ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-17 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಸಲ್ಲಿಸಿದ‌ ಮಹಾನ್ ಚೇತನ ಸವಿತಾ ದೇಶಮುಖ ರಜಾಕರರ ಹಾವಳಿಯಿಂದ ಮನೆಬಿಟ್ಟು ಓಡಿಬಂದ ನಿರಾಶ್ರಿತರ ದುಃಖವ ನೋಡಿ.,.., ತಾಯಿಯವರ ಹೃದಯದಲ್ಲಿ ಮೂಡಿದ ಕರುಣೆ.. ತಾಯಿತನದ ಕರೆಯಾಗಿ ಮೂಡಿದ ತ್ರಿಪದಿ…. *ಬಡ ಮಕ್ಕಳಿಗೆ ಹಾಲು|ತಾಯಿಗೆ ಸೀರೆಒಡಲ ತುಂಬ ಅನ್ನ ನೀಡುತ-ರೋಗಗಳಓಡಿಸ  ಬೇಕಯ್ಯಾ ಸಿದ್ದೇಶ|| ಈ ಕವನದಲ್ಲಿ ಹಾಲಿಲ್ಲದೆ ಅಳುವ ಮಕ್ಕಳನ್ನು ನೋಡಿ ಅವರ ಮನಸು ಕರಗುತ್ತದೆ.ಬಟ್ಟೆಯಿಲ್ಲದೆ ನಾಚಿಕೆಪಡುವ ತಾಯಂದಿರ ನೋವ ಕಂಡು ಕಳವಳ ಗೊಂಡರು.ಹಸಿವಿನಿಂದ ಕಂಗೆಟ್ಟ ಜನರಿಗೆ ಅನ್ನ ಕೊಡಬೇಕೆಂಬ ಹಂಬಲ……“ಸೀರೆ ಒಡಲ ತುಂಬ” …. ತಾಯಂದಿರ ಗೌರವ, ಮಾನವನ್ನು ಕಾಪಾಡುವ ಕಾಳಜಿ.“ಅನ್ನ ನೀಡುತ” “ರೋಗಗಳ ಓಡಿಸಬೇಕಯ್ಯಾ”  ಆರೋಗ್ಯ ಮತ್ತು ಸುರಕ್ಷತೆ ಕೂಡ ಅಗತ್ಯವೆಂಬ ಅರಿವು.ಕೊನೆಯಲ್ಲಿ “ಸಿದ್ದೇಶ” ಎಂದು ಕರೆಯುವ ತಾಯಿಯವರು, ತಮ್ಮ ಕರ್ತವ್ಯವನ್ನು ದೈವಿಕ ಶಕ್ತಿಗೆ ಅರ್ಪಿಸುತ್ತಿದ್ದಾರೆ. ಇದು ಅವರ ಭಕ್ತಿ, ವಿಶ್ವಾಸ ಮತ್ತು ಮಾನವೀಯತೆಯ ಸಂಕಲನ. ಈ ಕವನದ ಹಿನ್ನಲೆಯಲ್ಲಿ ಇರುವ ದೃಶ್ಯ ತುಂಬ ಹೃದಯವಿದ್ರಾವಕ….!!!ರಜಾಕರರ ಹಿಂಸೆಯಿಂದ ಓಡಿಬಂದ ಜನರು… ಭಯ, ಹಸಿವು, ನಿರಾಶ್ರಿತ ಜೀವನಕ್ಕೆ ತಾಯಿಯವರಂತಹ ಮಹಾನ್ ಹೃದಯಿ ಆಶ್ರಯ, ಆಹಾರ ಮತ್ತು ಆಶೆಯನ್ನು ನೀಡಿದರು. *ಸಿದ್ದನ ಛತ್ತರಕ್ಕ ಬೆಂದು ಬಂದ ಮಕ್ಕಳಎದ್ದು ಕಂಣ್ಣೀರ ಒರೆಸುವ ,ಭಾಗ್ಯವಸಿದ್ದ ನನಗೆ ನೀಡಿ ದುಡಿಸಿದಿ* ತಾಯಿಯವರಲಿದ್ದ ದಯೆ, ಕರುಣೆ ಮತ್ತು ಸೇವಾಭಾವ ತುಂಬ ಸ್ಪಷ್ಟವಾಗಿ ಕಾಣಿಸುತ್ತದೆ.ನಿಜಾಮನ ದಬ್ಬಾಳಿಕೆಯಿಂದ ಸಂಕಷ್ಟಕ್ಕೊಳಗಾದ ನಿರಾಶ್ರಿತರು ತಮ್ಮ ಊರುಗಳನ್ನು ಬಿಟ್ಟು,  ಕಣ್ಣೀರನ್ನು ಹೊತ್ತುಕೊಂಡು ಸೊಲ್ಲಾಪುರಕ್ಕೆ ಬಂದಾಗ, ಅವರ ಪರಿಸ್ಥಿತಿ ತುಂಬ ದಯನೀಯವಾಗಿತ್ತು. ಮನೆ ಇಲ್ಲ, ಊರು ಇಲ್ಲ, ಬದುಕಿನ ಭರವಸೆ ಇಲ್ಲ….!! “ಬೆಂದು ಬಂದ ಮಕ್ಕಳ” ಎನ್ನುವ ಪದ ಬಹಳ ಗಂಭೀರ. ಇದು ಅವರ ನೋವನ್ನು ತಾಯಿಯವರು ಎಷ್ಟು ಆಳವಾಗಿ ಅನುಭವಿಸಿದ್ದಾರೆ ಎಂಬುದನ್ನು ತೋರಿಸುತ್ತದೆ.  ತಾಯಿಗೆ ಮಕ್ಕಳಂತೆ ಅವರು…..“ಎದ್ದು ಕಣ್ಣೀರ ಒರೆಸುವ ಭಾಗ್ಯ” — ಇಲ್ಲಿ ತಾಯಿಯವರು ಸೇವೆಯನ್ನು ಕರ್ತವ್ಯವಾಗಿ ಮಾತ್ರ ನೋಡುತ್ತಿಲ್ಲ. ಅದನ್ನು “ಭಾಗ್ಯ” ಎಂದುಕೊಂಡಿದ್ದಾರೆ. “ಸಿದ್ದ ನನಗೆ ನೀಡಿ ದುಡಿಸಿದಿ” ದೇವರು ನನಗೆ ಈ ಕೆಲಸ ಕೊಟ್ಟಿದ್ದಾನೆ, ಈ ಜನರ ಸೇವೆ ಮಾಡುವ ಅವಕಾಶ ನೀಡಿದ್ದಾನೆ ಎಂದು ತಾಯಿಯವರು ಕೃತಜ್ಞತೆಯಿಂದ ಹೇಳುತ್ತಾರ. ತಾಯಿಯವರಲ್ಲಿ ಇರುವ  ಮಾನವೀಯತೆ ಮತ್ತು ದೈವಭಕ್ತಿ ತೊರುವದು.  ಅವರ ಸೇವೆಯನ್ನು ತಮ್ಮ ಕರ್ತವ್ಯ ತಮ್ಮ ಧರ್ಮದಂತೆ ಸ್ವೀಕರಿಸಿದ್ದು ಇಲ್ಲಿ ಗೋಚರಿಸುತ್ತದೆ. ಆಗಿನ ಕಾಲದಲ್ಲಿಶ್ರೀ ಚಂಡರಕಿ (ಬೆನಕೊಪ್ಪ) ಉರ್ದು ಭಾಷೆಯ ಕವಿಯೊಬ್ಬನು  ವೀರಗಾಸೆ ಕುಣಿತದಲ್ಲಿ ಪ್ರಸಿದ್ಧರಾದವರು. ಸೊಲ್ಲಾಪುರಕ್ಕೆ ಬಂದ ನಿರಾಶ್ರಿತರಿಗೆ  ಆಶ್ರಿತರಾಗಿ ನಿಂತ ತಾಯಿಯವರ ಬಗ್ಗೆ ಉರ್ದುನಲ್ಲಿ ಕವಿತೆ ಬರ್ತಾನೆ ಅದನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು ಡಾ. ಶಂಕರ. ಮೂಗಿ(ನನ್ನ ತಂದೆ)*ತಾಯಿ ನಿನಗೆ ಸಲಾಮು ನಿನಗೆ ಸಲಾಮು * ಅಟ್ಟಿ ಜಡಿಸಿದ ಕಾಸೀಮ ಗಜನಿಕಟ್ಟಿಕೊಂಡು ರಜಾಕಾರರ ದಂಡುಓಡಿ ಬಂದೆವು ನಾವಂದುತೋಳ ಕಂಡ ಕುರಿಯ ಹಿಂಡು ಉಟ್ಟಿದ ಸೀರೆ ತೊಟ್ಟಿದ್ದವಲ್ಲಬೆನ್ನು ಬಿರಿವ ಬಿಸಿಲಿನಲ್ಲಿಸೊನ್ನಲಿಗೆ ಭೂಮಿಗೆ ಬಂದುನಿಂದೆವು ಸಿದ್ದನ ಛತ್ರದಲ್ಲಿ….., ಅಂತ‌ ತಾಯಿಯವರ ಬಗ್ಗೆ ಬರಿತಾನೆ…… ಸೊಲ್ಲಾಪುರ ರೈಲ್ವೆ ನಿಲ್ದಾಣಕ್ಕೆ ಒಲಸಿ ಬಂದ ಜನರ ಜಾತಿಭೇದ ಲೆಕ್ಕಿಸದೆ ಜಯದೇವಿ ತಾಯಿಯವರು ವಸತಿ ವ್ಯವಸ್ಥೆ ,ಆಹಾರ ಸೌಲಭ್ಯ ,ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಸಿದ್ಧ ಮಾಡಿದರು. ಇದರಿಂದ ಸ್ಥಳೀಯ ಸಂಘ-ಸಂಸ್ಥೆಗಳು ಅದರಲ್ಲೂ ಮಹಿಳಾ ಜ್ಞಾನ ಮಂದಿರ ,ಶ್ರಾವಿಕಾಶ್ರಮ, ಸರಸ್ವತಿ ಸದನಗಳ ಕಾರ್ಯಕರ್ತರು ಸೇರಿ ನಿರಾಶ್ರಿತರಿಗೆ ಊಟದ ಪಟ್ಟಣಗಳನ್ನು, ನೀರು, ಹಾಲು,. ನಿತ್ಯ ಉಪಯೋಗವಾಗುವ ವಸ್ತುಗಳನ್ನು ವಿತರಿಸಲಾರಂಭಿಸಿದರು .ಇಡೀ ಸೊಲ್ಲಾಪುರದ ಜನತೆ ಅವರ ಸಹಾಯಕ್ಕೆ ನಿಂತರು.ಇಲ್ಲಿ ವಾರದ  ಬಾಬಾ ಸಾಹೇಬರು, ಕಾಡಾದಿ ನಾಗಪ್ಪನವರು ,ಜಯದೇವಿ ತಾಯಿಯವರು ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಹಾಗೂ ಭಾಲ್ಕಿ ಪಟ್ಟ ದೇವರನ್ನು ಕಂಡು ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ನಿರಾಶ್ರಿತ ಮಕ್ಕಳ ಜೊತೆ ಎಲ್ಲರನ್ನೂ ನೋಡಿಕೊಳ್ಳುವಂತೆ ಭರವಸೆ ಕೊಟ್ಟು ವಸತಿ ವ್ಯವಸ್ಥೆಯನ್ನು ಮಾಡಿದರು. *ಹೊಲದಲ್ಲಿ ಮನೆ ಕಟ್ಟಿಕೊಟ್ಟೀರಿಕೊಯ್ದಿರಿ ನಿಂತ ಫಸಲುಆ ವರುಷ ನಿಮಗಾಗಲಿಲ್ಲಬೆಳೆಯಲ್ಲಿ ಏನು ಅಸಲು ಕೂಸು ಕಂಡಿರಲಿಲ್ಲ ನೆತ್ತಿಗೆಣ್ಣೆಹೊಟ್ಟೆಗಿರಲಿಲ್ಲ ಹಾಲು ತೊಟ್ಟುಹೊದಿಕೆ ಹಾಸಿ, ಹಾಸು ಇರಲಿಲ್ಲತಂದು ಒಗಿಸಿದಿರಿ ಚಾದರದ ಕಟ್ಟು* ತಾಯಿಯವರು ತಮ್ಮ ನಲವತ್ತು ಎಕರೆ ಭೂಮಿಯಲ್ಲಿ ಬೆಳೆದು ನಿಂತ ಬೆಳೆಯನ್ನು ತೆಗೆಸಿ…ಸೆಡ್ ಹಾಕಿ ನಿರಾಶ್ರಿತರಿಗೆ ಇರಲು ಹೊಸ ವೆವ್ಯಸ್ತೆಯನ್ನು ಮಾಡಿದರು. ತಮ್ಮ ಮನೆಯಾದ ಜೈನಿಕೇತನದಿಂದಲೇ  ನಿರಾಶ್ರಿತ ಜನರಿಗೆ ಬಟ್ಟೆಯನ್ನು ದಾನ ಮಾಡುತ್ತಿದ್ದರು  ಇಷ್ಟೇ ಅಲ್ಲದೆ ಜಯದೇವಿ ತಾಯಿಯವರು ಶಿಬಿರಕ್ಕೆ ಆಗಾಗ ಭೇಟಿ ಕೊಟ್ಟು ಅವರ ಸಮಸ್ಯೆಗಳನ್ನು ಕೇಳುತ್ತಿದ್ದರು … ಬಡವರು ದಲಿತರು ನಿರಾಶ್ರಿತರು ಅದು ಯಾವುದೇ ಮತ ಕುಲಕ್ಕೆ ಸಂಬಂಧಿಸಿದ್ದರು ಎಲ್ಲರಿಗೂ ತಾಯಿ ಮಕ್ಕಳನ್ನು ನೋಡುವಂತೆ ನೋಡಿಕೊಂಡರು. *ಹಡೆದ ನಾರಿಯರ ಕರೆದುತಂದು ಮಾಡಿದಿರಿ ಆರೈಕೆತವರಿಗೆ ಕಡಿಮೆ ಅಲ್ಲದಂತೆಪಡೆದೆವು ಅಮ್ಮ ನಿನ್ನ ಹರಿಕೆ * ನಿರಾಶ್ರಿತ್ರಿರಗೆ ಆಶ್ರಯ ಕೊಡುವದು ಅಂಥ ಸುಲಭದ ಕೆಲಸವೇನು ಆಗಿರಲಿಲ್ಲ ಅದರಲ್ಲಿ ಬಾಣಂತಿಯರು ಗರ್ಭಿಣಿಯರಂಥ  ಸ್ತ್ರೀಯರು ಕೂಡ ಇದ್ದರು ಅವರೆಲ್ಲರಿಗೂ ಕರೆದು ಬಾಣಂತನವನ್ನು ಮಾಡಿಸಿ ನವಜಾತ ಶಿಶುಗಳ ಆರೈಕೆ ಮಾಡಿಸಿದರು. ಗರ್ಭಿಣಿಯರಿಗೆ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸಿದರು.ವಿವಿಧ ಸಂಸ್ಥಾನಗಳ ವಿಲೀನಿಕರಣ ಸಂದರ್ಭದಲ್ಲಿ ದೇಶದ ಏಕೀಕರಣಕ್ಕಾಗಿ ಶಕ್ತಿಯಾಗಿ ನಿಂತ ನಾಯಕ ಸರ್ದಾರ್ ವಲ್ಲಭಾಯಿ ಪಟೇಲರು.ಸ್ಥಿತಿ ಹಿಡಿತದಿಂದ ತಪ್ಪುತ್ತಿರುವುದು ಕಂಡಾಗ, ಪಟೇಲರು ತಕ್ಷಣವೇ ಶೀಘ್ರ ಹಾಗೂ ದೃಢ ಕ್ರಮ ಕೈಗೊಂಡರು. ಅವರ ದೃಷ್ಟಿಯಲ್ಲಿ ದೇಶದ ಏಕತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾಗಿತ್ತು.ಶೀಘ್ರ ಕಾರ್ಯಾಚರಣೆಯಲಿ(ಕ್ವಕ ಆಕ್ಷನ್)ಪಟೇಲರ ದೃಢ ನಿಲುವು ತೆಗೆದುಕೊಂಡರು.ಈ ಸಂದರ್ಭದಲ್ಲಿ ಪಟೇಲರು ಮಾತುಕತೆ ಜೊತೆಗೆ ಅಗತ್ಯವಾದರೆ ಶಕ್ತಿಯನ್ನೂ ಬಳಸಬೇಕು ಎಂಬ ನಿಲುವನ್ನು ತಾಳಿದರು.ಹೈದರಾಬಾದ್ ಸಂಸ್ಥಾನದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಅವರು “ಪೊಲೀಸ್ ಆಕ್ಷನ್”  ಸೈನಿಕ ಕ್ರಮವನ್ನು ಜಾರಿಗೊಳಿಸಿದರು. ಇದನ್ನು *ಆಪರೇಷನ್ ಪೋಲೋ*ಎಂದು ಕರೆಯಲಾಗುತ್ತದೆ. ಈ ಕಾರ್ಯಾಚರಣೆಯ ಮೂಲಕ ಕೇವಲ ಐದು ದಿನಗಳಲ್ಲಿ ಹೈದರಾಬಾದ್ ಸಂಸ್ಥಾನವನ್ನು ಭಾರತದ ಭಾಗವನ್ನಾಗಿ ಮಾಡಲಾಯಿತು.ಪಟೇಲರ ನಾಯಕತ್ವದ ವೈಶಿಷ್ಟ್ಯದೃಢ ನಿರ್ಧಾರ ಶಕ್ತಿ,ತ್ವರಿತ ಕಾರ್ಯಾಚರಣೆ,ದೇಶದ ಏಕತೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧತೆಯಲಿ ಇದ್ದರು ಪಟೇಲರು….. ಈ ಶೀಘ್ರ ಮತ್ತು ದೃಢ ಕ್ರಮಗಳ ಫಲವಾಗಿ, ಭಾರತ ಒಂದು ಏಕೀಕೃತ ರಾಷ್ಟ್ರವಾಗಿ ರೂಪುಗೊಂಡಿತು. *” ದೇಶದ ಏಕತೆಯ ಕಗ್ಗತ್ತಲಲ್ಲಿ ಬೆಳಕಾಗಿ ಕಾಣಿಸಿಕೊಂಡವರು ಸರ್ದಾರ್ ವಲ್ಲಭಾಯಿ ಪಟೇಲರು…..“ಭಾರತದ ಕಬ್ಬಿಣ ಮನುಷ್ಯನು” ಎಂದು ಜಯದೇವಿ ತಾಯಿಯವರು ಬಹಳ ಹೆಮ್ಮೆಯಿಂದ ಎಲ್ಲ ಭಾಷಣಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಕೊನೆಗೊಮ್ಮೆ… ಅನುಭವಿಸಿದ ನೋವು, ನಿರಾಶೆ, ಅಲೆಮಾರಿ ಜೀವನದ ನಂತರ, ನಿರಾಶ್ರಿತರು ಮತ್ತೆ ತಮ್ಮ ಆಶ್ರಯದ ನೆಲೆಗೆ ಹಿಂದಿರುಗುವ ಕ್ಷಣ ಬಂದಾಗ, ಅದು ಅವರ ಬದುಕಿನ ಪುನರ್ಜನ್ಮದಂತಿತ್ತು. ಆ ಸಂತಸದ ದಿನ ಬಂದು ಒದಗಿದ್ದು ೩೦-೯-೪೮ ರಂದು. ನಿರಾಶ್ರಿತರು ತಮ್ಮ ಆಶ್ರಿತ ಸ್ಥಾನಕ್ಕೆ ಹೊರಟು ನಿಂತರು….. ಸ್ವಸ್ಥಾನಕ್ಕೆ ಹಿಂದುತ್ತಿರುವಾಗ ಅವರಲ್ಲಿ ಇದ್ದ ಆನಂದ ಉತ್ಸಾಹ ಹೇಳುತೀರದಾಗಿತ್ತು ….. ಅವರಿಗೆ ನಿಜವಾದ ಸ್ವಾತಂತ್ರ ಈಗ ಬಂದಾಗಿತ್ತು ..,!!!.ಎಲ್ಲರೂ ತಾಯಿಯವರಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸ್ತಾ ಹಾಡಿ ಹರಿಸಿ ಹೊಗಳಿ ಅಲ್ಲಿಂದ ತೆರಳಿದರು. ತಮ್ಮ ಮನೆಗಳ ಬಾಗಿಲುಗಳನ್ನು ಮತ್ತೆ ತೆರೆಯುವ ತವಕ …ಕಣ್ಣಲ್ಲಿ ಆನಂದದ ಕಣ್ಣೀರು ತುಂಬಿಕೊಂಡವು…. ಆಸರೆ ಕೊಟ್ಟ ನೆಲವನ್ನು ಬಿಟ್ಟು ಹೋಗುವಾಗ. ..ಆ ಮಣ್ಣನ್ನು  ಸ್ಪರ್ಶಿಸಿದಾಗ ಅವರ ಹೃದಯ ತುಂಬ ಒಂದು ಶಾಂತಿಯ ಅಲೆ ಹರಡಿತು.ಭೂಮಿಗೆ ನಮಿಸಿದರು.ಮಕ್ಕಳು ಸಂತೋಷದಿಂದ ಓಡಾಡುತ್ತಿದ್ದರು, .ಪ್ರತಿ ಹೆಜ್ಜೆ   ಪ್ರತಿ ಉಸಿರು  ಒಂದು ಕಥೆ ಹೇಳುವಂತೆ ಇತ್ತು…..ಆ ಕ್ಷಣದಲ್ಲಿ ಅವರು ತಮ್ಮ ಕಷ್ಟಕಾಲದಲ್ಲಿ ತಾಯಿಯಂತೆ ನೆರವಾದ ಆ ಮಹಾನ್ ವ್ಯಕ್ತಿಯ ಜಯದೇವಿ ತಾಯಿಯವರನ್ನು ನೆನೆಸಿಕೊಂಡರು“ತಾಯಿ… ನಮ್ಮ ಜೀವ ಉಳಿಸಿದವಳು ನೀವು… ನಾವು ಕಳೆದುಕೊಂಡ ವಿಶ್ವಾಸವನ್ನು ಮತ್ತೆ ನಮ್ಮೊಳಗೆ ತುಂಬಿದವಳು ನೀವು… ನಮ್ಮ ನೆರಳಿಲ್ಲದ ಬದುಕಿಗೆ ಆಶ್ರಯವಾದವಳು ನೀವು… ಇಂದು ನಾವು ಮತ್ತೆ ನಮ್ಮ ನೆಲಕ್ಕಹಿಂದಿರುಗುತ್ತಿದ್ದೇವೆಆದರೆ ಈ ಸಂತೋಷದ ಪ್ರತಿಯೊಂದು ಹನಿ ನಿಮ್ಮ ಆಶೀರ್ವಾದವೇ…ನಾವು ನಿಮ್ಮ ಋಣವನ್ನು ಯಾವತ್ತೂ ತೀರಿಸಲಾರೆವು… ನಮ್ಮ ಹೃದಯದ ತುಂಬು ಕೃತಜ್ಞತೆಗಳನ್ನು ನಿಮಗೆ ಅರ್ಪಿಸುತ್ತೇವೆ ಎನ್ನುತ ಹಾಡಿ ಹರಸಿದರು……. *ಹೇಗೆ ತೀರಿಸಬೇಕು ತಾಯಿನಿನ್ನ ಋಣವ ಒಟ್ಟುನೆನೆವೆವು ಹಡೆದ ಮಕ್ಕಳಿಗೆ*ನಿನ್ನ ಹೆಸರು ಇಟ್ಟು,*‌‌….!!! ಜಯಭೇರಿ ಕೇಳಿ ಕುಣಿದೆವುಆಯಿತು ರಜಾಕರರ ಹೋಮಮಕ್ಕಳು ಮರಿ ಹೋಗಿ ಬರುವೆವುತಾಯಿ ನಿನಗೆ ಸಲಾಂ.. ನಿನಗೆ ಸಲಾಮ* (ಚಂಡರಕಿ ಉರ್ದು ಕವಿ) ಅವರ ಮುಖದಲ್ಲಿ ಕಂಡ ಆ ಸಂತಸ ಅವರ ಹೃದಯದಲ್ಲಿ ಮೂಡಿದ ಆ ಶಾಂತಿ—ಅದು ತಾಯಿಯ ಸೇವೆಗೆ ದೊರಕಿದ ಅತ್ಯಂತ ಮಹತ್ತರ ಗೌರವ.ಈ ದೃಶ್ಯ… ನೋವಿನಿಂದ ಆರಂಭವಾಗಿ, ಕೃತಜ್ಞತೆಯಲ್ಲಿ ಮುಗಿಯುವ ಒಂದು ಬದುಕಿನ ಪಯಣ.ಮುಂದುವರಿಯುವುದು ಸವಿತಾ  ದೇಶಮುಖ 

Read Post »

ಅಂಕಣ ಸಂಗಾತಿ, ಮನದ ಮಾತುಗಳು

ಅಂಕಣ ಸಂಗಾತಿ ಮನದ ಮಾತುಗಳು ಜ್ಯೋತಿ ಡಿ ಬೊಮ್ಮಾ ತಮ್ಮ ತಾನರಿಯದವರು ನಿಮ್ಮನ್ನೆತ್ತ ಬಲ್ಲರಯ್ಯ…. ನಾಳಿಗಿ ಬಸೋಜಂತಿ ಅದರೀ ಮನಿ ತೊಳಿಬೇಕು , ಅಂತ ಬಾಜು ಮನಿ ಅಕ್ಕೋರು ಅಂದಾಗ ನಮ್ಮ ಜಗಜ್ಯೋತಿ ಬಸವಣ್ಣನೂ ಒಬ್ಬ ದೇವರಾಗಿ ಕುಂತ ಅಂತನಸ್ತು.ಅವನೆಲ್ಲಿ ದೇವರಾದ , ನಾವು ದೇವ್ರು ಮಾಡಿಬಿಟ್ಟೆವು.ಅವನಿಗೊಂದು ಗುಡಿ ಕಟ್ಟಿ ಅದರೊಳಗ ಕೂಡ್ಸಿ ಕುಂಕುಮ ಅರಶಿಣದಿಂದ ಪೂಜಾ ಮಾಡಿ ಹೋಳಿಗಿ ನೌದಿ ತೋರಿಸಿ ಹಬ್ಬ ಮುಗಸತೀವಿ. ಬ್ಯಾಸಗಿದಾಗ ಬರೊ ಈ ಬಸೊಜಂತಿ ನಾವು ಸಣ್ಣವರಿದ್ದಾಗ ಹೋಳಗಿ ಮಾನಕಾಯಿ ರಸ ನೆನಪಿಸತಿತ್ತು.ಅವತ್ತು ಎಲ್ಲರ ಮನ್ಯಾಗ ಹೂರಣದ ಹೋಳಗಿ ಮಾನಕಾಯಿ ಸಿಕರಣಿ. ಬಸವಜಯಂತಿ ಅಂದ್ರ ಇದರ ಹೊರತಾಗಿ ಮತ್ತಾವದೂ ತಿಳಿದಿರಲಿಲ್ಲ.ವಚನ ಸಾಹಿತ್ಯ ಓದಿ ತಿಳಿದ ಮ್ಯಾಲ ಗೊತ್ತಾಗಿದ್ದು ಬಸವಣ್ಣ ನಮ್ಮಂಗ ಒಬ್ಬ ಮನುಷ್ಯ, ಆದ್ರಾ ಅವನ ವಿಚಾರಗಳಿಂದ ಅವನೊಬ್ಬ ಅಸಾಮಾನ್ಯ ಮಾನವನೆನೆಸಿಕೊಂಡ.ಅವನಂತೆ ಅವನ ಜೊತೆಗೆ ಎಳನೂರರ ಮ್ಯಾಲ ಶರಣರು ಇದ್ದರು , ಎಲ್ಲರೂ ಮನುಷ್ಯ ರೆ. ಆದ್ರ ಈಗ ಅವ್ರೆಲ್ಲರಿಗೂ ನಮ್ಮ ಸಮಾಜ ದೇವ್ರು ಮಾಡಿ ಕೂಡಿಸಿ ಬಿಟ್ಟಾರ.ಒಂದೊಂದು ಕಾಯಕಕ್ಕ ಒಂದೊಂದು ಜಾತಿ ಹೆಸರು ಕೊಟ್ಟು ಆಯಾ ಕಾಯಕದ ಒಬ್ಬೊಬ್ಬ ಶರಣರನ್ನ ತಮ್ಮ ಜಾತಿಯ ರಾಯಭಾರಿ ಮಾಡಿಕೊಂಡು ವರ್ಷಕ್ಕೊಮ್ಮೆ ಜಯಂತಿ ಮಾಡ್ತಾರ. ಜಯಂತಿ ಆಚರಣೆ ಮಾಡೋದು ತಪ್ಪಂತ ಹೇಳಲ್ಲ.ಅವರ ಜೀವನ ಚರಿತ್ರೆ , ಅವರ ಸಾಧನೆ , ಅವರು ಸಮಾಜಕ್ಕೆ ಕೊಟ್ಟ ಮಾರ್ಗದರ್ಶನ , ಇವೆಲ್ಲ ಮುಂದಿನ ಪಿಳಿಗಿಗಿ ನೆನಪಿರಬೇಕಾದ್ರ ಮಾಹಾ ನಾಯಕರ ಹುಟ್ಟು ಸಾವಿನ ಕುರಿತು ಪ್ರತಿಯೊಬ್ಬರಿಗೂ ತಿಳದಿರಬೇಕು , ಮತ್ತೊಬ್ಬರಿಗೆ ತಿಳಿಸಿ ಹೇಳಬೇಕು. ಇಂತಹ ಜಯಂತಿಗಳ ಆಚರಣೆಯಿಂದ ಮುಂದಿನ ಪೀಳಿಗೆ ಗಳಿಗೆ ನಾವು ಅವರು ಸಮಾಜದ ಉದ್ದಾರಕ್ಕಾಗಿ ಎನೇನು ಮಾಡಿದರು ಅನ್ನೊದು ತಿಳಿಸಿ ಹೆಳತಿಬೇಕು. ಆದ್ರ ಈಗೀನ ಮಹಾನಾಯಕರ ಜಯಂತಿ ಗಳೆಲ್ಲ ಆಯಾ ಜನಾಂಗಗಳ ಜನಬಲ ತೋರಿಸಿಕೊಳ್ಳಕ್ಕೆ ಸೀಮಿತ ಆಗತಿದ್ದಾವ.ಮಡಿವಾಳ ಮಾಚೀದೇವನ ಜಯಂತಿ ಕ್ಕಿಂತ ಅಂಬಿಗರ ಚೌಡಯ್ಯ ನ ಜಯಂತಿ ದೊಡ್ಡ ದಾಗಿ ಮಾಡಬೇಕು.ಬಸವಣ್ಣನ ಜಯಂತಿಗಿಂತ ಅಂಬೇಡ್ಕರ್ ಜಯಂತಿ ಭಾರಿ ಮಾಬೇಕು.ಅವ್ರು ಅಷ್ಟೇ ಜನ ಇದ್ರು.ನಾವು ಅವರಿಗಿಂತ ಹೆಚ್ಚು ಜನ ಸೇರಬೇಕು.ಅವರು ಹಾಕಿದ್ದ ಟೆಂಟ್ ಸಣ್ಣದಿತ್ತು.ನಾವು ಹಾಕೋ ಟೆಂಟ್ ನೋಡಿ ಜನ ದಂಗಾಗಬೇಕು. ಇದಕ್ಕೆಲ್ಲ ರೊಕ್ಕ ..! ಚಂದಾ ಎತ್ತಿದ್ರಾಯ್ತು.ತಮ್ಮ ತಮ್ಮ ಜಾತಿ ಬಲ ತೋರಸಿಕೊಳ್ಳಕ ಯಾರು ಹಿಂದ ಬಿಳಲ್ಲ.ಇನ್ನೂ ಸರ್ಕಾರಿ ಅಧಿಕಾರಿಗಳು ಯಾತಕ್ಕ ಇರತಾರ , ಅಂಜಿಸಿಯಾದ್ರೂ ಜಯಂತಿ ಗಳಿಗಿ ದುಡ್ಡು ವಸೂಲಿ ಮಾಡೋದೇ , ಇವೆಲ್ಲದರ ಮುಂದಾಳತ್ವ ವಹಿಸುವವರು ಎಷ್ಟು ಬಸವಣ್ಣನ ತತ್ವಗಳನ್ನು ಅರಿತಿರತಾರ…!ಎಷ್ಟು ಅಂಬೇಡ್ಕರ್ ಅವರ ಬಗ್ಗೆ ತಿಳಿದಿರತಾರ..! ಚಂದಾ ವಸೂಲಿ ಮಾಡಿ ಈ ಜಯಂತಿ ಗಳಲ್ಲಿ ಕುಣಿಯುವವರು ಹೆಚ್ಚಾಗಿ ಯುವಕರು.ಕುಡಿದು ಡಿ ಜೆ  ಸದ್ದಿಗೆ ಎರ್ರಾಬಿರ್ರಿ ಕುಣಿಯುತ್ತ ಅದರ ಅವಾಜಕ್ಕ ಉರವರೆಲ್ಲ ಹೈರಾಣ ಆಗಬೇಕು. ಅದಕ್ಕ ಜಯಂತಿ ಅಂತಾರ.ನಮ್ಮ ನಡೆ ನುಡಿ ಆಚರಣೆಗಳಲ್ಲಿ ಶರಣರ ಮಹಾನಾಯಕರ ಆದರ್ಶ ಆಳವಡಿಸಿಕೊಳ್ಳುವದಕ್ಕ ಜಯಂತಿ ಅನ್ನಲ್ಲ ಅಂತ ಇಂತವರ ವಾದ ಇರಬಹುದು. ಅಷ್ಟಕ್ಕೂ ಸಾರ್ವಜನಿಕ ವಾಗಿ ಜಯಂತಿ ಆಚರಿಸುವ ಅವಶ್ಯಕತೆ ಅಷ್ಟು ಇದೆಯಾ..! ಸ್ಕೂಲ್ ಕಾಲೇಜ್ ಗಳಲ್ಲಿ ಆಚರಿಸಿದರೆ ಮಕ್ಕಳಿಗೆ ಅವರ ಬಗ್ಗೆ ತಿಳಿತದ.ಪಠ್ಯ ಪುಸ್ತಕಗಳದಾಗ ಅವ್ರ ಜೀವನ ಚರಿತ್ರೆಗಳು ಇರಲಿ. ಶಾಲಾ ಕಾಲೇಜುಗಳು ಮಕ್ಕಳಲ್ಲಿ ವೈಚಾರಿಕ ನಡೆಗಳ ಮಹತ್ವ ತಿಳಿಸಲಿ.ಎಲ್ಲರೂ ತಮ್ಮ ತಮ್ಮ ಜಾತಿಯ ನಾಯಕರ ಜಯಂತಿ ಆಚರಿಸ್ತಾರ , ಟಿಪ್ಪು ಸುಲ್ತಾನ ನ ಜಯಂತಿಗೆ ಯಾಕ ವಿರೋಧಿಸಬೇಕು..! ಇತಿಹಾಸ ತಮ್ಮ ಮನಸ್ಸಿಗಿ ಬಂದಂಗ ತಿರುಚಿ ತಮ್ಮ ವಾದಕ್ಕೆ ಕಟ್ಟುಬಿಳುವದರಿಂದ ಸತ್ಯ ಸುಳ್ಳಾಗಲ್ಲ , ಸುಳ್ಳು ಸತ್ಯ ಆಗಲ್ಲ.ಟಿಪ್ಪು ಸುಲ್ತಾನ್ ಕೂಡ ನಮ್ಮ ದೇಶದ ಸ್ವತಂತ್ರ ಕ್ಕಾಗಿ ಬ್ರಿಟಿಷ್ ರೊಂದಿಗೆ ಹೊರಾಡಿದವನೆ , ಇಷ್ಟು ಸಾಕು ಅವನನ್ನು ನೆನಪಿಸಿಕೊಳ್ಳುವದಕ್ಕ. ಬಸವಾದಿ ಶರಣರ ಆಶಯಗಳು , ಅಂಬೇಡ್ಕರ್ ಅವರ ವೈಚಾರಿಕ ನಿಲುವುಗಳು , ಇವೆಲ್ಲ ನಾವು ಅವ್ರ ಪೋಟಕ್ಕ ಹೂವಿನ ಹಾರ ಹಾಕಿ ತೆಂಗು ಒಡೆದು ಮೆರವಣಿಗೆ ಮಾಡ್ಕೊಂತ ಕುಣ್ಣಕೊಂತ ಹೋಗಿದ್ರಿಂದ ನಮ್ಮಲ್ಲಿ ಆಳವಡಿಸಿಕೊಳ್ಳಕ್ಕ ಆಗುವದಿಲ್ಲ.ತನು ಶುಧ , ಮನ ಶುಧ್ದ ಎಂಬ ನಿಲುವು ನಮ್ಮಲ್ಲಿ ಬರಬೇಕಾದ್ರ ಮೊದಲು ಶರಣರ ನ್ನು ಅರಿಬೇಕು.ಅವರ ನಿಲುವುಗಳನ್ನು ನಮ್ಮ ಜೀವನದಾಗ ಆಳವಡಿಸಿಕೊಳ್ಳಬೇಕು. ಮೈಕ್ ನಲ್ಲಿ ಜೋರಾಗಿ ಭಾಷಣ ಮಾಡ್ತ ಅವರು ನಮ್ಮ ಜಾತಿಗಿ ಹಂಗ ಮಾಡಿದ್ರು ಹಿಂಗ್ ಮಾಡುದ್ರೂ ಅಂತ ಅರಚಾಡುವದು ಬಿಟ್ಟು ಈಗ ಅವರು ಹಾಕಿದ ಮಾರ್ಗದರ್ಶನ ದಾಗ ನಾವು ಹ್ಯಾಂಗ್ ಬದುಕಬೇಕು ಅನ್ನೊದು ತಿಳಕೋಬೇಕು.ಅದು ನಮ್ಮ ಜೀವನದಾಗ ಅಳವಡಿಸಿಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ವಚನಗಳ ಸಾರ , ಅಂಬೇಡ್ಕರ್ ಅವರ ವೈಚಾರಿಕ ನಿಲುವುಗಳು ತಿಳಿಸುವ ಪ್ರಯತ್ನಕ್ಕೆ ಶಿಕ್ಷಕರು ಹೆಚ್ಚಿನ ಮಹತ್ವ ಕೊಡಬೇಕು. ಬಸವಣ್ಣ ಲಿಂಗಾಯತರಿಗೆ ಮಾತ್ರ ಸೀಮಿತ , ಅಂಬೇಡ್ಕರ್ ದಲಿತರಿಗೆ ಮಾತ್ರ ಸೀಮಿತ ಎಂಬ ಸಿದ್ದಾಂತ ಕ್ಕೆ ಯುವಜನ ಒಳಪಡುತಿರೋದು ಶೋಚನೀಯ. ಇನ್ನೂ ಒಂದು ಮುಖ್ಯ ವಿಷಯ. ದಲಿತರು ಬಸವಣ್ಣ ನನ್ನು ಒಪ್ಪಿಕೊಂಡಷ್ಟು ದಲಿತೇತರು ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿದ್ದೆವಾ..! ದಲಿತರು ಅಂಬೇಡ್ಕರ್ ಭಾವ ಚಿತ್ರದ ಜೊತೆ ಬಸವಣ್ಣ ಬುದ್ಧನ ಭಾವಚಿತ್ರ ಗಳಿಗೆ ಪೂಜಿಸೋದು ನೋಡಿದ್ದೆವೆ.ಎಷ್ಟು ಜನ ದಲಿತೇತರು ಲಿಂಗಾಯತರು ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜಿಸ್ತೆವೆ..!ಪೂಜೆ ಅನ್ನೊದು ಒಂದು ಆಚರಣೆ ಅಷ್ಟೆ. ಗೌರವದಿಂದ ಒಪ್ಪಿಕೊಳ್ಳುವದು ಮುಖ್ಯ. ಶರಣರ ತತ್ವ ಗಳು , ಅಂಬೇಡ್ಕರ್  ರ ಆಶಯಗಳು ಎಂದಿಗೂ ಪ್ರಸ್ತುತ. ಬಸವೇಶ್ವರ ಅಂಬೇಡ್ಕರ್ ಇನ್ನೂ ಅನೇಕ ಮಹಾನಾಯಕರು ಮನುಕುಲದ ಉದ್ದಾರಕ್ಕಾಗಿ ಜೀವ ತೇದವರು.ಅವರೂ ಮನುಷ್ಯರೆ.ಅವ್ರಲ್ಲೂ ಪರಿಪೂರ್ಣ ತೆ ಹುಡುಕುವ ಕೆಲಸ ನಾವು ಮಾಡಬಾರದು.ಆದ್ರ ಅವರ ಮಾರ್ಗದರ್ಶನ ನಮ್ಮ ಜೀವನ ಮಟ್ಟ ಎಷ್ಟು ಬದಲಾಯಿಸ್ತದ ಅನ್ನುವದು ಅವರ ದಾರಿಯಲ್ಲಿ ಸಾಗಿದಾಗ ಮಾತ್ರ ತಿಳಿತದ. ಶರಣರ ಮಹಾನಾಯಕರ ಜಯಂತಿ ಗಳು ಸರ್ಕಾರಿ ಕಚೇರಿಗಳಲ್ಲಿ ಕಾಟಾಚಾರಕ್ಕಾಗಿ ಆಚರಿಸುವದನ್ನು ನೋಡ್ತೆವೆ.ಒಂದು ಪೋಟೋ ಇಟ್ಟು ಹೂವಿನ ಸರ ಹಾಕಿ ತೆಂಗಿನ ಕಾಯಿ ಒಡೆದು ಇಟ್ರ ಜಯಂತಿ ಮುಗಿತು.ಕಚೇರಿ ಮುಚ್ಚಿ ಮನಿಗಿ ಹೋದ್ರ ಆಯ್ತು . ಇನ್ನೂ ಡಿ ಜೆ ಹಚ್ಚಿ ಕುಣಿಯುವವರು ಪಟಾಕಿ ಹಚ್ಚೊರು ,  ಉರಾಗೆಲ್ಲ ಮೆರವಣಿಗಿ ಮಾಡೊರ ಹಾವಳಿ ಶುರು ಆಗತದ. ಇದರಿಂದ ನಮ್ಮ ಮುಂದಿನ ಪೀಳಿಗೆ ಏನು ಕಲಿತಾರ..! ನಮ್ಮ ನಮ್ಮ ಜಾತಿ ಅಥವಾ ಜನ ಬೆಂಬಲ ತೊರಿಸಬೇಕಾದ್ರ ಅದ್ದೂರಿ ಜಯಂತಿಗಳು ಆಚರಿಸಬೇಕು.ಅಂತ.ಇದರಿಂದಾಗುವ ಉಪಯೋಗ ಅನುಪಯೋಗ ಯಾರಿಗೂ ಬೇಕಾಗಿಲ್ಲ.ವಚನ ಸಾಹಿತ್ಯ ವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಶರಣರ ಸಮಬಾಳು ಸಮಪಾಲು ಆಶಯಗಳು , ಕಾಯಕದ ಮಹಿಮೆ , ಬಹುತ್ವ ಆಚರಣೆಗಳನ್ನು ಗೌರವಿಸುವದು , ದಯೆ ಕರುಣೆಗಳ ಸಾರ , ಎಲ್ಲರನ್ನೂ ಒಳಗೊಂಡ ಸರ್ವಜನಾಂಗಗಳ ಸಾಮರಸ್ಯ..ಇವೆಲ್ಲವೂ ಬರಿ ಬಸವಣ್ಣಗ ಅಂಬೇಡ್ಕರ್ ಅವರಿಗೆ ಮೆರೆಸಿದರಾಗಲಿ , ವಚನ ಸಾಹಿತ್ಯ ತಲೆ ಮೇಲೆ ಹೊತ್ತು ತಿರುಗಿದರಾಗಲಿ ಸಿಗಬಹುದೇ..! ಇಲ್ಲ. ಆದರೂ ಮೆರವಣಿಗೆಯಂತ ಆಚರಣೆಗಳು ಅದ್ದೂರಿಯಾಗಿ ಯಾಕ ಜರುಗತಾವ.ಉತ್ತರ ಒಂದೇ , ಬರಿ ಪ್ರತಿಷ್ಟೆಗಾಗಿ ಮಾತ್ರ.ಪ್ರತಿಷ್ಟೆ ನಮಗ ವಿಕಾಸದ ದಾರಿಗೆ ಒಯ್ಯುವದಿಲ್ಲ.ಅಧಪತನದೆಡೆ ಒಯ್ಯುತ್ತದೆ.ಜಯಂತಿಯ ಆಚರಣೆಗಳು ಬರಿ ಪ್ರತಿಷ್ಟೆಗಳಾಗದೆ ಸರ್ವಜನರ ಮಾನಸಿಕ ವಿಕಾಸಕ್ಕಾಗಿ ಆಚರಿಸಲ್ಪಡಬೇಕು. ಜ್ಯೋತಿ , ಡಿ .ಬೊಮ್ಮಾ. ಜ್ಯೋತಿ ಡಿ ಬೊಮ್ಮಾ ಅವರು ಕಲಬುರಗಿ ಜಿಲ್ಲೆಯವರು.ಇವರು ಇದುವರೆಗುನಾಲ್ಕು ಕವನ ಸಂಕಲನಗಳನ್ನು,ಎರಡು ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಪ್ರತಿ ತಿಂಗಳೂ ಸಂಗಾತಿ ಪತ್ರಿಕೆಗಾಗಿ ದೇಸಿನುಡಿಗಟ್ಟಿನಲ್ಲಿ ವಿಶೇಷವಾದ ವಿಷಯಗಳ ಬಗ್ಗೆ ಬರೆಯುತ್ತಿದ್ದಾರೆ

Read Post »

You cannot copy content of this page

Scroll to Top