ಜಯಶ್ರೀ.ಜೆ. ಅಬ್ಬಿಗೇರಿ ಅವರ ಲಹರಿ “ದೊಡ್ಡ ಸಿರಿ – ಹೃದಯ ಸಿರಿ”
ಕಾವ್ಯ ಸಂಗಾತಿ ಜಯಶ್ರೀ.ಜೆ. ಅಬ್ಬಿಗೇರಿ “ದೊಡ್ಡ ಸಿರಿ – ಹೃದಯ ಸಿರಿ” ಒಬ್ಬ ವ್ಯಕ್ತಿ ಅವನ ಗೆಳೆಯನ ಮನೆಗೆ ಬಂದಿದ್ದ. ‘ಈ ಮನೆ ಯಾರದು?’ ಎಂದು ಗೆಳೆಯನಿಗೆ ಕೇಳಿದ. ವ್ಯಕ್ತಿ ಹೇಳಿದ ‘ಇದು ನನ್ನದೇ ಮನೆ ಎಂದು. ಅದನ್ನು ಕೇಳಿದ ಅಡುಗೆ ಮನೆಯಲ್ಲಿದ್ದ ಆ ವ್ಯಕ್ತಿಯ ಪತ್ನಿ ಮುಗುಳುನಗೆಯನ್ನು ಬೀರಿ ಸುಮ್ಮನಾದಳು. ಏಕೆಂದರೆ ಆ ಮನೆಯನ್ನು ಆಕೆಯ ತಂದೆ ಅಂದರೆ ಮಾವ ಕಾಣಿಕೆಯಾಗಿ ನೀಡಿದ್ದ. ಆದ್ದರಿಂದ ಆತನ ಪತ್ನಿ ಮುಗುಳ್ನಗೆ ಬೀರಿ ತನ್ನದೆಂದು ಹೇಳುತ್ತಾನೆ ಹೇಳಲಿ ಎಂದು ಮೌನವಾದಳು. ಹಾಗೆಯೇ ಎಲ್ಲವನ್ನೂ ನಾವು ನಿಸರ್ಗದಿಂದ ಪಡೆದು, ಈ ಮನೆ ನನ್ನದು ಈ ಹೊಲ ನನ್ನದು ಕಣ್ಣಿಗೆ ಕಂಡಿದ್ದೆಲ್ಲ ನನ್ನದು ಎಂದು ಹೇಳುತ್ತೇವೆ. ‘ನಾನು ಆಗರ್ಭ ಶ್ರೀಮಂತ.’ ಎಂದು ಜಂಭದಿoದ ಹೇಳಲು ಮುಂದಾಗುತ್ತೇವೆ. ಇದನ್ನು ಕೇಳಿದ ನಿಸರ್ಗದೇವತೆ ಮರಳು ಮಾನವ ಏನೂ ತಿಳಿಯದೇ ಹೇಳುತ್ತಾನೆಂದು ಮೌನ ವಹಿಸುತ್ತಾಳೆ. ಕೂಡಿಡುವ ಸ್ವಭಾವ ಬರುವಾಗ ಏನೂ ತಂದಿಲ್ಲ ಹೋಗುವಾಗ ಏನೂ ಒಯ್ಯುವುದಿಲ್ಲ ಅಂತ ಗೊತ್ತಿದ್ದರೂ ಭೂಮಾತೆಯ ಗರ್ಭವನ್ನು ಬಗೆದು ಕಾಡುಗಳನ್ನು ಕಡಿದು ಪ್ರಾಣಿಗಳನ್ನು ತನ್ನ ಲಾಭಕ್ಕೆ ಉಪಯೋಗಿಸಿಕೊಂಡು ಸ್ವಾರ್ಥ ಜೀವನ ನಡೆಸುವ ಪ್ರಕೃತಿ ಮಾತೆ ಮುನಿಸಿಕೊಂಡಾಗ ಮನುಷ್ಯನದ್ದು ಏನೂ ನಡೆಯುವುದಿಲ್ಲ. ಸೃಷ್ಟಿಯಲ್ಲಿರುವ ಯಾವ ಪ್ರಾಣಿಗಳು ತನಗೆ ಹೊಟ್ಟೆ ತುಂಬಿದ ಮೇಲೆ ಯಾವ ಪ್ರಾಣಿಗಳನ್ನು ಭೇಟಿ ಆಡಲು ಹೋಗುವುದಿಲ್ಲ. ತನ್ನ ಗಾತ್ರಕ್ಕಿಂತ ೧೫೦ ಪಟ್ಟು ಜಾಸ್ತಿ ಭಾರವನ್ನು ಹೊರುವ ಇರುವೆ ಸಕ್ಕರೆ ಡಬ್ಬದ ಸುತ್ತ ಸುತ್ತುತ್ತಿದ್ದರೂ ಸಕ್ಕರೆ ಡಬ್ಬಿಯನ್ನು ಹೊತ್ತಯ್ಯುವ ಯೋಜನೆ ಹಾಕುವುದಿಲ್ಲ. ಮಳೆಗಾಲದಲ್ಲಿ ಆಹಾರ ಅಭಾವ ಕಾಡುವುದೆಂದು ಮುಂದಾಲೋಚನೆಯಿoದ ಸಂಗ್ರಹ ಮಾಡುತ್ತದೆ. ಆದರೆ ಮುಂದಿನ ಪೀಳಿಗೆಗೆ ಆಗುವಷ್ಟು ಬೇಕೆಂದು ದುರಾಸೆಯಿಂದ ಹೆಚ್ಚೆಚ್ಚು ಕೂಡಿಡುವುದಿಲ್ಲ. ಆದರೆ ಮನುಷ್ಯ ಮಾತ್ರ ಬೇಡವಾದಾಗಲೂ ತಿನ್ನುವ, ಅವಶ್ಯಕತೆ ಇಲ್ಲದಿರುವಾಗಲೂ ಕೊಳ್ಳುವ, ತನಗೆ ಎಲ್ಲವೂ ಸಿಗಬೇಕೆನ್ನುವ, ತನ್ನ ಹತ್ತಿರ ಎಲ್ಲವೂ ಅತ್ಯಧಿಕ ಪ್ರಮಾಣದಲ್ಲಿರಬೇಕೆಂದು ಕೂಡಿಡುವ ಸ್ವಭಾವ ಹೊಂದಿದ್ದಾನೆ. ಹಣವಿದ್ದರೆ? ಅರೆ! ಇದೇನು ಶ್ರೀಮಂತಿಕೆ ಯಾರಿಗೆ ಬೇಡ ಹೇಳಿ ಅಂತಿರೇನು? ಪ್ರತಿಯೊಬ್ಬರೂ ಅದನ್ನು ತಮ್ಮದಾಗಿಸಿಕೊಳ್ಳಬೇಕೆಂದೇ ಹಗಲು ರಾತ್ರಿ ಹಂಬಲಿಸುತ್ತಾರೆ. ಬಹುಶಃ ಅದರ ಹಿಂದೆ ಬೀಳದವರು ಬಹುತೇಕ ಇಲ್ಲವೆಂದರೂ ಅತಿಶಯೋಕ್ತಿ ಏನಲ್ಲ. ಸಿರಿತನ ಒಂದಿದ್ದರೆ ಸಾಕು ಮನದಲ್ಲಿಯ ಬಯಕೆಗಳನ್ನೆಲ್ಲ ಈಡೇರಿಸಬಹುದು. ನಮ್ಮವರಿಗೆ ಏನೇನು ಬೇಕೋ ಅದನ್ನು ಅವರು ಬಾಯಿ ತೆಗೆಯುವ ಮುನ್ನವೇ ಕಣ್ಮುಂದೆ ಹಿಡಿಯಬಹುದು. ನಮ್ಮಲ್ಲಿ ಹಣವಿದ್ದರೆ ಎಲ್ಲ. ಇಲ್ಲದಿದ್ದರೇನೂ ಇಲ್ಲ ಎನ್ನುವ ಮನೋಭಾವ ಬೇರೂರಿ ಬಿಟ್ಟಿದೆ. ಲಕ್ಷ್ಮೀದೇವಿಯ ಮಹಿಮೆಗೆ ಮರಳಾಗದವರು ಯಾರಿದ್ದಾರೆ? ಹಣವಂತನ ಜೀವನದಲ್ಲಿ ಯಾವ ಸಮಸ್ಯೆಗಳೂ ಇರುವುದಿಲ್ಲ ಎಂಬ ಸುಳ್ಳು ಸಂಗತಿ ಬೇರೆ ತಲೆಯಲ್ಲಿ ಅಚ್ಚಳಿಯದಂತೆ ಅಚ್ಚೊತ್ತಿದೆ. ಶ್ರೀಮಂತಿಕೆ ಶ್ರೀಮoತಿಕೆ ಅನ್ನುವುದು ಗೆಲುವಿನಂತೆ ವ್ಯಾಖ್ಯಾನಿಸುವುದು ಸುಲಭವಲ್ಲ. ಏಕೆಂದರೆ ಒಬ್ಬೊಬ್ಬರು ಒಂದೊoದು ಅರ್ಥ ಕೊಡುತ್ತಾರೆ. ಸಾಮಾನ್ಯವಾಗಿ ಬಹುತೇಕರು ಹೇಳುವುದು ಕೈ ತುಂಬ ಹಣ ಕೈಗೊಂದು ಆಳು ಕಾಲಿಗೊಂದು ಆಳು ಇದ್ದರೆ ಅವರು ಶ್ರೀಮಂತರು. ಮನೆಯಲ್ಲಿ ಲಕ್ಷ್ಮೀ ನೆಲೆಸಿರಬೇಕು. ಸಿರಿ-ಸಂಪತ್ತು ಆಸ್ತಿ ಐಶ್ವರ್ಯ ಹಣಕಾಸಿನ ಸಮೃದ್ಧತೆ ಯಾವುದಕ್ಕೂ ಕೊರತೆ ಇರಬಾರದು. ಲೆಕ್ಕ ಹಾಕದೇ ಖರ್ಚು ಮಾಡುವಷ್ಟು ಹಣವಿರಬೇಕು. ಐಷಾರಾಮಿ ಬದುಕು ಸಾಗಿಸಲು ಯಾವುದೇ ಅಡೆತಡೆ ಇರಬಾರದು. ಏನೇ ಬೇಕಾದರೂ ಕೊಂಡುಕೊಳ್ಳುವ ಶಕ್ತಿ ಇರಬೇಕು. ಬಯಸಿದ್ದನ್ನೆಲ್ಲ ಚಿಟಿಕೆ ಹೊಡೆಯುವಷ್ಟರಲ್ಲಿ ಪಡೆಯವುದು. ಬಂಧು ಬಾಂಧವರ ಮುಂದೆ ನಾವು ಹೆಂಗಿದಿವಿ ನೋಡಿ ಅಂತ ಗರ್ವದಿಂದ ಮೆರೆಯಬೇಕು. ಮಾನದಂಡ ಹೀಗೆ ಶ್ರೀಮಂತಿಕೆಯ ಬಗೆಗೆ ವಿವಿಧ ರೀತಿಯ ಅಭಿಪ್ರಾಯಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಇದನ್ನೆಲ್ಲ ನೋಡಿದಾಗ ಶ್ರೀಮಂತಿಕೆ ಎಂಬುದು ಕೇವಲ ಹಣಕಾಸಿನ ಶ್ರೀಮಂತಿಕೆಯೇ? ಎಂಬ ಪ್ರಶ್ನೆ ಹುಟ್ಟುತ್ತದೆ. ಶ್ರೀಮಂತಿಕೆಯನ್ನು ಅಳೆಯಲು ಹಣಕಾಸಿನ ಒಂದೇ ಒಂದು ಮಾನದಂಡ ಸಾಕೇ? ಎಂಬ ಪ್ರಶ್ನೆಯೂ ಅದರ ಬೆನ್ನ ಹಿಂದೆಯೇ ಹುಟ್ಟಿಕೊಳ್ಳುತ್ತದೆ. ದೈಹಿಕ, ಮಾನಸಿಕ ಸ್ಥಿತಿಗತಿ ಇವು ಯಾವವೂ ಲೆಕ್ಕಕ್ಕೆ ಬರುವುದಿಲ್ಲವೇ ಎಂಬ ಸಂದೇಹವೂ ಬರುತ್ತದೆ.ಆರೋಗ್ಯ ಸಂಪತ್ತುಮೇಲ್ನೋಟಕ್ಕೆ ಹಣಕಾಸಿನ ಸ್ಥಿತಿಗತಿ ಸಿರಿವಂತಿಕೆಯನ್ನು ನಿರ್ಧರಿಸುತ್ತದೆ ಹೌದಾದರೂ ವಾಸ್ತವವಾಗಿ ಹೇರಳ ಹಣವೊಂದೇ ಶ್ರೀಮಂತಿಕೆಯಲ್ಲ. ಕುಬೇರನ ವಂಶಸ್ತನೇ ಇರಬೇಕು ಎನ್ನುವಷ್ಟು ಶ್ರೀಮಂತಿಕೆ ಇದ್ದರೂ ದೇಹ ರೋಗದ ಗೂಡಾಗಿದ್ದರೆ ಬಯಸಿದ್ದನ್ನು ಬಾಯಿಗೆ ಹಾಕದೇ ಕೊರಗಬೇಕಾಗುತ್ತದೆ. ಕಣ್ಮುಂದೆ ಏನೆಲ್ಲ ಇದ್ದರೂ ತಿನ್ನುವ ಭಾಗ್ಯ ಅವನಿಗಿರುವುದಿಲ್ಲ. ಅವನ ಪಾಲಿಗೆ ಔಷಧಿಯೇ ಆಹಾರ ಇಲ್ಲಿ ನಾನು ಹೇಳ ಹೊರಟಿದ್ದು ಇಷ್ಟೆ ಹಣದಿಂದ ಔಷಧಿಯನ್ನು ಕೊಳ್ಳಬಹುದು ಆದರೆ ಆರೋಗ್ಯವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಹಿರಿಯರು ಹೇಳಿದ್ದು ಆರೋಗ್ಯ ಸಂಪತ್ತಿಗಿoತ ದೊಡ್ಡ ಸಂಪತ್ತಿಲ್ಲವೆoದು. ಹಣವಿದ್ದೂ , , , , ಹಣಕಾಸಿನ ಅನುಕೂಲತೆ ಇದ್ದು, ಆರೋಗ್ಯ ಚೆನ್ನಾಗಿದ್ದು ಮನಸ್ಸಿಗೆ ನೆಮ್ಮದಿ ಇಲ್ಲದಿದ್ದರೆ ಬದುಕು ಸಾಕ್ಷಾತ್ ನರಕ ದರ್ಶನ. ಹಣದಿಂದ ಒಂದೊಳ್ಳೆ ಹಾಸಿಗೆಯನ್ನು ಕೊಳ್ಳಬಹುದು. ಆದರೆ ನಿದ್ದೆಯನ್ನಲ್ಲ. ಒಳ್ಳೆಯ ಮನೆ ಕೊಂಡುಕೊಳ್ಳಬಹುದು. ಆತ್ಮೀಯರ ಪ್ರೀತಿ ವಿಶ್ವಾಸ ಕೊಂಡುಕೊಳ್ಳಲು ಸಾಧ್ಯವಿಲ್ಲ. ಹಣವಿದ್ದು ಅದನ್ನು ಉಳಿಸುವ ಬೆಳೆಸುವ ಜ್ಞಾನವಿರದಿದ್ದರೆ ಸಿರಿವಂತಿಕೆ ಅಧೋಗತಿ ಕಾಣುವುದು ಖಂಡಿತ. ಹಣದಿಂದ ಪುಸ್ತಕವನ್ನು ಕೊಳ್ಳಬಹುದೇ ಹೊರತು ಜ್ಞಾನವನ್ನಲ್ಲ. ಇವೆಲ್ಲ ಉದಾಹರಣೆಗಳಿಂದ ತಿಳಿದು ಬರುವುದೇನೆಂದರೆ ಹಣವೊಂದೇ ಸಿರಿವಂತಿಕೆಯಲ್ಲ. ಯಾರಿಗೆ ಯಾವುದು ಇಲ್ಲವೋ ಅದನ್ನು ಪಡೆದುಕೊಳ್ಳಲು ಹೋರಾಡಿ ಪಡೆಯುವುದು ಶ್ರೀಮಂತಿಕೆ. ಕೃಷಿ ಮನುಷ್ಯರಿಗೆ ಹೋಲಿಸಿದರೆ ಲಕ್ಷಾಂತರ ಪಟ್ಟು ಚಿಕ್ಕದಿರುವ ಇರುವೆಯ ಬದುಕಿನಿಂದ ನಾವು ಕಲಿಯಬೇಕಾದ್ದು ಬಹಳ ಇದೆ. ಯಶಸ್ವಿ ಸಹಬಾಳ್ವೆ, ವ್ಯವಸ್ಥಿತ, ಅತ್ಯಂತ ಸಮರ್ಥ ಜೀವನ ಕೌಶಲವನ್ನು ಅಳವಡಿಸಿಕೊಳ್ಳಬೇಕಿದೆ. ಇತ್ತೀಚಿನ ಶೋಧಗಳ ಪ್ರಕಾರ ಪ್ರಸ್ತುತ ಧರೆಯಲ್ಲಿ ಸುಮಾರು ೧೨೦೦೦ ಇರುವೆ ಪ್ರಭೇದಗಳಿವೆ. ೮೦೧ ಕೋಟಿ ಜನರ ಪ್ರತಿಯೊಬ್ಬರಿಗೂ ಸರಾಸರಿ ಹನ್ನೆರಡುವರೆ ಲಕ್ಷ ಇರುವೆಗಳು. ಇಷ್ಟು ದೊಡ್ಡ ಸಂಖ್ಯೆಯಲ್ಲಿವೆ. ಈ ಅಲ್ಪಗಾತ್ರದ ಜೀವಿ ಬೆರಗು ಹುಟ್ಟಿಸುವ ಕೌತುಕಗಳಿಂದ ಕೂಡಿದೆ. ಪ್ರಕೃತಿಗೆ ಇರುವೆಗಳಿಂದ ಮಹತ್ತರ ಕೊಡುಗೆಯೂ ಇದೆ. ಇಡೀ ಜೀವಲೋಕದಲ್ಲಿ ಕೃಷಿ ಕೆಲಸ ಕೈಗೊಳ್ಳುವ ಏಕೈಕ ಮನುಷ್ಯೇತರ ಪ್ರಭೇದ ಇರುವೆ ಲೋಕದಲ್ಲಿದೆ. ರೈತ ಇರುವೆ ಎಂದೇ ಹೆಸರಾಗಿರುವ ಈ ಇರುವೆಗಳು ನಿಧಿಷ್ಟ ಸಸ್ಯಗಳ ಎಲೆಗಳನ್ನು ಕತ್ತರಿಸಿ ಸಾಗಿಸಿ ಗೂಡಿನಲ್ಲಿ ರಾಶಿ ಹಾಕುತ್ತವೆ. ಆ ಎಲೆ ರಾಶಿಯ ಮೇಲೆ ವಿಶಿಷ್ಟ ಶಿಲೀಂದ್ರಗಳನ್ನು ಬಿಟ್ಟು ಆಹಾರ ತಯಾರಿಸಿಕೊಳ್ಳುತ್ತವೆ. ಆಧುನಿಕ ಮನುಷ್ಯ ಪ್ರಕೃತಿ ಪ್ರೇಮಿಯಾಗಿ ಬಾಳಬೇಕಿದೆ. ಕಾರಣ ಪರಿಸರ ಸ್ನೇಹಿ ಬದುಕನ್ನು ಬದುಕುವ ಇರುವೆಗಳಂತೆ ನಾವು ಆಪತ್ಕಾಲಕ್ಕೆ ಮಾತ್ರ ಕೂಡಿಡುವ ಸ್ವಭಾವವನ್ನು ಬೆಳೆಸಿಕೊಳ್ಳಬೇಕು. ನಮ್ಮ ಬಳಿ ಎಷ್ಟು ಹಣವಿದೆ ಎಂದು ನಮಗೆ ತಿಳಿರುತ್ತದೆ. ಆದರೆ ನಮ್ಮ ಬಳಿ ಎಷ್ಟು ಸಮಯವಿದೆ ಎಂದು ನಮಗೆ ತಿಳಿದಿಲ್ಲ. ಸಮಯ ಬರುವ ಮುನ್ನ ಶ್ರೀಮಂತಿಕೆಯ ಭ್ರಮೆಯಲ್ಲಿ ಬದುಕುವುದನ್ನು ಬಿಡಬೇಕು. ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಎಲ್ಲವೂ ನನಗೆ ಬೇಕು ಎಂಬ ಭಾನೆಯೇ ಕಾರಣವಾಗಿದೆ. ಈ ಭಾವ ನಾಶವಾದಾಗ ಮಾತ್ರ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಮನಸ್ಸು ಸುಮಧುರ ಸ್ಥಿತಿಯಲ್ಲಿದ್ದಾಗ ಆರೋಗ್ಯಕರ ಭಾವನೆಗಳು ಹೊರಹೊಮ್ಮುತ್ತವೆ. ದೊಡ್ಡ ಸಿರಿ ಶ್ರೀಮಂತರೆoದು ಅಟ್ಟಹಾಸ ಮೆರೆದವರು ಯಾರೂ ಜನಮಾನಸದ ನೆನಪಿನಲ್ಲಿ ಉಳಿದಿಲ್ಲ. ಹೃದಯ ಸಿರಿವಂತರು ಮಾತ್ರ ಜನರ ಹೃದಯಗಳನ್ನು ಗೆದ್ದಿದ್ದಾರೆ. ಭಾವ ಮಾಧುರ್ಯದ ಶ್ರೀಮಂತಿಕೆಯಿoದ ಕೂಡಿರುವ ಜೀವನ ಜನಪ್ರಿಯವಾಗುತ್ತದೆ ಎಂಬುದನ್ನು ಮರೆಯುವಂತಿಲ್ಲ. ಸಿರಿವಂತಿಕೆ ಕೇವಲ ಪಡೆಯುವುದರಲ್ಲಿಲ್ಲ. ಅವಶ್ಯವಿರುವವರಿಗೆ ದಾನ ಮಾಡುವುದರಲ್ಲಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರಲ್ಲಿದೆ. ದ ಮನಗಳನ್ನು ಪೋಣಿಸೋಣ. ಇನ್ನಾದರೂ ಎಚ್ಚೆತ್ತುಕೊಂಡು ಹೃದಯಸಿರಿಯೇ ದೊಡ್ಡ ಸಿರಿಯೆಂದು ಸರಿಯಾಗಿ ತಿಳಿದುಚೂರಾಕೊಂಡು ಒಬ್ಬರಿಗೊಬ್ಬರು ಅಕ್ಕರೆಯ ಸಕ್ಕರೆಯ ತಿನಿಸುತ್ತ ಮಾನವೀಯತೆಯ ಸಿರಿವಂತಿಕೆಯನ್ನು ಮೆರೆಯೋಣವಲ್ಲವೇ? ಜಯಶ್ರೀ.ಜೆ. ಅಬ್ಬಿಗೇರಿ
ಜಯಶ್ರೀ.ಜೆ. ಅಬ್ಬಿಗೇರಿ ಅವರ ಲಹರಿ “ದೊಡ್ಡ ಸಿರಿ – ಹೃದಯ ಸಿರಿ” Read Post »


