ಡಾ. ಹೆಚ್. ನಟರಾಜ್ ಆರ್ಯ ಅವರಕವಿತೆ “ಹೊನ್ನೆರಳು”
ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ಹೊನ್ನೆರಳು” ಹುಣ್ಣಿಮೆಯ ಹೊನ್ನೆರಳುಸಾಗರ ಮೈಮೇಲೆ ಹರಿದು,ಅಲೆಗಳ ಮೌನ ನಿದ್ರೆಯಲಿಚಂದ್ರ ಕನಸಾಗಿ ಕರಗಿತು. ನೀರಿನ ತುಟಿಯ ನಡುಕದಲಿಬೆಳ್ಳಿಯ ತೇವ ಮೊಳಗಿತು,ದೂರದ ವಿರಹ ಉಪ್ಪಾಗಿಎದೆಯ ಆಳದಲಿ ನೆಲಸಿತು. ನೀಲಿಯ ಶಂಖ ಊದಿದ ಗಾಳಿರಾತ್ರಿಯ ಕೂದಲು ಸವರಿತು,ಅಲೆಗಳ ರಕ್ತನಾಳದಲಿಮೌನ ಬೆಳಕು ಹರಿಯಿತು. ತೀರ ಮುಟ್ಟದ ಅಲೆಗಳಲಿಹಂಬಲ ಹಕ್ಕಿ ತೇಲಿತು,ನೀರೊಳ ಮುರಿದ ಚಂದ್ರಬಿಂಬಪ್ರೀತಿಯ ಗಾಯವಾಯಿತು. ಬೆಳದಿಂಗಳ ಮೃದುವೆರಳುಅಲೆಗಳ ಬೆನ್ನಲಿ ಜಾರಿತು,ಸಾಗರದ ಕತ್ತಲ ಗರ್ಭದಲಿಮೌನ ಕಮಲ ಅರಳಿತು. ನೀ ಇಲ್ಲದ ಕಪ್ಪು ರಾತ್ರಿಸಾಗರ ಶಿಲೆಯಾಗಿ ನಿಂತು,ನೀ ಬಂದ ಬೆಳ್ಳಿ ಹುಣ್ಣಿಮೆಉಪ್ಪಿನ ದೀಪವಾಗಿ ಹೊತ್ತು. ಮರಳ ತೀರದ ಮಡಿಲೊಳಗೆಹೆಜ್ಜೆಯ ದಾಹ ಮಲಗಿತ್ತು,ಅಲೆಗಳ ಮರುಳು ಕರೆಯೊಳಗೆ“ಬರುವೆಯಾ…” ತೇವ ಉಳಿಯಿತು. ಆಕಾಶ ತಗ್ಗಿ ಮುತ್ತಿಟ್ಟಸಾಗರದ ಉಪ್ಪು ನೆತ್ತಿಗೆ,ಪ್ರಕೃತಿ ಬೆಳ್ಳಿ ಮಸಿಯಲಿಪ್ರೀತಿ ಬರೆದು ಹೋಯ್ತು ರಾತ್ರಿಗೆ. ಹುಣ್ಣಿಮೆ ದೂರ ಸರಿದರೂಚಂದ್ರಗಂಧ ಉಸಿರಾಯಿತು,ಸಾಗರದ ನೀಲಿ ಎದೆಯೊಳಗೆಮೌನ ಬೆಳಕು ತೇಲಿತು. ಪ್ರೀತಿಒಮ್ಮೆ ತಾಕಿದ ಚಂದ್ರತಂಪು,ಜೀವಪೂರ್ತಿ ಅಲೆಯುವ ಉಪ್ಪು. ಡಾ. ಹೆಚ್. ನಟರಾಜ್ ಆರ್ಯ
ಡಾ. ಹೆಚ್. ನಟರಾಜ್ ಆರ್ಯ ಅವರಕವಿತೆ “ಹೊನ್ನೆರಳು” Read Post »

