ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

“ಸಾಕು ಸರಿಯಾದ ಸಮಯಕೆ ಕಾಯುವಿಕೆ” ಜಯಶ್ರೀ.ಜೆ. ಅಬ್ಬಿಗೇರಿ

ವಿಶೇಷ ಸಂಗಾತಿ ಜಯಶ್ರೀ.ಜೆ. ಅಬ್ಬಿಗೇರಿ “ಸಾಕು ಸರಿಯಾದ ಸಮಯಕೆ ಕಾಯುವಿಕೆ”                                       ಇನ್ಫೋಸಿಸ್ ಸಂಸ್ಥೆ ಹೆಸರು ಯಾರು ಕೇಳಿಲ್ಲ ಹೇಳಿ. ಅದು ಕೋಟ್ಯಂತರ ಜನರಿಗೆ ಉದ್ಯೋಗ ನೀಡಿದ ಸಂಸ್ಥೆ ಹೀಗಾಗಿ ಎಲ್ಲರಿಗೂ ಗೊತ್ತು. ಈ ಸಂಸ್ಥೆಯನ್ನು ಪ್ರಾರಂಭಿಸುವಾಗ ನಾರಾಯಣ ಮೂರ್ತಿ ಅವರ ಬಳಿ ದೊಡ್ಡ ಬಂಡವಾಳವಿರಲಿಲ್ಲ. ಪರಸ್ಥಿತಿ ಎಲ್ಲ ಸುಧಾರಿಸಿದ ಮೇಲೆ ಕಂಪನಿ ಆರಂಭಿಸುತ್ತೇನೆoದು ಕಾಯಲಿಲ್ಲ. ಪತ್ನಿ ಸುಧಾ ಮೂರ್ತಿಯವರಿಂದ ಪಡೆದ ಕೇವಲ ೧೦,೦೦೦ ರೂ ಗಳೊಂದಿಗೆ ಚಿಕ್ಕ ಕೋಣೆಯಲ್ಲಿ ಕಂಪನಿಯನ್ನು ಆರಂಭಿಸಿದರು. ಅವರು ಅಂದು ಇಟ್ಟ ದೃಢ ನಿರ್ಧಾರದ  ಹೆಜ್ಜೆ  ಪರಿಸ್ಥಿತಿ ಪೂರಕವಾಗುವವರೆಗೆ ಕಾಯುವ ಅಗತ್ಯವಿಲ್ಲ ಎಂಬುದನ್ನು ಸಾರಿದೆ. ಶುಭ ಗಳಿಗೆ ಯಶಸ್ಸಿನ ದಾರಿಯಲ್ಲಿ ಅತ್ಯಂತ ದೊಡ್ಡ ತಡೆಗೋಡೆ ಎಂದರೆ ಶುಭ ಮುಹೂರ್ತಕ್ಕಾಗಿ, ಸರಿಯಾದ ಸಮಯಕ್ಕಾಗಿ ಕಾಯುವುದು. ನಮ್ಮಲ್ಲಿ ಬಹುತೇಕರು ಹೊಸ ಉದ್ಯೋಗ ಆರಂಭಿಸಲು ಇಲ್ಲವೇ ಹೊಸ ವ್ಯಾಪಾರ ಶುರು ಮಾಡಲು ಇಲ್ಲವೇ ಯಾವುದೇ ಒಳ್ಳೆಯ ಕೆಲಸ ಮಾಡಬೇಕಾದರೂ ಶುಭ ಮುಹೂರ್ತ ನೋಡಿಯೇ ಮುಂದುವರೆಯುತ್ತಾರೆ. ಈಗ ನನ್ನ ಪರಿಸ್ಥಿತಿ ಸರಿಯಾಗಿಲ್ಲ, ನನ್ನ ಬಳಿ ಹಣ ಇಲ್ಲ. ಗ್ರಹಗತಿಗಳು ಚೆನ್ನಾಗಿಲ್ಲ, ಶುಕ್ರ ದೆಸೆ ನಡೆಯುತ್ತಿಲ್ಲ. ಹಣ ಕೈಗೆ ಸೇರಿದ ಮೇಲೆ ಕೆಲಸ ಆರಂಭಿಸುವೆ ಗ್ರಹಗತಿಗಳು ಚೆನ್ನಾಗಿ ಆದ ಮೇಲೆ ಎಂಬ ಮಾತುಗಳನ್ನು ಹೇಳುತ್ತ ಮಾಡುವ ಉತ್ತಮ ಕೆಲಸವನ್ನು ಮುಂದೂಡುತ್ತಲೇ ಹೋಗುತ್ತಾರೆ. ಸಿಕ್ಕ ಅವಕಾಶಗಳನ್ನು ಕೈ ಚೆಲ್ಲಿ ನಂತರ ಅವಕಾಶಗಳೇ ಇಲ್ಲವೆಂದು ಅಳುವುದು ಹುಚ್ಚುತನವಲ್ಲದೇ ಮತ್ತೇನು? ತಲೆಯಲ್ಲಿ ಭ್ರಮೆ ಇಟ್ಟುಕೊಂಡು ಶುಭ ಗಳಿಗೆ ಬರುವವರೆಗೂ ಕೆಲಸವನ್ನು ಶುರು ಮಾಡಲು ಕಾಯುತ್ತಾರೆ. ಕೆಲವರಿಗೆ ಆ ಗಳಿಗೆ ಎಂದಿಗೂ ಬರುವುದೇ ಇಲ್ಲ ಎನ್ನುವುದು ವಿಚಿತ್ರವಾದರೂ ಸತ್ಯ. ಹಾಗಾದರೆ ಉತ್ತಮ ಕೆಲಸಕ್ಕೆ  ಕೈಯಲ್ಲಿರುವ ಈ ಗಳಿಗೆಯನ್ನು ಉತ್ತಮ ಗಳಿಗೆಯನ್ನಾಗಿ ಮಾಡಿಕೊಳ್ಳುವುದು ಹೇಗೆ ನೋಡೋಣ ಬನ್ನಿ. ಕಾರ್ಯಪ್ರವೃತ್ತರಾಗಿ ಜೀವನದಲ್ಲಿ ಒಳ್ಳೆಯ ಕೆಲಸವನ್ನು ಮಾಡಲು ಕಾಯುವಷ್ಟು ಸಮಯವಿಲ್ಲ. ಹಾಗೆ ನೋಡಿದರೆ ಸರಿಯಾದ ಸಮಯಕ್ಕಾಗಿ ಕಾಯುವುದು ಒಳ್ಳೆಯ ಗಳಿಗೆಗಾಗಿ ಕಾಯುತ್ತಲೇ ಇರುವುದು ಒಂದು ತರಹ ಕೆಲಸವನ್ನು ಮುಂದೂಡುವ ಕಾಯಿಲೆಯೇ ಸರಿ. ಏಕೆಂದರೆ ಜೀವನ ತುಂಬಾ ಚಿಕ್ಕದು. ಹಾಗಾಗಿ ಉತ್ತಮ ಕೆಲಸಗಳನ್ನು ಮಾಡಲು ಸೂಕ್ತ ಸಮಯ ಅಥವಾ ಪರಿಪೂರ್ಣ ಸಂದರ್ಭಕ್ಕಾಗಿ ಕಾಯಬೇಕಿಲ್ಲ. ಕಾಯುವಿಕೆ ಪ್ರಗತಿಯ ಶತ್ರು ಎಂಬುದನ್ನು ಮರೆಯಬಾರದು. ಜಗತ್ತಿನ ಪ್ರಸಿದ್ಧ ಚಿಂತಕರಾದ ಮಾರ್ಕ್ ಟ್ವೇನ್ ಹೇಳಿದ ಮಾತು ಇಲ್ಲಿ ಸೂಕ್ತವೆನಿಸುತ್ತದೆ. ‘ಮುಂದೆ ಸಾಗಲು ಇರುವ ಏಕೈಕ ರಹಸ್ಯವೆಂದರೆ ಕಾರ್ಯಪ್ರವೃತ್ತರಾಗುವುದು.’ ನೇರವಾಗಿ ಹೇಳಬೇಕೆಂದರೆ ಸರಿಯಾದ ಕೆಲಸಕ್ಕೆ ವಿಶೇಷ ಸಮಯದ ಅಗತ್ಯವಿರುವುದಿಲ್ಲ.. ಈ ಕಾಯುವಿಕೆ ಎಂಬುದು ಆಲಸ್ಯತನಕ್ಕೆ ಮಣೆ ಹಾಕುತ್ತದೆ. ಮತ್ತು ಇದರಲ್ಲಿ ಭಯವೂ ಅಡಗಿರುತ್ತದೆ. ಭಯ ಮತ್ತು ಆಲಸ್ಯವನ್ನು ಮೀರಿ ಕಾರ್ಯಪ್ರವೃತ್ತರಾದರೆ ಯಶಸ್ಸಿನತ್ತ ಹೆಜ್ಜೆ ಹಾಕಲು ಸಾಧ್ಯ. ಲಭ್ಯ ಸೌಲಭ್ಯ ಬಳಸಿ ‘ಹಾಸಿಗೆ ಇದ್ದಷ್ಟು ಕಾಲು ಚಾಚು.’ ಎಂಬ ಗಾದೆ ಮಾತು ನಮಗೆ ಲಭ್ಯವಿರುವ ಸಂಪನ್ಮೂಲಗಳಲ್ಲೇ ಬದುಕುವುದನ್ನು ಕಲಿಸುತ್ತದೆ. ಸರಿಯಾದ ಕೆಲಸಕ್ಕೆ ಸಂಪನ್ಮೂಲಗಳಿಗಿoತ ನಾ ಈ ಕೆಲಸ ಮಾಡಿಯೇ ತೀರಬೇಕೆಂಬ ಛಲ ಮುಖ್ಯ. ಛಲವಿದ್ದರೆ ಕೆಲಸ ತಾನೇ ಕೂಡಿ ಬರುತ್ತದೆ. ಅದ್ಭುತ ಸಾಧನೆ ಮಾಡಿದವರೆಲ್ಲ ಎಲ್ಲ ಸೌಲಭ್ಯಗಳು ಲಭ್ಯವಾದ ಮೇಲೆ ತಮ್ಮ ಸಾಧನೆ ಆರಂಭಿಸಬೇಕೆoದು ಕೈ ಕಟ್ಟಿ ಕುಳಿತುಕೊಳ್ಳಲಿಲ್ಲ. ಸೂಕ್ತ ಸಮಯಕ್ಕಾಗಿ ಕಾಯಲಿಲ್ಲ. ಬದಲಾಗಿ ಇದ್ದ ಪರಿಸ್ಥಿತಿಯಲ್ಲೇ ಕೆಲಸ ಆರಂಭಿಸಿದರು. ಕಷ್ಟಗಳ ಹಾದಿಯಲ್ಲೂ ಹೆದರದೇ ಮುನ್ನುಗ್ಗಿದರು. ಈ ಹೊತ್ತನ್ನು ಉತ್ತಮವಾಗಿ ಬಳಸಿಕೊಳ್ಳುವವನಿಗೆ ಯಾವಾಗಲೂ ಶುಭ ಸಮಯವೆ ಇರುತ್ತದೆಂಬುದನ್ನು ನೆನಪಿನಲ್ಲಿಡಿ. ಯಾರಿಗಾಗಿಯೂ ಯಾವುದಕ್ಕಾಗಿಯೂ ಕಾಯದೇ ನೀವಂದುಕೊoಡ ಉತ್ತಮ ಕೆಲಸ ಆರಂಭಿಸಿ. ನಿಮ್ಮ ಬಳಿ ಇರಲಾರದ್ದನ್ನು ನೆನೆಯುತ್ತ ಬಳಿಯಿರುವುದನ್ನು ನಿರ್ಲಕ್ಷಿಸಬೇಡಿ. ನಿಮ್ಮ ಬಳಿ ಇರುವ ಸೌಲಭ್ಯಗಳನ್ನು ಸಂಪನ್ಮೂಲವನ್ನು ಗೌರವಿಸಿ. ಈಗ ನಿಮ್ಮ ಬಳಿಯಿರುವ ಬುದ್ಧಿವಂತಿಕೆಯನ್ನು ಸವಲತ್ತುಗಳನ್ನು ಹೇಗೆ ಬಳಸಿಕೊಳ್ಳುತ್ತೀರಿ ಎನ್ನುವುದರ ಮೇಲೆ ನಿಮ್ಮ ಕೆಲಸದ ಫಲಾಫಲಗಳು ಅವಲಂಬಿತವಾಗಿರುತ್ತವೆ ಹೊರತು ಎಂದೋ ಬರುವ ಯಾವುದೇ ಸಮಯವಲ್ಲ. ಹಾಗಾಗಿ ನಿಮ್ಮ ಬಳಿ ಇರುವುದನ್ನು ಗೌರವಿಸುವುದನ್ನು ಕಲಿಯಬೇಕು.  ಕೈಯಲ್ಲೇ ಇದೆ. ಬುದ್ಧ ಹೇಳುತ್ತಾನೆ ‘ನಿಮ್ಮಲ್ಲಿರುವ ದೊಡ್ಡ ಭ್ರಮೆ ಎಂದರೆ ನಿಮಗೆ ಇನ್ನೂ ಸಮಯವಿದೆ ಎಂದುಕೊಳ್ಳುವುದು.’ ನಾಳೆ ದಿನ ಏನೋ ಹೇಗೋ ಯಾರಿಗೂ ಗೊತ್ತಿಲ್ಲ. ಆದರೆ ಇಂದು ಮಾತ್ರ ನಮ್ಮ ಕೈಯಲ್ಲೇ ಇದೆ. ಇರುವ ಸಮಯವನ್ನು ಮುಂದೂಡುತ್ತ ಹಾಳು ಮಾಡಿ ಮುಂದೆ ಬರುವ ಸಮಯಕ್ಕಾಗಿ ಕಾಯುತ್ತ ಕೂರುವುದು ಶುದ್ಧ ಮೂರ್ಖತನ. ನಾವು ದೃಢ ನಿರ್ಧಾರದಿಂದ ಇಡುವ ಮೊದಲ ಹೆಜ್ಜೆ. ಮನಸ್ಸಿನಲ್ಲಿರುವ ದೃಢ ಸಂಕಲ್ಪ ಮತ್ತು ಮಾಡಿಯೇ ತೀರಬೇಕೆಂಬ ಛಲಗಳೇ ಒಳ್ಳೆಯ ಕೆಲಸಕ್ಕೆ ಆ ಸಮಯವನ್ನು ಸರಿಯಾದ ಸಮಯವಾಗಿ ಬದಲಾಯಿಸುತ್ತವೆ. ‘ಸಮಯ ಮತ್ತು ಸಮುದ್ರದ ಅಲೆಗಳು ಯಾರಿಗಾಗಿಯೂ ಕಾಯುವುದಿಲ್ಲ.’ ಎಂಬ ಮಾತಿದೆ. ಕಾಯುತ್ತ ಕುಳಿತರೆ ಕಾಲ ದಾಟಿ ಹೋಗಿಬಿಡುತ್ತದೆ. ಒಮ್ಮೆ ಕಳೆದ ಸಮಯ ಮತ್ತೆಂದಿಗೂ ಮರಳಿ ಬಾರದು. ಉತ್ತಮ ಸಮಯಕ್ಕಾಗಿ ಕಾಯುವ ಬದಲು ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳುವ ಸೂಕ್ತ ಸಮಯವನ್ನು ಸೃಷ್ಟಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಹೇಳಿದಂತೆ, ‘ನಿಮ್ಮ ಭವಿಷ್ಯವು ನೀವು ಇಂದು ಏನು ಮಾಡುತ್ತೀರಿ ಎಂಬುದರ ಮೇಲೆ ಆಧಾರಿತವಾಗಿದೆ.’ ಬೇಡ ನೆಪ ಇಂದು ಬೇಡ ನಾಳೆಯಿಂದ ಶುರು ಮಾಡುತ್ತೇನೆ. ಸೋಮವಾರದಿಂದ ಆರಂಭಿಸುತ್ತೇನೆ. ಇನ್ನೇನು ಈ ತಿಂಗಳು ಮುಗಿಯುತ್ತಲೇ ಬಂತು ಮುಂದಿನ ತಿಂಗಳು ಖಂಡಿತ ಆರಂಭಿಸುತ್ತೇನೆ. ಇಂಥ ನೆಪಗಳು ಜೀವವನ್ನು ತಿನ್ನುತ್ತವೆ. ನೆಪದ ಬಲೆಗೆ ಒಮ್ಮೆ ಬಿದ್ದರೆ ಸಾಕು ಅಲ್ಲಿಂದ ಮರಳಿ ಎದ್ದು ಬರುವುದು ಅಷ್ಟು ಸುಲಭದ ಮಾತಲ್ಲ. ದಿನದಿಂದ ದಿನಕ್ಕೆ ನೆಪಗಳ ಸುರುಳಿ ಹೆಚ್ಚುತ್ತಲೇ ಹೋಗುತ್ತದೆ. ನೆಪಗಳ ಗೂಡಿನಲ್ಲಿ ಉಳಿಯುವ ಚಟ ಒಮ್ಮೆ ಅಂಟಿಕೊoಡರೆ ಅದು ಅಷ್ಟು ಸರಳ ಬಿಟ್ಟು ಹೋಗುವುದಿಲ್ಲ. ಹಾಗಾಗಿ ಯಾವುದೇ ಹೊಸ ಕೆಲಸ  ಆರಂಭಿಸಲು ಇಂದಿಗಿಂತಶ್ರೇಷ್ಢವಾದ ದಿನ ಮತ್ತೊಂದಿಲ್ಲ. ಯಾವುದೇ ಹೊಸತನ್ನು ಆರಂಭಿಸಿದಾಗ ಆರಂಭದಲ್ಲಿ ಅಡೆತಡೆಗಳು ಬರುವುದು ಸಾಮಾನ್ಯ. ಅಡೆತಡೆಗಳಿಗೆ ನೆಪಗಳನ್ನು ಹೇಳುತ್ತ ಕುಳಿತುಕೊಳ್ಳಬಾರದು. ಉದ್ದೇಶ ಚೆನ್ನಾಗಿದ್ದರೆ ಸಾಕು ಸಮಯ ತನ್ನಷ್ಟಕ್ಕೆ ತಾನೇ ನಮ್ಮ ಜೊತೆ ನಡೆಯುತ್ತದೆ. ಉನ್ನತ ಧ್ಯೇಯದೊಂದಿಗೆ ಉತ್ತಮ ಉದ್ದೇಶದೊಂದಿಗೆ ಆರಂಭಿಸಿದ ಕೆಲಸಕ್ಕೆ ಪರಿಸ್ಥಿತಿಗಳು ತಾವಾಗಿಯೇ ಪೂರಕವಾಗಿ ಬದಲಾಗತೊಡಗುತ್ತವೆ. ಎದೆಗಾರಿಕೆ ‘ಆಳಾಗಿ ದುಡಿದವನೇ ಅರಸನಾಗುತ್ತಾನೆ.’ ಎನ್ನುವಂತೆ ಅಂದುಕೊoಡ ಕೆಲಸವನ್ನು ತಕ್ಷಣ ಆರಂಭಿಸಿದವನಿಗೆ ಶ್ರೇಯಸ್ಸು ಕಟ್ಟಿಟ್ಟ ಬುತ್ತಿ.. ತಕ್ಷಣ ಆರಂಭಿಸುವವನೇ ಕೊನೆಗೆ ವಿಜಯಿಯಾಗುತ್ತಾನೆ. ‘ಇಂದು ಮಾಡುವ ಕೆಲಸ ಈಗಲೇ ಮಾಡು ಎನ್ನುವ ದಾಸರ ವಾಣಿ ಇಲ್ಲಿ ಅತ್ಯಂತ ಪ್ರಸ್ತುತ. ಕಾಲಾಯ ತಸ್ಮೈ ನಮಃ ಎಂಬ ನುಡಿ ಕಾಲದ ಮಹತ್ವವನ್ನು ಹೇಳುತ್ತದೆ. ಕಾಲ ಎಲ್ಲಕ್ಕಿಂತಲೂ ಶಕ್ತಿಶಾಲಿ.  ಕಾಲ ಮಿಂಚಿದರೆ ಕಣ್ಣೀರು ಗ್ಯಾರಂಟಿ. ಎನ್ನುವಂತೆ ಶುಭ ಮುಹೂರ್ತ ಒಳ್ಳೆಯ ಸಮಯವೆಂದು ಕಾಯುತ್ತ ಕುಳಿತರೆ ಪಶ್ಚಾತ್ತಾಪದ ಹೊರತು ಮತ್ತೇನೂ ಸಿಗುವುದಿಲ್ಲ. ಪರಿಸ್ಥಿತಿ ಹೇಗೆ ಇರಲಿ ಏನೇ ಬರಲಿ ಎದೆಗಾರಿಕೆಯಿಂದ ಎದುರಿಸುತ್ತ ಮುಂದೆ ಹೆಜ್ಜೆ ಹಾಕಿದರೆ ಸರಿಯಾದ ಗುರಿಗೆ ಸರಿಯಾದ ಸಮಯ ತಾನೇ ಜೊತೆಯಾಗುತ್ತದೆ. ಗೆಲುವಿನ ಅರಮನೆಗೆ ಕರೆದೊಯ್ಯುತ್ತದೆ. ಜಯಶ್ರೀ.ಜೆ. ಅಬ್ಬಿಗೇರಿ

“ಸಾಕು ಸರಿಯಾದ ಸಮಯಕೆ ಕಾಯುವಿಕೆ” ಜಯಶ್ರೀ.ಜೆ. ಅಬ್ಬಿಗೇರಿ Read Post »

ಇತರೆ

“ಅಕ್ಷರ ಕೃಷಿಕ ಡಾ. ಬಿ.ಡಿ.ಕುಮಾರ್ ಅವರ ಕೃಷಿ ಬದುಕಿನ ಪಾಠ” ಗೊರೂರು ಅನಂತರಾಜು

ಕೃಷಿ ಸಂಗಾತಿ ಗೊರೂರು ಅನಂತರಾಜು “ಅಕ್ಷರ ಕೃಷಿಕ ಡಾ. ಬಿ.ಡಿ.ಕುಮಾರ್ ಅವರ ಕೃಷಿ ಬದುಕಿನ ಪಾಠ” ಪಠ್ಯ ಬೋಧನೆ, ಜನಪದ ಸಂಶೋಧನೆ, ಕೃಷಿಕಾಯಕ  ಈ ಮೂರೂ ಕ್ಷೇತ್ರಗಳ ಪ್ರಗತಿಪರ ಕೃಷಿಕ ಡಾ. ಬಿ.ಡಿ.ಕುಮಾರ್  ಅರಸೀಕೆರೆಯ ಜಗದ್ಗುರು ಶ್ರೀ ಕೋಡಿಮಠ ಪದವಿಪೂರ್ವ ಕಾಲೇಜಿನಲ್ಲಿ ೧೯೯೧ರಿಂದ ಕನ್ನಡ ಉಪನ್ಯಾಸಕರು. ಇವರ ಅಭಿನಂದನಾ ಗ್ರಂಥ ಅಕ್ಷರ ಕೃಷಿಕ ಇತ್ತೀಚಿಗೆ ಬಿಡುಗಡೆಯಾಗಿದೆ. ಲೇಖನ ಕೊಟ್ಟಿದ್ದ ನಾನು  ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಮೊನ್ನೆ ಕುಮಾರ್ ಹಾಸನಕ್ಕೆ ಬಂದು ಪೋನ್ ಮಾಡಿದರು. ಗೌರವ ಪ್ರತಿ ನೀಡಿದರು. ಬರೆಯಿರಿ ಎಂದು ಪ್ರೀತಿಯಿಂದ ಹೇಳಿದರು.  ಓದುತ್ತಾ ಹೋದ ನನಗೆ ಇಷ್ಟವಾಗಿದ್ದು ಇವರ ಬಾಲ್ಯದ ದಿನಗಳು.  ‘ಬಣ್ಣದ ಗುಬ್ಯಾರು ಮಳೆರಾಜ-ಅವರು ಮಣ್ಣಾಗಿ ಹೋದಾರು ಮಳೆರಾಜ.. ಮನದ ನೆನಪಿನ್ನು ಮಾಸಿಲ್ಲ. ನನ್ನ ಭೋಧನಾ ವೃತ್ತಿ ಬದುಕಿನ ಮೊದಲ ಭೋದನೆ ಈ ಜನಪದ ಗೀತೆಯಾಗಿತ್ತು. ಮಳೆಯ ಬೆಳೆಯ ಇಳೆಯ ಪೂರಕ ಸಂಬAಧ,ಉಳಿವಿದ್ದರೆ ಹೋರಾಟ ಕೂಳಿದ್ದರೆ ಕಾಳಗ ಮೇವಿದ್ದರೆ ಮೇಳ ಅನ್ನವಿದ್ದರೆ ಪ್ರಾಣ, ಪ್ರಾಣವಿದ್ದರೆ ಪರಾಕ್ರಮ ಈ ವೈವಿಧ್ಯ ವಿಷಯ ಲೇಪನದೊಂದಿಗೆ ಅತೀವೃಷ್ಟಿ  ಅನಾವೃಷ್ಟಿಯ ರಣಭೀಕರ ಕಠೋರತೆ ಹೇಳುತ್ತಾ ಒಕ್ಕಲ ಬಿಕ್ಕಲು ಆರಂಭವಾಗಿ ಬದುಕು ಮೂರಾಬಟ್ಟೆಯಾಗುತ್ತದೆ. ನಿಸರ್ಗದೆದುರು ಮಾನವನÀ ಆಟ  ನಡೆಯುವುದಿಲ್ಲ ಎಂಬ ಕರಾಳ ಸತ್ಯ ಈ ಗೀತೆಯಲ್ಲಿದೆ..ಲೇಖಕರು ಕನ್ನಡ ಉಪನ್ಯಾಸಕರಾಗಿ ಪ್ರಥಮ ಪಿಯುಸಿಗೆ ಈ ಪಾಠ ಮಾಡುವಾಗ  ಅವರಿಗೆ ಅರಿವಿಲ್ಲ. ತನ್ನ ಬದುಕು  ಇದೇ ಜನಪದ ಹಾಡಿನಂತೆ ಆಗುತ್ತದೆ ಎಂದು.  ನಿಜ, ಯಾರು ತಾನೇ ನಮ್ಮ ಭವಿಷ್ಯದ ಬದುಕು ಹೀಗೆ ಇರುವುದೆಂದು ಊಹಿಸಲು ಸಾಧ್ಯ. ಆದರೆ ನಾವು  ಸನ್ಮಾರ್ಗದಲ್ಲಿ ಸುಂದರ ಬದುಕನ್ನು ಕಟ್ಟಿಕೊಳ್ಳಲು ಕನಸು ಕಾಣುತ್ತೇವೆಯೋ ಅದು ಕೆಲವರಿಗೆ ಸಿಗುತ್ತದೆ. ಇದಕ್ಕೆ  ಕುಮಾರ್ ಉದಾಹರಣೆ ಅಷ್ಟೇ. ಪಠ್ಯ ಬೋಧನೆಯೊಂದಿಗೆ ತಮ್ಮ ಜೀವನದ ಅನುಭವ ಪಾಠವನ್ನು ಅರಗಿಸಿಕೊಂಡು ಒರ್ವ ಪ್ರಗತಿಪರ ರೈತನಾಗಿ ಹೊರಹೊಮ್ಮಿರುವುದು ಮಾದರಿ ಎನಿಸುತ್ತದೆ.  ಜೀವಿತದ ಹೋರಾಟ ಬದುಕಿನಲ್ಲಿ   ಹಲವು ಕಷ್ಟನಷ್ಟ ಎದುರಿಸಿ ಗೆದ್ದವರು ಈ ಬಿ.ಡಿ.ಕುಮಾರ್. ಕೃತಿಯ ಸಂಪಾದಕರು ಡಾ. ಹರೀಶ್ ಕುಮಾರ್ ಬರೆದಂತೆ ಇವರು  ವಿದ್ಯಾರ್ಥಿಗಳಿಗೆ ಕೇವಲ ಪಾಠ ಹೇಳಿಕೊಟ್ಟ ಮೇಷ್ಟುç ಮಾತ್ರವಲ್ಲ ಬದುಕಿನ ದಾರಿ ಕಂಡುಕೊAಡ  ಮಾರ್ಗದರ್ಶಿ. ಇವರ ವ್ಯಕ್ತಿತ್ವ ಬಹುಮುಖಿ ಕ್ಯಾನ್ವಾಸ್. ಜಮೀನಲ್ಲಿ ನಿಂತರೆ ಮಣ್ಣಿನ ವಾಸನೆಯ ಅಪ್ಪಟ ಕೃಷಿಕ. ತಮಟೆ ತಂಬೂರಿ ಹಿಡಿದರೆ ಜನಪದ ಕಲಾವಿದ. ಪುಸ್ತಕ ಹಿಡಿದರೆ ಓದಿನ ಸಂತ.  ಸಾವಿರ ಪುಟಗಳ ಕೃತಿಯಲ್ಲಿ ನನಗೆ ಇಷ್ಟವಾಗಿದ್ದು ಇವರ ನೇರ ನುಡಿಯ ಬಾಲ್ಯದ ಘಟನೆಗಳು.ದಿನಾಂಕ ೨೧-೬-೧೯೬೬ರ ಮಧ್ಯಾಹ್ನ ೪ ಗಂಟೆಯಲ್ಲಿ ದ್ಯಾವೇಗೌಡ ದೇವಮ್ಮ ಇವರ ದ್ವಿತೀಯ ಪುತ್ರನಾಗಿ ಈ ಭೂಮಿಗೆ ಬಂದನAತೆ. ನನ್ನ ಅಜ್ಜಿ ತಾಯಮ್ಮನ ತಮ್ಮ ಕೃಷ್ಣಪ್ಪ ಕಲ್ಯಾಡಿಕೊಪ್ಪಲಿನ ಬ್ರಾಹ್ಮಣ ಗೆಳೆಯ ಶಿವಪ್ರಕಾಶ್ ಇದೇ ದಿನ ಬೆಳಿಗ್ಗೆ ಹುಟ್ಟಿದರಂತೆ. ಇವನನ್ನು ನೋಡಿಕೊಂಡ ಕೃಷ್ಣಪ್ಪ ಬಸವಾಘಟ್ಟಕ್ಕೆ ಬಂದು ನನ್ನನ್ನು ನೋಡಿದರÀಂತೆ. ಈ ವಿಷಯದಿಂದ ನಾನು ಜನಿಸಿದ ನಿಜ ದಿನಾಂಕ ಗೊತ್ತಾಯಿತು..ಕುಮಾರ್ ಒಬ್ಬರೇ ಅಲ್ಲಾ ಎಲ್ಲಾ ಅನಕ್ಷರಸ್ಥ ನಮ್ಮ ತಂದೆತಾಯಿಗಳದು ಇದೇ ಸ್ಥಿತಿ.   ಐದು ವರ್ಷಗಳ ನಂತರ ಶಾಲೆಗೆ ಸೇರಿಸುವಾಗ ಹುಟ್ಟಿದ ದಿನಾಂಕ ಸರಿಯಾಗಿ ನೆನಪಿಲ್ಲದೇ ಒಂದು ಅಂದಾಜಿನ ಮೇಲೆ ಶಾಲೆಗೆ ಸೇರಿಸುತ್ತಿದ್ದ ಆ ದಿನಗಳು.   ಶಾಲೆಗೆ ಬೇಗನೇ ಸೇರಿಸಲು ಕೆಲವು ಪೋಷಕರು ಒಂದು ವರ್ಷ ಫ್ಲಸ್ ಮಾಡಿ ಬರೆಸಿ ಸರ್ಕಾರಿ ನೌಕರಿಯಲ್ಲಿ ನಿವೃತ್ತಿ ಹೊಂದುವಾಗ ಅದು ಮೈನಸ್ ಆಗಿದ್ದನ್ನು ನೊಂದುಕೊAಡು  ಹೇಳಿದ್ದನ್ನು ಕೇಳಿದ್ದೇನೆ. ಹಳ್ಳಿಯ ಹಂಚಿನ ಮನೆ ತೊಲೆಗಳಲ್ಲಿ ಮಕ್ಕಳು ಹುಟ್ಟಿದ ದಿನಾಂಕ ಬರೆದಿದ್ದನ್ನು  ನೋಡಿದ್ದೆನೆ.ಈ ಸಂದರ್ಭದಲ್ಲಿ ಒಂದು ನೆನಪು ನನ್ನನ್ನು ಮತ್ತೆ ಮತ್ತೆ ಕಾಡಿದೆ. ಅದೇನೆಂದರೆ ಅಷ್ಟೊತ್ತಿಗಾಗಲೇ ಹೊಲದಲ್ಲಿ ಹೊಸಮನೆ ಕಟ್ಟುತ್ತಿದ್ದೆವು. ಹಳೆ ಮನೆಗೂ ಹೊಸ ಮನೆಗೂ ತಿರುಗಾಟ ಸಾಗುತ್ತಿತ್ತು. ಆಗ ತಾನೇ ನೀರುಗುಂದ ಹೊಲಕ್ಕೆ ಅಲೆಮನೆ ಕಟ್ಟಿದ್ದರಂತೆ. ಅಲ್ಲಿ ಗಡಿಗೆಗಳಿಗೆ ಗುಳ ತುಂಬಿಸಿ ಮನೆಯಲ್ಲಿ ತಂದಿಟ್ಟಿದ್ದರು. ನಾನು ಅಂಕೆಯಿಲ್ಲದೆ ಅದನ್ನು ಕುಡಿದು ಹೊಟ್ಟೆಯಲ್ಲಿ ಲಾಡಿ ಉಳವಾಗಿತ್ತು. ಅದೊಂದು ಸುಂದರವಾದ ದಿನ ಆ ಹುಳ ಈಚೆಗೆ ಬರಲು ಆಗದೇ ಒಳಗೆ ಹೋಗಲು ಆಗದ ಅದನ್ನು ನೇತಾಡಿಸಿಕೊಂಡು ಊರಲೆಲ್ಲಾ ತಿರುಗಾಡಿದ್ದೆ. ನನ್ನ ಪಾಲಿಗೆ ಅದನ್ನು ಕಾಳಿಂಗ ಸರ್ಪವೆಂದೇ ಬಾವಿಸಿ ಭಯಭೀತರಾಗಿ ಊರ ತುಂಬಾ ಓಡಾಡಿದ್ದೆ… ಕುಮಾರರ ಈ ನೆನಪು ನಗು ತರಿಸಿದರೂ ಇಂತಹ ದೃಶ್ಯಗಳನ್ನು ಕಂಡಿರುವೆ.      ಕೃತಿಯ ಕವಲು-೧À ಅಂತರAಗ ವಿಭಾಗದಲ್ಲಿ ೩೭ ಲೇಖಕರು ಇವರ ವ್ಯಕ್ತಿ ಚಿತ್ರಣವನ್ನು ತಮ್ಮ ಸ್ನೇಹನೆಲೆಯಲ್ಲಿ ಬರೆದಿದ್ದಾರೆ. ಕುಮಾರ್ ಪದವಿಪೂರ್ವ ಐಚ್ಛಿಕ ಕನ್ನಡ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರು. ಕೆ.ಪಿ.ಎಸ್.ಸಿ ಸ್ಫರ್ಧಾತ್ಮಕ ಪರೀಕ್ಷೆ ಪ್ರಶ್ನೆಪತ್ರಿಕೆ ತಯಾಸಿದ್ದಾರೆ. ರಾಜ್ಯ ಸಬ್ ಇನ್ಸ್ಸ್ಪೆಕ್ಟರ್ ಪರೀಕ್ಷೆÀ ಮೌಲ್ಯಮಾಪಕರು. ಜಿಲ್ಲಾ ಕನ್ನಡ ಉಪನ್ಯಾಸಕರ ಸಂಘದ ಅಧ್ಯಕ್ಷರು. ದೆಹಲಿಯಲ್ಲಿ ೧೯೯೬ರಲ್ಲಿ ರಾಷ್ಟಿçÃಯ ಜಾನಪದ ಹಬ್ಬದಲ್ಲಿ  ತಮಟೆ ಕಲಾವಿದರಾಗಿ ಭಾಗವಹಿಸಿದ್ದಾರೆ.   ಇವರ ತೋಟದ ಮನೆಯಲ್ಲಿ ಹತ್ತು ಸಾವಿರ ಪುಸ್ತಕಗಳ ಸಂಗ್ರಹ ಇದೆ. ಅಮೇರಿಕದ ತತ್ವಜ್ಞಾನಿ ಹೆನ್ರಿ ಡೇವಿಡ್ ಥೋರೋ ತರಹ ಇವರದು ನಿಸರ್ಗಪ್ರೇಮ ಜೀವನ.  ಬಾಗೇಶಪುರದ ಬಳಿ  ೧೨ ಎಕರೆ ಭೂಮಿ ಖರೀದಿಸಿ ಗುಡ್ಡದಲ್ಲೊಂದು ಮನೆಯ ಮಾಡಿ ಪಂಚೆ ಕಟ್ಟಿ ಕೃಷಿ ಕಾಯಕ ಮಾಡಿದವರು. ಅದೀಗ ಜಮೀನಾಗಿ ಉಳಿಯದೇ ಅಲ್ಲಿ ನೂರಾರು ಜಾತಿಯ ಹಣ್ಣಿನ ಮರಗಳು ಬೆಳೆದು, ಪ್ರಾಣಿ ಪಕ್ಷಿಗಳ ನೆಲೆವೀಡಾಗಿ ಕಾಡುಕೃಷಿಗೆ ಮಾದರಿಯಾಗಿದೆ. ಹಸು ಕುರಿ ಕೋಳಿ ಸಾಕಣಿಕೆಯಿಂದ  ಕೃಷಿ ಬದುಕಿಗೆ ಮತ್ತೊಂದು ದಾರಿ ತೋರಿಸಿದ್ದಾರೆ. ಅಕ್ಷರ ಸಂಸ್ಕೃತಿ ಮಣ್ಣಿನ ಸಂಸ್ಕೃತಿ ನಡುವೆ ಸಂತನಾಗಿದ್ದಾರೆ. ಇದೊಂದು ಅಭಿನಂದನಾ ಗ್ರಂಥ ಮತ್ತು  ನಾಡಿನ ಅನೇಕ ಜನಪದ ವಿದ್ವಾಂಸರು ಲೇಖಕರ ವಿಶಿಷ್ಟ ಬರಹಗಳ ಸಂಗ್ರಹ.  ಕವಲು-೨ ಜನಪದ ಪಲುಕು ಜನಪದ ಸಾಹಿತ್ಯ ವಿಶೇಷವಾಗಿದೆ.  ಡಾ.ಕಾಳೇಗೌಡ ನಾಗವಾರರ  ಲೇಖನವು ಗಮನಾರ್ಹ. ಕರ್ನಾಟಕವು ವಿಸ್ತಾರ ಭೂಪ್ರದೇಶವಾಗಿ ನಾನಾ ಬಗೆಯ ವೈವಿಧ್ಯಗಳಿಂದ ಕೂಡಿದೆ. ಒಂದು ಕಡೆ ಅರಬ್ಬಿಸಮುದ್ರ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶ, ಶಿವಮೊಗ್ಗ  ಆವರಿಸಿದ ಮಲೆನಾಡು, ಪೂರ್ವ ಪಶ್ಚಿಮ ಘಟ್ಟಗಳ ನಡುವಣ ಉತ್ತರ ದಕ್ಷಿಣ ಕರ್ನಾಟಕಗಳ ಬಗೆಬಗೆಯ ಪದ್ಧತಿ ಅನುಸರಿಸುವ ಜನರ ಗುಂಪು ಒಳಗೊಂಡಿದೆ. ಈ ನಡುವೆ ಕೊಡವ ತುಳು ಕೊಂಕಣಿ  ಭಾಷೆಗಳ ಜಾನಪದ ಸಂಪತ್ತು  ಅರಳಿದೆ. ಈ ಎಲ್ಲಾ  ಜನಪದ ಸಾಹಿತ್ಯವು ಪೂರ್ಣ ಸಂಗ್ರಹವಾಗಬೇಕೆAದು ಆಶಿಸಿದ್ದಾರೆ. ಪ್ರಕೃತಿಯ ಮಡಿಲಲ್ಲಿ ಆಡಿ ಬೆಳೆದು ಗಾಣದೆತ್ತಿನಂತೆ ನಿರಂತರವಾಗಿ ದುಡಿಯುತ್ತಲೇ ಬಂದು ಉದ್ದಕ್ಕೂ ಅಕ್ಷರ ಜ್ಞಾನದಿಂದ ವಂಚಿತರಾಗಿರುವ ನಮ್ಮ ಜನಪದ ಕಲಾವಿದರು ವಾಸ್ತವವಾಗಿ ಗಂಧರ್ವಲೋಕದ ಗೆಣೆಕಾರರು ಎಂದಿದ್ದಾರೆ.  ಡಾ.ಹಿ.ಶಿ.ರಾಮಚಂದ್ರೇಗೌಡರು ಬಿ.ಡಿ.ಕುಮಾರ್ ಅವರಿಗೆ ಗೈಡ್ ಆಗಿದ್ದವರು. ಇವರ ಮಾರ್ಗದರ್ಶನದಲ್ಲಿ ಕುಮಾರ್ ಡಾಕ್ಟರೇಟ್ ಮಾಡಿದ್ದಾರೆ. ಗೌಡರಿಗೆ ತಮ್ಮ ಶಿಷ್ಯನ ಸಾಧನೆಗೆ ಪ್ರೀತಿ ಇದೆ. ವೈಫಲ್ಯದ ಬಗ್ಗೆ ಬೇಸರವೂ ಇದೆ. ‘ನಾನು ಪ್ರತಿಭೆ ಮತ್ತು ಕ್ರಿಯಾಶೀಲತೆ  ಕಂಡಲ್ಲಿ ಪುಳಕಗೊಳುತ್ತೇನೆ, ಸಂಭ್ರಮಿಸುತ್ತೇನೆ. ಇಂಥ ದ್ವಿಜತ್ವವನ್ನು ಹೊಂದಿದ ವ್ಯಕ್ತಿ ಡಾ. ಬಿ.ಡಿ.ಕುಮಾರ್. ಅವರ ಬಗ್ಗೆ ನನಗೆ ಪ್ರೀತಿಯೂ ಇದೆ. ಸಿಟ್ಟು ಇದೆ. ಪ್ರೀತಿ ಯಾಕೆಂದರೆ ಆ ಎರಡನ್ನೂ ಒಳಗೊಂಡ ವ್ಯಕ್ತಿ. ಸಿಟ್ಟು ಯಾಕೆಂದರೆ ಅವನ್ನು ಫಲಪ್ರದವಾಗಿ ಬಳಸಿಕೊಂಡಿಲ್ಲ ಎಂದು. ಅವರ ಪ್ರತಿಭೆ ಹೊರಚೆಲ್ಲುವ ಯಾವ ಉತ್ತಮ ಕೆಲಸ ಅವರು ಮಾಡಿದಂತೆ ನನಗೆ ಕಂಡಿಲ್ಲ. ನನ್ನ ಮಾರ್ಗದರ್ಶನ ದಲ್ಲಿ ಅವರು ಪಿಹೆಚ್‌ಡಿ ಪಡೆದರು. ವಿಷಯ: ಹಾಸನ ಜಿಲ್ಲೆಯ ಐತಿಹ್ಯಗಳನ್ನು ಕುರಿತು. ಪಿಹೆಚ್‌ಡಿಯ ನಂತರ ಆ ವಿಷಯದಲ್ಲಿ ತುಂಬ ಕೆಲಸ ಮಾಡಬಹುದಿತ್ತು. ಆ ನಿಟ್ಟಿನಲ್ಲಿ ಆವರ ಪ್ರತಿಭೆಯನ್ನು ದುಡಿಸಿಕೊಳ್ಳಲಿಲ್ಲ..    ಇದೇ ಕೃತಿಯನ್ನು ಪರಿಚಯಿಸುವ ನನ್ನ ಲೇಖನವು (ಗೊರೂರು ಅನಂತರಾಜು)  ಕವಲು ೨ರಲ್ಲಿದೆ. ಜಾನಪದವು ವಿಶಾಲವೂ ಮತ್ತು ವ್ಯಾಪಕವೂ ಆಗಿದ್ದು ಜಗತ್ತನ್ನೆಲ್ಲ ತನ್ನಲ್ಲಿ ಹುದುಗಿಸಿಕೊಂಡಿದೆ. ಇಲ್ಲಿ ಪ್ರಾಚೀನ ಅರ್ವಾಚೀನಗಳೆರಡೂ ಸಂಧಿಸಿ ಪರಸ್ಪರ ಕೈಕುಲುಕುತ್ತವೆ. ಈ ಜಾನಪದಕ್ಕೆ ಆದಿ ಅಂತ್ಯಗಳಿಲ್ಲ ಸಾವಿಲ್ಲ. ಆಧುನಿಕ ಮಾನವನಲ್ಲಿ ಗುಪ್ತಗಾಮಿನಿಯಾಗಿ ಪ್ರವಹಿಸುತ್ತಾ ಬೀಜದಲ್ಲಿ ವೃಕ್ಷವಡಗಿರುವಂತೆ ಕಲೆ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಜಾನಪದ ಚೈತನ್ಯ ಸುಪ್ತವಾಗಿರುತ್ತದೆ. ಕೃತಿಯಲ್ಲಿ ಲೇಖಕರು ತಮ್ಮ ಭೌಗೋಳಿಕ ನೆಲೆಯಲ್ಲಿ ಐತಿಹ್ಯಗಳನ್ನು ಅರ್ಥ ಮಾಡಿಕೊಳ್ಳಲು ಸಾಕಷ್ಟು ಶ್ರಮಿಸಿದ್ದಾರೆ. ಅವುಗಳ ಸಾಂಸ್ಕೃತಿಕ ಒಳತೋಟಿಗಳನ್ನು ಒಳನುಗ್ಗಿ ನೋಡಲು ಪ್ರಯತ್ನ ಮಾಡಿದ್ದಾರೆ. ಬಹುಮುಖಿ ದೃಷ್ಟಿಯಿಂದ ಅವುಗಳ ಆಶಯ ಕಾರ್ಯತತ್ಪರತೆಯನ್ನು ಪ್ರಾತ್ಯಕ್ಷೀಕರಿಸಲು ಪ್ರಯತ್ನಿಸಿದ್ದಾರೆ. ಜನಪದದಲ್ಲಿ ಜಾತಿ ಇಲ್ಲ ಅರ್ಥಾತ್ ತಾರತಮ್ಯ ಇಲ್ಲ. ಅಲ್ಲಿರುವುದು ಸಹಜ ಮಾನವೀಯ ಬದುಕು.. ಇದು  ಡಾ. ಹಿ.ಶಿ.ರಾಮಚಂದ್ರೇಗೌಡರ ಮುನ್ನುಡಿ ಬರಹ. –ಗೊರೂರು ಅನಂತರಾಜು, ಹಾಸನ.ಮೊ:೯೪೪೯೪೬೨೮೭೯.ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ೩ನೇ ಕ್ರಾಸ್, ಹಾಸನ. 

“ಅಕ್ಷರ ಕೃಷಿಕ ಡಾ. ಬಿ.ಡಿ.ಕುಮಾರ್ ಅವರ ಕೃಷಿ ಬದುಕಿನ ಪಾಠ” ಗೊರೂರು ಅನಂತರಾಜು Read Post »

ಕಾವ್ಯಯಾನ, ಗಝಲ್

 ಮಧು ವಸ್ತ್ರದ ಅವರ ಗಜಲ್               

ಕಾವ್ಯ ಸಂಗಾತಿ  ಮಧು ವಸ್ತ್ರದ ಗಜಲ್                ವೈಶಾಖದ ಶಾಖದಿ ಬಳಲಿ ತಪಿತಳಾಗಿಹ ಮಹಾಇಳೆಗೆ ತಂಪನು ನೀಡಲು ಬಾ ಮುಂಗಾರು ಮಳೆಯೇವಿಶಾಖದ ಹಿಂಗಾರು ಬರುವವರೆಗೂ ಮೆರೆವ ಭುವಿಯ ಚೆಲುವ ನೋಡಲು ಬಾ ಮುಂಗಾರು ಮಳೆಯೇ ಅಂಜೂರ,ಖರ್ಜೂರದ ಮರಗಳು ಚಿಗುರನೊಡೆಯದೆ ನಿನ್ನ ಆಗಮನದ ನಿರೀಕ್ಷೆಯಲಿ ಕುಳಿತಿಹವುಬಂಜರು ಭಾವದಿ ನೊಂದಿಹ ‌ಹೊಲಗದ್ದೆಗೆ ಅಮೃತ ಸಿಂಚನ ಮಾಡಲು ಬಾ ಮುಂಗಾರು ಮಳೆಯೇ ಬತ್ತಿ ತಳ ಕಾಣುತಿರುವ ಕೆರೆ ಬಾವಿಗಳಲ್ಲಿ ಮತ್ತೆ ಹೊಸ ಚೈತನ್ಯಜಲವ ತುಂಬಿಸುವ ಹೊಣೆ ನಿನ್ನದಾಗಿದೆಉತ್ತು ಬಿತ್ತಿ, ಸಮೃದ್ಧ ಫಸಲ ಬಯಸುವ ರೈತನೊಡನೆ ನೇಗಿಲ ಹೂಡಲು ಬಾ ಮುಂಗಾರು ಮಳೆಯೇ ಓಡುತಿಹ ಕರಿಮೋಡಗಳ ಕಂಡು ಗಿರಿನವಿಲು, ಮಳೆ ಸುರಿಸಿರಿ, ನಾ ಗರಿಗೆದರಿ ನರ್ತಿಸುವೆ ಎನುತಿದೆಕಾಡಿನ ಕೋಗಿಲೆಯೊಡನೆ ಮೇಘಮಲ್ಹಾರ ರಾಗದಿ ಋತುಗೀತೆ ಹಾಡಲು ಬಾ ಮುಂಗಾರು ಮಳೆಯೇ ಅಡ್ಡಾದಿಡ್ಡಿಯಾಗಿ ಸುರಿಯುತ ನಿನ್ನೆಲ್ಲ ಉತ್ಸಾಹ ಉಲ್ಲಾಸವನು ಧರಣಿಯೊಡನೆ ಹಂಚಿಕೊಂಡುಬಿಡುಗುಡ್ಡಗಾಡಿನಿಂದಿಳಿದು ಶರಧಿಯ ಸೇರಲು ತುಡಿವ ನದಿಯೊಡನೆ ಓಡಲು ಬಾ ಮುಂಗಾರು ಮಳೆಯೇ ಗುಡುಗು ಸಿಡಿಲುಗಳ ನಡುವೆ ಮಿಂಚುತ ಆರ್ಭಟಿಸುತ ಆಕಾಶದಿಂದ ಧರೆಯೆಡೆಗೆ ಸುರಿಯಬಾರದೇಗಡಗಡ ನಡುಗುತ ಶಾಲೆಗೆ ಹೋಗುವ ಮಕ್ಕಳೊಡನೆ ನೀರಾಟ ಆಡಲು ಬಾ ಮುಂಗಾರು ಮಳೆಯೇ ಮಧುರ ಭಾವದ ಕಬ್ಬಿಗರ ಮನದಲಿ ಮೊದಲ ಮಳೆ ಸ್ಪೂರ್ತಿ ಕಾರಂಜಿಯನು ಉಕ್ಕಿಸಬಲ್ಲದುಅಧರದಂಚಲಿ ನಗೆ ಸೂಸುವಂತಹ ಚೆಂದದ ಕವಿತೆಯಾಗಿ ಮೂಡಲು ಬಾ ಮುಂಗಾರು ಮಳೆಯೇ ————- ಮಧು ವಸ್ತ್ರದ

 ಮಧು ವಸ್ತ್ರದ ಅವರ ಗಜಲ್                Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-31 ಅರ್ಜುನ ಉವಾಚ ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅಸುರಾಂತಕ ಮಿತ್ರ ನಾನು ಅಸುರಪಟ್ಟಣವ ಸೇರಿದೆಆಲಿಸಿದೆ ಅಶರೀರವಾಣಿಯನ್ನು ಪರಿಪೂರ್ಣವಾಗಿ. “ಬಾಣವನ್ನು ಪ್ರಯೋಗಿಸದಿರು ಪಾರ್ಥ. ಆ ವನಿತೆಯ ಕೊಲೆಗೆ ಹೇಸದೆ ಶರವನ್ನು ತೊಡುವುದು ತರವಲ್ಲ. ಕೋಪವನ್ನು ಬಿಡು. ಪ್ರಮೀಳೆಯನ್ನು ವರಿಸು. ಮುಂದೆ ನಿನಗೆ ಒಳ್ಳೆಯದಾಗಲಿದೆ” ಎಂಬ ಧ್ವನಿಯದು ಕೇಳಿಬಂತು. ನನ್ನೊಬ್ಬನಿಗೇ ಕೇಳಿದ ಸ್ವರವಲ್ಲ. ಅಲ್ಲಿದ್ದ ಪ್ರತಿಯೊಬ್ಬರಿಗೂ ಕೇಳಿಸಿತು.ಪ್ರಯೋಗಿಸಲೆಂದು ಎತ್ತಿಹಿಡಿದಿದ್ದ ಬಾಣವನ್ನು ಇಳಿಸಿದೆ. ನನ್ನ ಜೊತೆಗಿದ್ದ ಆಪ್ತರಲ್ಲಿ ಇದರ ಬಗೆಗೆ ಚರ್ಚಿಸಿದೆ. ನಿರ್ಣಯವನ್ನು ಮಾಡಿದೆ. ಪ್ರಮೀಳೆಯನ್ನು ನನ್ನ ಬಳಿಗೆ ಕರೆಸಿಕೊಂಡೆ. ಒಪ್ಪಂದವೊAದಕ್ಕೆ ಒಳಪಡುವಂತೆ ಅವಳ ಕರಗಳನ್ನು ಹಿಡಿದುಕೊಂಡೆ. ಮನದಿಂಗಿತವನ್ನು ಹೇಳಿದೆ.“ಮರುಳುಗೊಳಿಸುವ ಮಾತು ನನ್ನದೆಂದು ಭಾವಿಸದಿರು. ಈಗ ನಾನು ನಿನ್ನನ್ನು ವರಿಸಲು ಸಾಧ್ಯವಿಲ್ಲ. ಯಾಗ ಮುಗಿಯುವವರೆಗೂ ಹೆಣ್ಣಿನ ಸಹವಾಸವನ್ನು ತೊರೆದಿರುವ ವ್ರತವನ್ನು ಪಾಲಿಸುತ್ತಿದ್ದಾನೆ ನನ್ನಣ್ಣ ಧರ್ಮಜ. ನಾನೂ ಅದೇ ವ್ರತದ ಆಚರಣೆಯಲ್ಲಿದ್ದೇನೆ. ಈಗ ನಾನು ನಿನ್ನೆಡೆಗೆ ಮನಸ್ಸು ಮಾಡಲು ಸಾಧ್ಯವಿಲ್ಲ. ಆದರೆ ಮುಂದೆ ಅಶ್ವಮೇಧ ಯಾಗ ನಡೆಯುವ ಕಾಲದಲ್ಲಿ ನಾನು ನಿನ್ನನ್ನು ಬಂದು ಸೇರುತ್ತೇನೆ. ನೀನು ಯಾಗಕ್ಕೆ ಬಂದು, ಅಲ್ಲಿ ಕೃಷ್ಣನನ್ನು ಕಂಡು, ನಿನ್ನ ದೇಹದ ವಿಷವನ್ನು ನೀಗಿಕೊಳ್ಳಬೇಕು. ಆ ಬಳಿಕ ನಾನು ನಿನ್ನ ಜೊತೆ ಸೇರಿ ಬಾಳುವುದಕ್ಕೆ ತೊಂದರೆಯಿಲ್ಲ” ಎಂದೆ, ಒಲವಿನಿಂದ.ನನ್ನ ಮಾತಿನಲ್ಲಿ ಕಪಟವಿಲ್ಲದ್ದನ್ನು ಅರ್ಥೈಸಿಕೊಂಡಳು ಪ್ರಮೀಳೆ. ನನ್ನ ಮಾತಿಗೆ ಒಪ್ಪಿಕೊಂಡಳು. ಕಟ್ಟಿಹಾಕಿದ್ದ ನಮ್ಮ ಕುದುರೆಯನ್ನು ತರಿಸಿಕೊಟ್ಟಳು. ಅವಳಿಗೆ ಆದರದ ವಿದಾಯ ಹೇಳಿ, ಸೇನೆಸಹಿತನಾಗಿ ಅಲ್ಲಿಂದ ಹೊರಟೆ. ಅವಳು ಸಂಪತ್ತನ್ನು ಜೊತೆಗಿರಿಸಿಕೊಂಡು, ವನಿತಾ ಸೈನ್ಯದ ಜೊತೆಗೆ ಹಸ್ತಿನಾವತಿಯನ್ನು ಸೇರಿಕೊಂಡಳು.ಮುಂದೆ ಹೋದಂತೆ ಹಲವು ದೇಶಗಳು ಕಂಡವು ನಮ್ಮ ಕಣ್ಣಿಗೆ. ಆನೆ, ಕುದುರೆ, ಗೋವು, ಮಹಿಷ ಮೊದಲಾದ ಪ್ರಾಣಿಸಮೂಹಗಳನ್ನು ಕಂಡೆವು. ಸೂರ್ಯ ಉದಯಿಸಿದೊಡನೆ ಜನಿಸಿ, ಮಧ್ಯಾಹ್ನದ ವೇಳೆಗೆ ಯೌವ್ವನಾವಸ್ಥೆಯನ್ನು ಪಡೆದು, ಸೂರ್ಯಾಸ್ತ ಸಮಯಕೆ ಮರಣವನ್ನಪ್ಪುವ ಅತಿಸೂಕ್ಷö್ಮ ಜೀವಿಗಳನ್ನು ನೋಡಿದೆವು, ಗಿಡಗಳ ಪೊದರುಗಳಲ್ಲಿ.ಕುದುರೆ ಮುಂದಕ್ಕೆ ಚಲಿಸಿತು. ವಿಚಿತ್ರವಾಗಿ ತೋರುತ್ತಿದ್ದ ಮನುಷ್ಯರನ್ನು ಕಂಡು ಅಚ್ಚರಿಗೊಳ್ಳುವಂತಾಯಿತು. ಚರ್ಮವನ್ನೇ ಉಡುಗೆಯಾಗಿ ಹೊಂದಿದ್ದರು ಅವರು. ಶರೀರವೆಲ್ಲಾ ವಕ್ರವಕ್ರವಾಗಿತ್ತು. ಅವರಿಗಿದ್ದದ್ದು ಒಂದೇ ಕೈ; ಒಂದೇ ಕಾಲು; ಒಂದೇ ಕಣ್ಣು. ಅವರಲ್ಲಿ ಕೆಲವರಿಗೆ ಮೂರು ಮೂರು ಕಣ್ಣುಗಳು. ಕುಬ್ಜರಾಗಿದ್ದರು. ಮೂರಡಿಯನ್ನು ಮೀರಿದ ಶರೀರವಲ್ಲ ಅವರದ್ದು. ತೀರಾ ಉದ್ದವಾದ ಮೂಗು. ನೆತ್ತಿಯ ಮೇಲೆ ಎರಡು ಕೋಡುಗಳಿದ್ದವು. ಕೆಲವರ ಮುಖ ಕತ್ತೆಯನ್ನು ಹೋಲುವಂತಿತ್ತು. ಇನ್ನೂ ಕೆಲವರು ಕುದುರೆಮುಖಿಗಳು.ವಿಚಿತ್ರವಾದ ದೇಶವಿದು ಎನಿಸಿತು ನನಗೆ. ಅಸಹ್ಯ ಭಾವ ಮೂಡಿತು. ಮರುಕ್ಷಣವೇ ಬಾಹ್ಯ ರೂಪ ಹೀಗಾದದ್ದರಲ್ಲಿ ಇವರ ತಪ್ಪೇನಿದೆ ಎನಿಸಿತು. ಎದುರಾದವರ ಚೆಲುವನ್ನು ಕಂಡು ಅವರನ್ನು ಆದರಿಸುವ, ಕುರೂಪವನ್ನು ಮೂದಲಿಸುವ ಲೋಕರೂಢಿಯ ಕ್ರಮವೊಂದಿದೆ. ಆದರೆ ಮನುಷ್ಯರೆನಿಸಿಕೊಂಡವರು ಒಳ್ಳೆಯ ಮನಸ್ಸನ್ನು ಹೊಂದಲು, ಒಳ್ಳೆಯ ಸ್ವಭಾವವನ್ನು ರೂಢಿಸಿಕೊಳ್ಳಲು ಮಾತ್ರ ಶಕ್ತರು. ಒಳ್ಳೆಯ ರೂಪವದು ಪ್ರಕೃತಿ ನಿರ್ಧರಿತವಾದದ್ದು. ಚೆಲುವೆನ್ನುವುದು ಶಾಶ್ವತವಲ್ಲ. ಹಾಗಿರುವಾಗ ಅದನ್ನು ಮುಂದಿಟ್ಟುಕೊAಡು ಸಹ್ಯ ಭಾವ ತಾಳುವುದಾಗಲೀ, ಅಸಹ್ಯವನ್ನು ಹೊಂದುವುದಾಗಲೀ ತಕ್ಕುದಲ್ಲ ಎನಿಸಿತು.ಹಾಗೆಯೇ ಮುಂದೆ ಹೋದೆವು. ಈಗ ನಮ್ಮ ಕುದುರೆ ಕಾಲಿಟ್ಟದ್ದು ಭೀಷಣ ಎನ್ನುವ ರಾಕ್ಷಸನ ಪಟ್ಟಣಕ್ಕೆ. ಮೂರು ಕೋಟಿ ಅಸುರರಿದ್ದರು ಅಲ್ಲಿ. ಅತಿಭಯಂಕರ ರೂಪ ಅವರದ್ದು. ಕ್ಷಣಕ್ಷಣವೂ ಆರ್ಭಟ. ಸಲ್ಲದ ಕೃತ್ಯಗಳೇ ಅಲ್ಲಿ ಎಲ್ಲ. ನೀಳವಾದ ದೈತ್ಯ ದೇಹವಿತ್ತು. ಶೀಘ್ರವೇ ಕೋಪಗೊಳ್ಳುತ್ತಿದ್ದರು. ಗಂಡೆದೆಯವರನ್ನೂ ಅಳುಕಿಸುವ ಘೋರ ಮುಖ ಅವರಿಗಿತ್ತು. ಮಾಯಾವಿಗಳಾಗಿದ್ದರು. ದಯೆಗೆ ಅವರೆದೆಯಲ್ಲಿ ಕಿಂಚಿತ್ ಸ್ಥಾನವೂ ಇರಲಿಲ್ಲ. ಸಂಹಾರದಲ್ಲಿಯೇ ಸಂತಸ ಕಾಣುವವರು. ಸಮರಕ್ಕೆ ಇಳಿದರೆ ಸಮಯ ಸಂದರ್ಭ ನೋಡದೆ ಹೋರಾಡುವವರು.ಹೀಗಿದ್ದ ಅಸುರರ ಪುರವನ್ನು ಆಳುತ್ತಿದ್ದ ಭೀಷಣನಿಗೆ ನಮ್ಮ ಪ್ರವೇಶದ ಸುದ್ದಿಯನ್ನು ಮುಟ್ಟಿಸಿದ್ದು ರಾಕ್ಷಸ ಪುರೋಹಿತನೆನಿಸಿದ್ದ ಮೇದೋಹೋತ. ಅವನು ಆಹಾರ ಹುಡುಕಿಕೊಂಡು ಕಾಡಿಗೆ ಬಂದಿದ್ದ. ಆ ಸಮಯದಲ್ಲಿ ನಾನು ನನ್ನ ಸೇನೆಸಹಿತ ಅದೇ ಅರಣ್ಯದಲ್ಲಿದ್ದೆ. ಅವನು ನನ್ನನ್ನು ಕಂಡ. ಕುದುರೆಯನ್ನು ನೋಡಿದ. ಸೈನಿಕರೆಡೆಗೆ ದೃಷ್ಟಿ ಹರಿಸಿದ. ಯಜ್ಞದ ಕುದುರೆಯಿದು ಅರ್ಜುನನ ರಕ್ಷೆಯಲಿ ಸೇನೆಸಹಿತವಾಗಿ ಬಂದಿದೆ ಇಲ್ಲಿಗೆ ಎನ್ನುವುದನ್ನು ಊಹಿಸಿದ. ಅವನು ನನ್ನನ್ನು ನೋಡಿದ್ದು ನನ್ನ ಅರಿವಿಗೆ ನಿಲುಕಿರಲಿಲ್ಲ ಆ ಕ್ಷಣಕ್ಕೆ.ಅವನು ತಕ್ಷಣವೇ ಹೋದದ್ದು ಭೀಷಣನ ಬಳಿಗೆ. ವಿಚಾರವನ್ನು ಅರುಹಿದ. “ಅರ್ಜುನ ಇಲ್ಲಿಗೆ ಬಂದಿದ್ದಾನೆ, ಯಾಗದ ಕುದುರೆಯನ್ನು ಜೊತೆಮಾಡಿಕೊಂಡು. ಅವನನ್ನು ಹಿಡಿದು ತಂದು ನರಮೇಧ ಯಾಗವನ್ನು ನಡೆಸು. ಅವನನ್ನು ಬಲಿಗೊಡು” ಎಂಬ ಸಲಹೆಯಿತ್ತ ಮೇದೋಹೋತ.ಭೀಷಣ ನಡೆಸುವ ನರಮೇಧ ಯಾಗಕ್ಕೆ ಪುರೋಹಿತ ತಾನಾಗಿ ಸಕಲ ಗೌರವವನ್ನೂ, ಸಮಸ್ತ ಸಂಪದವನ್ನೂ ತನ್ನದಾಗಿಸಿಕೊಳ್ಳಬೇಕೆಂಬ ಆಕಾಂಕ್ಷೆಯಿತ್ತು ಆ ಅಸುರ ಪುರೋಹಿತನಲ್ಲಿ.ಭೀಷಣ ಅವನ ಮಾತಿಗೆ ಒಪ್ಪಿಕೊಂಡ. “ನರಮೇಧ ಯಾಗಕ್ಕಾಗಿ ಈಗಲೇ ಮಂಟಪವನ್ನು ನಿರ್ಮಿಸು. ನಾನೀಗಲೇ ಹೋಗಿ ಆ ಅರ್ಜುನನನ್ನು ಎಳೆದುಕೊಂಡು ಬರುತ್ತೇನೆ” ಎಂದು ಬೊಬ್ಬೆ ಹೊಡೆದ, ಮೇದೋಹೋತನಲ್ಲಿ.ಹೀಗೆ ಭೀಷಣ ಮೇದೋಹೋತನ ಮಾತಿಗೆ ತಕ್ಷಣವೇ ಒಪ್ಪಿಕೊಳ್ಳುವುದರ ಹಿಂದೆ ಬಲವಾದ ಕಾರಣವಿತ್ತು. ಅವನು ಬಕಾಸುರನ ಮಗನಾಗಿದ್ದ. ಹಿಂದೆ ಭೀಮನಿಂದ ಮಡಿದಿದ್ದ ತಂದೆಯ ಸಾವಿನ ಸೇಡನ್ನು ಭೀಷಣ ತೀರಿಸಿಕೊಳ್ಳಬಯಸಿದ್ದು ಭೀಮ ಸೋದರನಾದ ನನ್ನನ್ನು ಕೊಲ್ಲುವುದರ ಮೂಲಕ. ಮುಕ್ಕೋಟಿ ರಾಕ್ಷಸರು ಸೇರಿಕೊಂಡರು ಅವನ ಜೊತೆಗೆ… ಡಾ.ವಿಶ್ವನಾಥ್‌ ಎನ್ ನೇರಳೆಕಟ್ಟೆ

Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ-122 ಒಬ್ಬ ಅಮ್ಮನಕಥೆ ರುಕ್ಮಿಣಿ ನಾಯರ್ ಅಮ್ಮನ ಅನಾರೋಗ್ಯದ ಬಗ್ಗೆ ದೊಡ್ಡಕ್ಕನಿಗೆ ತಿಳಿಸುವ ಸಮಯ ವಿಷಯ ತಿಳಿದ ನಂತರ ಖಂಡಿತ ತಂಗಿ ಹೀಗೆಲ್ಲಾ ಪ್ರತಿಕ್ರಿಯಿಸಿವಳು ಎಂಬುದು ಮೊದಲೇ ತಿಳಿದಿದ್ದ ಅಕ್ಕನಿಗೆ ದುಃಖ ಉತ್ತರಿಸಿ ಬಂದರೂ, ತಾನು ಕೂಡಾ ಅಳುತ್ತಾ ಕುಳಿತರೆ, ತಂಗಿಯನ್ನು ಸಮಾಧಾನ ಪಡಿಸುವವರು ಯಾರು? ಎಂದು ಯೋಚಿಸುತ್ತಾ, ತಂಗಿಯ ತಲೆಯನ್ನು ನಿಧಾನವಾಗಿ ಸಾಂತ್ವನ ಪಡಿಸುವಂತೆ ನೇವರಿಸಿದಳು. ಅವಳು ಅತ್ತು ಸಮಾಧಾನವಾಗುವರೆಗೂ ಹಾಗೆ ನೇವರಿಸುತ್ತಾ ಏನೂ ಮಾತನಾಡದೇ ಕುಳಿತಿದ್ದಳು. ಅವಳು ಸ್ವಲ್ಪ ಸಮಾಧಾನಗೊಂಡಳು ಎಂದು ಅರಿತ ಮೇಲೆ…. “ನಿನ್ನ ನೋವು, ಸಂಕಟ ಏನೆಂದು ನನಗೆ ಅರ್ಥವಾಗುತ್ತದೆ…. ದಯವಿಟ್ಟು ನಿನ್ನನ್ನು ನೀನು ಸಮಾಧಾನಪಡಿಸಿಕೋ…. ನಾವಿಬ್ಬರೂ ಈಗ ಮಾನಸಿಕವಾಗಿ ಗಟ್ಟಿಯಾಗಬೇಕಿದೆ…. ನಮ್ಮ ಈ ಪರಿಸ್ಥಿತಿಯನ್ನು ಎದುರಿಸಲು ನಮ್ಮ ಜೊತೆ ಬೇರೆ ಯಾರೂ ಇಲ್ಲ…. ಅಕ್ಕನಿಗೆ ಅವಳದಾದ ಕುಟುಂಬವಿದೆ…. ಎಲ್ಲಾ ಜವಾಬ್ದಾರಿಯನ್ನು ಅಕ್ಕನಿಗೆ ಹೊರಿಸಲು ಸಾಧ್ಯವಿಲ್ಲ…. ನಮ್ಮಿಬ್ಬರ ಕೈಲಿ ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ಪ್ರಯತ್ನ ಮಾಡೋಣ…. ವೈದ್ಯರು ಹೇಳಿದ್ದರು ಡಯಾಲಿಸಿಸ್ ಚಿಕಿತ್ಸೆ ಕೊಡಿಸಿದರೆ, ಅಮ್ಮ ಇನ್ನೂ ಸ್ವಲ್ಪ ದಿನ ಅಮ್ಮ ಜೀವಂತವಾಗಿರಬಹುದು…. ಅಮ್ಮನ ಎಲ್ಲಾ ನೋವು ಸಂಕಟಗಳು ಸ್ವಲ್ಪ ದಿನದ ಮಟ್ಟಿಗಾದರೂ ಸುಧಾರಿಸಬಹುದು….. ನೋಡೋಣ…ಹೇಗೆ ಎಂಬುದನ್ನು ವೈದ್ಯರಿಂದ ಕೇಳಿ ತಿಳಿದುಕೊಳ್ಳುತ್ತೇನೆ….. ಎಂದಳು. ಅಕ್ಕನ ಮಾತನ್ನು ಕೇಳಿದಾಗ ತಂಗಿಯ ಮುಖವರಳಿತು. ….”ಹಾಗೆಯೇ ಮಾಡುವ ಅಕ್ಕಾ….. ನಮ್ಮಿಂದ ಆಗಿದ್ದನ್ನು ನಾವು ಮಾಡೋಣ…. ನಮಗೆ ಆಶ್ರಯ ಕೊಟ್ಟಿರುವ ಎಸ್ಟೇಟ್ ನವರು ಮೊದಲಿಂದಲೂ ಅಮ್ಮನ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ…. ಅವರು ಖಂಡಿತಾ ನಮಗೆ ಸಹಾಯ ಮಾಡುತ್ತಾರೆ… ಹಾಗಾಗಿ ನಾವು ಮಾಡಬೇಕಾಗಿದ್ದು ಏನು ಎಂಬುದನ್ನು ಕೇಳಿ ತಿಳಿದುಕೋ…. ಎಂದಳು. ಸರಿ ಎನ್ನುವಂತೆ ಅಕ್ಕ ತಯಾರಿಸಿದಳು…. “ಈಗ ಡಾಕ್ಟರ್ ರೌಂಡ್ಸ್ ಮುಗಿಸಿರುತ್ತಾರೆ…. ನಡಿ ವಾರ್ಡಿಗೆ ಹೋಗೋಣ…. ಮೊದಲು ನಿನ್ನ ಕಣ್ಣುಗಳನ್ನು ಒರೆಸಿಕೊ…. ನಮಗೆ ತಿಳಿದಿರುವ ವಿಷಯ ಅಮ್ಮನಿಗೆ ಗೊತ್ತಾಗುವುದು ಬೇಡ….. ಅಮ್ಮ ನಮ್ಮನ್ನು ಸೂಕ್ಷ್ಮವಾಗಿ ಗಮನಿಸುತ್ತಾಳೆ… ಆದಷ್ಟೂ ಅಮ್ಮನ ಮುಂದೆ ನಾವು ಖುಷಿಯಿಂದ ಇರುವಂತೆ ನಟಿಸೋಣ…. ಇದಲ್ಲದೇ ನಮಗೆ ಬೇರೆ ದಾರಿ ಇಲ್ಲ….. ಅಮ್ಮನಿಗೆ ಈ ವಿಷಯಗಳು ತಿಳಿದರೆ, ಖಂಡಿತಾ ಪೂರ್ತಿ ಕುಸಿದು ಹೋಗುತ್ತಾಳೆ…. ನಾವೆಲ್ಲರೂ ವಿದ್ಯಾಭ್ಯಾಸ ಮುಗಿಸಿ, ಒಳ್ಳೆಯ ಕೆಲಸಕ್ಕೆ ಸೇರಿ ನಂತರ ನಾವು ಮದುವೆಯಾಗುವುದನ್ನು ನೋಡಬೇಕು…. ಖುಷಿಯಿಂದ ಮೊಮ್ಮಕ್ಕಳನ್ನು ಮುದ್ದಾಡಬೇಕು…. ಅವರೊಂದಿಗೆ ಕಾಲ ಕಳೆಬೇಕು….ಎನ್ನುವ ತನ್ನಾಸೆಯ ಮಾತುಗಳನ್ನು ಆಗಾಗ ಹೇಳುತ್ತಲೇ ಇರುತ್ತಾಳೆ…. ಅಮ್ಮನಿಗೆ ಏನೂ ಆಗಿಲ್ಲ… ಆದಷ್ಟು ಬೇಗ ಗುಣಮುಖರಾಗುತ್ತಾರೆ ಎನ್ನುವ ಆಶಯವನ್ನು ಅಮ್ಮನ ಮನಸ್ಸಿನಲ್ಲಿ ತುಂಬೋಣ…. ಯಾವುದೇ ಕಾರಣಕ್ಕೂ ತನ್ನ ಆರೋಗ್ಯ ಸ್ಥಿತಿ ಈ ರೀತಿ ಇದೆ ಎಂದು ತಿಳಿಯುವುದು ಬೇಡ….. ಎಂದು ಅಕ್ಕ ಹೇಳಿದಾಗ ‘ಸರಿ’ ಎನ್ನುವಂತೆ ತಲೆಯಾಡಿಸುತ್ತಾ ದುಪ್ಪಟ್ಟಾದಿಂದ ಕಣ್ಣುಗಳನ್ನು ಮತ್ತು ಮುಖವನ್ನು ಒರೆಸಿ, ಆದಷ್ಟೂ ತಾನು ನಗುನಗುತ್ತಿರುವಂತೆ ಇರುವ ಪ್ರಯತ್ನ ಮಾಡಿದಳು. ತಂಗಿಯನ್ನು ನೋಡಿ ಮುಗುಳ್ನಕ್ಕು ಅವಳ ಹೆಗಲ ಮೇಲೆ ಕೈ ಹಾಕುತ್ತಾ…._ ಬಾ ನಡಿ ಹೋಗೋಣ”…. ಎಂದಳು ಈಗ ನಾನು ಅತ್ತಿರೋದು ಕಾಣೋದಿಲ್ಲವಲ್ಲವೇ? ಎಂಬಂತೆ ಪ್ರಶ್ನಾರ್ಥಕವಾಗಿ ಅಕ್ಕನನ್ನು ನೋಡಿದಳು ತಂಗಿ. ‘ಇಲ್ಲ’ ಎನ್ನುವಂತೆ ತಲೆ ಆಡಿಸಿದಳು, ಇಬ್ಬರೂ ವಾರ್ಡಿಗೆ ತೆರಳಿದಾಗ, ನರ್ಸ್ ತಾಯಿಗೆ ಚುಚ್ಚುಮದ್ದನ್ನು ಚುಚ್ಚುತ್ತಿರುವುದು ಕಂಡಿತು. ಅಮ್ಮ ನೋವಿನಿಂದ ಮುಖ ಹಿಂಡಿದ್ದು ಕಂಡಾಗ, ಇಬ್ಬರ ಎದೆಯಲ್ಲೂ ಏನೋ ಹರಿತವಾದದ್ದು ಚುಚ್ಚಿದ ಅನುಭವವಾಯಿತು. ಆದರೂ ತೋರಗೊಡದೆ…. “ಅಮ್ಮಾ ….ಡಾಕ್ಟರ್ ಏನು ಹೇಳಿದರು?… ಎಂದು ಇಬ್ಬರೂ ಕೇಳಿದಾಗ…. “ಏನೂ ತೊಂದರೆ ಇಲ್ಲ….ಇನ್ನೂ ಕೆಲವು ದಿನಗಳು ನಾನು ಇಲ್ಲಿಯೇ ಇರಬೇಕೆಂದು ಹೇಳಿದ್ದಾರೆ”… ಎಂದು ಹೇಳುತ್ತಾ ಸುಮತಿ ಇಬ್ಬರೂ ಮಕ್ಕಳ ಮುಖವನ್ನು ನೋಡಿದಳು. ಮಕ್ಕಳಿಬ್ಬರ ಕಣ್ಣುಗಳು ಅತ್ತು ಊದಿಕೊಂಡಿರುವಂತೆ ಅವಳಿಗೆ ಅನಿಸಿತು….. “ಏನಾಯ್ತು ಮಕ್ಕಳೇ?…. ನಿಮ್ಮಿಬ್ಬರ ಕಣ್ಣುಗಳು ಏಕೆ ಊದಿಕೊಂಡಿವೆ?…. ಎಂದು ಕೇಳಿದಾಗ,….”ಇಲ್ಲಮ್ಮಾ…. ಹಾಗೇನೂ ಇಲ್ಲ…. ನಿನಗೆ ಹಾಗೆ ಅನಿಸಿದೆಯಷ್ಟೇ”….. ಎಂದು ತಂಗಿ ಹೇಳಿದಾಗ, …. “ನೀನು ಯಾವಾಗ ಸುಳ್ಳು ಹೇಳುವುದನ್ನು ಕಲಿತುಕೊಂಡೆ?…. ನಿಜ ಹೇಳಿ….ಅದೇನಿದ್ದರೂ ನನಗೆ ತಿಳಿಸಿ” …. ಎಂದಳು ತುಸುಕೋಪದಿಂದ. …”ಏನಿಲ್ಲಮ್ಮಾ…. ಅವಳು ಸುಳ್ಳು ಹೇಳಿಲ್ಲ…. ನಮಗೇನೂ ಆಗಿಲ್ಲ…. ನಿನಗೆ ಹಾಗೆ ಅನಿಸುತ್ತಿದೆ ಅಷ್ಟೇ….. ನಾವು ಹೊರಗೆ ಕುಳಿತಿದ್ದಾಗ ಗಾಳಿಯಲ್ಲಿ ಏನೋ ಕಸ ಬಂದು ತಂಗಿಯ ಕಣ್ಣಿಗೆ ಬಿತ್ತು…. ಅವಳು ಹಣ್ಣುಗಳನ್ನು ಉಜ್ಜಿಕೊಂಡಳು…. ಹಾಗಾಗಿ ಅವಳ ಕಣ್ಣುಗಳು ಹಾಗಿವೆ”…. ಎಂದಳು….. “ಹಾಗಾದರೆ ನಿನ್ನ ಕಣ್ಣು?”…. ತುಸು ಏರು ಧ್ವನಿಯಲ್ಲಿ ಸುಮತಿ ಪ್ರಶ್ನಿಸಿದಾಗ…. “ನಾನು ರಾತ್ರಿ ಸರಿಯಾಗಿ ನಿದ್ರೆ ಮಾಡಿಲ್ಲಮ್ಮಾ…. ಪರೀಕ್ಷೆ ಹತ್ತಿರವಾಗುತ್ತಿರುವುದರಿಂದ ರಾತ್ರಿ ಹೆಚ್ಚು ಸಮಯ ಓದುತ್ತಾ ಕುಳಿತಿದ್ದೆ… ಹಾಗಾಗಿ ನನ್ನ ಕಣ್ಣುಗಳು ಊದಿಕೊಂಡಿವೆ…. ಸುಮ್ಮನೆ ಏನೇನೋ ಆಲೋಚಿಸಿ ತಲೆಕೆಡಿಸಿಕೊಳ್ಳಬೇಡ”… ಎಂದಳು ತಂಗಿಯನ್ನು ನೋಡುತ್ತಾ. ತಂಗಿ ‘ಹೌದು’ ಎನ್ನುವಂತೆ ತಲೆ ಆಡಿಸಿದಳು. ಇಬ್ಬರೂ ಮಕ್ಕಳು ಕೊಟ್ಟ ಉತ್ತರ ಯಾಕೋ ಸರಿ ಇಲ್ಲ ಎಂದು ಸುಮತಿಗೆ ಅನಿಸಿತು. ಆದರೆ ಇನ್ನೂ ವಾದ ಮಾಡುವುದು ಬೇಡ ಎಂದು ಸುಮ್ಮನಾದಳು. ತಂಗಿ ಅಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ತಾಯಿ ಮತ್ತು ಅಕ್ಕನ ಜೊತೆ ಕಾಲ ಕಳೆದಳು. ಇದರ ನಡುವೆ…. “ಅಕ್ಕಾ ….ದೊಡ್ಡಕ್ಕನಿಗೆ ಅಮ್ಮನ ಅನಾರೋಗ್ಯದ ವಿಷಯ ತಿಳಿಸಿದ್ದೀಯಾ? ಎಂದು ಕೇಳಿದಳು….. “ಇಲ್ಲ ಕಣೇ…. ಹೇಳಬೇಕು…. ಒಂದು ಕೆಲಸ ಮಾಡುತ್ತೀಯಾ? ನಾವು ಇಲ್ಲಿ ಯಾವುದಾದರೂ ಹೋಟೆಲ್ನಲ್ಲಿ ಊಟ ಮಾಡಿಕೊಳ್ಳೋಣ…. ಅಮ್ಮನಿಗೆ ಆಸ್ಪತ್ರೆಯಿಂದ ಊಟ ಸಿಗುತ್ತದೆ…. ಅಮ್ಮನಿಗೆ ಊಟ ಕೊಟ್ಟು, ನಂತರ ಹೊರಗೆ ಹೋಗಿ ನಾವು ಊಟ ಮಾಡೋಣ…. ನಂತರ ನೀನು ಅಕ್ಕನ ಮನೆಗೆ ಹೋಗಿ, ಅಮ್ಮ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ ಎಂಬುದನ್ನು ತಿಳಿಸು… ಎಂದಳು. ತಂಗಿ ಸರಿ ಎನ್ನುವಂತೆ ತಲೆಯಾಡಿಸಿದಳು.

Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಅತಿ ಅವಸರ ಸಲ್ಲದು” ವೀಣಾ ಹೇಮಂತ್ ಗೌಡಪಾಟೀಲ

ಜೀವನ ಸಂಗಾತಿ ವೀಣಾ ಹೇಮಂತ್ ಗೌಡಪಾಟೀಲ “ಅತಿ ಅವಸರ ಸಲ್ಲದು” ಪುಟ್ಟ ಬಾಲಕ ಶಾಮ ಯಾವತ್ತೂ ಅವಸರದಲ್ಲಿಯೇ ಇರುತ್ತಿದ್ದ ಆತನಿಗೆ ಪ್ರತಿಯೊಂದು ವಿಷಯವು ತರಾತುರಿಯಲ್ಲಿ ಆಗಿಬಿಡಬೇಕು. ಅತ್ಯಂತ ವೇಗವಾದ ಇಂಟರ್ನೆಟ್ ಸೇವೆಯನ್ನು ಬಯಸುತ್ತಿದ್ದ ಆತ ಹೊಸ ಹೊಸ ಆಟದ ಸಾಮಾನುಗಳಿಗಾಗಿ ಆಶಿಸುತ್ತಿದ್ದ… ಆತನ ಅವಸರವನ್ನು ನೋಡಿದರೆ ಎಲ್ ಕೆ ಜಿ ಇರುವಾಗಲೇ ಒಂದನೇ ತರಗತಿಗೆ, 5ನೇ ತರಗತಿ ಇರಬೇಕಾದ ವ್ಯಕ್ತಿ ಇಂಜಿನಿಯರಿಂಗ್ ಕಾಲೇಜಿನ ಮೆಟ್ಟಿಲು ಏರಬೇಕು ಎಂದು ತಮಾಷೆ ಮಾಡುವಷ್ಟು ಇರುತ್ತಿತ್ತು.ಯಾವುದೇ ವಿಷಯಕ್ಕೂ ವ್ಯವಧಾನ ಎಂಬ ಪದದ ಅರಿವೇ ಇರಲಿಲ್ಲ ಬಹುಶಹ ಆತನ ನಿಘಂಟಿನಲ್ಲಿ ತಾಳ್ಮೆ ಎಂಬ ಪದಕ್ಕೆ ಅರ್ಥವೇ ಇರಲಿಲ್ಲ  ಅದೊಂದು ದಿನ ಸಾಯಂಕಾಲ ಆತ ತನ್ನ ಅಜ್ಜ ಮನೆಯ ವರಾಂಡದಲ್ಲಿ ಒಂದು ಹಳೆಯದಾದ ಆದರೆ ಅತ್ಯಂತ ಕಲಾತ್ಮಕವಾದ ಕೆತ್ತನೆಯನ್ನು ಹೊಂದಿದ ಸುಂದರವಾದಪುಟ್ಟ ಪೆಟ್ಟಿಗೆಯನ್ನು ಮುಂದಿಟ್ಟುಕೊಂಡು ಕುಳಿತಿರುವುದನ್ನು ನೋಡಿದ. ಅದೊಂದು ಸಂಪೂರ್ಣ ಖಾಲಿಯಾದ ಪೆಟ್ಟಿಗೆಯಾಗಿತ್ತು. ಅಜ್ಜ ಆ ರೀತಿ ಪೆಟ್ಟಿಗೆಯ ಮುಂದೆ ಸುಮ್ಮನೆ ಕುಳಿತಿರುವುದನ್ನು ನೋಡಿ ಆತನಿಗೆ ಸೋಜಿಗವಾಯಿತು.ಅಂತೆಯೇ ತನ್ನ ಅಜ್ಜನನ್ನು ಕುರಿತು ಅಜ್ಜ… ಅದೇಕೆ ಹಾಗೆ ಖಾಲಿ ಪೆಟ್ಟಿಗೆಯ ಮುಂದೆ ಕುಳಿತು ಅದನ್ನು ನೋಡುತ್ತಿರುವಿರಿ… ಎಷ್ಟೊಂದು ಸಮಯ ಹಾಳಾಯಿತು ಅಲ್ಲವೇ? ಎಂದು ಕೇಳಿದ.ಮೊಮ್ಮಗನ ಮಾತನ್ನು ಕೇಳಿದ ಅಜ್ಜ ನಸುನಗುತ್ತ ನುಡಿದ ಇದೊಂದು ಹಳೆಯ ಖಾಲಿ ಪೆಟ್ಟಿಗೆ ಎಂದು ನೀನು ಭಾವಿಸಿರುವೆ ಅಲ್ಲವೇ ?…. ಖಂಡಿತವಾಗಿಯೂ ಇದು ಖಾಲಿ ಪೆಟ್ಟಿಗೆಯಲ್ಲ ಇದರಲ್ಲಿ ನಾನು ನನ್ನ ಚಿನ್ನದ ಟಿಕೆಟ್ಗಳನ್ನು ಇಡುತ್ತೇನೆ  ಎಂದು ಹೇಳಿದ. ಪೆಟ್ಟಿಗೆಯ ಒಳಭಾಗವನ್ನು ನಿರುಕಸಿ ನೋಡಿದ ಶಾಮ ‘ಆದರೆ ಅಜ್ಜ ಇದರಲ್ಲಿ ಏನೂ ಇಲ್ಲ’ ಎಂದು ಲಗು ಬಗೆಯಿಂದ ಹೇಳಿದ.‘ನಿನಗೆ ಪೆಟ್ಟಿಗೆ ಖಾಲಿಯಾಗಿ ಕಾಣುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ, ಕಾರಣ ನೀನು ನಿನ್ನ ಕಣ್ಣಿನಿಂದ ಪೆಟ್ಟಿಗೆಯನ್ನು ನೋಡುತ್ತಿರುವೆಯೇ ಹೊರತು ಮನಸ್ಸು ಹಾಗೂ ಹೃದಯದಿಂದ ಅಲ್ಲ ‘ ಎಂದು ಅಜ್ಜ ಒತ್ತಿ ಹೇಳಿದ.ಮತ್ತೆ ಮೊಮ್ಮಗನನ್ನು ‘ಇಲ್ಲಿ ಕುಳಿತುಕೋ ನಾನು ನಿಮಗೆ ನನ್ನ ಕೊನೆಯ ಟಿಕೆಟ್ ಅನ್ನು ನೀಡುತ್ತೇನೆ’ ಎಂದು ಅಜ್ಜ ಹೇಳಿದ​ ಆಶ್ಚರ್ಯವಾದರೂ ಮರು ಮಾತನಾಡದೆ ಅಜ್ಜ ತೋರಿದ ಸ್ಥಳದಲ್ಲಿ ಶ್ಯಾಮ ಕುಳಿತುಕೊಂಡ. ಮುಂದಿನ ಐದು ನಿಮಿಷಗಳ ಕಾಲ ಅಜ್ಜ ಏನನ್ನೂ ಹೇಳಲಿಲ್ಲ  ಹಾಗೂ ಮೊಮ್ಮಗ ಏನನ್ನು ಕೇಳಲಿಲ್ಲ. ಐದು ನಿಮಿಷ ಒಂದು ಯುಗದಂತೆ ಭಾಸವಾಯಿತು ಶಾಮನಿಗೆ… ಆದರೆ ಆ ಸಮಯದಲ್ಲಿ ಆತ ಅನಿವಾರ್ಯವಾಗಿ ಅಜ್ಜನ ಜೊತೆ ಕುಳಿತು ಹಕ್ಕಿಗಳ ಚಿಲಿಪಿಲಿ ನಾದವನ್ನು ಕೇಳಿಸಿಕೊಂಡ. ಎಲ್ಲಿಂದಲೂ ಬೀಸಿದ ತಂಗಾಳಿಗೆ ಆತನ ಮೈಯನ್ನು ಸೋಕಿ ಮೈಮನಗಳಿಗೆ ಅತ್ಯದ್ಭುತವಾದ ಸಮಾಧಾನವನ್ನು ನೀಡಿತು. ದೂರದಿಂದ ಹಾರಿ ಬಂದ ಚಿಟ್ಟೆಯೊಂದು ಹೂವಿನ ಮಕರಂದವನ್ನು ಹೀರುವುದನ್ನು ಆತ ಗಮನಿಸಿದ. ಮೊದಲು ಮೊದಲು ಆ ರೀತಿ ಸುಮ್ಮನೆ ಕುಳಿತುಕೊಳ್ಳುವುದು ಶಾಮನಿಗೆ ಹಿಂಸೆಯೆನಿಸಿತು. ತನ್ನ ಜೇಬಲ್ಲಿರುವ ಮೊಬೈಲ್ ಫೋನನ್ನು ತೆಗೆದು ನೋಡಲೇ ಎಂದು ಒಂದು ಬಾರಿ ಯೋಚಿಸಿದ ಕೂಡ… ಆದರೆ ಅಜ್ಜನ ಮುಂದೆ ಹಾಗೆ ಮಾಡಲಾರದೆ ಸುಮ್ಮನೆ ಚಡಪಡಿಸುತ್ತಾ ಕುಳಿತುಕೊಂಡ. ಅನಿವಾರ್ಯವಾಗಿಯಾದರೂ ಒಂದೆರಡು ನಿಮಿಷಗಳ ನಂತರ ಆತನ ಮನಸ್ಸು ತನ್ನಂತಾನೆ ತಹಬಂದಿಗೆ ಬಂತು. ಆತನ ಮನಸ್ಸನ್ನು ಒಂದು ಬಗೆಯ ನಿರಾಳತೆ ಆವರಿಸಿತು.ತಲೆಯೆತ್ತಿ ನೋಡಿದಾಗ ನೀಲಿ ಆಕಾಶ ಆತನ ಗಮನ ಸೆಳೆಯಿತು.ತನ್ನ ಗಮನ ಸೆಳೆದ ಆಕಾಶದತ್ತ ಕೈ ಮಾಡಿದ ಶಾಮ ಅಚ್ಚನಿಗೆ ಅದೇನು? ಎಂದು ಕೇಳಿದ….. ಅದು ಕೂಡ ಚಿನ್ನದ ಟಿಕೆಟ್ ಎಂದು ಅಜ್ಜ ಹೇಳಿದ. ಈಗ ಅವಾಕ್ಕಾಗುವ ಸರದಿ ಶಾಮನದಾಗಿತ್ತು​ನಿಜ ಶಾಮ…. ಕೆಲ ನಿಮಿಷಗಳ, ಕ್ಷಣಗಳ ಮಟ್ಟಿಗಾದರೂ ನೀನು ನೀನಾಗಿಯೇ ಇರುವ ಗಳಿಗೆ… ಅದು ನಿನ್ನ ಬದುಕಿನ ಅತ್ಯಮೂಲ್ಯವಾದ ಟಿಕೆಟ್ ಇದ್ದಂತೆ. ಬಹಳಷ್ಟು ಜನ ಸದಾ ಓಡುತ್ತಲೇ ಇರುತ್ತಾರೆ. ಓದುವುದು, ಓದು ಮುಗಿದ ಕೂಡಲೇ ನೌಕರಿ, ನೌಕರಿ ಮುಗಿದ ಕೂಡಲೇ ಮನೆ, ಮನೆಯಿಂದ ಆಫೀಸ್ ಮತ್ತೆ ವೀಕೆಂಡ್ಗಳು, ಪ್ರಮೋಷನ್ಗಳು ಮದುವೆ ಮಕ್ಕಳು ಯಶಸ್ಸು ಹೀಗೆ ಒಂದರ ಹಿಂದೆ ಒಂದರಂತೆ ಸದಾ ಓಡುತ್ತದೆ. ಈ ಓಡುವಿಕೆಯಲ್ಲಿ ಅವರು ತಮ್ಮನ್ನು ತಾವು ಕಳೆದುಕೊಳ್ಳುತ್ತಾರೆ. ಅವರ ಗಮ್ಯ ಅವರ ಕೈಗೆ ಸಿಗುವ ಮುನ್ನವೇ ಅವರು ಮತ್ತೊಂದು ಗಮ್ಯವನ್ನು ಅರಸಿ ಮುಂದೆ ಸಾಗುತ್ತಾರೆ… ಮುಂದೆ ಅವರ ಓಟಕ್ಕೆ ಯಾವುದೇ ಅರ್ಥ ಉಳಿಯುವುದಿಲ್ಲ.ಆದರೆ ಅಜ್ಜ… ಯಶಸ್ಸಿನ ಹಿಂದೆ ಓಡುವುದು ತಪ್ಪೇ ? ಸಂತೋಷವಾಗಿರಲು ಯಾವುದೇ ಯಶಸ್ಸಿನ ಅವಶ್ಯಕತೆ ಇಲ್ಲವೇ ? ಎಂದು ಶ್ಯಾಮ ಕೇಳಿದ   ಸಣ್ಣಗೆ ನಸು ನಕ್ಕು ತಲೆಯಾಡಿಸಿದ ಅಜ್ಜ ಹೀಗೆ ಹೇಳಿದ… ಸಂತೋಷವಾಗಿರಲು ಯಶಸ್ಸು ಬೇಕಾಗಿಲ್ಲ. ಅಷ್ಟಕ್ಕೂ ಯಶಸ್ಸು ಎಂಬುದು ಕೇವಲ ನೆರಳಿನಂತೆ. ಅದನ್ನು ನೀನೆಂದಿಗೂ ಹಿಡಿಯಲು ಆಗದು.ಈಗ ನನ್ನನ್ನೇ ನೋಡು. ಇದೀಗ ನನಗೆ ನಾನು ಓವರ್ ಟೈಮ್ ಮಾಡಿದ ದಿನಗಳು ನೆನಪಾಗುವುದಿಲ್ಲ. ಯಾವಾಗ ಕಾರು ಖರೀದಿಸಿದೆ ಎಂಬುದು ಕೂಡ ನೆನಪಿಲ್ಲ. ಆದರೆ ನಿನ್ನ ಅಜ್ಜಿ ಮಾಡಿದ ಸವಿರುಚಿ ಇನ್ನೂ ನನ್ನ ನಾಲಿಗೆಯಲ್ಲಿದೆ. ನಿನ್ನ ಅಜ್ಜಿಯೊಂದಿಗೆ ಒಡನಾಡಿದ ಪ್ರತಿಯೊಂದು ಮಾತುಗಳು ನನ್ನ ಮನದ ಆಳದಲ್ಲಿದೆ. ನಿನ್ನ ಅಪ್ಪ ನನ್ನ ಮಡಿಲಲ್ಲಿ ನಗುತ್ತಾ ಮಲಗಿದ ನೆನಪು ಈಗ ತಾನೇ ಎಂಬಂತೆ ಹಚ್ಚ ಹಸಿರಾಗಿದೆ.ಈ ಭೂಮಿಯ ಮೇಲೆ ಮಳೆ ಬಿದ್ದಾಗ ಅದರ ವಾಸನೆಗೆ ಮನ ಮುದಗೊಂಡಾಗ ನೆನಪುಗಳು ದಾಳಿ ಇಡುತ್ತವೆ.ಆದ್ದರಿಂದ ನಮ್ಮ ಬದುಕು ಧಾವಂತದಿಂದ ಓಡುವುದರಲ್ಲಿ ಇಲ್ಲ… ನಮ್ಮ ಬದುಕು ಇರುವುದು ನಾವು ಪ್ರಸ್ತುತ ಇರುವ ಗಳಿಗೆಯನ್ನು ನೆಮ್ಮದಿಯಿಂದ ಸವಿಯುವುದರಲ್ಲಿ ಎಂದು  ಹೇಳಿ ದೀರ್ಘವಾಗಿ ನಿಟ್ಟುಸಿರಿಟ್ಟ.ತನ್ನ ಕೈಯಲ್ಲಿರುವ ಪುಟ್ಟ ಕಲಾತ್ಮಕ ಪೆಟ್ಟಿಗೆಯನ್ನು ಶಾಮನ ಕೈಯಲ್ಲಿ ಇಡುತ್ತಾ ಅಜ್ಜ ಹೇಳಿದ… ಮಗು ಶಾಮ ಈ ಜಗತ್ತು ನಿನಗೆ ಸಾವಿರಾರು ವಸ್ತುಗಳನ್ನು ಮಾರಲು ಪ್ರಯತ್ನಿಸುತ್ತದೆ. ಅವುಗಳನ್ನು ಖರೀದಿಸಿದರೆ ಮಾತ್ರ ನೀನು ಸಂತೋಷವಾಗಿರುವೆ ಎಂಬ ನಂಬಿಕೆಯನ್ನು ನಿನ್ನಲ್ಲಿ ಹುಟ್ಟಿಸುತ್ತದೆ. ಆದರೆ.. ನಿಜ ಹೇಳಬೇಕೆಂದರೆ ನೀನು ಭೂತದ ನೆನಪಿನಲ್ಲಿ ಭವಿಷ್ಯದ ಭಯದಲ್ಲಿ ನಿನ್ನ ಬದುಕನ್ನು ಕಳೆಯಬೇಡ. ನಿನ್ನ ವರ್ತಮಾನದಲ್ಲಿಯೇ ನಿನ್ನ ಬದುಕಿದೆ ಈ ಘಳಿಗೆ ಮಾತ್ರ ನಿನ್ನದು. ಮುಂದೆಂದೂ ಸಿಗಬಹುದಾದ ಸುಖಕ್ಕೆ ನಿನ್ನ ಈ ದಿನವನ್ನು ಕಳೆದುಕೊಳ್ಳಬೇಡ. ನಿನ್ನ ಬದುಕಿನ ಪೆಟ್ಟಿಗೆಯನ್ನು ಅತ್ಯುತ್ತಮ ನೆನಪುಗಳೊಂದಿಗೆ ತುಂಬು ಉಸಿರುಗಟ್ಟುವಂತೆ ಓಡುವುದು ಖಂಡಿತ ಬೇಡ. ದೀರ್ಘವಾದ ಉಸಿರನ್ನು ನಿನ್ನ ಎದೆಯಾಳದಲ್ಲಿ ತುಂಬಿಕೊಂಡು ಅದನ್ನು ನಿಧಾನವಾಗಿ ಹೊರ ಹಾಕುತ್ತಾ ಜೀವನದ ಪ್ರತಿಯೊಂದು ಗಳಿಗೆಯನ್ನು ನಿನ್ನದಾಗಿಸಿಕೋ ಅದರ ಮಧುರವಾದ ಸವಿಯನ್ನು ಆಸ್ವಾದಿಸು  ಆಗ ಬದುಕು ನಿನಗೆ ಸದಾ ಸುಂದರವಾಗಿ ಕಾಣುತ್ತದೆ ಎಂದು ಅಜ್ಜ ಹೇಳಿದ.ಅಜ್ಜನ ಕೈಯಲ್ಲಿನ ಪೆಟ್ಟಿಗೆ ಇದೀಗ ಶಾಮನ ಕೈಗೆ ಹಸ್ತಾಂತರವಾಗಿದ್ದು ಇದೀಗ ಆತನ ಕಣ್ಣಿಗೆ ಅದು ಖಾಲಿ ಪೆಟ್ಟಿಗೆಯಾಗಿ ತೋರಲಿಲ್ಲ… ಅದು ನನಗಿರುವ ಬದುಕಿನ ಅವಕಾಶಗಳನ್ನು ತೋರುವ ಜಾದು ಪೆಟ್ಟಿಗೆಯಾಗಿ ಕಾಣಿಸಿತು.ನೋಡಿದಿರಾ ಸ್ನೇಹಿತರೆ ! ಈ ಕಥೆಯಿಂದ ನಮಗೆ ಅರಿವಾಗುವುದು ನಮ್ಮ ಬದುಕಿನಲ್ಲಿ ನಾವು ಬೆಲೆ ಕೊಡಬೇಕಾಗಿರುವುದು ಅತ್ಯುತ್ತಮ ವಸ್ತುಗಳಿಗೆ ಅಲ್ಲ… ವ್ಯಕ್ತಿಗಳಿಗೆ ಮತ್ತು ವ್ಯಕ್ತಿಗತ ಭಾವನೆಗಳಿಗೆ. ಬದುಕಿನ ಅದೆಷ್ಟೋ ಸಮಯವನ್ನು ನಾವು ಭೂತದ ಕನವರಿಕೆಯಲ್ಲಿ ಇಲ್ಲವೇ  ಭವಿಷ್ಯದ  ಚಿಂತೆಯಲ್ಲಿ ಕಳೆಯುತ್ತೇವೆ… ಈ ದಿನವನ್ನು ಜೀವಿಸಲು ಮರೆತುಬಿಡುತ್ತೇವೆ. ಎಲ್ಲರಿಗೂ ಇರುವಂತೆ ನಮಗೂ ಕೂಡ ದಿನಕ್ಕೆ 24 ಗಂಟೆಗಳು ಮಾತ್ರವೇ ಇರುತ್ತವೆ. ಶ್ರೀಮಂತನಾಗಿದ್ದ ಮಾತ್ರಕ್ಕೆ ಸಂತೋಷವಾಗಿರಲು ಸಾಧ್ಯವಿಲ್ಲ, ಎಲ್ಲಾ ಐಷಾರಾಮಗಳನ್ನು ಹೊಂದಿದ್ದವರು ಮಾತ್ರ ನೆಮ್ಮದಿಯ ನಿದ್ರೆಯನ್ನು ಮಾಡಲು ಸಾಧ್ಯವಿಲ್ಲ. ಸುಂದರವಾದ ಬದುಕನ್ನು ಸಾಗಿಸಲು ನಾವು ಮಹತ್ತರವಾದದನ್ನು ಸಾಧಿಸಬೇಕಾಗಿಲ್ಲ… ಕೇವಲ ವರ್ತಮಾನದಲ್ಲಿ ಜೀವಿಸುವುದನ್ನು ರೂಢಿಸಿಕೊಳ್ಳಬೇಕು. ಅತ್ಯಂತ ಸರಳವಾದ ಆಹಾರ ವಿಹಾರವನ್ನು ನಮ್ಮದಾಗಿಸಿಕೊಳ್ಳಬೇಕು. ಒಬ್ಬನೇ ಕುಳಿತು ಐಷಾರಾಮಿ ಹೋಟೆಲ್ ನಲ್ಲಿ  ಭೂರೀ ಭೋಜನ ಸವಿಯುವುದು  ಮನುಷ್ಯನಿಗೆ ಬೇಕಾಗಿಲ್ಲ…. ಬದಲಾಗಿ ನಿಮ್ಮನ್ನು ಅರ್ಥ ಮಾಡಿಕೊಂಡ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಸರಳವಾದ ಊಟ ಮಾಡಿದರೆ ಸಾಕು. ನಿಮ್ಮನ್ನು ಒತ್ತಡಕ್ಕೆ ಈಡು ಮಾಡುವ ಓಟದ ಸ್ಪರ್ಧೆಗಿಂತ ಸ್ನೇಹಿತರೊಂದಿಗೆ ಒಂದು ಪುಟ್ಟ ನಡಿಗೆ ಮನಸ್ಸಿಗೆ ನೆಮ್ಮದಿಯನ್ನು ತಂದುಕೊಡಬಲ್ಲದು.​ಸಂತೋಷ ಎನ್ನುವುದು ನೀವು ಅಂತಿಮವಾಗಿ ತಲುಪುವ ಗುರಿಯಲ್ಲ… ಅದು ನೀವು  ನಡೆಯುವ ಹಾದಿಯಲ್ಲಿ ಕಂಡು ಬರುವ ಎಲ್ಲಾ ಚಿಕ್ಕ ಪುಟ್ಟ ವಿಷಯಗಳನ್ನು ಆಸ್ವಾದಿಸುತ್ತಾ ಮುಂದೆ ಸಾಗುವ ಮನಸ್ಥಿತಿ. ನಿಮ್ಮ ಆಯ್ಕೆಯ ಹೆದ್ದಾರಿ ನಿಮ್ಮದಾಗಲಿ…ಏನಂತೀರಾ? ವೀಣಾ ಹೇಮಂತ್ ಗೌಡ ಪಾಟೀಲ್  ́

“ಅತಿ ಅವಸರ ಸಲ್ಲದು” ವೀಣಾ ಹೇಮಂತ್ ಗೌಡಪಾಟೀಲ Read Post »

ಕಾವ್ಯಯಾನ, ಗಝಲ್

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಗಜಲ್(ಅರುಣಾ ಮೇಡಂ ಅವರ ಗಜಲ್ ನಿಂದ ಪ್ರೇರಿತ ) ಅಂತರವಿದ್ದರೂ ಅಂತರಂಗ ಸೇರುವ ನಿನ್ನ ಕಲೆಗೆ ಏನೆನ್ನಲಿಇರುಳಾದರೆ ಕಣ್ಣ ಸೇರಿ ಕನಸಾಗುವ ಪರಿಗೆ ಏನೆನ್ನಲಿ ನಾ ನೋಡಿದರೇ, ನಾನೇ ಕಾಣಿಸಬೇಕಲ್ಲವೇ ಸಾಕಿದರ್ಪಣದಿ ನೀ, ನನ್ನ ಪ್ರತಿಬಿಂಬವಾಗುವ ಪ್ರೀತಿಗೆ ಏನೆನ್ನಲಿ ಮೌನವೂ,ಪದಗಳಾಗಿ ಮನ ಸೇರಲು ಹಪಹಪಿಸುವವೇನನ್ನ ಏಕಾಂತಕೆ,ನೀ ದನಿಯಾಗುವ ನಡೆಗೆ ಏನೆನ್ನಲಿ ಪ್ರತಿ ನೋವಿಗೂ ಹಕೀಮನಲ್ಲಿ ಔಷಧಿಯಿರುವುದಿಲ್ಲ ನಿಜನೀ ಕಾಣದ ಗಾಯಗಳನೂ ಮಾಯಿಸುವ ಮೋಡಿಗೆ ಏನೆನ್ನಲಿ ಬಿಸಿಲಿಗೆ ವಾಣಿ ನಿಂತರೇ,ನೀ ಬೆವರುವೆಯಾ ಗೆಳೆಯದೂರವಿದ್ದು ಹೀಗೆ ಸನಿಹವಾಗುವ ಸನ್ನೆಗೆ ಏನೆನ್ನಲಿ ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ

“ನಮಗ ಮಳೆ ಯಾಕ ಬೇಕು” ಡಾ.ಶಿವಕುಮಾರ್ ಮಾಲಿಪಾಟೀಲ

ಕಾವ್ಯ ಸಂಗಾತಿ ಡಾ.ಶಿವಕುಮಾರ್ ಮಾಲಿಪಾಟೀಲ “ನಮಗ ಮಳೆ ಯಾಕ ಬೇಕು” *ಫಲವತ್ತಾದ ಭೂಮಿ ರಿಯಲ್ ಎಸ್ಟೇಟ್ ಮಾಡಿವಿ**ಹೊಲ ಗದ್ದೆ ಮುಚ್ಚಿ ಬಂಗಲೆ ,ಬಾರ್ ಕಟ್ಟಿವಿ**ಕೆರೆ,ಬಾವಿ ಮುಚ್ಚಿ ಮೆಟ್ರೋಮಾಲ್ ಕಟ್ಟಿವಿ**ಇನ್ವೆಸ್ಟ್ ಕರ್ನಾಟಕ ಹೆಸರಲ್ಲಿ ಬಂಡವಾಳ ಶಾಹಿಗಳಿಗೆ  ಸಾವಿರಾರು ಎಕರೆ ಭೂಮಿ ಕೊಟ್ಟಿವಿ ಹಿಂಗಿದ್ದಾಗ**ನಮಗ ಮಳೆ ಯಾಕೆ ಬೇಕು?*  *ವಿಂಡ್ ಪ್ಯಾನ್ , ಸೋಲಾರ್*,*ರಿಯಲ್ ಎಸ್ಟೇಟ್ , ರೇಸಾಲ್ಟ್ ಫ್ಯಾಕ್ಟರಿಗಳ ಹೆಸರಲಿ ಹೊಲ ಬರಡು ಮಾಡಿವಿ**ಅಭಿವೃದ್ಧಿ ಹೆಸರಲ್ಲಿ ಸಿಕ್ಕ ಸಿಕ್ಕಂಗ ಗಿಡ ಮರಗಳ ಕಡದಿವಿ**ಹಿಂಗಿದ್ದಾಗ  ನಮಗ ಮಳೆ ಯಾಕೆ ಬೇಕು?* *ಹಳ್ಳಿ ಯಾರಿಗೆ ಬೇಕಾಗೈತಿ?**ಊರು ಗೌಡನಿಗೆ ನಗರದಲ್ಲಿ ಸೆಕ್ಯೂರಿಟಿ ಗಾರ್ಡ ನೌಕರಿ ಸಿಕ್ಕೈತಿ**ನಾಯಕರು ನೀರಾವರಿ ಇಲಾಖೆ ಬೇಡ ,  ನಗರಾಭಿವೃದ್ಧಿ ಇಲಾಖೆ ಬೇಕು ಅಂತಾರ ಹಿಂಗಿದ್ದಾಗ  ನಮಗ ಮಳೆ ಯಾಕ ಬೇಕು?* *ದನ ಕರು , ಹೈನದ ಚಿಂತಿಯಾಕ*,*ಹಾಲು ಮೊಸರು ತುಪ್ಪ  ಪ್ಯಾಕೇಜ್ ನಲ್ಲಿ ಸಿಗತೈತೆ**ಹಬ್ಬದಾಗ ಸೆಗಣಿ ಬೇಕೆಂದರೆ online ನಲ್ಲಿ ಸಿಗತೈತೆ**ಒಕ್ಕಲುತನ ಎಲ್ಲರಿಗೂ ಬ್ಯಾಡ ಆಗೈತೆ ಹಿಂಗಿದ್ದಾಗ  ನಮಗ ಮಳೆ ಯಾಕೆ ಬೇಕು?* *ಯೋಚಿಸುವುದಕ್ಕೆ AI ,ChatGPT ಐತೆ**ಕೆಲಸ ಮಾಡಾಕ Robots ಅದಾವು**ಬದುಕಲು ಸರಕಾರ ಉಚಿತ ಭಾಗ್ಯಗಳ ಕೊಟ್ಟೈತೆ*,*ಮಹಿಳೆಯರು ತಿರಿಗ್ಯಾಡಲು ಬಸ್ ಫ್ರೀ ಬಿಟ್ಟೈತೆ**ಅಡಿಗೆ ಮಾಡೋದೆ ಬೇಕಿಲ್ಲ , Zomato ,Swiggy ಹೊಟ್ಟೆ ತುಂಬಿಸಿ ಬಿಡತಾವು**ಹಿಂಗಿದ್ದಾಗ  ನಮಗ ಮಳೆ ಯಾಕ ಬೇಕು?* *ಕುಡಿಯಾಕ ನೀರು ಬೇಕೆಂದರೆ**ಖಗ್ರಾಸ ಹಳ್ಯಾಗು  ಬಾಟಲ್ ನೀರು ಸಿಗತೈತೆ**ನೀರ ಸಿಗದಿದ್ದರೂ ಬೀರಂತು ಸಿಕ್ಕ ಸಿಗತೈತೆ**ಸರಕಾರ ಮುಜರಾಯಿ , ಸರಾಯಿ ಹಣ ಮೇಲೆ ನೆಡಿತೈತೆ ಅಂದರೆ  ನಮಗ ಮಳೆ ಯಾಕ ಬೇಕು?* *ರೊಕ್ಕ ಬೇಕೆಂದರೆ ಪೊನ್ ಪೇ , ಗೂಗಲ್ ಪೇ ಐತೆ**ಟೈಮ್ ಪಾಸ್ ಮಾಡಾಕ* *WhatsApp ,FB , Instagram ಐತೆ ,reels ಮಾಡಿ ಬಿಡಾಕ social media ಐತೆ* *ಜನರು ಜಗಳಾಡಾಕ ಜಾತಿ ಧರ್ಮ ಅದಾವು**ಹಸಿರು , ಕೆಸರಿನಲ್ಲಿ ನಾಯಕರಿಗೆ ಅಧಿಕಾರ ಸಿಗತೈತೆ**ಬರಗಾಲ ಬಂದರೂ ಅನುದಾನ ಸಿಗತೈತೆ ಹಿಂಗಿದ್ದಾಗ  ನಮಗ ಮಳೆ ಯಾಕ ಬೇಕು?* ಡಾ.ಶಿವಕುಮಾರ್ ಮಾಲಿಪಾಟೀಲ 

“ನಮಗ ಮಳೆ ಯಾಕ ಬೇಕು” ಡಾ.ಶಿವಕುಮಾರ್ ಮಾಲಿಪಾಟೀಲ Read Post »

ಇತರೆ, ಲಹರಿ

“ಈ ಜಗತ್ತಿನಲ್ಲಿ ಸತ್ಯ ಗೋಚರಿಸುವುದಿಲ್ಲ……!”  ಐಗೂರು ಮೋಹನ್ ದಾಸ್ ಜಿ.                    

ವಿಶೇಷ ಸಂಗಾತಿ ಐಗೂರು ಮೋಹನ್ ದಾಸ್ ಜಿ.                     “ಈ ಜಗತ್ತಿನಲ್ಲಿ ಸತ್ಯ ಗೋಚರಿಸುವುದಿಲ್ಲ……!”   ದಾರಿ ದೀಪ :                                                               ಅವಳು…..!ಅವಳು…..! ಕೇವಲ ನನ್ನ ಗೆಳತಿ… ಪ್ರಾಣಸಖಿ ಮಾತ್ರವಾಗಿರಲಿಲ್ಲ….! ಆ ಪ್ರಿಯಾ ನನ್ನ ದಾರಿ ದೀಪ ಸಹ ಆಗಿದ್ದಳು….! ದಾರಿ ತಪ್ಪಿ ಹೆಜ್ಜೆ ಹಾಕುವ ವೇಳೆ ಎಲ್ಲಾ ಎಚ್ಚರಿಕೆಯ ‘ ಗಂಟೆ’ ಬಾರಿಸಿ ನನ್ನನ್ನು ಎಚ್ಚರಿಸುತ್ತಿದ್ದಳು..!ಹೆಚ್ಚಿನ ಮಾತುಕತೆ ಇಲ್ಲಾದೇ ಇದ್ದರೂ, ‘ಮೋರಿ ಕಟ್ಟೆ’ಯ ಮೇಲೆ ಕುಳಿತುಕೊಂಡ ವೇಳೆ, ನನ್ನ ಮುಖ ನೋಡಿ ಹೇಳುತ್ತಿದ್ದ ಎಲ್ಲಾ ‘ಭವಿಷ್ಯ’ಗಳು ಸತ್ಯವಾಗುತ್ತಿತ್ತು…! ಆದರೂ ನಾನು ಅವಳನ್ನು ನಂಬಲಿಲ್ಲ…!ನಾನು ನನ್ನ ಲೋಕದಲ್ಲಿಯೇ ಮುಳುಗಿ ಬಿಟ್ಟೆ….!!   .                                   ದಿನ… ವಾರ… ತಿಂಗಳು…. ವಷ೯…. ಎಂದು ಸಮಯ ಸಾಗಿದ್ದು ನನಗೆ ತಿಳಿಯಲೇ ಇಲ್ಲ…! ಏಕೆಂದರೆ ನಾನು ‘ಗಂಟೆ’ ನೋಡಿ ಕೆಲಸ ಮಾಡುವ ವ್ಯಕ್ತಿವಾಗಿರುವುದಿಲ್ಲ…! ಕೆಲಸ ಮುಗಿಸಿ ಗಂಟೆ      ನೋಡುವ ಪಾಳು ಜನ್ಮ….! ಕಾಲಿಗೆ ಹಾಕಿಕೊಂಡಿರುವ ಚಪ್ಪಲಿ ಸವೆದು ಹೋಗುತ್ತಿದ್ದರೂ, ಮನದಲ್ಲಿ ಕಂಡ ಕನಸುಗಳನ್ನು ನನಸು ಮಾಡುಲು ಓಡುತ್ತಿರುವ ಬ್ರೇಕ್ ಇಲ್ಲಾದ ಗಾಡಿ….!                                                                 ಈ ವೇಳೆಗೆ ಪ್ರಿಯಾ ನನ್ನ ಬಾಳಿನಿಂದ ದೂರವಾಗಿ ಬಿಟ್ಟಳು…! ನಾನು ಸಾಗುತ್ತಿದ್ದ ಹಾದಿಯಲ್ಲಿ ಬೆಳಕು ಇರಲಿಲ್ಲ…!ಹಗಲು ಕಂಡ ಬಾವಿಯಲ್ಲಿಯೇ ರಾತ್ರಿ ಬೀಳುತ್ತಿದ್ದೆ…! ಆದರೂ ನನಗೆ ಬುದ್ಧಿ ಬರುತ್ತಿರಲಿಲ್ಲ…! ನನ್ನ ದಡ್ಡ ಕೆಲಸಗಳಿಂದ ಬಹು ಬೇಗಾನೆ ‘ಪೆದ್ದ ಶಿಖಾಮಣಿ’ ಎಂಬ ಬಿರುದು ನನಗೆ ಸಿಕ್ಕಿ ಬಿಟ್ಟಿತ್ತು…!ನಾನು ಮತ್ತು ಪ್ರಿಯಾ ನಡುವೆ ಯಾವುದೇ ಭೇಟಿ ಮತ್ತು ಮಾತುಕತೆ ಇಲ್ಲಾದಿದ್ದರೂ ಕೆಲ ದಿನಗಳಿಂದ ಕನಸಿನಲ್ಲಿ ಬಂದು, ಕೆಲ ನೀತಿ ಕಥೆಗಳನ್ನು ಹೇಳುತ್ತಾ, ನನಗೆ ಜ್ಞಾನೋದಯವಾಗಲು ಪ್ರಯತ್ನ ಮಾಡುತ್ತಿದ್ದಳು….!                                                ನಾವು ಯಾವುದೇ ಮಂದಿಯನ್ನು ಈ ಭೂಮಿಯಲ್ಲಿ  ಕಣ್ಣು ಮುಚ್ಚಿ ನಂಬಬಾರದು…!ನಮ್ಮ ‘ ನಂಬಿಕೆ’ಯೂ ರಾಜಕೀಯ ಪಕ್ಷಗಳ ಆಶ್ವಾಸನೆಗಳಂತೆ ಢಮಾರ್ ವಾಗ   ಬಹುದು…! ಆಗ ಸುಮ್ಮನೆ ದುಃಖಿಸಿ ಪ್ರಯೋಜನ ಇಲ್ಲ…! ಕೆಲವೊಂದು ವಿಚಾರಗಳಲ್ಲಿ ನಮ್ಮ ಕಣ್ಣುಗಳನ್ನು ಸಹ ನಂಬು ವಂತೆ ಇಲ್ಲ….! ಈ ವಿಚಾರ ಕುರಿತು ಒಂದು ಕಥೆಯನ್ನು ಪ್ರಿಯಾ ನನಗೆ ಕೆಲ ದಿನಗಳ ಹಿಂದೆ ಹೇಳಿದ್ದಳು…! ಆ ಕಥೆ ಈಗ ನಿಮಗಾಗಿ…. !!        ಒಂದು ಏಡಿ ಸಮುದ್ರ ತೀರದ ಮರಳಿನಲ್ಲಿ ಹೆಜ್ಜೆ ಹಾಕುತ್ತಿತ್ತು…. ಸುಮಾರು ದೂರ ಸಾಗಿದ ಮೇಲೆ ಏಡಿ ಒಮ್ಮೆ ತಿರುಗಿ ನೋಡಿದಾಗ, ಮರಳಿನಲ್ಲಿ ತನ್ನ ಕಾಲಿನ ಗುರುತುಗಳಿಂದ ರಚನೆಯಾಗಿರುವ ‘ಕಲಾಕೃತಿ’ಯನ್ನು ನೋಡಿ ಮನಸ್ಸಿಗೆ ಬಹಳ ಖುಷಿ ಮತ್ತು ಹೆಮ್ಮೆ ಎನ್ನಿಸಿತ್ತು..! ತಾನು ಒವ೯ ‘ಕಲಾವಿದ ‘ ಎಂದು ಏಡಿ ಭಾವಿಸಿತ್ತು…! ಆದರೆ ಈ ಸಂತೋಷ ಹೆಚ್ಚು ಸಮಯ ಉಳಿಯಲಿಲ್ಲ..!ಏಕೆಂದರೆ ದೊಡ್ಡ ಸಮುದ್ರ ಅಲೆಯೊಂದು ಅಪ್ಪಳಿಸಿ , ಈ ಏಡಿಯ ಸುಂದರವಾದ ಹೆಜ್ಜೆ ಗುರುತುಗಳ ಕಲಾಕೃತಿಯನ್ನು ಮಾಯ ಮಾಡಿಯೇ ಬಿಟ್ಟಿತ್ತು…!ಆಗ ಏಡಿಯೂ ಬಹಳ ಮನನೊಂದು ಸಮುದ್ರದ ಬಳಿ ಕೇಳಿಯೇ ಬಿಟ್ಟಿತ್ತು.     “ನಾನು ನಿನ್ನನ್ನು ಬಹಳ ಪ್ರೀತಿಸುತ್ತಿದ್ದೆ…. ನಾನು ನಿನಗೆ ಯಾವುದೇ ದ್ರೋಹಗಳನ್ನು ಮಾಡಿಯೇ ಇಲ್ಲ….! ನೀನು ಇಂತಹ   ‘ಅನ್ಯಾಯ’ವನ್ನು, ನನಗೆ ಮಾಡಬಹುದು   ಎಂದು ಮನಸ್ಸಿನಲ್ಲಿ ಒಮ್ಮೆಯೂ ಕಲ್ಪನೆ ಸಹ ಮಾಡಿಕೊಂಡಿರಲಿಲ್ಲ.. ಆದರೆ ನನ್ನ ಕಲಾಕೃತಿಗಳನ್ನು ನೋಡಿ ನಿನಗೆ ‘ಅಸೂಯೆ’ ಬರಲು ಕಾರಣ ಏನು….?”.     ಆಗ ಸಮುದ್ರ ನಗುತ್ತಾ ಸರ್ವ ಪ್ರಶ್ನೆಗಳಿಗೂ ಶಾಂತವಾಗಿ ಉತ್ತರಿಸ ತೊಡಗಿತ್ತು…!     “ನೀನು ನನ್ನನ್ನು ತಪ್ಪಾಗಿ ತಿಳಿದುಕೊಂಡಿರುವೆ…. ನನಗೆ ನಿನ್ನ ಮೇಲೆ ಯಾವುದೇ ಅಸೂಯೆ- ಕೋಪ ಇಲ್ಲ..! ನೀನು ಮರಳಿನಲ್ಲಿ ನಿನ್ನ ಕಾಲುಗಳಿಂದ ರಚಿಸಿರುವ ಕಲಾಕೃತಿಯನ್ನು ನೋಡಿ, ಬೇರೆಯೊಂದು ಪ್ರಾಣಿ ನಿನ್ನನ್ನು ಹಿಡಿದು, ತಿಂದು ಮುಗಿಸಲು ಬರುವುದನ್ನು ನೋಡಿ, ನಿನ್ನ ಹೆಜ್ಜೆ ಗುರುತುಗಳನ್ನ ಅಳಿಸಿ, ನಿನ್ನ ಜೀವವನ್ನು ಉಳಿಸಿದೆ ಅಷ್ಟೇ…!” ಎಂದು ಸಮುದ್ರ ಹೇಳಿದನ್ನು ಕೇಳಿದಾಗ, ಏಡಿಗೆ ತನ್ನ ಅಜ್ಞಾನ ಮತ್ತು ತಪ್ಪಿನ ಅರಿವು ತಿಳಿಯಿತ್ತು… ಕೃತಜ್ಞತೆ ಭಾವದಿಂದ ಏಡಿಯೂ ಸಮುದ್ರಕ್ಕೆ ಕೈ ಮುಗಿದು ಮುಂದಕ್ಕೆ ಸಾಗಿತ್ತು…!  ಈ ಭೂಮಿಯಲ್ಲಿ ಬದುಕು ಸಾಗಿಸುತ್ತಿರುವ ಪ್ರತಿಯೊಂದು ಜೀವಿಗಳಿಗೂ ಒಂದು ‘ನಗ್ನ ಸತ್ಯ’ ಗೊತ್ತಿರಲೇಬೇಕು….!      “ನಮ್ಮ ಕಣ್ಣುಗಳು ಕಾಣುವುದು ಎಲ್ಲಾ ಸತ್ಯವಾಗಿರುವುದಿಲ್ಲ…..! ಸತ್ಯವಾಗಿರುವುದು ಎಲ್ಲಾ ಕಾಣುವುದು ಸಹ ಇಲ್ಲ….!!!.”. ಐಗೂರು ಮೋಹನ್ ದಾಸ್ ಜಿ.                             

“ಈ ಜಗತ್ತಿನಲ್ಲಿ ಸತ್ಯ ಗೋಚರಿಸುವುದಿಲ್ಲ……!”  ಐಗೂರು ಮೋಹನ್ ದಾಸ್ ಜಿ.                     Read Post »

ಕಾವ್ಯಯಾನ

ಪರವಿನಬಾನು ಯಲಿಗಾರ “ನಮ್ಮ ಬದುಕೆಂಬ ಬಾನು”

ಕಾವ್ಯ ಸಂಗಾತಿ ಪರವಿನಬಾನು ಯಲಿಗಾರ “ನಮ್ಮ ಬದುಕೆಂಬ ಬಾನು” ಅಪ್ಪಾ ಹಗಲಿನ ಸೂರ್ಯನಂತೆ ,ಸಲಿಗೆ , ಸಾಮೀಪ್ಯ ಇರದ ,ಹತ್ತಿರ ಹೋಗಲು ಒಂದು ರೀತಿಯ ಭೀತಿ ,ಮಾತಿನಲ್ಲಿ ಬಿಗಿಯಾದ ಗತ್ತು , ಗಾಂಭೀರ್ಯ.ಒಮ್ಮೆ ತಣ್ಣಗಿನ ಮುಖ ಛಾಯೆ ,ಮರು ಘಳಿಗೆ ಕೆಂಡಾಮಂಡಲ ,ಆದರೂ ಅವನಿಲ್ಲದೆ ಬಾನು ಇಲ್ಲಬದುಕು ಇಲ್ಲ……. ಅವ್ವಾ ರಾತ್ರಿಯ ಚಂದಿರನಂತೆ ,ಸದಾ ಸುಸೂವ ಚಂದ್ರಿಕೆಯ ತಂಪು ,ಮಂದವಾಗಿ ಬೆಳಗುವಳು ನಿರಂತರ .ಎಂದೂ ಕುಪಿತಳಾಗದ ಹಸನ್ಮುಖಿ ,ಮಕ್ಕಳನು ಮುದ್ದಿಸಿ , ಬಾಚಿ ತಬ್ಬುವಳು ,ಅಪ್ಪಾ ಇದ್ದಾಗ ಅವಳಿಗೆ ಸ್ವತಂತ್ರ ಇಲ್ಲ……. ನಾವು ಮಕ್ಕಳು ಅವರಿಬ್ಬರ ಬೆಳಕಿನಲ್ಲಿನಲಿಯುವ ತಾರೆಗಳು.ಅಪ್ಪನ ಆಸರೆ ಹಗಲಿಗೆ ,ಅವ್ವನ ಆಸರೆ ಇರುಳಿಗೆ ,ಇಬ್ಬರು ಇದ್ದರೆ ಮಾತ್ರನಮ್ಮ ಅಸ್ತಿತ್ವ ಜೀವ ಕಳೆ …… ಬಾಳ ಬಾನಿನ ಸುಖಿ ಕುಟುಂಬನಮ್ಮದೇಂಬ ಹೆಮ್ಮೆ ನನ್ನದು…..                                    . ಪರವಿನಬಾನು ಯಲಿಗಾರ

ಪರವಿನಬಾನು ಯಲಿಗಾರ “ನಮ್ಮ ಬದುಕೆಂಬ ಬಾನು” Read Post »

You cannot copy content of this page

Scroll to Top