ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಇತರೆ

“ಯುವ ಕಲಾವಿದ ಕೃಷ್ಣಚಾರಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಅನುಷ್ಠಾನ ಕಲೆಯ ನವ್ಯತೆ” ಗೊರೂರು ಅನಂತರಾಜು.

ಚಿತ್ರಕಲಾ ಸಂಗಾತಿ ಗೊರೂರು ಅನಂತರಾಜು,. ಯುವ ಕಲಾವಿದ ಕೃಷ್ಣಚಾರಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಅನುಷ್ಠಾನ ಕಲೆಯ ನವ್ಯತೆ ಯುವ ಕಲಾವಿದ ಕೃಷ್ಣಚಾರಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಅನುಷ್ಠಾನ ಕಲೆಯ ನವ್ಯತೆಗೊರೂರು ಅನಂತರಾಜು,. ಹಾಸನ.ಹಾಸನದ ಹಾಸನಾಂಬ ಕಲಾಕ್ಷೇತ್ರದ ಹೊರಗೆ ಯುವ ಕಲಾವಿದ ಕೃಷ್ಣಾಚಾರಿ ಅವರ ಏಕವ್ಯಕ್ತಿ ಕಲಾ ಪ್ರದರ್ಶನ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನಸಹಾಯದಲ್ಲಿ ಪ್ರದರ್ಶಿತ ಚಿತ್ರಕಲೆ, ಅನುಷ್ಠಾನ ಕಲೆ ಯುವ ಕಲಾವಿದನ ತಾಜಾ ಪ್ರತಿಭೆ ಅನಾವರಣಗೊಳಿಸಿತು.೧೯೯೬ ನವೆಂಬರ್ ೨೭ ಜನ್ಮದಿನದ ಕೃಷ್ಣಾಚಾರಿ ಬ್ಯಾಚುಲರ್ ಆಫ್ ವಿಶುಯಲ್ ಆರ್ಟ್ ಕಲಾವ್ಯಾಸಂಗವನ್ನು ಹಾಸನದ ನಿರ್ಮಲ ಕಾಲೇಜಿನಲ್ಲಿ ಮಾಸ್ಟರ್ ಆಫ್ ವಿಶುಯಲ್ ಆರ್ಟ್ ವ್ಯಾಸಂಗವನ್ನು ಎಂ.ಎಂ.ಕೆ ಕಾಲೇಜು ಕಲ್ಬುರ್ಗಿಯಲ್ಲೂ ಮಾಡಿದ್ದಾರೆ. ೨೦೨೪ರಲ್ಲಿ ಚಾರು ಕಲಾ ಗ್ಯಾಲರಿ ಮೈಸೂರು, ಐಜಿಎನ್ ಸಿಎ ಗ್ರೂಪ್ ಶೋ ಬೆಂಗಳೂರು ಹೀಗೆ ಕೆಲವು ಗುಂಪು ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ. ೨೦೨೩ರಲ್ಲಿ ದೆಹಲಿಯ ಇಂಡಿಯನ್ ಆರ್ಟ್ ಆರ್ಕಿಟೆಕ್ಚರ್ ಡಿಸೈನ್ ಬೈನ್ನಲೆ, ಆಹಮದಬಾದ್‌ನ ಅಬಿರ್ ಫಸ್ಟ್ ಟೇಕ್, ೨೦೨೨ರಲ್ಲಿ ರೂಟ್ ಆಫ್ ಸಾಯಿಲ್ ಏಕವ್ಯಕ್ತಿ ಪ್ರದರ್ಶನ, ಸಿಕೆಪಿ ಬೆಂಗಳೂರು, ೨೦೨೧ರಲ್ಲಿ ಕಲ್ಬುರ್ಗಿಯಲ್ಲಿ ನಡೆದ ೫೨ನೇ ಕಲಾಮಹೋತ್ಸವ, ವಿಜಯಪುರ ಕರ್ನಾಟಕ ಲಲಿತಕಲಾ ಅಕಾಡೆಮಿ ೪೨ನೇ ವಾರ್ಷಿಕ ಕಲಾ ಪ್ರದರ್ಶನ, ಬೆಂಗಳೂರಿನ ಶಿಲ್ಪಕಲಾ ಅಕಾಡೆಮಿ ವಾರ್ಷಿಕ ಪ್ರದರ್ಶನ, ಅಮೃತ ದೃಶ್ಯಕಲಾ ಉತ್ಸವ ಪೈಂಟಿAಗ್ ಶೋ..ಹೀಗೆ ಇವರ ಪ್ರದರ್ಶನಗಳು ಸಾಕಷ್ವಟು ನಡೆದಿವೆ. ಹಲವಾರು ಕಲಾ ಕ್ಯಾಂಪ್‌ನಲ್ಲೂ ಭಾಗವಹಿಸಿದ್ದಾರೆ ಅಲ್ಲದೇ ಹತ್ತಾರು ಅವಾರ್ಡ್ ಪಡೆದಿದ್ದಾರೆ. ಹಾಸನದ ಏಕವ್ಯಕ್ತಿ ಕಲಾಪ್ರದರ್ಶನದಲ್ಲಿ ಈ ವ್ಯಕ್ತಿಯನ್ನು ಮಾತನಾಡಿಸಿದೆ. ಸಾರ್, ನನ್ನ ಕಲಾ ಅಭ್ಯಾಸವು ಮಣ್ಣು, ಪ್ರಕೃತಿ, ಪರಿಸರ ಮತ್ತು ಮಾನವ ಬದುಕಿನ ನಡುವಿನ ಆಳವಾದ ಸಂಬAಧವನ್ನು ಅನ್ವೇಷಿಸುತ್ತದೆ. ಭೂಮಿ ಕೇವಲ ನಮ್ಮ ಬದುಕಿನ ಆಧಾರವಲ್ಲ. ಅದು ಅನೇಕ ನೆನಪುಗಳು, ಅನುಭವಗಳು, ಸಂಸ್ಕೃತಿಗಳು ಮತ್ತು ಬದಲಾವಣೆಗಳನ್ನು ತನ್ನೊಳಗೆ ಸಂಗ್ರಹಿಸಿಕೊAಡ ಜೀವಂತ ಅಸ್ತಿತ್ವ. ನನ್ನ ಕಲಾಕೃತಿಗಳಲ್ಲಿ ಮಣ್ಣು, ನೈಸರ್ಗಿಕ ಬಣ್ಣಗಳು, ಬೀಜಗಳು, ಎಲೆ, ಬಿದಿರು, ಮರ ಇದ್ದಿಲು, ಟೆರಾಕೋಟಾ, ಕೈಯಿಂದ ತಯಾರಿಸಿದ ಕಾಗದ, ಖಾದಿ ಬಟ್ಟೆ.. ಹೀಗೆ ನೈಸರ್ಗಿಕ ವಸ್ತು ಬಳಸುತ್ತೇನೆ. ಈ ವಸ್ತುಗಳು ನನಗೆ ಕೇವಲ ಕಲಾ ಮಾಧ್ಯಮಗಳಲ್ಲ. ಅವು ತಮ್ಮದೇ ಆದ ಇತಿಹಾಸದ ನೆನಪು ಮತ್ತು ಸಾಂಸ್ಕೃತಿಕ ಅರ್ಥ ಹೊಂದಿರುವ ಜೀವಂತ ಅಂಶ.. ಮಣ್ಣಿನ ಪದರಗಳು, ಭೂ ದೃಶ್ಯಗಳ ಬದಲಾವಣೆ, ಜೀವ ವೈವಿಧ್ಯದ ಕಾಡು ಪರಿಸರ ನಾಶ, ನಗರೀಕರಣ, ಅತಿಯಾದ ಅಭಿವೃದ್ಧಿ, ಮಾನªನ ಪ್ರಕೃತಿಯ ಮೇಲಿನ ಹಸ್ತಕ್ಷೇಪ ಇವು ಇವರ ಕಲೆಯ ಒಳಸುಳಿ ಹುಳಿ ಪೆಟ್ಟು. ಪ್ರಕೃತಿಯೊಂದಿಗೆ ಮಾನವನ ಸಂಬAಧ ಬದಲಾಗುತ್ತಿರುವುದನ್ನು ಕಲಾಕೃತಿಗಳು ಪ್ರಶ್ನಿಸುತ್ತವೆ. ಹಾಗೆಯೇ ನಮ್ಮ ಸುತ್ತಲ ಪರಿಸರವನ್ನು ನಾವು ಮತ್ತೊಮ್ಮೆ ಮಗದೊಮ್ಮೆ ಗಮನಿಸುವಂತೆ ಸೂಚಿಸುತ್ತಲೇ ಹೊಸ ಹೊಳವು ಮನದಲ್ಲಿ ಮೂಡಿಸುತ್ತವೆ.ನೋಡಿ ಅದು ಒಂದು ಓಲ್ಡ್ ಮರದ ಖುರ್ಚಿ. ಬಹುಶ: ಅದರ ಮೇಲೆ ಇವರ ತಂದೆ ಅಥವಾ ತಾತಾ ಕೂರುತ್ತಿದ್ದಾರೇನೋ..? ಅದು ಸರಿ ಅದರ ಮೇಲೇಕೆ ಮಂಜಿನ ಗೆಡ್ಡೆ..? ಎಂದು ಕೇಳಿದರೆ ಅದಕ್ಕೊಂದು ವ್ಯಾಖ್ಯಾನ. ಅಜ್ಜ ಕೂರುತ್ತಿದ್ದ ಖುರ್ಚಿ ಕಾಲ ಕಳೆದಂತೆ ಶಿಥಿಲವಾಗುತ್ತದೆ. ಮಂಜು ಕರಗಿದಂತೆ ಅಜ್ಜನ ನೆನಪು ಕಾಲ ಕಳೆದಂತೆ ಮಾಸುತ್ತಾ ಹೋಗುತ್ತದೆ. ಅರೇ ಹೀಗೂ ಈ ಅನುಷ್ಟಾನ ಕಲೆ ಅರ್ಥೈಸುವುದೇ..? ಎಂದು ಆಶ್ಚರ್ಯಚಿಕಿತನಾದೆ. ಮತ್ತೊಂದು ಕಡೆ ಮೇಲೆ ಪ್ಲಾಸ್ಟಿಕ್ ತೆಳು ಪರದೆಯ ಉಯ್ಯಾಲೆಯಂತೆ ತೂಗುಹಾಕಿರುವಲ್ಲಿ ಅದರ ತುಂಬಾ ಪೇಪರ್ ದೋಣಿಗಳು. ನಾವು ಸಾಮಾನ್ಯವಾಗಿ ಮಳೆಗಾಲದಲ್ಲಿ ಮನೆಯ ಮುಂದೆ ಮಣ್ಣಿನ ಗುಂಡಿ ರಸ್ತೆಯಲ್ಲಿ ಅಥವಾ ಹರಿಯುವ ಚರಂಡಿ ನೀರಿನಲ್ಲಿ ಪೇಪರ್ ದೋಣಿ ಅದು ಸಾದಾ ದೋಣಿ, ಕತ್ತಿ ದೋಣಿ ಎಂದೆಲ್ಲಾ ಮಾಡಿ ಹರಿಯಲು ಬಿಟ್ಟು ಖುಷಿ ಪಡುತ್ತಿರಲಿಲ್ಲವೇ ಅದು ನೆನಪಾದರೆ ದೇಸಾಯಿ ಹೇಳಿದÀರು ಕೊಲ್ಲಿ ಯುದ್ಧದಲ್ಲಿ ಹರ್ಮುಜ್ ಜಲಸಂಧಿ ಬಂದ್ ಮಾಡಿ ಅಲ್ಲಿ ಬಾಂಬ್ ಹಾಕಿದ್ದರೆ ಪೆಟ್ರೋಲ್, ಗ್ಯಾಸ್ ಹಡಗುಗಳು ಹೀಗೆ ಮುಳುಗಿ ವುಡ್ ತೇಲುತ್ತಿತ್ತು ಪ್ರಪಂಚ ಫುಡ್ ಗಾಗಿ ಬಾಯಿ ಬಡಿದುಕೊಳ್ಳುತ್ತಿತ್ತು. ಅಣ್ಣಾ ಎತ್ತಣಿಂದ ಎತ್ತಣ ಹೋಲಿಕೆ..!ಓಕೆ ನೀವು ಏನಾದರೂ ಊಹಿಸಿಕೊಳ್ಳಿ, ಏನಾದರೂ ಹೇಳಿಕೊಳ್ಳಿ ನಿಮ್ಮ ಚಿಂತನೆ ನಿಮಗೆ ಬಿಟ್ಟಿದ್ದು ಎಂದು ಮೈಕ್ ಹಿಡಿದು ಎಲ್ಲರೂ ಶಾಂತವಾಗಿರಿ ಎನ್ನುತ್ತಿದ್ದರು ಕೃಷ್ಞಾಚಾರಿಯವರು. ಏಕೆಂದರೆ ಅಂದು ಅದೇ ಕಲಾಭವನದಲ್ಲಿ ಒಳಗೆ ವಾರ್ಷಿಕೋತ್ಸವ ಏರ್ಪಾಡು ನಡೆಯುತ್ತಿದ್ದರೆ, ಹೊರಗೆ ಮಾಸ್ತರುಗಳ ಉಭಯ ಕುಶಲೋಪರು ಮಾತುಕತೆಗಳು ನಡೆದಿದ್ದವು. ಮೈಕ್ ನಲ್ಲೇ ಜೋರಾಗಿ ಹೇಳಿ ಕೇಳಿಸಿಕೊಳ್ಳುತ್ತೇವೆ ಎಂದೆ.ನಾನು ಬಳಸುವ ನೈಸರ್ಗಿಕ ವಸ್ತುಗಳ ವಿನ್ಯಾಸ, ವಿನ್ಯಾಸದಲ್ಲಿನ ಸರಳತೆ ಮತ್ತು ಅವುಗಳ ಸಹಜ ಗುಣಗಳನ್ನು ಉಳಿಸಿಕೊಂಡು ಸಮಕಾಲೀನ ದೃಶ್ಯಭಾಷೆಯನ್ನು ರೂಪಿಸಲು ಪ್ರಯತ್ನಿಸುತ್ತೇನೆ. ನನ್ನ ಕಲಾಕೃತಿಗಳು ಒಂದು ನಿರ್ದಿಷ್ಠ ಕಥೆಯನ್ನು ಹೇಳವುದಕ್ಕಿಂತಲೂ ಪ್ರೇಕ್ಷಕರಲ್ಲಿ ನೆನಪು ಪ್ರಶ್ನೆ ಮತ್ತು ಅನುಭವಗಳನ್ನು ಹುಟ್ಟಿಸುವ ಒಂದು ಮುಕ್ತ ಸಂವಾದದAತೆ ಇರಬೇಕೆಂದು ಬಯಸುತ್ತೇನೆ..ಸರಿ, ಅಲ್ಲೊಂದು ಬಾವಿಯಲ್ಲಿ ನೀರು ಸೇದುವ ಹಗ್ಗವನ್ನು ಗುಪ್ಪೆಯಾಗಿ ಹುತ್ತದಂತೆ ಮಾಡಿ ಹಗ್ಗದ ತುದಿಗಳಿಗೆ ಕೆಂಪುಬಣ್ಣ ಹಚ್ಚಿದ್ದೀರಲ್ಲಾ ಇದರ ಕಥೆಯೇನು.. ? ಎಂದು ಕೇಳಿದೆ. ಅದು ಒಂದು ಕಡೆಯಿಂದ ನೋಡಿದರೆ ಯಾರೋ ಮುನಿವರ್ಯ ಮನೆಯಲ್ಲಿ ಧರ್ಮಪತ್ನಿಯೊಂದಿಗೆ ಮುನಿಸಿಕೊಂಡು ಕಾಡಿನಲ್ಲಿ ತಪಸ್ಸಿಗೆ ಕುಳಿತು ಕರ್ಮ ಕಳೆದುಕೊಳ್ಳುವಂತೆ ಕಂಡಿತು. ಈ ಹಗ್ಗಕ್ಕೆ ಕೊನೆ ಎಲ್ಲ ಅನಂತರಾಜು.. ಎಂದು ಚಿತ್ರಕಲಾ ಗುರು ಕಾರದಕಟ್ಟಿ ಹೇಳಿದರು. ಋಷಿ ಮೂಲ ಗುರು ಮೂಲ ಹುಡುಕಬಾರದು ತೆಪ್ಪಗಾದೆ. ನೋಡಿ ಈ ಅನುಷ್ಠಾನ ಕಲೆಗೆ ಅಕಾಡೆಮಿ ಪ್ರಶಸ್ತಿ ಬಂದಿದೆ ಎಂದು ಗುರುಗಳು ಶಿಷ್ಯನ ಕಲೆಗಾರಿಕೆ ಕಡೆ ಬೆರಳು ತೋರಿಸಿದರು. ಕಾರದಕಟ್ಟಿ ನಿರ್ಮಲ ಕಲಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಈಗ ನಿವೃತ್ತರು. ಇದು ಮಣ್ಣಿನಲ್ಲಿ ರೂಪಿಸಿದ ಅನುಷ್ಠಾನ ಕಲೆ ಎಂದರು. ಅಕಾಡೆಮಿಯೇ ಪ್ರಶಸ್ತಿ ಕೊಟ್ಟಮೇಲೆ ಕಲೆಯ ಗೂಢರ್ಥ ಕೇಳಲುಂಟೆ..? ಶಿಷ್ಯ ಮಾತು ಮುಂದುವರೆಸಿದರು. ನನ್ನ ಕಲಾ ಪ್ರಯಾಣದ ಮೂಲಕ ಭೂಮಿ ನಮ್ಮ ಹೊರಗಿನ ಆಸ್ತಿತ್ವವಲ್ಲ. ಅದು ನಮ್ಮ ಬದುಕಿನ ಅವಿಭಾಜ್ಯ ಭಾಗ ಎಂಬ ಅರಿವನ್ನು ಮೂಡಿಸುವುದು ನನ್ನ ಉದ್ದೇಶ. ಮಣ್ಣು ಮತ್ತು ಪ್ರಕೃತಿಯೊಂದಿಗೆ ನನ್ನ ನಿರಂತರ ಸಂವಾದದ ಮೂಲಕ ಕಳೆದು ಹೋಗುತ್ತಿರುವ ಪರಿಸರ, ಸಂಸ್ಕೃತಿ ನೆನಪುಗಳನ್ನು ಕಲೆಯ ಮೂಲಕ ದಾಖಲಿಸಿ ಅವುಗಳೊಂದಿಗೆ ಹೊಸ ಸಂಬAಧವನ್ನು ಕಟ್ಟಿಕೊಳ್ಳುವ ಪ್ರಯತ್ನ ಮುಂದುವರಿಸುತ್ತೇನೆ.. ಗುಡ್ ಲಕ್ ಎಂದೆ. ಬ್ಯಾಡ್ ಲಕ್ ಎಂದರೆ ಅದೇ ರೀತಿ ಮತ್ತೊಂದು ಅನುಷ್ಠಾನ ಕಲೆ ಪಕ್ಕದಲ್ಲಿತ್ತು. ಒಂದು ಹಸುವಿನ ಹೊಟ್ಟೆಯಲ್ಲಿ ಕರಗದ ಪ್ಲಾಸ್ಟಿಕ್ ಚೀಲಗಳು, ಹಾಲು ಕರೆಯುವ ಯಂತ್ರ ಗೋಮಾತೆಯ ಕೆಚ್ಚಲಿನಿಂದ ಹಾಲನ್ನು ಬಕೇಟಿಗೆ ಕರೆಯುತ್ತಿತ್ತು. ಈ ಕಲೆಯ ಕೆಳಗಿನ ದೃಶ್ಯವು ಆನೆಯ ಹೊಟ್ಟೆಯಲ್ಲಿ ಕಲ್ಲುಗಳ ರಸ್ತೆ. ಬಹುಶ: ಅದು ಎತ್ತಿನಹೊಳೆ ರಸ್ತೆ ಇರಬೇಕೆನಿಸಿತು. ಕೇಳಲಿಲ್ಲ ಅಷ್ಟೇ..! ಗೊರೂರು ಅನಂತರಾಜು, ಹಾಸನ.ಮೊ: ೯೪೪೯೪೬೨೮೭೯.ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ೩ನೇ ಕ್ರಾಸ್, ಹಾಸನ-೫೭೩೨೦೧.

“ಯುವ ಕಲಾವಿದ ಕೃಷ್ಣಚಾರಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಅನುಷ್ಠಾನ ಕಲೆಯ ನವ್ಯತೆ” ಗೊರೂರು ಅನಂತರಾಜು. Read Post »

ಕಾವ್ಯಯಾನ

ಟಿ.ಪಿ.ಉಮೇಶ್ ಅವರ ಕವಿತೆ “ಗೋಡೆಗಳೊಳಗೆ ಸಿಕ್ಕಿಬಿದ್ದ ಆಕಾಶ”

ಕಾವ್ಯ ಸಂಗಾತಿ ಟಿ.ಪಿ.ಉಮೇಶ್ “ಗೋಡೆಗಳೊಳಗೆ ಸಿಕ್ಕಿಬಿದ್ದ ಆಕಾಶ” ಪ್ರತಿ ಮುಂಜಾನೆಯುನನ್ನ ಮನೆ ಕಿಟಕಿಯ ಮುಂದೆಸೂರ್ಯೋದಯ ಬಂದು ನಿಲ್ಲುತ್ತದೆ!ಅದನ್ನು ತೆರೆಯುವ ಕೀಲಿಕೈಈ ಕಾಂಕ್ರೀಟಿನ ಮನೆ ಅಡಿಪಾಯದೊಳಗೆಹೂತುಹೋಗಿದೆ! ಈ ಮನೆಯ ಗೋಡೆಗಳುಇಟ್ಟಿಗೆ ಗಾರೆಯಿಂದಲ್ಲಅರ್ಧಕ್ಕೆ ಮುರಿದ ಸಂಭಾಷಣೆಗಳಿಂದಕಟ್ಟಲ್ಪಟ್ಟಿವೆ!ಅವುಗಳ ನಡುವೆಒಂದು ನಗು ಸಿಕ್ಕಿಕೊಂಡುವರ್ಷಗಳಿಂದ ಪ್ರತಿಧ್ವನಿಯಾಗಲು ಕಲಿಯುತ್ತಿದೆ! ನಗರದ ರಸ್ತೆಗಳುಮನುಷ್ಯರ ಕಾಲುಗಳನ್ನುಗಮ್ಯದ ಕಡೆಗೆ ಕರೆದೊಯ್ಯುವುದಿಲ್ಲ!ಹೆಜ್ಜೆಗಳ ನೆನಪುಗಳನ್ನುಡಾಂಬರಿನ ಕೆಳಗೆ ಸಮಾಧಿ ಮಾಡುತ್ತವೆ! ನನ್ನ ನೆರಳು ಸಂಜೆಯಾಗುತ್ತಿದ್ದಂತೆನನ್ನನ್ನು ಬಿಟ್ಟುಬೀದಿದೀಪದ ಕೆಳಗೆ ಕೆಲಸಕ್ಕೆ ಸೇರಿಕೊಳ್ಳುತ್ತದೆ! ರಾತ್ರಿ ಮನೆಗೆ ಬಂದಾಗಕನ್ನಡಿಯ ಮುಖದಲ್ಲೂ ನನ್ನಷ್ಟೇ ಆಯಾಸ! ಕನ್ನಡಿಯೊಳಗಿನ ನಾನು ಪ್ರತಿದಿನಸ್ವಲ್ಪ ಸ್ವಲ್ಪವಾಗಿ ಪಾರದರ್ಶಕನಾಗುತ್ತಿದ್ದೇನೆಮುಖ ಮರೆತು ಹೋಗದಂತೆ! ಮರಗಳು ಈಗಎಲೆಗಳನ್ನು ಉದುರಿಸುವುದಿಲ್ಲಹಕ್ಕಿಗಳ ವಿಳಾಸಗಳನ್ನುಒಂದೊಂದಾಗಿ ಕೆಳಗೆ ಬೀಳಿಸುತ್ತಿವೆ! ಗಾಳಿಯ ಕೈಯಲ್ಲಿ ಹೂವಿನ ಪರಿಮಳವಿಲ್ಲಬೀಗ ಹಾಕಿದ ಮನೆಗಳಕೊನೆಯ ನಿಟ್ಟುಸಿರನ್ನು ಹೊತ್ತು ತಿರುಗುತ್ತಿದೆ! ನಾನು ಇನ್ನೂ ಆಕಾಶವನ್ನು ನೋಡುತ್ತೇನೆಅದು ಮೇಲಿಲ್ಲನನ್ನ ಕಣ್ಣಿನಲ್ಲಿ ಬಿರುಕು ಬಿಟ್ಟ ನೀಲಿ ಬಣ್ಣವಾಗಿಮೆಲ್ಲಗೆ ಉದುರುತ್ತಿದೆ! ಆಕಾಶದಿಂದ ಬೀಳುವಪ್ರತಿ ಹನಿಯುಸತ್ತ ಕನಸಿನ ಕೊನೆಯ ಬೆಳಕು! ಟಿ.ಪಿ.ಉಮೇಶ್

ಟಿ.ಪಿ.ಉಮೇಶ್ ಅವರ ಕವಿತೆ “ಗೋಡೆಗಳೊಳಗೆ ಸಿಕ್ಕಿಬಿದ್ದ ಆಕಾಶ” Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ಸತತವಾಗಿ ಅತ್ತಳು ಸತ್ಯಸತ್ವದ ಸತಿ ಸೀತೆ ಬಿರುಗಾಳಿಯ ಬಿರುಸಿಗೆ ಬಲವಿಲ್ಲದಂತಾದ ಬಾಳೆಗಿಡ ಬುವಿಯನ್ನಪ್ಪಿದಂತೆ ನೆಲಕ್ಕೆ ಬಿದ್ದಳು ಧರಣಿಸುತೆ, ಲಕ್ಷö್ಮಣನ ನುಡಿಯದು ಕಿವಿಗೆ ಬಿದ್ದ ಕ್ಷಣದಲ್ಲಿ. ಲೋಕವನ್ನೇ ಮರೆತಳು ತಕ್ಷಣದಲ್ಲಿ.ಸೀತೆಯ ಸ್ಥಿತಿಗೆ ಮರುಗಿದ ಲಕ್ಷö್ಮಣ ತನ್ನ ಉತ್ತರೀಯದಿಂದ ಅವಳಿಗೆ ಗಾಳಿಯನ್ನು ಬೀಸಿ, ಕಣ್ಣೀರು ಹರಿಸುತ್ತಾ ಅವಳನ್ನು ಸಾಂತ್ವನಗೊಳಿಸುವ ಪ್ರಯತ್ನ ನಡೆಸಿದ.ಕಣ್ಣುಗಳ ತೆರೆದಳು ರಾಮಸತಿ. ನಿಟ್ಟುಸಿರ ಬಿಟ್ಟಳು ಧರಣಿಸುತೆ. ಸುಮಿತ್ರಾಸುತನನ್ನು ನೋಡಿದಳು ಜನಕಸುತೆ.“ಅಪರಾಧವನ್ನೇನೂ ಮಾಡದ ನನ್ನನ್ನು ಹೀಗೆ ಅರಣ್ಯಕ್ಕೆ ಅಟ್ಟುವ ಬದಲು ಖಡ್ಗದಿಂದ ನನ್ನ ಶಿರವನ್ನೇ ಕತ್ತರಿಸಬಹುದಿತ್ತಲ್ಲಾ! ನನ್ನ ಮನೋವಲ್ಲಭನನ್ನು ತೊರೆದು ಈ ಕಾಡಿನಲ್ಲಿರುವಂತಾಯಿತೇ ನಾನು!” ಎಂದು ಅತ್ತಳು ಕೌಸಲ್ಯಾಸುತನ ಸತಿ.“ವಿವಾಹ ಆದಾಗಿನಿಂದಲೂ ನನ್ನ ಜೊತೆ ಸುಖಸುಖವಾಗಿ ಬದುಕಿದವರು, ನಾನು ಅಗಲಿದಾಗ ನೋವು ಅನುಭವಿಸಿದವರು, ನನಗಾಗಿ ಆ ದುಷ್ಟ ರಾವಣನನ್ನು ಕೊಂದವರು ಈಗ ತೊರೆದರೇ ನನ್ನನ್ನು!” ಎಂದು ಹಲುಬಿದಳು ಹಲವು ನಿಮಿಷ.ತನ್ನದೇನೂ ತಪ್ಪಿಲ್ಲ ಎಂದು ರುಜುವಾತುಪಡಿಸುವ ಸ್ವಪ್ರಜ್ಞೆ ಸೀತೆಯಲ್ಲೀಗ ಮೂಡತೊಡಗಿತು. “ಅಂದು ರಾವಣ ಸಂಹಾರದ ನಂತರ ಅಗ್ನಿಪ್ರವೇಶದ ಮೂಲಕ ನನ್ನ ಸತ್ಯವನ್ನು ಸಾಬೀತುಪಡಿಸಿಕೊಂಡವಳು ಈ ಸೀತೆ. ಹಾಗಿದ್ದೂ ನನ್ನನ್ನು ಅಪರಾಧಿ ಎನ್ನಲು ಕಾರಣವೇನು?” ಎಂಬ ಪ್ರಶ್ನೆಯೆತ್ತಿ ಲಕ್ಷö್ಮಣನ ಮುಖವನ್ನೇ ನೋಡಿದಳು.ಕಾಡಿನಲ್ಲಿ ತನ್ನನ್ನು ಬಿಟ್ಟುಹೋಗಲೆಂದು ಬಂದ ಲಕ್ಷ್ಮಣನು ಅವಳ ಕಣ್ಣಿಗೆ ಕಂಡದ್ದು ಕರುಣೆಯಿಲ್ಲದವನಾಗಿ. “ಕಲ್ಲುಮುಳ್ಳುಗಳೇ ಇರುವ ಕಾಡಿನಲ್ಲಿ ಅಂದು ಅಲೆದಾಡುತ್ತಿದ್ದೆವು. ಅಂತಹ ಕಷ್ಟದ ಸ್ಥಿತಿಯಲ್ಲಿ ನಾನು ನಡೆಯಲಾರದೆ ಒದ್ದಾಡುತ್ತಿದ್ದಾಗ ನನ್ನನ್ನು ಉಪಚರಿಸಿದವನು ನೀನು. ನನಗೆ ಸಂಕಟವಿತ್ತು ಘರ್ಜಿಸಿದ ವಿರಾಧನೆಂಬ ಅಸುರರನ್ನು ಕೊಂದವನು ನೀನು. ಅಂದು ಚಿನ್ನದ ಜಿಂಕೆಯ ಬೆನ್ನತ್ತಿಹೋದ ನನ್ನೊಡೆಯರಿಗೆ ಏನೋ ಕೆಡುಕು ಆಗಿದೆಯೆಂದು ನಾನು ವ್ಯಥೆಪಟ್ಟು, ಹೋಗಿ ನೋಡಿ ಬಾ ಎಂದು ನಿನ್ನಲ್ಲಿ ಕೇಳಿಕೊಂಡಾಗ ಅಯೋಧ್ಯಾಪತಿಯನ್ನು ಹುಡುಕಿಕೊಂಡು ಹೋದವ ನೀನು. ನನ್ನಿಷ್ಟದ ಮೈದುನ ನೀನು. ಹಾಗಿರುವಾಗ ನನ್ನನ್ನೊಬ್ಬಳನ್ನೇ ಈ ದುರ್ಗಮ ಕಾಡಿನಲ್ಲಿ ಬಿಟ್ಟುಹೋಗುವ ಮನಸ್ಸು ನಿನಗೆ ಬಂದೀತೇ ಲಕ್ಷö್ಮಣ!” ಎಂದು ದುಃಖವನ್ನು ತೋಡಿಕೊಂಡಳು.ಪತಿಯ ಮುಖವನ್ನು ಕಾಣದೆ ಎಂತಿರಲಿ ಇಲ್ಲಿ ಎಂದು ಪ್ರಲಾಪಿಸಿದಳು. ರಮಣನನ್ನು ರಮಿಸದೆ ಹೇಗಿರಲಿ ಇಲ್ಲಿ ಎಂದು ವಿಲಾಪಿಸಿದಳು. ಆಗಾಗ ಮೈಮರೆಯುತ, ಆಗಾಗ ಎಚ್ಚರವಾಗುತ ಸೋತ ಭಾವದಲ್ಲಿದ್ದಳು ಸೀತೆ, ಹಾವಿನಿಂದ ಕಚ್ಚಿಸಿಕೊಂಡ ಎಳೆಶಿಶುವಿನಂತೆ.ಈ ಬಗೆಯಲ್ಲಿ ಜಾನಕಿಯನ್ನು ಕಂಡ ಲಕ್ಷö್ಮಣ ತೊಳಲಾಟಕ್ಕೆ ಈಡಾದ. ತೊರೆದುಹೋಗಲೇಬೇಕಿತ್ತು ಅವನು ಅವಳನ್ನು ಕಾಡಿನಲ್ಲಿ, ರಾಮನಾಜ್ಞೆಗೆ ಶಿರಬಾಗಿ. ತೊರೆದುಹೋಗದಂತೆ ತಡೆಯಿತದೋ ಮಮಕಾರ, ದುಃಖಿಸಿದ ಅತಿಯಾಗಿ ಆ ಕ್ಷಣವೇ ಎದೆಬೀಗಿ.ಎಂತು ಹೋಗಲಿ ತಾನು, ಹೋಗದೇ ಇರಲೆಂತು ಇನ್ನು ಎಂಬ ದ್ವಂದ್ವ ಭಾವದಲ್ಲಿ ಸಂಕಟವನ್ನು ಸೌಮಿತ್ರಿ ಅನುಭವಿಸುತ್ತಿದ್ದಾಗಲೇ ಸೀತೆ ನುಡಿದಳು ತಪಸ್ವಿನಿಯ ತೆರದಲ್ಲಿ. “ಅಂದು ರೇಖೆಯನೆಳೆದು ರಾಮ ಶೋಧನೆಗೆ ಹೊರಟ ರೀತಿಯಲ್ಲಿಯೇ ಇಂದೂ ಹೊರಡು ಸೌಮಿತ್ರಿ. ನನ್ನ ಅಪರಾಧವಿಲ್ಲದೆ ನನ್ನ ಒಡೆಯರು ಇಂದು ತೊರೆದರೆನ್ನ ಎಂಬ ಸಮಾಚಾರವನ್ನು ಹೇಳಿಬಿಡು ಎನ್ನ ತಾಯಿಸಮಾನರಾದ ಕೌಸಲ್ಯೆಗೆ” ಎಂದಳು ಸೀತೆ.ರಾಮನ ಜೊತೆಗೆ ಯಾರೂ ಇಲ್ಲ ಸಹಾಯಕ್ಕೆ ಎಂಬ ಯೋಚನೆ ಮೂಡಿತು ಅವಳಲ್ಲಿ, ಆ ಕ್ಷಣದಲ್ಲಿ. “ತಡವಾದರೆ ಕೋಪಿಸಿಕೊಳ್ಳಬಹುದು ನಿನ್ನಣ್ಣ. ನನಗಾದರೂ ಈ ಕಾಡಿನಲ್ಲಿ ಕ್ರೂರಮೃಗಗಳ ನೆರವಿದೆ. ಅವರು ಅಲ್ಲಿ ಒಬ್ಬಂಟಿಯಾಗಿದ್ದಾರೆ. ವಿಳಂಬ ಮಾಡದೆ ಸೇರು ಕ್ಷಿಪ್ರವಾಗಿ ಅವರನ್ನು” ಎಂದಳು ಮರ್ಮಾರ್ಥಭರಿತವಾಗಿ.ತನ್ನನ್ನು ತೊರೆದ ರಾಮನದ್ದೇನೂ ತಪ್ಪಿಲ್ಲ. ಹೆಣ್ಣಾಗಿ ಜನಿಸಿದ ತನ್ನದೇ ಅಪರಾಧ ಎಂಬ ಕೀಳರಿಮೆಯ ಮಾತೂ ಹೊರಬಂತು ಅವಳಿಂದ.ಈ ಪರಿಯ ಪರಿತಾಪವನ್ನು ಕಂಡ ಲಕ್ಷö್ಮಣ ದೃಷ್ಟಿ ಹರಿಸಿದ ದೆಸೆದೆಸೆಗೆ. ಕಣ್ಣಿಗೆ ಕಂಡ, ಕಾಣದ ಮೃಗ- ಖಗ, ಕ್ರಿಮಿ- ಕೀಟ, ಗಿಡ- ಮರ, ಗಂಗಾನದಿ, ದಿಕ್ಕುಗಳು, ಪಂಚಭೂತಗಳು ಎಲ್ಲವುಗಳನ್ನೂ ಉದ್ದೇಶಿಸಿ ನುಡಿದ ಉದ್ದಂಡವಾದ ಮಾತನ್ನು.“ಜಾನಕಿಯನ್ನು ರಕ್ಷಿಸುವ ಹೊಣೆಯೀಗ ನಿಮ್ಮದು. ಭೂದೇವಿಯೇ ಪೊರೆಯಬೇಕು ನೀನೇ, ನಿನ್ನ ಈ ಮಗಳನ್ನು”ಅಸಹಾಯಕ ಹೆಣ್ಣನ್ನು ಅನಾಥೆಯ ತೆರದಲ್ಲಿ ಬಿಟ್ಟುಹೋಗಬೇಕಾದ ತನ್ನ ಹೀನಸ್ಥಿತಿಯನ್ನು ನೆನೆದು ಮತ್ತೆ ಮತ್ತೆ ಮರುಗಿದ ಲಕ್ಷö್ಮಣ. ಈ ನಿಷ್ಠುರದ ಬದುಕನ್ನು ತಾನು ನಡೆಸಬೇಕಾಗಿ ಬಂದದ್ದಕ್ಕೆ ತನ್ನ ದೇಹವನ್ನು ಎರಡು ಭಾಗವಾಗಿ ಸೀಳಿಹಾಕಬೇಕು ಎಂದು ತನಗೆ ತಾನೇ ಶಪಿಸಿಕೊಂಡ.ಏನಾದರಾಗಲಿ ಇಲ್ಲಿಂದ ಹೋಗಿಯೇ ಬಿಡುತ್ತೇನೆ ಎಂದು ಮುಂದೆ ಮುಂದೆ ಹೋದ, ಬಿರುಸಾಗಿ. ಏನಂದುಕೊಳ್ಳುವಳೋ ಜನಕಸುತೆ ಎಂದು ಆಲೋಚಿಸಿ ಮತ್ತೆ ಹಿಂದೆ ಹಿಂದೆ ಬಂದ, ಇರಿಸುಮುರುಸಾಗಿ. ಅಣ್ಣನನ್ನು ಸೇರಬೇಕೆಂಬ ತುಡಿತವದು ಮತ್ತೆ ಸೆಳೆಯಿತು ಅವನನ್ನು. ಸೀತೆಯನ್ನು ನೋಡದೆಯೇ ಮುಂದೆ ಹೋದ. ಹೆಂಗಳೆಯ ಮನವನ್ನು ನೋಯಿಸಿದೆ ಎಂಬ ಭಾವವದು ಎಳೆಯಿತು ಅವನನ್ನು. ಸೀತೆಯೆಡೆಗೆ ನೋಡುತ್ತಾ ಹಿಂದೆ ಬಂದ. ಒಮ್ಮೆ ಆ ಕಡೆಗೆ, ಮತ್ತೊಮ್ಮೆ ಈ ಕಡೆಗೆ. ಒಮ್ಮೆ ಮುಂದೆ, ಇನ್ನೊಮ್ಮೆ ಹಿಂದೆ. ತೊರೆಯದಿರಲಾರೆ ಈಗ ಎಂಬ ಭಾವ ಒಮ್ಮೆ. ತೊರೆದುಹೋಗಲಾರೆ ಬೇಗ ಎಂಬ ಭಾವ ಮಗದೊಮ್ಮೆ. ಮುಂದಕ್ಕೂ ಹಿಂದಕ್ಕೂ ಹೊಯ್ದಾಡುವ ಉಯ್ಯಾಲೆಯಂತಾದ ಲಕ್ಷö್ಮಣ.ಅದೋ! ಆ ಕ್ಷಣದಲ್ಲಿ, ಅದೊಂದು ಕ್ಷಣದಲ್ಲಿ, ಆ ಒಂದೇ ಒಂದು ಕ್ಷಣದಲ್ಲಿ ಸೀತೆಯನ್ನು ಅಗಲಿ ಹೋಗಿಯೆಬಿಟ್ಟ ಸೌಮಿತ್ರಿ! ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ

Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಬೆಂಗಳೂರಿನಿಂದ ಹಾಸನದತ್ತ ಸುಮತಿಯಪಯಣ ಬಾವನ ಮುಖವನ್ನು ಒಮ್ಮೆ ದಿಟ್ಟಿಸಿ ನೋಡಿದಳು. ಅವಳ ನೋಟದಲ್ಲಿ ಯಾವುದೋ ಅವ್ಯಕ್ತವಾದ ದೃಢ ನಿರ್ಧಾರದ ಸೂಚನೆ ಬಾವನಿಗೆ ದೊರೆಯಿತು. ಆದರೂ ಅದೇನೆಂದು ತಿಳಿದುಕೊಳ್ಳಲು…. “ಏನು ನಿರ್ಧರಿಸಿದೆಯಮ್ಮಾ… ನೀನು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅದು ಎಲ್ಲರ ಹಿತ ದೃಷ್ಟಿಯಿಂದಲೂ ಉತ್ತಮವಾಗಿರುತ್ತದೆ ಎಂಬುದು ನನಗೆ ತಿಳಿದಿದೆ…. ವಯಸ್ಸು ಚಿಕ್ಕದಾದರೂ ನಿನ್ನ ಆಲೋಚನಾ ಶೈಲಿ ಬಹಳ ಪ್ರಬುದ್ಧವಾದದ್ದು…. ಎಂದಾಗ, ನಾದಿನಿ…”ಬಾವಾ… ನನ್ನ ನಿರ್ಧಾರ ಸರಿಯೋ ತಪ್ಪೋ ನನಗೆ ತಿಳಿದಿಲ್ಲ…. ಆದರೆ ನನಗೆ ಬೇರೆ ದಾರಿ ತೋಚುತ್ತಿಲ್ಲ….. ವಾರ್ಡಿನಲ್ಲಿ ದಾಖಲಾದ ಅಮ್ಮ ನಮ್ಮನ್ನು ಸಂಪೂರ್ಣವಾಗಿ ನಂಬಿದ್ದಾಳೆ…. ಅವಳ ಮುಖ ಈಗ ಸಂಪೂರ್ಣ ಗೆಲುವಿನಿಂದ ಕೂಡಿದೆ…. ಇಲ್ಲಿಂದ ಚಿಕಿತ್ಸೆ ಪಡೆದು ಹಿಂತಿರುವಾಗ ತಾನು ತನ್ನ ಹಿಂದಿನ ಆರೋಗ್ಯವನ್ನು ಪಡೆದು ಮನೆಗೆ ಹಿಂತಿರುತ್ತೇನೆ ಎಂಬ ಭರವಸೆಯನ್ನು ನನ್ನ ತಾಯಿಯ ಕಣ್ಣುಗಳಲ್ಲಿ ನಾನು ನೋಡಿದೆ… ಎಂದು ಅರ್ಧಕ್ಕೆ ನಿಲ್ಲಿಸಿದಳು. ವಿಷಯವನ್ನು ಪೂರ್ತಿ ಹೇಳದೇ ಏಕೆ ಅರ್ಧಕ್ಕೆ ನಿಲ್ಲಿಸಿದಳು? ಎಂದು ಪ್ರಶ್ನಾರ್ಥಕವಾಗಿ ಬಾವ ನಾದಿನಿಯನ್ನು ನೋಡುತ್ತಾ…. “ಹೌದು ನೀನು ಹೇಳಿದ್ದು ನಿಜ…. ನಾನು ಅದನ್ನು ಗಮನಿಸಿದೆ…. ಇಲ್ಲಿನ ಚಿಕಿತ್ಸೆ ಬಹಳ ದುಬಾರಿ ಎಂಬುದು ತಿಳಿಯಿತು…. ಆದರೆ ಎಲ್ಲ ಖರ್ಚು ವೆಚ್ಚಗಳನ್ನು ಭರಿಸಲು ನಮ್ಮಿಂದ ಸಾಧ್ಯವೇ? ಎಂಬ ವಿಚಾರ ನನ್ನನ್ನು ಚಿಂತೆಗೀಡು ಮಾಡಿದೆ…. ನಮ್ಮೆಲ್ಲಾ ದುಡಿಮೆಯ ಹಣವನ್ನು ಸೇರಿಸಿದರೂ ಕೂಡ ಒಂದು ಬಾರಿಯ ಡಯಾಲಿಸಿಸ್ ಸಾಧ್ಯವಾಗುತ್ತದೆಯೇ? ಎಂಬುದು ಕೂಡಾ ನನಗೆ ಸಂಶಯ”… ಎಂದ ಚಿಂತಾಕ್ರಾಂತನಾಗಿ.  ಬಾವನ ಪರಿಸ್ಥಿತಿಯು ನಾದಿನಿಗೆ ತಿಳಿದಿತ್ತು. ಎಷ್ಟೋ ಬಾರಿ ತಮಗೆ ಹಣಕಾಸಿನ ತೊಂದರೆ ಬಂದಾಗ ತನ್ನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ನಮಗೆ ಕೊಟ್ಟು ಸಹಾಯ ಮಾಡಿದ್ದಾರೆ ಬಾವ. ಒಮ್ಮೆ ಇನ್ನೇನು ಬದುಕಲು ಬೇರೆ ದಾರಿಯೇ ಇಲ್ಲವೇನೋ? ಎನ್ನುವ ಪರಿಸ್ಥಿತಿಯಲ್ಲಿ ಬಾವನೇ ನಮಗೆ ಸಹಾಯ ಮಾಡಿ ನಮ್ಮೆಲ್ಲರ ಜೀವ ಉಳಿಸಿದ್ದು. ತಮ್ಮ ಕೈಲಿದ್ದರೆ ಖಂಡಿತ ಏನಾದರೂ ಸಹಾಯ ಮಾಡೇ ಮಾಡುತ್ತಾರೆ. ಈಗ ಮಳೆಗಾಲ ಬೇರೆ ಸಮೀಪಿಸುತ್ತಿರುವುದರಿಂದ ಅವರಿಗೆ ಕೆಲಸ ಇರುವುದಿಲ್ಲ  ಎನ್ನುವುದು ನಾದಿನಿ ಬಲ್ಲಳು. ನಾದಿನಿ ಏನೂ ಮಾತನಾಡದೆ ಸುಮ್ಮನೆ ಎಲ್ಲೋ ನೋಡುತ್ತಾ ಏನೋ ಆಲೋಚನೆ ಮಾಡುತ್ತಾ ನಿಂತಿರುವುದನ್ನು ಕಂಡು… “ಈಗ ಏನು ಮಾಡುವುದು?…ನೀನು ಏನು ನಿರ್ಧರಿಸಿರುವೆ? ಎಂದು ಬಾವ ಕೇಳಿದಾಗ…. “ಹೇಗೆ ಹೇಳಲಿ ಎಂದು ನನಗೆ ತಿಳಿಯುತ್ತಿಲ್ಲ ಬಾವಾ”…. ಎಂದು ತನ್ನ ಮನದಲ್ಲಿದ್ದ ಆಲೋಚನೆಯನ್ನು ಭಾವನೆಗೆ ತಿಳಿಸಿದಳು. ನಾದಿನಿಯ ಮಾತನ್ನು ಕೇಳಿದ ಬಾವ ಒಮ್ಮೆ ದೀರ್ಘವಾದ ನಿಟ್ಟಿಸಿರನ್ನು ಬಿಟ್ಟು… ₹ಸರಿ ನಡಿ… ಅತ್ತೆಗೆ ತಿಳಿಸೋಣ ಬಾ”…. ಎಂದು ಹೇಳಿ ಮುಂದೆ ಹೆಜ್ಜೆ ಹಾಕಿದ ಬಾವನನ್ನು ನಾದಿನಿ ಹಿಂಬಾಲಿಸಿದಳು. ಇಡುವ ಪ್ರತಿ ಹೆಜ್ಜೆಯೂ ಭಾರವಾದಂತ ಅನಿಸಿತು. ಎಷ್ಟೇ ವೇಗವಾಗಿ ನಡೆದರೂ ಹೆಜ್ಜೆ ಮುಂದಿಡಲು ಸಾಧ್ಯವಾಗುತ್ತಿಲ್ಲ ಎಂದು ಅನಿಸಿತವಳಿಗೆ. ತುರ್ತು ಚಿಕಿತ್ಸಾ ಘಟಕ ವಿಭಾಗದ ವಾರ್ಡಿನ ಬಾಗಿಲ ಬಳಿ ಬಂದಾಗ ಅವಳ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿತ್ತು.  ಹೆಜ್ಜೆ ಮುಂದಡಲಾಗದೆ ಅವಳು ಬಾಗಿಲ ಬಳಿಯೇ ನಿಂತು ಬಿಟ್ಟಳು. ನಾದಿನಿ ತನ್ನ ಹಿಂದೆ ಬರುತ್ತಿದ್ದಾಳೆಯೇ ಎಂದು ಖಚಿತಪಡಿಸಿಕೊಳ್ಳಲು ಹಿಂತಿರುಗಿ ನೋಡಿದ ಆತ, ನಾದಿನಿಯ ಕಣ್ಣುಗಳು ತುಂಬಿದ್ದನ್ನು ಕಂಡು… “ಅಳಬೇಡ… ಈಗ ನೀನು ಅಧೀರಳಾಗಬಾರದು…. ನಿನ್ನ ದುಗುಡ, ನೋವು ಏನೆಂದು ನನಗೆ ತಿಳಿದಿದೆ…. ದಯವಿಟ್ಟು ಕಣ್ಣುಗಳನ್ನು ಒರೆಸಿಕೊ….. ನಿನ್ನ ತುಂಬಿದ ಕಣ್ಣುಗಳನ್ನು ಗಮನಿಸಿದರೆ ಅತ್ತೆ ಎಲ್ಲವನ್ನೂ ಊಹಿಸಿಬಿಡುತ್ತಾರೆ…. ನೀನು ಈಗ ಧೈರ್ಯವನ್ನು ತಂದುಕೊಳ್ಳಲೇಬೇಕು…. ನಿನ್ನ ಮನಸ್ಸಿನಲ್ಲಿರುವ ಯೋಜನೆಯ ಪ್ರಕಾರ ಅತ್ತೆಗೆ ಮನನವಾಗುವಂತೆ ತಿಳಿಸಿಬಿಡು.”… ಎಂದು ಬಾವ ಹೇಳಿದ್ದು ಕೇಳಿ, ಹೌದು ಅವರು ನಿಜವನ್ನೇ ಹೇಳುತ್ತಿದ್ದಾರೆ ಎನ್ನುತ್ತಾ ತನ್ನ ಕಣ್ಣು ಒರೆಸಿಕೊಂಡಳು. ಬಾರದ ನಗುವನ್ನು ಮುಖದಲ್ಲಿ ತಂದುಕೊಂಡು ಬಾವನ ಜೊತೆಗೆ ವಾರ್ಡಿನ ಒಳಹೊಕ್ಕಳು. ಅಳಿಯ ವಾರ್ಡಿನ ಒಳಗೆ ಬಂದಿದ್ದನ್ನು ಗಮನಿಸಿದ ಸುಮತಿ…. “ಡಾಕ್ಟರ್ ಏನ್ ಹೇಳಿದರು?… ಎದ್ದು ಕೇಳಿದಳು. ಅತ್ತೆಯ ಪ್ರಶ್ನೆಗೆ ಅಳಿಯ ನಾದಿನಿಯ ಕಡೆ ತಿರುಗಿ, ಹೇಳು ಎನ್ನುವಂತೆ ಸನ್ನೆ ಮಾಡಿದ. ಗಂಟಲುಬ್ಬಿ ಬಂದರೂ, ಕಣ್ಣುಗಳು ಮತ್ತೆ ಹನಿಗೂಡ ತೊಡಗಿದರೂ ಅದನ್ನು ತಾಯಿಗೆ ತೋರಕೊಡದೆ….. “ಅಮ್ಮಾ…. ಡಾಕ್ಟರ್ ಹೇಳಿದರು…. ಇಲ್ಲಿ ದೊರಕುವ ಚಿಕಿತ್ಸೆಯು ನಮ್ಮ ಹಾಸನದ ಜಿಲ್ಲಾ ಆಸ್ಪತ್ರೆಯಲ್ಲಿಯೇ ಲಭ್ಯವಿದೆ. ಅಲ್ಲಿಗೆ ಹೋಗಿ ಪಡೆದುಕೊಳ್ಳಬಹುದು…. ಎಂದಿದ್ದಾರಮ್ಮಾ”…. ಎನ್ನುತ್ತಾ ಅಮ್ಮನ ಬಳಿಗೆ ಬಂದಳು. ತನ್ನ ಅಳುವನ್ನು ತಡೆ ಹಿಡಿದುಕೊಳ್ಳಲು ಅವಳು ಹರಸಾಹಸ ಪಡಬೇಕಾಯಿತು. ಸುಮತಿಯನ್ನು ಬಿಗಿಯಾಗಿ ಅಪ್ಪಿಕೊಂಡಳು.  “ಆದಷ್ಟು ಬೇಗನೇ ನಾವು ಇಲ್ಲಿಂದ ಹೋಗೋಣ… ಎಂದು ಹೇಳುತ್ತಾ ವಾರ್ಡಿನಲ್ಲಿದ್ದ ನರ್ಸ್ ಬಳಿಗೆ ತೆರಳಿದಳು…. “ಸಿಸ್ಟರ್…. ತಾಯಿಯನ್ನು ಇಲ್ಲಿ ಈಗ ಅಡ್ಮಿಟ್ ಮಾಡುವುದಿಲ್ಲ…. ಇನ್ನೊಂದೆರಡು ದಿನದ ಬಳಿಕ ಬರುತ್ತೇವೆ_…. ಎಂದು ಹೇಳಿದಳು.‌… “ಓ ಹೌದಾ… ನೀವು ಔಷಧಿಯನ್ನು ತಂದಿದ್ದರೆ ಹಾಗೂ ಇಲ್ಲಿ ಅಡ್ಮಿಟ್ ಮಾಡಿದ್ದರೆ ಚಿಕಿತ್ಸೆಯನ್ನು ಪ್ರಾರಂಭಿಸಬಹುದಿತ್ತು…. ಸರಿ ನಿಮ್ಮ ಇಚ್ಛೆ”…. ಎಂದು ಹೇಳಿ ಸುಮತಿಯನ್ನು ವಾರ್ಡಿನಿಂದ ಕರೆದುಕೊಂಡು ಹೋಗುವುದಕ್ಕೆ ಅನುಮತಿ ನೀಡಿದಳು. ಮಾವನಿಗೆ ಕರೆ ಮಾಡಿ ವಿಷಯ ತಿಳಿಸುವಂತೆ ನಾದಿನಿ ಬಾವನನ್ನು ವಿನಂತಿಸಿಕೊಂಡಳು. ಸರಿ ಎಂದು ಹೇಳಿ ಬಾವ ರಿಸೆಪ್ಶನ್ ಗೆ ಹೋಗಿ ಅಲ್ಲಿಂದ ಮಾವನಿಗೆ ಕರೆ ಮಾಡಿ, ಅತ್ತೆಯನ್ನು ಇಲ್ಲಿಂದ ಹಾಸನದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ದಾಖಲು ಮಾಡುತ್ತೇವೆ. ಇಲ್ಲಿ ಹೆಚ್ಚು ಸಮಯ ಕಳೆಯಲು ಅತ್ತೆಯಿಂದ ಸಾಧ್ಯವಿಲ್ಲ ಹಾಗಾಗಿ ಇಲ್ಲಿಂದ ನೇರವಾಗಿ ಬಸ್ ನಿಲ್ದಾಣಕ್ಕೆ ಹೋಗಿ ಅಲ್ಲಿಂದ ಹಾಸನಕ್ಕೆ ಹೋಗುತ್ತೇವೆ ಎಂಬುದಾಗಿ ಅಳಿಯ ಸುಮತಿಯ ತಮ್ಮನಿಗೆ ತಿಳಿಸಿದ. ತಮ್ಮನಿಗೆ ಅಳಿಯನ ಮಾತು ಕೇಳಿ ಮನದಲ್ಲಿ ಏನೋ ಕಸಿವಿಸಿ ಉಂಟಾಯಿತು. ಸ್ವಲ್ಪ ಆತಂಕವಾಯಿತು. ಆಸ್ಪತ್ರೆಯಲ್ಲಿ ನಡೆದ ವಿಷಯ ಅಳಿಯ ಸುಮತಿಯ ತಮ್ಮನಿಗೆ ತಿಳಿಸಿದ. ಪರಿಸ್ಥಿತಿಯ ಅರ್ಥ ಅವನಿಗಾಯಿತು. ಅವನ ಮನಸ್ಸು ಭಾರವಾಯಿತು…”ಸರಿ ಅಕ್ಕನನ್ನು ನೀವು ಕರೆದುಕೊಂಡು ಹೋಗಿ….. ಹಾಸನದಲ್ಲಿ ಅಕ್ಕನಿಗೆ ಚಿಕಿತ್ಸೆ ಕೊಡಿಸಿ…. ನಾನು ಕುಟುಂಬ ಸಮೇತ ಅಲ್ಲಿಗೆ ಬರುತ್ತೇನೆ”….ಎಂದು ಸುಮತಿಯ ತಮ್ಮ ಹೇಳಿದ. ಸುಮತಿಯನ್ನು ಅಲ್ಲಿಂದ ಕರೆದುಕೊಂಡು ಅಳಿಯ ಮತ್ತು ಮಗಳು ಹಾಸನದ ಕಡೆಗೆ ಪ್ರಯಾಣ ಬೆಳೆಸಿದರು. 

Read Post »

ಕಥಾಗುಚ್ಛ

ಸಣ್ಣ ಕಥೆ “ರಂಗಣ್ಣನ ಮಂಗ” ಉತ್ತಮ ಎ ದೊಡ್ಮನಿ

ಕಥಾ ಸಂಗಾತಿ ಉತ್ತಮ ಎ ದೊಡ್ಮನಿ “ರಂಗಣ್ಣನ ಮಂಗ”           ಒಂದು ಊರಿನಲ್ಲಿ ಒಬ್ಬ ರಂಗಣ್ಣ ಎನ್ನುವವನಿದ್ದ. ಇರಲು ಒಂದು ಚಿಕ್ಕ ಮನೆ. ಅದನ್ನು ಮನೆ ಅಂದರೆ ಮನೆ, ಜೋಪಡಿ ಅಂದರೆ ಜೋಪಾಡಿ, ನೀವು ಏನಾದರೂ ಅನ್ಕೋಬಹುದು, ಆದರೆ ರಂಗಣ್ಣನಿಗೆ ಮಾತ್ರ ಅದು ಮನೆನೇ.      ಅವನಿಗೆ ನನ್ನವರು-ತನ್ನವರು ಎಂದು ಹೇಳಿಕೊಳ್ಳುವರು ಯಾರು ಇರಲಿಲ್ಲ. ಇಷ್ಟಾ ಆದರೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಇಲ್ಲದಿದ್ದರೆ ಮರಗಮ್ಮನ ಕಟ್ಟೆಯ ಮೇಲೆ ಕುಳಿತು ಯಾರಾದರೂ ಕೊಟ್ಟ ಬೀಡಿ ಸೇದುತ್ತಾ ಕಾಲ ಮ್ಯಾಲ ಕಾಲ ಹಾಕಿ ಮಲಗ್ತೀದ್ದ. ಊಟ ಸಿಕ್ಕರೆ ತಿನ್ನುತ್ತಿದ್ದ, ಇಲ್ಲ ಅಂದರೆ ಇಲ್ಲ. ಬದುಕ ಅಂದುರು ಹಿಂಗೆ ಇರಬೇಕು ಅನ್ನೋ ನಿಯಮ-ಗಿಮಾ ಏನ್ ಇರಲಿಲ್ಲ.       ಆಗಾಗ ಊರ ಪಕ್ಕದ ಕಾಡಿಗೆ ಹೋಗಿ ಒಣ ಕಟ್ಟಿಗೆಗಳನ್ನು ಆರಿಸಿಕೊಂಡು ಹೋಟೆಲ್‌ಗೆ ಮಾರುತ್ತಿದ್ದ. ಅದಕ್ಕೆ  ಒಂದು ಕಪ್ ಚಹಾ, ಕೆಲವೊಮ್ಮೆ ನಾಸ್ಟಾ ಸಿಗುತ್ತಿತ್ತು. ಅದೇ ಅವನ ಸಂಬಳ.ಆ ಹೋಟೆಲ್ ತೊಗರಿ ಕಟ್ಟಿಗೆಯಿಂದ ಕಟ್ಟಿದ ಅದರ ಮೇಲೆ ನಾಲ್ಕು  ಪತ್ರಾ. ಚಹಾ ಗ್ಲಾಸ್ ತೊಳೆದಿದ ನೀರಿನಲ್ಲಿ  ನಾಯಿಗಳು, ಹಂದಿಗಳು ಖಾಯಂ ಠಿಕಾಣಿ. ಕೋಳಿಗಳು ನೆಂಟರ ಹಾಗೆ  ಬಂದು ದಣಿಯೂ ಹಾರಿಸ್ಕೊತಿವು. ಒಳಗೆ ನೊಣಗಳದ್ದೇ ಜಾತ್ರೆ.      ರಂಗಣ್ಣ ಹೋಟೆಲ್ ಒಳಗೆ ಹೋಗ್ತಾ ಇರಲಿಲ್ಲ. ಅವನಿಗೋಸ್ಕರ ಹೊರಗೇ ಒಂದು ಗ್ಲಾಸ್ ಇಟ್ಟಿರುತ್ತಿದ್ದರು. ಅದರಲ್ಲಿ ಚಹಾ ಕುಡಿದು, ತಾನೆ ತೊಳೆದು ಅದೇ ಜಾಗದಲ್ಲಿ ಇಟ್ಟು ಹೊರಡುತ್ತಿದ್ದ.ಅವಾ ಏನು ಹುಟ್ಟಿನಿಂದ ಕುಂಟನಲ್ಲ. ಚಿಕ್ಕವನಿದ್ದಾಗ ಅಪ್ಪುನ ಜೊತೆ ದನ ಮೇಯಿಸಲು ಹೋಗಿ ತೆಗ್ಗಿನಲ್ಲಿ ಬಿದ್ದಿದ್ದ. ಆಗ ಸರಿಯಾದ ಚಿಕಿತ್ಸೆ ಸಿಗದೇ ಕುಂಟಾಗಿದ್ದ. ಊರವರು ದಯೆಯಿಂದ ಸರ್ಕಾರದ ಅಂಗವಿಕಲ ವೇತನ ಮಾಡಿಸಿಕೊಟ್ಟಿರು. ಅದು ಯಾರ ಅಂತ ಅವನೀಗ ಗೊತ್ತಿಲ್ಲ. ಅದೇ ಅವನ ಬದುಕಿನ ಒಂದು ಆಧಾರವಾಗಿತ್ತು. ಹೀಗೆ ಯಾರಿಗೂ ತೊಂದರೆ ಕೊಡದೆ, ಯಾರ ಮೇಲೂ ಆಸೆ ಇಡದೆ ರಂಗಣ್ಣ ತನ್ನ ಬದುಕು ಸಾಗಿಸುತ್ತಿದ್ದ.     ಒಂದು ದಿನ ಬೆಳಗ್ಗೆ ಎದ್ದು, ಹೋಟೆಲ್‌ನಲ್ಲಿ ಚಹಾ ಕುಡಿದು, ಬೀಡಿ ಹಚ್ಚಿಕೊಂಡು ಕಟ್ಟಿಗೆ ತರಲು ಕಾಡಿಗೆ ಹೋದ. ಅಲ್ಲಲ್ಲಿ ಬಿದ್ದಿದ್ದ ಒಣ ಕಟ್ಟಿಗೆಗಳನ್ನು ಕೂಡಿಸಿ ಹೊರೆ ಕಟ್ಟಲು ಮುಂದಾದಾಗ, ಹತ್ತಿರದಿಂದ ಸಣ್ಣದ್ದೊಂದು ಧ್ವನಿ ಕೇಳಿಸಿತು.”ಏನಿರಬಹುದು?” ಎಂದು ಸುತ್ತಲೂ ನೋಡಿದ.ಮುಳ್ಳಿನ ಗಿಡದ ನಡುವೆ ಒಂದು ಮಂಗ್ಯಾನ ಮರಿ ಸಿಕ್ಕಿಕೊಂಡು ಕಿರುಚುತ್ತಿತ್ತು.”ಅಯ್ಯೋ ಪಾಪ!” ಎಂದು ಓಡಿಹೋಗಿ ಮುಳ್ಳುಗಳನ್ನು ಬದಿಗಿಟ್ಟು ಅದನ್ನು ಎಚ್ಚರಿಕೆಯಿಂದ ಹೊರತೆಗೆದ.       ಕಟ್ಟಿಗೆಯ ಹೊರೆ ತಲೆಯ ಮೇಲೆ ಹೊತ್ತು ಊರ ಕಡೆ ಹೊರಟ.ಆದರೆ ಆ ಮರಿ ಅವನ ಹಿಂದೆ ಹಿಂದೆ ಬರತೊಡಗಿತು. ಓಡಿಸಿದರೂ ಅದು ಹೋಗಲಿಲ್ಲ.ಕೊನೆಗೆ ನಗುತ್ತಾ, “ನನಗೂ ಯಾರಿಲ್ಲ… ನಿನಗೂ ಯಾರಿಲ್ಲ… ಇನ್ನು ನಾವು ಇಬ್ಬರೂ ದೋಸ್ತುರು” ಎಂದು ಹೇಳಿ ತನ್ನ ಹೆಗಲ ಮೇಲೆ ಕೂರಿಸಿಕೊಂಡ.ಅಲ್ಲಿಂದಲೇ ಅವರಿಬ್ಬರ ಬದುಕು ಒಂದಾಯಿತು.      ರಂಗಣ್ಣ ಹೆಗಲ ಮೇಲೆ ಕುಳಿತ ಮಂಗ್ಯಾನ ಮರಿ ಊರಿಗೆ ಬಂದಾಗ ಎಲ್ಲರ ಕಣ್ಣು ಅವರಿಬ್ಬರ ಮೇಲೆಯೇ ನೆಟ್ಟಿತು.ಹೋಟೆಲ್ ಮುಂದೆ ಕಟ್ಟಿಗೆಯ ಹೊರೆ ಇಳಿಸುತ್ತಿದ್ದಂತೆ ಭೀಮಣ್ಣಗೌಡ ನಗುತ್ತಾ, “ಏನಪ್ಪಾ ರಂಗ, ಇವತ್ತ ಇದೇನು ನಿಂದು ಹೊಸ ಅವತಾರ?” ಎಂದ.ಪಕ್ಕದಲ್ಲೇ ನಿಂತಿದ್ದ ತುರುಕೂರು ಮುಲ್ಲಾ, “ಅಯ್ಯೋ… “ರಂಗಕ್ಕೆ ಉಪ್ಪಾರ ಮಂಗ್ಯಾ” ಎಂದು ತಮಾಷೆ ಮಾಡಿದ.ಅಲ್ಲಿದ್ದವರೆಲ್ಲ ನಕ್ಕರು. ರಂಗಣ್ಣ ಮಾತ್ರ ಯಾರ ಮಾತಿಗೂ ಉತ್ತರಿಸದೆ ಮುಗುಳ್ನಗುತ್ತಾ ಕಟ್ಟಿಗೆಯನ್ನು ಇಳಿಸಿ ತನ್ನ ಜೋಪಡಿಯ ಕಡೆ ನಡೆದುಹೋದ.         ಮನೆಗೆ ಬಂದ ಕೂಡಲೆ ಮರಿಯನ್ನು ಕೆಳಕ್ಕಿಳಿಸಿದ. ಅದರ ಕಾಲಿಗೆ ಸಣ್ಣ ಗಾಯವಾಗತ್ತು ಅರಸೀಣ ಹಚ್ಚಿ, ಹಳೆಯ ಬಟ್ಟೆಯ ತುಂಡಿನಿಂದ ಮೆಲ್ಲಗೆ ಕಟ್ಟಿದ.ಒಂದು ಹಳೆಯ ತಟ್ಟೆಯಲ್ಲಿ ನೀರು ಹಾಕಿ ಅದರ ಮುಂದೆ ಇಟ್ಟ. ನಂತರ ಮನೆಯಲ್ಲಿ ತಿನ್ನಲು ಏನಾದರೂ ಇದೆಯೇ ಎಂದು ಹುಡುಕಿದ.ಕೊನೆಗೆ ಪಕ್ಕದ ಮನೆಯ ಪಾರವ್ವ ಹಿಂದಿನ ರಾತ್ರಿ ಕೊಟ್ಟಿದ್ದ ಒಣ ರೊಟ್ಟಿ ಸಿಕ್ಕಿತು. ಅದನ್ನು ಚಿಕ್ಕಚಿಕ್ಕ ತುಂಡುಗಳಾಗಿ ಮುರಿದು ಮಂಗದ ಮುಂದೆ ಇಟ್ಟ.ಮೊದಲು ಅದು ಅನುಮಾನದಿಂದ ನೋಡಿತು. ನಂತರ ಹಸಿವಿನಿಂದ ನಿಧಾನವಾಗಿ ತಿನ್ನತೊಡಗಿತು. ರೊಟ್ಟಿಯನ್ನೂ ಅದರ ಜೊತೆ ಹಂಚಿಕೊಂಡ.         ಕಾಡಿಗೆ ಹೋಗಿ ಬಂದ ಆಯಾಸದಿಂದ ರಂಗಣ್ಣ ಬಾಗಿಲು ಮುಂದ ಮಾಡಿ ನೆಲದ ಮೇಲೆಯೇ ಅಡ್ಡಾದ.ಮಂಗ್ಯಾನ ಮರಿಗೆ ಮಾತ್ರ ಹೊಸ ಮನೆಯ ಕುತೂಹಲ.ಒಮ್ಮೆ ಈ ಮೂಲೆಗೆ, ಮತ್ತೊಮ್ಮೆ ಆ ಮೂಲೆಗೆ ಓಡುತ್ತಾ, ಗೋಡೆಯ ಮೇಲೆ ಹತ್ತಿ ಇಳಿಯುತ್ತಾ, ಪಾತ್ರೆಗಳನ್ನು ಮುಟ್ಟುತ್ತಾ ಆಟವಾಡತೊಡಗಿತು.ರಂಗಣ್ಣ ಕಣ್ಣು ಮುಚ್ಚಿದರೆ ಸಾಕು, ಅದು ಬಂದು ಅವನ ಎದೆ ಮೇಲೆ ಹತ್ತುತ್ತಿತ್ತು.ಕಿವಿ ಎಳೆಯುತ್ತಿತ್ತು.ಕೂದಲು ಹಿಡಿದು ಎಳೆಯುತ್ತಿತ್ತು.“ಅಯ್ಯೋ… ಇದು ಮಲಗೋಕೂ ಬಿಡಂಗ ಕಾಣಲ್ಲ!” ಎಂದು ನಗುತ್ತಾ ಅದನ್ನು ತಬ್ಬಿಕೊಂಡ.        “ಇದು ಯಾವಾಗ ಬೇಕಾದರೂ ಓಡಿಹೋಗಬಹುದು. ಅದಕ್ಕೆ ಕಟ್ಟಿ ಹಾಕಲು ಚೈನ್ ಮಾಡಿ ಜೊತೆ ತಗೊಂಡು ಓಡಾಡಬಹುದು, ಜೊತೆಯಲ್ಲೇ ಇಟ್ಟುಕೊಳ್ಳಬಹುದು.”ಎಂದುಕೊಂಡು ಮಂಗವನ್ನು ಬಗಲಲ್ಲಿ ಎತ್ತಿಕೊಂಡು ಕಂಬಾರ ನಾಗಪ್ಪನ ಮನೆ ಕಡೆ ಹೊರಟ.ನಾಗಪ್ಪನ ಮನೆಗೆ ಹೋಗುವ ದಾರಿ ಶಾಲೆಯ ಮುಂದೆ ಹಾದು ಹೋಗುತ್ತಿತ್ತು.ಅಷ್ಟರಲ್ಲಿ ಶಾಲೆ ಆಟಕೆ ಬಿಡಲಾಗಿತ್ತು.ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು.        ರಂಗಣ್ಣನ ಹೆಗಲ ಮೇಲೆ ಕುಳಿತಿದ್ದ ಮಂಗವನ್ನು ಕಂಡ ತಕ್ಷಣ ಎಲ್ಲ ಮಕ್ಕಳು ಓಡಿಬಂದರು.”ಮಂಗ… ಮಂಗ…!” ಎಂದು ಕೂಗುತ್ತಾ ಅದರ ಹಿಂದೆ ಬಿದ್ದರು.ಮೊದಲು ಮಂಗ ಹೆದರಿತು.ಟಿಸ್ ಟಿಸ್ ಅಂತ ಅವುರ ಮ್ಯಾಲೆ ಜಿಗಿದಾಗೆ ಮಾಡದು. ಸ್ವಲ್ಪ ಹೊತ್ತಿನಲ್ಲೇ ಮಕ್ಕಳ ಜೊತೆ ಆಟವಾಡಲು ಶುರುಮಾಡಿತು.ಒಬ್ಬನ ತಲೆಯ ಮೇಲೆ ಹಾರಿ ಕುಳಿತಿತು.ಇನ್ನೊಬ್ಬನ ಕೈಯಲ್ಲಿದ್ದ ಕಡಲೆ ಕಸಿದುಕೊಂಡಿತು.ಮಕ್ಕಳು ನಗುತ್ತಾ ಅದರ ಹಿಂದೆ ಓಡಿದರು.ಶಾಲೆಯ ಮೈದಾನವೇ ಕ್ಷಣಾರ್ಧದಲ್ಲಿ ಸಂಭ್ರಮದಿಂದ ತುಂಬಿತು.ರಂಗಣ್ಣ ಮಾತ್ರ ನಿಂತು ಮಕ್ಕಳ ಖುಷಿಯನ್ನು ನೋಡಿ ಮನಸಾರೆ ನಕ್ಕ.”ಇದು ನನಗಿಂತ ಬೇಗ ಊರವರ ಮನಸ್ಸು ಗೆದ್ದಿತಲ್ಲ…” ಎಂದು ತನ್ನೊಳಗೆ ಮಾತಾಡಿಕೊಂಡ.ಅಲ್ಲಿಂದ ನಿಧಾನವಾಗಿ ನಾಗಪ್ಪನ ಮನೆಯ ಕಡೆ ಹೆಜ್ಜೆ ಹಾಕಿದ.        ನಾಗಪ್ಪನ ಮನೆಯ ಮುಂದೆ ಹೋಗಿ ರಂಗಣ್ಣ ನಿಂತ.“ನಾಗಪ್ಪಣ್ಣ… ಓ ನಾಗಪ್ಪಣ್ಣ…” ಎಂದು ಎರಡು-ಮೂರು ಸಲ ಕೂಗಿದ.ಒಳಗಿಂದ ಕಬ್ಬಿಣದ ಮೇಲೆ ಸುತ್ತಿಗೆಯ ಸದ್ದು ನಿಂತಿತು.”ಯಾರು?” ಎಂದು ಹೊರಗೆ ಬಂದ ನಾಗಪ್ಪ, ರಂಗಣ್ಣನ ಹೆಗಲ ಮೇಲೆ ಕುಳಿತಿದ್ದ ಮಂಗವನ್ನು ನೋಡಿ ಕಕ್ಕಾಬಿಕ್ಕಿಯಾದ.“ಏನಯ್ಯ ರಂಗಾ! ಇದು ಎಲ್ಲಿಂದ ತಂದೆ?”“ಕಾಡಲ್ಲಿ ಮುಳ್ಳಿಗೆ ಸಿಕ್ಕಿಕೊಂಡಿತ್ತು. ಪಾಪ ಅಳ್ತಿತ್ತು. ಬಿಡಿಸಿಕೊಂಡು ಬಂದೆ. ಈಗ ನನ್ನ ಜೊತೆಯಲ್ಲೇ ಇರ್ತದೆ. ಇದಕ್ಕೊಂದು ಸಣ್ಣ ಚೈನ್ ಮಾಡಿಕೊಡು.”ನಾಗಪ್ಪ ನಕ್ಕ.“ನಿನಗೇ ಗತಿಯಿಲ್ಲ. ಈಗ ಇದನ್ನೂ ಸಾಕ್ತೀಯಾ?”ಅಷ್ಟರಲ್ಲಿ ಅಲ್ಲೇ ಕುಳಿತಿದ್ದ ಕುರುಬರ ಬೀರಣ್ಣ,“ನಾಯಿ ಸಾಕೋರು, ಬೆಕ್ಕು ಸಾಕೋರು ನೋಡಿದ್ದೇವೆ. ನೀನು ಮಂಗ ಸಾಕ್ತೀಯಪ್ಪಾ! ಊರಲ್ಲಿ ನೀನೇ ಭಾರಿ.”       ರಂಗಣ್ಣ ಮಾತ್ರ ಮಂಗದ ತಲೆಯನ್ನು ಸವರುತ್ತಾ,“ಇದಕ್ಕೂ ಜೀವ ಇದೆ ಬೀರಣ್ಣ. ಇದಕ್ಕೂ ಪ್ರೀತಿ ಬೇಕಲ್ಲ…” ಎಂದ.ಆ ಒಂದು ಮಾತಿಗೆ ಅಲ್ಲಿದ್ದವರು ಕ್ಷಣಕಾಲ ಮೌನರಾದರು.ಅಷ್ಟರಲ್ಲಿ ಅಡುಗೆ ಮನೆಯಿಂದ ನಾಗಪ್ಪನ ಹೆಂಡತಿ ಹೊರಬಂದಳು.”ಏನ್ರಿ ಇಷ್ಟೊಂದು ಗದ್ದಲ?”ಅವಳ ಕಣ್ಣು ಮಂಗದ ಮರಿಯ ಮೇಲೆ ಬಿತ್ತು.“ಅಯ್ಯೋ… ಎಷ್ಟು ಮುದ್ದಾಗಿದೆ!” ಎಂದು ಅದನ್ನು ಎತ್ತಿಕೊಳ್ಳಲು ಕೈ ಚಾಚಿದಳು.ಮಂಗ ಹೆದರಿ ಓಡಿ ಹೋಗಿ ರಂಗಣ್ಣನ ಬೆನ್ನ ಹಿಂದೆ ಅಡಗಿತು.ನಾಗಪ್ಪ ನಗುತ್ತಾ,ನೋಡಪ್ಪ ಈ ಹೆಂಗಸುರ ಕಂಡೂರಾ ಗಂಡದೇರು ಅಷ್ಟೇ ಅಂಜತರ ಅನ್ಕೊಂಡಿದ್ದೆ, ಆದುರು ಈ ಮಂಗ್ಯಾಗಳು ಹೇದುರ್ತಾವ ಅಂತ ನಾಗಪ್ಪ. ಎಲ್ಲರೂ ಒಮ್ಮೆಲೇಗೆ ಕೊಳ್ಳ ಅಂತ ನಕ್ಕುರು.ಹೌದು ಹೌದು ಬಾರಿ ಅಂಜತಿರಿ ಅಂತ ಒಳಗೆ ಹೋಗಿ ಒಂದು ತಟ್ಟೆಯಲ್ಲಿ ಬಿಸಿ ರೊಟ್ಟಿ, ಸ್ವಲ್ಪ ಪಲ್ಯ, ಒಂದು ಬಟ್ಟಲಲ್ಲಿ ನೀರು ತಂದು ರಂಗಣ್ಣನ ಮುಂದೆ ಇಟ್ಟಳು.”ಮೊದಲು ನೀನು ಊಟ ಮಾಡು. ಆಮೇಲೆ ಚೈನ್ ಮಾಡಿಸಿಕೋ.”ರಂಗಣ್ಣ ಕೃತಜ್ಞತೆಯಿಂದ ಅವಳನ್ನು ನೋಡಿದ.      ಏ ಬೀರಪ್ಪ ನಿಂಗೊತ್ತಿಲ್ಲ ಈ ಹೆಣ್ಣು ಮಕ್ಕಳು. ನಾ ಯಾರ್ ಹೇಳು, ಕಂಬಾರ ನಾಗಪ್ಪ. ಕಬ್ಬಿಣ ಕಾಸಿ ಬಗ್ಗಿಸೋದೆ ನನ್ನ ಕೆಲಸ, ಯಾವಾಗ-ಹೇಗೆ-ಎಲ್ಲಿ ಬಡಿಬೇಕಂತ ನನಗೆಲ್ಲಾ ಗೊತ್ತು. ಹೌದಪ್ಪ ಎಲ್ಲರಿಗೂ ನಿನ್ನ ಧೈರ್ಯ ಇರಬೇಕಲ್ಲ. ಈಗ  ಈ ಕೆಲಸ ಬಿಟ್ಟು ಊರಿನ ಗಂಡುಸರಿಗ-ಮುಂದ ಮದಿ ಆಗವರಿಗೆ ಪಾಠ ಮಾಡ “ಹೆಂಡತಿಯರಿಗೆ ಹದ್ದಬಸ್ತನಲ್ಲಿ ಹೇಗ  ಇಡುವುದು ಅಂತ” ಗಿರಾಕಿ ಬಹಳ ಆತದ. ಹೇ ಹುಚ್ಚ ಅದಕ್ಕೆ ನೀವೆಲ್ಲ ಫೇಲ್ ಆತಿರಿ ನೋಡು, ನಾವೂ ಮಾಡೋದು ಅವರಿಗೆ ಗೊತ್ತಾಗಬಾರದು. ಎಲ್ಲಾ ಸೀಕ್ರೆಟ್ ಇರಬೇಕು. ಇದೆಲ್ಲ ಗೊತ್ತಾದರೆ ನನ್ನ ದುಖಾನ ಬಂದಾತದ. ಸರಿ ಏನಾದ್ರೂ ಮಾಡು ನಾ ಹೋಗ್ತೀನಿ, ಚಾ ಗ್ಲಾಸ್ ಅಲ್ಲೇ ಕಟ್ಟಿ ಮೇಲೆ ಇಟು, ರೊಕ್ಕ ಆಮೇಲೆ ಕೂಡ್ತಿನಿ ಅಂತ,  ಕೊಡಲಿ ಹೆಗಲ ಮ್ಯಾಲ್ ಇಟ್ಟುಕೊಂಡು ಹೊರಟ         ಊಟ ಮುಗಿದ ಮೇಲೆ ನಾಗಪ್ಪ ಸಣ್ಣ ಕಬ್ಬಿಣದ ಸರ ಮಾಡಿ, ಕುತ್ತಿಗೆಗೆ ನೋವಾಗದಂತೆ ಮೃದುವಾಗಿ ಚೈನ್ ಹಾಕಿದ ಕೂಡಲೇ ಅದು ಎರಡು ಹೆಜ್ಜೆ ಹಿಂದೆ ಸರಿದು, ಮತ್ತೆ ರಂಗಣ್ಣನ ಹೆಗಲ ಮೇಲೆ ಹಾರಿ ಕುಳಿತಿತು.ಈ ಪ್ರೀತಿಗೆ ಚೈನ್ ಬೇಕಾಗಲ್ಲ. ಆದರೆ ಊರು ದೊಡ್ಡದು. ಕಳೆದು ಹೋದರೆ ಹುಡುಕೋಕಾಗಲ್ಲ.”ಆ ಮಾತು ಕೇಳಿ ನಾಗಪ್ಪನ ಮುಖದಲ್ಲಿ ಮೆಚ್ಚುಗೆಯ ನಗು ಮೂಡಿತು.ಅಲ್ಲಿದ್ದ ಎಲ್ಲರಿಗೂ ಮೊದಲ ಬಾರಿಗೆ ರಂಗಣ್ಣನ ಸರಳ ಮನಸ್ಸಿನ ಆಳ ಅರ್ಥವಾಯಿತು.           ಅಂದು ಸಂಜೆ ರಂಗಣ್ಣ ಮಂಗವನ್ನು ಹೆಗಲ ಮೇಲೆ ಕೂರಿಸಿಕೊಂಡು ಊರೊಳಗೆ ನಡೆದಾಗ, ಮಕ್ಕಳು ಹಿಂದೆ ಹಿಂದೆ ಓಡಿದರು.ಯಾರೋ ಕಡಲೆ ಕೊಟ್ಟರು.ಇನ್ನೊಬ್ಬರು ಬಾಳೆಹಣ್ಣು ಕೊಟ್ಟರು.ಹೋಟೆಲ್‌ನವನು ಬ್ರೆಡ್ ಕೊಟ್ಟ.ಮಂಗ ಎಲ್ಲವನ್ನೂ ಮೊದಲು ರಂಗಣ್ಣನ ಕೈಗೆ ಕೊಟ್ಟು, ಅವನು ಕೊಟ್ಟ ನಂತರವೇ ತಿನ್ನುತ್ತಿತ್ತು.ಅದನ್ನು ನೋಡಿದ ತುರುಕೂರು ಮುಲ್ಲಾ ನೋಡ್ರಿ ಗೌಡ ಮನಷ್ಯರು ಅಂತೂ ಜೋಡಿ ಆಲಿಲ್ಲ, ಈ ಮೂಕ ಪ್ರಾಣಿ ಜೋಡಿಯಿತ್ತು.        ಏನ್ ಮಾಡೋದು ಅವುನ ಅವ್ವ ಸಂಡಸ್ ಮಾಡುಕು ಹೋದಾಗ ಹಾವು ಕಚ್ಚಿ ಸತ್ತುಳು. ಅದೇ ಟೆನ್ಶನ್ ದಾಗ ಇದ್ದು ಇದ್ದು ಹೀಗ ಆದ. ಅದಕ್ಕೆ ಗೌಡ್ರೆ ನೀವು ನಮ್ಮೂರಿಗೊಂದು ಶೌಚಾಲಯ ಕಟ್ಟಿಸಬೇಕು. ಗಂಡಸರಿಗೆ ಅಲ್ಲದೆ ಹೋದರೂ ಈ ಹೆಣ್ಣು ಮಕ್ಕಳಿಗಾದರೂ ಶೌಚಾಲಯ ಕಟ್ಟಿಸಬೇಕು. ಗಂಡಸುರು ಎಲ್ಲದುರು ಹೋಗ್ತಾರ ಪಾಪ ಈ ಹೆಂಗಸುರದು ಹೈರಾಣ ಆದಾ.      ನೀ ಹೇಳೋದ ಕರೆ ಅದಾರೋ. ಪಂಚಾಯಿತಿಯಿಂದ ಕಟ್ಟುಸ್ತೇವು ಅಂತೇಳಿ ರೊಕ್ಕ ತೊಗೋತಾರೆ, ಕಟ್ಟಿಸಿದುರು ಅದರಲ್ಲಿ ಕೂಡಲ್ಲ ಮತ್ತೆ ಹೊರಗೆ ಹೋಗ್ತಾರೆ.   ಈ ನಮ್ಮ ಹಳ್ಳಿ, ಜನ ಮಡಿ-ಮೈಲಿಗೆ ಅದು ಇದು ಅಂತ ಹೇಳಿ.   ನಾ ಏನು ಕೈಹಿಡಿದು ಕುಡಿಸುಕಾಗುತ್ತಾ ಮುಲ್ಲಾ. ನೀವು ಹೇಳೋದು ಕರೆಯಾದರೆ ಜನರಿಗೆ ಬುದ್ಧಿ ಬರಬೇಕು ಗೌಡ್ರೆ. ಅಂತ ಹೇಳಿ ಅವರು ಲೆಕ್ಕದಲ್ಲಿ ಬೆಳಗ್ಗಿನ ಚಾ ಕುಡಿದು ಅವುನು ಕೈಯಾಗ ಸಂಡಾಸ್ಹೊ ಡಬ್ಬಾ ಹಿಡಕೊಂಡು ಹಳ್ಳುದ ಕಡೆ ಹೊರಟು ಹೋದ.         ಕಾಲ ಕಳೆಯುತ್ತಾ ಹೋಯಿತು.ಮಂಗ ಈಗ ರಂಗಣ್ಣನ ಸಾಕುಪ್ರಾಣಿಯಷ್ಟೇ ಅಲ್ಲ, ಅವನ ನೆರಳೇ ಆಗಿತ್ತು.ರಂಗಣ್ಣ ಎಲ್ಲಿಗೆ ಹೋದರೂ ಅದು ಹೆಗಲ ಮೇಲೆಯೇ ಇರುತ್ತಿತ್ತು. ಕಟ್ಟಿಗೆ ತರಲು

ಸಣ್ಣ ಕಥೆ “ರಂಗಣ್ಣನ ಮಂಗ” ಉತ್ತಮ ಎ ದೊಡ್ಮನಿ Read Post »

ಕಾವ್ಯಯಾನ, ಗಝಲ್

ಸುಕನಸು ಅವರ ಗಜಲ್

ಕಾವ್ಯ ಸಂಗಾತಿ ಸುಕನಸು ಗಜಲ್ ನಾನಿರದ ಬದುಕಲಿ ನೀ ಸಂತಸದಿಂದಿದ್ದರೆ ಬೇರೇನು ಬೇಕೆನಗೆನಿನ್ನದೆ ಲೋಕದಲಿ ನೀ ಬಯಸಿದಂತಿದ್ದರೆ ಬೇರೇನು ಬೇಕೆನಗೆ ಒಲವ ಮಳೆಯಲಿ ಜೊತೆ ನೆನೆದ ನೆನಪು ನನ್ನ ಪಾಲಿಗಿದೆಯಲ್ಲಲಾಲಸೆ ಮತ್ತಿನಲಿ ನೀ ಓಲಾಡುತಲಿದ್ದರೆ ಬೇರೇನು ಬೇಕೆನಗೆ ಹಾರೈಸುವೆ ನಿನ್ನ ಸಂಕಷ್ಟದ ದೆಸೆಗಳು ನನ್ನೊಂದಿಗೆ ತೆರಳಲಿಸುಯೋಗದೊಂದಿಗೆ ನಿನ್ನ ಗೆಳೆತನವಿದ್ದರೆ ಬೇರೇನು ಬೇಕೆನಗೆ ಕಂಡೆನಂದೇ ನಾ ಜೊತೆಯಲಿರೆ ಅನ್ಯರೆಡೆಗೆ ವಾಲಿದ ನಿನ್ನ ಒಲವಅವರೊಲವೊಂದಿಗೆ ಹೊಂದಾಣಿಕೆಯಿದ್ದರೆ ಬೇರೇನು ಬೇಕೆನಗೆ ನೀ ಬಯಸಿದ ಬಯಕೆಗಳ ನಾ ಪೂರೈಸಲು ಸೋತೆನೇನೊ ನಲ್ಲನಿನ್ನಿಚ್ಚೆಗೆ  ರೂಪಕೊಡುವ ಗೆಣಿಕಾರರಿದ್ದರೆ ಬೇರೇನು ಬೇಕೆನಗೆ ಮಲ್ಲಿಗೆ ಸುಮ ಪರಿಮಳಕಷ್ಟೆ, ಮುಡಿದವರ ನಸೀಬು ತಿದ್ದಲಾಗದುಅದೃಷ್ಟದೊಂದಿಗೆ ನಿನ್ನ  ಒಪ್ಪಂದವಾಗಿದ್ದರೆ ಬೇರೇನು ಬೇಕೆನಗೆ ಸುಕನಸು

ಸುಕನಸು ಅವರ ಗಜಲ್ Read Post »

ಇತರೆ

ಆರಂಭವಾಗಲಿ ಬದಲಾವಣೆ ನಮ್ಮಿಂದಲೇ……ಜಯಶ್ರೀ ಜೆ ಅಬ್ಬಿಗೇರಿ

ಪ್ರೇರಣಾ ಸಂಗಾತಿ ಜಯಶ್ರೀ ಜೆ ಅಬ್ಬಿಗೇರಿ ಆರಂಭವಾಗಲಿ ಬದಲಾವಣೆ  ನಮ್ಮಿಂದಲೇ…… ನಾವೆಲ್ಲ ಜಗತ್ತು ಬದಲಾಗಬೇಕು ಎಂದು ಬಯಸುತ್ತೇವೆ.ಆದರೆ ನಾವು ಬದಲಾಗಲು ಬಯಸುವುದಿಲ್ಲ.ಈ ಮಾತು ವಿಚಿತ್ರ ಆದರೂ ಸತ್ಯ. ನೀನು, ಮೊದಲು ಆ ಬದಲಾವಣೆಯಾಗಿ ಬದಲಾಗು” (Be the change you want to see in the world) ಎಂಬ ಮಹಾತ್ಮ ಗಾಂಧೀಜಿಯವರ ಈ ಮಾತು ಕೇವಲ ಘೋಷಣೆಯಲ್ಲ; ಅದು ಬದುಕಿನ ಪರಮ ಸತ್ಯ.ನಾವು ಜಗತ್ತನ್ನು ದೂಷಿಸುವ ಮುನ್ನ ನಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಲು ಕಲಿಯಬೇಕಿದೆ. ಒಂದು ಪುಟ್ಟ ಪ್ರೇರಣಾದಾಯಕ ಕಥೆಯೊಂದನ್ನು ಓದಿದ್ದುನೆನಪಾಗುತ್ತಿದೆ. ನೀವೂ ಓದಿ. ಒಮ್ಮೆ ಕಡಲತೀರದಲ್ಲಿ ಭೀಕರ ಚಂಡಮಾರುತ ಅಪ್ಪಳಿಸಿತ್ತು. ಅಲೆಗಳ ಆರ್ಭಟಕ್ಕೆ ಸಿಲುಕಿ ಲಕ್ಷಾಂತರ ನಕ್ಷತ್ರ ಮೀನುಗಳು  ತೀರದ ಮರಳಿನ ಮೇಲೆ ಬಂದು ಬಿದ್ದಿದ್ದವು. ಸೂರ್ಯನ ಶಾಖ ಹೆಚ್ಚಾಗುತ್ತಿದ್ದಂತೆ ಅವು ನೀರಿಲ್ಲದೆ ಒದ್ದಾಡಿ ಸಾಯತೊಡಗಿದವು.ಅದೇ ದಾರಿಯಲ್ಲಿ ಸಾಗುತ್ತಿದ್ದ ಒಬ್ಬ ವೃದ್ಧ, ಮರಳಿನ ಮೇಲೆ ಬಿದ್ದಿದ್ದ ಮೀನುಗಳನ್ನು ನೋಡಿ ನಿಟ್ಟುಸಿರು ಬಿಟ್ಟರು. ಆದರೆ, ಅಷ್ಟರಲ್ಲೇ ಒಬ್ಬ ಪುಟ್ಟ ಬಾಲಕ ಅಲ್ಲಿಗೆ ಬಂದ. ಅವನು ಮರಳಿನ ಮೇಲಿದ್ದ ಮೀನುಗಳನ್ನು ಒಂದೊಂದಾಗಿ ಎತ್ತಿ ಪ್ರೀತಿಯಿಂದ ಸಮುದ್ರದ ನೀರಿಗೆ ಎಸೆಯತೊಡಗಿದ. ಇದನ್ನು ನೋಡಿದ ವೃದ್ಧ ಬಾಲಕನ ಹತ್ತಿರ ಬಂದು, “ಮಗುವೇ, ಇಲ್ಲಿ ಲಕ್ಷಾಂತರ ಮೀನುಗಳಿವೆ. ನೀನು ಕೆಲವೇ ಕೆಲವು ಮೀನುಗಳನ್ನು ಉಳಿಸಿದರೆ ಈ ವಿಶಾಲ ಜಗತ್ತಿಗೆ ಏನು ವ್ಯತ್ಯಾಸವಾಗುತ್ತದೆ?” ಎಂದು ಕೇಳಿದ. ಬಾಲಕ ನಸುನಕ್ಕು, ಮತ್ತೊಂದು ಮೀನನ್ನು ಕೈಗೆತ್ತಿಕೊಂಡು ನೀರಿಗೆ ಎಸೆದ. ನಂತರ ವೃದ್ಧರ ಕಣ್ಣುಗಳನ್ನು ದಿಟ್ಟಿಸಿ ನೋಡಿ, “ಇಡೀ ಜಗತ್ತಿಗೆ ವ್ಯತ್ಯಾಸವಾಗದೇ ಇರಬಹುದು, ಆದರೆ ನಾನು ನೀರಿಗೆ ಎಸೆದ ಆ ಒಂದು ಮೀನಿನ ಜೀವಕ್ಕೆ ಇಡೀ ಜಗತ್ತೇ ಬದಲಾದಂತಾಯಿತಲ್ಲವೇ?” ಎಂದನು.ವೃದ್ಧನಿಗೆ ತನ್ನ ತಪ್ಪಿನ ಅರಿವಾಯಿತು. ಅವನೂ ಬಾಲಕನೊಂದಿಗೆ ಕೈಜೋಡಿಸಿದನು. “ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಹಬ್ಬ.” ಎಂಬಂತೆ, ಆ ಪುಟ್ಟ ಬಾಲಕನ ಒಂದು ಸಣ್ಣ ಪ್ರಯತ್ನದಹೆಜ್ಜೆ ಅಂದು ಸಾವಿರಾರು ಜೀವಗಳನ್ನು ಉಳಿಸಿತು. ಮುನ್ನುಡಿಬದಲಾವಣೆಗೆ ನಾವೇಮುನ್ನುಡಿ ಬರೆಯಬೇಕು.ಬದಲಾವಣೆ ನಮ್ಮಿಂದಲೇ ನಾವು ಪ್ರತಿದಿನ ಸಮಾಜದಲ್ಲಿನ ಭ್ರಷ್ಟಾಚಾರ, ಸ್ವಾರ್ಥ, ಪರಿಸರ ಮಾಲಿನ್ಯ ಮತ್ತು ದ್ವೇಷದ ಬಗ್ಗೆ ಮಾತನಾಡುತ್ತೇವೆ.ಸಮಾಜವನ್ನು,ವ್ಯವಸ್ಥೆಯನ್ನು ದೂಷಿಸುವುದು ಹೂವಿನ ಮೇಲಿನ ಇಬ್ಬನಿಯನ್ನು ಒರೆಸಿದಷ್ಟೇ ಸುಲಭ. ಆದರೆ, “ನಾನು ಸಮಾಜಕ್ಕೆ ಏನು ನೀಡುತ್ತಿದ್ದೇನೆ?” ಎಂದು ಯೋಚಿಸಿ, ಸಮಾಜಕ್ಕೆ ಕೊಡುಗೆ ನೀಡುವುದು ತುಂಬಾ ಕಷ್ಟದ ಕೆಲಸ.ಹಾಗೆ ನೋಡಿದರೆ ಅಂಥವರ ಸಂಖ್ಯೆಯುವಿರಳ. “ಕತ್ತಲೆಯನ್ನು ಶಪಿಸುತ್ತಾ ಕೂರುವುದಕ್ಕಿಂತ ಒಂದು ಪುಟ್ಟ ಹಣತೆಯನ್ನು ಹಚ್ಚುವುದು ಲೇಸು.” ಮನೆ ಕಸ ನಮ್ಮ ಮನೆ ಮತ್ತುಮನೆಯ ಮುಂದೆ ನಾವು ಕಸ ಗೂಡಿಸಿ ಪಕ್ಕದ ಮನೆಯವರ ಮುಂದೆ ಚೆಲ್ಲಿದರೆ ಏನು ಮಾಡಿದಂತಾಯಿತು? ಕಸ ಗುಡಿಸಿದ್ದು ವ್ಯರ್ಥ.ಆ ಕಸ ಗಾಳಿಗೆ ಎಲ್ಲೆಲ್ಲೂ ಹಾರಿ ಹೋಗುತ್ತದೆ.ಊರಿನ ಅಂಗಳಮತ್ತಷ್ಟು ಹೊಲಸಾಗುತ್ತದೆ.ನಾವು ಕಸವನ್ನು ಡಬ್ಬಿಗೆ ಹಾಕಿದರೆಇಡೀ ನಗರವೇ ಸ್ವಚ್ಛವಾಗುತ್ತದೆ. ಪ್ರತಿಬಿಂಬ ನಾವು ಇತರರಿಗೆ ಗೌರವ ನೀಡಿದರೆ, ಅವರು ನಮಗೆ ಗೌರವ ನೀಡುತ್ತಾರೆ. ಗೌರವ ಕೇಳಿ ಪಡೆಯುವುದಲ್ಲ. ಅದು ಕೊಟ್ಟು ಪಡೆಯುವಂಥದ್ದು.ನಾವು ಇತರರಿಗೆ ಪ್ರೀತಿ ನೀಡಿದರೆಸಮಾಜ ನಮಗೆ ಪ್ರೀತಿಯನ್ನು ಉಡುಗೊರೆಯಾಗಿ ನೀಡುತ್ತದೆ. ಸಮಾಜ ಎಂಬುದು ನಮ್ಮದೇ ಪ್ರತಿಬಿಂಬ. ನಾವು ಸುಂದರವಾಗಿದ್ದರೆ ಜಗತ್ತೂ ಸುಂದರವಾಗಿಯೇ ಕಾಣುತ್ತದೆ. ಪ್ರಾಜ್ಞರ ದೃಷ್ಟಿ ಕುವೆಂಪು ಹೇಳಿದಂತೆ: “ಮನುಜಮತ, ವಿಶ್ವಪಥದತ್ತ ಸಾಗಬೇಕಾದರೆ ಮೊದಲು ವ್ಯಕ್ತಿತ್ವದ ವಿಕಾಸವಾಗಬೇಕು. ನಿನ್ನ ಅಂತರಂಗದ ದೀಪವನ್ನು ಮೊದಲು ಹಚ್ಚಿಕೋ, ಜಗತ್ತಿನ ಕತ್ತಲೆ ತಾನಾಗಿಯೇ ಸರಿಯುತ್ತದೆ. “ಡಿ. ವಿ.ಜಿ ಅವರು ಮಂಕುತಿಮ್ಮನ ಕಗ್ಗದಲ್ಲಿ :”ತಿದ್ದಿಕೊಳು ನಿನ್ನ ಒರಟು ನಡೆನುಡಿಗಳನು,ಜಗವ ತಿದ್ದುವ ಸಾಹಸಕೆ ಹೋಗದಿರು ಮನುಜ… ಎಂದಿದ್ದಾರೆ. “ಸ್ವಾಮಿ ವಿವೇಕಾನಂದ: “ನಿನ್ನನ್ನು ನೀನು ನಂಬು. ಇಡೀ ಜಗತ್ತನ್ನು ಬದಲಾಯಿಸುವ ಶಕ್ತಿ ನಿನ್ನ ಒಂದು ಸಣ್ಣ ಸಂಕಲ್ಪದಲ್ಲಿದೆ.” ಹರಿಕಾರ “ಬದಲಾವಣೆಯ ಹಾದಿಯಲ್ಲಿ ನೀ ಮೊದಲ ಹೆಜ್ಜೆಯಾಗು, ಒಣಗಿದ  ಮರಭೂಮಿಗೆ ನೀ ತಂಪಿನ ಹನಿಯಾಗು.ದೂಷಿಸಬೇಡ ಜಗದ ಕತ್ತಲನು ಮೌನದಿ ಕೊರಗಿ,ಉರಿಯುವ ಹಣತೆಯಾಗಿ ನೀ ಜಗಕೆ ಬೆಳಕಾಗು.ಕಲ್ಲನ್ನು ನುಣುಪುಗೊಳಿಸುವ ಶಿಲ್ಪಿಯಂತೆ, ನಿನ್ನ ನಡೆ-ನುಡಿ ಇರಲಿ. ಈ ಕಾವ್ಯದಂತೆ.ಜಗವ ಗೆಲ್ಲುವ ಆತುರ ಬಿಡು ಓ ಗೆಳೆಯಾ,ನಿನ್ನ ನೀ ಗೆದ್ದರೆ ಜಗವೇ ನಿನ್ನಂತೆ…!! ಕೊನೆ ಮಾತು ಜಗತ್ತನ್ನು ಬದಲಾಯಿಸಲು ನಾವ್ಯಾರೂ ಮೇಧಾವಿಗಳು ಆಗಬೇಕೆಂದಿಲ್ಲಸಿರಿವಂತರು ಆಗಬೇಕೆಂದಿಲ್ಲ.ಅಗತ್ಯವಿದ್ದವರಿಗೆಒಂದು ಪುಟ್ಟ ಸಹಾಯ,ನೊಂದವರಿಗೆ ಹೆದರದಿರಿ, ನಾವು ನಿಮ್ಮೊಂದಿಗೆ ಇರುತ್ತೇವೆ ಎಂಬ ಒಂದು ಸಾಂತ್ವನದ ಮಾತು.ಮುಖದ ಮೇಲೊಂದು ಸದಾ ಸಣ್ಣದೊಂದುನಗು ಸಾಕು.ಕೇವಲ ಒಬ್ಬ ಒಳ್ಳೆಯ ‘ಮನುಷ್ಯ’ನಾದರೆ ಸಾಕು. ನಾವು ಬಯಸುವ ಪ್ರೀತಿ, ಶಾಂತಿ, ಕರುಣೆ ಮತ್ತು ಪ್ರಾಮಾಣಿಕತೆ ಮೊದಲು ನಮ್ಮ ದಿನನಿತ್ಯದ ಬದುಕಿನಲ್ಲಿ ಮೂಡಿಬರುತ್ತದೆ.ನಮ್ಮ ಕಿರುನಗೆ ಒಬ್ಬರ ದುಃಖವನ್ನು ಮರೆಸಬಹುದು, ನಮ್ಮ ಒಂದು ಒಳ್ಳೆಯ ಮಾತು ಧೃತಿಗೆಟ್ಟ ಜೀವಕ್ಕೆ ಆಸರೆಯಾಗಬಹುದು. ಪೀಠಿಕೆ ಬದಲಾವಣೆಯ ಮಹಾಕಾವ್ಯಕ್ಕೆ ನಾವೇ ಪೀಠಿಕೆ ಬರೆಯಬೇಕು.ವಿನಃ ಬೇರೆ ಯಾರೋ ಬರೆಯುತ್ತಾರೆಂದು ಕಾಯುತ್ತ ವ್ಯವಸ್ಥೆಯನ್ನು ಬೈಯುತ್ತಾ ಕುಳಿತುಕೊಳ್ಳಬಾರದು.ಹಾಗಾದರೆ ತಡವೇಕೆ ಇಂದಿನಿಂದಲೇ ನಮ್ಮಿಂದಲೇ ಆಗಲಿ ಬದಲಾವಣೆಯಆರಂಭ. ಸಂತಸ ಸಮೃದ್ಧಿ ತರಲಿ  ಶುಭಾರಂಭ. ಜಯಶ್ರೀ ಜೆ ಅಬ್ಬಿಗೇರಿ

ಆರಂಭವಾಗಲಿ ಬದಲಾವಣೆ ನಮ್ಮಿಂದಲೇ……ಜಯಶ್ರೀ ಜೆ ಅಬ್ಬಿಗೇರಿ Read Post »

ಕಥಾಗುಚ್ಛ

“ಅಂತರಂಗದ ಸೋಲು” ಸಣ್ಣ ಕಥೆ ಶೇಖರಗೌಡ ವೀ ಸರನಾಡಗೌಡರ್.

ಕಥಾ ಸಂಗಾತಿ “ಅಂತರಂಗದ ಸೋಲು” ಶೇಖರಗೌಡ ವೀ ಸರನಾಡಗೌಡರ್. ಯಶಸ್ವಿನಿ ದೊಡ್ಡ ಪರದೆಯ ಟೀವಿಯಲ್ಲಿ ಯಾವುದೋ ಸಿನಿಮಾವೊಂದನ್ನು ನೋಡತೊಡಗಿದ್ದಳು. `ಸಾಕು, ಟೀವಿ ಆಫ್‍ಮಾಡಿ ಮಲಗಿಬಿಟ್ಟರಾಯಿತು’ ಎಂದು ಅಂದುಕೊಂಡಳಾದರೂ, ಅದೊಂದು ಭಾರೀ ಶೃಂಗಾರಭರಿತ ಮೂವಿಯಾಗಿದ್ದರಿಂದ ಹಾಗೇ ವೈಭವೋಪೇತ ಸೋಫಾದ ಮೇಲೆ ಅಡ್ಡಾಗಿ ಚಿತ್ರ ನೋಡಲು ಮುಂದಾದಳು. ದಿನಾಲೂ ರಾತ್ರಿ ಬಹಳ ಎಂದರೆ ಹತ್ತೂವರೆ, ಹನ್ನೊಂದಕ್ಕೆ ಹಾಸಿಗೆ ಸೇರಿಕೊಳ್ಳುತ್ತಿದ್ದಳು. `ಹೇಗೂ ವೀಕೆಂಡ್ ಅಲ್ವಾ…? ಆಫೀಸ್ ಇಲ್ಲವಲ್ಲ? ತಡವಾಗಿ ಮಲಗಿ ನಾಳೆ ಬೆಳಗ್ಗೆ ತಡವಾಗಿ ಏಳಬಹುದು. ಅದಲ್ಲದೇ, `ಕರೆದು ಕಟ್ಟಿಹಾಕುವವರಿಲ್ಲ, ತುರಿಸಿ ಮೇವು ಹಾಕುವವರಿಲ್ಲ’ ಎಂಬ ದನದಂತೆ ನಾನು. ತಡವಾಗಿ ಮಲಗಿದರೆ ನನಗಿಲ್ಲಿ ಯಾರೂ ಹೇಳುವವರಿಲ್ಲ, ಯಾವಾಗ ಎದ್ದರೂ ಯಾರೂ ಕೇಳುವವರಿಲ್ಲ. ಸುದೀರ್ಘ ಒಂಟಿ ಜೀವನಕ್ಕೆ ಒಗ್ಗಿಹೋಗಿದ್ದೇನೆ. ನನ್ನದೇ ಪ್ರಮೀಳಾ ರಾಜ್ಯ ಅಲ್ಲವೇ…?’ ಅಂತ ಮನದೊಳಗೇ ಅಂದುಕೊಂಡು ಯಶಸ್ವಿನಿ ಸಿನಿಮಾ ನೋಡುವುದನ್ನು ಮುಂದುವರಿಸಿದಳು. ಅಬ್ಬಾ…! ಮೈನವಿರೇಳಿಸುವ ಶೃಂಗಾರಭರಿತ ದೃಶ್ಯಗಳು…! ಯುವ ಪ್ರೇಮಿಗಳ ಪ್ರೀತಿ, ಪ್ರೇಮದ ಕಾವ್ಯ ಅದಾಗಿತ್ತು. ರಸಪೂರಿ ಮಾವಿನ ಹಣ ್ಣನಂಥಹ ನಾಯಕಿ, ಸುರಸುಂದರಾಂಗ ಎನ್ನುವಂಥಹ ನಾಯಕ. ಗಜನಿಂಬೆ ಹಣ ್ಣನ ಮೈಬಣ್ಣದ ನಾಯಕಿಯ ಸೊಬಗಿನ ತುಂಬಿದೆದೆ ಚಿತ್ರದುದ್ದಕ್ಕೂ ಮುಕ್ಕಾಲು ಭಾಗ ತೆರೆದೇ ಕೊಂಡಿತ್ತು. ಕೃಶೋದರಿಯ ಬಡ ನಡು ತುಂಬಾನೇ ಆಕರ್ಷಕವೇ. ಸಿನಿಮಾದುದ್ದಕ್ಕೂ ಶೃಂಗಾರಭರಿತ ಕಾವ್ಯ ಸಾಹಿತ್ಯದಲ್ಲಿ ಹೊರಹೊಮ್ಮುತ್ತಿದ್ದ ಹಾಡುಗಳಲ್ಲಿ ನಾಯಕ, ನಾಯಕಿಯರಿಬ್ಬರೂ ತುಂಡುಡುಗಳಲ್ಲೇ ಮಿಂಚುತ್ತಿದ್ದುದು ಚಿತ್ರದ ಹೈಲೈಟ್ ಆಗಿತ್ತು. ನಾಯಕಿಯ ನಳಿದೋಳುಗಳು, ಹೊಕ್ಕಳ ಗುಳಿ, ಸಪೂರ ಬಲಿಷ್ಠ ತೊಡೆಗಳು, ತುಂಬು ಜಘನ ಪ್ರೇಕ್ಷಕರ ಮನಗಳಿಗೆ ಕಚಗುಳಿ ಇಡುವಂತಿದ್ದವು. ಕಾವ್ಯಕನ್ನಿಕೆ, ಸೌಂದರ್ಯದೇವತೆ ರತಿದೇವಿಯಂತೆ ವಿಜೃಂಭಿಸುತ್ತಿದ್ದಳು ನಾಯಕಿ. ವಯಸ್ಸಾದವರು ಜೊಲ್ಲು ಸುರಿಸುತ್ತಾ ನೋಡುವಂತಿತ್ತು ನಾಯಕಿಯ ಮೈಮಾಟ. ನಾಯಕ, ನಾಯಕಿಯ ಪ್ರೀತಿ-ಪ್ರೇಮದ ತುಂಟಾಟದ ದೃಶ್ಯಗಳನ್ನು ನೋಡುತ್ತಿದ್ದಂತೆ ಯಶಸ್ವಿನಿಯ ಮೈಯಲ್ಲಿ ಕಾವೇರತೊಡಗಿತು. `ಅಬ್ಬಾ…! ಮೈ ಎಲ್ಲಾ ನವಿರೇಳುತ್ತಿದೆಯಲ್ಲ…? ಮೈಯಲ್ಲಿ ರೋಮಾಂಚನದಲೆಗಳು ಅಬ್ಬರಿಸಿ ಪುಟಿದೇಳುತ್ತಿವೆಯಲ್ಲ…? ಎದೆಯ ಬಡಿತ ಮುಗಿಲೆತ್ತರಕ್ಕೆ ಜಿಗಿಯುತ್ತಿದೆಯಲ್ಲ…? ಉಸಿರಾಟ ಜೋರಾಗುತ್ತಿದೆಯಲ್ಲ? ಹೃದಯದ ಲುಬ್-ಡುಬ್ ಅತಿವೇಗದ ಲಯ ಕಂಡುಕೊಳ್ಳುತ್ತಿದೆ ಎಂದು ಅನಿಸುತ್ತಿದೆ. ತುಂಬಾನೇ ಥ್ರಿಲ್ ಕೊಡುತ್ತಿದೆಯಲ್ಲ…? ಇಂಥಹ ಥ್ರಿಲ್ ಇದೆಯಾ ಗಂಡು-ಹೆಣ ್ಣನ ಶೃಂಗಾರ ಲೀಲೆಯಲ್ಲಿ…? ಶೃಂಗಾರ ಲೀಲೆಯ ಇಂಥಹ ಥ್ರಿಲ್‍ಗಳಿಂದ ವಂಚಿತಳಾಗಿ ನಾನು ಕರುಬುತ್ತಿರುವೆನಲ್ಲ…? ನನ್ನ ಉತ್ಕøಷ್ಠ ಯೌವನ ಕರಗಿ ಹೋಗುತ್ತಿದೆ. ಇನ್ನೇನು ನಾಲ್ಕಾರು ವರ್ಷಗಳಲ್ಲಿ ಮೆನೋಫಾಸ್ ಘಟ್ಟವನ್ನೂ ತಲುಪುವೆನೇನೋ? ಅದೃಷ್ಟ ಹೀನ ನತದೃಷ್ಟ ಹೆಣ್ಣು ನಾನು. ಎಲ್ಲವೂ ಇದ್ದು, ಏನೂ ಇಲ್ಲದವಳಂತಾಗಿದ್ದೇನೆ. ಹೆಸರೋ, `ಯಶಸ್ವಿನಿ.’ ಬಹಳಷ್ಟು ರಂಗಗಳಲ್ಲಿ ಯಶಸ್ಸು ಪಡೆದಿರುವೆನಾದರೂ ನನ್ನ ಪರ್ಸನಲ್ ಲೈಫಿನಲ್ಲಿ ಹೀನಾಯ ಸೋಲನ್ನು ಅನುಭವಿಸಿ ಪೇಚಾಡುತ್ತಿರುವೆ. ಈ ಸೋಲಿಗೆ ಯಾರು ಕಾರಣ…? ಯಾರೇಕೆ ಕಾರಣರಾಗುತ್ತಾರೆ? ನನ್ನ ಸೋಲಿಗೆ ನಾನೇ ಕಾರಣ ಅಷ್ಟೇ. ನಾನೇ ಅಂದರೆ ನನ್ನ, `ಅಹಂ’ ವೈಯಕ್ತಿಕ ಜೀವನದ ಸೋಲಿಗೆ ಕಾರಣ ತಾನೇ…? ಹೌದು, ಹೌದು, ಹೌದು. ನನ್ನ ಅಪರಿಮಿತ ಅಹಂ ನನ್ನ ವೈಯಕ್ತಿಕ ಜೀವನದ ಹಳಸುವಿಕೆಗೆ ಕಾರಣ.’ ಯದ್ವಾ-ತದ್ವಾ ಯೋಚನೆಗಳು ಯಶಸ್ವಿನಿಯ ಮನಸ್ಸನ್ನು ಮುತ್ತಿಕ್ಕಿ ಕಾಡತೊಡಗಿದವು.*****ಹಿಮ್ಮುಖವಾಗಿ ಚಲಿಸಲಾರಂಭಿಸಿದ ಯಶಸ್ವಿನಿಯ ಮನದಲ್ಲಿ ನೆನಪಿನ ಅಲೆಗಳ ಮಹಾಪೂರ ಭೋರ್ಗರೆಯತೊಡಗಿತು.“ನನ್ನ ಹೆಸರು, `ಯಶಸ್ವಿನಿ’ ಅಂತ ಆಗಲೇ ಹೇಳಿರುವೆನಲ್ಲ…? ಮೂವತ್ತೈದು ವಸಂತ ಋತುಗಳು ನನ್ನ ಜೀವನದಲ್ಲಿ ವಸಂತನಾಗಮನವಿಲ್ಲದೇ ಹಾಗೇ ಸಪ್ಪಗೇ ಕಳೆದು ಹೋದವು. ಈಗ ಮೂವತ್ತಾರರ ಹರೆಯದಲ್ಲಿ ನನ್ನ ಬಾಳಬಂಡಿಗೆ ಕಡೆಗೀಲೇ ಇಲ್ಲದಂತಾಗಿದೆ. ಸಾಮಾನ್ಯ ಕುಟುಂಬವೊಂದರಲ್ಲಿ ಮೂರನೇ ಮಗುವಾಗಿ ಜನಿಸಿದವಳು ನಾನು. ಅಪ್ಪ ಕೈಲಾಸ್, ಅಮ್ಮ ವಿಜಯಲಕ್ಷ್ಮಿ. ಅಪ್ಪ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿದ್ದ. ಅಮ್ಮ ಗೃಹಿಣ . ಹೆತ್ತವರಿಗೆ ನಾನು ಮೂರನೆಯವಳೆಂದು ಹೇಳಿದೆನಲ್ಲ, ನನಗೆ ಧೀರಜ್ ಎಂಬ ಅಣ್ಣನಿದ್ದಾನೆ. ಅಕ್ಕ ಸಮತಾ ಇದ್ದಾಳೆ. ಅಣ್ಣ ಧೀರಜನಿಗೂ, ನನಗೂ ಎಂಟು ವರ್ಷಗಳ ಅಂತರವಿದ್ದರೆ, ಅಕ್ಕ ಸಮತಾಳಿಗೆ ನನಗೆ ಕೇವಲ ಎರಡು ವರ್ಷಗಳ ಅಂತರ ಅಷ್ಟೇ. ಮೂವರಲ್ಲಿ ನಾನೇ ರೂಪವತಿ. ಚಿಕ್ಕವಳಿದ್ದಾಗಿನಿಂದ ಅಣ್ಣ, ಅಕ್ಕನಿಗೆ ಇಲ್ಲದಿದ್ದರೂ ನನಗೆಲ್ಲವೂ ಬೇಕು ಎಂಬ ಹಟಮಾರಿತನದ ಸ್ವಭಾವದವಳು. ಮುದ್ದಾದ ಚೆಲುವಿನ ಹುಡುಗಿ ಎಂದು ಅಪ್ಪ, ಅಮ್ಮ ನನ್ನನ್ನು ಅತೀ ಮುದ್ದಿನಿಂದಲೇ ಬೆಳೆಸಿದರು. ಚಿಕ್ಕಳಿದ್ದಾಗಿನಿಂದಲೂ ನನ್ನ ಬಲಗೆನ್ನೆ ಗುಳಿಗೆನ್ನೆಯೇ. ಆ ಗುಳಿಗೆನ್ನೆ ಎಲ್ಲರನ್ನೂ ಆಕರ್ಷಿಸುತ್ತಿತ್ತು. ಹದಿಹರೆಯಕ್ಕೆ ಕಾಲಿಡುತ್ತಿದ್ದಂತೆ ಯೌವನ ಮೈ, ಮನಗಳಲ್ಲಿ ಅರಳತೊಡಗಿತ್ತು. ಎದೆಯ ಕುಸುಮಗಳು ಅರಳಲು ಮುಂದಾಗುತ್ತಿದ್ದಂತೆ ನನ್ನ ಅಪರಿಮಿತ ರೂಪರಾಶಿಗೆ ನಾನೇ ನನ್ನ ಬೆನ್ನನ್ನು ಚಪ್ಪರಿಸಿಕೊಳ್ಳುತ್ತಿದ್ದೆ. ಸಾಧಾರಣ ರೂಪಿನ ಅಕ್ಕನನ್ನು ನನ್ನೊಂದಿಗೆ ಹೋಲಿಸಲು ಸಾಧ್ಯವೇ ಇರಲಿಲ್ಲ. ನನಗರಿವಿಲ್ಲದಂತೆ ನಾನು ಆಗಿನಿಂದಲೇ ಜಂಬದ ಕೋಳಿಯಂತಾಗತೊಡಗಿದ್ದೆ. ಧೀರಜ್ ಎಂಎ ಬಿಎಡ್ ಮಾಡಿಕೊಂಡು ಕಾಲೇಜೊಂದರಲ್ಲಿ ಉಪನ್ಯಾಸಕನಾಗಿ ಸೇರಿಕೊಂಡ. ಅಕ್ಕ ಇಂಜನಿಯರಿಂಗ್ ಪದವಿಗೆ ಸೇರಿಕೊಂಡಳು. ನಾನೂ ಅಷ್ಟೇ. ಪಿಯುಸಿ ನಂತರ ಇಂಜನಿಯರಿಂಗ್ ಕೋರ್ಸಿಗೇ ಸೇರಿಕೊಂಡೆ. ಅಣ್ಣ ಉದ್ಯೋಗಕ್ಕೆ ಸೇರಿದ ಮೂರನೇ ವರ್ಷವೇ ಮದುವೆಯಾಗಿ ಜೀವನದಲ್ಲಿ ಸೆಟ್ಲಾದ. ಅತ್ತಿಗೆಯಾಗಿ ಬಂದವಳು ನಮ್ಮ ಮನೆಯ ಅಂತಸ್ತಿಗಿಂತ ಕೆಳಗಿನ ಮಟ್ಟದ ಅಂತಸ್ತಿನ ಮನೆತನದವಳು. ರೂಪದಲ್ಲೂ ಅಷ್ಟಕಷ್ಟೇ. `ಅಣ್ಣಾ, ಇದೇನಿದು ಇಂಥಹ ಆರ್ಡಿನರಿ ಹುಡುಗಿಯನ್ನು ಆಯ್ಕೆಮಾಡಿಕೊಂಡೆಯಲ್ಲ, ಇದು ನನಗ್ಯಾಕೋ ಸರಿಕಾಣುತ್ತಿಲ್ಲ…?’ ಅಂತ ಅಂದಿದ್ದಕ್ಕೆ, `ರೂಪವನ್ನು ಅರೆದುಕೊಂಡು ಕುಡಿಯಲು ಆಗುತ್ತದೆಯೇ…? ನಿನ್ನತ್ತಿಗೆಯಾಗುವವಳು ರೂಪವತಿಯೇ ಇರುವಳೆಂದು ನನ್ನ ಕಣ್ಣುಗಳ ಜೊತೆಗೆ ಹೃನ್ಮನಗಳೂ ಹೇಳುತ್ತಿವೆ. ಸೌಂದರ್ಯ ಎನ್ನುವುದು ನೋಡುಗರ ಕಣ್ಣಲ್ಲಿ ಇರುತ್ತದೆ. ರೂಪಕ್ಕಿಂತ ಗುಣ ಮುಖ್ಯ ಎಂಬುದು ನನ್ನ ಅನಿಸಿಕೆ. ಗಂಡ, ಹೆಂಡತಿ ಇಬ್ಬರೂ ಜೊತೆಗೂಡಿಕೊಂಡು ಅರ್ಥಪೂರ್ಣ ಜೀವನ ಸವೆಸಿದರೆ ಸಾಕಲ್ಲವೇ…?’ ಎಂದು ಹೇಳಿ ನನ್ನ ಬಾಯಿ ಮುಚ್ಚಿಸಿದ್ದ. ಅದರಂತೆ ಅಣ್ಣ-ಅತ್ತಿಗೆಯರದು ಈಗ ಆದರ್ಶ ಸಂಸಾರವೇ. ಅತ್ತಿಗೆ ಸೌಭಾಗ್ಯಳಿಗೆ, `ನಮ್ಮ ಯಶೂ ತುಂಬಾನೇ ರೂಪವತಿ, ಶಾಣ್ಯಾಕಿ’ ಎಂದು ಸಂಬಂಧಿಕರ ಜೊತೆಗೆ ಬಡಾಯಿ ಕೊಚ್ಚಿಕೊಳ್ಳುತ್ತಿರುತ್ತಾಳೆ. ನಾನೆಂದರೆ ತುಂಬಾ ಪ್ರೀತಿ ಅವಳಿಗೆ.ಇಂಜನಿಯರಿಂಗ್ ಕೋರ್ಸ ಮುಗಿಯುವಷ್ಟರಲ್ಲಿ ಚೆಲುವಿನ ನನ್ನ ಮೈಯಲ್ಲಿ ಯೌವನ ತುಂಬಿ ತುಳುಕಾಡಲು ಮುಂದಾಗಿತ್ತು. ಯೌವನಮದ, ರೂಪಮದಗಳು ನನ್ನ ಮನಸ್ಸಿನಲ್ಲಿ ನೆಲೆನಿಂತು ಠಳಾಯಿಸತೊಡಗಿದವು. ತುಂಬಿದ ಕಾಶ್ಮೀರಿ ಸೇಬಿನ ಗುಳಿಗೆನ್ನೆ ನನ್ನ ಆಕರ್ಷಕ ಮೈಮಾಟಕ್ಕೆ ಇಂಬು ಕೊಡುತ್ತಿತ್ತು. `ನನ್ನಂಥಹ ಚೆಲುವೆ ಯಾರಿಲ್ಲ’ ಎಂಬ ಅಹಂ ಅಂಕುರಿಸಿ ಮೊಳಕೆಯೊಡೆದು ಹೆಮ್ಮರವಾಗಿ ಬೆಳೆಯತೊಡಗಿತು. ಪದವಿ ಮುಗಿಯುತ್ತಿದ್ದಂತೆ ಸಮತಾಳಿಗೆ ಒಳ್ಳೆಯ ಕಂಪನಿಯಲ್ಲಿ ದೊಡ್ಡ ಪ್ಯಾಕೇಜಿನ ಕೆಲಸವೂ ಸಿಕ್ಕಿತು. ನನಗೂ ದೊಡ್ಡ ಕಂಪನಿಯಲ್ಲಿ ಕೆಲಸ ಸಿಕ್ಕಿದ್ದಲ್ಲದೇ ಸಮತಾಳಿಗಿಂತ ನನ್ನ ಪ್ಯಾಕೇಜ್ ಹೆಚ್ಚೇ ಇದೆ.ಅಕ್ಕನೂ ಕೆಲಸಕ್ಕೆ ಸೇರಿದ ಮೂರನೇ ವರ್ಷವೇ ಮದುವೆಗೆ ಅಣ ಯಾದಳು. ಅವಳ ಮತ್ತು ನನ್ನ ಮದುವೆಯನ್ನು ಒಂದೇ ಸಲಕ್ಕೆ ಮಾಡಬೇಕೆಂದಿದ್ದ ಅಪ್ಪ-ಅಮ್ಮನಿಗೆ, `ನನಗಷ್ಟು ಬೇಗ ಮದುವೆಯಾಗುವ ಮನಸ್ಸು, ಆಸಕ್ತಿ ಇಲ್ಲ. ಅಕ್ಕನ ಮದುವೆ ಮಾಡಿಬಿಡಿ. ನನಗೆ ಮದುವೆ ಬೇಕೆಂದಾಗ ತಿಳಿಸುವೆ’ ಎಂದು ಹೇಳಿದ್ದೆ. ನನ್ನ ಹಟಮಾರಿತನದ ಸ್ವಭಾವಕ್ಕೆ ಮಣ ದಿದ್ದರು. ಅಕ್ಕನೂ ಆರಿಸಿಕೊಂಡಿದ್ದು ತನಗಿಂತ ಕಡಿಮೆ ರೂಪಿನ ಚೆಲುವನನ್ನು. ನನಗೆ ಹೋಲಿಸಿದರೆ ಅಕ್ಕನ ರೂಪವೂ ಅಷ್ಟಕಷ್ಟೇ. ಅವನೂ ಐಟಿ ಕಂಪನಿಯೊಂದರಲ್ಲಿ ಇಂಜಿನಿಯರ್. `ಏನೇ ಅಕ್ಕ, ನೀನು ಮಧುಸಾಗರನೊಂದಿಗೆ ಮದುವೆಯಾಗಲು ಒಪ್ಪಿಕೊಂಡಿದ್ದು ನನಗೇಕೋ ಅಷ್ಟಾಗಿ ಸರಿಕಾಣುತ್ತಿಲ್ಲ. ತೀರಾ ಸಾಮಾನ್ಯ ರೂಪಿನ ಹುಡಗ ಅವನು. ಮೇಲಾಗಿ ಅವನ ಪ್ಯಾಕೇಜ್ ನಿನಗಿಂತಲೂ ಬಹಳಷ್ಟು ಕಡಿಮೆಯೇ. ಅವನಿಗೆ ಹೇಳಿಕೊಳ್ಳುವಂಥಹ ಆಸ್ತಿ-ಅಂತಸ್ತೂ ಸಹ ಇಲ್ಲ. ಮೇಲಾಗಿ ಅವನಿಗೆ ಒಬ್ಬ ತಂಗಿಯ ಮದುವೆಯ ಜವಾಬ್ದಾರಿಯೂ ಇದೆ. ಏನೋಪ್ಪ, ನಿನ್ನ ನಿರ್ಧಾರ ಸರಿ ಇಲ್ಲ ಎಂದು ನನಗನಿಸುತ್ತಿದೆ’ ಎಂದು ಉದ್ದುದ್ದ ಭಾಷಣ ಬಿಗಿದಿದ್ದೆ. `ನೋಡು ಯಶೂ, ಮದುವೆ ಯಶಸ್ವಿಯಾಗುವುದು ಜೀವನ ಸಂಗಾತಿಯನ್ನು ಹುಡುಕುವುದಿಂದಲ್ಲ. ಸರಿಯಾದ ಜೀವನ ಸಂಗಾತಿ ಆಗುವುದರಿಂದ. ನನ್ನ ಆಯ್ಕೆ ಸೂಪರ್ರಾಗೇ ಇದೆ. ಹುಡುಗ ನನ್ನ ಕಣ್ಣಲ್ಲಿ ಚೆಲುವನೇ. ಮನಸ್ಸು, ಮನಸ್ಸುಗಳು ಒಂದಾದರೆ ಸಂಸಾರ ಆನಂದ ಸಾಗರವೇ. ಅವನ ನಡೆ-ನುಡಿ ಎಲ್ಲವೂ ಸ್ಫಟಿಕದಷ್ಟೇ ಶುಭ್ರ. ಆಫ್ಟರ್ ಆಲ್ ಲೈಫ್ ಈಜ್ ಯಾನ್ ಅಡ್ಜೆಸ್ಟಮೆಂಟ್ ಅಲ್ಲವೇ? ಪರಸ್ಪರ ಹೊಂದಿಕೊಂಡು ಜೀವನ ರಥ ಎಳೆದರೆ ದಾಂಪತ್ಯವು ಮಧುರವಾಗೇ ಸಾಗುತ್ತದೆ. ನೀನೇನೂ ಚಿಂತಿಸಬೇಡ. ನಮ್ಮದೂ ಒಂದು ಆದರ್ಶ ದಾಂಪತ್ಯ ಎಂದು ಮುಂದಿನ ದಿನಗಳಲ್ಲಿ ಸಾಬೀತುಮಾಡಿ ತೋರಿಸುತ್ತೇನೆ.’ ಸಮತಾ ದಿಟ್ಟವಾಗಿ ಉತ್ತರಿಸಿದ್ದಳು ನನ್ನ ಅನುಮಾನದ ಪ್ರಶ್ನೆಗಳಿಗೆ. ಮುಂದಿನ ದಿನಗಳಲ್ಲಿ ಅವಳು ಹೇಳಿದಂತೆ ನಡೆದೂ ತೋರಿಸತೊಡಗಿದಳು. ಅವಳದು ಅನ್ಯೋನ್ಯ ದಾಂಪತ್ಯ ಜೀವನವೇ. ಅವಳೀಗ ಎರಡು ಮುದ್ದು ಮಕ್ಕಳ ತಾಯಿಯೂ ಹೌದು.*****ಕಾಲೇಜ್ ಜೀವನ ಅಂದರೇ ಒಂಥರ ಕಲರ್ಫುಲ್ ಜೀವನ ಅಲ್ಲವೇ? ಅರಳುತ್ತಿರುವ ಚೆಲುವಿನ ಮೈಮನಗಳಲ್ಲಿ ಬಣ್ಣಬಣ್ಣದ ಕನಸುಗಳು ಅಂಕುರಿಸಿ ಬೆಳೆಯುವ ಕಾಲ ತಾನೇ…? ಕಾಲೇಜಿನೆಲ್ಲೆಡೆ ಹೂವುಗಳಂತೆ ಅರಳಿದ ಯುವಕ-ಯುವತಿಯರ ಮುಖಗಳು; ಬಿಸಿಲಲ್ಲಿ ಬೆಂದ ಭೂಮಿ ಮೊದಲ ಮಳೆಗಾಗಿ ಹಾತೊರೆಯುವಂತೆ ಎಲ್ಲರ ಹೃದಯಗಳು ಪ್ರೀತಿಯ ಮಳೆಗಾಗಿ ಕಾಯುತ್ತಿದ್ದ ವಸಂತಕಾಲ. ಪ್ರೀತಿಯ ನಿರೀಕ್ಷೆ ಬಲು ಸುಂದರ. ನನ್ನ ಕಥೆಯೂ ಬೇರೆ ಏನಿರಲಿಲ್ಲ. ನಾನು ಎರಡನೆಯ ವರ್ಷದ ಪಿಯುಸಿಯಲ್ಲಿದ್ದಾಗ ರಸಾಯನ ಶಾಸ್ತ್ರದ ಉಪನ್ಯಾಸಕರಾಗಿ ರಾಜಶೇಖರ್ ಎನ್ನುವ ಹ್ಯಾಂಡ್ಸಮ್ ಗೈ ಬಂದಿದ್ದರು. ಹ್ಯಾಂಡ್ಸಮ್ ಎಂದರೆ ನಿಜವಾಗಿಯೂ ತುಂಬಾನೇ ಹ್ಯಾಂಡ್ಸಮ್. ಮನ್ಮಥನ ಅಪರಾವತಾರವೇ. ನಾವು ಗೆಳತಿಯರೆಲ್ಲ ಅವರಿಗೆ ಸ್ಮಾರ್ಟೀ ಎಂದೇ ಸಂಬೋಧಿಸುತ್ತಿದ್ದೆವು ನಮ್ಮೊಳಗೇ. ತುಂಬಾ ಚೆನ್ನಾಗಿ ಪಾಠಮಾಡುತ್ತಿದ್ದರು. ಎಲ್ಲಾ ವಿದ್ಯಾರ್ಥಿಗಳ ಜೊತೆಗೆ ಆತ್ಮೀಯವಾಗಿ ಮಾತಾಡುತ್ತಿದ್ದರು. ನನ್ನ ಜೊತೆಗೂ ತುಂಬಾನೇ ಆತ್ಮೀಯವಾಗಿ ಮಾತಾಡುತ್ತಿದ್ದರಲ್ಲದೇ, `ಯುವರ್ ಪರ್ಫಾರ್ಮೆನ್ಸ್ ಈಜ್ ಎಕ್ಷಲೆಂಟ್ ಎಂದು ಹೇಳುತ್ತಿದ್ದರಲ್ಲದೇ ಯುವ್ ಆರ್ ದಿ ಮೋಸ್ಟ್ ಬ್ಯೂಟಿಫುಲ್ ಗರ್ಲ ಆಫ್ ದಿ ಕಾಲೇಜ್’ ಅಂತಾನೂ ಒಮ್ಮೆ ಉದ್ಘರಿಸಿ ನನ್ನನ್ನು ಆಶ್ಚರ್ಯ ಚಕಿತಳನ್ನಾಗಿ ಮಾಡಿದ್ದೂ ಉಂಟು. ಆಗಷ್ಟೇ ನಾನು ಬಿಇ ಮುಗಿಸಿಕೊಂಡು ಕೆಲಸಕ್ಕೆ ಸೇರಿಕೊಂಡಿದ್ದೆ. ಅದೊಂದು ದಿನ ಏಕಾಯೇಕಿ ರಾಜಶೇಖರ್ ಸರ್ ನಮ್ಮ ಕಂಪನಿಯ ಕ್ಯಾಂಪಸ್ಸಿಗೆ ಬಂದಿದ್ದರು. ಅವರು ಮೊದಲಿಗಿಂತ ಇನ್ನೂ ಹ್ಯಾಂಡ್ಸಮ್ಮಾಗಿ ಕಂಡರು. ಕ್ಯಾಂಟೀನಿನಲ್ಲಿ ಚಹ ಹೀರುತ್ತಿದ್ದಾಗ ನನ್ನೊಂದಿಗೆ ಒಂದಿಷ್ಟು ಪರ್ಸನಲ್ಲಾಗಿ ಮಾತಾಡುವುದಿದೆ ಎಂದು ಮಾತಿಗೂ ಇಳಿದಿದ್ದರು.“ಯಶಸ್ವಿನಿಯವರೇ, ನೇರವಾಗಿ ವಿಷಯವನ್ನು ಪ್ರಸ್ತಾಪಿಸಿಬಿಡುತ್ತೇನೆ. ನಾನು ನಿಮ್ಮ ಪಿಯು ಟೂದ ಮೊದಲ ತರಗತಿ ತೆಗೆದುಕೊಂಡ ದಿನದಿಂದಲೂ ನಿಮ್ಮನ್ನು ಮನಸಾರೆ ಪ್ರೀತಿಸುತ್ತಿದ್ದೇನೆ. ನಿಮ್ಮ ಪದವಿ ಮುಗಿಯಲಿ ಎಂದು ಸುಮ್ಮನಿದ್ದೆ. ನೀವೀಗ ಪದವಿ ಮುಗಿಸಿಕೊಂಡು ಕೆಲಸವನ್ನೂ ಮಾಡುತ್ತಿರುವಿರಿ. ಈ ನಡುವೆ ನನ್ನ ಮದುವೆಗಾಗಿ ಹಲವಾರು ಸಂಬಂಧಗಳ ಪ್ರಸ್ತಾವಗಳು ಬಂದವಾದರೂ ಮೊದಲು ನಿಮ್ಮ ಅಭಿಪ್ರಾಯ ತಿಳಿದುಕೊಂಡು ಮುಂದೆ ವಿಚಾರಮಾಡಿದರಾಯಿತು ಎಂದಂದುಕೊಂಡು ಬಂದ ಪ್ರಸ್ತಾವಗಳನ್ನು ತಿರಸ್ಕರಿಸಿದ್ದೂ ಆಯಿತು. ಹಾಗೇ ಇನ್ನೊಂದು ಮಾತು. ನಿಮ್ಮ ಉದ್ಯೋಗ ಹೆಚ್ಚುಕಡಿಮೆ ಬೆಂಗಳೂರಿನಲ್ಲೇ ಮುಂದುವರಿಯುತ್ತದೆ. ನೀವು ನನ್ನ ಪ್ರಸ್ತಾವಕ್ಕೆ ಒಪ್ಪಿಗೆ ಕೊಟ್ಟರೆ ನಾನು ಬೆಂಗಳೂರಿನಲ್ಲಿ ಕೆಲಸಕ್ಕೆ ಪ್ರಯತ್ನಿಸುವೆ. ಇಬ್ಬರೂ ಒಂದೇ ಕಡೆಗೆ ಇರಲು ಅನುಕೂಲವಾಗುತ್ತದೆ. ನನ್ನ ದಾಂಪತ್ಯ ಜೀವನದ ಕನಸು ನಿಮ್ಮ ನಿರ್ಧಾರದ ಮೇಲೆ ಅವಲಂಬಿಸಿದೆ” ಎಂದೆನ್ನುತ್ತಾ ನನ್ನ ಮೊಗವನ್ನೇ ದಿಟ್ಟಿಸತೊಡಗಿದ್ದರು ರಾಜಶೇಖರ್ ಸರ್. ನನಗೆ ಒಂಥರ ದಿಗ್ಭ್ರಮೆ. ನಾನೂ ಅವರನ್ನೇ ತೀಕ್ಷ್ಣವಾಗಿ ನೋಡತೊಡಗಿದೆ. `ಇದು ಜೀವಮಾನದ ಪ್ರಶ್ನೆ. ತತಕ್ಷಣ ನಿರ್ಧಾರ ತೆಗೆದುಕೊಳ್ಳುವುದಾದರೂ ಹೇಗೆ…?’ ಮನದಲ್ಲೇ ಯೋಚಿಸಿದೆ.“ಸರ್, ಇದು ಯೋಚಿಸುವಂಥಹ ವಿಷಯವೇ. ಒಂದುವಾರದ ಸಮಯ ಕೊಡಿರಿ. ಯಾವುದಕ್ಕೂ ನನ್ನ ಅಭಿಪ್ರಾಯ ತಿಳಿಸುವೆ” ಎಂದಿದ್ದೆ ತುಸು ಹೊತ್ತಿನ ಮೌನದ ಬ್ರೇಕ್‍ನ ನಂತರ.“ಸರಿ ಅಷ್ಟೇ ಮಾಡಿರಿ. ನಿಮ್ಮ ಸಕಾರಾತ್ಮಕ ನಿರ್ಣಾಯದ ಮಾತಿನ ದಾರಿ ಕಾಯುವೆ. ನಿರಾಶೆ ಮಾಡಬೇಡಿರಿ ಈ ಪ್ರೇಮಿಯನ್ನು…” ವಿನೀತಭಾವದಲ್ಲಿ ಹೇಳಿದ್ದರು ರಾಜಶೇಖರ್ ಸರ್. ಫೋನ್ ನಂಬರ್ ವಿನಿಮಯ ಮಾಡಿಕೊಂಡಿದ್ದೆವು.    ಆ ರಾತ್ರಿ ನಾನು ಸರಿಯಾಗಿ

“ಅಂತರಂಗದ ಸೋಲು” ಸಣ್ಣ ಕಥೆ ಶೇಖರಗೌಡ ವೀ ಸರನಾಡಗೌಡರ್. Read Post »

ಕಾವ್ಯಯಾನ

ರತ್ನರಾಯಮಲ್ಲ “ನಿನ್ನ ಪಾದಗಳಿಗೆ ನನ್ನ ಪ್ರೇಮ”

ಕಾವ್ಯ ಸಂಗಾತಿ ರತ್ನರಾಯಮಲ್ಲ “ನಿನ್ನ ಪಾದಗಳಿಗೆ ನನ್ನ ಪ್ರೇಮ” ಭೀಮನ ಅಮಾವಾಸ್ಯೆಯಂದುನನ್ನ ಪಾದಗಳ ಮೇಲೆನೀ ಹೂವಿಟ್ಟಾಗನಿನ್ನ ಬೆರಳ ತುದಿಯ ಸ್ಪರ್ಶದಲ್ಲಿನನ್ನ ಹೃದಯನಿನ್ನ ಹೆಸರನ್ನೇ ಜಪಿಸಿತ್ತು ನೀ ಅದನ್ನು ಪೂಜೆ ಎಂದೆ,ನನಗದು ಪೂಜೆಯಾಗಿರಲಿಲ್ಲನನ್ನ ಬದುಕಿಗೆನೀ ನೀಡಿದ ಪ್ರೀತಿಯಮೌನ ಪ್ರಮಾಣವಾಗಿತ್ತು ನಿನ್ನ ಕಂಗಳಲ್ಲಿಆ ಕ್ಷಣ ಕಂಡ ಭಕ್ತಿಗಿಂತನಿನ್ನ ಹೃದಯದಲ್ಲಿದ್ದನನ್ನ ಮೇಲಿನ ಪ್ರೀತಿಯೇನನ್ನನ್ನು ಹೆಚ್ಚು ತಲೆಬಾಗಿಸಿತ್ತು ಇಂದು ಬೇಬಿಮಾ…ನಿನ್ನ ಪಾದಗಳ ಮುಂದೆಕೈಗಳನ್ನಿಡುವ ಸರದಿ ನನ್ನದು ನೀ ಇಷ್ಟು ವರ್ಷನನ್ನ ಬದುಕಿನ ದಾರಿಯಲ್ಲಿನನ್ನೊಂದಿಗೆ ನಡೆದಿರುವೆಈಗ ನಿನ್ನ ಪಾದಗಳಿಗೆ ಹೂವಿಡುವಾಗಆ ಹೂವಿನೊಂದಿಗೆನನ್ನ ಕೃತಜ್ಞತೆಯನ್ನೂ ಇಡುವೆ. ಕಷ್ಟದ ದಿನಗಳಲ್ಲಿ ಮುಖ ನೋಡಿಕೊಂಡೇನನ್ನ ನೋವನ್ನು ಅರಿತವಳು ನೀನುನನ್ನ ಸೋಲಿನ ದಿನಗಳಲ್ಲಿ“ನಾನಿದ್ದೇನೆ” ಎಂದುನನ್ನ ಕೈ ಹಿಡಿದವಳು ನೀನು. ನಾನು ಕುಗ್ಗಿದಾಗನನ್ನೊಳಗೆ ಧೈರ್ಯ ತುಂಬಿದವಳುನಾನು ಮೌನವಾದಾಗನನ್ನ ಮೌನವನ್ನು ಓದಿದವಳುನಾನು ಗೆದ್ದಾಗನನಗಿಂತ ಹೆಚ್ಚು ಸಂತೋಷಪಟ್ಟವಳು ನೀನೇ ಅಲ್ಲವೇ ಬೇಬಿಮಾ… ನನ್ನ ಬಾಳ ಬಾಗಿಲಿಗೆನೀ ಕಾಲಿಟ್ಟ ದಿನದಿಂದಈ ಮನೆಕೇವಲ ಗೋಡೆಗಳ ಮನೆಯಲ್ಲನಿನ್ನ ನಗುವಿನಿಂದಮನೆಯಾಯಿತುನಿನ್ನ ಮಮತೆಯಿಂದಮಂದಿರವಾಯಿತುನಿನ್ನ ಹೆಜ್ಜೆ ಗುರುತುಗಳಿಂದನನ್ನ ಬದುಕಾಯಿತು ನಿನ್ನ ಪಾದದ ಗೆಜ್ಜೆಯ ನಾದವೇನನ್ನ ಬೆಳಗಿನ ರಾಗನಿನ್ನ ಹೆಜ್ಜೆಯ ಸದ್ದೇನನ್ನ ಸಂಜೆಯ ನಿರೀಕ್ಷೆನೀ ಹತ್ತಿರವಿದ್ದರೆಮೌನವೂ ಮಾತಾಗುತ್ತದೆನೀ ದೂರವಿದ್ದರೆಮಾತುಗಳಿದ್ದರೂಮನಸ್ಸು ಮೌನವಾಗುತ್ತದೆ ಬಾ ಬೇಬಿಮಾ…ನಿನ್ನ ಪಾದಗಳನ್ನುಒಮ್ಮೆ ನನ್ನ ಮಡಿಲಲ್ಲಿರಿಸುಹೂವಿಡುವ ನೆಪದಲ್ಲಿನಿನ್ನ ಕೈ ಹಿಡಿದುಒಂದು ಮಾತು ಹೇಳಬೇಕು“ನನ್ನ ಬದುಕಿಗೆನೀ ಬಂದದ್ದುನನ್ನ ಅದೃಷ್ಟವಲ್ಲನನ್ನ ಬದುಕೇನಿನ್ನಿಂದ ಅದೃಷ್ಟವಾಯಿತು” ನಿನ್ನ ಪಾದಗಳಿಗೆನಾನು ಬಾಗುವಾಗನಿನ್ನ ಭಗವಂತನಾಗಿ ಇರುವುದಿಲ್ಲನಿನ್ನ ಪ್ರೀತಿಯಲ್ಲಿಜೀವಮಾನವಿಡೀಸೋತು ಬದುಕಲು ಬಯಸುವಒಬ್ಬ ಪ್ರೇಮಿಯಾಗಿ ಬಾಗುವೆ ನೀ ನನ್ನ ಅರ್ಧಾಂಗಿಯೆಂದುಹೇಳುವುದು ಬಹಳ ಸಣ್ಣ ಮಾತುನೀ ನನ್ನ ಬದುಕಿನಅರ್ಧವಲ್ಲ ಬೇಬಿಮಾ—ನನ್ನ ಬದುಕಿನಪೂರ್ಣ ಅರ್ಥ ನೀನು ನನ್ನ ನಗುವಿನ ಹಿಂದೆನಿನ್ನ ಮಮತೆಯಿದೆನನ್ನ ಧೈರ್ಯದ ಹಿಂದೆನಿನ್ನ ನಂಬಿಕೆಯಿದೆನನ್ನ ಪ್ರತಿಯೊಂದು ಹೆಜ್ಜೆಯ ಹಿಂದೆನಿನ್ನ ಮೌನ ಪ್ರಾರ್ಥನೆಯಿದೆ ನಾನು ಹೊರಗೆಜಗತ್ತಿನ ಮುಂದೆಎಷ್ಟೇ ದೊಡ್ಡವನಾಗಿ ನಿಂತರೂಮನೆಗೆ ಮರಳಿದಾಗನಿನ್ನ ಒಂದು ನೋಟಕ್ಕಾಗಿಕಾಯುವ ಸಾಮಾನ್ಯ ಮನುಷ್ಯ ನಾನು ನಿನ್ನ ಪಾದಗಳ ಮೇಲೆಒಂದು ಹೂವಿಡುವೆಅದರೊಳಗೆನನ್ನ ಕೃತಜ್ಞತೆಒಂದು ಮುತ್ತಿಡುವೆಅದರೊಳಗೆನನ್ನ ಜೀವಮಾನ ಪ್ರೀತಿ ಒಂದು ಕ್ಷಣಕಣ್ಣುಮುಚ್ಚುವೆಆ ಕ್ಷಣದಲ್ಲಿನನ್ನ ಮನಸ್ಸುಒಂದೇ ಒಂದು ಪ್ರಾರ್ಥನೆ ಮಾಡುವುದು “ದೇವರೇ,ಮುಂದಿನ ಏಳೇಳು ಜನ್ಮಗಳಲೂಮತ್ತೆ ಈ ಮಲ್ಲಿಗೆ ಸುಮವನ್ನೇ ಕೊಡುಅವಳ ಪಾದಗಳ ಬಳಿಯೇಮತ್ತೊಮ್ಮೆ ನನ್ನ ಬದುಕನ್ನುಆರಂಭಿಸುವ ಅವಕಾಶ ಕೊಡು” ನಿನ್ನ ಪಾದಪೂಜೆನನ್ನ ಭಕ್ತಿಯಲ್ಲ ಬೇಬಿಮಾ;ನೀ ನನ್ನನ್ನುಎಷ್ಟು ಪ್ರೀತಿಸಿದ್ದೀಯೋಅದಕ್ಕಿಂತಲೂ ಹೆಚ್ಚು ಪ್ರೀತಿಯಿಂದನಿನ್ನನ್ನು ಗೌರವಿಸುವನಮ್ಮ ದಾಂಪತ್ಯದ ಹಬ್ಬ ಇದುಗಂಡ ಹೆಂಡತಿಗೆ ಬಾಗಿದ ಕ್ಷಣವಲ್ಲಎರಡು ಹೃದಯಗಳುಒಬ್ಬರಿಗೊಬ್ಬರು“ನೀ ಇಲ್ಲದೆ ನಾನು ಪೂರ್ಣನಲ್ಲ”ಎಂದು ಅಪ್ಪಿಕೊಂಡ ಕ್ಷಣ ನೀ ಬರಿ ನನ್ನ ಹೆಂಡತಿಯಲ್ಲ…ನನ್ನ ಉಸಿರು,ನನ್ನ ನೆಮ್ಮದಿ,ನನ್ನ ಮೌನದ ಭಾಷೆ,ನನ್ನ ಕಣ್ಣೀರಿನ ಅರ್ಥ,ನನ್ನ ನಗುವಿನ ಕಾರಣ,ನನ್ನ ಸುಕನಸು,ನನ್ನ ಬದುಕು… ನನ್ನ ಕೊನೆಯ ಉಸಿರಿನವರೆಗೂನಿನ್ನ ಕೈ ನನ್ನ ಕೈಯಲ್ಲಿರಲಿನನ್ನ ಕೊನೆಯ ಹೆಜ್ಜೆಯವರೆಗೂನಿನ್ನ ಹೆಜ್ಜೆ ನನ್ನ ಹೆಜ್ಜೆಯ ಜೊತೆಯಿರಲಿಜೊತೆ ಜೊತೆಯಾಗಿ ಈ ಸಂಸಾರ ನೌಕೆ ಸಾಗಿಸೋಣ ರತ್ನರಾಯಮಲ್ಲ

ರತ್ನರಾಯಮಲ್ಲ “ನಿನ್ನ ಪಾದಗಳಿಗೆ ನನ್ನ ಪ್ರೇಮ” Read Post »

ಕಾವ್ಯಯಾನ, ಗಝಲ್

ಗಜಲ್(ಮೂರಕ್ಷರದ ಕಾಫಿಯ ನಲ್ಲಿ ರವಿ, ರವೊಫ್ ನ್ನು ಹೊಂದಿಸಿದ ಕಾಫಿಯಾನ ಗಜಲ್.) ಬಾಗೇಪಲ್ಲಿ

ಕಾವ್ಯ ಸಂಗಾತಿ ಬಾಗೇಪಲ್ಲಿ ಗಜಲ್ (ಮೂರಕ್ಷರದ ಕಾಫಿಯ ನಲ್ಲಿ ರವಿ, ರವೊಫ್ ನ್ನು ಹೊಂದಿಸಿದ ಕಾಫಿಯಾನ ಗಜಲ್.) ಜೀವನದಿ ಒಮ್ಮೆ ಪ್ರೇಮವೆಂಬ ಸುಳಿಗೊಮ್ಮೆ ಬೀಳಿರಿವಿರಹದ ಬಗ್ಗೆ ಹೇಗೆಂದು ನಂತರ ನೀವಯೇ ಹೇಳಿರಿ ಮನೋರಮೆಯ ಒಮ್ಮೆ ಏಕಾಂತದಿ ಭೇಟಿಮಾಡಿಅಗಲಿಗೆಯ ಸಮಯದಿ ನೋವಾದರೆ ತಾಳ್ಮೆ ತಾಳಿರಿ ಒಳ್ಳೆಯ ಗಂಡ ಚಂದದ ಪತ್ನಿ ಎಲ್ಲವೂ ಮಾತಷ್ಟೇದಕ್ಕಿದ ಹೆಣ್ಣ ಚಂದ ಹೆಂಡತಿಯಾಗಿಸಿ ಬಾಳ ಬಾಳಿರಿ ಹೊಂದಿಕೆಯ ಬಾಳಲಿ ನಿಜ ಸುಖವಿದೆ ತಿಳಿದಿರಲಿಸುಪ್ರೇಮ ಲೋಕವನು ಮಹಾರಾಜನಂತೆ ಅಳಿರಿ ಬತ್ತದ ಗದ್ದೆಯಲಿ ನಡೆದಂತೆ ಜೀವನ ಜಾರಬಹುದುಕೆಸರಲಿ ಬಿದ್ದರೂ ಸ್ವ ಸಂಬಾಳಿಸಿಕೊಂಡು ಏಳಿರಿ ಕೃಷ್ಣಾ! ಗೀತೆಯ ವಾಕ್ಯದಂತೆ ಜಾಗೃತ ಜಾಗೃತರಾಗಿರಿಭುವಿಯ ಸುಖದಲಿ ಸ್ವರ್ಗ ಸುಖವ ಕೂಡಿ ಕಳೀರಿ. ಬಾಗೇಪಲ್ಲಿ

ಗಜಲ್(ಮೂರಕ್ಷರದ ಕಾಫಿಯ ನಲ್ಲಿ ರವಿ, ರವೊಫ್ ನ್ನು ಹೊಂದಿಸಿದ ಕಾಫಿಯಾನ ಗಜಲ್.) ಬಾಗೇಪಲ್ಲಿ Read Post »

You cannot copy content of this page

Scroll to Top