ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಬದುಕಿನ ಕಳವಳ ಎದೆಯ ಒಳಗೆ ಕಡೆಗೋಲು ಮಥಿಸಿತು ಇರುಳು
ಕಟ್ಟಿದ ಕರಿ ಮೋಡವು ತುಂತುರ ಹನಿಗಳ ಉದುರಿಸಿತು ಇರುಳು

ನೆನಪಿನ ಹಳೆ ಗಂಟು ಬಿಚ್ಚಿ ಕಂಗಳ ನಿದಿರೆ ಕದಿಯಿತು ಚುಕ್ಕಿ
ಹುಣ್ಣಿಮೆಯ ಚಂದಿರ ಕಿರಣ ಕೊಳದ ಮೊಗ್ಗು ಅರಳಿಸಿತು ಇರುಳು

ಗತಕಾಲದ ವೈಭವ ನೆನೆಯುತ ಮೌನದಲಿ ಜಂತಿ ಎಣಿಸಿದೆ.
ಮುತ್ತಿದ ಕತ್ತಲು ವಿರಹ ಅಗ್ನಿಯಲಿ ದೇಹ ದಹಿಸಿತು ಇರುಳು

ಕುಸುಮದಲ್ಲಿ ಕಂಡ ಕನಸುಗಳು ಉದುರಿ ಮಣ್ಣಲಿ ಸೇರಿದವು
ಹೃದಯದ ಬಯಕೆಯು ಭೂತವಾಗಿ ಕಾಡಿಸಿ ನರಳಿಸಿತು ಇರುಳು

ಅರ್ಧರಾತ್ರಿಯಲಿ ಗೊಂಬೆಗಳು ಎದ್ದು ಕುಣಿದಾಡ ತೊಡಗಿದವು
ಮೂಡಣದಲಿ ಮೂಡಿದ ಹೊನ್ನಕಿರಣ ಪ್ರಭೆ ಸರಿಸಿತು ಇರುಳು


About The Author

Leave a Reply

You cannot copy content of this page

Scroll to Top