ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಮನದ ಮಾತುಗಳು

ಅಂಕಣ ಸಂಗಾತಿ ಮನದ ಮಾತುಗಳು ಜ್ಯೋತಿ ಡಿ.ಬೊಮ್ಮಾ ಸುಲಗ್ನ ಸಾವಧಾನ.. ಈ ವರ್ಷದ ಬ್ಯಾಸಗಿ ಧಗಿಗಿ ನಮ್ಮ ಉತ್ತರ ಕರ್ನಾಟಕ ದ ಮಂದಿ ಒಣಗಿದ ಹಪ್ಪಳಂಗ ಆಗಿಬಿಟ್ಟಿವಿ. ಸದಾ ಬಿಸಿಲು ಧಗಿದಾಗೆ ಇರೋ ನಮಗೂ ಈ ವರ್ಷ ಬಿಸಿಲಿನ ತಾಪ ಬಾಳ ಸಾಕಮಾಡ್ತು.ಮಳಿ ಬಂದ್ರೂ ನಮ್ಮ ಕಡಿ ಧಗಿ ಕಮ್ಮಿ ಆಗಲ್ಲ.ಇನ್ನೂ ಹೆಚ್ಚೆ ಆಗತದ.ಕಾದ ಹಂಚಿನ ಮ್ಯಾಲ್ ನೀರು ಸುರುದ ಮ್ಯಾಲ ಬರೋ ಉಗ ಹ್ಯಾಂಗ್ ಶಾಖ ಕೊಡತದ , ಆ ನಮೂನಿ ಮಳಿಗಾಲದ ಧಗಿ ಇರತದ. ಇದರೊಂದಿಗೆ ಬದುಕು ಸಾಗತಿರತದ.ಪ್ರಕೃತಿ ಅದರ ಕೆಲಸ ಮಾಡತಿರತದ.ಅದರೊಂದಿಗೆ ನಮ್ಮ  ಬದುಕು ಸಾಗತಿರತದ.ಈ ವರ್ಷ ಬ್ಯಾಸಗಿದಾಗ ಮದುವೆಗಳ ಭರಾಟಿ ಬಾಳ ಇತ್ತು.ವಯಸ್ಸಿಗಿ ಬಂದ ಮಕ್ಕಳಿಗಿ ಮದುವೆ ಮಾಡೊದು ಒಂದು ದೊಡ್ಡ ಜವಾಬ್ದಾರಿ ಹೆತ್ತವರಿಗಿ.ಮದುವಿ ಆದ ಮ್ಯಾಲ ಜವಾಬ್ದಾರಿ ಮುಗಿತು ಅಂದುಕೊಳ್ಳೊದೆ ತಪ್ಪು ಅನಸ್ತದ. ಮದುವೆ ಮಾಡ್ದ ಮ್ಯಾಲ್ ಜವಾಬ್ದಾರಿ ಹೆಚ್ಚಿಗೆ ಆಗ್ತಾವ ಹೊರತು ಕಮ್ಮಿ ಆಗಲ್ಲ. ನೌಕರಿ ಮಾಡೊ ಹೆಣ್ಣಮಕ್ಳು ಇದ್ರ ಅವರ ಮಕ್ಕಳಿಗೆ ನೊಡಕೊಂಡ್ರ ಅವರಿಗಿ ನೌಕರಿ ಮಾಡಲಕ್ಕ ಸಾದ್ಯ.ಇಲ್ಲಂದ್ರ ಮಕ್ಕಳು ಮನಿ ನೌಕರಿ ಇವೆಲ್ಲ ಹೊಂದಿಸಲಕ್ಕ ಬಡಿದಾಡಿ ಮಾನಸಿಕ ನೆಮ್ಮದಿ ಕಳಕೊಂಡು ಸಂಸಾರದಲ್ಲಿ ಜಗಳ ಸುರು ಆಗತವ. ಹಾಗಂತ ಹೆಣ್ಣುಮಕ್ಕಳು ಬರಿ ಮಕ್ಕಳು ಹಡ್ದು ಮಕ್ಕಳಿಗಿ ಆರೈಕೆ ಮಾಡಕ್ಕೊಂತ ಮನ್ಯಾಗೆ ಇರಬೆಕಂದ್ರೂ ಈಗಿನ ಕಾಲದಾಗ ಅದು ಸಮಂಜಸ ಅನಸಲ್ಲ.ಪ್ರತಿಯೊಬ್ಬ ಹೆಣ್ಣಮಗಳು ಸ್ವಾವಲಂಬಿ ಆಗಿರಬೇಕು.ಹಿಂದಿನ ಕಾಲದಾಗ ಗಂಡು ಹೊರಗ ದುಡಿಬೇಕು ಹೆಂಗಸು ಮನ್ಯಾಗ ದುಡಿಬೇಕು ಎಂಬ ನಿಯಮ ಇತ್ತು.ಈಗಿನ ಕಾಲದಾಗ ಗಂಡನ ದುಡಮೆ ಒಂದೇ ಸಾಕಾಗಲ್ಲ.ಇಬ್ಬರೂ ದುಡಿದ್ರ ಮಾತ್ರ ಆರ್ಥಿಕ ಹೊರೆ ಕಮ್ಮಿ ಆಗತದ. ಅದಕ್ಕ ಈಗಿನ ಜನರೇಷನ್ ನವ್ರು ಮದುವೆನು ಬ್ಯಾಡ ಮಕ್ಳು ಬ್ಯಾಡ ಎಂಬ ನಿರ್ಣಯಕ್ಕ ಬರತಿದ್ದಾರ. ಮದುವೆ ಮಾಡಿಕೊಂಡು ಅವರು ಗಂಡ ಹೆಂಡತಿಯಾಗಿ ಮಕ್ಳು ಹುಟ್ಟಿಸಿ ಅವರಿಗಿ ಬೇಕಾದ ಸವಲತ್ತುಗಳನ್ನು ಕೊಟ್ಟು ತಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳುವದು ಈಗಿನ ತಲೆಮಾರುಗಳಿಗೆ ಅಷ್ಟು ಸುಲಭ ಅಲ್ಲ. ಗಂಡ ಹೆಂಡತಿ ಎಂಬ ಹೊಂದಾಣಿಕೆ ಕೊರತೆ ಬಾಳ ಅದ.ಇಬ್ಬರೂ ಸ್ವಾವಲಂಬಿ ಗಳು ಇದ್ದರಂತೂ ನಡುವೆ ಸ್ವಾಭಿಮಾನ ತುಸು ಹೆಚ್ಚೆ ಇರತದ. ಹೆತ್ತವರ ಬುದ್ದಿಮಾತು ಕೇಳದಷ್ಟು ಸ್ವನಿರ್ಧಾರ ಮಕ್ಕಳು ತಗೊಳತಾರ. ಸಂಸಾರದಲ್ಲಿ ಎರುಪೇರು ಶುರುವಾದ್ರ ತಪ್ಪು ಯಾರ್ದುಎಂದು ನಿರ್ಣಯ ಕ್ಕ ಬರಲಾರದಂತ ನೆಪಗಳು ಇಬ್ಬರಲ್ಲೂ ಇರತಾವ.ಆಗ ಯಾರಿಗೆ ಬುದ್ದಿ ಹೇಳಬೇಕು..! ಇಂತಹ ಸಂದರ್ಭದಾಗ ಹೆಣ್ಣು ಮಕ್ಕಳಿಗೆ ಬುದ್ದಿ ಹೇಳೊದು ಸಹಜ.ಹೊಂದಿಕೊಂಡು ಹೋಗು , ತಾಳಕೊಂಡು ಹೋಗು , ಗಂಡ ಅಂದ್ರ ಅನಸ್ಕೋಬೇಕು..ಇವೆಲ್ಲವೂ ಹಿಂದಿನಿಂದ ಮಗಳಿಗಿ ಹೇಳೊ ಬುದ್ದಿವಾದಗಳು. ಅಂತಹ ಸಂದರ್ಭದಾಗ ಹೆಣ್ಣಮಗಳಿಗೆ ಬ್ಯಾರೆ ದಾರಿ ಇರಲ್ಲ.ಈ ಕಡಿ ಗಂಡನ ಮನ್ಯಾಗೂ ಇರಲಾರ್ಧ ತವರು ಮನಿಗೂ ಬರಲಾರ್ದ ಸಂದಿಗ್ಧ ಪರಿಸ್ಥಿತಿ ಯೊಳಗ ಆತ್ಮಹತ್ಯೆ ಅಂತಾ ನಿರ್ಧಾರಕ್ಕ ಬಂದು ಬಿಡತಾರ. ಒಬ್ಬ ಹೈಕೋರ್ಟ್ ಜಡ್ಜ ಹೇಳಿದ್ರು ಸಾಯೋ ಮಗಳಿಗಿಂತ ವಿಚ್ಚೇದಿತ ಮಗಳು ಇರಲಿ ಅಂತ.ಕೌಟುಂಬಿಕ ಕಲಹದಿಂದ ಹೆಣ್ಣಮಕ್ಳು ಯಾರ ಸಪೋರ್ಟ್ ಮಾನಸಿಕವಾಗಿ ನೊಂದು  ಸಾಯೊ ಅಂತಾ ನಿರ್ಧಾರ ತಗೊತಾರ.ಆ ನಿರ್ಧಾದ ಅವರ ಮನಸ್ಸಿನಾಗ ಗಟ್ಟಿ ಆಗಲಿಕ್ಕೆ ಬಿಡಲಾರ್ದೆ ತಂದೆ ತಾಯಿಗಳು ನಾವು ಇದ್ದೆವೆ ಎಂಬ ಧೈರ್ಯ ಆದ್ರು ಮಗಳಿಗಿ ಕೊಡಬೇಕು.ಕೊಟ್ಟ ಹೆಣ್ಣು ಕುಲಕ್ಕ ಹೊರಗ ಅಂತ ಅವಳಿಗಿ ಗಂಡನ ಆಸರೆ ಇಲ್ದೆ , ತವರಿನ ಆಸರೆ ಇಲ್ದೆ ಅವಳು ಸಾಯೋ ನಿರ್ಧಾರ ಮಾಡತಾಳ.ಈಗಿನ ಮಕ್ಕಳಿಗೆ ಸಾಯೊ ನಿರ್ಧಾರಕ್ಕ ಬರೊದು ಎಷ್ಟು ಸುಲಭ ಆಗಿಬಿಟ್ಟದ..! ಜೀವನದ ಒಂದಿಷ್ಟು ಕಷ್ಟಗಳು ಸಹಿಸಲಕ್ಕ ಆಗಲ್ಲ ಎಂಬ ಮನಸ್ಥಿತಿ ಗಿ ಬಂದ ಬಿಟ್ಟಾರ. ಸ್ವಲ್ಪ ಕೂಡ ಜೀವನದಾಗ ಏರುಪೇರಾದ್ರೂ ಆತ್ಮಹತ್ಯೆ ಮಾಡ್ಕೋತಾರ.ಈಗಿನ ಮಕ್ಕಳ ಮನಸ್ಥಿತಿ ಅಷ್ಯಾಕ ದುರ್ಬಲ ಆಗಬಿಟ್ಟದ. ಬರಿ ಹೆಣ್ಣಮಕ್ಖೆ ಅಲ್ಲ ಸಂಸಾರದ ಗಲಾಟೆದಾಗ ಗಂಡುಮಕ್ಳು ಕೂಡಾ ಆತ್ಮಹತ್ಯೆ ಮಾಡಕ್ಕೊಳ್ಳತಿದ್ದಾರ.ಹೆಂಡತಿ ಬಿಟ್ಟು ಹೋದ್ಳು ಅಂತಲೋ , ಮತ್ತೊಬ್ಬ್ರರ ಜೋತೆ ಸಂಭಂಧ ಅದ ಅಂತಲೋ  , ಜಗಳ ಆಡ್ತಾಳೆ ಅಂತಲೋ , ಪದೆ ಪದೇ ತವರ ಮನಿಗಿ ಹೋಗತಾಳ ಅಂತಲೋ..ಕ್ಷುಲ್ಲಕ ಕಾರಣಗಳಿಗಿ ಆತ್ಮಹತ್ಯ ಮಾಡಿಕೊಳ್ಳುವ ಗಂಡಸರ ಬಗ್ಗೆ ಕೆಳತಿರತೀವಿ. ಸಂಸಾರದಲ್ಲಿನ ಜಗಳ ಆತ್ಮಹತ್ಯೆ ಯಲ್ಲಿ ಕೊನೆಯಾಗಬೇಕಾ..! ಈಗಿನ ಮದುವೆಗಳು ಎಷ್ಟು ಜಲ್ದಿ ನಿರ್ಣಾಯಕ ಹಂತಕ್ಕ ಬರತಿದ್ದಾವ. ತಪ್ಪು ಯಾರದು ಎಂದು ನಿರ್ಧರಿಸೊದು ಹ್ಯಾಂಗ್. ಅವರವರ ಜಾಗಕ್ಕ ಅವರವರದೆ ಸರಿ .ಎಲ್ಲಿ ತಪ್ಪತಿದ್ದೆವೆ ಎಂದು ತಿಳಕೊಳ್ಳಕ್ಕ ಪ್ರಯತ್ನಿಸುವ ತಾಳ್ಮೆ ಇಬ್ಬರಿಗೂ ಇಬ್ಬರ ಕಡೆಯವರಿಗೂ ಇಲ್ಲ.ಸಾವು ಒಂದೇ ಪರಿಹಾರ ಎಂದು ನಿರ್ಣಯಿಸಿಕೊಂಡವರಿಗೆ ಯಾವ ಉಪದೇಶಗಳು ಕಿವಿಯೊಳಗ ಹೋಗಲ್ಲ. ಇನ್ನೂ ಮದುವೆ ಎನ್ನುವದು ಈಗಿನ ತಲೆಮಾರಿನವರಿಗೆ ಅವಶ್ಯಕ ವಿಷಯ ಅಲ್ಲ.ಹೆತ್ತವ್ರು ಕೂಡ ಮಕ್ಕಳು ಸ್ವಾವಲಂಬಿ ಆಗಿ ದುಡುದು ತಮ್ಮ ತಾವು ನೋಡಕೊಳ್ಳತಾರ ಅನ್ನೊ ಭರವಸೆ ಬರುವವರೆಗೂ ಮಕ್ಕಳ ಮದುವೆಗೆ ಒತ್ತಾಯ ಮಾಡ್ಲೆಬಾರ್ದು.ಹೆಣ್ಣು ಮಕ್ಕಳಿಗಂತೂ ಸ್ವಾವಲಂಬಿ ತನ ಇನ್ನೂ ಅಗತ್ಯ ಅದ. ಗಂಡ ಗಳಿಸಿ ತಂದು ತನ್ನ ಎಲ್ಲಾ ಆಸಿ ಆಕಾಂಕ್ಷೆ ಪೂರಾ ಮಾಡ್ಲಿ ಎಂದು ಬಯಸೋದು ನೀಚತನ.ತನ್ನ ಮತ್ತು ಮಕ್ಕಳ ಜವಾಬ್ದಾರಿ ಗಂಡ ಒಬ್ಬಂದೆ ಅಲ್ಲ.ಮಕ್ಕಳು ಹಡೆದು ಕೊಟ್ಟ ಮಾತ್ರಕ್ಜೆ ತಾನು ಮಹಾನ್ ಅಲ್ಲ ಎಂಬುದು ಪ್ರತಿಯೊಬ್ಬ ಹೆಣ್ಣಮಕ್ಳು ತಿಳಕೋಬೇಕು. ಮದುವೆ ಅಂದ್ರ ಅವಲಂಬನೆ ಅಲ್ಲ.ಒಬ್ಬರಿಗೊಬ್ಬರು ಸಹಕಾರ ನಿಡೋದು.ವರದಕ್ಷಿಣೆ ಎಂಬುದು ಅಂದಿಗೂ ಇಂದಿಗೂ ಚಲಾವಣೆಯಲ್ಲಿ ಇರುವ ವಿಷಯ.ಹೆಣ್ಣು ಕಲತು ನೌಕರಿ ಮಾಡತಿದ್ದರೂ ತವರಿನಿಂದ ಏನಾದ್ರೂ ತರಲಿ ಎಂಬ ಹಂಬಲ ಗಂಡಿನ ಕಡೆಯವ್ರಿಗಿ ಇದ್ದೆ ಇರತದ.ಇದು ಪರೋಕ್ಷವಾಗಿ ಮಾತಿನ ಮುಖಾಂತರ ಬರತಾವ. ಗಂಡ ಅತ್ತೆ ಮಾವ ಈ ವಿಷಯಗಳು ಪದೇ ಪದೇ ಅನ್ನುವದು ಸೊಸೆಗೆ ಸಹಿಸದೆ ಜಗಳ ಶುರು ಆಗತಾವ.ವರದಕ್ಷಿಣೆ ಕಿರುಕುಳದ ಸಾವುಗಳು ಸಾಮಾಜಿಕ ಪಿಡುಗು. ಇದು ದುಡ್ಡಿದ್ದವರಲ್ಲೆ ಹೆಚ್ಚು . ಎಷ್ಟಿದ್ದರೂ ಇನ್ನೂ ಬೇಕು ಎಂಬ ಆಸೆ. ಎಷ್ಟೊಂದು ಧುಮ್ ಧಾಮ್ ಖರ್ಚು ಮಾಡಿ ಮಕ್ಕಳ ಮದುವೆ ಮಾಡ್ತೆವೆ.ಮದುವಿ ಆದಮ್ಯಾಲ್ ಜವಾಬ್ದಾರಿ ಮುಗಿತು ಅಂದುಕೊಳ್ಳದೆ ಮಕ್ಕಳಿಗೆ ಒತ್ತಾಸೆಯಾಗಿ ಇರಬೇಕು.ನಿಮ್ಮ ಜೊತೆಗೆ ನಾವಿದ್ದೆವೆ , ಎಂತಾ ಸಂದರ್ಭದಾಗೂ ನಿಮ್ಮ ಹಿಂದ ನಾವಿದ್ದೆವೆ ಅಂತ ಗಂಡ ಮಕ್ಕಳಿಗೂ ಹೆಣ್ಣು ಮಕ್ಕಳಿಗೂ ದೈರ್ಯ ತುಂಬಬೇಕು. ಈಗಿನ ಪಿಳಿಗೆ ಸ್ವತಂತ್ರ ವಾಗಿ ಇರಬೇಕು ಅಂತ ಅಪೇಕ್ಷೆ ಪಡತಾರ.ಇರಲಿ , ತಂದೆ ತಾಯಿ ಕೂಡ ಮಕ್ಕಳಿಗಿ ಒಜ್ಜಿ ಆಗಲಕ್ಕ ಇಷ್ಟ ಪಡಲ್ಲ. ಮನಿಯೊಳಗ ಅತ್ತಿ ನಾದನಿ ಮಾವ ಇದ್ರ ಅವರ ಜೋಡಿ ಹೊಂದಾಣಿಕಿ ಆಗ್ಧೆ ಜಗಳ ಬರತದ ಅಂದ್ರ ಒಂದು ಕಾರಣ ಅನ್ನಬಹುದು.ಇಷ್ಟ ಪಟ್ಟು ಒಪ್ಪಿ ಮದುವೆ ಮಾಡಿಕೊಂಡು ಗಂಡ ಹೆಂಡತಿ ಇಬ್ರೆ ಇದ್ರು ಜಗಳ ಆಡಿ ಡೈವೊರ್ಸ ಮಾಡ್ಕೋತಾರ..ಆತ್ಮಹತ್ಯೆ ಮಾಡ್ಕೋತಾರ ಅಂದ್ರ ಇದಕ್ಕೆ ಯಾವ ಕಾರಣ ಹುಡಕಬೇಕು..!ಇಲ್ಲಿ ಸಮಸ್ಯೆ ಇರೊದು ಈಗಿನ ಯುವ ಜನರ ವಿಚಾರದಲ್ಲಿ.ತಾಳ್ಮೆಯ ಕೊರತೆ.ಮಕ್ಕಳಿಗಿ ಯಾವ ಕೊರತೆ ಇಲ್ದಂಗ ಬೆಳಸ್ತಿರೊ ತಂದೆ ತಾಯಿಗಳ್ದು ತಪ್ಪು. ಬಿಸಲು ಮಳಿ ಗಾಳಿಗಿ ಹೊಇಗಲಾರದಂಗ ಅವ್ರಿಗಿ ಕಾಪಾಡಿ ಒಂದು ಸರಿ ಅವ್ರು ಇವೆಲ್ಲ ಅನುಭವಿಸೊ ಪರಿಸ್ಥಿತಿ ಬಂದ್ರ ಸಹಿಸಲ್ಲ. ನಾವು ತಂದೆ ತಾಯಿಗಳು ಮಕ್ಕಳ ವಿಷಯವಾಗಿ ಅತೀ (possessive)ಸ್ವಾಮಿತ್ವ ಭಾವನೆ ಹೊಂದತಿದ್ದಿವಿ. ಅವರಿಗಿ ಯಾವ ನಿರ್ಧಾರ ತಗೊಳಕ್ಕ ಬಿಡಲಾರದಂಗ ಅವರಿಗಿ ಕಣ್ಣರೆಪ್ಪೆ ಹಾಂಗ ನೋಡಕೊಂಡು ಅವಲಂಬಿಸಿ ಇರೊಹಂಗ ಮಾಡ್ತಿರೋದು ಕೂಡ ಅವ್ರು ಬದುಕು ಎದುರಿಸಲಿಕ್ಕ ಆಗ್ದೆ ಇರೊದಕ್ಕ ಒಂದು ಕಾರಣ. ಮಕ್ಕಳು ಅಂದ್ರ ನಮ್ಮ ಮೂಲಕ ಈ ಭೂಮಿಗೆ ಬಂದ ಮುಂದಿನ ಪಳೆಯುಳಿಕೆ ಗಳು.ಅವ್ರೆ ನಮ್ಮ ಇಡೀ ಜಗತ್ತು ಅನ್ನೊಹಂಗ ಅವ್ರನ್ನ ಬೆಳೆಸೋದು ಒಂದು ರೀತಿ ಮಕ್ಕಳನ್ನು ದುರ್ಬಲ ಮಾಡ್ಲಿಕ್ಕೆ ಕಾರಣ ಆಗತದ. ಎಷ್ಟೋ ಮಕ್ಳು ತಂದೆ ತಾಯಿಗಿ ಹೊರೆ ಆಗತಾರ.ತಮಗ ಆಸರೆ ಆಗಬೇಕಾದ ಮಕ್ಕಳಗಿ ಜೀವನ ಪರ್ಯಂತ ತಾವೆ ಆಸರೆ ಆಗಬೇಕಾದ ಸಂದರ್ಭಗಳು ಇದ್ದಾವ. ವ್ಯಸನಕ್ಕ ಅಂಟಿಕೊಂಡ ಮಕ್ಕಳಿಗಿ , ಬೇಜವಾಬ್ದಾರಿ ಹೊಂದಿರುವ ಮಕ್ಕಳಿಗಿ ಮದುವೆ ಮಾಡಿದ್ರ ಹಾದಿಗಿ ಬರತಾನ ಅಂತ ಒಂದು ಹೆಣ್ಣು ತಂದು ಕಟ್ಟಿದ್ರ ಒಬ್ಬರ ಜೊತೆ ಮತ್ತೊಬ್ರ ಬದುಕು ಹಾಳು ಮಾಡಿದಂಗ. ಮದುವೆ ಅನ್ನುವದು ಕೇವಲ ಹೊಂದಾಣಿಕೆ ಅಲ್ಲ.ಸಾಂಗತ್ಯ.ಇಬ್ಬರು ಒಬ್ಬರಿಗೊಬ್ಬರು ಆಸರೆ ಆಗಿ ಇರಬೇಕಾದ ಸಂಭಂಧ.ಇದನ್ನು ವಿಜೃಂಭಣೆಯಿಂದ ಹಣ ಖರ್ಚು ಮಾಡಿ ಮಾಡುವದು ಬಿಡುವದು ಅವರವರ ಆಸಕ್ತಿ ಗೆ ಮತ್ತು ಆರ್ಥಿಕ ಸ್ಥಿತಿ ಮ್ಯಾಲ ಅವಲಂಬಿಸ್ತದ. ಅಷ್ಟು ಖರ್ಚು ಮಾಡಿ ಮಾಡಿದ ಮದುವೆ ಗಳ ಜೋಡಿಗಳು ಎಷ್ಟು ಸುಖ ಸಂತೋಷ ದಿಂದ ಜೀವನ ಮಾಡತಿದ್ದಾರ ಅನ್ನೊದು ಇವತ್ತಿನ ಚಿಂತನೆ ವಿಷಯ. ಹಾಗಂತ ಮದುವೆ ಮಾಡೋಧ ಬ್ಯಾಡ ಅಂತಲ್ಲ.ಮೊದಲು ನಮ್ಮ ಮಕ್ಕಳ ಸ್ವಾವಲಂಬಿ ತನ ಮತ್ತು ಅವರು ಸಂಬಂಧಗಳನ್ನು ನಿಭಾಯಿಸುವ ರೀತಿಗಳನ್ನು ನಾವು ಪರಿಕ್ಷಿಸಬೇಕು.ಅದಕ್ಕಾಗಿ ತಯ್ಯಾರಿಸಬೇಕು.ಎಲ್ಲಕ್ಕಿಂತ ಮುಖ್ಯ ಇಬ್ಬರೂ ಆರ್ಥಿಕ ವಾಗಿ ಸ್ವಾವಲಂಬಿ ಗಳಾಗಿರಬೇಕು.ಇದು ಎಲ್ಲಕ್ಕಿಂತ ಮುಖ್ಯ. ಮಕ್ಕಳು ಹರೆಯಕ್ಕ ಬರುತ್ತಲೆ ಮದುವೆ ಮಾಡಲಕ್ಕ ಇಲ್ಲ ಮದುವೆ ಆಗಲಿಕ್ಕ ಒತ್ತಾಯಿಸುವ ಹೆತ್ತವರು ಮೊದಲು ಅರ್ಥ ಮಾಡಕೊಬೇಕು..ನಮ್ಮ ಮಕ್ಕಳು ಮದುವೆ ಅನ್ನೊ ಸಂಭಂಧ ನಿಭಾಯಿಸಲಕ್ಕ ಎಷ್ಟು ತಯ್ಯಾರಿದ್ದಾರ ಅನ್ನುವ ವಿಷಯ.ನಮ್ಮ ದೇಶದಲ್ಲಿ ಮದುವೆಗೆ ಇದ್ದಷ್ಟು ಪ್ರಾಮುಖ್ಯತೆ , ಮದುವೆ ನಂತರ ಬರುವ ಸಮಸ್ಯೆ ಗಳಿಗೆ ಇಲ್ಲ. ಗಂಡ ಹೆಂಡತಿ ಅಂದ ಮ್ಯಾಲ ಇವೆಲ್ಲ ಸಾಮಾನ್ಯ. ಮಕ್ಕಳು ಆದ ಮ್ಯಾಲ್ ಇನ್ನೆಂತ ಜಗಳ , ಅಂತ ಸಮಸ್ಯೆ ಗಳನ್ನು ದೂರ ಮಾಡಲು ನೊಇಡತೀವಿ.ಇವುಗಳನ್ನು ಚಿಕ್ಕ ಸಮಸ್ಯೆ ಅಂತ ನೋಡ್ದೆ ಇಂತಹ ಸಂದರ್ಭಗಳಲ್ಲಿ ಮಕ್ಕಳಿಗೆ ಆಸರೆ ಆಗಿ ನಿಲ್ಲಬೆಕಾದ್ದು ಹೆತ್ತವರ ಕರ್ತವ್ಯ. pic:AIcreated ಜ್ಯೋತಿ ಡಿ ಬೊಮ್ಮಾ ಅವರುಕಲಬುರ್ಗಿ ಜಿಲ್ಲೆಯವರು.ಇವರು ಇದುವರೆಗುನಾಲ್ಕು ಕವನ ಸಂಕಲನಗಳನ್ನು ಎರಡು ಪ್ರಬಂಧ ಸಂಕಲನಗಳನ್ನುಪ್ರಕಟಿಸಿದ್ದಾರೆ. ಸಂಗಾತಿಪತ್ರಿಕೆಗಾಗಿಯೇ ಇವರು ದೇಸಿ ನುಡಿಗಟ್ಟಿನಲ್ಲಿ ವಿಶಿಷ್ಠ, ವಿಶೇಷ ವಿಷಯಗಳ ಬಗ್ಗೆ ಪ್ರತಿ ತಿಂಗಳೂ ಬರೆಯುತ್ತಿದ್ದಾರೆ

Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ಸುಜಾತಾ ರವೀಶ್ ವೃತ್ತಿ ವೃತ್ತಾಂತ ವೃತ್ತಿ ಬದುಕಿನ ಹಿನ್ನೋಟ-36 ನಾವು ಆ ಶಾಖೆಗೆ ಹೋದಾಗ ಶಾಖಾಧಿಕಾರಿ ಆಗಿದ್ದವರು ಶ್ರೀ ಸತ್ಯನಾರಾಯಣ ಅವರು. ಅವರು ಮೂಲತಃ ಶ್ರೀನಿವಾಸಪುರರದವರು. ನನ್ನ ತಂದೆಯ ಊರು ಸಹ ಅದೇ ಆಗಿದ್ದು ಕೆಲವು ಹಳಬರನ್ನು ನೆನೆಸಿಕೊಂಡು ಮಾತನಾಡುತ್ತಿದ್ದೆವು.  ಅವರಿಗೆ ಆಫೀಸಿನಲ್ಲೇ ಹೃದಯಘಾತ ಆಗಿತ್ತು. .ನಂತರ ಚೇತರಿಸಿಕೊಂಡರು. ಆದರೆ ನಮಗೆಲ್ಲ ಒಂದು ರೀತಿಯ ಶಾಕ್ ಆಗಿದ್ದಂತೂ ನಿಜ .ಆಗ ಇಷ್ಟೆಲ್ಲ ಹೃದಯಾಘಾತಗಳ ವಿಷಯ ಕೇಳದೆ ಇದ್ದರಿಂದ ಅದು ಅಪರೂಪದ ಸಂಗತಿಯಾಗಿತ್ತು. ಹಾಗೆಯೇ ಶಾಖೆ ಎರಡರಲ್ಲಿ ಅತ್ಯಂತ ನೆನಪಿನಲ್ಲಿ ಉಳಿದ ವಿಷಯವೆಂದರೆ ಜನವರಿ ಒಂದನೆಯ ತಾರೀಕು ನಾವು ಹೆಂಗಳೆಯರೆಲ್ಲ ಸೇರಿ ಗೋಸಾಯಿ ಘಾಟ್ ಗೆ ಪ್ರವಾಸ ಹೋಗಿದ್ದು. ಆ ಬಾರಿ ಜನವರಿ ಒಂದನೆಯ ತಾರೀಕು ಶನಿವಾರ ಬಂದದ್ದು ಅಂದು ನಮಗೆ ಅರ್ಧ ದಿನ ಮಾತ್ರ ಕಚೇರಿ ಆದ್ದರಿಂದ ನೀವು ಪ್ರವಾಸವನ್ನು ಯೋಚಿಸಿದೆ ಕೆಳಗಡೆ ಇದ್ದ ಟ್ರಾವೆಲ್ ಏಜೆನ್ಸಿಯಲ್ಲಿ ಒಂದು ಸಣ್ಣ ಮೆಟದ ಬುಕ್ ಮಾಡಿಕೊಂಡು ಮದ್ಯಾಹ್ನ ಹೊರಟೆವು ಎಲ್ಲರೂ ಅವರವರ ಮನೆಯಿಂದ ವಿಶೇಷ ತಿಂಡಿಗಳನ್ನು ಮಾಡಿಕೊಂಡು ಬರುವುದಾಗಿ ನಾನು ಅಂದು ಅವರೇ ಕಾಳು ರೊಟ್ಟಿ ಮಾಡಿ ತಂದಿದ್ದೆ. ಹತ್ತು ರೊಟ್ಟಿಗಳು ನಮಗಾಗಿ ಹಾಗೂ ಮತ್ತೆ ಎರಡು ಬೇರೆ ಬಾಕ್ಸ್ ನಲ್ಲಿ ಮಂಜುಗಾಗಿ. ತುಂಬಾ ಖುಷಿಯಾಗಿ ತಿಂದಿದ್ದ ಅಂದು.ಸರಿ ಅಲ್ಲಿ ಮಧ್ಯಾಹ್ನ ಹೋದ ತಕ್ಷಣ ಎಲ್ಲರೂ ಡಬ್ಬಿಗಳಿಂದ ಹಂಚಿಕೊಂಡು ತಿಂದದ್ದಾಯಿತು.  ಇನ್ನು ಮೂರು ರೊಟ್ಟಿಗಳು ಉಳಿದಿದ್ದನ್ನು ರಾಜಿ ಮನೆಗೆ ತೆಗೆದುಕೊಂಡು ಹೋದಳು. ಸುಮಾ ತಂದಿದ್ದ ಉಳಿದ ಪೂರಿ ಆಲೂಗೆಡ್ಡೆ ಪಲ್ಯ  ನಾನು ಮನೆಗೆ ತೆಗೆದುಕೊಂಡು ಬಂದೆ. ಸ್ವಲ್ಪ ಹೊತ್ತು ನೀರಿನಲ್ಲಿ ಇಳಿದು ಹಾಡಿ ನಂತರ ದೋಣಿಯಲ್ಲಿ ಒಂದು ರೌಂಡ್ ಹೋಗಿ ಬಂದು ಐದು ಗಂಟೆಗೆ ಮತ್ತೆ ಮೈಸೂರಿಗೆ ವಾಪಸ್ ಆಗಿದ್ದೆವು ಪ್ರತಿ ವರ್ಷ ಜನವರಿ ಒಂದನೆಯ ತಾರೀಕು ಆ ದಿನ ನಾವು ಹೋದ ಪ್ರವಾಸದ ನೆನಪು ಆಗುತ್ತಲೇ ಇರುತ್ತದೆ.ಹಾಗೆ ಮತ್ತೊಂದು ಕಹಿ ನೆನಪು ಎಂದರೆ ಪ್ರತಿ ನಿಧಿ ಬಾಂಧವರೂ ಪರ ಮನೆಯ ಗೃಹಪ್ರವೇಶಕ್ಕೆ ಹೋದಾಗ ನನ್ನದೊಂದು ಸಣ್ಣ ಚಿನ್ನದ ಸರ ಕಳೆದುಹೋದದ್ದು. ನಂಜನಗೂಡಿನ ಗೆಳತಿ ಇಂದುಮತಿ ಅವರ ತಮ್ಮನ ಮೂಲಕ ದುಬೈ ನಿಂದ ತರಿಸಿದ್ದ ೫ ಗ್ರಾಂ ನ‌ ಸರ. ಬಹಳ ವರ್ಷಗಳಿಂದ ಭೇಟಿ ಆಗದೆ ಇದ್ದ ಪಿಯುಸಿ ಗೆಳತಿ ಲತಾ ಅವರ ನೆರೆಯ ಮನೆಗೆ ನಾವು ಗೃಹಪ್ರವೇಶಕ್ಕೆ ಹೋಗಿದ್ದು ಅವಳು ಸಿಕ್ಕಿದ್ದು ತುಂಬಾ ಖುಷಿಯಾಗಿತ್ತು. ಆಗಿನು ಮೊಬೈಲು ಕಾಲಿಟ್ಟ ಸಮಯ ಅವಳ ಬಳಿ ನನ್ನ ಬಳಿ ಇಬ್ಬರ ಬಳಿಯೂ ಮೊಬೈಲ್ ಇರಲಿಲ್ಲ ಹಾಗಾಗಿ ಮತ್ತೆ ಸ್ನೇಹ ಮುಂದುವರಿಸಲು ಆಗಲಿಲ್ಲ. ಮೊದಲೇ ಹೇಳಿದಂತೆ ಮನೆಯ ಬಳಿ ಇದ್ದ ಶಾಖೆ ಐದಕ್ಕೆ ವರ್ಗಾವಣೆ ಕೇಳಿದ್ದು ಆದರೆ ಅಲ್ಲಿ ಹೆಚ್ ಜಿ ಎ ಅಂದರೆ ನಮ್ಮ ಪೋಸ್ಟ್ ಖಾಲಿ ಇರಲಿಲ್ಲ. ಅಲ್ಲಿಗೆ ವರ್ಗಾವಣೆ ಬಯಸಿದವರಲ್ಲಿ ನನ್ನ ಜೊತೆಗೆ ಬಂದು ರಿಪೋರ್ಟ್ ಆದ ಮೊದಲನೇ ಸ್ಥಾನ ಹಾಗೂ ನನ್ನದು ಎರಡನೆಯ ಸ್ಥಾನ. ಅಲ್ಲಿ ಪೋಸ್ಟ್ ಖಾಲಿ ಇಲ್ಲ ಅಂದಮೇಲೆ ಈ ವರ್ಷ ನಮಗೆ ವರ್ಗಾವಣೆ ಇಲ್ಲ ಎಂದು ಖಾತ್ರಿ ಯಾಗಿತ್ತು ಆದರೆ ಇಲ್ಲಿನ ವಾತಾವರಣ ತುಂಬಾ ಚೆನ್ನಾಗಿ ಇದ್ದುದರಿಂದ ಇನ್ನೂ ಒಂದು ವರ್ಷ ಹಾಯಾಗಿ ಇರಬಹುದು ಆದರೆ ಈ ಶಾಖೆ ಇವಾಗ ಕಟ್ಟಡಕ್ಕೆ ಅಂದರೆ ಬನ್ನಿ ಮಂಟಪಕ್ಕೆ ಸ್ಥಳಾಂತರ ಗೊಳ್ಳುವ ಯೋಜನೆ ಇತ್ತು. ಹಾಗಾಗಿ ಸ್ಥಳಾಂತರಗೊಳ್ಳುವ ಮೊದಲು ನಮಗೆ ವರ್ಗಾವಣೆ ಸಿಕ್ಕಿದರೆ ಒಳ್ಳೆಯದು ಎಂದಿತ್ತು. ಏಕೆಂದರೆ ನಮ್ಮ ಏರಿಯಾದಿಂದ ಬನ್ನಿಮಂಟಪಕ್ಕೆ ಎರಡೆರಡು ಬಸ್ ಹಿಡಿದು ಹೋಗಬೇಕಿತ್ತು. ಬಹಳ ದೂರವೂ ಇತ್ತು. ಆ ದೇವರಿಗೆ ನಮ್ಮ ಮೊರೆ ಕೇಳಿಸಿತೇನೋ ಎಂಬಂತೆ ಆ ವರ್ಷ ಶಾಖೆ ಎರಡರ ಇಬ್ಬರಿಗೆ ಸಹಾಯಕ ಅಧಿಕಾರಿಗಳಾಗಿ ಬಡ್ತಿ ಸಿಕ್ಕಿತು ಗಿರಿಜಾ ಮತ್ತು ರೇಣುಕುಮಾರಿ ಇಬ್ಬರು ಪದೋನ್ನತಿ ಹೋಗಲು ಒಪ್ಪಿಗೆ ಕೊಟ್ಟಿದ್ದರಿಂದ ನಮಗೆ ಅಲ್ಲಿ ಎರಡು ಪೋಸ್ಟ್ ಖಾಲಿ ಆಗಿತ್ತು, ಇನ್ನು ವರ್ಗಾವಣೆ ಆದೇಶ ಬರುವುದಷ್ಟೇ ಬಾಕಿ. ನಾನು ರಜೆ ಹಾಕಿದ್ದೆ. ಒಂದ್ಸಲ ನಮ್ಮ ಮನೆಯಲ್ಲಿ ಕಾಲ್ ಮಾಡಿದ್ದಳು ನನ್ನ ರಿಲವಿಂಗ್ ಆರ್ಡರ್ ಬಂದಿದ್ದು 15ನೆಯ ತಾರೀಕು ನಾವು ಆಗಬೇಕಿತ್ತು ಅಂದೇ ಮಧ್ಯಾಹ್ನ ನಾವಿಬ್ಬರೂ ಯಾಕೆಯವರಿಗೆ ಊಟ ಕೊಡಿಸೋಣವ ಎಂದು ಕೇಳಿದಳು ಆಯಿತು ಎಂದು ಹೇಳಿ ಹಬ್ಬದ ಮಾರನೆಯ ದಿನ ಮಧ್ಯಾಹ್ನ ನಮ್ಮ ಪಾರ್ಟಿ ಕೊಟ್ಟು ಸಂಜೆಗೆ ರಿಲೀಸ್ ಆದದ್ದು 1೭ನೆಯ ತಾರೀಕು ಸೋಮವಾರ ನಾವು ಶಾಖೆ ಐದಕ್ಕೆ ರಿಪೋರ್ಟ್ ಆಗಬೇಕಿತ್ತು ಈ ಹಿಂದೆ ನಂಜನಗೂಡಿನಲ್ಲಿ ನಮಗೆ ಬ್ರಾಂಚ್ ಮ್ಯಾನೇಜರ್ ಆಗಿದ್ದ ಸಿಕೆ ರವಿ ಅವರೇ ಅಲ್ಲಿ ಈಗ ಶಾಖಾಧಿಕಾರಿಗಳು ಅವರು ಶಾಖೆಗೆ ಫೋನ್ ಮಾಡಿ ನನಗೆ ಹೊಸ ವ್ಯವಹಾರ ವಿಭಾಗ ಕೊಡುವುದಾಗಿ ತಿಳಿಸಿದರು. ವತ್ಸಲಾಗೆ ಮಾರುಕಟ್ಟೆ ವಿಭಾಗ. ನನ್ನದೇನೂ ಅಭ್ಯಂತರವಿರಲಿಲ್ಲ. ಅಂತೂ ಇಂತೂ ಶಾಖೆ ಐದಕ್ಕೆ ಬಂದು ರಿಪೋರ್ಟ್ ಆದೆವು. ಮೊಟ್ಟ ಮೊದಲ ಬಾರಿ ಡ್ಯೂಟಿ ರಿಪೋರ್ಟ್ ಜೊತೆಗೆ ವರ್ಗಾವಣೆ ಕೋರಿಕೆ ಪತ್ರ ಇರಲಿಲ್ಲ. ಮುಂದೆ ನಿವೃತ್ತಿಯಾಗುವವರೆಗೂ ಬರೋಬರಿ 21 ವರ್ಷ ಇದೆ ಶಾಖೆಯಲ್ಲಿ ಸೇವೆ ಸಲ್ಲಿಸುತ್ತೇವೆ ಎಂಬ ಅಂದಾಜು ಸಹ ಅಂದು ಇರಲಿಲ್ಲ. ಸಾಹುಕಾರ್ ಚನ್ನಯ್ಯ ರಸ್ತೆಯಲ್ಲಿ ಇದ್ದ ಆ ಶಾಖೆಯ ಪಕ್ಕದಲ್ಲಿ ರಾಜ್ಯ ಸರ್ಕಾರದ ಕೆ ಜಿ ಐ ಡಿ ಕಚೇರಿಯೂ ಸಹ ಇತ್ತು. ರಸ್ತೆಯ ಎಡಬದಿಯಲ್ಲಿ ಇದ್ದ ಆ ಶಾಖೆ 2 ಅಂತಸ್ತಿನದಾಗಿತ್ತು ನನ್ನ ಹೊಸ ವ್ಯವಹಾರ ವಿಭಾಗ ಮೊದಲನೆಯ ಮಹಡಿಯಲ್ಲಿ ಇತ್ತು. ಮೊದಲಿಂದ ಪರಿಚಿತರಾಗಿದ್ದ ಶೈಲಾ ವೀಣಾ ಮಂಗಳ ಶಾಂತ ಹಾಗೂ ಎದುರು ಮನೆಯಲ್ಲಿ ಇದ್ದ ಸಾವಿತ್ರಿ ಎಲ್ಲರೂ ಇಲ್ಲೇ ಇದ್ದರು. ಹೊಸ ವಾತಾವರಣ ಅನಿಸಲೇ ಇಲ್ಲ ತುಂಬಾ ಬೇಗ ಅಂದುಕೊಳ್ಳುವಂತೆ ಆಯಿತು.ನಮ್ಮ ಹೊಸ ವ್ಯವಹಾರ ವಿಭಾಗಕ್ಕೆ ರಾಜೇಂದ್ರ ಅವರು ಸಹಾಯಕ ಆಡಳಿತ ಅಧಿಕಾರಿಗಳಾಗಿ ಇದ್ದರೆ ಸಹಾಯಕ ರಾಗಿ ನನ್ನದೇ ಹೆಸರಿನ ಜಿ ಸುಜಾತ ಮತ್ತು ಗುರುರಾಜ್ ಅವರು ಅಲ್ಲಿ ಇಬ್ಬರು ಹೆಜ್ಜೆಯಗಳಿದ್ದು ನಮ್ಮದೇ ಯೂನಿಯನ್ ನ ಸಿ ಚಂದ್ರಕುಮಾರ್ ಅವರು ಸಹ ಅದೇ ವಿಭಾಗದಲ್ಲಿ ಇದ್ದರು. ಆಗಿಲ್ಲ ಪಾಲಿಸಿಗಳು ಹೆಚ್ಚಾಗಿ ಬರುತ್ತಿದ್ದು ಆ ವಿಭಾಗದಲ್ಲಿ ಕೈ ತುಂಬಾ ಕೆಲಸ ಇತ್ತು ಆಸಕ್ತಿದಾಯಕವಾಗಿಯೂ ನಾನು ಈ ಮೊದಲು ಅದೇ ಹೊಸ ವ್ಯವಹಾರ ವಿಭಾಗದಲ್ಲಿ ಮಾಡಿದಾಗ ಪೂರ್ತಿ ಮಾನ್ಯುಯಲ್ ಕೆಲಸಗಳಿತ್ತು ಈಗ ಎಲ್ಲವೂ ಕಂಪ್ಯೂಟರ್ನಲ್ಲಿ ಮಾಡಬೇಕಿತ್ತು ಹೊಸದಾಗಿ ಕಲಿಯುವ ಆಸಕ್ತಿಯು ತುಂಬಾ ಖುಷಿಯಾಗುವಂತಿತ್ತು.‌ ರವೀಶ್ ಅವರು ಊರಿನಲ್ಲಿ ಇದ್ದಾಗ ಮದ್ಯಾಹ್ನ ಊಟಕ್ಕೂ ಸಹ ಕರೆದುಕೊಂಡು ಹೋಗಿ ಬಂದು ಬಿಡುತ್ತಿದ್ದರು. ಸಕಲೇಶಪುರ ಬಿಟ್ಟ ಮೇಲೆ ಮಧ್ಯಾಹ್ನ ಮನೆಯ ಬಿಸಿಯೂಟ ಮತ್ತೆ ದೊರೆಯಿತು ಅನ್ನಬಹುದು.(ಮುಂದುವರೆಯುವುದು) ಸುಜಾತಾ ರವೀಶ್

Read Post »

You cannot copy content of this page

Scroll to Top