ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

“ಬಿಕರಿಯಾದ ಪ್ರೀತಿ” ಕಲ್ಪನಾ ಎಸ್‌ ಪಾಟೀಲ

ಕಾವ್ಯ ಸಂಗಾತಿ “ಬಿಕರಿಯಾದ ಪ್ರೀತಿ” ಕಲ್ಪನಾ ಎಸ್‌ ಪಾಟೀಲ ಬಿಕರಿಯಾದ ಪ್ರೀತಿ ಅಂದ್ರೆ ಗೊತ್ತೇನು!ಇದ್ದದ್ದೆಲ್ಲವನ್ನೂ ಕೊಟ್ಟುಒಂದು ನಗುವಿಗೆ ಕಾಯೋದುಅದು ಬರದಾಗ ಎದೆ ಖಾಲಿ ಆಗೋದು. ನಿನಗೊ ಪ್ರತಿ ಮಾತಿಗೂ ಅರ್ಥಕಂಡುಕೊಳ್ಳುವ ತವಕಅವರೊ ಪ್ರತಿ ಮಾತಿಗೂ ಬೆಲೆ ಕಟ್ಟಿದ್ರುನೀನು ಕಣ್ಣೀರಲ್ಲಿ ಹೆಸರು ಬರೆದೆಅವರು ಅದನ್ನ ಮಳೆಗೆ ಕೊಟ್ಟು ಹೋದ್ರು. ಒಲವಿನ ಪ್ರೀತಿ ಕೇಳಿದ್ದೇನು?ಸಿಗೋದು ಸುಳ್ಳಿನ ವ್ಯಾಪಾರ ಆಯ್ತು.ನಾನಿಲ್ಲವಾ ಎಂದಿದ್ದ ಕೈ,ಬಿಟ್ಟು ಹೋಗೋವಾಗ “ನಿನ್ನ ತಪ್ಪು”ಅಂದಿತ್ತು ಅದರಲ್ಲಿ ಅಚ್ಚರಿ ಏನಿಲ್ಲ. ಆದ್ರೂ ನಿನಗೆ ಗೊತ್ತಾ?ಬಿಕರಿಯಾದ ಪ್ರೀತಿ ನಿನ್ನನ್ನು ಚಿಕ್ಕದಾಗಿಸಲ್ಲಅದು ನಿನ್ನ ದೊಡ್ಡತನಕ್ಕೆ ಸಾಕ್ಷಿಯಾಕಂದ್ರೆ ಪ್ರೀತಿಸೋಕೆ ಧೈರ್ಯಬೇಕಲ್ಲವೆ ಮೋಸ ಮಾಡೋಕೆ ಅಲ್ಲ. ಅದಕೇಕೆ ಅಳುವೆ ಅಳುವುದಾದರೆಮನಸಾರೆ ಎದೆ ಹಗುರಾಗುವವರೆಗೆ ಅಳುಆಮೇಲೆ ಆ ಕಣ್ಣೀರನ್ನೇ ಶಕ್ತಿಮಾಡ್ಕೊಂಡು ಬಿಡು ಅದರಲ್ಲೆನಗೋದನ್ನ ಕಲಿತುಬಿಡು. ಬಿಕರಿಯಾದ ಪ್ರೀತಿಗೇಕೆ ಅಳುವೆನಿನ್ನನ್ನು ನಿಜವಾಗಿ ಪ್ರೀತಿಸೋಒಲವಿಗಾಗಿ ಕಾಯೋದಾ?ಕಾಯುವುದಾದರೆ ಇನ್ನೆಷ್ಟು ದಿನ.!?ಬರಬಹುದೆಂಬ ಊಹೆಯ ಬಿಟ್ಟು ಬಿಡು. ಊಹಿಸಿರೊದೆಲ್ಲವೂ ಇಲ್ಲಿ ನೈಜವಾಗಿನಡೆಯುವುದಿಲ್ಲ ಊಹೆಯೊಳುಬದುಕುತ್ತಿದ್ದರೆ ಅದು ಬದುಕಲ್ಲಬದುಕಿನ್ನು ಬಿಕರಿಯಾಗುವುದಕ್ಕಿಂತಮೊದಲೆ ನಿನ್ನ ನೀನು ಪ್ರೀತಿಸುವುದನ್ನಕಲಿತುಬಿಡು. ಕಲ್ಪನಾ ಎಸ್ ಪಾಟೀಲಕಾವ್ಯಧರೆ

“ಬಿಕರಿಯಾದ ಪ್ರೀತಿ” ಕಲ್ಪನಾ ಎಸ್‌ ಪಾಟೀಲ Read Post »

ಇತರೆ

 “ನನ್ನ ಬದುಕಿಗಿಂತ ಅವರದು ವಾಸಿ” ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ

ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ  “ನನ್ನ ಬದುಕಿಗಿಂತ ಅವರದು ವಾಸಿ” ವಿಶೇಷ ಲೇಖನ  ಗೃಹಿಣಿ…. ಅಯ್ಯೋ ಈ ಮನೆ ಕೆಲಸ ಮುಗಿಯೋದೇ ಇಲ್ಲ ಇದರ ಮೇಲೆ ಮಕ್ಕಳು ಗಂಡ ಹೇಳಿದ್ದನ್ನೆಲ್ಲ ಮಾಡಿ ಹಾಕಬೇಕು. ಅತ್ತೆ ಮಾವನ ಕಾಳಜಿ ಮಾಡಬೇಕು. ನನ್ನ ಬದುಕು ಪೂರ್ತಿ ಗಂಡ ಮನೆ ಮಕ್ಕಳು ಅಂತ ಅವರ ಸುತ್ತಲೇ ಸುತ್ತುತ್ತದೆ ಅಂತ ಅನಿಸುತ್ತದೆ ನನಗೋಸ್ಕರ ಒಂದಷ್ಟು ಟೈಮ್ ಮಾಡ್ಕೋಬೇಕು  ನಾನು ಕೂಡ ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕು ಅನ್ನೋ ಆಸೆ ನನಗೂ ಇದೆ ಆದರೆ ಏನು ಮಾಡೋದು ? ಯಾವುದೂ ಆಗ್ತಾ ಇಲ್ಲ…. ಪಕ್ಕದ ಮನೆಯ ಲೀಲಾ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡ್ತಾಳೆ ದೊಡ್ಡ ಸಂಬಳ ಬರದೇ ಇರಬಹುದು, ನಿಜ ಆದರೆ ಆಕೆ ಪ್ರತಿದಿನ ಸಮಯಕ್ಕೆ ಸರಿಯಾಗಿ ತಯಾರಾಗಿ ಶಾಲೆಗೆ ಹೋಗುವಾಗ ಆಕೆಯ ಮುಖದಲ್ಲಿರುವ ಸಂತಸ ಹೆಮ್ಮೆ ನೋಡಿದರೆ ನನಗೆ ಖುಷಿಯಾಗುತ್ತೆ. ಕೆಲಸ ಜೊತೆ ಕೆಲಸ ಆಯ್ತು ಶಾಲೆಯಲ್ಲಿ ನಡೆಯೋ ಎಲ್ಲಾ ಆಕ್ಟಿವಿಟೀಸ್ ಗಳಲ್ಲಿ ಅವರು ಪಾರ್ಟಿಸಿಪೇಟ್ ಮಾಡ್ತಾರೆ ಜನರ ಜೊತೆ ಸಂಪರ್ಕ ಇರುತ್ತೆ. ಮಕ್ಕಳ ಜೊತೆ ನಕ್ಕು ನಲೀತಾರೆ ಜೊತೆಗೆ ಒಂದಷ್ಟು ಪಾಕೆಟ್ ಮನಿ ರೀತಿಯಲ್ಲಿ ಹಣ ಕೂಡ ಸಂಪಾದಿಸುತ್ತಾರೆ.ತಾವು ಖರೀದಿಸಿದ ಬಟ್ಟೆಗಳನ್ನ, ಒಡವೆಗಳನ್ನ ಆಯಾ ಕಾರ್ಯಕ್ರಮಗಳಿಗೆ ತಕ್ಕಂತೆ ಸರಿಯಾದ ರೀತಿಯಲ್ಲಿ ಉಪಯೋಗಿಸಿಕೋತಾರೆ. ಶಾಲೆಯಲ್ಲಿ ಮಕ್ಕಳೊಟ್ಟಿಗೆ, ನಂತರ ಸಹೋದ್ಯೋಗಿಗಳೊಂದಿಗೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಅಟೆಂಡ್ ಮಾಡ್ತಾರೆ ಪ್ರವಾಸ ಹೋಗ್ತಾರೆ, ಬದುಕನ್ನ ಪರಿಪೂರ್ಣವಾಗಿ ಎಂಜಾಯ್ ಮಾಡ್ತಾರೆ….  ಒಟ್ಟಿನಲ್ಲಿ ನೆಮ್ಮದಿಯ ಬದುಕು ಅವರದು.ಲೀಲಾ ಟೀಚರ್…. ಅಯ್ಯೋ ನಮ್ಮನೆಯವರು ಚೆನ್ನಾಗಿ ದುಡಿತಾ ಇದ್ರೆ, ನಾನ್ ಯಾಕ್ರೀ ಈ ಚಾಕರಿಗೆ ಬರ್ತಾ ಇದ್ದೆ. ಮನೆಯಲ್ಲಿ ಒಂದು ಇದ್ದರೆ ಒಂದು ಇರಲ್ಲ… ಆರ್ಥಿಕವಾಗಿ ಅನುಕೂಲ ಇದ್ರೆ ಎಲ್ಲವೂ ಚೆನ್ನ. ಅದಕ್ಕೆ ಅದೆಷ್ಟೇ ಕಷ್ಟ ಆದರೂ ಪರವಾಗಿಲ್ಲ ಅಂತ ಈ ಕೆಲಸಕ್ಕೆ ಸೇರಿಕೊಂಡಿದೀನಿ. ತಕ್ಕಮಟ್ಟಿಗೆ ಸಂಬಳಾನು ಸಿಗುತ್ತೆ ಅನ್ನಿ.ಆದರೆ ಏನು ಮಾಡೋದು….ಕೆಲಸಕ್ಕೆ ಹೋಗೋ ಅವಸರದಲ್ಲಿ ಗಡಿಬಿಡಿಯಿಂದ ಮನೆಯ ಎಲ್ಲಾ ಕೆಲಸ ಮುಗಿಸಿ ಸ್ನಾನ ಮಾಡಿ ತಿಂಡಿ ತಿಂದು ಶಾಲೆಗೆ ಓಡಿ ಹೋಗುವಷ್ಟರಲ್ಲಿ ಅಬ್ಬಾ! ಸಾಕು ಈ ಧಾವಂತದ ಬದುಕು ಅನ್ಸುತ್ತೆ. ಇನ್ನು ಇಡೀ ದಿನ ಎಲ್ಲಾ ಶಾಲೆಯಲ್ಲಿ ಕಳೆದು ಹೋಗುತ್ತೆ. ಖಾಸಗಿ ಶಾಲೆ ಆಗಿರೋದ್ರಿಂದ ಎಲ್ಲರ ಮರ್ಜಿ ಕಾಯಬೇಕು. ಆಡಳಿತ ಮಂಡಳಿಯವರ ಕಣ್ಣಿಗೆ ಕಿಸುರಾಾಗಬಾರದು. ಪ್ರಿನ್ಸಿಪಾಲ್ ಹೇಳಿದ ರೀತಿಯಲ್ಲಿ ಕ್ಲಾಸ್ಗಳನ್ನ ತಗೋಬೇಕು. ಚೋಟುದ್ದ ಮಕ್ಕಳ ಧಿಮಾಕು ತುಸು ಹೆಚ್ಚೇ ಇರುತ್ತೆ ಅವರನ್ನು ಸರಿದಾರಿಗೆ ತರೋದಕ್ಕೆ ನಮ್ಮೆಲ್ಲಾ ಶ್ರಮವನ್ನ ಹಾಕಬೇಕು. ಇನ್ನು ಅವರ ಪಾಲಕರ ಮಾತನ್ನು ಕೂಡ ಕೇಳಬೇಕು… ಅವರು ಹೇಳ್ತಾರೆ ತಮ್ಮ ಮಕ್ಕಳು ಮನೆಯಲ್ಲಿ ಮಾತ್ರ ಗಲಾಟೆ ಮಾಡುತ್ತಾರೆ ಅವರನ್ನು ಹಿಡಿಯೋಕಾಗಲ್ಲ ಅಂತ. ಆದ್ರೆ ಶಾಲೆಯಲ್ಲಿ ಅವರಂತಹ ಒಳ್ಳೆಯವರೇ ಇಲ್ಲ ಅನ್ನೋ ರೀತಿ ಅವರ ವರ್ತನೆ ಇರುತ್ತದೆ.ಇನ್ನು ಈ ಮಕ್ಕಳು ತಮ್ಮ ಹೆತ್ತವರ ಮುಂದೆ ತುಂಬಾ ಮುಗ್ಧರು ಅನ್ನೋ ರೀತಿ ವರ್ತಿಸ್ತಾರೆ ಆದರೆ ಅವರದು ಪ್ರಳಯಾಂತಕ ಬುದ್ಧಿ.ಮನೆಯಿಂದ ಹೊರಗೆ ನಾಲ್ಕು ಜನರ ಮಧ್ಯದಲ್ಲಿ ಓಡಾಡೋದ್ರಿಂದ ಸಮಾಜದಲ್ಲಿ ಒಂದಷ್ಟು ಗೌರವ, ನಮ್ಮ ಮಕ್ಕಳ ಶಿಕ್ಷಕರು ಎಂಬ ಪ್ರೀತಿ,ವಿಶ್ವಾಸ ಇರುತ್ತದೆ. ಆದರೆ ದೇಹಕ್ಕೆ ಮನಸ್ಸಿಗೆ ವಿಶ್ರಾಂತಿ ಎಂಬುದು ಕನಸಿನ ಮಾತು. ಇದಕ್ಕಿಂತ ಸರ್ಕಾರಿ ಶಾಲೆ, ಟೀಚರ್ ಆದ್ರೆ ಒಳ್ಳೆ ಸಂಬಳನೂ ಬರುತ್ತೆ ಯಾವುದೇ ಅಭದ್ರತೆ ಕಾಡೋದಿಲ್ಲ… ಏನು ಮಾಡೋದು ಎಲ್ಲಾನು ಪಡ್ಕೊಂಡು ಬಂದಿರಬೇಕಲ್ವೇ ?ಸರ್ಕಾರಿ ಶಾಲೆ ಶಿಕ್ಷಕಿ….. ಹೌದು ರೀ ಹೇಳೋದಕ್ಕೆ ಸರ್ಕಾರಿ ನೌಕರಿ, ಸರ್ಕಾರಿ ಸಂಬಳ ಎಲ್ಲವೂ ಚೆನ್ನಾಗಿ ಕಾಣಿಸುತ್ತೆ. ಆದರೆ ಸರ್ಕಾರಿ ಕೆಲಸ ಒಂದು ರೀತಿ ಕತ್ತೆ ಚಾಕರಿ ಇದ್ದಹಾಗೆ ಅನ್ನೋದು ಜನರಿಗೆ ಗೊತ್ತಾಗಲ್ಲ. ಏನು ಕೆಲಸ ಮಾಡ್ತೀರಿ ? ಅಂತ ಕೇಳಿದ ಜನ ನಮ್ಮ ಉತ್ತರ ಕೇಳಿ ಗೌರ್ಮೆಂಟ್ ಸ್ಕೂಲ್ ಟೀಚರ್ರಾ, ಬಿಡಿ ಕೆಲಸ ಮಾಡಿದ್ರೂ ಸಂಬಳ ಬರುತ್ತೆ, ಮಾಡದೆ ಇದ್ರೂ ಬರುತ್ತೆ ಎಂದು ಮೂಗು ಮುರಿದಾಗ ಅದೆಷ್ಟು ನೋವಾಗುತ್ತೆ ಗೊತ್ತಾ ? ನಾವು ಶಾಲೆಗಳಲ್ಲಿ ಓದಿಸುವ ಮಕ್ಕಳು ಸಂಪೂರ್ಣ ಶಿಕ್ಷಿತರಲ್ಲದವರ ಮಕ್ಕಳು. ಮಕ್ಕಳಿಗೆ ಶಾಲೆಯಲ್ಲಿ ಪಾಠ ಹೇಳಿಕೊಡುವುದರ ಜೊತೆಗೆ ಮನೆಯಲ್ಲಿ ಮನೆ ಪಾಠವನ್ನು ನಾವು ಕೊಡುತ್ತೇವೆ, ನಿಜ….ಆದರೆ ಅದನ್ನು ಮಾಡಿಸೋರು ಯಾರು ? ಯಾಕೆಂದರೆ ಪಾಲಕರಿಗೆ ಅಯ್ಯೋ! ಅದೆಲ್ಲ ನಮಗೆ ಗೊತ್ತಾಗೋದಿಲ್ಲ ಅಂತ ಕೈ ಒದರೋದು ಮಾತ್ರ ಗೊತ್ತು. ಮಕ್ಕಳಿಗೆ ಒಂಚೂರು ಕಟ್ಟುನಿಟ್ಟು  ಮಾಡಿದಾಗ  ಓಡೋಡಿ ಬಂದು ನಾವೇ ನಮ್ಮ ಮಕ್ಕಳಿಗೆ ಏನೂ ಹೇಳೊಲ್ಲ, ಒಂದೇಟು ಹೊಡೆಯಲ್ಲ… ಅದು ಹೇಗೆ ರೀ ನೀವು ನಮ್ಮ ಮಕ್ಕಳಿಗೆ ಬಯ್ಯೋದು ಅಂತ ನಮ್ಮನ್ನ  ದಬಾಯಿಸ್ತಾರೆ.ತೆಗೆದುಕೊಟ್ಟುಬಿಡಿ ನಮ್ಮ ಮಕ್ಕಳ ಟಿ ಸಿ ನ ಅಂತ ಗುರುಗುಟ್ಟತಾರೆ.ಇನ್ನು ನಮ್ಮ ಸರ್ಕಾರಗಳು ಜನಗಣತಿಯಿಂದ ಹಿಡಿದು ದನಗಣತಿಯವರೆಗೆ ಎಲ್ಲ ಕೆಲಸಕ್ಕೂ ನಮ್ಮನ್ನೇ ಬಳಸಿಕೊಳ್ಳುತ್ತಾರೆ. ರಜಾ ದಿನಗಳಲ್ಲಂತೂ ಸರಿ… ಶಾಲೆ ಇದ್ದಾಗಲೂ ಈ ಕಾರ್ಯ ಮಾಡೋದು ಅಂದ್ರೆ ಮಕ್ಕಳ ಸಿಲಬಸ್ ಹೇಗೆ ಪೂರ್ಣಗೊಳಿಸಬೇಕು ಹೇಳಿ ?ಇದರ ಮೇಲೆ ಬಿಸಿಊಟದ ವ್ಯವಸ್ಥೆ ನಮ್ಮ ನಮ್ಮ ತರಗತಿಯಲ್ಲಿ ಆ ದಿನ ಬಂದಿರುವ ವಿದ್ಯಾರ್ಥಿಗಳ ಸಂಖ್ಯೆ ಹೇಳಬೇಕು, ಹುಡುಗರು ಎಷ್ಟು ಹುಡುಗಿಯರು ಎಷ್ಟು ಯಾರು ಮೊಟ್ಟೆ ತಿಂತಾರೆ ? ಯಾರು ಬಾಳೆಹಣ್ಣು ತಿಂತಾರೆ ಎಂದೆಲ್ಲ ಲೆಕ್ಕ ಕೊಡಬೇಕು. ಅವರಿಗೆ ಮಾಡುವ ಅಡುಗೆ ಪೌಷ್ಟಿಕವಾಗಿದೆಯೇ? ತರಕಾರಿಗಳನ್ನು ಹಾಕಿ ಮಾಡಿದ್ದಾರೆಯೇ? ಹಾಲು ಚೆನ್ನಾಗಿ ಕಾಯಿಸಿದ್ದಾರೆಯೇ ಅನ್ನೋದನ್ನ ನೋಡ್ಕೋಬೇಕು. ಯಾರಿಗೆ ಬೇಕಪ್ಪ ಈ ಸರ್ಕಾರಿ ಶಿಕ್ಷಕರ ಕೆಲಸ. ಚೆನ್ನಾಗಿ ಓದಿ ಇಂಜಿನಿಯರಿಂಗ್ ಮಾಡಿದ್ರೆ ಎಸಿ ರೂಮಲ್ಲಿ ಕುತ್ಕೊಂಡು ಲ್ಯಾಪ್ಟಾಪ್ ಅಲ್ಲಿ ಕುಟ್ತಾ ಜುಮ್ ಅಂತ ನೌಕರಿ ಮಾಡ್ಕೊಂಡು ವೀಕೆಂಡ್ ಗಳಲ್ಲಿ ಫ್ರೆಂಡ್ಸ್ ಜೊತೆ ಪಾರ್ಟಿ, ಪಿಕ್ನಿಕ್ ಅಂತ ಹೋಗಬಹುದಿತ್ತು…. ಎಲ್ಲಾನು ಪಡ್ಕೊಂಡು ಬರೋಕೆ ಹಣೆಲಿ ಬರ್ದಿರ್ಬೇಕಲ್ಲ.ಸಾಫ್ಟ್ ವೇರ್ ಇಂಜಿನಿಯರ್…. ನಿಜ ನಮ್ಮ ಬದುಕು ನೋಡಲು ಅತ್ಯಂತ ಆಕರ್ಷಕ. ಎಸಿ ರೂಮುಗಳಲ್ಲಿ ಬೋರ್ಡ್ ಮೀಟಿಂಗ್ ಗಳಲ್ಲಿ, ಆಕರ್ಷಕವಾದ ವಾತಾವರಣದಲ್ಲಿ ಠಾಕು ಠೀಕಾದ ಬಟ್ಟೆ ಧರಿಸಿ ಅದಕ್ಕೆ ತಕ್ಕಂತೆ ಶೂ ಇಲ್ಲವೇ ಚಪ್ಪಲಿ ಹಾಕಿಕೊಂಡು ಆತ್ಮವಿಶ್ವಾಸದಿಂದ ಎದೆ ಉಬ್ಬಿಸಿ ನಡೆಯುತ್ತಾ ಇದ್ದರೆ ಎಲ್ಲರೂ ನಮ್ಮನ್ನೇ ನೋಡಿ ಬೆಕ್ಕಸ ಬರಗಾಗುವಂತಹ ಬದುಕು ನಮ್ಮದು. ಆದರೆ ದೀಪದ ಅಡಿಯಲ್ಲಿ ಕತ್ತಲು ಎಂಬಂತೆ ಒಂದೇ ಸಮನೆ ಲ್ಯಾಪ್ಟಾಪ್ ನೋಡಿ ಕೆಲಸ ಮಾಡುವ ನಮಗೆ ವಿಪರೀತ ದೈಹಿಕ ತೊಂದರೆಗಳು ಕಾಡುತ್ತವೆ. ಎಲ್ಲರಿಗೂ ನಲವತ್ತಕ್ಕೆ ಕನ್ನಡಕ ಬಂದರೆ ನಮಗೆ ನೌಕರಿ ಸೇರಿದ ಕೆಲವೇ ತಿಂಗಳುಗಳಲ್ಲಿ ಕಣ್ಣಿಗೆ ಕನ್ನಡಕ ಕಡ್ಡಾಯ. ಸದಾ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳು ಡ್ರೈ ಆಗುವ, ಕುತ್ತಿಗೆ ಬೆನ್ನುಗಳಲ್ಲಿ ವಿಪರೀತ ನೋವು ಸಹಜ. ನಮ್ಮ ಒಡನಾಟ ಹೈ ಲೆವೆಲ್ ಕಾರ್ಪೊರೇಟ್ ಜನರೊಂದಿಗೆ ಇರುವುದರಿಂದ ಅಲ್ಲಿಯ ಊಟ ತಿಂಡಿಗೆ ನಮ್ಮನ್ನು ನಾವು ಒಗ್ಗಿಸಿಕೊಳ್ಳುವ ಕಾರಣ ದೇಹದಲ್ಲಿ ಅನವಶ್ಯಕ ಬೊಜ್ಜು ಸೇರಿಕೊಳ್ಳುತ್ತದೆ. ಪರಿಣಾಮವಾಗಿ 60ರ ನನ್ನ ಅಮ್ಮ ಇನ್ನೂ ಚಿರ ಯುವತಿಯಂತೆ ಓಡಾಡಿಕೊಂಡಿದ್ದರೆ ಅವರ ಮುಂದೆ ನಾನು ಸದಾ ಬಂದಿಲ್ಲೊಂದು ನೋವುಗಳನ್ನು ಹೇಳಿಕೊಂಡು ತಿರುಗುತ್ತೇನೆ. ಪ್ರಾರಂಭದ ಒಂದೆರಡು ವರ್ಷ ಜನ ಎಲ್ಲ ನೋಡೋ ಹಾಗೆ ಒಳ್ಳೆ ಕೆಲಸ, ಫ್ರೆಂಡ್ಸು, ವೀಕೆಂಡ್ ಮೋಜು ಮಜಾ ಅಂತ ಕಾಲ ಕಳೆಯಿತು…. ನಂತರ ಅಪ್ಪ-ಅಮ್ಮನ ವರಾತ ಶುರುವಾಗಿ ನನ್ನದೇ ಸಾಫ್ಟ ವೇರ್ ಫೀಲ್ಡಿನ ಯುವಕನೊಂದಿಗೆ ನನ್ನ ಮದುವೆಯೂ ಆಯಿತು. ಯವ್ವನದ ಹಸಿ ಬಿಸಿ ಆಸೆ ಆಕಾಂಕ್ಷೆಗಳ, ಕನಸುಗಳ ಹಂಚಿಕೆಯೂ ಆಗಿ, ಮದುವೆಯ ಹನಿಮೂನ್ ಅವಧಿ ಮುಗಿದು ಕೆಲಸಕ್ಕೆ ಮತ್ತೆ ಜಾಯಿನ್ ಆದದ್ದೇ ಬಂತು. ನಾವು ಪರಸ್ಪರ ಜೊತೆಯಾಗಿ ಇರಲು ಮಾತನಾಡಲು ಕೂಡ ವೀಕೆಂಡ್ಗಳಿಗಾಗಿ ಕಾಯಬೇಕು. ಇನ್ನು ವಿಪರೀತ ಒತ್ತಡದ ಕೆಲಸದ ನಂತರ ಬರುವ ವೀಕೆಂಡ್ ಗಳಲ್ಲಿ ಮನೆಯ ರಾಶಿ ಕೆಲಸಗಳು ಕಾಯುತ್ತಿರುತ್ತವೆ… ಅದೆಲ್ಲವನ್ನು ಹೇಗೋ ಮ್ಯಾನೇಜ್ ಮಾಡಿ ಉಸ್ತಪ್ಪ ಅಂತ ಸೋಫಾದಲ್ಲಿ ಕುಳಿತುಕೊಂಡರೆ ಅರಿವಿಲ್ಲದೆ ನಿದ್ರೆ ಆವರಿಸಿಕೊಳ್ಳುತ್ತದೆ. ನಾವಿಬ್ಬರೂ ಬದುಕಿನ ಪಯಣದಲ್ಲಿ ಕಂಪನಿಯಲ್ಲಿ ನೀಡುವ ಪ್ರಾಜೆಕ್ಟ್ ಗಳನ್ನು ಕಂಪ್ಲೀಟ್ ಮಾಡಲು ಒಂದೇ ಸಮನೆ ಓಡುತ್ತಿದ್ದೇವೆ… ನನಗೆ ಕೊಂಚ ಬಿಡುವ ದೊರೆತಾಗ ನನ್ನವನಿಗೆ ವಿಪರೀತ ಕೆಲಸದ ಒತ್ತಡ, ಮಾತಾಡಿದರೆ ಸಿಡಾರ್ ಎಂದು ಸಿಡುಕಬಹುದು ಎಂಬ ಅಳುಕು… ಕಾರಣ ಕೆಲಸದ ಒತ್ತಡ, ಭದ್ರತೆ ಅವನಂತೆ ನನಗೂ ಇದೆ ಅಲ್ಲವೇ ? ಇದರ ಮಧ್ಯದಲ್ಲಿ ಮಗುವಾದರೆ ಅದರೊಂದಿಗೆ ಎಂಜಾಯ್ ಮಾಡಲು ಕೂಡ ಆಗದೇ ಇರುವಷ್ಟು ಮುಂದಿನ ಬದುಕಿನ ಕುರಿತ ಕಾಳಜಿ. ಐದಾರು ತಿಂಗಳ ಮೆಟರ್ನಿಟಿ ಲೀವ್ ದೊರೆಯುತ್ತದೆ ನಿಜ… ಆದರೆ ನಾಗಾಲೋಟದಲ್ಲಿ ಬದಲಾಗುತ್ತಿರುವ ಐ ಟಿ ಕ್ಷೇತ್ರದ ಅಭಿವೃದ್ಧಿ ಪಥಕ್ಕೆ ನಾನು ಸರಿ ಹೊಂದದೆ ಎಲ್ಲಿ ಹಿಂದೆ ಉಳಿದುಬಿಡುವೆನೋ ಎಂಬ ಆತಂಕ, ಭಯ ನನ್ನನ್ನು ಇನ್ನಿಲ್ಲದಂತೆ ಕಾಡುತ್ತದೆ. ಒಂದು ವೇಳೆ ಹಾಗಾದಾಗ ನನಗೆ ನನ್ನ ಯೋಗ್ಯತೆಗೆ ತಕ್ಕ ಕೆಲಸ ದೊರೆಯದೆ ಹಿಂದುಳಿದು ಬಿಟ್ಟರೆ? ನನ್ನನ್ನು ಕೆಲಸದಿಂದ ತೆಗೆದುಹಾಕಿದರೆ ಎಂಬ ಆತಂಕ…. ಇದರ ಜೊತೆಗೆ ಸಹಜವಾಗಿಯೇ ನನ್ನಮ್ಮ, ಅತ್ತೆಯಂತೆ ನಾನು ಕುಟುಂಬಕ್ಕೆ ನನ್ನ ಸಮಯವನ್ನು ನೀಡುತ್ತಿಲ್ಲ, ಮಕ್ಕಳಿಗೆ ನೀಡಬೇಕಾದ ಅಗತ್ಯ ಕಾಳಜಿಯನ್ನು ವಹಿಸಲಾಗುತ್ತಿಲ್ಲ ಎಂಬ ಭಾವ ನನ್ನನ್ನು ಸದಾ ಹಿಂಡಿ ಹಿಪ್ಪೆ ಮಾಡುತ್ತದೆ. ಅತ್ತ ಕೌಟುಂಬಿಕವಾಗಿ ಎಲ್ಲರನ್ನೂ ಮೆಚ್ಚಿಸಲಾಗದೆ, ಔದ್ಯೋಗಿಕವಾಗಿಯೂ ಎಲ್ಲವನ್ನು ನಿರ್ವಹಿಸಲಾಗದೆ ಎಲ್ಲಿಯೂ ಸಲ್ಲದವರಾಗಿ ಬಿಡುತ್ತೇವೆ ಎಂಬ ಭಯ. ಹೋಗಲಿ ಬಿಡು…, ಇಬ್ಬರಲ್ಲಿ ಒಬ್ಬರು ದುಡಿಯುತ್ತೇವಲ್ಲ ನೌಕರಿ ಬಿಟ್ಟರೆ ಆಯ್ತು ಅಂದುಕೊಳ್ಳಲು ಕಂತಿನಲ್ಲಿ ಖರೀದಿಸಿದ ಕಾರು, ಮನೆಗಳ ಸಾಲಗಳು… ಇನ್ನೂ ನಮ್ಮ ಬಾಕಿ ಇದೆ ಎಂದು ತಟ್ಟಿ ನಮ್ಮನ್ನು ಎಚ್ಚರಿಸುತ್ತವೆ. ಇದೆಲ್ಲಾ ನೋಡಿದರೆ ಹಳ್ಳಿಯಲ್ಲಿ ಆರಾಮಾಗಿ ಇರುವ ನನ್ನಮ್ಮನ ಹಾಗೆ ಬದುಕನ್ನು ಅದು ಇರುವಂತೆ ಸಾಗಿಸಿಕೊಂಡು ಹೋಗುವುದರಲ್ಲಿ ಅದೆಷ್ಟು ಸುಖವಿದೆ ಅಂತ ಅನ್ಸುತ್ತೆ… ಏನು ಮಾಡೋದು ಎಲ್ಲವೂ ನಮ್ಮ ಕೈಯಲ್ಲಿ ಇಲ್ಲ. ಪರಿಸ್ಥಿತಿ ಬಂದ ಹಾಗೆ ನಮ್ಮನ್ನು ನಾವು ಹೊಂದಿಸಿಕೊಂಡು ಹೋಗಬೇಕು ಇಲ್ಲದೆ ಹೋದರೆ ನಮ್ಮನ್ನು ನಾವೇ ಕಳೆದುಕೊಳ್ಳಬೇಕಾಗುತ್ತದೆ. ಹಳ್ಳಿಯಲ್ಲಿರುವ ಅಮ್ಮ…. ಅಯ್ಯೋ ನಮ್ಮದು ಒಂದು ಬದುಕೇ?  ನಾನು ಅಂತ ಇಷ್ಟು ದಿನ ಹೊಂದಿಕೊಂಡು ಹೋದೆ. ನಮ್ಮ ಹಳ್ಳಿಯ ಮನೆಗಳು ಕತ್ತಲ ಗೂಡುಗಳು ಕಣ್ಣು ಮುಚ್ಚಾಲೆ ಆಡೋ ಕರೆಂಟು, ಬಾವಿಯ ನೀರು ಸೇದಿ ಬಳಸಬೇಕು ಇಲ್ಲವೇ ಹಳ್ಳಕ್ಕೆ ಹೋಗಬೇಕು… ಇನ್ನು ಮನೆ ಮನೆಗೆ ನೀರಿನ ವ್ಯವಸ್ಥೆ ನಮ್ಮ ಹಳ್ಳಿಗೆ  ಬಂದಿಲ್ಲ. ಹೊಲದಲ್ಲಿ ಸಾಕಷ್ಟು ಕಟ್ಟಿಗೆ ಇರುತ್ತೆ ಅದನ್ನೇ ಬಳಸುವ ಅಂತ ಯಜಮಾನ್ರು ಹೇಳ್ತಾರೆ ಅದು ನಿಜಾನೆ ಹೌದು. ಆದರೆ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿ, ಅದರ ಹೊಗೆ ಕುಡಿದು ಅಸ್ತಮಾ, ಕೆಮ್ಮು ದಮ್ಮು ಎಂದು ಒದ್ದಾಡೋದು ನನ್ನ ಹಣೆಯಲ್ಲಿ ಬರೆದಿದೆ. ಈಗೀಗ ಎಲ್ಲದಕ್ಕೂ ಗ್ಯಾಸ್ ಒಲೆಯನ್ನೇ ಬಳಸ್ತೀನಿ… ನಾನಾದ್ರೂ ಎಷ್ಟು ಅಂತ ಮಾಡ್ಲಿ.ಈ ಹಿಂದೆ ಮನೆಯಲ್ಲಿ ದನ ಕರು ಅಂತ ಸಾಕಷ್ಟು ಹಾಲು ಹಯಿನಿನ ಸಮೃದ್ಧಿ ಇತ್ತು ನಿಜ… ಆದರೆ ಈಗ ಎಲ್ಲಾ ಕೆಲಸ ನಾವೇ ಮಾಡಿಕೊಳ್ಳಬೇಕು. ಈ ಮುಂಚಿನಂತೆ ಆಳುಗಳು ಸಿಗೋದಿಲ್ಲ, ಅವರು ಕೇಳೋವಷ್ಟು ಸಂಬಳ ಕೊಟ್ಟು ಕೆಲಸ ಮಾಡಿಸಿಕೊಳ್ಳೋದಕ್ಕೆ ನಮಗೆ ಆಗೋದಿಲ್ಲ. ಅದಕ್ಕೆ ನಾವು ತಿನ್ನುವುದಾದರೂ ಎಷ್ಟು ಎಂದು

 “ನನ್ನ ಬದುಕಿಗಿಂತ ಅವರದು ವಾಸಿ” ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣರ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಲಿಂಗತತ್ವ ನಿಷ್ಠ. ಹಡಪದ ಅಪ್ಪಣ್ಣ ಸಂಗಮೇಶ್ವರ ಅಪ್ಪಣ್ಣ ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಕಾಲ – ಹನ್ನೆರಡನೆಯ ಶತಮಾನ ಬಸವ ಸಮಕಾಲೀನ ಶರಣಒಟ್ಟು ವಚನಗಳು – 102 +250=352ಅಂಕಿತ: ಬಸವಪ್ರಿಯ ಕೂಡಲ ಚೆನ್ನಸಂಗಮದೇವ ,/ ಬಸವ ಪ್ರಿಯ ಚೆನ್ನಬಸವಣ್ಣ ಊರು- ಕೂಡಲ ಸಂಗಮ ,ಮುಸುಬಿನಾಳ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನಕಾರರು ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿ. ಇವರು ಬಸವಣ್ಣನವರ ಬಲಗೈ ಬಂಟರೆಂದು ಪ್ರಸಿದ್ಧರು. ‘ಅನುಭವ ಮಂಟಪದಲ್ಲಿ’ ಪ್ರಮುಖ ಪಾತ್ರ ವಹಿಸಿದ್ದರು. ಇವರು ‘ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದಲ್ಲಿ 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಇವರ ಪತ್ನಿ ಲಿಂಗಮ್ಮನವರು ಕೂಡ ವಚನಗಾರ್ತಿಯಾಗಿದ್ದರು        ಅಪ್ಪಣ್ಣನ  ಹೆಸರಿನ ಹಿಂದೆ ಸೇರಿದ ‘ಸಂಗಮೇಶ್ವರ’ (ಕೂಡಲಸಂಗಮ) ಈತನ ಸ್ಥಳವಾಗಿರಬೇಕು. ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ಬೋಧೆ ಕಾಯಕ ದಾಸೋಹದ ಮಹತ್ವ ಮುಂತಾದ ಅನೇಕ ವಿಷಯಗಳ ಮೇಲೆ ಭಿನ್ನ ಚಿಂತನೆ ನಡೆಸಿದವರು.   ಎಲ್ಲವೂ ತಾತ್ವಿಕವಾಗಿವೆ. ಅನ್ಯಮತ ಖಂಡನೆ, ಶಿವಪಾರಮ್ಯ ಸ್ಥಾಪನೆಗೆ ವಿಶೇಷ ಸ್ಥಾನ ಸಂದಿದೆ. ಶರಣಸ್ತುತಿ, ಶೂನ್ಯಸಿಂಹಾಸನ, ಅನುಭವ ಮಂಟಪಗಳ ಉಲ್ಲೇಖ, ಪ್ರಭುದೇವರು ಕಲ್ಯಾಣಕ್ಕೆ ಬಂದ ಪ್ರಸಂಗ ಮತ್ತು ಆರೋಗಣೆ ನಡೆಸಿದ ಸಂದರ್ಭಗಳನ್ನು ಪ್ರಸ್ತಾಪಿಸುವುದು ಮಹತ್ವದ ಅಂಶಗಳೆನಿಸಿವೆ. ತುಂಬ ದೀರ್ಘವಾಗಿದ್ದು ಗದ್ಯಲಕ್ಷಣವನ್ನು ಹೊಂದಿದ ರಚನೆಗಳ ಜೊತೆಗೆ ಮುಕ್ತಕ ರೂಪದ ವಚನಗಳೂ ಸಮಾವೇಶಗೊಂಡಿವೆ.   ಲಿಂಗತತ್ವ  ಸಂಗಮೇಶ್ವರ ಅಪ್ಪಣ್ಣನಿಗೆ ಅಪಾರವಾಗಿದೆ. ತರ್ಕ ಶಕ್ತಿ ಅಗಾಧವಾಗಿದೆ. ಲಿಂಗಾಯತ ತತ್ತ್ವ ಪ್ರತಿಪಾದನೆ ವಿಶೇಷವಾಗಿ ಕಂಡು ಬರುತ್ತದೆ. ಶಿವಪಾರಮ್ಯ, ಅನ್ಯಮತ ಖಂಡನೆ, ಬ್ರಾಹ್ಮಣರ ಕರ್ಮಠತನದ ಖಂಡನೆ, ಅಷ್ಟಾವರಣ, ಪಂಚಾಚಾರಗಳ ವಿವರಣೆ ಇವನ ವಚನಗಳಲ್ಲಿ ಬಂದಿದೆ. ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ   ಇತ್ತೀಚಿನ ನನ್ನ ಅಧ್ಯಯನ ಮತ್ತು ಸಂಶೋಧನೆಯಿಂದ ನಾನು ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಎಂದು ಖಚಿತ ಪಡಿಸಲು ಇಚ್ಛಿಸುತ್ತೇನೆ . ಇದಕ್ಕೆ ಕೆಲ ಪುರಾವೆಗಳನ್ನೂ ಇಲ್ಲಿ ನೀಡುತ್ತಿದ್ದೇನೆ. 1 ವಚನಾಂಕಿತ –  ಬಸವಪ್ರಿಯ ಕೂಡಲ ಚೆನ್ನಸಂಗಮದೇವ -ಈ ವಚನಾಂಕಿತ ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣನವರ ವಚನಾಂಕಿತವಾಗಿದ್ದು ಇಬ್ಬರೂ ಒಬ್ಬರೇ ಎನ್ನುವ ನಿರ್ಧಾರ ಬಲವಾಗುತ್ತದೆ. 2 ಇಬ್ಬರ ವಚನಗಳಲ್ಲಿ -ಲಿಂಗ ತತ್ವ ಷಟಸ್ಥಲ, ಸಿದ್ಧಾಂತ ಅಪಾರವಾಗಿ ಕಂಡು ಬರುತ್ತದೆ. ವಚನ ರಚನಾ ಕೌಶಲ್ಯ,ಭಾವ,ಚಿಂತನೆಗಳು ಒಂದೇ ರೀತಿಯಾಗಿ ಕಂಡು ಬರುತ್ತವೆ.3 ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪಣನವರ ವಚನಗಳಲ್ಲಿ ತಮ್ಮ ಬಸವಣ್ಣನವರ ಸಂಬಂಧವು ಎದ್ದು ಕಾಣುತ್ತದೆ,ಹೀಗಾಗಿ ಇಬ್ಬರೂ ಬೇರೆ ಬೇರೆ ಅಲ್ಲ ಒಬ್ಬರೇ ಎಂದು ನಿರ್ಧರಿಸಬಹುದು. 3 ಹಡಪದ ಅಪ್ಪಣ್ಣ ಬಾಗೇವಾಡಿಯ ಹತ್ತಿರದ ಮುಸುಬಿನಾಳ ಗ್ರಾಮದವನು, ಅವನ ಹೆಂಡತಿ ಲಿಂಗಮ್ಮ ಅದೇ ಊರಿನ ಹೂಗಾರ ನಾಗಪ್ಪನ ಮಗಳು ಎಂದು ಇತ್ತೀಚಿನ ಅಧ್ಯಯನ ಮತ್ತು ಸಂಶೋಧನೆಯಿಂದ ತಿಳಿದು ಬರುತ್ತದೆ. ಬಾಲಕ ಬಸವಣ್ಣ ಬಾಗೇವಾಡಿ ಅಗ್ರಹಾರದ ವಿರುದ್ಧ ಬಂಡೆದ್ದು ಮನೆ ಬಿಟ್ಟು ಹೋಗುವಾಗ ಅಕ್ಕ ಅಕ್ಕನಾಗಮ್ಮ  ಪತಿ ಶಿವಸ್ವಾಮಿ ಜೊತೆಗೆ ಹಿರಿಯ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಅವರ ಜೊತೆಗೆ ಕೂಡಲ ಸಂಗಮಕ್ಕೆ ಹೋಗಿರಬಹುದು , ಹನ್ನೆರಡು ವರುಷ ಕೂಡಲ ಸಂಗಮ್ಮದಲ್ಲಿ ಇದ್ದು ತನ್ನ ಕಾಯಕ ಮಾಡುತ್ತಾ ಬಸವಣ್ಣನವರ ಅಧ್ಯಯನಕ್ಕೆ ಸಹಾಯ ಮಾಡುತ್ತ ಮುಂದೆ ಮಂಗಳವೆಡೆಗೆ ಹೋಗಿ ಬಸವಣ್ಣನವರ ನೆರಳಂತೆ ನಿಂತದ್ದು ಸ್ಪಷ್ಟವಾಗಿ ಕಂಡು ಬರುತ್ತದೆ. 4 ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲಸಂಗಮವಾಗಿದ್ದು  ಬಾಗೇವಾಡಿ ಅಗ್ರಹಾರ ತೊರೆದ ಬಸವಣ್ಣನಿಗೆ ಆಶ್ರಯಕ್ಕೆ ಬಂದಿದ್ದು ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲ ಸಂಗಮ, ಸಹೋದರ ಮಾವ ಬಲದೇವನು ಸಹಾಯ ಮಾಡಿದ್ದೂ ಗಮನಾರ್ಹ, ಇದನ್ನು ಜಾನಪದ ಕವಿಗಳು ಹೇಳುತ್ತಾರೆ. 5 ಬಹಳ ವರ್ಷಗಳವರೆಗೆ ಹಡಪದ ಅಪ್ಪಣ್ಣ ಕೂಡಲ ಸಂಗಮದಲ್ಲಿ ಇದ್ದ ಕಾರಣ ಅವನನ್ನು ಕಲ್ಯಾಣದ ಶರಣರು  ಆರಂಭದಲ್ಲಿ ಸಂಗಮೇಶ್ವರ ಅಪ್ಪಣ್ಣ ಎಂದು ಕರೆದಿರಬಹುದು, ಮುಂದೆ  ಅಪ್ಪಣ್ಣ ಕಲ್ಯಾಣಕ್ಕೆ ಬಂದ ಮೇಲೆ ಬಸವಣ್ಣನವರ ಆಪ್ತ  ಕಾರ್ಯದರ್ಶಿಯಾಗಿ ನೇಮಕ ಗೊಂಡ ಮೇಲೆ ಆಡಳಿತದ ಆಸ್ಥಾನದ ಕಡತಗಳನ್ನು,ಕಚೇರಿ ಪತ್ರಗಳನ್ನು,ಮಂತ್ರಿಯ ಆದೇಶಗಳನ್ನು ಇಡಲು ಅಡಪ ( ಕಟ್ಟಿಗೆಯ ಡಬ್ಬಿ) ತನ್ನೊಂದಿಗೆ ಇಡುತ್ತಿದ್ದನು.    ಕಲ್ಯಾಣಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಬಲು ದೊಡ್ಡದು, ಬಸವಣ್ಣನವರ ಯೋಜನೆ ಚಿಂತನಾಕ್ರಮದಲ್ಲಿ ಪಾಲ್ಗೊಂಡ ವೈಚಾರಿಕ ಶರಣ, ಬಸವಣ್ಣನವರ ಆಸೆಯಂತೆ ಹಡಪದ ಅಪ್ಪಣ್ಣನವರು ನೀಲಾಂಬಿಕೆಯನ್ನು ಕೂಡಲ ಸಂಗಮಕ್ಕೆ ಕರೆ ತರಲು ಹೇಳಿದಾಗ, ಅವರ ಆದೇಶದಂತೆ ಅಪ್ಪಣ್ಣನವರು ನೀಲಮ್ಮನನ್ನು ಕರೆದುಕೊಂಡು ಬರುವಾಗ ತಂಗಡಗಿಗೆ ಬಂದಾಗ ಬಸವಣ್ಣನವರ ಸಾವಿನ ಸುದ್ಧಿ ಕೇಳಿ ಬರುತ್ತದೆ, ಆಗ ನೀಲಮ್ಮ ಮತ್ತು ಅಪ್ಪಣ್ಣನವರು ಅಲ್ಲಿಯೇ ಐಕ್ಯವಾಗಿದ್ದು ನದಿಯ ದಡದಲ್ಲಿ ಇಬ್ಬರ ಸಮಾಧಿಯ ಕುರುಹು ಸ್ಮಾರಕಗಳು ಕಂಡು ಬರುತ್ತವೆ.             ಸಂಗಮೇಶ ಅಪ್ಪಣ್ಣನವರ ಕೆಲ  ವಚನಗಳಅಂಗ ಲಿಂಗವೆಂದರಿದಾತಂಗೆ, ಅಂಗದಲೆ ಐಕ್ಯ.ಕಂಗಳು ಲಿಂಗವೆಂದರಿದಾತಂಗೆ, ಕಂಗಳಲೆ ಐಕ್ಯ.ಕರವೆ ಲಿಂಗವೆಂದರಿದಾತಂಗೆ, ಕರದಲೆ ಐಕ್ಯ.ಈ ತ್ರಿವಿಧದ ನೆಲೆಯ, ಶ್ರುತಿ ಸ್ಮೃತಿಗಳರಿಯವು.ಎಮ್ಮ ಬಸವಪ್ರಿಯ ಕೂಡಲಚನ್ನಸಂಗಮದೇವನಲ್ಲಿಈ ಇರವ ಶರಣರೆ ಬಲ್ಲರು./1 ಅಂಗದ ಕಳೆ ಲಿಂಗದಲ್ಲಿ ಲೀಯವಾಗದು.ಲಿಂಗದ ಕಳೆ ಅಂಗದಲ್ಲಿ ಲೀಯವಾಗದು.ಮಾತಿನಮಾಲೆಯ ಬೊಮ್ಮವೇತರದೊ ?ಕಾಯ ಭಕ್ತನಾದರೆ ಭೃತ್ಯಾಚಾರವಿರಬೇಕು.ಪ್ರಾಣ ಜಂಗಮವಾದಡೆ ಅರಿದಿರಬೇಕು.ಇಂತು ಭಕ್ತಿಜ್ಞಾನವುಳ್ಳವರಲ್ಲದೆ ಭಕ್ತರಲ್ಲ, ಶರಣರಲ್ಲ.ಹಿರಿಯರು ಬಂದಡೆ ಇದಿರೆದ್ದು ಬಾರದವರ ಮನೆಗೆ ಅಡಿಯ ಇಡೆವೆಂದು,ಬಸವಪ್ರಿಯ ಕೂಡಲಚನ್ನಸಂಗನ ಶರಣರು ಕಾಡಿಹರು ಕಾಣಾ,ಸಂಗನಬಸವಣ್ಣಾ./2 ಅಂದಂದಿಗೆ ನೂರು ತುಂಬಿತ್ತೆಂಬ ದಿಟವಿರಬೇಕು.ಸಂದ ಪುರಾತನರ ನೆನೆಯುತ್ತಿರಬೇಕು.ಜಂಗಮ ಮಠಕ್ಕೆ ಬಂದಡೆ, ವಂಚನೆಯಿಲ್ಲದೆ ಮಾಡಬೇಕು.ಎನಗಿದೇ ವರವನೀವುದು, ಬಸವಪ್ರಿಯ ಕೂಡಲಚನ್ನಸಂಗಮದೇವಾ./4 ಅಗ್ಗದ ಹರಿಬ್ರಹ್ಮರ ಮರೆದೊಮ್ಮೆ ಹರಂಗೆ ಸಮವೆಂದಡೆ,ಅವನು ಚಾಂಡಾಲನು. ಅವನ ಮುಖವ ನೋಡಲಾಗದು.ಅದೆಂತೆಂದಡೆ: ಯೋ ಮಹಾದೇವಮನ್ಯೇನ ಹೀನದೇವೇನ ದುರ್ಮತಿಃ |ಸಕೃತ್ಸಾಧಾರಣಂ ಬ್ರೂಯಾದಂತ್ಯಜಾನಾಂತ್ಯಜೋಂತಜಃ ||ಇಂತೆಂದುದಾಗಿ, ನಿಮಗೆ ಕಿರುಕುಳದೈವಂಗಳ ಸಮವೆಂದುಬಗಳುವನ ಬಾಯಿ ಪಾಕುಳತಪ್ಪದು,ಬಸವಪ್ರಿಯ ಕೂಡಲಚನ್ನಸಂಗಮದೇವಾ./5 ಅಜಹರಿಸುರರೆಲ್ಲರು ಅಳಿದವರಲ್ಲದೆ, ಉಳಿದವರಿಲ್ಲ.ಶಿವನೆ ನಿತ್ಯನೆಂದು ಹೊಡೆವಡುತ್ತಿವೆ ವೇದ.ಉತೈನಂ ವಿಶ್ವಾಭೂತಾನಿ ಸದೃಷ್ಟೋ ಮೃಡಯಾತಿನಃ |ನಮೋಸ್ತು ನೀಲಗ್ರೀವಾಯ ಸಹಸ್ರಾಕ್ಷಾಯ ಮೀಡುಷೇ ||ಎಂಬ ಶ್ರುತಿ, ಬಸವಪ್ರಿಯ ಕೂಡಲಚನ್ನಸಂಗಯ್ಯನೊರ್ವನೆನಿತ್ಯನೆಂದು ಹೊಗಳುತ್ತಲಿದೆ./7 ಅನಿಮಿಷನಾದ ನಿಬ್ಬೆರಗಿನ ಲಿಂಗೈಕ್ಯನು, ಭಾವ ನಿರ್ಭಾವವನೆಯ್ದಿ,ಜ್ಞಾನವೆ ಪರಮಾಶ್ರಯವಾಗಿಪ್ಪ ಲಿಂಗೈಕ್ಯನು,ಮಹವನೊಳಕೊಂಡ ಮಹಿಮ ಲಿಂಗೈಕ್ಯನು,ಬಸವಪ್ರಿಯ ಕೂಡಲ ಚನ್ನಸಂಗಯ್ಯಾ ನಿಮ್ಮ ಶರಣ ಪ್ರಭುದೇವರು./9 ಅನೇಕ ಪರಿಯ ಭಕ್ತಿಯ ವೇಷವನಳವಡಿಸಿಕೊಂಡು,ಮನೆಮನೆದಪ್ಪದೆ ತಿರುಗುವೆನು.ಅವರ ಇಚ್ಛಿಗೆ ಅನುಮಾನವಿಡಿದು ನುಡಿವೆನು.ಅವರ ಮನಧರ್ಮವನರಿಯದೆ ನುಡಿದೆನಾದಡೆ,ಅನೇಕ ಪರಿಯಲ್ಲಿ ಭಂಗಬಡುವೆನು.ದಿಟದ ಭಕುತನಂತೆ,ಪುರಾತರ ವಚನಂಗಳ ಉದರ ನಿಮಿತ್ತವಾಗಿ ಬಳಸುವೆನು.[ಕಡು] ಪಾಪಿಗಿನ್ನೇನು ಹದನಯ್ಯ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ ?/10 ಅಯ್ಯಾ ಎನ್ನ ಹಲ್ಲ ಮರೆಯಲ್ಲಿಪ್ಪ ಬೆಲ್ಲವ ಕಂಡು, ಎಲ್ಲರೂ ಮೆಲಬಂದರು.ಬೆಲ್ಲಗಳಿದ್ದಡೆ ನಿಲಲೀಸದೆ ಎನ್ನ ಕಾಡುತ್ತಿದಾರೆಯೆಂದು,ಆ ಬೆಲ್ಲವನಲ್ಲಿಯೆ ನುಂಗಿದಡೆ, ಹಲ್ಲು ಮುರಿದವು.ಮೆಲಬಂದವರೆಲ್ಲ ಅಲ್ಲಿಯೆ ಬಯಲಾದರು.ನಾ ನಿಮ್ಮಲ್ಲಿ ಕೂಡಿ ಸುಖಿಯಾದೆನಯ್ಯಾ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ./11 ಅಯ್ಯಾ ಮರದೊಳಗಣ ಕಿಚ್ಚು ಮರನ ಸುಡುತ್ತಿದ್ದಿತ್ತಯ್ಯಾ.ಮರ ಬೆಂದು ನಿಂದುರಿಯಿತ್ತು , ಮಣ್ಣು ಜರಿದು ಬಿದ್ದಿತ್ತು.ಉರಿ ಹೊಗೆ ನಂದಿತ್ತು , ಸ್ವಯಂಪ್ರಕಾಶವಾಗಿಪ್ಪ ಉರಿ ಉಳಿಯಿತ್ತು.ಆ ಉರಿ ಬಂದು ಎನ್ನ ಕರಸ್ಥಲದಲ್ಲಡಗಿತ್ತು .ಇದ ಕಂಡು, ನಾ ಬೆರಗಾಗಿ ನೋಡುತ್ತಿದ್ದೆನಯ್ಯಾ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ./12 ಅಲ್ಲಿಂದತ್ತ ಪಶ್ಚಿಮಚಕ್ರಕ್ಕೆ ಏಕದಳ ಪದ್ಮ,ಹವಣಿಸಬಾರದ ತೇಜ, ಏಕಾಕ್ಷರ,ಕುರುಹಿಡಬಾರದ ನಾದ, ಅಪ್ರದರ್ಶನ ವರ್ಣ,ನಿಭರ್ಿನ್ನ ಶಕ್ತಿ, ಸರ್ವಾತ್ಮನೆಂಬ ಜಂಗಮವೆ ಅಧಿದೇವತೆ.ಪರಿಪೂರ್ಣ ಜಂಗಮಲಿಂಗ, ಅಕ್ಷರಾಕ್ಷ[ರ]ತೀತ, ನಿಶ್ಶಬವಾಗಿಪ್ಪುದು.ಇಂತಪ್ಪ ಲಿಂಗಾಂಗವೆ ತಾನಾಗಿ, ಅವಿರಳ ಜಂಗಮಭಕ್ತಿಯ ಮಾಡಬಲ್ಲಾತನೆ,ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿಸಂಗನಬಸವಣ್ಣನಯ್ಯಾ, ಪ್ರಭುವೆ./16 ಎನ್ನ ತನು ನಿಮ್ಮ ಸೇವೆಯಲ್ಲಿ ಸವೆದು,ಎನ್ನ ಮನ ನಿಮ್ಮ ನೆನಹಿನಲ್ಲಿ ಸವೆದು,ಎನ್ನರಿವು ನಿಮ್ಮ ಘನದೊಳಗೆ ಸವೆದು, ನಿಶ್ಚಲ ನಿಜೈಕ್ಯವಾಗಿ,ಬಸವಪ್ರಿಯ ಕೂಡಲಚೆನ್ನಸಂಗಯ್ಯಾ,ನೀ ನಾನೆಂಬುದೇನಾಯಿತ್ತೆಂದರಿಯೆನು./24 ಹಡಪದ ಅಪ್ಪಣ್ಣನವರ ಕೆಲ ವಚನಗಳು ಅಂಗ ಲಿಂಗವಾಯಿತ್ತೆಂಬಿರಿ, ಲಿಂಗ ಅಂಗವಾಯಿತ್ತೆಂಬಿರಿ.ಅಂಗ ಲಿಂಗ ಸಂಬಂಧ ಎಲ್ಲರಿಗೆ ಎಂತಾಯಿತ್ತು ಹೇಳಿರಣ್ಣಾ.ಅಂಗ ಲಿಂಗ ಸಂಬಂಧವಾದರೆ, ಗುರುವಿನಲ್ಲಿ ಗುಡ್ಡನಾಗಿರಬೇಕು,ಲಿಂಗದಲ್ಲಿ ನಿಷ್ಠನಾಗಿರಬೇಕು, ಜಂಗಮದಲ್ಲಿ ಅವಧಾನಿಯಾಗಿರಬೇಕು.ಇವ ಮೂರರಲ್ಲಿ ದೂರಾಗಿಪ್ಪರ ಎನಗೊಮ್ಮೆ ತೋರದಿರಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ಕರವನರಿದಂಗೆ ಕಮಲದ ಹಂಗೇಕೊ?ಇರವನರಿದಂಗೆ ಪರದ ಹಂಗೇಕೊ ?ಪರವನರಿದಂಗೆ ಇರವದ ಹಂಗೇಕೊ?ಇಹ ಪರವೆಂಬ ಉಭಯವಳಿದ ಶರಣಂಗೆಮರ್ತ್ಯದ ನರರ ಹಂಗೇಕೊ ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ? ಮನವನರಿದಂಗೆ ಮತದ ಹಂಗೇಕೊ ?ನಿತ್ಯವನರಿದಂಗೆ ತೀರ್ಥದ ಹಂಗೇಕೊ ?ಪರಮಾರ್ಥವನರಿದಂಗೆ ಪ್ರಸಾದದ ಹಂಗೇಕೊ ?ಜ್ಯೋತಿಯನರಿದಂಗೆ ಕತ್ತಲೆಯ ಹಂಗೇಕೊ?ಲೋಕವನರಿದಂಗೆ ವ್ಯಾಕುಲದ ಹಂಗೇಕೊ?ಈ ತೆರನನರಿದಂಗೆ ಮುಂದಾವ ಭೀತಿಯುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?  ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪನವರ ವಚನಗಳಲ್ಲಿ ಸಾಮ್ಯತೆಯಿದೆ . ಬಹುತೇಕ ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ತಾತ್ವಿಕ ಚಿಂತೆಗಳಲ್ಲಿ ಸಾಮ್ಯತೆ ಎದ್ದು ಕಾಣುತ್ತದೆ.  ಹೀಗಾಗಿ ಇವರಿಬ್ಬರೂ ಒಬ್ಬರೇ ಎನ್ನುವ ತೀರ್ಮಾನಕ್ಕೆ ಬರಲಾಗುವುದು.   ಹಡಪದ ಅಪ್ಪಣ್ಣ ಕ್ಷೌರಿಕ ವೃತ್ತಿಯವನೇ  ? ಹೀಗಾಗಿ ಅಡಪ  ಜನಬಳಕೆಯಲ್ಲಿ ಹಡಪ ಆಗಿದೆ ಅಡಪವನ್ನು ಇಟ್ಟುಕೊಂಡವ  ಅಡಪದವ ಅಥವಾ ಹಡಪದ  ಎಂದು ಬಂದಿದೆ.ಕಲ್ಯಾಣದ  ಚಾಲುಕ್ಯರ ಕಳಚೂರ್ಯರ ರಾಜ್ಯದ ವಿಸ್ತಾರ ಎಷ್ಟಿತ್ತಂದರೆ ಛಪ್ಪನ್ನೈವತ್ತಾರು ರಾಜ್ಯಗಳಿದ್ದವು ಎಂದು ಬಸವಣ್ಣನವರ ವಚನವೊಂದರಲ್ಲಿ ಕಾಣಬಹುದು. ಮಹಾರಾಷ್ಟ್ರದ ಮಂಗಳವೆಡೆ, ಉದ್ಗೀರ, ಲಾತೂರ, ಸೋಲಾಪುರ,  ತುಳಜಾಪುರ,  ಪಂಡರಾಪುರ ಜತ್ತ ಅಕ್ಕಲಕೋಟ ಮುಂತಾದ ಪ್ರದೇಶಗಳ  ಭೂ ಪ್ರದೇಶವು ಆಂಧ್ರ ವೆಂಗಿಪಳು ಕರ್ನಾಟಕ ಮುಂತಾದ ಪ್ರದೇಶಗಳನ್ನು  ಮುಂತಾದ ಕಡೆಗಳಲ್ಲಿ ಚಾಲುಕ್ಯ ರಾಜ್ಯರ ಆಡಳಿತದ ಶಿಲ್ಪ ಕಲೆ ಶಾಸನಗಳು ಮತ್ತು ಗುಡಿ ಗೋಪುರಗಳ ಶೈಲಿ ಚಾಲುಕ್ಯರದ್ದಾಗಿತ್ತು.       ಬಿಜ್ಜಳನೂ ಕ್ಷೌರಿಕ ಕುಲದ ಶೈವನೆಂದು ಕೆಲ ಸಂಶೋಧಕರು ತಮ್ಮ ಅಭಿಮತ ವ್ಯಕ್ತ ಪಡಿಸಿದ್ದಾರೆ. ಹಡಪದ ಅಪ್ಪಣ್ಣ ಅವನ ಹೆಂಡತಿ ಮುಸುಬಿನಾಳ ಹೂಗಾರ ನಾಗಪ್ಪನ ಮಗಳು ಲಿಂಗಮ್ಮ ಎಂದು ತಿಳಿದು ಬರುತ್ತದೆ.    ಬಸವಣ್ಣ ಬಿಜ್ಜಳನ ಪ್ರಧಾನಿ ಅರ್ಥ ಸಚಿವ ದಂಡನಾಯಕನಾಗಿದ್ದನು ಇವರ ಆಪ್ತ ಕಾರ್ಯದರ್ಶಿಯಾಗಿ ಹಡಪದ ಅಪ್ಪಣ್ಣ ಕಲ್ಯಾಣದಲ್ಲಿ ಕ್ಷೌರಿಕ ವೃತ್ತಿಯನ್ನು ಕೈಗೊಂಡಿದ್ದನು ಎಂದೆನ್ನುವುದು ನನ್ನ ದೃಷ್ಟಿಯಲ್ಲಿ ಸರಿ ಅನಿಸುವುದಿಲ್ಲ. ರಾಜ್ಯಾಡಳಿತ ದಾಖಲೆಗಳು ಕಾಗದ ಪಾತ್ರಗಳು ಬೇರೆ ಬೇರೆ ರಾಜರ ಸಾಮಂತರ ಒಲೆಗಳು ಮುಂತಾದ ಅನೇಕ ಮಹತ್ತರ ದಾಖಲೆಗಳನ್ನು ಸಂಗ್ರಹಿಸಿ ಇಡಲು ಕಟ್ಟಿಗೆಯಿಂದ ಮಾಡಿದೆ ಒಂದು ಡಬ್ಬಿ ಅದಕ್ಕೆ ಈಗಲೂ ಅಡಪ ಎಂದು ಉತ್ತರ ಕರ್ನಾಟಕದಲ್ಲಿ ಕರೆಯುತ್ತಾರೆ.  ಮಹಾ ಮನೆಯಲ್ಲಿ ಪ್ರಸಾದವಾದ ಮೇಲೆ  ತಾಂಬೂಲ ವಿತರಿಸುವ ರೇಚಣ್ಣನೂ ಅಡಪವನ್ನು ಹೊಂದಿದ್ದನ್ನು . ಅಡಪವನ್ನು ಹೊಂದಿದವ ಅಡಪದವ ಅಥವಾ ಹಡಪದ ಎಂಬ ತಪ್ಪು ಉಚ್ಚಾರಣೆಯಿಂದಾಗಿ ಹಡಪದ ಎಂದು ಹೆಸರು ಬಂತು.  ಕ್ಷೌರಿಕ ಕಾರ್ಯವನ್ನು ಮಾಡುವವರು ಈಗಲೂ ಕೂಡ ಹಳ್ಳಿಯಲ್ಲಿ ಅಡಪವನ್ನು ಇಟ್ಟುಕೊಂಡು ಮನೆ ಮನೆಗೆ ಹೋಗಿ ಕ್ಷೌರಿಕ ಸೇವೆ ಮಾಡುತ್ತಾರೆ. ಹಡಪದ ಅಪ್ಪಣ್ಣನವರು ಕ್ಷೌರಿಕ ಕುಲದಲ್ಲಿ ಹುಟ್ಟಿದರೂ ಸಹಿತ ಅವರು ಪ್ರಧಾನಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ಮಾಡಿದರು ಎಂದು ತಿಳಿದು ಬರುತ್ತದೆ.     ಚೆನ್ನಬಸವಣ್ಣನವರ ಮೇಲೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮರ  ಪ್ರಭಾವ  ಬಸವಣ್ಣನವರು ಬಾಗೇವಾಡಿ ಅಗ್ರಹಾರವನ್ನು ಬಿಟ್ಟು ಕೂಡಲ ಸಂಗಮಕ್ಕೆ ಹೋಗುವಾಗ ಅಕ್ಕನಾಗಮ್ಮ ಮತ್ತು ಅವಳ ಪತಿ ಶಿವಸ್ವಾಮಿಗಳ ಜೊತೆಗೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರೂ ಹೋಗಿದ್ದರು. ಹಡಪದ ಅಪ್ಪಣ್ಣ ಕೂದಲ ಸಂಗಮ್ಮದಲ್ಲಿ ಮಾದಲಾಂಬಿಕೆಯ ತವರು ಮನೆಯಲ್ಲಿ ಕೃಷಿ ಮಾಡುತ್ತಿರಬಹುದು ಅಥವಾ ಬಸವಣ್ಣನವರು ತಮ್ಮ ಶಿಕ್ಷಣವನ್ನು  12 ವರುಷ  ಕೂಡಲ ಸಂಗಮದಲ್ಲಿ ಮಾಡುತ್ತಿರುವಾಗ  ಕ್ಷೌರಿಕ ವೃತ್ತಿಯನ್ನು ಮಾಡುತ್ತಿರಬಹುದು. ಬಲದೇವರ ಆಮಂತ್ರಣದ ಮೇರೆಗೆ ಬಸವಣ್ಣ ಅಕ್ಕನಾಗಮ್ಮ ಬಾಲಕ ಚೆನ್ನಬಸವಣ್ಣ ಮತ್ತು ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಮಂಗಳವೇಡೆಗೆ ಹೋದರು.          ಹಡಪದ  ಅಪ್ಪಣ್ಣ ಮತ್ತು ಲಿಂಗಮ್ಮ

Read Post »

You cannot copy content of this page

Scroll to Top