ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ ಕವಿತೆ “ನನ್ನೊಳಗೆ”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ನನ್ನೊಳಗೆ“ ನನ್ನೊಳಗೆ ಬೆಳಕೊಂದುಮೌನವಾಗಿ ಹೊಳೆಯಿತು,ಮೋಡದಾಚೆ ಹುಡುಕಿದ ಕಣ್ಣುಮನದೊಳಗೆ ಮರಳಿತು. ನದಿಯಂತೆ ದಿನ ಹರಿದು,ಗಾಳಿಯಂತೆ ಸುಖ ಸರಿದು;ಜಿಂಕೆಯ ಭಯ, ಸಿಂಹದ ಉರಿಒಂದೇ ಎದೆಯಲಿ ಬೆರೆತು. ಹುಟ್ಟಿನ ಕಂಬನಿ ಹನಿಯಲಿ,ತಾಯಿ ನಗುವಿನ ಹೊನಲಲಿ;ದುಃಖದ ಕಾವು, ಸುಖದ ತಂಪುಒಂದೇ ಮನದ ನೆರಳಲಿ. ಕಲ್ಲಿನ ಗುಡಿ ದಾಟಿದರೂಕಾಣದ ಸತ್ಯ ಉಳಿಯಿತು,ಕಣ್ಣು ಮುಚ್ಚಿದ ಮೌನದಲಿಆತ್ಮದೀಪ ಹೊತ್ತಿತು. ಬಂಧದ ಬೇರು ಮನದಲಿ,ಮುಕ್ತಿಯ ಹೂವು ಮನದಲಿ;ಮನ ಹಸಿರಾದ ಕ್ಷಣದಲಿಬದುಕು ಹೂವಾಯಿತು. ಡಾ. ಹೆಚ್. ನಟರಾಜ್ ಆರ್ಯ.

ಡಾ. ಹೆಚ್. ನಟರಾಜ್ ಆರ್ಯ ಕವಿತೆ “ನನ್ನೊಳಗೆ” Read Post »

ಕಾವ್ಯಯಾನ, ಗಝಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್

ಕಾವ್ಯ ಸಂಗಾತಿ ಅನುರಾಧಾ ರಾಜೀವ್ ಸುರತ್ಕಲ್ ಗಜಲ್ ಸಿಡಿಲು ಅಬ್ಬರಿಸಿದರೂ ಮಳೆಯು ಭರವಸೆಹುಟ್ಟಿಸಿದೆ ಗೆಳೆಯಾಮಿಡಿದು ಅಂತರಂಗದಲಿ ಮೂಡಿದ ಭಾವಗಳಮುಟ್ಟಿಸಿದೆ ಗೆಳೆಯಾ ಸುರಿದ ಧಾರೆಯೊಳಗೆ ಮಿಂದ  ಇಳೆಯಲಿತಂಪಿನ ಸಿಂಚನವಲ್ಲವೇಹರಿದು ಧಾರಾಕಾರವಾಗಿ ನದಿಯ ಸೇರುವಾಸೆಮೆಟ್ಟಿಸಿದೆ ಗೆಳೆಯಾ ವಸಂತ ತರುಲತೆಗಳಲಿ ಹಸಿರು ರಂಗವಲಿಎರಚುತ ಬಂದನುಹೊಸತು ಕನಸುಗಳ ಬಿತ್ತಲು ಆಸೆಗಳಕಟ್ಟಿಸಿದೆ ಗೆಳೆಯಾ ಕುಣಿದ ವಸುಂಧರೆಯ ಒಡಲು ಹರುಷದತೋರಣ ಬಿಡಿಸಿದೆತಣಿದ ರೈತಾಪಿವರ್ಗಕೆ ಮೂಡಿದ ಭಯವನುಅಟ್ಟಿಸಿದೆ ಗೆಳೆಯಾ ರಾಧೆಯ ಮನದಂಗಳದ ತೋಟದಿ ನಲಿದಿವೆಬಣ್ಣಬಣ್ಣದ ಹೂವುಗಳುಮಧುರ ಅನುಭೂತಿಯಲಿ ಬದುಕ ಮೌಲ್ಯವಗಿಟ್ಟಿಸಿದೆ ಗೆಳೆಯಾ ಅನುರಾಧಾ ರಾಜೀವ್ ಸುರತ್ಕಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್ Read Post »

ಕಾವ್ಯಯಾನ

ಶ್ರೀದೇವಿ .ಮ.ಗುಮ್ಮಗೋಳ ಕವಿತೆ “ಅಪ್ಪನಿಲ್ಲದ ಮನೆಯೊಳಗೆ ಅಮ್ಮ”

ಕಾವ್ಯ ಸಂಗಾತಿ ಶ್ರೀದೇವಿ .ಮ.ಗುಮ್ಮಗೋಳ “ಅಪ್ಪನಿಲ್ಲದ ಮನೆಯೊಳಗೆ ಅಮ್ಮ” ಅಪ್ಪನಿಲ್ಲದ ಮನೆಯೊಳಗೆನೋವು ನುಂಗಿ ಕಷ್ಟಸಹಿಸಿದೈರ್ಯ ವಹಿಸಿ…..ಮಕ್ಕಳನ್ನು ಸಾಕಿಬೆಳಸಿದಳಮ್ಮಮಕ್ಕಳೆಲ್ಲ ಬೆಳದು ಹೆಮ್ಮರವಾಗಿದ್ದಾರೆಮಕ್ಕಳೆಲ್ಲ ತಮ್ಮದೆಂಬ ನೆಲೆಯಲ್ಲಿಅಮ್ಮನಿಗ ಜೇಡರಬಲೆಯಲ್ಲಿ… ಹೆಗಲ ಮೇಲೆ ಹೊತ್ತು ಅಪ್ಪ ತಿರುಗುವಾಗನನ್ನ ಕೂಗು ಮುಗಿಲು ಮುಟ್ಟುತ್ತಿತ್ತುಅಪ್ಪಿನಿಲ್ಲದೇ ತಬ್ಬಲಿಗಳಾಗಿ….ಪ್ರಭಲ ಶಕ್ತಿಗಳ ಬಲಿಗಳಾಗಿ….ನಮ್ಮ ಕೂಗು ಕೇಳುವರಿರಲಿಲ್ಲತುತ್ತು ಕೂಳಿಗಾಗಿ ಅಮ್ಮಮುಸುರಿ ತಿಕ್ಕುತ ಅಲೆದಿದ್ದಳಲ್ಲ….. ಅಪ್ಪನಿಲ್ಲದ ಮನೆ ಈಗಉಪ್ಪರಗಿಯಲ್ಲಿದ್ದೂ ಅನಾಥಭಾವ….ಅಮ್ಮ ಕೇವಲ ಅಣ್ಣ-ಅತ್ತಿಗೆಯರ ಕೈಗೊಂಬೆಮರದಿಂದ ಬೇರ್ಪಟ್ಟ ರಂಬೆಕೊಂಬೆಜೀವವಿದ್ದು ನಿರ್ಜಿವದ ತೊಗುಲುಗೊಂಬೆ ಮನೆಗೆ ಬಂದಾಗಲೆಲ್ಲನೀ ಕುಳಿತ ಕುರ್ಚಿ, ಚಸ್ಮ, ಪೆನ್ನು, ಪುಸ್ತಕ ಬಣಗುಡುತ್ತಿವೆಕಣ್ಣಂಚಿನಲ್ಲಿ ಆರ್ದತೆ ತುಂಬಿಕೊಂಡುಮರೆಮಾಚುತ್ತೇನೆ ನೋವ….ಮಾತಿಗಿಳಿಯುತ್ತೇನೆ ಮಾತು ಒಣಗುತ್ತದೆನನ್ನ ಅಂತಾರಾಳದಲ್ಲಿ ಕುಳಿತುಅಪ್ಪ ಬಂದು ಗುಣಗಣಸಿದ ಭಾವ….. ಅಪ್ಪನಿದ್ದಾಗ ಅಮ್ಮನ‌ ಮಾತು ವಟವಟ…ಅಪ್ಪನ ಮೌನದಲ್ಲೂ ಇತ್ತು ಒಂದು ದಿಟ….ಈಗ ಅಮ್ಮನ ಮಾತುಗಳಿಗೆ ಭಾವವಿಲ್ಲಬರಿ ಮೌನ….ಅವಳ ಶಬ್ಧಗಳಿಗೆ ಕಿವಿಗಳಿಲ್ಲ…ರಕ್ಷಣೆಯೇ ಗೌಣ…. ಯಾವ ಆಸರೆಯಿಲ್ಲದ ಅಮ್ಮಗೋಡೆಯಾದರೂ ಆಸರೆಯಾದಿತೆಂದುಗೋಡೆಯ ಮೂಲೆಯೊಂದರಲ್ಲಿ ಕುಳಿತುಕೊಳ್ಳುತ್ತಾಳೆ….ಈಗ ಗೋಡೆಯೂ ಅಭದ್ರಅದಕ್ಕೂ ಕಾಡುತ್ತದೆ ನಿನ್ನ ನೆನಪು…. ಶ್ರೀದೇವಿ .ಮ.ಗುಮ್ಮಗೋಳ

ಶ್ರೀದೇವಿ .ಮ.ಗುಮ್ಮಗೋಳ ಕವಿತೆ “ಅಪ್ಪನಿಲ್ಲದ ಮನೆಯೊಳಗೆ ಅಮ್ಮ” Read Post »

ಕಾವ್ಯಯಾನ

ಎಮ್ಮಾರ್ಕೆ ಅವರ ಕವಿತೆ “ನಾವಿರೋದೇ ಹೀಗೆ”

ಕಾವ್ಯ ಸಂಗಾತಿ ಎಮ್ಮಾರ್ಕೆ “ನಾವಿರೋದೇ ಹೀಗೆ” ಪಕ್ಕದ ಮನೆಗೆ ಬಿದ್ದ ಬೆಂಕಿ ನಮ್ಮಮನೆಗೆ ತಗುಲುವುದೆಂಬ ಪ್ರಜ್ಞೆಯಿಲ್ಲ,ನಮ್ಮ ಮನೆಗೆ ಬೆಂಕಿ ಬಿದ್ದಾಗಲಷ್ಟೇನಾವು ಆರಿಸಲು ಅಣಿಯಾಗುವೆವು ಕಣ್ಣ ಮುಂದೆ ವಂಚನೆ,ಮೋಸನಡೆದರೂ ತಡೆಯುವ ತುಡಿತವಿಲ್ಲ,ನಮ್ಮ ಹತ್ತಿರಕ್ಕೆ ಬಂದಾಗಲಷ್ಟೇನಾವು ಬಿಡದೇ ಹರಿಹಾಯುವೆವು ನಮಗ್ಯಾಕೆ ಇಲ್ಲದ ಉಸಾಬರಿನಮಗೂ ಅದಕೂ ಸಂಬಂಧವಿಲ್ಲ,ನಮಗೆ ಸಂಬಂಧ ಪಟ್ಟಾಗಲಷ್ಟೇಎದೆಯನ್ನುಬ್ಬಿಸಿ ಎದುರಾಡುವೆವು ಬಿಟ್ಟಿ ಉಪದೇಶ ನೀಡುವವರಸಂಖ್ಯೆಗಂತೂ ಕೊರತೆಯೇ ಇಲ್ಲ,ಸ್ವಾರ್ಥದ ಸದುದ್ದೇಶವಿದ್ದರಷ್ಟೇಉದ್ದ ಉಪದೇಶವ ನೀಡುವೆವು ಬಹುತೇಕ ಪ್ರಭು,ಪ್ರಜೆಗಳಲ್ಲಿನಅಹಂಕಾರಕ್ಕ್ಯಾವ ಅಳತೆಗೋಲಿಲ್ಲ,ಕಾಗೆಯ ಬಣ್ಣ ಬಿಳುಪೆಂದರೂಹೂಂ ಎಂದು ಗೋನು ಹಾಕುವೆವು ಒಬ್ಬನೇ ಸೂರ್ಯ ನಿತ್ಯ ಜಗವಬೆಳಗುವುದರ ಪರಿವೇ ನಮಗಿಲ್ಲ,ನಮ್ಮೊಬ್ಬರಿಂದಲೇ ಏನಾದೀತು!ಎಂದು ಮನದಲ್ಲೇ ಮರುಗುವೆವು ಎಮ್ಮಾರ್ಕೆ

ಎಮ್ಮಾರ್ಕೆ ಅವರ ಕವಿತೆ “ನಾವಿರೋದೇ ಹೀಗೆ” Read Post »

ಕಾವ್ಯಯಾನ

ಹಮೀದಾ ಬೇಗಂ ದೇಸಾಯಿ‌ ಅವರ ಗಜಲ್

ಕಾವ್ಯ ಸಂಗಾತಿ ಹಮೀದಾ ಬೇಗಂ ದೇಸಾಯಿ‌ ಗಜಲ್ ಮುಗ್ಧ ಜೀವಿಗಳ ರಕ್ತಪಾತಕೆ  ಬೆಚ್ಚಿದ  *ರಾತ್ರಿಗಾಗಿ* ಹಣತೆ ಬೆಳಗುವೆದ್ವೇಷ ಕಲಹ ಕ್ರಾಂತಿಗಳಿಂದ  ನರಳಿದ  *ಧಾತ್ರಿಗಾಗಿ* ಹಣತೆ  ಬೆಳಗುವೆ ತಲ್ಲಣ ಗೊಂಡಿದೆ  ಮನುಕುಲ ಭೀಕರ ಯುದ್ಧಗಳ  ಸಿಡಿಲಿನಿಂದಕವಿದ ಕರಾಳ  ಮುಖವಾಡಗಳ ಕಳಚುವ  *ಖಾತ್ರಿಗಾಗಿ* ಹಣತೆ  ಬೆಳಗುವೆ ನಾನೆಂಬ ಅಹಂಕಾರದ ಕ್ರೂರ ವರ್ತುಲಗಳು   ಸುತ್ತಿವೆ  ಜಗದಗಲಕ್ಷುದ್ರರಲಿ ಅವಿತ  ದುರುಳತನಗಳ ಮೆಟ್ಟುವ  *ಕ್ಷಾತ್ರಿಗಾಗಿ* ಹಣತೆ ಬೆಳಗುವೆ ಭಯದ ನೆರಳುಗಳು ಆವರಿಸಿ  ಹೆದರಿಸುತಿವೆ  ಹೆಜ್ಜೆ  ಹೆಜ್ಜೆಗೆ ಅಲ್ಲವೇಭ್ರಾತೃತ್ವದ ಸ್ನೇಹ ವಿಶ್ವಾಸಗಳು  ಮೆರೆಯುವ  *ಜಾತ್ರಿಗಾಗಿ* ಹಣತೆ  ಬೆಳಗುವೆ ಒಳಗೊಳಗೆ ಉಸಿರುಗಳು ಮೌನವಾಗಿ  ಬಿಕ್ಕುತ್ತಿವೆ ಪ್ರತಿಷ್ಠೆಯ ಜಾಲಗಳಲಿ  ಸಿಲುಕಿ ಬೇಗಂಶಾಂತಿ ಪ್ರೇಮಗಳನು ನೀಡುವ  ದೂತನಾಗಿ  ಬರುವ  *ಯಾತ್ರಿಗಾಗಿ* ಹಣತೆ  ಬೆಳಗುವೆ ಹಮೀದಾಬೇಗಂ ದೇಸಾಯಿ

ಹಮೀದಾ ಬೇಗಂ ದೇಸಾಯಿ‌ ಅವರ ಗಜಲ್ Read Post »

ಅಂಕಣ ಸಂಗಾತಿ, ಗಾದೆಗಳ ಗಣಿ

ಅಂಕಣ ಸಂಗಾತಿ ಗಾದೆಗಳ ಗಣಿ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಸಮುದ್ರದ ನೆಂಟಸ್ತನ, ಉಪ್ಪಿಗೆ ಬಡತನ ಮನುಷ್ಯನಿಗೆ ಹೊನ್ನಿನ ರಾಶಿ ಸಿಕ್ಕರೂ ತೃಪ್ತಿಯಾಗುವುದಿಲ್ಲ.ಭವ ಬಂಧನದ ಆಸೆ-ಆಕಾಂಕ್ಷೆಗಳು ಪೆಡಂಭೂತವಾಗಿ ಕಾಡುತ್ತದೆ ಅವನಿಗೆ.ಪ್ರತಿಷ್ಠೆ,ತೋರಿಕೆಯ ಆಸೆ ನುಸುಳುತ್ತದೆ ಅವನ ಮನದೊಳಗೆ.ನೆಮ್ಮದಿಯು ತನ್ನಲ್ಲಿದ್ದರೂ ಅತೀ ನೆಮ್ಮದಿ ಪಡೆಯಲು ಅತ್ಯಂತ ಶ್ರೀಮಂತರ ಸಂಬಂಧಗಳನ್ನು ಬೆಳೆಸಲು ಮುಂದಾಗುತ್ತಾರೆ.ಅವರು ಒಳ್ಳೆಯವರೊ….ಕೆಟ್ಟವರೊ..‌ಮನುಷ್ಯತ್ವದಲ್ಲಿದ್ದಾರೊ….ಅಥವಾ ಅಮಾನುಷತ್ವದಲ್ಲಿ ಮುಳುಗಿದ್ದಾರೊ….ಯಾವುದೂ ಅರಿಯದೆ ಕೇವಲ ಅವರ ಸಿರಿತನದ ಮನೆತನವಿದ್ದರೆ ಸಾಕು,ಸಂಬಂಧ ಬೆಳೆಸಿಬಿಡುತ್ತಾರೆ.ಬಿಳಿಯಾಗಿ ಕಾಣುವುದೆಲ್ಲಾ ಹಾಲಲ್ಲ.ವೇಗವಾಗಿ ಓಡುವ ಮನಸ್ಸಿಗೆ ಏನೆಂದೂ ಕಾಣುವುದಿಲ್ಲ.ಈಗಿನ ಕಾಲದಲ್ಲಿ ಶ್ರೀಮಂತರ ಮನೆತನಗಳಲ್ಲಿ ನಯ  ವಿನಯ ಮರೆಯಾಗಿದ್ದು  ಮದ ಮತ್ಸರ,ಕೋಪ ತಾಪಗಳು ಮತ್ತು ವಿಶ್ವಾಸ ದ್ರೋಹಗಳೆ ಹಲವು ಬಗೆಯಾಗಿರುತ್ತವೆ.ನಾವುಗಳು ನಾವೇ ಆಗಿರಬೇಕು.ಯಾಕೆಂದರೆ ಜೀವನದಲ್ಲಿ ಅನೇಕ ರೀತಿಯ ಆಯ್ಕೆಗಳಿವೆ.ಅದೆಷ್ಟೋ ಆಯ್ಕೆಗಳನ್ನು ಪಡೆಯಲು ಪ್ರಯತ್ನ ಪಡುತ್ತಲೆ ಇರುತ್ತೇವೆ.ಸಣ್ಣ ಪುಟ್ಟ ಸಂತೋಷಗಳನ್ನು ಪೂರೈಸಿಕೊಳ್ಳಲು,ಸ್ವಾರ್ಥದಿಂದ ಆದರೂ ಸಾಧಿಸಿಕೊಳ್ಳುತ್ತೇವೆ.ನಾವೇ ತೋಡಿದ ತೆಗ್ಗಿನಲಿ ಒಂದಾನೊಂದು ದಿನ ಬೀಳುತ್ತೇವೆ.ಇದು ಸತ್ಯ.ಆತುರವೆಂದರೆ ಒಂದಲ್ಲ ಎರಡಲ್ಲ.,ಹತ್ತಾರು ಕೆಲಸ ಕಾರ್ಯಗಳ ಆತುರ.ತಾಳ್ಮೆ ಎಂಬುದು  ಬಹು ದೂರ.ಮಾತಿನ ಆತುರ.,ದುಡುಕುವ ಆತುರ.,ಹತ್ತಾರು ವಿಷಯಗಳ ಆತುರ.,ಪ್ರತಿ ಕೆಲಸಕ್ಕೂ ಆತುರವಾದರೆ ಹಿತವೆನ್ನುವ ಪಲಿತಾಂಶದಲ್ಲಿ ಫೇಲು ಆಗಬಹುದು.ನಮ್ಮೆದುರಿಗೆ ಇರುವವರನ್ನು ಹಿಂದಿಕ್ಕಿ ಓಡಬೇಕು ಎನ್ನುವ ಆತುರ.ಈ ವಿಷಯದಲ್ಲಿ ನಾವುಗಳು ತುಸು ಯೋಚಿಸುವುದಿಲ್ಲ.ನಮಗೆ ನಮ್ಮ ಕೆಲಸವೇ ಬಹು ಮುಖ್ಯ.ಇನ್ನೊಬ್ಬರ ಕಷ್ಟ ಕಾರ್ಪಣ್ಯಗಳಿಂದ ನಮಗೆ ಆಗುವುದಾದರೂ ಏನಿದೆ? ಅನ್ನುವ ಸ್ವಭಾವವನ್ನು ನಾವುಗಳು ಹೊಂದಿರುತ್ತೇವೆ.ಇದೇ ಕಾರಣಕ್ಕೆ ಸೂಕ್ಷ್ಮವನ್ನು ಅರಿಯದೆ ಹೋಗುತ್ತೇವೆ.ಈ ಮಾತಿನ ಅರಿವು ಇಷ್ಟೆ. ಪ್ರಭಾವಿ ಅಥವಾ ಶ್ರೀಮಂತ ವ್ಯಕ್ತಿಗಳ ಜೊತೆ ನಿಕಟ ಸಂಬಂಧವಿದ್ದರೂ, ಅದರಿಂದ ನಮಗೆ ಯಾವುದೇ ಪ್ರಯೋಜನ ಸಿಗದ ಪರಿಸ್ಥಿತಿಯನ್ನು ವಿವರಿಸುತ್ತದೆ.  ಅಳತೆಗೆ ಸಿಗದ ನೀರನ್ನು ಹೊಂದಿರುವ ಸಮುದ್ರದ ಜೊತೆ ನಮಗೆ ಸ್ನೇಹವಿದ್ದರೂ, ನಮಗೆ ಬೇಕಾದ ಒಂದು ಸಣ್ಣ ಹಿಡಿ ಉಪ್ಪು ಸಿಗದೇ ಹೋದರೆ ಆ ಸ್ನೇಹದಿಂದ ಏನು ತಾನೇ ಪ್ರಯೋಜನ?​ ಅಧಿಕಾರ ಮತ್ತು ಪ್ರಭಾವದ ನೆರಳಿನಡಿಯಲ್ಲಿ​ನಮಗೆ ಸಮಾಜದಲ್ಲಿ ದೊಡ್ಡ ಸ್ಥಾನಮಾನ ಹೊಂದಿರುವವರು ಅಥವಾ ರಾಜಕಾರಣಿಗಳು ಪರಿಚಯವಿರಬಹುದು. ಲೋಕದ ದೃಷ್ಟಿಯಲ್ಲಿ ನಾವು ಅವರ “ಆಪ್ತರು” ಎನಿಸಿಕೊಳ್ಳಬೇಕು.ಅವರ ಜೊತೆ ನಿಕಟ ಸಂಪರ್ಕದಲ್ಲಿರಬೇಕು  ಎಂದು ಸದಾ ಬಯಸುತ್ತೇವೆ. ಆದರೆ ನಮಗೆ ಒಂದು ಸಣ್ಣ ವೈಯಕ್ತಿಕ ಕೆಲಸ ಅಥವಾ ಸಹಾಯದ ಅವಶ್ಯಕತೆ ಬಂದಾಗ, ಆ ಪ್ರಭಾವಿ ವ್ಯಕ್ತಿಗಳು ನಮಗೆ ನೆರವಾಗದಿದ್ದರೆ ಅದು “ಸಮುದ್ರದ ನೆಂಟಸ್ತಿಕೆಯಂತೆಯೇ  ಸರಿ.​ವ್ಯರ್ಥ ಪ್ರಯತ್ನ ,ವ್ಯರ್ಥ ಹೆಮ್ಮೆಪಡುವುದು ಕ್ಷೀಣಿಸುತ್ತಿದೆ .ದೊಡ್ಡವರ ಪರಿಚಯವಿದೆ ಎಂದು ಜಗತ್ತಿಗೆ ಹೇಳಿಕೊಳ್ಳುವುದು ಸುಲಭ, ಆದರೆ ಆ ಸ್ನೇಹವು  ಫಲ ನೀಡದಿದ್ದಾಗ ಅದು ಕೇವಲ ಒಂದು ಬೃಹದಾಕಾರದ  ಬಲೂನಿನಂತೆ ಎಂದೆನಿಸಿ ಬಿಡುತ್ತದೆ.​ನಿರೀಕ್ಷೆ ಮತ್ತು ವಾಸ್ತವವು ಸುಳ್ಳಾಗಿ ಟುಸ್ ಎನ್ನುವ ಮುಕ್ಭತ್ತಿಯಾಗಿಡುವುದು . ಸಮುದ್ರದ ಅಲೆಗಳು ದಡಕ್ಕೆ ಬಂದು,ಬಡಿದು ಹಿಂದಕ್ಕೆ ಹೋಗುವುದು ನೋಡಲು  ಬಹು ಸುಂದರ, ಆದರೆ ಆ ಅಲೆಗಳು ಮನೆಯ ಬಾಯಾರಿಕೆಯನ್ನು ತಣಿಸಲಾರವು. ​ ಶ್ರೀಮಂತಿಕೆ ಮತ್ತು ಬಡತನದ ನಡುವಿನ ವ್ಯತ್ಯಾಸವು ಬಹಳ ಆಳವೂ,ಅನಂತವೂ ಆಗಿದೆ.​ಶ್ರೀಮಂತ ಕುಟುಂಬಗಳಲ್ಲಿ ಅಥವಾ ದೊಡ್ಡ ಉದ್ಯಮಿಗಳ ಅಡಿಯಲ್ಲಿ ಕೆಲಸ ಮಾಡುವ ಅನೇಕರನ್ನು ನಾವು ನೋಡುತ್ತೇವೆ. ಹೊರಗಿನ ಜನರಿಗೆ ಅವರು ಬಹಳ ಅದೃಷ್ಟವಂತರು ಎಂದು ಅನಿಸುತ್ತದೆ. ಆದರೆ ಆ ಶ್ರೀಮಂತರ ಮನೆಯಲ್ಲೇ ಕೆಲಸ ಮಾಡುವವರಿಗೆ  ಸರಿಯಾದ ಸಮಯಕ್ಕೆ  ಸಂಬಳವಿಲ್ಲದೆ ಅಥವಾ ಜೀವನದ ಮೂಲಭೂತ ಸೌಕರ್ಯಗಳಿಲ್ಲದೆ ಬಡತನದಲ್ಲಿ ಬೆಂದು,ಕೊನೆಗೆ ಅಂಥವರ ಮನೆಯ ಕೆಲಸವನ್ನು ಬಿಟ್ಟು ಹೋಗುವರು. ​”ಕಲ್ಪವೃಕ್ಷದ ಕೆಳಗೆ ನಿಂತರೂ ಬೇಡಲು ಬಾಯಿಯಿಲ್ಲದಂತೆ,ಮೂಕನಾದಂತೆ., ಕೈಯಲ್ಲಿ ಪಾತ್ರೆಯಿಲ್ಲದಿದ್ದರೆ ಮಳೆ ನೀರು ಕುಡಿಯಲು ಸಾಧ್ಯವಿಲ್ಲ.” ಹಾಗೆಯೇ, ಶ್ರೀಮಂತಿಕೆಯ ಸನಿಹವಿದ್ದರೂ ಅದನ್ನು ಹಂಚಿಕೊಳ್ಳುವ ಗುಣ ಅಥವಾ ಅದನ್ನು ಪಡೆಯುವ ಯೋಗ ಎರಡೂ ಮುಖ್ಯವಾಗುತ್ತದೆ. ​ಜ್ಞಾನ ಮತ್ತು ಅನ್ವಯದ ಕೊರತೆಯಿಂದ​ಈ ಮಾತನ್ನು ಕೇವಲ ಹಣಕ್ಕೆ ಸೀಮಿತಗೊಳಿಸದೆ, ಜ್ಞಾನಕ್ಕೂ ಅನ್ವಯಿಸಬಹುದು.​ನಮ್ಮ ಮನೆಯಲ್ಲಿ ಸಾವಿರಾರು ಪುಸ್ತಕಗಳಿರಬಹುದು, ಅಥವಾ ನಮಗೆ ಮಹಾನ್ ವಿದ್ವಾಂಸರ ಪರಿಚಯವಿರಬಹುದು.​ಆದರೆ ನಾವು ಆ ಜ್ಞಾನವನ್ನು ಬಳಸಿಕೊಳ್ಳದಿದ್ದರೆ ಅಥವಾ ನಮಗೆ ಜೀವನದ ಕಷ್ಟಕಾಲದಲ್ಲಿ ಆ ವಿದ್ವಾಂಸರಿಂದ ಒಂದು ತುಸುವಾದರೂ  ಮಾರ್ಗದರ್ಶನ ಸಿಗದಿದ್ದರೆ, ಅದು ನಡುರಾತ್ರಿಯಲ್ಲಿ ಹಿಡಿದ ಕೈದೀವಿಗೆಯಂತೆ ಶೂನ್ಯವಾಗಿರುತ್ತದೆ. ​ಸಂಬಂಧಗಳಲ್ಲಿನ ಪೊಳ್ಳುತನವು​ಇಂದಿನ ಕಾಲದ ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಸಾವಿರಾರು “ಸ್ನೇಹಿತರು” ಇರುತ್ತಾರೆ. ಇದು ಸಮುದ್ರದಷ್ಟು ದೊಡ್ಡ ಜಾಲವಾಗಿದೆ.ಆದರೆ ನಮಗೆ ಮಾನಸಿಕವಾಗಿ ನೋವಾದಾಗ ಅಥವಾ ಸಹಾಯದ ಹಸ್ತ ಬೇಕಾದಾಗ ಒಬ್ಬರೂ ಬಾರದಿದ್ದರೆ, ಈ ಸೋಷಿಯಲ್ ಮೀಡಿಯಾ ಸ್ನೇಹವು “ಸಮುದ್ರದ ನೆಂಟಸ್ತನಕ್ಕೆ” ಸಾಕ್ಷಿಯಾಗುತ್ತದೆ.​ಸಮುದ್ರದ ನೀರು: ತುಂಬಾ ಇದೆ, ಆದರೆ ಕುಡಿಯಲು ಯೋಗ್ಯವಲ್ಲ.​ಬಾಹ್ಯ ಸಡಗರವಿದ್ದಂತೆ.ಬರೀ ತೋರಿಕೆಗೆ ಕಡಲು.ಆ ಕಡಲಿನ ಪಕ್ಕದಲ್ಲಿ ಮನೆ ಮಾಡಿದವರಿಗೆ ಗೊತ್ತು ಸಾಧಕ ಬಾಧಕಗಳು.ಹಾಗೆನೆ ಉಳ್ಳವರ ಸಂಬಂಧಗಳಲ್ಲಿ ತೋರಿಕೆ ಜಾಸ್ತಿಯಾಗಿ ಅಂತರಂಗದ ಮಿಡಿತ ಕಡಿಮೆಯಾದಾಗ  ಇಂತಹ ಗಾದೆ ಮಾತುಗಳು ಜನ್ಮತಾಳುತ್ತವೆ ​ಈ ಮಾತು ನಮಗೆ ಎರಡು ಬಹು ಮುಖ್ಯ ಪಾಠಗಳನ್ನು ಕಲಿಸಿಕೊಡುತ್ತದೆ.​ಆತ್ಮನಿರ್ಭರತೆ ಮತ್ತು ಗುಣದ ಬೆಲೆ. ಬೇರೆಯವರ ಶ್ರೀಮಂತಿಕೆ ಅಥವಾ ಅಧಿಕಾರವನ್ನು ನೋಡಿ ನಮಗೆ ಏನೋ ಸಿಗುತ್ತದೆ ಎಂಬ ಭ್ರಮೆಯಲ್ಲಿ ಬದುಕಲು ಆಸೆಪಡುತ್ತೇವೆ. ಆ ಆಸೆಯು ಈಡೇರದಿದ್ದಾಗ ಆತ್ಮ ನಿರ್ಭರವಾಗಿ ಅವರ ಒಳ ಗುಣದ ಅರಿವು ಪ್ರತ್ಯಕ್ಷವಾದಾಗ ದೂರಾಗುತ್ತೇವೆ.    ನಮಗೆ ಬೇಕಾದ ‘ಉಪ್ಪನ್ನು’ ನಾವೇ ಸಂಪಾದಿಸಿಕೊಳ್ಳಬೇಕು.​ರಾಜರ ,ರಾಜಕಾರಿಣಿಗಳ,ಜಮೀನ್ದಾರರ ಅದೆಷ್ಟು  ಸಂಪತ್ತು ಇದ್ದರೂ ನಮಗಾಗುವದೇನು?  ಅದು ಯಾರಿಗಾದರೂ ಬಳಕೆಯಾಗುತ್ತದೆಯೇ ಎಂಬುದು ಮುಖ್ಯ. ಉಪ್ಪಿಲ್ಲದ ಊಟ ಹೇಗೆ ರುಚಿಸುವುದಿಲ್ಲವೋ, ಹಾಗೆಯೇ ಮಾನವೀಯತೆ ಇಲ್ಲದ ಮಹಾನ್ ವ್ಯಕ್ತಿಗಳ ಸ್ನೇಹವು ನಿರರ್ಥಕ.​ಸಮುದ್ರದ ಹತ್ತಿರ ವಾಸಿಸಿದರೂ ಹನಿ ನೀರಿಗಾಗಿ ಪರದಾಡುವ ಸ್ಥಿತಿ ನಮಗೆ ಬಾರದಿರಲಿ. ನಾವು ಬೆಳೆಸುವ ಸ್ನೇಹವು ಕೇವಲ ಗಾತ್ರದಲ್ಲಿ “ಸಮುದ್ರದಂತೆ” ಇರದೆ, ಗುಣದಲ್ಲಿ “ಶುದ್ಧ ಜಲದಂತೆ” ಇರಲಿ. ಆಡಂಬರದ ಸಂಬಂಧಗಳಿಗಿಂತ ಕಷ್ಟಕ್ಕೆ ಬರುವ ಪುಟ್ಟ ಸಂಬಂಧವೇ ಮಿಗಿಲು. ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಇವರು (ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ) 1998 ರಿಂದ ಕೆ.ಇ.ಬಿ.ಇಲಾಖೆಯಲ್ಲಿ ಲೈನ್ ಮ್ಯಾನ್ ವೃತ್ತಿ ಪ್ರಾರಂಭ.ಪ್ರಸ್ತುತ ಗಂಗಾವತಿ ನಗರದಲ್ಲಿ ಮೀಟರ್ ರೀಡರ್ ಸೇವೆ ಸಲ್ಲಿಸುತ್ತಿದ್ದಾರೆ.ಪ್ರವೃತ್ತಿಯಲ್ಲಿ ಹವ್ಯಾಸಿ ಬರಹಗಾರರು.ಪ್ರಕಟಿತ ಪುಸ್ತಕಗಳು1)ನಾನಲ್ಲದ ನನ್ನೊಳಗೊಬ್ಬ(ಕವನ ಸಂಕಲನ)2)ನಕ್ಷತ್ರ ಗೊಂಚಲು(ಹಾಯ್ಕು ಗಳ ಸಂಕಲನ)3)ನಂಜು ನುಂಗಿದ ನಗು(ಕವನ ಸಂಕಲನ)4) ನಾಕು ತಾವಿನ ತಿರುವು(ಕವನ ಸಂಕಲನ)5)ನುಡಿದಷ್ಟೆ ನವಿರು(ವಿಮರ್ಶೆ ಕೃತಿ)ಪ್ರಶಸ್ತಿಗಳುಕವಿ ಭೂಷಣ ಪ್ರಶಸ್ತಿಅಡ್ವೈಸರ್ ಸಾಹಿತ್ಯ ಪ್ರಶಸ್ತಿ (ಮಂಡ್ಯ)ರುಕ್ಮಿಣಿ ಬಾಯಿ ಸಾಹಿತ್ಯ ಶ್ರೇಷ್ಠ ಪ್ರಶಸ್ತಿಚೆನ್ನಬಸವೇಶ್ವರ ಸಾಹಿತ್ಯ ಪ್ರಶಸ್ತಿಬೀಚಿ ಸಾಹಿತ್ಯ ಪ್ರಶಸ್ತಿರಾಜ್ಯ ಮಟ್ಟದ ಜನ್ನ ಕಾವ್ಯ ಪ್ರಶಸ್ತಿ (ಮಾಣಿಕ್ಯ ಪ್ರಕಾಶನ ಹಾಸನ)ಚೆನ್ನವೀರ ಕಣವಿ ರಾಜ್ಯ ಸಾಹಿತ್ಯ ಪ್ರಶಸ್ತಿ (ಧಾರವಾಡ)ಡಾ.ಸಿದ್ಧಲಿಂಗಯ್ಯ ರಾಜ್ಯ ಸಾಹಿತ್ಯ ಪ್ರಶಸ್ತಿ (ಬಸವನ ಬಾಗೇವಾಡಿ)ರಾಜ್ಯ ಮಟ್ಟದ ಹೊಯ್ಸಳ ಸಾಹಿತ್ಯ ಪ್ರಶಸ್ತಿ (ಹಾಸನ.ಮಾಣಿಕ್ಯ ಪ್ರಕಾಶನ)ಕವಿ ಕಾವ್ಯ ಪುರಸ್ಕಾರ (ಮಂಡ್ಯ) ರಾಜ್ಯದ ಅನೇಕ ಪ್ರತಿಷ್ಠಿತ ಸಂಘಟನೆಯಲ್ಲಿ ಕಾವ್ಯ ಕಮ್ಮಟ, ಕವಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.ಸೇವೆಕಾವ್ಯಲೋಕ (ಗಂಗಾವತಿ )ಸಂಘಟನೆಯಲ್ಲಿ ಕಾರ್ಯದರ್ಶಿಯಾಗಿ 89 ಕವಿಗೋಷ್ಠಿಯನ್ನು ನಿರ್ವಹಣೆ ಮಾಡಿದ್ದಾರೆ.ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿಯಲ್ಲಿ 21ಕವಿಗೋಷ್ಠಿ ನಡೆಸಿದ್ದಾರೆ.ಸಿರಿಗನ್ನಡ ವೇದಿಕೆ ಗಂಗಾವತಿ ತಾಲುಕಾಧ್ಯಕ್ಷರಾಗಿ ಮೂರು ವರುಷ ಸೇವೆ ಮತ್ತು 15 ಕವಿಗೋಷ್ಠಿ ನಡೆಸಿದ್ದಾರೆ.ಶರಣ ಸಾಹಿತ್ಯ ಪರಿಷತ್ ಗಂಗಾವತಿ ಯಲ್ಲಿ ಕಾರ್ಯದರ್ಶಿಯಾಗಿ ಒಂದು ವರುಷ ಸೇವೆ ಮತ್ತು 30 ವಚನ ಶ್ರಾವಣ ನಿರ್ವಹಣೆ.ಸಧ್ಯದಲ್ಲಿಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಗಂಗಾವತಿಯ ತಾಲುಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ರಾಜ್ಯ ಮಟ್ಟದ ಕವಿ ಕಾವ್ಯ ಸಂಭ್ರಮ ಮತ್ತು ಕವಿ ಸಮ್ಮೇಳನ ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ.ಹಲವು ಕವಿಗೋಷ್ಠಿ ಯ ಅಧ್ಯಕ್ಷತೆ ವಹಿಸಿದ್ದಾರೆ.2019ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮುದುಗಲ್ಲನಲ್ಲಿ ಏರ್ಪಡಿಸಿದ ತಾಲುಕು ಕವಿ ಸಮ್ಮೇಳನದ ಅಧ್ಯಕ್ಷರಾಗಿ, ಅಧ್ಯಕ್ಷತೆ ನಿರ್ವಹಿಸಿದ ಹೆಮ್ಮೆ.

Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-29 ಅರ್ಜುನ ಉವಾಚ ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ  ಹೀಗಿದ್ದರು ಸ್ತ್ರೀರಾಜ್ಯದ ಸ್ತ್ರೀಯರು                            ನಮ್ಮ ಕುದುರೆ ಪ್ರವೇಶಿಸಿದ್ದು ಸ್ತ್ರೀರಾಜ್ಯವನ್ನು. ನಾವು ಹೊಕ್ಕದ್ದು ವನಿತಾ ಸೀಮೆಯನ್ನು. ಭಾರವನ್ನು ತಾಳಲಾರದೆ ಧರಣಿ ಕುಗ್ಗಿದೆಯೋ ಏನೋ! ತುಸು ಮುಂದೆ ಹಿಗ್ಗಿದೆಯೋ ಏನೋ! ಎಂಬಂತಿತ್ತು ಅಲ್ಲಿಯ ಭೂಮಿಯ ಸ್ವರೂಪ. ಹೀಗೆ ಏರಿಳಿತಗಳಲ್ಲಿಯೇ ಸಾಗಿದೆವು ನಾವು. ಸ್ತ್ರೀರಾಜ್ಯದ ಬಗೆಗೆ ಇನ್ನಷ್ಟು ವಿಚಾರಗಳನ್ನು ತಿಳಿದುಕೊಳ್ಳುತ್ತಾ ಹೋದಂತೆ ನನ್ನಲ್ಲಿ ಅಳುಕು ಮೂಡತೊಡಗಿತು. ನನ್ನ ಜೊತೆಗಿದ್ದವರೆಲ್ಲಾ ಸಂಯಮದ ಮನಸ್ಸನ್ನು ಕಾಪಾಡಿಕೊಳ್ಳದಿದ್ದರೆ ಆ ಸ್ತ್ರೀರಾಜ್ಯವನ್ನು ದಾಟಿ ಮುಂದೆ ಹೋಗುವುದು ಸಾಧ್ಯವಿಲ್ಲ ಎಂಬ ಭಯ ನನ್ನಲ್ಲಿ ಉಂಟಾಯಿತು.    ಅಲ್ಲಿದ್ದವರೆಲ್ಲಾ ನಾರಿಯರೇ. ಪುರುಷರು ಜೀವನ ನಡೆಸುವುದಕ್ಕೆ ಅಲ್ಲಿ ಅವಕಾಶವೇ ಇರಲಿಲ್ಲ. ಅಲ್ಲಿದ್ದ ಸ್ತ್ರೀಯರು ಯೌವ್ವನಾವಸ್ಥೆಯನ್ನು ಹೊಂದಿದವರು. ಮಧುಪಾನದಿಂದ ಮತ್ತೇರಿಸಿಕೊಳ್ಳುವ ಚಟವನ್ನು ಇಟ್ಟುಕೊಂಡವರು. ಚೆಲುವಿತ್ತು ಅವರಿಗೆ. ಲಾವಣ್ಯವತಿಯರಾಗಿದ್ದರು. ಬಗೆಬಗೆಯ ಕಲೆಗಳಲ್ಲಿ ಪ್ರೌಢಿಮೆಯನ್ನು ರೂಢಿಸಿಕೊಂಡಿದ್ದರು. ಹಾಡನ್ನು ಇಂಪಾಗಿ ಹಾಡುವ ಕೌಶಲ್ಯವಿತ್ತು. ನೃತ್ಯವನ್ನು ಸೊಂಪಾಗಿ ಮಾಡುವ ಪ್ರತಿಭೆಯಿತ್ತು. ಕೊಳಲನ್ನು ನುಡಿಸುತ್ತಿದ್ದರು ಕೋಗಿಲೆ ಕೊರಳಿನಿಂದ ಧ್ವನಿಸರವು ಹೊಮ್ಮಿದಂತೆ. ವೀಣೆಯನ್ನು ನುಡಿಸುತ್ತಿದ್ದರು ರಸಿಕ ಹೃದಯದಿಂದ ಸ್ವರರಸವು ಚಿಮ್ಮಿದಂತೆ. ಮಾತುಮಾತಿಗೆ ನಗುವ, ಮಾತುಮಾತಿನಲಿ ನಗಿಸುವ ವಿನೋದ ಪ್ರಜ್ಞೆಯಿತ್ತು ಅಲ್ಲಿಯ ವಿನೋದಿನಿಯರಲ್ಲಿ. ಭೋಗಾಸಕ್ತರಾಗಿದ್ದರು ಅಲ್ಲಿನ ವನಿತೆಯರು. ಹೀಗೆ ಸ್ತ್ರೀಗಣವದು, ಸ್ತ್ರೀಗುಣಗಳ ಹೊಂದಿ, ಸ್ತ್ರೀಗಡಣದಲ್ಲಿಯೇ ಬದುಕು ನಡೆಸುತ್ತಾ, ಸ್ತ್ರೀಗಣಿಯೊಂದನ್ನು ನಿರ್ಮಿಸಿತ್ತು ಈ ಭೂಮಿಯೊಳಗೆ.    ಹೀಗಿದ್ದ ವನಿತಾ ರಾಜ್ಯವನ್ನು ಪ್ರವೇಶಿಸಿ ಅಲ್ಲಿಂದ ಜೀವಂತವಾಗಿ ಹೊರಬಂದ ಪುರುಷರು ಇರಲಿಲ್ಲ. ಬಂದ ಗಂಡಸರನ್ನು ಆಕರ್ಷಿಸಿ, ಕೊನೆಗೆ ಮರಣವನ್ನೀಯುವ ಕಠೋರತೆಯಿತ್ತು ಅಲ್ಲಿನ ಹೆಂಗಳೆಯರ ಹೃದಯದಲ್ಲಿ. ಸೌಂದರ್ಯಮಯ ದೇಹವನ್ನು ಮುಂದಿಟ್ಟು ಪುರುಷರನ್ನು ಯಮಪಾಶಕ್ಕೆ ಸಿಲುಕಿಸುತ್ತಿದ್ದ ಮೋಹನಾಂಗಿಯರು ಅಲ್ಲಿನವರು.    ಬಂದ ಗಂಡಸರನ್ನು ಕಂಡು ಚೆಲ್ಲುಚೆಲ್ಲಾಗಿ ನೋಡುತ್ತಾ, ಆಸೆಯ ಕಣ್ಣೋಟ ಬೀರುತ್ತಿದ್ದರು. ಆಕರ್ಷಕವಾದ ಭಂಗಿಯಲ್ಲಿ ನಿಂತು, ಕಾಲ ಉಗುರುಗಳಿಂದ ನೆಲವನ್ನು ಕೆರೆಯುತ್ತಾ ಹುಸಿಲಜ್ಜೆಯ ಭಾವವನ್ನು ತೋರಿಸುತ್ತಿದ್ದರು. ಸರಸಗೈಯ್ಯುವ ಸಮಯದಲ್ಲಿ ದೇಹಸಿರಿಯನ್ನು ಉಣಬಡಿಸುತ್ತಾ ಗಂಡಸರಿಗೆ ಹುಚ್ಚು ಹಿಡಿದು ಅವರ ಅರಿವು ಇನ್ನಿಲ್ಲವಾಗುವ ಹಾಗೆ ಮದವನ್ನು ಏರಿಸುತ್ತಿದ್ದರು.    ಇಲ್ಲಿನ ಸ್ತ್ರೀಯೊಡನೆ ಒಮ್ಮೆ ಸರಸಕೇಳಿಗೆ ಇಳಿದ ಬಳಿಕ ಅದೇ ವಿಷಯದಲ್ಲಿ ಸಂಪೂರ್ಣ ಆಸಕ್ತನಾಗಿಬಿಡುತ್ತಿದ್ದ ಇಲ್ಲಿಗೆ ಬಂದ ಪುರುಷ. ಇಲ್ಲಿಂದ ತೆರಳಲು ಅವನಿಗೆ ಮನಸ್ಸೇ ಆಗುತ್ತಿರಲಿಲ್ಲ. ನಾನಾ ಪ್ರಕಾರದ ಕಾಮಕ್ರೀಡೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ಈ ಬಗೆಯಲ್ಲಿಯೇ ಒಂದು ತಿಂಗಳು ಸುಖಿಸುತ್ತಿದ್ದರು. ಉತ್ತಮವಾದ ಸುಗಂಧವನ್ನು ಮೈಗೆ ಬಳಿದುಕೊಂಡು, ಸುಗಂಧ ದ್ರವ್ಯವನ್ನು ಬಾಯಿಗೆ ಹಾಕಿಕೊಂಡು, ತಾಂಬೂಲ, ಮಧುಪಾನ ಮೊದಲಾದವುಗಳ ಮೂಲಕ ಮದನಕೇಳಿಯ ಉತ್ತುಂಗ ಸೊಗವನ್ನು ಅನುಭವಿಸುತ್ತಿದ್ದರು.  ವಿಧವಿಧವಾದ ಬಗೆಯಲ್ಲಿ ಶೋಭಿಸುವ ಕುಸುಮಸಮೂಹಗಳ ಪರಿಮಳಭರಿತವಾದ ಮಕರಂದಗಳನ್ನು ಚಿನ್ನದ ಬಟ್ಟಲಲ್ಲಿ ಸುರಿಯುತ್ತಿದ್ದಳು ಹೆಣ್ಣು. ಆ ಮಕರಂದಕ್ಕೆ ತನ್ನ ತುಟಿಯ ಸಿಹಿಯನ್ನು ಸೇರಿಸುವಂತೆ ಬಟ್ಟಲಿಗೆ ಮುಖವಿಟ್ಟು ಅದನ್ನು ಸವಿಯುತ್ತಿದ್ದಳು. ಉಳಿದ ಮಕರಂದವನ್ನು ನೋಡಿ ನಗು ಬೀರುತ್ತಿದ್ದಳು. ಬಟ್ಟಲನ್ನು ಪುರುಷನ ಬಳಿಗೆ ತೆಗೆದುಕೊಂಡು ಹೋಗಿ ಬಟ್ಟಲಿನಲ್ಲಿದ್ದ ಮಕರಂದವನ್ನು ಇಬ್ಬರೂ ಹಂಚಿಕೊಂಡು ಸವಿಯುತ್ತಿದ್ದರು. ಮಕರಂದದ ಸವಿಯನ್ನು ತೊರೆದು ಇರುವವರಲ್ಲ ಎಂಬಂತೆ ಇಬ್ಬರೂ ಬಿಡದೆ ಮುಖವಿಟ್ಟು ರುಚಿಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದರು. ಚಿನ್ನದ ಬಟ್ಟಲಲ್ಲಿ ಮೂಡಿದ ಪುರುಷನ ಬಿಂಬವನ್ನು ಆ ಹೆಣ್ಣು, ಅವಳ ಬಿಂಬವನ್ನು ಆ ಪುರುಷ ಇಬ್ಬರೂ ಕಂಡು ಅನ್ಯೋನ್ಯತೆಯ ಸಂಪ್ರೀತಿ ಭಾವ ಅವರನ್ನು ಆವರಿಸುತ್ತಿತ್ತು. ಬಟ್ಟಲಲ್ಲಿ ತುಂಬಿರುವ ಮಕರಂದ ಮುಗಿದುಹೋದರೆ ಜೊತೆಜೊತೆಗೆ ಅದನ್ನು ಸವಿಯುವ ಗಳಿಗೆಯದು ಮುಗಿದುಹೋಗುವುದು ಎಂಬ ಯೋಚನೆ ಬಂದ ಕ್ಷಣವೇ ಆತುರಾತುರವಾಗಿ ರಸವನ್ನು ಹೀರುವುದನ್ನು ನಿಲ್ಲಿಸುತ್ತಿದ್ದರು. ಬೇಕುಬೇಕೆಂದೇ ವಿಳಂಬ ಮಾಡುತ್ತಿದ್ದರು. ಜೊತೆಜೊತೆಗೆ ಸವಿವ ರಸಗಳಿಗೆಯದು ಅವರಿಗೆ ಮುದವನ್ನು ನೀಡುತ್ತಿತ್ತು.  ಮನಸೆಳೆಯುವ ರತಿಕೇಳಿಯಲ್ಲಿ ತಲ್ಲೀನರಾಗುತ್ತಿದ್ದರು. ಹೆಣ್ಣು ತನ್ನ ತುಟಿಯ ಸಿಹಿರಸವನ್ನು ಕುಡಿಸಿ ಪುರುಷನನ್ನು ತಣಿಸುತ್ತಿದ್ದರು. ಮಿಲನದಲ್ಲಿ ಮನವದು ಮುಳುಗಿಹೋಗಿ ಸುಖ ಅವರದ್ದಾಗುತ್ತಿತ್ತು. ಕಾಮಕಲೆಗಳಲ್ಲಿ ಪರಿಣತಳಾದ ಹೆಣ್ಣು ಈ ಮೂಲಕ ಉನ್ನತ ನೆಮ್ಮದಿಯನ್ನು ತನ್ನದಾಗಿಸಿಕೊಳ್ಳುತ್ತಿದ್ದಳು.  ಹಾಗಿದ್ದಾಗಲೇ ಅವಳ ಅಧರದ ಸ್ಪರ್ಶಕ್ಕೆ ಸಿಲುಕಿ ವಿಷವಾದ ಆ ಮಕರಂದ ಅವನಿಗೆ ಪ್ರಾಣಸಂಕಟವನ್ನು ಕೊಡುವ ಕಾಟವನ್ನು ಆರಂಭಿಸುತ್ತಿತ್ತು. ಇನ್ನೇನು ಮರಣ ತನ್ನನ್ನು ಬಂದು ಅಪ್ಪಿಕೊಳ್ಳುತ್ತದೆ ಎಂದು ಬೆದರಿದ ಪುರುಷ ಮಧ್ಯೆಯೇ ಕಾಮಕೇಳಿಯನ್ನು ನಿಲ್ಲಿಸಿಬಿಡುತ್ತಿದ್ದ. ತಕ್ಷಣವೇ ಅವನ ಚರಣಕ್ಕೆ ಎರಗಿ, ಒಪ್ಪಿಸುವ ನಾಟಕವನ್ನಾಡುತ್ತಿದ್ದಳು. ದೈನ್ಯತೆಯನ್ನು ತೋರಿಸುತ್ತಿದ್ದಳು. ಕರುಣೆ ನೋಟ ಹರಿಸುತ್ತಿದ್ದಳು. ಅದಕ್ಕೂ ಅವನು ಸಹಿಸದವನಾದರೆ ಬೊಬ್ಬೆ ಹೊಡೆದು ಅವನನ್ನು ಹೊಡೆಯುತ್ತಿದ್ದಳು, ಕೊಲ್ಲುತ್ತಿದ್ದಳು. ಕೈಗಳಿಂದ ಬಡಿದು ಪ್ರಾಣ ಹೋಗುವವರೆಗೂ ಅವಳು ಸುಮ್ಮನಾಗುತ್ತಿರಲಿಲ್ಲ.  ಸಂಪಿಗೆ ಹೂವಿಗೆ ಮನಸೋತು, ಅದರ ಆಸ್ವಾದನೆಗೆ ಬಂದು, ಹೂ ಬಾಡುವವರೆಗೂ ಮಕರಂದವನ್ನು ಹೀರಿಕೊಂಡಿದ್ದು, ಕೊನೆಗೆ ಅದರೊಳಗಡೆಯೇ ಸಿಲುಕಿ ಮರಣವನ್ನಪ್ಪುವ ದುಂಬಿಯಂತಹ ಸ್ಥಿತಿ ಸ್ತ್ರೀರಾಜ್ಯಕ್ಕೆ ಬಂದ ಪುರುಷರದ್ದು. ಅಲ್ಲಿಗೆ ಬಂದ ಎಲ್ಲಾ ಪುರುಷರಿಗೂ ಇದೇ ಅವಸ್ಥೆ ಒದಗಿಬರುತ್ತಿತ್ತು. ಅಲ್ಲಿದ್ದ ಎಲ್ಲಾ ಮಹಿಳೆಯರೂ ಇದೇ ತೆರದಲ್ಲಿದ್ದರು.  ಹೀಗೆ ಪುರುಷರನ್ನು ಸಾಯಿಸಿದ ಕೆಲವು ಮಹಿಳೆಯರು ತಿಂಗಳು ಕಳೆದಾಗ ಅಗ್ನಿಪ್ರವೇಶ ಮಾಡುತ್ತಿದ್ದರು. ಇನ್ನೂ ಕೆಲವರು ಹೆಣ್ಣುಮಗುವಿಗೆ ಜನ್ಮ ನೀಡುತ್ತಿದ್ದರು. ಹೀಗೆ ಅಲ್ಲಿಯ ಸ್ತ್ರೀಸಂತತಿ ಬೆಳೆಯುತ್ತಲೇ ಬಂದಿತ್ತು. ಹೀಗೆ ವಿಷಾಂಗನೆಯರಾಗಿದ್ದ ಆ ರಾಜ್ಯಕ್ಕೆ ಪ್ರಮೀಳೆ ಎನ್ನುವವಳು ಅರಸಿಯಾಗಿದ್ದಳು.  ನನ್ನ ಜೊತೆಗಿದ್ದವರನ್ನು ಎಚ್ಚರಿಸದೇ ಇದ್ದರೆ ಅಪಾಯವಾಗುತ್ತದೆ ಎನ್ನುವುದು ನನಗೆ ದೃಢವಾಗಿತ್ತು. ಇದುವರೆಗೂ ಪರಾಕ್ರಮವನ್ನಿಟ್ಟುಕೊಂಡು ಯುದ್ಧ ಹೂಡಿದ್ದ ನಾವು ಇದೀಗ ಸಂಪೂರ್ಣ ಬುದ್ಧಿವಂತಿಕೆಯಿAದ, ವಿವೇಚನೆಯಿಂದ ನಡೆದುಕೊಂಡು ಮುನ್ನಡೆಯಬೇಕಿತ್ತು. “ಇಲ್ಲಿನವರು ವಿಷಕನ್ನಿಕೆಯರು. ಕಂಡ ಕೂಡಲೇ ಆಕರ್ಷಿಸುತ್ತಾರೆ. ಅವರೆಡೆಗೆ ಮಾರುಹೋದರೆ ನಿಮ್ಮ ಆಯುಷ್ಯವನ್ನೇ ಅಪಹರಿಸಿಬಿಡುತ್ತಾರೆ. ಕಾಮಕ್ರೀಡೆಯಲ್ಲಿ ಆಸಕ್ತಿ ವಹಿಸದೆ ಬುದ್ಧಿವಂತರಾಗಿರಬೇಕು” ಎಂದು ಹೇಳಿ ಜಾಗೃತಿ ಮೂಡಿಸಿದೆ ನಮ್ಮವರಲ್ಲಿ. ಅರಸಿ ಪ್ರಮೀಳೆ ನಮ್ಮ ಕುದುರೆಯನ್ನು ಕಟ್ಟಿಹಾಕುವ ಲಕ್ಷಣ ತೋರಿತು.    ಡಾ. ವಿಶ್ವನಾಥ ಎನ್ ನೇರಳಕಟ್ಟೆ      

Read Post »

ಕಾವ್ಯಯಾನ

ನಾಗರಾಜ ಬಿ.ನಾಯ್ಕ ಅವರ ಕವಿತೆ

ಕಾವ್ಯ ಸಂಗಾತಿ ನಾಗರಾಜ ಬಿ.ನಾಯ್ಕ ಅವರ ಕವಿತೆ ಕಾಗದದ ಮೇಲೆಬರೆಯಬೇಕೆಂದ ಸಾಲುಗಳುಇದ್ದಲ್ಲೇ ಕರಗಿಹೋದವು ಸುಮ್ಮನೇಗೆರೆಗಳ ಹಾಕಿಚಿತ್ರವಾಗಬೇಕಾದ ಚಿತ್ರಗಳೂರಸ್ತೆಗಳಾದವುಮರದ ನೆರಳಾಗಿಉಳಿಯಬೇಕಾದ ಹೂವುಗಳುಹಣ್ಣಿಗಾಗಿ ಇಳೆ ಸೇರಿತುಕಾಲದ ಸಹಜಓಟದ ಹರಿವಿಗೆಬಯಲು ನದಿಯಾಯಿತುಕಡಲು ಬದುಕಾಗಿಜೀವದ ಓಟ ಸಾಗಿತು ಮರದ ಮೇಲೊಂದು ಹಕ್ಕಿಕುಳಿತು ಗೂಡು ಕಟ್ಟುವುದುಹೇಗೆ ಎಂದು ನೋಡುತ್ತಿತ್ತುಹಾರಿ ಸಾಗಿ ಬದುಕಿನಉಸಿರಿಗೆ ಉಸಿರಾಗಿಕಣ್ಣೊಳಗೆ ಜಗವತುಂಬುತ್ತಿತ್ತು ಸುಮ್ಮನೇಗದ್ದೆಯ ಹಸಿರಿಗೆಚಿಗುರು ಮೂಡಿತ್ತುಮತ್ತೆ ಮೋಡದಿಮಳೆ ಹನಿಯ ಚಿತ್ರತಾನಾಗಿ ಮೂಡಿಜಗದಗಲದ ನೆಲಕೆತಂಪು ಹರಡಿತ್ತುಕಾಗದದ ಮೇಲೆಮೂಡಿದ ಬಣ್ಣಗಳೆಲ್ಲಾಗಾಳಿಯಲ್ಲಿ ತೇಲಿನೆಲಕೆ ಇಳಿದಿತ್ತುಮತ್ತೆ ಚಿತ್ರವಾಗುತ್ತನೆಲದೊಳಗೆ ಸೇರಿತ್ತು……. ನಾಗರಾಜ ಬಿ.ನಾಯ್ಕ

ನಾಗರಾಜ ಬಿ.ನಾಯ್ಕ ಅವರ ಕವಿತೆ Read Post »

ಅಂಕಣ ಸಂಗಾತಿ, ವೀಣಾ-ವಾಣಿ

ಅಂಕಣ ಸಂಗಾತಿ ವೀಣಾ ವಾಣಿ ವೀಣಾ ಹೇಮಂತ್‌ ಗೌಡ ಪಾಟೀಲ್ ಪರಿಸರ ದಿನಾಚರಣೆ..ಒಂದು ದಿನಕ್ಕೆ ಮಾತ್ರ ಸೀಮಿತವಾಗದಿರಲಿ  ಒಂದೆರಡು ದಿನಗಳ ಹಿಂದೆ ಪರಿಸರ ದಿನಾಚರಣೆಯಿದ್ದು ಇದನ್ನು ಕಡ್ಡಾಯವಾಗಿ ಆಚರಿಸಲೇಬೇಕು ಎಂಬ ಕಾರಣಕ್ಕಾಗಿ ಬಹುತೇಕ ಎಲ್ಲಾ ಸರಕಾರಿ, ಅರೆ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳು ಸಸಿಯನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.ಪತ್ರಿಕೆಯವರು ಮತ್ತೊಂದು ಹೆಜ್ಜೆ ಮುಂದೆ ಹೋಗಿ ಹಸಿರು ಬಣ್ಣದ ಅಕ್ಷರಗಳಲ್ಲಿ ಪತ್ರಿಕೆಯನ್ನು ಪ್ರಿಂಟ್ ಮಾಡುವ ಮೂಲಕ ತಮ್ಮ ಪರಿಸರ ಪ್ರೇಮವನ್ನು ಮೆರೆದರು.  ಇನ್ನು ಮಹಿಳಾಮಣಿಯರು ಹಸಿರು ರಂಗಿನ ದಿರಿಸುಗಳನ್ನು ಧರಿಸಿ ಪರಿಸರ ದಿನಾಚರಣೆಯನ್ನು ಆಚರಿಸಿ ಅದರ ಫೋಟೋ ತೆಗೆದು ತಮ್ಮ ವಾಟ್ಸಪ್ ಸ್ಟೇಟಸ್ ಗಳಲ್ಲಿ ಹಾಕಿಕೊಂಡು ಸಂಭ್ರಮಿಸಿದರು.  ಎಲ್ಲವೂ ಚಂದ! ನಿಜ ಪರಿಸರ ದಿನಾಚರಣೆಯನ್ನು ಕಡ್ಡಾಯವಾಗಿ ಮಾಡಲೇಬೇಕು ಎಂಬ ಅನಿವಾರ್ಯತೆ ಇಲ್ಲದೆ ಹೋದರೆ ನಾವು ಪರಿಸರಕ್ಕೆ ಏನು ಕೊಟ್ಟಿದ್ದೇವೆ ಎಂಬುದರ ಕುರಿತು ಒಂದೈದು ನಿಮಿಷ ಮನದಲ್ಲೇ ಯೋಚಿಸಿದರೆ ಶೂನ್ಯ ಫಲಿತಾಂಶ ನಮ್ಮ ಮುಂದೆ ಕಾಣಬಹುದು.ಯಾರನ್ನೂ ಹೀಯಾಳಿಸುವ, ತಮಾಷೆ ಮಾಡುವ ಅವರ ಕುರಿತು ನಿರ್ಣಾಯಾತ್ಮಕವಾಗಿ ಹೇಳಿಕೆ ಕೊಡುವ ಇಲ್ಲವೇ ಅವರ ಕ್ರಿಯೆಯನ್ನು ಹಂಗಿಸುವ ಉದ್ದೇಶ ನನಗಿಲ್ಲ…. ಆದರೂ ಕೆಲ ಸಂಗತಿಗಳನ್ನು ನಮ್ಮದೇ ನಿಲುಕಿನಲ್ಲಿ  ನಾವು ವೈಯಕ್ತಿಕವಾಗಿ ಕೈಗೊಳ್ಳುವ ನೂರೆಂಟು ಸಾಧ್ಯತೆಗಳು ಇರುವಾಗ ಆ ನಿಟ್ಟಿನಲ್ಲಿ ನಾವು ಮುಂದುವರೆದರೆ ಪರಿಸರವನ್ನು ಇನ್ನಷ್ಟು ಸಮರ್ಪಕವಾಗಿ ಉಳಿಸಿಕೊಳ್ಳಬಹುದು ಎಂಬ ಆಶಯ ನನ್ನದು. ಈಗಾಗಲೇ ಪರಿಸರ ವಿನಾಶದ ದುಷ್ಪರಿಣಾಮಗಳನ್ನು ನಾವು ನೋಡುತ್ತಿದ್ದೇವೆ . ಹಿತಕರವಾದ ಬೇಸಿಗೆ ನಮ್ಮ ಪಾಲಿಗೆ ದೂರ…. ಕುರಿಯುತ್ತಿರುವ ಝಳ, ನಮ್ಮನ್ನು ಆಹುತಿ ತೆಗೆದುಕೊಳ್ಳದಿದ್ದರೆ ಸಾಕು ಎಂಬಂತಹ ಬಿಸಿಲು ಒಂದೆಡೆ ಕಾಡುತ್ತಿದ್ದರೆ,, ಬೇಕಿರಲಿ ಬೇಡದೆ ಇರಲಿ ಧೋ ಎಂದು ಸುರಿಯುತ್ತಿರುವ ಅಕಾಲ ಮಳೆ ಅಲ್ಲಲ್ಲಿ ನೆರೆ ಹಾವಳಿಯಿಂದ ಬೆಳೆ ಮನೆಗಳನ್ನು ತನ್ನ ರುದ್ರ ನರ್ತನಕ್ಕೆ ಈಡು ಮಾಡಿ ಹಾಳುಗೆಡವುತ್ತಿದೆ…. ಬದುಕಲು ಸಾಧ್ಯವೇ ಇಲ್ಲ ಎಂಬಂತಹ ಮಾರಣಾಂತಿಕ ತೊಂದರೆಗಳಾದ ಹೃದಯ ತೊಂದರೆ, ಅಕಾಲ ಮರಣಗಳು ಚಳಿಯ ಕಾರಣದಿಂದ ಉಂಟಾಗುತ್ತಿದ್ದು, ಸಹಿಸಲಸಾಧ್ಯವಾದ ಚಳಿಯಿಂದ ಜನರು ಸಾಯುತ್ತಿರುವ ಘಟನೆಗಳನ್ನು ಕೂಡ ನಾವು ಪತ್ರಿಕೆಗಳಲ್ಲಿ ಓದುತ್ತಿದ್ದೇವೆ. ಈಗಾಗಲೇ ಪರಿಸ್ಥಿತಿ ಸಾಕಷ್ಟು ವಿಷಮಿಸಿದ್ದು ಇನ್ನೂ ಹೆಚ್ಚಿನ ಅನಾಹುತಗಳು ಉಂಟಾಗುವ ಮುನ್ನವೇ ಜಾಗೃತರಾಗಬೇಕಾದ ಪರಿಸ್ಥಿತಿ ನಮ್ಮದು ಆ ನಿಟ್ಟಿನಲ್ಲಿ ಕೆಲ ಪರಿಹಾರ ಕ್ರಮಗಳನ್ನು ನಾವು ಕೈಗೊಳ್ಳಲೇಬೇಕಾಗಿದೆ. ಅಯ್ಯೋ ! ಅದನ್ನೆಲ್ಲ ಎಲ್ಲಿ ಮಾಡೋಕಾಗುತ್ತೆ ಉಳಿದವರೆಲ್ಲ ಮಾಡ್ಲಿ ನಮ್ಮ ಕೈಲಿ ಆಗೋದಿಲ್ಲ ಎಂಬ ನಿಟ್ಟಿನಲ್ಲಿ ಜನರು ವಿಸ್ಮೃತಿಯಲ್ಲಿ ಸಿಲುಕಿದ್ದಾರೆ ಅಂತಹವರಿಗೆ ಮಾಡುವ ಮನಸ್ಸಿದ್ದರೂ ಅವಕಾಶಗಳ ಅರಿವು ಹಾಗೂ ಅನಿವಾರ್ಯತೆಯನ್ನು ಮೂಡಿಸುವುದು ಮಾತ್ರ ನನ್ನ ಉದ್ದೇಶ.ಪರಿಸರ ದಿನಾಚರಣೆ ಇರುವುದು ಕೇವಲ ಗಿಡ ಮರಗಳನ್ನು ನೀಡಲು ಮಾತ್ರವಲ್ಲ. ಪರಿಸರ ದಿನಾಚರಣೆಯ ಮುಖ್ಯ ಉದ್ದೇಶ ನಾವು ಇರುವ ಈ ಬೃಹತ್ ಬ್ರಹ್ಮಾಂಡದ ಎಲ್ಲಾ ಜೀವರಾಶಿಗಳಿಗೂ ನಮ್ಮಷ್ಟೇ ಇಲ್ಲಿ ಬದುಕುವ ಹಕ್ಕು ಇದೆ ಎಂಬುದನ್ನು ಅರಿತುಕೊಳ್ಳಲು. ಉಳಿದೆಲ್ಲ ಜೀವಿಗಳಿಗೆ ಮನುಷ್ಯನಷ್ಟು ಬುದ್ಧಿಶಕ್ತಿ ಇಲ್ಲ ನಿಜ…ಆದರೆ ಜಗತ್ತಿನ ಜೀವಸಂಕುಲಗಳಲ್ಲಿಯೇ ಅತ್ಯಂತ ಬುದ್ಧಿಶಾಲಿ ಎಂದು ಬೀಗುವ ಮನುಷ್ಯ ತಾನೇ ತೋಡಿದ ಕಂದಕಕ್ಕೆ ತಾನು ಮಾತ್ರವಲ್ಲದೆ ಇಡೀ ಜೀವ ಸಂಕುಲವನ್ನು ಹಂತ ಹಂತವಾಗಿ ತಳ್ಳಿ ಮಾರಣಾಂತಿಕ ತೊಂದರೆಯಲ್ಲಿ ಸಿಲುಕಿಸುವ ಪ್ರಕ್ರಿಯೆಗೆ ಈಗಾಗಲೇ ತೊಡಗಿದ್ದಾನೆ.ಆರಂಭದಲ್ಲಿ ಆಧುನಿಕತೆಯ ಮೆರುಗಿನಲ್ಲಿ ಬಳಸಿ ಬಿಸುಡುವ ವಸ್ತುಗಳ ಶೋಕಿಯಲ್ಲಿ,, ಬಿಗಿಯಾದ ನೀತಿ ನಿಯಮಗಳ ಅನುಷ್ಠಾನ ಇಲ್ಲದ ಕಾರಣಕ್ಕಾಗಿ ಈ ಪ್ರವಾಹ ಚಿಕ್ಕದಾಗಿದ್ದರೂ ಇದೀಗ ಬೃಹದಾಕಾರದ ಸಮಸ್ಯೆಯಾಗಿ ಉಲ್ಬಣಗೊಂಡಿದೆ.ಪ್ರತಿಯೊಂದು ಹಳ್ಳಿಯ ಗ್ರಾಮ ಪಂಚಾಯಿತಿಯಿಂದ ಹಿಡಿದು ದಿಲ್ಲಿಯವರೆಗಿನ ಮಹಾನಗರ ಪಾಲಿಕೆಗಳವರೆಗೆ ಸಮಸ್ಯೆ ಇರುವುದು ಕಸ ವಿಲೇವಾರಿ. ನೀವು ಯಾವುದೇ ಊರಿನ ಹೊರ ಭಾಗದಲ್ಲಿ ಹೋಗಿ ನೋಡಿದರೆ ರಸ್ತೆಯ ಬದಿಯಲ್ಲಿ ನೂರಾರು ಟ್ರ್ಯಾಕ್ಟರ್ ಗಳಷ್ಟು ಕಸ ಬಿದ್ದಿರುತ್ತದೆ. ಮರುಬರಕ್ಕೆ ಮಾಡಲು ಸಾಧ್ಯವಾಗದ ಪ್ಲಾಸ್ಟಿಕ್ ವಸ್ತುಗಳ ರಾಶಿ ಅಲ್ಲಿರುತ್ತದೆ. ಹರಿದು ಹೋದ ರಬ್ಬರ್ ಟಾಯರ್, ಟ್ಯೂಬ್, ಬ್ಯಾಗ್ ಗಳು, ನೀರಿನ ಬಾಟಲಿಗಳು ಪೇಸ್ಟಿನಿಂದ ಹಿಡಿದು ಬೃಹದಾಕಾರದ ತ್ಯಾಜ್ಯಗಳು ಊರ ಹೊರಗಿನಿಂದಲೇ ನಮ್ಮನ್ನು ಸ್ವಾಗತಿಸುತ್ತವೆ.ಸರ್ಕಾರ ಅದೆಷ್ಟೇ ಪ್ರಯತ್ನ ಪಟ್ಟರೂ ಸ್ವಚ್ಛ ಭಾರತ ಯೋಜನೆಯನ್ನು ಕೈಗೊಂಡು ಮನೆಗೊಂದು ಶೌಚಾಲಯವನ್ನು ನಿರ್ಮಿಸಿ ಕೊಟ್ಟರೂ ಕೂಡ 21ನೇ ಶತಮಾನದಲ್ಲಿಯು ಜನರು ಬಯಲು ಬಹಿರ್ದೆಸೆಗೆ ಹೋಗುವ ಮೂಲಕ ಪರಿಸರವನ್ನು ಹಾಳುಗೆಡವುತ್ತಿದ್ದಾರೆ.ಇನ್ನು ಚಿಕ್ಕ ಪಾನ್ ಶಾಪು ಗಳಿಂದ ಹಿಡಿದು ದೊಡ್ಡ ಮಾಲ್ಗಳವರೆಗೆ ಎಲ್ಲ ಕಡೆ ಪ್ಲಾಸ್ಟಿಕ್ನದ್ದೇ ಕಾರುಬಾರು.ಬಣ್ಣ ಬಣ್ಣದ ಒಡೆಯದ ಚಿತ್ತಾಕರ್ಷಕ ಪ್ಲಾಸ್ಟಿಕ್ ಲೋಟ, ಬಟ್ಟಲು, ಬಳಸಿ ಬಿಸುಟಬಹುದಾದ ವಸ್ತುಗಳು ಒಂದೆರಡಲ್ಲ. ಪ್ಲಾಸ್ಟಿಕ್ ವಸ್ತುಗಳನ್ನು ಮಾರುವ ಅಂಗಡಿಕಾರರು ಅಂತಿಮವಾಗಿ ಪ್ಯಾಕ್ ಮಾಡಿ ಕೊಡುವಾಗ ಮಾತ್ರ ಸರ್/ಮೇಡಂ ನಾವು ಪ್ಲಾಸ್ಟಿಕ್ ಕವರ್ ಬಳಸುವುದಿಲ್ಲ ಪೇಪರ್ ಬ್ಯಾಗ್ ನಲ್ಲಿ ಹಾಕಿ ಕೊಡೋಣವೇ ಎಂದು ಕೇಳುವುದು ವಿಪರ್ಯಾಸವಲ್ಲವೇ ? ಪರಿಸರವನ್ನು ಉಳಿಸಿ ಎಂದು ಒಕ್ಕೊರಳಿನಿಂದ ಹೋಗುವ ಎಲ್ಲಾ ಕಡೆಗಳಲ್ಲಿ ಕಣ್ಣು ಕುಕ್ಕುವ ಬಲ್ಬ್ ಗಳನ್ನು, ಟ್ಯೂಬ್ ಗಳನ್ನು ಹಾಕಿ ಸೂರ್ಯನ ಬೆಳಕಿಗೆ ಸವಾಲೊಡ್ಡುವಂತೆ ಪ್ರಕಾಶಮಾನವಾಗಿಸುವರು. ರಸ್ತೆಯ ಅಗಲೀಕರಣ ಊರನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಬೃಹದಾಕಾರದ ಕಟ್ಟಡಗಳನ್ನು ಕರುಣಿಸಿ ನಿರ್ಮಿಸುವ ಸಲುವಾಗಿ ನೂರಾರು ವರ್ಷಗಳಿಂದ ನಮಗೆ ಗಾಳಿ ನೆರಳನ್ನು ನೀಡುವುದರ ಜೊತೆಗೆ ನೂರಾರು ಸಾವಿರಾರು ಪಕ್ಷಿಗಳಿಗೆ ಆಶ್ರಯ ತಾಣವಾಗಿರುವ ಮರಗಳನ್ನು ಕಡಿದು ಉರುಳಿಸುವುದು ಪರಿಸರ ನಾಶವಲ್ಲದೆ ಮತ್ತಿನ್ನೇನು ? ಯಾವುದೇ ಒಂದು ಆಧುನಿಕತೆಯ ಭರಾಟೆ ತನ್ನ ಅಂತಿಮ ಹಂತದಲ್ಲಿ ತೀವ್ರ ಪರಿಣಾಮವನ್ನು ಬೀರಿದಾಗ ಉಂಟಾಗುವ ಅಲ್ಲೋಲಕಲ್ಲೋಲದಲ್ಲಿ ನಾವು ಮನುಷ್ಯ ಮಾತ್ರಠು ಯೋಚಿಸಲು ಆರಂಭಿಸುತ್ತೇವೆ.ಇವೆಲ್ಲವೂ ದೊಡ್ಡ ಮಟ್ಟದಲ್ಲಾಯಿತು… ನಮ್ಮ ಹಿರಿಯರು ನಮಗೆ ಕೊಟ್ಟ ಒಳ್ಳೆಯ ವಾತಾವರಣದ ಕೊಡುಗೆಯನ್ನು ನಾವು ಮಕ್ಕಳಿಗೆ ಉಳಿಸಿ ಕೊಡಬೇಕಾಗಿರುವುದು ನಮ್ಮದೇ ಜವಾಬ್ದಾರಿ ಆ ಜವಾಬ್ದಾರಿಯ ನಿರ್ವಹಣೆಯಲ್ಲಿ ನಾವು ಬಹುತೇಕ ಎಡವಿದ್ದೇವೆ ನಿಜ, ಆದರೆ ಮತ್ತೆ ಸಂಭಾಳಿಸಿಕೊಂಡು ನಿಲ್ಲಲೇಬೇಕಾದ ತುರ್ತು ಪರಿಸ್ಥಿತಿ ಒದಗಿದೆ. ಈ ನಿಟ್ಟಿನಲ್ಲಿ ಕನಿಷ್ಠ ಪಕ್ಷ ಸುಶಿಕ್ಷಿತರು, ನಾಗರಿಕರು ಎಂದೆನಿಸಿಕೊಂಡಿರುವ ನಾವುಗಳು ನಮ್ಮ ಮನೆಯ ಮಟ್ಟಿಗೆ ಪರಿಸರವನ್ನು ಹೇಗೆ ಕಾಯ್ದುಕೊಳ್ಳಬಹುದು ಎಂದು ನೋಡೋಣ.* ಮನೆಯಿಂದ ಹೊರಗೆ ಅಂಗಡಿಗೆಂದೇ ಹೋಗುವಾಗ ಬಟ್ಟೆಯ ಕೈ ಚೀಲಗಳನ್ನು ಒಯ್ಯುವುದು ವಿಹಿತ. ಯಾವುದೇ ಸಮಯದಲ್ಲಿಯೂ ನೀವು ಏನನ್ನಾದರೂ ಖರೀದಿಸಬಹುದು ಎಂಬ ಮನಸ್ಥಿತಿ ನಿಮ್ಮದಾಗಿದ್ದರೆ ಬಟ್ಟೆಯ ಬ್ಯಾಗ್ ನ ಜೊತೆ ಒಂದೆರಡು ಡಬ್ಬಗಳನ್ನು ಒಯ್ಯುವುದು ಒಳ್ಳೆಯದು, ಅದು ಸಾಧ್ಯವಾಗದಿದ್ದರೆ ಅಂಗಡಿಗಳಲ್ಲಿ ಕಾಗದ ಪೊಟ್ಟಣದಲ್ಲಿ ಕಟ್ಟಿಕೊಡಲು ಕೇಳಿಕೊಳ್ಳಬೇಕು. ಮೊದಮೊದಲು ಅಂಗಡಿಕಾರರು ನಿಮ್ಮನ್ನು ತಮಾಷೆ ಮಾಡಬಹುದು ಅಯ್ಯೋ! ಅದನ್ನೆಲ್ಲ ಯಾರು ಮಾಡ್ತಾರೆ ಸರ್, ಇದನ್ನೇ ತಗೊಂಡು ಹೋಗಿ ಎಂದು ನಿಮಗೆ ಅಸಡ್ಡೆಯಿಂದ ಉತ್ತರಿಸಬಹುದು… ಇದನ್ನು ಅವಮಾನ ಎಂದು ಭಾವಿಸಬೇಡಿ. ನೀವು ನಿಮ್ಮ ನಿಲುವಿಗೆ ಬದ್ಧರಾದರೆ ಮುಂದಿನ ದಿನಮಾನಗಳಲ್ಲಿ ನಿಮ್ಮನ್ನು ಮತ್ತಷ್ಟು ಜನರು ಅನುಸರಿಸಬಹುದು. ವೈಯುಕ್ತಿಕ ನೆಲೆಯಲ್ಲಿ ನಾವು ಇದನ್ನು ಖಂಡಿತವಾಗಿಯೂ ಮಾಡಲು ಸಾಧ್ಯವಿದೆ.* ಹಗಲಿನ ಹೊತ್ತಿನಲ್ಲಿ ಮನೆಯ ಕಿಟಕಿ ಬಾಗಿಲುಗಳನ್ನು ತೆರೆದು ಹೊರಗಿನಿಂದ ಬರುವ ಸೂರ್ಯನ ಬೆಳಕು ಹಾಗೂ ತಾಜಾ ಹವೆಯನ್ನು ಉಸಿರಾಡಲು ರೂಢಿಸಿಕೊಳ್ಳಬೇಕು. ಅನವಶ್ಯಕವಾಗಿ ಲೈಟ್ಗಳನ್ನು ಉರಿಸುವುದು ಬೇಕಾಗಿಲ್ಲ. ತೀರ ಅನಿವಾರ್ಯವಾದಲ್ಲಿ ಮಂದ ಬೆಳಕನ್ನು ಸೂಸುವ ಅತ್ಯಂತ ಕಡಿಮೆ ಯೂನಿಟ್ ಬಳಕೆಯಾಗುವ ನವೀಕೃತ ಮಾದರಿಯ ಬಲ್ಬ್ ಗಳನ್ನು ಬಳಸಬೇಕು.‘ಒಂದು ಯೂನಿಟ್ ಉಳಿತಾಯ ಒಂದು ಯೂನಿಟ್ ಉತ್ಪಾದನೆಗೆ ಸಮ ‘ ಎಂಬ ಮಾತು ಇಂದಿಗೂ ಚಾಲ್ತಿಯಲ್ಲಿ ಇಟ್ಟುಕೊಳ್ಳಲೇಬೇಕು. ನಮಗೆ ಉತ್ಪಾದನೆ ಮಾಡುವ ಸಾಮರ್ಥ್ಯವಿಲ್ಲ ಎಂದಾದಲ್ಲಿ ಬಳಸುವಾಗ ತುಸು ಎಚ್ಚರ ವಹಿಸುವುದು ಒಳಿತು.*ಆಹಾರವನ್ನು ಸಾಧ್ಯವಾದಷ್ಟು ತಾಜಾ ಆಗಿ ತಯಾರಿಸಿ ಸೇವಿಸಬೇಕು ಪದೇ ಪದೇ ಬಿಸಿ ಮಾಡುವುದರಿಂದ ಆಹಾರದಲ್ಲಿರುವ ಜೀವಸತ್ವಗಳು ತಮ್ಮ ಶಕ್ತಿಯನ್ನು ಕಳೆದುಕೊಂಡು ಆಹಾರವು ಸತ್ವರಹಿತವಾಗುತ್ತದೆ.. ಅತಿಯಾಗಿ ಅಡುಗೆ ತಯಾರಿಸಿ ಅದನ್ನು ಚೆಲ್ಲುವುದರಲ್ಲಿ ಅರ್ಥವಿಲ್ಲ. ಪ್ರತಿದಿನವೂ ಹಳ್ಳಿಯಿಂದ ದಿಲ್ಲಿಯವರೆಗೆ ಉಣ್ಣಲು ಸಾಧ್ಯವಾಗದ ರೀತಿಯಲ್ಲಿ ಟನ್ನುಗಟ್ಟಲೆ  ಆಹಾರ ಪದಾರ್ಥಗಳು ಕಸದ ತೊಟ್ಟಿಗೆ ಸೇರುವುದರಲ್ಲಿ ನಮ್ಮ ಅಳಿಲು ಪಾಲು ಸಲ್ಲುವುದನ್ನು ತಪ್ಪಿಸಬೇಕು. ಈ ಹಿಂದೆ ಉಳಿಕೆ ಆಹಾರವು ಮನೆಯ ಕೆಲಸದವರಿಗೆ ಮರುದಿನಕ್ಕೆ, ದನ ಕರುಗಳಿಗೆ ಮುಸುರೆಯಾಗಿ ಸಾರ್ಥಕತೆಯನ್ನು ಪಡೆಯುತ್ತಿತ್ತು ಆದರೆ ಆಧುನಿಕ ಭರಾಟೆಯಲ್ಲಿ ಪಶು ಸಂಗೋಪನೆಯನ್ನು ಕೈ ಬಿಟ್ಟಿರುವ ನಾವುಗಳು ಆಹಾರವನ್ನು ನೇರವಾಗಿ ಕಸದ ತೊಟ್ಟಿಗೆ ಚೆಲ್ಲುತ್ತಿದ್ದೇವೆ. ಇಡೀ ದೇಶದಲ್ಲಿ ಒಂದು ದಿನ ಕಸದ ತೊಟ್ಟಿಗೆ ಬಿಸಾಡುವ ಆಹಾರ ಅದೆಷ್ಟೋ ಕುಟುಂಬಗಳನ್ನು ಪಾಲಿಸಬಲ್ಲದು ಎಂಬ ಸತ್ಯದ ಅರಿವು ನಮಗಿರಬೇಕು… ಉತ್ಪಾದನಾ ಸಾಮರ್ಥ್ಯವಿಲ್ಲದವರಿಗೆ ಹಾಳು ಮಾಡುವ ಹಕ್ಕಿಲ್ಲ… ಅದು ನಮ್ಮ ವೈಯಕ್ತಿಕ ದುಡ್ಡಿನಿಂದ ಖರೀದಿಸಿದ್ದಾದರೂ ಸರಿಯೇ ? ಎಂಬ ಪ್ರಜ್ಞೆಯನ್ನು ಹೊಂದಿ ಅಂತೆಯೇ ನಡೆದುಕೊಳ್ಳಬೇಕು. ಇದರಿಂದ ಮನೆಯ ಖರ್ಚಿನಲ್ಲಿ ಮಿತವ್ಯಯ ಸಾಧಿಸಬಹುದು. ಇಂಧನವನ್ನು ಉಳಿಸಬಹುದು…. ತನ್ಮೂಲಕ ಪರಿಸರದ ಸಂರಕ್ಷಣೆಗೆ ನಮ್ಮ ಪಾಲನ್ನು ಸಲ್ಲಿಸಬಹುದು.* ಈ ಹಿಂದೆ ಅಮ್ಮಂದಿರು ಕಡ್ಡಾಯವಾಗಿ ತಮ್ಮ ಬಳಿ ಕರ ವಸ್ತ್ರವನ್ನು ನ್ಯಾಪ್ಕಿನ್ ಗಳನ್ನು ಇಟ್ಟುಕೊಳ್ಳುತ್ತಿದ್ದರು. ಆದರೆ ಇದೀಗ ಬಳಸಿ ಬಿಸಾಡಬಹುದಾದ ನ್ಯಾಪ್ಕಿನ್ಗಳನ್ನು ಎಗ್ಗಿಲ್ಲದೆ ಬಳಸಿ ಎಸೆಯುತ್ತಾರೆ. ಒಂದು ದಿನಕ್ಕೆ ಸರಿ ಸುಮಾರು 37 ಸಾವಿರ ಮರಗಳನ್ನು ಕೇವಲ ಟಿಶ್ಯೂ ಪೇಪರ್ ತಯಾರಿಕೆಗೆ ಕಡಿದು ಬಳಸುತ್ತಾರೆ ಎಂದರೆ ನೀವೇ ಊಹಿಸಿಕೊಳ್ಳಿ…. ಒಂದು ವರ್ಷಕ್ಕೆ ಎಷ್ಟು ಮರಗಳ ಮಾರಣಹೋಮವಾಗುತ್ತದೆ ಎಂದು. ಪ್ರಶ್ನೆ ಇರುವುದು ಅದೇ ಪ್ರಮಾಣದಲ್ಲಿ, ಅದೇ ತುರ್ತಿನಲ್ಲಿ, ಅಷ್ಟೇ ಪ್ರಮಾಣದ ಗಿಡಗಳನ್ನು ನಾವು ಬೆಳೆಸಲು ಸಾಧ್ಯವೇ ? ಎಂಬುದು.*ನಮ್ಮ ಹೊಲಗಳಲ್ಲಿ ಹೆಚ್ಚಿನ ಬೆಳೆಯನ್ನು ಪಡೆಯಲೆಂದು ನಾವು ಬಳಸುವ ಕೀಟನಾಶಕಗಳು ನಮ್ಮ ಭೂಮಿಯ ಸತ್ವವನ್ನು ಹೀರಿಕೊಳ್ಳುತ್ತಿವೆ. ನೆಲವನ್ನು ಬಂಜರಾಗಿಸುತ್ತವೆ. ಇದರ ಪರಿಣಾಮವಾಗಿ ನಿಸ್ಸತ್ವ ಆಹಾರವನ್ನು ಸೇವಿಸುತ್ತಿರುವ ನಮ್ಮ ಯುವ ಜನಾಂಗವು ಹತ್ತು ಹಲವಾರು ಆರೋಗ್ಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿವೆ. ಸಂತಾನಹೀನತೆಯ ತೊಂದರೆ ಪ್ರಮುಖವಾಗಿ ತಲೆದೋರುತ್ತಿದೆ. ಸಾಧ್ಯವಾದಷ್ಟು ಸಾವಯವ ಗೊಬ್ಬರವನ್ನು ಬಳಕೆ ಮಾಡಿ ಸತ್ವಯುತ ಆಹಾರ ಬೆಳೆಗಳನ್ನು ಬೆಳೆದು ಭೂಮಿಯ ಫಲವತ್ತತೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಯೋಚಿಸಲೇಬೇಕು. ಈ ಹಿಂದಿನವರು ಮಾಡುವಂತೆ ಉತ್ತಮ ತಳಿಯ ಬೀಜಗಳನ್ನು ಕಾಪಿಟ್ಟುಕೊಳ್ಳುವ, ಸಾಂಪ್ರದಾಯಿಕ ಕೃಷಿ ಪದ್ಧತಿಗಳನ್ನು ನಮ್ಮದಾಗಿಸಿಕೊಳ್ಳುವ ವಾರ್ಷಿಕ ಬೆಳೆಗಳ ಜೊತೆಗೆ ತರಕಾರಿ ಬೆಳೆಗಳನ್ನು ಹಣ್ಣು ಹಂಪಲುಗಳನ್ನು ಬೆಳೆಯುವ ಮೂಲಕ ಆದಾಯವನ್ನು ಸರಿ ತೂಗಿಸಬಹುದು…. ಈ ಕೆಲಸದಲ್ಲಿ ತುಸು ಶ್ರಮ ಹೆಚ್ಚಾಗಬಹುದು ಆದರೆ ನಾವು ಸಾಕುವ ಪಶುಗಳೊಂದಿಗಿನ ಒಡನಾಟ ನಮ್ಮ ಮಾನಸಿಕ ನೆಮ್ಮದಿಗೆ ಕಾರಣವಾಗುತ್ತದೆ ಪ್ರಕೃತಿಯೊಂದಿಗಿನ ಸಾಂಗತ್ಯ ಮನಸ್ಸಿಗೆ ಹಿತವಾಗಿರುತ್ತದೆ.* ಈ ಹಿಂದಿನಂತೆ ಪ್ರತಿ ಮನೆಯು ಒಂದು ಪುಟ್ಟ ಹಿತ್ತಲನ್ನು ಹೊಂದಿದ್ದು ಅಲ್ಲಿ ದಿನಬಳಕೆಯ ಹಣ್ಣು ತರಕಾರಿ ಹೂವುಗಳ ಗಿಡಗಳನ್ನು ಬೆಳೆಸಬೇಕು. ಅವಸರಕ್ಕೂ ಒದಗುವ ನೆರಳನ್ನು ಕೊಡುವ ಹಸಿರಿನಿಂದ ಕಣ್ಣು ತಂಪಾಗಿಸುವ ತಣ್ಣನೆಯ ಗಾಳಿಯನ್ನು ನೀಡುವ ಗಿಡಗಳು ಮನೆಯ ಹಿಂದೆ ಹಾಗೂ ಮುಂದೆ ಇರಲೇಬೇಕು  ನಿಸರ್ಗಕ್ಕೆ ಹತ್ತಿರವಾದ ರೀತಿಯಲ್ಲಿ ಮನೆ ಹಾಗೂ ಮನೆಗೆ ಹತ್ತಿದಂತೆ ನಿಸರ್ಗಕ್ಕೆ ಹತ್ತಿರವಾಗುವ ಕೈತೋಟ ಇದ್ದರೆ ಅದು ನಂದನವನವೇ ಸರಿ. ಮನೆಯಲ್ಲಿ ಕೂಡ ಸಾಧ್ಯವಾದಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದನ್ನು ಕೈ ಬಿಡಬೇಕು ಸ್ವಯಂ ಪ್ರೇರಿತರಾಗಿ ಅವುಗಳನ್ನು ದೂರವಿರಿಸುವುದು ಒಳ್ಳೆಯದು. ಇನ್ನು ರಸ್ತೆಗೆ ಇಳಿದರೆ ವಿಪರೀತ ವಾಹನಗಳ ಸಂದಣಿ. ಮನೆಗೆ ನೂರು ಮೀಟರ್ ಹತ್ತಿರವಿರುವ ಅಂಗಡಿ ಮುಂಗಟ್ಟುಗಳಿಗೆ ಹೋಗಲು ಕೂಡ ಟೂ ವೀಲರ್ ಗಳನ್ನು ಬಳಸುವುದನ್ನು ನಿಲ್ಲಿಸಬೇಕು. ನಡೆಯುತ್ತಾ ಹೋಗಿ ದಿನಬಳಕೆಯ ವಸ್ತುಗಳನ್ನು ಖರೀದಿಸುವ ಮೂಲಕ ದೈಹಿಕ ಆರೋಗ್ಯದ ಜೊತೆ ಜೊತೆಗೆ ಗಾಡಿಗೆ ಬಳಸುವ ಇಂಧನದ ಖರ್ಚನ್ನು ಕೂಡ ಉಳಿಸಬಹುದು. ಮನೆಯಲ್ಲಿ

Read Post »

ಇತರೆ

ಹೋಗುವುದಾದರೂ ಎಲ್ಲಿಗೆ ….??ವಿಶೇಷಲೇಖನ ಜಯಲಕ್ಷ್ಮಿ ಕೆ ಮಡಿಕೇರಿ

ವಿಶೇಷ ಸಂಗಾತಿ ಜಯಲಕ್ಷ್ಮಿ ಕೆ ಮಡಿಕೇರಿ ಹೋಗುವುದಾದರೂ ಎಲ್ಲಿಗೆ ….?? ಪಿ ಯು ಸಿ ಮೌಲ್ಯ ಮಾಪನ ನಡೆಯುತ್ತಿದ್ದ ದಿನಗಳವು. ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಉಪನ್ಯಾಸಕರೊಬ್ಬರು ಅವರ ವತಿಯಿಂದ ಆ ಒಂದು ದಿನ ಮೌಲ್ಯ ಮಾಪನ ಕೇಂದ್ರದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು. ಊಟ ಬರುವುದು ತಡವಾಯಿತು. ಎರಡು ಗಂಟೆಯವರೆಗೂ ಊಟಕ್ಕೆ ಕಾದು ದಣಿದಿದ್ದ ಉಪನ್ಯಾಸಕ ವೃಂದ ಆಹಾರ ಬಂದ ತಕ್ಷಣ ಊಟಕ್ಕೆ ಮುಗಿಬಿದ್ದಿತು.  ಸಾಲೂ ಇಲ್ಲ,ಸಂಯಮವೂ ಇಲ್ಲ, ಒಂದು ವ್ಯವಸ್ಥೆ ಯಂತೂ ಮೊದಲೇ ಇಲ್ಲ. ಶಕ್ತಿವಂತರು ಆಹಾರ ಗಿಟ್ಟಿಸಿಕೊಳ್ಳುವಲ್ಲಿ ಗೆದ್ದರು, ಕೆಲವರು ಸೋತು ಗೆದ್ದರು. ಒಂದಿಬ್ಬರು ಪಡೆಯುಕೊಂಡ ತಟ್ಟೆಯ ಅನ್ನ ಸಾಂಬಾರ್ ಗುಂಪು ತಿಕ್ಕಾಟದಲ್ಲಿ ಮತ್ತೊಬ್ಬರ ಮೇಲೆ ಚೆಲ್ಲಿ..ಅದೇ ಒಂದು ಜಗಳದ ವಿಷಯವಾಗಿ , ಕಿರುಚಾಡಿ.. ಉಫ್..  ಸಾಕಪ್ಪ ಸಾಕು ಎನಿಸುವ ಒಂದು ಅನುಭವ ಎಲ್ಲರಿಗೂ. ಕೊನೆಗೆ ನಿಂತವರಿಗೆ ಊಟವೇ ಸಿಗದೆ, ಆ ದಿನ ಊಟದ ವ್ಯವಸ್ಥೆ ಇದೆ ಎಂದುದರಿಂದ ಕ್ಯಾಂಟೀನ್ ನವರೂ ಊಟ  ಪೂರೈಕೆ ಮಾಡದೇ ಹೋದ್ದರಿಂದ ಕೆಲವರು ಆ ದಿನ ಉಪವಾಸ ಇದ್ದುಕೊಂಡೇ ಪೇಪರ್ ತಿದ್ದುವಂತಾಯಿತು. ಆ  ಚಿತ್ರಣ ನನ್ನ ಮನದಲ್ಲಿ ಅಚ್ಚೊತ್ತಿ  ನಿಂತಿದೆ. ವ್ಯಾಲ್ಯೂಯೇಷನ್ ಸೆಂಟರ್ ನಲ್ಲೇ ಊಟ ಸಿಗುತ್ತೆ ಅಂತ ಜೆ ಎಸ್ ಎಸ್  ಮಹಿಳಾ ಹಾಸ್ಟೆಲ್ ನಲ್ಲಿ ರುಚಿಕರವಾಗಿ ತಯಾರಿಸಿ ಕೊಡುತ್ತಿದ್ದ ಊಟವನ್ನು ಬಿಟ್ಟು ಬಂದು  ಕೊನೆಗೆ ಊಟ ಸಿಗದೆ ಇದ್ದವರಲ್ಲಿ  ನಾನೂ ಒಬ್ಬಳು.   ಅಲ್ಲಿ ಇದ್ದವರೆಲ್ಲ  ಸುಶಿಕ್ಷಿತರೇ..ಸಾಲು..ಶಿಸ್ತು ಸಂಯಮದ ಬಗ್ಗೆ ಬೋಧನೆ ಮಾಡುವವರೇ….ಆದರೇನು? ವಚನಕಾರರು ಹೇಳುವಂತೆ ” ಹಸಿವೆಂಬ ಹೆಬ್ಬಾವು ಬಂದು ಬಸಿರ ಹಿಡಿಯಲು ವಿಷವೇರಿತ್ತಯ್ಯಾ ಅಪಾದ ಮಸ್ತಕಕ್ಕೆ “. ಅಷ್ಟೇ. ‘ಹಸಿವು’ ಎನ್ನುವ ರಾಕ್ಷಸನ ಅಸುರ ಗುಣಗಳ ಮುಂದೆ ಸಭ್ಯತೆ ಸಂಸ್ಕಾರಗಳು ಮೌಲ್ಯ ಕಳೆದುಕೊಂಡುಬಿಡುತ್ತವೆ. ಮಾತು ಬರುವ ನಮ್ಮ ಪರಿಸ್ಥಿತಿಯೇ ಹೀಗಿರಬೇಕಾದರೆ ಇನ್ನು ಮಾತು ಬಾರದ ಮೂಕ ಪ್ರಾಣಿಗಳು ಹಸಿವು ನಿವಾರಣೆಗೆ ಕಾಡು ಬಿಟ್ಟು ನಾಡಿಗೆ ಬರುವುದರಲ್ಲಿ ತಪ್ಪೇನಿದೆ?  ಹಸಿವು ಬಾಯಾರಿಕೆಗಳ ಈಡೇರಿಕೆ ಈ ಭೂಮಿಯಲ್ಲಿ ಜನಿಸಿದ   ಪ್ರತಿಯೊಂದು ಜೀವಿಯ ಮೂಲಭೂತ ಅವಶ್ಯಕತೆ. ಹಸಿದ ಜೀವಕಷ್ಟೇ ಗೊತ್ತು  ಹಸಿವಿನ ಕಾವು. ಮಾತು ಬಲ್ಲ, ಚಿಂತನಾಶಕ್ತಿಯುಳ್ಳ ಮನುಷ್ಯರಾದ ನಾವೇ ಹಸಿವಾದಾಗ ಅನ್ಯರ ಬಗ್ಗೆ ಯೋಚಿಸದ ರೀತಿಯಲ್ಲಿ ವರ್ತಿಸುವಾಗ ವನ್ಯ ಮೃಗಗಳಾದ ಆನೆ, ಹುಲಿ, ಚಿರತೆ, ಕಾಡು ಹಂದಿ ಇತ್ಯಾದಿ  ಹಸಿವು ನೀಗಿಸಿಕೊಳ್ಳಲು ನಾಡಿನ ಹಾದಿ ಹಿಡಿಯುವ  ಮತ್ತು ಹಿಂಸಾತ್ಮಕ ವರ್ತನೆ ತೋರುವ ಬಗ್ಗೆ  ಏನು ಹೇಳುವುದು? ಹೊಟ್ಟೆ ತುಂಬಿಸಿಕೊಳ್ಳುವ  ಏಕೈಕ ಉದ್ದೇಶದಿಂದ ಅವು ಹಸಿರು ಕಂಡಲ್ಲಿಗೆ ಧಾವಿಸುತ್ತವೆ. ಅವುಗಳ ಅಸಹಾಯಕತೆ ನಡೆ ಅದು.ಆ ಪ್ರಾಣಿಗಳು ನಮಗೆ ಉಂಟುಮಾಡುವ ಕಷ್ಟ ನಷ್ಟಗಳನ್ನು  ನಾವು ನುಂಗಿಕೊಳ್ಳಲೇ ಬೇಕು.   ಇಲ್ಲ, ಪರಿಹಾರವನ್ನು ಕಂಡುಕೊಳ್ಳಬೇಕು. ಈ ಪ್ರಕೃತಿಯಲ್ಲಿ ಜೀವಿಸಲು ಎಲ್ಲ ಜೀವರಾಶಿಗಳಿಗೆ ಸಮಾನ ಹಕ್ಕಿದೆ. ಆದರೆ ಬದುಕುವ ಸಂದರ್ಭ ಪ್ರಕೃತಿಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಮೂಕ ಪ್ರಾಣಿಗಳು ಮೌನವಾಗಿಯೇ ಪ್ರಕೃತಿಯ ಮಾತನ್ನು ಆಲಿಸುತ್ತವೆ. ನಿಸರ್ಗ ನಿಯಮವನ್ನು ಪಾಲಿಸುತ್ತವೆ. ಮಾತು ಬಲ್ಲ ಮನುಷ್ಯ ಮಾತ್ರ ಮಾತನಾಡುತ್ತಾ ಆಡುತ್ತಾ ಉಳಿದ ಜೀವರಾಶಿಗಳು ತನ್ನ ಅಧೀನದಲ್ಲಿಯೇ ಇರಬೇಕು ಎಂದು ತನಗೆ ತಾನೇ ಒಂದು ನಿಯಮ ಮಾಡಿಕೊಂಡಿದ್ದಾನೆ. ಕಾಡಿನಲ್ಲೂ ಅಧಿಪತ್ಯ ಸ್ಥಾಪಿಸುವಲ್ಲಿ ಕೆಲವೆಡೆ ಜಯವನ್ನೂ ಸಾಧಿಸಿದ್ದಾನೆ.  ವನ್ಯಜೀವಿಗಳಿಗೆ ಮೀಸಲಾದ ಅರಣ್ಯ ಪ್ರದೇಶದ ಮೇಲೆ ಮಾನವನ ಹಸ್ತಕ್ಷೇಪ ಹೆಚ್ಚಿದಂತೆ ಅರಣ್ಯ ಪ್ರದೇಶ ಕಿರಿದಾಗುತ್ತಾ ಸಾಗುತ್ತಿದೆ. ವಸತಿ, ವ್ಯವಸಾಯ, ಸಾರಿಗೆ ವ್ಯವಸ್ಥೆ.. ಹೀಗೆ ನಾನಾ ಅಭಿವೃದ್ಧಿ ಕಾರ್ಯಗಳಿಂದಾಗಿ ವನ್ಯ ಮೃಗಗಳ ನೆಲೆ ನಶಿಸುತ್ತಿದೆ.  ಒಂದು ಕಾಲದಲ್ಲಿ ಆನೆ ನಾಡಿನತ್ತ ಬಂದಿದೆ ಎಂದರೆ ಅದು ಪರಮಾಶ್ಚರ್ಯ ದ ವಿಚಾರವಾಗಿತ್ತು. ಏಕೆಂದರೆ ಅರಣ್ಯ ಹೇರಳವಾಗಿದ್ದಾಗ ಎಲ್ಲೋ  ದಾರಿತಪ್ಪಿ  ಅಪರೂಪಕ್ಕಷ್ಟೇ ಆನೆಗಳು ಕಾಡಿನಿಂದ ನಾಡಿನತ್ತ ಬರುತ್ತಿದ್ದವು. ಈಗ ಹಾಗಲ್ಲ. ಇದು ಪ್ರತಿದಿನದ ಸುದ್ದಿಯೇ ಆಗಿದೆ.  ಮನುಷ್ಯ ಬೆಳೆದ ಕಬ್ಬು,ಬಾಳೆ,  ಬತ್ತ ಇತ್ಯಾದಿ ಬೆಳೆಗಳನ್ನು   ತಿಂದು ಹೊಟ್ಟೆ ತುಂಬಿಸಿಕೊಳ್ಳುವ ಸಲುವಾಗಿ  ವನ್ಯಮೃಗಗಳು ನಾಡಿಗೆ ಬರುವುದು ಇತ್ತೀಚೆಗೆ ಸಾಮಾನ್ಯವಾಗಿ ಬಿಟ್ಟಿದೆ.ಇಲ್ಲಿ ಒಂದು ಅಂಶ ಗಮನಾರ್ಹ,  ವನ್ಯ ಮೃಗಗಳು ಆಸೆ ಪಡುವುದು ಆಹಾರಕ್ಕಾಗಿ. ಮನುಷ್ಯರಾದ ನಾವು ಆಸೆ ಪಟ್ಟಿರುವುದು ಅವುಗಳ ಆವಾಸಸ್ಥಾನಕ್ಕಾಗಿ!! ಇತ್ತೀಚೆಗೆ ಆನೆ ಮಾನವ ಸಂಘರ್ಷವಂತೂ ಮಿತಿ ಮೀರಿದೆ. ಆನೆ ದಾಳಿಗೆ ಅದೆಷ್ಟೋ ಜೀವಗಳು ಬಲಿಯಾಗಿವೆ.  ಪ್ರತಿ ಬಾರಿಯೂ ನಾಡಿಗೆ ದಾಳಿಯಿಟ್ಟ ಆನೆಗಳನ್ನು ಮರಳಿ ಕಾಡಿಗೆ ಸೇರಿಸಲು ಅರಣ್ಯ ಇಲಾಖೆಯವರು ಹರ ಸಾಹಸ ಪಡುತ್ತಾರೆ. ಕಾಡಿಗೆ ಅಟ್ಟಿದ ಆನೆಗಳು ತಮ್ಮ ದಂಡಿನೊಂದಿಗೆ ಮತ್ತೆ  ನಾಡಿನಲ್ಲಿ ಪ್ರತ್ಯಕ್ಷವಾಗಿವೆ ಎನ್ನುವ ಸುದ್ದಿ ಅರಿಯುವುದೇ ಯಾವುದೋ ಅಮಾಯಕ ಜೀವ ಬಲಿಯಾದಾಗ. ನೀರು,ಆಹಾರ ಅರಸಿ  ತನ್ನ ಪುಟ್ಟ ಕಂದಮ್ಮಗಳನ್ನೂ ಕರೆದುಕೊಂಡು 10-15  ಕಿಲೋಮೀಟರ್ ನಡೆದಾಡುವ ಆನೆಗಳು ಜನ ವಸತಿ ಪ್ರದೇಶಗಳನ್ನು ಲೆಕ್ಕಿಸದೆ ಹೊಟ್ಟೆ ಹೊರೆಯಲು ಹೆಣಗಾಡುತ್ತವೆ.ಅಂಥ ಸಂದರ್ಭದಲ್ಲಿ  ತನಗೆದುರಾದ ಮನುಷ್ಯರನ್ನು  ಸೊಂಡಿಲಿನಿಂದ ಎತ್ತಿ ಎಸೆಯುವ,ಮೆಟ್ಟಿ ಸಾಯಿಸುವ ಕ್ರೂರ ಕೃತ್ಯವನ್ನು ಎಸಗುತ್ತದೆ.  ಆನೆಗಳಿಗೆ ಮಾನವನ ಮೇಲೆ ಇನ್ನಿಲ್ಲದ ದ್ವೇಷ! ಒಂದೆಡೆ ಜನಸಂಖ್ಯೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಆನೆಗಳ ಸಂತತಿ ಕೂಡಾ ಹೆಚ್ಚುತ್ತಲೇ ಇದೆ.  ಹೀಗಿರುವಾಗ ತಮ್ಮ ಸಹಜ ನೆಲೆಗಳನ್ನು ಕಳೆದುಕೊಂಡ  ಆನೆಗಳು ಹೋಗುವುದಾದರೂ  ಎಲ್ಲಿಗೆ? ಕುಳಿತು ಉಣ್ಣುವ ಅಭ್ಯಾಸವಾದ ಮನುಷ್ಯ ದುಡಿದು ಉಣ್ಣಲಾರನಂತೆ! ಹಾಗೆ ಒಮ್ಮೆ ನಾಡಿನಲ್ಲಿ ಜನರು ಬೆಳೆದ ಕಬ್ಬು ಬಾಳೆ ಇತ್ಯಾದಿಗಳನ್ನು ತಿಂದು ರೂಢಿಯಾದ ಆನೆಗಳು ಕಾಡಿನಲ್ಲಿ ಆಹಾರ ಅರಸುವ ಅಭ್ಯಾಸವನ್ನೇ ಬಿಟ್ಟು ಬಿಟ್ಟಿವೆಯೋ ಏನೋ!!   ಎಷ್ಟು ಬಾರಿ ಕಾಡಿಗೆ ಅಟ್ಟಿದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತವೆ,  ಉಪಟಳ ಕೊಡುತ್ತಲೇ ಇರುತ್ತವೆ. ಸಾಗರದಿಂದ ನಭಕ್ಕೇರಿದ ನೀರ ಹನಿಗಳು ಮತ್ತೆ ಸಾಗರವನ್ನೇ ಸೇರಬೇಕು. ಈ ಭೂಮಿಯಲ್ಲಿ ಜನಿಸಿದ ನಾವೆಲ್ಲರೂ ಎಷ್ಟೇ ಸಂಪಾದನೆ ಮಾಡಿದರೂ ಮತ್ತೆ ಭೂಮಿಯ ಒಡಲಿಗೇ ಸೇರಬೇಕು.ಇದು ಪ್ರಕೃತಿ ನಿಯಮ.  ಈ ಸೂಕ್ಷ್ಮ ಅರಿತಾಗ ಅರಣ್ಯ ಒತ್ತುವರಿಯನ್ನೂ ಒಳಗೊಂಡಂತೆ ಮನುಜನ ಅತಿ ಆಸೆಗಳಿಗೆ ಕಡಿವಾಣ ಬೀಳಬಹುದು. ವನ್ಯ ಜೀವಿ – ಮಾನವ ಸಂಘರ್ಷ ಕೊನೆಯಾಗಬಹುದು. ಪ್ರಕೃತಿಯ ಜೊತೆಗೆ ಅನುಸಂಧಾನ ಮಾಡಿಕೊಂಡು ಬದುಕುವ ಕಲೆಗಾರಿಕೆ ಮೃಗ ಪಕ್ಷಿಗಳಿಗಿವೆ. ಮನುಷ್ಯರಾದ ನಾವು ಈಗ ಕಲಿಯುತ್ತಿದ್ದೇವೆ. ಪ್ರಕೃತಿ ನಿಯಮದ ವಿರುದ್ಧ ನಾವು ಎಸಗಿದ ದ್ರೋಹದ ಪರಿಣಾಮವಾಗಿ ಹುಟ್ಟಿಕೊಂಡಿರುವ ಸಮಸ್ಯೆಗಳ ಪರಿಹಾರಕ್ಕೆ ದೂರಗಾಮಿ ಯೋಜನೆಗಳಿಂದ  ಪರಿಹಾರವನ್ನು ಕಂಡುಕೊಳ್ಳುವತ್ತ ಚಿಂತನೆ ನಡೆಸದೆ      ನಾವು ಮಾಡುವ ಪ್ರತಿಭಟನೆ, ಹೋರಾಟ, ಅಧಿಕಾರಿ ವರ್ಗದವರು ಮಾಡಿಕೊಳ್ಳುವ ಪರಸ್ಪರ ನಿಂದನೆ ಯಾವುವೂ ನಿರೀಕ್ಷಿತ  ಫಲ ನೀಡಲಾರವು. ಅಡವಿಯಲ್ಲಿ ಮೂಲಭೂತ ಅವಶ್ಯಕತೆ ಪೂರೈಸಿಕೊಳ್ಳಲಾಗದ ವನ್ಯ ಮೃಗಗಳು ಮತ್ತೆ ಹೋಗುವುದಾದರೂ ಎಲ್ಲಿಗೆ??? ಜಯಲಕ್ಷ್ಮಿ ಕೆ ಮಡಿಕೇರಿ.

ಹೋಗುವುದಾದರೂ ಎಲ್ಲಿಗೆ ….??ವಿಶೇಷಲೇಖನ ಜಯಲಕ್ಷ್ಮಿ ಕೆ ಮಡಿಕೇರಿ Read Post »

You cannot copy content of this page

Scroll to Top