ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಥಾಗುಚ್ಛ

ರೋಹಿಣಿ ಜೆ ಅವರ ಸಣ್ಣ ಕಥೆ “ಹಾರಾಟ ಮುಗಿದ ಹಕ್ಕಿ!”

ಕಥಾ ಸಂಗಾತಿ ರೋಹಿಣಿ ಜೆ “ಹಾರಾಟ ಮುಗಿದ ಹಕ್ಕಿ!” ಒಂದೂರು.. ಊರ ಬಾಗಿಲಲೊಂದು ಅರಳಿ ಮರ. ಅದರ ಮೇಲೆ ಒಂದು ಹಕ್ಕಿ ಗೂಡು. ತಂದೆ ತಾಯಿ ಎರಡು ಮರಿಗಳು ಅದರಲ್ಲಿ ವಾಸವಾಗಿದ್ದವು. ಹಗಲಲ್ಲಿ ಹಾರಾಡುತ್ತ ಇರುಳಲ್ಲಿ ಆಕಾಶ ನೋಡುತ್ತ ಸಂಭ್ರಮಿಸುತ್ತ ಎಲ್ಲ ಚಂದಿತ್ತು.  ಕಿರಿಯ ಮರಿ ಅಂದ್ರೆ ಎಲ್ಲಿಲ್ಲದ ಪ್ರೀತಿ. ಬಹಳ ಮುದ್ದಿನಿಂದ ನೋಡಿಕೊಳ್ಳುತ್ತಿದ್ದವು. ತನ್ನ ಗೂಡಿನಲ್ಲಿ ಇರುವವರೆಗೂ ಆ ಹಕ್ಕಿಮರಿಗೆ ಹಸಿವು ಎಂದರೆ ಏನು ಅಂತಾನೆ ಗೊತ್ತಾಗುತ್ತಿರಲಿಲ್ಲ, ಆ ಮರದಿಂದ ಈ ಮರ ಈ ಮರದಿಂದ ಆ ಕೊಂಬೆ ಹಾರುತ್ತಾ ನಲಿದಾಡುತ್ತಾ ಎಲ್ಲದಕ್ಕೂ ಹಠ ಮಾಡುತ್ತಾ ಕಾಲ ಕಳೆಯುತ್ತಾ ಇತ್ತು. ಮಳೆ ಗಾಳಿ ಜೋರಾಯ್ತು ಅಂದ್ರೆ ಗೂಡು ಸೋರುತ್ತಾ ಇತ್ತು. ಬೀಳುವ ಭಯ ಕಾಡ್ತಾ ಇತ್ತು. ಆದರೆ ಅಪ್ಪ ಅಮ್ಮ ರೆಕ್ಕೆಯಲ್ಲಿ ಅಪ್ಪಿ ಆ ಭಯ ಕಾಡದ ಹಾಗೆ ನೋಡ್ಕೊಳ್ತಿದ್ವು, ಊಟ ಮಾಡಲಿಕ್ಕೆ ತುಂಬಾ ಹಠ ಮಾಡುತ್ತಿತ್ತು. “ತಿನ್ನು, ತಿನ್ನು” ಅಂತ ಅದರ ಹಿಂದೆನೇ ಬೀಳ್ತಾ ಇದ್ರು. ಹಕ್ಕಿಮರಿ ಬೆಳೆಯುತ್ತಾ ಹೋಯಿತು ಸ್ವಲ್ಪ ದೊಡ್ಡದಾಗುತ್ತಾ ಅದರ ಆಸೆಗಳು ಕೂಡ ದೊಡ್ಡದಾಗಲಿಕ್ಕೆ ಶುರುವಾಯಿತು. ತನ್ನ ಗೂಡು ಚಿಕ್ಕದು ಅನ್ನಿಸಲಿಕ್ಕೆ ಶುರುವಾಯಿತು.  ಕೆಲವು ಪಕ್ಷಿಗಳ ಗೂಡು ಬಹಳ ಗಟ್ಟಿಮುಟ್ಟಾಗಿತ್ತು ಇದರ ಅಪ್ಪ ಅಮ್ಮ ತನ್ನ ಶಕ್ತಿ ಮೀರಿ ಈಗಿರುವ ಗೂಡನ್ನು ಕಟ್ಟಿದ್ದು ಇನ್ನೂ ಅದಕ್ಕಿಂತ ಹೆಚ್ಚು ಅವುಗಳಿಂದ ನಿರೀಕ್ಷೆ ಮಾಡಲಿಕ್ಕೆ ಆಗ್ತರ‍್ಲಿಲ್ಲ. ಈ ಹಕ್ಕಿಗೆ ಮಳೆಗಾಲದಲ್ಲಿ ಸೋರದ, ಬಿರುಗಾಳಿಗೆ ಬೀಳದ ಗಟ್ಟಿ ಮನೆ ಒಂದನ್ನು ಕಟ್ಟಬೇಕೆಂಬ ಆಸೆ ಮೂಡತೊಡಗಿತು. ಅಷ್ಟೇ ಅಲ್ಲ ತನ್ನನ್ನು ಮುದ್ದಿನಿಂದ ಸಾಕಿದ ತಂದೆ ತಾಯಿಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂಬ ಆಸೆ ಕೊನರತೊಡಗಿತು.ಹೀಗಿರುವಾಗ ಅಪ್ಪ ಅಮ್ಮ ಬೇಡುವ ಅಗೋಚರವಾದ ಆ ʼದೇವʼನನ್ನು ತಾನೂ ಬೇಡಿತು. ಅವನು ತಥಾಸ್ತು ಅಂದನೋ ಇಲ್ಲ ಅದರ ವಿಧಿಯೇ ಅಂತಿತ್ತೋ ಯಾರಿಗೆ ಗೊತ್ತು! ಯಾವುದೋ ಹಕ್ಕಿಗಳ ಮೂಲಕ ಇದಕ್ಕೆ ಹಣ್ಣಿನ ಸಾಮ್ರಾಜ್ಯದ ಪರಿಚಯ ಆಯ್ತು. ಅಲ್ಲಿ ಹೋದರೆ ಊಟ, ಸಂಪತ್ತು ಯಾವುದಕ್ಕೂ ಕೊರತೆ ಇಲ್ಲ ಎನಿಸಿತು. ತಾನು ಶ್ರೀಮಂತರಾಗಿ ತನ್ನವರನ್ನು ಶ್ರೀಮಂತವಾಗಿಸುವ ಬಯಕೆ ಚಿಗುರೊಡೆಯಿತು. ಹಿಂದೆ ಮುಂದೆ ಯೋಚನೆ ಮಾಡದೆ ಆದದ್ದಾಗಲಿ ಏನಾದರೂ ಸಾಧಿಸಲೇಬೇಕೆಂದು ತನ್ನ ಸೋದರಹಕ್ಕಿಯನ್ನು ಅಪ್ಪ ಅಮ್ಮರ ಜೊತೆ ಇರಲು ಹೇಳಿ ಮರಿ ಹಕ್ಕಿ ಹೊರಟು ನಿಂತಿತು. ತಂದೆ ಹಕ್ಕಿ ಇದನ್ನು ಕಂಡು ತುಂಬಾ ದುಃಖಿಸಿತು “ಬೇಡ ಮಗು ಇಲ್ಲೇ ಇರೋಣ ಇದ್ದಿದ್ರಲ್ಲಿ ಖುಷಿಯಾಗಿ, ದೂರದ ಕಾಣದ ಊರಿನ ಸಹವಾಸ ಯಾಕೆ?”.  ಹಕ್ಕಿಮರಿ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಸಾಲದ್ದಕ್ಕೆ ಅದರ ತಾಯಿ ಹಕ್ಕಿ ತನ್ನ ಮರಿಗೆ ಬೆಂಬಲ ಕೊಟ್ಟಿತು. “ಹೋಗಿ ಬಾ ಕಂದಾ, ಒಳ್ಳೆಯದಾಗಲಿ ನಿನಗೆ” ಎಂದು. ಇತ್ತ ತನ್ನ ಗಂಡನನ್ನು ಸಂತೈಸಿತು “ಇರಲಿ ಬಿಡು ಅದರಿಂದಲಾದರೂ ನೆಮ್ಮದಿ ಕಾಣೋಣ, ನಾವೂ ಎಲ್ಲರಂತೆ ಬದುಕಬಹುದು”. ಒಂದು ದಿನ ಅದು ಹೊರಡುವ ಸಮಯ ಬಂದೇ ಬಿಟ್ಟಿತು. ಪ್ರೀತಿ ಭಯ ಆತಂಕಗಳಿಂದ ಕಣ್ತುಂಬಿಕೊಂಡು ಬೀಳ್ಕೊಟ್ಟವು.ಹಾರಿತು, ಹಾರಿತು ದೂರದ ತೀರಕೆ ಹಣ್ಣಿನ ರಾಜ್ಯವನ್ನು ಹುಡುಕಿಕೊಂಡು ಬಹಳ ಕ್ರಮಿಸಿದ ಬಳಿಕ ಕೊನೆಗೊಂದು ದಿನ ಸಿಕ್ಕೆ ಬಿಟ್ಟಿತು ಹಣ್ಣಿನ ಸಾಮ್ರಾಜ್ಯ. ಹೌದು ಇಲ್ಲಿ ಎಲ್ಲವೂ ಚಂದ ಎಷ್ಟೊಂದು ಹಣ್ಣುಗಳು! ಬಣ್ಣ ಬಣ್ಣದ ಹಣ್ಣುಗಳು, ಹೂವುಗಳು ಬಹುಪಾಲು ಹೆಸರೇ ಗೊತ್ತಿಲ್ಲ! ಎಲ್ಲ ಹೊಸಬಗೆಯವು. ಆ ಹಕ್ಕಿ “ಸುಂದರ ಹೂ, ಹಣ್ಣಿನ ತೋಟ ಸ್ವರ್ಗ ಅಂದ್ರೆ ಇದೇ ಏನು! ಮನುಷ್ಯರು ಮಾತಾಡ್ತಾರಲ್ಲ ಅದು” ಎಂದುಕೊಂಡಿತು ಮನದಲಿ.  ಹೊಸದರಲ್ಲಿ ಎಲ್ಲವೂ ಸೊಗಸೆನಿಸಿತು. ಇದು ಗರಿಬಿಚ್ಚಿ ರ‍್ತಿಸಿತು ಮೇಲಿಂದ ಕೆಳಗೆ ಜಿಗಿದು, ಟಪಟಪ ರೆಕ್ಕೆಬಡಿದು ಅದರ ಖುಷಿ ಸಂಭ್ರಮಕ್ಕೆ ಕೊನೆ ಇರಲಿಲ್ಲ “ಅಂತು ತಾನು ಸಾಧಿಸಿಬಿಟ್ಟೆ ಇನ್ನು ನನ್ನ ಮನೆಯ ಕಷ್ಟಗಳೆಲ್ಲ ಪರಿಹಾರವಾದಂತೆಯೇ ನನ್ನ ಪಾಲಿಗೆ ಬರಿ ಸುಖವೇ ಇನ್ನು” ಎಂದುಕೊಂಡಿತು.ಹೊಸ ಜಾಗ, ಹೊಸ ಗಿಡ ಮರಗಳು, ಹೊಸ ಮುಖಗಳು ಎಲ್ಲವೂ ಹೊಸದು. ಅಲ್ಲಿದ್ದ ಹಕ್ಕಿಗಳು ಪ್ರೀತಿಯಿಂದ ಸ್ವಾಗತಿಸಿದವು. ಇದು ಸುಮ್ಮನೆ ಪಿಳಿ ಪಿಳಿ ಮುಖ ನೋಡಿತು. ಯಾರು ಯಾರೋ ಮಾತಾಡಿಸಿದವು ಇದಕೆ ಭಾಷೆ ತಿಳಿಯುತ್ತಿಲ್ಲ. ನಕ್ಕು ಸುಮ್ಮನಾಯಿತು. ಹಣ್ಣುಗಳಂತೂ ಕಣ್ಣು ಕೋರೈಸುವಂತೆ ದಪ್ಪ ದಪ್ಪದಾಗಿ ಹಲವು ಬಣ್ಣಗಳಲ್ಲಿ ಮಾಗಿದ್ದವು. ಕೆಲವೊಂದಕ್ಕೆ ನೇರವಾಗಿ ಬಾಯಿಟ್ಟಿತು. ಇಲ್ಲ ಯಾಕೋ ತಿನ್ನಲ್ಲಾಗುತ್ತಿಲ್ಲ.  ಹಣ್ಣೇನೋ ಮಾಗಿದೆ  ಘಮಗುಡುತ್ತಿದೆ ಇದರ ನಾಲಿಗೆ ಮಾತ್ರ ರುಚಿ ಎನಿಸದು. ಈಗ ಅದಕ್ಕೆ ಹಸಿವಿನ ಬೆಲೆ, ಊಟದ ಬೆಲೆ ತಿಳಿಯುತ್ತಾ ಹೋಯಿತು. ಅಪ್ಪ ಅಮ್ಮನ ನೆನಪು ಕಾಡಕೊಡಗಿತು. ನಿಧಾನವಾಗಿ ತಿನ್ನುತ್ತಾ ತಿನ್ನುತ್ತಾ ಅಭ್ಯಾಸ ಮಾಡಿಕೊಂಡಿತು. ಕೊನೆಗೆ ಅದರಲ್ಲೇ ರುಚಿ ಕಂಡುಕೊಂಡಿತು ತನ್ನೂರಿಗೂ ಈ ಹಣ್ಣುಗಳನ್ನು ಒಯ್ದು ತನ್ನವರಿಗೂ ಅಭ್ಯಾಸ ಮಾಡಿಸಬೇಕೆಂದುಕೊಂಡಿತು.  ಒಂದು ಹಣ್ಣು ಒಯ್ದರೆ ಸಾಕು ವರ‍್ಷಕ್ಕಾಗುವಷ್ಟು ಊಟ. ಅಷ್ಟೇನೂ ಭಾರವೂ ಇಲ್ಲ ಹಣ್ಣು.  ಪ್ರತಿ ಬಾರಿ ಎರಡೆರಡು ಹೊಯ್ದು ಒಂದು ಊಟಕ್ಕೆ, ಒಂದು ಮಾರಾಟಕ್ಕೆ ಅದರಿಂದ ಬಂದ  ಲಾಭದಿಂದ ಗಟ್ಟಿ ಮನೆಯನ್ನು ಕಟ್ಟಿಕೊಳ್ಳಬೇಕೆಂದು ಆಸೆಪಟ್ಟಿತು.  ಎರಡು ಹಣ್ಣು ಎತ್ತಿಕೊಂಡು ಹಾರಿಹೋಯಿತು. ಕುಟುಂಬದಲ್ಲಿ ಎಲ್ಲ ಸಂಭ್ರಮ ಪಟ್ಟವು. ಹಕ್ಕಿ ಮತ್ತೆ ಹಾರಿ ಹಣ್ಣಿನ ಸಾಮ್ರಾಜ್ಯಕ್ಕೆ ಬಂದಿತು. ಏಕೆಂದರೆ ಅಲ್ಲಿ ನಿಲ್ಲುವಂತಿರಲಿಲ್ಲ! ಇಲ್ಲಿ ಹಣ್ಣಿನ ಸಾಮ್ರಾಜ್ಯದ ಒಡೆಯ ನಿಯಮ ವಿಧಿಸಿದ್ದ ಒಂದು ಹಣ್ಣು ಒಯ್ದರೆ ನಾಲ್ಕು ದಿನಕ್ಕೆ, ಎರಡು ಹಣ್ಣು ತೆಗೆದುಕೊಂಡು ಹೋದರೆ ಎರಡೇ ದಿನಕ್ಕೆ ವಾಪಸ್ ಬರಬೇಕಿತ್ತು. ಹೀಗೆ ವರ‍್ಷಗಳೇ ಕಳೆದು ಹೋದವು. ತನ್ನ ಕುಡಿಯನ್ನು ಮತ್ತೆ ಕಳಿಸಲು ಬೇಸರ ತಂದೆ ತಾಯಿ ಹಕ್ಕಿಗಳಿಗೆ ಆದರೆ ಹೊಟ್ಟೆಪಾಡು,  ತಂದೆ ಹಕ್ಕಿಗೂ ವಯಸ್ಸಾಗುತ್ತಿತ್ತು ಆಹಾರ ಹೊಂದಿಸುವುದು ಕಷ್ಟವಾಗತೊಡಗಿತು.ಇತ್ತೀಚಿಗೆ ಈ ಹಕ್ಕಿ ಇನ್ನೂ ದೊಡ್ಡದಾಗಿತ್ತು ಅಷ್ಟೇ ಅಲ್ಲ ಅದರ ಸ್ವಾರ್ಥವೂ ಹೆಚ್ಚಿತ್ತು ಈಗ ಅದು ಒಮ್ಮೆಲೇ ಐದೈದು ಹಣ್ಣುಗಳನ್ನು ಸಂಪಾದಿಸುವ ಶಕ್ತಿ ಬೆಳೆಸಿಕೊಂಡಿತ್ತು ಹಾಗಾಗಿ ತಾನು ಬಯಸಿದಂತೆ ಗಟ್ಟಿಯಾದ ಸುಭದ್ರವಾದ ಸುಂದರವಾದ ಅಕ್ಕಪಕ್ಕದ ಗೂಡಿನ ಹಕ್ಕಿಗಳೆಲ್ಲ ಮೆಚ್ಚುವಂತಹ ʼಹಕ್ಕಿಗೂಡುʼ ಒಂದನ್ನು ಕಟ್ಟಿತು. ಬಂದಂತಹ ನೆಂಟರಿಷ್ಟರು ಬಂಧುಗಳೆಲ್ಲ ಹರಸಿ ಸಂಭ್ರಮಿಸಿ ಹೋದರು. ಜೊತೆಗೆ ಕೇಳಿಯೂ ಹೋದರು “ಏನು ಹಣ್ಣಿನ ರಾಜ್ಯದಲ್ಲೇ ಉಳಿದುಬಿಡುವ ಬಯಕೆಯೇ? ಇತ್ತ ಬರುವ ಮನಸಾಗದೆ! ನಿನ್ನ ಹೆತ್ತವರಿಗೂ ವಯಸ್ಸಾಯ್ತು ಬಂದುಬಿಡು”. ಇಂತಹ ನೂರಾರು ಪ್ರಶ್ನೆಗಳು, ಮಾತುಗಳು ಚೂಪಾದ ಬಾಣದಲ್ಲಿ ಚುಚ್ಚಿದಂತೆ ಭಾಸವಾಗುತ್ತಿತ್ತು. ಅಲ್ಲಿ ಹಣ್ಣಿನ ಸಾಮ್ರಾಜ್ಯದಲ್ಲಿ ಬಿಡುಗಡೆ ಅಷ್ಟು ಸುಲಭವಿರಲಿಲ್ಲ ಇಲ್ಲಿ ತನಗೆ ವಹಿಸಿದ ಎಲ್ಲ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಾ, ಸುತ್ತ ಪ್ರೀತಿ ಹಂಚುತ್ತಾ ಯಾರಿಗೂ ನೋವಾಗದೆ, ಎಲ್ಲರೊಡನೆ ಹೊಂದಿಕೊಂಡು ಎಷ್ಟೆಲ್ಲ ದುಡಿದರೂ ಹಣ್ಣಿನ ಸಾಮ್ರಾಜ್ಯದ ಒಡೆಯ ಕರುಣೆ ತೋರುವಂತೆ ಕಾಣಲಿಲ್ಲ. ಹಕ್ಕಿಗೆ ಸಂಕಟ ಹೆಚ್ಚಾಗತೊಡಗಿತು, ಪಶ್ಚಾತ್ತಾಪದಲ್ಲಿ ಬೇಯತೊಡಗಿತು. ತನ್ನವರು, ಬಂಧುಗಳಿಂದ ದೂರಾಗಿ ಒಂಟಿತನ ಕಾಡತೊಡಗಿತು. ಸಂಬಂಧಿಗಳ ಸಂಭ್ರಮದಲಿ, ಸಂತಾಪಗಳಲಿ ಭಾಗವಹಿಸಲಾಗಲಿಲ್ಲ. ಇದೆಲ್ಲದರ ನಡುವೆ ತನ್ನ ತಂದೆಯನ್ನೂ, ಆಪ್ತ ಸಂಬಂಧಿಗಳನ್ನು ಕಳೆದುಕೊಂಡಿತು! ಈಗಂತೂ ಅದಕ್ಕೆ ಹುಚ್ಚುಹಿಡಿಯುವುದೊಂದೇ ಬಾಕಿ ವಿಲವಿಲ ಒದ್ದಾಡಿತು. ಕಾದನೆಲದಲ್ಲಿ ಹೊರಳಾಡಿತು. ಬೇಡಿತು, ಕಾಡಿತು ಹಣ್ಣಿನ ಸಾಮ್ರಾಜ್ಯದ ಒಡೆಯನ ಕಣ್ಣು ತೆರೆಯಲೇ ಇಲ್ಲ. ಅದರ ಜೊತೆಯಾದ ಅದೇ ಸಾಮ್ರಾಜ್ಯದ ಇತರ ಹಕ್ಕಿಗಳು ಅದನ್ನು ಅಪ್ಪಿ ಸಂತೈಸತೊಡಗಿದವು. ಆದರೆ ಪಾಪ ಅವಕ್ಕೂ ಮನೆ ಕುಟುಂಬ ಇದರ ಜೊತೆ ಎಷ್ಟು ಹೊತ್ತು ಇರಲಾದೀತು. ಅವುಗಳ ಪ್ರೀತಿಯೇನೋ ಅಗಾಧವಾಗಿತ್ತು. ಆದರೆ ಎಲ್ಲರ ನಡುವೆ ಇದಕ್ಕೆ ಕೊರಗು ಕಾಡಲು ಶುರು ಆಯ್ತು ಈಗ ಯಾವ ಹಣ್ಣನ್ನ ಹುಡುಕಿ ಬಂದಿತ್ತೋ ಆ ಹಣ್ಣಲ್ಲಿ ರುಚಿ ಕಳೆದುಕೊಳ್ಳಲಾರಂಭಿಸಿತು. “ಹಣ್ಣು ಈಗ ಮೊದಲಿಗಿಂತಲೂ ರುಚಿಯಾಗಿವೆ” ಅಲ್ಲಿನ ಹಕ್ಕಿಗಳು ಹೇಳುತ್ತವೆ. ಆದರೆ ಇದರ ನಾಲಿಗೆಗೆ ರುಚಿ ಎನಿಸುತ್ತಿಲ್ಲ. ಇದೆಲ್ಲದರ ಮಧ್ಯ  ತಿಂಗಳಿಗೆ ಒಂದೊಂದು ಗರಿ ಉದುರಲಾರಂಭಿಸಿತು. ನೋಡು ನೋಡುತ್ತಲೇ ಹಕ್ಕಿ ಹಣ್ಣಾಗಿ  ಗರಿಕಳಚಿ ಬೋಳಾಗತೊಡಗಿತು. ಈಗ ಮತ್ತಷ್ಟು ಭಯ ಉಂಟಾಯಿತು ಅದಕೆ. ತನ್ನ ಮನೆಯ ತುಂಬಾ ರಾಶಿ ಹಣ್ಣುಗಳಿವೆ ಯಾವುದಕ್ಕೂ ಕೊಕ್ಕು ಹಚ್ಚಲಾಗುತ್ತಿಲ್ಲ ಬಣ್ಣ ಬಣ್ಣದ ರಾಶಿ ಹೂವುಗಳಿವೆ ಸಂಭ್ರಮಿಸಲಾಗುತ್ತಿಲ್ಲ. ಏನೇನೋ ಪ್ರಯತ್ನ ಪಡ್ತಿದೆ ಎಲ್ಲ ಸರಿ ಮಾಡಬೇಕು, ಇದೆಲ್ಲದರಿಂದ ಹೊರ ಬರಬೇಕು, ನಾನು ಮರಳಿ ಗೂಡು ಸೇರಬೇಕು, ತನ್ನವ್ವನ ಮಡಿಲಲ್ಲಿ ಮಲಗಬೇಕು. ಇಲ್ಲ ಹಣ್ಣಿನ ಸಾಮ್ರಾಜ್ಯದ ಒಡೆಯ ಹೃದಯ ಕಲ್ಲಾಗಿಸಿದ್ದ..! ಒಂದೊಂದಾಗಿ ತನ್ನದೆಲ್ಲವನ್ನು ಕಳೆದುಕೊಂಡ ಹಕ್ಕಿ ಗೂಡಿಂದ ಹೊರಬರುವುದನ್ನು  ನಿಲ್ಲಿಸಿ ಬಿಟ್ಟಿತು. ತನ್ನೂರಿಗೆ ಹೋಗುವಾಗ ಮಾತ್ರ ಸಂಭ್ರಮಿಸಿ ಮತ್ತೆ ಅಲ್ಲಿಂದ ಬರುವಾಗ ದಾರಿಯುದ್ದಕ್ಕೂ ಕಣ್ಣೀರುಗರೆಯುತ್ತ ಬರುತ್ತಿತ್ತು.ಇತ್ತ ಎಲ್ಲ ಇದ್ದು ತನ್ನವರಿಂದ ದೂರ ಉಳಿದು ನರಳುವ ಪಾಡು ತನ್ನದಾದರೆ ಅತ್ತ ಕಟ್ಟಿದ ಗೂಡಲ್ಲಿ ಯಾರು ವಾಸವಿರದೆ ಯಾವುದೋ ಬರಸಿಡಿಲಿಗೆ ಬಲಿಯಾಗಿ ಕುಟುಂಬ ದಿಕ್ಕಾಪಾಲಾಗಿ ಇರುವ ಪರಿಸ್ಥಿತಿ ಮತ್ತೊಂದೆಡೆ. ಕೊನೆಗೆ ಹಕ್ಕಿ  ಹಣ್ಣೊಂದರ ಮೇಲೆ ಕುಳಿತು ಯೋಚಿಸತೊಡಗಿತು ಕಣ್ಣೀರು ಅದರ ಪಾದ ಸವರಿ ಹಣ್ಣಿನ ಮೇಲೆ ಹರಿಯತೊಡಗಿತು. “ತಾನು ಸಾಧಿಸಿದ್ದಾದರೂ ಏನು…! ಹೊಟ್ಟೆಪಾಡಿಗಾಗಿ ಆ ದೇವರನ್ನು ಹಣ್ಣಿನ ಸಾಮ್ರಾಜ್ಯದ ದಾರಿ ತೋರಿಸು ಎಂದು ಬೇಡಿದ್ದೇ ತಪ್ಪಾಯ್ತೇ.. ಅನ್ನ ಬೇಡಿದ್ದಕ್ಕೆ ಈ ಪರಿ ಶಿಕ್ಷೆಯೇ, ಯಾವ ತಪ್ಪಿಗೆ! ಯಾರಿಗೆ ತೊಂದರೆ ಕೊಟ್ಟಿದ್ದಕ್ಕೆ!” ಸುಮ್ಮನೆ ಪಶ್ಚಾತಾಪದಲ್ಲಿ ಬೇಯತೊಡಗಿತ್ತು. ಯೋಚನೆಯಲಿ ಹಕ್ಕಿ ಮತ್ತಷ್ಟು ಹಣ್ಣಾಯಿತು. ಈಗ ಅದಕ್ಕೆ  ಈ ಹಣ್ಣುಗಳನ್ನು ನೋಡಿ ವಾಕರಿಕೆ ಶುರುವಾಯಿತು. ಹಸಿವೂ ಪ್ರಾಯಶ್ಚಿತ ರೂಪದಿ ಇಂಗತೊಡಗಿತು. “ಇಲ್ಲ, ಇಲ್ಲ ಆಗುತ್ತಿಲ್ಲ” ಕೊಕ್ಕಿನಿಂದ ಒಂದು ಚೂರು ತಿನ್ನಲಾಗುತ್ತಿಲ್ಲ, ದುಸ್ತರವಾಯಿತು ಮಲಗಲೂ ಕೂಡ. ಬದುಕಲು ಬಹಳ ಕಷ್ಟ ಪಡುತ್ತಿದೆ ಜೀವವಿದ್ದಾಗಲೇ ತನ್ನ ಗೂಡು ಸೇರಬೇಕೆಂಬ ಹಂಬಲ ಹಿಡಿದು ಉಸಿರಾಡುತಿದೆ. ಇನ್ನೇನೋ ಇದು ಉಳಿಯುವುದೇ ಇಲ್ಲ ಎನ್ನುವುದು ಅವನಿಗೆ ಅರಿವಾಯಿತೋ ಏನೋ ಅವನು ಎಲ್ಲ ಬಲ್ಲವ!  ಹಣ್ಣಿನ ಸಾಮ್ರಾಜ್ಯದ ಒಡೆಯ ಕಣ್ಣು ತೆರೆದ ಎಷ್ಟೋ ರ‍್ಷಗಳ ನಂತರ!   ಅದರ ಸುತ್ತಮುತ್ತ ವಾಸವಿದ್ದ ಹಕ್ಕಿಗಳೆಲ್ಲ ಸಂಭ್ರಮಿಸಿದವು “ಹೋ!!” ಎಂದು. ಇದು ತನ್ನ ಬಾಡಿಗೆಗೂಡಿನಿಂದ ಹೊರಬರಲಾಗದೆ ತೆವಳುತ್ತಾ ಇಣುಕಿ ನೋಡಿತು ನಂಬಲಾಗುತ್ತಿಲ್ಲ ಅದಕ್ಕೆ. ಹೌದು! ಹಣ್ಣಿನ ಸಾಮ್ರಾಜ್ಯದ ಒಡೆಯ ಕಣ್ಣು ತೆರೆದಿದ್ದಾನೆ! ಇಷ್ಟು ರ‍್ಷ ಕಾಡಿ ಬೇಡಿದರೂ ಮೂಕನಾಗಿದ್ದನವ ಇಂದು ಕಣ್ಣು ತೆರೆದ. ಹಕ್ಕಿಗೆ ಸಂಭ್ರಮಿಸಬೇಕೋ, ಸಂಕಟಪಡಬೇಕೋ ತಿಳಿಯುತ್ತಿಲ್ಲ ತಾನು “ವಾಪಸ್ ತನ್ನೂರಿಗೆ ತೆರಳುವೆನೇ, ಇಲ್ಲಿಂದ ಪರ‍್ತಿ ಪ್ರಮಾಣದಲ್ಲಿ ಬಿಡುಗಡೆ ಹೊಂದಿ ನನ್ನ ಊರಲ್ಲಿ ನೆಲೆಸುವ ಭಾಗ್ಯ ನನಗೆ ದೊರೆತೀತೇ, ಅಥವಾ ಮತ್ತಾವುದೋ ಜನ್ಮದ ತಪ್ಪಿನ ಲೆಕ್ಕ ತೆಗೆದು ಶಿಕ್ಷೆ ರೂಪದಿ ಮತ್ತೊಂದು ಹಣ್ಣಿನರಾಜ್ಯಕ್ಕೆ ಎಸೆಯುವನೇ?” ಏನೊಂದು ತೋಚುತ್ತಿಲ್ಲ. ಏನನ್ನು ನಂಬಲಾಗುತ್ತಿಲ್ಲ. ಹಣ್ಣಿನ ಸಾಮ್ರಾಜ್ಯದ ಒಡೆಯ ಬಳಿ ಕರೆದು ಹೇಳಿದ “ನೀನಿನ್ನು ಹೊರಡಬಹುದು, ನಿನ್ನ ಸಮಯ ಮುಗಿಯಿತು”. ಖುಷಿಯಲ್ಲಿ ಹಕ್ಕಿ ಹಾರಲು ಪ್ರಯತ್ನಿಸಿತು ಆಗುತ್ತಿಲ್ಲ, ತಿನ್ನಲು ಪ್ರಯತ್ನಿಸಿತು ಆಗುತ್ತಿಲ್ಲ. ಏನು ಮಾಡುವುದು ತಿಳಿಯದೆ ಹಣ್ಣಿನ ಸಾಮ್ರಾಜ್ಯದ ಒಡೆಯನನ್ನೇ ಕೇಳಿತು‌. “ನಾನೀಗ ಶಕ್ತಿಹೀನ ಎಲ್ಲವನ್ನು ಕಳೆದುಕೊಂಡಿದ್ದೇನೆ”. ಕರುಣಾಳು ದಯಾಮಯಿ ಅವ ಹೇಳಿದ “ಸರಿ, ನಿನ್ನ  ಊರಿಗೆ ಹೋಗಿ ತಲುಪುವಷ್ಟು ಶಕ್ತಿಯನ್ನು ನೀಡುತ್ತೇನೆ ಮುಂದಿನದು ನಿನ್ನ ಜವಾಬ್ದಾರಿ”. ಅಷ್ಟಕ್ಕೆ ಹಕ್ಕಿ ಸಂಭ್ರಮಿಸಿ ನಲಿದಾಡಿತು ಅವನ ಮಹಿಮೆಯನ್ನು ಕೊಂಡಾಡಿತು. ದೂರದ ತೀರಕೆ ಹಾರಿತು ಹಾರಿತು ತಾನು ಹಾರಿ ಬಂದಿದ್ದ ದಿಕ್ಕಿಗೆ. ಆದರೆ ಕಣ್ಣು ಮಂಜು ಮಂಜು ನೋಡಿದರೆ ಯಾವುದೋ ಹೊಸ ಊರು!“ಅಯ್ಯೋ ನಾನು

ರೋಹಿಣಿ ಜೆ ಅವರ ಸಣ್ಣ ಕಥೆ “ಹಾರಾಟ ಮುಗಿದ ಹಕ್ಕಿ!” Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-34 ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ರಣವೀರನಾಗಬೇಕಾದ ಮಣಿಪುರದರಸ ಮಣಿದ ನನಗೆ ‘ಮಣಿಪುರದರಸು ಬಭ್ರುವಾಹನ ನಿಮ್ಮ ಯಜ್ಞಾಶ್ವವನ್ನು ಕಟ್ಟಿಹಾಕಿದ್ದಾನೆ. ಬಿಡಿಸಿಕೊಂಡುಹೋಗುವ ಸಾಮರ್ಥ್ಯವಿದ್ದರೆ ಯುದ್ಧರಂಗದಲ್ಲಿ ಪರಾಕ್ರಮ ತೋರುವವರಾಗಬೇಕು’ ಎಂಬ ಸಂದೇಶವದು ನಮ್ಮನ್ನು ತಲುಪಿತು. ಅದಾಗಲೇ ಸೂರ್ಯ ಅಸ್ತಂಗತನಾಗಿದ್ದ. ಆ ದಿನ ಯುದ್ಧ ನಡೆಯುವುದು ಸಾಧ್ಯವಿರಲಿಲ್ಲ. ಇನ್ನೇನಿದ್ದರೂ ಮರುದಿನವಷ್ಟೇ ಕದನಕೋಲಾಹಲ ಆರಂಭ.ನನ್ನ ಆಪ್ತರ ಜೊತೆ ಮರುದಿನದ ಯುದ್ಧತಂತ್ರಗಳನ್ನು ಚರ್ಚಿಸಿದೆ. ಸಮರ್ಥನೆನಿಸಿಕೊಂಡ ಬಭ್ರುವಾಹನನನ್ನು ಹೀನಾಯವಾಗಿ ಸೋಲಿಸಿದರೆ ನನ್ನ ವಿಜಯಮಾಲೆಗೆ ಹೊಸದೊಂದು ಕುಸುಮದ ಆಗಮನವದು ಖಚಿತ ಎನಿಸಿತು. ಬಭ್ರುವಾಹನನ ಸ್ಮರಣೆಯಲ್ಲಿಯೇ ಇರುಳು ಕಳೆಯಿತು.ಬೆಳಕು ಮೂಡಿತು. ನಿತ್ಯಕರ್ಮಗಳನ್ನು ಪೂರೈಸಿದೆ. ಜಪತಪಾದಿಗಳನ್ನು ಮುಗಿಸಿದೆ. ಕೃಷ್ಣ ಪಾದಪದ್ಮಗಳನ್ನು ನೆನೆದೆ. ನಮ್ಮ ಪಾಳಯದ ವೀರರೆಲ್ಲರನ್ನೂ ಕರೆಸಿದೆ. ಅವರ ಜೊತೆಗೆ ಯುದ್ಧರಂಗಕ್ಕೆ ಹೊರಟೆ.ಅನುಸರಿಸುತ್ತಿತ್ತು ಅನುಸಾಲ್ವಕನ ಸೇನೆ ನನ್ನನ್ನು. ಯುಕ್ತಿಯ ಯಾದವ ಚತುರಂಗವದು ಜೊತೆಗಿತ್ತು. ಒಡನೆಯೇ ಬಂತು ವೃಷಕೇತುವಿನ ವ್ಯಗ್ರಸೇನೆ. ಯುದ್ಧಚತುರ ಯೌವನಾಶ್ವನ ದಂಡು ಹಿಂದೆಯೇ ಇತ್ತು. ಹಂಸಧ್ವಜನ ಹೋರಾಟದ ಪಡೆಯದು ಮುನ್ನುಗ್ಗುತ್ತಿತ್ತು. ಘನವಾದ್ಯಗಳ ಧ್ವನಿಯದು ಮೊಳಗಿರಲು ನಾವೆಲ್ಲರೂ ಬಂದುಸೇರಿದೆವು ರಣರಂಗವನ್ನು.ನಾನು ಮುಂಚೂಣಿಯಲ್ಲಿದ್ದೆ. ಬಭ್ರುವಾಹನನ ಆಗಮನಕ್ಕಾಗಿ ನನ್ನ ಕಣ್ಣು ಕಾತರಿಸುತ್ತಿತ್ತು. ಅಪಾರ ಜನಸಮೂಹದೊಂದಿಗೆ ಮಣಿಪುರದೊಡೆಯ ಬರುತ್ತಿರುವುದು ಕಂಡಿತು. ನೋಡಿದೆ! ಸರಿಯಾಗಿ ಇನ್ನೊಮ್ಮೆ ನೋಡಿದೆ! ಯುದ್ಧೋನ್ಮುಖವಾಗಿ ಬರುತ್ತಿರುವ ದಂಡು ಅದಲ್ಲ ಎಂದು ತೋರಿತು ನನಗೆ.ಘನವಾದ್ಯದ ಮೊರೆತವಿರಲಿಲ್ಲ. ಕಾಳಗದ ಆರ್ಭಟವದು ಅಲ್ಲಿರಲಿಲ್ಲ. ಶುಭಸೂಚಕವಾದ ಇಂಪು ವಾದನಗಳ ಧ್ವನಿಯದು ಕೇಳಿಬರುತ್ತಿತ್ತು. ಕಳಶ, ಕನ್ನಡಿಗಳನ್ನು ಹಿಡಿದು ಅಲಂಕೃತರಾಗಿ ಮಂದಗಮನೆಯರಾಗಿ ಸಾಗಿಬರುತ್ತಿದ್ದರು ಲಲಿತಾಂಗಿಯರು. ಬ್ರಾಹ್ಮಣರಿದ್ದರು ಆ ಮೆರವಣಿಗೆಯಲ್ಲಿ, ವೇದಮಂತ್ರಗಳನ್ನು ಪಠಿಸುತ್ತಾ. ಈ ಬಗೆಯಲ್ಲಿ ಯುದ್ಧಕ್ಕೆ ಆಗಮಿಸುವುದೂ ಇದೆಯೇ! ಎಂದು ಅಚ್ಚರಿಯಾಯಿತು ನನಗೆ.ಮೆರವಣಿಗೆಯ ಮೊಟ್ಟಮೊದಲಲ್ಲಿದ್ದ ಬಭ್ರುವಾಹನ. ಹತ್ತಿರ ಬಂದAತೆಲ್ಲಾ ಅವನ ರೂಪವದು ಸ್ಪಷ್ಟವಾಯಿತು. ಒಂದಷ್ಟು ವರ್ಷಗಳಿಗೆ ಮೊದಲು ನಾನು ಹೇಗಿದ್ದೆನೋ ಹಾಗೆಯೇ ಇದ್ದಾನೆ.ನೇರವಾಗಿ ಬಂದ ನನ್ನೆಡೆಗೆ, ನಗುವನ್ನು ಸೂಸುತ್ತಾ. ಕದನ ಭಾವವದು ಅವನ ಮುಖದಲ್ಲಿ ಎಳ್ಳಷ್ಟೂ ಕಾಣಿಸಲಿಲ್ಲ. ನನಗೆ ತೀರಾ ಸನಿಹದವನಾಗಿ ನಿಂತ, ಆನಂದದಿAದ ನನ್ನ ಮೊಗವನ್ನು ನಿಟ್ಟಿಸುತ. ಒಡನೆಯೇ ತನ್ನ ಶಿರದಲ್ಲಿ ಶೋಭಿಸುತ್ತಿದ್ದ ಕಿರೀಟವನ್ನು ತೆಗೆದ. ನನ್ನ ಪಾದಗಳ ಬಳಿಯಿಟ್ಟ. ಅದು ಶರಣಾಗತಿಯ ಸಂಕೇತ. ಅಚ್ಚರಿಯಾಯಿತು ನನಗೆ. ಯುದ್ಧಕ್ಕೂ ಮೊದಲೇ ಶರಣು ಬಂದನೇ ಈತ! ಎನಿಸಿತು. ಮುಂದೇನು ಮಾಡಲಿದ್ದಾನೋ ಎಂಬAತೆ ನೋಡಿದೆ. ಅನರ್ಘ್ಯ ರತ್ನಗಳನ್ನು ನನ್ನ ಪಾದಮೂಲಕ್ಕೆ ಸುರಿದ. ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದ. ಹಾಗೆಯೇ ಸಾಷ್ಟಾಂಗ ಪ್ರಣಾಮವನ್ನೇ ಮಾಡಿದ, ನೆಲದ ಮೇಲೆ ಒರಗಿ.ತಕ್ಷಣವೇ ಅಲ್ಲಿ ನೆರೆದಿದ್ದ ಮಣಿಪುರದ ಜನರು, ಹೆಂಗಳೆಯರು ನನ್ನ ಮೇಲೆ ಮುತ್ತಿನ ಮಳೆಗರೆದರು. ಬಗೆಬಗೆಯ ಕಾಣಿಕೆಗಳನ್ನು ನನಗಿತ್ತರು ಅಲ್ಲಿಯ ಸಚಿವರು. ಪರಾಕ್ರಮದ ಮಾತು, ಹರಿತ ಬಾಣಗಳ ಪ್ರಯೋಗ, ಹೀಗಳೆವ ಹೀನನನುಡಿ ಇವುಗಳನ್ನೆಲ್ಲಾ ನಿರೀಕ್ಷಿಸಿ ಹೋಗಿದ್ದ ನಾನು ಬಭ್ರುವಾಹನನ ವಿನಯಶೀಲತೆ, ಅಲ್ಲಿನ ಜನರ ಮುತ್ತಿನ ಮಳೆ, ಅಪೂರ್ವ ಕಾಣಿಕೆಗಳು ಇದನ್ನೆಲ್ಲಾ ಕಂಡು ವಿಸ್ಮಯಚಕಿತನಾದೆ. ನನ್ನ ಜೊತೆಗಿದ್ದ ನನ್ನ ಆಪ್ತರೂ ಸಹ ಅಚ್ಚರಿಯ ಸಾಗರದಲ್ಲಿ ಮುಳುಗಿಹೋಗಿದ್ದರು. ಕೇಳಿದೆ ಬಭ್ರುವಾಹನನಲ್ಲಿ, “ಏನಿದೆಲ್ಲಾ?! ಯಾಕೆ ಈ ಪರಿಯ ವಿನಯಶೀಲತೆ?!”ಒಡನೆಯೇ ಅವನು ನನ್ನನ್ನು ‘ತಂದೆ’ ಎಂದು ಸಂಭೋದಿಸಿದ. ನನ್ನ ಕಣ್ಣುಗಳರಳಿದವು, ಚಕಿತತೆಯಿಂದ. “ನಾನು ನಿಮ್ಮ ಮಗ. ನೀವಂದು ತೀರ್ಥಯಾತ್ರೆಗೆಂದು ಇಲ್ಲಿಗೆ ಬಂದಾಗ ನಿಮ್ಮಿಂದ ಜನಿಸಿದವನು ನಾನು. ನನ್ನ ತಾಯಿ ಚಿತ್ರಾಂಗದೆ. ಪ್ರೀತಿಯಿಂದ ಸಲಹಿದವಳು ಉಲೂಪಿ. ನೀವೆನ್ನ ಜನಕ ಎಂಬ ಸತ್ಯವನ್ನು ಅರಿಯದೆಯೇ ಕಟ್ಟಿದೆ ಕುದುರೆಯನ್ನು. ಕ್ಷಮಿಸಬೇಕು ನಾ ಮಾಡಿದ ಈ ಬಗೆಯ ತಪ್ಪನ್ನು” ಎಂದವನು ತಪ್ಪು ಮಾಡಿ ಸಿಕ್ಕಿಬಿದ್ದ ಎಳೆಮಗುವಿನಂತೆ ಕಾಲಿಗೆ ಬಿದ್ದ.ನಾನು ಏನೊಂದು ನುಡಿಯನ್ನೂ ಆಡಲಿಲ್ಲ. ನನ್ನನ್ನೇ ನೋಡುತ್ತಿದ್ದರು ನನ್ನಾಪ್ತರು, ಆತ್ಮೀಯರು. ಇದಾವ ಹೊಸ ಬಾಂಧವ್ಯವಿದು ಬಂದಪ್ಪಿದೆ ಈ ಅರ್ಜುನನನ್ನು ಎಂಬ ಭಾವವಿತ್ತು ಅವರ ಆ ಕಣ್ಣೋಟದಲ್ಲಿ. ಬಭ್ರುವಾಹನ ನನ್ನ ಮಗ ಎನ್ನುವುದನ್ನು ಸಂಪೂರ್ಣವಾಗಿ ನಂಬಿದAತಿತ್ತು ಅವರ ಮಾತುಗಳು.“ನಿನ್ನ ಮಗನಾದ ಈ ಬಭ್ರುವಾಹನ ಮಹಾ ಪರಾಕ್ರಮಿ. ವೈಭವಯುತನಾಗಿದ್ದಾನೆ. ಹೊಗಳಿಕೆಗೆ ಅರ್ಹನೆನಿಸಿಕೊಂಡಿದ್ದಾನೆ. ನಿನ್ನನ್ನೇ ಹೋಲುತ್ತಾನೆ ರೂಪದಲ್ಲಿ. ಪಾದವನ್ನಪ್ಪಿರುವ ಈತನನ್ನು ಕ್ಷಮಿಸದೆಯೇ ಸುಮ್ಮನೆ ಏಕೆ ನಿಂತೆ?! ಮನ್ನಿಸು ಅವನನ್ನು” ಎಂದರು ಅವರೆಲ್ಲರೂ.ಹೀಗೆ ಬಭ್ರುವಾಹನ ನಡೆದುಕೊಳ್ಳುವುದರ ಹಿಂದೆ ಒಂದು ಬಲವಾದ ಕಾರಣವಿತ್ತು. ಹಿಂದಿನ ದಿನ ನಮ್ಮ ಕುದುರೆಯನ್ನು ಕಟ್ಟಿಸಿದ್ದ ಆತ ನಮ್ಮೆದುರಿನ ಯುದ್ಧಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದ. ಈ ಸಮಯದಲ್ಲಿಯೇ ಅವನ ತಾಯಿಗೆ ಈ ವಿಷಯ ಗೊತ್ತಾಯಿತಂತೆ. ತಕ್ಷಣವೇ ಅವನ ಬಳಿಹೋಗಿ, “ಅರ್ಜುನ ನಿನ್ನ ತಂದೆ. ಅವನ ಕುದುರೆಯನ್ನು ಕಟ್ಟಿರುವುದು ಸರಿಯಲ್ಲ” ಎಂದಳAತೆ. ಈ ವಿಚಾರವನ್ನು ಸುಬುದ್ಧಿಯ ಜೊತೆಗೆ ಚರ್ಚಿಸಿದನಂತೆ ಬಭ್ರುವಾಹನ. “ತಂದೆಯೆAದು ತಿಳಿಯದೇ ಇದ್ದಾಗ ಕುದುರೆಯನ್ನು ಕಟ್ಟಿಸಿದವ ನೀನು. ಈಗ ನಿಜ ವಿಚಾರ ತಿಳಿದ ಬಳಿಕವೂ ಹಾಗೆಯೇ ನಡೆದುಕೊಳ್ಳುವುದು ಉಚಿತವಲ್ಲ” ಎಂಬ ಸಲಹೆಯನ್ನು ನೀಡಿದನಂತೆ ಸುಬುದ್ಧಿ. ಈ ಕಾರಣಕ್ಕೇ ಬಭ್ರುವಾಹನ ಯುದ್ಧಚಂತನೆಯನ್ನು ತೊರೆದು, ಶರಣಾಗತನಾಗಿ ನನ್ನೆದುರಿಗೆ ಬಂದದ್ದು.ನನಗಂತೂ ಬಭ್ರುವಾಹನ ನುಡಿದದ್ದೆಲ್ಲವೂ ಕಟ್ಟುಕಥೆ ಎಂದೇ ತೋರಿತು. ನನ್ನನ್ನು ಎದುರಿಸಲಾರದ ಅಧೈರ್ಯಕ್ಕೆ ಒಳಗಾದವನು ಸುಳ್ಳು ಹೇಳುತ್ತಿದ್ದಾನೆ ಎನಿಸಿತು. ಹೀಗಿದ್ದಾಗಲೇ ನಮ್ಮವರಾಡಿದ “ಕ್ಷಮಿಸು ಮಗನನ್ನು” ಎಂಬ ಮಾತು ನನ್ನನ್ನು ಕೆರಳಿಸಿತು. ಉಗ್ರನೋಟ ಬೀರಿದೆ ಬಭ್ರುವಾಹನನೆಡೆಗೆ… ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ

Read Post »

You cannot copy content of this page

Scroll to Top