ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ರಾಧಾ ಹನುಮಂತಪ್ಪ ಟಿ ಹರಿಹರ ಅವರ ಕವಿತೆ “ಎ.ಐ. ತಮ್ಮಾ”

ಕಾವ್ಯ ಸಂಗಾತಿ ರಾಧಾ ಹನುಮಂತಪ್ಪ ಟಿ ಹರಿಹರ “ಎ.ಐ. ತಮ್ಮಾ” *ಎಐ ತಮ್ಮ ಎಐ ತಮ್ಮ ನೀನು ಎಲ್ಲಿಂದ ಬಂದೆ ಎಲ್ಲಿಂದ ಬಂದೆ ಹೇಳು ನಿನಗಿಷ್ಟು ಮಾಹಿತಿ ಎಲ್ಲಿಂದ ಬಂತು ಹೇಳು* *ನಿಮಿಷ ಸೆಕೆಂಡ್ ಗಳಲ್ಲಿ ನಮ್ಮಯ ಪ್ರಶ್ನೆಗೆ ಉತ್ತರವ ಹೇಗೆ ಹುಡುಕುವೆಯಾ ತಮ್ಮ ಹೇಗೆ ಹುಡುಕುವೆಯಾ ತಮ್ಮ ಹೇಳು* *ನೆಮ್ಮದಿ ಶಾಂತಿ ಬೇಕು ಎಂದರೂ ಅದಕ್ಕೆ ಪ್ರತಿಯಾಗಿ ಉತ್ತರವ ಕೊಡುವ ನಿನ್ನ ಚಾಣಾಕ್ಷ ಬುದ್ಧಿಗೆ ನಾನು ಸೋತೆನು ತಮ್ಮ ನಾನು ಸೋತೆನು ತಮ್ಮ ನೀ ಎಲ್ಲಿರುವೆ ಹೇಳು* *ಎಲ್ಲ ಕ್ಷೇತ್ರಗಳಲ್ಲೂ ನಿನ್ನದೇ ಹಾವಳಿ ತಮ್ಮ ಈ ಮನುಷ್ಯನೇ ಮಾಡಿದನಂತೆ ನಿನ್ನನು ಇದು ನಿಜವೇ ತಮ್ಮ ಇದು ನಿಜವೇ ತಮ್ಮ ನೀನು ಹೇಳು* *ಎಐ ತಮ್ಮ ನೀನು ಎಲ್ಲಿಂದ ಬಂದೆ ನಿನ್ನಿಂದ ಸಕಲ ಜೀವಿಗಳ ಕುಲಕ್ಕೆ ತೊಂದರೆ ಯಾಗದು ಎಂದು ಹೇಳು ತಮ್ಮ ತೊಂದರೆ ಯಾಗದು ಎಂದು ಹೇಳು ಎಐ ತಮ್ಮ ಹೇಳು* ರಾಧಾ ಹನುಮಂತಪ್ಪ ಟಿ ಹರಿಹರ

ರಾಧಾ ಹನುಮಂತಪ್ಪ ಟಿ ಹರಿಹರ ಅವರ ಕವಿತೆ “ಎ.ಐ. ತಮ್ಮಾ” Read Post »

ಕಾವ್ಯಯಾನ

ಜಿ.ಎಸ್.ಕಲಾವತಿಮಧುಸೂದನ ಅವರ ಕವಿತೆ “ಸಮಾಧಾನ ಸಮಾಧಾನ ಸಮಾಧಾನ”

ಕಾವ್ಯ ಸಂಗಾತಿ ಜಿ.ಎಸ್.ಕಲಾವತಿಮಧುಸೂದನ ಸಮಾಧಾನ ಸಮಾಧಾನ ಸಮಾಧಾನ ಸದಾ ನಿನದೇ ಧ್ಯಾನ..ಎಷ್ಟೆಂದು ಬೇಡಲಿ ನಿನ್ನ ದಾನ..! ಬೇಡಿದಷ್ಟು ನೀಡುತಲೇ ಕಾಯಲು ಹವಣಿಸುವುದೇ ನಿನ್ನ ಸದ್ಗುಣ. ಎಷ್ಟೆಂದು ಪಾಡಿ ಪೊಗಳಲಿ ನಿನ್ನ ಗುಣಗಾನ.. ಗಾನಯಾನದಲಿ ತೇಲುವಲಿ ಯಾರಿಲ್ಲವು ನಿನ್ನ ಸಮಾನ..ಅಗುಳಗುಳ ನುಂಗಲು ಬೇಕು ದಿನದಿನವು ನಿನ್ನ ಅನುಸಂಧಾನ. ಅಣುವಣುವಿಗೂ ಚಣಚಣವು ದಿನದಿನವು ಜಲಜಭವದ ಅವನಿಯೊಳು ಮುಳುಗಿರಲು ಕರಪಿಡಿದೆತ್ತುವೆ ಸಾವಧಾನ.. ನೀನಿರದೇ ಇರಲು ಸಾಧನೆಗೆ ಎಲ್ಲೆಡೆಯು ಮಾನ…ಹರಣ..! ಕುಕೃತ್ಯ ಕುಟಿಲಗಳ ನಿವಾರಿಸಲು ಪ್ರೇರಣ..ನವನವೀನ ನಿತ್ಯ ನೂತನಕೆ ಬೇಕು ಸದಾ ನಿನ್ನ ಕರುಣ..! ನಿನ್ನ ಮರೆತು ನಡೆವ ಪ್ರತಿ ಚಣವು ಪ್ರತಿ ಕಣವು ಜೀವನ್ಮರಣ.. ಬದುಕೇ ಅಶಾಂತಿಯ ರಣಾಂಗಣ…!!ನಿನ್ನ ಮರೆತು ನಡೆಯದಂತೆಬೇಡುವಗೆ ಮಾಣಿಸು ಸದಾ ನಿನ್ನ ಸ್ಮರಣ.. ಸುಂದರ ಸುಮಧುರ ಶಾಂತಿ ನೆಮ್ಮದಿ ಪ್ರೀತಿ ವಾತ್ಸಲ್ಯಗಳ ಬಾಂಧವ್ಯದ ಬದುಕುಗಳ ಸಂಬಾಳಿಸಿ ಉಳಿಸಿ ಬೆಳೆಸಲು ನೀನೇ ಸಾದನ..ದಿನದಿನವೂ ಜೊತೆ ಸಾಗಿ ಹರಸಿ ಹರಿಸು  ನಿನ್ನ ಕರುಣ.. ಕಣಕಣದಲಿ ನೆಲೆಯಾಗಲಿ ಶಾಂತಿಯ ಸದನ..! ಜಿ.ಎಸ್.ಕಲಾವತಿ ಮಧುಸೂದನ

ಜಿ.ಎಸ್.ಕಲಾವತಿಮಧುಸೂದನ ಅವರ ಕವಿತೆ “ಸಮಾಧಾನ ಸಮಾಧಾನ ಸಮಾಧಾನ” Read Post »

You cannot copy content of this page

Scroll to Top