ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com

ಹೂವಿನ ಪರಿಮಳ ಬಣ್ಣದಲ್ಲಿರದೆ
ಸುಗಂಧವನೇ ಸೂಸುತಿದೆ
ಸಹನೆಯ ತೊರೆದು ನಡೆಯಲು ಜಗದಲ್ಲಿ
ಪ್ರೀತಿಯೇ ಸೋಲುತಿದೆ.

ಕಾಡಿನ ದಾರಿಯು ನಾಡನು ಸೇರಲು ಪ್ರಕೃತಿಯೇ ನಗುತಲಿದೆ
ತಿರುಗುವ ಮನುಜನ ಕಂಡು ಭೂಮಿಯೂ ತಿರುಗುತ ನೋಡುತಿದೆ.

ಕಂಗಳ ಹೊಳಪಿಗೆ ಮುತ್ತನು ಹುಡುಕಲು
ಮನಸ್ಸು ಕಡಲಾಳಕ್ಕೆ ಇಳಿಯುತಿದೆ
ಬೆಳದಿಂಗಳ ಚುಕ್ಕಿಯು ಮೆಲ್ಲನೆ ಭೂಮಿಗೆ ಜಾರುತಿದೆ.

ಸ್ವರಗಳು ಪ್ರಾಸವ ಸೇರಿ ಛಂದಸ್ಸಿನಲ್ಲಿ ಅಡಗುತಿವೆ
ಭಾವಗಳೆಲ್ಲವೂ ಲಯದಲ್ಲಿ ಸೇರಿ ಸಾಹಿತ್ಯವನ್ನು ನೀಡುತಿವೆ.


About The Author

Leave a Reply

You cannot copy content of this page

Scroll to Top