ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಅನುರಾಧಾ ರಾಜೀವ್ ಸುರತ್ಕಲ್ ಅವರ ಕವಿತೆ “ಮೌನದ ಆಲಾಪನೆ”

ಕಾವ್ಯ ಸಂಗಾತಿ ಅನುರಾಧಾ ರಾಜೀವ್ ಸುರತ್ಕಲ್ “ಮೌನದ ಆಲಾಪನೆ” ಒಲವು ಬಾಡಿತೇಕೆ ಹೇಳು ಮನವೇಬತ್ತಿ ಹೋದವೇ ಭಾವಗಳುನಲಿವ ಹೃದಯದ ಬಡಿತ ನಿಂತಿತೇಸೋತು ಸೊರಗಿದೆ  ಬಂಧಗಳು ಕಣ್ಣು ಕಣ್ಣಲಿ ಬೆಸೆದು ನೋಟವುಹೊಸತು ಲೋಕವ ಕಟ್ಟಿದೆಮಣ್ಣು ಮಾಡಿದೆ ಎದೆಯ ಕನಸನುಪ್ರೇಮದರಮನೆ ಕುಸಿದಿದೆ ಮಾತು ಬಾರದ ಮೂಕ ಹಕ್ಕಿಯತೆರದಿ ಜೀವನವಾಗಿದೆತಂತಿ ಹರಿದ ಜೀವ ನಾದದಲಿಮೌನದ ಆಲಾಪನೆ ಕೇಳಿದೆ ಬಾಳ ಪಯಣದಿ ಆಸರೆ ಇಲ್ಲದೆಬಾಡಿ ಹೋಗಿದೆ ಬಯಕೆಯುಓಡಿ ಬರುವೆಯಾ ಒಮ್ಮೆಯಾದರೂಕೊನೆಗೆ ನೋಡುವಾಸೆಯು ಅನುರಾಧಾ ರಾಜೀವ್ ಸುರತ್ಕಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಕವಿತೆ “ಮೌನದ ಆಲಾಪನೆ” Read Post »

ಕಾವ್ಯಯಾನ

ಕಲ್ಪನಾ ಎಸ್ ಪಾಟೀಲ ಅವರ ಕವಿತೆ “ಅಪ್ಪನ ಶವ ನಕ್ಕಿತಲ್ಲ.!”

ಕಾವ್ಯ ಸಂಗಾತಿ ಕಲ್ಪನಾ ಎಸ್ ಪಾಟೀಲ “ಅಪ್ಪನ ಶವ ನಕ್ಕಿತಲ್ಲ.!” ಅಪ್ಪನಿಗೆ ತನ್ನ ಮಕ್ಕಳು ಎಂದಿಗೂಭಾರ ಅನಿಸಲೆ ಇಲ್ಲ.ಅದ್ಯಾಕೋ ಅಪ್ಪ ಮಕ್ಕಳಿಗೆಭಾರವಾಗಿ ಬಿಟ್ಟ………… ಆರು ಹೆತ್ತರೂ ತನ್ನ ಮಕ್ಕಳಿಗೆ ಏನುಕೊರತೆಯಾಗದಂತೆ ಸಾಕಿದನಲ್ಲಅದ್ಯಾಕೋ ಅಪ್ಪನ ಸಾಕೋಕೆಮಕ್ಕಳಿಗೆ ಹಣದ ಕೊರತೆ ಆಯಿತಲ್ಲ………. ಎರಡೆರಡು ತಿಂಗಳಿಗೊಮ್ಮೆ ಒಬ್ಬೊಬ್ಬರುಜೋಪಾನ ಮಾಡುವರಲ್ಲಆಸ್ತಿಯ ಹಂಚಿಕೊಂಡಂತೆ ಅಪ್ಪನನ್ನೂಸಹ ಹಂಚಿಕೊಂಡು ಬಿಟ್ಚರಲ್ಲ………….. ಅಪ್ಪನ ಮಾನಸಿಕ ಸ್ಥಿತಿಯ ಪರಿವೆಅವರಿಗೆ ಆಗಲೆ ಇಲ್ಲಆದರೂ ಅಪ್ಪ ಎಲ್ಲ ಒಳಗೊಳಗೆನುಂಗಿದನಲ್ಲ…………… ಹೆಂಡತಿ ಇದ್ದಾಗ ನೋಡು ನನ್ನಮಕ್ಕಳನ್ನ ಅಂತಿದ್ದ ಬೀಗತಿದ್ದಅವಳಿಲ್ಲದಾಗ ಆತನೆ ಕುಗ್ಗಿದ್ದಹಾಸಿಗೆ ಹಿಡಿದ ದಿನದಿಂದಲೆ ನಗುವದನ್ನೆನಿಲ್ಲಿಸಿದ………… ಈಗೀಗ ನೀನ್ಯಾಕ ನನ್ನ ಒಬ್ಬಂಟಿ ಮಾಡಿಹೋದೆ ಅಂತಿದ್ದಎಲ್ಲದರಲ್ಲೂ ಮೊದಲೆನ್ನುವವಳುಸಾವಲ್ಲೂ ಮೊದಲೆ ಆದೆ………… ನನ್ನ ಮಾತ್ರ ಎಲ್ಲವ ಅನುಭವಿಸಿಬಾ ಎಂದೆ ಎನುತಿದ್ದಆಗಾಗ ಹಲಬುತ್ತಿದ್ದ ಮಕ್ಕಳಿಗೆ ಇದ್ಯಾವುದರಪರಿವೆ ಆಗದಂತೆ ಇದ್ದ …….. ಇನ್ನೂ ಯಾವಾಗ ಸಾಯತಾನೋ?ಎನ್ನುವರೆಲ್ಲಅದೇನಾಸೆಯ ಇಟ್ಟುಕೊಂಡಿದ್ದ ಗೊತ್ತಿಲ್ಲಅಂತು ಇಂತು ಕೊನೆಯ ಕ್ಷಣ ಬಂದಿತಲ್ಲ …….. ಇಷ್ಟು ದಿನ ನಗದ ಅಪ್ಪ ಆದ್ರೂ ಇಂದುಅಪ್ಪನ ಶವ ನಕ್ಕಿತಲ್ಲಮಕ್ಕಳು ಮಕ್ಕಳು ಅಂತಿದ್ದೆ ಮಕ್ಕಳಿಗಾಗಿಮನೆ ಮಾಡಿದೆ……….. ಅವರಿಷ್ಟದ ಗಾಡಿ ಕೊಡಿಸಿದೆನೀನೆ ಕಟ್ಟಿಸಿಕೊಟ್ಟ ಮನೆಯಲ್ಲಿ ಜಾಗವಿಲ್ಲನಿನ್ನ ಅಂತಿಮ ಯಾತ್ರೆಗೆದೊಡ್ಡ ದೊಡ್ಡ ಗಾಡಿಗಳಿದ್ದರೂ ಮುಕ್ತಿರಥವೆಗತಿಯಾಗಿತ್ತು ನಿನ್ನ  ಬಾಡಿಗೆಎನ್ನುತಲೆ ಅಪ್ಪನ ಶವ ನಗತಿತ್ತು……… ಅಪ್ಪನಿಗಾಗಿ ಬಡಿದಾಡಲೆ ಇಲ್ಲಅಪ್ಪನ ಹಣಕ್ಕಾಗಿ ಹೆಣದ ಮುಂದೆಬಡಿದಾಡಿದರಲ್ಲಆಗಲೂ ಅಪ್ಪನ ಶವ ನಗತಿತ್ತು …….. ನನ್ನವರೆಂದವರು ಯಾರೂನನ್ನವರಾಗಿರಲೆ ಇಲ್ಲಅಪ್ಪನ ಜೋಪಾನ ನಾ ಮಾಡಿದೆನಾ ಮಾಡಿದೆ ಎನ್ನುವರೆ ಎಲ್ಲ ………. ಎಲ್ಲವೂ ಅಪ್ಪನ ಶವದ ಮುಂದೆ ನಡೆದಿತ್ತಲ್ಲಅದೆಷ್ಟಂತ ಬಡದಾಡತಿರಿ ಅಂತಕೇಳೋಕ ಆತ ಇಲ್ಲಆತನ ಶವ ಮಾತ್ರ ನಗತಿತ್ತಲ್ಲ……. ಇವರ ಕಣ್ಣೀರ ಕೂಗು ಕೇಳದಷ್ಟುದೂರ ಹಂಗಿನ ಮಾತು ಮನಸಿಗೆಮುಟ್ಟದಂತೆ ಮಲಗಿ ಬಿಟ್ಟಿದ್ದಅಪ್ಪನ ಶವ ಈಗಂತೂ ಜೋರಾಗಿ ನಗತಿತ್ತು…… ಇನ್ನ್ಯಾರ ಅಪ್ಪ ಎನ್ನುವಿರಿ? ಎರಡೆರಡುತಿಂಗಳಿಗೊಮ್ಮೆ ಮನೆಯಿಂದ ಮನೆಗೆಊರಿಂದ ಊರಿಗೆ ಅದಾರನ್ನತಂದಿರಿಸಿಕೊಳ್ಳುವಿರಿ?ಎಂದುಕೇಳುತಲೆ ಇತ್ತು. ಅಪ್ಪ ಶವ ನಗತಾನೆ ಇತ್ತು………. ಬದುಕಿದ್ದಾಗಲೆ ಯಾವ ಮಾತು ಮನಸಮುಟ್ಟಲೆ ಇಲ್ಲ, ತಟ್ಟಲೆ ಇಲ್ಲಈಗೆಲ್ಲಿ ಮುಟ್ಟುವವು? ಯಾರಮನಸ್ಸ ತಟ್ಟುವವು…………. ಕಲಹ,ಕದನ,ರೋದನ,ಸಿಟ್ಟುಎಲ್ಲವ ಎಲ್ಲರೂ ಶವದ ಮುಂದೆಹೊರ ಹಾಕುವವರೆ ಬಿಕ್ಕಿ ಬಿಕ್ಕಿಅದಾವುದಕ್ಕೋ ಅಳುವರೆಲ್ಲ………….. ಅದ ಕೇಳೋಕೆ ಯಾರಿಗೂ ಪುರಸೊತ್ತಿಲ್ಲಯಾಕಂದ್ರ ಅಲ್ಲಿದ್ದವರೆಲ್ಲ ಹೇಳತಿದ್ರಲ್ಲಲಗೂಣ ಹೆಣ ಎತ್ತರಲ್ಲ, ಇವರೆಲ್ಲ ಅತ್ತರೆಊರ ಜನ ನೋಡಿ ಅಯ್ಯೋ ಪಾಪ ಅಂದರಲ್ಲ….. ಪಾಪ! ಅವರಿಗೇನ ಗೊತ್ತು, ಮಕ್ಕಳ ಸ್ವಾರ್ಥದುರಾಸೆ ಅಪ್ಪನಿಗಷ್ಟೆ ಗೊತ್ತಿತ್ತಲ್ಲಆತನ ಶವ ನಕ್ಕಿದ್ದು ಅವರಾರಿಗೂ ಗೊತ್ತೆಆಗಲೆ ಇಲ್ಲ ……… ಅಂತು-ಇಂತು ಅಪ್ಪನ ಅಂತಿಮಯಾತ್ರೆಮುಗಸಿದ್ರಲ್ಲ. ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್ ಪಾಟೀಲ ಅವರ ಕವಿತೆ “ಅಪ್ಪನ ಶವ ನಕ್ಕಿತಲ್ಲ.!” Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ “ತ್ರಿವಿಧ ದಾಸೋಹ ಮೂರ್ತಿ ಶಿವಯೋಗ ಸಾಧಕ ಶ್ರೀ ಮೃತ್ಯುಂಜಯ ಸ್ವಾಮಿಗಳು” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ತ್ರಿವಿಧ ದಾಸೋಹ ಮೂರ್ತಿ ಶಿವಯೋಗ ಸಾಧಕ ಶ್ರೀ ಮೃತ್ಯುಂಜಯ ಸ್ವಾಮಿಗಳು” ಬಸವೋತ್ತರ ಕಾಲದ ಶರಣರು ಮತ್ತು ಶಿವಯೋಗ ಸಾಧಕರಲ್ಲಿ ಪರಮ ಪೂಜ್ಯ ಶ್ರೀ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳ ಕಾರ್ಯ ಅವಿಸ್ಮರಣೀಯ.ಇವರ ಕರ ಸಂಜಾತ ಹಾಗೂ ಅವರ ಪಡಿನೆರಳಿನಂತೆ ಬದುಕಿ ಬಸವ ಜಯಂತಿ ಆಚರಣೆ ಆರಂಭಿಸಿದ ಧೀಮಂತ ಶಿವಯೋಗಿ ಶ್ರೀ ಮೃತ್ಯುಂಜಯ ಸ್ವಾಮಿಗಳು. ಕಾಶಿ ಬಿಟ್ಟು ಅಥಣಿಗೆ ಬಂದ ಬಾಲಕ ಶ್ರೀ ಮೃತ್ಯುಂಜಯ ಸ್ವಾಮಿಗಳು. ಅವತ್ತಿನ ಶ್ರೇಷ್ಠ ಲಿಂಗಾಯತ ಧರ್ಮದ ಹಿರಿಯ ಸ್ವಾಮಿಗಳು ನಾಯಕನೂರಿನ ಕಾಶಿನಾಥ ಶಾಸ್ತ್ರಿಗಳು ಅವರಿಗೆ ಭೇಟಿ ಮಾಡಿ ತಾವು ಕಾಶಿಗೆ ಹೋಗ ಬೇಕೆನ್ನುವ ಪ್ರಬಲ ಇಚ್ಛೆಯನ್ನು ಮೃತ್ಯುಂಜಯ ಸ್ವಾಮಿಗಳು ವ್ಯಕ್ತ ಪಡಿಸುತ್ತ ಕಾಶಿಗೆ ಹೋಗುವ ತಯಾರಿ ಬಗ್ಗೆ ಕಾಶಿನಾಥ ಶಾಸ್ತ್ರಿಗಳನ್ನು ಕೇಳಿದರು. ಆಗ ಶ್ರೀ ಕಾಶಿನಾಥ  ಶಾಸ್ತ್ರಿಗಳು ದೂರದ ಊರಿಗೆ ಹೋಗಿ ತಿಳಿಯದ ಸಂಸ್ಕೃತ ಭಾಷೆ ಕಲಿಯುವಕ್ಕಿಂತ ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳ ಹತ್ತಿರ ವಚನ ಸಾಹಿತ್ಯ ಮತ್ತು ಶಿವಯೋಗ ಸಾಧನೆ ಮಾಡು ಎಂದು ಸಲಹೆ ನೀಡಿದರಂತೆ.  ಅವರ ಸಲಹೆ ಮತ್ತು ವಿಚಾರದಂತೆ ಶ್ರೀ ಮೃತ್ಯುಂಜಯ ಸ್ವಾಮಿಗಳು ನೇರವಾಗಿ ಅಥಣಿಗೆ ಬಂದು ತಮ್ಮ ಅಧ್ಯಯನ ವಿದ್ಯಾಭ್ಯಾಸದ ಇಚ್ಛೆಯನ್ನು ವ್ಯಕ್ತ ಪಡಿಸಿದರು. ಆಗ ಅಥಣಿ ಶ್ರೀ ಗಳು ಇವರನ್ನು ಪರೀಕ್ಷಿಸಲೆಂದು ಬಾಲಕನತ್ತ ಹೆಚ್ಚು ಗಮನ ನೀಡದೆ ಸುಮ್ಮನಾದರು.  ಏಕೋ ಬೇಸರಗೊಂಡ ಬಾಲಕ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಲ್ಲಿರುವ ಮಠದ ಸೇವಕರನ್ನು ವಿಚಾರಿಸುತ್ತಾ, ಯಾವ ಕೆಲಸ ಮಾಡಿದರೆ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳ ಪ್ರೀತಿಗೆ ಪಾತ್ರರಾಗುತ್ತೇವೆ ಎಂದು ಕೇಳಿದರು. ಆಗ ಮಠದ ಸ್ಥಳೀಯರು ಶಿವಯೋಗಿಗಳಿಗೆ ಬೆಳಿಗ್ಗೆ ಐದಕ್ಕೆದ್ದು ಮಠದ ಅಂಗಳ ಕಸ ಹೊಡೆದು ಬರುವ ಭಕ್ತರಿಗೆ ಬಿಸಿ ನೀರು ಕಾಯಿಸುವುದು ಅವರಿಗೆ ಪ್ರೀತಿಯ ಕೆಲಸ. ನೀನು ಬೆಳಿಗ್ಗೆ ನಾಲ್ಕಕ್ಕೆ ಎದ್ದು ಈ ಕೆಲಸ ಮಾಡಿದರೆ, ನಿನ್ನನ್ನು ಶಿವಯೋಗಿಗಳು ಶಿಷ್ಯನನ್ನಾಗಿ ಸ್ವೀಕರಿಸುವರು ಎಂದು ಸಲಹೆ ನೀಡಿದರಂತೆ.  ಇದರಿಂದ ಪುಳುಕಿತನಾದ ಶ್ರೀ ಮೃತ್ಯುಂಜಯ ಸ್ವಾಮಿಗಳು ಬೆಳಿಗ್ಗೆ ನಾಲ್ಕಕ್ಕೆ ಎದ್ದು ಮಠದ ಕಸ ಹೊಡೆದು ಬರುವ ಭಕ್ತರಿಗೆ ಬಿಸಿ ನೀರು ಕಾಯಿಸಿ ಮತ್ತೆ ತಮ್ಮ ಕೋಣೆಗೆ ಹೋಗಿ ಮಲಗಿದರು. ಬೆಳಿಗ್ಗೆ ಎಂದಿನಂತೆ ಎದ್ದು ಮಠದ ಕಸ ಹೊಡೆಯಲು ಪೂಜ್ಯ ಶ್ರೀ ಮುರುಗೇಂದ್ರ ಶಿವಯೋಗಿಗಳು ಇದ್ದಾಗ ಮಠವು ಸಂಪೂರ್ಣ ಸ್ವಚ್ಛವಾಗಿತ್ತು. ಹಿತ್ತಲದಲ್ಲಿ ನೀರು ಕಾಯಿಸಲು ಹೋದಾಗ  ಅಲ್ಲಿ ಹಂಡೆಯಲ್ಲಿ ನೀರು ಬೆಂಕಿಯಾಗಿದ್ದವು.  ಯಾರೋ ಈ ಕಾರ್ಯ ಮಾಡಿರ ಬಹುದೆಂದು ಶಿವಯೋಗಿಗಳು ಅಂದು ತಾವು ಕಾಯಕ ಮಾಡದ ಕಾರಣ ಎರಡೂ ಹೊತ್ತು  ಪ್ರಸಾದ ಸೇವಿಸದೆ ಮಲಗುತ್ತಾರೆ. ಮತ್ತೆ ಬೆಳಿಗ್ಗೆ ಶ್ರೀ ಮೃತ್ಯುಂಜಯ ಸ್ವಾಮಿಗಳು ತಮ್ಮ ಬೆಳಗಿನ ಜಾವದ ಮಠದ ಕಸ ಹೊಡೆದು ಬರುವ ಭಕ್ತರಿಗೆ ಬಿಸಿ ನೀರು ಕಾಯಿಸುವ ಕಾರ್ಯ ಮುಂದುವರೆಸುತ್ತಾರೆ. ಮತ್ತೆ ಎಂದಿನಂತೆ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳು ನಿರಾಸೆಯಾಗುತ್ತಾರೆ. ಮತ್ತೆ ಪ್ರಸಾದ ಸೇವಿಸದೆ ಮಠದ ಇತರ ಕಾರ್ಯ ಮಾಡುತ್ತಾ ಇಷ್ಟ ಲಿಂಗ ಪೂಜೆ ಸಲ್ಲಿಸಿ ಮಲಗುತ್ತಾರೆ.  ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳ ಉಪವಾಸದ  ಕೆಲಸ ಮಠದ ಯಾರಿಗೂ ಗೊತ್ತಾಗುವುದಿಲ್ಲ. ಒಂದು ದಿನ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳು ಈ ಕೆಲಸ ಮಾಡುತ್ತಾರೆ ಎಂದು ನೋಡ ಬೇಕೆಂದು ರಾತ್ರಿಯಿಡಿ ಎಚ್ಚರವಿದ್ದು  ಯಾರು ಈ ಕಾರ್ಯವನ್ನು ಮಾಡುತ್ತಾರೆ ಎಂದು ನೋಡುತ್ತಾ ಕುಳಿತು ಕೊಳ್ಳುತ್ತಾರೆ. ಬೆಳಿಗ್ಗೆ ಬಾಲಕ ಮತ್ತೆ ಮಠದ ಕಸವ ಹೊಡೆಯಲು ಮುಂದಾದಾಗ ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳು ಬಾಲಕನ ಕೈಯನ್ನು ಗಟ್ಟಿಯಾಗಿ ಹಿಡಿದು ಏಕೆ ಹೀಗೆ ಅಪರಾತ್ರಿಯಲ್ಲಿ ನೀನು ಕಸವನ್ನು ಹೊಡೆಯುತ್ತಿ ಎಂದು ಗದರಿಸಿದಾಗ ಬಾಲಕ ಭಯ ಪಟ್ಟು ಜೋರಾಗಿ ಅಳತೊಡಗಿದನು. ಆಗ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳು ಬಾಲಕ ಶ್ರೀ ಮೃತ್ಯುಂಜಯ ಸ್ವಾಮಿಗಳನ್ನು ಅಪ್ಪಿ ಮುದ್ದಾಡಿ ಅವರಿಗೆ ಲಿಂಗ ದೀಕ್ಷೆ ನೀಡಿ ಅಪ್ಪಟ ಬಸವ ತತ್ವ ಅಧ್ಯಯನ ಮಾಡಲು ಅವಕಾಶ ಮಾಡಿ ಕೊಡುವುದಲ್ಲದೆ. ಧಾರವಾಡದ ಡಬಗಳ್ಳಿ ಮಠದ ಉಸ್ತುವಾರಿ ನೋಡಿಕೊಳ್ಳಲು ಹೇಳುತ್ತಾರೆ. ಮುರುಘಾ ಪರಂಪರೆಯ ಶ್ರೇಷ್ಠ ಶಿವಯೋಗ ಸಾಧಕರನ್ನಾಗಿ ಮಾಡಿ ಧಾರವಾಡ ಮುಳುಗುಂದ ಮುಂತಾದ ಅನೇಕ ಮಠಗಳಲ್ಲಿ ಪೂಜ್ಯರಾದ ಶ್ರೀ ಮೃತ್ಯುಂಜಯ ಸ್ವಾಮಿಗಳು ತಮ್ಮ ಗುರು ಲಿಂಗ ಜಂಗಮ ಸೇವೆ ಸಲ್ಲಿಸಿದ ಅಪ್ರತಿಮ ಶರಣ ಸಂಸ್ಕೃತಿ ಪ್ರಚಾರಕರಾಗಿ ಪ್ರತಿಯೊಬ್ಬರಿಗೂ ಆದರಣೀಯರಾಗಿದ್ದಾರೆ.  ಧಾರವಾಡದ ಶ್ರೀ ಮುರುಘಾ ಮಠದ ಶ್ರೀ ಮೃತ್ಯುಂಜಯ ಸ್ವಾಮಿಗಳವರು (ಮೃತ್ಯುಂಜಯ ಅಪ್ಪಗಳು) ಕರ್ನಾಟಕದ ಶರಣ ಪರಂಪರೆಯ ಉಜ್ವಲ ಚೇತನಗಳಲ್ಲೊಬ್ಬರು. ಅವರ ಜೀವನ ಚರಿತ್ರೆಯ ಅರಿತುಕೊಳ್ಳುವುದು ನಮ್ಮ ಪುಣ್ಯದ ಕೆಲಸ. 1. *ಜನನ ಮತ್ತು ಬಾಲ್ಯ* ಜನನ: ಇವರು 1888ರ ಏಪ್ರಿಲ್ 9 ರಂದು ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ಜನಿಸಿದರು. ತಂದೆ-ತಾಯಿ: ಇವರ ತಂದೆ ಕಂತಯ್ಯ ಸ್ವಾಮಿ ಮತ್ತು ತಾಯಿ ಚೆನ್ನವೀರಮ್ಮ. ಬಾಲ್ಯ: ಇವರ ಪೂರ್ವಾಶ್ರಮದ ಹೆಸರು ಮೃತ್ಯುಂಜಯ. ಬಾಲ್ಯದಲ್ಲೇ ಸಂಗೀತ ಮತ್ತು ಆಧ್ಯಾತ್ಮಿಕತೆಯತ್ತ ವಿಶೇಷ ಒಲವು ಹೊಂದಿದ್ದರು.  2. *ಶಿಕ್ಷಣ ಮತ್ತು ಸನ್ಯಾಸ* ಪ್ರಾಥಮಿಕ ಶಿಕ್ಷಣದ ನಂತರ, ಇವರು ಗದಗದ ತೋಂಟದಾರ್ಯ ಮಠದಲ್ಲಿ ಸಂಸ್ಕೃತ ಮತ್ತು ಕನ್ನಡ ಸಾಹಿತ್ಯವನ್ನು ಅಭ್ಯಾಸ ಮಾಡಿದರು. ಅಥಣಿಯ ಶ್ರೀ ಮುರುಘೇಂದ್ರ ಶಿವಯೋಗಿಗಳ ಪ್ರಭಾವಕ್ಕೆ ಒಳಗಾದ ಇವರು, ಅವರಿಂದ ಲಿಂಗದೀಕ್ಷೆ ಮತ್ತು ಸನ್ಯಾಸ ಸ್ವೀಕರಿಸಿದರು.  3. ಧಾರವಾಡದ ಮುರುಘಾ ಮಠಕ್ಕೆ ಆಗಮನ (1916) ಮೃತ್ಯುಂಜಯ ಸ್ವಾಮಿಗಳು 1916ರಲ್ಲಿ ಧಾರವಾಡದ ಮುರುಘಾ ಮಠಕ್ಕೆ ಬಂದಾಗ, ಮಠವು ಕೇವಲ ಒಂದು ಸಣ್ಣ ಕೊಠಡಿಯಂತಿದ್ದು, ಸುತ್ತಲೂ ಮುಳ್ಳಿನ ಕಂಟಿಗಳಿಂದ ಕೂಡಿತ್ತು. ತಮ್ಮ ಸಂಕಲ್ಪಶಕ್ತಿಯಿಂದ ಪಾಳುಬಿದ್ದಿದ್ದ ಮಠವನ್ನು ಇಂದು ನಾವು ನೋಡುತ್ತಿರುವ ಭವ್ಯ ದಾಸೋಹ ಕೇಂದ್ರವಾಗಿ ಪರಿವರ್ತಿಸಿದರು.  4. ಪ್ರಮುಖ ಕಾರ್ಯಗಳು ಮತ್ತು ಸಾಧನೆಗಳು ತ್ರಿವಿಧ ದಾಸೋಹ: ಅನ್ನ, ಜ್ಞಾನ ಮತ್ತು ಅಧ್ಯಾತ್ಮ – ಈ ಮೂರೂ ದಾಸೋಹಗಳನ್ನು ಮಠದಲ್ಲಿ ನಿರಂತರವಾಗಿ ನಡೆಸಿಕೊಂಡು ಬಂದರು. ಉಚಿತ ಪ್ರಸಾದ ನಿಲಯ (1917): ಬಡ ವಿದ್ಯಾರ್ಥಿಗಳಿಗಾಗಿ 1917ರಲ್ಲಿ ಉಚಿತ ಪ್ರಸಾದ ನಿಲಯವನ್ನು ಸ್ಥಾಪಿಸಿದರು. ಇಂದು ಈ ನಿಲಯಕ್ಕೆ 100 ವರ್ಷಗಳ ಇತಿಹಾಸವಿದ್ದು, ಸಾವಿರಾರು ಬಡ ಮಕ್ಕಳು ಇಲ್ಲಿ ಕಲಿತು ಉನ್ನತ ಹುದ್ದೆಗಳಲ್ಲಿದ್ದಾರೆ. 63 ಪುರಾತನರ ವಸತಿ ನಿಲಯ: ಶಿವಶರಣರ ನೆನಪಿಗಾಗಿ 63 ಕೊಠಡಿಗಳ ವಸತಿ ನಿಲಯವನ್ನು ನಿರ್ಮಿಸಿ, ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದರು. ಅಖಿಲ ಭಾರತ ಶಿವಾನುಭವ ಸಂಸ್ಥೆ: ಶರಣ ತತ್ವಗಳ ಪ್ರಸಾರಕ್ಕಾಗಿ ಈ ಸಂಸ್ಥೆಯನ್ನು ಸ್ಥಾಪಿಸಿ, ನಾಡಿನಾದ್ಯಂತ ಧಾರ್ಮಿಕ ಜಾಗೃತಿ ಮೂಡಿಸಿದರು.  5. ವ್ಯಕ್ತಿತ್ವ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೃತ್ಯುಂಜಯ ಅಪ್ಪಗಳು, ಯಾರೇ ಮಠಕ್ಕೆ ಬಂದರೂ ಪ್ರಸಾದ ಮಾಡದೆ ಕಳುಹಿಸುತ್ತಿರಲಿಲ್ಲ. ಇವರು ಕೇವಲ ಧಾರ್ಮಿಕ ಗುರುವಾಗಿರದೆ, ಶಿಕ್ಷಣ ತಜ್ಞರಾಗಿ ಮತ್ತು ಸಮಾಜ ಸುಧಾರಕರಾಗಿ ನಾಡಿನ ಜನರ ಮನಸ್ಸಿನಲ್ಲಿ ನೆಲೆಸಿದ್ದಾರೆ.  ಬಯಲಲ್ಲಿ ಬಯಲಾದರು  1916ರಲ್ಲಿ ಧಾರವಾಡದ ಮುರುಘಾ ಮಠಕ್ಕೆ ಆಗಮಿಸಿದ ಅವರು, ಸುಮಾರು 48 ವರ್ಷಗಳ ಕಾಲ ಮಠದ ಪೀಠಾಧ್ಯಕ್ಷರಾಗಿ ಸೇವೆ ಸಲ್ಲಿಸಿ, ಅನ್ನ ಮತ್ತು ಜ್ಞಾನ ದಾಸೋಹದ ಮೂಲಕ ಮಠವನ್ನು ನಾಡಿನ ಪ್ರಮುಖ ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರವನ್ನಾಗಿ ರೂಪಿಸಿದರು.  ಧಾರವಾಡದ ಮುರುಘಾ ಮಠದ ಕೀರ್ತಿಶೇಷರಾದ ಶ್ರೀ ಮೃತ್ಯುಂಜಯ ಸ್ವಾಮಿಗಳು (ಮೃತ್ಯುಂಜಯ ಅಪ್ಪಗಳು) 1964ರ ಜೂನ್ 16 ರಂದು ಲಿಂಗೈಕ್ಯರಾದರು. ಡಾ ಡಿ ಸಿ ಪಾವಟೆ ಅವರು ಕರ್ನಾಟಕ ವಿಶ್ವ ವಿದ್ಯಾಲಯ ಸ್ಥಾಪಿಸಿ ಜ್ಞಾನ ದಾಸೋಹ ಮಾಡಿದ್ದಾರೆ. ಅವರಿಗೆ ಪೂರಕವಾಗಿ ಶ್ರೀ ಮೃತ್ಯುಂಜಯ ಸ್ವಾಮಿಗಳು ಅನ್ನ ದಾಸೋಹ ನೀಡಿ ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾದರು. ಬಡ ಮಕ್ಕಳ ಶೈಕ್ಷಣಿಕ ಮತ್ತು ಆರ್ಥಿಕ ಸಂಕಷ್ಟ ನಿವಾರಿಸಿ ಉಚಿತ ಪ್ರಸಾದ ನಿಲಯವನ್ನು ಸ್ಥಾಪಿಸಿ ಅವರ ಉಜ್ವಲ ಭವಿಷ್ಯದ ರೂವಾರಿಯಾದರು. ಇವರ ನಂತರ ಪೀಠವನ್ನಲಂಕರಿಸಿದ ಶ್ರೀ ಮಹಾಂತ ಅಪ್ಪಗಳು ಮೃತ್ಯುಂಜಯ ಅಪ್ಪಗಳ ಹಾದಿಯಲ್ಲೇ ನಡೆದು ಮಠವನ್ನು ಮತ್ತಷ್ಟು ಅಭಿವೃದ್ಧಿಪಡಿಸಿದರು __________________________ ಡಾಶಶಿಕಾಂತ ಪಟ್ಟಣ ರಾಮದುರ್ಗ

ಸಾವಿಲ್ಲದ ಶರಣರು ಮಾಲಿಕೆ “ತ್ರಿವಿಧ ದಾಸೋಹ ಮೂರ್ತಿ ಶಿವಯೋಗ ಸಾಧಕ ಶ್ರೀ ಮೃತ್ಯುಂಜಯ ಸ್ವಾಮಿಗಳು” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

You cannot copy content of this page

Scroll to Top