ಧಾರಾವಾಹಿ ಸಂಗಾತಿ-17 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಸಲ್ಲಿಸಿದ ಮಹಾನ್ ಚೇತನ ಸವಿತಾ ದೇಶಮುಖ ರಜಾಕರರ ಹಾವಳಿಯಿಂದ ಮನೆಬಿಟ್ಟು ಓಡಿಬಂದ ನಿರಾಶ್ರಿತರ ದುಃಖವ ನೋಡಿ.,.., ತಾಯಿಯವರ ಹೃದಯದಲ್ಲಿ ಮೂಡಿದ ಕರುಣೆ.. ತಾಯಿತನದ ಕರೆಯಾಗಿ ಮೂಡಿದ ತ್ರಿಪದಿ…. *ಬಡ ಮಕ್ಕಳಿಗೆ ಹಾಲು|ತಾಯಿಗೆ ಸೀರೆಒಡಲ ತುಂಬ ಅನ್ನ ನೀಡುತ-ರೋಗಗಳಓಡಿಸ ಬೇಕಯ್ಯಾ ಸಿದ್ದೇಶ|| ಈ ಕವನದಲ್ಲಿ ಹಾಲಿಲ್ಲದೆ ಅಳುವ ಮಕ್ಕಳನ್ನು ನೋಡಿ ಅವರ ಮನಸು ಕರಗುತ್ತದೆ.ಬಟ್ಟೆಯಿಲ್ಲದೆ ನಾಚಿಕೆಪಡುವ ತಾಯಂದಿರ ನೋವ ಕಂಡು ಕಳವಳ ಗೊಂಡರು.ಹಸಿವಿನಿಂದ ಕಂಗೆಟ್ಟ ಜನರಿಗೆ ಅನ್ನ ಕೊಡಬೇಕೆಂಬ ಹಂಬಲ……“ಸೀರೆ ಒಡಲ ತುಂಬ” …. ತಾಯಂದಿರ ಗೌರವ, ಮಾನವನ್ನು ಕಾಪಾಡುವ ಕಾಳಜಿ.“ಅನ್ನ ನೀಡುತ” “ರೋಗಗಳ ಓಡಿಸಬೇಕಯ್ಯಾ” ಆರೋಗ್ಯ ಮತ್ತು ಸುರಕ್ಷತೆ ಕೂಡ ಅಗತ್ಯವೆಂಬ ಅರಿವು.ಕೊನೆಯಲ್ಲಿ “ಸಿದ್ದೇಶ” ಎಂದು ಕರೆಯುವ ತಾಯಿಯವರು, ತಮ್ಮ ಕರ್ತವ್ಯವನ್ನು ದೈವಿಕ ಶಕ್ತಿಗೆ ಅರ್ಪಿಸುತ್ತಿದ್ದಾರೆ. ಇದು ಅವರ ಭಕ್ತಿ, ವಿಶ್ವಾಸ ಮತ್ತು ಮಾನವೀಯತೆಯ ಸಂಕಲನ. ಈ ಕವನದ ಹಿನ್ನಲೆಯಲ್ಲಿ ಇರುವ ದೃಶ್ಯ ತುಂಬ ಹೃದಯವಿದ್ರಾವಕ….!!!ರಜಾಕರರ ಹಿಂಸೆಯಿಂದ ಓಡಿಬಂದ ಜನರು… ಭಯ, ಹಸಿವು, ನಿರಾಶ್ರಿತ ಜೀವನಕ್ಕೆ ತಾಯಿಯವರಂತಹ ಮಹಾನ್ ಹೃದಯಿ ಆಶ್ರಯ, ಆಹಾರ ಮತ್ತು ಆಶೆಯನ್ನು ನೀಡಿದರು. *ಸಿದ್ದನ ಛತ್ತರಕ್ಕ ಬೆಂದು ಬಂದ ಮಕ್ಕಳಎದ್ದು ಕಂಣ್ಣೀರ ಒರೆಸುವ ,ಭಾಗ್ಯವಸಿದ್ದ ನನಗೆ ನೀಡಿ ದುಡಿಸಿದಿ* ತಾಯಿಯವರಲಿದ್ದ ದಯೆ, ಕರುಣೆ ಮತ್ತು ಸೇವಾಭಾವ ತುಂಬ ಸ್ಪಷ್ಟವಾಗಿ ಕಾಣಿಸುತ್ತದೆ.ನಿಜಾಮನ ದಬ್ಬಾಳಿಕೆಯಿಂದ ಸಂಕಷ್ಟಕ್ಕೊಳಗಾದ ನಿರಾಶ್ರಿತರು ತಮ್ಮ ಊರುಗಳನ್ನು ಬಿಟ್ಟು, ಕಣ್ಣೀರನ್ನು ಹೊತ್ತುಕೊಂಡು ಸೊಲ್ಲಾಪುರಕ್ಕೆ ಬಂದಾಗ, ಅವರ ಪರಿಸ್ಥಿತಿ ತುಂಬ ದಯನೀಯವಾಗಿತ್ತು. ಮನೆ ಇಲ್ಲ, ಊರು ಇಲ್ಲ, ಬದುಕಿನ ಭರವಸೆ ಇಲ್ಲ….!! “ಬೆಂದು ಬಂದ ಮಕ್ಕಳ” ಎನ್ನುವ ಪದ ಬಹಳ ಗಂಭೀರ. ಇದು ಅವರ ನೋವನ್ನು ತಾಯಿಯವರು ಎಷ್ಟು ಆಳವಾಗಿ ಅನುಭವಿಸಿದ್ದಾರೆ ಎಂಬುದನ್ನು ತೋರಿಸುತ್ತದೆ. ತಾಯಿಗೆ ಮಕ್ಕಳಂತೆ ಅವರು…..“ಎದ್ದು ಕಣ್ಣೀರ ಒರೆಸುವ ಭಾಗ್ಯ” — ಇಲ್ಲಿ ತಾಯಿಯವರು ಸೇವೆಯನ್ನು ಕರ್ತವ್ಯವಾಗಿ ಮಾತ್ರ ನೋಡುತ್ತಿಲ್ಲ. ಅದನ್ನು “ಭಾಗ್ಯ” ಎಂದುಕೊಂಡಿದ್ದಾರೆ. “ಸಿದ್ದ ನನಗೆ ನೀಡಿ ದುಡಿಸಿದಿ” ದೇವರು ನನಗೆ ಈ ಕೆಲಸ ಕೊಟ್ಟಿದ್ದಾನೆ, ಈ ಜನರ ಸೇವೆ ಮಾಡುವ ಅವಕಾಶ ನೀಡಿದ್ದಾನೆ ಎಂದು ತಾಯಿಯವರು ಕೃತಜ್ಞತೆಯಿಂದ ಹೇಳುತ್ತಾರ. ತಾಯಿಯವರಲ್ಲಿ ಇರುವ ಮಾನವೀಯತೆ ಮತ್ತು ದೈವಭಕ್ತಿ ತೊರುವದು. ಅವರ ಸೇವೆಯನ್ನು ತಮ್ಮ ಕರ್ತವ್ಯ ತಮ್ಮ ಧರ್ಮದಂತೆ ಸ್ವೀಕರಿಸಿದ್ದು ಇಲ್ಲಿ ಗೋಚರಿಸುತ್ತದೆ. ಆಗಿನ ಕಾಲದಲ್ಲಿಶ್ರೀ ಚಂಡರಕಿ (ಬೆನಕೊಪ್ಪ) ಉರ್ದು ಭಾಷೆಯ ಕವಿಯೊಬ್ಬನು ವೀರಗಾಸೆ ಕುಣಿತದಲ್ಲಿ ಪ್ರಸಿದ್ಧರಾದವರು. ಸೊಲ್ಲಾಪುರಕ್ಕೆ ಬಂದ ನಿರಾಶ್ರಿತರಿಗೆ ಆಶ್ರಿತರಾಗಿ ನಿಂತ ತಾಯಿಯವರ ಬಗ್ಗೆ ಉರ್ದುನಲ್ಲಿ ಕವಿತೆ ಬರ್ತಾನೆ ಅದನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು ಡಾ. ಶಂಕರ. ಮೂಗಿ(ನನ್ನ ತಂದೆ)*ತಾಯಿ ನಿನಗೆ ಸಲಾಮು ನಿನಗೆ ಸಲಾಮು * ಅಟ್ಟಿ ಜಡಿಸಿದ ಕಾಸೀಮ ಗಜನಿಕಟ್ಟಿಕೊಂಡು ರಜಾಕಾರರ ದಂಡುಓಡಿ ಬಂದೆವು ನಾವಂದುತೋಳ ಕಂಡ ಕುರಿಯ ಹಿಂಡು ಉಟ್ಟಿದ ಸೀರೆ ತೊಟ್ಟಿದ್ದವಲ್ಲಬೆನ್ನು ಬಿರಿವ ಬಿಸಿಲಿನಲ್ಲಿಸೊನ್ನಲಿಗೆ ಭೂಮಿಗೆ ಬಂದುನಿಂದೆವು ಸಿದ್ದನ ಛತ್ರದಲ್ಲಿ….., ಅಂತ ತಾಯಿಯವರ ಬಗ್ಗೆ ಬರಿತಾನೆ…… ಸೊಲ್ಲಾಪುರ ರೈಲ್ವೆ ನಿಲ್ದಾಣಕ್ಕೆ ಒಲಸಿ ಬಂದ ಜನರ ಜಾತಿಭೇದ ಲೆಕ್ಕಿಸದೆ ಜಯದೇವಿ ತಾಯಿಯವರು ವಸತಿ ವ್ಯವಸ್ಥೆ ,ಆಹಾರ ಸೌಲಭ್ಯ ,ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಸಿದ್ಧ ಮಾಡಿದರು. ಇದರಿಂದ ಸ್ಥಳೀಯ ಸಂಘ-ಸಂಸ್ಥೆಗಳು ಅದರಲ್ಲೂ ಮಹಿಳಾ ಜ್ಞಾನ ಮಂದಿರ ,ಶ್ರಾವಿಕಾಶ್ರಮ, ಸರಸ್ವತಿ ಸದನಗಳ ಕಾರ್ಯಕರ್ತರು ಸೇರಿ ನಿರಾಶ್ರಿತರಿಗೆ ಊಟದ ಪಟ್ಟಣಗಳನ್ನು, ನೀರು, ಹಾಲು,. ನಿತ್ಯ ಉಪಯೋಗವಾಗುವ ವಸ್ತುಗಳನ್ನು ವಿತರಿಸಲಾರಂಭಿಸಿದರು .ಇಡೀ ಸೊಲ್ಲಾಪುರದ ಜನತೆ ಅವರ ಸಹಾಯಕ್ಕೆ ನಿಂತರು.ಇಲ್ಲಿ ವಾರದ ಬಾಬಾ ಸಾಹೇಬರು, ಕಾಡಾದಿ ನಾಗಪ್ಪನವರು ,ಜಯದೇವಿ ತಾಯಿಯವರು ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಹಾಗೂ ಭಾಲ್ಕಿ ಪಟ್ಟ ದೇವರನ್ನು ಕಂಡು ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ನಿರಾಶ್ರಿತ ಮಕ್ಕಳ ಜೊತೆ ಎಲ್ಲರನ್ನೂ ನೋಡಿಕೊಳ್ಳುವಂತೆ ಭರವಸೆ ಕೊಟ್ಟು ವಸತಿ ವ್ಯವಸ್ಥೆಯನ್ನು ಮಾಡಿದರು. *ಹೊಲದಲ್ಲಿ ಮನೆ ಕಟ್ಟಿಕೊಟ್ಟೀರಿಕೊಯ್ದಿರಿ ನಿಂತ ಫಸಲುಆ ವರುಷ ನಿಮಗಾಗಲಿಲ್ಲಬೆಳೆಯಲ್ಲಿ ಏನು ಅಸಲು ಕೂಸು ಕಂಡಿರಲಿಲ್ಲ ನೆತ್ತಿಗೆಣ್ಣೆಹೊಟ್ಟೆಗಿರಲಿಲ್ಲ ಹಾಲು ತೊಟ್ಟುಹೊದಿಕೆ ಹಾಸಿ, ಹಾಸು ಇರಲಿಲ್ಲತಂದು ಒಗಿಸಿದಿರಿ ಚಾದರದ ಕಟ್ಟು* ತಾಯಿಯವರು ತಮ್ಮ ನಲವತ್ತು ಎಕರೆ ಭೂಮಿಯಲ್ಲಿ ಬೆಳೆದು ನಿಂತ ಬೆಳೆಯನ್ನು ತೆಗೆಸಿ…ಸೆಡ್ ಹಾಕಿ ನಿರಾಶ್ರಿತರಿಗೆ ಇರಲು ಹೊಸ ವೆವ್ಯಸ್ತೆಯನ್ನು ಮಾಡಿದರು. ತಮ್ಮ ಮನೆಯಾದ ಜೈನಿಕೇತನದಿಂದಲೇ ನಿರಾಶ್ರಿತ ಜನರಿಗೆ ಬಟ್ಟೆಯನ್ನು ದಾನ ಮಾಡುತ್ತಿದ್ದರು ಇಷ್ಟೇ ಅಲ್ಲದೆ ಜಯದೇವಿ ತಾಯಿಯವರು ಶಿಬಿರಕ್ಕೆ ಆಗಾಗ ಭೇಟಿ ಕೊಟ್ಟು ಅವರ ಸಮಸ್ಯೆಗಳನ್ನು ಕೇಳುತ್ತಿದ್ದರು … ಬಡವರು ದಲಿತರು ನಿರಾಶ್ರಿತರು ಅದು ಯಾವುದೇ ಮತ ಕುಲಕ್ಕೆ ಸಂಬಂಧಿಸಿದ್ದರು ಎಲ್ಲರಿಗೂ ತಾಯಿ ಮಕ್ಕಳನ್ನು ನೋಡುವಂತೆ ನೋಡಿಕೊಂಡರು. *ಹಡೆದ ನಾರಿಯರ ಕರೆದುತಂದು ಮಾಡಿದಿರಿ ಆರೈಕೆತವರಿಗೆ ಕಡಿಮೆ ಅಲ್ಲದಂತೆಪಡೆದೆವು ಅಮ್ಮ ನಿನ್ನ ಹರಿಕೆ * ನಿರಾಶ್ರಿತ್ರಿರಗೆ ಆಶ್ರಯ ಕೊಡುವದು ಅಂಥ ಸುಲಭದ ಕೆಲಸವೇನು ಆಗಿರಲಿಲ್ಲ ಅದರಲ್ಲಿ ಬಾಣಂತಿಯರು ಗರ್ಭಿಣಿಯರಂಥ ಸ್ತ್ರೀಯರು ಕೂಡ ಇದ್ದರು ಅವರೆಲ್ಲರಿಗೂ ಕರೆದು ಬಾಣಂತನವನ್ನು ಮಾಡಿಸಿ ನವಜಾತ ಶಿಶುಗಳ ಆರೈಕೆ ಮಾಡಿಸಿದರು. ಗರ್ಭಿಣಿಯರಿಗೆ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸಿದರು.ವಿವಿಧ ಸಂಸ್ಥಾನಗಳ ವಿಲೀನಿಕರಣ ಸಂದರ್ಭದಲ್ಲಿ ದೇಶದ ಏಕೀಕರಣಕ್ಕಾಗಿ ಶಕ್ತಿಯಾಗಿ ನಿಂತ ನಾಯಕ ಸರ್ದಾರ್ ವಲ್ಲಭಾಯಿ ಪಟೇಲರು.ಸ್ಥಿತಿ ಹಿಡಿತದಿಂದ ತಪ್ಪುತ್ತಿರುವುದು ಕಂಡಾಗ, ಪಟೇಲರು ತಕ್ಷಣವೇ ಶೀಘ್ರ ಹಾಗೂ ದೃಢ ಕ್ರಮ ಕೈಗೊಂಡರು. ಅವರ ದೃಷ್ಟಿಯಲ್ಲಿ ದೇಶದ ಏಕತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾಗಿತ್ತು.ಶೀಘ್ರ ಕಾರ್ಯಾಚರಣೆಯಲಿ(ಕ್ವಕ ಆಕ್ಷನ್)ಪಟೇಲರ ದೃಢ ನಿಲುವು ತೆಗೆದುಕೊಂಡರು.ಈ ಸಂದರ್ಭದಲ್ಲಿ ಪಟೇಲರು ಮಾತುಕತೆ ಜೊತೆಗೆ ಅಗತ್ಯವಾದರೆ ಶಕ್ತಿಯನ್ನೂ ಬಳಸಬೇಕು ಎಂಬ ನಿಲುವನ್ನು ತಾಳಿದರು.ಹೈದರಾಬಾದ್ ಸಂಸ್ಥಾನದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಅವರು “ಪೊಲೀಸ್ ಆಕ್ಷನ್” ಸೈನಿಕ ಕ್ರಮವನ್ನು ಜಾರಿಗೊಳಿಸಿದರು. ಇದನ್ನು *ಆಪರೇಷನ್ ಪೋಲೋ*ಎಂದು ಕರೆಯಲಾಗುತ್ತದೆ. ಈ ಕಾರ್ಯಾಚರಣೆಯ ಮೂಲಕ ಕೇವಲ ಐದು ದಿನಗಳಲ್ಲಿ ಹೈದರಾಬಾದ್ ಸಂಸ್ಥಾನವನ್ನು ಭಾರತದ ಭಾಗವನ್ನಾಗಿ ಮಾಡಲಾಯಿತು.ಪಟೇಲರ ನಾಯಕತ್ವದ ವೈಶಿಷ್ಟ್ಯದೃಢ ನಿರ್ಧಾರ ಶಕ್ತಿ,ತ್ವರಿತ ಕಾರ್ಯಾಚರಣೆ,ದೇಶದ ಏಕತೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧತೆಯಲಿ ಇದ್ದರು ಪಟೇಲರು….. ಈ ಶೀಘ್ರ ಮತ್ತು ದೃಢ ಕ್ರಮಗಳ ಫಲವಾಗಿ, ಭಾರತ ಒಂದು ಏಕೀಕೃತ ರಾಷ್ಟ್ರವಾಗಿ ರೂಪುಗೊಂಡಿತು. *” ದೇಶದ ಏಕತೆಯ ಕಗ್ಗತ್ತಲಲ್ಲಿ ಬೆಳಕಾಗಿ ಕಾಣಿಸಿಕೊಂಡವರು ಸರ್ದಾರ್ ವಲ್ಲಭಾಯಿ ಪಟೇಲರು…..“ಭಾರತದ ಕಬ್ಬಿಣ ಮನುಷ್ಯನು” ಎಂದು ಜಯದೇವಿ ತಾಯಿಯವರು ಬಹಳ ಹೆಮ್ಮೆಯಿಂದ ಎಲ್ಲ ಭಾಷಣಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಕೊನೆಗೊಮ್ಮೆ… ಅನುಭವಿಸಿದ ನೋವು, ನಿರಾಶೆ, ಅಲೆಮಾರಿ ಜೀವನದ ನಂತರ, ನಿರಾಶ್ರಿತರು ಮತ್ತೆ ತಮ್ಮ ಆಶ್ರಯದ ನೆಲೆಗೆ ಹಿಂದಿರುಗುವ ಕ್ಷಣ ಬಂದಾಗ, ಅದು ಅವರ ಬದುಕಿನ ಪುನರ್ಜನ್ಮದಂತಿತ್ತು. ಆ ಸಂತಸದ ದಿನ ಬಂದು ಒದಗಿದ್ದು ೩೦-೯-೪೮ ರಂದು. ನಿರಾಶ್ರಿತರು ತಮ್ಮ ಆಶ್ರಿತ ಸ್ಥಾನಕ್ಕೆ ಹೊರಟು ನಿಂತರು….. ಸ್ವಸ್ಥಾನಕ್ಕೆ ಹಿಂದುತ್ತಿರುವಾಗ ಅವರಲ್ಲಿ ಇದ್ದ ಆನಂದ ಉತ್ಸಾಹ ಹೇಳುತೀರದಾಗಿತ್ತು ….. ಅವರಿಗೆ ನಿಜವಾದ ಸ್ವಾತಂತ್ರ ಈಗ ಬಂದಾಗಿತ್ತು ..,!!!.ಎಲ್ಲರೂ ತಾಯಿಯವರಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸ್ತಾ ಹಾಡಿ ಹರಿಸಿ ಹೊಗಳಿ ಅಲ್ಲಿಂದ ತೆರಳಿದರು. ತಮ್ಮ ಮನೆಗಳ ಬಾಗಿಲುಗಳನ್ನು ಮತ್ತೆ ತೆರೆಯುವ ತವಕ …ಕಣ್ಣಲ್ಲಿ ಆನಂದದ ಕಣ್ಣೀರು ತುಂಬಿಕೊಂಡವು…. ಆಸರೆ ಕೊಟ್ಟ ನೆಲವನ್ನು ಬಿಟ್ಟು ಹೋಗುವಾಗ. ..ಆ ಮಣ್ಣನ್ನು ಸ್ಪರ್ಶಿಸಿದಾಗ ಅವರ ಹೃದಯ ತುಂಬ ಒಂದು ಶಾಂತಿಯ ಅಲೆ ಹರಡಿತು.ಭೂಮಿಗೆ ನಮಿಸಿದರು.ಮಕ್ಕಳು ಸಂತೋಷದಿಂದ ಓಡಾಡುತ್ತಿದ್ದರು, .ಪ್ರತಿ ಹೆಜ್ಜೆ ಪ್ರತಿ ಉಸಿರು ಒಂದು ಕಥೆ ಹೇಳುವಂತೆ ಇತ್ತು…..ಆ ಕ್ಷಣದಲ್ಲಿ ಅವರು ತಮ್ಮ ಕಷ್ಟಕಾಲದಲ್ಲಿ ತಾಯಿಯಂತೆ ನೆರವಾದ ಆ ಮಹಾನ್ ವ್ಯಕ್ತಿಯ ಜಯದೇವಿ ತಾಯಿಯವರನ್ನು ನೆನೆಸಿಕೊಂಡರು“ತಾಯಿ… ನಮ್ಮ ಜೀವ ಉಳಿಸಿದವಳು ನೀವು… ನಾವು ಕಳೆದುಕೊಂಡ ವಿಶ್ವಾಸವನ್ನು ಮತ್ತೆ ನಮ್ಮೊಳಗೆ ತುಂಬಿದವಳು ನೀವು… ನಮ್ಮ ನೆರಳಿಲ್ಲದ ಬದುಕಿಗೆ ಆಶ್ರಯವಾದವಳು ನೀವು… ಇಂದು ನಾವು ಮತ್ತೆ ನಮ್ಮ ನೆಲಕ್ಕಹಿಂದಿರುಗುತ್ತಿದ್ದೇವೆಆದರೆ ಈ ಸಂತೋಷದ ಪ್ರತಿಯೊಂದು ಹನಿ ನಿಮ್ಮ ಆಶೀರ್ವಾದವೇ…ನಾವು ನಿಮ್ಮ ಋಣವನ್ನು ಯಾವತ್ತೂ ತೀರಿಸಲಾರೆವು… ನಮ್ಮ ಹೃದಯದ ತುಂಬು ಕೃತಜ್ಞತೆಗಳನ್ನು ನಿಮಗೆ ಅರ್ಪಿಸುತ್ತೇವೆ ಎನ್ನುತ ಹಾಡಿ ಹರಸಿದರು……. *ಹೇಗೆ ತೀರಿಸಬೇಕು ತಾಯಿನಿನ್ನ ಋಣವ ಒಟ್ಟುನೆನೆವೆವು ಹಡೆದ ಮಕ್ಕಳಿಗೆ*ನಿನ್ನ ಹೆಸರು ಇಟ್ಟು,*….!!! ಜಯಭೇರಿ ಕೇಳಿ ಕುಣಿದೆವುಆಯಿತು ರಜಾಕರರ ಹೋಮಮಕ್ಕಳು ಮರಿ ಹೋಗಿ ಬರುವೆವುತಾಯಿ ನಿನಗೆ ಸಲಾಂ.. ನಿನಗೆ ಸಲಾಮ* (ಚಂಡರಕಿ ಉರ್ದು ಕವಿ) ಅವರ ಮುಖದಲ್ಲಿ ಕಂಡ ಆ ಸಂತಸ ಅವರ ಹೃದಯದಲ್ಲಿ ಮೂಡಿದ ಆ ಶಾಂತಿ—ಅದು ತಾಯಿಯ ಸೇವೆಗೆ ದೊರಕಿದ ಅತ್ಯಂತ ಮಹತ್ತರ ಗೌರವ.ಈ ದೃಶ್ಯ… ನೋವಿನಿಂದ ಆರಂಭವಾಗಿ, ಕೃತಜ್ಞತೆಯಲ್ಲಿ ಮುಗಿಯುವ ಒಂದು ಬದುಕಿನ ಪಯಣ.ಮುಂದುವರಿಯುವುದು ಸವಿತಾ ದೇಶಮುಖ