ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಭೂಮಿಗೆ ನಮನ”

ಕಾವ್ಯಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಭೂಮಿಗೆ ನಮನ” ಹಸಿರ ಉಸಿರ ಹೊತ್ತ  ಭೂದೇವಿ ನೀನು,ನಮ್ಮ ಬಾಳ ಹಾದಿಗೆ ದಿವ್ಯ ಬೆಳಕು ನೀನು.ಕೋಟಿ ಜೀವ ರಾಶಿಗೆ ಆಸರೆಯ ಮಡಿಲು,ನಿನ್ನ ಪ್ರೀತಿಗೆ ಸಾಟಿಯಿಲ್ಲ, ಕರುಣೆ  ಕಡಲು. ಬೆಟ್ಟ ಸಾಲುಗಳು ನಿನ್ನ  ಮುಡಿಗೆ ಹೂವು,ಹರಿಯುವ ನದಿಗಳು ನಿನ್ನ ಜೀವ ಸೆಲೆಯು.ಗಾಳಿ, ಮಣ್ಣು, ನೀರು ಮರ ನಿನ್ನ ಕೊಡುಗೆ,ಮರೆತ ಮಾನವನ ಎಂತ ಉಡುಗೆ ತೊಡುಗೆ   ನಮ್ಮ ಭೂಮಿ ನಾವು ಉಳಿಸ ಬೇಕು,ಕಲುಷಿತವ ತೆಗೆದು ಹಸಿರ ಬೆಳೆಸ ಬೇಕು.ಮರಗಿಡಗಳ ನಟ್ಟು ತಂಪ ಹರಡ ಬೇಕು,ಭೂ ಮಾತೆಯ ಋಣ ತೀರಿಸಬೇಕು. ಭೂಮಿ ದಿನ  ಅಲ್ಲ ಬರಿ ಆಚರಣೆ,ಧರೆಯ ಉಳಿಸುವ ಸಂಕಲ್ಪ  ರಕ್ಷಣೆ.ಇರುವುದೊಂದೇ  ಭೂಮಿ,  ಉಳಿಸ ಬನ್ನಿ,ಭವ್ಯ ಭವಿಷ್ಯಕೆ  ಹೆಜ್ಜೆ ಹಾಕ ಬನ್ನಿ. ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಭೂಮಿಗೆ ನಮನ” Read Post »

ಕಾವ್ಯಯಾನ, ಗಝಲ್

ಡಾ. ರೇಣುಕಾತಾಯಿ. ಸಂತಬಾ ಅವರ ಗಜಲ್

ಕಾವ್ಯಸಂಗಾತಿ ಡಾ. ರೇಣುಕಾತಾಯಿ. ಸಂತಬಾ ಗಜಲ್ ನುಡಿಗೆ ಬೆರಗು ಮೂಡಿಸಿ ವಚನ ಬರೆದನು ನಮ್ಮ ಬಸವಣ್ಣದಯವಿಲ್ಲದ ಧರ್ಮವೆ ಇಲ್ಲವೆಂದು ಸಾರಿದನು ನಮ್ಮ ಬಸವಣ್ಣ.ll ಆಚಾರ ಸ್ವರ್ಗ ಅನಾಚಾರವೇ ನರಕವೆಂದ ನಮ್ಮ ಭಕ್ತಿ ಭಂಡಾರಿ,ಜಾತಿ ಮತ ಸರಿಸಿ ಸಮಾನತೆ ಬಿತ್ತಿದವನು ನಮ್ಮ ಬಸವಣ್ಣ.ll ಕಳಬೇಡ ಕೊಲ್ಲಬೇಡ ಹುಸಿ ನುಡಿಬೇಡವೆಂಬ ಮೌಲ್ಯ ಹೇಳಿಕೊಟ್ಟಮಾತಿನಲ್ಲಿಯೇ ಮುತ್ತುರತ್ನ ಜೋಡಿಸಿ ಇಟ್ಟವನು ನಮ್ಮ ಬಸವಣ್ಣ ll ಮೌಢ್ಯತೆಯ ದೊಡ್ಡ ಗೋಡೆ ದಾಟಿಸಿ ಹೊಸ ಬಾಗಿಲನು ತೆರೆದುಬಿಟ್ಟ,ಎಲ್ಲರನು ಇವ ನಮ್ಮವನೆಂದು ಹೇಳಿದವನು ನಮ್ಮ ಬಸವಣ್ಣ ll ತಾಯಿ ಅಕ್ಕಮ್ಮ ನೀಲಮ್ಮ ಶರಣೆಯರೆಲ್ಲರ ವಚನ ಗೌರವಿಸಿದ.ಶ್ರಮದಲಿ ಶಿವ ಕೈಲಾಸ ತೋರಿದ ಶರಣನು ನಮ್ಮ ಬಸವಣ್ಣ l ಡಾ. ರೇಣುಕಾತಾಯಿ. ಸಂತಬಾ. “ರೇಮಾಸಂತ”

ಡಾ. ರೇಣುಕಾತಾಯಿ. ಸಂತಬಾ ಅವರ ಗಜಲ್ Read Post »

ಇತರೆ

“ದಾರ್ಶನಿಕ ಬೀಚಿ” ಹಾಸ್ಯಬ್ರಹ್ಮ ಬೀಚಿಯವರ ಜನ್ಮದಿನಕ್ಕೆ ವಿಶೇಷಲೇಖನ,ಡಾ. ಭಾರತಿ ಮೂಲಿಮನಿ

ವ್ಯಕ್ತಿ ಸಂಗಾತಿ ಡಾ. ಭಾರತಿ ಮೂಲಿಮನಿ “ದಾರ್ಶನಿಕ ಬೀಚಿ” ಹಾಸ್ಯಬ್ರಹ್ಮ ಬೀಚಿಯವರ ಜನ್ಮದಿನ ಮನುಷ್ಯನು ಅಜ್ಞಾನದಿಂದ ಮಾಡುವ ತಪ್ಪುಗಳನ್ನು ಎತ್ತಿ ತೋರಿಸುವ, ಆ ಮೂಲಕ ಅದನ್ನು ತಿದ್ದುವ ಕೆಲಸವನ್ನು ಹಾಸ್ಯ ಸಾಹಿತ್ಯ ಮಾಡುತ್ತದೆ. ಹಾಸ್ಯದ ತೀವ್ರತೆ ಹೆಚ್ಚಾದಂತೆ ಅದರ ವಿಡಂಬನೆಯ ತೀವ್ರತೆಯು ಹೆಚ್ಚಾಗುತ್ತ ಹೋಗುತ್ತದೆ. ವಿಡಂಬನೆಯ ಮೊನಚು ಹೆಚ್ಚುವುದು ಅಸಹನೀಯವಾದ ಕೃತ್ಯಗಳು ನಡೆದಾಗ. “ಒಂದು ವಿಷಯವನ್ನು ಒಬ್ಬ ವ್ಯಕ್ತಿಗೆ ಮನಮುಟ್ಟುವಂತೆ ಪರಿಣಾಮಕಾರಿಯಾಗಿ ಹೇಳುವ, ಆ ಮೂಲಕ  ಅಜ್ಞಾನದಿಂದ ನಡೆಯುವ ತಪ್ಪನ್ನು ತಿದ್ದುವ, ತಡೆಯುವ ಪರಿಣಾಮಕಾರಿ ಸಾಧನ ವಿಡಂಬನೆ” ಹಿಂದೆ ಜಾನಪದರು ಹಬ್ಬದ ದಿನಗಳಲ್ಲಿ ತಮ್ಮ ಬಂಧುಗಳೊಂದಿಗೆ ಸಂತೋಷದಿಂದ ಕಾಲ ಕಳೆಯಲು ಒಬ್ಬರನ್ನೊಬ್ಬರು ಹಾಸ್ಯ, ಮೊನಚಾದ  ವಿಡಂಬನೆಯಿಂದ ನಿಂದಿಸಿಕೊಳ್ಳುತ್ತಿದ್ದರು. ಹೀಗೆ ಬೇರೆಯವರನ್ನು  ವಿಡಂಬನೆ ಮಾಡಿದರೆ ಅದು ಅತಿರೇಕದ ಪರಿಣಾಮವನ್ನು ಉಂಟುಮಾಡುವ ಸಾಧ್ಯತೆಗಳೇ ಹೆಚ್ಚು.. ಆದರೆ ಮೊನಚಾದ ಹಾಸ್ಯದ ಮೂಲಕ ವಿಡಂನೆಯ ಗಾಂಭೀರ್ಯವನ್ನು ತಮ್ಮ ಮಾನಸ ಪುತ್ರ ತಿಂಮನ ಕೈಗೆ ಲೇಖನಿ ಕೊಟ್ಟವರು ಬೀಚಿ.ತಿಂಮ ಒಮ್ಮೊಮ್ಮೆ ಗುರುವು ಮೀರಿಸಿದ್ದು ಉಂಟೆಂದು ಅವರೇ ಹೇಳುತ್ತಾರೆಬೀಚಿಯವರು ಒಂದೂ ಶಬ್ಧವನ್ನೂ ನಿರರ್ಥಕವಾಗಿ ಬಳಸಿಕೊಂಡಿಲ್ಲ. ಯಾವದನ್ನೂ ಸುಮ್ಮನ್ನೇ ಎಳೆದು ತರುವುದಿಲ್ಲ. ಎನ್ನುವ ವಿಮರ್ಶಕರ ಮಾತಿನಲ್ಲಿ ಸತ್ಯವಿದೆ. ೬೩ಕೃತಿಗಳಲ್ಲಿ ಯಾವುದನ್ನು ಕೈಗೆತ್ತಿಕೊಂಡರೆ ಆ ಕಾಲದ,ಈ ಹೊತ್ತಿಗೂ ಹಸಿ ಹಸಿಯಾದ ಸಮಸ್ಯೆಗಳನ್ನು ಅದಕ್ಕೆ ಸುಡು ಸುಡು ಉದಾಹರಣೆ ಸಮೇತ ಓದುಗರ ಮುಂದೆ ತೆರೆದಿಡುವ,  ಆ ಮೂಲಕ  ಸಮಾಜದ ಶ್ರೇಣಿಯಲ್ಲಿ ಮೇಲಿಂದ ತುತ್ತ ತುದಿಯಲ್ಲಿ ಬದುಕುವ ಪ್ರತಿಯೊಬ್ಬರಿಗೂ ಅನ್ವಯಿಸುವ ತಾತ್ವಿಕತೆಯನ್ನು ಹೊತ್ತ ಮಹತ್ವದ ಹೊತ್ತಿಗೆಗಳೇ ಆಗಿವೆ. ಮುಂದೆ ಅಧ್ಯಯನ ಮಾಡಿದ ಕೃತಿಗಳಲ್ಲಿನ ಅವರ ತಾತ್ವಿಕತೆಯ ತುಣುಕುಗಳನ್ನು ಕಾಣಿಸಿದ್ದೇನೆ. ಇದು ನಾನು ಸಂಶಿಧನಾ ವಿದ್ಯಾರ್ಥಿಯಾಗಿ ಅವರನ್ನು ಕಂಡ ಬಗೆ . ಆ ಮೂಲಕ ಬೀಚಿ ಗುರುವಿಗೆ ನನ್ನ ನುಡಿ ನಮನ ಧರ್ಮ ಎನ್ನುವುದು ಬದುಕುವ ರೀತಿ. ಅದು ನೈತಿಕ ತಳಹದಿಯ ಮೇಲೆ ರಚನೆಯಾಗಿರಬೇಕಾದ ಅಗತ್ಯವಾಗಿದೆ. ನೈತಿಕತೆ ಎನ್ನುವುದು ಆಯಾ ಕಾಲ ಸಮಾಜ ನಂಬಿರುವ ಮತ್ತು ಒಪ್ಪಿರುವ ನಿಯಮಗಳೇ ಆಗಿವೆ, ಧರ್ಮ ಎನ್ನುವುದು ಬಲ ಹೀನನನ್ನು ಬಲಿಷ್ಟನು ಕಾಪಾಡುವುದೇ ಆಗಿದೆ. ಅದು ಎಲ್ಲಾ ಪ್ರಾಣಿ ಸಮೂಹಕ್ಕೂ ಅನ್ವಹಿಸುತ್ತದೆ. ಮನುಷ್ಯ ಮನುಷ್ಯನನ್ನು ನಂಬಿ ಆಶ್ರಯಕ್ಕೆ ಬಂದರೆ ನಂಬಿಕೆಗೆ ದ್ರೋಹ ಎಸಗುವುದು ಧರ್ಮ ಎನಿಸಲಾರದು. ಆಶ್ರಯ ಅದಕಿಲ್ಲ ಬಂಧುಗಳು ಯಾರಿಲ್ಲ!ಆಸೆ ಬದುಕಲು ಅದಕೆ ಪಾಪ ಪಾಪ!!ಆಶ್ರಮಕೆ ಬಂದಳು ಸ್ವಾಮಿ ಪಾದವ ನಂಬಿ!ಪ್ರಸವ ವೇದನೆ ಮಾತ್ರ ತಪ್ಪಲಿಲ್ಲವೋ ತಿಂಮ!! ಬೀಚಿಯವರು ಹೇಳುವುದು ಅದನ್ನೇ ಇಲ್ಲಿ ಎಲ್ಲವನ್ನು, ಎಲ್ಲರನ್ನು ಕಳೆದುಕೊಂಡು ಏಕಾಂಗಿಯಾಗಿರುವ ಹೆಣ್ಣು ಆಶ್ರಯ ಬೇಡಿ ಬಂದರೆ ಆಕೆಯ ಶೀಲವನ್ನೇ ದೋಚುವುದು, ಅದು ಒಂದು ಆಶ್ರಮದ ಸ್ವಾಮಿಯಿಂದ ಇಂಥಹ ಕುಕೃತ್ಯ ನಡೆಪದರೆ ಯಾರನ್ನು ನಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎನ್ನುವ ಪ್ರಶ್ನೆ ಖಂಡಿತ ಕಾಡುತ್ತದೆ. ನಂಬಿಕೊಂಡು ಬಂದ ಹೆಣ್ಣಿನ ಮೇಲೆ ಪುರುಷ ಸಮಾಜದಿಂದ ಆಗುವ  ದೌರ್ಜನ್ಯವನ್ನು  ಹೇಳುತ್ತಾ ಹೆಣ್ಣಿನ ಬದುಕಿಗೆ ಪುರುಷ ಸಮಾಜದಿಂದ ಆಗುವ ತೊಂದರೆಯನ್ನು, ಅದರಿಂದ ಅವಳಿಗಾಗುವ ಮಾನಸಿಕ, ದೈಹಿಕ ಹಿಂಸೆಯ ಒಟ್ಟು ನಷ್ಟವನ್ನು ಹೇಳುತ್ತಾರೆ. ಸ್ತ್ರೀಯನ್ನು ಸ್ವಾತಂತ್ರ್ಯಳಾಗಿ ಬದುಕಲು ಬಿಡದ ಮತ್ತು ನಂಬಿ ಆಶ್ರಯಕ್ಕೆ ಬಂದವಳನ್ನು ವಂಚಿಸುವ ಧರ್ಮಾಧಿಕಾರಿಯು ಒಂದು ಆಶ್ರಮವನ್ನು ನಡೆಸುವಂತಹದ್ದು, ಮತ್ತು  ನಂಬಿದವಳನ್ನು ವಂಚಿಸುವಂತಹದ್ದು  ಧರ್ಮದ ಹೆಸರಿನಲ್ಲಿ ನಡೆಯುವ ವಂಚನೆಯಾಗಿದೆ. ಮತ್ತು ಧರ್ಮಕ್ಕೆ ಮಸಿ ಬಳಿಯುವ  ಮೂರ್ಖತನ ಅದು. ಇದು ಇಂದು ನೆನ್ನೆಯದ್ದಲ್ಲ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವುದಾಗಿದೆ. ಸಮಾಜದ ಸಾಮನ್ಯ ಜನರ ಮೇಲಿಲ್ಲದ ನಂಬಿಕೆ  ಆಶ್ರಮಗಳು ಮತ್ತು ಮಠಗಳ ಮೇಲಿರುವುದು. ಅಲ್ಲಿಯೂ ಹೆಣ್ಣಿಗೆ ರಕ್ಷಣೆ ಇಲ್ಲ ಎನ್ನುವುದು ಇಲ್ಲಿ ಸಾಭಿತಾಗುತ್ತದೆ. ಆಶ್ರಮಗಳು, ಮಠಗಳು, ಧಾರ್ಮಿಕ ಕೇಂದ್ರಗಳು ಜನರ ಬದುಕನ್ನು ಅದರಲ್ಲೂ ದಿಕ್ಕಿಲ್ಲದ ಅನಾಥ ಮಕ್ಕಳ, ಸ್ತ್ರೀಯರ ಬದುಕನ್ನು ರಕ್ಷಿಸುತ್ತವೆ ಎನ್ನುವ ಬಲವಾದ ನಂಬಿಕೆ ಸುಳ್ಳಾಗುತ್ತದೆ. ಯಾವ ದೈವದ ಮೇಲೆ ನಂಬಿಕೆ ಇಟ್ಟು  ದೈರ್ಯದಿಂದ ಆಶ್ರಯವನ್ನು ಬೇಡಿ  ಬಂದ ಹೆಣ್ಣಿಗೆ  ನಂಬಿಕೆ ದ್ರೋಹ, ಅವಳಿಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವಲ್ಲಿ ಆಗುವ ವಿಫಲತೆ  ಮತ್ತು ಮಠ ಮಂದಿರಗಳ ಮೇಲಿನ ನಂಬಿಕೆ ಸುಳ್ಳಾಗುತ್ತದೆ. ಹೆಣ್ಣಿನ ರಕ್ಷಣೆ ಮಾಡಬೇಕಾದುದು ಕುಟುಂಬ. ಅಂಥಹ ಕುಟುಂಬವನ್ನು ಕಳೆದುಕೊಂಡ ಹೆಣ್ಣು ಸಮಾಜದಲ್ಲಿ ಬದುಕುವುದು ಇಷ್ಟೊಂದು ಕಠಿಣ ಎನ್ನುವುದು ಈ ಮಾತಿನಲ್ಲಿ ಅಡಕವಾಗದೆ. ಒಂದು ಹೆಣ್ಣು ಯಾರ ಸಹಾಯವಿಲ್ಲದೇ ಬದುಕು ರೂಪಿಸಿಕೊಳ್ಳಲು ಆದದಂತಹ ಸ್ಥಿತಿ. ಆದರೂ ಆಶ್ರಮಕ್ಕೆ ಬಂದ ಹೆಣ್ಣಿಗೆ ಅಲ್ಲಿಯೂ  ಕಾಮುಕರ ಕಾಟ  ತಪ್ಪುವುದಿಲ್ಲ ಆಶ್ರಮ ಎಂದರೆ ಕುಟುಂಬಕ್ಕಿಂತಲೂ ಹೆಚ್ಚು ಭದ್ರತೆ ಒದಗಿಸುವ ತಾಣ, ಅಂತಹ ಆಶ್ರಮ ನಡೆಸುವ ಮಹನೀಯರು ಆಶ್ರಯ ಕೊಡುವ  ನೆಪದಲ್ಲಿ  ಹೆಣ್ಣಿನ ಶೀಲ ದೋಚುವ ಅವಳ ಬದುಕನ್ನು ಕಿತ್ತುಕೊಳ್ಳುವ ತಾಣಗಳಾಗಿ ಮಾರ್ಪಟ್ಟಿರುವುದು ಶೊಚನೀಯ ಸಂಗತಿಯಾಗಿದೆ. “ಗಂಡ ಹೆಂಡತಿ ಜಗಳ ಬೀದಿಗೆ ಬಂತೊಮ್ಮೆ|                                          ಕಂಡು ನಿಂತರು ಎಲ್ಲ, ಜಾಣೊಬ್ಬ ನುಡಿದ||ಗಂಡ ಹೆಂಡತಿ ಜಗಳ ಉಂಡು ಮಲಗುವತನಕಉಂಡರೆ ಮುಗಿದೀತು, ಊಟಕಿಲ್ಲದಕೆ ಜಗಳವೋ ತಿಂಮ|”ಈ ಚೌಪದಿಯಲ್ಲಿ ಬೀಚಿಯವರು ಸಮಾಜದಲ್ಲಿ ನಡೆಯುವ ಘಟನೆಗಳಿಗೆ ತುಂಬಾ ಸೂಕ್ಷ್ಮವಾಗಿ ಸಂವೇದಿಸುತ್ತಾರೆ. ಬಡತನಲ್ಲಿ ಹುಟ್ಟಿ ಬೆಳೆದ ಅವರಿಗೆ ಅದು ಹೊಸದಲ್ಲ. ಅದರಲ್ಲೇ ಸಂತೋಷದಿಂದ  ಬಾಳಿ ಬದುಕಿದವರು. ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎನ್ನುವುದು ಸಾಮಾನ್ಯವಾದ ಗಾದೆ. ಆದರೂ ಅದು ಬಾಗಶಃ ಸತ್ಯ. ಅಂದರೆ ಒಂದು ಕುಟುಂಬವು ನೆಮ್ಮದಿಯಿಂದ ಬಾಳಲು ಕೌಟುಂಬಿಕ ಹಿನ್ನಲೆಯೂ ಕಾರಣವಾಗಿರುತ್ತದೆ. ಹಸಿವು ಮನುಷ್ಯನನ್ನು ಎಂಥ ಹೀನ ಕೆಲಸÀಕ್ಕೂ ತೊಡಗಿಸುತ್ತದೆ. ಕೌಟುಂಬಿಕ ಸುಖ ಎನ್ನುವುದು ಬದುಕಿನ ಮೂಲಭೂತ ಅಗತ್ಯವನ್ನು ಮೀರಿದ್ದು. ಇಲ್ಲಿ ಅವರು ಹೇಳುತ್ತಿರುವುದು ಜೀವಿಸಲು ಅತೀ ಮುಖ್ಯವಾಗಿ ಬೇಕಾದುದು ಆಹಾರ ಅದೇ ಅವರಿಗೆ ಇಲ್ಲದಿದ್ದಾಗ ಅದಕ್ಕಾಗಿಯೇ ಮನೆಯಲ್ಲಿ ಕಲಹ ಹಸಿವನ್ನು ಮೀರಿದ್ದು ಇನ್ನೊಂದಿಲ್ಲ. ಆ ಅಗತ್ಯ ತೀರಿದರೆ ಮುಂದಿನ ಬೇಡಿಕೆ. ನೆಮ್ಮದಿಯಿಂದ ಹೊಟ್ಟೆ ತುಂಬಿದರೆ ತೃಪ್ತ ಮನಸ್ಸು ನಿದ್ದೆಗೆ ಜಾರುತ್ತದೆ. ಅಲ್ಲಿ ಜಗಳ ಇಲ್ಲದೇ ನೆಮ್ಮದಿಯಿಂದ ಬದುಕು ಸಾಗುತ್ತದೆ ಆದರೆ, ತಿನ್ನಲು ಅನ್ನವೇ ಇಲ್ಲದಿದ್ದಾಗ ಊಟಕ್ಕಾಗಿಯೇ ಜಗಳ ಆಗುವುದು ವಿಪರ್ಯಾಸ ಸತ್ಯ. ಉಂಡು ಮಲಗುವತನಕ ಜಗಳ ಎಂದರೆ ಉಂಡರೆ ಮಲಗುವ ಅವಸರ ಉಣ್ಣಲು ಅನ್ನ ಬೇಡವೇ? ಲೇಖಕರು ಇಲ್ಲಿ ಬಡತನವನ್ನು ಒತ್ತಿ ಹೇಳುತ್ತಾ…ದಾಂಪತ್ಯ ಪಾಡು ಮತ್ತು ಬಡತನವನ್ನು ಮುಖಾ ಮಖಿಯಾಗಿಸುತ್ತಾರೆ. ಉಂಡು ಮಲಗುವುದಾದರೆ ಜಗಳ ನಿಂತೀತು, ಅದಕ್ಕಾಗಿ ಉಣ್ಣಬೇಕು, ಆ ಉಣ್ಣಲು ಇಲ್ಲದಿರುವುದಕ್ಕೆ ಈ ಜಗಳಿನ್ನು ಅದು ಮುಗಿಯುವುದೆಂತು ಮುಗಿಯಲು ಉಣ್ಣಬೇಕು. ಒಂದಕ್ಕೊಂದು ಬೆಸೆದುಕೊಂಡಿವೆ. ಊಟ ಮಾಡಲು ಆಹಾರವೇ ಇಲ್ಲದಿರೆ ಜಗಳ ನಿಲ್ಲುವುದಿಲ್ಲ, ಜಗಳ ನಿಲ್ಲಲು ಊಟ ಬೇಕು. ಬಡತನದ ಬದುಕು, ಬಡವ ಅನುಭವಿಸುವ ನೋವು ಹಸಿವಿನ ಸಂಕಟ, ಏನೆಲ್ಲಾ ಸಂಕಷ್ಟಗಳನ್ನು ತಂದೊಡ್ಡುತ್ತದೆ ಎನ್ನುವುದನ್ನು ಚಿತ್ರಿಸುತ್ತದೆ. ಊಟ ಇಲ್ಲದ್ದಕ್ಕೆ ಜಗಳ ನಡೆಯುತ್ತಿದೆ, ಜಗಳವು ಜಗಜ್ಜಾಹಿರಾಗುತ್ತಿದೆ. ಕುಟುಂದ ಕಲಹ ಬೀದಿಗೆ ಬರಬಾರದು ಎನ್ನುವುದು ಸೂಕ್ಷö್ಮ ಆದರೆ ಅದು ಬೀದಿಯಲ್ಲೇ ಬದುಕುವ ಜನರಿಗೆ ಜಗಳಕ್ಕಾಗಿಯೇ ಮನೆ ಎಲ್ಲಿಂದ ತರುವುದು. ತಮ್ಮ ಮನೆಯಲ್ಲಿ ಕತ್ತೆ ಸತ್ತರೂ ಪಕ್ಕದವರ ತಟ್ಟೆಯ ನೊಣ ತೆಗೆಯುವ ಬುದ್ಧಿ ಮಾತ್ರ ಹೋಗುವುದಿಲ್ಲ  ಜನರಿಗೆ. ಅದನ್ನು ಹೇಳುವುದು ಸಹ ಬೀಚಿಯವರ ಉದ್ಧೇಶವಾಗಿದೆ. ಇದರಿಂದ ತಿಳಿಯಬೇಕಾದುದಿಷ್ಟೆ  ಸಂಸಾರ ಎಂದ ಮೇಲೆ ಒಂದಿಲ್ಲೊಂದು ಕಾರಣಕ್ಕೆ ಇಂಥ ಸಣ್ಣ ಪುಟ್ಟ ಕಲಹಗಳು ಇದ್ದೇ ಇರುತ್ತವೆ. ಎಂದು ತಿಳಿದು ಜನ ಸುಮ್ಮನಿರದೇ ತಾವು ಅಲ್ಲಿ ಇಣುಕುವುದ ಸರಿಯಲ್ಲ. ಎಲ್ಲರ ಮನೆ ದೋಸೆ ತೂತೇ ಎನ್ನುವ ಮಾತು ಅವರಿಗೆ ಗೊತ್ತಿರಬೇಕು. “ಹಿಂದೊಂದು ಕಾಲದಿ ನಮಿಸುತ್ತ ಹೊರಟೆ|ಬಂದವರೆಲ್ಲರೂ ತಲೆಗೆ ಕಾಲಿಟ್ಟರು||ಅಂದು ಕಾಲೆತ್ತಿದೆ ಬಾಗಿದವು ತಲೆಗಳು|\ಒಂದು ತಿಳಿ, ದುಂಡು ಜಗತ್ತಿಗೆ ರುಂಡವಿಲ್ಲವೂ ತಿಂಮ|” ಜಗತ್ತು ಎಂದರೆ ನಾವು ಹೇಗೆ ಬದುಕುತ್ತೇವೆ ಎನ್ನುವುದರ ಮೇಲೆ  ಅದರ ಇರುವಿಕೆ. ನಮ್ಮನ್ನು ನಾವು ಹೇಗೆ ಪರಿಚಯಿಸಿಕೊಂಡಿರುತ್ತೇವೆ ಎನ್ನವುದರ ಮೇಲೆ ನಮ್ಮನ್ನು ಅದು ಉಪಚರಿಸುತ್ತದೆ, ನಾವು ಹೆದರಿ ವಿಧೇಯತೆ ತೋರಿದರೆ ತನ್ನ ಹಿಡಿತಲ್ಲಿಟ್ಟುಲೊಳ್ಳುತ್ತದೆ, ನಮ್ಮ ಬದುಕನ್ನು ತನ್ನ ಕಾಲ ಬುಡದಲ್ಲಿರಿಸಿಕೊಳ್ಳುತ್ತದೆ, ಹಾಗೆ ನಾವು ಬಲಿಷ್ಟರಾಗಿದ್ದರೆ ನಮ್ಮ ಹಿಡಿತದಲ್ಲಿ ತಾನು ಇರುತ್ತದೆ, ನಮ್ಮ ಕಾಲ ಬುಡದಲ್ಲಿದ್ದು ವಿಧೇಯತೆಯನ್ನು ತೋರುತ್ತದೆ. ಜಗತ್ತಿಗೆ ಹೀಗೆ ಇರಬೇಕೆನ್ನುವುದು ನಿಯಮವಲ್ಲ ಅದು ಅಲ್ಲಿನ ಜನತೆಯ ಬದುಕಿನ ಶೈಲಿಯ ಮೇಲೆ ಅವಲಂಬಿಸಿದೆ. ಇದೊಂದು ವಿಷವರ್ತುಲ ಎಂದೂ ನಿಲ್ಲುವುದಿಲ್ಲ ಒಬ್ಬನನ್ನು ತುಳಿಯಲು ಮತ್ತೊಬ್ಬ, ಅವನನ್ನು ತುಳಿಯಲು ಇನ್ನೊಬ್ಬ ಹೀಗೆ ಸಾಗುತ್ತಾ ಯಾವುದೂ ಸ್ಥಿರವಲ್ಲದ ಸ್ಥಿತಿಗೆ ತಲುಪುತ್ತದೆ ಎನ್ನುವ ಸಂದೇಶವನ್ನು ಬೀಚಿಯವರು ಕೊಡುತ್ತಾರೆ. ದಾಸಕೂಟದ ರಂಗನಾಥರಾಯರು ತಮ್ಮ ಬಂಗಲೆಗೆ “ಆನಂದವಿಲ್ಲ” ಎಂದು ಹೆಸರಿಸಿದ್ದು ಸೂಕ್ತವಾಗಿದೆ. ಸರಿಯಾಗಿ ಆ ಸಮಯಕ್ಕಾಗಲೇ ತಮ್ಮ ಆ ಸ್ವಾಮಿನಿಷ್ಠೆಯ ದಾಸ್ಯದಲ್ಲಿಯ ಆನಂದಕ್ಕೆ ಕೊನೆ ಅಲ್ಲಿಗೆ ಬ್ರಿಟಿಷರ ಆಳ್ವಿಕೆಗೆ ವಿರುದ್ಧವಾಗಿ ಹೇಗಾದರೂ ಅವರನ್ನು ಇಲ್ಲಿಂದ ಓಡಿಸುವ ಮತ್ತು ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವ ನಿಟ್ಟಿನಲ್ಲಿ ಹೋರಾಟ ದೇಶಾದ್ಯಂತ ನಡೆಯುತ್ತಿದೆ. ಎಲ್ಲೆಡೆ ಗಾಂಧೀಜಿಯವರ ಮುಂದಾಳತ್ವದಲ್ಲಿ ಅವರ ತತ್ವಗಳನ್ನು ಆಧರಿಸಿ ಚಳುವಳಿ ಉಗ್ರ ರೂಪ ತಾಳಿದೆ. ಆಂಗ್ಲರ ಆಳ್ವಿಕೆ ಯಾವಾಗ ಕೊನೆಯಾಗುತ್ತದೆ ಗೊತ್ತಿಲ್ಲ ಇಂತಹ ಪರಿಸ್ಥಿತಿಯಲ್ಲಿ ತಾವು ಹಿಂದೆ ೧೨ ರೂಪಾಯಿ ವೇತನ ಪಡೆದರೂ ಸುಖ ಜೀವನ ನಡೆಸುತ್ತಿದ್ದರು. ಅಮಾಯಕ ಜನಗಳ ಬದುಕನ್ನು ಛಿದ್ರಗೊಳಿಸಿ ಸತ್ತ ದನಗಳನ್ನು ಬಿಡದೆ ಲೀಲಾವೂ ಮಾಡಿಸಿ ರಾಜ ಸತ್ತೆಯ ಖಜಾನೆಗೆ ತುಂಬುತ್ತಿದ್ದ ಕಾಲ ಇನ್ನೂ ಮರೆಯಾಗುತ್ತಿದೆ. ಆನಂದ ಖಂಡಿತ ಇಲ್ಲದಾಗುತ್ತದೆ. ತಮ್ಮ ಬಂಗಲೆಗೆ ಕೊಟ್ಟ ಹೆಸರು ಎಷ್ಟೊಂದು ಹಾಸ್ಯಾಸ್ಪದವಾಗಿದೆ. “ಅವಶ್ಯಕತೆ ಇದ್ದರಷ್ಟೇ ಆಯಾ ವಸ್ತುವಿಗೆ ಬೆಲೆ ಇಲ್ಲದಾಗ ಅದೊಂದು ಕಸ. ಸಾಮಾನ್ಯವಾಗಿ ಅನೇಕರಿಗೆ ದೇವರು ಕೂಡ ಇಂಥದ್ದೊಂದು ಕೊಡೆ” ದೇವರು ಇದ್ದಾನೆ ಎನ್ನುವ ಆಸ್ತಿಕರ ಮುಂದೆ ದೇವರೇ ಇಲ್ಲ ಎನ್ನುವ ನಾಸ್ತಿಕನೊಬ್ಬನಿಗೆ ಪಾಠ ಕಲಿಸಬೇಕಾದರೆ ಅವನಿಗೆ ಪರಿಸ್ಥಿತಿಯನ್ನು ಅರ್ಥೈಸಬೇಕು ಅದು ಅವನ ಲೈಂಗಿಕ ಬಯಕೆಯನ್ನು ಅದರೊಂದಿಗೆ ಬೆಸೆದು .ಅದಕ್ಕೆ ಪೂರಕವಾಗಿ ಅದನ್ನು ಸಾಧಿಸಿ ತೋರಿ.ಸಿ. ನೋಡು, ಇದೇ ದೇವರು ನಿನ್ನ ಮನೋ ಕಾಮನೆಗಳನ್ನು ಈಡೇರಿಸಿದವನು ಎಂದು ದೇವಸ್ಥಾನದಲ್ಲಿ ನಿಂತು ಲೈಂಗಿಕ ಅತೃಪ್ತನೊಬ್ಬನಿಗೆ ದೇವರಿದ್ದಾನೆ ಎಂದು ತೋರಿಸುವುದು ವಿಡಂಬನಾತ್ಮಕವಾಗಿದೆ. ಲೇಖಕರದು ಇಧೆ ವಾದ “ಅವರನ್ನು ಯಾರಾದರೂ ವೇವರಿದ್ದಾನೆಯೇ ಎಂದರೆ ಇದ್ದಾನೆ, ಇಲ್ಲವೇ ಎಂದರೆ ಇಲ್ಲ” ಎನ್ನುತ್ತಾರೆ. ಅಂದರೆ ದೇವರ ಬಗೆಗೆ ತಮಗಿರುವ ಕಲ್ಪನೆಯೂ ಕೊಡೆಯಂತೆಯೆ ಅಗತ್ಯವಿದ್ದಾಗ ಅದನ್ನು ಬಳಸಿಕೊಂಡು ಅಗತ್ಯವಿಲ್ಲದಿದ್ದಾಗ ಮೂಲೆ ಸೇರಿಸುವುದು. ದೇವರು ಅಷ್ಟೇ! ಅಗತ್ಯಕ್ಕೆ ತಕ್ಕಂತೆ ಬಳಕೆಯಾಗುತ್ತಾನೆ ಅಗತ್ಯ ಇಲ್ಲದಾಗ ಮೂಲೆ ಸೇರುತ್ತಾನೆ. “ನಮಗೆ ಬೇಡವಾದುದನ್ನೆಲ್ಲ ಕರ್ಮದ ತಲೆಗೆ ಕಟ್ಟುವುದು ಸುಲಭ”ತಂದೆ ತಾಯಿಗಳು ಆಸ್ತಿಕರಾಗಿದ್ದರೂ, ಮಹಾನ್ ದೈವ ಭಕ್ತರಾಗಿದ್ದಾಗಲೂ ಮಗ ನಾಸ್ತಿಕನಾದರೆ ಅದು ಅವನ ಪೂರ್ವಾರ್ಜಿತ ಕರ್ಮ ಎಂದು ಅಂದುಕೊಂಡು ತಂದೆ ತಾಯಿ ಅವನನ್ನು ಅವನ ಪಾಡಿಗೆ ಬಿಟ್ಟು ತಾವು ಅವನ್ನು ಕರ್ಮ ಫಲ ಎಂದು ಹೇಳುವುದು ಪರಿಸ್ಥಿತಿಯ ವ್ಯಂಗ್ಯವೇ ಸರಿ. ಯಾವುದು ಮನುಷ್ಯನ ಹುಟ್ಟಿನಿಂದಲೇ ಪಡೆದುಕೊಂಡು ಬಂದಿರುವುದಿಲ್ಲ. ಅದು ಅವನು ರೂಢಿಸಿಕೊಂಡದ್ದಾಗಿರುತ್ತದೆ. ಸಾಧ್ಯವಾದರೆ ಹಿರಿಯರು ಅವನ ಮನೋಭಾವಗಳನ್ನು ಬದಲಾಯಿಸಬಹುದು. ಅವನನ್ನು ತಿದ್ದಲಾಗದೆ ಅವನ ಇಚ್ಛೆಯಂತೆ ಅವನನ್ನು ಬೆಳೆಯಲು ಬಿಟ್ಟು ಬಿಡುವುದು ತಮ್ಮ ಬೇಜವಾದ್ಬಾರಿ  ಆಗಿದೆ.

“ದಾರ್ಶನಿಕ ಬೀಚಿ” ಹಾಸ್ಯಬ್ರಹ್ಮ ಬೀಚಿಯವರ ಜನ್ಮದಿನಕ್ಕೆ ವಿಶೇಷಲೇಖನ,ಡಾ. ಭಾರತಿ ಮೂಲಿಮನಿ Read Post »

You cannot copy content of this page

Scroll to Top