್ರೀ ಗುರುಬಸವವರ ಸ್ವಾಮಿಗಳ  ಸಾಧನೆಯನ್ನು ಕಂಡು ದ್ವೇಷ ಮತ್ಸರದ ವ್ಯಕ್ತಿ  ಗಣಪತಿಯೆಂಬುವನು ಶ್ರೀ ಗುರುಬಸವರು ಒಬ್ಬರೇ  ಮಠದಲ್ಲಿದ್ದಾಗ  ಗುರುಬಸವವರ ಚಾರಿತ್ರ್ಯಕ್ಕೆ ಕುಂದುಂಟು ಮಾಡಲು ಚೆನ್ನವ್ವ ಎಂಬ ವೇಶ್ಯೆಗೆ  ಹಣ  ಕೊಟ್ಟು ಗುರುಬಸವರಿರುವ ಕೋಣೆಗೆ ಕಳುಹಿಸಿದ.  ಆ ವೇಶ್ಯೆಯ   ಕೈಗಳ ಬಳೆಯ ಸಪ್ಪಳವನ್ನು ಆಲಿಸಿದ  ಶ್ರೀ  ಗುರುಬಸವವರು ಯಾರು ತಾಯಿ ಅಲ್ಲಿಯೇ ನಿಲ್ಲು ನಾನೇ ಹೊರಗೆ ಬರುತ್ತೇನೆ ಅವ್ವ ಎಂದರಂತೆ . ವೇಶ್ಯೆಯನ್ನು  ತಾಯಿಯಾಗಿ ಸಂಭೋಧಿಸಿದಾಗ ತಾನು ತಪ್ಪು ದಾರಿ ತುಳಿಯುತ್ತಿದ್ದೇನೆ ಎಂದು ಚೆನ್ನವ್ವ ನಿಧಾನವಾಗಿ ಹೆದರಿ ದೈವದ ತೇಜೋವಧೆಗೆ  ಹೊರಟಿರುವುದು ತಪ್ಪು ಎಂದು ತಿಳಿದು ಪರಿತಪಿಸಿ  ಹಿಂದೆ ಸರಿದಳು. ಮುಂದೆ ವೇಶ್ಯೆಯ  ಕಣ್ಣು ಹೋಗಿ ಭಿಕ್ಷೆ ಬೇಡಿ ಬದುಕುವ ಕೆಟ್ಟ ಪರಿಸ್ಥಿತಿ ನಿರ್ಮಾಣವಾಯಿತು. ವೇಶ್ಯೆಯನ್ನು ಕಳಿಸಿದ ಆಗರ್ಭ ಶ್ರೀಮಂತ ಗಣಪತಿಯೆಂಬುವನ ವಂಶವು ನಿರ್ನಾಮವಾಯಿತು. ಗಣಪತಿಯ ಮಕ್ಕಳು ಅವನ ಕಣ್ಣ ಮುಂದೆ ತೀರಿಹೋದರು. ಬ್ರಹ್ಮ ರಾಕ್ಷಸ ಬಡೆದುಕೊಂಡ ಬಾಲಕನಿಂದ ಪಾಠ ಕಲಿತ ಶ್ರೀ ಗುರುಬಸವರು ———————————————————————————————-  ಒಂದೊಮ್ಮೆ ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳು ತಮ್ಮ ಜೊತೆಗೆ ಬಿದರಿ ಶಿವ ಕುಮಾರಶಿವಯೋಗಿಗಳು  ಮತ್ತು ರಾಜಯೋಗಿ ಬೀಳೂರು  ಶ್ರೀ ಗುರುಬಸವ ಸ್ವಾಮಿಗಳನ್ನು ಕರೆದುಕೊಂಡು ಅಥಣಿಯ ಪಕ್ಕದ ಹಳ್ಳಿಗೆ  ಶ್ರಾವಣ ಮಾಸದ ಶಿವಾನುಭವ ಪ್ರವಚನಕ್ಕೆ ಹೋಗಿರುತ್ತಾರೆ. ಪ್ರವಚನ ಮುಗಿಸಿ ಮರಳಿ ಅಥಣಿಗೆ ಬರುವಾಗ ಕೃಷ್ಣಾ ನದಿ ತುಂಬಿ ಹರಿಯುತ್ತಿರುತ್ತದೆ.  ಎತ್ತು ಮತ್ತು ಬಂಡಿಯಲ್ಲಿದ್ದ ಸ್ವಾಮಿಗಳು ಕೊಂಚ ದಿಗ್ಭ್ರಾಂತರಾಗುತ್ತಾರೆ .   ನದಿ ಹೇಗೆ ದಾಟುವುದು. ಕೆಲ ಹೊತ್ತ ದಡದಲ್ಲಿಯೇ ಕುಳಿತು ಕೊಳ್ಳುತ್ತಾರೆ.  ಏನೋ ಅಥಣಿಯ ಶ್ರೀ ಮುರುಗೇಂದ್ರ ಶ್ರೀಗಳು ಚಕ್ಕಡಿಯನ್ನು ಅಲ್ಲಿಯೇ ದಡದಲ್ಲಿ ಬಿಟ್ಟು ನದಿಯನ್ನು ದಾಟೋಣ ಎನ್ನುತ್ತಾರೆ. ಆಗ ಬಿದರಿ ಶ್ರೀಶಿವಕುಮಾರ ಸ್ವಾಮಿಗಳು ಮತ್ತು ಇತರ ಶಿಷ್ಯರು ಅಥಣಿಯ ಶ್ರೀ ಮುರುಗರೇಂದ್ರ ಸ್ವಾಮಿಗಳ ಮಾತಿಗೆ ಸಮ್ಮತಿಸಿ ಅವರ ಹಿಂದೆ ಹೋಗಲು ನಿರ್ಧರಿಸುತ್ತಾರೆ. ಆದರೆ ಮೈತುಂಬ ರೇಷ್ಮೆ ಬಟ್ಟೆ ಪೇಠಾ ಬಂಗಾರ ಹೊಂದಿದ ರಾಜಯೋಗಿ   ಶ್ರೀ ಗುರುಬಸವ ಸ್ವಾಮಿಗಳು ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳ ಜೊತೆಗೆ ಹೋಗುವದಿಲ್ಲ, ಚಕ್ಕಡಿಯ ಮಾಲಕನೊಂದಿಗೆ ದಡದಲ್ಲಿಯೇ ಕುಳಿತು ಮಧ್ಯ ರಾತ್ರಿ  ಕೃಷ್ಣ ನದಿಯು ಇಳಿದ ಮೇಲೆ ಅಥಣಿಗೆ ಬಂದು ತಲುಪುತ್ತಾರೆ. ಬೆಳಿಗ್ಗೆ ಎಂದಿನಂತೆ ಎದ್ದು ಶ್ರೀಗಳ ಜೊತೆಗೆ ಕುಶಲೋಪರಿ ಮಾತನಾಡಿ ಬಹಿರ್ದೆಸೆಗೆ  ಹೊರಟು ನಿಲ್ಲುತ್ತಾರೆ. ಆಗ ಅಥಣಿಯ ಶ್ರೀ ಮುರುಗೇಂದ್ರ ಶ್ರೀಗಳು ಅಪ್ಪವರೆ ನಿನ್ನೆ ನಿಮಗೆ ಅಸ್ತವ್ಯಸ್ತವಾಗಿದೆ ಬೇಗ ಹೋಗಿ ಬನ್ನಿ,ಸ್ನಾನ ಪೂಜೆ ಮುಗಿಸಿ ಪ್ರಸಾದವನ್ನು ಮಾಡೋಣ ಎನ್ನುತ್ತಾರೆ.   ಆಗಲಿ ಎಂದು ಒಬ್ಬ ಸೇವಕನೊಂದಿಗೆ ಊರ ಹೊರಗೆ ಹೊರಟು ನಿಲ್ಲುತ್ತಾರೆ. ದಾರಿಯಲ್ಲಿ ಹೋಗುವಾಗ ಬೆಳಿಗ್ಗೆ ಆರರ ಮುಂಜಾವು ಶ್ರಾವಣದ ತುಂತುರ ಮಳೆ ಹನಿಯ ತಂಪು, ಆಗ ಒಂದು ಬಂಡಿಯಲ್ಲಿ ಹಿಂದೆ ಕುಳಿತಿದ್ದ ಬಾಲಕ ಶ್ರೀ ಬೀಳೂರು ಗುರುಬಸವ ಸ್ವಾಮಿಗಳನ್ನು ನೋಡಿ ಅವಹೇಳನ ಮಾಡುತ್ತಾ ಕಿಸಿಕಿಸಿ ನಗುತ್ತಾನೆ, ಶ್ರೀಗಳು ಹೆಚ್ಚಿನ ಮಹತ್ವವನ್ನು ನೀಡದೆ ಮುಂದೆ ಸಾಗುತ್ತಾರೆ, ಆಗ ಹುಡುಗ ಮತ್ತೆ ಇವರತ್ತ ಕೇಕೆ ಹಾಕಿ ನಗುತ್ತಾನೆ, ಸ್ವಲ್ಪ ಮಟ್ಟಿಗೆ ವಿಚಲಿತರಾದ ಪೂಜ್ಯರು   ಅಲ್ಲಿರುವ ಜನರನ್ನು ವಿಚಾರಿಸುತ್ತಾರೆ, ಸಿಟ್ಟಿನ ಗುರುಬಸವ ಸ್ವಾಮಿಗಳು   ಜನರು ಅಂಜುತ್ತಲೇ ಅಪ್ಪಾರಾ ಹುಡುಗ ಗಾಳಿ ಶಕ ಆಗೈತಿ, ಬ್ರಹ್ಮ ರಾಕ್ಷಸ ಮೈಯೊಳಗ ಹೊಕ್ಕಾನ ಏನು ಮಾಡಿದರೂ

ಸಾವಿಲ್ಲದ ಶರಣರು ಮಾಲಿಕೆ “ರಾಜಯೋಗಿ ಶ್ರೀಬೀಳೂರುಗುರುಬಸವ ಸ್ವಾಮಿಗಳು”ಡಾ.ಶಶಿಕಾಂತ್ ಪಟ್ಟಣರಾಮದುರ್ಗ ಪುಣೆ Read Post »

ಕಾವ್ಯಯಾನ

ವನಜ ಮಹಾಲಿಂಗಯ್ಯ ಅವರ ಕವಿತೆ “ಒಂದಾಗಿಸುವ ಬಣ್ಣ”

ಕಾವ್ಯ ಸಂಗಾತಿ ವನಜ ಮಹಾಲಿಂಗಯ್ಯ “ಒಂದಾಗಿಸುವ ಬಣ್ಣ”    ರಂಗುಗಳ ಮಳೆಯಲ್ಲಿಮರೆಯುತ್ತದೆ ಹಳೆಯ ನೋವು   ಒಣಗಿದ ದ್ವೇಷದ ಮೇಲೆಪಿಚಕಾರಿ ಚಿಮ್ಮುವ ಸಂತೋಷ    ಕೆಂಪು-ಹಸಿರು-ನೀಲಿ ತುಂಬಿಹೃದಯದ ಕಪ್ಪು ಕಳೆಯುತ್ತದೆಹೋಳಿಗೆ ಬಂದವ ಒಡ್ಡಿಕೊಂಡರೆ    ಎಲ್ಲರೂ ಒಂದೇ ಒಂದು ಬಣ್ಣಪ್ರೀತಿಯ ಹಬ್ಬದ ಹೆಸರು ಹೋಳಿ     ರಂಗುಗಳಲ್ಲಿ ಬರೆಯುವ ಸ್ನೇಹದ ಕಥೆಹಸನ್ಮುಖದ ಈ ಒಂದು ದಿನಕ್ಕೆಜಗತ್ತೆಲ್ಲಾ ಒಂದಾಗುತ್ತದೆ. ವನಜ ಮಹಾಲಿಂಗಯ್ಯ

ವನಜ ಮಹಾಲಿಂಗಯ್ಯ ಅವರ ಕವಿತೆ “ಒಂದಾಗಿಸುವ ಬಣ್ಣ” Read Post »

You cannot copy content of this page

Scroll to Top