ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಕಾವ್ಯ ಸಂಗಾತಿ ಡಾ ಅನ್ನಪೂರ್ಣ ಹಿರೇಮಠ ಗಜಲ್ ತಪ್ಪು ಯಾರದೇ ಆಗಿರಲಿ ಕೇಳಿ ಬಿಡಿ ಒಮ್ಮೆ ಕ್ಷಮೆಸರಿ ನಿಮ್ಮದೇ ಇದ್ದಿರಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ನಾ ನೀ ಅವರಿವರು ಮೇಲು ಕೀಳು ಬಿಟ್ಟುಹಾಕಿಹಿಂದೆ ಏನೇ ನಡೆದಿರಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ಸೇಡಿನಿಂದೇ ಕೇಡು ಕೋಪ ತಾಪ ಸುಟ್ಟು ಹಾಕಿಅರಿಯದ ಪ್ರಮಾದವಿರಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ತಪ್ಪಿ ಆಡಿದ ಮಾತು ಕೊಟ್ಟ ಭಾಷೆ ಬದಲಾಗದುಸರಿ ತಪ್ಪುಗಳು ತೆಪ್ಪಗಿರಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ಕಲಹಗಳು ಇಂದಿನವಲ್ಲ ಬಾಳು ಕಟ್ಟಿದಂದಿನವುತೆರವು ಕೊಡುವುದಾಗಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ನಾಗರೀಕನೆನಿಸಿದ್ದೆ ಈ ನಾಲಿಗೆಯ ನಲಿವಿನಿಂದಅವರೇ ದೊಡ್ಡವರಾಗಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ಅನುಳ ಅಂತರಂಗದಿ ಪ್ರಶಾಂತತೆ ಮನೆ ಮಾಡಲಿಆತುರದ ಎಡರುತೊಡರಿರಲಿ ಕೇಳಿ ಬಿಡಿ ಒಮ್ಮೆ ಕ್ಷಮೆ ಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »

ಕಾವ್ಯಯಾನ

ಕಾರ್ತಿಕ್ ಭಟ್ ಬಳಗುಳಿ ಅವರ ಕವಿತೆ “ನನ್ನೆದೆಯ ಗೂಡಿನಲ್ಲಿ”

ಕಾವ್ಯ ಸಂಗಾತಿ ಕಾರ್ತಿಕ್ ಭಟ್ ಬಳಗುಳಿ “ನನ್ನೆದೆಯ ಗೂಡಿನಲ್ಲಿ”‌ ನನ್ನೆದೆಯ ಗೂಡಲ್ಲಿ ಧಗಧಗಿಸುತಿದೆಬೆಂಕಿಯ ಜ್ವಾಲೆಹೊತ್ತಿ ಉರಿಯುತ್ತಿದೆಕೆನ್ನಾಲಿಗೆಆರಿಸಬೇಕಿದೆಜ್ವಾಲಾಮುಖಿಯಾಗುವ ಮುನ್ನ….ದಡಕ್ಕೆ ಬಂದು ಅಪ್ಪಳಿಸಿ ಬರುವ ಅಲೆದಡವನ್ನು ಸ್ವಚ್ಚಗೊಳಿಸುವಂತೆ……. ನನ್ನೆದೆಯ ಗೂಡನ್ನ ಆರಿಸಬೇಕಿದೆಆಹುತಿಯಾಗುವ ಮುನ್ನಹೊಗೆಯಾಡುತ್ತಿದೆಸುಟ್ಟುಹೋಗಿರಬಹುದೇ ಸುಡುತ್ತಿರುವ ಬೆಂಕಿಗೆಮಳೆ ಹನಿಯ ಸಿಂಚನಹರಿಸಬೇಕಿದೆ….ಆರಿಸಬೇಕಿದೆನನ್ನೊಡಲ ಕಾವನ್ನ…. ದೂರದಲ್ಲೆಲ್ಲೋ ಬರುತಲಿದೆಸುಟ್ಟ ವಾಸನೆತಂಪಾಗಿಸಬೇಕಿದೆಬಿಸಿಯಾದ ಒಡಲ ಕಾವನ್ನಆರಿಸಬೇಕಿದೆದೀಪ ಆರುವ ಮುನ್ನ…….ಹದಗೊಳಿಸಿ ಬಿತ್ತಬೇಕಿದೆಪ್ರೀತಿಯೆಂಬ ಬೀಜವನ್ನ …..ಮತ್ತೇ ನಳನಳಿಸಿ ಕುಣಿಯುವಂತೆಮಾಡಬೇಕಿದೆ ನನ್ನೆದೆಯ ಗೂಡನ್ನ….. ಕಾರ್ತಿಕ್ ಭಟ್ ಬಳಗುಳಿ

ಕಾರ್ತಿಕ್ ಭಟ್ ಬಳಗುಳಿ ಅವರ ಕವಿತೆ “ನನ್ನೆದೆಯ ಗೂಡಿನಲ್ಲಿ” Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ, ನಿಮ್ಮೊಂದಿಗೆ

ಧಾರಾವಾಹಿ ಸಂಗಾತಿ-31 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ರಾಜಕೀಯಕ್ಕೆ ಪೂರ್ಣವಿರಾಮ ಅತ್ಯಂತ ಧೀಮಂತ ವ್ಯಕ್ತಿತ್ವ, ಪ್ರಖರ ವಾಗ್ಮಿತೆ ಮತ್ತು ಜನಮನ ಸೆಳೆಯುವ ಮಾತಿನ ಶೈಲಿಯನ್ನು ಹೊಂದಿದ್ದ ಜಯದೇವಿತಾಯಿಯವರು ರಾಜಕೀಯ  ಕ್ಷೇತ್ರದಲ್ಲಿ ಅಪಾರ ಗೌರವವನ್ನು ಗಳಿಸಿದ್ದರು.  ಅವರ ಒಂದು ಭಾಷಣವೇ ಸಾವಿರಾರು ಜನರ ಮನಸ್ಸಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಶಕ್ತಿಯನ್ನು ಹೊಂದಿತ್ತು. ಅವರ ಮಾತುಗಳಲ್ಲಿ ಸತ್ಯದ ಕಿಡಿ, ಸಮಾಜದ ಕಳಕಳಿ ಮತ್ತು ಕನ್ನಡ ನಾಡಿನ ಬಗ್ಗೆ ಅಚಲವಾದ ಪ್ರೀತಿ ಪ್ರತಿಧ್ವನಿಸುತ್ತಿತ್ತು.  ರಾಜಕೀಯ ಪಕ್ಷದ ಅಭ್ಯರ್ಥಿಯಾಗಲಿ, ಚುನಾವಣಾ ಕಣಕ್ಕಿಳಿದಾಗ ಪ್ರಚಾರ ನಡೆಸಲು ಜಯದೇವಿತಾಯಿಯವರನ್ನು ಆಹ್ವಾನಿಸುತ್ತಿದ್ದರು. ಅವರು ವೇದಿಕೆಯಲ್ಲಿ ನಿಂತು ಮಾತನಾಡಿದರೆ ಜನಸಾಗರವೇ ಒಂದು ಸೂಜಿ ಬಿದ್ದರೂ ಅದರ ಶಬ್ದ ಕೇಳುವಷ್ಟು ಶಾಂತಿ ಆವರಿಸುತ್ತಿತ್ತು. ಅವರ ಮಾತುಗಳು….ಸಮಾಜದ ಜಾಗೃತಿ, ನ್ಯಾಯ ಮತ್ತು ಜನಸೇವೆಯ ಸಂದೇಶವನ್ನು ಸಾರುತ್ತಿದ್ದವು.ಜಯದೇವಿತಾಯಿಯವರ ಪ್ರಭಾವ ಎಷ್ಟಿತ್ತೆಂದರೆ, ಅವರು ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಜನರು ಅಭ್ಯರ್ಥಿಗಿಂತಲೂ ಅವರ ವಿಚಾರಧಾರೆ ಮತ್ತು ವ್ಯಕ್ತಿತ್ವಕ್ಕೆ ಹೆಚ್ಚು ಮನ್ನಣೆ ನೀಡುತ್ತಿದ್ದರು.  ಅವರ ಸತ್ಯನಿಷ್ಠೆ, ನಿರ್ಭೀತ ನಿಲುವು ಮತ್ತು ಜನಪರ ಕಾಳಜಿಯಿಂದ  ಪಕ್ಷಗಳ ನಾಯಕರೂ ಅವರನ್ನು ಅಪಾರ ಗೌರವದಿಂದ ಕಾಣುತ್ತಿದ್ದರು.  ಜಯದೇವಿತಾಯಿಯವರನ್ನು ಕರೆಸಿಕೊಳ್ಳುವುದು ಅಭ್ಯರ್ಥಿಗಳಿಗೆ ಹೆಮ್ಮೆಯ ವಿಷಯವಾಗಿತ್ತು. ೧೯೫೧ರ ಚುನಾವಣೆಯ ಅಭ್ಯರ್ಥಿಗಳು  ಸಹಾಯ ಕೇಳಿ ಅವರನ್ನು ಕರೆದವರು…..ಲೋಕಸಭೆಯ ಅಭ್ಯರ್ಥಿಗಳಾಗಿದ್ದ ಶಿವಮೂರ್ತಿ ಸ್ವಾಮಿ, ವೀರಭದ್ರಪ್ಪ ಶಿರೂರ, ಮಹಾದೇವಮ್ಮ ಪಾಟೀಲ,ಶಂಕರ ಥಣಿ ಮುಂತಾದವರು ಸ್ವತಂತ್ರ ಪಕ್ಷದ ಅಭ್ಯರ್ಥಿಗಳಾಗಿದ್ದರು ಅವರು ಕರೆದಾಗ ಅಲ್ಲಿಯೂ ಕೂಡ ತಾಯಿಯವರು ಹೋಗುತ್ತಿದ್ದರು. ಜನತೆ ಅವರನ್ನು ಹರ್ಷಉಲ್ಲಾಸದಿಂದ ಸ್ವಾಗತಿಸುತ್ತಿದ್ದರು. ಅವರ ಭಾಷಣಕ್ಕೆ ಮಂತ್ರಮುಗ್ಧರಾಗುತ್ತಿದ್ದರು.ಒಂದು ಭಾಷಣ ಸಾವಿರಾರು ಜನರನ್ನು ಆಲೋಚನೆಗೆ ಹಚ್ಚುವ ಶಕ್ತಿಯನ್ನು ಹೊಂದಿತ್ತು. ಜಯದೇವಿತಾಯಿಯವರು ವೇದಿಕೆಗೆ ಏರಿದಾಗ ಅಭ್ಯರ್ಥಿಯ ಗೆಲುವಿಗಿಂತ ಸಮಾಜದ ಗೆಲುವಿನ ಬಗ್ಗೆ ಮಾತನಾಡುತ್ತಿದ್ದರು. ಅವರ ಭಾಷಣದ ಕೇಂದ್ರಬಿಂದು ಕನ್ನಡ ಭಾಷೆಯ ಅಭಿಮಾನ, ಕನ್ನಡ ನಾಡಿನ ಹಿತ, ಅಸ್ಪೃಶ್ಯರ ಉದ್ಧಾರ, ಮಹಿಳೆಯರ ಸ್ವಾಭಿಮಾನ, ಶಿಕ್ಷಣದ ಮಹತ್ವ ಮತ್ತು ಸಮಾಜದಲ್ಲಿ ಸಮಾನತೆಯ ಸ್ಥಾಪನೆ ಆಗಿತ್ತು. ಅವರು ಯಾವುದೇ ಪಕ್ಷದ ಹೊಗಳಿಕೆಯಲ್ಲಿ ಸಮಯ ವ್ಯರ್ಥ ಮಾಡುತ್ತಿರಲಿಲ್ಲ. ಬದಲಾಗಿ ಜನರಿಗೆ ತಮ್ಮ ಹಕ್ಕುಗಳ ಅರಿವು ಮೂಡಿಸಿ, ಸಮಾಜಮುಖಿ ಚಿಂತನೆ ಬೆಳೆಸುವ ಕೆಲಸ ಮಾಡುತ್ತಿದ್ದರು. ತಮ್ಮ ಭಾಷಣದಲ್ಲಿ ಅವರು ಹೀಗೆ ಹೇಳುತ್ತಿದ್ದರು..*”ನಾನು ಇಲ್ಲಿ ಯಾವುದೇ ಅಭ್ಯರ್ಥಿಯ ಪರವಾಗಿ ಮತ ಕೇಳಲು ಬಂದಿಲ್ಲ. ನಾನು ಚುನಾವಣೆಗೆ ನಿಂತಿಲ್ಲ. ನಿಮ್ಮ ಬದುಕು ಹೇಗಿದೆ, ನಿಮ್ಮ ನೋವು ಏನು, ನಿಮ್ಮ ಮಕ್ಕಳ ಭವಿಷ್ಯ ಹೇಗಿರಬೇಕು ಎಂಬುದನ್ನು ಅರಿಯಲು ಬಂದಿದ್ದೇನೆ. ಒಬ್ಬ ಅಭ್ಯರ್ಥಿ ಗೆದ್ದರೆ ಮತ್ತೊಬ್ಬ ಅಭ್ಯರ್ಥಿ ಸೋಲುವುದು ಸಹಜ.  ಸತ್ಯ, ನ್ಯಾಯ ಮತ್ತು ನಿಮ್ಮ ಭವಿಷ್ಯ ನಿಮ್ಮ ಹಕ್ಕಾಗಿರಬೇಕು. ಆದ್ದರಿಂದ ಪಕ್ಷವನ್ನು ನೋಡಿ ಮತ ಹಾಕಬೇಡಿ…ಒಳ್ಳೆಯ ವ್ಯಕ್ತಿಯನ್ನು ನೋಡಿ ಮತ ನೀಡಿ.”*ಈ ಮಾತುಗಳು ಜನರ ಮನಸ್ಸಿನ ಮೇಲೆ ಅಪಾರ ಪ್ರಭಾವ ಬೀರಿದವು. ರಾಜಕೀಯಕ್ಕಿಂತ ಜನಸೇವೆ ಮುಖ್ಯ ಎಂಬ ಸಂದೇಶವನ್ನು ಅವರು ಎಲ್ಲೆಡೆ ಸಾರಿದರು* ಅವರ ವ್ಯಕ್ತಿತ್ವವೇ ಜನರಲ್ಲಿ ವಿಶ್ವಾಸವನ್ನು ಮೂಡಿಸುತ್ತಿತ್ತು. ಜನರು ಅವರನ್ನು  ಸಮಾಜ ಸುಧಾರಕಿಯಾಗಿ ಕಾಣುತ್ತಿದ್ದರು.ಒಮ್ಮೆ ನಡೆದ ಚುನಾವಣೆಯಲ್ಲಿ ಅವರ ಉಪಸ್ಥಿತಿ ಮತ್ತು ಭಾಷಣಗಳು ಸ್ವತಂತ್ರ ಅಭ್ಯರ್ಥಿಗಳ ಪರವಾಗಿ ಜನಾಭಿಪ್ರಾಯವನ್ನು ತಿರುಗಿಸಿದವು ಎಂದು ಹೇಳಲಾಗುತ್ತದೆ. ಆ ಚುನಾವಣೆಯಲ್ಲಿ ಸ್ವತಂತ್ರ ಪಕ್ಷ ಉತ್ತಮ ಸಾಧನೆ ಮಾಡಿತು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು ಎನ್ನುವ ಮಾತು ಜನರಲ್ಲಿ ಪ್ರಚಲಿತವಾಯಿತು.  *ಜಯದೇವಿತಾಯಿಯವರು ಜಯವನ್ನು ತಮ್ಮ ಸಾಧನೆ ಎಂದು ಎಂದಿಗೂ ಹೇಳಿಕೊಳ್ಳಲಿಲ್ಲ. “ಗೆಲ್ಲಬೇಕಾದದ್ದು  ಒಬ್ಬ ವ್ಯಕ್ತಿಯ  ಸತ್ಯ ಮತ್ತು ಸಮಾಜದ ಹಿತ” ಎಂಬುದೇ ಅವರ ನಿಲುವಾಗಿತ್ತು.*ಆದರೂ ಚುನಾವಣೆಯ ನಂತರ ಅವರು ರಾಜಕೀಯ ಪ್ರಚಾರದಿಂದ ಸಂಪೂರ್ಣವಾಗಿ ದೂರ ಉಳಿದರು. ಚುನಾವಣಾ ವೇದಿಕೆಗಳು ತಮ್ಮ ಆದರ್ಶಗಳಿಗೆ ಸೂಕ್ತವಾದ ಸ್ಥಳವಲ್ಲ ಎಂಬ ಅರಿವು ಅವರಿಗೆ ಮೂಡಲಾರಂಭಿಸಿತು. ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು  ದೇಶಭಕ್ತರ ತ್ಯಾಗ, ಬಲಿದಾನ, ನಿಸ್ವಾರ್ಥ ಸೇವೆ ಮತ್ತು ಗಾಂಧೀಜಿಯವರ ಆದರ್ಶಗಳ ಪ್ರತೀಕವಾಗಿತ್ತು. ಜಯದೇವಿತಾಯಿಯವರೂ ಇದೇ ಆದರ್ಶಗಳಿಂದ ಪ್ರೇರಿತರಾಗಿ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. .  ಸ್ವಾತಂತ್ರ್ಯಾನಂತರದ ರಾಜಕೀಯ ವಾತಾವರಣ ನಿಧಾನವಾಗಿ ಬದಲಾಗತೊಡಗಿತು. ತ್ಯಾಗ ಮತ್ತು ಸೇವೆಯ ಸ್ಥಾನದಲ್ಲಿ ಅಧಿಕಾರದ ಹಂಬಲ, ಸ್ವಾರ್ಥ ರಾಜಕಾರಣ ಮತ್ತು ಗುಂಪುಗಾರಿಕೆ ತಲೆ ಎತ್ತುತ್ತಿರುವುದನ್ನು ಜಯದೇವಿತಾಯಿಯವರು ನೋವಿನಿಂದ ಗಮನಿಸಿದರು.ಗಾಂಧೀಜಿಯವರು ಬೋಧಿಸಿದ ಸತ್ಯ, ಅಹಿಂಸೆ, ಸರಳತೆ, ನೈತಿಕತೆ ಮತ್ತು ಬಡವರ ಪರವಾದ ರಾಜಕಾರಣ ಕ್ರಮೇಣ ಮರೆಯಾಗುತ್ತಿರುವಂತೆ ಅವರಿಗೆ ಭಾಸವಾಯಿತು.ಒಮ್ಮೆ ಆದರ್ಶಗಳಿಗಾಗಿ ಬದುಕಿದ್ದ ಪಕ್ಷದಲ್ಲಿ ಈಗ ಆ ಆದರ್ಶಗಳು ಕೇವಲ ಭಾಷಣಗಳಲ್ಲಷ್ಟೇ ಕೇಳಿಬರುತ್ತಿದ್ದವು…..ಆದರೆ ಆಚರಣೆಯಲ್ಲಿ ಅವುಗಳ ಪ್ರತಿಫಲನ ಕಾಣುತ್ತಿರಲಿಲ್ಲ. ಮಾತು ಮತ್ತು ಕೃತಿಯ ನಡುವೆ ಹೆಚ್ಚುತ್ತಿರುವ ಅಂತರ ಅವರನ್ನು ತೀವ್ರವಾಗಿ ಕಾಡಿತು. ಅಧಿಕಾರಕ್ಕಾಗಿ ನಡೆಯುತ್ತಿದ್ದ ರಾಜಕೀಯ ಅವರ ಅಂತರಂಗವನ್ನು ನೋಯಿಸಿತು. ಜನಸೇವೆಯೇ ರಾಜಕಾರಣದ ಆತ್ಮವಾಗಿರಬೇಕು ಎಂಬ ಅವರ ನಂಬಿಕೆಗೆ  ಬೆಳವಣಿಗೆಗಳು ವಿರುದ್ಧವಾಗಿದ್ದವು. ಅಂತಹ ಸಂದರ್ಭದಲ್ಲಿ ಆಗಿನ ಹೈದರಾಬಾದ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ. ಕೃಷ್ಣರಾವ ಅವರು, ಕಾಂಗ್ರೆಸ ಪ್ರಭಾವಿ ಸದಸ್ಯೆಯಾಗಿದ್ದ ಜಯದೇವಿತಾಯಿಯವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಬರಲೇಬೇಕು ಎಂದು ವಿಶೇಷವಾಗಿ ಒತ್ತಾಯಿಸಿದರು. ಅವರ ಜನಪ್ರಿಯತೆ, ವಾಗ್ಮಿತೆ ಮತ್ತು ಜನರ ಮೇಲಿನ ಪ್ರಭಾವವನ್ನು ಕಾಂಗ್ರೆಸ್ ಬಳಸಿಕೊಳ್ಳಲು ಬಯಸಿತು.ಆದರೆ ಜಯದೇವಿತಾಯಿಯವರ ಮನಸ್ಸಿನಲ್ಲಿ ಆಗಲೇ ತೀವ್ರವಾದ ಆತ್ಮಸಂಘರ್ಷ ನಡೆಯುತ್ತಿತ್ತು.   ಅಂತಹ ವಾತಾವರಣದಲ್ಲಿ ಮುಂದುವರಿಯುವುದು ತಮ್ಮ ಅಂತರಾತ್ಮಕ್ಕೆ ವಿರುದ್ಧ ಎಂದು ಸ್ಪಷ್ಟವಾಗಿ ಅರಿತುಕೊಂಡರು.ಅವರು ದೃಢವಾಗಿ ಹೇಳಿದರು…..“ಗಾಂಧೀಜಿಯವರ ಆದರ್ಶಗಳಿಗೆ ವಿರುದ್ಧವಾಗಿ ಸಾಗುತ್ತಿರುವ ಪಕ್ಷದಲ್ಲಿ ನನ್ನ ಅಂತರಾತ್ಮ ಜನಸೇವೆ ಮಾಡಲು ಒಪ್ಪುವುದಿಲ್ಲ. ರಾಜಕಾರಣವು ಅಧಿಕಾರದ ದಾಹವೆ‌ ಆಗಿದೆ…. ಜನರ ಉದ್ಧಾರಕ್ಕಾಗಿ ಇರಬೇಕು. ಆದರ್ಶಗಳಿಲ್ಲದ ರಾಜಕೀಯದಲ್ಲಿ ನನಗೆ ಸ್ಥಾನವಿಲ್ಲ.ಈ ನಿರ್ಧಾರವು ಕ್ಷಣಿಕ ಭಾವೋದ್ವೇಗದಿಂದ ಬಂದದ್ದಲ್ಲ. ಅದು ದೀರ್ಘ ಆತ್ಮಪರಿಶೀಲನೆಯ ಫಲವಾಗಿತ್ತು. ಅಧಿಕಾರ, ಹುದ್ದೆ ಅಥವಾ ರಾಜಕೀಯ ಭವಿಷ್ಯಕ್ಕಿಂತ ತಮ್ಮ ಆತ್ಮಸಾಕ್ಷಿಯ ವಿರುದ್ಧ ನಾನು ಹೋಗಲಾರೆ” ಎಂದು ಘೋಷಿಸಿದರು. ಜಯದೇವಿತಾಯಿಯವರು ಕಾಂಗ್ರೆಸ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸಕ್ರಿಯ ರಾಜಕೀಯದಿಂದ ಸಂಪೂರ್ಣವಾಗಿ ದೂರ ಸರಿದರು. ಅಧಿಕಾರದ ಹಾದಿಯನ್ನು ತೊರೆದು ಸಮಾಜಸೇವೆಯ ಹಾದಿಯನ್ನು ಆರಿಸಿಕೊಂಡರು.  ನಂತರ ತಮ್ಮ ಜೀವನವನ್ನು ಕನ್ನಡ ಭಾಷೆಯ ಅಭಿವೃದ್ದಿ, ಮಹಿಳಾ ಸಬಲೀಕರಣ, ಅಸ್ಪೃಶ್ಯರ ಉದ್ಧಾರ, ಶಿಕ್ಷಣದ ಪ್ರಸಾರ ಮತ್ತು ಸಮಾಜದ ಶೋಷಿತ ವರ್ಗಗಳ ಕಲ್ಯಾಣಕ್ಕೆ ಸಮರ್ಪಿಸಿದರು.ಜಯದೇವಿತಾಯಿಯವರ ಈ ನಿರ್ಧಾರವು  ತತ್ವಕ್ಕಾಗಿ ಅಧಿಕಾರವನ್ನು ತ್ಯಜಿಸಿದ ಅಪರೂಪದ ವ್ಯಕ್ತಿತ್ವದ ಘೋಷಣೆಯಾಗಿತ್ತು. ಅವರ ಈ ನಿಲುವು ಒಂದು ಸತ್ಯವನ್ನು ಸಾರಿತು…..ಹುದ್ದೆಗಿಂತ ಮೌಲ್ಯಗಳು ಶ್ರೇಷ್ಠ, ಅಧಿಕಾರಕ್ಕಿಂತ ಅಂತರಾತ್ಮ ದೊಡ್ಡದು, ರಾಜಕಾರಣಕ್ಕಿಂತ ಜನಸೇವೆ ಪವಿತ್ರವಾದುದೆಂದು. ಸಮಾಜ ಸೇವೆ, ಶಿಕ್ಷಣ, ಕನ್ನಡ ಭಾಷೆಯ ಉಳಿವು ಮತ್ತು ಶೋಷಿತ ವರ್ಗಗಳ ಅಭಿವೃದ್ಧಿಯೇ ತಮ್ಮ ಜೀವನದ ನಿಜವಾದ ಧ್ಯೇಯ ಎಂದು ಅವರು ನಿಶ್ಚಯಿಸಿದರು. ಹೀಗಾಗಿ ಅವರು ಚುನಾವಣಾ ಪ್ರಚಾರಕ್ಕೆ ಹೋದದ್ದು ಅದೇ ಮೊದಲೂ, ಅದೇ ಕೊನೆಯೂ ಆಯಿತು. ನಂತರ ತಮ್ಮ ಸಂಪೂರ್ಣ ಜೀವನವನ್ನು ಜನಸೇವೆ, ಕನ್ನಡದ ಸೇವೆ ಮತ್ತು ಸಾಮಾಜಿಕ ಪುನರುತ್ಥಾನಕ್ಕೆ ಸಮರ್ಪಿಸಿ, ಆದರ್ಶ ಸಮಾಜ ಸುಧಾರಕಿಯಾಗಿ ಚಿರಸ್ಥಾಯಿಯಾಗಿ ಉಳಿದರು. (ಮುಂದುವರಿಯುವುದು) ಸವಿತಾ ದೇಶಮುಖ

Read Post »

You cannot copy content of this page

Scroll to Top