ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಡಾ. ಲತಾ ಎ ಆರ್ ಬಾಳೆಹೊನ್ನೂರು “ಭರವಸೆ”

ಕಾವ್ಯ ಸಂಗಾತಿ ಡಾ. ಲತಾ ಎ ಆರ್ ಬಾಳೆಹೊನ್ನೂರು “ಭರವಸೆ”. ಕಣ್ಣಿನ ನೋಟದಲ್ಲಿ ನೀಡಿದೆ ಭರವಸೆದೇವರಲಿ ನೀಡಿ ಬೇಡಿದೆ ಬೊಗಸೆಹೃದಯದಲಿ ನೀನೆಂದು ಸ್ಥಿರ ಮನಸೇನಿತ್ಯ ನೂತನ ನೆನಪೆoದು ನನಸೇ ಅಲೆ ಅಲೆಯಾಗಿ ಚಿಮ್ಮಿಸಿದೆ ಬಿಸಿ ಉಸಿರೇಬಾಳ ಬದುಕಲ್ಲಿ ನಮ್ಮಿಬ್ಬರ ಬೆರಸೇಸಂಸಾರದ ರಥ ನಡೆಸುವ ಕನಸೇತುಂಬುವುದು ಸಂತಸದ ಹೊಸ ಹಸಿರೇ ಬೆಚ್ಚನೆಯ ಗೂಡಲ್ಲಿ ಸುಂದರ ಲೋಕವದುಅನುಭವದ ಸವಿಸ್ತಾರ ಕೇಳುವುದುಜೀವನ ಚಕ್ರ ನಿಲ್ಲದೆ ಉರುಳುವುದುಸುಮಧುರ ಪ್ರೀತಿ ಅಳಿಯದೆ ಉಳಿಯುವುದು ಅನನ್ಯ ಅವಿಸ್ಮರಣೀಯ ಕಂಡ ಬೆರಗುಬೇಕಿಲ್ಲ ಜಂಜಾಟದ ಯಾವ ಕೊರಗುನೆಮ್ಮದಿಯ ಗೂಡಲ್ಲಿ ಕೈ ಹಿಡಿದು ಸಾಗುದೊರಕಿದೆ ಹೊಸತನದ ಹೊಸ ಮೆರಗು ಡಾ. ಲತಾ ಎ ಆರ್ ಬಾಳೆಹೊನ್ನೂರು.

ಡಾ. ಲತಾ ಎ ಆರ್ ಬಾಳೆಹೊನ್ನೂರು “ಭರವಸೆ” Read Post »

ಕಾವ್ಯಯಾನ

ವೈ.ಎಂ.ಯಾಕೊಳ್ಳಿ ಅವರ “ಕವಿತೆ”

ಕಾವ್ಯ ಸಂಗಾತಿ ವೈ.ಎಂ.ಯಾಕೊಳ್ಳಿ ಕವಿತೆ ಎನಿತೊ‌ ಮಾತುಗಳುಮೌನದಲಿ‌ ಕರಗಿನಿಂತು ಹೋಗಿದೆಬಂಧವದು ಸೊರಗಿ ಎದೆಯ ಭಾವಗಳುಆಡದೆಯೆ ಉಳಿದುದೂರವಾದ ಹೃದಯಅಳುತಿದೆ ಮನದಿ ಕಾರಣವೆ ಇರದನೋವಿನ ಸರಮಾಲೆಯಾರದೇನೋ ಶಾಪವುತಿಳಿಯದಾವ ಲೀಲೆ ದಾಟದ ಸಾಗರವುಎದೆಗಳ ನಡುವೆಮುಗಿದು ಹೋದ ಮೇಲೆಮಾತವು ಬರಿ ಸಪ್ಪೆ ಕಡಿದ ಬಂಧವನುಜೋಡಿಸುವದೇ ತಂತುದಾರಿ ಕಾಣದ ಮನಮರುಗುತಿದೆ ಇಂತು ವೈ.ಎಂ.ಯಾಕೊಳ್ಳಿ

ವೈ.ಎಂ.ಯಾಕೊಳ್ಳಿ ಅವರ “ಕವಿತೆ” Read Post »

ಪುಸ್ತಕ ಸಂಗಾತಿ

“ಮಾಳೇಟಿರ ಸೀತಮ್ಮ ವಿವೇಕ್ ಅವರ ವಿವೇಕಜ್ಞಾನ ಕೃತಿ ಮನಸ್ಸು. ಇದು ಕೊಡವ ಭಾಷೆಗೆ ತರ್ಜುಮೆಗೊಂಡ ಕೊಡವ ಚರಿತ್ರೆ ಪುಸ್ತಕ” ಗೊರೂರು ಅನಂತರಾಜು

ಪುಸ್ತಕ ಸಂಗಾತಿ ಗೊರೂರು ಅನಂತರಾಜು “ಮಾಳೇಟಿರ ಸೀತಮ್ಮ ವಿವೇಕ್ ಅವರ ವಿವೇಕಜ್ಞಾನ ಕೃತಿ ಮನಸ್ಸು. ಕೊಡವ ಭಾಷೆಗೆ ತರ್ಜುಮೆಗೊಂಡ ಕೊಡವ ಚರಿತ್ರೆ ಪುಸ್ತಕ” ಇದನ್ನ ಕೈಲಾಸ ಅಂದುಕೊಂಡು ಶಿವನನ್ನು ನೋಡಲು ಹೊರಟುಬಿಟ್ಟಿದ್ದೆಯಾ..? ‘ನೀವು ನನ್ನನ್ನು ಸರಪಳಿಯಲ್ಲಿ ಬಂಧಿಸಬಹುದು, ನೀವು ನನ್ನನ್ನು ಹಿಂಸಿಸಬಹುದು, ನೀವು ಈ ದೇಹವನ್ನು ಸಹ ನಾಶಪಡಿಸಬಹುದು. ಆದರೆ ನೀವು ಎಂದಿಗೂ ನನ್ನ ಮನಸ್ಸನ್ನು ಬಂಧಿಸಲಾಗುವುದಿಲ್ಲ.             -ಮಹಾತ್ಮ ಎಂ.ಕೆ.ಗಾಂಧಿ. ಮಾಳೇಟಿರ ಸೀತಮ್ಮ ವಿವೇಕ್  ಅವರ ಇತ್ತೀಚಿನ ವಿವೇಕಜ್ಞಾನ ಕೃತಿ ಮನಸ್ಸು. ಇದು ಕೊಡವ ಭಾಷೆಗೆ ತರ್ಜುಮೆಗೊಂಡ ಕೊಡವ ಚರಿತ್ರೆ ಪುಸ್ತಕವೊಂದರ ನಂತರ ಮೂಡಿ ಬರುತ್ತಿರುವ ನನ್ನ ಚೊಚ್ಚಲ ಕನ್ನಡ ಕೃತಿಯಾಗಿದೆ ಎನ್ನುವ ಮೇಡಂ ಅವರ ತವರು ಮನೆ ಹೆಸರು ಕಂಬೀರಂಡ. ಮೂರ್ನಾಡು ಬಾಡಗ ಗ್ರಾಮ. ಕೊಡಗು ಜಿಲ್ಲೆ. ಚರಿತ್ರೆ ಅಧ್ಯಯನಗಾರ್ತಿಯಾದ ಇವರ ಮನಸ್ಸು ಕೃತಿ ಸಾಕಷ್ಟು ಅಧ್ಯಯನ ನಡೆಸಿ ವಿಶಿಷ್ಟ ಮಾಹಿತಿ ಅನುಭವಗಳನ್ನು ಕ್ರೋಢೀಕರಿಸಿ ಬರೆದ ಕೃತಿ.  ಮಾನವ ಜೀವನದ ಅತಿ ಮಹತ್ವದ ಆದರೆ ಅತೀ ಅಲಕ್ಷಿತ ಶಕ್ತಿ ಮನಸ್ಸು. ಇದು ಕಾಣುವುದಿಲ್ಲ. ಕಾಣಿಸಿಕೊಳ್ಳುವ ಎಲ್ಲರಿಗೂ ಇದು ಸ್ಫರ್ಶಿಸಬಹುದಾದ ಅಂಗವೂ ಅಲ್ಲ. ಅದರ ಪ್ರತಿಯೊಂದು ಅನುಭವದ ಸ್ಫಂದನ. ಅದರಿಂದಲೇ ಈ ಕೃತಿಯಲ್ಲಿ ಕಾಣುವ ಮನ ಏವಂ ಮನುಷ್ಯಾಣಾಂ ಕಾರಣಂ ಬಂಧಂ ಮೋಕ್ಷಯೋ: ಎಂಬ ಪುರಾತನ ತತ್ವ ವಾಕ್ಯವು ಮನಸ್ಸಿನ ಸ್ವಭಾವವನ್ನು ನೇರವಾಗಿ ಸ್ಫಷ್ಟಪಡಿಸುತ್ತದೆ. ಮನಸ್ಸೆ ಬಂಧನಕ್ಕೂ ಕಾರಣ. ಅದೇ ಮುಕ್ತಿಗೂ ದಾರಿ ಎಂದಿದ್ದಾರೆ ಇವರ ಪತಿ ಮಾಳೇಟಿರ ವಿವೇಕಾನಂದ ಪೊನ್ನಪ್ಪನವರು.   ಮನಸ್ಸು ಒಂದು ಅಗೋಚರ ಅತೀಂದ್ರಿಯ ಶಕ್ತಿಯಾಗಿದೆ. ಹೆಣ್ಣು ಗಂಡೆನ್ನದೆ ಸರ್ವರೊಳಗೂ ಇರುವ ಮನಸ್ಸು ಪ್ರತಿಯೊಬ್ಬರಿಗಿರುವ ಅವರವರ ದೇಹದೊಂದಿಗೆ ಜೀವಮಾನವೆಲ್ಲ ಚಲಿಸುವ, ದೈಹಿಕ ಅರಿಹಂತಗಳಿಂದ ಸಮ್ಮಿಳಿತವಾಗಿರುವ ಅತೀಂದ್ರಿಯವಾಗಿದೆ. ಬುವಿಯಲ್ಲಿ ರೂಪ ತಾಳುವ ದೇಹದೊಂದಿಗೆ ಗಾಢವಾದ ನಂಟು ಬೆಸೆದುಕೊಂಡಿರುವ ಮನಸ್ಸಿಗೆ ಘಾಸಿಯಾದರೆ ಇಡೀ ಶರೀರವೇ ನಾಶವಾಗುತ್ತದೆ. ಅಂತಹ ಘನತ್ತರವಾದ ನಮ್ಮೊಳಗೆ ಇರುವ ಮನ: ಮಾತೃಕೆಯ ಬಗ್ಗೆ ಯಾರೂ ಹೆಚ್ಚಿನ ಗಮನ ಹರಿಸದೆ ಇರುವುದರಿಂದಲೇ ನಾವು ಮಾತ್ರವಲ್ಲದೆ ಕುಟುಂಬ, ಸಮಾಜ, ದೇಶವೇ ಏರುಪೇರು ದೃಷ್ಟಿಕೊನವನ್ನು ಹೊಂದಿದೆ.ಮಾನವ ಸಂಘ ಜೀವಿ. ಎಲ್ಲರ ಮನಸ್ಸಿಗು ಒಟ್ಟಿಗೆ ಬಾಳುವುದೇ ಪ್ರಧಾನ ಬಯಕೆ ಆಗಿರುತ್ತದೆ. ಹಾಗೆಂದು ಒಟ್ಟಿಗೆ ಬಾಳುವುದು ಸುಲಭದ ಮಾತಲ್ಲ. ನನಗೆ ಜಿ.ಎಸ್. ಶಿವರುದ್ರಪ್ಪನವರ ಎಲ್ಲೊ ಹುಡುಕಿದೆ ಇಲ್ಲದ ದೇವರ ಕಲ್ಲುಮಣ್ಣುಗಳ ಗುಡಿಯೊಳಗೆ ಎಂಬ ಭಾವಗೀತೆ ನೆನಪಾಗುತ್ತದೆ. ಅದರಲ್ಲಿನ ಹತ್ತಿರವಿದ್ದು ದೂರ ನಿಲ್ಲುವೆವು ನಮ್ಮ ಅಹಂಮ್ಮಿನ ಕೋಟೆಯಲ್ಲಿ. ಹೊಂದಿಕೆ ಎಂಬುದು ಎಷ್ಟು ಕಷ್ಟವೋ ನಾಲ್ಕು ದಿನದ ಈ ಬಾಳಿನಲಿ.. ಹೌದು ಮನಸ್ಸಿನ ಅರಿವಿಕೆ ಇಲ್ಲದೆ ಇರುವುದೇ ಆ ಹೊಂದಿಕೆ ಸಾಧ್ಯವಾಗದೆ ಇರಲು ಕಾರಣ.ಮೇಡಂ ಅವರು ತಮ್ಮ ವೈಯಕ್ತಿಕ  ಜೀವನಾನುಭವಗಳನ್ನು ಆತ್ಮ ಪರಿಶೀಲನೆಯ ಕಣ್ಣಿನಿಂದ ನೋಡುತ್ತಾ, ಸಂಕಟಗಳನ್ನು ಜ್ಞಾನವಾಗಿ ಪರಿವರ್ತಿಸುವ ಪ್ರಯತ್ನ ಮಾಡಿದ್ದಾರೆ. ಕೊಡಗಿನ ಪ್ರಕೃತಿ ವಾತಾವರಣದಲ್ಲಿ ಬೆಳೆದ ಬಾಲ್ಯ, ವಿಭಿನ್ನ ಸಂಸ್ಕೃತಿಗಳ ಅನುಭವ, ಜೀವನದ ಕಠಿಣ ಘಟ್ಟಗಳು, ಆರೋಗ್ಯ ಸಂಕಟಗಳು, ಆತ್ಮ ಅನ್ವೇಷಣೆಯ ಕ್ಷಣಗಳು ಇವೆಲ್ಲವೂ ಈ ಕೃತಿಗೆ ಜೀವ ತುಂಬಿವೆ. ಹಿಮಾಚಲ ಪ್ರದೇಶದ ರೋಹತಂಗ್ ಪಾಸ್ ನಲ್ಲಿ ಸಂಭವಿಸಿದ ಮರಣಭಯದ ಅನುಭವ   ದಾಖಲಿಸುತ್ತಾರೆ.ನಮ್ಮ ಕುಟುಂಬ ಹಿಮಾಚಲ ಪ್ರದೇಶಕ್ಕೆ ಪ್ರವಾಸ ತೆರಳಿ ಮನಾಲಿಯ ಹಿಡಿಂಬ ದೇವಸ್ಥಾನ ಸಮೀಪದಿಂದ ಸುಮಾರು ೫ ಸಾವಿರ ಮೀ.ಗಿಂತಲೂ ಎತ್ತರದ ರೋಹತಂಗ್ ಪಾಸ್ ನ ಪರ್ವತದೆಡೆ  ಪ್ರಯಣ ಬೆಳಸಬೇಕಿತ್ತು. ಅದು ಹಿಮ ಪರ್ವತವಾಗಿ ಸ್ಥಳೀಯರು ಬೆಚ್ಚಗಿನ ಮೈಹೊದಿಕೆ ಹಾಕಿಕೊಳ್ಳುವಂತೆ ಹೇಳಿದ್ದರು. ನಾವು ಅದೇ ರೀತಿ ತಯಾರಾಗಿ ಹೊರಟೆವು. ಅನೇಕ ತಿರುವುಗಳ ರಸ್ತೆ. ಕ್ರಮಿಸಬೇಕಾಗಿದ್ದ ಎತ್ತರ ನಾವಿದ್ದ ಸ್ಥಳದಿಂದ ತುಂಬಾ ಮೇಲೆ ಮೋಡ ಹರಡಿಕೊಂಡಂತೆ ಇತ್ತು. ಹಾಗಾಗಿ ನಮ್ಮ ವಾಹನದ ಚಾಲಕ ನಮಗೆ ಶ್ವಾಸಕೋಶ ಸಂಬಂಧಿ ತೊಂದರೆ ಇರುವವರಿಗೆ ಆಮ್ಲಜನಕ ಕೊರತೆ ಬಾಧಿಸಬಹುದೆಂದು ಮುನ್ಸೂಚನೆ ನೀಡಿದ್ದರು. ನನ್ನ ತಾಯಿಗೆ ಉಬ್ಬಸದ ಸಮಸ್ಯೆ ಇತ್ತು. ನಾವು ಅವರ ಬಗ್ಗೆ ಯೋಚಿಸುತ್ತಾ ವಾಹನದಲ್ಲಿ ಕುಳಿತು  ಎಲ್ಲವನ್ನು ಅಹ್ಲಾದಿಸುತ್ತ ತುತ್ತ ತುದಿ ತಲುಪಿದೆವು. ಇನ್ನೇನು ಹಿಮ ಹರಡಿದ್ದ ಜಾಗ  ಮುಟ್ಟಬೇಕು. ಅಷ್ಟು ಹತ್ತಿರದಲ್ಲಿ ಹಿಮಾವೃತ ಸುಂದರ ಪುಟ್ಟ ಗುಡ್ಡ! ಅದನ್ನು ನೋಡುತ್ತ ವಾಹನದಿಂದ ಎಲ್ಲರೂ ಖುಷಿಯಿಂದ  ಇಳಿದರು. ಸುತ್ತಮುತ್ತಲ ದೃಶ್ಯಗಳು ವರ್ಣಿಸಲು ಅಸಾಧ್ಯ!  ಸೌಂದರ್ಯ ಅಮೋಘ! ದೂರದಲ್ಲಿ ಹಿಮಚ್ಛಾದಿತ ಬೆಟ್ಟದ ತುದಿಯಲ್ಲಷ್ಟೇ ಸೂರ್ಯನ ಕಿರಣಗಳು ಹಾಯ್ದು ಬೆಟ್ಟ ಬೆಳ್ಳಿಯಂತೆ ಹೊಳೆಯುತ್ತಿತ್ತು. ಆ ಸೊಂಪನ್ನು ನೋಡ ನೋಡುತ್ತಿದ್ದಂತೆಯೇ ಆರೋಗ್ಯವಾಗಿದ್ದ ನಾನು ದೊಪ್ಪೆಂದು ಕುಸಿದ್ದು ಬಿದ್ದೆ! ಬಿದ್ದದ್ದು ನನಗೆ ತಿಳಿಯಲಿಲ್ಲ. ಎಷ್ಟು ಸಮಯದ ನಂತರ ಎಚ್ಚರವಾಯಿತು ತಿಳಿಯಲಿಲ್ಲ. ಅಲ್ಲಿ ನಾನು ಎದ್ದು ಕುಳಿತಾಗ ಕಿವಿಗೆ ಬಿದ್ದದ್ದು ನನ್ನ ತಾಯಿಯ ಪ್ರಶ್ನೆ. ಇದನ್ನ ಕೈಲಾಸ ಅಂದುಕೊಂಡು ಶಿವನನ್ನು ನೋಡಲು ಹೊರಟುಬಿಟ್ಟಿದ್ದೆಯಾ..ಎಂದು! ಆಗ ನಾನು ಅಲ್ಲಿದ್ದೆ. ಇಲ್ಲಿಗೆ ಹೇಗೆ ಬಂದೆ? ಎಷ್ಟು ಇಂಪಾದ ನಾದಗಳು ಅಹ್ಲಾದಕರ ಪರಿಮಳ ಅಲ್ಲಿ ಇದ್ದವಲ್ಲ ಎಂದಿದ್ದೆ. ಅಲ್ಲಿ ಆಗ ಬಿದ್ದಿದ್ದ ನನ್ನ ದೇಹದ ಸುತ್ತಲೂ ಜನ ಸೇರಿ ಮುಟ್ಟಿ ಉಪಚರಿಸುತ್ತಿದ್ದರೂ ಶರೀರಕ್ಕೆ ಯಾವುದೇ ಸ್ಫರ್ಶಾನುಭವ ಆಗುತ್ತಿಲ್ಲ! ಆದರೆ ನಾನು ಸಂಪೂರ್ಣ ಎಚ್ಚರವಾಗಿಯೇ ಇದ್ದೆ!  ಮೊದಲೇ ನಾನು ಪ್ರಕೃತಿ ಸೌಂದರ್ಯ ತಲ್ಲೀನ ಅಪ್ಪಟ  ಆರಾಧಕಿ. ಆ ಕಾರಣಕ್ಕೋ ಏನೋ ಯಾವ ಬೆಳ್ಳಿಬೆಟ್ಟ ನೋಡುತ್ತಿದ್ದೆನೋ ಅದರೆಡೆಗೆ ನಾನು ಆರಾಮಾಗಿ ಹೊಗುತ್ತಿದ್ದುದು ಚೆನ್ನಾಗಿಯೇ ತಿಳಿಯುತ್ತಿತ್ತು. ಹತ್ತಿರ ತಲುಪಿದಾಗ ಅದರ ಆಸುಪಾಸು ಇಂಪಾದ ನಾದ ಕೇಳಿಸುತ್ತಿತ್ತು. ಸುಂದರ ಹೂವಿನ ಪರಿಮಳ ಹರಡಿತ್ತು.  ಎಂದೂ ನೋಡಿರದ ಸುಂದರ ಪಕ್ಷಿಗಳು ಹಾರಾಡುತ್ತಾ ಇದ್ದಿದ್ದು ಗ್ರಹಿಸಿದ್ದೆ.  ನೀರು ಹರಿಯುವ ನಾದ ಬರುತ್ತಿದ್ದ ಕಡೆ ಹೋಗಲು ಅಣಿಯಾದಾಗ ದೂರದಲ್ಲಿ ಹೃದಯಕ್ಕೆ ಹತ್ತಿರವಾಗಿ ನನ್ನನ್ನು ಕರೆಯುತ್ತಿರುವುದು ಕೇಳಿಸಿ ಆ ಕೂಗು ಬಂದ ಕಡೆಗೆ ಆ ಸುಂದರ ತಾಣ ಬಿಟ್ಟು ಹೊರಡಲು ಮನಸ್ಸಿಲ್ಲದಿದ್ದರೂ ಗುಡ್ಡದಿಂದ ಇಳಿಯುತ್ತ ಹತ್ತಿರ ತಲುಪಿದಾಗ.. ಮುಖಕ್ಕೆ ನೀರು ಚಿಮುಕಿಸಿ ಮೂಗಿಗೆ ಕರ್ಪೂರವನ್ನು ಮೂಸಿಸುತ್ತಿರುವ ಕಾಲ್ಚೀಲ ಕಳಚಿ ಕಾಲು ತಿಕ್ಕುತ್ತಿರುವ ದೈಹಿಕ ಅನುಭವಗಳಾದವು. ಅಲ್ಲಿ ಕಣ್ಣು ತುಂಬಿಕೊಂಡು ಕರೆಯುತ್ತಿದ್ದವರು ನನ್ನ ತಾಯಿ! ನನ್ನ ಪತಿ ತಂಗಿ ಮಗ ಎಲ್ಲರು ಕರೆಯುತ್ತಿದ್ದರೂ ಅಮ್ಮನ ಕೂಗು ಮಾತ್ರ ಕೇಳಿಸುತ್ತಿದ್ದದ್ದು ಮಾತ್ರ ವಿಚಿತ್ರ ಎನಿಸಿತು. ಅದೇ ಹೃದಯದ ಕೂಗು, ಎದೆಯಾಳದ ಕೂಗು ಎಂಬುದು ಅರಿವಾಯಿತು.ಈ ದೇಹದಿಂದ ಪ್ರಜ್ಞೆ ಹೋಗುವಾಗ ಮತ್ತು ಬರುವಾಗ ಪೂರ್ಣ ಕತ್ತಲಲ್ಲಿ ಸಾಗಿದ್ದರೂ ಬರಿ ಕಣ್ಣಿಗೆ ಕಾಣದ ಪ್ರಕಾಶಮಾನವಾದ ಬೆಳಕಿನಲ್ಲಿ ಸಂಚರಿಸಿದ್ದೆ! ನನಗೆ ಕನಸುಗಳು ಸಾಕಷ್ಟು ಬಿದ್ದಿವೆ. ಆದರೆ ನನ್ನ ಮನಸ್ಸು ೫೦-೬೦ ಕಿ.ಮೀ. ದೂರದಷ್ಟಿದ್ದ ಬೆಟ್ಟದ ಸಮೀಪದವರೆಗೆ ದೇಹದೊಂದಿಗೆ ಪಯಣಿಸಿದಂತಹ ಅನುಭವ ಪಡೆದಿದ್ದು, ಅದೂ ಪೂರ್ಣ ಪ್ರಜ್ಞೆಯಲ್ಲಿ  ಎಂದಿಗೂ ಮರೆಯಲಾಗದು. ದೇಹಪ್ರಜ್ಞೆ ಕ್ಷೀಣಿಸಿದ ಕ್ಷಣ ಅನುಭವಿಸಿದ ಆಂತರಿಕ ಪ್ರಕಾಶ, ನಾದ, ಪರಿಮಳ, ಇವು ಮನಸ್ಸಿನ ಅತೀತ ಆಯಾಮಗಳ ಬಗ್ಗೆ ಆಳವಾದ ಚಿಂತನೆಗೆ ದಾರಿ ಮಾಡಿಕೊಟ್ಟಿವೆ.ಇದಾದ ನಂತರ ತಾಯಿ ತಂದೆ ಇರುವವರೆಗೂ ನಾನಾಗಿಯೇ ನನ್ನ ಮರಣವನ್ನೆಂದೂ ಬಯಸಬಾರದೆಂಬ ಮನಸ್ಸು ಬೆಳೆದಿದೆ. ಅಷ್ಟೇ ಅಲ್ಲ ಯಾರ ಮರಣವನ್ನೂ ಬಯಸಬಾರದು. ತದ್ವಿರುದ್ದ ಗುಣದವರೊಂದಿಗೆ ಜೊತೆಯಲ್ಲೇ ವಾಸಿಸಬೇಕಾದಾಗಲೂ ಯಾರನ್ನೂ ದ್ವೇಷಿಸದೆ ನನ್ನ ಕರ್ತವ್ಯಗಳನ್ನು ಯಾವ ಕಾರಣಕ್ಕೂ ಕೈಬಿಡದೆ ಖುಷಿಯಿಂದ ಮಾಡುತ್ತಿರಬೇಕೆಂಬ ನಿಲುವು ತಾಳಿದೆ.. ಅದಾಗಿ ಮೇಡಂ ಧ್ಯಾನ ಯೋಗ ಸಾಧನೆ ಮೂಲಕ ಮಹರ್ಷಿ ಪ್ರಭಾಕರ್ ಗುರೂಜಿ, ಆಚಾರ್ಯ ಆದಿನಾಥ್, ಶ್ರೀ ರವಿಶಂಕರ್  ಆರ್ಟ್ ಆಫ್ ಲಿವಿಂಗ್ ಯೋಗ ಸಾಧಕರ ಮಾರ್ಗದರ್ಶನದಲ್ಲಿ ಮನಸ್ಸಿನ ಸ್ಕೈರ್ಯ ಮತ್ತು ಆತ್ಮಶಾಂತಿ ಕಂಡ ಅನುಭವಗಳು ಈ ಕೃತಿಯ ಆತ್ಮವಾಗಿದೆ. ಗೊರೂರು ಅನಂತರಾಜು, ಹಾಸನ.ಮೊ: ೯೪೪೯೪೬೨೮೭೯.ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ೩ನೇ ಕ್ರಾಸ್, ಹಾಸನ-೫೭೩೨೦೧.

“ಮಾಳೇಟಿರ ಸೀತಮ್ಮ ವಿವೇಕ್ ಅವರ ವಿವೇಕಜ್ಞಾನ ಕೃತಿ ಮನಸ್ಸು. ಇದು ಕೊಡವ ಭಾಷೆಗೆ ತರ್ಜುಮೆಗೊಂಡ ಕೊಡವ ಚರಿತ್ರೆ ಪುಸ್ತಕ” ಗೊರೂರು ಅನಂತರಾಜು Read Post »

ಇತರೆ, ಜೀವನ

“ವಿದಾಯ” ಕವಿತಾ ಶ್ರೀನಿವಾಸ್‌ ನಾಯಕ್

ವಿಶೇಷಲೇಖನ ಕವಿತಾ ಶ್ರೀನಿವಾಸ್‌ ನಾಯಕ್ “ವಿದಾಯ “ವಿದಾಯ” ಇದು ಬೆಳೆಯುವ ಹಾದಿಯ ಅನಿವಾರ್ಯ ಮೈಲುಗಲ್ಲು.​’ವಿದಾಯ’ ಎಂದರೆ ಕೇವಲ ಅಗಲುವಿಕೆ ಅಥವಾ ಅಂತ್ಯವಲ್ಲ; ಅದು ಒಂದು ಹಂತದಿಂದ ಮತ್ತೊಂದು ಹಂತಕ್ಕೆ ದಾಟಲು ನಾವು ಇಡುವ ಪಾದಾರ್ಪಣೆ. ನಮಗೆ ತಿಳಿಯದೆಯೇ ನಾವು ಪ್ರತಿದಿನ ಯಾವುದಕ್ಕೋ ಒಂದಕ್ಕೆ ವಿದಾಯ ಹೇಳುತ್ತಲೇ ಬೆಳೆಯುತ್ತಿದ್ದೇವೆ. ಹುಟ್ಟಿದ ಮಗುವಿನಿಂದ ಹಿರಿಯ ಜೀವದವರೆಗೆ, ಜೀವನವು ವಿದಾಯಗಳ ಸರಪಳಿಯೇ ಸರಿ.​ಬಾಲ್ಯಕ್ಕೆ ವಿದಾಯ: ಮುಗ್ಧತೆಯ ಸಂಭ್ರಮದ ಅಂತ್ಯ​ನಮ್ಮ ಬದುಕಿನ ಮೊದಲ ದೊಡ್ಡ ವಿದಾಯ ಎಂದರೆ ಅದು ನಮ್ಮ ಬಾಲ್ಯಕ್ಕೆ ಹೇಳುವ ವಿದಾಯ. ತೊದಲು ನುಡಿಯ ಮಗು ಸ್ವಲ್ಪ ದೊಡ್ಡದಾದಾಗ, ಅದು ತನ್ನ ಆಟಿಕೆಗಳಿಗೆ, ತನ್ನ ಅಮ್ಮನ ಮಡಿಲಿನ ಬೆಚ್ಚನೆಯ ಆರಾಮಕ್ಕೆ, ಮತ್ತು ಹೊಣೆಗಾರಿಕೆ ಇಲ್ಲದ ಆ ಮುಗ್ಧ ಆಟದ ದಿನಗಳಿಗೆ ನಿಧಾನವಾಗಿ ವಿದಾಯ ಹೇಳುತ್ತದೆ. ಶಾಲೆಯ ಹೊಸ್ತಿಲು ತುಳಿದಾಗ, ಮನೆಯ ಚೌಕಟ್ಟಿನಿಂದ ಹೊರಬಂದು ಜಗತ್ತಿನ ವಿಶಾಲತೆಯನ್ನು ಅರಿಯುವಾಗ ಬಾಲ್ಯದ ಹಕ್ಕಿ ಹಾರಿಹೋಗಿರುತ್ತದೆ. ಅದು ನೋವಿನ ವಿದಾಯವಲ್ಲ, ಆದರೆ ಬದಲಾವಣೆಯ ಮೊದಲ ಪಾಠ.​ಹದಿಹರೆಯಕ್ಕೆ ವಿದಾಯ: ಕನಸುಗಳ ಚಿಗುರು​ನಂತರ ಬರುವುದು ಹದಿಹರೆಯದ ಮಧುರ ವಿದಾಯ. ಕಿಶೋರಾವಸ್ಥೆಯ ಕನಸುಗಳು, ಗೆಳೆಯರೊಂದಿಗೆ ಕಳೆದ ಆ ಸಾಹಸಮಯ ದಿನಗಳು, ಶಾಲೆ-ಕಾಲೇಜಿನ ಆ ಸವಿ ನೆನಪುಗಳು – ಇವೆಲ್ಲವೂ ವೃತ್ತಿ ಬದುಕಿನ ಅನಿವಾರ್ಯತೆಗಳ ಮುಂದೆ ಬಿದ್ದು ಹೋಗುತ್ತವೆ. ಜವಾಬ್ದಾರಿಗಳ ಹೆಗಲೇರಿದಾಗ, ಆ ನಿರ್ಭೀತ ಹುಡುಗಾಟದ ದಿನಗಳಿಗೆ ವಿದಾಯ ಹೇಳಲೇಬೇಕಾಗುತ್ತದೆ. ಇಲ್ಲಿ ನಾವು ಬರಿಯ ವಯಸ್ಸನ್ನು ಕಳೆದುಕೊಳ್ಳುವುದಿಲ್ಲ, ಬದಲಾಗಿ ನಮ್ಮೊಳಗಿನ ಮಗುವಿನ ಅಮಾಯಕತೆಯನ್ನು ಸಮಾಜದ ಪಾಠಗಳಿಗಾಗಿ ಬಲಿ ಕೊಡುತ್ತೇವೆ.​ಯೌವನ ಮತ್ತು ಪ್ರಬುದ್ಧತೆ: ನಿರಂತರ ವಿದಾಯಗಳ ಪಯಣ​ಜೀವನವು ಮುಂದುವರೆದಂತೆ, ನಾವು ಹಳೆಯ ಮನೆಗೆ, ಹಳೆಯ ಊರಿಗೆ, ಹಳೆಯ ಗೆಳೆಯರಿಗೆ, ಕೆಲವೊಮ್ಮೆ ನಮ್ಮ ಹಳೆಯ ಆಲೋಚನೆಗಳಿಗೆ ವಿದಾಯ ಹೇಳುತ್ತಲೇ ಇರುತ್ತೇವೆ. ಕೆಲಸದ ನಿಮಿತ್ತ ಊರು ಬಿಡುವಾಗ ಬರುವ ವಿದಾಯ ಇರಬಹುದು ಅಥವಾ ನಮ್ಮ ಹಳೆಯ ತಪ್ಪುಗಳಿಗೆ ವಿದಾಯ ಹೇಳಿ ಹೊಸ ವ್ಯಕ್ತಿಯಾಗಿ ಬದಲಾಗುವ ಕ್ಷಣ ಇರಬಹುದು—ಇವೆಲ್ಲವೂ ನಮ್ಮ ಬೆಳವಣಿಗೆಯ ಸಂಕೇತಗಳೇ.​ಏಕೆ ಈ ವಿದಾಯ ಅನಿವಾರ್ಯ?​ನಿಸರ್ಗದ ನಿಯಮದಂತೆ, ಹಳೆಯ ಎಲೆ ಉದುರದ ಹೊರತು ಹೊಸ ಚಿಗುರು ಬರಲು ಸಾಧ್ಯವಿಲ್ಲ. ನಾವು ಒಂದೊಂದಕ್ಕೂ ವಿದಾಯ ಹೇಳುತ್ತಾ ಹೋದರೆ ಮಾತ್ರವೇ ಬದುಕಿನ ಹೊಸ ಆಯಾಮಗಳು ನಮಗೆ ತೆರೆದುಕೊಳ್ಳುವುದು. ಬಾಲ್ಯಕ್ಕೆ ವಿದಾಯ ಹೇಳದಿದ್ದರೆ ಪ್ರೌಢಿಮೆ ಬರುವುದಿಲ್ಲ, ಹಳೆಯದಕ್ಕೆ ವಿದಾಯ ಹೇಳದಿದ್ದರೆ ಹೊಸದನ್ನು ಸ್ವೀಕರಿಸಲು ಸಾಧ್ಯವಿಲ್ಲ.​ಕೊನೆಯ ಮಾತು:ವಿದಾಯಗಳು ಕಣ್ಣೀರಿನ ಮಳೆಯಾಗಿರಬೇಕಿಲ್ಲ; ಅವು ಕೃತಜ್ಞತೆಯ ನಗುಗಳಾಗಿರಲಿ. ಕಳೆದುಕೊಂಡದ್ದರ ಬಗ್ಗೆ ಕೊರಗುವ ಬದಲು, ಆ ಹಂತ ನಮಗೆ ಕೊಟ್ಟ ಅನುಭವಗಳಿಗೆ ಧನ್ಯವಾದ ಅರ್ಪಿಸಿ ಮುಂದೆ ಸಾಗುವುದು ಬದುಕಿನ ಜಾಣತನ. ಅಂತಿಮವಾಗಿ, ನಾವು ಹೇಳುವ ಪ್ರತಿಯೊಂದು ವಿದಾಯವೂ ನಮ್ಮನ್ನು ನಾವು ಮತ್ತಷ್ಟು ಅರಿಯುವ, ರೂಪಿಸುವ ಒಂದು ಸುಂದರ ಪ್ರಯತ್ನ. ಕವಿತಾ ಶ್ರೀನಿವಾಸ್ ನಾಯಕ್ ಕಾರ್ಕಳ, ಉಡುಪಿ ಜಿಲ್ಲೆ.

“ವಿದಾಯ” ಕವಿತಾ ಶ್ರೀನಿವಾಸ್‌ ನಾಯಕ್ Read Post »

ಕಾವ್ಯಯಾನ

ಸವಿತಾ ದೇಶಮುಖ “ಬಿಚ್ಚಿಕೊಳ್ಳುತ್ತಿದೆ ಕನಸು”

ಕಾವ್ಯ ಸಂಗಾತಿ ಸವಿತಾ ದೇಶಮುಖ “ಬಿಚ್ಚಿಕೊಳ್ಳುತ್ತಿದೆ ಕನಸು” ಮುಚ್ಚಿ ಬಚ್ಚಿ ಕಟ್ಟಿಟ್ಟ ಕನಸುಕೊಚ್ಚಿ ಹರಿದು ಹೋದ ಹಾಸುಮತ್ತೆ ಬಿಚ್ಚ ಸೂರೆಗೊಳ್ಳುತಿರೆ-ಮನಸ್ಸು!!೧!! ಕನಸು ನನಸಾಗುವ ಕನವರಿಕೆಕಳೆದು ಹೋದವೆಷ್ಟೋ ಮನದ ಅರಿಕೆಕೊಚ್ಚಿಕೊಂಡಯ್ಯದ ಮನ ಚೇತರಿಕೆ!!೨!! ಕಟ್ಟಿದ ಕಲ್ಪನೆ ಕನಸಾಗಿಯೇ ನಿಂದವೂಅದೆಂದೊ ಕಾಲ ಗರ್ಭದಿ ಅವಿತವುಮರೆಯಾದವೆಂದು ವಿಷಾದದಿ ಕುಳಿತಿರೆ..!!೩!! ಅದು ಎಲ್ಲಿಯೋ ಎನಿತೋ ಹೊಳೆದಬೆಳಕು …ನನ್ನ ಅಬ್ಬೇ ಕನ್ನಡಾಂಬೆ ಕೂಗಿದಥಳುಕು..ಕರೇಯುತಿರೆ ಅಕ್ಕರದಿ….!!೪!! ಮಾಸಿ ಕಳೆಗುಂದಿ ಹೋದ ಗತ್ತು-ಮತ್ತೆತರುತ್ತೀವಿ ಸಕಾರತೆ ಋಣ ಹೊತ್ತುಹರಡಿವೆ ಉಡಿ ತುಂಬ ನುಡಿ ಮುತ್ತು!!೫!! ಎದೆ ತುಂಬಿ ಬಂದ ನುಡಿ ಬೆಳಕು,ಪ್ರಕಾಶಮಾನ ಹೊಂಬೆಳಕಿನ ತುಳುಕುನುಡಿ ಅಮ್ಮನ ಶಬ್ದಗಳ ಚಳಕು…!!೬!! ಎಳೆ ಎಳೆ ಬಿಚ್ಚುತ್ತಿರೆ ಕಟ್ಟಿಟ್ಟ ಕನಸಿನಗಂಟಿನ ನಂಟು ನೋಡಿ ನಿಬ್ಬೆರಗಾಗಿಹರುಷದಿ ಮತ್ತೆ ನಲಿದಾಡುತ!!೭!! ಕಂಡ ಕಿರು ಗನಸು ಹೆಮ್ಮರವಾಗಿಬಿಚ್ಚಿಕೊಳ್ಳುತಿವೆ..ಚಂದ ಚೆಂದವಾಗಿಎತ್ತರ ಅಂಬರನೆತ್ತರಕ್ಕೆ ಪಸರಿಸಲು..!!೮!! ಪಡೆದ ಸನ್ಮಾನದ ಸುಮ್ಮಾನವಾಗಲು.. ಸವಿತಾ ದೇಶಮುಖ

ಸವಿತಾ ದೇಶಮುಖ “ಬಿಚ್ಚಿಕೊಳ್ಳುತ್ತಿದೆ ಕನಸು” Read Post »

You cannot copy content of this page

Scroll to Top