ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಸುಕನಸು ಅವರ‌ ಗಜಲ್

ಕಾವ್ಯ ಸಂಗಾತಿ ಸುಕನಸು ಗಜಲ್ ಬಾ ಅಪರಿಚಿತರಾಗೊಣ  ಮತ್ತೊಮ್ಮೆ ಗೆಳೆಯನೀ ಮರೆತು ಸಹ ಸಿಗದಿರು ಇನ್ನೊಮ್ಮೆ ಗೆಳೆಯ ಸದಾ ನಿನ್ಹೆಸರ ಜಪಿಸುವ ಮನಕೇನು ಸಂತೈಸಲಿನೆನಪುಗಳ ಕೊಂದ್ಹೋಗೂ ಬಂದೊಮ್ಮೆ ಗೆಳೆಯ ಜೊತೆ ಇಟ್ಟ ಹೆಜ್ಜೆಗಳ ಲೆಕ್ಕ ಎಲ್ಲಿದೆ ಸಂತೃಪ್ತಿಯಷ್ಟೆಮುಂದೆಂದೂ ಸಿಗದಂತೆ ಶಪಥ ಮಾಡೊಮ್ಮೆ ಗೆಳೆಯ ಮನ ತಬ್ಬಿಬಾಗಿದೆ ತಳ್ಳಿ ಹೋದ ಕಾರಣ ತಿಳಿಯದೆತೊರೆದು ಹೋದ ನೆಪ ಹೇಳಿ ಹೋಗೊಮ್ಮೆ ಗೆಳೆಯ ಸುಮದ ಪರಿಮಳವೆ ಅಪಾರವಾಯಿತು ನವಿರಲ್ಲವಒಲವಿಲ್ಲ ಲಾಲಶೆಯಷ್ಟೆಯೆಂದು ಹೇಳೊಮ್ಮೆ ಗೆಳೆಯ ಸುಕನಸು

ಸುಕನಸು ಅವರ‌ ಗಜಲ್ Read Post »

ಕಾವ್ಯಯಾನ

ಎನ್.ಜಯಚಂದ್ರನ್ ದಾಂಡೇಲಿ “ಚಿತೆಯ ಹೊಗೆಯಲ್ಲಿ ಕಳೆದುಹೋದ ಸತ್ಯ”

ಕಾವ್ಯ ಸಂಗಾತಿ ಎನ್.ಜಯಚಂದ್ರನ್ ದಾಂಡೇಲಿ “ಚಿತೆಯ ಹೊಗೆಯಲ್ಲಿ ಕಳೆದುಹೋದ ಸತ್ಯ” ಬದುಕಿದ್ದಾಗ…ಅವನ ಮನೆಯ ಬಾಗಿಲು ತಟ್ಟಿದರೂತೆರೆದದ್ದು ಯಾರ ಮನಸ್ಸೂ ಅಲ್ಲ. ಹಸಿವೆಂದು ಕೈ ಚಾಚಿದಾಗಒಂದು ತುತ್ತು ಅನ್ನಕ್ಕೂ ಲೆಕ್ಕ ಹಾಕಿದ ಜನ,ದುಃಖವೆಂದು ಕಣ್ಣೀರು ಸುರಿಸಿದಾಗಒಂದು ಹೆಗಲನ್ನೂ ನೀಡದ ಬಂಧುಗಳು. ಅವನ ಉಸಿರು ಇರುವಾಗಅವನ ಮಾತಿಗೆ ಬೆಲೆ ಇರಲಿಲ್ಲ;ಉಸಿರು ನಿಂತ ಕ್ಷಣದಿಂದಲೇಅವನ ಮೌನಕ್ಕೆ ಬೆಲೆ ಕಟ್ಟಲು ಹೊರಟರು. ಚಿತೆಯ ಬೆಂಕಿ ಹೊತ್ತಿತು…ದೇಹ ಬೂದಿಯಾಯಿತು…ಆದರೆ ಸುಟ್ಟು ಹೋದದ್ದು ದೇಹವಲ್ಲ—ಸಮಾಜದ ಕಪಟ ಮುಖವಾಡ. ಅಂತ್ಯಸಂಸ್ಕಾರಕ್ಕೆಸಾವಿರ ಜನ ಸೇರಿದರು;ಬದುಕಿನ ದಾರಿಯಲ್ಲಿಅವನೊಂದಿಗೆ ನಡೆದದ್ದುಅವನ ನೆರಳು ಮಾತ್ರ. ಮೂರನೇ ದಿನ…ಹತ್ತನೇ ದಿನ…ವಾರ್ಷಿಕ…ನಂತರ ಜಾತ್ರೆ… ವೇದಿಕೆ ಕಟ್ಟಿದರು.ಹೂವಿನ ಹಾರ ಹೊದಿಸಿದರು.ಅವನ ಹೆಸರಿನಲ್ಲಿ ಧ್ವಜ ಹಾರಿಸಿದರು.ನಿನ್ನೆ ಅವನನ್ನು ತಿರಸ್ಕರಿಸಿದವರೇಇಂದು ಹೊಗಳಿಕೆಯ ಹೊಳೆ ಹರಿಸಿದರು. “ಅವನು ಮಹಾನ್…” ಎಂದರು.“ಅವನು ಸಮಾಜದ ಬೆಳಕು…” ಎಂದರು.“ಅವನಂತವರು ಅಪರೂಪ…” ಎಂದರು. ಆ ಮಾತುಗಳನ್ನು ಕೇಳಿಕಾಲವೇ ಕಹಿಯಾಗಿ ನಕ್ಕಿತು. ಏಕೆಂದರೆ—ಅವನು ಬದುಕಿದ್ದಾಗಈ ಒಂದು ಮಾತನ್ನಾದರೂಅವನ ಕಿವಿಗೆ ಹೇಳಿರಲಿಲ್ಲ! ಜಾತ್ರೆಯ ದಿನಹೊಟ್ಟೆತುಂಬ ಊಟ,ಕೈತುಂಬ ಕಾಣಿಕೆ,ವೇದಿಕೆಯ ಮೇಲೆ ಭಾಷಣ,ಕೆಳಗೆ ಚಪ್ಪಾಳೆ… ಜಾತ್ರೆ ಮುಗಿದ ಮೇಲೆ? ಹೂವು ಒಣಗಿತು.ವೇದಿಕೆ ತೆರವಾಯಿತು.ಜನರು ಮರೆಯಾದರು.ಅವನ ಹೆಸರೂಮತ್ತೊಮ್ಮೆ ಧೂಳಿನೊಳಗೆ ಮಲಗಿತು. ಇದೇನಾ ಸಂಸ್ಕಾರ? ಸಂಸ್ಕಾರವೆಂದರೆಸತ್ತವನಿಗೆ ಚಂದನ ಹಚ್ಚುವುದಲ್ಲ;ಬದುಕಿರುವವನ ಗಾಯಕ್ಕೆಒಂದು ಮುದ್ದಾದ ಮದ್ದು ಹಚ್ಚುವುದು. ಸಂಸ್ಕಾರವೆಂದರೆಚಿತೆಗೆ ಬೆಂಕಿ ಕೊಡುವುದಲ್ಲ;ಜೀವಂತ ಹೃದಯದಲ್ಲಿಭರವಸೆಯ ದೀಪ ಹಚ್ಚುವುದು. ಸಂಸ್ಕಾರವೆಂದರೆಸಾವಿನ ನಂತರದ ಜಾತ್ರೆಯಲ್ಲ;ಜೀವನದೊಳಗಿನ ಮಾನವೀಯತೆ. ಕೊರಡಿಗಿಲ್ಲಿ ಸಂಸ್ಕಾರಮರಣದ ನಂತರದ ಆಡಂಬರವಲ್ಲ—ಬದುಕಿರುವಾಗಲೇಮನುಷ್ಯನನ್ನು ಮನುಷ್ಯನಾಗಿ ಕಾಣುವಕರುಣೆಯ ಕಣ್ಣು. ಇಲ್ಲದಿದ್ದರೆ… ಪ್ರತಿ ವರ್ಷ ಜಾತ್ರೆ ನಡೆಯುತ್ತದೆ,ಪ್ರತಿ ವರ್ಷ ಭಾಷಣಗಳು ಮೊಳಗುತ್ತವೆ,ಪ್ರತಿ ವರ್ಷ ಹೊಗಳಿಕೆಯ ಹೂವುಗಳು ಬೀಳುತ್ತವೆ. ಆದರೆ… ಬದುಕಿದ್ದಾಗ ಕಡೆಗಣಿಸಿದಒಬ್ಬ ಮನುಷ್ಯನ ನಿಟ್ಟುಸಿರುಆ ಚಪ್ಪಾಳೆಗಳಿಗಿಂತ ದೊಡ್ಡದು. . -ಎನ್.ಜಯಚಂದ್ರನ್ .ದಾಂಡೇಲಿ

ಎನ್.ಜಯಚಂದ್ರನ್ ದಾಂಡೇಲಿ “ಚಿತೆಯ ಹೊಗೆಯಲ್ಲಿ ಕಳೆದುಹೋದ ಸತ್ಯ” Read Post »

ಕಾವ್ಯಯಾನ

ಪರಿಮಳ ಐವರ್ನಾಡು ಅವರ ಕವಿತೆ”ಅವಳಿಗೆ”

ಕಾವ್ಯ ಸಂಗಾತಿ ಪರಿಮಳ ಐವರ್ನಾಡು “ಅವಳಿಗೆ” ಅವಳಿರಬೇಕಿತ್ತು ಅಲ್ಲಿಅವನ ಜೊತೆಯಲ್ಲಿಅವನ ಬದುಕಲ್ಲಿಅವನ ಬಾಳಿನಲ್ಲಿ  ಆಗಬೇಕಿತ್ತು ಅವಳಿಗೆಅವನ ಮಗನ ತಾಯಿಯಾಗಿಅವನ ಬಾಳ ಸಂಗಾತಿಯಾಗಿಅವನ ಹೃದಯದ ಬಡಿತವಾಗಿ ಬಯಕೆಯಿತ್ತು ಅವಳಿಗೆಬಾಹುಗಳಲ್ಲಿ ಬಂಧಿಯಾಗಲುಸುಖ ದುಃಖಗಳಲಿ ಜೊತೆಯಾಗಲುಅವನ ತುಟಿಗಳ ನಗುವಾಗಲು ಕನಸಿತ್ತು ಅವಳಿಗೆಅವನ ಕನಸಿಗೆ ಜೀವ ತುಂಬಲುಅವನ ಕವಿತೆಗೆ ಪದವಾಗಲುಮಧುಮಂಚದ ವದುವಾಗಲು ಅಂತರಂಗದ ಭಾವನೆಗಳುಹೊರಬರಲಾರದ ಕನಸುಗಳುಬಲಿಪಶುವಾದ ಹೂಗಳುಅವಲೊಳಗಿನ ಅವಶೇಷಗಳು ಪರಿಮಳ ಐವರ್ನಾಡು

ಪರಿಮಳ ಐವರ್ನಾಡು ಅವರ ಕವಿತೆ”ಅವಳಿಗೆ” Read Post »

You cannot copy content of this page

Scroll to Top