ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಬಿದ್ದ ವೈರಿಗಳನ್ನಷ್ಟೇ ಅಲ್ಲ
ಬದ್ಧ ವೈರಿಗಳಿಗೂ ಬೆಚ್ಚಿ ಬೀಳಿಸಿದ್ದ ಬುದ್ಧ
ಮಾಡಿದ್ದು ರಕ್ತ ಹರಿಸುವ ಯುದ್ಧವನಲ್ಲ
ಪ್ರೀತಿ ತುಂಬಿ ಸ್ನೇಹ ಬೆಳೆಸುವ ಧರ್ಮದ ನಡಿಗೆ

ಬುದ್ಧ ನಡೆದ ಹಾದಿ ಉದ್ದಗಲಕ್ಕೂ ಜನಸಸಾಗರವೋ ಜನಸಾಗರ
ನಿಮ್ಮ ಯುದ್ಧದ ಪಿರಿಂಗಿಗಳು
ಆಕಾಶದೆತ್ತರಕ್ಕೆ ಚಿಮ್ಮುತ್ತ ಬೆಂಕಿಯ ಕೆಂಡವನ್ನು ಉಗುಳುತಿದ್ದರೆ
ಬುಧ್ದನ ಉಪದೇಶಗಳು
ಆ ಬೆಂಕಿಯ ಕೆಂಡದಲ್ಲಿ ಶಾಂತಿಯ ತೋಟವನ್ನು ಸೃಷ್ಟಿಸುತ್ತಿವೆ

ಯುದ್ಧ ಗೆದ್ದಿತು ಎನ್ನುವುದಕ್ಕೆ
ನಿಮ್ಮ ಪಿರಿಂಗಿಯ ಮದ್ದು ಗುಂಡುಗಳು ಹರಿಸಿದ ರಕ್ತದ ಚರಿತ್ರೆಗೆ
ಸಡ್ಡು ಹೊಡೆದು ನಿಂತಿದ್ದು
ಮುಗಿಲೆತ್ತರಕ್ಕೂ ಚಿಮ್ಮಿ ಶಾಂತಿ ಮಳೆ ಸುರಿಸಿದ್ದು
ನನ್ನ ಬುದ್ಧನ ಮೌನ ಮತ್ತು ಅಹಿಂಸೆ

ಅಗೋ ಅಲ್ಲೋಡಿ
ನನ್ನ ಬುದ್ಧನ ಮೌನದ ಮಳೆಗೆ
ನಿಮ್ಮ ಪಿರಂಗಿಯ ಅವಶೇಷಗಳು
ಸುಟ್ಟ ಇಟ್ಟಿಗೆಗಳಾಗಿವೆ
ಹೆದರ ಬೇಡಿ ಅವುಗಳಿಗೆ ಒಂದಿಷ್ಟು
ಬುದ್ಧನ ನಾಲ್ಕು ಆರ್ಯ ಸತ್ಯಗಳನ್ನ ಲೇಪಿಸಿದರೆ
ಮತ್ತೆ ಆಕಾಶದೆತ್ತರಕ್ಕೆ ನಿಮ್ಮ ಪಿರಿಂಗಿಗಳು ಸಿಡಿಯಬಹುದು
ಆಗ ಸಿಡಿಯುವ ಪಿರಿಂಗಿಗಳಿಂದ ಸುರಿಯುವುದು ಬೆಂಕಿ ಉಂಡೆಯಲ್ಲ
ನನ್ನ ಬುದ್ಧನ ಶಾಂತಿ ಮತ್ತು ಅಹಿಂಸೆಯ ಮಳೆ
ಆಗ ಯುದ್ಧದಲ್ಲಿ ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?


About The Author

1 thought on “ಮೂಗಪ್ಪ ಗಾಳೇರ ಅವರ ಕವಿತೆ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?””

Leave a Reply

You cannot copy content of this page

Scroll to Top