ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-35 ಮೈಸೂರು ಶಾಖೆ ಎರಡಕ್ಕೆ ಬಂದು ರಿಪೋರ್ಟ್ ಮಾಡಿಕೊಂಡಿದ್ದು ಆಯಿತು. ಮಾಮೂಲಿನಂತೆ ಇಲ್ಲಿಯೂ ಒಂದು ಕೈಯಲ್ಲಿ ಕರ್ತವ್ಯ ಹಾಜರಾಗುವ ಪತ್ರ ಇದ್ದರೆ ಮತ್ತೊಂದು ಕೈಯಲ್ಲಿ ವರ್ಗಾವಣೆ ಅರ್ಜಿ. ಈ ಬಾರಿ ಮನೆಗೆ ಹತ್ತಿರದ ಶಾಖೆ  ೫ ಕ್ಕೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದೆ.  ಇಲ್ಲಿ ನನಗೆ ಮತ್ತೆ ನನ್ನ ಮೆಚ್ಚಿನ ಪಾಲಿಸಿ ಸೇವಾ ವಿಭಾಗ ಕೊಟ್ಟರು. ಪಾಲಿಸಿಯ ಪುನರುಜ್ಜೀವನ, ಅಸೈನ್ಮೆಂಟ್ ಮತ್ತು ನಾಮನಿರ್ದೇಶನ ಹಾಗೂ ಪಾಲಿಸಿಗಳ ಅಲ್ಟ್ರೇಶನ್ ಇಷ್ಟು ವಿಭಾಗಗಳ ಮೇಲ್ವಿಚಾರಣೆ ನನ್ನದು. ಈ ಮೂರು ವಿಭಾಗಗಳಿಗೂ ಒಬ್ಬೊಬ್ಬರು ಸಹಾಯಕರು ಇದ್ದರು. ನನ್ನದೇ ಬ್ಯಾಚ್ ನ  ಶ್ರೀಹರಿ ಸುಬ್ರಹ್ಮಣ್ಯ ಶೋಭಾ ಮತ್ತು ಪುಟ್ಟ ಲಕ್ಷ್ಮಿ ಈ ವಿಭಾಗದ ಸಹಾಯಕರು. ಈ ಹಿಂದೆ ನಂಜನಗೂಡಿನಲ್ಲಿ ನನ್ನ ಜೊತೆ ಉನ್ನತ ಶ್ರೇಣಿ ಸಹಾಯಕರಾಗಿದ್ದ ಜಗದೀಶ್ ಅವರು ಈಗ ಆಡಳಿತ ಅಧಿಕಾರಿಯಾಗಿ ಶಾಖೆಯಲ್ಲಿ ಇದ್ದರು. ಬಹುತೇಕ ಬಹುತೇಕ ಎಲ್ಲರೂ ಮೊದಲಿನಿಂದ ಪರಿಚಯದವರೇ ಆಗಿದ್ದರಿಂದ ಅಲ್ಲಿಗೆ ಹೊಂದಿಕೊಳ್ಳಲು ಸ್ವಲ್ಪವೂ ಕಷ್ಟವಾಗಲಿಲ್ಲ. ಬೇರೆ ವಿಭಾಗಗಳಿಂದ ವರ್ಗವಾಗಿ ಬಂದಿದ್ದ ಹೇಮಗೋಮತಿ ಮತ್ತು ರೇಖಾ ಮಾತ್ರ ಹೊಸ ಪರಿಚಯ ಆದರೂ ಏಕವಚನದಲ್ಲಿ ಮಾತನಾಡುವಷ್ಟು ಸಲಿಗೆ ಆತ್ಮೀಯತೆ ಬೆಳೆದುಬಿಟ್ಟಿತ್ತು. ನನ್ನದೇ ಬ್ಯಾಚ್ನ  ಅನಿತ ಗಾಯಿತ್ರಿ ಹಾಗೂ ಶೋಭಾ ಈ ಮುಂಚೆ ಮಂಡ್ಯದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ಗಾಯಿತ್ರಿ ದೇವಿ ಸಹಪಾಠಿ ಸುಮಾ ಇವರೆಲ್ಲರೂ ಇದೇ ಬ್ರಾಂಚ್ ನಲ್ಲಿ ಇದ್ದರು. ಪ್ರಸೂತಿ ರಜೆಗೆ ಹೋಗಿದ್ದ ಮಂಜುಳಾ ಸಹ ವಾಪಸ್ ಆಗಿದ್ದು ಅವಳು ಸಹ ತುಂಬಾ ಕ್ಲೋಸ್ ಆದಳು. ಈ ಮುಂಚೆ ನಾನು ಪ್ರಸ್ತಾಪಿಸಿದ ಮಂಡ್ಯ ಬ್ರಾಂಚ್ ನಲ್ಲಿದ್ದ  ಪ್ರೈಮರಿ ಶಾಲೆಯ ಸಹಪಾಠಿ ಮಂಜುನಾಥ್ ಸಹ ಇಲ್ಲಿಯೇ ಇದ್ದಿದ್ದು .ಬಹಳ ವರ್ಷಗಳಿಂದ ಅವರೆಲ್ಲ ಒಟ್ಟಿಗೆ ಅದೇ ಶಾಖೆಯಲ್ಲಿ ಕೆಲಸ ಮಾಡಿದ್ದರಿಂದ ಏಕವಚನದಲ್ಲಿಯೇ ಮಾತನಾಡಿಸಿಕೊಳ್ಳುವಷ್ಟು ಆತ್ಮೀಯತೆ ಇತ್ತು ಒಂದು ರೀತಿಯ ಕೋಝೀ ವಾತಾವರಣ. ಆ ಬ್ರಾಂಚ್ ನಲ್ಲಿ ಮನೆಯ ಸದಸ್ಯರ ಹಾಗೆ ಎಲ್ಲರೂ ಹೊಂದಿಕೊಂಡು ಇದ್ದದ್ದು ತುಂಬಾ ಖುಷಿ ಕೊಟ್ಟಿತ್ತು ಇದುವರೆಗೆ ನಾನು ಕೆಲಸ ಮಾಡಿದ ಯಾವುದೇ ಶಾಖೆ ಗಿಂತ ಇಲ್ಲಿ ತುಂಬಾ ಆತ್ಮೀಯತೆಯ ಅನುಬಂಧ ಇದ್ದದ್ದು ಕಾಣಿಸುತ್ತಿತ್ತು. ಹಾಗಾಗಿ ಕೆಲಸಗಳನ್ನು ಸಹ ಹಂಚಿಕೊಂಡಿದೆ ಮಾಡಿಬಿಡುತ್ತಿದ್ದರಿಂದ ತುಂಬಾ ಸುಗಮವಾಗಿ ನಡೆಯುತ್ತಿತ್ತು. ನಂಜನಗೂಡು ಶಾಖೆ ಬಿಡುವ ಸ್ವಲ್ಪ ಮೊದಲು ನಾವು ಮಾರುತಿ ಒಮ್ಮೆ ಗಾಡಿಯನ್ನು ಖರೀದಿಸಿದವು ನಮ್ಮ ಮನೆಯವರ ವ್ಯಾಪಾರ ವಹಿವಾಟುಗಳಿಗೆ ಅನುಕೂಲವಾಗಲು ಈ ವ್ಯವಸ್ಥೆ. ಆ ಸಮಯದಲ್ಲಿ ಮೊಬೈಲ್ ಗಳು ಹೆಚ್ಚು ಜನಪ್ರಿಯ ವಾಗುತ್ತಿತ್ತು ಅದೇ ಬಿಲ್ಡಿಂಗ್ನ ಒಂದು ಕಡೆ ಬಿ ಎಸ್ ಎನ್ ಎಲ್ ಸಿಮ್ ಗಳನ್ನು ಕೊಡುತ್ತಿದ್ದರು. ಸುಲಭವಾಗಿಯೇ ಸಿಮ್ ಸಿಕ್ಕಿತು .ಮೊದಲ ನೋಕಿಯಾ ಮೊಬೈಲ್ ರವೀಶ್ ಖರೀದಿಸಿದರು ಆಗ ಅದರ ಬೆಲೆ ಹತ್ತು ಸಾವಿರ ರೂಪಾಯಿಗಳು ಆಗ ಮೊಬೈಲ್ ದರಗಳು ಸ್ವಲ್ಪ ಹೆಚ್ಚೇ ಇದ್ದವು. ನನ್ನ ತಂಗಿಯ ಪತಿ ಪ್ರಸನ್ನ ಅವರಿಗೆ ಪದೋನ್ನತಿ ಆಗಿ ಉಪ ಶಾಖಾಧಿಕಾರಿಗಳಾಗಿ ಬೆಂಗಳೂರಿನ ಸೆಂಟ್ ಮಾರ್ಕ್ಸ್ ರೋಡ್ ಶಾಖೆಗೆ ವರ್ಗಾವಣೆ ಆಯಿತು. ಛಾಯಾ ಸಹ ಬೆಂಗಳೂರಿಗೆ ಅರ್ಜಿ ಕೋರಿದಳು ಬಹಳ ಬೇಗನೆ ಅವಳಿಗೂ ಬೆಂಗಳೂರಿನ ಸಿಎ ಬ್ರಾಂಚ್ ಗೆ ವರ್ಗ ಸಿಕ್ಕಿತು ಈಗ ಅವರು ಬೆಂಗಳೂರಿನ ಹಲಸೂರಿನಲ್ಲಿ ಮೊದಲು ನಂತರ ಸಂಜಯ ನಗರದಲ್ಲಿ ಮನೆ ಮಾಡಿಕೊಂಡಿದ್ದರು. ನನಗೆ ಓಡಾಡಲು ಸಹ ಅನುಕೂಲವಾಗಿತ್ತು.  ಆಫೀಸಿನ ಎದುರಿಗೆ ಬಸ್ ಸ್ಟ್ಯಾಂಡ್. ಯಾವಾಗಲಾದರೂ ಬೆಂಗಳೂರಿಗೆ ಹೋದಾಗ ಬೆಳಿಗ್ಗೆ ಎದ್ದು ಹೊರಟು ನೇರ ಆಫೀಸಿಗೆ ವಾಪಸ್ ಬರುತ್ತಿದ್ದೆ. ಹಾಗೆ ಒಮ್ಮೆ ವಾಪಸ್ ಬರುವಾಗ ಎಸ್ ಎಲ್ ಭೈರಪ್ಪನವರ ಸಹಪಾಠಿ ವೃದ್ಧರೊಬ್ಬರು ನನ್ನ ಪಕ್ಕದ ಸೀಟ್ ನಲ್ಲಿಯೇ ಕುಳಿತಿದ್ದು ದಾರಿಯುದ್ದಕ್ಕೂ ಭೈರಪ್ಪನವರ ಬಗ್ಗೆ, ಅವರ ಕೃತಿಗಳ ಬಗ್ಗೆ ಚರ್ಚೆ ಮಾಡುತ್ತಾ ಬಂದಿದ್ದು ಒಂದು ಸುಂದರ ಸವಿ ನೆನಪು. ಅವರು ಅಕ್ಕಿಹೆಬ್ಬಾಳದವರಾಗಿದ್ದು ಅಲ್ಲಿನ ಜಾತ್ರೆಗೆ ಬನ್ನಿ ಎಂದು ಆಮಂತ್ರಣವನ್ನು ಸಹ ಕೊಟ್ಟಿದ್ದರು. ನನ್ನ ಸಹಪಾಠಿ ಮಂಜುವಿನ ಬಗ್ಗೆ ಒಂದೆರಡು ಮಾತುಗಳನ್ನು ಇಲ್ಲಿ ಹೇಳಲೇಬೇಕು ಮೊದಲಿನಿಂದ ನಮ್ಮ ಮನೆಗೆ ಬರುತ್ತಿದ್ದು ಅಮ್ಮನ ಕೈ ರುಚಿ ನೋಡುತ್ತಿದ್ದವನಿಗೆ ಆಗಲಿಂದ ಅಕ್ಕಿ ಮಸಾಲೆ ರೊಟ್ಟಿ ಎಂದರೆ ತುಂಬಾ ಇಷ್ಟ ನಾನು ಡಬ್ಬಿಗೆ ಅದನ್ನು ತಂದ ದಿನಗಳಲ್ಲೆಲ್ಲ ನನ್ನ ಡಬ್ಬಿಯನ್ನು ಅವನೇ ತೆಗೆದುಕೊಂಡು ಬಿಟ್ಟು ನನಗೆ ಕೆಳಗಿನ ಹೋಟೆಲ್ ನಿಂದ ಮಸಾಲೆ ದೋಸೆ ತರಿಸಿ ಕೊಟ್ಟುಬಿಡುತ್ತಿದ್ದ ಅದರಲ್ಲೂ ಅವರೇ ಕಾಳು ರೊಟ್ಟಿ ಮಾಡಿದಾಗಲಂತೂ ನಾನು ಅವನಿಗಾಗಿಯೇ ಪ್ರತ್ಯೇಕ ಎರಡು ರೊಟ್ಟಿ ಮಾಡಿ ಡಬ್ಬಿಯಲ್ಲಿ ತಂದುಕೊಡುತ್ತಿದೆ ಅಷ್ಟು ಖುಷಿಯಾಗಿ ತಿನ್ನುತ್ತಿದ್ದ ಜೀವನದಲ್ಲಿ ಅಷ್ಟೊಂದು ಉತ್ಸಾಹ ತುಂಬಿಕೊಂಡಿದ್ದ ಅವನು ಆತ್ಮಹತ್ಯೆ ಮಾಡಿಕೊಂಡಿದ್ದಂತೂ ನನಗೆ ಇಂದಿಗೂ ಅರಗಿಸಿಕೊಳ್ಳಲಾಗದ ಆಘಾತ. ಫೆಬ್ರವರಿ ತಿಂಗಳ ಮೊದಲ ಭಾಗದಲ್ಲಿ ಒಂದು ಹೊಸ ಬೆಳವಣಿಗೆ ಆರಂಭವಾಯಿತು. ಚುನಾವಣಾ ಕಚೇರಿಯಿಂದ ನಮ್ಮ ಸಿಬ್ಬಂದಿಗಳ ಪಟ್ಟಿಯನ್ನು ತೆಗೆದುಕೊಂಡು ಹೋಗಲು ಆರಂಭಿಸಿದ್ದರು. ಇದುವರೆಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಉಪಾಧ್ಯಾಯರು ಶಿಕ್ಷಕರುಗಳನ್ನು ಮಾತ್ರ ಈ ಡ್ಯೂಟಿಗೆ ತೆಗೆದುಕೊಳ್ಳುತ್ತಿದ್ದದ್ದು ಈ ಬಾರಿ ರಾಜ್ಯ ಹಾಗೂ ಕೇಂದ್ರ ಎರಡು ಕಡೆಯ ಚುನಾವಣೆಗಳು ನಡೆಯುತ್ತಿದ್ದರಿಂದ ಹೆಚ್ಚುವರಿ ಸಿಬ್ಬಂದಿಗಳ ಅಗತ್ಯತೆ ಉಂಟಾಗಿದ್ದು ಬ್ಯಾಂಕುಗಳು ಹಾಗೂ ಭಾರತೀಯ ಮತ್ತು ಸಾಮಾನ್ಯ ವಿಮೆ ನೌಕರರನ್ನು ಚುನಾವಣಾ ಡ್ಯೂಟಿಗೆ ಕರೆಯುವ ಪರಿಪಾಠ ಆರಂಭವಾಯಿತು ಇಲ್ಲಿಂದ ಮೊದಲುಗೊಂಡು ಚುನಾವಣೆ ಘೋಷಣೆ ಎಂದ ತಕ್ಷಣ ನಮಗೆಲ್ಲ ದುಃಸ್ವಪ್ನಗಳು ಕಾಡಲು ಆರಂಭವಾಗಿತ್ತು. ಚುನಾವಣೆ ಹೆಸರು ಕೇಳಿದರೆ ಬೆಚ್ಚಿ ಬೀಳುವಷ್ಟು ಚುನಾವಣೆ ಕರ್ತವ್ಯಗಳ ಕಾಟ. ನಿವೃತ್ತಿಯ ಕಡೆಯ ವರ್ಷದಲ್ಲಿಯೂ ಸಹ ಈ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಬೇಕಾಯಿತು. ಏಪ್ರಿಲ್ 26 2004 ರಂದು ಚುನಾವಣೆಗಳು ನಿಗದಿಯಾಗಿತ್ತು. ಅದಕ್ಕೆ ಮುಂಚೆ ಒಂದು ವಾರದಲ್ಲಿ ತರಬೇತಿಗೆಂದು ಕರೆದಿದ್ದರು ಮೈಸೂರಿನ ಟೌನ್ ಹಾಲ್ ನಲ್ಲಿ ತರಬೇತಿ ಒಂದು ರೀತಿಯ ದೊಂಬಿಯೇ ಅದು. ಯಾವ ವಿಷಯಗಳು ನಮಗೆ ಸರಿಯಾಗಿ ಅರ್ಥವಾಗಲಿಲ್ಲ ಅವರು ಹೇಳಿಕೊಟ್ಟಿದ್ದು ಸರಿಯಾಗಿರಲಿಲ್ಲ ಎಂಬುದು ಒಂದು ಕಾರಣವಾದರೆ ಅವೆಲ್ಲವೂ ನಮಗೆ ಮೊಟ್ಟಮೊದಲಿಗೆ ಬಾರಿ ಆದ್ದರಿಂದ ಎಲ್ಲಾ ಹೊಸದು ಎನಿಸತೊಡಗಿತ್ತು. ಶಾಖೆಯ ಎಲ್ಲಾ ಬಹುತೇಕ ಮಂದಿ ಚುನಾವಣಾ ಕರ್ತವ್ಯಕ್ಕೆ ಕರೆ ಬಂದಿತ್ತು. ನನಗೆ ಎ ಪಿ ಆರ್ ಒ ಅಂದರೆ ಉಪಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಕಾರ್ಯ ಇತ್ತು .ಅಕಸ್ಮಾತ್ ಪಿ ಆರ್ ಓ ಬರಲಿಲ್ಲ ಎಂದರೆ ನಾನೇ ಆ ಕರ್ತವ್ಯವನ್ನು ನಿರ್ವಹಿಸಬೇಕಿತ್ತು, ಮೊದಲೇ ಹೆದರುವವರ ಮೇಲೆ ಕಪ್ಪೆ ಎಸೆದಂತಾಗಿತ್ತು ನನ್ನ ಪರಿಸ್ಥಿತಿ. ನಾವು ಕಾರ್ಯನಿರ್ವಹಿಸಬೇಕಾಗಿದ್ದು ಹುಣಸೂರು  ತಾಲೂಕು. ಚುನಾವಣೆಯ ಹಿಂದಿನ ದಿನವೇ ಮಹಾರಾಜ ಕಾಲೇಜು ಮೈದಾನಕ್ಕೆ ಬೆಳಿಗ್ಗೆ 7 ಗಂಟೆಗೆ ಹೋಗಿದ್ದು ಅಲ್ಲಿಂದ ಏರ್ಪಾಡು ಮಾಡಿದ್ದ ಬಸ್ಗಳಲ್ಲಿ ಹೋಗಿದ್ದಾಯಿತು. ಅಲ್ಲಿ ಬೂತ್ ನಂಬರ್ ಹಾಗೂ ಕಾರ್ಯನಿರ್ವಹಿಸಬೇಕಾಗಿದ್ದ ಶಾಖೆ ಹಾಗೂ ನಾವು ಹತ್ತಬೇಕಿದ್ದ ಬಸ್ ನಂಬರ್ ತಿಳಿಸಿದರು. 12 ಗಂಟೆಗೆ ಬಸ್ ಹೊರಡುವುದು ಎಂದು ತಿಳಿಯಿತು ಅಲ್ಲಿಯೇ ಕ್ಯಾಂಪ್ ಹಾಕಿದ್ದ ಹೋಟೆಲ್ ನಲ್ಲಿ ತಿಂಡಿ ತಿಂದು ನಮ್ಮ ನಮ್ಮ ಬೂತ್ ನವರ ಪರಿಚಯ ಮಾಡಿಕೊಂಡು ಅವರಿಂದ ಸಾಮಗ್ರಿಗಳನ್ನು ಪಡೆದೆವು ವಿದ್ಯಾವರ್ಧಕ ಕಾಲೇಜಿನ ಲೆಕ್ಚರರ್ ಒಬ್ಬರು ಖಾಸಗಿ ಶಾಲೆಗೆ ಶಿಕ್ಷಕಿ ಗೀತಾ ಇನ್ನೊಬ್ಬರು ಹಾಗೂ ಉಳಿದಿದ್ದರು ಸರ್ಕಾರಿ ರಾಜ್ಯ ಸರ್ಕಾರಿ ನೌಕರರು ನಮ್ಮ ತಂಡದಲ್ಲಿ ಇದ್ದರು.  ಅಂತೂ ಇಂತೂ ಹನ್ನೆರಡುವರೆಗೆ ಬಸ್ ಹೊರಟಿದ್ದು ದಾರಿಯ ಮದ್ಯ ಹುಣಸೂರಿನ ಹೋಟೆಲ್ ನಲ್ಲಿ ನಿಲ್ಲಿಸಿ ಊಟ ಮಾಡಿದೆವು. ನಮ್ಮ ಪಿ ಆರ್ ಓ ಅವರಿಗೂ ಇದೆ ಮೊದಲ ಚುನಾವಣಾ ಅನುಭವ ತುಂಬಾ ಜಾಗರೂಕತೆಯಿಂದ ವರ್ತಿಸುತ್ತಿದ್ದರು. ನಾಲ್ಕು ಗಂಟೆಯ ವೇಳೆಗೆ ನಮ್ಮನ್ನು ಬಳಿ ಬಿಟ್ಟರು ಅಲ್ಲಿ ಇಲ್ಲ ವ್ಯವಸ್ಥೆಗಳನ್ನು ಮಾಡಿ ಕೊಂಡೆವು. ರಾತ್ರಿ ಅಲ್ಲಿ ಹಳ್ಳಿಯವರೆ ಅಡುಗೆಯ ವ್ಯವಸ್ಥೆ ಮಾಡಿದ್ದರು. ನಾನು ಮತ್ತು ಗೀತಾ ಅವರು ನಾನು ತೆಗೆದುಕೊಂಡು ಹೋಗಿದ್ದ ಚಪಾತಿ ಹಾಗೂ ಹಾಗಲಕಾಯಿ ಗೊಜ್ಜುಗಳಲ್ಲಿ ರಾತ್ರಿಯ ಊಟ ಮುಗಿಸಿದೆವು .ಹಳ್ಳಿಯ ಶಾಲೆ, ಸದ್ಯ ನಮಗೆ  ಶಿಕ್ಷಕರು ಉಪಯೋಗಿಸುವ ಶೌಚಾಲಯವನ್ನು ಸ್ವಚ್ಛಗೊಳಿಸಿ ಬಿಟ್ಟು ಕೊಟ್ಟಿದ್ದರು. ಆದರೆ ಸ್ನಾನಕ್ಕೆ ಮಾತ್ರ ವ್ಯವಸ್ಥೆ ಇರಲಿಲ್ಲ ಬೆಳಗಾಗುವ ಮೊದಲೇ ಸ್ನಾನ ಮಾಡಿಕೊಂಡಿದ್ದರಂತೆ .ನಮಗೆ ಮಾತ್ರ ಅಂದು ಸ್ನಾನ ಭಾಗ್ಯ ಸಿಗಲಿಲ್ಲ.ಬೆಳಿಗ್ಗೆ 7.30ಗೆ ಚುನಾವಣೆ ಆರಂಭವಾಯಿತು ಎರಡೆರಡು ಸ್ಥಾನಗಳಿಗೆ ಆದ್ದರಿಂದ ಸ್ವಲ್ಪ ಸಮಯ ಹಿಡಿಯುತ್ತಲು ಇತ್ತು ಬೆಳಿಗ್ಗೆ 7.30 ಇಂದ ಸಂಜೆ ಆರು ಗಂಟೆಯ ತನಕ ಚುನಾವಣೆಗಳು ತಿಂಡಿ ತಿನ್ನಲು ಸಹ ಬಿಡುವಾಗಲಿಲ್ಲ ನಮಗೆಲ್ಲ ಕೈ ತುಂಬಾ ಕೆಲಸ ಇದ್ದುದರಲ್ಲಿ ಪಿ ಆರ್ ಓ ಅವರೇ ಮೇಲ್ವಿಚಾರಣೆ ಮಾಡಿಕೊಳ್ಳುತ್ತ ನಾವು ಕೆಲಸ ಮಾಡುತ್ತಲೇ ತಿನ್ನುವ ಹಾಗೆ ಬ್ರೆಡ್ ಚಾ ಬಾಳೆಹಣ್ಣು ಬಿಸ್ಕತ್ತು ಇವುಗಳನ್ನು ಸರಬರಾಜು ಮಾಡಿದರು ಒಂದು ಗಂಟೆಯ ವೇಳೆಗೆ ಸ್ವಲ್ಪ ಜನಸಂದಣಿ ಕಡಿಮೆಯಾಗಿದ್ದರಿಂದ ಒಬ್ಬೊಬ್ಬರಾಗಿ ಹೋಗಿ ಊಟ ಮಾಡಿಕೊಂಡು ಬಂದೆವು .ನನಗೆ ಅಲ್ಲಿಯ ಅಡಿಗೆ ಹೇಗಪ್ಪಾ ತಿನ್ನುವುದು ಎಂದು ಚಿಂತೆ .ಆದರೆ ಬೆಳಿಗ್ಗೆ ತಂದಿಟ್ಟಿದ್ದ ಉಪ್ಪಿಟ್ಟು ಹಾಗೆ ಇತ್ತು ಅದನ್ನ ತಿಂದು ಮೊಸರನ್ನ ತಿಂದು ಹೇಗೋ ಕಥೆ ಮುಗಿಸಿದ್ದಾಯಿತು. ಸಂಜೆ ಆರು ಗಂಟೆಗೆ ಮುಕ್ತಾಯ ಎಂದಿದ್ದರು ಆ ವೇಳೆಗೆ ಇದ್ದವರನ್ನೆಲ್ಲ ಮತದಾನ ಮಾಡಲು ಅವಕಾಶ ಮಾಡಿಕೊಡಲೇಬೇಕಿತ್ತು, ಆರು ಗಂಟೆಯ ನಂತರವೂ 60 70 ಜನ ಇದ್ದರು ನಮ್ಮ ಬೂತ್ ನಲ್ಲಿ 95% ಮತದಾನ ಆಗಿತ್ತು, ಅದು ಏಳು ಗಂಟೆಯ ವೇಳೆಗೆ ಮುಗಿದು ನಾವು ಎಲ್ಲಾ ಸ್ಟೇಟ್ಮೆಂಟ್ ಗಳನ್ನು ತಯಾರಿಸಿಕೊಳ್ಳುವ ವೇಳೆಗೆ 8.30 ಆಗಿತ್ತು ಬಸ್ ಆಗ ಬಂತು ಸಣ್ಣಪುಟ್ಟ ಉಳಿದದ್ದನ್ನು ಅಲ್ಲಿಗೆ ಮುಗಿಸಿಕೊಂಡು ಎಂದು ಹೊರಟುಬಿಟ್ಟವು ಮತ್ತೆ ಹುಣಸೂರು ತಾಲೂಕು ಕಚೇರಿಯಲ್ಲಿ ತುಂಬಾ ಜನ ಸಂದಣಿ. ಏನೊಂದು ವ್ಯವಸ್ಥೆ ಸಮರ್ಪಕವಾಗಿರಲಿಲ್ಲ. ಹೇಗೋ ನುಗ್ಗಿ ಅಂತೂ ಎಲ್ಲವನ್ನು ಸಲ್ಲಿಸುವ ವೇಳೆಗೆ ರಾತ್ರಿ 10:30 ಆಗಿ ಹೋಗಿತ್ತು. ನಂತರ ಮೈಸೂರಿಗೆ ಹೊರಡುವ ಬಸ್ನಲ್ಲಿ ಕುಳಿತು ಹೊರಟೆವು. ನಮ್ಮ ಪಿ ಆರ್ ಓ ಬಳಿ ಇದ್ದ ಮೊಬೈಲಿನಿಂದ ನನ್ನ ತಾಯಿಯ ಮನೆಯ ಲ್ಯಾಂಡ್ಲೈನ್ ಗೆ ಫೋನ್ ಮಾಡಿ ನಮ್ಮ ಪತಿಗೆ ವಿಷಯ ತಿಳಿಸಿ ಅವರು ಬಂದು ಬಸಪ್ಪ ಹಾಸ್ಪಿಟಲ್ ಬಳಿ ನನಗಾಗಿ ಕಾಯುತ್ತಿದ್ದರು. ಅಂತೂ ಇಂತೂ ನಾಳೆ ಮುಗಿಸಿ ಮನೆಗೆ ಬಂದಾಗ ಆ ದಿನ ದಾಟಿ ಹೋಗಿತ್ತು. ಈ ಶಾಖೆಯಲ್ಲಿ ಇದ್ದಾಗಲೇ ಮತ್ತೊಮ್ಮೆ ಹೈದರಾಬಾದ್ ತರಬೇತಿಗೆ ಕರೆ ಬಂತು ಅದು ಮತ್ತೆ ನಾನು ಹಾಗೂ ನಂದಶ್ರೀ ಕುಲಕರ್ಣಿ ಕಟ್ಟಿ ಜೊತೆಯಾಗಿ ಹೈದರಾಬಾದಿಗೆ ಹೋಗಿದ್ದೆವು. ಮಕ್ಕಳನ್ನು ಅವರ ತಾಯಿ ಮನೆಗೆ ಬಿಟ್ಟು ಹೋಗಬೇಕಾಗಿತ್ತು. ಮೊದಲು ಬೆಂಗಳೂರಿಗೆ ಹೋಗಿ ಅವರ ಮನೆಯಲ್ಲಿ ಬಿಟ್ಟು ನಂತರ ಹೈದರಾಬಾದ್ ಟ್ರೈನ್ ಹಿಡಿದದ್ದು ಇಂದಿನಂತೆ ಹೈದರಾಬಾದ್ ತರಬೇತಿ ತುಂಬಾ ಆಸಕ್ತಿದಾಯಕವಾಗಿ ಚೆನ್ನಾಗಿಯೂ ಇತ್ತು. ಈ ಬಾರಿ ಬರಿ ಬಿರ್ಲಾ ಮಂದಿರ ಮಾತ್ರ ನೋಡಿದ್ದು ಖರೀದಿಯೇ ಹೆಚ್ಚು. ನನ್ನ ತಂಗಿಯರಿಗೆ ಹಾಗೂ ಈಗಾಗಲೇ ನನ್ನ ಮೈದುನನಿಗೆ ಮದುವೆಯಾಗಿ ನಾನು ಓರಗಿತ್ತಿಗೆ ಸೀರೆ ತೆಗೆದುಕೊಂಡಿದ್ದೆ ನನ್ನ ನಾದಿನಿ ಮೂರು ಜನರಿಗೂ ಹೈದರಾಬಾದ್ ಸರಗಳು. ತುಂಬಾ ಖುಶಿ ಕೊಟ್ಟ ಪ್ರವಾಸ ಅದು.(ಮುಂದುವರೆಯುವುದು) ಸುಜಾತಾ ರವೀಶ್ಮೈಸೂರು

Read Post »